ಒಟ್ಟು 2222 ಕಡೆಗಳಲ್ಲಿ , 112 ದಾಸರು , 1788 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮರೆಯದಿರು ಮರೆಯದಿರು ಗುರುರಾಯನ |ಲೋಕ ಪರಿಪಾಲಿಸುವಗುರುಸಾರ್ವಭೌಮನ್ನಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಪರಮೇಶ್ವರನು ತಾನೆಪರಮಪ್ರೇಮದಿಂದಗುರುರೂಪವನುಧರಿಸಿ ಧರೆಗೆ ಬಂದು, ತ್ವರದಿಂದ ಮಾನವರ ಮರವೆಯನುಪರಿಹರಿಸಿ | ಸ್ಥಿರ ಮುಕ್ತಿ ಸುಖವಿತ್ತು ಪೊರೆವ ಗುರುವರನ1ಕರುಣದಿಂ ಜನರ ರಕ್ಷಿಸುವ ಸದ್ಗುರುವರನ | ಶರಣು ಪೊಕ್ಕರೆಕೃಪಾ ಸುಧೆಗರೆವನ | ನಿರುತದಲಿ ಭಕುತರಿಗೆ |ನಿರತಿಶಯಸೌಖ್ಯವನು ಸರಿದಂತೆ ವರವಿತ್ತು | ಮೆರೆವ ದೇಶಿಕನ2ಕುವರ ಬಾರೆಂದಭಯಕರವಶಿರದಲ್ಲಿರಿಸಿ |ನೆರೆಸುಬೋಧೆಯಗೈದು ನರಭಾವ ಕಳೆದು |ಮರಣ ಭಯ ಹರಸಿ | ಬಹು ಹರುಷದಿಂದಿರುಎಂದ ಚಿರ ಸಿಂಧುಗಿಯವಾಸ |ಗುರುಶಂಕರನಪಾದ3
--------------
ಜಕ್ಕಪ್ಪಯ್ಯನವರು
ಮರೆಯದೆ ಮನದಲಿ ಸಿರಿವರನ ಚರಣವನುಸ್ಮರಿಸಿದಂಥವರನ್ನು ನರರೆನ್ನಬಹುದೆ ? ಪ.ಮುರಹರನಿಗೆರಗುವ ಶಿರವು ದ್ವಾರಕಾಪುರವುಹರಿಕಥೆ ಕೇಳುವಕರ್ಣ ಗೋಕರ್ಣವುಬಿರುದು ಪೊಗಳುವಜಿಹ್ವೆ ಸ್ಥಿರದಿ ಕ್ಷೀರಾರ್ಣವವರದನ ಪೂಜಿಪ ಕರವು ರಾಮೇಶ್ವರವು 1ಸೃಷ್ಟೀಶ ನಿರ್ಮಾಲ್ಯ ಗೃಹಣನಾಸಿಕ ಕಾಶಿಕೃಷ್ಣನ ನೋಡುವ ದೃಷ್ಟಿ ಶ್ರೀ ಮುಷ್ಣವುಅಷ್ಟಮದಗಳ ಜರೆದ ಮುಖ ಮಥುರಾಪುರವಿಷ್ಣುವನು ಪಾಡುವ ಕಂಠ ಭೂ ವೈಕುಂಠ 2ಪರಕೆ ನಡೆಸುವಜಂಘೆ ಹರಿವ ಗಂಗೆಯು ಈಪರಿಯಲೊಪ್ಪುವ ಅಂಗ ಶ್ರೀರಂಗವುಧರೆಯೊಳುಪುರಂದರ ವಿಠಲರಾಯನಪರಮಭಾಗವತರ ಉದರವೆ ಬದರಿ3
--------------
ಪುರಂದರದಾಸರು
ಮಹಾದಾದಿದೇವ ನಮೋ ಮಹಾಮಹಿಮನೆ ನಮೋಪ್ರಹಲ್ಲಾದವರದ ಅಹೋಬಲ ನರಸಿಂಹ ಪ.ತರಣಿಗುಬ್ಬಸವಾಗೆ ತಾರಾಪತಿಯು ನಡುಗೆಸುರರು ಕಂಗೆಟ್ಟೋಡೆ ನಭವ ಬಿಟ್ಟು ||ತರುಗಿರಿಗಳಲ್ಲಾಡೆ ಶರಧಿಗಳು ಕುದಿದುಕ್ಕೆಉರಿಯನುಗುಳುತ ಉದ್ಭವಿಸಿದೆಯೊ ನರಸಿಂಹ 1ಸಿಡಿಲಂತೆ ಗರ್ಜಿಸುತೆ ಕುಡಿಯ ನಾಲಗೆ ಚಾಚಿಅಡಿಗಡಿಗೆ ಹುಂಕರಿಸಿ ಕಡುಕೋಪದಿಂದ ||ಮುಡಿವಿಡಿದು ರಕ್ಕಸನ ಕೆಡವಿ ನಖದಿಂದೊತ್ತಿಬಿಡದೊಡಲ ಬಗೆದ ಕಡುಗಲಿ ನಾರಸಿಂಹ 2ಸರಸಿಜೋದ್ಭವ ಹರ ಪುರಂದರಾದಿ ಸಮಸ್ತಸುರರು ಅಂಬರದಿ ಪೂಮಳೆಗರೆಯಲುಸಿರಿಸಹಿತ ಗರುಡಾದ್ರಿಯಲಿ ನಿಂತು ಭಕುತರನುಕರುಣಿಸುವ ಪುರಂದರವಿಠಲ ನಾರಸಿಂಹ 3
--------------
ಪುರಂದರದಾಸರು
ಮಾಧವಜಯಮಾಧವಜಯಯಾದವ ಕುಲಮಣಿ ಭೂದೇವೀಪ್ರಿಯ ಪ.ವಿದ್ಯಾಧರಮುನಿ ಸದ್ಯೋಜಾತ ವಿರಿಂಚಾದ್ಯರ್ಚಿತ ವೇದವೇದ್ಯ ಮುಕುಂದ 1ಸ್ವರ್ಣಗಿರೀಶ ಸುಪರ್ಣಗಮನವಿಶ್ವನಿರ್ಣಯ ಶೀಲ ದಯಾರ್ಣವ ಪೂರ್ಣ 2ಪುಣ್ಯ ಸತ್ಪುರುಷವರೇಣ್ಯದನುಜಜನಾರಣ್ಯಪಾವಕ ದೋಷಶೂನ್ಯಗುಣಾಂಕ3ಕಠಿಣ ದಂಡಕ ದೇಶಾಟಣ ಸುಪ್ಲವಗ ಸಂಘಟಣಾಹಿಫಣ ತಟನಟಣ ಶ್ರೀಮೂರ್ತೆ 4ಕಿಂಕರರಕ್ಷ ನಿಶ್ಯಂಕ ಸದಾದೇವಸಂಕಟಹರ ಪ್ರಸನ್ವೆಂಕಟವರದ 5
--------------
ಪ್ರಸನ್ನವೆಂಕಟದಾಸರು
ಮಾಧವಭವಂತು ತೇ ಮಂಗಳಂಮಧುಮುರಹರತೇ ಮಂಗಳಂಪ.ದಶರಥನಂದನ ತಾಟಕಿಭಂಜನದಾನವ ಸಂಹಾರ ದಯಾನಿಧೇಆದಿದೇವ ಸಕಲಾಗಮ ಪೂಜಿತಯಾದವ ಕುಲಮೋಹನರೂಪಾವೇದೋದ್ಧರ ತಿರುವೇಂಕಟನಾಯಕನಾದಪ್ರಿಯ ನಾರಾಯಣತೇ ನಮೋ ನಮೋ 1ಗೋವಿಂದ ರಾಮಕೃಷ್ಣÀ ನಮೋ ನಮೋಗೋವಿಂದ ಸೀತಾರಾಮ ನಮೋಗೋವಿಂದಮಾಧವಗೋಪಾಲ ಕೇಶವಗೋವಿಂದ ನಾರಸಿಂಹಾಚ್ಯುತ ನಮೋ 2ರಾಮಾಗೋವಿಂದ ರಾಮ ರಾಘವಾರಾಮಾ ರಾಜೀವಲೋಚನಕಾಮಿತ ಫಲದಾಯಕ ಕರಿವರದಾರಾಮಕೃಷ್ಣ ತುಳಸಿವರದಗೋವಿಂದ3
--------------
ತುಳಸೀರಾಮದಾಸರು
ಮಾಯೆಯ ಮಹಾ ಸರೋವರದೊಳಗೆ ಕಡೆಹಾಯ್ವರೊಬ್ಬರನು ಕಾಣೆಪಹರಿತಾ ಮುಳುಗಿದ ಹರ ತಾ ಮುಳುಗಿದಹಂಸವಾಹನನು ಮುಳುಗಿದನುಸುರಪತಿಮುಳುಗಿದಶಿಖಿತಾ ಮುಳುಗಿದಸುರಾಸುರರು ತಾ ಮುಳುಗಿದರು1ಸೂರ್ಯನು ಸುಧಾಂಶುಮುಳುಗಿದ ನವಗ್ರಹರೆಲ್ಲ ಮುಳುಗಿದರುಶೂರನು ಮುಳುಗಿದ ಶುಂಠನು ಮುಳುಗಿದ ಸ-ಚರಾಚರರೆಲ್ಲ ಮುಳುಗಿದರು2ಭಾಗ್ಯನು ಮುಳುಗಿದ ಬಡವನು ಮುಳುಗಿದಬಹುದರಿದ್ರನೂ ಮುಳುಗಿದನುಯೋಗ್ಯರು ಚಿದಾನಂದ ಭಕ್ತರುತಾವು ಕಂಡು ಮಾತ್ರ ಮುಳಗಲಿಲ್ಲ3
--------------
ಚಿದಾನಂದ ಅವಧೂತರು
ಮೋಕ್ಷೋಪಾಯಕಾನಂದ ಮುನೀಂದ್ರನಶಿಕ್ಷಾ ಮಾರ್ಗಹುದಯ್ಯಲಕ್ಷ್ಷ್ಯಶ:ಲಕ್ಷಣವಾರ್ಹೇಳೇನುಲಕ್ಷದಿ ಗುಣವಿಲ್ಲಯ್ಯ ಪ.ಸುಕೃತತಾನಾದರೆ ಚಿರಕಾಲಕೆ ಒಮ್ಮೆಧಿಕೃತವಾಹುದು ಭವತುಷ್ಟಿಸುಖವೆಂಬುದು ಸ್ವರೂಪಾನಂದಾನುಭವವಿಕಸವಾಗುವ ಜ್ಞಾನದೃಷ್ಟಿ ಆಸುಖವಾಪೇಕ್ಷಿಸಿ ಪ್ರಕೃತವುದಾಸಿಪದಖಿಳ ಮಹಾತ್ಮರಭೀಷ್ಟಿಸಕಳಾನಿಷ್ಟವ ಸಾಗಿಸುವ ಶ್ರೀಸುಖತೀರ್ಥರ ಶುಭಗೋಷ್ಟಿ 1ಕಿವಿಯಲಿ ಸತ್ಶಾಸ್ತ್ತ್ರವಕೇಳಿಧ್ಯಾನಮನನವ ಸಾಧಿಪುದೆ ದೇವಸಾರ್ಥಿಕುವಲಯಪ್ರಿಯಕುಲತಿಲಕನು ಮೆಚ್ಚಿಹನವಭಕುತಿಯಪಥಕೀರ್ತಿಅವಿರಳ ಎದೆಗದ್ದಿಗೆಯೊಳು ಮೆರೆವನಸವಿಗುಣ ನಿರ್ಣಯವಾರ್ತಿವಿವರಿಸಿ ವಾರಂವಾರ ವರದ ಮದ್ಧವ ಜಗದ್ಗುರು ವರಮೂರ್ತಿ 2ಈಶ್ವರ ಸಾಕ್ಷಾತ್ಕಾರದ ಭೇದರಹಸ್ಯ ವಿಚಾರವಂತಯೋಗಿನಶ್ವರಾನಶ್ವರವರಿತ ವೈರಾಗ್ಯದಐಶ್ವರ್ಯಾನ್ವಿತಭೋಗಿಶಾಶ್ವತ ಪ್ರತ್ಯಕ್ಷಾದಿ ತ್ರಿಪ್ರಮಾಣಭಾಷ್ಯಕ ಶ್ರೀಪದಯೋಗಿವಿಶ್ವದೊಡೆಯ ಪ್ರಸನ್ವೆಂಕಟಪತಿ ಪದವಿಶ್ವಾಸಿಕ ಮುನಿಯೋಗಿ 3
--------------
ಪ್ರಸನ್ನವೆಂಕಟದಾಸರು
ಯಾತಕೆಲೆ ಮನವೆ ನೀ ಭೀತಿಗೊಳುವೆ ಶ್ರೀನಾಥÀ ಜಗತಾತ ಹೆತ್ತಾತನಿರೆಅನವರತಪಒಡಲೊಳಿರೆ ನವಮಾಸ ಪಡಿಯ ನಡೆಸಿದರಾರುದೃಢಕುಚದಿ ಪಾಲ್ದುಂಬಿ ಕೊಡುವರಾರುನಡೆನುಡಿಗಲಿಸಿ ನಿದ್ರೆವಿಡಿಸಿ ಎಚ್ಚರಿಪರಾರುಕಡೆಮೊದಲಿನೊಡೆಯನಿರಲಡಿಗಡಿಗೆ ಬರಿದೆ 1ಅಪ್ರಸಿದ್ಧಾತ್ಮನಿಗೆ ವಿಪ್ರಕುಲವಿತ್ತರಾರ್ಶ್ರೀಪ್ರಜÕಮತದಿ ನೆಲೆಸಿಪ್ಪರಾರುಅಪ್ರಬುದ್ಧರಿಗೆ ಮತಿಕ್ಷಿಪ್ರ ಬೋಧಿಪನು ಮುಖ್ಯಪ್ರಾಣವರದ ಸುಪ್ರಧಾನನಿರೆ ನಿರುತ 2ಧರೆಗೆ ಮಳೆಗರೆದು ಸಸಿಗಳನು ಬೆಳೆಸಿದರಾರುಗಿರಿವಿಪಿನ ಖಗಮೃಗದ ಹೊರುವರಾರುಪರಮಕಾರಣಿಕನಮ್ಮ ಪ್ರಸನ್ವೆಂಕಟನೆ ಜಗದರಸೆಂದುಶ್ರುತಿಸ್ಮøತಿಯೊಳಿಹುದರಿದು ಮರೆದು3
--------------
ಪ್ರಸನ್ನವೆಂಕಟದಾಸರು
ಯೋಗಧರತಾತಕಘ ಲೋಕಪತಿ ದೇವಸಿರಿ|ಯೋಗ ನಿನ ಪದಕೆ ಶರಣೆಂಬುವೆನೊ ಕಾಯೋ ಪಯೋಗಾಂಡದೊಳ ಹೊರಗೆ ವ್ಯಾಪ್ತನೆ ಗುಣರಹಿತನೆ |ಯೋಗಾಂಬರ ಧರ ಘ-ಮುಖ ಜನಕ ||ಯೋಗಗಾತ್ರಷ ದೂರ ವರ್ಗದ್ವಯ ಅವತಾರ |ಯೋಗ ಪಾಣೀ ಸುತ ಪ್ರಿಯ ಸುಮತಿ ಕೊಡು ಜೀಯ 1ಯೋಗರಾಯಗೆ ಅದೇಪದವಿಕರುಣಿಸಿ ಕೊಟ್ಟೆ |ಯೋಗೇಶಣಾಸ್ತ್ರ ಪಿತದಂತಿವರದ||ಯೋಗದಲಿ ಮನಸು ನಿಶ್ಚೈಸೊ ಹಾ ಕರ್ತೃತ್ವ |ಯೋಗಫಲ ಸ್ವೀಕರಿಸುತಿಹ ಕಂಜನಾಭ 2ಯೋಗನಾಗೆಯೋ ದುರ್ಮತಿಗಳಿಗೆಂದಿಗೂ ನೀನು |ಯೋಗಿಜನ ವಂದ್ಯ ಹಾ ನಾರೀಪತಿ ನಿನ್ನ ||ಯೋಗ ಸೇವಕರೊಳಿಡೋ ಪ್ರಾಣೇಶ ವಿಠ್ಠಲನೇ |ಯೋಗ ಹ್ರಾಸ ವಿವರ್ಜ ಘಟಜ ಕರಪೂಜ್ಯ 3
--------------
ಪ್ರಾಣೇಶದಾಸರು
ಯೋಗವೆಂದರೆ ದಾವುದು ಮಾನಿಸಗೆಯೋಗವೆಂದರೆ ದಾವುದುನಾಗಶಯನನ ನಾಮ ಕೂಗುವುದೆ ಮಹಾಯೋಗ ಪ.ಪೂಸರಳನ ಬಲೆಗೆ ಸಿಲುಕಿ ದೃಢಆಸನಬಲಿದಹಗೆಹಾಸ್ಯವದನೆಯರ ಲೇಶ ಹಾರೈಸದೆದಾಸಾಗಿ ಹರಿಯ ಸದಾಧ್ಯಾಸವೆ ಮಹಾಯೋಗ 1ವಾಗಾದಿಂದ್ರಿಯ ಕಟ್ಟದೆ ಕುಂಭಕವೆಂದುಮೂಗಿನುಸಿರ ಕಟ್ಟಿದಭೋಗಬಯಸದೆ ತಾನಾಗಿ ಬಂದದನುಂಡುಲೋಗರ ಹಣ ಹೆಣ್ಣಿನ ತ್ಯಾಗವೆ ಮಹಾಯೋಗ 2ಭಾವಶುದ್ಧಿಯ ಮಾಡದೆ ಯೋಗ ಮಾರ್ಗದಠಾವ ಸಿದ್ಧವ ಮಾಡಿದದೇವ ಪ್ರಸನ್ವೆಂಕಟವರದನ ಸದ್ಭಾವುಕರ ಪಾದಾಬ್ಜಸೇವೆಯೆ ಮಹಾಯೋಗ 3
--------------
ಪ್ರಸನ್ನವೆಂಕಟದಾಸರು
ರಕ್ಷಿಸಲರಿಯಾ ರಂಗಯ್ಯ ರಕ್ಷಿಸಲರಿಯಾ ಪ.ರಕ್ಷಿಸಲರಿಯೇನೊ ಲಕ್ಷ್ಮೀಪತಿ ಎನ್ನಈಕ್ಷಿಸಿ ಕರುಣಕಟಾಕ್ಷದಿ ಭಕ್ತನ ಅ.ಪ.ಭಾರವಾಗಿಹೆನೇನೊ ರೋಮಕುಳಿಗಳೊಳುಭೂರಿಬ್ರಹ್ಮಾಂಡಗಳನಿಟ್ಟಿಹಗೆಮೀರಿದವನೇನಯ್ಯ ಬೆಲೆ ಪೇಳಿ ಕೈಗಟ್ಟಿಮಾರುವ ಭಟರಲ್ಲಿ ನಾ ಪೇಳುವೆನು 1ಜಿತಮನನಲ್ಲೆಂದು ಹತ ಮಾಡೋದುಚಿತವೆಪ್ರತಿಕ್ಷಣಕೊದಗೊ ತಂದೆ ಜಿಹ್ವೆಗೆಅತಿತನಕಘ ಮುತ್ತೇಳದಿದ್ದರೆ ನಿನ್ನಪತಿತ ಪಾವನನೆಂಬೋರೆ ಚೀರುವರೆ 2ಆಚಾರವಿಹೀನನೆಂದೋಕರಿಸಲಿ ಬೇಡನೀಚೋದ್ಧಾರಕ ಬಿರುದು ನೀ ತಳೆದೆಪ್ರಾಚೀನ ಕರ್ಮದಿಂದಲಿ ನಾ ದಣಿದಮೇಲೆನಾಚಿಕಿನ್ಯಾರಿಗಯ್ಯ ಹೇಜೀಯ3ದೋಷಿ ನಾನೆಂದು ದೂರಿಡದಿರೊ ತವನಾಮಘೋಷಣೆಗುಳಿವುದೇನೊ ಪಾಪೇನೊಹೇಸಿ ದರಿದ್ರನೆಂಬುವರದ್ಯಾರೊ ನಿನ್ನಭಿಲಾಷೆವಿಡಿದ ಬಳಿಕ ಹೇ ಶ್ರೀಶ 4ಡೊಂಕುನಡೆವರ ಕೊಂಕು ತಿದ್ದುವೆ ನೀಸಂಖ್ಯೆಗಾಣೆನೊ ಕೊನೆಗೆ ಕೃಪೆಗೆಲೆಂಕರಲಿ ಮನವಿದ್ದರೆ ಸಾಕು ಪ್ರಸನ್ನವೆಂಕಟ ಸಾರ್ವಭೌಮನಿಷ್ಕಾಮ5
--------------
ಪ್ರಸನ್ನವೆಂಕಟದಾಸರು
ರಕ್ಷಿಸೋ ಲೋಕನಾಯಕನೆ-ನೀ ಎನ್ನ-ರಕ್ಷಿಸೋ ಲೋಕನಾಯಕನೇ ಪಎಷ್ಟೆಷ್ಟು ಜನ್ಮ ಕಳೆದೆನೋ ಇನ್ನೆಷ್ಟೆಷ್ಟು ಜನ್ಮ ಪಡೆವೆನೋ ||ಕಷ್ಟವ ಪಡಲಾರೆ ಕೃಷ್ಣ ಕೃಪೆಯನಿಟ್ಟುಇಷ್ಟವ ಪಾಲಿಸು ಇಭರಾಜವರದನೆ 1ಬಾಲತನದಿ ಬಹು ಬೆಂದೆನೋ ನಾನಾಲೀಲೆಯಿಂದಲಿಕಾಲಕಳೆದೆನೋ ||ಲೋಲಲೋಚನ ಎನ್ನ ಮೊರೆಯ ಕೇಳುತ ಬೇಗಜಾಲವ ಮಾಡದೆ ಪಾಲಿಸೈ ನರಹರಿ 2ಮುದುಕನಾಗಿ ಚಿಂತೆಪಡುವೆನೋ ನಾಕದಡು ದುಃಖವ ಪಡಲಾರೆನೋ ||ಸದರವಲ್ಲವು ಶ್ರೀಪುರಂದರವಿಠಲಮುದದಿಂದ ರಕ್ಷಿಸೊ ಖಗರಾಜಗಮನ 3
--------------
ಪುರಂದರದಾಸರು
ರಂಗ ಕೊಳಲನೂದುವ ಮಂಗಳಸ್ವರಕೆ ಮೂಜ-ಗಂಗಳೂ ಮೋಹಿಸುತಿಹವಲ್ಲೇ ನೋಡೆ ಏ ಸಖಿ ಪಗೋಕುಲದಂಗನೆಯರು ಮೈಮರೆದು ತಮ್ಮ ಮನೆ ಕದ |ಹಾಕದೇ ಹರಿಯೆಲ್ಲಿಹನೆಂದರಸುತ ಬಂದರು ||ಗೋ ಕರುವೇನೆಂದೊಬ್ಬಳು ಹಾಕುವಳೆತ್ತಿಗೆ ದಾಳಿ |ನೂಕು ನೂಕಾಗುತ್ತ ಹಲವಂಗನೆರೋಡಿದರು 1ಕಣ್ಣಿಗೆ ಕುಂಕುಮ ಫಣಿಯಲ್ಲಿ ಕಾಡಿಗೆ ಕೆಲವರು |ಬಣ್ಣದ ಸೀರೆಯ ಮಂಡೆಗೆ ಸುತ್ತುತ್ತ ಕೆಲವರು ||ಚಿನ್ನಗೆ ಹಾಲೆರೆವೆವೆಂದು ಗಂಡರ ಪಿಡಿದು ಒಲ್ಲೆ- |ನೆನ್ನೆ ಕೇಳದಲೆ ನೆಲಕಿಕ್ಕುವರು ಕೆಲವರು 2ಹರಿಯ ನೋಡುವ ಭರದಿಂದ ಆಕಳಿವೇಯೆಂದು |ಹರದೇರು ಅತ್ತೇರಿಗೆ ಕುಟ್ಟಿ ಕಣ್ಣಿಯಿಕ್ಕೊರು ||ಒರಲಿದರೆ ನಾವಾಕಳಲ್ಲವೆಂದು ಕೇಳದಲೆ |ತ್ವರದಿ ಮಾಧವನ ನೋಡಬೇಕೆಂದೋಡಿದರು 3ಕಾಲಿಕೆಕಟ್ಟಾಣಿಆಣಿಮೆಂಟು ಪಿಲ್ಯಾ ಸರ ಮಾಡಿ |ಮಾಲೆಯೆಂದು ಹಾಕುವರು ಕೊರಳಿಗೆ ಕೆಲವರು ||ಹಾಲಿಗೆ ಮೂಗುತಿ ಕಾನ ಬಾವುಲಿ ಮೂಗಿಗೆ ತಮ್ಮ |ಬಾಲೆರೆಂದಾಕಳ ಕರುವೆತ್ತಿಕೊಂಡೋಡುವರು 4ಹೇಳಿದರೆ ಮಾತುಕೇಳಿಕಳ್ಳ ಕೃಷ್ಣಾ ಸಿಕ್ಕೆಂದು ಮೈ |ಘಾಳಿಗೊಂಡಾಳುವರಾ ಕೈ ಕಂಭಕೆ ಕಟ್ಟುವರು ||ಕೀಲ ಕಂಕಣ ಬಾಗಿಲ ಬೀಗವೆಂಜೋಡಿಸಿ ಲಕ್ಷ್ಮೀ |ಲೋಲನಂಘ್ರಿಯ ಕಾಣಬೇಕೆಂದೆಲ್ಲರು ಓಡಿದರು 5ಎಲೆ ಯಶೋದೆಯಮ್ಮ ನಿನ್ನ ಮಗ ಮೊನ್ನೆ ನಿಶಿಯಲ್ಲಿ |ಮಲಗಂಟು ಬಿಚ್ಚಿ ಒಲ್ಲೆನೆನ್ನೆ ಕೇಳಾ ಥರವೆ ||ಬಲು ಶಬ್ದೆನೆಂದು ಕೇಳಲತ್ತೆಗೊಂದು ಪರಿಯಿಂದ |ತಿಳಿಸಿದೆನೆಂದೊಬ್ಬಳು ಅತ್ತೆಯ ಮುಂದೆ ಹೇಳುವಳು 6ಬೀದಿಯೊಳ್ ಹೇಳಿದಂತೆ ನಮ್ಮನಿಗೆ ಬಾಯೆಂದೊಬ್ಬಳು |ಮಾಧವನಿವನೆಂದು ತನ್ನ ಪುರುಷಘೇಳುವಳು ||ಆ ದಿನ ನಾವೇಕತ್ರದಲ್ಲಿರೆಗಂಡಬರಲು ಸ್ತ್ರೀ |-ಯಾದಿ ಸೈ ಸೈಯೆಂದೊಬ್ಬಳು ಪತಿಗೇ ಪೇಳುವಳು7ಬತ್ತಲೆ ಕೆಲವರು ಸೀರ್ಯುಟ್ಟವರ್ಕೆಲವರು ಉ- |ನ್ಮತ್ತರು ಕೆಲವರು ಪಾಡುತ್ತಲಿ ಕೆಲವರು ||ನೆತ್ತಿಹಿಕ್ಕುವರು ಕೆಲವರು ಹೂಸಿಕೊಂಡವರು |ತುತ್ತು ಬಾಯೊಳಿಟ್ಟವರೂ ತ್ವರದಿ ಓಡಿದರು 8ಒಂದಾಡುತೊಂದಾಡುವರುನಿಂದುನಿಂದಾಲಿಸುವರು |ಮಂದಿಗಂಜದಲೆ ಹರಿದು ಹರಿದು ಹೋಗುವರು ||ಕಂದಗಳೆತ್ತಿದವರು ಕರುಗಳೆತ್ತಿದವರು |ಚಂದಿರ ವದನೆಯರು ತವಕದಿ ಓಡುವರು 9ಹೆಂಣುಗಳಾ ಆವಾವ ಕೆಲಸದೊಳಿದ್ದಿರ್ಯಾ ಹ್ಯಾಂಗೆ |ಬನ್ನಿರೆನ್ನ ಬಳಿಗೆಂಬಂತೆವೇಣುಕೇಳಿಸುವುದು ||ಪನ್ನಗಶಯನನಾಜೆÕಯಂತೆ ಪ್ರವರ್ತಿಸಿದ ಮೇಲೆ |ಅನ್ಯಾಯವೇ ಸತಿಯರದು ಕೇಳಿರಿ ಕವಿಗಳು 10ಕರಿಸಿಂಹಗಳು ಹುಲಿತುರುತುರುಗಮಹಿಷಿ|ಮರೆದು ವೈರತ್ವ ಹರಿಸ್ವರ ಕೇಳುತಿಹವು ||ಕರಗುತಿಹವು ಕಲ್ಲು, ಸುರರಾಕಾಶದಿ ಪುಷ್ಪ |ಸುರಿಸುತಿಹರು, ಗಂಧರ್ವರು ಪಾಡುತಿಹರು11ಅಂಬುಜಾಕ್ಷಗೆ ಕೆಲವಂಗನೆರು ಆಲಿಂಗಿಸುವರು |ಚುಂಬಿಸುವರು ಕೆಲವರುನಿಂದುಪ್ರಾರ್ಥಿಸುವರು ||ಶಂಬುಪಾಣಿ ಕರುಣಿಸಿ ಇಬ್ಬರಿಗೊಬ್ಬೊಬ್ಬನಾಗಿ |ಹಂಬಲ ಪೂರೈಸುವಂತೆ ರಾಸಕ್ರೀಡೆಯಾಡಲು 12ಕಾಮನಾ ಪೂರ್ತಿ ಮಾಡುತಿರೆ ಹೆಂಗಳೆರು ಇಂಥ |ಸ್ವಾಮಿಯಮ್ಮ ಕೈ ಸೇರಿದ ನೋಡಿರೆಂದ್ಯೋಚಿಸಲು ||ಭಾಮಿನಿಯರಹಂಕಾರ ತಿಳಿದಾಕ್ಷಣವೊಬ್ಬಳ |ಪ್ರೇಮದಿ ಕೊಂಡೊಯ್ದು ಎಲ್ಲರಿಗೆ ಮಾಯವಾದನು13ಬಹುರೂಪದೊಳೊಮ್ಮಿಂದ ಒಮ್ಮೆ ಬಂದೂ ರೂಪವಿಲ್ಲ |ಮಹೀಪಾಲನೇನಾದನೋ ಆವಳನ ಕೊಂಡೊಯ್ದನು ||ಅಹಿವೇಣಿಯರೇ ನಿಮ್ಮ ನಿಮ್ಮ ಗುಂಪಿನೊಳಗೆ ಎ- |ಷ್ಟಿಹಿರೊ ನಾರೆರು ಎಣಿಸಿರೆ ಯಂದಾಳೊಬ್ಬಳು 14ಒಂದೆರಡು ನೂರಿನ್ನೂರೈನೂರು ಸಾವಿರೆಂದೆಣಿಸಿ |ಮಂದಗಮನೆಯೊಬ್ಬಳಿಲ್ಲವಮ್ಮ ನಮ್ಮೊಳೆಂದರು ||ಇಂದ್ರಜಾಲದವಳೇ ಆವನು ಅಂಥ ವಂಚಕನೆ |ಸಂಧಿಸಿತಿಬ್ಬರಿಗೆ ಮುಂದೇನುಪಾಯವೆಂದರು 15ಹರಿಹೋದಕಷ್ಟೊಂದು ಅವಳ ನಾ ವೈದ ದುಃಖೊಂದು |ಸ್ಮರಣೆದಪ್ಪಿ ಗಂಡರೊಡನೆ ಆಡಿದ್ದೊಂದು ||ಸ್ಮರನ ಬಾಣ ಬಾಧೆಯೊಂದು ಬೆರದಿತಿನಿತುಕ್ಲೇಶ|ಹರದೆರಚ್ಯುತನರಸುತವನಹೊಕ್ಕರು 16ಹರಿಒಬ್ಬಳ ಒಯ್ದನು ಕಂಡಿರಾ ಯಿದ್ದಿರ್ಯಾ ಎಂದು |ನರರೆಂಬೊ ಭ್ರಾಂತಿಯಿಂದ ಮರನ ಕೇಳುವರು ||ಸ್ಮರಣೆ ಬಂದಾಗ ವಮ್ಮೆ ಗಿಡ ಕೇಳುತಿಹವೆಲ್ಲೆ |ಹರಿಹರಿ! ಜೀವಿಸುವದೆಂತು ಹೇಳಿರೆಂಬೊರು 17ಅತ್ತ ಎಲ್ಲರ ವಂಚಿಸಿ ಯನ್ನ ರೂಪಾಧಿಕ ನೋಡಿ |ಎತ್ತಿಕೊಂಡು ಬಂದ ರಂಗನೆಂಬೊಳಾಕಿ ಮುದದಿ ||ಸತ್ಯ ಸಂಕಲ್ಪವಳ ಮನತಿಳಿದು ತಿಳಿಯದಂತೆ |ತೊತ್ತಿಗ ನಂದದಿ ಹೆಗಲೊಳಗಿಟ್ಟು ಪೋಗಲು 18ದಣಿದೆ ಹಸಿದೆ ನೀರಡಸಿದೆನೆಂದರವಳ |ಅಣುಗನಂದದಿಂದಿಳಿಸೇರಿಸಿ ಕೊಂಬುವನು ||ಗೊನೆ ಹಣ್ಣು ನಿಲಕದೆಂದರೆ ನೀಡಿ ಕೊಡುತಲಿ |ಘನಸುಖ ಬಡಿಸುತ ದಕ್ಕಿದಂತಿರುವನು 19ಸಾವಿರ ಪ್ರಕಾರಾ ಘೋರಿಸಿದರೂ ನಗುತಲೆ ಇಹ |ಕೇವಲ ದಕ್ಕಿದನೆಂದು ನಿಶ್ಚಯ ತಿಳಿದಳು ||ಮಾವಿರಿಂಚೇಶ ಜಂಭಾರಿಗಳನು ವಂಚಿಸುವಂಥ |ದೇವನು ಈ ನಾರಿ ಅಹಂಕಾರವ ತಾಳುವನೆ20ಸೊಕ್ಕು ಬಂತಿವಳಿಗಿನ್ನು ಶೀಘ್ರ ತಗ್ಗಿಸಬೇಕೆಂದು |ಚೊಕ್ಕ ಮಾವು ಪಿಡಿಸಿ ಅಪ್ರತ್ಯಕ್ಷವಾಗಲಿತ್ತಲು ||ತುಕ್ಕಿ ತುಕ್ಕ್ಯಾರಂಣ್ಯಾ ಹೆಜ್ಜೆ ಪಿಡಿದಿಲ್ಲಿಹ ಅಲ್ಲಿಹ |ರಕ್ಕಸಾರೆನುತ ಬಂದೆಲ್ಲರವಳನು ಕಂಡರು 21ಜಾರೆ ಚೋರೆ ಕುಲ್ಲೆ ಖೂಳೆ ಕುಲಕಂಟಿಕೆನವನೀತ|ಚೋರನೆಲ್ಲಡಗಿಸಿದ್ದೆ ತೋರೆಲೆ ತೋರೆಂದರು ||ಘೋರಪಾತಕಿಯ ಕುಟ್ಟಿರೆಂದು ಕೆನ್ನಿ ಕುಟ್ಟುವರು |ಗಾರುಮಾಡಿದರೆ ಬಟ್ಟಬವಣೆಹೇಳಿದಳು22ಸಮದುಃಖಿಗಳಾಗಿಹರಿಹರಿಯೆಂದೊದರಲು ಈ |ಶ್ರಮ ನೋಡಿ ಪ್ರಾಣೇಶ ವಿಠಲ ಬಂದಾಲಿಂಗಿಸಿ ||ಸುಮನಗಂಧಿಯರೆ ನಿಮ್ಮಹಂಕಾರ ಬಿಡಿರೆಂದು |ಅಮರೇಶಮುಂಚಿನಂತೆಲ್ಲರೊಳಾಡಿದನು 23
--------------
ಪ್ರಾಣೇಶದಾಸರು
ರಂಗನೊಲಿದ ನಮ್ಮ ಕೃಷ್ಣನೊಲಿದ |ಅಂಗನೆ ದ್ರೌಪದಿಗೆ ಅಕ್ಷಯವಸ್ತ್ರವನಿತ್ತುಪಕರಿಯಪುರದ ನಗರದಲ್ಲಿ ಕೌರವರು ಪಾಂಡವರು |ಧರೆಯನೊಡ್ಡಿ ಲೆತ್ತವಿಡಿದು ಜೂಜನಾಡಲು ||ಪರಮಪಾಪಿ ಶಕುನಿ ತಾನು ಪಾಸಿನೊಳಗೆ ಪೊಕ್ಕಿರಲು |ಧರುಮರಾಯ ಧಾರಿಣಿ - ದ್ರೌಪದಿಯ ಸೋತನು 1ಮುದ್ದುಮೊಗದ ದ್ರೌಪದಿಯ ಮುಂದೆಮಾಡಿ ತನ್ನಿರೆಂದು |ತಿದ್ದಿ ತನ್ನ ಮನ್ನೆಯರಿಗೆ ತಿಳಿಯಹೇಳಿದ ||ಮುದ್ರೆಮನ್ನೆಯರು ಬಂದು ದ್ರೌಪದಿಯ ಮುಂದೆ ನಿಂತು |ಬುದ್ಧಿಯಿಂದಲೆಲ್ಲವನು ಬಿನ್ನಹಮಾಡಲು 2ಅಮ್ಮ ಕೇಳೆ ಅರಸುಗಳು ಅಚ್ಚ ಪಗಡೆ ಪಂಥವಾಡಿ |ಹೆಮ್ಮೆಯಿಂದ ಜೂಜಿಗಿಟ್ಟು ಲೆತ್ತವಾಡಲು ||ಧರ್ಮರಾಯ ಸೋತನೆಂದು ಸತ್ಯವಚನಿ ಕೌರವಂಗೆ |ನಿಮ್ಮ ನಿಜದಿ ಸೇರಿ ಆಗ ಕೊಟ್ಟರೆಂದರು 3ಪಟ್ಟಪದವಿ ಅವರಿಗಾಗಿ ಬಡವರಾಗಿ ಇರುವೆವೆಂದರೆ |ಕಿಟ್ಟ ಪಗಡೆ ಪಂಥ ಜೂಜಿದೆಲ್ಲಿ ಒದಗಿತು ? ||ದುಷ್ಟ ಕೌರವನು ಎನ್ನ ಲಜ್ಜೆ - ನಾಚಿಕೆಯ ಕೊಂಡು |ಭ್ರಷ್ಟ ಮಾಡುವನು ಎಂದು ಬಳಲಿ ದ್ರೌಪದಿ 4ಬಾಗಿ ಬಳುಕಿ ಬೆದರಿ ಬಿಕ್ಕಿ ಕಣ್ಣ ನೀರನುದುರಿಸುತಲಿ |ಮಾಗಿಯ ಕೋಗಿಲೆಯಂತೆಕಾಯ ಒಲೆಯುತ ||ಆಗ ಕೃಷ್ಣನಂಘ್ರಿಗಳನು ಅಂತರಂಗದಲಿ ನೆನೆದು |ಸಾಗಿಸಾಗಿ ಹೆಜ್ಜೆ ಇಡುತ ಸಭೆಗೆ ಬಂದಳು 5ವೀರಕರ್ಣ ಅಶ್ವತ್ಥಾಮ ವಿದುರ ಶಲ್ಯ ಭಗದತ್ತರು |ಕ್ರೂರ ಕೌರವ ದುಃಶಾಸನ ಗುರುಹಿರಿಯರು ||ಸಾರುತಿಪ್ಪ ಭಟರು ಪರಿವಾರ ರಾವುತರ ಕಂಡು |ಧಾರಿಣಿಗೆ ಮುಖವ ಮಾಡಿ ನಾಚಿನಿಂತಳು 6ಚೆಂದದಿಂದ ದುರ್ಯೋಧನ ಚದುರಿ ದ್ರೌಪದಿಯ ಕಂಡು |ಮುಂದರಿಯದೆ ಮುಗುಳುನಗೆಯ ಮಾತನಾಡಿದ ||ಅಂದು ಸ್ವಯಂವರದಲ್ಲಿ ಐವರಿಗೆ ಆದ ಬಾಲೆ |ಇಂದು ಎನ್ನ ಪಟ್ಟದರಸಿಗೊಪ್ಪಿದೆಯೆಂದನು7ಮಲ್ಲಿಗೆಯನು ಮುಡಿಯೆ ನಾರಿ ಮುದ್ದುಮೊಗದ ಒಯ್ಯಾರಿಚೆಲ್ಲೆಗಂಗಳ ದ್ರೌಪದಿಯೇ ಬಾರೆ ಎಂದನು ||ಬಿಲ್ಲು ಎತ್ತಲಾರದವನೆ ಬಂಡಣ ಕಾದದಿದ್ದವನೇ |ಹಲ್ಲುಕೀಳುವರೈವರು ಬೇಡವೆಂದಳು 8ಬಟ್ಟೆಬಡಕರೈವರಿಗೆ ಮಿತ್ರೆಯಾಗುವುದು ಸಲ್ಲ |ಪಟ್ಟಿಮಂಚಕೊಪ್ಪುವಂತ ಬಾರೆ ಎಂದನು ||ಕೆಟ್ಟಮಾತನಾಡದಿರೊ ಕ್ರೋಧದಿಂದ ನೋಡದಿರೊ |ರಟ್ಟೆಕೀಳುವರೈವರು ಬೇಡವೆಂದಳು 9ಅಡವಿತಿರುಕರೈವರಿಗೆ ಮಡದಿಯಾಗುವುದು ಸಲ್ಲ |ತೊಡೆಯ ಮೇಲೆ ಒಪ್ಪುವಂತೆ ಬಾರೆ ಎಂದನು ||ಬೆಡಗುಮಾತನಾಡದಿರೊ ಭೀಮಸೇನನ ಗದೆಯು ನಿನ್ನ |ತೊಡೆಯ ಮೇಲೆ ಒಪ್ಪುವದು ಬೇಡವೆಂದಳು 10ಅಚ್ಚ ಪೊಂಬಣ್ಣದ ಬೊಂಬೆ ಆನೆಯಂತೆ ನಡೆವ ರಂಭೆ |ಅಚ್ಚ ಮುತ್ತಿನಂತೆ ಬಿಂಬೆ ಬಾರೆ ಎಂದನು ||ಹೆಚ್ಚು - ಕುಂದನಾಡದಿರೊ ಪರರ ಹೆಣ್ಣ ನೋಡಿದಿರೊ |ಚುಚ್ಚಿ ಹಾಕುವರೈವರು ಬೇಡವೆಂದಳು 11ಎಷ್ಟುಬಿಂಕ - ಬಡಿವಾರವು ಹೆಣ್ಣ ಬಾಲೆಗಿವಳಿಗೆಂದು |ಸಿಟ್ಟಿನಿಂದ ದುರ್ಯೋಧನ ಸಾರಿ ಕೋಪಿಸಿ ||ಉಟ್ಟ ಸೀರೆ ಸೆಳೆಯಿರಿವಳಉಬ್ಬು ಕೊಬ್ಬು ತಗ್ಗಲೆಂದು |ದೃಷ್ಟಿಯಿಂದ ದುಃಶಾಸಗೆ ಸನ್ನೆ ಮಾಡಿದ 12ದುರುಳ ದುಃಶಾಸನ ಬಂದು ದ್ರೌಪದಿಯ ಮುಂದೆ ನಿಂತು |ಕರವ ಪಿಡಿದು ಸೆರಗಹಿಡಿದು ನಿರಿಯ ಸೆಳೆಯಲು ||ಮರುಳು ಆಗದಿರೋ ನಿನ್ನ ರಕ್ತದೊಳಗೆ ಮುಡಿಯನದ್ದಿ |ಕರುಳ ದಂಡೆಯನ್ನೆ ಮಾಡಿ ಮುಡಿವೆನೆಂದಳು 13ಗುಲ್ಲುಗಂಟಿ ಹೆಣ್ಣೆ ನಿನ್ನ ಕಾಡಿ ಬಳಲಿಸುವೆನು ಎಂದು |ಗಲ್ಲದಲ್ಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ನಿಲ್ಲೊ ನಿಲ್ಲೊ ಪಾಪಿ ನಿನ್ನ ನಾಲಗೆ ಎರಡಾಗಿ ಸೀಳಿ |ಪಲ್ಲಿನಲ್ಲಿ ಕೇಶ ಹಿಕ್ಕಿಕೊಂಬೆನೆಂದಳು 14ಬೆನ್ನಿನಲಿ ಪೆಟ್ಟನಿಕ್ಕಿ ಭಂಡುಮಾಡುವೆನು ಎಂದು |ಕೆನ್ನೆಯಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ರನ್ನೆ ವೀರಬೊಬ್ಬೆಯಿಕ್ಕಿ ರಭಸದಿಂದ ಸಾರುತಲಿ |ಪನ್ನಗಶಯನ ಕೃಷ್ಣ ಕೃಷ್ಣ ಕಾಯೊ ಎಂದಳು 15ಮಚ್ಚ ಕೂರ್ಮವರಹ ಕಾಯೊ, ಮುದ್ದು ನಾರಸಿಂಹ ಕಾಯೊ |ಹೆಚ್ಚಿನ ವಾಮನನೆ ಕಾಯೊಭಾರ್ಗವ ಕಾಯೊ ||ಅಚ್ಯುತ ರಾಮಕೃಷ್ಣ ಕಾಯೊ ಬೌದ್ಧ ಕಲ್ಕಿರೂಪ ಕಾಯೊ |ಸಚ್ಚಿದಾನಂದ ಸ್ವಾಮಿ ಕಾಯೊ ಎಂದಳು16ಸಜ್ಜನರ ಪ್ರಿಯನೆ ಕಾಯೊ ಸಾಧುರಕ್ಷಕನೆ ಕಾಯೊ |ನಿರ್ಜರವಂದಿತನೆ ಕಾಯೊ ನರಹರಿ ಕಾಯೊ |ಅರ್ಜುನನ ಸಖನೆ ಕಾಯೊ ಆನತಪಾಲಕನೆ ಕಾಯೊ |ಲಜ್ಜೆ - ನಾಚಿಕೆಯ ಕಾಯೊ ಸ್ವಾಮಿ ಎಂದಳು 17ಸಿಂಧು ಸಾಗರದ ಶಯನ ದ್ರೌಪದಿಯ ಮೊರೆಯಕೇಳಿ |ಅಂದು ಉಟ್ಟ ವಸ್ತ್ರಗಳುಅಕ್ಷಯ ವೆಂದನು||ಒಂದು ಎರಡು ಮೂರು ನಾಲ್ಕು ಕೋಟ್ಯಸಂಖ್ಯ ಸೀರೆಗಳು |ನೊಂದು ಬೆಂದು ದುಃಶಾಸನು ನಾಚಿಕುಳಿತನು 18ನೋಡಿದರು ದ್ರೌಪದಿಯ ಮಾನರಕ್ಷ ಲೀಲೆಗಳನು |ಮಾಡಿದರು ಮಾಧವನ ಮುದ್ದು ಸ್ತೋತ್ರವ ||ಮೂಢ ಕೌರವನ ಕೂಡಮಾನಿನಿ ದ್ರೌಪದಿಯು ಪಂಥ - |ವಾಡಿ ತನ್ನ ಪತಿಗಳೈವರನ್ನು ಗೆಲಿದಳು19ಕೇಶಮುಡಿಗಳನ್ನಕಟ್ಟಿ ಕ್ಯೆಯಕಾಲಮಣ್ಣನೊರಸಿ |ಸಾಸಿರನಾಮದ ಕೃಷ್ಣನು ಸುರರ ಪಾಲಿಪ |ವಾಸಿಯುಳ್ಳ ಕೃಷ್ಣ ಎನ್ನ ವಹಿಸಿ ಮಾನಕಾಯ್ದನೆಂದು | ಸಂತೋಷದಿಂದ ದ್ರೌಪದಿಯು ಮನೆಗೆ ಬಂದಳು 20ಇಂತು ಆ ದ್ರೌಪದಿಯ ಮಾನರಕ್ಷ ಲೀಲೆಗಳನು |ಸಂತತದಲಿ ಹಾಕಿಕೇಳಿ ನಲಿವ ಜನರಿಗೆ |ಸಂತಾನ ಸೌಭಾಗ್ಯ ಸಕಲಭೀಷ್ಟೆಗಳನು ಕೊಡುವ |ಕಂತು ಜನಕ ನಮ್ಮ ಪುರಂದರವಿಠಲನು21
--------------
ಪುರಂದರದಾಸರು
ರಂಗಾ ಬಾರೋ ಪಾಂಡುರಂಗ ಬಾರೋ ಶ್ರೀರಂಗಾ ಬಾರೋ ನರಸಿಂಗ ಬಾರೋ ಪಕಂದ ಬಾರೋ ಎನ್ನ ತಂದೆ ಬಾರೋಇಂದಿರಾ ರಮಣ ಮುಕುಂದ ಬಾರೋ 1ಅಪ್ಪ ಬಾರೋತಿಮ್ಮಪ್ಪಬಾರೋ ಕಂದರ್ಪನೈಯನೇ ಕಂಚಿವರದ ಬಾರೋ 2ವಿಷ್ಟು ಬಾರೋಉಡುಪಿಕೃಷ್ಣ ಬಾರೋ ಎನ್ನಿಷ್ಟ ಮೂರುತಿಪುರಂದರವಿಠಲ ಬಾರೋ3
--------------
ಪುರಂದರದಾಸರು