ಒಟ್ಟು 5094 ಕಡೆಗಳಲ್ಲಿ , 122 ದಾಸರು , 3288 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೇಕಿಲ್ಲ ಎನಗನ್ಯ ಏನೇನು ಸ್ವಾಮಿ ಸಾಕು ನಿನ್ನಯ ನಾಮವೊಂದೆ ನುತ ಪ್ರೇಮಿ ಪ ದುರುಳ ಸಂಹರ ನಾಮ ದುರಿತ ಪರಿಹರ ನಾಮ ಶರಧಿಮಥನ ನಾಮ ಸುರರ ಸಲಹಿದ ನಾಮ ಹರನ ಪ್ರೇಮದ ನಾಮ ಪರಮೇಷ್ಟಿಯನು ಪಡೆದ ಸ್ಥಿರನಾಮದ್ಹೊರತು 1 ಸೃಷ್ಟಿಯಾಳುವ ನಾಮ ಶಿಷ್ಟಪಾಲನ ನಾಮ ಕಷ್ಟ ಕಳೆಯುವ ನಾಮ ಇಷ್ಟಪೂರ್ಣ ನಾಮ ಮುಟ್ಟುಮುಡಿ ಹರನಾಮ ಅಷ್ಟಸಿರಿಪತಿನಾಮ (ಹುಟ್ಟುಸಾವಿ)ಲ್ಲದ ಶಿಷ್ಟನಾಮದ್ಹೊರತು 2 ವೇದ ಹೊಗಳಿದ ನಾಮ ಸಾಧುವಂದಿತನಾಮ ಬೋಧರೂಪದ ನಾಮ ಆದಿಮಹನಾಮ ಭೇದವಿಲ್ಲವ ನಾಮ ವೇದಗೋಚರ ನಾಮ ಆದಿ ಅಂತಿಲ್ಲದನಾದಿ ನಾಮದ್ಹೊರತು 3 ತರಳನ್ಪೊರೆದ ನಾಮ ಕರಿಯ ಸಲಹಿದ ನಾಮ ತರುಣಿನುದ್ಧಾರ ನಾಮ ಧರೆಪೊತ್ತ ನಾಮ ಕರುಣೆ ತುಂಬಿದ ನಾಮ ಶರಣಾಗತಪ್ರಿಯ ನಾಮ ನರನ ಬೆಂಬಲನಾದ ಹರಿನಾಮದ್ಹೊರತು 4 ಮೂರು ಕಳೆಯುವ ನಾಮ ಆರುಗೆಲಿಸುವ ನಾಮ ಆರುನಾಲ್ಕು ಸುಲಭದಿ ಹಾರಿಸುವ ನಾಮ ಸಾರ ಮುಕ್ತಿಯ ನಾಮ ಧೀರ ಶ್ರೀರಾಮ ನಿಮ್ಮಪಾರನಾಮದ್ಹೊರತು 5
--------------
ರಾಮದಾಸರು
ಬೇಗ ಬಾರೊ ಕರುಣಾವಾರಿಧೆ ಕೃಪೆ ದೋರೊ ನಿನ್ನನು ಸೇರಿದೆ ಪ. ಜನಕನ ವಲಿಸಿದ ಜಾನಕಿ ವರದ ಕನಕ ವಿಭೂಷಣ ಕಲ್ಮಷಹರ ಬೇಗ 1 ಭಂಜನ ದೈವತರಂಜನ ನಿರಂಜನ 2 ಅರಿಗಣ ಕರ್ಷಣ ಅದ್ಭುತ ದರ್ಶನ ಪರಮ ಪುರುಷ ಶೇಷಗಿರಿಯ ಭೀಮರ್ಶನ 3
--------------
ತುಪಾಕಿ ವೆಂಕಟರಮಣಾಚಾರ್ಯ
ಬೇಗನೆ ದಯಮಾಡೊ ಸಾಗರ ನಿಲಯ ನಾಗಶಯನ ನೀನು ಹ್ಯಾಗೆ ಮಹ ಕರುಣಾಳು ಪ ಭಕ್ತರ ದುರ್ಭವ ಕತ್ತರಿಸದೆ ಇಡೀ ಭಕ್ತರ ಬೆಂಬಲೆಂಬೋಕ್ತಿ ಸತ್ಯವೇನು 1 ಪಾದ ನುತಿಸಲು ಕಾಯದಾದಿ ನುತ ಪೋಷನೆಂಬ ಮಹ ಸ್ಮøತಿವಾಕ್ಯ ಸರಿಯೇನೋ 2 ಶ್ರೀಶ ಶ್ರೀರಾಮ ನಿನ್ನದಾಸರ ನೊರೆದಿಹಿ ದಾಸರ ಪ್ರಾಣನೆಂಬುವಾಚ ಲೇಸೇನೆಲೋ 3
--------------
ರಾಮದಾಸರು
ಬೇಗನೆ ಬಾರೊ ದೇವ ಜಾಗೂ ಮಾಡದೆ ಪ ಬೇಗನೆ ಬಾರೊ ನೀನು ನಾಗಶÀಯನ ಕೃಷ್ಣ ಯೋಗಿ ಜನರು ಕಂಡು ಪೋಗಲೀಸರೆ ನಿನ್ನ ಅ.ಪ. ಹತ್ತಾವತಾರವಾಯ್ತು ಮತ್ತಗಜವ ಪೊರೆದೆ ಉತ್ತಮಪದ ಧ್ರುವಗಿತ್ತೆ ಮತ್ತೇನು ಕಾರ್ಯವೈಯ್ಯ 1 ತರಳ ಪ್ರಹ್ಲಾದನ ಕರುಣಾದಿ ಸಲಹಿದೆ ದುರುಳರ ಸದೆದ ಪರಿಯೆಲ್ಲವಾಯಿತು2 ಪರಿ ರೂಪವ ಧರಿಸಿದ ಎನ್ನದೇವ ಸಿರಿರಂಗೇಶವಿಠಲನೆ ಕರವೆತ್ತಿ ಮುಗಿಯುವೆ 3
--------------
ರಂಗೇಶವಿಠಲದಾಸರು
ಬೇಡುವೆನು ಉಡಿಯೊಡ್ಡಿ ನಾ ನಿನ್ನ ಭಜಿಸಿ ಮಾಡುದಯ ನಿನ್ನವರ ಒಡನಾಡ ಹರಿಯೆ ಪ ಇಡುವ್ಯೋ ಸಂಸಾರದಿ ಕೊಡು ಬಿಡದೆ ನಿರ್ಮೋಹ ನಡೆಸುವೆಯೊ ಹಿರೇತನದಿ ನುಡಿಸದಿರು ಪಕ್ಷ ಬಡತನದಿ ಇಡುವೆಯೋ ಕಡುಧೈರ್ಯ ಕೃಪೆಮಾಡು ಸಡಗರದ ಸಿರಿಕೊಡುವ್ಯೋ ಕಡುಶಾಂತಿ ನೀಡು 1 ಬೇನೆಯೊಳು ನೂಕುವೆಯೋ ತ್ರಾಣಕೊಡು ತಡೆವ ಬಹು ಮಾನ ಕೊಡುವೆಯೋ ಮೊದಲು ನಾನೆಂಬುದ್ಹರಿಸು ಕಾನನದಿ ತಿರುಗಿಸುವಿಯೋ ಜ್ಞಾನಪಾಲಿಸು ಅಪ ಮಾನವಿತ್ತರೆ ನಿನ್ನ ಧ್ಯಾನದೊಳಗಿರಿಸು 2 ತಿರಿದುಣಿಸಿ ಬದುಕಿಸುವ್ಯೋ ತೋರಿಸು ಜಗದಭಿಮಾನ ಪರಿಪಕ್ವಾನ್ನುಣಿಸುವೆಯೋ ಪರಪಂಕ್ತಿ ಬಿಡಿಸು ದೊರೆತನವ ಕರುಣಿಸುವ್ಯೋ ಕರುಣಗುಣ ವರ ನೀಡು ನರರೊಳಗೆ ಆಡಿಸುವ್ಯೋ ಮರೆಸು ಅನೃತವ 3 ಶರಣರ್ವರ್ತನದೆನ್ನ ನಿರಿಸುವೆಯೊ ಅನುಗಾಲ ನಿರುತು ಧರ್ಮಗಲದ ಸ್ಥಿರಬುದ್ಧಿ ನೀಡು ಮರೆವೆ ಮಾಯವ ತರಿದು ಅರಿವಿನೊಳಿರಿಸುವೆಯೊ ಹರಿಶರಣರಹುದೆನುವ ವರ್ತನವ ನೀಡು 4 ಹರಣಪೋದರು ನಿಮ್ಮ ಚರಣಕ್ಕೆರಗಿದ ಶಿರವ ಪರರಿಗೆರಗಿಸದಿರು ಶರಣಾಗತಪ್ರೇಮಿ ಜರಾಮರಣ ಪರಿಹರಿಸಿ ವರಮುಕ್ತಿ ಪಾಲಿಸಿ ವರದ ಶ್ರೀರಾಮ ನಿಮ್ಮ ಚರಣದಾಸೆನಿಸು 5
--------------
ರಾಮದಾಸರು
ಬೇಡೆಲೊ ಜೀವಾ ಜನಿಸಲೆ ಬೇಡೋ ಪ ಬೇಡ ನಿಜಸುಖ ದೊರೆಯದು ನೋಡೋ ಅ.ಪ ಹೆಣ್ಣೋ ಗಂಡೋ ಆಗಿ ಮೆರೆಯುವೆಮಣ್ಣು ಹೊನ್ನಿಗೆ ನೀ ಹಾತೊರೆಯುವೆಉಣ್ಣುತ ಪ್ರಾರಬ್ಧವ ಬಾಯ್ದೆರೆಯುವೆಹಣ್ಣಾಗುವೆ ನೀ ಪರೀಕ್ಷೆ ಮಾಡೊ 1 ಆರು ಹಗೆಗಳು ಗಡ ಮುತ್ತುವವೊಮೂರು ತಾಪಗಳು ಕಡು ಹೊತ್ತುವವೊನೂರೊಂದೊಗಟಗಳಿರದೊತ್ತುವವೊಪಾರಾಗಲು ಬಿಡವೆಂದಿಗು ಕೇಡೋ 2 ಹುಟ್ಟು ಸಾವುಗಳ ಸುಳಿಯಲಿ ಸುತ್ತುವೆಒಟ್ಟು ಮರಳಿ ಸಂಚಿತವನು ಬಿತ್ತುವೆ ಗಟ್ಟಿಸಿ ಗದುಗಿನ ವೀರನಾರಾಯಣನೆಹುಟ್ಟಿಸಬೇಡೆಂದಿಚ್ಛಿಸಿ ಬೇಡೋ 3
--------------
ವೀರನಾರಾಯಣ
ಬೊಮ್ಮಗಟ್ಟಿರಾಯ ಪಾಲಿಸೋ ನಮ್ಮ ನೀ ಮಾರಾಯ ಧರ್ಮ ಕಾಮ್ಯಾರ್ಥ ಕೊಡುವೊ ಕರುಣಾಂಬುಧಿ ಪ ನಿಗ್ರ(ಹ) ಮಾಡುತ ಪರಮಾಗ್ರ(ಹ) ದಲಿ ಸೀಗ್ರ (ಶೀಘ್ರ?) ದಿಂದಲಿ ದಶಗ್ರೀವನ ಲಂಕ- ದುರ್ಗದಲ್ಲಾಡಿದ್ಯಗ್ನಿಯ ಒಡಗೂಡಿ 1 ರಾಮಪಾದಾಂಬುಜ ಸೇವಕ ಸೇತುವೆ ಪ್ರೇಮದಿ ಕಟ್ಟಿ ನಿಂತನು ರಣದಿ ನೇಮದಿಂದಲಿ ಸಂಜೀವನ ತಂದಾತ ವಾಹನನಾದ ತ್ರಿಧಾಮದೊಡೆಯಗೆ 2 ವಾತಾತ್ಮಜ ರಘುನಾಥಗೆ ನೀ ನಿಜ- ದೂತನೆನಿಸಿ ಬಹು ಪ್ರೀತಿಯಲಿ ಭೂತಳದೊಳು ಪ್ರಖ್ಯಾತಿಯ ಪಡೆದೆ ನಿ- ರ್ಭೀತನಾದ ಭೀಮೇಶಕೃಷ್ಣನ ಪ್ರಿಯ 3
--------------
ಹರಪನಹಳ್ಳಿಭೀಮವ್ವ
ಬೋಧ ಭಾನು ಬರುತೈದನೆ ನಾದ ವಿನೋದವೆಂಬ ಈಕೋಳಿಯು ಕೂಗುತೈತವರನೀಕ್ಷಿಸೆ ಸತ್ಕರುಣಾ ಕಟಾಕ್ಷದಿಂಏಳಯ್ಯ ಗುರುವರ್ಯ ಏಳಯ್ಯ ಗುರುವರ್ಯ ಯತಿಜನಾಲಂಕಾರಪಏಳು ಭಕ್ತಾಧಾರ ಯಮನಿಯಮ ಸಂಚಾರಏಳು ವಿದ್ವದ್ವರ್ಯ ಪರಮಹಂಸಾಚಾರ್ಯ ಏಳು ಗೋಪಾಲ ಯತಿವರ್ಯಾ ಸ್ವಾಮಿಅ.ಪಆಧಾರ ಮಣಿಪೂರ ಹೃದಯ ಕಮಲಗಳಲ್ಲಿನಾದ ಬಿಂದು ಕಲೆಗಳೆಂಬರುಣನುದುಸಿದಬೋಧೆಯೆಂಬರ್ಕನಾವಿರ್ಭವಿಸಿದನು ಸಹಸ್ರಾರ ಕಮಲದ ತುದಿಯಲಿವೇದವೇದ್ಯಾನಂತಮಹಿಮ ಚಿನ್ಮಯರೂಪನಾದಸೌಖ್ಯಾಕಾರ ಕಲಿ ಕಲ್ಮಷವಿದೂರಆದಿಮಧ್ಯಾಂತರಹಿತಾನಂದ ನಿತ್ಯನಿಜಬೋಧನೊಲಿದುಪ್ಪವಡಿಸಾ ಸ್ವಾಮೀ1ನಿತ್ಯವೆ ನಿಮ್ಮ ಪದವೆಂದಜಾಂಡವನಿದನನಿತ್ಯವೆಂದಖಿಳ ವಿಷಯಗಳಲಿ ವಿರತರಾಗಿಅತ್ಯಂತ ಶಮ ದಮಾದಿಗಳೆಂಬ ಸಾಧನದಿ ಮುಕ್ತಿ ಸುಖವನು ಬಯಸುತಾಪ್ರತ್ಯಕ್ಷರ ಬ್ರಹ್ಮರೈಕ್ಯವರಿಯದೆ ವಿದುಗಳತ್ಯಂತ ತ್ವರೆುಂದ ನಿಮ್ಮ ಮುಖಕಮಲದಿಂತತ್ವಮಸಿ ವಾಕ್ಯದರ್ಥವ ತಿಳಿಯಬೇಕೆಂದು ನೃತ್ಯವನು ಮಾಡುತಿಹರೂ ಸ್ವಾಮಿ 2ದೇಹೇಂದ್ರಿಯಾಂತರಂಗವನೇತಿಗಳಿದು ಸಂದೇಹದಲಿ ಕೂಟಸ್ಥ ನೀನೆಂಬುದರಿಯದೆಮಹಾ ವಿಚಾರಿಸಿ ಭಕ್ತ ಸುಲಭನೆ ದಾಟಿಸೈ ಮೋಹಸಾಗರವನೆನುತಾಪಾಹಿ ನೊಂದೆವು ಸಂಸ್ಕøತಿಯ ಬಂಧದಲಿ ನಮ್ಮಬೇಹುದೈಪಾಲಿಸಲು ಯೋಗನಿದ್ರೆಯ ಬಿಟ್ಟುದಾಹರಿಸು ವೇದಾಂತಗೋಪ್ಯವನೆನುತ ನತಸಮೂಹ ಕಾದಿದೆ ಕೃಪಾಳು ಸ್ವಾಮಿ 3ಕೇಳಿ ಭಕುತರ ದೈನ್ಯ ಸಲ್ಲಾಪಗಳನಿಂತುಲೀಲಾವತಾರ ಗುರುರಾಯನೊಲಿದೆದ್ದವರಲಾಲಿಸುತ ಧನ್ಯರಾದಿರಿ ಸನ್ಮತಿಯೊಳಿಂತು ಮೇಳಾಪವಾುತೆನುತಾಬಾಲರಿರ ನಿಮ್ಮನಂತಃಕರಣದ ಧ್ಯಾನಜಾಲಸುತ್ತಿರಲಾಗಿ ನಿಮ್ಮ ನಿಜವನು ಮರೆದುಕಾಲಕರ್ಮಾಧೀನವಾಗಿ ನೊಂದಿರಸತ್ಯವೀ ಲೋಕವೆಂದರಿಯದೆ ಎನಲು ಗುರುವೇ 4ಜೀವೇಶ್ವರರ ವಾಚ್ಯ ಲಕ್ಷ್ಯಾರ್ಥವನು ನಿಚ್ಚ ಭಾವಿಸುತ ಬ್ರಹ್ಮ ಕೂಟಸ್ಥರೆಂದವರಿಗೆ ಸ್ವಭಾವದಿಂ ಭೇದವಿಲ್ಲೌಪಾಧಿಕವಿದೆಂದು ಸಾವಧಾನದಲಿ ತಿಳಿದೂನಾವೆ ಪರಿಪೂರ್ಣಾತ್ಮರೆಂದು ಬೋಧಾಮೃತವಸೇವಿಸಿದಡನುದಿನಂ ಕೃತಕೃತ್ಯರಹಿರೆನಲ್‍ದೇವ ಕೃತಕೃತ್ಯರಾದೆವು ನಮೋ ಎನುತ ಸ್ವಭಾವ ಪದದಲಿನಿಂದರೂ ಸ್ವಾಮೀ 5
--------------
ಗೋಪಾಲಾರ್ಯರು
ಬೋಧ ಸದ್ಗುರು ಜಿತಮದನ ಪ ಬಾದರಾಯಣ ವೈದೇಹಿ ಚರಣಾಬ್ಜಾ ರಾಧಕ ನಮಿಪೆ ಸನ್ಮೋದವಿತ್ತು ಕಾಯೊ ಅ.ಪ. ಶ್ರೀ ಮಧ್ವ ಮತವಾರಿಧಿ ಸೋಮ | ದ್ವಿ ಜ ಸನ್ನುತ ಗುಣಧಾಮಾ ಕಾಮಿತಜನ ಕಲ್ಪಭೂಜ ವಿಬುಧ ಸು ಪ್ರೇಮ ಸಂಯಮಿಕುಲೋದ್ಧಾಮ ದಯಾಂಬುಧೇ ಗೋಮಿನೀವಲ್ಲಭನ ಪದಯುಗ ತಾಮರರಸಗಳನನುದಿನದಿ ಬಿಡ ದೇ ಮನಾಬ್ಜದಿ ಭಜಿಸುತಿಪ್ಪಮ ಹಾ ಮಹಿಮ ತುತಿಸಿಬಲ್ಲನೆ 1 ದೀನಜನರ ಬಂಧು ನಿನ್ನಾ | ಪಾದ ಕಾನೆರಗುವೆ ಸುಪ್ರಸನ್ನಾ ದಾನ ಮಾನಗಳಿಂದ ಜ್ಞಾನಿಜನರಿಗೆ ಮ ಹಾನಂದ ಬಡಿಸುತ ಸಾನುರಾಗದಿ ನಿತ್ಯಾ ಶ್ರೀ ನಿಕೇತನ ಪರಮ ಕಾರು ಣ್ಯ ನಿವಾಸ ಸ್ಥಾನನೆನಿಪ ಮ ಹಾನು ಭಾವ ಭಗವತ್ಪದಾಂಭೋ ಜಾನುಗರೊಳೆನ್ನೆಣಿಸಿ ಪಾಲಿಸು 2 ಸತ್ಯಪ್ರಿಯರ ಕರಕಮಲ | ಜಾತ ನಿತ್ಯ ನಿರ್ಜಿತ ಘೋರ ಶಮಲಾ ಚಿತ್ತಜಪಿತ ಜಗನ್ನಾಥ ವಿಠಲನ ಚಿತ್ತಾನುವರ್ತಿಗಳಾಗಿ ಸಂಚರಿಸುತಾ ಅತ್ಯಧಿಕ ಸಂತೋಷದಲಿ ಪ್ರತ್ಯರ್ಥಿಗಳಿಗುತ್ತರಿಸಿ ಮಿಗೆ ಪುರು ಷೋತ್ತಮನೆ ಪರನೆಂದು ಡಂಗುರ ವೆತ್ತಿ ಹೊಯ್ಸಿ ಕೃತಾರ್ಥನೆನಿಸಿದ 3
--------------
ಜಗನ್ನಾಥದಾಸರು
ಬ್ರಹ್ಮನ ರಾಣಿ ಮಂಗಳಂ ಶಾರದೆ ಸಕಲಾರ್ಥದೆ ಪ ನಿನ್ನನು ನಂಬಿದೆ ಸನ್ಮತಿಯಿತ್ತು ಜಿಹ್ವೆಯೊಳೀಗಲೆ ನಲಿಯೆ ಶಾರದೆ ಸಕಲಾರ್ಥದೆ 1 ಪೂರ್ಣದಯದಿ ಪೊರೆಯೆ ಶಾರದೆ ಸಕಲಾರ್ಥದೆ 2 ಸುಂದರ ಶಾರದ ಚಂದ್ರ ಪ್ರಭಾನ್ವಿತೆ ಮಂದಹಾಸದಿ ನಟಿಸೆ ಶಾರದೆ ಸಕಲಾರ್ಥದೆ 3 ಶೋಣಾಧರ ಪಲ್ಲವೆ ಶಾರದೆ ಸಕಲಾರ್ಥದೆ 4 ಮಾನಿನಿ ವಾಗ್ವಿಜೃಂಬಿಣಿಶಾರದೆ ಸಕಲಾರ್ಥದೆ 5
--------------
ಬೇಟೆರಾಯ ದೀಕ್ಷಿತರು
ಬ್ರಹ್ಮವೇ ನೀನೆನ್ನು ಮುಕ್ತನೇಬ್ರಹ್ಮವೇ ನೀನೆನ್ನು ಪ ತುಪ್ಪದ ಹನಿಯೆಲ್ಲವು ಮುಕ್ತನೆತುಪ್ಪವೆಯಲ್ಲವೆ ಮುಕ್ತನೆಇಪ್ಪ ಈ ಜಗವೆಲ್ಲ ಮುಕ್ತನೆತುಪ್ಪದ ತೆರನಂತೆ ಈ ಬ್ರಹ್ಮ 1 ಸಕ್ಕರೆ ಚೂರೆಲ್ಲ ಮುಕ್ತನೆಸಕ್ಕರೆಯಲ್ಲವೆ ಮುಕ್ತನೆತಕ್ಕು ಆಪರಿ ಆ ಜಗವು ಮುಕ್ತನೆಸಕ್ಕರೆ ತೆರನಂತೆ ಈ ಬ್ರಹ್ಮ2 ಅಣುರೇಣು ತೃಣ ಕಾಷ್ಠ ಮುಕ್ತನೆಘನ ಜೀವ ತಾನೆ ಎನ್ನು ಮುಕ್ತನೆಗುಣಾತೀತ ಚಿದಾನಂದ ಮುಕ್ತನೆಅನುಮಾನವಿಲ್ಲದೆ ನೀನೇ ಈ ಬ್ರಹ್ಮ 3
--------------
ಚಿದಾನಂದ ಅವಧೂತರು
ಬ್ರಹ್ಮಾದಿವಂದ್ಯ ಪರಬ್ರಹ್ಮಾನೆ ಕಾಯೊ ಅಹಂಬ್ರಹ್ಮಭಾವವ ಬಿಡಿಸೋ ಪ ಬ್ರಹ್ಮಾನ ಜನಕನೆ ಬ್ರಹ್ಮಾಂಡದೊಡೆಯ ಬ್ರಹ್ಮಾಂಡಾಂತರ್ಯಾಮಿ ಸಲಹೋ ಅ.ಪ ಸತ್ಯವ್ರತನೆ ನೀ ಸತ್ಯಪರನು ಜಗ ಸತ್ಯ ಸೃಜಿಸಿ ಪೊರೆವೇ ನಿತ್ಯ ನಿರ್ಲಿಪ್ತನಹುದೋ 1 ಏಕರೂಪನೆ ಅನೇಕ ರೂಪದಿ ಎಲ್ಲಾ ಲೋಕಗಳೆಲ್ಲಾ ಪಾಲಿಪೆ ಲೋಕಗಳನೆಲ್ಲ ಮಾಳ್ವೆ 2 ನಿನ್ನಾಶ್ರೈಸಿದ ಭಿನ್ನಪ್ರಕೃತಿ ತ್ರಿಭಿನ್ನಗೈಸಿ ಅಂದು ಜಗದಾ ಬನ್ನ ಪಣ್ಣನ್ನ ನಿರ್ಮಿಸಿದೆಯೋ 3 ಪಣ್ಣಿಗೆ ನಾಲ್ಕು ರಸವೋ ಘನ್ನಷಡೂರ್ಮಿಗಳನ್ನೆ ನಿರ್ಮಿಸಿ ಪೊರೆವೇ 4 ಕೊಟ್ಟೆ ಸಪ್ತಧಾತು ಅಷ್ಟವಿಟಪಿಗಳನಿಟ್ಟೆ ನವಾಕ್ಷಪೊಟರೆ ದಟ್ಟದಶಚ್ಛದ ಕೊಟ್ಟು ಜಗವೃಕ್ಷ ಸೃಷ್ಟಿಯ ಮಾಡಿ ಮೆರೆದೇ 5 ಅಟ್ಟಹಾಸದಿ ಫಲಮುಟ್ಟದೆ ಇಹ ಖಗಶ್ರೇಷ್ಟನೆ ನೀ ತುಷ್ಟನೋ ಕೊಟ್ಟ ಫಲವನುಂಡಷ್ಟೂ ಸುಖಿಪ ಜೀವರೆಷ್ಟೋ ಜಗವರಿಯೇ 6 ವ್ಯಷ್ಟೀಸಮಷ್ಟಿಯ ಸೃಷ್ಟೀಯೊಳು ನೀನೆ ಶ್ರೇಷ್ಠನೇ ವ್ಯಾಪಿಸಿರುವೇ ದೃಷ್ಟಿಗೋಚರವಲ್ಲ ಅಷ್ಟಕರ್ತೃ ಪರಮೇಷ್ಟೀಜನಕ ಸಲಹೋ 7 ಅಪ್ರಾಪ್ಯಮನೋವಚ ತ್ವತ್ ಪ್ರಾಪ್ತಿಎಂತಯ್ಯ ತ್ವತ್ಪ್ರಸಾದವಿಲ್ಲದೇ ಎನ್ನ ಬಂಧಪ್ರಕೃತಿಯನೆ ಹರಿಸೋ 8 ಸೃಷ್ಟಿಯೊಳಗೆ ಸ್ವನಿಷ್ಠೆಯಿಂದಲೀ ಜಗದೃಷ್ಟೀಗೋಚರನಾಗುವೆ 9 ಮುಮುಕ್ಷುಗಳಿಗೆ ಸಾಕ್ಷಿ ಮನದಕ್ಷಿಯೊಳು ಪೊಳೆವೇ 10 ಭಕ್ತಿವಿರಹಿತ ದುರ್ಯುಕ್ತಕಾರ್ಯದಿ ಮನ ಸಕ್ತವಾಗಿಹುದು ತ್ವಧ್ಭಕ್ತಿಯ ಕೊಡು ನಿತ್ಯ11 ಹತ್ತಿಬಹುದೂ ಬೆನ್ಹತ್ತಿಕರ್ಮವು ಮತ್ತೆ ಸುತ್ತೀಸುತ್ತುತ ಜನ್ಮವಾ ಎನಗೆ ಉತ್ತಮಗತಿ ತೋರದೇ12 ಘೋರದುರಿತ ಪರಿಹಾರ ಮಾಡಿ ಪೊರೆ ಮಾರಾರಿಪಿತವಂದ್ಯ ಚಾರು ಚರಣಸ್ಮರಣಾರಾಧನೆ (ಅದು) ಸಾಕೋ 13 ಸಾರಿದೆನೋ ಶ್ರೀ ವೇಂಕಟೇಶಾಭಿನ್ನ ಉರಗಾದ್ರಿವಾಸ ವಿಠಲಾ ಪಾರುಗಾಣಿಸಿ ಪೊರೆಯೋ 14
--------------
ಉರಗಾದ್ರಿವಾಸವಿಠಲದಾಸರು
ಬ್ರಹ್ಮಾಸ್ತ್ರ ಬ್ರಹ್ಮಾಸ್ತ್ರ ಎಂಬ ಮಾತೆಂತೆನೆಬದಲಿಲ್ಲದಿರುವುದೇ ಬ್ರಹ್ಮಾಸ್ತ್ರಬ್ರಹ್ಮಾಸ್ತ್ರಕೆ ಬ್ರಹ್ಮಾಸ್ತ್ರವೇಯಲ್ಲದೆಬ್ರಹ್ಮಾಸ್ತ್ರವೇ ಬ್ರಹ್ಮಾಸ್ತ್ರವು ಬ್ರಹ್ಮಾಸ್ತ್ರ ಪ ಪಾಶುಪತಾಸ್ತ್ರ ನಾರಾಯಣಾಸ್ತ್ರವನೆಲ್ಲಪೂರ್ಣಾಹುತಿಯ ಕೊಂಬುದೇ ಬ್ರಹ್ಮಾಸ್ತ್ರವಾಸವಾದಿತ್ಯ ಆಗ್ನೇಯಾಸ್ತ್ರವನೆಲ್ಲಬೆದರದೇ ನುಂಗುವುದೆ ಬ್ರಹ್ಮಾಸ್ತ್ರ1 ಜಿಹ್ವೆ ಹಿಡಿದತುರೀಯ ದೇವತೆಬ್ರಹ್ಮಾಸ್ತ್ರವೇ ಅಸ್ತ್ರವು ಬ್ರಹ್ಮಾಸ್ತ್ರ 2 ಬ್ರಹ್ಮ ತುರೀಯಾತೀತ ಬ್ರಹ್ಮಾಸ್ತ್ರನಿರ್ಗುಣ ಬ್ರಹ್ಮಾಸ್ತ್ರವೆ ಸ್ವರಾಟ್ ಬ್ರಹ್ಮಾಸ್ತ್ರಬ್ರಹ್ಮ ಚಿದಾನಂದ ಬ್ರಹ್ಮಾಸ್ತ್ರವೆನಿಸಿತುಬ್ರಹ್ಮಾಸ್ತ್ರವೇ ಬಗಳ ಬ್ರಹ್ಮಾಸ್ತ್ರ 3
--------------
ಚಿದಾನಂದ ಅವಧೂತರು
ಭಕುತರ ಸಂರಕ್ಷಣಾ ನಾರಾಯಣ ಪ ಖಗಪನ ಸ್ಕಂದರೋಹ ಅಘದೂರ ಅಭಯಹಸ್ತ ಸ್ವಗತಭೇದಶೂನ್ಯ ಸರ್ವಾವಸ್ಥೆಯೊಳೆನ್ನ ವಿಗತಕ್ಲೇಶನ ಮಾಡಿ ಸತತಕಾಪಾಡಲಿ ನಿಗಮವಿನುತ ಜಗದಾದಿ ವಂದ್ಯನೆ ದೇವಾ 1 ವರುಣಪಾಶಗಳಿಂ ಜಲಚರಜಂತುಗಳಿಂ ಮತ್ಸ್ಯ ಮೂರುತಿ ತಾ ರಕ್ಷಕನಾಗಿರಲಿ ಧಾರುಣಿ ನೆಲದೊಳು ಶ್ರೀ ವಾಮನ ಕಾಯಲಿ ಸರ್ವಾಕಾಶದೊಳು ತ್ರಿವಿಕ್ರಮ ಕಾಯಲಿ2 ದುರ್ಗರಣಾಗ್ರವನ ಅರಿವರ್ಗಗಳಲಿ ನರಹರಿದೇವ ಸಂರಕ್ಷಕನಾಗಿರಲಿ ಮಾರ್ಗಗಳಲ್ಲಿ ಹಿರಣ್ಯಾಕ್ಷ ವೈರಿಯು ಕಾಯಲಿ ದುರ್ಗಮಶೈಲದೊಳು ಶ್ರೀ ಭಾರ್ಗವ ರಕ್ಷಿಸಲಿ 3 ದಾಶರಥಿ ಪ್ರವಾಸದಲಿ ನಿತ್ಯ ದೇಶಾಂತರಗಳಲ್ಲಿದ್ದರು ಕಾಯಲಿ ಈಶ ಶ್ರೀಮನ್ನಾರಾಯಣ ಎನ್ನ ಕ್ರೂರ ಕರ್ಮಗಳಿಂದ ರಕ್ಷಿಸಲನುದಿನ ನರಾವತಾರ ಎನ್ನ ಗರುವಿನಿಂ ರಕ್ಷಿಸಲಿ 4 ವಿರೋಧಿವರ್ಗದಿ ದತ್ತಾತ್ರೇಯ ಕಾಯಲಿ ಸರ್ವಕರ್ಮಬಂಧಜ್ಞಾನದಿಂದ ಕಪಿಲಾ ಮೂರುತಿ ರಕ್ಷಿಸಲಿ ಅನುದಿನದಲಿ ಎನ್ನ ಸನತ್ಕೂ- ಮಾರನು ಎನ್ನ ಕಾಯಲಿ ಕಾಮದಲ್ಲಿ 5 ದಾನವ ಮಧುಕೈಟಭ ಹರೆ ಹಯವದನ ಘನ್ನಪರಾಧದಿ ರಕ್ಷಕನಾಗಿರಲಿ ಮನ್ನಿಸಿ ದೇವತೆಗಳು ಸಾಧನವೀಯಲಿ ಸನ್ನುತಾಂಗ ಧನ್ವಂತ್ರಿಮೂರುತಿ ಹರಿ ಎನ್ನ ರಕ್ಷಕನಾಗಿರಲಿ ರುಜೆಯೊಳು6 ಜ್ಞಾನರೂಪಿ ವೃಷಭ ಸೀತಾತಪದಿಂದ ಎ- ನ್ನನುದಿನ ಈ ದ್ವಂದ್ವÀದಿ ಕಾಯಲಿ ಯಜ್ಞಮೂರುತಿ ಲೋಕಾಪವಾದದಿ ಕಾಯಲಿ ಸುಜ್ಞಬಲರಾಮನು ದುರ್ಜನರ ಭಯದಿಂ ಅನುದಿನ ರಕ್ಷಿಸಲಿ 7 ಘನ್ನಮಹಿಮ ಶೇಷ ಸರ್ಪಬಾಧೆಗಳಿಂದ ಜ್ಞಾನದಾತೃ ಹರಿಸೇವೆಗೆ ಬರುತಿಹ ನಾನಾ ವಿಘ್ನಗಳಿಂದ ರಕ್ಷಿಸುತಿರಲಿ ಘನ್ನ ಮ- ಹಾ ನರಕ ಬಾಧೆಯಿಂ ತಪ್ಪಿಸಲಿ ಕೂರ್ಮಮೂರುತಿ ಕಾಪಾಡಲಿ ನಿತ್ಯದಿ 8 ವೇದವ್ಯಾಸನು ಶುಧ್ಧಜ್ಞಾನವನೀಯಲಿ ಬುದ್ಧಿಮೋಹದಿಂದ ಬುದ್ಧನುದ್ಧÀ್ದರಿಸಲಿ ಹೃದಯದ ಕಲಿಭಾಧೆ ಕಲ್ಕಿ ತಾ ಹರಿಸಲಿ 9 ಉದಯಕಾಲದಿ ಶ್ರೀ ಕೇಶವ ರಕ್ಷಿಸಲಿ ವೇಣು ಹಸ್ತ ಗೋವಿಂದ ಸಂಗಮದಲ್ಲಿ ಪೂರ್ಣಕರುಣೆ ಯಿಂದ ಎನ್ನ ಕಾಪಾಡಲಿ ಪೂರ್ವಾಹ್ನದಲಿ ನಾರಾಯಣ ರಕ್ಷಿಸಲಿ10 ಮಾಧವ ಅಪ ರಾಹ್ನದಲೆನ್ನ ರಕ್ಷಿಸಲಿ ಬಾಧೆಯಿಂ ಸಾಯಂಕಾಲದಿ ರಕ್ಷಿಸಲಿ 11 ಪ್ರದೋಷದಲಿ ಹೃಷೀಕೇಶ ರಕ್ಷಿಸಲೆನ್ನ ಪದುಮನಾಭ ಅರ್ಧರಾತ್ರಿಯಲಿ ಸಲಹಲಿ ಶ್ರೀಧರನೆನ್ನಪರಾತ್ರಿಯಲಿ ಸಲಹಲಿ12 ಜನಾದರ್Àನನು ಎನ್ನನು ಉಷಃಕಾಲದಲಿ ಸಂಧ್ಯಾಕಾಲದಿ ದಾಮೋದರ ರಕ್ಷಿಸಲಿ ಕಾಲನಾಮಕ ಬೆಳಗಿನಝಾವದಿ ಕಾಯಲಿ 13 ನಕ್ರನ ಹರಿಸಿದ ಚಕ್ರಾಯುಧವು ಎನ್ನ ಶತ್ರುಬಾಧೆಗಳಿಂದ ರಕ್ಷಿಸುತಿರಲಿ ವಿಕ್ರಮಗದೆಯು ಆಶ್ರಿತರುಪದ್ರದು- ಅನುದಿನ 14 ಪ್ರಮಥ ಭೂತ ಪಿಶಾಚ ಪ್ರೇತ ಭಯದಿ ಪಾಂಚಜನ್ಯ ಶಂಖರಾಜ ರಕ್ಷಿಸಲಿ ದುಮ್ಮನ ಶತ್ರು ಬಾಧೆಗಳಿಂದ ಖಡ್ಗವು ಖೇಟವು ಸರ್ವ ಅನಿಷ್ಟದಿಂ ರಕ್ಷಿಸಲಿ 15 ಅವನ ನಾಮರೂಪ ದಿವ್ಯಾಯುಧದ ಸ್ಮರಣೆ ಸರ್ವ ಬಂಧಗಳೆಲ್ಲ ತಕ್ಷಣದಲ್ಲಿ ನಿವಾರಣೆಯಾಗಿ ನಿವೃತ್ತಿಮಾರ್ಗಕ್ಕೆ ಶುಧ್ಧಭಾವ ಭಕುತಿಗೆ ಕಾರಣವು ಸತ್ಯ ಗರುಡ ವಿಷ್ಟಕ್ಸೇನ ಕಷ್ಟದಿಂದ ರಕ್ಷಿಸಲಿ 16 ಹರಿಯ ವಾಹನಾದಿಗಳು ವಿಪತ್ತುಗಳ ಹರಿಸಲಿ ಸರ್ವರಂತರ್ಯಾಮಿ ನಿನ್ನ ನಂಬಿರಲು ಸರ್ವಭಾಧೆಗಳಲ್ಲ ಪರಿಹಾರವಾಗಲಿ 17 ಕಾಲ ಸರ್ವಾವಸ್ಥೆಯೊಳೆನ್ನ ಸರ್ವೋತ್ತಮ ದೇವ ಸರ್ವದಾ ರಕ್ಷಿಸಲಿ ಸರ್ವರೊಡೆಯ ಶ್ರೀಮನ್ನಾರಾಯಣ ನಿನ್ನ ಕರುಣ ಕವಚವು ಎನಗಿರಲನುದಿನ 18 ಬಹಿರಾಂತರದಿ ಮೇಲ್ ಕೆಳಗು ಮಧ್ಯದಲ್ಲಿ ದಿಕ್ಕುವಿದಿಕ್ಕಿನೊಳು ಉರಗಾದ್ರಿವಾಸವಿಠಲ ಸ್ವಾಮಿ 19
--------------
ಉರಗಾದ್ರಿವಾಸವಿಠಲದಾಸರು
ಭಕುತರಿಗಾಗಿ ನೀ ಬಡುವ ಕಷ್ಟಗಳು ಅಕಟ ಪೇಳಲಳವೆ ( ನೋಡಲಳವೆ) ಲಕುಮಿ ಪತಿಯೆ ಯಾತಕೆ ವೃಥಾನಿಕರಕೆ ಸುಖವೀವೆಕಾವೆ ಪ ಮಂದಿಮನ ವಲಿಸಿ ಮದುವೆ ನೀನು ಮ ತ್ತೊಂದು ಮಾಡಿಕೊಳುತ್ಯಾ ಅಂದಣಾದಿ ಐಶ್ವರ್ಯವನ್ನು ಪರರಿಂದ ಕೇಳಿಕೊಳುತ್ಯಾ ನಿಂದೆ ಮಾಡುವರೆಂಬೊ ಭಯದಿ ಅವರ್ಹಿಂದೆ ಹಿಂದೆ ಇರುತ್ಯಾ ಅಂದವಾದ ಆಟಗಳೊಳಗೆ ಇದುವಂದು ಎನುತ್ಯಾದೇವ 1 ಸಡಗರದಲಿ ಕರಪಿಡಿದು ಕಾಯ್ದೆ ನೀ ಹುಡುಗರೀರ್ವರನ್ನು ಮಡುವಿನೊಳಗೆ ಆ ಮಕರಿಯಿಂದ ಕಾಲ್ಹಿಡಿಸಿಕೊಂಡವನ್ನ ಮಡದಿಗಂತು ಗಡಿತಡಿಯದೆ ನೀಡಿದಿ ಉಡುಗೆ ಅಗಣಿತವನ್ನು ಕಡಿಗೆ ನಿನ್ನ ಕರದೊಂದು ದಿನಾದರು ಬಡಿಶ್ಯಾರೆ ಸುಖವನ್ನು ಏನು 2 ಏನು ತಪ್ಪು ನಿನ್ನವರು ಮಾಡಿದರು ಕಾಣಬಾರವು ನಿನಗೆ ವೈರಿ ಪರಪ್ರಾಣಹಾರಿಗಳ ಪೊರೆದು ಕರುಣಿ ಸುರಧೇನು ಬಾರೊ ಬ್ಯಾಗ ಮಾನಸ ಮಂದಿರಕೆ ಈಗ 3
--------------
ಅಸ್ಕಿಹಾಳ ಗೋವಿಂದ