ಒಟ್ಟು 2545 ಕಡೆಗಳಲ್ಲಿ , 113 ದಾಸರು , 1936 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಲಧಿತಕ್ಕದೊ ನಿನ್ನಳಿಯಗೂ ನಿನಗೂ |ಹಲವು ಬಗೆಯಿಂದಲಿ ಪರೀಕ್ಷಿಯನು ಮಾಡಿದರೆ ಪಮೊದಲೆ ತಿಳದಷ್ಟು ನಿನ್ನ ಮಹತ್ಮಿ ವರ್ಣಿಸುವೆ |ತುದಿಗಂಡು ಬಲ್ಲೆನೇ ಅಧಮ ನಾನೂ ||ಎದುರಿಗಂಬುವದಾಡಿಕೊಂಡ ಬಗೆ ಬ್ಯಾರೆಲ್ಲೀ |ಮುದದಿಂದ ದಯಮಾಡಿ ಕೇಳೊ ರತ್ನಾಕರನೇ 1ನಿನ್ನಿಂದ ಹುಟ್ಟಿಹುದು ವಿಷವು, ಗುರುವಿನ ಪತ್ನಿ |ಯನ್ನು ಸ್ವೀಕರಿಸಿದನು ನಿನ್ನ ಮಗನೂ ||ಘನ್ನತರ ಮಕರಾದಿಗಳು ನಿನ್ನ ಪರಿವಾರ |ಇನ್ನೆಷ್ಟು ಪೇಳಲಿ ಚರಿತ್ರ ಪಾರಾವಾರ 2ನಿನ ಒಡಲಿಗೆಷ್ಟಾದರನ್ನ ಸಾಕೆನಿಸದೂ |ದಣಿದು ಬಂದವರಿಗಾಶ್ರಯವು ಕಾಣೇ ||ಉಣಲಿಕ್ಕೆ ಅನ್ನೆಂಬದೆಂಟನೆ ರಸದಂತೆ |ಘನಖ್ಯಾತಿ ದೂರದಲಿ ಬಳಿಗೆ ಬರಲಿಂತಿಹದು 3ಪ್ರೀತಿಯಂ ಬಂದವರು, ಗ್ರಹಣ ವೈಧೃತಿ ವೇತೀ |ಪಾತದಲಿ ನಿನ ದರುಶನಾಗಬೇಕೂ ||ಭೂತ ಬಡದವರಂತೆ ನಿನ್ನ ಕಲ್ಲುಗಳಿಂದ |ಘಾತಿಸಲಿ ಬೇಕು ನೋಡಲ್ಕೆ ಬಹು ಸೋಜಿಗವು 4ತುಳಿದದಕೆ ಹಿಗ್ಗಿದಿಯೋ ಬಹುಮಾನಿ ನೀನೆಲವೊ |ಲಲನಿ ಹಡದೇಳು ಶಿಶುಗಳ ಕೊಂದಳೂ ||ಬಲುಭಂಟಹಿರಿಯಮಗಗರಸುತನ ಕೊಡಲಿಲ್ಲ |ಇಳಿಯೊಳಗೆ ನೀ ಮಾಡಿದನ್ನ್ಯಾಯಕೆಣಿಯುಂಟೆ 5ಸತಿಸಂಗ ಬಿಡಲೊಲ್ಲಿ ಪರ್ವಕಾಲಗಳಲ್ಲಿ |ಸುತಗೆ ಕಡಿಮೆದರಿಂದೆ ಆದಿ ಹ್ಯಾಗೊ ||ಪತಿವ್ರತಾ ಮಗಳಾದಳೊಂದೆ ಸುಗುಣದರಿಂದೆ |ಕ್ಷಿತಿಯೊಳನವರತ ಪೂಜಿಸಿಕೊಂಬಿ ಜನರಿಂದ 6ಜಾಮಾತನಿಗೆ ಇಹವು ಮುಖವು ಹತ್ತೊಂಬತ್ತು |ಆ ಮಧ್ಯ ಗಜಲಪನದಂತೆ ಒಂದೂ ||ಭೂಮಿಯೊಳಗಾಶ್ಚರ್ಯ ತಾನೆ ಮಕ್ಕಳ ಪಡೆವ |ಈ ಮಗಳು ಬಹುಸುಖವ ಬಡುವಳಿವನಿಂದಲ್ಲಿ 7ಬೆರಳು ಚೀಪುವನೋಡುಸುಳ್ಳಲ್ಲ ದಾನ |ಪುರುಷ ಬದುಕುವ ಚೋರತನದಿ ಜಾರಾ ||ತರುಣಿಯಾಗಿದ್ದ ನಿನ ಬಳಿಯಲ್ಲಿ ನೀ ಬಲ್ಲಿ |ತುರುಗಾಟವ ಕೊಡಲಿ ಕೊಂಡಡವಿಯೊಳಗಿರುವ 8ಗುರುಸ್ವಾಮಿ ಪಿತ ಬ್ರಹ್ಮ ವಂಶದ್ರೋಹಿಗಳವನ |ಪರಿವಾರ ಮಕ್ಕಳಿಗೆ ಮಾವನಾದಾ ||ಉರುಗ ಶಯನಂಡಜಾಧಿಪ ವಹನ ನೀಲಾಂಗ |ಅರಿತನೃಪಋಷಿಗಳೊಳಗೊಬ್ಬರಿಗ್ಯು ಮಗನಲ್ಲ 9ಕುಲಸೂತ್ರವಿಲ್ಲ ಒಂದೇ ರೂಪನಲ್ಲ ನಿ- |ಶ್ಚಲನಲ್ಲ ವತಿ ಕಠಿಣ ವಕ್ರವದನಾ ||ಬಲು ಕೋಪಿ ತಿರದುಂಬ ಸ್ತ್ರೀಯರಿಬ್ಬರ ಕೊಂದ |ಅಲವಜಾರನು, ಬತ್ತಲಿರುವ, ಕಲಹಕೆ ಪ್ರೀಯ 10ಕೊಟ್ಟೆಲ್ಲ ಅವನಿಗೀ ಕನ್ನಿಕಿಯ ಸವತಿಯರು |ಎಷ್ಟೋ ಮಲಸುತರಿಹರದಕೆ ದಶ ಮಡೀ ||ಸಿಟ್ಟಾಗ ಬ್ಯಾಡವನ ವಾರ್ತಿ ಕೇಳಲು ಜನರು |ಬಿಟ್ಟು ಸಂಸಾರವೆಂದಿಂದಿಗೊಲ್ಲದಿಹರೂ 11ನಿನ್ನ ಮಗಳವನಿತ್ತವನ ಮಗಳ ಮದಿವ್ಯಾದಿ |ಕನ್ಯ ವಿಕ್ರಯ ಪರಸ್ಪರವೆನಿಸಿತೂ ||ಇನ್ನೇಸೊ ನಿಮ್ಮ ನಿಮ್ಮಲ್ಲಿದ್ದ ನಡತಿಗಳು |ಅನ್ಯರಿದುಕೇಳಿಭಜಿಸರೊ ಶುದ್ಧ ಭಕುತಿಯಲೀ 12ಏನಾದರೇನು ಶ್ರೀ ಪ್ರಾಣೇಶ ವಿಠಲನಿಗೆ |ನೀನೆಗತಿನಿರ್ದೋಷ ವಸ್ತುವೆಂದೂ ||ಶ್ರೀನಳಿನಭವಮುಖರುನಿತ್ಯವಂದಿಸುತಿಹರೊ |ನೀನವನ ಮಾವನಾದಿನ್ನು ಪೂಜಿತನಲ್ಲೆ 13
--------------
ಪ್ರಾಣೇಶದಾಸರು
ಜಾಲಿಯ ಮರದಂತೆ - ದುರ್ಜನರೆಲ್ಲಜಾಲಿಯ ಮರದಂತೆ ಪ.ಬಿಸಿಲಲಿ ಬಳಲಿ ಬಂದವರಿಗೆ ನೆರಳಿಲ್ಲಹಸಿದು ಬಂದವರಿಗೆ ಹಣ್ಣಿಲ್ಲವೊಕುಸುಮವಾಸನೆಯಿಲ್ಲ ಕುಳ್ಳಿರಲು ಸ್ಥಳವಿಲ್ಲವಿಷಮರ ದುಸ್ಸಂಗ ಪಡೆದರೇನುಂಟು 1ಊರ ಹಂದಿಗೆ ಅಲಂಕಾರವ ಮಾಡಲುನಾರುವ ದುರ್ಗಂಧ ಬಿಡಬಲ್ಲುದೆಸಾರ ತತ್ತ್ವಜಾÕನ ಪಾಪಿಗೆ ಹೇಳಲುಕ್ರೂರಬುದ್ಧಿಯ ಬಿಟ್ಟು ಸಜ್ಜನವಪ್ಪಗೆ ? 2ತನ್ನಿಂದ ಉಪಕಾರ ತೊಟಕಾದರೂ ಇಲ್ಲಬಿನ್ನಣ ಮಾತುಗಳು ಮೊದಲೆ ಇಲ್ಲಪನ್ನಗಶಯನ ಪುರಂದರವಿಠಲನಲ್ಲದೆಅನ್ಯದೈವಂಗಳ ಭಜಿಸದೆ ನರರು 3
--------------
ಪುರಂದರದಾಸರು
ಜೋಗಿ ಪಾರ್ಥ ನೀನಾದೆ ಬಹುಭೋಗಿಕುರುರಾಯರ ಮಾಡಿದ ಹೆಸರೆಲ್ಲನೀಗಿ ಪ.ಚಿತ್ರ ಕುಸುಮೆಯರ ಬೆರದಿಇಂಥ ಉತ್ತಮ ಸತಿಯರ ಅತ್ಯಂತ ಮರೆತಿಸತ್ಯ ವಾಕ್ಯಗಳೆಲ್ಲ ತೊರೆದಿಇದಕೆ ಹತ್ತೂರು ನಗಲು ಕೋಪವೆ ಭರದಿ 1ನೀತಿಯಿಲ್ಲವೊ ನಿನ್ನದೊಂದುದೇವ ಜಾತಿಗೆ ಉತ್ತಮನೆಂದು ಖ್ಯಾತಿಯೊನಿಂದುಕಪೋತನ ತಿಂದವನೆಂದುಒಂದು ಮಾತು ಹೇಳಲು ಅತಿ ಕೋಪವೆ ಬಂದು 2ಅತ್ಯಂತ ನಿಷ್ಕರುಣಿ ನೀನುದೇಹ ಕಿತ್ತು ಕೊಟ್ಟನಾಗ ಶಿಬಿರಾಯ ತಾನುತೃಪ್ತನಾಗÀದಿರೊ ನೀನುಇದಕೆ ಅತ್ಯಂತ ನಕ್ಕ ರಮೇಶ ತಾನು 3
--------------
ಗಲಗಲಿಅವ್ವನವರು
ತಂದೆ ತಾಯಿಮಿತ್ರನೀನೆ ಬಾಂಧವ ನೀನೆ ನಿನ್ನಿಂದ ಬಳಗಿಲ್ಲೆನಗೆ ಇಂದಿರಾಧವನೆ ಕಾಯೊ ಪ.ಹೊಲೆಯ ರಕ್ತದಿ ರೇತ ನಿಲಿಸಿದನೊರ್ವ ಪಿತನೆಲೆಸಿ ಗರ್ಭದೊಳು ರಕ್ಷಿಸಿದೆ ನೀನುಹಲವು ಯೋನಿಯ ತೋರಿ ತೊಳಲಿಸಿ ತುದಿಯಲ್ಲಿನೆಲೆಗೆ ನಿಲ್ಲಿಸುವಂಥ ಸುಲಭ ಜನಕನಲ್ಲೆ 1ನವಮಾಸ ಧರಿಸಿ ಸ್ತನ್ಯವನುಣಲಿತ್ತಳವ್ವೆತವಕದಿ ನಡೆ ನುಡಿಸುವೆಯೊ ನೀನುಆವ ಕಾಲಕಾಲದಲ್ಲಿ ತವಗರ್ಭದಲ್ಲಿ ಪೊತ್ತುಜೀವಕೆ ಚೈತನ್ಯಾಶನವೀವ ತಾಯಿ ನೀನಲ್ಲವೆ 2ಶ್ರೇಯಸನಾದರಿಸುವ ಪ್ರಿಯಸಖರೆಲ್ಲರು ನಿ:ಶ್ರೇಯಸದಿ ಸುಖಮುದದಾಯಕ ನೀನೆಮಾಯಪಾಶ ಬಂಧನದಿ ನೋಯುವರವರ್ಗಾಬಾಧೆಯನಟ್ಟಿ ಕಳೆವ ಚಿನ್ಮಯಮಿತ್ರನೀನಲ್ಲವೆ3ವಿತ್ತವಿರೆ ಸಹೋದರರಿತ್ತ ಬನ್ನಿ ಕೂಡ್ಯೆಂಬರುವಿತ್ತಶೂನ್ಯನಾದರೆ ನೀನುಪೇಕ್ಷಿಸೆ ಅಯ್ಯಒತ್ತಿ ಬಹದುರಿತವಿಪತ್ತುಗಳ ಸವರಿ ಸುಮುಕ್ತಿಯ ಪದವೀವಾನಿಮಿತ್ತ ಬಂಧು ನೀನಲ್ಲವೆ 4ಸಿರಿಯು ಪೋಗೆ ನಿಲ್ಲರು ಶರೀರ ಸಂಬಂಧಿಗಳಾತುರದ ದಾರಿದ್ರ್ಯ ಪಾಪಹರನು ನೀನೆಕರುಣಿ ಪ್ರಸನ್ನ ವೆಂಕಟರಮಣ ನಿನ್ನ ನಾಮಸ್ಮರಣೆ ಎನ್ನ ಜಿಹ್ವೆಗೆ ಮರೆಯದಿರಲಿ ಕಂಡ್ಯ 5
--------------
ಪ್ರಸನ್ನವೆಂಕಟದಾಸರು
ತಪ್ಪುಗಳನೆಲ್ಲ ನೀನೊಪ್ಪಿಕೊಳ್ಳೊ - ನ-|ಮ್ಮಪ್ಪ ಕಾಯಬೇಕುತಿಮ್ಮಪ್ಪನೀನೆಪಸತಿ-ಸುತ ಸಂಸಾರಗಳಿಗೆ |ಮತಿ ಹೀನನಾದೆನು ವ್ಯರ್ಥ ||ಮಿತಿಗಾಣೆನಯ್ಯ ಎನ್ನ ಪಾಪಗಳಿಗೆ |ಗತಿಯದಾವುದು ಪೇಳೊ ಮುಂದೆನಗೆ 1ಬಿಸಿಲು ಬಿರುಮಳೆ ಗಾಳಿಯೊಳಗೆ-ಬಲು-|ದೆಸೆಗೆಟ್ಟು ದೇವ ತಿರುಗಿದೆ ||ಹಸಿವು-ತೃಷೆಗಳು ಬಹು ಬಾಧಿಸಲು |ಹುಸಿಯಾಡಿದೆನಯ್ಯ ಹುಟ್ಟು ಮೊದಲು 2ಸ್ನಾನ-ಸಂಧ್ಯಾವಂದನವರಿಯೆ-ನಾನಾ-|ದಾನ-ಧರ್ಮದ ಗುರುತುಗಳಿಯೆ ||ಹೀನಜನರ ಸಂಗವ ಮರೆಯೆ-ಸು-|ಙ್ಞÕನಿಗಳನು ಬಾಯೆಂದು ಕರೆಯೆ 3ಗಂಗೆ ಅಗ್ರೋದಕಗಳ ತಂದು - ನಾ-|ಮಂಗಳಮಜ್ಜನಮಾಡಲಿಲ್ಲವೆಂದೂ ||ಹೊಂಗೇದಗೆ ಪುಷ್ಪವನೊಂದು ಶ್ರೀ-|ರಂಗಗರ್ಪಿಸಲಿಲ್ಲ ಕಾಯೊ ಬಂದು 4ಪೀತಾಂಬರದಿ ವಸ್ತ್ರಗಳಿಂದ -ದಿವ್ಯ-|ನೂತನವಾದ ಆಭರಣದಿಂದ ||ಪ್ರೀತಿಪಡಿಸಲಿಲ್ಲಾದರದಿಂದ-ಹೇ-|ಸೀತಾಪತೆ ಕೃಷ್ಣ ಹರಿಮುಕುಂದ 5ಗಂಧಾಕ್ಷತೆ ಪುಷ್ಪಗಳಿಂದ -ಬರಿ-|ಒಂದುದಳಶ್ರೀ ತುಳಸಿಯಿಂದ ||ಇಂದಿರೇಶನ ಅರ್ಚಿಸದರಿಂದ -ಬಹು-|ನೊಂದು ದೂರಾದೆ ಸದ್ಗತಿಯಿಂದ 6ಏಕಾರತಿ ದೂಪಾರತಿಯ -ಎಂದು-|ಶ್ರೀಕಾಂತ ನಿನಗೆ ನಾ ಮಾಡಲಿಲ್ಲ ||ವ್ಯಾಕುಲದಲಿ ಹೋಯಿತು ಹೊತ್ತು -ಬಂದು-|ನೀ ಕರುಣಿಸು ಲಕ್ಷ್ಮೀರಮಣ 7ಪಾಯಸ ಪಂಚಭಕ್ಷ್ಯಗಳಿಂದ -ಬಲು-|ಆಯತವಾದ ಶಾಕಗಳಿಂದ ||ತೋಯೆ ಶಾಲ್ಯನ್ನ ಸದ್ಘøತದಿಂದ -ಶ್ರೀ-|ಮಾಯಾಪತಿಗೆ ಅರ್ಪಿಸಲಿಲ್ಲ 8ಮಂಗಳಾರತಿಯ ನಾ ಮಾಡಲಿಲ್ಲ-ಜಯ-|ಮಂಗಳವೆನ್ನುತ ಪಾಡಲಿಲ್ಲ ||ಕಂಗಳ ನೋಟದಿ ನೋಡಲಿಲ್ಲ -ನರ-|ಸಿಂಗನೀ ಬಾಯೆಂದು ಕರೆಯಲಿಲ್ಲ9ಹರಿಯ ಪಾದಕೆ ಬಿದ್ದವನಲ್ಲ -ನರ-|ಹರಿಗೆ ಪ್ರದಕ್ಷಿಣೆ ಮಾಡಲಿಲ್ಲ ||ಹರಿದಿನದುಪವಾಸ ವ್ರತವು ಇಲ್ಲ -ಬಲು-|ಹರಿಯ ದಾಸರ ಸಂಗ ಎನಗಿಲ್ಲ 10ಹೋಮಾರ್ಚನೆ ಔಪಾಸನವೆಲ್ಲ |ನೇಮದಿಂದಲಿ ನಾ ಮಾಡಲಿಲ್ಲ ||ಕಾಮಾತುರನಾಗಿ ಕಂಡಕಂಡ ಕಡೆ |ಸ್ವಾಮಿಯ ಕಾಣದೆ ತಿರುಗಿದೆನೊ 11ಅತಿಥಿಗಳ್ ಬಂದರೆ ಮನೆಗೆ -ಅಂದೆ-|ಗತಿಯಿಲ್ಲವಯ್ಯ ಕೊಡುವುದಕೆ ||ಯತಿಯ ಕಂಡರೆ ನಿಂದಿಸಿದೆ-ಶ್ರೀ-|ರತಿಪತಿ ಪಿತ ನೀ ದಯ ಮಾಡೊ 12ಎಷ್ಟು ಹೇಳಲಿ ಎನ್ನವಗುಣವ -ಅವು-|ಅಷ್ಟು ಇಷ್ಟೆಂದು ಎಣಿಕೆಯಿಲ್ಲ ||ದೃಷ್ಟಿಯಿಂದ ನೋಡಿ ದಯ ಮಾಡೊ -ಶ್ರೀ-|ಬೆಟ್ಟದ ವೆಂಕಟ ಪುರಂದರವಿಠಲ 13
--------------
ಪುರಂದರದಾಸರು
ತುದಿನಾಲಿಗೆ ಬೆಲ್ಲ ಎದೆಗತ್ತರಿಯವರ ಸಂಗಬೇಡಹೃದಯ ದಾಕ್ಷಿಣ್ಯವನರಿಯದ ಮನುಜರ ಪ್ರಸಂಗಬೇಡ ಪ.ಮುಂದೆ ಭಲಾ ಎಂದು ಹಿಂದಾಡಿಕೊಂಬರ ಸಂಗಬೇಡಕುಂದು - ನಿಂದೆಗಳ ಪ್ರಯೋಗ ಮಾಡುವರಪ್ರಸಂಗ ಬೇಡ 1ಆಡಿ ಅಳುಕದ ಅಜಾÕನಿ ಮನುಜರ ಸಂಗಬೇಡಕೂಡಿ ಕುಮಂತ್ರವ ಎಣಿಸುವ ನರರ ಪ್ರಸಂಗ ಬೇಡ 2ವಿನಯ - ವಿವೇಕವಿಲ್ಲದ ವಿದ್ವಾಂಸರ ಸಂಗಬೇಡತನಗಲ್ಲದಬಂಟ- ನಂಟ - ಮಿತ್ರಾಂಗಳ ಸಂಗಬೇಡ3ತಮ್ಮ ಕಾರ್ಯಕ್ಕಾಗಿ ಪರರ ಕೆಡಿಸುವರ ಸಂಗ ಬೇಡನಮ್ಮ ಪುರಂದರವಿಠಲನಿರಲನ್ಯ ಪ್ರಸಂಗ ಬೇಡ 4
--------------
ಪುರಂದರದಾಸರು
ದಮ್ಮಯ್ಯ ಸೆರಗ ಬಿಡೊ | ಶ್ರೀಕೃಷ್ಣಯ್ಯ | ಕರಮುಗಿವೆ |ಸಮ್ಮತವಲ್ಲಿದು ನಿನಗೆ | ನಿನ್ನಮ್ಮನೊಳ್ ಪೇಳುವೆ ಹೀಗೆ ||ಧರ್ಮವೆ ಪತಿವ್ರತ ಕರ್ಮಕೆ ಎನ್ನಯ |ಅಮ್ಮನು ಕೇಳಿದರ್ ಸುಮ್ಮನೆ ಇರುವಳೆ 1ಸುಮನಸರು | ತೋಷಿಪರೆ |ನಿನ್ನ ರಮಣಿಯು ತಾನ್ ಕೋಪಿಸಳೇ ||ಸಮವೆಂದೂ ಪೇಳುವನೇ | ಎನ್ನ ರಮಣನಿದ ತಾಳುವನೇ |ಭ್ರಮಿತ ಕೋಪದಿ ಎನ್ನ | ಯಮನೆಡೆಗಟ್ಟನೇ |ಸಮಯವಲ್ಲಿದು ಕೇಳ್ | ಕಮಲದಳಾಕ್ಷನೆ 2ಇಂದೆನ್ನ ಕುಲವೆರಡೂ |ತಾವ್ ಹೊಂದದೆ ದುರ್ಗತಿ ಜರದೂ |ನಿಂದೆಗೆ ನಾ ಗುರಿಯಾಗಿ |ಯಮಬಂಧಕೇ ಸಿಲುಕೆನೆ ಪೋಗಿ |ಇಂದೆನ್ನಯ ವ್ರತ ಕುಂದದ ತೆರದಲೀಚಂದದಿ ಪೊgÉ UÉೂೀವಿಂದದಾಸನ ಪ್ರಿಯಾ3
--------------
ಗೋವಿಂದದಾಸ
ದಾಟು ಭವಾಟವಿಯನ್ನು ಮನುಜ ನೀದಾಟು ಭವಾಟವಿಯನ್ನುಕೈಟಭಾಂತಕನಾಮಪಾತಕರೊಡಗೂಡಿನೀಟಾಗದಂದದ ಪಾಟಿಯ ಕೇಳಿನ್ನು ಪ.ಹೆಣ್ಣೆಂಬ ಹೆದ್ದೋಳ ತಿರುಗುತಿವೆ ಬಲುಪುಣ್ಯಮಾರ್ಗವ ನಡಿಗುಡವುಬಣ್ಣ ಬಣ್ಣದ ಮೃತ್ಯುಗಳೆಂಬ ಹೆಬ್ಬುಲಿಕಣ್ಣಲಿ ಕಂಡರೆ ಬಿಡವುಸಣ್ಣಮಕ್ಕಳು ನೆಂಟರಿಷ್ಟ ನರಿಗಳರ್ಥಪೆಣ್ಣಿನ ನಾತಕೆ ಓಡ್ಯಾಡುವುವುಹಣ್ಣುಕಾಯಿಗಳೆಲ್ಲ ವಿಷಮಯವಾಗಿಹ ಅರಣ್ಯದ ಖಳರೆಂಬ ಗಿಡವು 1ಆರಿಂದ್ರಿಯ ಕಳ್ಳರೆಂಬ ಕಾಮವೆಂಬಚೋರನಾಯಕನುಪಟಳವುಭೂರಿಕಾಲದ ಧರ್ಮವೆಂಬ ದ್ರವ್ಯವೆಲ್ಲಸೂರ್ಯಾಡಿಸುಲಕೊಂಬ ಹಯವುಮೂರು ಬಗೆಯಿಂದ ಸುಡುತ ಕಂಗೆಡಿಸುವದಾರುಣತರ ದಾವಾನಳವುಚೀರುವ ನಿಂದಕ ಝಲ್ಲಿಕದುಶಾಸ್ತ್ರ ನಿಸ್ಸಾರ ಘೂಕಗಳ ರವವು 2ಅಡ್ಡಡ್ಡ ಬಂದು ಅಜ್ಞಾನ ಕಾಳೋರಗವೆಡ್ಡುಗೊಳಿಸಿ ಕಚ್ಚುತಿವೆದೊಡ್ಡೆಂಟು ಮದವೆಂಬೊ ಮದ್ದಾನೆ ಎದೆಯೆಂಬಗುಡ್ಡದೊಳಗೆ ಸುತ್ತುತಿವೆಹೆಡ್ಡನೆಂದು ಚುನ್ನವಾಡಿ ಮನೋಬುದ್ಧಿಗಡ್ಡದ ಕಪಿ ಕಾಡುತಿವೆ 3ಜನ್ಮಮರಣ ಹಸುತೃಷೆಜರಾವ್ಯಾಧಿಯೆಂಬುಮ್ಮಳಿಕೆಯ ಪೊರೆಯುಂಟುಹಮ್ಮುಮಮತೆ ಎಂಬ ತಲೆಹೊರೆ ಭಾರಾಗಿಒಮ್ಮೆಗಿಳಿಯಲಿಲ್ಲ ಗಂಟುಸ್ವರ್ಮಂದಿರವೆ ಹೆಬ್ಬೆಟ್ಟನಾಯಕನರ್ಕಕಮ್ಮರಿಗಳು ಇಪ್ಪತ್ತೆಂಟುಸನ್ಮಾನ ರಾಗಭೋಗಗಳೆಂಬ ಬಯಲಾಸೆಯ ಮೃಗತೃಷ್ಣೆಯ ನಂಟು 4ಅಲ್ಲಿಗಲ್ಲಿಗೆ ಸುಖದು:ಖನೆಳಲುಬಿಸಲಲ್ಲಿಗಲ್ಲಿಗೆ ಪ್ರಿಯತರುವುಬಲ್ಲಿದರಿಂದಾಹ ಭಯದಂತೆ ಸೂಚಿಪಕಲ್ಲುಕೊಳ್ಳಗಳ ನಿರ್ಝರವುಕೊಲ್ವಾರಿನೃಪದೂತರೆಂಬ ಸೂಕರಮೋಹÀಹಲ್ಲೊಳಗಘಕೂಪದಿರವುಕ್ಷುಲ್ಲಕ ಪಿಸುಣರೆಂಬುವ ಋಕ್ಷಬಿಡಾಲಹೊಲ್ಲನಖಿಗಳ ಸಂಚರವು 5ಈಷಣತ್ರಯಯಂತ್ರ ಏಳು ಪ್ರಾಕಾರದಿದ್ವೇಷಿಗಳಿದ್ದ ದುರ್ಗಗಳುದೂಷಣ ಸ್ತುತಿ ಎಂಬ ಕಾಕಪಿಕೋಕ್ತಿ ಪ್ರದೋಷದ ಮಳೆ ಮಂಜುಗಳುನೈಷಧನುಂಡು ಕೊಬ್ಬಿದ ಇಂದ್ರಿಯಗೋಳಕಮೂಷಕಗಳಿಹ ಬಿಲಗಳುದೋಷ ದುರ್ವಾರ್ತೆ ದುರಿತವೆಂಬ ಕ್ರವ್ಯಾದಘೋಷಣ ಭಯಂಕರಗಳು 6ಈ ರೀತಿಕಾಂತಾರದಾಟುವ ಧೀರಗೆಮಾರುತಿ ಮತ ಪಕ್ಷ ಬೇಕುನಾರಾಯಣನೆ ಸರ್ವೋತ್ತಮನೆಂದೆಂಬತೋರ ಗಧಾಯುಧ ಬೇಕುಘೋರಾದ್ವೈತ ಕಕ್ಷವ ಛೇದಿಸುವ ಸುಕುಠಾರ ತತ್ವಗಳಿರಬೇಕುಸಾರಜÕಜನಪ್ರಭು ಪ್ರಸನ್ವೆಂಕಟಕೃಷ್ಣನಾರಸಿಂಹನಸ್ಮøತಿಬೇಕು7
--------------
ಪ್ರಸನ್ನವೆಂಕಟದಾಸರು
ದಾತೆಇಂದಿರೆಪಾರಿ| ಜಾತ ಮಂದಿರೆ ಲೋಕ |ನಾಥೆ ಸುಖ ಪೂರ್ಣೆ ವಿಖ್ಯಾತೆ ||ಬಿನ್ನವಿಸುವೆನೆ ಯನ್ನಮಾತು ಮನ್ನಿಪುದೇ ವಿಧಿಮಾತೆ ಪಪಾನೀಯಧಿ ಹರಿಗೆ | ಏನು ಕೊಟ್ಟನೊ ನಿನ್ನ |ಕಾಣಿಸವೆ ಕಣ್ಣು ಕುಲವಿಲ್ಲ ||ಗೋತ್ರವಿಲ್ಲ ಹೆತ್ತವರ-ಕ್ಷೋಣಿಯೊಳಗೊಬ್ಬರರಿತಿಲ್ಲ1ಏನು ಮರುಳಾದೆವ್ವ | ಶ್ರೀನಾರಿಯಿಂಥವಗೆ |ಹೀನಳುಚ್ಛಿಷ್ಟ ಫಲಮೆದ್ದ ||ಬಡ ಬ್ರಾಹ್ಮಣೊದ್ದರೆಮಾನವೇ ಇಲ್ಲಿ ನಗುತಿದ್ದ2ಥವ ಚೋರ ಬಹುಜಾರ| ಸವತಿಯರು ಬಲು ಮಂದಿ |ಅವರಿಗಾತ್ಮಜರು ಹತ್ತತ್ತು ||ನಿನ್ನೊಗತನದೊಳಿದ್ದಅವಿವೇಕ ಮೂಲೋಕಕೆ ಗುರುತು3ಅತ್ತೆ ಮಾವಗಳಿಲ್ಲ |ವೃತ್ತಿಕ್ಷೇತ್ರಗಳಿಲ್ಲ |ಹಸಿದರನ್ನಿಲ್ಲ ಮನೆಯಲ್ಲಿ ||ಈ ಗಂಡನೊಡನೆಯೇ-ನರ್ಥಿ ಪಡುತಿಹೆಯೆ ನೀ ಬಲ್ಲೆ 4ಸೇರಿದನುಪತಿನಿನ್ನ | ತೌರು ಮನೆ ನೋಡಲ್ಕೆ |ಧಾರಿಣಿಯೊಳಗೆ ಬಹು ನಿಂದಾ ||ಭಕ್ತಿಯಿಂದವನ ಹ್ಯಾ-ಗಾರಾಧಿಸುವದೋ ಸುರವೃಂದಾ 5ಶಿಶು ಹಿಂಸಕತಿ ಕಠಿಣ | ಹಸನ್ಮುಖನಲ್ಲರ್ಭಕ ಹೆಂ- |ಗಸರಳಿದ ಪುಕ್ಕಾ ಬಹು ಠಕ್ಕಾ ||ಕಲಹಗಂಟೇನು ಸೇ-ವಿಸಿದ್ಯೊ ವ್ರತಗಳನು ಇವ ಸಿಕ್ಕಾ6ಎಲ್ಲೆಲ್ಲಿ ನೋಡಿದರು | ಇಲ್ಲಿ ಪ್ರಾಣೇಶ ವಿ- |ಠಲನಂಥವರೂ ಏನೆಂಬೆ ||ಮುದದಿಂದ ಬಿಡದೆ ಅವ-ನಲ್ಲಿ ಪೊಂದಿರ್ಪೆ ಜಗದಂಬೆ 7
--------------
ಪ್ರಾಣೇಶದಾಸರು
ದಾಸ ಶೇಷಾದ್ರಿಯ ವಾಸ ತಿಮ್ಮಪ್ಪನ |ದಾಸನನು ಕರೆದೊಯ್ದು ||ಸಾಸಿರನಾಮ ವಿಲಾಸನ ಮೂರ್ತಿಯ |ಲೇಸಾಗಿ ತೋರೆನಗೆ ಪಬೆರಳು ಇಲ್ಲದ ಕೈಯೊಳುಂಡು ಜೀವಿಸುವನ |ಶಿರದ ಅಂದದ ದೇವನ ||ಉರುವ ಶಾಪಕೆ ತಾನು ಕಿರಿದಾಗಿ ಇರುವನ |ಶಿರದೊಳು ಧರಿಸಿದನ ||ಕೊರಳ ಮಾಲೆಯ ಪೆಸರೊಪ್ಪಿದ ಗಿರಿಯೊಳು |ಸ್ಥಿರವಾಗಿ ನೆಲಸಿಪ್ಪನ ||ಕರುಣವಾರಿಧಿ ವೆಂಕಟೇಶನ ಚರಣವ |ಕರೆದೊಯ್ದು ತೋರೆನಗೆ 1ವಾರಿಯೊಳುದಿಸಿದ ನಾರಿಯ ಮಧ್ಯದಿ |ಏರಿಯೆ ಕುಳಿತವನ ||ವಾರಿಜವದನದಿ ತೋರಿದ ಸಾರದಿ |ಮೂರೊಂದು ಪೆಸರವನ ||ಮೇರುವಿನಗ್ರದಿ ಊರಿದ ಚರಣವ |ಸಾರಿದವರ ಜೀವನ ||ಊರಿಗೆ ಕರೆದೊಯ್ದು ಶ್ರೀ ವೆಂಕಟೇಶ ಪ-||ದಾರವಿಂದವ ತೋರೆನಗೆ 2ಸೋತ ಮಾನಿನಿಯೊಳು ಜಾತವಾಗಿಯೆ ಮೇಲೆ |ಮಾತೆಯ ಸಲಹಿದನ ||ನೀತಿ ತಪ್ಪಿಯೆ ನಡೆವ ವಾತಭಕ್ಷಕರನ್ನು |ಘಾತಿಸಿ ತರಿದವನ ||ನೂತನವಾಗಿಹ ನಾಮ ಶೈಲದ ಮೇಲೆ |ಕಾತರದೊಳು ನಿಂದನ ||ಪಾತಕನಾಶನ ಶ್ರೀವೆಂಕಟೇಶನ |ರೀತಿಯ ತೋರೆನಗೆ 3ಋಷಿಯ ಮಕ್ಕಳನೆಲ್ಲ ಹಸಿವಿಗೆ ಗುರಿಮಾಡಿ |ವಶತಪ್ಪಿ ನಡೆವವನ ||ಬಸಿರೊಳಗುದಿಸಿಯೆ ಬಿಸಿಯನೆಲ್ಲವ ಅಂದು |ಎಸೆವ ಮಹಾವೀರನ ||ಪೆಸರೊಳಗೊಪ್ಪಿದ ಹಸನಾದ ಗಿರಿಯೊಳು |ಕುಶಲದಿ ನಿಂದವನ ||ನಸುಮುದ್ದು ಶ್ರೀ ವೆಂಕಟೇಶನ ಚರಣದ |ಬಿಸರುಹ ತೋರೆನಗೆ 4ಪಾದನಾಲ್ಕನು ಮೋದಿನಿಯೊಳಗೂರಿಯೆ |ಆದರಿಸುತ ಬಪ್ಪನ ಮೇ ||ಲಾದ ಪಾದವ ನಾಲ್ಕು ಅಂತರಿಕ್ಷದ ಮೇಲೆ |ಕಾದು ಕೊಳ್ಳುತಲಿಪ್ಪನ ||ಆದಿಯ ನಾಮಕ್ಕೆ ಅದ್ರಿಯನೊಡಗೊಂಡು |ಹಾದಿಯನಿತ್ತವನ ||ಸಾಧಿಸಿ ಇಂತಹ ಶ್ರೀ ವೆಂಕಟೇಶನ |ಪಾದವ ತೋರೆನಗೆ 5ಆದಿನಾರಾಯಣನೆಂಬ ಪರ್ವತನು |ಭೇದಿಸಿ ನಿಂತವನ ||ಸಾಧಿಸಿ ಮುಂದಣ ವೆಂಕಟಾದ್ರಿಯ ಮೇಲೆ |ಪಾದವನೂರಿದನ ||ಮೇದಿನಿಯೊಳಗುಳ್ಳ ಸಾಧುಭಕ್ತರನೆಲ್ಲ |ಕಾದುಕೊಳ್ಳುತಲಿಪ್ಪನ - ವಿ ||ನೋದ ಮೂರುತಿಯಾದ ಶ್ರೀ ವೆಂಕಟೇಶನ |ಪಾದವ ತೋರೆನಗೆ 6ಅತ್ತೆಯ ವರಿಸೆಯೆ ಮೆತ್ತ ಅಳಿಯಗಾದ |ಪುತ್ರಿಯ ತಂದವನ ||ಉತ್ತಮವಾಗಿಹ ಮಗಳ ಸನ್ನಿಧಿಯಲ್ಲಿ |ನಿತ್ಯದೊಳಿರುತಿಪ್ಪನ ||ಬತ್ತಲೆಯಾಗಿಹ ಸತಿಯಳ ಸತ್ಯಕ್ಕೆ |ಪುತ್ರನೆಂದೆನಿಸಿದನ ||ಹತ್ತಿರ ಕರೆದೊಯ್ದು ಪುರಂದರವಿಠಲನ |ನಿತ್ಯದಿ ತೋರೆನಗೆ 7
--------------
ಪುರಂದರದಾಸರು
ದಾಸರ ನಿಂದಿಸಬೇಡಲೊ ಪ್ರಾಣಿ -ಹರಿ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ದಾಸರ ನಿಂದಿಸಬೇಡ ಪ.ಮೋಸವಾಯಿತೊ ಮನದೊಳು ಗಾಢ |ಲೇಸಾಗಿ ಇದ ತಿಳಕೊ ಮೂಢ ಅಪರಾಮನ ನಿಂದಿಸಿ ರಾವಣ ಕೆಟ್ಟ |ತಮ್ಮಗಾಯಿತು ಸ್ಥಿರಪಟ್ಟ ||ತಾಮಸದಿಂದಲಿ ಕೌರವ ಕೆಟ್ಟ |ಧರ್ಮಗೆ ರಾಜ್ಯವ ಬಿಟ್ಟ 1ಮನದೊಳಗಿನ ವಿಷಯದ ವಿಷ ಬಿಟ್ಟು |ಅನುದಿನ ಹರಿಯ ನೆನೆಯಿರಣ್ಣ ||ಸನಕಾದಿವಂದ್ಯನ ಪೂಜಿಸಿದರೆ ನೀವ್ |ಘನಪದವಿಯ ಕಾಣುವಿರಣ್ಣ2ಕನಕದಾಸನು ಕಬ್ಬಲಿಗನು ಎಂದು |ಅಣಕಿಸಿ ನುಡಿಬೇಡಿರಣ್ಣ |ಜನರಂತೆ ನರನಲ್ಲ ತುಂಬುರನೀತನು |ಜನಕಜೆರಮಣನ ಪಾದಸೇವಕನು 3ಉಡಿಯ ಒಳಗೆ ಕಿಡಿ ಬಿದ್ದರೆ ಅದು ತಾ |ಸುಡದನಕಾ ಬಿಡದಣ್ಣ ||ಬಡವನಾಗಿ ಕೆಡುಬುದ್ದಿಯ ಬಿಟ್ಟು |ನಡೆಯ ಕಂಡು ಪಡೆದುಕೊಳ್ಳಣ್ಣ 4ದೇವಕಿ ಸೆರೆಯನು ಬಿಡಿಸಿದ ದೇವನ |ಸೇವಕರು ನರರೆ ನಿಮಗವರು ||ಭಾವಜನಯ್ಯನ ಪದವ ನೆನೆದರೆ |ಪಾವನ ಮಾಡುವ ಪುರಂದರವಿಠಲ 5
--------------
ಪುರಂದರದಾಸರು
ದೂತೆ ಕೇಳ ದ್ರೌಪತಿಯ ಖ್ಯಾತಿ ಕೇಳಿದ ಮನುಜರಿಗೆಪಾತಕದೂರಾಗೊದೆಂಬೋ ಮಾತು ನಿಜವಮ್ಮಪ.ಉಮಾಶಚಿ ಶಾಮಲಾ ಉಷೆ ತಮ್ಮ ಪತಿಗಳ ಬೆರೆದು ರಮಿಸೆಬೊಮ್ಮಕಂಡುಕೋಪಿಸಿ ಶಾಪ ಝಮ್ಮನೆ ಕೊಟ್ಟಾನು1ಪರಮಮದದ ಬಾಲೆಯರಿವರುಪರಪುರುಷನ ಬೆರೆಯಲ್ಯಾ ್ಹಂಗೆನರದೇಹ ಬರಲೆಂದು ಬೊಮ್ಮಗೆ ನಾಲ್ವರು ನುಡಿದರು 2ಚಂದಾಗಿ ನಾಲ್ವರ ದೇಹ ಒಂದೇ ಮಾಡಿ ತೋರೆ ಬೊಮ್ಮಗಬಂದವು ಮೂರು ನರದೇಹಗಳ ಲೊಂದಾಗಿರಲೆಂದು 3ತಪ್ಪು ನಮ್ಮದೆಂದು ಶಾಪ ಒಪ್ಪಿಕೊಂಡು ನಾಲ್ವರುಜಪಿಸಿ ಸಾವಿರ ವರುಷ ಗೌಪ್ಯದಿ ಭಾರತಿಯ 4ಬಂದು ಮೊರೆಯ ಪೊಕ್ಕವರ ಚಂದಾಗಿ ದೇಹದಲ್ಲಿಟ್ಟುಅನಂದದಿಂದ ವಿಪ್ರಕನ್ಯೆ ಎಂದು ಜನಿಸಿದಳು 5ಎಲ್ಲರಕರ್ಮಒಂದಾಗಿ ಎಲ್ಲೆಲ್ಲೆ ಭಿನ್ನ ತೋರದ್ಹಾಂಗೆಫುಲ್ಲನಾಭನ ದಯವ ಪಡೆದಳು ಅಲ್ಲೆ ಆ ಬಾಲೆ 6ಮುದ್ಗಲ ನೆಂತೆಂಬೊ ಋಷಿಯು ಬಿದ್ದು ನಕ್ಕ ಬ್ರಹ್ಮನ ಕಂಡುಮುದ್ದು ಮಗಳ ರಮಿಸಿದಾತಗೆ ಬುದ್ಧಿಯಿಲ್ಲವೆಂದು 7ತ್ವರೆಯಿಂದಬೊಮ್ಮಮುನಿಗೆ ಬೆರಿಯೆ ಭಾರತಿಯ ಕಂಡುಕರವಮುಗಿದು ಎರಗಿ ಮುನಿಯು ಮೊರೆಯ ಹೊಕ್ಕಾನು8ಮಾರುತನ ದೇಹದಲ್ಲೆ ಭಾರತಿಯು ರಮಿಸುವಾಗಹಾರಿತಯ್ಯ ಸ್ಮøತಿಯು ಸುಖವು ತೋರದು ನಮಗಿನ್ನು 9ಮಂದಗಮನೆಯರಿಂದಭಾರತಿಇಂದ್ರ ಸೇನಳಾಗಿ ಜನಿಸೆಬಂದ ಮರುತ ದೇಹದ ಮುನಿಯು ಚಂದದಿ ಮದುವ್ಯಾದ 10ಮರುತ ಅಕೆÉಯಿಂದ ರಮಿಸ ಮಾರುತದೇಹದ ಮುನಿಯು ಏನುಗುರುತು ಇಲ್ಲಧಾಂಗೆ ಆತ ಇರುತಲಿದ್ದನು 11ಬಾಲೆಯ ಸಂತೋಷ ಪಡಿಸಿ ಮೂಲರೂಪಕಂಡುವಾಯುಮ್ಯಾಲ ವನಕೆ ನಡೆದ ಮುನಿಯು ಆ ಕಾಲದಲೆಚ್ಚತ್ತು12ಇಂದ್ರಸೇನ ಬಂದು ಆಗ ಇಂದಿರೇಶನದಯವ ಪಡೆಯೆನಂದಿವಾಹನ ನಮ್ಮ ಪತಿಯ ವಂದಿಸೆಂದಾರು 13ಪತಿಯ ಬಯಸಿದ ಬಾಲೆಯರಿಗೆ ಚತುರ್ವಾಹ ನುಡಿದನು ಶಿವನುಅತಿಶಯ ರೋದನವ ಮಾಡೆ ಮಿತಿ ಇಲ್ಲದಲೆ ಅಂಜಿ 14ಮಂದಗಮನೆಯ ಧ್ವನಿಯಕೇಳಿ ಬಂದ ಇಂದ್ರ ಬಹಳದಯದಿಬಂದಿತೆನಗೆ ಇಂಥಕ್ಲೇಶಎಂದು ನುಡಿದಳು15ಬಂದು ವರವ ಬೇಡಿ ಪತಿಗಳ ಹೊಂದಿರೆಂದು ನಾಲ್ಕುಬಾರಿಬಂದಿತೆಮಗೆ ಇಂಥಕ್ಲೇಶಎಂದು ನುಡಿದಳು16ಇಂಥ ಅನ್ಯಾಯ ಯಾಕೆಂದು ನಿಂತ ಒಟುಗೆ ನುಡಿದ ಇಂದ್ರಭ್ರಾಂತ ನರನ ನಿಂದೆ ಶಚಿಯ ಕಾಂತೆಗೆ ಶಿವನು 17ನಾನು ಸೃಷ್ಟಿ ಮಾಡಿದವನು ನೀನು ಏನು ನುಡಿದ ಶಿವನುಮಾನವನಾಗೊ ಬೊಮ್ಮಗ ತಾನು ಆತಗೆ 18ಉಮಾ ಮೊದಲಾದವರಿಗೆಲ್ಲ ತಮ್ಮ ಪತಿಗಳ ಹೊಂದಿರೆಂದಉಮಾ ನಿಮ್ಮ ಬೆರಿಯ ಬ್ಯಾಡ ಸುಮ್ಮನೆ ಹೋಗೆಂದ 19ಎತ್ತು ಗಿರಿಯ ಕೆಳಗ ಇದ್ದ ಮತ್ತÀ ನಾಲ್ವರ ನೋಡೆಸತ್ತ ಎಂದು ತಿಳಿಯೋ ನಿನ್ನ ಚಿತ್ತಕತಾ ಎಂದು 20ಕೇಳಿದ ಬೊಮ್ಮನ ನುಡಿಯು ತಾಳಿದ ಬಾಲಿಯರು ಬೆರೆದುಬಹಳ ಪ್ರೇಮದಿಂದಭಾರತಿಇಳಿದಳು ಬಂದು21ರಾಮೇಶನಕ್ಲುಪ್ತತಿಳಿದು ಭೀಮಸೇನನಾದ ವಾಯುಕಾಮಿನಿಯರ ಸಹಿತ ದ್ರೌಪತಿ ಪ್ರೇಮದಿ ಜನಿಸಿದಳು 22
--------------
ಗಲಗಲಿಅವ್ವನವರು
ದ್ವಂದ್ವವೆ ವಸಂತದ ಹಬ್ಬದ್ವಂದ್ವವೆ ಇಹಪರದಲ್ಲಿ ಹಬ್ಬ ಪ.ದ್ವಂದ್ವಾಮೃತ ಕ್ಷೇಮಅಭಯವಸಂತದ್ವಂದ್ವ ಜೀವೇಶರ ತಿಳಿದವ ಶಾಂತದ್ವಂದ್ವದ ನಡೆನುಡಿ ಬಲ್ಲವ ಸಂತದ್ವಂದ್ವವರಿಯದನ ಗತಿಯೆ ವಸಂತ 1ದ್ವಂದ್ವ ಶೀತೋಷ್ಣ ಸಮಾನವ ಕಂಡುದ್ವಂದ್ವ ನಿಂದಾಸ್ತುತಿ ಸರಿಯಿಟ್ಟುಕೊಂಡುದ್ವಂದ್ವವಮಾನವಹಿಡಿದರೆ ಭಂಡುದ್ವಂದ್ವ ಪಕ್ಷಿಗಳ ಬಗೆಯ ಕೇಳಿಕೊಂಡು 2ಫಾಲ್ಗುಣ ಪೌರ್ಣಿಮೆ ಬಂದಿತಿಳೆಗೆಬಾಲಕರೆಲ್ಲ ನೆರೆವುದೊಂದು ‌ಘಳಿಗೆಹೋಳಿಯನಾಡುವ ಸಂಭ್ರಮದೊಳಗೆಕಾಳಗಬೇಡಿರೊ ನಿಮ್ಮ ನಿಮ್ಮೊಳಗೆ3ಅಜೆÕೈಕ್ಯ ಪ್ರತಿಪದ ಹಿಂದಾದರಿಂದಸುಜ್ಞಾನ ದ್ವಿತಿಯಕ್ಕೆ ತೋರುವ ಚಂದ್ರಒಗ್ಗೂಡಿ ಗೆಳೆಯರೊಮ್ಮತದಿಂದಲಗ್ಗೆಕಾರರು ಮುಂದೆ ನಡೆವುದೆ ಚಂದ 4ಭಕ್ತೆಂಬೊ ಪುರದಲ್ಲಿ ಒಂಬತ್ತು ಬೀದಿ ವಿರಕ್ತಿರಂಹಸ ಬ್ರಹ್ಮದ್ಹಾದಿಯ ಐದಿವ್ಯಕ್ತವಾಗುವ ವಸ್ತು ಓದಿಕೆ ಓದಿರಿಕ್ತದ ನುಡಿಗಳು ತಮಸಿನ ಹಾದಿ 5ದಿನಪತಿ ಅಡಗಿರೆ ಮಲಗದೆ ಎದ್ದುಮನೆಯವರನು ಎಚ್ಚರಿಸಬ್ಯಾಡಿ ಸದ್ದುನೆನೆವ ವಿಷಯಗೋಡೆ ಏರುತ್ತ ಬಿದ್ದುಮನೆ ಮನೋವಾರ್ತೆಯ ಕುರುಳನೆ ಕದ್ದು 6ಹಾರುವರ ಕೇರಿಯ ಹೊಗಬ್ಯಾಡಿಕೇಳಿಬೇರೂರವರ ಬಿಟ್ಟು ಬಿಡಿ ದೂರದಲ್ಲಿದೂರುವರೊಡನಾಟ ದುರ್ದೆಶೆಫಲವು ವಸ್ತುದೋರುವ ಮನೆಯೇವೆ ಸರಸ ವೆಗ್ಗಳವು 7ಧೂಳಿ ನೀರುರಿಗಾಳಿ ಬಯಲೊಳಗಾಡಿಮ್ಯಾಲೆ ಮೂರುರಿಯೊಳು ಮತಿಗುಂದಬ್ಯಾಡಿಹಾಳು ತುರುಕರ ಕೇರಿಯೊಳು ನಿಷ್ಫಲವುಜಾಲಗಾರರ ಕೇರಿ ಹೊಕ್ಕರೆ ಫಲವು 8ಹಿಂಚಾದ ಹಿರಿಯರ ಮಾತಲೆ ನಡೆದುವಂಚಕ ಮೂವರ ಸಂಗವ ಕಡಿದುಮಿಂಚುವ ಮಾನ್ಯರ ಪ್ರೀತಿಯ ಪಡೆದುಸಂಚಿತಪ್ರಾರಬ್ಧಾಗಾಮಿಯ ಒಡೆದು9ಮುಚ್ಚಿದ ಕದವೆರಡನು ಮುರಿಹೊಯ್ದುಇಚ್ಛೆ ಮೂರೆಂಬ ನಾಯಿಗಳಜಿಹ್ವೆಕೊಯ್ದುಬೆಚ್ಚದೆ ಮನೆ ಮೆಲ್ಲನೆ ಹೊಗಿರಣ್ಣಸಚ್ಚಿದ ಗೋರಸ ಸೂರ್ಯಾಡಿರಣ್ಣ 10ಏಕಾಧಿಪತಿಯಾಜÕ ಅಭಯವು ಬೇಕುನಾಕು ಝಾವಿನ ರಾತ್ರಿ ನಲವಿರಬೇಕುಪೋಕಕಳ್ಳಾರ್ವರ ಮೆಟ್ಟ್ಯಾಳಬೇಕುಭೂಕಾಂತಗೆ ಸೇವೆಯೊಪ್ಪಿಸಬೇಕು 11ರಮಣನೊಲ್ಲದ ಆರ್ವರ ಸಂಗವಿಡಿದುರಮಿಸುವ ಬುದ್ಧಿಜಾರಿಯ ಗಟ್ಟಿವಿಡಿದುಅಮಿತ ವೈರಾಗ್ಯಹಗ್ಗದಿ ಕೈಯಕಟ್ಟಿಶ್ರೀರಮಣನಂಘ್ರಿಗೆ ಒಪ್ಪಿಸಲು ಕಾರ್ಯ ಗಟ್ಟಿ 12ಎಲ್ಲೆಲ್ಲ್ಯಜ್ಞಾನಾಹಿ ವಿಷಯ ತೇಳುಗಳುಎಲ್ಲೆಲ್ಲಿ ನಿರ್ಜಲಸೃತಿಯ ಬಾವಿಗಳುಎಲ್ಲೆಲ್ಲಿನಿರಯಕಮ್ಮರಿ ಮಿಟ್ಟೆಗಳುಎಲ್ಲ ತಪ್ಪಿಸಿ ಜ್ಞಾನ ಬೆಳದಿಂಗಳೊಳು 13ವ್ಯಾಳ್ಯವರಿತು ತತ್ವಸಂಧಿಯ ಒಲಿದುಸೂಳಿ ಮದೆಂಟರ ಕೈಸೆರೆವಿಡಿದುಕಾಲಾಖ್ಯ ತಳವಾರನಾಳಿಗೆ ಕೊಟ್ಟುಮ್ಯಾಳದ ಗೆಳೆಯರು ಸಂತೋಷಪಟ್ಟು 14ಎಂಬತ್ತು ನಾಲ್ಕು ಲಕ್ಷಾಗಾರ ಹೊಗುತಡೊಂಬಿಯಿಲ್ಲದೆ ಬಂದ ಬನ್ನವಬಡುತಕುಂಭಿಣಿಸುರ ಕುಲ ಭೂಮಿಗೆ ಬಂದುದಂಭ ಮಾಡದಲೆ ಕುರುಳ ಒಯ್ಯಿರೆಂದು 15ರಾಗ ಮತ್ಸರಗೂಡಿದರ ಕುರುಳನೊಟ್ಟಿಭೂಗಗನ ಹೊಗುವ ಕಾಮವಕಟ್ಟಿಯೋಗವಾಗಿರುವ ಹುಬ್ಬಿನ ಕ್ಷೇತ್ರದಲಿಮ್ಯಾಗ ವಿಜ್ಞಾನಗ್ನಿ ಹಾಕಬೇಕಲ್ಲಿ 16ಲೋಭ ಹೋಳಿಕೆಯ ಹೋಳಿಗೆ ತುಪ್ಪ ಸವಿದುಲಾಭಕ್ಕೆ ಕುಣಿಯಲು ವೇತ್ರರು ಹೊಯ್ದುಶೋಭನ ರಸ ಬೊಬ್ಬೆಯ ಸಾಧುಹಿಂಡುತ್ರಿಭುವನಪತಿಕಾಮನಯ್ಯನ ದಂಡು17ಸ್ವರ್ಧುನಿಜನಕನ ಗುಣಗಣಕೀರ್ತಿಊಧ್ರ್ವಸ್ವರದಿ ಹಾಡಿ ಹೊಗಳುವಅರ್ಥಿನಿರ್ಧೂಮಜ್ವಾಲೆಯ ಬೆಳಗಲಿ ಸುತ್ತಿದುರ್ದೇಹಿಗಳ ಕಿವಿಧಾರೆಯ ಕಿತ್ತಿ 18ಅವಿದ್ಯ ಕಾಮ್ಯಕರ್ಮದ ಹೋಳಿ ಸುಟ್ಟುಹ್ಯಾವಿನ ಮೈಯ ಬೂದಿಯ ಮಾಡಿಬಿಟ್ಟುಕೋವಿದರ ಚಾತುರ್ಯಕೆ ಒಡಂಬಟ್ಟು ಚಿದ್ಭಾವ ಮಂದಿರದ ಬ್ರಹ್ಮಕೆ ಲಕ್ಷ್ಯವಿಟ್ಟು 19ಹಂಗಿಲೆ ಬೆಳೆದ ವೃಕ್ಷದ ಮೂಲ ಮುರಿದೂಧ್ರ್ವಾಂಗಕ್ಕೆ ಸುತ್ತುವ ಜಾಣರ ಬಿರಿದುರಂಗು ಮುತ್ತಿನ ಮೂಗುತಿ ಹೆಣ್ಣವಿಡಿದುಶೃಂಗಾರ ಚೇಷ್ಟೆಯ ಮಾಡಿರೊಜಡಿದು20ಬೆಳಗಿನ ಝಾವದಿ ಬೂದಿ ಚಲ್ಲ್ಯಾಡಿಗೆಳೆಯರು ನೆರೆವುದೊಂದೆ ತಾಣ ನೋಡಿಜಲಜಾಕ್ಷನುದ್ಯಮದಂಗಡಿಯಲ್ಲಿನಲಿವ ಸ್ವಾನಂದದೂಟವ ಬೇಡಿಕೊಳ್ಳಿ 21ತಿರುತಿರುಗಿ ಬಂದು ದಣಿದು ನೀವಿಂದುಹರಿಯ ಮೈ ಬೆವರಿನ ಹೊಳೆಯಲ್ಲಿ ಮಿಂದುಥರ ಥರದ್ಹದಿನಾರು ವರ್ಣಗಳಿಂದತರುಣ ತರಣಿಯಂತೆ ಹೊಳೆವುದು ಚಂದ 22ಆನಂದಮಯವಾಸುದೇವನ ಕಂಡುಆನಂದಪುರದಿ ಭಕ್ತಿಯ ನೆರೆಗೊಂಡುಆನಂದ ತೀರ್ಥಗುರು ಕೃಪೆಯಿಂದಸ್ವಾನಂದದೋಕುಳಿಯಾಡುವ ಚಂದ 23ಈ ವಿಧ ಅಧ್ಯಾತ್ಮ ಹೋಳಿಯ ಭೇದಭಾವುಕ ಜನರಿಗೆ ಪರಮಾಹ್ಲಾದದೇವ ಋಷಿಕುಲದೈವ ಮುಕುಂದಕಾವನು ಕರುಣಾಬ್ಧಿಕೇಳಿಗೋವಿಂದ24ವೇದನ ತಂದ ಹಯಾಸ್ಯನ ಹೋಳಿಭೂಧರಧರಿಸಿದಮರ ಕಾರ್ಯಕೇಳಿಮೇದಿನ ತರಲಡ್ಡಾದವನೊಮ್ಮೆ ಹೋಳಿ ಪ್ರಹ್ಲಾದನಿಷ್ಠೆಗೆಹರಿಉದಿಸಿದಕೇಳಿ25ನಾನೆಂಬೊ ದಾನವೇಂದ್ರನ ಮದ ಹೋಳಿಹೀನರಿಗಾಗಿ ಕೊಡಲಿ ಹೊತ್ತಕೇಳಿಜಾನಕಿ ತಂದ ದಶಾಸ್ಯನ ಹೋಳಿಮಾನಿನಿಯರಾಳ್ದ ವಿಡಂಬನಕೇಳಿ26ಸನ್ಮಾರ್ಗ ಬಿಟ್ಟ ಖಳರ ಮತಿ ಹೋಳಿಉನ್ಮತ್ತಕಲಿಯನರಸಿ ಕೊಂದಕೇಳಿಚಿನ್ಮಯಮೂರ್ತಿ ಭೂಭಾರವ ಹೋಳಿಜನ್ಮಿಸಿಬಹುದೆಲ್ಲ ಮೋಹನಕೇಳಿ27ಅನಂತದುರಿತರಾಶಿಗಳನ್ನು ಹೋಳಿಆನಂದ ಸುಖವೀವ ನೆನೆದರೆಕೇಳಿಅನಂತ ಅನವದ್ಯಗುಣ ಪರಿಪೂರ್ಣಅನಂತಾದ್ಭುತಕರ್ಮದೀನ ದಯಾರ್ಣ28ಈಪರಿವಿಜ್ಞಾನವಸಂತದಾಟಚೌಪದಿ ರತ್ನಮಾಲಿಕೆ ಮಾಡಿ ಪಾಠಶ್ರೀಪ್ರಸನ್ವೆಂಕಟ ಕಿಟಿರೂಪಿ ಕೃಷ್ಣತಾ ಪರಿಪಾಲಿಪ ಪುರುಷವರಿಷ್ಠ 29
--------------
ಪ್ರಸನ್ನವೆಂಕಟದಾಸರು
ಧರ್ಮವೇ ಜಯವೆಂಬ ದಿವ್ಯ ಮಂತ್ರ |ಮರ್ಮಗಳನೆತ್ತಿದರೆ ಒಳಿತಲಾಕೇಳಿಪ.ವಿಷವನುಣಿಸಿದಗೆ ಷಡುರಸವನುಣಿಸಲುಬೇಕು |ದ್ವೇಷಮಾಡುವನ ಪೋಷಿಸಲು ಬೇಕು ||ಹಸಿದು ಮನೆ ಕೊಂಬವನ ಹಾಡಿಹರಸಲುಬೇಕು |ಅಸುಹೀರಿದನ ಹೆಸರ ಮಗನಿಗಿಡಬೇಕು1ಹಿಂದೆ ನಿಂದಿಸುವರನು ವಂದಿಸುತಲಿರಬೇಕು |ಬಂಧಿಸಿದವನ ಕೂಡ ಬೆರೆಯಬೇಕು ||ನಿಂದ ನಿಲುವಿಗೆ ಸೇರದವನ ಪೊಗಳಲುಬೇಕು |ಕೊಂದವನ ಗೆಳತನವ ಮಾಡಬೇಕಯ್ಯ 2ಕೊಂಡೊಯ್ದು ಕೆಡಿಸುವನ ಕೊಂಡಾಡುತಿರಬೇಕು |ಕಂಡರಾಗದವರ ತಾ ಕರಿಯಬೇಕು ||ಪುಂಡರೀಕಾಕ್ಷ ಶ್ರೀ ಪುರಂದರವಿಠಲನ ಅ - |ಖಂಡ ಮಹಿಮೆಯನರಿತು ನೆನೆಯಬೇಕಯ್ಯ 3
--------------
ಪುರಂದರದಾಸರು
ನಂಬದಿರು ಈ ದೇಹ ನಿತ್ಯವಲ್ಲ |ಅಂಬುಜಾಕ್ಷನ ಭಜಿಸಿ ಸುಖಿಯಾಗು ಮನವೇ ಪ.ಎಲು ರಕ್ತ ಮಾಂಸಗಳ ಮೇಲೆ ಚರ್ಮದ ಹೊದಿಕೆ |ಮಲಮೂತ್ರ ಒಳಗೆ ಕ್ರಿಮಿರಾಶಿಯಿಹವು ||ಹಲವು ವ್ಯಾಧಿಯ ಬೀಡು ಪಂಚಭೂತದ ನಾಡು |ಹುಲುದೇಹವನು ನೆಚ್ಚಿ ಕೆಡಬೇಡ ಮನವೆ 1ಸತಿಸುತರು ಹಿತರೆಂದು ಮತಿಮರೆತು ಮಮತೆಯಲಿ |ಅತಿಕಾಂಕ್ಷಿಯಿಂದ ದುರ್ವಿಷಯ ಬಲಿದು ||ಸತತ ಲಕ್ಷ್ಮೀಪತಿಯ ಶರಣೆನದೆ ಇಹಪರದ |ಗತಿಶೂನ್ಯನಾಗಿ ಕೆಡಬೇಡ ಮನವೆ 2ಪರರ ನಿಂದಿಸದೆ ಪರವಧಗಳನು ಬಯಸದೆ |ಗುರು - ವಿಪ್ರಸೇವೆಯನುಮಾಡು ಬಿಡದೆ ||ಹರಿಸ್ತುತಿಯ ನೀ ಕೇಳು ಹರಿಕೀರ್ತನೆಯ ಪಾಡು |ಪರಮಪುರಂದರವಿಠಲನೊಲಿದು ಪಾಲಿಸುವ3
--------------
ಪುರಂದರದಾಸರು