ಒಟ್ಟು 8036 ಕಡೆಗಳಲ್ಲಿ , 131 ದಾಸರು , 4635 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮ್ಮ ನಿಮ್ಮಗೊಂದಾದ ಮಾತು ಬ್ರಹ್ಮಾದಿಗಳು ಹೋದರು ಸೋತು ಒಮ್ಮನಾದರೆ ತಿಳಿವದಂತು 1 ಬಿಟ್ಟು ಕೊಡೊ ನಿನ್ನ ಬಾಜಿ ಗಂಟುಹಾಕಿಹೆ ಬಲು ಗಜಿಬಿಜಿ ಮುಟ್ಟಲಾರದು ಮೊನೆ ಸಣ್ಣ ಸೂಜಿ ಗುಟ್ಟು ಹೇಳೊ ಸದ್ಗುರು ದೇವಾಜಿ 2 ನಮ್ಮ ನಿಮ್ಮಳಗ್ಯಾಕೆ ತೊಡಕು ಇಮ್ಮನಾದರೆ ಹುಟ್ಟಿತು ಒಡಕು ಹಮ್ಮು ಎನ್ನೊಳಗಿಲ್ಲ ನೀ ಹುಡುಕು ಸುಮ್ಮನ್ಯಾಕಿದು ಶ್ರಮೆಯ ತಿಡುಕು 3 ಗುರು ಹೇಳಿದ ಮಾತಿಗೆ ಮುಟ್ಟಿ ತೋರಿ ಕೊಡಬೇಕು ನೀನೆ ಗಟ್ಟಿ ಅರಿತ ಮ್ಯಾಲೆ ಮಿಸುಕನು ತುಟ್ಟಿ ಖರೆ ಮಾಡಿಕೊ ಜಗಜಟ್ಟಿ 4 ಒಂದು ಮಾತು ಎಂಬುದು ಬಲ್ಲಿ ಸಂದ ಸಂದೇಹ್ಯಾರಿಸೊ ನೀ ಇಲ್ಲಿ ಕಂದ ಮಹಿಪತಿ ಮನದಲ್ಲಿ ಚಂದವಾಗಿರೊ ನೀನೆವೆ ಅಲ್ಲಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಮ್ಮ ರಂಗ ಮಧುರೆಗೆ ನಡೆತರಲು ಪ ಮಥುರೆಗೆ ನಡೆತರಲು ಅತಿ|ಹರುಷದಲಿ ಅಕ್ರೂರನೊಡನೆ| ರಥದಲಿ ಕುಳಿತು ಫಡ ಫಡಫಡಲೆಂದು| ಪಥದಲಿ ನಡಸ್ಯಾಡುತಲಿ 1 ಬಿಲ್ಲಹಬ್ಬದ ನೆವದಲ್ಲಿ|ಫುಲ್ಲಲೋಚನ ಮೋಹನ ಕೃಷ್ಣ| ಇಲ್ಲಿಗೆ ಬಂದನು ಎನುತಲಿ ಕೇಳಲು| ಎಲ್ಲರು ನಡೆದರು ನೋಡಲಾಗಿ 2 ಆಲಯದೊಳಗೆ ನಿಲ್ಲದೇ|ಬಾಲಕಿಯರು ತಮತಮ್ಮ| ಚಾಲವರುತಿಹಾ ತೊಟ್ಟಿಲೊಳಗಿನಾ|ಬಾಲಕರಿಗೆ ಮೊಲೆಗುಡದೆ 3 ಒಬ್ಬಳು ಅರೆಯಣ್ಣೆತಲೆಯಲಿ|ಒಬ್ಬಳು ತಿಗರವ ಹಚ್ಚಿದ ಮೈಯಲಿ ನಡೆದರು ಸಂಭ್ರಮದಿಂದ4 ಅಚ್ಚಮೈಯಲಿ ಕುಳಿತಿರೆ ಒಬ್ಬಳು|ಬಚ್ಚಲೊಳಗೆ ಮಜ್ಜಕನಾಗಿ ಅಚ್ಯುತನಾತುರದಿಂದಲಿ ಒಬ್ಬಳು ಎಚ್ಚರ ದೇಹದ ಬಿಟ್ಟು ನಡೆದಳು 5 ಎಲೆಳುಶಿಶುವೆಂದು ಬಗಲಿಲಿ|ಅಳತೆಯ ಮಾನವನಿರಿಸಿಕೊಂಡು| ನೆಲೆನೊಡದೇ ನಡೆದಳೊಬ್ಬಳು|ಚೆಲುವ ಕೃಷ್ಣನ ನೋಡಲಾಗಿ6 ಕದವನು ಒತ್ತಿಮುಂದಕ|ಒದಗದಿ ಕೆಲವರು ಮಾಳಿಗೆ ಏರಿ| ಸದಮಲಾನಂದಗ ತಲೆಯನು|ಬಾಗಿ ಪದುಮಕರವ ಮುಗಿದು7 ದಣ್ಣನೆ ನೋಡೀ ನೋಡುತಾ|ಕಣ್ಣುಪಾರಣೆ ಮಾಡಿಕೊಂಡು| ಮುನ್ನಿನ ದೋಷವ ಕರಗುವ ಪರಿಯಲಿ| ಪುಣ್ಯ ಸಾಮಗ್ರಿಯ ಮಾಡಿದರಂದು 8 ಕಂಡಾ ಪರಿಯ ರೂಪವಾ| ಧರಿಸಿಕೊಂಡು ಅಂತರಂಗದಲಿ|ತ್ವರಿತದಿಂದಲಿ ಧ್ಯಾಯಿಸುತಾ9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಮ್ಮ ರಂಗನ ಕಂಡಿರ್ಯಾ ಹೇಳಿರಿ ನೀವಮ್ಮಾ ಪ ಅರಳೆಲೆ ಮಾಗಾಯಿ ಕಿರಿಗೂದಲು ಮುತ್ತಿನ| ವರಮಕುಟ ಪದಕ ಕೊರಳಿನಾ 1 ಕುಂಡಲ ಕುಡಿ-ಗಂಗಳ ಬೆಳಗಿನ| ಚೆಲುವ ಕದವು ಮುದ್ದು ಸೊಬಗಿನಾ 2 ಬರಿಮುಗುಳ ನೆಗೆಯಾ ಸುದಂತ ಸಾಲಿನ ಸಿರಿವತ್ಸಧರ ಹೇಮಚಸನನಾ3 ಧರೆಯೊಳು ಭಕ್ತರ ಮಾಡುವ ಪಾವನ| ಮಿರುಪರನ್ನದಂಗುರ ಬೆರಳಿನಾ 4 ಕೊಳಲನೂದಿ ಗೋಪ್ಯಾರ ಮೋಹಿಪ ಮನಸಿನಾ| ಒಲಿದು ಪಾಲಿಪ ಮಹಿಪತಿಜನ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಮ್ಮಪ್ಪನ ಕಂಡೆ ಅಪಾರ ಮಹಿಮೆಯುಳ್ಳನ ಧ್ರುವ ಅಪ್ಪನ ಕಂಡೆನಗೆ ತಾ ಅಪಾರ ಸಂತೋಷವಾಯಿತು ಅಪ್ಪಿಕೊಂಬ್ಹಾಗೆ ಎನಗೆ ಅರ್ಪಿಸಿ ಪ್ರಾಣವ 1 ತುಂಬಿ ತುಳುಕಿತಾನಂದ ಗುಂಭಗುರುತ ಕಂಡಿನ್ನು ಕುಂಭಿನಿಯೊಳಗೆ ಪೂರ್ಣ ಅಂಬುಜಾಕ್ಷನ 2 ಗುಪ್ತಲಿದ್ದ ಧನ ತಾ ಪ್ರಾಪ್ತ ವ್ಯಾನಂತವಾಯಿತು ತಪ್ಪದೆ ಮಹಿಪತಿಗೆ ತೃಪ್ತಿ ಹೊಂದಿತು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಮ್ಮಮ್ಮನ ಕಂಡೆ ಬೊಮ್ಮನ ಪಡೆದಿಹಳ ಧ್ರುವ ಅಮ್ಮನ ಕಂಡೆನಗೆ ಸುಅಮೃತ ಪಾನವಾಯಿತು ಸಂಭ್ರಮದಿಂದಲೆನಗೆ ಬ್ರಹ್ಮಾಂಡದೊಳು 1 ಅಹ್ಲಾದವಾಯಿತಿಂದು ಫುಲ್ಲಲೋಚನೆಯ ಕಂಡು ಉಲ್ಲಾಸ ತುಂಬಿತೆನಗೆ ಮೂಲೋಕದೊಳು 2 ಮಾತೃ ಪಿತೃವೆಂಬುದು ಸೂತ್ರಧಾರಿ ತಾನೊಬ್ಬಳೆ ಅಂತ್ರ ಬಾಹ್ಯದಲೆನಗೆ ಪುತ್ರ ಮಹಿಪತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಮ್ಮಯ್ಯ ಗುರು ನಾ ನಿಮ್ಮ ಮನಿಯ ಶ್ವಾನ ಹೆಮ್ಮೆಯೆಂಬ ಹಲ್ಲು ಮುರಿದೆ ಪೂರ್ಣ ಸುಮ್ಮನಿರುವೆ ಕಂಡು ಸಂತತ ಚರಣ ಒಮ್ಮನದಿಂದೆ ತೃಪ್ತ್ಯಾಯಿತು ಜೀವನ 1 ಸದ್ಭೋಧದನ್ನ ನೀಡಲು ಓಡಿಬಂದೆ ಸದ್ಗುರುವೆ ಒಡೆಯ ನೀನಹುದೆಂದೆ ಬಿದ್ದುಕೊಂಡಿಹೆ ನಾ ನಿಮ್ಮ ಮನೆಯ ಮುಂದೆ ಬುದ್ಧಿವಂತರು ಬೆನ್ನಟ್ಟಿ ಹೋಗೆ ಹಿಂದೆ 2 ಹಳಿಯೆಂದರೆ ನಾ ಹೋಗೆ ಎಂದೆಂದಿಗೂ ಬಿಟ್ಟು ಗುಹ್ಯ ವಾಕ್ಯದ ಹೆಜ್ಜೆ ಮೆಟ್ಟು ಸುಳವುದೋರಲು ನಿಮ್ಮ ಸದ್ಗತಿ ಮುಕ್ತಿಯುಂಟು ತಿಳದ್ಹಾಕಿಹನಾ ನಿಮ್ಮ ಪಾದರಕ್ಷಕೆ ಗಂಟು 3 ಬಾಗಿಲಕಾಯಿಕೊಂಡು ಬಿದ್ದಿಹ್ಯ ನಿಮ್ಮ ಶ್ವಾನ ಹಗಲಿರುಳು ನಾ ನಿಮ್ಮ ಬೊಗುಳವೆ ನಿಜಗುಣ ಜಾಗಿಸುವದೆನ್ನೊಳು ನಮ್ಮಯ್ಯ ನಿಮ್ಮ ಖೂನ ಸುಗುಮದಿಂದ ದೊರೆಯಿತು ನಿಜ ಸ್ಥಾನ 4 ಹಿಡಿದು ಕಚ್ಚಿಹೆ ನಿಮ್ಮ ಪಾದರಕ್ಷ ಸಂಪೂರ್ಣ ಬಿಡೆ ಎಂದೆಂದು ನಾ ಹೋದರೆ ಜೀವ ಪ್ರಾಣ ಪಿಡಿದು ಮಾಡುವೆ ನಾ ಜತನ ಮೂಢ ಮಹಿಪತಿಗಿದೆ ಸುಖಸಾಧನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನರಕ ಎತ್ತಣದೋ ನರಕ ಎತ್ತಣದೋ ನರ ಕಂಠೀರವನೆಂದು ಸ್ಮರಿಸುವ ಜನರಿಗೆ ಪ ಸ್ನಾನ ಮಾಡುವುದೇಕೆ ಧ್ಯಾನಗೈಯುವುದೇಕೆ ದಾನ ಧರ್ಮಂಗಳು ಮಾಡಲೇಕೆ ಶ್ರೀ ನಾರಾಯಣನೆಂದು ಆವಾಗಲೂ ಜಿಹ್ವೆ ತ್ರಾಣದಲಿ ಬಿಡದೆ ಎಣಿಸುವ ಜನರಿಗೆ1 ತೀರ್ಥ ಮೀಯುವದೇಕೆ ಯಾತ್ರೆ ಚರಿಪದೇಕೆ ಸ್ತೋತ್ರ ಮಂತ್ರಾದಿಗಳು ಪಠಿಸಲೇಕೆ ಚಿತ್ರಮಹಿಮ ನೀಲಗಾತ್ರನ್ನ ಚರಿತೆ ಕಾ ಲತ್ರಯ ಬಿಡದೆ ಉಚ್ಚರಿಸುವ ಜನರಿಗೆ 2 ದೀಪ ಧೂಪಗಳೇಕೆ ನಾನಾ ಪರಿಯಲ್ಲಿ ಸೋಪಸ್ಕರದ ಎಡೆ ಇಡಲೇತಕೆ ಅಪಾರ ಮಹಿಮ ಅನಾಥರೊಡೆಯ ರಂಗ ಶ್ರೀಪತಿ ಎಂದೀಗ ಸ್ಮರಿಸುವ ಜನರಿಗೆ 3 ಭೂತದಯಗಳೇಕೆ ನೀತಿ ಎಂಬುದು ಏಕೆ ಜಾತವೇದಸನಲ್ಲಿ ಕಳವಳವೇಕೆ ಪಿನಾಕಿ ಸಖನೆಂದು ಮಾತು ಮಾತಿಗೆ ನೆನೆದು ಸುಖಿಸುವ ಜನರಿಗೆ 4 ಏನೇನು ಕರ್ಮದಾಚರಣೆ ಮಾಡುವದೇಕೆ ಭಾನು ಉದಯವಿಡಿದು ತೊಳಲಲೇಕೆ ದೀನನಾಗಿ ದಾತಾ ವಿಜಯವಿಠ್ಠಲ ಹರಿಯ ಮಾನಸದಲಿ ಧ್ಯಾನ ಮಾಡುವ ಜನರಿಗೆ 5
--------------
ವಿಜಯದಾಸ
ನರರೂಪ ಮುರವೈರಿ ಪ ಸುಜನ ಸಂಪ್ರೀತನೆ ಕಂದನ ಕಾಯೊ ಮಮ ಸಿಂಧುಶಯನನೆ 1 ಸಿರಿಧರನ್ಯಾರೆಲೊ ದುರಿತವದೋರೆಲೊ ನರಹರಿಯಾದ ನಮ್ಮ ನಾರಾಯಣ ಬಾರೊ 2 ಫಣಿಯನ್ಯಾರೆಲೊ ಯೆಣಸಲು ನೀನೆಲೊ ಪ್ರಣವರೂಪನೆ ನಿಜ ಗುಣಮಣಿಯಾರೆಲೊ 3 ದೇಶಿಕ ತುಲಶಿ ನಿನ್ನದಾಸನು ನಾನಾದೇ 4
--------------
ಚನ್ನಪಟ್ಟಣದ ಅಹೋಬಲದಾಸರು
ನರಸಿಂಹ ನರಸಿಂಹ ಶರಣು ಧರಣಿಧರ ಪರಮ ಕೃಪಾಕರ ಪ ಶ್ರೀಕರ ಭಕ್ತ ವಶೀಕರ ಕೋಟಿ ಪ್ರಭಾಕರ ಸನ್ನಿಭ ಭೀಕರ ರೂಪ 1 ಜಂಭ ಭೇದಿಸುತ ಕುಂಭಿಣಿ ಧವ ಶಶಿ ಕಂಬು ಕಂಠಶ್ರೀ 2 ಶರಧಿ ಗಂಭೀರ ಮುನಿ ಮಂದಾರ ಮನೋಹರ 3 ಗಾನಲೋಲ ಸುಮಬಾಣ ಜನಕ ಮುನಿ ಮಾನಸ ಹಂಸ ಶ್ರೀನಿವಾಸ ಹರಿ 4 ಗರುಡಗಮನ ಮುರನರಕಾಂತಕ ಶ್ರೀಧರವರ 'ಹೆನ್ನೆಪುರ ನಿಲಯ'ಶ್ರೀ 5
--------------
ಹೆನ್ನೆರಂಗದಾಸರು
ನರಸಿಂಹ ನರಸಿಂಹ ನಮಿಸುವೆನೊ ಘೋರ ದುರಿತ ಬೆನ್ನ ಬಿದ್ದಿದೆ ಪರಿಹರಿಸೋ ಶ್ರೀ ನರಸಿಂಹ ಪ ಪರಮೇಷ್ಠಿ ಹರ ಸುರಪತಿ ಮುಖರಾ ಸುರನಿಕರ ಪೊರೆವ ಪ್ರಭೊ ಪ್ರವರ ದುರಿತವು ಅವರನ್ನ ಬಾಧಿಸದಂತೆ ಪೊರೆದ ಪರಿಯಿಂದ ಎನ್ನ ಪೊರೆಯೊ 1 ಕಾಯ್ದು ತನ್ನಯ ತನ್ನ ತಂದೆಯ ಬಾಧೆ ಭಯದಿಂದ ಮನದಲ್ಲಿ ನಿನ್ನ ನೆನಿಯೆ ದಯದಿಂದ ನೀ ಕಂಭದಲಿ ಬಂದು ಪೊರೆದಂತೆ ಎನ್ನ ಭಯ ಪರಿಯೆ ಪೊರೆ ಶ್ರೀ ನರಸಿಂಹ 2 ನಿನ್ನ ಪೆಸರೆಂದರೆ ದುರಿತಂಗಳು ತನ್ನಿಂದ ತಾನೆ ಜರಿಯುವವು ಚನ್ನಾಗಿ ಶರಣರ ಪೊರೆದದಕೆ ನಿನ್ನವರೆಂದು ಕೇಳಿ ಬಲ್ಲೆ ಶ್ರೀ ನರಸಿಂಹ 3 ನಖ ಮುಖ ಶಿಖಿ ತನ್ನ ನೆನೆಯೆ ಸುಖಿತರವಾಹೋದು ಶರಣರಿಗೆ ಮಖಭುಜ ರವಿ ಸಾಕ್ಷಿ ಇದಕಾಗಿರೆ ವಿಖನಸಾರ್ಚಿತ ಪಾದ ಸುಖಮಯನೆ ಶ್ರೀ ನರಸಿಂಹ ಕಾಯೊ 4 ಅರಿದರೀಧರ ವರ ಕರಯುಗನೆ ಕರಯುಗ ಜಾನು ಶಿರದಲ್ಲಿಪ್ಪನೆ ಶಿರದಿಂದೊಪ್ಪುವ ಕರತಳನೆ ವರ ವಾಸುದೇವವಿಠಲ ಪೊರೆಯೊ ಶ್ರೀ ನರಸಿಂಹ ಕಾಯೊ 5
--------------
ವ್ಯಾಸತತ್ವಜ್ಞದಾಸರು
ನರಸಿಂಹ ಪಾಹಿ ಲಕ್ಷ್ಮೀ ನರಸಿಂಹ ಪ ನರಸಿಂಹ ನಮಿಪೆ ನಾ ನಿನ್ನ ಚಾರುಚರಣಕಮಲಕೆ ನೀ ಎನ್ನ ಕರವ ಪಿಡಿದು ನಿಜ ಶರಣನೆಂದೆನಿಸೊ ಭಾ ಸುರ ಕರಣಾಂಬುಧೆ ಗರುಡವಾಹನ ಲಕ್ಷ್ಮೀ ಅ ತರಳ ಪ್ರಹ್ಲಾದನ್ನ ನುಡಿಯಾ ಕೇಳಿ ತ್ವರಿತದಿ ಬಂದ್ಯೊ ಎನ್ನೊಡೆಯ ನಾನು ಕರುಣಾಳೊ ಭಕ್ತರ ಭಿಡೆಯ ಮೀರ ಲರಿಯೆ ಎಂದೆಂದು ಕೆಂಗಿಡಿಯ ಅಹ ಭರದಿಂದುಗುಳುತ ಬೊಬ್ಬಿರಿದು ಬೆಂಬತ್ತಿಕ ರ್ಬುರ ಕಶ್ಯಪುವಿನ ಹಿಂಗುರುಳ ಪಿಡಿದೆ ಲಕ್ಷ್ಮೀ 1 ಪ್ರಳಯಾಂಬುನಿಧಿ ಘನಘೋಷದಂತೆ ಘುಳಿ ಘುಳಿಸುತಲಿ ಪ್ರದೋಷ ಕಾಲ ತಿಳಿದು ದೈತ್ಯನ ಅತಿರೋಷದಿಂದ ಪ್ಪಳಿಸಿ ಮೇದಿನಿಗೆ ನಿದೋಷ ಅಹ ಸೆಳೆಸೆಳೆಯುತ ಚರ್ಮಸುಲಿದು ಕೆನ್ನೆತ್ತರೋ ಕುಳಿಯನಾಡಿದೆ ದಿಶಾವಳಿಗಳೊಳಗೆ ಲಕ್ಷ್ಮೀ 2 ಕ್ರೂರ ದೈತ್ಯನ ತೋರಗರುಳಾ ತೆಗೆ ದ್ಹಾರ ಮಾಡಿದೆ ನಿಜಕೊರಳ ಕಂಡು ವಾರಿಜಾಸನ ಮುಖದಯರ್ಕಳ ಪುಷ್ಪ ಧಾರಿಗೆರೆದು ವೇಗ ತರಳಾ ಆಹ ಸೂರಿ ಪ್ರಹ್ಲಾದಗೆ ತೋರಿ ತವಾಂಘ್ರಿ ಸ ರೋರುಹಾವನು ಕಾಯ್ದೆ ಕಾರಣ್ಯನಿಧಿ 3 ಜಯಜಯ ದೇವವರೇಣ್ಯ ಮಹ ದ್ಭಯ ನಿವಾರಣನೆ ಅಗಣ್ಯ ಗುಣಾ ಶ್ರಯ ಘೋರ ದುರಿತಾರಣ್ಯ ಧನಂ ಜಯ ಜಗದೇಕ ಶರಣ್ಯ ಅಹ ಲಯವಿವರ್ಜಿತ ಲೋಕ ತ್ರಯ ವ್ಯಾಪ್ತ ನಿಜಭಕ್ತ ಪ್ರಿಯ ಘೋರಮಯ ಹರ ದಯ ಮಾಡೆನ್ನೊಳು ಲಕ್ಷ್ಮೀ 4 ಕುಟಲ ದ್ವೇಷದವನು ನೀನಲ್ಲ ನಿನ್ನಾ ರ್ಭಟಕಂಜಿದರು ಸುರರೆಲ್ಲ ನರ ನಟನೆ ತೋರಿದ್ಯೋ ಲಕ್ಷ್ಮೀನಲ್ಲ ನಾ ಪಾ ಸಟಿ ಕಾಣೆನಪ್ರತಿಮಲ್ಲ ಅಹ ವಟಪತ್ರಶಯನ ಧೂ ರ್ಜಟಿವಂದ್ಯ ಜಗನ್ನಾಥ ವಿಠಲ ಕೃತಾಂಜಲಿಪುಟದಿ ಬೇಡುವೆ ಲಕ್ಷ್ಮೀ5
--------------
ಜಗನ್ನಾಥದಾಸರು
ನರಸಿಂಹಾ ಲಕ್ಷ್ಮೀನರಸಿಂಹ ಪ ನಮಿಸುವೆ ಲಕ್ಷ್ಮೀನರಸಿಂಹ ಅಹಾ ಕನಕಕಶ್ಯಪನಳಿದು ಜನಕೆ ಸುಖವನಿತ್ತು ಘನಪುರುಷನೆ ಕ್ಷಣ ಕ್ಷಣ ನಮಿಸುವೆ ಅ.ಪ ಅಟ್ಟಹಾಸದಿ ಕಂಭಸಿಡಿದೂ | ಬಲು ಕಟ್ಟುಗ್ರತನದ ಕೆಟ್ಟ ಹಿರಣ್ಯನ ಹೊಟ್ಟೆಯ ಬಗೆದಂಥ ಶ್ರೇಷ್ಠಮಹಿಮನೆ 1 ತೊಡೆಯ ಮೇಲಿಟ್ಟಿ ಬಹು ಕಂಡೆ ಈ ದಿನ 2 ಸೂರಿಗಳರಸ ಒಡೆಯಾ | ಮೋಲೆ ಸುರಸೋದರರೊಳುಮೆರೆಯ | ಆಹಾ ಕ್ರೂರ ದೈತ್ಯನ ಕೊರಳಹರಿದ ಅ- ಪಾರ ಮಹಿಮಸಿರಿವರ ಸಿಂಹವಿಠಲ 3
--------------
ಓರಬಾಯಿ ಲಕ್ಷ್ಮೀದೇವಮ್ಮ
ನರಸಿಂಹಾವತಾರ ಕಮಲ ಸ ಮಾಧಿರೂಢ ಪದಾಬ್ಜ ಪೂರ್ಣ ಸು ಭಂಜನ ಮಾಧವ ಮುರಾರೆ ವ್ಯಾಧಿ ಪೀಡೆಯ ಪರಿಹರಿಸು ಮಹ ದಾದಿ ತತ್ವಯಂತ್ರೆ ನುತ ಪ್ರ ಲ್ಹಾದ ರಕ್ಷಕ ನರಹರಿಯೆ ದಹಿಸಖಿಳ ಶತ್ರುಗಳ 1 ಪ್ರಳಯಕಾಲದ ರವಿ ಸಮೂಹದ ಕಳೆಗು ಮಿಗಿಲಾಗಿರುವ ಮುಖದೊಳ್ ಥಳತಳಿಪ ದಂಷ್ಟ್ರಗಳ ತೋರುತ ಕಳೆದು ವದನವನು ಛಲದಿ ಚೀರುತ ದಾನವನ ಕಂ- ಗಳನು ಮುಚ್ಚಿಸಿ ಪಿಡಿದು ತಿಕ್ಕಿದ ಬಲ ಪಯೋನಿಧಿ ನರಹರಿಯೆ ದಹಿಸಖಿಳ ಶತ್ರುಗಳ 2 ಕಂಭದೊಳಗಂದಾದ ರವ ಕೇ- ದಿವಿಜ ಕ- ದಂಬ ಭಯಗೊಂಡಂಬರದ ಮೇಲಿಂಬುಗೊಂಡಿರಲು ಜಂಭ ವೈರಿಯ ಜರಿದು ಕೆಡಹಿದ ಕುಂಭಿ ಕುಂಭ ಭುಜದ್ವಯನ ಮುರಿ ದಂಬುಜಾಲಯರಮಣ ನರಹರಿ ದಹಿಸಖಿಳ ಶತ್ರುಗಳ 3 ಅಡಿಯಿಡುವ ರಭಸಕೆ ದಿಗಿಭಗಳು ನಡು ನಡುಗಲು ನಿಶಾಮುಖದಿ ಕೆಂ ಗಿಡಿಯನುಗುಳುತಲಾದಿ ದೈತ್ಯನ ಪಿಡಿದು ಖತಿಯಿಂಗ ತೊಡೆಯೊಳಿಕ್ಕೀರೈದು ಖರತರ ಕೊಡಲಿಯಂತಿಹ ನಖಗಳಿಂದ ನೊಡಲ ಬಗೆದಿಹ ನರಹರಿಯೆ ದಹಿಸಖಿಳ ಶತ್ರುಗಳ 4 ವರರಥಾಂಗಾದಿಗಳ ದ್ವಾದಶ ಕರದಿ ಧರಿಸುತಲೆರಡು ಕರದೊ ಳ್ಕರುಳಮಾಲೆಯ ಪಿಡಿದು ಮಿಕ್ಕಾದೆರಡು ಹಸ್ತಗಳ ಬೆರಳ ಕೊನೆಗಳ ತಿರುಹಿ ದಾನವ ಸುರವರನಖ ಮುಖದಿಂದ ಬಿಚ್ಚಿದ ನಿರವಧಿಕ ಬಲಪೂರ್ವ ನರಹರಿ ದಹಿಸಖಿಳ ಶತ್ರುಗಳ 5 ದತ್ತ ಸ್ವಾತಂತ್ರ್ಯವನು ಮೀರ್ದಾ ಪತ್ತು ಘಟಿಸುವ ಕಾಲದಲಿ ಪುರು- ಷೋತ್ತಮನ ನೆನೆದವರ ಕೈಪಿಡಿದೆತ್ತುತಿಹನೆಂದು ನಿತ್ಯ ಶಾಸ್ತ್ರಾದಿಗಳ ಶೋಧಿಸು ತುತ್ತುಮರು ಮೊದಲೆಂದ ಪೌರಾ- ಣೋಕ್ತಿಗಳ ನಿಜದೋರು ನರಹರಿ ದಹಿಸಖಿಳ ಶತ್ರುಗಳ 6 ಶೇಷಶಿಖರನಿವಾಸ ತತ್ಪದ ದಾಸರನು ಕಾಪಾಡಿ ಸಲಹುವ ಭಾಷೆಯನು ನೀ ಮರೆಪರೆ ಮದುಪಾಸ್ಯ ಸರ್ವೇಶ ಈಷದಂಜದ ದ್ವೇಷಿ ದುರ್ಜನ ನಾಶಗೈಸುವುದುಚಿತವೈ ಸವ ಕಾಶವ್ಯಾತಕೆ ನರಹರಿಯೆ ದಹಿಸಖಿಳ ಶತ್ರುಗಳ 7
--------------
ತುಪಾಕಿ ವೆಂಕಟರಮಣಾಚಾರ್ಯ
ನರಹರಿ ತೀರ್ಥಯತಿವರ್ಯ ಇಷ್ಟೆಂದೊ ಚರಿಯ ಪ ಸುರವಿನುತ ಪದಹರುಷತೀರ್ಥರ ಕರಕಮಲ ಸಂಜಾತರೆನಿಸುತ ಧರೆಯೊಳಗೆ ಸಿರಿಸಹಿತರಾ ಮನ ಕರೆದು ಧರೆಸುರ ಜನಕೆ ತೋರಿದ ಅ.ಪ ಚರಿಸುತ ಬರಲು ಗಜಪುರದಿ ಪುರ- ದರಸನಿಲ್ಲದಿರೆ ಯೋಚಿಸುತ ಕರಿಕರದಿ ವರಮಾಲಿಕೆಯ ಕೊಡಲಾಕ್ಷಣದೀ ಯತಿ ವರರ ಕಂಠದಲಿ ಹಾಕಲು ಜನ ಸಭದಿ ಪುರಜನದ ಪ್ರಾರ್ಥನದಿ ದ್ವಾದಶ ವರುಷ ಪ್ರಜರನು ಪೊರೆದು ಕೋಶದೊಳಿ- ರುವ ಧರಿಜಾಸಹಿತ ರಾಮನ ತರಿಸಿ ಪೊರಟರು ಕುದುರೆಯೇರುತ1 ಆ ಮಹಾಮುನಿಪರು ತ್ವರದಿ ಬಂದು ಶ್ರೀ ಮದಾನಂದ ತೀರ್ಥರ ಪದಯುಗದಿ ಪ್ರೇಮವಂದನ ಪೂರ್ವಕದಿ ಸೀತಾ ರಾಮಮೂರ್ತಿಯ ನೊಪ್ಪಿಸಿದರು ಕರದೀ ಶ್ರೀ ಮನೋಹರ ನಂಘ್ರಿಯುಗಲವ ಪ್ರೇಮದಿಂದಲಿ ಪೂಜಿಸುತಲಿರೆ ಈ ಮಹಾತ್ಮರ ಕರೆದು ಕೊಟ್ಟರು ನೇಮದಿಂದರ್ಚಿಸಿರಿ ಎನುತಲಿ 2 ಭಾಸುರ ಹೇಮಮಂಟಪದಿ ನಿತ್ಯಾ ಶ್ರೀಸೀತಾರಾಮನರ್ಚಿಪರು ವೈಭವದೀ ಭೂಸುರ ಕೃತ ವೇದಘೋಷದಿ ಮತ್ತೆ ವ್ಯಾಸಸೂತ್ರಗಳ ನಾಮಾವಳಿ ಪಠಣ ದಿ ದೇಶ ದೇಶಗಳಲ್ಲಿ ಚರಿಸುತ ತೋಷತೀರ್ಥರ ಮತವ ಬೋಧಿಸಿ ಸಿರಿ ನರ ಕೇಸರಿಗೆ ಪ್ರಿಯದಾಸರೆನಿಸಿದ 3
--------------
ಕಾರ್ಪರ ನರಹರಿದಾಸರು
ನರಹರಿ ದೀನದಯಾಳೊ ನರಹರಿ ಪ ನರಹರಿ ಕಾಯೊ ನೀಯೆನ್ನ | ಮಹಾ ದುರಿತಂಗಳ ಮರಿಯೊ ಮುನ್ನ | ಆಹ ಪರಮ ಭಕುತಿಲಿ ನಿನ್ನ ಚರಣಾರಾಧನೆ ಮಾಳ್ಪೆ ವರಭಯ ಹಸ್ತವೆನ್ನ ಸಿರದಲಿಡುತಲಿ ಅ.ಪ. ಹಿಂದೆ ಪ್ರಹ್ಲಾದದೇವನಂದು | ಪಿತನ ಬಂಧನದೊಳು ಸಿಲ್ಕಿ ಬಹುನೊಂದು | ತಾನು ಸಂಧ್ಯಾಕಾಲದೊಳಾಗ ನಿಂದು ನಿನ್ನ ಒಂದೇ ಮನದಿ ಸ್ತುತಿಸೆ ದಯಸಿಂಧು | ಆಹ ಮಂದಮತಿಯ ಹಿರಣ್ಯಕನುದರವ ಬಗೆದು ಛಂದದಿ ಕರುಳ ಮಾಲೆಯ ಧರಿಸಿದ ಧೀರ 1 ಕಂದು ಕೊರಳನಂತರ್ಗತದೇವ | ಸಕಲ ವೃಂದಾರಕ ವೃಂದವ ಕಾವ | ಭಕುತ ಸಂದಣಿಗೆ ಬೇಡಿದನೀವ | ಭವ ಬಂಧನವೆಂಬ ವಿಪಿನಕೆ ದಾವ | ಆಹ ಎಂದಿಗೆ ನಿನ್ನಯ ಸಂದರುಶನವೀವೆ ಮಂದಮತಿಯಾದೆನ್ನ ಮುಂದಕೆ ಕರೆಯೊ 2 ನೊಂದೆ ಸಂಸಾರದೊಳು ಮಾಲೋಲ | ಕರುಣ ದಿಂದ ನೋಡೆನ್ನ ದೀನಜನಪಾಲ | ದಿವ್ಯ ಸುಂದರ ಮೂರುತಿಯೆ ಗೋಪಾಲ | ಪವನ ವಂದಿತ ಶ್ರೀ ರಂಗೇಶವಿಠಲ | ಆಹ ಬಂದೆನ್ನ ಹೃದಯಮಂದಿರದಿ ನೆಲೆಯಾಗಿ ನೀ ನಿಂದು ಸಲಹೋ ಎನ್ನ ಕುಂದುಗಳೆಣಿಸದೆ 3
--------------
ರಂಗೇಶವಿಠಲದಾಸರು