ಒಟ್ಟು 3141 ಕಡೆಗಳಲ್ಲಿ , 118 ದಾಸರು , 2209 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೊತ್ತು ವ್ಯರ್ಥಾ ಹೋಗುತಿದಕೋ ಮುತ್ತಿನಂಥಾ ಪ ಹೋಗುತಿದೆ ಮುತ್ತಿನಂಥಾ ದಿನದೊಳು | ಚಿತ್ತ ಸ್ವಸ್ಥ ಮಾಡಿ ಪುರುಷೋತ್ತಮನ್ನ ನೆನೆಯಿರೋ ಅ.ಪ ಉತ್ತುಮರ ಸಂಗಡದಲ್ಲಿ | ನಿತ್ಯ ಶ್ರವಣಮನನ ಮಾಡಿ | ಅತ್ತಲಿತ್ತಲಾಗದೆ | ಸು | ವೃತ್ತಿಯೊಳು ಬೆರಿಯಿರೋ 1 ಪಗಡಿ ಪಂಚಿಯಾಡಿ ಪರರಾ | ಬಗಲಿ ಕಳೆದು ಕಳೆವದೇನು | ಯುಗುತಿ ಹೀನ ರಾಗದೆ | ಪಥ ಪಡಿಯಿರೋ 2 ಮಂದ ಮತಿಯ ಕೊಂಡ್ಯಾಡಿ | ಮಂದ ಮತ್ತೆ ದೊರೆಯದಿದ್ದ | ಇಂದು ನಾಳೆಗೆನ್ನದೇ ಮು | ಕುಂದ ನಾಮವ ನೆನೆಯಿರೋ 3 ಇಂದು ನರದೇಹದಿಂದ | ಬಂದು ಬರಡ ಮಾಡಬ್ಯಾಡಿ | ತಂದೆ ಮಹಿಪತಿ ದಯ | ದಿಂದ ಮುಕ್ತಿಯ ಪಡೆಯಿರೋ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೊಂದಿ ಬದುಕಿರೋ ಮನವೆ ಇಂದಿರೇಶನ ಎಂದೆಂದಗಲದೆ ದ್ವಂದ್ವ ಶ್ರೀಪಾದವ ಹೊಂದಿ ಸುಖಿಯಾಗೋ ತಂದೆ ಸರ್ವೇಶನ ಧ್ರುವ ಮುಚ್ಚಿಕೊಂಡು ಮುಕುತಿ ಸಾಧನ ಹುಚ್ಚುಗೊಂಡು ಸಚ್ಚಿದಾನಂದನ ಬಚ್ಚಿಟ್ಟುಕೊಂಡು ನಿಜ ನೆಚ್ಚಿಕೊಂಡಿರೋ ನೀ ಅಚ್ಯುತಾನಂತನ 1 ಹರಿಚರಣ ಕಮಲವ ಕಂಡು ಹರಿನಿಜಧ್ಯಾನ ನೆಲೆಗೊಂಡು ಹರಿಕರುಣವ ಪಡಕೊಂಡು ಹರಿನಾಮಾಮೃತ ಸವಿದುಂಡು 2 ಶ್ರೀಹರಿಸೇವೆ ಮಾಡಿಕೊಂಡು ಇಹಪರ ಸುಖ ಸೂರೆಗೊಂಡು ಬಾಹ್ಯಾಂತ್ರಪೂರ್ಣ ಮನಗಂಡು ಮಹಿಪತಿ ಸ್ವಾಮಿ ವಾಲ್ವೈಸಿಕೊಂಡು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹೊಂದಿ ಭಜಿಸಿರೆಲೋ ಹರಿನಾಮ ದಯ ಸಿಂಧು ಭಜಕಬಂಧು ಹರಿನಾಮ ಪ ಬಂಧನಿವಾರಣ ಹರಿನಾಮ ಬಹ ಕುಂದು ನಿಂದೆ ದೂರ ಹರಿನಾಮ ಅ.ಪ ವಿಷಯಲಂಪಟಹರ ಹರಿನಾಮ ಮಹ ವ್ಯಸನ ಕಳೆದು ಕಾಯ್ವ ಹರಿನಾಮ ಅಸಮಸೌಖ್ಯಜ್ಞಾನ ಹರಿನಾಮ ಮಾಯಾ ಮುಸುಕು ನಿವಾರಣ ಹರಿನಾಮ 1 ಬೇಡಿದ್ದು ಕೊಡುವುದು ಹರಿನಾಮ ಮಹ ಕೇಡು ತಪ್ಪಿಸುವುದು ಹರಿನಾಮ ಗಾಢಪದವಿನೀಯ್ವ ಹರಿನಾಮ ತಾ ಕೂಡಿ ಅಗಲದಿಹ್ಯ ಹರಿನಾಮ 2 ಗಾನಲೋಲಾನಂದ ಹರಿನಾಮ ಮಹ ದೀನ ದಯಾಪರ ಹರಿನಾಮ ಧ್ಯಾನದಾಯಕ ನಿಜ ಹರಿನಾಮ ಮಮ ಪ್ರಾಣದೊಡೆಯ ಶ್ರೀರಾಮನಾಮ 3
--------------
ರಾಮದಾಸರು
ಹೊಂದಿ ಸುಖಿಸಿ ಹೊಂದಿ ಸುಖಿಸಿ ಒಂದು ಮನದ ಭಾವದಿಂದಾ ನಂದನೀವ ಜನಕ ನಮ್ಮಗುರುರಾಯನಾ ಪ ದಿಟ್ಟತನದಿ ಸಾಗರಧಿಂ ಮುಟ್ಟಿ ಮುದ್ರೆಯ ಕೊಟ್ಟ ಬಳಿಕ ವನವ ಛೇದಿಸಿ ದುಷ್ಟ ರಾವಣ ತನುಜನಬೆ ನ್ನಟ್ಟಿ ಕುಟ್ಟಿ ಲಂಕೆಯನು ಸುಟ್ಟ ಬಿಟ್ಟ ಬಂದು ಪೊಡ ಮಟ್ಟ ಹನುಮಾ 1 ಆಪ ನೋಡದೆ ಭೂಪರಾಸಭೆ | ಲೋಪಗಡಿ ಮಂಡಿಸಿ ಗೆಲವು | ಲೋಪವಾಗೆ ದ್ರೌಪದಿಯನು ಛಲನೆ ಮಾಡಿದ || ಪಾಪಿಕೌರವ ಧೀಪ ನೆಜ್ಞ ಸ | ಮೀಪಪಶುವಿನೋ ಪಾದಿಯಲಿ ಕೊಪದಿಂದಲಿ ಘಾತಿಸಿದ ಭೂಪಭೀಮನಾ2 ಮತ್ರ್ಯ ದೊಳಗ ಬೆರ್ತು ವಿಷಯ ಅರ್ತುಚರಣ ನಿರ್ತದ್ಹುಗಲು ತೀರ್ಥಚರಣನು ಸಾರ್ಥಕವನು ಮಾಳ್ಪಾನಂದ ಮೂರ್ತಿ ಮರುತನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೊಯ್ಯಂದ ಡಂಗುರವ ಪರಂಜ್ಯೋತಿ ಪ್ರಭೆಯ ಭಾಸಿಸುವದು ನೋಡಿ ಹೊ ಅರವ್ಹೆ ಅಂಜನವಾಗಿ ದೋರುತಲದಕೊ ಹೊ ಪರಮ ಪ್ರಕಾಶವು ಪರಿಣಾಮಿಸಿ ನೋಡಿ ಹೊ 1 ಅನಿಮಿಷನೇತ್ರವು ಬಾಗಿಸುವದು ನೋಡಿ ಹೊ ಮನವಿಗೆ ಆರುವಾಗಿ ದೋರುತಲದಕೊಹೊ ನೆನವ ಘನವಾಗಿ ಸೂಸೂತಲಿದಕೊ ಹೊ ಕನಸು ಕಥೆ ಅಲ್ಲ ಕಣ್ಣಾರ ಕಾಂಬೋದು ಹೊ 2 ನಿದ್ರಸ್ಯಕರ್ಣದ ಸಾದ್ಯಶ್ಯ ನೋಡೆಂದು ಹೊ ದ್ವಾದಶ ನಾದವು ಸಾಧಿಸಿ ಕೇಳುದು ಹೊ ಗಾದೆಯ ಮಾತಲ್ಲ ಭೇದಿಸಿ ತಿಳಿಯುದು ಹೊ ಓದುವ ಒಂಕಾರ ನಾದವು ತಿಳಿವದು ಹೊ 3 ಪ್ರಣಮ್ಯ ಮಂತ್ರದ ಪ್ರಚೀದಿನೋಡೆಂದು ಹೊ ಹನ್ನೊಂದು ಹತ್ತುಸಾವಿರದ ನೂರೆಂದು ಹೊ ಕಣ್ಣು ಮುಚ್ಚು ಕುಳಿತು ಮಣಿಯೆಣಿಸುವದಲ್ಲ ಹೊ ಪುಣ್ಯಗತಿಗೈದಿಸುವ ಜಪವಿದು ಹೊ 4 ವಿಶ್ವಹೊಳಗಲ್ಲ ಭಾಸ್ಕರ ಗುರುತಾನೆ ಹೊ ಆಶಿಗೈವವಗಿನ್ನು ಭಾಸಿಸಲರಿಯನು ಹೊ ಮೋಸ ಮುಕುರವಲ್ಲ ಭಾಸಿವ ಪಲ್ಲಟವಲ್ಲ ಹೊ ಹೊಯ್ಯೆಂದ ಡಂಗುರವ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹೋಗುತಾದೋ ಹೊತ್ತು ಹೋಗುತಾದೋ ಸಾಗಿ ಮುಂಚೆ ಮತ್ತೆ ತಿರುಗಿ ಬಾರದಂತೆ ಪ ಹಿಂದಿನ ಸುಕೃತದಿಂದ ಒದಗಿದಂಥ ಸುಂದರಮಾದ್ಹೊತ್ತು ಎಂದೆಂದು ಸಿಗದಂತೆ 1 ಅರ್ತುಕೊಂಡವರಿಗೆ ಸಾರ್ಥಕಗೊಳಿಸುತ್ತ ಮರ್ತಕರಿಗೆ ಮತ್ತೆ ಗುರ್ತು ತೋರದಂತೆ 2 ಎಷ್ಟೆಷ್ಟೋ ಯೋನಿಯೊಳ್ಹುಟ್ಟ್ಹುಟ್ಟಿ ಬಲಗೋ ಳಿಟ್ಟು ಪಡೆದ ಹೊತ್ತು ನಷ್ಟವಾಗುತ ವ್ಯರ್ಥ 3 ಅಘನಾಶಗೊಳಿಸಿ ಬಹು ಮಿಗಿಲಾದ ಪದವೀನ ಸಿಗದಂಥ ವಸ್ತಿದು ಅಗಲಿ ತಾ ಸುಮ್ಮನೆ 4 ನೇಮವಲ್ಲೆಲೋ ಮತ್ತೆ ಆ ಮಹ ಸಮಯವು ಪಡಿ 5
--------------
ರಾಮದಾಸರು
ಹೌರನೆ ಮತಿಯಿತ್ತು ಸಲಬೇಕೆನ್ನ ಪ ಗೌರವ ಗಾತುರ ತೌರ ಮನೆಯ ಹರ ಕೌರವಾಂತಕನೊಳು ಶೌರಿಯ ತೋರಿಸೋ ಅ.ಪ. ಮೃಗಲಾಂಛನ ಸನ್ಮೌಳಿ ಶಿವ ಮಹಾದೇವ ತ್ರಿಗುಣಾತುವ ಗಾತುರ ಭಕ್ತ ಸಂಜೀವ ನಿಗಮತುರಗ ಪಾವ ವನಮಾಲ ಪಾವಾ ಮೃಗಪಾಣಿ ಮೃತ್ಯುಂಜಯ ಸುಪ್ರಭಾವ ನಗೆಪಗೆ ಮಗನನು ಮೃಗನೆವನದಿ ಕಾ ಅಗಣಿತ ಗುಣಮಣಿ ವಾಲಗ ನಿನ್ನವರೊಳು ಮಗಳೆ ಮಗುಳೆ ಕೊಡು ಗಗನೇಶ ಜನಕ 1 ಅವನಿಯೋಳ್ ಕೈಲಾಸ ವಾಸ ಅಪ್ರತಿ ನವ ವಿಧ ಭಕುತಿ ಕೊಡು ಶಂಭು ಪಶುಪತಿ ದಿವಸ ದಿವಸ ವೈಶ್ರವಣ ಬಾಂಧವ ದೇ ಹವೆ ನಿನಗೊಪ್ಪಿತು ಅವನಿಯೊಳುತ್ತಮ ಶ್ರವಣದೊಳಗೆ ರಾಘವನ ಕಥಾಮೃತ ಸವಿದೋರುವುದೋ ಭುವನ ಪವಿತ್ರ 2 ಅಜಭೃಕುಟ ಸಂಭೂತ ಭೂತಗಣೇಶ ಕುಂಡಲ ವಿಭೂತಿ ಭೂಪ ನಿಜ ಮಹಾ ಸ್ಮಶಾನವಾಸ ಉಗ್ರೇಶ ತ್ರಿಜಗಪಾವನ ಗಂಗಾಧರ ವಿಶ್ವೇಶ ಸುಜನರ ಹೃದಯ ಪಂಕಜದೊಳ್ ಮಿನುಗುವ ಗಜ ಪಾಲಕ ರಂಗ ವಿಜಯವಿಠ್ಠಲನಂಘ್ರಿ ಭಜನೆಯ ಕೊಡು ಭೂಭುಜ ದೇವೋತ್ತಮ ಗಜ ಅಜಿನಾಂಬರ 3
--------------
ವಿಜಯದಾಸ
ಹ್ಯಾಗಾಗುವುದೊ ತಿಳಿಯದು ಈಶನಜ್ಞೆ ಪ ಭಾಗವರತ ಸೇವೆಯಲ್ಲಿ ಬಹು ಪ್ರವೀಣವೆನೆಪುದೊ ರಾಗಲೋಭದಲ್ಲಿ ಮುಳುಗಿಸಿ ರಚ್ಚೆಗಿಕ್ಕಿ ಬಿಡುವುದೊ ಅ.ಪ ಕೋರಿಕೆಗಳ ಬಿಡಿಸಿ ಸದಾ ಗುಣವಂತನೆನಿಸುವುದೊ ನಾರಿ ಮಕ್ಕಳಾಸೆಯಲಿಯನಾಥವ ಮಾಡಿಸುವುದೊ 1 ದ್ವಂದ್ವಗಳಲಿಲೇಪವಿಲ್ಲದಾನಂದವ ಪೊಂದಿಸುವುದೊ ಮಂದಮತಿಯನಿಸುವುದೊ 2 ಶ್ರವಣಮನನ ಸಾಧನೆಗಳ ಸದಾ ಮಾಡಿಸುವುದೊ ಭವಭವದಲಿ ಮೂಢನೆನಿಸಿ ಪಾಪರತನ ಮಾಳ್ವದೊ 3 ಸರ್ವರಲ್ಲಿ ಗುಣವೆ ಕಾಣಿಸಿ ಸಂತೋಷಪಡಿಸುವುದೊ ದುರ್ವಿನೀತನೆನಸಿ ಸದಾ ದುಷ್ಕಾರ್ಯ ಮಾಡಿಸುವುದೊ 4 ಪಂಚಭೇದ ಜ್ಞಾನ ತತ್ವ ತಿಳಿಸಿ ಸುಖಿಪುದೊ ದುರಹಂಕಾರರಲ್ಲಿ ಮೆರೆಸಿ ನರಕದಿ ಬೀಳಿಸುವುದೊ 5 ದಾನಧರ್ಮ ಪರೋಪಕಾರ ದಯಾವಂತನೆನಿಪುದೊ ಹೀನನೆನಸಿ ಸಕಲರಿಂದ ಹೀಯ್ಯಾಳಿಸಿಬಿಡುವುದೊ 6 ಭಾರ ಅವರವರಧಿಕಾರದಂತೆ ಎಲ್ಲರಿಗೂ ನಡಿಸುವಾ 7
--------------
ಗುರುರಾಮವಿಠಲ
ಹ್ಯಾಂಗಾದರು ಎನ್ನ ನೀ ರಕ್ಷಿಸ ಬೇಕೋ ಸಾಗರಶಯನ ಕೃಷ್ಣಾ ಪ ಭಾಗವತರ ಸಂಗ ಬೇಗದಿಂದಲಿ ಇತ್ತು ಹೋಗಲಾಡಿಸು ಭವವ ಶ್ರೀ ಕೃಷ್ಣ ಅ.ಪ ಬಾಲೇರ ಸಲುವಾಗಿ ಕೀಳು ಜನರಲ್ಲಿ ಶೀಲ ಜರಿದು ಯಾಚಿಸಿ ಕಾಳಿ ಮರ್ಧನ ನಿನ್ನ ಒಲುಮೆಯ ಪಡೆಯದೆ ಕಾಲ ಬಲಿಗೆ ಸಿಕ್ಕೆನೊ ಶ್ರೀ ಕೃಷ್ಣ 1 ಅಂಗಜನಾಟಕೆ ಹಗಲಿರುಳೆನ್ನದೆ ಪರ ಅಂಗನೆರ ಕೂಡಿ ಮಂಗಳಮಹಿಮ ತುರಂಗ ವದನ ದೇವ ಭಂಗಕ್ಕೆ ಗುರಿಯಾದೆನೊ ಶ್ರೀ ಕೃಷ್ಣ 2 ದುರುಳರ ಸಂಗವನೆಲ್ಲ ಜರಿದು ಶ್ರೀ ನರಹರೆ ಕಾರುಣ್ಯದಲಿ ಭಕ್ತನ ಅರಿಷಟ್ಕರನೆ ಕೊಂದು ಕರಿವರದನೆ ಘೋರ ನರಕಕ್ಕೆ ಭಯ ತಪ್ಪಿಸೋ ಶ್ರೀಕೃಷ್ಣ 3
--------------
ಪ್ರದ್ಯುಮ್ನತೀರ್ಥರು
ಹ್ಯಾಂಗಾದರ್ಹಾಂಗಾಗಲಿ ಎ- ನ್ನಿಂಗಿತವ ನೀ ಬಲ್ಲೆ ರಂಗಯ್ಯಪ ಮಂಗಳಾಂಗ ನೀ ಕೊಟ್ಟು ಸಲಹೋ ಶುಭಾಂಗ ಅ- ನಂಗಜನಕ ಭುಜಂಗಶಯನ ಮಾ- ತಂಗವರದ ಶ್ರೀ ರಂಗನಾಥನೇ1 ದೇವಾ ನಾ ಸದ್ಭಾವದಲ್ಲಿ ನಿನ್ನ ಪಾದ ಪದುಮ ನಿರುತ ಧೇನಿಸುವೆ ಪವಮಾನ ಜೀವೋತ್ತಮ ನೀ ಧರ್ಮೋತ್ತಮನೆನ್ನುವ ಭಾವ ಎನಗಾವಕಾಲದಿ ಇರಲಿ ಬೇಡೆನು ಇತರ ಸಂಪದವಾ 2 ಶ್ರೀಶಾ ಶ್ರೀ ವೆಂಕಟೇಶ ನಿರ್ದೋಷ ಗುಣ ವಾಸನೆ ನಿನ್ನ ದಾಸಜನಭವಪಾಶ ಕ್ಲೇಶ- ನಾಶನವ ಗೈಸಿ ಸಲಹುವುದು ಶೇಷಶಯನ ಶ್ರೀ ರಂಗಶಾಯಿ 3
--------------
ಉರಗಾದ್ರಿವಾಸವಿಠಲದಾಸರು
ಹ್ಯಾಂಗೆ ಉದ್ದರಿಸುವಿ ಎನ್ನ ಕೃಷ್ಣ ಕರುಣ ಸಂಪನ್ನ ಪ ಹೋಗಿ ಹೊಗಿ ವಿಷಯ ಕೂಪದಲ್ಬೀಳ್ವವನಾಅ.ಪ. ದಾಸನು ಎಂದೆನಿಸಿ ಮೆರೆವೆ ಮನದೀ ಲೇಶಾ ಭಕುತಿಯನಾನೊಂದರಿಯೇ ವೇಷಹಾಕಿದೆ ಧನಕೆ ಬರಿದೇ ಆಶೆ ಇಟ್ಟು ಭವದಿ ವಂಚಕನೆನಿಸಿದವನಾ1 ಮಂದಿ ಜನರ ಮುಂದೆ ವೈರಾಗ್ಯನಟನೆ ಮಂದಿರದೊಳು ಬಹು ಕಾಮದ ಭಜನೆ ಬಂಧು ಬಳಗ ಕೂಡೆ ಬಹಳ ಭಕ್ತಿ ಇಂದಿರೇಶನ ಧ್ಯಾನ ದೋಳ್ವಿರಕ್ತಿ2 ಗುರುಹಿರಿಯರ ಜರಿವೊದೆ ಜಪವು ದುರುಳರ ಸಂಗ ದೋಳ್ಮೆರೆವೋದೆ ವ್ರತವು ಪರಿಸರನ ಶಾಸ್ತ್ರದೋಳ್ಮೌನ ನರನಾರಿ ಸ್ತವ ದೋಳ್ಧ್ಯಾನ 3 ವೇದ ಓದಿದೆ ನಾನು ಆದರೇನು ಮೋದತೀರ್ಥರ ಮರ್ಮ ಸಿಗಲಿಲ್ಲವು ಇನ್ನು ವಾದಕ್ಕನುಕೂಲ ವಾಯ್ತದು ಅಷ್ಟೆ ಖೇದ ತೊಲಗದೆ ಮನದಿ ಬಹುಕಷ್ಟಪಟ್ಟೇ 4 ಭುಕ್ತಿ ಪಡೆಯೆ ಕಾಲಕಳೆದೆನಲ್ಲಾ ಯುಕ್ತಿಯಿಂದಲಿ ನೀನು ಒಲಿವೋನು ಅಲ್ಲಾ ಭಕ್ತ ಜನರ ಸಂಗ ನಾ ಪಿಡಿಯಲಿಲ್ಲ ಮುಕ್ತಿಗಾಗುವ ಭಾಗ್ಯ ಎನ್ನಲಿಲ್ಲವಲ್ಲಾ 5 ಸ್ವೋತ್ತುಮರ ನೋಡೆ ಮಾತ್ಯರ್ಯ ಎನಗೇ ವಾತ್ಯಲ್ಯ ತೋರೆನು ಸ್ಧಾವರ ಜನಕೇ ಕುತ್ಸಿತ ಪಾವಡ ಬೀರುವೆ ಜಗಕೆ ತಾತ್ಸಾರ ತೋರುವೆ ಭಕ್ತರ ಗುಣದೀ6 ಈಷಣ ತ್ರಯಗಳ ಬಿಡಲಿಲ್ಲ ಲೇಶಾ ಭಾಷಣದಿ ತೋರ್ಪೆಜ್ಞಾನ ಪ್ರಕಾಶ ಈಶ ನೀನೊಬ್ಬನೆ ಸರಿಯೆಂಬೆ ಹರಿಯೆ ದಾಸನಾಗಿ ಬಾಳ್ವೆ ಬಹು ನೀಚ ಜನಕೆ 7 ನಾನು ನಾನೆಂಬುದು ತುಂಬಿದೆ ಮನದಿ ನೀನು ನಿನ್ನಾಧೀನ ವೆಂತ್ಹೇಳಿ ದೃಢದಿ ಜ್ಞಾನವಿದ್ದರು ಇಲ್ಲ ಎನಚರ್ಯೆ ನೋಡೆ ಮಾನಿನಿಯರ ಬೊಂಬೆ ಗುಣಗಣನೆ ಮಾಡೆ 8 ಮೂರೊಂದು ಹರಿತ್ಯಾಗ ತೊರೆಯಲಿಲ್ಲ ವೈರಿ ಆರರ ಬೇರು ನಾಕೀಳಲಿಲ್ಲ ವೀರ ವೈಷ್ಣವನಾಗಿ ಬಾಳಲಿಲ್ಲಾವಲ್ಲ ಗಾರು ಮನ್ನಿಸದಿರೆ ಗತಿಯೊಬ್ಬರಿಲ್ಲಾ 9 ವ್ರತನೇಮ ಉಪವಾಸ ಸಾಧನೆಯಿಲ್ಲ ರತಿಯಿಂದ ಸಲಹೆಂದು ನಾಕೂಗಲಿಲ್ಲ ಮತಿ ಮತದಿ ಪುಟ್ಟಿದರು ಫಲವಾಗಲಿಲ್ಲ ಗತಿ ನೀನೆ ಕೈ ಪಿಡಿಯೊ ಕೇಳುತ ಸೊಲ್ಲ 10 ಡಂಭಕ ತನದಿಂದ ಬಹುಕಾಲ ಕಳೆದೇ ತುಂಬಿ ಭಕ್ತಿಯ ಬೇಗ ನೀ ಕಾಯೋಮುಂದೆ ಜಂಭಾರಿ ಜಯತೀರ್ಥ ವಾಯ್ವಾಂತರ್ಗತನಾದ ಕಂಬುಕಂಧರಧಾರಿ “ಶ್ರೀ ಕೃಷ್ಣವಿಠಲ” 11
--------------
ಕೃಷ್ಣವಿಠಲದಾಸರು
ಹ್ಯಾಗೆ ಉದ್ಧಾರ ಮಾಡುವನೋ ಹರಿ ಹೀಗೆ ದಿನಗಳ ಕಳೆಯುವರ ಪ. ಆದಿಮೂರುತಿ ಶ್ರೀ ದೇವ ಪದುಮನಾಭ ವೇದ ಉದ್ಧಾರನೆಂದನಲಿಲ್ಲ ಸಾದರದಲಿ ಹರಿ ಸಕಲರಿಗೊಡೆಯನೆಂ ದಾದರದಲಿ ನಾ ಪಾಡಲಿಲ್ಲ 1 ಮೃಚ್ಛಕೂರ್ಮಹರಿ ಸ್ವಚ್ಛÀವರಹನೆಂದು ಉಚ್ಚಧ್ವನಿಯಿಂದ ಕೂಗಲಿಲ್ಲ ತುಚ್ಛಕನ ಕೊಂದು ಅಚ್ಚ ಭಾಗವತಗೆ ಮೆಚ್ಚಿ ರಕ್ಷಿಸಿದನೆಂದೆನಲಿಲ್ಲ 2 ಚಲುವ ವಾಮನನಾಗಿ ಬಲಿಯ ದಾನವ ಬೇಡಿ ಮಲವನಳಿವ ಗಂಗೆ ಪಡೆದನೆಂದು ಕುಲವಳಿದು ಭೂಲಲನೆಯ ವಿಪ್ರರಿ ಗೊಲಿದು ಇತ್ತನೆಂದು ನೆನೆಯಲಿಲ್ಲ 3 ಸೀತೆಗಾಗಿ ಪಡೆಸವರುತ ಹರುಷದಿ ವಾತತನಯಗಜಪದವಿತ್ತನ ಈತನೆ ಪರದೈವನಾಥನು ಪರಕೆಂದು ಪ್ರೀತಿ ಭಕ್ತಿಯಲಿ ಮೈಮರೆಯಲಿಲ್ಲ 4 ಗೋಪಿಯರ ಕೂಡಿ ಗೋಪನ ಮನೆಯಲಿ ಶ್ರೀಪತಿ ಲೀಲೆಯ ತೋರ್ದನೆಂದು ಪಾಪದ ಕಾಷ್ಠಕೆ ಪಾವಕನಾಗಿಹ ತಾಪಹರನ ನಾ ನೆನೆಯಲಿಲ್ಲ 5 ಲಲನೇರ ವ್ರತವಳಿದು ಚಲುವ ಕುದುರೆ ಏರಿ ಕಲಿಮುಖರನು ಸದೆಬಡಿದನೆಂದು ಚಲುವ ಗೋಪಾಲನೆ ನೀನೇ ಗತಿ ಎಂದು ಹಲವು ಬಗೆಯಿಂದ ಪೊಗಳಲಿಲ್ಲ 6 ಗುರುಗಳು ಪೇಳಿದ ಪರಮ ರಹಸ್ಯವು ಅರಿವಾದರೂ ಅನುಭವ ಇಲ್ಲ ಪರಿಪರಿ ಮಹಿಮೆಯ ಉದಯಸ್ತ ಪರಿಯಂತ ಅರಿವು ಮನಕೆ ಎನಗಾಗಲಿಲ್ಲ 7 ದೇಹಸ್ತ ಹರಿ ಎಂದು ದೇಹವ್ಯಾಪ್ತನು ಎಂದು ದೇಹ ಗೇಹ ಜೀವ ಭಿನ್ನವೆಂದು ಶ್ರೀ ಹರಿ ಜೀವಾಂತರ್ಯಾಮಿಯಾಗಿಹನೆಂದು ಮೋಹವಳಿದು ಜ್ಞಾನ ಪುಟ್ಟಲಿಲ್ಲ 8 ತತ್ವಾಧಿಪತಿ ಹರಿ ತತ್ವಾಭಿಮಾನಿಗಳು ನಿತ್ಯ ಹರಿಮಾರ್ಗ ತೋರ್ವರೆಂದು ಸತ್ಯವಚನವನು ವಾಯು ಮತದಿ ನಂಬಿ ಭೃತ್ಯ ಭಾವವ ನಾ ವಹಿಸಲಿಲ್ಲ 9 ಎಷ್ಟು ಹೇಳಲಿ ಎನ್ನ ಅವಗುಣಗಳನೆಲ್ಲ ದೃಷ್ಟಿಯಿಂದಲಿ ನೋಡಿ ನೀನೆ ಸಲಹೋ ಬೆಟ್ಟದೊಡೆಯನಾಗಿ ಎಲ್ಲರ ಸಲಹುವ ಅಷ್ಟಭುಜ ಗೋಪಾಲಕೃಷ್ಣವಿಠಲ10
--------------
ಅಂಬಾಬಾಯಿ
ಹ್ಯಾಗೆ ಒಲಿಯುವನೊ ಎನ್ನೊಡೆಯ ರಂಗ ಹ್ಯಾಗೆ ಒಲಿಯುವನೊ ಪ ಹ್ಯಾಗೆ ಒಲಿಯುವ ಜಾಣೆ ಪೇಳಮ್ಮ ನಾಗಶಾಯಿ ನಿಗಮಾಗಮೊಂದಿತ ರಾಘವೇಶನು ಬೇಗ ಒಲಿಯದಿರೆ ನೀಗುವೆನು ಪ್ರಾಣ ಕೇಳೆ ಸಖಿಯೆಅ.ಪ ಧಣಿಯು ಇಲ್ಲದ ದುರ್ದೈವ ಬಾಳು ಹೆಣನ ಸಮವಿದು ಮನ್ನಿಸೆ ಕೆಳದಿ ಗಣನೆಯಿಲ್ಲದ ಜನಮವ್ಯಾಕಿದು ಸನಕಸನಂದರೆಣಿಕೆಯಿಲ್ಲದೆ ಮಣಿದು ಆತಗೆ ಧನ್ಯರಾದದ್ದು ನೆನೆಸಿ ಮನದೊಂದು ದಿನಸುವಾಗುವುದು ಚಿನಮಯಾತ್ಮನ ಕಾಣದಿರಲಾರೆ 1 ನೀರೆ ಬೇಗಿನ್ನು ಕರೆತಂದು ತೋರೆ ಸಾರಸಾಕ್ಷನ್ನ ಅಗಲಿರಲಾರೆ ವಾರಿಧಿಶಾಯಿನ್ನ ಹರಣದೊಡೆಯನ್ನ ಮಾರ ಸುಂದರಪಾರ ಮಹಿಮನ ಬಾರಿಬಾರಿಗೆ ಸ್ಮರಿಸಿ ಮನ ಬಲು ಘೋರ ಬಡುತದೆ ವಾರಿಜಾಕ್ಷಿ ಕರೆ ತಾರೆ ಶೀಘ್ರದಿ ನಾರಸಿಂಹನ 2 ಕಡಲೊಳಿರುವನೋ ದೃಢದಿ ಕರೆಯಲು ಒಡನೆ ಬರುವನೋ ಜಡಜಾಕ್ಷಿ ಕೇಳೆ ಜಡಜನಾಭನೋ ದೃಢಕರೊಡೆಯನೋ ಬಿಡದೆ ಆತಗೆ ಮಿಡುಕಿ ಮಿಡುಕಿ ಹಿಡಿಕಿಯಾಯಿತು ದೇಹ ಸೊರಗಿ ಒಡೆಯ ಶ್ರೀರಾಮನಡಿಗೆ ಹೊಂದಿ ನಾ ತೊಡರಿನೊಳಗಿಂದ ಕಡೆಗೆ ನಿಲ್ಲುವೆ 3
--------------
ರಾಮದಾಸರು
ಹ್ಯಾಗೆ ಕಾಂಬೆ ನಿನ್ನ ಪಾದವ ಶ್ರೀನಿವಾಸ ಯೋಗಿ ಗಮ್ಯ ರೂಪ ಮಾಧವಾ ರಾಗ ರೋಗ ಸಾಗರಸ್ತನಾಗಿ ಮುಳುಗಿ ಬಾಯ ಬಿಡುವೆ ನಾಗರಾಜಗೊಲಿದ ತೆರದಿ ಬೇಗಲೊದಗಿ ಬಂದು ಕಾಯೊ ಪ. ಮನಸು ಎನ್ನ ವಶಕೆ ಬಾರದೆ ಭಕ್ತಿ ಸಾ- ಧನಗಳೆನಗೆ ಸೇರಿ ಬಾಹದೆ ನೆನಸಿಕೊಳುವ ಕಾರ್ಯ ದೊರೆಯದೆ ಸರ್ವಕಾಲ ತನುವ ಕೆಡಿಸಿ ವ್ಯರ್ಥಮಾಡಿದೆ ಕನಲಿ ಕೂಗುತಿರುವ ಶಿಶುವ ಜನನಿ ಕರದೊಳೆತ್ತುವಂತೆ ಮೂರ್ತಿ ದೋರೊ 1 ಕಲಿಯ ಬಾಧೆಯಿಂದ ನೊಂದೆನು ಮಲಿನ ಮೋಹದೊಳಗೆ ನಿಂದೆನು ತ್ಯಾಜ್ಯವಾದ ಫಲಗಳೆಲ್ಲ ತಂದು ತಿಂದೆನು ಗಾಳಿಗೆ ಸಿಲುಕಿದೆಲೆಯ ತೆರದಿ ಹೊರಲುಗಾಣೆನೀ ದೇಹ ಪಾದ ನೆಳಲ ಬಯಸಿ ಬೇಡಿಕೊಳುವೆ 2 ಗಣನೆಯಿಲ್ಲವಾದ ಮರಗಳು ಇರಲು ಪುರು ತನುವಿನಂತೆ ಮುಖ್ಯವಾವದು ಅನುಭವಾತ್ಮ ಸುಖವನೀವದು ಆದರೇನು ಕನಸಿನಂತೆ ಕಾತಿರುವುದು ಪಾದ ವನಜಯುಗವನಿತ್ತು ಎನ್ನ ಮನದೊಳದಯವಾಗು ಮಾರಜನಕ ಮೂಡಲದ್ರಿವಾಸ3
--------------
ತುಪಾಕಿ ವೆಂಕಟರಮಣಾಚಾರ್ಯ
ಹ್ಯಾಗೆ ದೊರಕೀತು ನಿನ್ನ ಚರಣವು ನಾಗಶಯನನೆನ್ನಂಥ ಪಾಪಿಗೆ ಪ ನೀಗಿ ಹೋಯಿತು ಅರ್ಧವಯವು ಆಗಯೀಗಯಾ ವಾಗಲೋ ಹೋಗುವುದು ದೇಹ ಭೋಗದಾಸೆಯು ನೀಗವಲ್ಲದು ಎನಗೆ ಇನ್ನು ಅ.ಪ ಮನದಕ್ಲೇಶವು ಕಡಿಯವಲ್ಲದು ನೀಚತನದ ನೆನವು ಎನ್ನೊಳಳಿಯವಲ್ಲದು ಸಾಚನಾಗಿ ನಿನ್ನ ಧ್ಯಾನದಿ ಮನವುಯೆಂಬುದು ಕ್ಷಣವು ನಿಲ್ಲದು ಕ್ಷಣವು ಬಿಡದೆ ಅನ್ಯರೊಡವೆಯ ಮನದೊಳನುದಿನ ನೆನೆದು ನೆನೆದು ಘನ ಪಾಪಾತ್ಮನಾಗಿ ಚರಿಸುವೆ ಜ್ಞಾನ ಬಾರದು ಎನಗೆ ಇನ್ನು 1 ಒಡವೆವಸ್ತ್ರದ ಆಸೆ ಬಿಡವಲ್ಲದು ಪಾಪಿಮನವು ಮಡದಿ ಮಕ್ಕಳ ಮಮತೆ ತೊರೀವಲ್ಲದು ಒಡನೆ ತಿಳಿದು ಕೆಡುವ ಕಾಯದ ಮೋಹ ಮರೀವಲ್ಲದು ಜಡಮತಿಯು ಬಿಡದು ಎಡರು ಪ್ರಪಂಚ ತೊಡರಿನೊಳು ಮನ ವಡರಿ ಬಿಡದಲೆ ಮಿಡುಕಿ ಮಿಡುಕಿ ಕಡೆಯುಗಾಣದೆ ಕಷ್ಟಬಡುತಿಹೆ ಬಿಡದು ವಿಷಯದಾಸೆ ಎನಗೆ 2 ದಾಸಜನ ವ್ಯಾಸಂಗ ಮೊದಲಿಲ್ಲ ಪಾಪಿಜನುಮ ದೋಷಗುಣಗಳು ಒಂದುಬಿಟ್ಟಿಲ್ಲ ಒಡನೆನುಡಿದ ಭಾಷೆಗಳನು ತಿಳಿದು ನಡೆಸಿಲ್ಲ ಆಸೆ ಹರಿದಿಲ್ಲ ನಾಶಮಾಡಿತು ಹೇಸದಲೆ ಇನ್ನು ಮೋಸಗಾರನ ಪೋಷಿಸುವುದು ಶ್ರೀಶ ಶ್ರೀರಾಮ ನಿನಗೆ ಕೂಡಿತು 3
--------------
ರಾಮದಾಸರು