ಒಟ್ಟು 4691 ಕಡೆಗಳಲ್ಲಿ , 124 ದಾಸರು , 3091 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭವ ಕಾಮಹರ ನಿನ್ನಂಘ್ರಿ ತಾಮರಸಯುಗಳ ಭಜಿಸುವೆ | ಭಜಿಸಿ ಬಿನ್ನೈಸುವೆ ಶ್ರೀ ಮನೋಹರನ ತೋರಯ್ಯ 1 ಕೃತ್ತಿವಾಸನೆ ಎನ್ನ ಚಿತ್ತದಲಿ ಹರಿಯಪದ ನಿತ್ಯದಲಿ ಭಜಿಪ ಮತಿ ನೀಡೊ | ಮತಿ ನೀಡೊ ಪಾರ್ವತಿ ಚಿತ್ತದೊಲ್ಲಭನೆ ನಮಿಸುವೆ 2 ಸುವರ್ಣಮುಖರಿಯ ತೀರದಲಿ ನೆಲಸಿರುವೆ ಶ್ರೀ ವರಾಹನಂಘ್ರಿ ಭಜಿಸುತ್ತ | ಭಜಿಸುತ್ತ ನೆಲಸಿರುವ ಪಾವನರೂಪ ಸಲಹಯ್ಯ 3 ಕಾಳಸ್ತಿನಿಲಯನೆ ಪೇಳಲಿನ್ನೇನು ನಾ ತಾಳಲಾರೆನು ಈ ಭವಬಂಧ | ಭವಬಂಧ ಬಿಡಿಸುವ ವ್ಯಾಳ ಶಯನನ್ನ ತೋರೈಯ್ಯ 4 ಭಕ್ತರಿಗೊಲಿದು ಅಪಮೃತ್ಯು ಪರಿಹರಿಸಿದೆ ಸತ್ಯ ಸಂಕಲ್ಪ ನಿನ್ನಂಘ್ರಿ | ನಿನ್ನಂಘ್ರಿ ಕಮಲಗಳ ಚಿತ್ತದಲಿ ತೋರಿ ಸಂತೈಸು 5 ಮನಕೆ ಗುರು ನೀನಹುದು ಮನವ ಹರಿಯಲಿ ನೆಲಸೊ ವೈರಿ ಮಮತೆಯಿಂ | ಮಮತೆಯಿಂದಲಿ ನಿತ್ಯ ಮನಶುದ್ಧಿಗೈದು ಕಾಯಯ್ಯ 6 ಶಂಖಚಕ್ರವ ಪಿಡಿದ ಸಂಕರ್ಷಣನ ರೂಪ ನಿತ್ಯ ಭಜಿಸುವೆ | ಭಜಿಸುವೆ ಕೈಲಾಸ ಅಂಕದಲಿ ನೆಲಸಿ ಹರುಷದಿ 7 ನರಸಿಂಹ ರೂಪವನು ಸ್ಮರಿಸುತ್ತ ಮೈಮರೆವೆ ಉರುತರ ಭಾವ ಭಕ್ತಿಯಲಿ | ಭಕ್ತಿಯಲಿ ಭಜಿಪ ನಿನ್ನ ಸ್ಮರಿಸುವರ ಭಯವ ಹರಿಸುವೆ 8 ಶ್ರೀ ರಾಮನಾಮವನು ಪ್ರೇಮದಿಂದುಮೆಗರುಹಿ ಆರಾರು ಅರಿಯದಾನಂದ | ಆನಂದವಿತ್ತೆ ಭವ ತಾರಕವೆಂದು ಕರುಣಾಳೂ 9 ಅಜನ ಭ್ರೂಮಧ್ಯದಲಿ ಜನಿಸಿದೆಯೊ ಜಗದಲ್ಲಿ ಭಂಜನ | ಭಂಜನಗೊಳಿಸಿದೆ ತ್ರಿಜಗದಲಿ ನಿನಗೆ ಸರಿಯುಂಟೆ 10 ಶೇಷ ಪರ್ಯಂಕನಿಗೆ ಹಾಸಿಗೆಯಾಗಲು ತೋಷದಲಿ ತಪವಾಚರಿಸಿದೆ | ಚರಿಸಿ ಸಾಧಿಸಿದೆ ನೀ ಶೇಷ ಪದವಿಯನು ತ್ರಿನೇತ್ರ 11 ಶರಧಿ ಮಥಿಸಲು ಗರಳ ಉದ್ಭವಿಸಿ ಭಯವಾಗೆ | ಭಯವಾಗಿ ಪರಿಹರಿಸಿ ಗರಳವನೆ ಕುಡಿದೆ ಶ್ರೀ ಕಂಠ 12 ಅಸುರರ ವಂಚಿಸಿದ ವಶವಲ್ಲದ ಹೆಣ್ಣು ವಶವಾಗಲೆಂದು ಹಾರೈಸಿ | ಹಾರೈಸಿ ಬಳಲುತಿರೆ ಬಿಸಜಾಕ್ಷ ನಿನ್ನ ಸಲಹಿದ 13 ತಾರಕಾಸುರನಿಂದ ಘೋರಪಡುತಿರೆ ಜಗವು ಮಾರ ಪೂಅಸ್ತ್ರ ಎಸೆಯಲು | ಎಸೆಯಲು ದಹಿಸಿ ಕು- ಮಾರನನು ಪಡೆದೆ ಗಿರಿಜೇಶ 14 ಸ್ತುತಿಪ್ರಿಯ ನಿನ್ನ ನಾ ಸ್ತುತಿಸಲಾಪೆನೆ ಮಂದ ಮತಿ ಎಂದು ನೀನೆ ಸಂತೈಸೊ | ಸಂತೈಸಬೇಕಿನ್ನು ಮತಿಯಿತ್ತು ಹರಿಯ ಪದದಲ್ಲಿ 15 ಶಿರದಲ್ಲಿ ಗಂಗೆ ಚಂದ್ರನ ಮೆರೆಯುವ ಉರಗ ಭೂಷಣನೆ ಕೇಳಿನ್ನು | ಕೇಳಿನ್ನು ಎನ್ನ ಮನ ಮರೆಯದೆ ಹರಿಯ ನೆನೆಯಲಿ 16 ವಿಷ್ಣು ಭಕ್ತರೊಳಗೆ ಶ್ರೇಷ್ಠ ನೀನಹುದಯ್ಯ ಜಿಷ್ಣುವಿಗೆ ಮೆಚ್ಚಿ ಧನುವಿತ್ತೆ | ಧನುವಿತ್ತೆ ಗೋಪಾಲ- ಕೃಷ್ಣವಿಠ್ಠಲನ ತೋರಯ್ಯ 17
--------------
ಅಂಬಾಬಾಯಿ
ಭವ ನೋವಾ ಪ ಹರಿಯೆ ಪರದೈವ ವೆಂ | ಮೊರೆಯುತಿಹ ಬಾಲಕನಪರಿ ಪರೀ ಹಿಂಸಿಸಲು | ಪರಿಚರರಿಗ್ವೊರೆಯೇತರಳ ಪ್ರಹ್ಲಾದವನ | ಕರದೊಯ್ದು ಕಬ್ಬಿಯಲಿಹೊರದೂಡಿ ಪರಿಶಿಲೆಯ | ಶಿರದ ಮೇಲಿಡಲೂ 1 ವರಹ ಲಕ್ಷ್ಮೀನರ | ಹರಿಯ ರೂಪದಲಿಂದಭಾರವಾದ್ ಶಿಲೆಯ ನೊ | ತ್ತರಿಸುತಲಿ ನೀನೂವರ ಭಕ್ತನನು ಕಾಯ್ದೆ | ಸರುವ ವ್ಯಾಪಕ ದೇವಕರುಣಿಸು ಗುಣಾನಂತ | ವರಲಕ್ಷ್ಮಿಕಾಂತ 2 ಪರಿ ಪರಿಯ ಹಿಂಸೆಗಳಿಗೆರವು ಮಾಡುವೆ ಗುರೂ | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಭವ ಬಿಡಿಸಯ್ಯ ಹರಿ ನಿನ್ನ ನಾಮ ದೃಢವಾಗಿ ನುಡಿಸಯ್ಯ ಬಿಡದೆ ಸನ್ಮಾರ್ಗದಿ ನಡೆಸಯ್ಯ ದೇವ ಗಡ ನಿನ್ನ ಕೃಪಾಕವಚ ತೊಡಿಸಯ್ಯ ಪ ಹಾಳು ಭ್ರಾಂತಿಗಳೆಲ್ಲ ಕೆಡಿಸಯ್ಯ ಎನ್ನ ಕೀಳುಯೋಚನೆ ಸರ್ವ ಕಡಿಸಯ್ಯ ಜಾಳು ಪ್ರಪಂಚದಾಸೆ ತಿಳಿಸಯ್ಯ ಸ್ವಾಮಿ ಮೂಳಮಾನವರ ಮಾತು ಮರೆಸಯ್ಯ 1 ನಿತ್ಯ ಸುಜನರೊಳಿರಿಸಯ್ಯ ಎನ್ನ ಸತ್ಯ ಶರಣರೊಳಾಡಿಸಯ್ಯ ಅರ್ತಿಯಿಂ ತತ್ವರ್ಥ ತಿಳಿಸಯ್ಯ ಎನ್ನ ಮಿಥ್ಯಗುಣಂಗಳನ್ನು ಹರಿಸಯ್ಯ 2 ಕೋಪತಾಪಂಗಳ ವಧಿಸಯ್ಯ ಎನ್ನ ಪಾಪ ಮಾಫಿಗೊಳಿಸೆನ್ನಯ್ಯ ಕೋಪಿ ಪಾಪಿಗಳಿಂದುಳಿಸಯ್ಯ ನಿನ್ನ ಗೌಪ್ಯದ ಧ್ಯಾನ ಮುನ್ನ ತಿಳಿಸಯ್ಯ 3 ಭೂತಪ್ರೇತದಂಜಿಕ್ಹರಿಸಯ್ಯ ತಂದೆ ಜಾತಿಭೀತಿ ಮೊದಲ್ಹಾರಿಸಯ್ಯ ನೀತಿಶಾಂತಿ ಸ್ಥಿರ ನಿಲ್ಲಿಸಯ್ಯ ಎನ್ನ ತಾತ ಮಾತೆ ನೀನೆ ನಿಜವಯ್ಯ 4 ನರರಿಗೆ ಎರಗಿಸದಿರಯ್ಯ ಎನ್ನ ಶಿರ ನಿನ್ನ ಚರಣದಿ ಇರಿಸಯ್ಯ ಪರಲೋಕಸಾಧನ ತೋರಿಸಯ್ಯ ಎನ್ನ ಶರಣ ನೀನಾಗು ಶ್ರೀರಾಮಯ್ಯ 5
--------------
ರಾಮದಾಸರು
ಭವ ಭಯದಾ ಕೊಳೆ ತೊಳೆÉದಾನಂದವೀವ ಸಾರಂಸಂಸಾರ ಸಾರಂ ಪ. ಸುಳಿದು ಯಮಭಟರೆಳೆಯುವ ಕಾಲದಿ ಪರಿ ಸಾರ ಮನುಜರು ಅ.ಪ. ಅಳಿದವರಾರು ಝಳಝಳ ಮನದಿಂ ಕಳೆಗೊಟ್ಟಿಹ ಪುರುಷನಾರುಂ ಸಲೆ ನಾರದರಲ್ಲದೆ ಯಿದನಂ ಸೆಳೆದುರೆ ಭಕ್ತಿಯೊಳ್ ಹರಿಯಂ ಅಳವಲ್ಲದಾನಂದದಿಂ ಹರಿ ಸುಳಿವ ಪೊಳೆವ ಮನದೊಳಗಿಹನೆನುತಂ ಸಾರಿ ಹರಿದನಂ ಸಾರಂ ಸಂಸಾರಂ 1 ಅರ್ಣವದೊಳು ಭವಾರ್ಣ ನಿರ್ಮಾಣನ ಕರ್ನದೊಳಾಲಿಸಿ ಧ್ವನಿಮಾಡಿ ನಿರ್ಣಯದಲಿ ಸ್ವರ್ಣರೂಪನ ಜೀರ್ಣಿಪ ವೀಣಾನಾದದೀ ಸಾರಂ ಕರ್ಣಾನಂದದಿ ಹಾಡಿದನಾರುಂ ವರ್ಣಾಶ್ರಮ ಧರ್ಮ ಮರ್ಮವರಿತು ಚರ್ಮಸುಖವಳಿದು ಪೂರ್ಣಜ್ಞಾನದ ಪುರಂದರದಾಸರಲ್ಲಿದೆ ಈ ಸಾರಂ ಸಂಸಾರಂ 2 ತರಲಾನಂದದಿಂ ಸರಿಗಮ ಪದನಿಸ ಸನಿದಪ ಮಗರಿಸ ಶೋಡಷಕ್ಷರದಿಂ ತರಲಾ ಸಂಗೀತಕೆ ಸರಳಾಗಿಹ ಹರಿ ನಾಮಾಮೃತವಂ ಧರಿಶಿದ ಪುರಂದರರಂ ಶರಣ ಭರಣ ಕರುಣ ಪಡೆವುದು ನಿರುತ ಹರಿ ಶರಣರೆನುತ ಅರುಹಿದ ಸಂಗೀತವೀ ಸಾರಂ ಸಂಸಾರಂ 3 ಈ ತೆರ ಭಜಿಸಿದಗ್ಯಾತರ ಭಯ ಪಾತಕಹರ ಜಗದೀಶ ಮಾನಸ ದಾತುರದೊಳು ಹರಿ ದಾತನೆಂದರಿತು ನೀತಾಚಾರದಿ ಯಾವಾತ ಸ್ತುತಿಸಲು ಜ್ಯೋತಿ ಪ್ರಕಾಶದಿ ತನುಜಾತನಾಗಿ ಬಹ ಪ್ರೀತಿಗೊಡುತ ಖ್ಯಾತ ಭಕ್ತ ಪಾರಿಜಾತನೆಂದು ತಿಳಿದಾತಗೆ ಇದು ಸಾರಂ ಸಂಸಾರಂ 4 ಭಗವಂತನ ಧ್ಯಾನಿಪನ ಪುಡುಕುತ ಮಿಗೆ ಸಂಚರಿಸುತಲಿಹರೀಗಲು ಭಾಗವತರಿದು ಸತ್ಯಂ ಜಗಕೆ ಜಗದೀಶ ಶ್ರೀ ಶ್ರೀನಿವಾಸನೆಂದು ಮಿಗೆ ಜಗದಾನಂದ ಪುಳಕಿತ ತನುವಿನ ಜೀವರ ಸೊಗವಿಲಿ ನಾಲ್ಮೊಗನೈಯ್ಯನು ಸಿಗುವ ಪರಿಯಗೊಡುತಗಣಿತ ಮಹಿಮರು ಕರುಣಿಸಿದೀ ಸಾರಂ ಸಂಸಾರಂ 5
--------------
ಸರಸ್ವತಿ ಬಾಯಿ
ಭವ ಮುಖ್ಯ ಸುರಗಣ ಮುನಿನಿಕರ ಸಿದ್ಧ ಪರಿವಾರವು 1 ಸರಿತು ಪ್ರವಾಹದಂತೆ ವಾಗ್ವೈಖರಿಯಿಂದ ನಿರುತ ತೃಪ್ತಿಪಡಿಸಲಾರರು ಇನ್ನು 2 ಉರು ಉಗ್ರಜಾತಿ ಅಸುರ ಕುಲದಿ ಪುಟ್ಟಿದ ನಾನು ನೆರೆ ತುತಿಸಿ ತೃಪ್ತಿಪಡಿಸಲಾಪೆನೆ ನಿನ್ನ 3 ಆದೊಡೆ ಕುಲ ರೂಪ ವಯಸ್ಸು ವಿದ್ಯೆಗೆ ನೀನು ಮೋದಪಡುವನಲ್ಲ ಭಕ್ತಿಯೊಂದಕೆ ನಲಿವೆ 4 ಕರಿರಾಜನೇ ಸಾಕ್ಷಿ ಕರುಣಾಮಯನೇ ನಿನ ಗಿರುವುದೇ ವೈಷಮ್ಯ ? ಭಕ್ತಗೆ ವಶ ನೀನು 5 ಅರವಿಂದನಾಭ ನಿನ್ನ ಚರಣಾರವಿಂದವನು ನಿರುತ ಭಜಿಸುವ ಉತ್ತಮನೆನಿಸುವ 6 ಸರುವ ಸ್ವತಂತ್ರ ಪೂರ್ಣಕಾಮ ನಿನ್ನನು ನಾವು ಹಿರಿದಾಗಿ ಆರಾಧಿಸಿ ತೃಪ್ತಿಪಡಿಸುವುದೇನೊ 7 ನಾವು ಮಾಡುವ ಕರ್ಮಸಾಧನದಿಂದ ನಿನಗೆ ಯಾವ ಫಲವೂ ಇಲ್ಲ ! ಫಲವೆಲ್ಲ ನಮಗಯ್ಯಾ 8 ಬಿಂಬವನಲಂಕರಿಸೆ ಕನ್ನಡಿಯೊಳಗೆ ಪ್ರತಿ ಬಿಂಬಕೆ ಅಲಂಕಾರ ಕಾಣುವ ಪರಿಯಲಿ 9 ತರಳನ ಮೊರೆಯನು ಲಾಲಿಸಿ ಪಾಲಿಸೊ 10 ನಮ್ಮ ಸಾಧನೆಗಾಗಿ ನಿನ್ನ ಆರಾಧಿಪೆವು ಬೊಮ್ಮನಯ್ಯನೆ ನಿನ್ನ ಆನುಗ್ರಹದಿಂದಲಿ 11 ಬ್ರಹ್ಮಾದಿ ಸುರರೆಲ್ಲ ನಿನ್ನ ಸೇವಕರಯ್ಯಾ ಹಮ್ಮು ಮತ್ಯಾತಕಯ್ಯಾ ನಮ್ಮಂಥವರಿಗೆಲ್ಲ 12 ನಿನ್ನ ಕೋಪಕೆ ಅಂಜಿ ನಡುಗದವರುಂಟೆ ಮನ್ನಿಸಿ ಕೋಪವ ಉಪಶಮ ಮಾಡೋ ಸ್ವಾಮಿ 13 ನಿನ್ನ ಈ ಉಗ್ರರೂಪ ಧ್ಯಾನವು ಜನರಿಗೆ ಘನ ಭಯವ ಕಳೆಯೆ ಸಾಧನವಾಗಲಿ 14 ದಿಗಿಲು ಪುಟ್ಟಿಸುವಂಥ ಈ ನಿನ್ನ ಮುಖ ಜಿಹ್ವೆ ಭೃಕುಟಿ ಕರಾಳ ದಂಷ್ಟ್ರ 15 ಕೊರಳಲ್ಲಿ ಧರಿಸಿಹ ಕರುಳ ಮಾಲಿಕೆ ರಕ್ತ ಬೆರದ ಕೇಸರ ಮತ್ತೆ ನಿಗುರಿದ ಕರ್ಣಗಳು 16 ಲೋಕ ಭಯಂಕರವಾಗಿವೆ ಆಂದೊಡೆ ಶ್ರೀಕರ ನಿನ್ನ ಕೃಪೆಯಲಿ ನಾನವಕೆ 17 ಅಂಜುವನಲ್ಲ ಕೇಳು ಕಂಜನಾಭನೆಯಿನ್ನು ಅಂಜುವೆನೊಂದಕೆ ಸಂಸಾರ ಚಕ್ರಕೆ 18 ತೊಳಲಿಸÀುವುದು ಜನ ದುಃಖದಿ ಸಂಸಾರ ಬಲು ಪರಿಯಲಿ ಅದು ದುಃಖದಿ ಸಾಗರ 19 ಇಷ್ಟವಾದದ್ದು ಕೊಡದೆ ಇಷ್ಟವಿಲ್ಲದ್ದುಣಿಸಿ ಭವ 20 ಸಂಸಾರ ಸಾಗರ ದಾಟಿಸೋ ಮಹಾಮಹಿಮ ಸಂಶಯವಿಲ್ಲದೆ ಸೇರಿಸೋ ನಿನ್ನ ಬಳಿ 21 ಕರುಣಾಸಾಗರ ನಮ್ಮ ಕರಿಗಿರೀಶನೆ ಸ್ವಾಮಿ ತರಳನ ಮೊರೆಯನು ಲಾಲಿಸಿ ಪಾಲಿಸೊ 22 ( ಪ್ರಹ್ಲಾದ ನರಹರಿಯನ್ನು ಸ್ತುತಿಸಿದ್ದು )
--------------
ವರಾವಾಣಿರಾಮರಾಯದಾಸರು
ಭವ ಶಿತಿಕಂಠ ನಿನ್ನಪದ ತಾಮರಸಯುಗ್ಮಗಳಿಗಾನಮಿಸುವೆ ಪ ಕಾಮಹರ ಕೈಲಾಸ ಹೇಮಗಿರಿಯಾವಾಸ ರಾಮನಾಮನ ಭಜಿಪ ಉಮೆಯರಸ ಶಂಭೋ ಅ ಮೃತ್ಯುಂಜಯ ಮೃಗಾಂಕ ಕೃತ್ತಿವಾಸ ಕೃಪಾಳೊ ವಿತ್ತÀ್ತಪತಿ ಸಖ ವಿನಾಯಕರ ಜನಕ ಭೃತ್ಯವರ್ಗಕೆ ಬಾಹಪಮೃತ್ಯು ಕಳೆದು ಸಂ ಪತ್ತು ಪಾಲಿಸುವುದು ನಿವೃತ್ತಿ ಸಂಗಮಪ 1 ಗೋಪತಿ ಧ್ವಜ ಘೋರ ಪಾಪ ಸಂಹರಣ ಹರಿ ತೋಪಲೋಪಮ ಕಂಠ ಚಾಪಪಾಣೀ ಶ್ರೀ ಪತಿಯ ಶ್ರೀನಾಭಿ ಕೂಪಸಂಭವತನಯ ನೀ ಪಾಲಿಸೆಮ್ಮನು ವಿರೂಪಾಕ್ಷ ಗುರುವೆ 2 ಭಸಿತ ಭೂಷಿತಡಮರು ತಿಸುಳಗೈಯನೆ ಶಂಭೋ ಕಿಸಲಯೋಪಮ ನವಿರ ಶಶಿಭೂಷಣ ಅಸುರಾರಿ ಶ್ರೀ ಜಗನ್ನಾಥ ವಿಠಲನ ಪದ ಬಿಸಜ ಧ್ಯಾನವನೀಯೊ ಹಸನಾಗಿ ಕಾಯೊ 3
--------------
ಜಗನ್ನಾಥದಾಸರು
ಭವ ಹರಿಸೊ ಕರುಣಾ ಜಲಧಿ ನೆಂಟ ನೀನಾಗಿ ಹೃನ್ಮಂಟಪದೊಳಗೆ ಪ. ಎಂಟಕ್ಷರ ನುತನೆ ಎಂಟು ರೂಪಾತ್ಮಕನೆ ಎಂಟು ಮೂರು ತತ್ವ ನಿರ್ಮಿಸಿಹನೆ ಎಂಟು ದಳದಲಿ ನಿಂತು ಎಂಟು ವಿಧ ಪ್ರೇರಿಸುತ ಎಂಟು ದಿಕ್ಪತಿಗಳಿಂ ಸೇವೆ ಕೊಳುತಿಹನೆ 1 ಎಂಟು ವಿಧ ಕರ್ತೃವೆ ಎಂಟು ಭಾಗ್ಯಯುತನೆ ಎಂಟು ಬಾಹು ಎಂಟು ಆಯುಧಧರನೆ ಎಂಟು ಪತ್ನಿಯರಿಂದ ಎಂಟನೇ ಅವತಾರಿ ನೆಂಟರೊಡನೆ ಜಗದ ಕಂಟಕರ ಸದೆದನೆ 2 ಎಂಟೆರಡು ಕಲೆಪೂರ್ಣ ವೆಂಕಟರಮಣನೆ ಎಂಟು ವಿಧ ಮದಗಳನು ಭೇದಿಸುತಲಿ ಎಂಟೆರಡು ಒಂದು ಇಂದ್ರಿಯ ನಿನ್ನ ಕಡೆ ಮಾಡಿ ಭಂಟನೆನಿಸೆನ್ನ ಶ್ರೀ ಗೋಪಾಲಕೃಷ್ಣವಿಠಲ3
--------------
ಅಂಬಾಬಾಯಿ
ಭವ ದೇವಿ ಸಲಹೆಮ್ಮನು ಪ ಸೇವೆ ನಿಜಸುಖವೀ ಮಹೇಶ್ವರಿ ಅ.ಪ ದ್ವಂದ್ವಕಾನತರಾಗುತಿರುವೆವು 1 ಪರಮೇಷ್ಠಿಯವತಾರಿಯು || ಧರರುರಗ ಗರುಡಾದಿ ತುಂಬುರ ನಾರದಾದ್ಯವತಾರ ರೂಪಿಣಿ 2 ತರಳರಿಷ್ಟಗಳ ನೀಡೆ || ಸ್ಥಿರ ಸದಾನಂದದೊಳು ಪಾಲಿಸೆ 3
--------------
ಸದಾನಂದರು
ಭವ ಭಂಗ ಪ. ಥಳ ಥಳಿಸುತ ಗೆಳತಿಯರು ಸಹಿತಾಗಿಚಳತೆಂಬೊ ದಿವ್ಯ ಆಭರಣಚಳತೆಂಬೊ ದಿವ್ಯಾಭರಣ ಭೂಷಿತರಾಗಿಕುಳಿತ ನಾರಿಯರು ಕಡೆಯಿಲ್ಲ1 ಕುಂತಲ ಕದುಪಿನ ಕಾಂತೆಯರು ಹರುಷದಿಕಂತುನಯ್ಯನ ಮುಖನೋಡಿಕಂತುನಯ್ಯನ ಮುಖನೋಡಿಮೈಮರೆದು ನಿಂತ ನಾರಿಯರು ಕಡೆಯಿಲ್ಲ 2 ಅಂದುಗಿ ಅರಳೆಲೆ ಬಿಂದಲಿ ಭಾಪುರಿಅಂದವಾಗಿದ್ದ ಅಸಲಿಅಂದವಾಗಿದ್ದ ಅಸಲಿ ಕಟ್ಟಿದಕಂದರಿನ್ನೆಷ್ಟು ಕಡೆಯಿಲ್ಲ3 ಕಾಲಲಂದುಗೆ ಗೆಜ್ಜೆ ತೋಳಲಿ ತಾಯತಲಾವಳಿಗೆ ಮುತ್ತು ಅಲುಗುತಲಾವಳಿಗೆ ಮುತ್ತು ಅಲುಗುತಸುಳಿದಾಡೊ ಬಾಲರಿನ್ನೆಷ್ಟು ಕಡೆಯಿಲ್ಲ 4 ಹಸಿರು ಪಚ್ಚದ ಕಂಭ ಕುಸುರಾದ ಗಿಳಿಬೋದುಗೆಎಸಕೊ ಮಾಣಿಕದ ಜಗುಲಿಯ ಎಸಕೊ ಮಾಣಿಕದ ಜಗುಲಿ ಸಿಂಹಾಸನದಿ ವಸುದೇವ ತನಯ ಕುಳಿತಾನೆ 5 ಬಿಸÀಜನೇತ್ರಿಯರ ಮುಂದೆ ಕುಶಲದ ಮಾತ್ಹೇಳುತವಸುದೇವ ತಾನು ಕುಳಿತಾನವಸುದೇವ ತಾನು ಕುಳಿತಾನ ದೇವಕಿಯಸೊಸೆಯರ ಕಂಡು ಹರುಷಾಗಿ 6 ಚಲುವ ರಾಮೇಶನ ಬಲದ ಭಾಗದಿಬಂದು ಹಲವು ಮಾತುಗಳು ಕಿವಿಯೊಳುಹಲವು ಮಾತುಗಳು ಕಿವಿಯೊಳುಹೇಳುತ ಬಲರಾಮ ತಾನೆ ಕುಳಿತಾನೆ7
--------------
ಗಲಗಲಿಅವ್ವನವರು
ಭವ ಭಾವಿಸುವೊದು ಸೂಚನಾ | ಪಾವನರಂಗಾ | ಜೀವಾಂತರಂಗ | ಜೀವ ತುರಂಗಾ | ಹೃದ್ದಾವರೆಯಲಿ ನಿಲ್ಲು | ಆವಾವ ಬಗೆ ಸು | ರೂಹ | ಆವಾಗ ತೋರುತ ಪ ನಂದನಂದನಾ ಆನಂದಾ | ನಾಗನಾ | ಬಂಧಾ | ಬೀಡಾದೆಕ್ಕೆಂದಾ | ದಾ ಖಳನ ಕೊಂದೆ | ನಂದವ್ರಜದ ಗೋವಿಂದಾ | ಯಶೋದೆ ಕಂದಾ | ಮಂದನು ನಾನು | ಇಂದೀಗ ನೀನು | ಬಂದು ಸುರಧೇನು | ಪೊಂದು | ಇನ್ನೇನು | ಮುಂದಣ ಇಹಸುಖ | ಒಂದು ವಲ್ಲೆನು ಸಖ | ಕಂದ ನಂದದಿ ನೋಡು | ಕುಂದದ ವರವ ಕೊಡು | ಎಂದೆಂದಿಗೆ ಪದದ್ವಂದಾರವಿಂದಕೆ | ವಂದಿಸುವೆನು ಬಾ | ಲೇಂದು ವದನ ಪೊರಿಯೋದೆ ಲೋಕದ ತಂದೆ 1 ಮಂದರಧರ ಮಾಧವಾ | ಮಹದಾದಿ ದೇವಾ | ಬೋವಾ | ಇಚ್ಛೈಸಿದರೆ ಕಾವಾ | ವಾಸುದೇವ | ನಿಂದು ಕರೆವೆನು ಒಂದೆ ಮನಸನು | ತಂದು ವೇಗಾನು | ಸಂಧಿಸೆಂಬೆನು | ಚಂದ ಚಂದದಿ ನಿನ್ನನಂದಕೆ ಹಿಗ್ಗುವೆ | ಪತಿ | ಬಂಧು | ಅತಿ ದಯಾಸಿಂಧು || 2 ಶ್ರೀಲತಾಂಗೀಯ ರಮಣಾ ಶೃಂಗಾರ ಚರಣಾ | ಮಾಲಾ ಕೌಸ್ತುಭಾ ಭರಣಾ | ಶೀಲಾ ಸದ್ಗುಣಗಣ ಸಿದ್ಧಸವ್ಯಾಕಾರಣ | ನೀಲಲೋಹಿತ ಪಾಲಿಪನೆ ಪ್ರೀತ | ಮೂಲೋಕದ ದಾತಾ | ಲಾಲೀಸಿ ಮಾತಾ | ಪಾಲ ಸಾಗರಶಾಯಿ ಪತಿತ ನರನ ಕಾಯಿ | ಮೇಲುಗಿರಿಯಲಿಪ್ಪಾ | ಮೇಲಾದ ತಿಮ್ಮಪ್ಪಾ ವಾಲಗ ವೆಂಕಟ | ಶೈಲಾ ವಿಜಯವಿಠ್ಠಲಾ | ನೀಯೋ ಗೋಪಾಲಾ 3
--------------
ವಿಜಯದಾಸ
ಭವ ಶರಧಿ ತಾರಕನೇ - ನಾಕರವಾ ಮುಗಿವೆ - ಎನ್ನ ಕರುಣದಲ್ಲಿ ನೋಡೋ ಪ ಎರಡು ಭಾಗದಿ ಶ್ರೀ ಧರಣೇರಿಂದೊಪ್ಪುತತ್ವರಿತದಿ ದಯಮಾಡು ಉರಗಾಗಿರಿ ವೆಂಕಟ ಅ.ಪ. ತೇರಿನೊಳಿಪ್ಪ ಶೃಂಗಾರ ಪುರುಷನೆ ಬಂ-ಗಾರ ಮಾಣಿಕದಲಂಕಾರವ ಧರಿಸಿದಮಾರಮಣನೆ ವನಜಾರಿವದನ ಬಲು-ಶೂರ ಸಮರಧೀರ ನಾರಾಯಣ ಕಂಸಾರೇ ||ನರ ಕಂಠೀರವ ಕಮಲನಾಭನಾರದ ಮುನಿ ಪ್ರಿಯ ಚಾರು-ಚರಿತ ಪನ್ನಗಾರಿಗಮನ ಮದ-ನಾರಿಯ ಸಲಹಿದ ಧೀರ ಮುರಾರಿ 1 ನಿಂದರೆ ಬಪ್ಪುದು ಸಿಂಧುಶಯನ ದಯ-ದಿಂದ ಎನ್ನನು ನೋಡು-ಕಣ್ದೆರೆದೀಕ್ಷಿಸಿ |ಕಂದಗೊಲಿದು ಕಂಬದಿಂದ ಬಂದಸುರನಕೊಂದು ಕರುಳಹಾರ ಕಂಧರದಿ ತಾಳಿದೇ ||ಮಂದಮತಿವನೆಂದಲೇ ಗೋ-ವಿಂದ ಗೋವಳ ವೃಂದದೊಡನೆ ಕಾ-ಳಿಂದಿಯ ಧುಮುಕಿ-ಫಣೀಂದ್ರನ ಶಿರದಲಿಧಿಂ ಧಿಮಿ ಧಿಮಿಕೆಂದು ಕುಣಿದ ಹರಿ 2 ಜಲದೊಳ ಪೊಕ್ಕು ಆ ಇಳೆಯ ತಸ್ಕರನು ದುಂ-ಬಲಗೊಂಡು ಮಡುಹಿ ನಂಬಿದ ಪ್ರಹ್ಲಾದ ಹಂ-ಬಲಿಸೆ ಧರ್ಮದಿ ಕಾಯ್ದೆ ಸಲೆ ಕ್ಷತ್ರಿಯಕುಲವನಳಿದೆ-ನಿನ್ನೊಳು ನೀನೇ ಕಾಯ್ದೆ ||ಮಲೆತ ಮಾವನ ಕೊಂದೆ ಸಲೆಖಳ ತ್ರಿಪುರನ ಗೆದ್ದು ಕಲಿಯ ಸಂಹರಿಸಿದೆಸುಲಭ ಮೂರುತಿ ಮೋಹನವಿಠ್ಠಲಚೆಲುವ ತಿರುವೇಂಗಳ 3
--------------
ಮೋಹನದಾಸರು
ಭವಗಳನು ಖಂಡಿಸೆಂದು ಬಂದು ಬೇಡಿದೆ ಪ ಅರುಹಿನೊಳಗೆ ಇರಿಸಿಯೆನ್ನ ಮರವೆಯನ್ನು ಅಳಿಸೊಮುನ್ನಾ ಪರಮ ನೀನೆಯಾಗಿಯಾ ನಿಜದರುಹ ತೋರಿಸೈ 1 ಅಣುವಿನೊಳಗೆ ಅಣುವೆಯಾದ ಪ್ರಣವ ಜ್ಯೋತಿಯನ್ನು ತೋರೊ ತ್ರಿಣೆಯ ನೀನೆಯಾದಡೆ ನಾಂ ಪ್ರಣಿತನಾಗುವೇ 2 ಮೂರು ಐದರಿವುಗಳನ್ನು ಮೀರಿಹೋಗುವಂಥ ಮನವಾ ನಾರಿಕೈಯೊಳ್ ಕೋಟ್ಯಾತಕಿಂತು ನಟಿಸುತಿರುವಿಯೋ 3 ಪಾರುಗಾಣಿಸಯ್ಯ ನೀ ಸಂಸಾರ ಶರಧಿಯನ್ನು ಶಂಭು ಕೋರಿಕೆ ಈಡೇರಿಸಯ್ಯ ಅಪಾರಲಿಂಗವೇ 4 ಪರಮ ತತ್ವೋಕ್ತಾಧಿಕಾರಿ ಸುರಮುನೀಂದ್ರಾಕಾಶಪತಿ ಗುರುವು ತುಲಶಿರಾಮನೆ ತ್ವಚ್ಚರಣ ಶರಣಯ್ಯ5
--------------
ಚನ್ನಪಟ್ಟಣದ ಅಹೋಬಲದಾಸರು
ಭವರೋಗ ಹರವಾದೊಂದೌಷಧಿತ್ರೈಭುವನ ವಿಖ್ಯಾತವಾಗಿದೆ ಬುದ್ಧಿವಂತರಿಗೆ ಪ ಚತುರ ವೇದಶಾಸ್ತ್ರ ಮೇಣಷ್ಟಾದಶವಾದಸ್ಮøತಿತರ್ಕ ಪೌರಾಣದಡವಿಯಲ್ಲಿಮತಿವಂತ ಮುನಿಗಳಾರಿಸಿ ತಂದು ತಾವುಪ್ರತಿಗಂಡು ಲೋಕಕ್ಕೆ ಹಿತವಾಗಿ ತೋರುವ 1 ಅಡವಿಯೊಳರಸಿ ಅಗಿಯಲಿಲ್ಲ ತಂದುಇಡಿದು ಚೂರ್ಣವಮಾಡಿ ಒಣಗಿಸಲಿಲ್ಲಕುಡಿದು ಕಹಿಖಾರವೆಂದೆನಲಿಲ್ಲ ನೋಡೆಬಡವ ಬಲ್ಲಿದರೆಲ್ಲರಿಗೆ ಸಾಧ್ಯವಾಗಿಪ್ಪ 2 ಪಥ್ಯಪಾನದ ನೇಮಗಳಿಲ್ಲ ಹೋಗಿಸ್ತೋತ್ರ ಮಾಡಿ ವೈದ್ಯನ ಬೇಡಲಿಲ್ಲನಿತ್ಯಸೇವಿಸೆ ಆಲಸ್ಯಗಳಿಲ್ಲ ನೋಡೆಮತ್ಯಾರ ಮಾತ ನಡೆಸುವ ಬಗೆಯಿಲ್ಲ3 ರಸಪಾಷಾಣಾದಿ ಮೂಲಿಕೆಯನು ತಂದುಕುಶಲದಿ ಶೋಧಿಪ ಕೋಟಲೆಯಿಲ್ಲಮಿಸುಣಿ ವರ್ಣದ ಭಸ್ಮ ತೈಲಗಳೆಂತೆಂಬಫಸಣೆಯಿಲ್ಲದೆ ಗಾಂಧರ್ವರು ಸೇವಿಪ 4 ಒಮ್ಮೆ ಸೇವಿಸೆ ಜನ್ಮ ಜನ್ಮಂಗಳ ದು-ಷ್ಕರ್ಮ ಸವೆದು ಸಕಲಾನಂದವೀವಘಮ್ಮನೆ ಕೃಷ್ಣರಾಯನ ಪುರದಲಿ ಬಿಡದÉಮ್ಮ ರಕ್ಷಿಪ ಮುದ್ದುಕೃಷ್ಣ ಕೃಷ್ಣಯೆಂಬ 5
--------------
ವ್ಯಾಸರಾಯರು
ಭಳಿಭಳಿರೆ ಶನಿರಾಜ ನೀನೆ ಬಲ್ಲಿದನೊ ಇಳೆ ಮೂರರಲಿ ನಿನಗಿಂ ಬಲ್ಲಿದರ ಕಾಣೆ ಪ ಧರೆಗೆಲ್ಲ ಒರ್ವನೆ ದೊರೆಯಾದ ನಳನನ್ನು ಪರರಾಯನಾಳೆನಿಸಿ ತಿರುವಿಸಿದಿ ಅಶ್ವ ವರ ಸತ್ಯ ಹರಿಶ್ಚಂದ್ರನ್ಹೊಲೆಯನಾಳೆನಿಸವನಿಂ ನಿರುತದಿಂ ಕಾಯ್ಸಿದೆಯೊ ಸುಡುಗಾಡವ 1 ಭೂಪತಿ ವಿಕ್ರಮಗೆ ಕಳ್ಳನೆಂದೆನಿಸವನ ತಾಪಬಡಿಸೆದೆಯೊ ಕೈಕಾಲುಗಳ ಕಡಿಸಿ ರೂಪಗೆಡಿಸಿದಿಂದ್ರಿನ ಮೈಯಲ್ಲಿ ತೂತ್ಹಾಕಿ ಶಾಪಕೊಡಿಸಿಂದುವಿನ ಕಳೆಯುಗುಂದಿಸಿದಿ 2 ಕುರುರಾಯನೊಂಶವಂ ನಿರ್ಮೂಲ ಮಾಡಿದೆಯೊ ತಿರಿದುಣಿಸಿದಿ ಆ ಮಹ ಪಾಂಡುನಂದನರ ಪರಮ ಸುಖಿಗಳ ಸುಖಕೆ ಕಿಡಿಯಿಟ್ಟು ನೋಡಿದಿ ವರ ತಪಸ್ವಿಗಳ ತಪಸ್ಸು ಭಂಗಪಡಿಸಿದೆಯೊ 3 ಒದಗಿ ಯಮದೇವನನ್ವಧೆ ಮಾಡಿಸಿದೆಯೊ ನೀ ಪದುಮಪೀಠನದೊಂದು ಮಸ್ತಕವ ಕಳೆದಿ ಮುದ ಕೃಷ್ಣ ಗಿಡದಡಿಯಸುವ ಬಿಟ್ಟನೆನಿಸಿದಿ 4 ಇಂತಿಂಥ ಮಹಿಮರನು ಈ ಪಾಡ ಪಡಿಸಿದಿ ನ ಮ್ಮಂಥ ನರಜನರ ಪಾಡೇನು ನಿನಗೆ ಕಂತುಪಿತ ಶ್ರೀರಾಮನನುಮತಿಯ ಪಡೆದು ಬಲ ವಂತನಿನಿಸಿದೆಯೋ ನೀ ಮೂಲೋಕದೊಳಗೆ 5
--------------
ರಾಮದಾಸರು
ಭಾಗಣ್ಣಾ | ಗುರು ನಿನ್ನ ಪೊಗಳುವೆನಯ್ಯಾಕರುಣದಿ ಪಿಡಿಕೈಯ್ಯಾ | ಮುರಹರ ಕುವರಯ್ಯಾ ಪ ನಗಧರ ಮೊಮ್ಮಗ ಮಗನೀ ಯೆನ್ನನುಖಗವರ ವಹ ಪ್ರಿಯ ಪಾಲಿಸೊ ಜೀಯಾ ಅ.ಪ. ಜ್ಞಾನ ಸದ್ಭಕ್ತಿ ವಿರಕ್ತಿಯ ಮೂರ್ತೀ | ಸಾರುವೆ ತವಕೀರ್ತೀಗಾನ ಲೋಲನ ಸೇವಿಸೆ ಜಾಗರ್ತೀ | ಮಾಡುವೆ ಶರಣಾರ್ತೀ |ಘನ್ನ ಮಹಿಮ ಕಾರುಣ್ಯ ಮೂರುತೀಎನ್ನವ ಗುಣ ಮರೆದು ಸಲಹೊ ವಿಶ್ವಂಭರ 1 ಜಲಧಿ ವಿಹಾರನೆಸುಲಭದಿ ಸಾಧನ ಪಾಲಿಸೋ ಜೀಯ 2 ಅರುಹಲೇತಕೊ ಎನದುರಿತ ಸಮೂಹ | ನೀನಲ್ಲವೆ ದುರಿತಹರತುರು ತನ್ನ ಕರುವನೆ ಮರೆವುದೆ ಆಹಾ | ಪಾಲಿಸು ತವನೇಹಾಸಿರಿಪತಿ ಗುರುಗೋವಿಂದ ವಿಠಲನಚರಣಾಂಬುಜದೊಳು ನಿಲಿಸೆಲೊ ಮನವಾ 3
--------------
ಗುರುಗೋವಿಂದವಿಠಲರು