ಒಟ್ಟು 2825 ಕಡೆಗಳಲ್ಲಿ , 118 ದಾಸರು , 1964 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕದವನಿಕ್ಕಿದಳಿದೆಕೊ ಗಯ್ಯಾಳಿ ಮೂಳಿ ಪ.ಕದವನಿಕ್ಕಿದಳಿದಕೊ ಚಿಲಕವಲ್ಲಾಡುತಿದೆ |ಒದಗಿದ ಪಾಪವು ಹೊರಗೆ ಹೋದೀತೆಂದು ಅ.ಪಭಾರತ - ರಾಮಾಯಣ ಪಂಚರಾತ್ರಾಗಮ |ಸಾರತತ್ವದ ಬಿಂದು ಕಿವಿಗೆ ಬಿದ್ದೀತೆಂದು 1ಹರಿಯ ಪಾದಾಂಬುಜಯುಗಳವ ನೆನೆವ ಭ - |ಕ್ತರ ಪಾದದರಜ ಒಳಗೆ ಬಿದ್ದೀತೆಂದು 2ಮಂಗಳ ಮೂರುತಿ ಪುರಂದರವಿಠಲನ |ತುಂಗವಿಕ್ರಮಪಾದ ಅಂಗಳ ಪೊಕ್ಕೀತೆಂದು 3
--------------
ಪುರಂದರದಾಸರು
ಕರವಮುಗಿದ-ಮುಖ್ಯಪ್ರಾಣ-ಕರವ ಮುಗಿದಪಕರವಮುಗಿದ ಶ್ರೀಹರಿಗೆ ತಾನೆದುರಾಗಿದುರುಳರ ಸದೆದು ನೀ ಶರಣರ ಪೊರೆಯೆಂದು ಅ.ಪಜೀವೇಶ್ವರೈಕ್ಯವು ಜಗತು ಮಿಥ್ಯವೆಂದುಈ ವಿಧ ಪೇಳುವ ಮಾಯಿಗಳನಳಿಯೆಂದು 1ಇಲ್ಲಿ ಮಾತ್ರ ಭೇದ ಅಲ್ಲಿ ಒಂದೇಯೆಂಬಕ್ಷುಲಕರನು ಪಿಡಿದು ಹಲ್ಗಳ ಮುರಿಯೆಂದು 2ತಾರತಮ್ಯಪಂಚಭೇದಸತ್ಯವೆಂದುಮಾರುತ ಮತ ಪೊಂದಿದವರನು ಪೊರೆಯೆಂದು 3ಪರಿಪರಿ ಭಕ್ತರು ಹೃದಯ ಕಮಲದೊಳುನಿರುತ ಮಾಡುವ ಪೂಜೆ ನಿನಗರ್ಪಿತವೆಂದು 4ಹರಿಯ ಮನೋಗತವರಿತು ಮಾಡುವೆನೆಂದುಪುರಂದರವಿಠಲನ ಚರಣದ ಬಳಿಯಲ್ಲಿ5
--------------
ಪುರಂದರದಾಸರು
ಕಾಯಬೇಕೆನ್ನ ಗೋಪಾಲ ಬಂದು |ಪಾಯವನರಿಯೆನು ಭಕುತರ ಪಾಲಪಹಲವು ಜನ್ಮಗಳೆತ್ತಿ ಬಂದೆ-ಮಾಯಾ-|ಮಲವೆಂಬುದರಿಯದೆ ಭವದೊಳು ನೊಂದೆ ||ಬಲು ಭಯವಾಯಿತು ಮುಂದೆ-ನೀನು-|ಸುಲಭನೆಂದುಕೇಳಿಶರಣೆಂದೆ ತಂದೆ1ವಿತ್ತದೊಳಗೆ ಮನವಿಟ್ಟು-ನಿನ್ನ-|ಉತ್ತಮ ನಾಮದ ಸ್ಮರಣೆಯ ಬಿಟ್ಟು ||ಮತ್ತನಾದೆನು ಮತಿಗೆಟ್ಟು-ಇದ-|ಚಿತ್ತದಲಿ ತಿಳಿದಿ ಬಲು ದಯವಿಟ್ಟು 2ಜರುಗಿದ ಪಾಪಂಗಳೆಲ್ಲ-ಅನ್ಯ-|ನರರೇನ ಬಲ್ಲರು ಯಮಧರ್ಮ ಬಲ್ಲ ||ನರಕಕೆ ಒಳಗಾದೆನಲ್ಲ-ಸಿರಿ-|ವರನಾರಾಯಣ ಪುರಂದರವಿಠಲ 3
--------------
ಪುರಂದರದಾಸರು
ಕೂಸು ಕಂಡೆವಮ್ಮ-ಅಮ್ಮ ನಿಮ್ಮ-ಕೂಸು ಕಂಡೆವಮ್ಮ ಪಕಾಸಿಗೆ ವೀಸದ ಬಡ್ಡಿ ಗಳಿಸಿಕೊಂಡು |ಶೇಷಗಿರಿಯ ಮೇಲೆ ವಾಸವಾಗಿಪ್ಪನೆ 1ವಂಚಿಸಿ ಬಲೆಯೊಳ್ ಪ್ರಪಂಚವೆಲ್ಲ ಸೆಳೆದು |ಕಂಚಿ ಪಟ್ಟಣದಿ ಮಿಂಚಾಗಿಪ್ಪನೆ 2ಗುಡ್ಡ ಬೆರಳಲ್ಲೆತ್ತಿ ದೊಡ್ಡಿ ಗೋಗಳ ಕಾಯ್ದ |ಒಡ್ಡಿಜಗನ್ನಾಥ ಗಿಡ್ಡಾಗಿಪ್ಪನೆ3ದುಡುಕು ಮಾಡಿ ಹಾಲು ಮಡಕೆಗಳನ್ನೊಡೆದು |ಹಡಗನೇರಿ ಬಂದು ಉಡುಪಿಯಲಿಪ್ಪನೆ 4ಮಂಗಳರೇಖೆ ಪದಂಗಳುಳ್ಳ ನಿಮ್ಮ |ರಂಗ ಪುರಂದರವಿಠಲ ಶ್ರೀ ಕೃಷ್ಣ 5
--------------
ಪುರಂದರದಾಸರು
ಕೃಷ್ಣ ತನ್ನರೂಪಇಟ್ಟಉತ್ಕøಷ್ಟ ಭಕ್ತರ ಮನೆ ಬಿಟ್ಟು ಹೋಗಲಾರದೆ ಪ.ಮಿತಿಯಿಲ್ಲದೆ ರೂಪದಿಂದ ಕುಂತಿ ಸುತರಭಕ್ತಿಗೆ ಲಕ್ಷ್ಮೀಪತಿ ಅಲ್ಲೆ ನಿಂತಮಿತರೂಪ ದ್ವಾರಕೆಗೆ ಬಂದಇಂಥ ಅತಿಶಯ ಶಕ್ತಿ ನೋಡುವದೆಂಥ ಚಂದ 1ಚೆಲ್ವನ ನೋಡುವರು ಜನರುಮನೆ ಒಲ್ಲದೆ ಜರಿದಾತನಲ್ಲೆ ಇದ್ದರುಫುಲ್ಲನಾಭನರೂಪಚಾರುಇದಕೆಲ್ಲರೂ ನಗಲುಹೃದಯದಂಬರದಲ್ಲಿ ತುಂಬಿದರು 2ಧಿಟ್ಟ ಬೊಮ್ಮಾದಿಗಳೆ ಸಾಕ್ಷಿಇದನಷ್ಟು ಬಲ್ಲಂಥ ಶಿವನೊಬ್ಬ ಸಾಕ್ಷಿಅಷ್ಟ ದಿಕ್‍ಪಾಲಕರೆ ಸಾಕ್ಷಿಮತ್ತಷ್ಟು ವೈಭವದ ಸುರರೆಲ್ಲ ಸಾಕ್ಷಿ 3ಭಕ್ತ ಪ್ರಲ್ಹಾದನೆ ಸಾಕ್ಷಿಇಂಥ ಉತ್ತುಮನೆನಿಸುವ ಧ್ರುವನೊಬ್ಬ ಸಾಕ್ಷಿಸತ್ಯ ಅಜಮಿಳನೊಬ್ಬ ಸಾಕ್ಷಿನಮ್ಮ ಮಿತ್ರಿ ದ್ರೌಪತಾದೇವಿ ಅತ್ಯಂತ ಸಾಕ್ಷಿ 4ಪಂಡಿತಬಲಿಯೊಬ್ಬ ಸಾಕ್ಷಿಜಲದಿ ಕಂಡ ಅಕ್ರೂರ ಅವನೊಬ್ಬ ಸಾಕ್ಷಿಪುಂಡರೀಕನೊಬ್ಬ ಸಾಕ್ಷಿರಮಿಗಂಡ ಭಕ್ತರ ಕಾದು ಕೊಂಡಿಹ ನಿಜ 5
--------------
ಗಲಗಲಿಅವ್ವನವರು
ಕೃಷ್ಣವೇಣಿ164ನಮೋ ನಮೋ ಕೃಷ್ಣವೇಣಿನಮೋ ನಮೋ ಕೃಷ್ಣವೇಣಿ ಕಲ್ಯಾಣಿ ಪ.ಈ ಜನ್ಮದಘವು ನಾನಾ ಜನ್ಮಕೃತದೋಷಆರ್ಜಿತವಾದ ಪಂಚ ಮಹಾಪಾಪವುತ್ರಿಜಗತ್ಪಾವನಿಯೆ ನಿನ್ನ ಕಂಡು ನಾ ಕಳೆದೆರಾಜಿಸುವ ದಿವ್ಯಗತಿಯೀಯೆ ಎನ್ನತಾಯೆ 1ವಿಪ್ರಮುನಿ ಸುರನರರು ಕನ್ಯಕ್ಕೆಗುರುಬರಲುಕ್ಷಿಪ್ರನೆರೆದರು ಉಭಯತೀರವಿಡಿದುಸುಪ್ರಾರ್ಥನೆಯ ಮಾಡಿ ಆನಂದದಿ ಹರಿಯನೆ ಪ್ರಸನ್ನೀಕರಿಸಿಕೊಳ್ಳುವರಮ್ಮ 2ನಿರ್ಮಳಾತ್ಮಕÉ ಗಂಗೆ ಸಂಗೆ ಗುಣೋತ್ತುಂಗೆಹಿಂಗಿಸು ಭವವ ಪಾವನತರಂಗೆಜಂಗಮ ಜಡಾತ್ಮರನುದ್ಧರಿಸುತಿಹೆ ಸದಾಮಂಗಳ ಶ್ರೀಪ್ರಸನ್ವೆಂಕಟನೊಲುಮೆಯಲ್ಲಿ 3
--------------
ಪ್ರಸನ್ನವೆಂಕಟದಾಸರು
ಕೃಷ್ಣೇತಿ ಮಂಗಳಂ ದಿವ್ಯನಾಮ ಪಇಷ್ಟರಿಂದಲಿ ಭವಬಂಧನನಷ್ಟವಾಗಿ ಹೋಹುದೋ ಅ.ಪನಾರದಮುನಿ ತಾನು ನರಕ ಪಟ್ಟಣಕೆ ಹೋಗಿವಾರೀಜನಾಭ ಎಂದು ಒದರಿದಾಗ ||ಘೋರ ಪಾತಕವೆಲ್ಲ ದೂರವಾಗಿ ಹೋಯ್ತುಸೂರೆಯಾಯಿತು ಸ್ವರ್ಗಲೋಕವೆಲ್ಲ 1ಅಜಮಿಳನು ಈ ನಾಮ ಅಂತ್ಯಕಾಲಕೆ ಸ್ಮರಿಸೆನಿಜಪದವಿಯೈದಿದನು ನಿಮಿಷದಲಿ ||ಭುಜಗಭೂಷಣನು ತಾ ಶ್ರೀರಾಮನಾಮವನಿಜಕಾಂತೆಯನು ಕರೆದು ಉಪದೇಶವಿತ್ತ 2ಪಂಚಪಾಂಡವರನು ಪರಿಪಾಲಿಸಿತು ನಾಮಪಾಂಚಾಲೀ ಮೊರೆಕೇಳಿ ಪೊರೆಯಿತು ನಾಮ ||ವಂಚನೆ ಮಾಡಿ ಕೌರವರ ಮಡುಹಿ ನಿ -ಶ್ಚಿಂತೆಯಲಿ ಪಾಂಡವರ ಪಟ್ಟಗಟ್ಟಿದ ನಾಮ 3ಸರಸಿಯೊಳಗೆ ಮುಳುಗಿ ಅರಿಯ ಬಾಧೆಗೆ ಸಿಲುಕಿಕರಿರಾಜ ಹರಿಯೆಂದು ಮೊರೆಯಿಡಲು ||ತ್ವರಿತದಿಂದಲಿ ಬಂದು ಕರಿಯನುದ್ಧರಿಸುತಕರಿರಾಜವರದನೆಂದೆನಿಸಿಕೊಂಡ ನಾಮ 4ಧ್ರುವ ತನ್ನ ತಂದೆ ತೊಡೆಯ ಮೇಲೇರಲು ಪೋಗೆಅವನ ಮಲತಾಯಿ ಗರ್ಜಿಸಿದಳಾಗ ||ಧ್ರುವ ಸುಖಬಿಟ್ಟು ವನಕೆ ಪೋಗಿ ತಪ ಮಾಡಿಸವಿಯಾದಚಲಪದವ ಪಡೆದನಾಗ 5ಹಿರಣ್ಯಕಶಿಪು ತನ್ನ ಮಗನ ಬಾಧೆಯ ಪಡಿಸೆಗಿರಿಯ ಶಿಖರದಿಂದೀಡಾಡಲು ||ನರಹರೆ ನರಹರೆ ರಕ್ಷಿಸೆಂದನ್ನಲುನರಸಿಂಹ ರೂಪದಿಂದವನ ಪಾಲಿಸಿದ 6ಕಂದನ ಅಪರಾಧವ ಕೇಳದೆ ನೃಪನು ತಾನಂದತಿ ದಾರುಣ ಕಡಹದೋಳು ಕೆಡಹೆ ||ಅಂದು ಸುಧನ್ವ ಶ್ರೀಕೃಷ್ಣನೆಂದೆನಲಾಗಿಬೆಂದು ಕಂದಿವ ಎಣ್ಣೆ ತಣ್ಣೀರಾಯಿತು 7ಅಸುರ ಬಾಧೆಗೆ ಸಿಲುಕಿ ಅಶೋಕವನದಲಿಶಶಿಮುಖಿ ಬೀಜಮಂತ್ರವ ಜಪಿಸೆ ||ಅಸುರನ ಕೊಂದು ಅಶೋಕವನವ ಬಿಡಿಸಿವಸುಧೀ ಸುತೆಯ ಸಲಹಿದ ರಾಮನಾಮ 8ಪರಿಪರಿ ಭಕ್ತರನು ಪಾಲಿಸಿತು ಈ ನಾಮಪರಮ ಮಂಗಲವು ಪಾವನವು ಈ ನಾಮ ||ಸುರರು ಬ್ರಹ್ಮಾದಿಗಳು ಸ್ರೋತ್ರ ಮಾಡುವ ನಾಮಧರೆಯೊಳುಸಿರಿಪುರಂದರ ವಿಠಲ ನಾಮ9
--------------
ಪುರಂದರದಾಸರು
ಕೆಟ್ಟಿತು ಕೆಲಸವೆಲ್ಲ - ಲೋಕದಿ ಕಾಮನಟ್ಟುಳಿದಶನವಾಯಿತು ಪ.ಬಟ್ಟೆ ತಪ್ಪಿ ಮುಂದೆ ಕೆಟ್ಟು ಕರ್ಮಿಯಾಗಿಬಿಟ್ಟು ಮುಂದಣ ಪಥವ - ಹೇ ದೇವಾ ಅಪಸತ್ಯ ಕಾಮ ಕರ್ಮವು ಧರ್ಮದ ಬಲಮತ್ತೆ ಅಡಗಿಹೋಯಿತುಎತ್ತ ನೋಡಲು ನೀಚವೃತ್ತಿಯೆತುಂಬಿಅತ್ಯಂತ ಪ್ರಬಲವಾಯ್ತೋ ಹೇ ದೇವಾ 1ಹೊತ್ತುಹೊತ್ತಿಗೆ ಹಲವು ಲಂಪಟತನದಲಿಚಿತ್ತ ಚಂಚಲವಾಯಿತುಸತ್ತು ಹುಟ್ಟುವ ಸುಳಿಯಲ್ಲದೆ ಮತ್ತೊಂದುಗೊತ್ತು ಇಲ್ಲದೆ ಹೋಯಿತ್ತೋ ಹೆ ದೇವಾ 2ಪೇಳುವುದೇನಿನ್ನು ದುರ್ಜನರ ಸಂಗದೋಲಾಟ ಸೊಗಸಾಯಿತುಕೀಳು ಮೇಲು ಮೇಲು ಕೀಳಾಗಿ ನಡೆಯುವಕಾಲವೆಗ್ಗಳವಾಯಿತೋ ಹೇ ದೇವಾ3ಆಳುವ ಅರಸರಿಗೆಲ್ಲ ಕಾಂತನದಾಸೆಮೇಲು ಮೇಲಾಯಿತಯ್ಯನೀಲ ಮೇಘಶ್ಯಾಮ ನಿನ್ನಾಳೆಂಬರಿಗೆಕೂಳು ಹುಟ್ಟದೆ ಹೋಯಿತೋ ಹೇ ದೇವಾ 4ಅರಿಷಡ್ವರ್ಗದಲಿ ಸಿಲುಕಿ ಸುಜ್ಞಾನದಅರಿವು ಇಲ್ಲದೆ ಹೋಯಿತುಕರಣಾಳು ಶ್ರೀ ಪುರಂದರವಿಠಲನೆ ನಿನ್ನಸ್ಮರಣೆಯಿಲ್ಲದೆ ಹೋಯಿತೋ ಹೇ ದೇವಾ 5
--------------
ಪುರಂದರದಾಸರು
ಕೇಳೆ ಯಶೋದೆ ನಿನ್ನ ಬಾಲಕನಾಟಗಳೂ |ಹೇಳಿಕೊಂಡರೆ ಸುಳ್ಳೇ ಕಾಣಿಸಿತಮ್ಮ ಪನೀರೊಳಾಡುವನಲ್ಲೆ, ಪೋರರ ಕೂಡಿಕೊಂಡು |ಮಾರಿಯೆಂಬೊದೇನು ಸಾರಿ ಬಾಹೊದೆ 1ಎಲ್ಲರಂತುಂಡು ಮನೆಯಲ್ಲಾಡಬಾರದೆ |ಕಲ್ಲೆತ್ತುವನೆ ಯಂಥ ಬಲ್ಲಿದನಂತೆ 2ನಿಮ್ಮ ಹಿತಾರ್ಥನಾಗಿ ಸಮ್ಮೀಸಿ ಪೇಳಿದರೆ |ಬೊಮ್ಮನ ಮಗನಂತೆ ನಮ್ಮನ್ನೇ ಬೈವ 3ಮೂರು ಕಣ್ಣವಪರನಾರೇರ ಮುಟ್ಟಲಾರ |ಊರೊಳಗಿವ ಬಲು ಮೀರಿದನಮ್ಮ 4ಸಣ್ಣವನೆನಬೇಡ ನಿನ್ನ ಮಗನಗೋಪಿ|ಅನ್ನಿಥವಾಡೆವೆಮ್ಮ ಚಿನ್ನಗಳಾಣೆ 5ಬೆಂಕಿಗಂಜದೆ ನಿರಾತಂಕದರೊಳಗಿಹ |ಮಂಕುತನವ ನೋಡೆ ಪಂಕಜನೇತ್ರೆ6ಇನ್ನೊಂದು ಮಾತು ಕೇಳೆ ಮೊನ್ನೆ ಮೊನ್ನೆ ಒಬ್ಬ |ಹೆಣ್ಣಿನ ಕೊಂದನಲ್ಲೆ ಅನ್ಯಾಯ ನೋಡೆ 7ಕಿತ್ತಿದನೊಂದು ಮರ ಮತ್ತೆರಡು ಮೂರೀದ |ಮತ್ತಗಜವ ಕೊಂದುನ್ಮತ್ತನ ನೋಡೆ 8ಸದ್ಯ ಹೋಗಲೀನಿತು ಇದ್ದೊಬ್ಬವನು | ಅಪ್ರ-ಬುದ್ಧನಾಗಬಾರದು ಬುದ್ಧಿಯ ಹೇಳೇ 9ಅಧಮರೊಡನೆನಿತ್ಯಕದನಮಾಡುವದೇಕೆ |ಮಧುಸೂದನನ್ನು ಒಳ್ಳೆ ಹದನದಲ್ಲೀಡೆ 10ಕಾಣ ಬಂದದ್ದಾಡಲು ಪ್ರಾಣೇಶ ವಿಠಲಗೆ |ಹೀನ ತೋರುವದಮ್ಮಾ ಏನನ್ನಬೇಕೆ 11
--------------
ಪ್ರಾಣೇಶದಾಸರು
ಕೊಡಬಹುದೇ ಮಗಳ - ಸಮುದ್ರರಾಜಕೊಡಬಹುದೇ ಮಗಳ ಪನಡೆದರೆ ಬಡವಹಳೆಂಬ ಕುಮಾರಿಯ |ಹಿಡಿಬಿಟ್ಟಿ ಮಾಡಿ ಹರಿಗೆ ಸಿಂಧುರಾಜನುಅ.ಪಕುರುಹಬಲ್ಲವರಾರು, ಕುಲಗೋತ್ರವಾವುದೊ |ಅರಿತ ರಾಯರೊಳಗೆ ಆರ ಮಗನೊ ಇವ |ವರುಶಭಾಂಗಿಗೆ ತಕ್ಕ ವರನಹುದೆ ಇವ |ಹಿರಿಯರೆಂಬುದ ನೆರೆಹೊರೆಯೂ ಕಾಣದನಿವ |ಪರಿಪಂಥಿಜನಕೆಲ್ಲ ಪ್ರಾಣಘಾತಕನಿವ |ನಿರುತ ಮೇಘವ ಪೋಲ್ವ ನೀಲಮೆಯ್ಯವನಿವ,ಹಿರಿದಾದ ನಾಲ್ಕು ಹಸ್ತಗಳುಳ್ಳವನಿವ |ಅರುಣಚ್ಛಾಯೆಯ ರೇಖೆ ಅರಳಿಸಿಹಾರುವ ||ಗರುಡಹಕ್ಕಿಯ ನೆಚ್ಚಿದ - ಎದೆಯ ಮೇಲೆ |ಭರದಿ ಒದೆಯ ಮೆಚ್ಚಿದ - ಘೋರರೂಪ |ಧರಿಸಿ ಕೋಪದಿ ಹೆಚ್ಚಿದ - ಕರೆವ ಗೋವ |ಕರುಗಳ ಕೊರಳುಚ್ಚಿದ - ಸಂಸಾರದೊಳ್ |ಇರುತಿಹ ನಾರಿಯರ ಮನವೆಲ್ಲ ಬಿಚ್ಚಿದ 1ಅಡಿಗಡಿಗೆ ಹತ್ತು ಅವತಾರವ ಮಾಡಿದ |ಕಡುಕಪತಿಯಲ್ಲದೆ ಭಾರಿ ಗುಣದವನಲ್ಲ |ಗಿಡದ ಮರೆಯಲಿದ್ದು ಕಪಿಯ ಕೊಂದನುಹೊಲ್ಲ |ನಡತೆಯಲಿ ಸಲೆ ಜನಲಜ್ಜೆ ಇವನಿಗಿಲ್ಲ |ಹಿಡಿದು ಪೂತನಿ ಮೊಲೆಯುಂಡ ಚೌಪಟಮಲ್ಲ |ಮಡುಹಿದ ಮಾವನ ಮಧುರೆಯೊಳಗೆಖುಲ್ಲ |ಕೊಡೆಮಾಡಿ ಬೆಟ್ಟವ ಗೋಕುಲದೊಳಗೆಲ್ಲ |ಮಡದಿಯರುಡುಗೆಯ ಕದ್ದದ್ದು ಹುಸಿಯಲ್ಲ ||ಕಡಹದ ಮರವೇರಿದ -ಅವರಮಾನ - |ಕೆಡಿಸಿ ಭಂಡರ ಮಾಡಿದ - ದಧಿಕ್ಷೀರ - |ಗಡಿಗೆ ಸೂರೆಯ ಮಾಡಿದ - ಕಾಳಿಂಗನ - |ಮಡುವ ಕಲಕಿ ನೋಡಿದ - ಸ್ಯಂದನವನು |ನಡೆಸುವ ಕಾರಣ ನರಗೆ ಸಾರಥಿಯಾದ 2ಊದುತ ಕೊಳಲನರಣ್ಯದೊಳ್ ಗೋಗಳ |ಕಾದು ಕುಂಚಿಗೆ ಮಾಡಿ ಕಂಬಳಿ ಪೊದೆವನು |ಓದನವನು ಬೇಡಿ ಹೊಟ್ಟೆಯ ಹೊರೆದನು |ಯಾದವರೊಳಗಾಡಿ ಎಂಜಲನುಂಡನು |ಕ್ರೋಧದಿಂದ ಸುರರ ಕೊಂದು - ಕೊಂದಿಡುವನು |ಪಾದರಿ ಪೆಣ್ಣುಗಳೊಳಗಿರುತಿಪ್ಪನುಆದಿಯೆ ಇವಗಿಲ್ಲ ಎಂದೆಂದಿಗಿಪ್ಪನು |ಭೂದಿವಿಜರ ಕೂಡ ಬಿಕ್ಷಕೆ ಪೋಪನು ||ಮೇದಿನಿಯೊಳಗಿರುವ - ಮಸ್ತಕವು ಬೋ - |ಳಾದವರೊಳಗಿರುವ - ನೋಡಲು ಭೇದಾ - |ಭೇದದಂದದಿ ತೋರುವ - ಸಭೆಯೊಳಗೆ |ಬೈದರೆ ಮೈದೋರುವ ಶೇಷಶಾಯಿ - |ಯಾದಂಥಪುರಂದರ ವಿಠಲನೆಂದರಿಯದೆ3
--------------
ಪುರಂದರದಾಸರು
ಕೋಮಲಾಮಲ ಗಾತ್ರನ ತಾಮರಸದಳ ನೇತ್ರನಸ್ವಾಮಿ ಸಿರಿನಿವಾಸನ ಕಂಡೆ ಹೇಮಗಿರಿ ವರದೀಶನ ಪ.ಕನ್ನೆ ಲಕುಮಿಯನೆತ್ತಿದಶುಭಚಿನ್ನವಕ್ಕಿಯ ಹತ್ತಿದರನ್ನದುಡುಗೆಗಳಿಟ್ಟನ ಸುವರ್ಣದಂಬರನುಟ್ಟನಕರ್ಣಕುಂಡಲ ಬೆಳಗಿನ ನುಣ್ಗೆನ್ನೆಲಲುಗುವ ಕುರುಳಿನಸಣ್ಣನಾಮದ ನೊಸಲಿನ ಶ್ರೀ ಚಿನ್ಮಯನ ಬಲು ಚೆಲುವನ 1ಕುಂದದಲರಿನ ಮಾಲೆಯ ಪ್ರಭೆಗುಂದದ ಮಕುಟಮೌಳಿಯಸ್ಯಂದನಾಂಗದರಾಭಯವರ ಹೊಂದಿದಮಲ ಸುಪಾಣಿಯಮುಂದೆ ನಾರದ ಹನುಮರ ಗಾಯನಾನಂದದಲಿ ತಾ ಕೇಳುವಹಿಂದೆಡಬಲದಿ ಛತ್ರವ ಪಿಡಿದಿಂದಿರೆಯರೊಳೊಪ್ಪುವ 2ತೋರ ಮುತ್ತಿನ ಹಾರದಕೇಯೂರಕೌಸ್ತುಭವಕ್ಷದಚಾರುಸ್ಮಿತ ಮುಖರೋಚಿಯ ದಯಾವಾರಿಧಿಯ ಮಹೋದಾರಿಯಸಾರಿದರ ಸುರತರುವಿನ ಸುರವೈರಿಕರಿಪಂಚಾನನಭೂರಿಪ್ರಸನ್ವೆಂಕಟೇಶನ ಹೃದಯಾರವಿಂದ ನಿವಾಸನ3
--------------
ಪ್ರಸನ್ನವೆಂಕಟದಾಸರು
ಕೋಲೆಂದು ಪಾಡಿರೆಕೋಮಲೆಯರೆಲ್ಲಗೋಪಾಲರಾಯನಮಡದಿಯರುಕೋಲಪ.ಶ್ರೀದೇವಿಯರ ಕೂಡ ವಾದ ಸರಸವೆಆದರದಿ ಪಾದಕ್ಕೆರಗಿಕೋಲಮಾಧವನರಸಿಯರ ಮೋದದಿಕರೆಯೆ ವಿನೋದವ ನುಡಿದಾನುರಾಯ 1ಸರಿಯ ರಾಣಿಯರ ಕೂಡ ತರವೇನು ಸರಸವುಕರವಜೋಡಿಸಿ ಕಮಲಾಕ್ಷಿಕೋಲಎರಗಿ ದೇವಿಯರಿಗೆ ಕರಿಯೆ ಬ್ಯಾಗಎಂದುಹರದೆಯರಿಗೆ ನುಡಿದ ಭೀಮನು ಕೋಲ 2ಕೀರ್ತಿವಂತರ ಕೂಡ ಯಾತಕ್ಕೆ ಸರಸವುಮಾತಿನ ಸುಖದ ವಾಣಿಯರಕೋಲಸ್ತೋತ್ರವ ಮಾಡುತ ಪ್ರೀತಿಲೆ ಕರೆಯೆಂದುಪಾರ್ಥ ಮಾತಾಡಿದ ಸತಿಗೆ ಕೋಲ 3ಸಕಲ ಗುಣಾಢ್ಯರ ಸಖಳೆಂದು ಕರೆಸಿಕೊನಕಲಿ ಮಾತಾಡಬ್ಯಾಡಕೋಲಮುಖವ ನೋಡುತ ಅತಿ ಸುಖವ ಪಡಿರೆಂದುನಕುಲಮಾತಾಡಿದ ಸತಿಗೆಕೋಲ4ಇಂತು ರಾಮೇಶನ ಕಾಂತೆಯರ ಕರೆಯೆವೇದಾಂತ ವೇದ್ಯಳೆ ದ್ರೌಪತಿಕೋಲಪಂಥವ ಬಿಟ್ಟು ಸಂತೋಷದಿ ಕರೆಯೆಂದುಕಾಂತೆಗೆ ನುಡಿದ ಸಹದೇವ 5
--------------
ಗಲಗಲಿಅವ್ವನವರು
ಕ್ಷೀರಸಾಗರದಲೆರಡೀರೈದು ಯೋಜನದ |ಮೇರೆಯಲಿ ವರತ್ರಿಕೂಟಾದ್ರಿ ಶೃಂಗತ್ರಯದಿ |ರಾರಾಜಿಸುವ ತಾಮ್ರ-ರಜತ-ಕಾಂಚನದಿಂದನಾರಾಯಣಾಂಶದಿಂದ ||ಪಾರಿಜಾತಾಂಭೋಜ ಬಕುಳ ಮಲ್ಲಿಗೆ ಜಾಜಿ |ಸೌರಭದಲಶ್ವತ್ಥಪೂಗಪುನ್ನಾಗಜಂ |ಬೀರತರುಗುಲ್ಮಶಾಖಾಮೃಗಗಳೆಸೆವಲ್ಲಿವಾರಣೀಂದ್ರನು ಮೆರೆದನು 2ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲ್ಲಿ |ಕಾನನದಿ ತೊಳಲುತ್ತ ಬೇಸಗೆಯ ಬಿಸಿಲಲ್ಲಿ |ತಾನು ನೀರಡಿಸಿ ಬಂದೊಂದು ಸರಸಿಯ ತಟಕೆಪಾನಾಭಿಲಾಷೆಯಿಂದ ||ನಾನಾಪ್ರಕಾರದಿಂ ಜಲಕ್ರೀಡೆಯಾಡುತಿರ |ಲೇನಿದೆತ್ತಣ ರಭಸವೆಂದುಗ್ರಕೋಪದಿಂ |ಒತ್ತಿ ಪಿಡಿದೆಳೆಯುತಿರೆ ಎತ್ತಣದಿನೇನೆನುತ |ಮತ್ತಇಭರಾಜನೌಡೊತ್ತಿ ನೋಡುತ್ತಂಘ್ರಿ |ಎತ್ತಿ ತಂದನು ತಡಿಗೆ ಮತ್ತೆ ನಡುಮಡುವಿನೊಳುಅತ್ತಲೇ ತಿರುಗೆನೆಗಳೆ||ಇತ್ತಂಡದಿಂತು ಕಾದಿದರು ಸಾವಿರ ವರುಷ |ಉತ್ತರಿಸಿತೇನೆಂಬೆ ಮತ್ತಾ ಗಜೇದ್ರಂಗೆ |ಸತ್ತ್ವ ತಗ್ಗಿತು ತನ್ನ ಮನದೊಳಗೆ ಚಿಂತಿಸಿತುಮತ್ತಾರು ಗತಿಯೆನುತಲಿ 4ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ |ದಿಂದ ದಿವ್ಯಜಾÕನ ಕಣ್ದೆರೆದು ಮನದೊಳರ |ವಿಂದನಾಭಾಚ್ಯುತ ಮುಕುಂದಮಾಧವಕೃಷ್ಣನಿಖಿಲ ಮುನಿವೃಂದವಂದ್ಯ ||ಇಂದಿರಾರಮಣ ಗೋವಿಂದ ಕೇಶವ ಭಕ್ತ |ಬಂಧು ಕರುಣಾಸಿಂಧು ತಂದೆ ನೀ ಗತಿಯೆನಗೆ |ಇಂದುಸಿಲ್ಕಿದೆನು ಬಲು ದಂದುಗದಮಾಯಾಪ್ರ-ಬಂಧಕನೆ ನೆಗಳಿನಿಂದ 5ಪರಮಾತ್ಮ ಪರಮೇಶ ಪರತತ್ತ್ವ ಪರಿಪೂಜ್ಯ |ಪರತರ ಪರಂಜೋತಿಪರಮಪಾವನಮೂರ್ತಿ |ಪರಮೇಷ್ಟಿಪರಬ್ರಹ್ಮಪರಮಪರಮಾಕಾಶ |ಪರಿಪೂರ್ಣ ಪರಮಪುರುಷ ||ನಿರುಪಮ ನಿಜಾನಂದ ನಿರ್ಲಯ ನಿರಾಕಾರ |ನಿರವಧಿಕನಿರ್ಗುಣನಿರಂಜನನಿರಾಧಾರ |ನಿರವದ್ಯನಿಸ್ಸಂಗ ನಿಶ್ಚಿಂತ ನಿಖಿಲೇಶಇರದೆ ನೀ ಸಲಹೆಂದನು 6ಇಂತೆನುತ ಮೂಚ್ರ್ಛೆಯಲಿ ಗುಪ್ತಕಂಠಸ್ವರದ |ಕಾಂತ ನಡುನೀರೊಳಗೆ ತೇಲಿ ಮುಳುಗುತಲಿರೆ ಅ- |ನೆಗಳ ಬಾಯನು ಚಕ್ರದಲಿ ಸೀಳಿ ಕರಿವರದ |ಒಗುವ ಕರಣದಲಿ ಮೈದಡಹಲ್ಕೆ ಗಜಜನ್ಮ |ತೆಗೆದುದಾಕ್ಷಣಕೆ ಮಣಿಮುಕುಟ - ಕುಂಡಲದಿಂದನಗಧರನು ಓಲೈಸಿದ ||ವಿಗಡದೇವಲ ಮುನಿಯ ಶಾಪದಲಿ ದಾರುಣಿಯೊ- |ಳಗೆ ನಕ್ರನಾಗಿ ಹೂಹೂ ಎಂಬ ಗಂಧರ್ವ |ಮಗುಳಿಪುರವನು ಕಂಡು ನಿಜಗತಿಗೆ ಐದಿದಿನುಕಮಲಾಕ್ಷಮಿಗೆ ಮೆರೆದನು 8ಮಣಿಮುಕುಟಕುಂಡಲಪದಕಹಾರ ಕಡಗಕಂ- |ಕಣ ಕೌಸ್ತು ಭೊಜ್ವ ್ಜಲಾಂಗದವೈಜಯಂತಿಭೂ- |ಷಣ ಶಂಖ-ಚಕ್ರ-ಗದೆ-ಪದ್ಮ ಧರಿಸಿಹಹಸ್ತಪಣಿಯ ಕಸ್ತುರಿ ತಿಲಕದಾ ||ಝಣಝಣಿಪ ನೂಪುರದ ದಂತಪಂಕ್ತಿಯ ಕೃಪೇ- |ಕ್ಷಣದ ಸಿರಿಮೊಗದ ಪೀತಾಂಬರದ ಮೂರುತಿಗೆ |ಮಣಿದು ಜಂiÀi ಜಯಜಯಾಎಂಬ ಸುರನರರಸಂ- |ದಣಿಯಿಂದೆಹರಿಮೆರೆದನು 9ಹರಹರಿಎನುತ್ತಂಘ್ರಿಗೆರಗಲಿಭವರನನಾ- |ದರದಿಂದಲೆತ್ತುತಲಿ ಕೇಳ್ಮಗನೆ ನೀನೆನ್ನ |ವಿರಜಶರಪರಿಧಿಯಾ ಸರವನಹಿಪತಿಯನ್ನುಪರಜನ್ಮನೀ ಲಕುಮಿಯ ||ಪರಮೇಷ್ಟಿ-ಭವರ ಮನು-ಮುನಿಗಳನು ಧರಣಿಯನು |ಆವಾವನಿದನುದಯದಲ್ಲೆದ್ದು ಭಕ್ತಿಯಲಿ |ಭಾವಶುದ್ಧಿಯಲಿ ತಾ ಹೇಳಿಕೊಳುವನೊ ಅವನ- |ಘಾವಳಿಯ ಪರಿಹರಿಸಿ ಸುಙ್ಞÕನವೀವೆ ದೇ-ಹಾವಸಾನದಲೆನುತಲಿ ||ಶ್ರೀವಾಸುದೇವನಾಜಾÕನೆಸಿ ಗಜೇಂದ್ರ ಸಹಿ- |ತಾವಿಹಂಗಾಧಿಪನನೇರಿ ವೈಕುಂಠಕ್ಕೆ |ದೇವ ಬಿಜಯಂಗೈದಪುರಂದರವಿಠಲನ
--------------
ಪುರಂದರದಾಸರು
ಗಂಗಾಪಿತ ವೆಂಕಟ ಪರ್ವತನಿಲಯಕೌಸಲ್ಯತನಯಾ |ಮಂಗಳವಲ್ಲಭಭವಕರಕರೆಯ ಪರಿಹರಿಪುದು ತ್ವರಿಯಾ |ಅಂಗಜಜನಕನೆ ಸಂಗರಹಿತ ಸತ್ಸಂಗ ಕೃಪಾಬ್ಧಿ ವಿಹಂಗವಾಹನನೇ ಪಸ್ವಾಮಿಲಾಲಿಸುಯನ್ನಯ ಮನದುಸರ ನೀನಲ್ಲದಿತರರ |ಭೂಮಿಯೊಳ್ಕಾಣೆನೋ ಉದ್ಧರಿಸುವರನವನೀತಚೋರ |ಸಾಮಜದ್ರೌಪದಿ ಆ ಮುಚುಕುಂದ ಸುಧಾಮರ ಪೊರೆದ ತ್ರಿಧಾಮ ಮಹಾತ್ಮ 1ವಾಸುಕೀ ಶಯನ ದಯಾ ಸಂಪನ್ನ ನಾರಾಯಣ ನಿನ್ನ |ದಾಸರೊಳಗಾಡಿಸೊ ಸದ್ಗುಣ ಪೂರ್ಣ ಸಾರ್ವರಿಗೆ ಪ್ರಸನ್ನ |ಈಸಲಾರೆ ಈ ಸಂಸಾರಶರಧಿಕೈ ಸೋತಿತೆಲೋ ಪರಾಶರ ತನಯ 2ನಿತ್ಯಾನಂದ ನಿಗಮೋದ್ಧಾರ ಪೂತನೀ ಸಂಹಾರ |ಮೃತ್ಯುಂಜಯಸಖರವಿದರ ಗದಾಧರ ಸುಖಪಾರಾವಾರ|ಭೃತ್ಯವತ್ಸಲ ಸುರೋತ್ತಮ ಪಾರ್ಥನ ತೊತ್ತಿಗನಾದಿ ಸುಸತ್ಯ ಸಂಕಲ್ಪ ಗಂಗಾ3ಮಂದರಾಚಲ ಧರಿಸಿದ ಗೋವಿಂದ ಶ್ರೀ ಯಶೋದಾನಂದ |ನಂದನ ಶ್ರೀ ಕೇಶವ ಮುಕುಂದ ವಾಮನ ಸುಖಸಾಂದ್ರ |ತಂದೆ ಸಲಹೊ ನಿನ್ನ ಬಂಧಕ ಶಕುತಿಯಲಿಂದ ದಣಿಸದೆ ಅರಿಂದಮ ಪ್ರಭುವೇ 4ಅಂತರಂಗವ ಬಲ್ಲ ಮಧುದ್ವೇಷಿ ಯನ್ನಯ ಮನದಾಸೀ |ಅಂತು ಪೂರ್ತಿಸಿ ದುಷ್ಕರ್ಮದ ರಾಶಿ ಉಳಿಸದೆ ಪರಿಹರಿಸಿ |ಸಂತತ ಹೃದಯದಿ ನಿಂತು ಪೊಳೆವುದೋ ಅನಂತ ಮುರಾಂತಕ ಚಿಂತಾರಹಿತನೆ 5ಶಕ್ರವರಪೂಜಿತ ಬಲವಂತ ರುಕ್ಮಣೀಪತಿ ದಂತ |ವಕ್ತ್ರಾರಿ ಬಾಧಿಸದಂತೆಕೃತಾಂತಮಾಳ್ಪುದು ಕೆಡದಂಥ |ಸುಕೃತಪೀಡಿಸೋ ತ್ರಿವಿಕ್ರಮ ಮೂರುತಿ ಶುಕ್ರ ಯುಕ್ತಿ ಹರ ಅಕ್ರೂರ ವರದ 6ಕಂಕಾನುಜ ಮಂದಿರ ಪ್ರಾಣೇಶ ವಿಠಲ ಗೋಕುಲ ಗೋಪಾಲ |ಪಂಕಜಾಸನ ಜನಕ ಶಕಟಕಾಲಜಾಂಬವತೀಲೋಲ|ಶಂಕರಾದ್ಯಮರರ ಕಳಂಕೆಣಿಸದ ಗರುಡಾಂಕಉರಗಪರ್ಯಂಕ ಸುಖಾತ್ಮ 7
--------------
ಪ್ರಾಣೇಶದಾಸರು
ಗಜಲಕ್ಷ್ಮಿ ಬಿಜಯ ಮಾಡೇ ಮೂಕಾಂಬಿಕೆಭಜಿಸುವೆ ವರವ ನೀಡೆಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಅಜಸುರ ಮುಖ್ಯರು ಭಜಿಸಲು ನಿನ್ನನುನಿಜವಾದ ವರವನಿತ್ತೆ ಜಗನ್ಮಾತೆಕುಜನರ ಮರ್ದಿಸುತೆವಿಜಯಸಾರಥಿಭುಜಗಶಯನನಭಜನೆಯನು ಅನುದಿನದಿ ಪಠಿಸುವಸುಜನಸಜ್ಜನಪಾಲೆ ಸದ್ಗುಣಶೀಲೆಮುನಿಜನಲೋಲೆ ಜಯ ಜಯ1ಕೊಲ್ಲೂರ ಪುರನಿಲಯೆ ಮಹದೇವಿಯೆಪುಲ್ಲಲೋಚನೆ ಪಾಲಯೆಎಲ್ಲ ಭಕ್ತರ ಮನ ಸಲ್ಲಿಸಿ ಸಲಹುವಚಲ್ವ ರಂಗನ ರಾಣಿಯೆ ಶ್ರೀದೇವಿಯೆಕುಲ್ಲ ಕುಂಕುಮ ಜಾಣಿಯೇ ಸಲ್ಲಲಿತೆಕಾಲಲ್ಲಿ ರಂಜಿಪ ಪಿಲ್ಲಿ ಮಿಂಚಿಕೆ(?) ಕಡಗ ಪೈಜಣಗೆಜ್ಜೆ ಗಲಗಲ ಎಂದು ನಲಿಯುತ ಬಾರೆಜಗದ ವಿಚಾರೆ ಮುಖ ತನು ತೋರೆ ಜಯ ಜಯ2ಚಂದಿರ ಮುಖದ ಮನೇ ಸರ್ವೇಶ್ವರಿಕುಂದಕುಂಡಲರದನೇಮಂದಗಾಮಿನಿ ಅರವಿಂದನಯನೆಸುರಪಂಡಿತಗುಣಕರುಣಿನೀನಲ್ಲದೆ ಮುಂ ಸುಖವ ಕಾಣೆನೆಚಂದನನವಗಂಧ ಕುಂಕುಮ-ದಿಂದ ಶೋಭಿಪ ಕೀರವಾಣಿಯೆಸುಂದರಿಯೆ ಗೋವಿಂದನರಸಿಯೆ ಧರ್ಮದೇವಿಯೆದೈvÀ್ಯ £್ಞಶಿನಿಯೆ ಜಯ ಜಯ3
--------------
ಗೋವಿಂದದಾಸ