ಒಟ್ಟು 8888 ಕಡೆಗಳಲ್ಲಿ , 133 ದಾಸರು , 4838 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾರಾಯಣ ಕೃಷ್ಣ ಬೆಳಗಾಯಿತೇಳಯ್ಯ ಮೂರು ಲೋಕಂಗಳಿಗೆ ಮಂಗಳವ ಬೀರಯ್ಯ ಪ ಹರಿಹರಿ ಶ್ರೀನಿಲಯ ಪರವಾಸುದೇವ ಅ.ಪ ಬಂದಿರುವರೈ ಬ್ರಹ್ಮ ರುದ್ರೇಂದ್ರರು ತಂದೆ ತಂದಿರುವರೈ ಮಹನಿಧಿ ಕನಡಿ ಧೇನುಗಳ ನಿಂದು ಗಾನವಮಾಡುತಿರುವರಾನಂದದಿ ಗಂಧರ್ವರಪ್ಸರೆಯರಿಂದು ಕುಣಿದಾಡಿ ಕೂಡಿ 1 ದಾಸರೊಡೆ ತುಂಬುರರು ನಾರದರು ಜಯಜಯ ಶ್ರೀಶನೇ ಕೇಶವ ಗಜವರದ ಎಂದು ಆಶ್ರಯಿಸಿ ಚರಣಕ್ಕೆ ಶರಣೆಂದು ಮಣಿಯವರು ದೋಷನಾಶನ ಲೋಕಕಲ್ಯಾಣ ತ್ರಾಣ 2 ಪತಿವ್ರತಾ ಸ್ತ್ರೀಯರುಗಳತಿಶಯ ಮಡಿಯುಟ್ಟು ಹಿತವಾದ ಹುಗ್ಗಿ ಸಜ್ಜಿಗೆಯ ಗೈದು ಪತಿತಪಾವನ ನಿನಗೆ ದಧ್ಯನ್ನ ನೀಡುವರೊ ಕ್ಷಿತಿನಾಥ ನೀನವನು ತೋಷದಿಂ ಭುಜಿಸೊ 3 ರೋಗರುಜಿನಗಳಳಿದು ಆಯುವೃದ್ಧಿಯದಾಗಿ ಭಾಗವತ ಸಕುಟುಂಬ ಸಂತೋಷಗೂಡಿ ಭಾಗವತ ಭಾರತ ರಾಮಾಯಣಗಳ ಹಾಡಿ ಆಗಲೈ ಆಗಮಾರ್ಚನೆ ಆಲಯಗಳೊಳಗೆ 4 ಕಮಲಲೋಚನ ಕೆಟ್ಟ ಸ್ವಪ್ನ ಫಲವಳಿಸಿ ಯಮಕಂಟವಂ ಕಳೆದು ಭ್ರಮೆಗಳನು ನೀಗಿ ಸುಮನಸರ ಕೂಡಿ ಶ್ರೀಹರಿಯ ಗುಣಗಾನ ಮಾಡಿ ಅಮಿತ ಅಮೃತವುಣಿಸೈ 5 ಕ್ಷುಧ್ರಪಾಕೀ-ಚೀನ ಕೊಬ್ಬಿ ಛದ್ರಿಸುತು ಭದ್ರತೆಯನಾಡೊಳಗಸ್ಥಿರತೆಗೈಯುತ್ತ ಆದ್ರಿಅಂಬುಧಿ ಮಧ್ಯೆ ಭಾರತಿಯ ನಲಿಸುತ್ತ ಮುದ್ರೆಯುಂ ಧ್ವಜವನುಂ ನಿನ್ನವಾಗಿರಿಸೈ 6 ಕಾಲಕಾಲಗಳಲ್ಲಿ ಮಳೆಬಿಡದೆ ಸುರಿದು ಶಾಲಿಸಂತರ ಧಾನ್ಯ ಎಲ್ಲೆಲ್ಲು ಬೆಳೆದು ಮಹಿಷಿ ಶ್ರೀಲೋಲ ಕರುಣಿಸೈ ಕನಕವೃಷ್ಟಿಯನು 7 ಎದುರು ನೋಡುತ ನದಿಯು ಹರಿವುದು ಸಾಗರಕೆ ಮುದದಿಂದ ತಾವರೆಯು ಸೂರ್ಯನನ್ನು ವಿಧಿವಶದಿ ಪಾಪಿಗಳು ಯಮಲೋಕವನ್ನು ಸುಧೆಸವಿಯೆ ಭಕ್ತರು ಪರಮಪದವನ್ನು 8 ಮಕ್ಕಳಿಲ್ಲದ ಜನರು ಮಕ್ಕಳನು ಹಡೆದು ಲಕ್ಷ್ಮಿಯೊಲವನು ಹಾಡಿ ಜನರೆಲ್ಲ ದುಡಿದು ಭಕ್ತರಾಗುತ ಸರ್ವ ವಣಿಗೆಗಳು ನಡೆದು ಮುಕ್ತರಪ್ಪಂತೆಲ್ಲರ ಮಾಡು ಜಾಜೀಶ 9
--------------
ಶಾಮಶರ್ಮರು
ನಾರಾಯಣ ನರಸಿಂಹ ಲ- ಕ್ಷ್ಮೀರಮಣನೆ ಪರಬ್ರಹ್ಮ ಪ. ಸಾರಭೋಕ್ತನೆ ಸ್ವತಂತ್ರನೆ ದೋಷವಿ- ದೂರ ಪರಿಪೂರ್ಣಕಾಮ ಅ.ಪ. ಸತ್ವಾದಿಗುಣಾತೀತ ವಿತತ ಸ- ರ್ವೋತ್ತಮ ನಿರುಪಮ ಮಹಿಮ ಪ್ರತ್ಯಗಾತ್ಮ ನಿಗಮಾಗಮವೇದ್ಯ ಸು- ಹೃತ್ತಮ ಮಂಗಲಧಾಮ 1 ವಿಧಿಭವೇಂದ್ರಾದಿ ವಿಬುಧಾಶ್ರಿತಪದ- ಪದುಮ ನೀಲಾಂಬುದಶ್ಯಾಮ ಹೃದಯಾಬ್ಜಮಧ್ಯಸದನ ಸಾಮಜವ- ರದ ಯದುವಂಶಲಲಾಮ 2 ಮಾಯಾತೀತ ಮಹೋನ್ನತ ಸುರಜನ- ಪ್ರಿಯ ದ್ಯೆತ್ಯೇಯನಿರ್ನಾಮ ವಾಯುವಾಹನ ಜನಾರ್ದನ ಲಕ್ಷ್ಮೀನಾ- ರಾಯಣ ತೇ ನಮೋ ನಮಃ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಾರಾಯಣ ನರಹರಿಯೆ ನರ ಜನ್ಮದಿ ಸಿಲುಕಿದೆನು ಮರಳಿ ಜನಿಸದಂದಲೆನ್ನ ಕರುಣಿಸೋ ಕ್ಷೀರವಾರಿಧಿಶಯನ ಪ ಮುರಹರ ಮಧುಸೂಧನ ಶ್ರೀಹರಿ ಧರಣೀಧರ ವರಾಹ ನಾರಾಯಣ ವಟು ವಾಮನ ಕೇಶವ ವಾರಿಜದಳನಯನ 1 ನಂದನಂದನ ಹರಿಯೆ ನಾರದವಂದಿತ ಸುರ ಸಂಹಾರಿ ಮಂದಜಾಯತನಯನ 2 ಅರಿಗದೆ ಶಂಖಾಬ್ಜ ಕರದೊಳು ಮೆರೆವ ಪೀತಾಂಬರ ಧಾರಿ ಕರಿವದನನೆ ಕಾಳಿಂಗಮರ್ಧನ ಸರಸಿರುಹದಳನಯನ 3 ಮುಳುಗಿದೆನು ಎತ್ತು ಕಮಲನಯನ 4 ಬಲ್ಲುದೇ ಕರು ಎತ್ತಿಕೋ ಹರಿಯೇ 5
--------------
ಕವಿ ಪರಮದೇವದಾಸರು
ನಾರಾಯಣ ನಾರಾಯಣ ನಾರಾಯಣ ನಾರಾಯಣ ನಾರಾಯಣ ಲಕ್ಷುಮಿ ಅರಸನೇ ಪ. ನಾರಾಯಣ ಲಕ್ಷುಮಿಅರಸನೆ ಹಯವದನ ಸ್ವಾಮಿ ನೀ ಒಲಿದು ದಯವಾಗು ಅ.ಪ. ಕೊಂಡ ಕ್ರೋಧವೆಂಬ ಕನ್ನಡಿ (ಕೆಂಗಿಡಿ?) ಲೋಭಮೋಹಗಳನುವಾದೊ ಲೋಭಮೋಹಗಳನುವಾದೊ ಹಯವದನ ಸ್ವಾಮಿ ನೀ ಒಲಿದು ದಯವಾಗು 1 ಮನುಗಳ ಕಾಲದಲ್ಲಿ ಜಲದೊಳಗವತರಿಸಿ ಜಗವೇಳು ಧರೆಯ ನೆಗಹಿದೆ ಜಗವೇಳು ಧರೆಯ ನೆಗಹಿದೆ ಹಯವದನ ಮತ್ಸ್ಯವತಾರ ದಯವಾಗು 2 ಕೂರ್ಮಾವತಾರದಲಿ ಭೂಮಿಯ ನೆಗಹಿದೆ ಕೂಡೆ ಸಜ್ಜನರ ಸಲಹಿದೆ ಕೂಡೆ ಸಜ್ಜನರ ಸಲಹಿದೆ ಹಯವದನ ಕೂರ್ಮಾವತಾರ ದಯವಾಗು 3 ದುರುಳ ದಾನವಗಂಜಿ ಕೋರೆದಾಡೆಯಲಿ ನೆಗಹಿದೆ ಕೋರೆದಾಡೆಯಲಿ ನೆಗಹಿದೆ ಹಯವದನ ವರಾಹಾವತಾರ ದಯವಾಗು 4 ಸೊಕ್ಕಿದ ಅಸುರನ ಕರುಳ ಕುಕ್ಕಿ ಮಾಲೆಯ ಮಾಡಿ ಭಕ್ತನಿಗಭಯ ಸಲಿಸಿದೆ ಭಕ್ತನಿಗಭಯ ಸಲಿಸಿದೆ ಹಯವದನ ಅಪ್ಪ ನರಸಿಂಹ ದಯವಾಗು 5 ವಾಮನನಾಗಿ ನೀ ಭೂಮಿದಾನವ ಬೇಡಿ ಭೂಮಿ ಪಾದದಲಿ ಅಳೆದೆಯೊ ಭೂಮಿ ಪಾದದಲಿ ಅಳೆದೆಯೊ ಹಯವದನ ವಾಮನಾವತಾರ ದಯವಾಗು 6 ಹೆತ್ತವಳ ಶಿರ ಕಡಿದು ಕ್ಷತ್ರಿಯಕುಲ ಸವರಿ ಮತ್ತೆ ಕೊಡಲಿಯ ಪಿಡಿದೆಯೊ ಮತ್ತೆ ಕೊಡಲಿಯ ಪಿಡಿದೆಯೊ ಹಯವದನ ಅಪ್ಪ ಭಾರ್ಗವನೆ ದಯವಾಗು 7 ಸೀತೆಗೋಸ್ಕರವಾಗಿ ಸೇತುವೆ ಕಟ್ಟಿಸಿದೆ ಪಾತಕಿ ರಾವಣನ ಮಡುಹಿದೆ ಪಾತಕಿ ರಾವಣನ ಮಡುಹಿದೆ ಹಯವದನ ಖ್ಯಾತ ರಘುನಾಥ ದಯವಾಗು 8 ಕೃಷ್ಣಾವತಾರದಲಿ ದುಷ್ಟಕಂಸನ ಕೊಂದೆ ಹೆತ್ತವಳ ಬಂಧನ ಬಿಡಿಸಿದೆ ಹೆತ್ತವಳ ಬಂಧನ ಬಿಡಿಸಿದೆ ಹಯವದನ ಕೃಷ್ಣಾವತಾರ ದಯವಾಗು 9 ಉತ್ತಮ ಸತಿಯರ ಹೆಚ್ಚಿನ ವ್ರತ ಸವರಿ ಮತ್ತೆ ಹಯವೇರಿ ಮೆರೆದೆಯೊ ಮತ್ತೆ ಹಯವೇರಿ ಮೆರೆದೆಯೊ ಹಯ[ವದನ ಉತ್ತಮ ಬೌದ್ಧ ಕಲ್ಕಿ ದಯವಾಗು] 10 ಅಂಗಜನಯ್ಯನೆ ಮಂಗಳಮಹಿಮನೆ ಗಂಗೆಯ ಪೆತ್ತ ಗರುವನೆ ಗಂಗೆಯ ಪೆತ್ತ ಗರುವನೆ ಹಯವದನ ಮಂಗಳ ಮಹಿಮ ದಯವಾಗು 11 ವಾದಿರಾಜರಿಗೊಲಿದೆ ಸ್ವಾದೆಪುರದಲಿ ನಿಂತೆ ವೇದಾಂತ ಕಥೆಯ ಹರಹಿದೆ ವೇದಾಂತ ಕಥೆಯ ಹರಹಿದೆ ಹಯವದನ ವೇದಮೂರುತಿಯೆ ದಯವಾಗು 12
--------------
ವಾದಿರಾಜ
ನಾರಾಯಣ ನಿನ್ನ ಸ್ಮರಣೆಯಲಿ ಮನ ಬೇರು ವೂರಿರುವಂತೆ ಕಾರುಣ್ಯದಲಿ ಕಾಯೊ ಪ ವೇದನಾಲ್ಕರ ಕದ್ದಂಥಾ ದೈತ್ಯನ ಕೊಲ್ವಾ ಶದಿ ಮತ್ಯಾವತಾರ ಧರಿಸಿದೆ ಹರಿಯೇ 1 ಮಂದರ ಪೊತ್ತೆ ಭಾವಕಿಯಳ ಮೋಹಿಸಿ ಮೋಹಿನಿಯಾದೆ 2 ವರಹರೂಪದಿ ಪೋಗಿ ಧರೆಯನು ಧರಿಸಿದೆ ದುರುಳ ಹಿರಣ್ಯಕನಕರದಿಂದ ಸೀಳಿದೆ 3 ಕಂದನ ನುಡಿಕೇಳಿ ಕಂಬದಿಂದುದಿಸಿದೆ ತಂದೆಯ ಬಗೆದವನಾ ಛಂದದಿ ಸಲಹಿದೆ 4 ಬಲಿಯ ದಾನವ ಬೇಡಿ ನೆಲನ ಈರಡಿ ಮಾಡಿ ತುಳಿದು ಆತನ ಮನೆ ಬಾಗಿಲ ಕಾಯ್ದೆಯೊ 5 ತಾತನ ಮಾತನು ಕೇಳಿ ಮಾತೆಯ ಕೊಂದೆ ಖ್ಯಾತಿಯಿಂದಲಿ ಕ್ಷತ್ರಿಯರನು ಸಂಹರಿಸಿದೆ 6 ಮಾತೆಯ ವರ ಕೇಳಿ ನೀತಿಯಿಂದಲಿ ಪೋದೆ ಸೇತುವೆ ಕಟ್ಟಿ ನೀಖ್ಯಾತರಾವಣನಕೊಂದೆ 7 ಪುಟ್ಟ ಶಿಶುವಾಗಿ ಗೋಪಿಗೆ ಮುದ್ದು ತೋರಿದೆ ಬೊಟ್ಟಿಲಿ ಗಿರಿಯನು ನೆಗಹಿದೆ ಶ್ರೀ ಕೃಷ್ಣಾ 8 ತ್ರಿಪುರರ ಸತಿಯರ ವ್ರತವಗೆಡಿಸುವಂಥಾ ಅಪರಿಮಿತದಿ ಮೋಹಿಸುವಾ ಮೂರ್ತಿಯಾದೆ 9 ಭಕ್ತವತ್ಸಲ ದೇವಾ ಯುಕ್ತಿಯಿಂದಲಿ ಕಾಯ್ವ ವ್ಯಕ್ತಿ ಕಲ್ಕ್ಯಾವತಾರ ಧರಿಸಿದ ಹರಿಯೇ 10 ಶಬ್ದವ ನುಡಿಸುವ ಅಬ್ದಿನಿನ್ನದೊ ದೇವಾ ಶಬ್ದವಾಲಿಸದ ನಿಶ್ಯಬ್ದದೊಳಿರಿಸೆನ್ನಾ 11 ಅಂತರದೊಳಗೆನ್ನಾ ಕಂತುನಾರಾಯಣಾ ಸಂತಸದೊಳು ನಿಜ ಶಾಂತಿ ಪಾಲಿಪ ಗುರು 12
--------------
ಶಾಂತಿಬಾಯಿ
ನಾರಾಯಣ ನಿಮ್ಮ ನಾಮ ನಾಲಿಗೆಲಿರಲಿ ನಾರಾಯಣ ಘೋರಪಾತಕವೆಲ್ಲ ಹಾರಿ ಹೋಗುವುದಯ್ಯ ನಾರಾಯಣ 1 ಸಾರ್ಯವಾಗುವುದು ಶ್ರೀಹರಿಯ ಪುರ ಅವರಿಗೆ ನಾರಾಯಣ ಮಾರಜನಕನÀ ಮೊದಲೆ ಮರೆಯದಿರೊ ಮನವೆ ನಾರಾಯಣ 2 ಎಷ್ಟೆಷ್ಟು ದುರಿತಗಳು ನಷ್ಟವಾಗಿ ಹೋಗುವುವು ನಾರಾಯಣ ಎಷ್ಟು ನಾಮವ ಬಿಡದೆ ನೆನೆಕಂಡ್ಯ ಮನವೆ ನಾರಾಯಣ 3 ಅಂತ್ಯಜಸ್ತ್ರೀ ಕೂಡಿ ಭ್ರಾಂತನಾಗ್ಯಜಮಿಳನು ನಾರಾಯಣ ಕಂತುನಯ್ಯನ ಮರೆತು ಕಾಲವನು ಕಳೆಯಲು ನಾರಾಯಣ 4 ಅಂತ್ಯಕಾಲಕೆ ಹರಿಯ ಸ್ಮರಣೆ ಜಿಹ್ವೆಗೆ ಬರಲು ನಾರಾಯಣ ಲಕ್ಷ್ಮೀ- ಕಾಂತ ಕರುಣಿಸಿ ಅವಗೆ ಕರೆದÀು ಮುಕ್ತಿಯ ಕೊಟ್ಟ ನಾರಾಯಣ5 ಲಕ್ಕುಮೀರಮಣನೆ ಸಕಲಗುಣಪರಿಪೂರ್ಣ ನಾರಾಯಣ ಮುಖ್ಯ ನೀ ಎನ ಮನದಿ ಹೊಕ್ಕರ್ಹೊಗಳುವೆನಯ್ಯ ನಾರಾಯಣ 6 ಘೋರ ವೇದವ ಕದ್ದು ನೀರೊಳಗಡಗಲು ನಾರಾಯಣ ಭೇದಿಸವನಕೊಂದು ವೇದವನು ತಂದಿಟ್ಟ ನಾರಾಯಣ 7 ಶ್ರುತಿಯ ಸುತಗೆ ಕೊಟ್ಟಿ ಸ್ತುತ್ಯನಾಗಜನಿಂದ ನಾರಾಯಣ ಮಚ್ಛರೂಪವ ಧರಿಸಿದಚ್ಯುತಗೆ ಶರಣೆಂಬೆ ನಾರಾಯಣ 8 ದೇವದೈತ್ಯರು ಕೂಡಿ ಸಾಗರವ ಕಡೆಯಲು ನಾರಾಯಣ ವಾಸುಕಿ ಸುತ್ತೆ ನಾರಾಯಣ 9 ಆಗ ಸುರರಸುರರಿಬ್ಭಾಗವಾಗಿ ನಿಂತು ನಾರಾಯಣ ಭಾಳ ತುಚ್ಛದಿ ಬಲಬಿಟ್ಟು ಬಾಯಿಂದೆಳೆಯೆ ನಾರಾಯಣ 10 ವಾಸುಕಿ ಬಿಡಲು ಅಸುರಜನ ಮಡಿದ್ಹೋಗೆ ನಾರಾಯಣ ಕುಸಿದು ಹೋಗಲು ಗಿರಿ ಕೂರ್ಮರೂಪಾದಿ ನಾರಾಯಣ11 ಅಮೃತ ದೈತ್ಯರು ಕೊಂಡೋಡಲು ನಾರಾಯಣ ಸೃಷ್ಟಿ ಆದಿಕರ್ತ ಶ್ರೀ (ಸ್ತ್ರೀ?) ರೂಪವನು ಧರಿಸಿದ ನಾರಾಯಣ 12 ಮುಂಚೆ ಮೋಹವ ಮಾಡಿ ವಂಚಿಸಿ ದೈತ್ಯರನೆ ನಾರಾಯಣ ಹಂಚಿ ಸುರರಿಗೆ ಅಮೃತಪಾನ ಮಾಡಿಸಿದಯ್ಯ ನಾರಾಯಣ 13 ದಿತಿಯ ಸುತನು ಬಂದು ಪೃಥಿವಿಯನೆ ಸುತ್ತೊಯ್ಯೆ ನಾರಾಯಣ ಅತಿಬ್ಯಾಗದಿಂದ ರಸಾತಳ ಭೇದಿಸಿ ನಾರಾಯಣ 14 ಕ್ರೂರ ಹಿರಣ್ಯಾಕ್ಷನ್ನ ಕೋರೆದಾಡೆಲಿ ಸೀಳಿ ನಾರಾಯಣ ವರಾಹ ನಾರಾಯಣ 15 ಬ್ರಹ್ಮನಿಂದ್ವರ ಪಡೆದು ಹಮ್ಮಿಂದ ಕÉೂಬ್ಬ್ಯಸುರ ನಾರಾಯಣ ದುರ್ಮತಿಯಿಂದ್ಹರಿಯ ದೂಷಿಸುತಲಿದ್ದ ನಾರಾಯಣ16 ಮತಿಹೀನ ತನ ಸುತಗೆ ಮತಿಯ ಹಿಡಿಸುವೆನೆಂದ ನಾರಾಯಣ ಪಾರ್ವತೀಪತಿ ನಾಮವನು ಹಿತದಿಂದ ಬರೆಯೆಂದ ನಾರಾಯಣ 17 ಹರಿ ಹರಿ ಹರಿಯೆಂದು ಬರೆಯಾ(ಯಲಾ?) ಬಾಲಕನೋಡಿ ನಾರಾಯಣ ಉರಿಯ ಹೊಗಿಸುವೆನೆಂದ ಉಗ್ರಕೋಪಗಳಿಂದ ನಾರಾಯಣ18 ಮೆಟ್ಟಿ ಸಾಗೀಯಿಂದೆ ಬೆಟ್ಟದಿಂದಲಿ ಕೆಡೆವೆ ನಾರಾಯಣ ಕಟ್ಟಿ ಶರಧಿಯಲ್ಲÁ್ಹಕಿ ವಿಷ್ಣುಭಕ್ತನು ಬರಲು ನಾರಾಯಣ19 ಪ್ರಹ್ಲಾದ ನಿನ್ನೊಡೆಯ ಎಲ್ಹಾನೆ ತೋರೆನಗೆ ನಾರಾಯಣ ಮಲ್ಲಮರ್ದನ ಸ್ವಾಮಿ ಇಲ್ಲದೇ ಸ್ಥಳವುಂಟೆ ನಾರಾಯಣ20 ಪೃಥ್ವಿಪರ್ವತದಲ್ಲಿ ಸಪ್ತದ್ವೀಪಗಳಲ್ಲಿ ನಾರಾಯಣ ಸುತ್ತೇಳು ಸಾಗರದಿ ವ್ಯಾಪ್ತನಾಗ್ಹರಿಯಿರುವ ನಾರಾಯಣ21 ಅಣುರೇಣು ತೃಣದಲ್ಲಿ ಇರುವ ಆಕಾಶದಲಿ ನಾರಾಯಣ ರವಿ ಸೋಮ ತಾರಾಮಂಡಲದಲ್ಲಿ ತಾನಿರುವ ನಾರಾಯಣ 22 ಹದಿನಾಲ್ಕು ಲೋಕದಲಿ ಹರಿ ವಿಶ್ವವ್ಯಾಪಕನು ನಾರಾಯಣ ಸರ್ವದಿಕ್ಕುಗಳಲ್ಲಿ ಸನ್ನಿಹಿತನಾಗಿರುವ ನಾರಾಯಣ 23 ಆರಣಿಯೊಳಗಗ್ನಿಯಂದದಿ ಜನಕೆ ತೋರದಿರೆ ನಾರಾಯಣ ಜನನ ಮರಣಿಲ್ಲ ಜಗಜನ್ಮಾದಿಕಾರಣಗೆ ನಾರಾಯಣ 24 ನೀನರಿಯೆ ನಿನ್ನಲ್ಲೆ ಜೀವರಾಶಿಗಳಲ್ಲೆ ನಾರಾಯಣ ಈ ಜಗತ್ತಿಗೊಬ್ಬ ಇದ್ದಾನೆ ಎನ್ನೊಡೆಯ ನಾರಾಯಣ25 ಮಂದಭಾಗ್ಯನೆಯೆನ್ನ ಮಾತು ನಿಜವೆಂದು ತಿಳಿ ನಾರಾಯಣ ಈ ಸ್ತಂಭದಲ್ಲಿದ್ದಾನೆ ಮಂದರೋದ್ಧರ ಸ್ವಾಮಿ ನಾರಾಯಣ26 ಬಂದು ಭರದಿಂದಸುರ ಕಂಬ ಕಾಲಿಂದೊದೆಯೆ ನಾರಾಯಣ ತುಂಬಿತಾ ಘನಘೋಷದಿಂದ ಘುಡಿಘುಡಿಸುತಲಿ ನಾರಾಯಣ27 ಸಿಡಿಲು ಗರ್ಜಿಸಿದಂತೆ ಖಡಿ ಖಡಿ ಕೋಪದಲಿ ನಾರಾಯಣ ಕಿಡಿಗಳ್ಹಾರುತ ಕಂಬವೊಡೆದು ರೋಷದಿ ಬಂದ ನಾರಾಯಣ 28 ಖಳನ ಸೆಳೆದಪ್ಪಳಿಸಿ ದುರುಳನುದರವ ಬಗೆದÀು ನಾರಾಯಣ ಕರುಳ ವನಮಾಲೆ ತನ ಕೊರಳಲ್ಲಿ ಧರಿಸಿದ ನಾರಾಯಣ29 ತಲ್ಲಣಿಸಿ ಸುರರಾಗ ಮಲ್ಲಿಗೆಮಳೆ ಕರೆಯೆ ನಾರಾಯಣ ಪ್ರಹ್ಲಾದಸಹಿತ ಶ್ರೀದೇವಿ ಮುಂದಕೆ ಬರಲು ನಾರಾಯಣ30 ಕರದಿ ಕಂಗಳ ಮುಚ್ಚಿ ಸಿರಿಯ ತೋಳಿಂದಪ್ಪಿ ನಾರಾಯಣ ತೊಡೆಯನÉೀರಿಸಿ ತನ್ನ ತರುಣಿಗಭಯವನಿಟ್ಟ ನಾರಾಯಣ 31 ಸ್ತೋತ್ರವನು ಮಾಡಲಜ ಬಿಟ್ಟುಗ್ರಕÉೂೀಪವನು ನಾರಾಯಣ ಕೊಟ್ಟ ಪ್ರಹ್ಲಾದ(ಗ್ವ)ರಗಳ ಲಕ್ಷ್ಮೀನರಸಿಂಹ ನಾರಾಯಣ32 ಅಜ್ಞಾನದಿಂದ ತಾ ಯಜ್ಞ ಮಾಡುತಲಿರಲು ನಾರಾಯಣ33 ಅದಿತಿಯಲ್ಲವತರಿಸೆ ಅತಿಬ್ಯಾಗ ಕಶ್ಯಪರು ನಾರಾಯಣ ಸುತಗೆ ಉಪನಯನ ಭಾಳ್ಹಿತದಿಂದ ಮಾಡಲು ನಾರಾಯಣ 34 ಯಜÉೂೀಪವೀತ ಕೈಪು ಕೃಷ್ಣಾಂಜಿನ ಧರಿಸಿ ನಾರಾಯಣ ಶೀಘ್ರದಿಂದ ವಟು ವಾಮನ್ಯಜಶಾಲೆಗೆ ಬರಲು ನಾರಾಯಣ35 ಬಲಿಯ ಯಜ್ಞದಿ ಬಂದು ಭಾಳ ಪೂಜಿತನಾಗಿ ನಾರಾಯಣ ಛಲವಿಟ್ಟು ಮನದೊಳಗೆ ಬಲಿಯ ಯಾಚನೆ ಮಾಡೆ ನಾರಾಯಣ 36 ನಾ ಕೊಡುವೆ ಬೇಡು ಬೇಕಾದಷ್ಟು ಅರ್ಥವನು ನಾರಾಯಣ ಸಾಕಾಗದೇನಯ್ಯ ಸಲ್ಲ ಧನದಾಸ್ಯೆನಗೆ ನಾರಾಯಣ 37 ದೃಢಮನಸಿನಲಿ ಭೂಮಿ ಕೊಡು ಮೂರು ಪಾದವನು ನಾರಾಯಣ ಕೊಡುವೆನೆಂದಾಕ್ಷಣದಿ ಎರಡು ಚರಣವ ತೊಳೆದ ನಾರಾಯಣ38 ಒಂದು ಪಾದದಲಿ ಭೂಮಂಡಲವ ವ್ಯಾಪಿಸಿ ನಾರಾಯಣ ಪಾದ ನಾರಾಯಣ 39 ಕಂಡು ಕಮಲಜನು ಕಮಂಡಲೋದಕ(ದಿ) ತೊಳೆಯ ನಾರಾಯಣ ಉಂಗುಷ್ಠ ನಖದಿ ಉತ್ಪನ್ನಳಾದಳು ಗಂಗೆ ನಾರಾಯಣ40 ರಕ್ಕಸಾಂತಕನು ತ್ರಿವಿಕ್ರಮ ರೂಪಾಗಿ ನಾರಾಯಣ ಆಕ್ರಮಿಸಿಕೊಂಡ ಹದಿನಾಲ್ಕು ಲೋಕವ ಸ್ವಾಮಿ ನಾರಾಯಣ41 ಕೊಟ್ಟ ವಚನವ ತಪ್ಪಿ ಭ್ರಷ್ಟÀನಾಗದೆ ಭೂಮಿ ನಾರಾಯಣ ಕೊಟ್ಟರಿನ್ನೀಪಾದಯಿಟ್ಟು ಬಿಡುವೇನೆಂದ ನಾರಾಯಣ 42 ಕಟ್ಟಿ ಪಾಶದಲಿ ಕಂಗೆಟ್ಟಾಗ ಬಲಿರಾಯ ನಾರಾಯಣ ಕೆಟ್ಟೆನೆನ್ನದಲೆ ಮನಮುಟ್ಟಿ ಸ್ತೋತ್ರವ ಮಾಡೆ ನಾರಾಯಣ43 ದುಷ್ಟಜನ ಮರ್ದಕನು ಸೃಷ್ಟಿಸ್ಥಿತಿಲಯ ಕರ್ತೃ ನಾರಾಯಣ ಸೃಷ್ಟಿಗೊಡೆಯಗೆ ದಾನಕೊಟ್ಟರೆಂಬುವರುಂಟೆ ನಾರಾಯಣ 44 ಬಂಧನ ಬಿಡಿಸಿ ಬಲಿರಾಯಗ್ವರಗ¼
--------------
ಹರಪನಹಳ್ಳಿಭೀಮವ್ವ
ನಾರಾಯಣ ಪರಿಪಾಹಿ-ನರಹರಿಯೆ ಪ ನಿನ್ನೊಳು ನಿರುತನಾನಪರಾಧಿ ನಾರಾಯಣ ಅ.ಪ ಹೇಸಿಕೆಯಿಂದ ಮನಕಾಸುವೀಸಕೆ ಸೋತು ಮೋಸಹೋದೆ ನಿನ್ನ ನೆನೆಯದೆ ಕೇಶವ 1 ನಿರುತ ನಿನ್ನಯ ನಾಮಸ್ಮರಣೆಯ ಬಿಟ್ಟು ಘೋರನರಕಕ್ಕೆ ಗುರಿಯಾದೆ ಪೊರೆಯೊ ನಾರಾಯಣ2 ಮುದದಿಂದ ನಾ ಹದಿಬದೆಯರ ಮುಖನೋಡಿ ಮದದಿಂದ ನಿನ್ನನು ಮರೆದೆನೊ ಮಾಧವಾ3 ಸವನತ್ರಯದಿ ಅವ್ಯವಹಿತ ಕಾರ್ಯವ ಲವಲೇಶ ಬಿಡದೆ ನಾನೆಸಗಿದೆನೋ ಗೋವಿಂದ 4 ಕ್ಷಣ ಬಿಡದಲೆ ದುಷ್ಕರ್ಮದಿಂದಲಿ ದಣಿದು ತೃಣಕೆಣೆಯಾಗಿ ನಿರ್ವಿಣ್ಣನಾದೆ ಹೇವಿಷ್ಣು 5 ಹೃದಯದೊಳಿಲ್ಲದ ಮಧುರ ನುಡಿಗಳ ಮುದದಿ ನುಡಿದೆನೋ ಮಧುಸೂದನನೇ 6 ಅವನಿಯೊಳಗೆ ಎನಗೆಣೆಯಿಲ್ಲವೆನುತ ಅವಗುಣಪ್ರತಿಮೆ ನಾನಾದೆ ತ್ರಿವಿಕ್ರಮ 7 ಅನುದಿನ ನಿಂದಿಸಿ ಯಮನ ಮಂದಿರದಿ ನಾ ನಿಂದೆನೊ ವಾಮನ8 ಬುಧನೆಂದು ಮೆರೆದು ನಾ ಆಧಮರಸೇವಿಸಿ ಅಂಧತಮಕೆ ಗುರಿಯಾದೆನೋ ಶ್ರೀಧರ 9 ವಿಷಯವೆ ಜೀವನದ ಕೃಷಿಯಾಯಿತೆನಗೆ ತೃಷೆಯ ಮೀರದೆ ನಿನ್ನ ಮರೆದೆನೊ ಹೃಷಿಕೇಶನೆ 10 ಉದುಭವಿಸಿದೆ ಈ ವಸುಧೆ ಭಾರಕ್ಕಾಗಿ ಬಾಧಕನಾದೆನೊ ಪದುಮನಾಭನೆ 11 ತಾಮಸಕೃತ್ಯದಿಂದುದರ ಪೋಷಣೆಗಾಗಿ ಪ್ರೇಮದಿ ತಿರುಗಿದೆ ದಾಮೋದರ ದೇವ 12 ಶಂಕೆಯಿಲ್ಲದ ದುರುಳಕಿಂಕರಸೇವೆಯಿಂದ ಸಂಕಟಪಟ್ಟೆನೊ ಸಂಕುರುಷಣ ದೇವ 13 ಕಾಸಿನಾಶೆಗೆ ನಾ ಹೇಸಿಕಿಲ್ಲದೆ ಮನ ಹೇಸದೆ ಯಾಚಿಸಿದೆ ವಾಸುದೇವನೇ 14 ಸದ್ಯಫಲವೆ ಮುಖ್ಯವು ಉದ್ಯೋಗವೆಂದು ಉಬ್ಬಿ ಒದ್ಯಾಡುತಿಹೆ ಪ್ರದ್ಯುಮ್ನದೇವನೆ15 ಸತಿ ಅನುಗಾಲ ಬಂಧು ಎಂದು ಅನವರತ ನಂಬಿದೆನು ಅನಿರುದ್ಧದೇವನೆ 16 ಪರಿಪರಿ ಕ್ರೀಡೆಯಿಂ ಪರಪೀಡಕನಾಗಿ ಪರರನು ಸ್ತುತಿಸಿ ಬೆಳೆದೆ ಪುರುಷೋತ್ತಮ17 ಸಾಧು ಸಜ್ಜನರೊಳು ಭೇದ ವಂಚನೆ ಮಾಡಿ ಅಧೋಕ್ಷಜ ಮೂರ್ತೇ 18 ಬಾರಿಬಾರಿಗೆ ಪರಾನ್ನವನುಂಡು ಘೊರ ದುರಿತಕ್ಕೆ ಗುರಿಯಾದೆ ಶ್ರೀ ನರಸಿಂಹನೇ19 ಕೆಚ್ಚೆದೆಯಿಂದ ನಾನು ಸ್ವೇಚ್ಛೆಯಿಂದಲಿ ಚರಿಸಿ ಹುಚ್ಚು ಹಿಡಿದಂತಾದೆ ಅಚ್ಯುತಮೂರ್ತೇ20 ಮಾನಿಗಳಿಗೆ ಅವಮಾನ ಮಾಡಿ ನಾ ಜ್ಞಾನಿ ಎಂದೆನಿಸಿದೇ ಜನಾರ್ದನನೇ ಕಾಯೊ 21 ಕೋಪತಾಪಗಳಿಂ ಪಾಪಕೃತ್ಯವೆಸಗಿ ತಾಪ ಪಡುತಲಿಪ್ಪೆನಯ್ಯ ಉಪೇಂದ್ರನೆ 22 ಕರಚರಣಗಳಿಂದ ಕಳ್ಳನಾಗಿಹೆನು ತೊರೆದೆನೊ ಹರಿಗುರು ಯಾತ್ರೆಯ ಶ್ರೀಹರೇ 23 ಶಿಷ್ಟರನ್ನೆಲ್ಲ ನಿಕೃಷ್ಟತನದಿ ನೋಡಿ ಭ್ರಷ್ಟನಾಗೀಜಗದಿ ಮೆರೆದೆ ಶ್ರೀಕೃಷ್ಣನೇ 24 ಸಂಕಟಪಡುತಿಹ ಕಿಂಕರನೊಳಿಹ ಮಂಕು ಹರಿಸಿ ಕಾಯೋ ಶ್ರೀ ವೇಂಕಟೇಶನೇ25
--------------
ಉರಗಾದ್ರಿವಾಸವಿಠಲದಾಸರು
ನಾರಾಯಣ ಹರಿಗೋವಿಂದ ನಾರದವರದ ಮುಕ್ಕುಂದಾ ಪ ಸುಜ್ಞಾನಿಗಳಾದವರ ಮಾನಸಾಂತರದಿ ಮಹಿಮೆಯು ತೋರುತ ನಾನಾಪರಿಯಲಿ ನಟನೆಯು ಮಾಡುವಾ 1 ಸುಂದರ ವಿಗ್ರಹ ಸುಜನರ ಪೋಷಕನಂದನಂದನ ವಂದಿತ ಮುನಿಜನಾಮಂದರಧರ ಮಾನದ ಜಗದ್ಭರಿತಾ ಅಮಿತ ಪರಾಕ್ರಮ ಮೂರ್ತಿ ಆಗರ ದ್ವಾರಕ ಹರಿಪುರ ಸ್ಥಳವು ಭಾಗೀರಥಿಪಿತ ಭವ ವಿಮೋಚನ ಕೃಷ್ಣ ನಾಗಶಯನ ಶ್ರೀನಿಲಯನ 2 ಪುಂಡರೀಕಾಕ್ಷ ಶ್ರೀ ಪಾಂಡವ ಪಕ್ಷಕ ಪಂಡಿತ ರಕ್ಷಕ ಪರಮಾತ್ಮನೆ ಹಿಂಡೂ ದೈತ್ಯರ ಕುಲ ಚಂಡಾನೆ ಭೇರಿಸಿ ಭೂಮಂಡಲವನಾ ಳ್ವಂಥ ಮಹಿಮ ಪ್ರಕಾಶ 3 ಅಗಣಿತ ಚರಿತ ಅನಂತನಿನ್ನಾ ಬಗೆಬಗೆಯಿಂದಲಿ ಭಜಿಸುವ ಭಕುತರ ಆಘಗಳ ಖಂಡಿಸುವಾ ಹರಿ 'ಹೊನ್ನವಿಠ್ಠಲ ' 4
--------------
ಹೆನ್ನೆರಂಗದಾಸರು
ನಾರಾಯಣಚ್ಯುತ ವಿಠಲ ಪೊರೆಯ ಬೇಕಿವಳಾ ಪ ಮೂರ್ತಿ | ಪ್ರಾರ್ಥಿಸುವೆ ಹರಿಯೇ ಅ.ಪ. ರೋಗದಿಂ ನರಳಿ ಬಹು | ರಾಘವೇಂದ್ರರ ದಯದೀರೋಗ ವರ್ಜಿತಳಾಗಿ | ರಾಗ ರಹಿತೇ |ಭೋಗಗಳ ತೆರೆದು ವೈರಾಗ್ಯ ಮಾರ್ಗದಿ ತೆರಳೇಭೋಗಿ ಶೈಲೇಶ ಕಥೆ | ಕೇಳಿ ಮುಂಧೋಗೇ 1 ಮಂಗಳಾರತಿ ಕೊಂಡು | ಅಂಗನಾ ಮಣಿತೋರ್ವಮಂಗಳ ಪ್ರದ ಗುರುವ | ಕಂಗಳಲಿ ನೋಡೇಹೆಂಗಳೆಯು ಕಾತುರದಿ | ಭಂಗವಿಲ್ಲದೆ ಸಾಗೆಸಂಗವಾಯ್ತೀರ್ವ ನಿ | ಸ್ಸಂಗಿ ಮಾರ್ಗದರಾ 2 ಭವ | ತೋರಿಗುರುಗಳಲ್ಲಿಅರುಹಿದಳ್ ಮುತ್ತೈದೆ | ವಿಠಲ ಮಂದಿರವಾ 3 ವೃಜಿನ ವ್ಯಾಜ ಕರುಣಾಂಬುಧೆ 4 ಬಾಧೆಗೊಳ ಪಡಿಸದಲೆ | ಕಾದುಕೊ ಇವಳನ್ನಮೋದ ತೀರ್ಥರ ಮತದಿ | ಸಾಧನವ ಗೈಸೀಐದಿಸೆನೆ ಸದ್ಗತಿಯ | ಪ್ರಾರ್ಥನೆಯ ಸಲ್ಲಿಪುದುಮೋದ ಪ್ರಮೋದ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ನಾರಾಯಣತೇ - ನಮೋ ನಮೋ ತಾರಕ ಪದಯುಗ - ನಮೋ ನಮೋ ಪ ಪಾರಾಶರತೇ ನಮೋ ನಮೋ ಗುಣ ವಾರಿಧಿ ಸುಖಮಯ - ನಮೋ ನಮೋ ಅ.ಪ ಇಂದಿರೆ ಮನುಕುಮುದೇಂದು ಪರಾವರ ನಂದಗುಣಾರ್ಣವ ನಮೋ ನಮೋ ಸಿಂಧುಶಯನ ಅರವಿಂದ ಸುನಾಭ ಮಹೇಂದ್ರ ವಿನಾಂತನೆ ನಮೋ ನಮೋ1 ಸುಂದರ ವೀ ಜಗ _ ತಂದೆ ಮಹಾಬಲ ಕುಂದು ವಿದೂರನೆ ನಮೋ ನಮೋ ಮಂದಜ ಭವಮನ ಸ್ಪಂದನ ಕರುಣಿಯೆ ನಮೋ ನಮೋ2 ಸುಂದರ ತಮ ಅರವಿಂದ ಸುಲೋಚನ ಕಂಧರ ಪಾಣಿಯ ನಮೋ ನಮೋ ನಂದನ ಕಂದ ಮುಕುಂದ ಜನಾರ್ಧನ ಛಂದಸು ವೇದ್ಯನೆ ನಮೋ ನಮೋ 3 ನಾಶರಹಿತ ಸ್ವತಂತ್ರಗುಣಾತ್ಮಕ ವಾಸುದೇವತೇ ನಮೋ ನಮೋ ಭೇಶಕಾಂತಿ ಮುಕ್ತೇಶ ಪರಾಮೃತ ವಿಶ್ವಜೂತಿ ಬಲ ನಮೋ ನಮೋ 4 ಶೇಷಶಯನ ವಾರಾಸಿಗೇಹ ಮಾಯೇಶ ಸನಾತನ ನಮೋನಮೋ ಓಸು ಜಾಡಾಜಡ ರಾಸಿ ಬಿಂಬಗುಣ ಭಾಸಕ ನಾಯಕ ನಮೋ ನಮೋ 5 ದೇವ ದೇವ ಜಗ ಪಾವನ ಚರಿತ ವಿಭಾವರಿ ಚರಹರ ನಮೋ ನಮೋ ಜೀವರ ಜೀವ ವಿಭಾವ ಸುನಾಯಕ ಭಾವುಕ ಜನಪ್ರಿಯ ನಮೋ ನಮೋ 6 ಅಂಡಜವಾಹನ ಪುಂಡರೀಕನುತ ಪಾಂಡುರಂಗತೇ ನಮೋ ನಮೋ ತೊಂಡವತ್ಸಲಾಖಂಡ ವಿಜಯ ಕೋದಂಡಪಾಣಿ ತೇ ನಮೋ ನಮೋ 7 ಭವ ಸಂಕಟ ನಾಶಕ ಶಂಕರ ಮಹಿಮನೆ ನಮೋ ನಮೋ ಸುಂಕ ಸುಲಿವ ಬಿರುದಾಂಕಿತ ಕುಟಿಲಾ ಟಂಕರಹಿತ ತೇ ನಮೊ ನಮೋ 8 ಪರಮೇಷ್ಠಿ ಜನಕ “ಶ್ರೀ ಕೃಷ್ಣವಿಠಲ” ವಿಭು ನಮೋ ನಮೋ ಅಷ್ಟಕರ್ತ ಶಿಪಿವಿಷ್ಠಸುನಾಮಕ ಧಿಟ್ಟ ನೃಸಿಂಹನೆ ನಮೋ ನಮೋ 9
--------------
ಕೃಷ್ಣವಿಠಲದಾಸರು
ನಾರಾಯಣನ ನೆನೆ ವರ್ಣಿಸು ಮನ್ನಿಸುಆರಾಧನೆಗಳ ಮಾಡುತ ಪಾಡುತನೀರಾಜನದಿಂದಲರ್ಚಿಸಿ ಮೆಚ್ಚಿಸಿ ವೇದಪಾರಾಯಣಪ್ರಿಯನÀ ಪ. ಅವನ ಶ್ರವಣ ಮನನ ನಿಧಿಧ್ಯಾಸನಶ್ರೀವಿಷ್ಣುವಿನ ಭಕ್ತಿಮಹಾಪ್ರಸಾದಂಗಳುಕೈವಲ್ಯ ಪದಕಿಕ್ಕಿದ ನಿಚ್ಚಣಿಕೆ ಎಂದು ಭಾವಜ್ಞರು ಪೇಳ್ವರೊಜೀವನ ಜವನಬಾಧೆಯ ತಪ್ಪಿಸಿಪಾವನ ವೈಕುಂಠಪುರದೊಳಗೆಂದೆಂದುಆವಾಸವನು ಮಾಡಿ ಸುಖಿಸಬೇಕಾದರೆ ಸೇವಿಸು ವೈಷ್ಣವರ 1 ಲೋಕದಿ ವರಂ ವರಯ ಭದ್ರಂತೆಋತೆ ಕೈವಲ್ಯಮಾತ್ಮನಃಏಕಮೇವೇಶ್ವÀರಸ್ತ ಸಾದ್ಭಗವಾನ್ ವಿಷ್ಣುರವ್ಯಯ ಎಂಬಾಈ ಕಲಿಯುಗದಲಿ ಬೇಕಾದ ಪುರಾಣಾದಿವಾಕುವಿವೇಕವ ಮನದಿ ವಿಚಾರಿಸಿಸ್ವೀಕರಿಸು ವೈಷ್ಣವ ಮತವ ಜೀವ ನಿರಾಕರಿಸನ್ಯಮತವ 2 ದ್ವಾರಾವತಿಯ ಗೋಪಿಚಂದನದಿಂದಶ್ರೀರÀಮಣನ ವರ ನಾಮವ ನೆನೆ-ದೆರಡಾರೂಧ್ರ್ವ ಪುಂಡ್ರಗಳ ಧರಿಸೆಂದೆಂದು ವೀರವೈಷ್ಣವಗುರುವಸೇರಿ ಸಂತಪ್ತ ಸುದರುಶನ ಶಂಖಧಾರಣವನು ಭುಜಯುಗದಲಿ ಮಾಡಿಮುರಾರಿಯ ಮಂತ್ರಗಳವರಿಂದ ಕೇಳುತ ಓರಂತೆ ಜಪಿಸುತ್ತಿರು 3 ಹರಿ ನಿರ್ಮಾಲ್ಯವ ಶಿರದಿ ಧರಿಸುತಿರುಹರಿ ನೈವೇದ್ಯವನೆ ಭುಂಜಿಸುತಿರುಇರುಳು ಹಗಲು ಹರಿಸ್ಮರಣೆಯ ಬಿಡದಿರು ದುರುಳರ ಕೂಡದಿರೊಹರಿಪದ ತೀರ್ಥದ ನೇಮವಬಿಡದಿರುಹರಿಪರದೇವತೆ ಎಂದರುಪುತಲಿರುಗುರುಮುಖದಿಂದ ಸಚ್ಛಾಸ್ತ್ರ ಪುರಾಣವ ನಿರುತದಿ ಕೇಳು 4 ತುಷ್ಟನಹನು ಎಳ್ಳಷ್ಟು ಮುಂದಿಟ್ಟರೆಅಷ್ಟಿಷ್ಟೆನ್ನದೆ ಸಕಲೇಷ್ಟಂಗಳಕೊಟ್ಟುಕಾಯ್ವನು ಶಕ್ರನಿಗೆ ತ್ರಿವಿಷ್ಟಪಪಟ್ಟವ ಕಟ್ಟಿದವದುಷ್ಟರನೊಲ್ಲ ವಿಶಿಷ್ಟರಿಗೊಲಿವ ಅ-ನಿಷ್ಟವ ತರಿದೊಟ್ಟುವ ಜಗಜಟ್ಟಿ ಅರಿಷ್ಟಮುಷ್ಟಿಕಾದ್ಯರÀ ಹುಡಿಗುಟ್ಟಿದ ವಿಠಲ ಬಹು ದಿಟ್ಟ 5 ಕಂದ ಬಾಯೆಂದರೆ ನಂದನಿಗೊಲಿದಿಹಕುಂದುಕೊರತೆ ಬಂದರೆ ನೊಂದುಕೊಳನುಇಂದಿರೆಯರಸ ಮುಕುಂದ ಮುಕುತಿಯ ನಂದನವನೀವ ದೇವಸಂದೇಹವಿಲ್ಲದೆ ಒಂದೆಮನದಿ ಸ-ನಂದನಾದಿಗಳು ಭಜಿಸಲು ಒಲಿವ ಉ-ಪೇಂದ್ರನ ಶುಭಗುಣಸಾಂದ್ರನ ಯದುಕುಲಚಂದ್ರನ ವಂದಿಸಿರೊ 6 ಓಡುವ ಅಡಗುವ ದೇವರೆ ಬಲ್ಲರುಬಾಡುವ ಬೇಡುವ ಮುನಿಗಳೆ ಬಲ್ಲರುನೋಡುವ ಕೂಡುವ ಮುಕುತರೆ ಬಲ್ಲರೊಡನಾಡುವ ರಮೆ ಬಲ್ಲಳುಊಡುವ ಪಾಡುವ ಯಶೋದೆ ಬಲ್ಲಳುಕಾಡುವ ಖಳರ ಮರ್ದಿಸಿ ಹುಡಿಗುಟ್ಟಿದನಾಡೊಳು ಕೇಡುಗಳೆವ [ಕೃಷ್ಣನಿಗೀಡೆಂದಾಡದಿರು] 7 ಆವನ ಪಕ್ಷವದಕೆದುರಿಲ್ಲಆವನ ಕುಕ್ಷಿಯೊಳಕ್ಕು ಜಗತ್ರಯಆವನು ಶಿಕ್ಷಿಪ ರಕ್ಷಿಪನು ಮತ್ತಾವನು ಪಾವನನುಆವನ ಶಿಕ್ಷೆಯ ಮಿಕ್ಕವರಿಲ್ಲ ಕೇ-ಳಾವನುಪೇಕ್ಷೆ ಕುಲಕ್ಷಯವೆನಿಪುದುಆವನುರುಕ್ರಮ ವಿಕ್ರಮನೆನಿಸಿದ ದೇವನಿಗಾವನೆಣೆ 8 ಪತಿ ಆವನ ಚರಣಸೇವಕನಾದಸುರರೊಳಗೀ ಹಯವದನಗಿನ್ನಾರನು ಸರಿಯೆಂದುಸುರುವೆನೊ 9
--------------
ವಾದಿರಾಜ
ನಾರಾಯಣನು ನಾರಿಯಾದನು ನಾರಾಯಣನು ನಾರಿಯಾಗಲು ಉಗರು ಕಾಂತಿ ಪೋಗಿ ಸಾರಸುಂದರವ ತಿರಸ್ಕರಿಸೆ ಶೃಂಗಾರಸ ನಿಧೆ ಪ ಸುರರಸುರ ಕರೆಸಿ ವೈರೆವ ಮರೆಸಿ ಸ್ನೇಹದಿಂದಿರಿಸಿ ಈ ಕುಲ ವರಿಸಿ ನಿಮ್ಮೊಳು ಬೆರಸಿ ಸುಖವಂಕುರಿಸುವಂತೆ ಸಂಚರಿಸೆಂದು ಸರಸದಿಂದಲಾದರಿಸೆ ಸುರರ ಧರಿಸಿ ಬಿಡದುದ್ಧರಿಸುವೆ ನಿದ್ರಿ ತರಿಸಿ ದೈತ್ಯರ ವರಿಸೆಂದು ಸಿರಿ 1 ದಿತಿಜಾದಿತಿ ಜ್ಯಾತ ತತಿಗಳನು ಸ ಅಮೃತ ಬಪ್ಪದಕ್ಕೆ ಹಿತವ ಪೇಳುವೆನೆಂದತಿಶಯದಿಂದ ಚತುರಾತುಮ ಮಾರುತ ಪಿತಾ ಕ್ಷಿತಿಯೊಳು ನೂರು ಶತ ಯೋಜನ ಪರ್ವತ ಮಂದಾರುಂಟು ಜತೆಯಲಿ ಏಕಮತರಾಗಿ ಪೊಲ್ ಜಾತವ ಕಿತ್ತೆತ್ತಿಸಿತಾಬ್ಧಿಯೊಳು ಮಥಿüಸೆಂದು 2 ಹರಿ ನಿರೂಪವÀ ಧರಿಸಿ ಎಲ್ಲರು ಗಿರಿಯ ಬಳಿಗೆ ಹರಿದರಾಗಲೆ ಕಿರಿ ಬೆರಳ ಅಬ್ಬರದಾಟವು ಬೊಬ್ಬಿರುವ ಧ್ವನಿ ಭೀಕರ ಕರಿ ಶರಧಿ ಮಿಕ್ಕ ಗೋತುರ ಸಪ್ತದ್ವೀಪ ತರು ಮೃಗಾದಿ ಜೀವರು ತಲ್ಲಣಿಸೆ ಗಿರಿ ವೆಗ್ಗಳಿಪ ಭರಕಂದು3 ಸುತ್ತ ಈ ಪರಿಯಾಗುತ್ತಿರೆ ಇತ್ತ ಪ ರ್ವತವಲ್ಲಾಡಿಸಿ ಕಿತ್ತಿ ತೆಗೆದೆತ್ತಿ ಹೊತ್ತರಿತ್ತಂಡದಿ ಚಿತ್ತ ಮಾರ್ಗವನು ಹತ್ತಿ ಬರಲು ದೇವತೆಗಳು ಹೊತ್ತರದ್ರಿಮೂಲ ಎತ್ತಲಾರದಲೆ ತತ್ತಳಗೊಂಡು ಮಾರುತ್ತ ಅಡಿಗಡಿ ಎತ್ತಿಡಲರಿದು ದೈತ್ಯರ ವಂಚಿಸಿ ಆ ದಿತ್ಯರಿಗಿರಿಸಿದುತ್ತಮನೊ4 ವನಧಿsಯೊಳದ್ರಿ ದನುಜ ಮರರ ಗುಣವಿಳಹಿ ಸ ರ್ಪನ ತಂದೀಗ ನೇಣನೆ ಮಾಡಿದರು ಸುರರು ಬಾಲನು ದೈತ್ಯಯರು ಹೂಣಿಕೆಲಿ ವಿನಯದಿಂದ ಮಥಿüಸುವಾಗ ವದನದನಿಲಕೆ ಅನಿಮಿಷರು ತಲ್ಲಣಿಸೆ ಹರಿ ತನ್ನನು ನಂಬಿದವರ ಕಾಯಿದ ವಂಚನೆಯಿಂದ5 ಉಭಯ ಜನರು ಗಂಭೀರವಾದ ಕ್ಷೀರಾಂಬುಧಿ ಕಟವ ರಭಸಗೈದು ಕಕುಭದಲಿ ಪ್ರತಿ ಶಬ್ದಪುಟ್ಟಿ ಉ ದುಭವಿಸಿದವು ಶುಭಾ ಶುಭ ಪ್ರಭು ಧನ್ವಂತ್ರಿ ಸುಲುಭ ರಸ ತಾರೆ ವಿಭುದರೊಳಗೆ ಗಲಭೆಯ ಬೀಸಿ ಅ ನಿಬರು ಒಯ್ಯಲು ಋಭುಜಾದ್ಯರು ಅಬುಜಾಪ್ತ ಪೋದನಭವಾಗೆ6 ಹರಿ ತಿಳಿದ ಭಕ್ತರ ಮನೋಕ್ಲೇಶ ಸಿರಿ ಸ್ತುತಿಗಗೋಚರನೆನ್ನಲು ಧರಿಸಿ ಬಂದನು ಮಿರುಗುತಿಪ್ಪ ಸುಂ ದರ ನಾರೀ ರೂಪ ಪರದೈವ ಕುಸುಮ ಪೊಂಗೆಜ್ಜೆಯ ಸರಪಳಿಯ ಮೇಲೊಲಿವ ಕಾಂಚಿದಾಮ ಶರತ್ಕಾಲದ ಚಂದಿರನಂತೆ7 ಸಣ್ಣವನಾರಾ ಮೋಹನ್ನಕರವು ಪಾ ಕೌಸ್ತುಭ ರನ್ನ ವನಮಾಲೆ ಚಿನ್ನದ ಸರ ಶೋಭನ ಕರಡಿಗೆ ಚನ್ನಗೋಡಿ ಸರ ಬಣ್ಣ ಸರ ರನ್ನದಪದಕ ಕನ್ನಡಿ ಮಲಕು ಚನ್ನಪ ನ್ಯಾವಳ ಮುನ್ನೆ ಸರ್ವಹಾರ ಮೂರ್ತಿ 8 ಮುತ್ತಿನ ಚಿಂತಾಕ ಮುತ್ತಿನೋಲೆ ಜಾತ ಮುತ್ತಿನ ಮೂಗುತಿ ಮುತ್ತಿನಕ್ಷತಿಯು ಮುತ್ತಿನ ಸೂಸುಕಾ ಮುತ್ತಿನ ಜಡೆಯು ಮುತ್ತಿನ ಗೊಂಚಲು ಮತ್ತೆ ತೋಳು ಮುತ್ತು ಮೇಲಗೊಪ್ಪು ಕತ್ತಲೆ ಸೋಲಿಪ ಕಸ್ತೂರಿ ತಿಲಕಾ ನೆತ್ತಿಯ ಬೈತಲು ಸುತ್ತ ತಳಪು ಸುರೋತ್ತಮ ಚಂದ್ರಮಾ ನಿತ್ಯಾನಂದ ಪರುಷೋತ್ತಮನು 9 ನೀಲಗೂದಲು ಸುಫಲಾದಿ ಶ್ರವಣ ಭ್ರೂಲಾದಿಕÀವು ಚಂ ಕಪೋಲ ನಾಸಿಕ ತಾಂಬುಲದ ವದನ ನಾಲಿಗೆತಳ ವಿಶಾಲ ಭುಜ ಕಂದರ ಸುಂಡಾಲಾಕಾರವಾದ ತೋಳು ಕರತಳ ಪಾಲು ಬಪ್ಪ ಸ್ತನ ಸ್ಥೂಲೋದರ ನಾಭಿ ಲೀಲಾ ನಡವು ಪಂ ಚಳ ಊರು ಜಾನು ಲೋಲಾಡುತಾ 10 ಹರಡಿ ಕೈಕಟ್ಟು ಬೆರಳುಂಗುರವ ವರ ಕಂಕಣಾದಿ ಸರಿಗೆ ತಾಯಿತ ಸರ ಹುಲೆಯುಗರು ಎಣ್ಣೆ ನೂಲು ತರುಳಹಾರ ಚೌರಿಯಿಂದ ಪರಿಪರಿ ಚಿತ್ರ ಬರೆದ ಕಂಚುಕಾ ಸರಿಸರಿ ಬಂದಾಭರಣ ಧರಿಸಿ ಅರೆ ಶರಗು ಗಹ್ವರದಿ ಮಾಡುತ್ತ ಮರಿಯಾನೆ ಬಪ್ಪ ತೆರದಂತೆ 11 ಗಂಧ ಪಚ್ಚಿಕೊಂಡು ಒಂದು ಕರದೊಳು ಗಂಧ ವಿಳ್ಯವು ಮತ್ತೊಂದು ಕರದೊಳು ಕಂದುಕ ಪುಟಿಸುತ್ತೊಂದೊಂದು ಹೆಜ್ಚೆಯನು ನಿಂದಲ್ಲಿ ನಿಲ್ಲದೆ ಚಂದದಿಂದ ಬಂದಬಂದಂತೆ ಪೂ ಮಂದರಾದಿ ಮುಡಿಯಿಂದ ಉದರಲು ಮಂದಹಾಸದಿಂದ ವೇಗ ನಡೆ ತಂದು ಸಮೀಪದಿ ನಿಂದನು ಖಳರಿಗೊಂಡಿ ಮಾರಿ12 ದುರುಳ ಸಮೂಹ ಪರವಶನಾಗಿ ಬೆರಗಾಗಿ ನಿಲ್ಲೆ ಪರಿ ಏನೆನಲು ಇರದೆ ಪೇಳಲು ಶಿರವದೂಗುತ್ತಾತಾರವೆಂದ ಭರ ಯೌವ್ವನ ಸ್ತ್ರೀ ಪರಪುರಷರ ಸರಿತದಲ್ಲಿಗೆ ಚರಿಸಬಾರದು ಎರಡು ಬಲದವರು ಕರದಿ ಲೋಚನವ ಮುಚ್ಚಿ ಸಾಗಿರೆ ಪಂಙÂ್ತ 13 ಬಡಿಸೂವೆನೆ ಒಡನೆ ತಮ್ಮಯ ಪಡೆ ಸಮ್ಮತ ಸಾಲ್ಹಿಡಿದು ಕುಳ್ಳಿರೆ ನಡುವೆ ಪಿಯೂಷ ಪಿಡಿದು ದುಷ್ಟರ ಕಡಿಗೊಂದು ಬಿಂದು ಬಡಿಸದೆ ದೃಢ ಭಕ್ತರಿಗೆ ಕುಡಿಸುತ್ತಿರಲು ಬಡ ರಾಹು ತಾನು ದುಡುಗಿ ಸುರರಾ ಎಡೆಯೊಳಿರಲು ಕುಡಿತಿಯೊಳು ತಾ ಬಡಿಸಿ ಚಕ್ರವಾ ತುಡುಕಿದ14 ಓರ್ವನ ತರಿದು ಈರ್ವಗೆ ಮಾಡಿದ ಊರ್ವಿಗೆ ಕೆಡಹಿ ಗರ್ವ ಮುರಿದು ಸರ್ವಬಗೆಯಿಂದ ನಿರ್ವಾಹ ಕರ್ತನು ಓರ್ವನಲ್ಲದೆ ಮತ್ತೋರ್ವನಾರೊ ಗೀರ್ವಾಣ ಜನರ ನಿರ್ವಾಧಿಕವೊಹಿಸಿ ಪರ್ವತೆಡೆಯಿದ್ದ ದು ರ್ವಿಷಯಾಬ್ಧಿಗೆ ಚೀರ್ವನಾಗಿದ್ದ ವಿಜಯವಿಠ್ಠಲ ನಿರ್ವಾಣೇಶ15
--------------
ವಿಜಯದಾಸ
ನಾರಾಯಣನೆಂಬ ನಾಮವೇ ಮೂಲಮಂತ್ರಓರಂತೆ ಜಪಿಸುವೆನು ಶ್ರೀಹರಿ ಹರಿ ಪ. ಆರ ಬಿಡುವೆನು ಮತ್ತಾರ ಕೂಡುವೆನುಆರಾರಿಗೊಡಲನೀವೆಆರಂಘ್ರಿಗೆರಗುವೆ ಆರಾರ ಮನ್ನಿಸುವೆಆರಿಂದ ಉದರ ಪೂರ್ತಿ 1 ಆರಿದ್ದರೇನುಫಲ ಆರು ಬಗೆಯನರಿತುಆರುಸಾವಿರವನೋದಿನೂರ ನೀರೊಳಗಿಟ್ಟು ಆರೆಂಟ ನೆನೆದು ಹದಿ-ನಾರನಾದರು ಕೊಟ್ಟನೆ 2 ಇಬ್ಬರೊಳಗೆ ಎನಗೊಬ್ಬನೆ ಸಾಕು ಕಣ್ಗೆಹಬ್ಬವಾವನ ಕಂಡರೆಒಬ್ಬನಿಗೋಸುಗ ಮತ್ತೊಬ್ಬನ ಭಜಿಸುವೆಅಬ್ಜಾಕ್ಷ ಹಯವದನ3
--------------
ವಾದಿರಾಜ
ನಾರಾಯಣಯೆಂಬೊ ನಾಮವನು ನೆನೆದರೆ ಹಾರಿ ಹೋಹುದು ಜನ್ಮಜನ್ಮದ ಪಾಪಗಳು ಮುಕ್ತಿದೋರಿಸು ಮುರಾರಿ ಪ. ಸಕಲವೇದ ಪುರಾಣ ಶಾಸ್ತ್ರಗಳ ತಿಳಿದೋದಿ ಭಕ್ತಿಯಲಿ ತಾಯತಂದೆಯ ಚಿತ್ತವಿಡಿದವರ ಸುಕುಮಾರನೆನಿಸಿಕೊಂಡು ಪ್ರಕೃತಿಯಲಿ ಹೋಮಕ್ಕೋಸ್ಕರ ಸಮಿದೆ ತರಹೋಗಿ ದುಷ್ಕøತ್ಯದ ಫಲದಿಂದ ಅಂತ್ಯಜಳನು ಕಂಡು ಕಾ- ಅರಿತರಿಯದೆ 1 ನಿಲ್ಲು ನಿಲ್ಲೆಲೆ ಕಾಂತೆ ನಿನಗೊಲಿದೆ ನೀನಾರು ಸೊಲ್ಲಿಸೆನ್ನೊಡನೆ ಸತಿಯರ ಕುಲಕೆ ಕಟ್ಟಾಣಿ ಹುಲ್ಲೆನೋಟದ ಭಾವಕಿ ಸಲ್ಲಿಲಿತ ಗಾತ್ರೆ ಸೊಕ್ಕಾನೆ ಮೆಲ್ಲಡಿಯವಳೆ ಮಲ್ಲಿಗೆಗಂಧಿ ಮದನನ ಕೈಯ ಮಸೆದಲಗೆ ಸೆರಗ ಪಿಡಿದ 2 ವಿಪ್ರ ಕೇಳು ನಾವು ಕುಲಹೀನರೆಮ್ಮನೆಯ ಹೊಲಸಿನ ಮಾಂಸ ಗೋವಿನ ಚರ್ಮದ್ಹಾಸಿಕೆಯು ಹಿಂಡು ಬಲು ಘೋರ ಎನಿಸಿಪ್ಪುದು ಬಲೆಗೆ ಸಿಕ್ಕಿದ ಪಕ್ಷಿ ಬೇಂಟೆಯವಗಲ್ಲದೆ ಕುಲವ ಕೂಡುವದೆ ಕಾಮಿನಿ ಕೇಳು ನಿನ್ನೊಡನೆ ಛಲವೊಂದೆ ಎನಗೆ ಎಂದ3 ವ್ಯರ್ಥ ಎನ್ನೊಡನೆ ಮಾತ್ಯಾಕೆಲೊ ವಿಪ್ರ ಚಿತ್ತವೆನ್ನಲ್ಲಿ ಇದ್ದರೆ ಹೋಗಿ ನೀ ಎನ್ನ ನಿನಗೊಲಿವೆನೆಂ[ದಳು] ಅತ್ತ ಕಾಮಿನಿಯ ಒಡಗೂಡಿ ಆಕೆಯ ಪಿತನ ಹತ್ತಿರಕೆ ಹೋಗಿ ಕೇಳಿದರಾತನಿಂತೆಂದ ಇಂಥ ಮೊತ್ತಕೊಳಗಾಗದಿರೊ 4 ಆಗದಾಗದು ಎನ್ನ ಕುಲಬಂಧು ಬಳಗವÀನು ನೀಗಿ ನಿಮ್ಮೊಡನೆ ಕೂಡುವೆನೆಂಬ ಮತವೆನಗೆ ನಾಗಭೂಷಣನ ಪಣೆಗಣ್ಣಿಂದ [ಲುರಿದನ] ಬಾಣತಾಗಿತೆನ್ನೆದೆಯನೆಂದ ಕೂಗಿ ಹೇಳಿದೆ ನಿನ್ನ ಕುಲವಳಿಯದಿರೆಂದು ಹೋಗಿ ಕೂಡೊ ಹೆತ್ತ ತಾಯಿತಂದೆಗಳ ಅದು ಆಗದಿದ್ದರೆ ಆಚೆ ಮನೆಯೊಳಗೆ ನೀವಿಬ್ಬರಲ್ಲಿರಿ ಹೋಗ್ಯೆಂದನು 5 ಹಾಲಂತ ಕುಲವ ನೀರೊಳಗದ್ದಿಪೂರ್ವದ ಶೀಲವನಳಿದು ಸತಿಯೊಡಗೂಡಿ ತಾನು ಚಾಂ- ಡಾಲತಿಗೆ ಹತ್ತುಮಕ್ಕಳ ಪಡೆದು ತಾನವರ ಲೀಲೆಯನು ನೋಡಿ ಹಿಗ್ಗಿ ಆಲಂಬನದಲಿ ಅಜಾಮಿಳನು ಇರುತಿರಲಾಗ ಕಾಲ ಬಂದೊದಗಿ ಕರೆಯಿರೊ ಪಾತಕಿಯನೆಂದು ಯಮನಾಳುಗಳು ಇಳಿದರಾಗ 6 ಎಡೆಗೈಯ ಪಾಶಗಳು ಹಿಡಿದ ಚಮ್ಮಟಿಗಳು ಒಡನೊಡನೆ ಚವುರಿಗಳು ವಜ್ರದ ಮೋತಿಯ [ಕಾಗಡಿ] ಘುಡು‌ಘುಡಿಸುತಲಿ ನಿಂತರು ಕಡುಹಸುಳೆ ಕಂದನಿವನೆಷ್ಟು ಅಂಜುವನೆಂದು ಗಡಗಡನೆ ನಡುಗಿ ಕಂಗೆಟ್ಟು ಅಜಾಮಿಳ ತಾನು ಲಾಲಿಸಿದ ಸ್ವಾಮಿ 7 ಮರಣಕಾಲದಿ ಶ್ರೀಹರಿಯೆಂಬ ನಾಮವನು ಹರಿವುದಾಕ್ಷಣದಲ್ಲಿ ಕರುಣದಿಂದಜಮಿಳನ ಕರೆತನ್ನಿರಿಲ್ಲಿಗೆಂದ ಉರದೊಳೊಪ್ಪುವ ತುಳಸಿದಂಡೆ ಪೀತಾಂ- ಬರವು ಗದೆ ಶಂಖ ಚಕ್ರ ದ್ವಾದಶನಾಮವನು ಧರಿಸಿ ಕರವೆತ್ತಿ ಅಂಜ ಬ್ಯಾಡೆಲೊ ಎಂದು ಹರಿದಾಸರೈ ತಂದರು 8 ಪುಂಡರೀಕಾಕ್ಷನ ಭೃತ್ಯನ ಭಾಧಿಸುವ ಲಂಡರಿವರ್ಯಾರು ನೂಕಿ ನೂಕಿರೊ ಎಂದು ಯಮನ ದಂಡವನು ಮುರಿದು ಬಿಸಾಡಿ ನಿಮ್ಮಸುವ ಹಿಂಡುವೆವು ಎಂದರಾಗ ಕಂಡ ಹರಿದೂತರಿಗೆ ಯಮನಾಳುಗಳೆರಗಿ ಭೂ- ಮಂಡಲದೊಳಗೆ ಎಮ್ಮೊಡೆಯ ಯಮಧರ್ಮನ ಉದ್ದಂಡರಹುದೆಂದರಾಗ 9 ತಂದೆ ಕೇಳೆಮ್ಮ ಬಿನ್ನಪವ ಲಾಲಿಸಿ ನೀವು ಒಂದು ದಿನ ಹರಿಯೆಂಬ ಧ್ಯಾನವನರಿಯನು ನಾವು ಬಂದೆಳೆಯಲಾತ್ಮಜನ ನಾರಗಾ ಎನಲು ಕುಂದಿತೆ ಇವನ ಪಾಪ ಹಂದಿಕುರಿಗಳಿರ ನಿಮಗಿಷ್ಟು ಮಾತುಗಳ್ಯಾಕೆ ನಿಂದಿರದೆ ಹೋಗ್ಯೆಂದು ನೂಕಿ ಯಮನಾಳ್ಗಳನು ತಂದಪೆವು ದಿವ್ಯ ಪುಷ್ಪಕವನೆಂದೆನುತ ಬಂದರಾ ವೈಕುಂಠಕೆ 10 ಎದ್ದು ಅಜಾಮಿಳನು ಮೂರ್ಛೆಯ ತಿಳಿದು ಎಚ್ಚೆತ್ತು ಬಿದ್ದ ಕಾಯವನು ಭಾದಿಸಿದವರ್ಯಾರು ಉ- ಪದ್ರವನು ಬಿಡಿಸಿದ ದಿವ್ಯ ಸ್ವರೂಪ[ದ] ಸುಧಾತ್ಮರಾರು ಎಂದ ಮದ್ಯಪಾನವ ಮಾಳ್ಪ ಹೆಂಗಸಿನ ಒಡನಾಡಿ ಅದ್ದಿದೆ ನೂರೊಂದು ಕುಲವ ನರಕದೊಳೆಂದು ತಾನತಿ ಮರುಗುತ 11 ವಿಪ್ರ ಕುಲದಲ್ಲಿ ಪುಟ್ಟಿ ವೇದಶಾಸ್ತ್ರವನೋದಿ ಮುಪ್ಪಾದ ತಾಯಿ-ತಂದೆಯ ಬಿಟ್ಟು ಬುಧÀ ಜನರು ಮದನ ಬಾಧೆಗೆ ಸಿಲುಕಿ ದುಷ್ಟ ತಾಪವ ಪೊತ್ತೆ ಜನನಿಂದಕನಾದೆ ಅಪ್ರತಿಮ ಅನಂತಪಾತಕಿ ಭುವನದಲಿ ತಪ್ಪಲಿಲ್ಲವೆ ಪಣೆಯ ಬರದ ಬರಹಗಳು ಇನ್ನು ಭಾಪುರೆ ವಿಧಿ ಎಂದನು 12 ಇಷ್ಟು ದಿನ ಹರಿಯೆಂಬೊ ನಾಮವರಿಯೆನು ನಾನು ದುಷ್ಟಯವÀುದೂತರನು ಕಂಡು ಚಂಡಾಲತಿಗೆ ಪುಟ್ಟಿದ ಮಗನ ನಾರಗನೆಂದು ಕರೆದರೆ ಮುಟ್ಟಿದವೆ ನಿಮಗೆ ದೂರು ಇಷ್ಟು ಅವಗುಣಗಳನು ಎಣಿಸಲಿಲ್ಲವೆ ಸ್ವಾಮಿ ಎಷ್ಟು ಕರುಣಾಕರನೊ ಎಂದು ಸ್ನಾನವ ಮಾಡಿ ಬಿಟ್ಟು ತಾಪತ್ರಯವ ಭಯ ನಿವಾರಣ ಹರಿಯ ಗಟ್ಯಾಗಿ ಧ್ಯಾನಿಸಿದನು 13 ತನ್ನ ನಾಮವ ನೆನೆವ ಭಕ್ತರಾದವರೆಲ್ಲ ಧನ್ಯರಿವರಹುದೆಂದು ಜಗವರಿಯಬೇಕೆಂದು ಉನ್ನತವಾದ ಪುಷ್ಪಕವ ತಾ ಕಳುಹಿದ ಪನ್ನಗಾರಿವಾಹನ ಅನ್ಯಾಯ ಇವಗಿಲ್ಲ ಅವನಿಯೊಳಗುತ್ತಮನು ಎನ್ನಯ್ಯ ಏಳೆಂದು ಕೈಲಾಗವÀನು ಕೊಡಲು ಉನ್ನತವಾದ ಪುಷ್ಪಕವೇರಿ ಅಜಮಿಳನು ಹರಿಯ . ಸನ್ನಿಧಿಗೆ ನಡೆದ 14 ಜಲಜನಾಭನ ದಿವ್ಯನಾಮವನು ನೆನೆದರೆ ಕುಲಕೋಟಿ ದೋಷಗಳಿಲ್ಲ ಕುಂದುಗಿಂದುಗಳಿಲ್ಲ ಸಲುವರಲ್ಲೆಂದ ಯಮನು ನಲವಿಂದ ಹೆಳವನಕಟ್ಟೆ ಶ್ರೀ ವೆಂಕಟನ ನೆಲೆಯರಿತು ನೆನೆದವರ್ಗೆಮನ ಭಾದೆಗಳಿಲ್ಲ ಸಾಯುಜ್ಯ ಪದವೀವ ಬಲು ನಂಬಿ ಭಜಿಸಿ ಜನರು 15
--------------
ಹೆಳವನಕಟ್ಟೆ ಗಿರಿಯಮ್ಮ
ನಾರಾಯಣಾ ಹರಿನಾರಾಯಣಾ ಕೃಷ್ಣಾ ನಾರಾಯಣಾ ಸ್ವಾಮಿ ನಾರಾಯಣಾ 1 ಅಚ್ಯುತಾನಂತ ಗೋವಿಂದ ಪರಬ್ರಹ್ಮ ಸಚ್ಚಿದಾನಂದ ಶ್ರೀ ನಾರಾಯಣಾ 2 ಭಕ್ತವತ್ಸಲ ದೇವಾ ಪಂಡವಾಪಕ್ಷಕಾ ಮುಕ್ತಿ ದಾಯಕ ಶ್ರೀ ನಾರಾಯಣಾ 3 ನಂದನಂದನ ಆನಂದ ಶಂಕರ ಪ್ರೀಯಾ ವಂದಿತಾ ಮುನಿಜನರ ನಾರಾಯಣ 4 ಇಂದಿರಾರಮಣ ಮುಕುಂದ ಮುರಹರಿ ಮಂದರಧರ ಹರಿನಾರಾಯಣ 5 ದ್ರೌಪದಿ ರಕ್ಷಕಾ ದಾನವಾ ಶಿಕ್ಷಕಾ ಕವಿಜನ ಪೋಷಕ ನಾರಾಯಣಾ 6 ರಾವಣ ಮರ್ದನಾ ಆಜೀವಲೋಚನಾ ಯದುಕುಲಾಬ್ದಿ ಚಂದ್ರ ನಾರಾಯಣಾ 7 ಅಕ್ರೂರವರದಾ ನಿಜಾನಂದ ಮೂರುತಿ ಚಕ್ರಧರ ಹರಿ ನಾರಾಯಣಾ 8 ಭವ ನಾಯಕ ವಿಷ್ಣು ನಾರಾಯಣಾ 9 ಗಂಗಜನಕ ದೇವೋತ್ತುಂಗ ಮಹಾನುಭಾವ ಶೃಂಗಾರ ಮೂರುತಿ ನಾರಾಯಣಾ 10 ಅಂಬುಜಾದಳ ನೇತ್ರಾ ಅಜಮಿಳಾರಕ್ಷಕ ಪತಿ ನಾರಾಯಣ 11 ಪಕ್ಷಿವಾಹನ ಜಗದೃಕ್ಷಾ ಸುಲಕ್ಷಣಾ ಲಕ್ಷ್ಮೀರಮಣ ಶ್ರೀ ನಾರಾಯಣಾ 12 ಕಮಲಸಂಭವಪಿತಾ ಕರುಣಪಯೋನಿಧಿ ಅಮಿತ ಪರಾಕ್ರಮ ನಾರಾಯಣಾ 13 ಮೂರ್ತಿ ಪೂಜಿತ ಸರ್ವತ್ರಾ ಪೂತನ ಸಂಹಾರ ನಾರಾಯಣಾ 14 ದಿನಕರಾ ಕುಲದೀಪಾ ದೀನ ದಯಾಪರ ಅನಿಮಿತ್ತ ಬಂಧು ದೇವಾ ನಾರಾಯಣಾ 15 ಕಾಲಿಯಾ ಮರ್ದನಾ ಗಂಗಾಧರಾರ್ಚಿತ ಕಲ್ಮಷರಹಿತ ಶ್ರೀನಾರಾಯಣಾ 16 ಪಾಲಿತಾ ಸುರಮುನಿ ಪಾಪವಿನಾಶನಾ ವಾಲಿ ಸಂಹಾರಕಾ ನಾರಾಯಣ 17 ದಶರಥನಂದನ ಧರಣಿರಕ್ಷಕಾ ಲವ ಕುಶಪಿತಾ ಶ್ರೀಹರಿನಾರಾಯಣಾ 18 ವೇದಗೋಚರ ನಿಗಮಾಗಮ ವೇದ್ಯ ಸು- ನಾದ ವಿನೋದ ಶ್ರೀನಾರಾಯಣ 19 ಕೋಟಿದರ್ಪಕ ರೂಪಲಾವಣ್ಯ ಭಕ್ತ ಸಂಕಟ ಪರಿಹಾರ ನಾರಾಯಣಾ 20 ವಾರಿಧಿ ಬಂಧನಾ ವನಚರ ಪಾಲನಾ ವೈಕುಂಠ ಶ್ರೀನಾರಾಯಣಾ 21 ಗಜರಾಜ ವರದಾ ಕಾಮಿತಫಲದಾಯಕಾ ಅಜಭವ ಪೂಜಿತಾ ನಾರಾಯಣಾ 22 ಸಾಧುಜನ ಪ್ರಿಯಾ ಸಾಮಗಾನವೇಣು ನಾದ ಲೋಲ ಕೃಷ್ಣ ನಾರಾಯಣಾ 23 ಯಾದವ ಕುಲದೀಪಾ ಯಶೋದಾನಂದನಾ ಯಜ್ಞರಕ್ಷಕಾ ಹರಿನಾರಾಯಣಾ 24 ಕೇಶವಾ ಮಾಧವಾ ಕೃಷ್ಣ ದಾಮೋದರಾ ವಾಸುದೇವ ಹರಿನಾರಾಯಣ 25 ಸುಂದರ ವಿಗ್ರಹಾಸುಗುಣ ವಿಲಾಸ ಆನಂದ ನಿಲಯಾ ಹರಿನಾರಾಯಣಾ 26 ವ್ಯಾಸಾಂಬರೀಷ ವಾಲ್ಮೀಕ ನಾರದಾ ಪಾರಾಶರ ವಂದಿತ ನಾರಾಯಣ 27 ದೋಷದೂರಾ ನಿರ್ದೋಷಾ ಪರಮಪುರಷ ಪೋಷಿತ ಜಗತ್ರಯ ನಾರಾಯಣಾ 28 ಮಕರಕುಂಡಲಧರಾ ಮಹಿಮಾ ಚರಾಚರಾ ಸಕಲಂತರ್ಯಾಮಿ ನಾರಾಯಣ 29 ಲೋಕನಾಯಕಾ ವಿಲಾಸ ಮೂರುತಿ ತ್ರೀಲೋಕ ವಂದ್ಯ ಹರಿನಾರಾಯಣಾ 30 ವಿಶ್ವವ್ಯಾಪಕಾ ಘನ ವಿಶ್ವರೂಪಾ ಮಹಾ ವಿಶ್ವೇಶ್ವರಾ ಹರಿನಾರಾಯಣಾ 31 ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ದೇವ ಸಕಲ ಕರ್ತ ನೀನೆ ನಾರಾಯಣಾ 32 ಆಪನ್ನ `ಹೆನ್ನೆ ವಿಠ್ಠಲ ' ನಾರಾಯಣಾ 33
--------------
ಹೆನ್ನೆರಂಗದಾಸರು