ಒಟ್ಟು 25998 ಕಡೆಗಳಲ್ಲಿ , 137 ದಾಸರು , 9262 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸು ಬೇಗ ಸಿರಿವರ ಕರುಣಿಸು ಬೇಗ ಪ. ಲಕ್ಷ್ಮಾಶ್ರಯ ವಕ್ಷಸ್ಥಳ ಪಕ್ಷೇಂದ್ರ ವಿಹಾರಿ ಅಕ್ಷಾರಿ ಪ್ರಿಯ ಪೂರ್ಣ ಕಟಾಕ್ಷದಿ ನೋಡುತಲಿ 1 ಕಂಠೇಧೃತ ಕೌಸ್ತುಭ, ವೈಕುಂಠಾಲಯವಾಸಿ ಶುಂಠಾಶಯ ಧೂವನ ನರ ಕಂಠೀರವ ಕಮಠಾ 2 ದೂರೀಕೃತ ಘೋರಾಮಯ ಧೀರಾಖಳ ಸಾರಾ ನಾರಾಯಣ ನರಕಾರ್ಣವ ತಾರಣ ರಘುವೀರ 3 ಭಕ್ತಾವನಶಕ್ತಾಮೃತ ರಕ್ತಾಧರ ಶ್ರೀದ ಪಾದ 4 ವಾಗೀಶ ವೃತಾನುಗ ಸಕಲಾಗಮನುತ ಚರಣ ಭೋಗೀಶ ಧರಾಲಯ ದಯವಾಗು ಸದಾಶರಣ 5
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಿಸು ಭಾರತೀರಮಣ ಕರುಣಿಸು ಪ ಪರಮದಯಾದಿಂದ ಹರಿಯನ್ನ ತೋರಿಸು ದುರುಳರೊಳಡಗಿದೆ ನಿಲಿಸೊ ಜ್ಞಾನಿಗಳಲ್ಲಿ ಅ.ಪ ತ್ರೇತಾಯುಗದಲ್ಲವತರಿಸಿ | ಕಪಿ ವ್ರಾತ ಶಿರೋಮಣಿ ಎನಿಸಿ | ಪಕ್ಷ - ಚೂತ ಫಲಗಳನ್ನು ಸಲಿಸಿ | ಭೂಮಿ - ಜಾತೆಯ ಪಾದಕ್ಕೆ ನಮಿಸೀ | ಅಹ ಘಾತಿಸಿ ಖಳರನ್ನು ಸೀತಾಪತಿ | ಮನೋ ರಥವನು ಸಲಿಸಿದ ಮಾತರಿಶ್ವನೆ ನೀ 1 ಕುಂತಿಯ ಉದರದಿ ಜನಿಸಿ | ಬಹು ಸಿರಿ - ಕಾಂತನ ಪಾದಕ್ಕೆ ನಮಿಸಿ | ಮಡದಿ ಚಿಂತೆಯನು ದೂರಗೈಸಿ | ಅಹ ಸಂತಾಪಗೊಳುತಿಪ್ಪ ದಂತಿಪುರಾಧಿಪನ ತಂತುಗೆಡಹಿತ ಬಲವಂತ ಶಿರೋರನ್ನ 2 ಕಲಿಯುಗದಲುದ್ಭವಿಸಿ | ಬಹು ಲೀಲೆಯೊಳನ್ಯರ ಜಯಿಸಿ | ಸತ್ಯ ಶೀಲರನ್ನುದ್ಧರಿಸಿ | ಸಿರಿ ಲೋಲನೆ ಪರದೈವವೆನಿಸಿ | ಆಹ ಬಾಲ ರವಿ ತೇಜ ವಿಜಯ ರಾಮಚಂದಿರವಿ - ಠಲನ್ನ ಪೂಜಿಸುವಂಥ ಆಲವ ಬೋರ್ಧಾಯನೆ 3
--------------
ವಿಜಯ ರಾಮಚಂದ್ರವಿಠಲ
ಕರುಣಿಸು ವರಗೌರಿ ಭರದಿಂದ ವರವನ್ನೂ ಶರಣಾಪ್ತ ಬೇಡುವೆ ನಿನ್ನಾ ಪ. ಪಾರ್ವತೀ ತಾಯೇ ಪಾಮರರಿಗೆ ಪರಮಪಾವನ್ನೆ ಪರಿಪಾಲಿಸುತ್ತ ವರವಿತ್ತು ನೀ ಕಾಪಾಡೆ 1 ಪತಿಪಾದ ಸೇವಾ ಸತತದೊಳಿತ್ತು ಸತಿಗೆ ಮಾಗಲ್ಯ ನಿರತವೀಯೆ ತಾಯೆ ಸಕಲಕೆ ಶ್ರೀ ಗೌರಿ2 ಪಾದ ಸೋಸಿಲಿ ಭಜಿಪೆ ವರವೀಯೆ ತಾಯೆ ಶಂಕರಿ ಕಾಯೆ ದೇಹಿಮೆ 3
--------------
ಸರಸ್ವತಿ ಬಾಯಿ
ಕರುಣಿಸುವ ಹರಿ ನಿರಂತರವು ಮನವೆ ಪಾದ ಸ್ಮರಣಿಯನು ನೆರೆನಂಬು ಪ ಕಂದ ಪ್ರಹ್ಲಾದನ ತಂದೆ ಭಾಧಿಸಲು ಗೋ ವಿಂದ ಘನ ಸ್ತಂಭದೊಳ್ ಬಂದು ತಾಮುದದಿ ಮಂದ ದನುಜನ ಬಿಡದೆ ಕೊಂದ ಶ್ರೀವರ ಮುಚು ಕುಂದ ವರದ ಯೆಂದು ನೀ ಭಜಿಸು 1 ಛಲದಿಂದ ಮಲತಾಯಿ ಸಲೆ ಧ್ರುವನ ಕಾನನಕೆ ಕಳುಹಲಾಕ್ಷಣವೆ ಶ್ರೀ ನಳಿನನಾಭ ಒಲಿದು ಪೊರಿದನು ಮಹಾಒಳಿತೆಂದು ಅವಗೆ ನಿಶ್ಚಲ ಪದವಿಯನು ಇತ್ತ ಜಲನಿಧಿಶಯನ 2 ಅರಸು ಮುನಿಶಾಪದಲಿ ಕರಿಯಾಗಿ ಜನಿಸಿ ಮ- ಕರ ಬಾಧೆಗೆ ಶಿಲ್ಕಿ ಮೊರೆಯನಿಡಲು ತ್ವರದಿ ಪೊರದಂಥ ಹೆನ್ನೆಪುರ ಲಕ್ಷ್ಮೀನರಶಿಂಹ ಸಿರಿ ಕೃಷ್ಣಾ 3
--------------
ಹೆನ್ನೆರಂಗದಾಸರು
ಕರುಣಿಸುವುದು ಎನ್ನಾ ಕರಿವರದ ಕೇಶವ ಕರಪಿಡಿದು ಸುಖಪೂರ್ಣಾ ನಿನ್ನಡಿಗಳಂಬುಜ ಸ್ಮರಿಪರಲ್ಲಿಡ ಮುನ್ನಾ ಪರಿಹರಿಸು ಬನ್ನಾ ಪ ಸರಸಿಜಾಪತಿ ಸರಸಿಜೋದ್ಭವ ಹರಸುರಾಧಿಪ ವಂದ್ಯ ನಿನ್ನಯ ಎರವು ಮಾಡದೆ ತ್ವರ್ಯ ಸೌಖ್ಯವುಗರದು ಕರುಣದಿ ಅ.ಪ. ಜನನಿ ಜಠರದಿಂದ ನಿನ್ನಾಜ್ಞದಲಿ ನಾ ಜನಸಿದೆನೊ ಗೋವಿಂದಾ ಬಾಲತ್ವ ಕೆಲದಿನ ಕಳೆದೆನೊ ಮುಕುಂದಾ ಯೌವ್ವನವು ಬರುತಲೆ ವನಿತೆ ಮುಖ ಅರವಿಂದಾ ನೋಡುತಲೆ ಬಲು ಛಂದಾ ಮನವು ನಿಲ್ಲದು ಮಮತೆ ವಿಷಯದಿ ಮುನಿದು ಸಜ್ಜನರ ಸೇವಿಸಿ ಕೊನೆಯಗಾಣದೆ ಮಣಿವೆ ಅಂಘ್ರಿಗೆ ವನದಿಗಳ ವಮ್ಮನೆ (?) ನಡಿಸು ವೆಂಕಟಾ ಘನತೆ ನಿನಗಿದು ತಿಳಿದು ವೇಗದಿ ಅನುದಿನದಲಿ ಸಲಹುತಿಪ್ಪನೆ ಅನಿಮಿಷರ ಆಧಾರ ಮೂರುತಿ 1 ಮೊರೆಯ ಲಾಲಿಸು ಜೀಯಾ ಅರೆ- ಮೊರೆಯ ಮಾಡಲು ಪೊರೆವರ್ಯಾರೆಲೊ ಕಾಯಾ ಅ- ನ್ಯರನು ಕಾಣದೆಯರಗಿದೆನು ಸುರ ಸಹಾಯ ಸುರಧೇನು ಮನೆಯೊಳಗಿರಲು ವಿಠ್ಠಲರೇಯಾ ಮಾಯಾ ಬಲ ತಡದು ನಿಕ್ರವ ತರಲು ಜನರೊಳು (?) ಯರಗಿರಲು ನಿನಗೆಂದಿಗಾದರು ಅರಿದು ಅಗ್ಗಕೆ ಪೊರೆದು ಮಾನವ ಕರಿಯು ಕರೆಯಲು ಬರುವುದುಂಟೇ ಕರುಣಾಸಾಗರನೆಂಬೊ ನಿನ್ನಯ ಬಿರುದು ಉಳ್ಳದಕೊಂಡು ಸಾಧನೆ ಧರೆಯ ದುಷ್ಟರ ಬಾಧೆ ತಪ್ಪಿಸಿ ಹರುಷವನು ಅತಿಗರೆದು ನಿರುತದಿ 2 ಬಿಡೆನೊ ಕಡಲೊಡಗಾಡಿ ಬಿಂಕದಲಿ ಅದ್ರಿಯ ನಿಡಲಿ ಬೆನ್ನಲಿ ನÉೂೀಡಿ ಪಾದಗಳ ಎಳೆಯುತ ನಡೆದು ಕೋಪವ ಮಾಡಿಬಿಡು ದೈನ್ಯದಲಿ ಪೊಡವಿ ದಾನವ ಬೇಡಿ ಬಿಡೆ ನೋಡಡವಿಯೊಳ್ ಕಾಡಿನ ಮಡುವಿನೊಳು ಗಿಡವೇರಿ ಧುಮುಕಲು ಅಂಬರ ಬಿಟ್ಟು ಖಡ್ಗವ ಪಿಡಿದು ವಾಜಿಯನೇರಿದನು ಜರ ಕಡಿಯಪೋಗಲು ಕಂಡು ನಿನ್ನನು ಬಿಡೆನೊ ನಿನಗೆಂದಿಗಾದರು ಪೊಡವಿಪತಿ ಶ್ರೀದವಿಠ್ಠಲ ವಡಿಯ ನೀನೆಂತೆಂದು ನಂಬಿದೆ 3 (ಈ ನುಡಿಯ ಅರ್ಥ ಸ್ಪಷ್ಟವಾಗುತ್ತಿಲ್ಲ-ಅಶುದ್ಧ ಪ್ರತಿಯ ಕಾರಣದಿಂದ.)
--------------
ಶ್ರೀದವಿಠಲರು
ಕರುಣಿಸುವುದೆನಗಿತು | ಕರಿವರದ ಕೃಷ್ಣಾ |ನಿರುತ ನಿನ್ನಯ ಸ್ಮರಣೆ | ವೆರಕವಾಗಲಿ ಮನಕೆ ಪ ಪರಸತಿಯರೊಲಿಮೆಗೇ |ಎರಗುವೀ ಮನವನ್ನು ಬರ ಸೆಳೆದು ನಿನ್ನಂಘ್ರಿ | ಸರಸಿಜದೊಳಿರಿಸೋ |ಶರಣ ವತ್ಸಲನೆಂಬೊ | ಬಿರಿದು ನಿನ್ನದು ಇರಲುಬರಿದೇಕೆ ತಡಗೈವೆ | ಮರುತಾಂತರಾತ್ಮಾ 1 ಮುದಿತನದ ತನುವಿನಲಿ | ಮದಡಾಗಿ ಮೈಮರೆವೆಹೃದಯ ಸದನದಿ ನಿನ್ನ | ಪದವ ನೋಡದಲೇಎದುರಾಳಿ ತತ್ವೇಶ | ರಧಿಕಾರ ತಪ್ಪಿಸುತಪದುಮನಾಭನೆ ನಿನ್ನ | ಪದ ತೋರೊ ಘನ್ನಾ 2 ಪುಂಡಲೀಕನಿಗೊಲಿದೆ | ಪಾಂಡವರ ಪಾಲಿಸಿದೆಪುಂಡರೀಕಾಕ್ಷ ದೃಹಿ | ಣಾಂಡಗಳ ವಡೆಯಾ |ಅಂಡಜಾಧಿಪ ತುರಗ | ಕುಂಡಲಿಯ ಶಯನ ಹೃತ್‍ಪುಂಡರೀಕದಿ ತೋರೊ | ಗುರು ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಕರುಣಿಸೆ ಕೋಮಲ ಗಾತ್ರೆ ಕಂಜಜಮಾತೆ ಪ ಸುರರು ನಲಿಯುತ ಶಿರವ ಬಾಗಿ ಕರವ ಮುಗಿಯಲು ಪರಮ ಹರುಷದಿ ವರವ ಕೊಡುತಿಹ ಹರಿಯ ಮಡದಿಯೆ ಅ.ಪ. ಕ್ಷೀರವಾರಿಧಿ ತನಯೆ ನಿನ್ನಯ ದೇಹ ಬೀರುತಿದೆ ವಿದ್ಯುಛ್ಛವಿಯೆ ಶ್ರೀ ಹರಿಜಾಯೆ ವರ ಸುದರ್ಶನ ಶಂಖಹಸ್ತದಿ ಮೆರೆಯುತಿರೆ ಭಕುತರನು ಸಲಹಲು ಕರವೀರಪುರ ನಿಲಯದಿ ನೆಲಸಿ ವರದಭಯ ಹಸ್ತವ ತೋರುತಿರ್ಪೆ 1 ಮನಸಿಜಕೋಟಿ ಸುರೂಪಿಣಿ ಮೃದುಮಧುರ ವಾಣಿ ಧನಕನಕಾದಿಗಳಭಿಮಾನಿ ಕೈವಲ್ಯದಾಯಿನಿ ವನಜಸಂಭವೆ ನಿನ್ನ ಒಂದರೆ- ಕ್ಷಣವು ಬಿಡದಲೆ ತನ್ನ ಉರದೊಳು ದನುಜಮರ್ಧನ ಧರಿಸಿಕೊಂಡು ತನುವು ಮನವನು ನಿನಗೆ ತೆತ್ತಿಹ 2 ರಂಗೇಶವಿಠಲನ ರಾಣಿ ಪಂಕಜಪಾಣಿ ಡಿಂಗರೀಕರ ಪೊರೆವ ಕರುಣಿ ಕಾಳಾಹಿವೇಣಿ ಮಂಗಳಾಂಗಿಯೆ ಖೂಳ ಕುಜನರ ಸಂಗಬಿಡಿಸುತ ತವ ಪದ ಸರೋ ಜಂಗಳಲಿ ನಾ ನಲಿದು ವಿಹರಿಪಭೃಂಗನಾಗುವ ಪರಿಯ ತೋರೆ 3
--------------
ರಂಗೇಶವಿಠಲದಾಸರು
ಕರುಣಿಸೆನಗಿನಿತು ಕರುಣಾರ್ಣವನೆ ನಿನ್ನ ಚರಣಾಬ್ಜದಲಿ ಭಕುತಿ ವಿಷಯದಿ ವಿರಕುತಿ ಪ ಬಿಂಬನೇ ಸರ್ವ ಪ್ರಯೋಜನವ ಮಾಡಿ ಪ್ರತಿ ಬಿಂಬರಿಗೆ ತತ್ಫಲಗಳೀವ ಕಾವ ಬಿಂಬನೆ ಸ್ವತಂತ್ರ ಪ್ರತಿಬಿಂಬಾ ಸ್ವತಂತ್ರತಮ ನೆಂಬ ಸುಜ್ಞಾನ ಪೂರ್ವಕ ನಿನ್ನ ಭಜಿಪ ಸುಖ 1 ಕಾರ್ಯ ಕಾರಣ ಅಂಶಿ ಅಂಶಾವತಾರ ಅಂ ತರ್ಯಾಮಿ ವ್ಯಾಪ್ಯ ವ್ಯಾಪಕ ಪ್ರೇರಕ ಪ್ರೇರ್ಯ ಬಾಧಕ ಬಾಧ್ಯ ಪೋಷ್ಯ ಪೋಷಕ ರೂಪ ಆರ್ಯರಿಂದರಿತು ಅನುದಿನದಿ ಸುಖಿಸುವ ಭಾಗ್ಯ 2 ತಾರತಮ್ಯದ ಜ್ಞಾನ ದುರ್ವಿಷಯಗಳಲಿ ಸ ದ್ವೈರಾಗ್ಯ ಹರಿದ್ವೇಷಿಗಳಲಿ ದ್ವೇಷಾ ಸೂರಿಗಳ ಸಂಗ ಗುಣರೂಪಕ್ರಿಯೆಗಳನು ಸುವಿ ನಿತ್ಯ ಅನುಮೋದ ಬಡುವಂತೆ 3 ಮಿಂದೋದಕಗಳೆಲ್ಲ ಮಜ್ಜನವು ದೇಹಾನು ಬಂಧಿ ಜನರೆಲ್ಲ ನಿನ್ನ ಪರಿವಾರವು ನಿಂದ್ಯ ಕರ್ಮಗಳೆಲ್ಲ ಪಾದುಕಗಳೆಂಬ ಅನು ಸಂಧಾನ ಮನಕೆ ನಿತ್ಯದಲಿ ಬರುವಂತೆ4 ಚೇತನಾಚೇತನಗಳೆರಡು ಪ್ರತಿಮೆಗಳು ಸಂ ಪ್ರೀತಿಯಲಿ ಸುರಕ್ಷಿಸುವುದು ಪೂಜೆ ಈ ತನುವೆ ಸದನವೆಂದರಿತು ನಿತ್ಯದಿ ಜಗ ನ್ನಾಥ ವಿಠ್ಠಲನೆಂಬ ವಿಷಯವೇ ಮುಖವೆಂದು 5
--------------
ಜಗನ್ನಾಥದಾಸರು
ಕರುಣಿಸೆನ್ನನು ಕರುಣಾನಿಧಿಯೆ ಪ ಹರಿ ಭಜಕರಾಗ್ರಣಿಯೆ ವರಕಪಿಶಿರೋಮಣಿಯೆ ಅ.ಪ ಧರಣಿತಳದಲ್ಲಿ ಪರಿಪೂರ್ಣವಾಗೀ ಇರುವ ವಾರ್ತೆಯ ಕೇಳಿ ಹರುಷ ಮನದಲಿ ನಿನ್ನ ಚರಣ ಪಂಕಜಯುಗ್ಮ ಭರದಿ ಭಜಿಪ ಎನ್ನ 1 ದುರುಳ ದೈತ್ಯನ ಶೀಳಿ ಧರಣಿಸುರಸುತನ ನೀ ಪೊರೆದ ಕೀರುತಿ ಕೇಳಿ ತ್ವರದೀ ಪಾದ ಸರಸಿಜ್ವದಯವನ್ನು ದುರುಳ ಮಾನವ ನಾ 2 ಜನಕ ಮಾಡಿದ ಋಣವ ಹುಣಿಸೆ ಬೀಜಗಳಿಂದ ಋಣಗಳೆದ ಘನ ಮಹಿಮೆ ಕೇಳಿ ಮನದಿ ಯೋಚಿಸಿ ಚರಣವನಜ ಭಜಿಸುವ ಎನ್ನ ಋಣ ಬಿಡಿಸೊ ಗುರುಜಗನ್ನಾಥ ವಿಠಲ ಪ್ರಿಯಾ 3
--------------
ಗುರುಜಗನ್ನಾಥದಾಸರು
ಕರುಣಿಸೆನ್ನೊಳು ದೀನಬಂಧು ಪ. ಕರುಣಿಸೆನ್ನೊಳಿರುವ ಸಕಲದುರಿತಜಾತ ರೋಗಗಳನು ಪರಿಹರಿಸಿ ಪಾದಾರವಿಂದ ಸಿರದೊಳಿರಿಸಿ ಸಲಹು ಬೇಗ ಅ.ಪ. ಮೂರು ವಿಧದಲಿ ಸುತ್ತಿಕೊಂಡ ಘೋರ ತಾಪದಿ ಸೂರೆಗೊಳುವ ಗಹನ ಸಂಸಾರ ಕೂಪದಲ್ಲಿ ಬಿದ್ದು ಚೀರುತಿಹೆನು ಚಿತ್ತದಲ್ಲಿ ತಾರೊ ತರಳಗೊಲಿದ ದೇವ 1 ಆದಿ ಭೌತಿಕಾದೇಹಜನಿತಾಗಾಧ ಮೋಹ ತಾ ಬಾಧೆ ಸಹಿಸಲಾರೆ ಮುನಿಸಮಾಧಿಗಮ್ಯ ನಿನ್ನ ಮರವ ವೇಧೆ ವದಗಿ ಬರುವ ಮೊದಲೆ ಮಾಧವನೆ ಮದೀಯನೆಂದು 2 ಮಂದನಾದೆನು ಮಮತೆಯಿಂದ ಕುಂದಿಹೋದೆನು ಮುಂದುಗಾಣವಂದ ಕಾಣದಿಂದು ನಿನ್ನ ಬೇಡಿಕೊಂಬೆ ಇಂದಿರೇಶ ವೆಂಕಟೇಶ ಎಂದು ನಿನ್ನ ಪದವ ಕಾಂಬೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಿಸೆಲೊ ಮುಕುಂದ ಮಾಧವ ಶ್ರೀರಾಮ ಧರಣಿಧರನೆನಿಸಿ ನಿಮ್ಮ ದಾಸ್ಯವ ಪ ಅಂಬುಜಾಕ್ಷ ಕಂಬುಕಂದರ ವಿನುತ ಮುರಹರ ಶಂಬರಾರಿ ಜನಕ ಗಿರಿಧರ ಶೌರಿ ಶುಭಕರ 1 ಚಾರು ಸುಚರಿತ ಶ್ರೀರಾಮ ವನಜನಾಭ ಮುನಿ ವಂದಿತ ದನುಜ ಗರ್ವ ಸಂಹಾರಾಚ್ಯುತ ಶ್ರೀರಾಮ ಅನಘ ಕನಕವಸನ ಭೂಷಿತ 2 ಪನ್ನಗೇಂದ್ರಶಯನ ವಾಮನ ಉದಧಿ ಬಂಧನ ಹೆನ್ನೆಪುರನಿಲಯ ಜನಾರ್ದನ ಶ್ರೀರಾಮಯನ್ನ ಮೊರೆಯ ಕೇಳಿ ಬೇಗನೆ 3
--------------
ಹೆನ್ನೆರಂಗದಾಸರು
ಕರುಣಿಸೈ ಗುರುರಾಯ ಚರಣತೀರ್ಥವನು ಹರಣ ಭಯದೊಳು ಲಕುಮೀರಮಣನೊಲಿವಂದದಲಿ ಪ ದೇಶ ದೇಶವ ತಿರುಗಿ ಬೇಸರದು ಈ ಚರಣ ಭೂಸುರವ ಪೂಜಿಸುವದು ಈ ದಿವ್ಯ ಚರಣ ಕ್ಲೇಶವೆನಿಸದೆ ತೀರ್ಥದಾಸೆಯ ಬಿಡದ ಈ ಚರಣ ಕಾಶಿ ರಾಮೇಶ್ವರಕೆ ನಡೆದ ಚರಣ1 ಹಾವಿಗೆಯನೊಲ್ಲದೆ ಹಾದಿ ನಡೆದಿಹ ಚರಣ ದೇವಿ ಭಾಗೀರಥಿಗೆ ಇಳಿದ ಚರಣ ಕಾವಿ ವಸ್ತ್ರವನುಟ್ಟ ಕಾಶಿವಾಸಿಯ ಚರಣ ಕೋವಿದರು ವಂದಿಸುವ ದಿವ್ಯ ಚರಣ2 ಗಟ್ಟಿ ಬೆಟ್ಟವ ತಿರುಗಿ ಕಷ್ಟಬಟ್ಟಿಹ ಚರಣ ಸೃಷ್ಟಿಗುತ್ತಮ ನದಿಯ ಮಿಂದ ಚರಣ ಇಷ್ಟಗಳನೆಲ್ಲ ತಾ ಪಡೆದುಕೊಂಡಿಹ ಚರಣ ಕೃಷ್ಣಮೂರ್ತಿಯ ಬಳಿಗೆ ಬಂದ ಚರಣ 3 ಶುದ್ಧ ವೈಷ್ಣವರೆಲ್ಲ ಉಜ್ಜಿ ತೊಳೆವ ಚರಣ ಬದ್ಧ ಮುಕ್ತರಿಗೆಲ್ಲ ಸಿದ್ಧಿಯಹ ಚರಣ ಮಧ್ವರಾಯನ ಮತದಿ ಎದ್ದು ತಿರುಗುವ ಚರಣ ವಿದ್ಯೆನಿಧಿ ಗುರುರಾಯ ಬಾಳ್ದ ಚರಣ 4 ಧರಣಿಯನು ಬಲವಂದು ದಣಿದು ಬಂದಿಹ ಚರಣ ಕೈವಲ್ಯ ಪಡೆದ ಚರಣ ವರಾಹತಿಮ್ಮಪ್ಪನಿಹ ಗಿರಿಯನೇರಿದ ಚರಣ ಸ್ಥಿರವಾಗಿ ಉಡುಪಿಯೊಳು ನಿಂದ ಚರಣ 5
--------------
ವರಹತಿಮ್ಮಪ್ಪ
ಕರುಣಿಸೈ ಶ್ರೀ ರಾಮ ಕೌಸಲ್ಯ ಪ್ರೇಮ ಶರಣ ಜನಕನು ಪೊರೆವ ಕಾರುಣ್ಯಧಾಮ ಪ. ದಶರಥಾತ್ಮಜ ಯಜ್ಞ ಕಾಯ್ದು ಸೀತೆಯ ವರಿಸಿ ಕುಶಲದಿಂದಲಿ ಬಂದು ನಗರದಲ್ಲಿರಲೂ ಸತಿ ಅನುಜಸಹ ವನದಿ ನಸುನಗುತ ಚರಿಸಿ ರಕ್ಕಸರ ಸದೆಬಡಿದೆ 1 ಸತಿಯೆ ಕಳೆದಿರೆ ಹನುಮ ಹಿತವಾರ್ತೆ ಬಿನೈಸೆ ಹತಗೈದು ರಾವಣಾದಿಗಳನೆಲ್ಲ ಹಿತದ ರಾಜ್ಯದ ವಿಭೀಷಣ ರವಿಜರಿಗೆ ಇತ್ತು ವ್ರತ ಬಿಡಿಸಿ ಭರತನಿಗೆ ಧರಣಿಯಾಳಿದನೇ 2 ಪಟ್ಟಾಭಿರಾಮ ಮಂಗಳ ನಾಮ ಕೃಪೆಯಿಂದ ಇಷ್ಟಾರ್ಥವೀಯೊ ಸನ್ಮಂಗಳವನೂ ದಿಟ್ಟ ಶ್ರೀ ಹನುಮ ವಂದಿತ ಚರಣ ನಮಿಸುವೆನು ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲನೇ 3
--------------
ಅಂಬಾಬಾಯಿ
ಕರುಣಿಸೊ ಕರುಣಿಸೊ ಗುರುವೆಂಕಟೇಶ ಕರುಣಿಸೆನ್ನ ನೀ ನೋಡೊ ಪರಮ ಪುರುಷ ಧ್ರುವ ಬಿನ್ನಹವ ಪಾಲಿಸೊ ಚಿನುಮಯ ರೂಪ ಉನ್ನತ ಮಹಿಮ ನೀ ಘನ್ನ ಗುರು ಕೃಪ 1 ಅನಾಥ ಬಂಧು ನೀ ಶರಣ ರಕ್ಷಕ ಅನಂತ ಕೋಟಿ ಬ್ರಹ್ಮಾಂಡ ನಾಯಕ 2 ವಾಸುದೇವ ಚಿದ್ರೂಪ ದೇಶಿಕರದೇವ ಭಾಸಿ ಪಾಲಿಪ 3 ವಂದಿತ ತ್ರೈಲೋಕ್ಯ ವೇದಾಂತ ಮಹಿಮ ಇಂದಿರಾಪತಿ ಘನಗುರುಬ್ರಹ್ಮ 4 ಶ್ರೀನಾಥ ನೀನಲ್ಲದೆ ನನಗಾರು ಇಲ್ಲ ನೀನೆ ಸಕಲಪೂರ್ಣ ಭಕ್ತವತ್ಸಲ 5 ಮತಿಹೀನನವಗುಣ ನೋಡದಿರೆನ್ನ ಕ್ಷಿತಿಯೊಳು ಸದ್ಗೈಸೊ ಪತಿತಪಾವನ 6 ದೀನನಾಥ ನೀ ಬಂದು ಮನದೊಳು ನಿಂದು ಮನ್ನಿಸಿ ದಯಬೀರೊ ಘನಕೃಪಾಸಿಂಧು7 ವಿಶ್ವವ್ಯಾಪಕ ಸಾಧುಹೃದಯನಿವಾಸ ದಾಸ ಮಹಿಪತಿ ಪ್ರಾಣ ಹೊರಿಯೊ ಪ್ರಾಣೇಶ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣಿಸೊ ಗುರು ಎನಗೆ ಸ್ಮರಿಸು ಹಾಂಗೆ ದೋರು ನಿಮ್ಮರುಹ ಬ್ಯಾಗೆ ಗುರುತಲೀಗೆ 1 ನಿನ್ನವನೆ ಎಂದೆನಿಸೊ ಭಿನ್ನ ಹರಿಸೊ ಎನ್ನ ದಯದಿ ಪಾಲೆಸೋ ಧನ್ಯಗೈಸೊ 2 ಅನುದಿನದಿ ಕಾಯೊ ನೀ ಬಂದು ಅನಾಥ ಬಂಧು ದೀನಾನಾಥ ನೀ ಎಂದೆಂದು ಘನ ಕೃಪಾಸಿಂಧು 3 ಭಕ್ತ ಜನರನುಕೂಲ ಭೋಕ್ತಸಕಲ ಶಕ್ತ ನೀನಹದೊ ಕೃಪಾಲ ಬಕ್ತ ವತ್ಸಲ 4 ಅನುಭವಸುಖ ಬೀರಿಸೊ ಖೂನದೋರಿಸೊ ದೀನ ಮಹಿಪತಿ ತಾರಿಸೊ ಘನಸುರಿಸೊ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು