ಒಟ್ಟು 5585 ಕಡೆಗಳಲ್ಲಿ , 130 ದಾಸರು , 3539 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಯಲ ಜಾತ್ರೆಗೆ ನಡೆಹೋಗುವ ಬಾರದಲೆ ಅಲ್ಲಿರುವ ಪ ಶಾಂತಿ ಎಂದೆಂಬ ಕಂಟಲೆಗಳು ಶಮೆ ಹುರಿಗೆಜ್ಜೆ ಎತ್ತುಗಳುದಾಂತಿ ಎಂದೆಂಬ ಕಾವಡಿಗಳು ದಮೆ ಎಂಬ ಹೂಜೆಗಳು1 ಮಂಗಳವೆಂಬ ಬಾಲಕರು ಮುಕ್ತಿ ಎಂಬ ಮುತ್ತೈದೆಯರುಸಂಗ ಹರರಹ ವಿಟಗಾರರು ಸೈರಣೆ ಎಂಬ ಹಿರಿಯರು 2 ಸಂತೋಷವೆಂಬ ಅಂಗಡಿಗುಂಪು ಸಹಜದ ಹೂಕಂಪುಶಾಂತರೆನಿಪ ದೊರೆಗಳ ಗುಂಪು ಸುಖ ಛತ್ರಿಯ ತಂಪು 3 ಓಂಕಾರನಾದದ ನಗಾರಿ ವೀಣಾನಾದದ ತುತ್ತೂರಿಸಂಕಲ್ಪ ಸುಳ್ಳೆಂಬ ತಂಬೂರಿ ಸಾಮವೆನಿಸುವ ಭೇರಿ 4 ಅಮೃತ ಬಿಂದುವಿನ ಮೊಗೆಯುದಾರಿದಾರಿಗೆ ಸೋಹಂಸ್ಮರಣೆ ದೃಢ ಮನವದು ಚಡಿಯು 5 ಆನಂದ ವನಗಳ ಸಾರುತ ಆಯಾಸ ಕಳೆಯುತ್ತಸ್ವಾನಂದ ಗೋಪುರ ಕಾಣುತ ಸುಮ್ಮಾನವ ಪಡೆಯುತ6 ಮೃಢನಾಳ ದ್ವಾರವ ಪೋಗುತ ಮುಂದೆ ಚಂದ್ರನ ಕಾಣುತಅಡರಿದ್ವಿದಳ ಸದರೇರುತ ಅತ್ತತ್ತ ಸಾರುತ 7 ಕಮಲ ಪೀಠವನೇರುವರ ಮಹೇಶನೆನ್ನು ಅವರ8 ತುರೀಯವೆಂದೆಂಬ ಬಯಲಗೂಡಿ ತಾವು ಹೋಗುವ ನಾಡಿಹರ್ಷದ ಧೂಳ ದರ್ಶನ ಮಾಡಿ ಹಾಯಿಗುಡಾರ ಹೂಡಿ9 ಶಿಂಶುಮಾರವೇ ದೇವರ ಪೀಠ ಸಿದ್ಧವೆಂಬ ಕವಾಟಸಂಶಯವಿಲ್ಲದ ಎಡೆಯಾಟ ತತ್ಪುರುಷರ ಕೂಟ10 ಸೂರ್ಯ ಕೋಟಿಗೆ ಘನವುಒತ್ತೊತ್ತು ಪೂರ್ಣಾಭಿಷೇಕ ಓಂ ಎಂದೆಂಬ ಸ್ವರವು 11 ಸುವಾಸನೆ ಎಂದೆಂಬ ಧೂಪವು ಸುಂದರ ಪುಷ್ಪಗಂಧತಾವು ಮಾಡುವ ಭಾವದಲಿಂದ ತೃಪ್ತಿ ನೈವೇದ್ಯ ಚಂದ12 ಎರಡಿಲ್ಲದೇಕಾರ್ತಿ ಬೆಳಗುತ ಎಲ್ಲೆಡೆ ತಾ ಹೊಳೆಯುತಹೊರ ವೊಳಗೆಂಬುದ ಮರೆಯುತ ಹೇಮದ ತಗಡಾಗಿ ಇರುತ13 ಬೆಳಕ ಕಂಡಾರತಿ ಎತ್ತುತ ಬೆಳಗನು ಬೆಳಗುತ್ತತಿಳಿದು ಪ್ರದಕ್ಷಿಣೆ ಮಾಡುತ ತೋರುವುದು ಬ್ರಹ್ಮವದೆನ್ನುತ 14 ಭಯದ ವಿಸರ್ಜನೆ ಮಾಡುತ ಬಯಲಾಗಿಯೆ ತೋರುತಬಯಲ ಚಿದಾನಂದನಿಗೆರಗುತ್ತ ಬ್ರಹ್ಮನಾಗಿ ತಾನಿರುತ 15
--------------
ಚಿದಾನಂದ ಅವಧೂತರು
ಬರತಾರಂತ್ಹೇಳೆ ಹರಿಪಾದ ದರ್ಶನಕೆತ್ವರಿತದಿ ಪಾಂಡವರು ಪ. ಹದಿನಾಲ್ಕು ಲೋಕದ ಪದುಮಗಂಧಿಯರೆಲ್ಲಮದನನಯ್ಯನ ಮನೆನೋಡಲುಮದನನಯ್ಯನ ಮನೆನೋಡೋ ವ್ಯಾಜ್ಯದಿಮುದದಿಂದ ಮುಯ್ಯ ತರುತಾರೆ1 ಸುರನಾರಿಯರು ನಾನಾ ಪರಿಯ ಭೂಷಣವನಿಟ್ಟುಹರಿಯ ಮನೆ ನೋಡೋ ಹರುಷದಿಹರಿಯ ಮನೆ ನೋಡೋ ಹರುಷದಿ ಮುಯ್ಯವತರತಾರೆ ತಾವು ತವಕದಿ2 ನಾರಿಯರೆಲ್ಲರು ನಾನಾ ವಸ್ತಗÀಳಿಟ್ಟುಸಾರಾವಳಿಗಳ ನಿರಿದುಟ್ಟು ಸಾರಾವಳಿಗಳ ನಿರಿದುಟ್ಟು ಹೊರಡೆ ಸೂರ್ಯಮುಳಗಿದನೆ ಆಕಾಶದಲಿ 3 ಅಕ್ಕತಂಗಿಯರು ತಾವು ಚಕ್ಕನೆ ವಸ್ತಗಳಿಟ್ಟುಮಕ್ಕಳಿಗೆ ಬಾಲ್ಯ ಉಡಿಗೆಯಿಟ್ಟುಮಕ್ಕಳಿಗೆ ಬಾಲ್ಯ ಉಡಿಗೆಯಿಟ್ಟು ಹೊರಡಲುಅರ್ಕ ಮುಳುಗಿದ ಆಗಸದಿ 4 ಮಂದ ಗಮನೆಯರೆಲ್ಲ ತುಂಬಿದೊಸ್ತಗಳಿಟ್ಟುಕಂದರಿಗೆ ಬಾಲರ ಉಡುಗೆ ಇಟ್ಟುಕಂದರಿಗೆ ಬಾಲರ ಉಡುಗೆಯಿಟ್ಟು ಹೊರಡಲುಚಂದ್ರಜ್ಯೋತಿಗಳು ಹಿಡಿದಾವೆ 5 ಸುಮನಸೆಯರೆಲ್ಲ ಯಮುನಾದೇವಿಯ ದಾಟಿಧಿಮಿ ಧಿಮಿ ಭೇರಿ ಹೊಯಿಸುತಧಿಮಿ ಧಿಮಿ ಭೇರಿ ಹೊಯಿಸುತ ಬರುವಾಗಭುವನದ ಬೆಳಕು ಹರವಿತು6 ಆನೆಗಳು ಕುಂಭಿಣಿ ಜಡಿದು ಬರತಾವೆ ಕುಂಭಿಣಿ ಜಡಿದು ಬರತಾವೆ ರಾಮೇಶನ ಪದಾಂಬುಜ ನೋಡೊ ಭರದಿಂದ7
--------------
ಗಲಗಲಿಅವ್ವನವರು
ಬರಬಾರದಾಗಿತ್ತು ಬಂದೆನಯ್ಯಾ ಪ ಕರೆತರಲು ಬಂದುದಕೆ ಫಲವೇನೊ ದೇವಾಅ.ಪ ತರಳತನದಲ್ಲಿ ಎನ್ನ ಕರಣಗಳು ಮಾಡಿದ ಪರಿಪರಿಯ ಕ್ರೀಡೆಗಳ ಫಲವೇನೊ ಎನಗೆ ದುರುಳ ಸಂಗದೊಳಿದ್ದು ಹರುಷದಿಂದಲಿ ಎನ್ನ ಆಯುವನು ಕಳೆದೆ1 ಸತಿಸುತರು ಹಿತರಿವರು ಎನಗೆಂದು ಉಬ್ಬುಬ್ಬಿ ಮಿತಿ ಇಲ್ಲದಾ ಕಾರ್ಯಗಳನೆ ಮಾಡೀ ಗತಿಯೇನು ಮುಂದು ಹಿತವು ಯಾವುದು ಎಂದು ಮತಿಗೆಟ್ಟಮೇಲೆನಗೆ ಗೊತ್ತಾಗುವುದೆಂತೋ 2 ಶ್ವಾನ ಸೂಕರಗಳು ಸ್ವೇಚ್ಛೆಯಿಂದಲಿ ಚರಿಸಿ ತನ್ನ ಪರಿವಾರವನೆ ತಾ ಪೊರೆಯುತಿಹವೋ ಎನ್ನ ಸತಿಸುತರುಗಳ ಉದರಪೋಷಣೆಗಾಗಿ ಹೀನಸೇವೆಯಿಂದ ಉಪಜೀವಿಸಲು ಬಹುದೆ 3 ತನುಬಲವು ಇದ್ದಾಗ ಕೋಣನಂದದಿ ತಿರುಗಿ ಜ್ಞಾನ ಕರ್ಮಗಳನ್ನು ಆಚರಿಸದೇವೆ ಧನ ವನಿತೆ ಮೋಹಕೆ ಕೊನೆಮೊದಲು ಇಲ್ಲದೆ ಮನವೆಲ್ಲವನು ನಾನು ಹೊಲೆಗೆಡಿಸಿದಮೇಲೆ4 ವಿಕಳಮತಿಯನು ಹರಿಪ ಅಕಳಂಕ ಹರಿಭಕ್ತ- ರಕುಟಿಲಾಂತಃತರಣ ದೊರೆತು ಎನ್ನ ಸಕಲಾಪರಾಧಗಳ ಕ್ಷಮಿಸುವರ ಸಂಗ ನೀ ಕರುಣಿಸದಿದ್ದ ಮೇಲೆ ಶ್ರೀ ವೇಂಕಟೇಶಾ 5
--------------
ಉರಗಾದ್ರಿವಾಸವಿಠಲದಾಸರು
ಬರಿದಿದೇಕೆಲೋ ನಿನ್ನಂತರಿರವು ಸಿರಿಯರರಸ ಅರಿಯನೇನೆಲೋ ಪ ಮರೆಯ ಮೋಸದಿ ಕುಕ್ಕಲು ಮೀನ ಹರಿವ ಉದಕದಿ ಬಕನು ಮೌನ ಧರಿಸಿದಂದದಿ ಪರಮಮೌನ ಧರಿಸಿ ಕುಳಿತು ಮರುಳುಗೊಳಿಸಿ ಪರರ ಕೊರಳ ಮುರಿವ ದುರುಳತನದ ಕೃತಿಗೆ ಹರಿಯು ಒಲಿಯುವನೇನು ಮರುಳೆ1 ಕಪಟ ನೀಗದೆ ಹುಚ್ಚು ಬಿಡದೆ ಗುಪಿತ ತಿಳಿಸದೆ ಮುಚ್ಚಿ ಕಣ್ಣು ತಪಸಿಯಂದದಿ ಕುಪಿತ ಮಾನಿಸನಾಗಿ ಕುಳಿತು ತಪಸಿಯಂತೆ ತೋರಿ ಜನರ ಅಪಾಯಮಾಳ್ಪ ಕಪಟವೇಷಕೆ ಸುಫಲ ದೊರೆಯುವುದೇನು ಮರುಳೆ 2 ಉದಯದೇಳುತ ಓಡಿ ಹೋಗಿ ನದಿಯ ಮುಳುಗುತ ತೀಡಿಗಂಧ ಹದದಿ ಬರೆಯುತ ವಿಧವಿಧಮಂತ್ರೊದರಿ ಇತರರ ಸದನ ಮುರಿದು ಸತಿಯ ಸುತರ ಮುದದಿ ಪೊರೆವ ಅಧಮ ವ್ರತಕೆ ಸದಮಲಾಂಗೊಲಿವನೆ ಮರುಳೆ 3 ಕಪಟ ನೀಗದೆ ಜಟೆಯ ಬೆಳಸಿನ್ನು ಚಪಲತನದಿಂ ದುಟ್ಟು ಕೌಪೀನ ನಿಟಿಲದಲ್ಲಿ ಭಸ್ಮಧರಿಸಿ ನಟಿಸಿ ಸಾಧುವರ್ತನದಿಂ ದ್ಹೊಟ್ಟೆ ಹೊರೆವ ಭ್ರಷ್ಟತನಕೆ ಕೆಟ್ಟ ಬವಣಳಿಯುವುದೆ ಮರುಳೆ 4 ತತ್ವದರ್ಥವ ಬೋಧಿಸುತ್ತ ಭೃತ್ಯ ಸಮೂಹವ ಸಂಪಾದಿಸುತ್ತ ನಿತ್ಯಸತ್ಯವ ವಿತ್ತದಾಸೆಗುತ್ತರಿಸುವಸತ್ಯಭ್ರಷ್ಟ ವರ್ತನಕೆ ಮುಕ್ತಿದಾಯಕ ಸಿರಿಯರಾಮ ಮುಕ್ತಿಸುಖ ನೀಡುವನೆ ಮರುಳೆ 5
--------------
ರಾಮದಾಸರು
ಬರಿದೆ ಕಾಲವ ಕಳೆದೆ ನರಹರಿಯ ಧ್ಯಾನಿಸದೆ ಪ. ಪರಿಪರಿಯ ಮೋದದಲಿ ಮರುಳನಂದದಿ ಮೆರೆದೇ ಅ.ಪ. ಗುರುವ ಸೇವಿಸಲಿಲ್ಲ ಹರಿಯ ಧ್ಯಾನಿಸಲಿಲ್ಲ ಹಿರಿಯರೊಲಿವಂತುಪಚರಿಸಲಿಲ್ಲ | ಪರಮ ಭಾಗವತರ ಚರಣಕ್ಕೆ ನಾನೊಮ್ಮೆ | ಶಿರಬಾಗಿ ನಮಿಸಿ ಪರಿಚರಿಸಲಿಲ್ಲವಲ್ಲಾ 1 ಇನ್ನೆನಗೆ ಗತಿಯಾರು - ಮನ್ನಿಸುವರದಾರು ಇನ್ನದಾರಲ್ಲಿ ಪೇಳುವೆನೆನ್ನ ದೂರು ನಿನ್ನನೇ ಮೊರೆಹೊಕ್ಕು ನೀನೆ ಗತಿಯೆಂದಿರುವ ಎನ್ನ ಮನ್ನಿಸಲುಬೇಕು ಪನ್ನಶೇಷಗಿರೀಶ 2
--------------
ನಂಜನಗೂಡು ತಿರುಮಲಾಂಬಾ
ಬರಿದೆ ಬಿಡದೆನ್ನ ಹರುಬೆಂಬೆಯೋತೆರಹುಗೊಡದು ಹರಿಸ್ಮರಣೆಗೆಂಬೆಯೊ ಪಒಲ್ಲೆನೆಂದರೆ ನಿನ್ನ ಕೊಲ್ಲುವುದೆ ಬರಿದುಸೊಲ್ಲಿಸದಿರೆ ನಿನ್ನನೀಯುವದೆತಲ್ಲಣಗೊಳದಿರೆ ವಟಯನೊಡೆಯುವದೆಬಲ್ಲೆನೆನ್ನಲಿದಾರಲು ಬಾಯಬಡಿವದೇನೊ 1ಪರರೊಳಿಪ್ಪುದೊ ನಿನ್ನ ಕರಣದೊಳಿಪ್ಪುದೊಹರುಬುತಿಂ ಬೀದಿಯಲಿರುತಿಪ್ಪುದೊತಿರುಗುತಿಪ್ಪುದೊ ಬೆಂಬಿಡದೆ ಸಾಲವಕೊಂಡಿಹುದೊಬರಿದೆ ಪತ್ರವೊ ಪೇಳು ಮರುಳೆ 2ಪರರು ನುಡಿಯುತಿರೆ ಮರುನುಡಿಯುವೆ ನೀನೆಕರೆಯದಿದ್ದರು ಪೋಗಿ ಬೆರೆಯುತಿಹೆತೊರೆದು ಬಿಡುವ ಬುದ್ಧಿ ಬರದಾದ ಕಾರಣಾಉರುಳಿಗೆ ಸಿಕ್ಕಿದುರುಗನಂತೆ ಹೊರಳುವೆ 3ಆಶಾ ಪಿಶಾಚಿ 'ಡಿದ ಕಾರಣ ನೀನುಮೋಸ ಹೋಗಿಯೆ ನೀನೆ ಮುಂಬರಿದುಹೇಸದೆ 'ೀನಾಯಗೆ ಮೈಗೊಡುವೆ ಬಪ್ಪನಾಶವನರಿಯೆ 'ರತಿುರುವುದಾ 4ಬೆರೆದು ಸಂಸಾರದೊಳಿರುವಂತೆ ಚಿಕ್ಕನಾಗಪುರವಾಸಿ ಗುರುವಾಸುದೇವಾರ್ಯನಾಚರಣ ಸೇವೆಯೊಳ್ಮನ'ರಿಸಿ ಬಾಳ್ದರೆ ಸುಖಶರಧಿಯಾಗುವೆ ದುಃಖವರುಗಸಿರದು ನಿನ್ನ 5
--------------
ವೆಂಕಟದಾಸರು
ಬರಿದೆ ಹಾಳು ಶರೀರ ಬಾಳು ಅರಿದಡಿದು ಮಹ ಟೊಳ್ಳು ಟೊಳ್ಳು ಪ ನಾರಿಪುರುಷರು ಮಾರಕದನದಿಂ ಸೇರಿ ಸುಖಿಸಲು ಜಾರಿದಿಂದ್ರಿಯ ಕಾರಣಾಗಿ ಮೂರುದಿನದಿ ತೋರಿ ಪೋಗ್ವಸಾರಮಯ 1 ಮಿಡುಮಿಡುಕಿ ಒಡಲಿಗಾಗಿ ದುಡಿದು ಮೂಢರಡಿಯ ಪಿಡಿದು ಬಿಡದೆ ರೋಗದೊಡನೆ ನರಳಿ ಪಡುತಕಷ್ಟ ಕಡೆಗೆ ಸಾಯ್ವ 2 ಪರರಸೇವೆ ನಿರುತಗೈದು ಪರಕೆ ಇಹ್ಯಕೆ ತಿರುಗಿ ತಿರುಗಿ ಗರುವದಿಂದ ಚರಿಸಿ ನಮ್ಮ ಸಿರಿಯರಾಮನ ಚರಣಕ್ಹೊಂದದ 3
--------------
ರಾಮದಾಸರು
ಬರುತಲಿಹರು ನೋಡಿ ಗುರುವರೇಣ್ಯ ಸುಖತೀರ್ಥ ಯತಿವರರು ಪ ಹರಿದು ಬರುವ ಸುರನದಿಯ ಪ್ರವಾಹದ ತೆರದಲಿ ಪರಿಪರಿ ಪರಿವಾರ ಸಹಿತ ಅ.ಪ ಕರದಲಿ ಪಿಡಿದಿಹ ದಂಡ ಕಮಂಡಲ ಕೊರಳೊಳು ತುಳಸಿಯ ಚಿಗುರಿನ ಮಾಲೆಯು ಅರಿವಾರಿಜ ಲಾಂಛನಗಳಿಂದೊಪ್ಪುವ ವರ ದ್ವಾದಶ ನಾಮಗಳನು ಧರಿಸುತ 1 ಯತಿಗಳು ಗೃಹಿಗಳು ಬ್ರಹ್ಮಚಾರಿಗಳು ಶತಶತ ಸಂಖ್ಯೆಗಳಲಿ ಸೇರಿಹರು ಅತಿ ಸಂಭ್ರಮದಲಿ ನೋಡಲು ಪುರುಷ ರತುನವು ಮಾರ್ಗದ ಖತಿಪರಿಹರಿಸುತ 2 ಅವನಿಸುರರು ಮುಂಬದಿಯಲಿ ತಮ್ಮಯ ಕವಿತೆಗಳಲಿ ಗೋವಿಂದನ ಗುಣಗಳ ನವ ನವ ಸ್ವರದಲಿ ಪಾಡುತ ಕುಣಿಯಲು ಶ್ರವಣ ನಯನಕಾನಂದವ ಬೀರುತ 3 ತ್ವರೆಯಲಿ ಸರಿದು ತಾ ಬರುತಿರೆ ಯುವ ಕೇ- ಸರಿಯ ಧಿಕ್ಕರಿಸುವ ಸಂಭ್ರಮ ಗಮನ ಚರಣಯುಗಳ ಕಾಂತಿಯ ಪಸರಿಸುತಲಿ ಧರಣಿಯ ಪಾವನ ಮಾಡುವ ಬಗೆಯಲಿ 4 ಏನಿರಬಹುದೆಂದು ನೋಡುವರಿಗೆ ಕಾಣಿಸುವುದು ತೇಜದ ಪುಂಜ ಭೂನಿಲಯವ ಬೆಳಗಲು ಅತಿ ನೂತನ ಭಾನು ಉದಯಿಸಿದ ತೆರದಲಿ ಪೊಳೆಯುತ 5 ಪದುಮರಾಗ ಕಾಂತಿಯ ಮೀರಿದ ನಖ ಕೂರ್ಮ ಪ್ರಪದಗಳು ವಿಧಿಭವಮುಖ ಸುರಸೇವಿತ ಜಂಘವು ಮದಗಜ ಕರವನು ಪೋಲುವ ತೊಡೆಗಳು 6 ಪುಷ್ಪ ನಿತಂಬಗಳಲಿ ಪೊಳೆಯುತಲಿಹ ರೇಷ್ಮೆಯ ವಸ್ತ್ರವ ಧರಿಸಿಹರು ಕುಕ್ಷಿಲಲಾಟ ಶಿರೋಧರಗಳಲತಿ ಶ್ರೇಷ್ಠದ ತ್ರಿವಳಿಗಳಿಂದ ರಾಜಿಸುತ7 ಕೆಚ್ಚಿನ ವಕ್ಷಸ್ಥಳವತಿ ಸುಂದರ ಉಚ್ಚ ಪೀವರದ ಸ್ಕಂಧಯುಗಳವು ಸ್ವಚ್ಛದ ಕೆಂಬಣ್ಣದ ಕರತಲದಲಿ ಬಿಚ್ಚಿ ಹಾರುತಿಹ ಧ್ವಜಲಾಂಛನದಿ 8 ಚಂದಿರ ಬಿಂಬವಿದೋ ಪ್ರೇಕ್ಷಕರಾ ನಂದತರಂಗವ ಉಕ್ಕಿಸುತಿಹುದು ಒಂದು ಕಳಂಕವು ಕಾಣದಿರುವ ಅತಿ ಸುಂದರ ಪುರುಷವರೇಣ್ಯರು ಸೊಗಸಿಲಿ 9 ಸುಂದರ ಮಂದಸ್ಮಿತದಿಂ ಶೋಭಿಪ ಕುಸುಮ ತೆರದಲಿ ದಂತಗಳು ಮಂದಿಗಳಿಗೆ ಬಲು ಹರುಷವಿತ್ತು ಅರ ವಿಂದ ನಯನ ಆನಂದತೀರ್ಥ ಮುನಿ 10 ಕಿವಿಯಲಿ ಪೊಳೆಯುವ ತುಳಸಿಯದಳಗಳು ಅವಿರಳ ತೇಜದಿ ಹೊಳೆಯುವ ಕಪೋಲ ಭುವನತ್ರಯಗಳಭೀಷ್ಟವ ನೀಡುವ ಸುವಿಮಲ ಸುಂದರ ಭ್ರಕುಟಿ ವಿಲಾಸದಿ 11 ಅಕಲಂಕ ಶರೀರರು ಬರುತಿಹುದನು ಸಕಲ ಕಲಾಕುಶಲರು ನೋಡಿ ಶಕುತಿಗೆ ಮೀರಿದ ಮಾದರಿಯೆಂದರು ಪ್ರಕೃತಿ ಮಧುರ ಸರ್ವಾಂಗ ಸುಂದರರು 12 ಕಾಂತಿ ಸುಧೆಯ ಪಾನವ ಮಾಡಿರಿ ಸುಖ ಶಾಂತಿ ನಿಲಯರಾಶ್ರಯದಲಿ ಬಾಳಿರಿ ಚಿಂತೆ ಸಂತಾಪಗಳೆಲ್ಲವ ತೊಳೆಯಿರಿ ಸಂತತ ಹರಿದಾಸ್ಯದಲಿ ಪ್ರಸನ್ನರು 13
--------------
ವಿದ್ಯಾಪ್ರಸನ್ನತೀರ್ಥರು
ಬರುದೆ ಭ್ರಮೆಯಗೊಂಡ್ಯೊ ಮರುಳ ಮನುಜ ನೀನು ಧ್ರುವ ಎರವ್ಹಿನ ಮನೆಯೊಳು ಮರಹು ಮರೆಯಗೊಂಡು ಗರವು ಹಿಡಿದು ನಿನ್ನ ಕುರುಹು ತಿಳಿಯಲಿಲ್ಲ ಹರೆದು ಭ್ರಾಂತಿಗೆ ಬಿದ್ದು ಸೊರಗಿ ದಣಿದೆಲ್ಲ 1 ಏನು ಮರುಳಗೊಂಡ್ಯೊ ಹೀನಯೋನಿಯ ಮುಖಕೆ ಕಾನನದೊಳು ಪೊಕ್ಕು ಖೂನ ತಿಳಿಯದೆ ನಿನ್ನ ಜನುಮಜನುಮ ಬಂದ್ಯೊ ಜ್ಞಾನಶೂನ್ಯದಲಿ 2 ನಾನು ನನ್ನದು ಎಂದು ಏನು ಗಳಿಸಿಕೊಂಡ್ಯೊ ಸ್ವಾನುಭವದ ಸುಖ ಅನುಭವಿಸದೆ ಹೋಗಿ ಸ್ವಾನ ಸೂಕರಯೋನಿ ಮುಖಸೋಸಿದೆಲ್ಲ 3 ಹೊನ್ನು ಹೆಣ್ಣಿನ ಸವಿಯು ಬಣ್ಣಿಸಿ ನೀ ಬಯಸಿದಲ್ಲ ಮಣ್ಣೇ ಮಾಣಿಕವೆಂದು ದಣ್ಣನೆ ದಣುವರೆ ಕಣ್ಣಗೆಟ್ಟರೆ ಬ್ಯಾಡೊ ತನ್ನೊಳರಿಯದೆ 4 ಮುತ್ತಿನಂಥ ಜನುಮ ವ್ಯರ್ಥಗಳಿಯಬ್ಯಾಡ ಪಾದ ಬೆರ್ತು ಮಹಿಪತಿ ಪೂರ್ಣ ಸಾರ್ಥಕ ಮಾಡಿಕೊಳ್ಳೊ ಗುರುತುವರಿತು ನೀ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬರುವ ಸಂದಣಿ ಭಾಳೆ ಭಾಳವೆ ಅಲ್ಲಿ ರಂಭೆ ಊರ್ವಶಿಯರ ಸಮ್ಮೇಳವೆ ಪ. ವರಗಿರಿ ವಾಸನ ಕರೆಯ ಬರುವ ಸೊಬಗು ಧರೆಯ ಮ್ಯಾಲಿಲ್ಲ ಸುಂದರಿಯೆ ರುಕ್ಮಿಣಿಯೆ 1 ಪಾಂಚಾಲಿ ಮೊದಲಾದ ಕೆಂಚೆಯರ ಆಭರಣವುಮಿಂಚಿನಂತೆ ಹೊಳೆಯುತ ಸಿದ್ಧರಾಗಿಹರಮ್ಮ ಚಂಚಲೆಯರು2 ಕಾಲಿಂದಿ ಮೊದಲಾದವರು ಭಾಳ ವಸ್ತಗಳಿಟ್ಟುವೈಯಾರಿಯರು ಒಲಿಯುತ ವ್ಯಾಳಾಶಯನನ ಬಳಿಗೆ 3 ಭದ್ರೆ ಮೊದಲಾದವರು ತಿದ್ದಿ ತಳಪಿಟ್ಟು ಶುದ್ಧ ವಸ್ತಗಳಿಟ್ಟುಸಿದ್ಧರಾಗಿಹರಮ್ಮ ಅನಿರುದ್ದನ ಕರೆಯಲು4 ಮಂದಗಮನೆಯರು ಗಂಧಕಸ್ತೂರಿ ಪುಷ್ಪಅಂದಾಗಿ ಧರಿಸಿ ಆನಂದವಾಗಿಹರಮ್ಮ5 ಕಾಲಂದುಗೆಗೆಜ್ಜಿ ತೋಳಲೆ ತಾಯಿತ ಭಾರಿ ವಸ್ತಗಳಿಟ್ಟು ಲೋಲ್ಯಾಡುತಿಹರಮ್ಮ6 ಅಚ್ಚಮುತ್ತಿನ ವಸ್ತ ಸ್ವಚ್ಚತೋರುವಂತೆ ಬಿಚ್ಚಿ ಚಾದರ ಹೊತ್ತು ಮಚ್ಚನೇತ್ರಿಯರೆಲ್ಲ 7 ಅಂದುಗೆ ಅರಳೆಲೆ ಬಿಂದುಲಿ ಭಾಪುರಿ ಕಂದರಿಗೊಸ್ತಗಳಿಟ್ಟು ಆನಂದವಾಗಿಹರಮ್ಮ8 ಮುತ್ತಿನ ಝಲ್ಲೆ ವಸ್ತಗಳಿಟ್ಟು ಫುಲ್ಲನಾಭನ ಕರೆಯಲು ಎಲ್ಲರೂನಿಂತಾರೆ9 ಶ್ರೇಷ್ಠ ರಾಮೇಶನ ಅಷ್ಷೊಂದು ಕರೆಯಲು ಪಟ್ಟಾವಳಿಗಳನುಟ್ಟು ಧಿಟ್ಟೆಯರು ನಿಂತಾರೆ10
--------------
ಗಲಗಲಿಅವ್ವನವರು
ಬಲು ಚಂದ ಮಹದಾನಂದ ಶ್ರೀಹರಿ ಭಜನೆ ಪ ಬಲು ಚಂದ ಬಲು ಚಂದ ಮಹದಾನಂದ ಜಲಜನಾಭನ ನಾಮ ನಲಿನಲಿದ್ಹೊಗಳ್ವುದು ಅ.ಪ ಬಲಿಯ ಕಾಯ್ದನ ನಾಮ ಬಲು ಚಂದ ಲಲನೆಗೊಲಿದನ ಧ್ಯಾನ ಆನಂದ ಕಲುಷಹರಣ ಕರಿಪಾಲನೆಂದೊದರಲು ಗಳಿಲನೆ ಪರಿಹಾರ ಭವಬಂಧ 1 ಮಾವಮರ್ದನನಾಮ ಬಲು ಚಂದ ಗೋವಳರೊಡೆಯನ ಧ್ಯಾನ ಆನಂದ ಗೋವುಪಾಲನೆಂದು ಭಾವಿಸಿ ಕೂಗಲು ಸಾವು ಹುಟ್ಟು ಇಲ್ಲ ಎಂದೆಂದು 2 ಕಾಮಪಿತನ ನಾಮ ಬಲು ಚಂದ ಕಾಮಿತಾರ್ಥನ ಧ್ಯಾನ ಆನಂದ ಭೂಮಿಗಧಿಕ ನಮ್ಮ ಸ್ವಾಮಿ ಶ್ರೀರಾಮನ ಪಾದ ನೇಮದಿ ನುಡಿಯೆ ಮುಕ್ತಿಪದ ಆನಂದ 3
--------------
ರಾಮದಾಸರು
ಬಲು ತಿಗಡೋ ಇದು ಬಲು ತಿಗಡೋ ಗಲಿಬಿಲಿ ಸಂಸಾರ ತಾರತಿಗಡೋ ಪ ತಿಳಿಯದರು ಎಲ್ಲ ಅಳಿದರೊಳಗೆ ಬಿದ್ದು ತಿಳಿದವರು ಗೆಲಿದರೀಮೊಲೆಮುಡಿಯೊ ಅ.ಪ ಅಲಕುಮಲಕು ಇದು ಬಲುತಂಟೋ ಜರ ಸಿಲುಕಲು ಬೀಳ್ವುದು ಕಗ್ಗಂಟೋ ಸೆಳೆದು ಮಾಯದಿಂ ಒಳಗೆ ಹಾಕಿಕೊಂಡ ಬಳಿಕ ಬಿಚ್ಚದಿದು ಬ್ರಹ್ಮಗಂಟೋ 1 ಎಣಿಕೆಗೆ ಮೀರಿದ ಹಳೆ ಗುದ್ದೋ ಇದು ಘನ ಘನ ಜನರನು ನುಂಗಿದ್ದೋ ಗುಣಿಸಿ ನೋಡದೆ ಮರ್ತು ಹಣಿಕಿಹಾಕಲಿದು ಕುಣಿ ಕುಣಿಸಿ ಕೊಲ್ಲುವ ಮೆಚ್ಚು ಮದ್ದೋ 2 ಆರಿಗೆ ತಿಳಿಯದು ಇದರ್ಹೊಲಬೋ ಜಗ ದ್ಹಾರಿಬಿದ್ದರಪ್ಪ ಸುತ್ತಿ ಮೆಚ್ಚೋ ಧೀರ ಶ್ರೀರಾಮನ ಚಾರುಚರಣಕ್ಕೆ ಸೇರಿದವರಿಗೊಂದೆ ಬಲು ಸುಲಭೋ 3
--------------
ರಾಮದಾಸರು
ಬಲು ಬಲು ಬೆರಗಾದ ಬಲರಾಮನು ನೋಡಿ ಹಲವು ಚಿತ್ರದ ದ್ವಾರ ವೀರ ಪ. ಕುಂದ ಮಂದಾರವು ಸುಂದರ ಉದ್ಯಾನ ಅಂದವಾಗಿ ಬೆಳೆದ ತುಳಸಿಯ ಅಂದವಾಗಿ ಬೆಳೆದ ವೃಂದಾವನ ಚಂದ ತೋರುವುದೊ ಜನಕೆಲ್ಲ1 ಕಾರಂಜಿ ಜ¯ ಹಾರಿವೆ ಗಗನಕ್ಕೆ ನೀರೆ ವರ್ಣಿಸಲು ವಶವಲ್ಲನೀರೆ ವರ್ಣಿಸಲು ವಶವಲ್ಲ ಕಲ್ಪತರು ವೀರ ಪಾಂಡವರ ವನವಿದು2 ಹಸಿರು ಪಚ್ಚದ ಕಲ್ಲು ಕುಸುರಾದ ಗಿಳಿಬೋದ ಎಸೆವೊ ಮಾಣಿಕದ ಚೌಕಟ್ಟುಎಸೆವೊ ಮಾಣಿಕದ ಕಳಸಗಳು ದೆಸೆಗೆಲ್ಲ ಬೆಳಕು ಎಸೆವೋದು 3 ಮೇಲಾದ ದ್ವಾರಕ್ಕೆ ಮ್ಯಾಲೆ ಕನ್ನಡಿಗಳು ಸಾಲು ಕಿಡಕಿಗಳು ಧ್ವಜಗಳುಸಾಲು ಕಿಡಕಿಗಳು ಒಳಗಿದ್ದಬಾಲೆರಿನೆÀ್ನಂಥ ಚಲುವರು 4 ಮುತ್ತು ಮಾಣಿಕ್ಯ ರತ್ನತೆತ್ತಿಸಿದ ಅರಮನೆಗಳುಜತ್ತು ತೋರುವ ಜನಕೆಲ್ಲಜತ್ತು ತೋರುವ ಜನಕೆಲ್ಲ ಒಳಗಿದ್ದಮಿತ್ರೇರಿನ್ನೆಂಥ ಚಲುವರು 5 ಬರಿಯ ಮಾಣಿಕದ ಗೋಡೆ ಸರಿಯಾದ ಕನ್ನಡಿಪರಿಪರಿ ರತ್ನ ಹೊಳವೋವೆಪರಿಪರಿ ರತ್ನ ಹೊಳೆವವು ಒಳಗಿದ್ದದೊರೆಗಳಿನ್ನೆಂಥ ಚಲುವರು6 ವೀರರ ಮನೆ ಮುಂದೆ ಧೀರ ರಾಮೇಶ ಇಳಿದ ನಾರಿಯರ ಸಹಿತ ಹರುಷದಿ ನಾರಿಯರ ಸಹಿತ ಹರುಷದಿ ಹೇಳಲುತೀವ್ರ ಒಬ್ಬಳನ ಕಳಿಸೆಂದ7
--------------
ಗಲಗಲಿಅವ್ವನವರು
ಬಲು ರಮ್ಯವಾಗಿದೆ ಹರಿಯ ಮಂಚ ಪ ಎಲರುಣಿಕುಲ ರಾಜ ರಾಜೇಶ್ವರನ ಮಂಚಅ.ಪ. ಪವನತನಯನ ಮಂಚ ಪಾವನತರ ಮಂಚ ಭುವನತ್ರಯನ ಪೊತ್ತ ಭಾರಿಮಂಚ ಕಿವಿಗಳಿಲ್ಲದ ಮಂಚ ಶ್ರೀನಿಕೇತನ ಮಂಚ ಶಿವರೂಪದಲಿ ಹಿಂದೆ ಹರಿಯನೊಲಿಸಿದ ಮಂಚ 1 ನೀಲಾಂಬರವನುಟ್ಟು ನಳನಳಿಸುವ ಮಂಚ ನಾಲಗೆ ಎರಡುಳ್ಳ ನೈಜಮಂಚ ನಾಲ್ವತ್ತು ಕಲ್ಪದಿ ತಪವ ಮಡಿದ ಮಂಚ ತಾಲ ಮುಸಲ ಹಲವ ಪಿಡಿದಿರುವ ಮಂಚ 2 ರಾಮನನುಜನಾಗಿ ರಣವ ಜಯಿಸಿದ ಮಂಚ ತಾಮಸ ರುದ್ರನನು ಪಡೆದ ಮಂಚ ಭಿಮಾವರಜನೊಳು ಆವೇಶಿಸಿದ ಮಂಚ ಜೀಮೂತ ಮಂಡಲವ ತಡೆಗಟ್ಟಿದ ಮಂಚ 3 ಜೀವನಾಮಕನೆನಿಸಿ ವ್ಯಾಪ್ತನಾದ ಹರಿಯ ಸೇವಿಸಿ ಸುಖಿಸುವ ದಿವ್ಯ ಮಂಚ ಸಾವಿರ ಮುಖದಿಂದ ತುತ್ತಿಸಿ ಹಿಗ್ಗುವ ಮಂಚ ದೇವಕೀಜಠರದಿ ಜನಿಸಿದ ಮಂಚ4 ವಾರುಣೀ ದೇವಿ ವರನೆನಿಸಿದ ಮಂಚ ಸಾರುವ ಭಕುತರ ಸಲಹೊ ಮಂಚ ಕಾರುಣ್ಯನಿಧಿ ಜಗನ್ನಾಥ ವಿಠಲನ ವಿ ಹಾರಕ್ಕೆ ಯೋಗ್ಯವಾದ ವಿಮಲ ಶೇಷ ಮಂಚ5
--------------
ಜಗನ್ನಾಥದಾಸರು
ಬಲುಕಷ್ಟ ಬರಗಾಲ ಬಂದಿತಯ್ಯ ವೈರಿ ಜನಕೆ ಬರಬಾರದಯ್ಯ ಪ ಶಿಶುಗಳಿಗೆ ಹಾಲಿಲ್ಲ ಪಶುಗಳಿಗೆ ಮೇವಿಲ್ಲ ಉಸರಲು ಬಾಯಿಲ್ಲ ವೃದ್ಧ ಜನಕೇ ಅಶನ ವಸನಕ್ಕಾಗಿ ವ್ಯಸನ ಪೂರಿತರಾಗಿ ನಿಶಿ ಹಗಲು ಜನರೆಲ್ಲ ಉಸುರು ಹಾಕುತಲಿಹರು 1 ಧÀವಸಧ್ಯಾನ್ಯದ ಬೆಲೆಯು ದಿವಸ ದಿವಸಕೆ ಮಹಾ ಪ್ರವಾಹದಂದದಿ ವೃಧ್ಧಿಯಾಗುತಲಿಹುದು ಅವಸರಕೆ ಬೇಡಿದರೆ ಲವಣದೊರೆಯದು ಮೇಲೆ ಶಿವಶಿವಾಯೆಂದು ಭವಣಿಯನನುಭವಿಸುವರು 2 ಶಾರೆ ಕಾಳು ಭಿಕ್ಷೆಕೆರೆಯುವದಕೆ ಗತಿಯಿಲ್ಲಾ ಶರಗೊಡ್ಡಿ ಕರೆದರೂ ಕೊಂಡರೊಬ್ಬರುಯಿಲ್ಲಾ ಅರೆಹೊಟ್ಟಿಯುಂಡು ಹರಕು ಬಟ್ಟಯನುಟ್ಟ ಮರಮರನೆ ಮನದೊಳಗೆ ಮರುಗುವರು ಬಡಜನರೂ 3 ಜೋಳನವಣಿ ಸಜ್ಜಿ ಕಾಳಿಗೇರಿದ ಬೆಲೆಗೆ ತಾಳಿ ಮನದಲಿ ವ್ಯಥಿಯ ಕೂಲಿ ಜನರು ಕೂಳಿಗಾಗದು ಎಂದು ಬಾಳುವೆಯ ಗೈಯುವಂಥ ಕೂಲಿವಲ್ಲೆವು ಎನುತ ಗೋಳಿಡುತಲಿಹರು 4 ಕಡಲೆ ಕಾಣದ ಹರಿಯು | ಕಡಲೊಳಡಗಿದ ಮೃಡನು ಸೊಡರೆಣ್ಣೆಸಿಗದೆಂದು ಸುಡುಗಾಡು ಸೇರಿದಾ ಅಡಕಿ ಸಕ್ಕರೆ ಗೋಧಿ ಕೊಡುವ ಬೆಲೆಯನು ಕೇಳಿ ಮಿಡುಕಿ ಮನದೊಳು ಕಣ್ಣ ಬಿಡುತಿಹರು ಸುಮನಸರು 5 ಮಳೆರಾಯ ಮುನಿದುದಕೆ ಹೊಲ ಬೆಳೆಯದಿದ್ದುದಕೆ ಬಳುತಿಹವು ಬಡಜನರ ಕಣ್ಣಿಂದ ನೀರು ಜಲಹರಿಸುವದು ನೋಡಿ ನಲಿದಾಡಿ ನಗುತಿಹಳುಕ್ಷಾಮದೇವಿ 6 ಕ್ಷಾಮದೇವಿಗೆ ತನ್ನ | ಧಾಮಸೇರುವಂತೆ ನೀಡಿ ಮಾಡಿ ಸಾಕು ನಮ್ಮ ಸಕಲ ಜನಕೇ | ಕ್ಷೆಮ ಸೌಖ್ಯವಗರೆದು | ಪ್ರೇಮದಲಿ ಪೊರೆ ಕರವ ನಾ | ಮುಗಿದು ಪ್ರಾರ್ಥಿಸುವೆ ಶಾಮಸುಂದರ ಸ್ವಾಮಿ 7
--------------
ಶಾಮಸುಂದರ ವಿಠಲ