ಒಟ್ಟು 3169 ಕಡೆಗಳಲ್ಲಿ , 122 ದಾಸರು , 1709 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿನಾಮದರಗಿಣಿಯು ಹಾರುತಿದೆ ಜಗದಿ|ಪರಮಭಾಗವತರು ಬಲೆಯ ಬೀಸುವರು ಪಕೋಪವೆಂಬ ಮಾರ್ಜಾಲವು ಕಂಡರೆ ನುಂಗುವುದು |ತಾಪವೆಂಬ ಹುಲಿಯು ಕೊಂಡೊಯ್ವುದದನು ||ಕಾಪಾಡಿರದನು ಹೃದಯದೊಳಗಿಂಬಿಟ್ಟು |ಅಪತ್ತಿಗೊದಗುವುದು ಈ ಮುದ್ದು ಗಿಣಿಯು 1ದಾರಿಯ ನಡೆವಾಗ ಚೋರರ ಭಯವಿಲ್ಲ |ಮಾರಿಬಂದರದನು ಹೊಡೆದು ನೂಕುವುದು ||ಕ್ರೂರ ಯಮಭಟರನು ಮೂಗು ರೆಕ್ಕೆಯಲಿ ಬಡಿದು |ದಾರಿ ತೋರುವುದು ಮುರಾರಿಯ ಪಟ್ಟಣಕೆ 2ಎಷ್ಟೆಂದು ವರ್ಣಿಸಲಿ ಈ ಮುದ್ದು ಅರಗಿಣಿಯು |ಹೊಟ್ಟೆಯೊಳೀರೇಳು ಜಗವನಿಂಬಿಟ್ಟ ||ಸೃಷ್ಟೀಶ ಪುರಂದರವಿಠಲನ ನೆನೆ ನೆನೆದು |ಮುಟ್ಟಿ ಭಜಿಸುವುದು ಈ ಮುದ್ದು ಗಿಣಿಯು 3ಹರಿಯೆ................................................ ಪಹರಿನಿನ್ನ ಕೃಪೆಯೆನಗೆ ಚಂದ್ರ - ತಾರಾಬಲವು |ಹರಿನಿನ್ನ ಕರುಣವೇ ರವಿಯ ಬಲವು ||ಹರಿನಿನ್ನೊಲುಮೆಯೆನಗೆ ಗುರುಬಲವು ಭೃಗುಬಲವು |ಹರಿನಿನ್ನ ಮೋಹವೇ ಶನಿಯ ಬಲವು 1ಮಂಗಳಾತ್ಮಕ ನಿನ್ನ ಅಂಗದರುಶನವೆನಗೆ |ಮಂಗಳನ ಬಲವು ಎನ್ನಂಗಕೀಗ ||ರಂಗಯ್ಯ ನಿನ್ನ ಚರಣಾರವಿಂದವ ನೋಡೆ |ಹಿಂಗಿ ಪೋಪುದು ಅಘವು ಸೌಮ್ಯಬಲವು 2ಆದಿಪುರುಷನೆ ನಿನ್ನ ಅರಿಪುದೇ ಕೇತುಬಲ |ಅದಿಮೂಲನೆ ನಿನ್ನಗುಣಕಥನವ ||ಆದರಿಸಿ ಕೊಂಡಾಡುವುದೆ ಎನಗೆ ರಾಹುಬಲ |ಆದಿಮೂರುತಿ ಬ್ರಹ್ಮಪುರಂದರವಿಠಲ 3
--------------
ಪುರಂದರದಾಸರು
ಹರಿಭಕುತಿಯುಳ್ಳವರ ಶರೀರವೆ ಕುರುಕ್ಷೇತ್ರ - ಇವರು |ನರರೆಂದು ಬಗೆವವರೆ ನರವಾಸಿಗಳು ಪ.ಸದಮಲನ ಧ್ಯಾನಿಸುವ ಹೃದಯ ಕಾಶೀಪುರವು |ಮಧುವೈರಿಗೊಲಿದ ಮನ ಮಣಿಕರ್ಣಿಕೆ ||ಪದುಮನಾಭನ ಪಾಡಿ ಪೊಗಳುವಾತನ ದಿವ್ಯ |ವದನವು ಅಯೋಧ್ಯೆ ಪುರವಾಗಿ ಇಹುದು 1ನರಹರಿಯ ನೀಕ್ಷಿಸುವ ನಯನ ದ್ವಾರಾವತಿಯು |ಹರಿಯ ನಿರ್ಮಾಲ್ಯ ವಾಸಿಪ ಮೂಗು ಮಥುರೆ ||ಕರುಣಾಕರನ ಕಥೆಯ ಕೇಳ್ವ ಕಿವಿ ಕೇದಾರ |ಸಿರಿಧರೆಗೆ ಎರಗುವಾ ಶಿರವೆ ಬದರಿ 2ಚಕ್ರಧರಗೆ ಪೋಪಚರಣ ಮಾಯಾವತಿ ತ್ರಿ - |ವಿಕ್ರಮನ ಪೂಜಿಸುವ ಕರಿವೆ ಕಂಚಿ ||ಅಕ್ರೂರಗೊಲಿದಸಿರಿ ಪುರಂದರವಿಠಲನಸತ್ಕøಪೆಯು ಉಳ್ಳವರ ಅಂಗಸಾಯುಜ್ಯವು 3
--------------
ಪುರಂದರದಾಸರು
ಹರಿಮಂದಿರಹರಿಮಂದಿರ ಈ ಸ್ಥಳವುಹರುಷದಿ ಚಿಂತಿಪರಿಗೆ ಪಹರಿಹರ ಬ್ರಹ್ಮಾದಿಗಳು ಪೊಗಳುತಿರೆಸುರಮುನಿ ನಾರದ ಋಷಿಗಳು ಸ್ತುತಿಸಲುಸುರರುಪುಷ್ಪ ವೃಷ್ಟಿಯ ಕರೆಯಲು ಅ-ಪÀ್ಸರಸ್ತ್ರೀಯರುನರ್ತನ ಮಾಡುವ ಸ್ಥಳಅ.ಪಸಿರಿನಾರಾಯಣ ಶೇಷಶಯನದಲಿಶಯನಿಸಿ ನಿದ್ರಿಸುತಿರೆಸಿರಿಭೂದುರ್ಗಾಂಬ್ರಣಿಯರು ಸೇವಿಸಲುನಾಭಿ ಕಮಲದಲಿಸರಸಿಜೋದ್ಭವ ಸ್ತುತಿಸುತ ಧ್ಯಾನಿಸಲುಕರಜೋಡಿಸಿ ಸುಜನರು ನಮೋ ನಮೋ ಎನೆಭರದಿ ಜಾಗಟೆಭೇರಿತಾಳ ತುತ್ತೂರಿಯುಕರದಿ ಶಂಖು ಗಂಟೆ ನಾದ ಮೊಳಗೆಹರಿಭಜನೆ ಮಾಡುತ ತದ್ಧಿಮಿಕೆನ್ನುವ ಸ್ಥಳ 1ಹರಿವೈಕುಂಠದಿ ಸಿರಿಯೊಡಗೂಡಿರಲುಭೃಗುಮುನಿ ತಾಡನದಿಸಿರಿದೇವಿ ಕೋಪಿಸಿ ಹರಿಯನು ಬಿಡಲುಸಿರಿಇಲ್ಲದೆ ಒಬ್ಬನೆ ಇರಲಾಗದೆ ವೆಂಕಟಗಿರಿಗಿಳಿತರಲುಸರಸಿಜಾಕ್ಷ ಕರಿಬೇಟೆಯ ನಾಡುತಬರುತ ಪದ್ಮಾವತಿಯನು ಮೋಹಿಸಿಕೊರವಿರೂಪತಾಳುತ ಕಣಿ ಹೇಳಲುಭರದಿ ಕಲ್ಯಾಣವು ನಡಸಿದ ಸ್ಥಳವಿದು 2ಸುರರುಅಸುರರು ಶರಧಿಯ ಮಥಿಸಿರಲುಅಮೃತವನೆ ಕಂಡುಹಿರಿ ಹಿರಿ ಹಿಗ್ಗುತ ನುಗ್ಗೆ ದಾನವರುಶ್ರೀಹರಿತಿಳಿದು ತ್ವರದಿಂದ ಮೋಹಿನಿರೂಪ ತಾಳಿಬಿರಿಬಿರಿ ನೋಡುತಲಿರೆ ದಾನವರುಸುರರಿಗೆ ಅಮೃತವನುಣಿಸುತ ಮೋಹಿನಿಪರವಶದಲಿ ಮೈ ಮರತಿರೆ ಅಸುರರುಸುರರಿಗೆ ಅಭಯವ ನೀಡಿದ ಸ್ಥಳವಿದು 3ವಿಶ್ವಾಸದಿ ತಪಗೈದ ಸುರನ ನೋಡಿಮಹದೇವರು ಒಲಿದುಭಸ್ಮಾಸುರ ಬೇಡಿದ ವರಗಳ ಕೊಡಲುನಿಜ ನೋಡುವೆನೆಂದು ಭಸ್ಮಾಸುರ ಬೆನ್ನಟ್ಟುತ ಬರುತಿರಲುವಿಶ್ವವ್ಯಾಪಕಹರಿತಾ ತಿಳಿದುತಕ್ಷಣ ಸ್ತ್ರೀ ರೂಪವ ಧರಿಸುತ ಬರೆಭಸ್ಮಾಸುರ ತನ್ಹಸ್ತದಿ ಮೃತಿಸಲುಭಕ್ತರನುದ್ಧರಿಸಿದ ಈ ಸ್ಥಳವು 4ಲೋಕ ಲೋಕದ ಜನರೆಲ್ಲರು ಕೂಡಿಪ್ರಜಾ ಕಂಟಕನಾದಮೂಕಾಸುರನನು ಗೆಲ್ಲಲು ಸಾಗದಲೆಶ್ರೀಕಾಂತನ ಪ್ರಾರ್ಥಿಸೆಮೂಕಾಂಬಿಕೆ ನಾಮದಿಂದಲಿ ಪ್ರಜ್ವಲಿಸಿಮೂಕಾಸುರನನು ವಧಿಸಿದ ಶ್ರೀ ಕೋಲಾ-ಪುರದಲಿ ವಾಸಿಸುತಲಿ ಸಂತತಶ್ರೀಕರ ಕಮಲನಾಭ ವಿಠ್ಠಲಏಕಾಂತದಿ ಭಕ್ತರ ಸಲಹಿದ ಸ್ಥಳವಿದು 5
--------------
ನಿಡಗುರುಕಿ ಜೀವೂಬಾಯಿ
ಹರಿಯಲ್ಲಿ ಧನ್ಯರು ಪೊರೆಯರು ಸತ್ಯಸ್ಥಿರವೀ ಮಾತಿಗೆ ಸದ್ಭಕ್ತರು ಸಾಕ್ಷಿಯಿಹರು ಪಪುಣ್ಯಾತ್ಮ ಪ್ರಿಯ ವೃತ ಸಾಕ್ಷಿ ಜಗನ್ಮಾನ್ಯ ನಾರದ ದೇವ ಋಷಿ ಶ್ರೇಷ್ಠ ಸಾಕ್ಷಿಧನ್ಯ ಧೃವರಾಯನು ಸಾಕ್ಷಿ ಹರಿಯಪೂರ್ಣ ವ್ಯಾಪ್ತಿಯ ತೋರ್ದ ಪ್ರಲ್ಹಾದ ಸಾಕ್ಷಿ 1ದೊರೆ ಅಂಬರೀಷನು ಸಾಕ್ಷಿಹರಿಗುರುಭಕ್ತಿ ನಾಮಕೆ ದ್ರೌಪದಿ ಸಾಕ್ಷಿಸ್ಥಿರ ವಿಭೀಷಣ ರಾಜ ಸಾಕ್ಷಿ ತನ್ನಮರಣ ಕಾಲದಿ ನೆನೆದ ಅಜಮಿಳ ಸಾಕ್ಷಿ 2ದೊರೆ ಧರ್ಮ ದೇವರು ಸಾಕ್ಷಿ ಜಗದ್ಗುರುವಾದ ಮಹ ರುದ್ರದೇವರು ಸಾಕ್ಷಿಗರಳಕಾಳಿಂಗನು ಸಾಕ್ಷಿ ಪ್ರಾಣಾತುರದಿಹರಿಯ ಕರೆದ ಗಜರಾಜ ಸಾಕ್ಷಿ 3ಶಿಲೆಯಾದ ಅಹಲ್ಯೆಯ ಸಾಕ್ಷಿ ಗರ್ವವರ್ತಿಸಿದ ನಹುಷನೃಗರು ಸಾಕ್ಷಿಚೆಲುವೆ ಗಂಡಿಕಾ ವೇಶ್ಯ ಸಾಕ್ಷಿ ಭಕ್ತಿಗೊಲಿದುನಲಿದಜ್ಞಾನಿವಿದುರನು ಸಾಕ್ಷಿ 4ಮೊರೆ ಹೊಕ್ಕ ಸುಗ್ರೀವ ಸಾಕ್ಷಿ ಬಾಲ್ಯಪರಮಮಿತ್ರನಾದ ಕುಚೇಲ ಸಾಕ್ಷಿಶರಬಿಟ್ಟ ಭೃಗುವಾದ ಸಾಕ್ಷಿ ಶ್ರೇಷ್ಠಹರಿದಿನ ವೃತದ ರುಗ್ಮಾಂಗ ಸಾಕ್ಷಿ 5ಪುಂಡಲೀಕ ಋಷಿಸಾಕ್ಷಿ ಆ ಮೃಕಂಡಮುನಿಜ ಮಾರ್ಕಾಂಡೇಯ ಸಾಕ್ಷಿಪಂಡಿತಸಾಂದೀಪ ಸಾಕ್ಷಿ ಕುರುಪಾಂಡವರ ಪಿತಾಮಹ ಭೀಷ್ಮನು ಸಾಕ್ಷಿ 6ಪಿರಿದು ಕಷ್ಟದ ನಳ ಸಾಕ್ಷಿ ಕೃಷ್ಣಕರುಣಿಕೆ ಪಾತ್ರಪರೀಕ್ಷಿತಸಾಕ್ಷಿನಳಕೂಬರು ಸಾಕ್ಷಿ ಸತ್ಯದ್ಹರಿಶ್ಚಂದ್ರಾದಿ ಪುಣ್ಯ ಶ್ಲೋಕರು ಸಾಕ್ಷಿ 7ನಿದ್ದೆಯ ಮುಚುಕುಂದ ಸಾಕ್ಷಿ ಆತ್ಮಬದ್ಧಭಕ್ತಿಯಲರ್ಪಿಸಿದಬಲಿಸಾಕ್ಷಿಶುದ್ಧಜ್ಞಾನಿಶುಕಸಾಕ್ಷಿ ಹರಿಯಸದ್ಯದಣನಾದ ಬಲಭದ್ರ ಸಾಕ್ಷಿ 8ಅರ್ಕಾದಿ ಋಷಿಗಳು ಸಾಕ್ಷಿ ವಿಶ್ವಾಮಿತ್ರದಕ್ಷ ಪ್ರಜೇಶ್ವರೆಲ್ಲ ಸಾಕ್ಷಿಮಿತ್ರೆ ಕುಬ್ಜಾ ತ್ರಿಜಟಿ ಸಾಕ್ಷಿ ಮಹಾಮೈತ್ರೇಯ ಪರಾಶರ ಮುನಿಶರು ಸಾಕ್ಷಿ 9ಇಂದ್ರಾದಿದಿವಿಜರುಸಾಕ್ಷಿ ಕೃಷ್ಣನ್ಹೊಂದಿ ಸೇವಿಸಿದುದ್ಧವಕ್ರೂರ ಸಾಕ್ಷಿಸುಂದರ ಗೋಪಿಯರು ಸಾಕ್ಷಿ ಪಾಪಸಂದೋಹದ್ಯುದೃತ ವಾಲ್ಮೀಕಿ ಸಾಕ್ಷಿ 10ಸರ್ವಮುಕ್ತಜೀವರು ಸಾಕ್ಷಿಯಾ ದೇವರು ವಸುದೇವ ದೇವಕಿಯರು ಸಾಕ್ಷಿಹರಿದಾಸರೆಲ್ಲರು ಸಾಕ್ಷಿ ಫಲಸಿರಿವಿಠಲಗೆ ಕೊಟ್ಟ ಶಬರಿಯ ಸಾಕ್ಷಿ 11
--------------
ಸಿರಿವಿಠಲರು
ಹರಿಯೆನ್ನಿ ಹರಿಯೆನ್ನಿ ಹರಿಯೆನ್ನಿರೈಹರಿಯೆಂದವರಿಗೆಲ್ಲಿದುರಿತದಂದುಗವುಪ.ಹರಿಯೆಂದಜಾಮಿಳಗೆ ನರಕ ತಪ್ಪಿತಾಗಲೆಹರಿಯೆಂದ ಕರಿಗೆ ಕೈವಲ್ಯಾಯಿತುಹರಿಯೆಂದ ತರಳಗೆಉರಗಹಾರಾದವುಹರಿಯೆಂದವಅಕ್ಷಯಸಿರಿಪಡೆದ1ಹರಿಸೇವೆಯನೆ ಮಾಡಿ ವಿರಿಂಚಪದವನುಂಡಹರಿಸೇವೆಯಲಿ ನಿಶಾಚರರಸಾದಹರಿಸೇವೆಯಲಿ ಹರಿವರರ್ಮುಕ್ತರಾದರುಹರಿಸೇವೆಯಲಿ ಮತ್ರ್ಯರು ಸುರರಾದರು 2ಹರಿಪಾದ ಸೋಕಲು ಸ್ಥಿರ ಪಾತಾಳದ ಪಟ್ಟಹರಿಪದ ಸೋಕಿದಅರೆಪೆಣ್ಣಾಗೆಹರಿಪಾದ ಸೋಕಿ ಕಾಳುರಗ ಪಾವನನಾದಹರಿಪಾದ ಸೋಕುವಾತುರವಿಡಿದು ಹರಿಯೆನ್ನಿ 3ಮಂಡೂಕಹಿ ಮುಖದಿ ಕಂಡ ಮಕ್ಷಕವ ತಾನುಂಡೇನೆಂಬುವಪರಿಮೃತ್ಯುವಿನಕುಂಡದಿ ವಿಷಯದಹಿಂಡುವಿಚಾರ್ಯಾಕೆಪುಂಡರೀಕಾಕ್ಷಾಂಘ್ರಿ ಕೊಂಡಾಡಿ ಮನದಿ 4ಯುವತಿ ಮಕ್ಕಳು ಮಂದಿರವನಗಲಿಸುವರುಜವನ ಬಂಟರು ಈ ಕಾಯವ ನೆಚ್ಚದೆಅವಿರಳ ಪ್ರಸನ್ವೆಂಕಟವರದ ರಂಗನಸವಿ ನಾಮಾಮೃತದಾಸ್ವಾದವನುಂಬ ದೃಢದಿ 5
--------------
ಪ್ರಸನ್ನವೆಂಕಟದಾಸರು
ಹರಿಯೆನ್ನು ಹರಿಯೆನ್ನು ಹರಿಯೆನ್ನು ಪ್ರಾಣಿಹರಿಯೆನ್ನದಿದ್ದರೆ ನರಹರಿಯಾಣೆ ಪ.ಹೆಂಗಸು ಮಕ್ಕಳು ಹೆರವರು ಪ್ರಾಣಿ |ಸಂಗಡ ಬರುವವರೊಬ್ಬರ ಕಾಣೆ 1ದಾನವಿಲ್ಲದ ದ್ರವ್ಯ ಗಳಿಸದೆ ಪ್ರಾಣಿಪ್ರಾಣ ಹೋಗುವಾಗ ಕಾಣೆ ದುಗ್ಗಾಣೆ 2ನೀರ ಮೇಲಿನ ಗುಳ್ಳೆ ಸಂಸಾರ ಪ್ರಾಣಿಸಾರಿದ ಪುರಂದರವಿಠಲನ ವಾಣಿ 3
--------------
ಪುರಂದರದಾಸರು
ಹರಿಹರಿಯೆ ಕಡೆಗಾಣೆನೈ ಜನುಮವಭವಕಡಲ ತಡಿಯ ಸೇರಿಸುಮಾಧವಪ.ವಿಷಯಾಸೆ ತೆರೆಗಳಲ್ಲಿ ಗೃಹವೆ ಗ್ರಹವಿಷಮ ಸತಿಸುತ ಗುಲ್ಮವು ವಡವಾಗ್ನಿಹಸಿವುತೃಷೆದಹಿಸಿತೆನ್ನ ಇದರೊಳಾಲಸಿಕೆಸುಳಿಭ್ರಮಣ ಘನ್ನ1ಷಟ್ಚರ್ಯ ಹಡಗದವರು ಬಿಡದೆ ಬೆನ್ನಟ್ಟಿ ಬಡಿದಂಜಿಸುವರು ಮನವಾಯುವಿನಟ್ಟುಳಿಗೆ ನಿಲವಿಲ್ಲವು ಇಂದ್ರಿಯಜಂತುಕಟ್ಟಿಲ್ಲದೆಳೆದೊಯ್ವವು 2ಸಂಸಾರಸಾರಫೇನ ಭುಂಜಿಸಲುಸಂಶಯದ ರೋಗ ನವೀನ ದುರಿತಾಂಬುಹಿಂಸೆ ಮಾಡದೆ ಉಳುಹಿತು ಅಜÕವ್ಯಾಳದಂಶ ಕ್ಷಣಲವಕಾಯಿತು 3ಸುಖವೆ ಬೊಬ್ಬುಳಿ ರಾಶಿಯು ಬಂಧು ಬಳಗಸಖಸ್ನೇಹ ಪಾಶಲತೆಯು ಅಹಿತಾಗಮ ಕಠೋರ ದುಶ್ಯಬ್ದಕೆಸ್ಮøತಿಹೋಗಿಚಕಿತನಹೆ ದೀನಬಂಧು 4ಇಂತು ಬಳಲುವುದ ನೋಡಿ ಸಿರಿಲಕುಮಿಕಾಂತ ನಿರ್ದಯನಾದೆ ನೀ ಪ್ರಸನ್ನವೆಂಕಟಕಾಂತ ಸಂತರ ಕೂಡಿಸೊ ಶ್ರೀ ಮೂರುತಿಅಂತ್ಯಯಾತ್ರೆಗೆ ಉದಯಿಸೊ 5
--------------
ಪ್ರಸನ್ನವೆಂಕಟದಾಸರು
ಹಸೆಗೆ ಬಾರೊ ಕುಸುಮನಯನ ಕುಶಲದಿಂದಲಿ ಬೇಗನೆಶಶಿಮುಖಿಯರ್ ಕರೆವರು ನಿನ್ನ ವಸುಧೆಪಾಲ ರಾಮನೊಪಅಸಮ ವೀರನನೆ ಗೆಲಿದು ಪಶುಪತಿಯ ಬಿಲ್ಲಮುರಿದುಕುಸುಮಬಾಲೆ ಕೊರಳೊಳ್ ಧರಿಸಿವಸುಧೆಸುತೆಯಕರವಪಿಡಿದು1ಕುಶಲದೀ ನಗುನಗುತಾ ಪಸರಿಸುವಿ ಮಂಟಪಕೆ ಹಸೆಗೆಧರಣಿ ಪಾಲರ್ ಲಜ್ಜೆವೆರಸಿ ಮೆರೆವ ಕೀರ್ತಿ ವಿಬುಧರೊಲಿಸೆದುರುಳದೈತ್ಯ ಕ್ರೋಧವರಿಸಿ ಸುರರುರಗದಲ್ಲಿನಿಂದುಹರುಷದಿ ಸುಮ ವರ್ಷವನ್ನು ಕರೆಯುವರೈ ಸರಸದೀ2ಜನಕರಾಯ ಹರುಷದಿಂದ ಜನಕೆ ಓಲೆ ಬರೆಯೆ ಕಂಡುಘನದಿ ದಿಬ್ಬಣ ಕೂಡಿ ಬಂದ ಜನಕ ಜನನಿಯರಿಗೆ ನಮಿಸಿಅನುನಯದಿಂ ಮನ ಓಲೈಸಿ ದನುಜಾಂತಕ ಗೋವಿಂದನೇ3<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಹುಚ್ಚು ಮುಂಡೆ ನೀನಾಗಬೇಡ ಹೇಳುವೆ ಕೇಳುಹುಚ್ಚು ಮುಂಡೆ ಹುಚ್ಚು ಮುಂಡೆಯು ಅಲ್ಲಬ್ರಹ್ಮವೇ ನೀನಾಗಿಹೆ ಹುಚ್ಚು ಮುಂಡೆಪಸರ್ವದೇಹಕೆ ನರದೇಹವು ಉತ್ತಮ ಹುಚ್ಚು ಮುಂಡೆಇರುವ ದೇಹದಿ ನಿನ್ನ ಸಾರ್ಥಕ ಮಾಡಿಕೋ ಹುಚ್ಚು ಮುಂಡೆಉರ್ವಿಪ್ರಪಂಚವು ಸತ್ಯವೆಂದು ಎನಬೇಡ ಹುಚ್ಚು ಮುಂಡೆತೋರುವುದಿಂದ್ರಜಾಲದ ತೆರದಿ ಸ್ವರ್ಗ ಮತ್ರ್ಯವುಹುಚ್ಚು ಮುಂಡೆ1ಸತಿಸುತರನು ನೀನು ನಂಬಿ ಕೆಡಬೇಡ ಹುಚ್ಚು ಮುಂಡೆಸತಿಯೆಷ್ಟು ಸುತರೆಷ್ಟು ಆದರು ನಿನಗೆ ಹುಚ್ಚು ಮುಂಡೆಮಿತಿಯಿಲ್ಲದ ದೇಹವಾದವು ನಿನಗೆ ಹುಚ್ಚು ಮುಂಡೆಮತಿಗೆಟ್ಟು ಮರೆತು ಜನ್ಮವನಂತವ ತಿರುಗುವರೆ2ಸ್ವಪ್ನದ ಸುಖದಂತೆ ಸಂಸಾರವಿದು ಮೃಷೆ ಹುಚ್ಚು ಮುಂಡೆಇರುವೆನಾಚಂದ್ರಾರ್ಕವೆಂದು ಎಂಬೆಯೋ ಹುಚ್ಚು ಮುಂಡೆಅಪ್ಪಯ್ಯ ಹೋದನು ಮುತ್ತಯ್ಯ ಹೋದನು ಈ ಪರಿಯಿಂದೆ ಹುಚ್ಚು ಮುಂಡೆಮುಪ್ಪಾದೆ ಇಂತು ಭವದ ಸುಳಿಯಲಿ ಬಿದ್ದು ಹುಚ್ಚು ಮುಂಡೆ3ಕಾರ್ಯೋಪಾಧಿ ಯಿಂದ ಹುಚ್ಚು ಮುಂಡೆ ನೀನಾದೆ ಹುಚ್ಚುಮುಂಡೆಕಾರ್ಯಕಾರಣ ಉಪಾಧಿಯು ನಿನಗಿಲ್ಲವು ಹುಚ್ಚು ಮುಂಡೆಕಾರ್ಯಗುಣಗಳಿಂದ ನಿನ್ನ ತಿಳಿವುದು ಕಷ್ಟ ಹುಚ್ಚು ಮುಂಡೆಕಾರಣ ಗುಣದಲ್ಲಿ ತಿಳಿಯೆ ತಿಳಿಸುವೆ ನಿನ್ನ ಹುಚ್ಚು ಮುಂಡೆ4ಹೊಂದು ಸದ್ಗುರುಪಾದ ತಿಳಿ ನಿನ್ನ ಬ್ರಹ್ಮೆಂದು ಹುಚ್ಚು ಮುಂಡೆನಿಂದುನಾಶಿಕಗೊನೆಯ ನೋಡಿ ದೃಷ್ಟಿಯಿಡು ಹುಚ್ಚು ಮುಂಡೆಚಂದ್ರರು ಶತಕೋಟಿ ಬೆಳಗುವರು ತಾವಲ್ಲಿ ಹುಚ್ಚು ಮುಂಡೆಸುಂದರ ಚಿದಾನಂದನಾಗುವೆ ನಿಜದಲ್ಲಿ ಹುಚ್ಚು ಮುಂಡೆ5
--------------
ಚಿದಾನಂದ ಅವಧೂತರು
ಹುಚ್ಚು ಹಿಡಿದು ಕೆಟ್ಟಯೋಗಿಹುಚ್ಚು ಹಿಡಿದು ಕೆಟ್ಟನೋನಿತ್ಯನಿತ್ಯಕಾಲದಲ್ಲಿನಿಜನಾದ ಕೇಳಲಾಗಿಪಇಂದ್ರಪದವಿಯನ್ನು ಒಲ್ಲ ಈಸಪದವಿ ಮೊದಲೆ ಒಲ್ಲಹಿಂದ ಮುಂದಣ ವಿಚಾರ ಹೀನಮಾಡಿ ಮರೆತನಯ್ಯೋ1ಮಾತನಾಡೆ ಮಾತನಾಡ ಮನಕೆ ಹಿಡಿದುದನ್ನ ಬಿಡಯಾತ ಯಾತರಲ್ಲೂ ಕಿವಿಯ ನಿಡ ಯತ್ನ ಬೇರಾಯಿತಯ್ಯೋ2ಅರಿವುಮರೆವು ಆಗಿ ಇಹನು ಅರಕೆಯಿಲ್ಲದೆ ಸುಮ್ಮನಿಹನುಮರುಳು ಮರುಳು ಆಗಿ ಬುದ್ಧಿ ಮಂದನಾಗಿ ಹೋಯಿತಯ್ಯೋ3ಶರೀರ ಪರವೆಯಿಲ್ಲ ಯಾವುದರ ನಿಷೇಧವಿಲ್ಲಅರಿಯದವರು ಅದರಲ್ಲಿ ಅನ್ನ ಉಂಟೆನೆಂಬನಯ್ಯೋ4ದಯೆಯು ಇಲ್ಲ ಧರ್ಮವಿಲ್ಲ ದುಷ್ಟತನಗಳೇನು ಇಲ್ಲಬಯಲು ಚಿದಾನಂದಗುರುಬಯಲು ಕೂಡಿ ಬಯಲೆ ಆದ5
--------------
ಚಿದಾನಂದ ಅವಧೂತರು
ಹುಚ್ಚು ಹಿಡಿಸಿದೆಯಾಮಾಧವ|ನಿಚ್ಚನಿನ್ನ ಪಾದಾಂಬುಜವ ಭಜಿಪರಿಗೆ ಪಮತ್ತಗಜವೆಂಟು ಸೊಕ್ಕಿಲಿ ಕೊಲ್ವವು |ಕುತ್ತಿಗೆ ಮುರಿವರಾರು ಮಂದಿಯೂ ||ಎತ್ತ ಹೋಯಿತೋ ಬುದ್ಧಿ ಕುಳಿತುಕೊಂಡರೆ ಮೇಲೆ |ಹುತ್ತ ಬೆಳದರೆಚ್ಚರಿಕೆಯಿಲ್ಲದಂಥ 1ದಾರಾಸುತರೆನ್ನದಾರೆಂದು ನೋ |ಡರಾಗಾರ ನಮ್ಮದೆಂದು ಪೋಷಿಸರು ||ಆರಣ್ಯದಲಿ ಮುಸುಕಿಕ್ಕಿ ಧ್ಯಾನಿಸುವರು |ಶಾರೀರದ ಪರವಿಯನ್ನು ಬಿಟ್ಟಹರು 2ಬಿದ್ದು ಯದ್ದ ಕಾಳು ಆದುಕೊಂಡುಂಬರು |ಇದ್ದ ಬದುಕು ಜೋಕೆ ಮಾಡೊಲ್ಲರು ||ಪ್ರದ್ಯುಮ್ನ ಪ್ರಾಣೇಶ ವಿಠಲನೇ ಇಂಥ |ಬುದ್ಧಿಯ ಪ್ರೇರಿಸಿ ನೋಡಿ ಹಿಗ್ಗುವೆನೀ 3
--------------
ಪ್ರಾಣೇಶದಾಸರು
ಹೇಗಿಹನು ಹಾಗಿಹನು ಪರಿಪೂರ್ಣ ಬ್ರಹ್ಮಹೇಗಿಹನು ಹಾಗಿಹನುಹೇಗಿಹನು ಎಂತೆಂದು ಕೇಳುವರು ಯಾರುಹೀಗಿಹನು ಎಂತೆಂದು ಹೇಳುವರು ಯಾರುಪಹಸಿವೆಯಾಗಿರಲು ಹಸಿವೆಯಂತಿಹನುತೃಷೆಯು ತಾನಾಗಿರಲು ತೃಷೆಯಂತೆ ಇಹನು1ದುಃಖಿಯಾಗಿರಲು ದುಃಖಿಯಂತಿಹನುಸುಖಿಯು ತಾನಾಗಿರಲು ಸುಖಿಯಂತೆ ಇಹನು2ದುಷ್ಟ ತಾನಾಗಿರಲು ಅವ ದುಷ್ಟನಾಗಿಹನುಶಿಷ್ಟನಾಗಿರಲು ಅವ ಶಿಷ್ಟನಾಗಿಹನು3ಜೀವನಾಗಿರಲು ಅವ ಜೀವನಾಗಿಹನುಶಿವನಾಗಿರಲು ಅವ ಶಿವನಾಗಿ ಇಹನು4ಚಿತ್ತಕ್ಕೆ ಬುದ್ಧಿಗೆ ತಾನಿಹನು ದೂರಸತ್ಯ ಚಿದಾನಂದ ಗುರುವೆಂಬಾತನು5
--------------
ಚಿದಾನಂದ ಅವಧೂತರು
ಹೇಗೆ ಮಾಡಲಿ ಮಗುವಿಗೇನಾಯಿತೊ - ಇದರ - |ಆಗಮವ ಬಲ್ಲವರು ತಿಳಿದೆಲ್ಲ ಪೇಳಿ ಪ.ತೂಗಿ ಮಲಗಿಸೆ ಕಣ್ಣ ಮುಚ್ಚಲೊಲ್ಲನು, ಬೆನ್ನ - |ಮೇಗೆ ಬುಗುಟಿಯು, ಎದೆಯು ಕಲ್ಲಾಗಿದೆ |ರೋಗವನೆ ಕಾಣೆ ದಾಡೆಯಲಿ ನೀರಿಳಿಯುತಿದೆ |ಕೂಗುವ ಧ್ವನಿಯೊಮ್ಮೆ ಕುಂದಲಿಲ್ಲ 1ಖಂಡಸಕ್ಕರೆ ಹಣ್ಣ ಕೊಟ್ಟರೊಲ್ಲದೆ ಮಣ್ಣ |ಹೆಂಡೆಯನು ಬೇಡಿ ತಾ ಪಿಡಿವ ಕೊಡಲಿ ||ಮಂಡೆ ಜಡೆಗಟ್ಟಿಹುದು ಮಾಡಲಿನ್ನೇನಿದಕೆ |ಹಿಂಡುಸತಿಯರ ದೃಷ್ಟಿ ಘುನವಾಯಿತೇನೊ2ಮೊಲೆಯನುಂಬಾಗ ಮೈಯಂಬರವನೊದೆಯುತಿದೆ |ಕಲಕಿತದಲಿ ಎನ್ನ ಕೊಲುವುದೇಕೋ ||ತಿಳಿದಿದರ ನೆಲೆಯನರಿತವರನೊಬ್ಬರ ಕಾಣೆ |ಚೆಲುವಸಿರಿಪುರಂದರವಿಠಲ ತಾ ಬಲ್ಲ3
--------------
ಪುರಂದರದಾಸರು
ಹೊಲೆಯ ಹೊರಗಹನೆ ಊರೊಳಗಿಲ್ಲವೆಸಲೆ ಶಾಸ್ತ್ರವನು ತಿಳಿದು ಬಲ್ಲವರು ನೋಡಿ ಪ.ಭಾಳದಲಿ ಭಸಿತ ಭಂಡಾರವಿಡದವ ಹೊಲೆಯಕೇಳಿ ಸಲೆ ಶಾಸ್ತ್ರವನು ತಿಳಿಯದವ ಹೊಲೆಯಆಳಾಗಿ ಅರಸರಿಗೆ ಕೈಮುಗಿಯದವ ಹೊಲೆಯಸೂಳೆಯರ ಕೊಡುವಾತನೇ ಶುಧ್ಧ ಹೊಲೆಯ 1ಇದ್ದ ಧನ ದಾನ - ಧರ್ಮವ ಮಾಡದವ ಹೊಲೆಯಕದ್ದು ತನ್ನೊಡಲ ಹೊರೆವಾತನೇ ಹೊಲೆಯಬದ್ಧವಹ ನಡೆ - ನುಡಿಗಳಿಲ್ಲದಿದ್ದವ ಹೊಲೆಯಮದ್ಧಿಕ್ಕಿ ಕೊಲುವವನೆ ಮರಳು ಹೊಲೆಯ 2ಆಶೆಯನು ತೋರಿ ಭಾಷೆಗೆ ತಪ್ಪುವವ ಹೊಲೆಯಲೇಸು ಉಪಕಾರಗಳನರಿಯದವ ಹೊಲೆಯಮೋಸದಲಿ ಪ್ರಾಣಕ್ಕೆ ಮುನಿಯುವವನೇ ಹೊಲೆಯಹುಸಿಮಾತನಾಡುವವನೇ ಸಹಜ ಹೊಲೆಯ3ಕೊಂಡ ಋಣವನು ತಿರುಗಿ ಕೊಡಲರಿಯದವ ಹೊಲೆiÀುಭಂಡ ಮಾತುಳಾಡುವವನೆ ಹೊಲೆಯಗಂಡ - ಹೆಂಡಿರ ನಡುವೆ ಭೇದಗೈವವ ಹೊಲೆಯಹೆಂಡರಿಚ್ಚೆಗೆ ನಡೆವ ಹೇಡಿ ಹೊಲೆಯ 4ಪರಧನಕೆ ಪರಸತಿಗೆ ಅಳುಪಿದವನೇ ಹೊಲೆಯಗುರು ಹಿರಿಯರನು ಕಂಡು ಎರಗದಿದ್ದವ ಹೊಲೆಯಅರಿತು ಆಚಾರವನು ಮಾಡದಿದ್ದವ ಹೊಲೆಯಪುರಂದರವಿಠಲನನು ನೆನೆಯದವ ಹೊಲೆಯ 5
--------------
ಪುರಂದರದಾಸರು