ಒಟ್ಟು 6414 ಕಡೆಗಳಲ್ಲಿ , 131 ದಾಸರು , 4170 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪತಿತಪಾವನ ನಾಮ ಪೂರ್ಣಕಾಮಾ | ಗತಿಯ ಪಾಲಿಸೊ ಎನಗೆ ಗುರುಸಾರ್ವಭೌಮಾ ಪ ಹದಿನಾರು ಸಾವಿರ ಸುದತಿಯರೆಲ್ಲರು | ತ್ರಿದಶವಿರೋಧಿಯ ಸದನದಲ್ಲಿ || ಮದದಿಂದ ಸೆರೆಬಿದ್ದು ಹದುಳ ಕಾಣದೆ | ಸುತ್ತಿಸಿದರು ಮನದೆ ನಾರದನಿಂದ ನಲಿದಾಡಿ1 ಕಾರ್ತಿಕ ಮಾಸದಲಿ ಕಾಂತೆಯ ಒಡಗೂಡಿ | ಕಾರ್ತರಥವನೇರಿ ಕೀರ್ತಿಪುರುಷಾ || ಧೂರ್ತನ ಕೊಂದು ಬಾಲೆಯರಾರ್ತವ ಪರಿಹರಿಸೆ | ತೀರ್ಥಧರಾದಿಗಳು ನರ್ತನದಲಿ ಪೊಗಳೆ 2 ಇಂದುಮುಖಿಯರ ಬಂಧನ ತರಿದವರು | ಅಂದು ಉತ್ಸಾಹದಿಂದ ದ್ವಾರಾವತಿಗೆ || ಮಜ್ಜನ ಮಾಡೆ | ಮಂದಾರ ಮಳೆ ನಭದಿಂದ ಸುರಿಯೆ 3 ದೇವ ಶೃಂಗಾರವಾಗೆ ವೇದಾದಿಗಳು ನಿಂದು | ತಾವೆಲ್ಲ ಮಣಿಭೂಷಣಾವಳಿಯಿಟ್ಟು || ನೋವ ಪೋಗಾಡಿಸಿ ಪಾವನರಾಗಿ ಸುಖ- | ವನಧಿಯೊಳು ಮೀಯುತ್ತ ಕೊಂಡಾಡೆ 4 ನರಕಾಸುರನ ಕೊಂದು ಇರಳು ಈ ಪರಿಯಲ್ಲಿ | ಹರಿಮಾಡಿದ ಚರಿತೆ ತಿಳಿದುದನು- || ಚ್ಚರಿಸಿದವನ ಕುಲ ನರಕದಿಂದುದ್ಧಾರ | ಮೊರೆಹೊಕ್ಕೆ ಇದÀಕೇಳಿ ವಿಜಯವಿಠ್ಠಲರೇಯಾ 5
--------------
ವಿಜಯದಾಸ
ಪತಿತಪಾವನ ರಮಾಪತಿ ಪರಂಧಾಮಾ ಪ ಗತಿಮತಿ ನಿನ್ನ ನಾಮಾ | ಅಮೃತವು ಸೀತಾರಾಮಾ ಹಿತಪಿತ ನೀನೇ ರಾಮಾ | ತಾರಕ ನಾಮಾ ಅ.ಪ ದಶರಥ ಬಾಲಾ | ಸುರಮುನಿ ಪಾಲಾ ನಿಶಿಚರ ಶೂಲಾ | ಶ್ರೀವನಮಾಲಾ ಶಶಿಸಮ ಪಾಲಾ | ಕರುಣಾಲವಾಲಾ ಕಾಲ | ಮಾಂಗಿರಿಯ ಗೋಪಾಲಾ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪತಿತಪಾವನಹುದೋ ಸ್ವಾಮಿ ಧ್ರುವ ಯತಿಮುನಿಜನವನ ಅತಿಶಯಾನಂದ ನೀ ಶ್ರುತಿಗಗೋಚರನಹುದೋ ಸ್ವಾಮಿ 1 ಕ್ಷಿತಿಯೊಳು ಗೌತಮ ಸತಿಯಳುದ್ಧರಿಸಿದ ಅತಿ ದಯಾಳನಹುದೋ ಸ್ವಾಮಿ 2 ನಷ್ಟಾ ಜಮಿಳನ ದೃಷ್ಟಿಸಿ ನೋಡಿನ್ನು ಶಿಷ್ಟತನವ ಮಾಡಿದ್ಯೋ ಪ್ರಾಣಿ 3 ಎಷ್ಟೆಂದು ಪೊಗಳಲಿ ಸೃಷ್ಟಿಯೊಳಗೆ ನಿಮ್ಮ ದುಷ್ಟಮರ್ದನನಹುದೋ ಸ್ವಾಮಿ 4 ಅತಿ ಮಂದಮತಿ ಮಹಿಪತಿಗೆ ಸದ್ಗೈಸಿನ್ನು ಪತಿತಪಾವನ ಮಾಡಿದ್ಯೋ ಸ್ವಾಮಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪತಿಯ ಮಂದಿರದಲಿ ಸುಖವಾಗಿ ಬಾಳಮ್ಮ ಮತಿವಂತೆ ಎನಿಸಿ ಸನ್ಮತಿ ಪಡೆದು ಪ ಚತುರಳೆ ನಿನ್ನ ಸಖಿಯರೆಲ್ಲರು ಅತಿಶಯದಿ ನಿನ್ನ ಪತಿಯ ಗುಣಗಾನ ಕಥನ ಮಾಡುತ ನಿನ್ನೆದುರಿನಲಿ ಸ್ತುತಿಸಿ ಹಿಗ್ಗಿ ಪೊಗಳುವರೆ ಪಾರ್ವತಿ ಅ.ಪ ವಸತಿ ಇಲ್ಲದೆ ಸ್ಮಶಾನದಲಿ ವಾಸಿಪನೆಂದು ಅಪಹಾಸ್ಯ ಮಾಡುವರೆ ವಸನ ಪೀತಾಂಬರವನುಡುವುದನರಿಯದೆ ಹಸಿಯ ಚರ್ಮವನುಡುತಿಹನೆಂಬರೆ ಅಸನಕಿಲ್ಲದೆಗರಳ ವಿಷವನುಂಬುವನೆಂದು ಗುಸುಗುಸು ನುಡಿಯುವರೆ ಅಸಮನೇತ್ರನು ಭಸುಮ ಲೇಪಿಸಿ ವೃಷಭರಾಜನ ಏರಿ ಬರುವನು ಶಶಿಮುಖಿಯೆ ನೀನರಿಯದಲೆ ಈ ಪಶುಪತಿಗೆ ಸತಿಯಾದೆ ಎಂಬರು 1 ಸರಿಸವತಿಯ ತನ್ನ ಸಿರಮೇಲಿರಿಸಿದಿ ಗಿರಿಜೆ ತರವಲ್ಲ ಕೇಳೆ ಪರಿಪರಿ ರತ್ನಾಭರಣಂಗಳರಿಯದೆ ಉರಗಗಳ ಭೂಷಿತನಾದ ನಮ್ಮ ಗÀರಳ ಕಂಠನಿಗೆ ನೀನರಿಯದೆ ಸತಿಯಾದೆ ಎಂದು ತರಳರೆಲ್ಲರು ಹಾಸ್ಯ ಮಾಡುವರೆ ಸರಸವಾಡುತ ನೋಡು ಕಂಠದಿ ಸಿರದ ಮಾಲೆಯ ಧರಿಸಿಕೊಂಡಿಹ ಪರಮ ಆಶ್ಚರ್ಯದಲಿ ನಾವೆಲ್ಲ ಅರುಹಲೀಗ ಬಂದಿಹೆವು ಎನುವರು 2 ಅಂದು ಮೋಹಿನಿ ರೂಪವ ಕಂಡು ಪರಶಿವನು ಇನ್ನೊಮ್ಮೆ ನೋಡಲು ಬೇಡೆ ಪರಮಾತ್ಮನಾ ಸುಂದರಾಕೃತಿಯ ನೋಡುತ ಪಿಡಿಯಲು ಪೋಗಿ ನಂದ ಕಂದನ ರೂಪ ನೋಡಿದನು ಹಿಂದೆ ಮೂಕಾಸುರನೆಂಬ ದೈತ್ಯನ ಕೊಲಿಸಿದ ಇಂದಿರೇಶನಿಗೆ ಸೇವಕನಾದ ಶಿವನು ಇಂದು ಶಿವನನು ನಿಂದಿಸಿದೆವೆಂದೆನಲು ಬೇಡ ಶ್ರೀ- ತಂದೆ ಕಮಲನಾಭ ವಿಠ್ಠಲನ ಚಂದದಲಿ ಭಜಿಸುವನು ಎನುವರು3
--------------
ನಿಡಗುರುಕಿ ಜೀವೂಬಾಯಿ
ಪತಿಯಿಂದಲೆ ಸದ್ಗಿತಿಯೆಂಬುವಳು ಅತಿಮತಿಯೆನ್ನುವಳು ನಮ್ಮ ಶ್ರೀದೇವಿ ಪ ಕ್ಷಿತಿಯೊಳು ತನ್ನಯ ಪತಿಯೊಳು ಸಲ್ಲದೆ ಇತರವನೆಣಿಪಳೆ ಮೂದೇವಿ ಅ.ಪ ಗಂಡನು ಪುಂಡನು ಕುರುಡನು ಕುಂಟನು ಭಂಡಾಂಗನೆಯಂ ಕಲಹಿಪಳೆ ಮೂದೇವಿ 1 ಅತ್ತೆಮಾವನ ಹೇಳಿಕೆಗೆ ಪ್ರ ತ್ಯುತ್ತರಳಲ್ಲ ಶ್ರೀದೇವಿ ಕತ್ತೆಯಂತೆ ತಾ ಬಗಳುವ ಕಳ್ಳ ಚಿತ್ತಿನಿ ಹವುದೆಲೊ ಮೂದೇವಿ 2 ಅರಿಸಿನ ಕುಂಕುಮ ಹಣೆಯೊಳಗಿಡುವಳು ಅಡಿಯಾ ಗಿರುವಳು ಶ್ರೀದೇವಿ ಅನು- ಕರಿಸಲು ಬಾರದೆ ಕಳವಳಗೊಳುವಳು ಕರಠೆಕಮಾನಳು ಮೂದೇವೀ 3 ಶಿರಬಾಗಿ ತನ್ನರಸನ ಸೇವೆಯ ಹರುಷದೊಳಿರುಪವಳೆ ಶ್ರೀದೇವೀ ಕರಸಲು ಬಾರದೆ ಕಳವಳಗೊಳುವಳು ಕರಟಕ ತನುವಳು ಮೂದೇವೀ 4 ಇರುವ ಅತಿಥಿ ಅಭ್ಯಾಗತಗಳಿಗುಪ ಚರಿಸುವಳೆ ನಮ್ಮ ಶ್ರೀದೇವಿ ಗುರುವು ತುಲಶಿರಾಮಯೆಂದೆನ್ನುತ ಭಜಿಸದೆ ಯಿರುವಳೆ ಮೂದೇವೀ 5
--------------
ಚನ್ನಪಟ್ಟಣದ ಅಹೋಬಲದಾಸರು
ಪತಿಯೆ ಪರದೇವತೆಯು ಸತಿಯರಿಗೆ ಜಗದಿ ಮತಿಯರಿತು ಭಜಿಸಿ ಪರಗತಿಯ ಸಾರುವುದು ಪ. ಉದಯಕಾಲದೊಳೆದ್ದು ಸದಮಲ ಶುಧ್ಧಿಯಲಿ ಪಾದ ಮನದಿ ಸ್ಮರಿಸುತಲಿ ಪತಿ ಹೃದಯದಲಿರುವನು ಎಂದು ಪತಿ ಪದಕರ್ಪಿಸುವುದು 1 ಆದರದಲಿ ಪತಿಯ ಪಾದವನೆ ತೊಳೆದು ಆ ಸ್ವಾದೋದಕವ ಪಾನಗೈದು ಸುಖಿಸುವುದು ವೇದಗೋಚರ ಹರಿಯೆ ನೀ ದಯವ ಮಾಡೆಂದು ಆದರದಿ ಪತಿಯ ಮನವರಿತು ನುಡಿಯುವುದು 2 ಸ್ವಚ್ಛದಲ್ಲಿ ಮನದ ತುಚ್ಛ ವಿಷಯವ ತೊರೆದು ಇಚ್ಛೆಯಿಂದಲಿ ಹರಿಯ ನಾಮಗಳ ಭಜಿಸಿ ಅಚ್ಯುತಾನಂತ ಗೋವಿಂದನೆನ್ನುತ ಸತತ ಮಚ್ಚಾದ್ಯನೇಕ ಅವತಾರ ನೆನೆಯುವುದು 3 ಪತಿಯೆ ಹರಿಯೆಂದರಿತು ಪತಿಯೆ ಗುರುವೆಂದರಿತು ಪತಿಯ ಪೂಜೆಯನು ಅತಿ ಹಿತದಿ ಗೈಯ್ಯುವುದು ಪತಿಯಂತರ್ಗತನೆ ಎನ್ನತಿಶಯದಿ ಪೊರೆಯೆಂದು ಪತಿವ್ರತವ ನಡೆಸುತಲಿ ಹಿತದಿ ಬಾಳುವುದು 4 ಪತಿಯ ನಿಂದಕಳಿಗೆ ಗತಿಯಿಲ್ಲ ಪರದಲ್ಲಿ ಅತಿ ಬಾಧೆಪಡಿಸುವನು ಯಮನು ನಿರ್ದಯದಿ ಪತಿವ್ರತವ ಸಾಧಿಸುವ ಸತಿಯರಿಗೆ ಅನವರತ ಚ್ಯುತರಹಿತ ಪದವೀವ ಗೋಪಾಲಕೃಷ್ಣವಿಠಲ5
--------------
ಅಂಬಾಬಾಯಿ
ಪಥ ಸಹಕಾರ ನಿಗಮಗೋಚರ ನಿರ್ಧಾರ ಜಗದ್ಗುರು ಜಗದಾಧಾರ 1 ಘನ ದಯದಲಿ ಸಮರ್ಥ ಅನುಭವಕೆ ಸುತತ್ವಾರ್ಥ 2 ಸಾಹ್ಯಸಾನುಕೂಲದಾಗರ ಮಹಿಮೆ ನಿನ್ನದು ಅಪಾರ ಸ್ವಸುಖದ ಸಾಗರ ಮಹಿಪತಿಯ ಮನೋಹರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪಂಥ ಬೇಡವೊ ಲಕ್ಷ್ಮಿಕಾಂತ ಎನ್ನಯ ಮನದ ಚಿಂತಿತಾರ್ಥವನೀಯೊ ಸಂತತಂ ಕಾಯೊ ಪ ಚರಣ ಕಮಲವ ಕಂಡು ಶರಣು ಹೊಕ್ಕೆನು ನಾನು ಕರುಣದಿಂದನುದಿನವು ಕಾಯಬೇಕೆನುತ ಸ್ಮರಣೆಪೂರ್ವಕವಾಗಿ ಹರಣವನೆ ಹರಸಿಹೆನು ಹರಿಣನೊಳು ಬಿಲುಗಾರ ಕರುಣ ಬಿಟ್ಟಂತೆ 1 ನರಜನ್ಮವೆಂಬುದಿದು ಕರಕಷ್ಟವಾಗಿರುವ ಉರಿಯ ಮನೆಯನು ಹೊಗುವ ತೆರನಲ್ಲವೆ ಪರಿಪರಿಯ ದುಃಖಗಳು ಬರುವ ಸಮಯಾಂತರದಿ ಮರೆಯಾಗದಿರು ಎನ್ನಸ್ಥಿರದಿ ಮೈದೋರು 2 ತಪ್ಪುಗಳು ಹೊರತಾಗಿ ಅಪ್ಪ ಸೇರುವುದುಂಟೆ ಒಪ್ಪುಗೊಂಬವರಾರು ಸರ್ಪಶಯನ ಬೊಪ್ಪ ಬಹ ದುರಿತಗಳ ತಪ್ಪಿಸಿಯೆ ಕಳೆದೆನ್ನ ಮುಪ್ಪುಗಳ ಪರಿಹರಿಸೊ ಅಪ್ಪಗಿರಿವಾಸ 3 ಉರಗ ಗಿರಿವಾಸ ನಿನ್ಸೆರಗವಿಡಿವೆನು ನಾನು ಕರಗಿ ಹೋಯಿತು ಇರವು ಕಾವರಿಲ್ಲ ಮರುಗಿದರೆ ಧೈರ್ಯವನು ತಿರುಗಿ ಹೇಳುವರಿಲ್ಲ ಕುರಿ(ಗಾ)ಯ್ವ ತೆರನಂತೆ ಕೈಗೆ ಸಿಲುಕಿದೆನು 4 ಇಹಪರದ ಸೌಖ್ಯಗಳ ಕರೆದಿತ್ತು ಕರವಿಡಿದು ಸಹವಾಸವಾಗಿರ್ದು ಸಲಹಿಕೊಂಡು ವಹಿಲದಲಿ ವರವೀವ ವರಾಹತಿಮ್ಮಪ್ಪ ಬಹುಭಾರವನು ತಾಳ್ದು ಸಲಹೆನಿಸೊ ನೀನು 5
--------------
ವರಹತಿಮ್ಮಪ್ಪ
ಪದವ ಕಲಿಸೆನಗೆ ಶ್ರೀಹರಿ ಪದವ ಕಲಿಸೆನಗೆ ಪ ಪದವ ಕಲಿಸಯ್ಯ ಪದುಮನಾಭ ಪದದ ಮಹಿಮೆಯೆಂಬ ಸುಧೆಯು ಭರಿತವಾದ ಅ.ಪ ನಾಗಶಾಯಿಯ ವಿಮಲನಾಮವೆಂಬ ರಾಗಕಲಿಸು ಮಿಗಿಲು ಭೋಗ ಭಾಗ್ಯದಾಸೆ ನೀಗಿಸಿ ಈ ಭವ ರೋಗ ಗೆಲಿದು ತಲೆದೂಗಿ ನಲಿಯುವಂಥ 1 ದೋಷದೂರನ ಚರಿತರಸದಿಂ ಸೂಸಿ ಹರಿವ ಕವಿತ ಶ್ಲೇಷ ನೀಗಿಸಿ ಪ್ರಪಂಚ್ವಾಸನದುಳಕಿಸಿ ಸಾಸಿರನಾಮ ಹುಸಿ ತಾಳದಿ ಪಾಡುವಂಥ 2 ಯತಿತತಿಗಳು ಪೊಗಳ್ವ ಬಿಡದತಿ ಮತಿಮಾನ್ಯರು ಪಾಡ್ವ ರತಿಪತಿಪಿತ ಶ್ರೀರಾಮ ನಿನ್ನಡಿಭ ಕ್ತ್ಯತಿಗಣಕೂಡಿದ ಅತಿಶಯಾನಂದಕರ 3
--------------
ರಾಮದಾಸರು
ಪದುಮನಾಭನ ಚರಿತೆಯು ಪರಮಾದ್ಭುತವು ಪ ಯದುಕುಲ ಲೋಲನ ವಿಧ ವಿಧ ಲೀಲೆಯೊ ಪದೇ ಪದೇ ನೆನೆಯಲು ಪರಮಹರುಷ ಮನಕೆ ಅ.ಪ. ದೇವತೆಗಳ ಮೊರೆ ಲಾಲಿಸಿ ಭುವಿಯೊಳು ದೇವಕಿ ಸುತನಾಗಿ ಜನಿಸಿದನು ಗೋವಳರೊಡಗೂಡಿ ಗೋವ್ಗಳ ಕಾಯ್ದ ಬೃಂ ದಾವನ ಲೋಲನು ಶ್ರೀವೇಣುಗೋಪಾಲ 1 ಕಾಮಜನಕ ಸರ್ವಕಾಮಿತದಾಯಕ ಕಾಮಿನಿಯರ ಕೂಡೆ ಕ್ರೀಡಿಸಿದನನಘ ಆ ಮಹಾಭಕ್ತ ಅಕ್ರೂರನಿಗೊಲಿದನು ತಾಮಸ ಕಂಸನ ಧ್ವಂಸಗೈದನು ದೇವ 2 ಕರಿಗಿರೀಶ ಮುಚುಕುಂದ ವರಪ್ರದ ಸರಸಿಜಾಕ್ಷ ಶ್ರೀರುಕ್ಮಿಣಿರಮಣ ಸುರರಿಪು ನರಕಾಸುರ ಸಂಹಾರಕ ಸುರಮಾತೆಗೆ ಕುಂಡಲಿಗಳನಿತ್ತನು 3
--------------
ವರಾವಾಣಿರಾಮರಾಯದಾಸರು
ಪದುಮಾವತಿ ಕಾಂತ ಪ ಬ್ರಹ್ಮಾದ್ಯರ ತಾತ ಅ.ಪ. ನಿನ್ನ ದರ್ಶನವು ಸಂಸಾರ ಸಮೇತ | ಬೇಡನೆ ಜನವ್ರಾತ ಮನ್ನಿಸಲಿಲ್ಲವೊ ನಾನವರ ಮಾತ | ಪಾವನ ಶುಭಚರಿತ ನಾ ಮಾಡಿದೆ ಶಪಥ ಸದ್ಗುಣ ಗಣಭರಿತ 1 ದ್ವಿಜರಾಜ ವರೂಥ ಇದು ಏನಧಿಕವೊ ನಿನ್ನಸಮದಾತ | ರಿಲ್ಲವೊ ಶುಭಗಾಥ ಭವ ಶರಧಿಗೆ ಪೋತ ನಾಗಯ್ಯಾತ್ವರಿತ 2 ವತ್ಸರ ಪ್ರತಿಪದ ಬುಧಸಹಿತ ಊಧ್ರ್ವಪುಂಡ್ರವಿಡುತ ಏರಿದೆ ಪರುವತ ಸಿರಿ ನಿನ ಕಂಡೆವೊ ತಾತ 3 ಸುಕೃತ | ಈ ದಿನ ಒದಗುತ ಫಲವಾದುದಕೆ ನಾವೆಲ್ಲ ಬಹುಪ್ರೀತ | ರಾದೆವು ಶ್ರೀಕಾಂತ ಉತ್ಸವ ನೋಡುತ ಒಲಿದು ನಿನ್ನ ತೀರ್ಥಪ್ರಸಾದವ ಕೊಳುತ | ನಾವಿದ್ದೆವೊ ಸತತ 4 ತುಂಗ ವಿಕ್ರಮನೆ ರಣದೊಳು ನಿರ್ಭೀತ | ಬಲರಿಪು ಸಹಜಾತ ಗಾಂಡೀವಿಯ ಸೂತ ಗಂಗಾಜನಕನೆ ತ್ರಿಗುಣಾತೀತ | ಭುವನದಿ ವಿಖ್ಯಾತ ರಂಗೇಶವಿಠಲನೆ ನಾ ನಿನ್ನ ದೂತ | ಯದುಕುಲ ಸಂಭೂತ 5
--------------
ರಂಗೇಶವಿಠಲದಾಸರು
ಪದ್ಮನಾಭ ಪದ್ಮನಾಭ ಉಡುಪಿನ ಶ್ರೀಕೃಷ್ಣಜಯ ದುರ್ಜನರಿಗೆ ಅತಿದೂರ ಸುವ್ವಿಸುವ್ವಿ ಸುವ್ವಾಲೆ ಪ. ಸುರರ ಶಿರೋರನ್ನ ಗರುಡವಾಹನನೆ ಕರುಣಸಂಪನ್ನ ಉಡುಪಿನಕರುಣಸಂಪನ್ನ ಉಡುಪಿನ ಶ್ರೀಕೃಷ್ಣಶರಣಾಗು ಧನ್ಯ ಜನರಿಗೆ1 ಮುಖ್ಯಪ್ರಾಣ ಭಾರತೀರಮಣಗೆ ಎರಗುವೆ 2 ರಾಮನಂಘ್ರಿಯ ಸೇವೆ ಪ್ರೇಮದಿಂ ಮಾಡಿದಶ್ರೀಮಂತ ನಮ್ಮ ಹನುಮಂತಶ್ರೀಮಂತ ನಮ್ಮ ಹನುಮಂತನೆಂದವಗೆಕಾಮಿತಾರ್ಥಗಳ ಕೊಡುವನೆ 3 ಭಾರತ ಯುದ್ಧದಲಿ ಬಾಹುಬಲ ತೋರಿದಧಾರಿಣೀಶ್ವರ ತಿಲಕನೆಧಾರಿಣೀಶ್ವರ ತಿಲಕನೆ ಶ್ರೀ ಭೀಮಸಾರಿದ ಜನರ ಸಲಹುವ 4 ಶುದ್ಧಶಾಸ್ತ್ರಗಳಿಂದ ಗೆದ್ದು ವಾದಿಗಳನು ಹೊದ್ದಿದ ಜನರ ಕರುಣದಲಿಹೊದ್ದಿದ ಜನರ ಕರುಣದಲಿ ಹೊರೆವ ಶ್ರೀಮಧ್ವಮುನಿಪನ ಭಜಿಸುವೆ 5 ಹರಿಯ ಸತ್ಕರದಲ್ಲಿ ಕರುಣಂಗಳೊಡನೆದುರುಳ ವಾದಿಗಳ ಗೆಲಿದನೆÀದುರುಳ ವಾದಿಗಳ ಗೆಲಿದನೆ ಹೃಷಿಕೇಶಗುರುಗಳಂಘ್ರಿಗೆ ನಮಿಸುವೆ 6 ದೇಶ ದೇಶದೊಳುಳ್ಳ ದೂಷಿವಾದಿಗಳನ್ನು ದೂಷಿಸಿ ಹರಿಯ ಮಹಿಮೆಯನುದೂಷಿಸಿ ಹರಿಯ ಮಹಿಮೆಯ ಮೆರೆದ ಶ್ರೀನೃಸಿಂಹತೀರ್ಥಯತಿರಾಯ7 ಅದ್ವೈತವಾದಿಗಳ ಗೆದ್ದು ನಿರ್ಮಲವಪ್ಪಮಧ್ವಮಾರ್ಗವನು ಜಗಕೆಲ್ಲಮಧ್ವಮಾರ್ಗವನು ಜಗಕೆಲ್ಲ ತೋರಿದ ಜ-ನಾರ್ದನತೀರ್ಥಯತಿರಾಯ8 ಇಂದಿರೆಯರಸನ ಎಂದೆಂದು ಪೂಜಿಸಿಮಂದಮಾಯಿಗಳ ಕುಮತವಮಂದಮಾಯಿಗಳ ಕುಮತವ ಗೆಲಿದ ಉ-ಪೇಂದ್ರÀತೀರ್ಥಯತಿರಾಯ9 ಈ ಮಹಿಯೊಳಗುಳ್ಳ ತಾಮಸ ಜನರನ್ನುಶ್ರೀಮಧ್ವ ಮುನಿಪನ್ನ ಮತದಿಂದಶ್ರೀಮಧ್ವಮುನಿಪನ್ನ ಮತದಿಂದ ಖಂಡಿಸಿವಾಮನತೀರ್ಥರೆಸೆದರು 10 ಧೀರ ತಾಪಸರಾಗಿ ಗುರುಮಧ್ವಮುನಿಯಚಾರುಚರಣಂಗಳ ಪಿಡಿದಿರ್ದಚಾರುಚರಣಂಗಳ ಪಿಡಿದಿರ್ದ ಶ್ರೀವಿಷ್ಣು-ತೀರ್ಥರಡಿಗೆ ನಮಿಸುವೆ11 ಕಾಮನ ನೆರೆ ಅಟ್ಟಿ ಶ್ರೀಮಹಾವಿಷ್ಣುವೇ ಸ್ವಾಮಿ ಎಂಬುದನು ಜಗಕ್ಕೆಲ್ಲ ಸ್ವಾಮಿ ಎಂಬುದನು ಜಗಕ್ಕೆಲ್ಲ ತೋರಿದ ರಾಮತೀರ್ಥಯತಿರಾಯ12 ಮನುಮಥನಯ್ಯನ ಘನತೆಯ ತೋರಿಸಿನರ ಮೋಹಗಳ ಬಿಡಿಸಿದಜನರ ಮೋಹಗಳ ಬಿಡಿಸಿದ ಅಧೋಕ್ಷಜಮುನಿಕುಲಾಗ್ರಣಿಗೆ ನಮಿಸುವೆ13 ಮಧ್ವಕಿಂಕರರಾದ ಪದ್ಮನಾಭಾರ್ಯರವಿದ್ಯಾವೈಭವಗಳ ಪೊಗಳುವವಿದ್ಯಾವೈಭವಗಳ ಪೊಗಳುವ ಕವಿಯಾರುಶುದ್ಧ ಮುನಿಗಳಿಗೆ ಅಳವಲ್ಲ 14 ಸ್ವದೇವ ಹಯವದನನ ಆವಾಗ ಪೂಜಿಪ ಪಾವನ್ನ ಮಧ್ವಮುನಿಪನಪಾವನ್ನ ಮಧ್ವಮುನಿಪನ ಶಿಷ್ಯರಾದದೇವತೆಗಳ ಮರೆಹೊಕ್ಕೆ 15
--------------
ವಾದಿರಾಜ
ಪದ್ಮನಾಭ ವಾಕು ತಾನೂ ಮೊದಲುನಾದರೂಪದಿ ತೋರಿ ನಾಲ್ಕು ವಿಧದಿಪಾದವೆರಡು ಪರಾ ಪಶ್ಯಂತಿಯೆಂದುಭೇದದಿ ಮಧ್ಯಮ ವೈಖರಿಯೆರಡಿಂ ಪಾದೀ ಸರಿಗಮಪದನಿ ಯದೆನಿಪ 1ಶ್ರುತಿಗಳ ಸಂಜ್ಞೆುಂದ ಸಾರಾವಾದಾ ಸ್ವರದತತಿಯಾಗಿ ಸೋಪಾನವ ತಾನು ಸೇರುತಗತಿುಂದಲೇರುತಿಳಿದು ಗುಣಗಳಿಂದಲೆಸತತವು ಷಡ್ಜಗಳೇಳನು ಸೂಚಿಸಿ ಮತದಲಿ ನಿನ್ನಯ ಮಹಿಮೆಯ ಪೇಳ್ವ 2 Éೂೀಕವೀರೇಳರಲ್ಲಿ ಲೀಲೆುಂದ ನೀನುಸೋಕಿ ಸೋಕದ ಹಾಗೆ ಸಂಚರಿಪುದವಾಕೊಂದೆ ಬಹಳ ಶಬ್ದವೆನಿಸಿಕೊಳುತಏಕನು ತಿರುಪತಿಯೊಡೆಯನನೇಕದಿ ಸಾಕುವ ವೆಂಕಟಸ್ವಾಮಿಯುಯೆನುವಾ 3ಓಂ ಉತ್ತಾಳೋತ್ತಾಳ ಭೇತ್ತ್ರೆ ನಮಃ
--------------
ತಿಮ್ಮಪ್ಪದಾಸರು
ಪದ್ಮಾಲಯೆ ಪೊರೆಯೆ ಸದಯೆ ಪ. ಪದ್ಮಸಂಭವೆ ಬೇಡುವೆ ಕೊಂಡಾಡುವೆ ನಿನ್ನ ಪಾಡುವೆ ಅ.ಪ. ಮನಸಿಜನಯ್ಯನ ಮೋಹದ ರಾಣಿಯೆ ಮುನಿಸಿಂತೇತಕೆ ಭೂಸುತೆ ಮುನಿಸನ್ನುತೆ ಕರುಣಾನ್ವಿತೆ 1 ಜೋಡಿಸಿ ಕರಮಂ ಪಾಡುತ ನಿನ್ನಂ ಬೇಡುವ ಕಂದನ ಪಾಲಿಸೆ ಮೊರೆಲಾಲಿಸೆ ದಯೆತೋರಿಸೆ 2 ಸುರನರವಂದಿತ ಚರಣಸರೋಜದಿ ಶರಣೆನ್ನುವ ಕಂದನಂ ವರಿಸೀ ದಿನದಿನಮೆಂದೆನು 3 ಮಾತೆಯೆ ಮುಳಿದೊಡೆ ಪೋತನ ಪೊರೆವಾ ದಾತರುಮಿರ್ಪರೆ ನೀನುಡಿ ಗತಿ ನಿನ್ನಡಿ ಅಣುಗರ ಕೈಪಿಡಿ4 ಪರಮಪಾವನ ಶೇಷಗಿರೀಶನ ಕರುಣಾರೂಪಿಣಿ ಭಾಮಿನೀ ಶುಭದಾಯಿನೀ ಜಯನಂದಿನೀ5
--------------
ನಂಜನಗೂಡು ತಿರುಮಲಾಂಬಾ
ಪದ್ಯ ಅಥಃ ಪ್ರಥÀಮೋಧ್ಯಾಯ ಪಾದ ವಾರಿಜಕೆರಗುತ ನೀರಜ ಮುಖಿ ಸರಸ್ವತಿಯಾ || ಸಾರ ಭಕ್ತಿಲಿ ಸ್ತುತಿಸಿ ಪೇಳುವೆ ಸತ್ಯ ಚಾರು ಕಥೆಯಾ ಪ ಸುರಮುಖಿವಂದಿತ ಸರಸಿಜ ಭವಪಿತ ಶರಧಿ ಕರಿವರದಾ | ಹರುಷದಿಂದಲಿ ನಿನ್ನ ಚರಿತೆ ಕೊಂಡಾಡಲು ವರವ ಪಾಲಿಸು ದಯದಿಂದ 1 ಶರನಿಧಿ ಸಂಭೂತೆ ಸುರಜೇಷ್ಟ ಸ್ಮರಮಾತೆ ಪುರಹರ ವಂದಿತೆ ಖ್ಯಾತೆ || ಸ್ಮರಿಸಿ ಬೇಡುವೆ ನಿನ್ನ ಧೊರಿಯ ವರ್ಣಿಸಲೀಗ ಗರಿಯೆ ವರವ ಸುಖದಾತೆ 2 ಹರಿಕುಲೋತ್ತುಮ ನಿನ್ನ ಸರಸಿಜ ಪದಯುಗ ನೆರೆನಂಬಿದೆನು ಮುದಿಂದ || ಹರಿಸುಚರಿತ್ರವು ಅರುಹಲು ಎನ್ನಗೆ ಸ್ಥಿರ ಬುದ್ಧಿಕೊಡು ವಾಯುಕಂದ 3 ಗಿರಿಜೇಶ ಶಚಿಪತಿ ಸುರತತಿಗೆರಗುವೆ ಪರಮ ಸುಭಕ್ತಿ ಪೂರ್ವಕದಿ || ಹರಿದಾಸ ವರ್ಗಕೆ ಶುಭನೀಡಲೆನಗೆಂದು ಶಿರಬಾಗಿ ಬೇಡುವೆ ಮನದಿ 4 ಘನತರ ನೈಮಿಷವನದೊಳು ವಾಸಿಪ ಮುನಿ ಸೂತನಲ್ಲಿಗೆ ಬಂದು | ವಿನಯದಲಿ ವಿಜ್ಞಾಪನ ಮಾಡಿಕೊಂಡರು ಶೌನಕಾದಿಗಳೆಲ್ಲ ನಿಂದು 5 ಕ್ಷಿತಿಯೊಳು ಮನದಾಸೆ ಹಿತದಿಂದ ನೀಡುವ | ವ್ರತದಾವದ್ಹೇಳಿರೆನುತ || ಅತಿ ಭಕ್ತಿಯಿಂದ ಕೇಳುವ ಮುನಿಗಳ ಕಂಡು ಕಥಿಸಿದನಾಗೆತಿ ಸೂತಾ 6 ಛಂದದಿ ಕೇಳಿರಿ ಒಂದೆ ಮನದಿ ಈಗಾ | ನಂದದಿ ನಾರದ ತಾನೂ || ಹಿಂದಕ್ಕೆ ಈತೆರ ನಂದನ ಗೋ ವಿಂದನ ಪ್ರಶ್ನೆ ಮಾಡಿದನೂ 7 ಕಾರುಣ್ಯದಿಂದಲಿ ಸಾರಸೋದ್ಭವಕು | ಮಾರ ನಾರದ ಮುನಿವರಗೆ || ಶೌರಿ ಪೇಳಿದ ಕಥೆ ಸಾಧುವೆ ಮೋದದಿ ನಿಮಗೆ 8 ವರಸುರ ಲೋಕಾದಿ ಚರಿಸುತ್ತನಾರದ | ಹರುಷದಿ ಭೂಮಿಗೆ ಬರಲು || ನರರತಿ ಕಷ್ಟದಿ ಮರುಗುವದಂ ನೋಡಿ | ಪೊರೆಟರು ಹರಿಗ್ಹೇಳಿ ಕೊಳಲು 9 ಪದುಮಜ ಸುತ ನಾರದ ಮುನಿ ವೇಗದಿ | ವಿದುಧರ ವಂದಿತನಾದ || ಯದುಪನಲ್ಲಿಗೆ ಬಂದು ಮುದಮನದಿಂದಲಿ | ವಿಧ ವಿಧದಲಿ ಸ್ತುತಿಗೈದಾ 10 ಅಗಣಿತ ಮಹಿಮನೆ ತ್ರಿಗೂಣ ವರ್ಜಿತ ತ್ರಿವಿಕ್ರಮನೆ || ಪೊಗಳುವ ತವ ಪದಯುಗಕೆರಗುತ ನಾನು ಜಗದುತ್ವತ್ತಿ ಕಾರಣನೆ 11 ಮಗಳಲ್ಲಿ ಪುಟ್ಟದಿ ಮಗನನ್ನು ಕುಟ್ಟದಿ | ಮಗನ ಮಗಳ ಮದುವ್ಯಾದಿ || ಮಗನ ಮಗನ ವರಪಡೆದಾತನ ಜೈಸಿ ಮಗನ ಮಗನ ನೀನು ತಂದಿ 12 ಸಿಂಧುಜರಿಪ್ರಸಖ ನಂದನ ಕೊಂದನ | ತಂದೆಯ ತಂದೆಯಾ ಸುತೆಯಾ || ನಂದಿನಿಯಳಿಗಾಗಿ ನೊಂದಿದಿ ನೀ ನರ ರಂದದಿ ಕವಿಗಣಗೇಯಾ 13 ಘನ್ನ ಮಹಿಮ ನಿನ್ನ ಅನಂತ ಚರಿಯವ ಬಣ್ಣಿಸ ಬಲ್ಲೆನೆ ದೇವಾ || ಪನ್ನಗರಾಜಗಾಗಣ್ಯವಾಗಿಪ್ಪುದು ಮನ್ನಿಸು ಎನ್ನ ಬಿನ್ನಪವಾ 14 ಬಾ ಮುದ್ದು ನಾರದನೆ ಬಾ ಮುನಿವರ್ಯನೆ ಬಾ ಮೂರು ಭುವನ ಸಂಚಾರಿ ನೇಮದಿಂದಲಿ ನಿನ್ನ ಕಾಮಿತ ಪೇಳೀಗ ಪ್ರೇಂದಿಂದಲಿ ವೀಣಾಧಾರಿ 15 ಮುರಹರ ನಿನ್ನಗೆ ಅರಿಯದ ವಾರ್ತೆಯು | ಧರಣಿ ತ್ರಯದಿ ಉಂಟೇನೋ || ನರರತಿ ಕಷ್ಟದಿ ಮರುಗುತಲಿಪ್ಪರು ಹರಿಪೇಳಿದಕುಪಾಯವನು 16 ಸತ್ಯಲೋಕೇಶನ ಪುತ್ರನೆ ನಿನ್ನಯ | ಉತ್ತಮ ಪ್ರಶ್ನೆಗೆ ನಾನು || ಚಿತ್ತೈಸು ಮುನಿವರ ನೀನು 17 ನಾರದ ಶ್ರೀ ಸತ್ಯನಾರಾಯಣ ವ್ರತ ಧಾರುಣಿಯೊಳಗಿನ ಜನರು ಆರು ತಮ್ಮ ಪರಿವಾರದಿಂದಲಿ ಗೈಯ್ಯೆ ಭೂರಿ ಸೌಖ್ಯದಿ ಮೆರೆವರೋ 18 ದೇವನೆ ಈ ನಿನ್ನ ಸೇವಕನಿಗೆ ಸತ್ಯ || ದೇವನೆ ವ್ರತದ ವಿಧಾನ || ಸಾವಧಾನದಿ ಪೇಳು ಭಾವ ಜಪಿತ ಏಕೋ ಭಾವದಿ ಕೇಳುವೆ ಮುನ್ನ 19 ಬುಧನುತ ನಾರದ ಘೃತಕ್ಷೀರ ಶರ್ಕರ | ಕದಳಿ ಗೋಧೂ ಮಾದಿಗಳನು || ಪದುಳದಿಂದಲಿ ಸುಪಾಕಗೈದು ಮೇಣ್ ವಿಧ ವಿಧ ಪಕ್ವಾದಿಗಳನು 20 ಪರಮ ಭಕ್ತಿಯಲಿಂದ ಪರಿವಾರ ಸಹಿತದಿ ಧರುಣಿಸುರನ ಪರಿಮುಖದಿ ತುರಧೂಳಿಕಾಲದಿ ಪರಿಪರಿ ಪೂಜಿಸಿ ಹರಿಗರ್ಪಿಸಲಿ ಬೇಕು ಮುದದಿ 21 ಈರೀತಿಗೈವರ ಕೋರಿಕೆಯನು ದಯ | ವಾರಿಧಿ ಶಾಮಸುಂದರನೂ || ನಿತ್ಯ ವಾರಿಜಸಹಿತದಿ ಸೇರಿ ತಾ ನಲಿದಾಡುತಿಹನೂ 22 ಇತಿ ಪ್ರಥಮೋಧ್ಯಾಯ ಸಂಪೂರ್ಣಂ ಅಥಃ ದ್ವಿತೀಯೋಧ್ಯಾಯಃ ಅತಿ ಮೋದದಿಂದಲಿ ಮತಿಯುತರೆ ಈಗ ಪೃಥವಿಯೊಳಗೆ | ಪೂರ್ವದಲಿ || ವ್ರತಗೈದ ಸುಗುಣರ ಇತಿಹಾಸ ನಿಮ್ಮಗೆ ಕಥಿಸುವೆ ಹಿತದಿಂದ ಕೇಳಿ 1 ಕಾಶಿಯೊಳಗೆ ಒಬ್ಬ ಭೂಸುರ ಬಡತನ ಕ್ಲೇಶದಿ ವಾಸಿಸುವದನು || ಶ್ರೀಶ ಅವನ ನೋಡಿ ಪೋಷಿಸಲು ವೃದ್ಧ ವೇಷದಿ ಮಾತನಾಡಿಸಿದನು 2 ಭೂತವಕದಿ ವಿಪ್ರನಾಥನೆ ತವ ಮುಖ ಪಾಥೋಜ ಬಾಡಿದ ಬಗೆಯಾ ಈ ತೆರ ದುಃಖದಿ ನೀ ತಿರಗುವಂಥ ಮಾತು ಪ್ರೀತಿಲಿ ಪೇಳಯ್ಯಾ 3 ಕಥಿಸುವೆ ಹೇವಿಪ್ರ ಹಿತದಿಂದ ನೀಯನ್ನ | ಸ್ಥಿತಿಯಾ ಲಾಲಿಸು ಮನದಿಂದಾ || ಗತಿಗೆಟ್ಟು ಚರಿಸುವೆ ಪೃಥಿವಿಯೊಳಗೆ ಈಗ ಅತಿ ಬಡತನ ದೆಶೆಯಿಂದಾ 4 ಶ್ರೇಷ್ಟನೆ ದಾರಿದ್ರ್ಯ ಕಷ್ಟ ತೊಲಗುವಂಥ | ಥಟ್ಟನೆ ನೀ ಪೇಳುಪಾಯಾ || ಘಟ್ಪ್ಯಾಗಿ ನಿನ್ನ ಉತ್ಕøಷ್ಟ ಪಾದಾಂಬುಜ ಮುಟ್ಟಿ ಸೇವಿಪೆ ಮಹರಾಯಾ 5 ಮಿಡುಕುತ್ತ ವಿಪ್ರನು ನುಡಿದ ಮಾತನುಕೇಳಿ | ಕಡಲಜಪತಿ ಕವಿಗೇಯಾ || ಕಡುದಯದಲಿ ಪೇಳ್ದ ಬಡತನ ಕಳೆಯುವ ಪೊಡೆವಿಯೊಳಿದ್ದ ಉಪಾಯಾ 6 ಸಾರುವೆ ಕೇಳಯ್ಯ ಮಾರಜನಕ ನಿಜ | ನಾರಾಯಣನ ಸು ವ್ರತವಾ ಆರು ಜಗದಿ ಭಕ್ತಿ ಪೂರ್ವಕ ಮಾಳ್ವರು ದಾರಿದ್ರ್ಯ ಹರಿ ದೂರಗೈವಾ 7 ಮುದುಕನ ನುಡಿಕೇಳಿ ಮುದಮನದಿಂದಲಿ ಸದನಕ್ಕೆ ದ್ವಿಜ ಬಂದು ತಾನೂ ಸುದತಿ ಸಹಿತನಾಗಿ ಸತ್ಯನಾಥಾನ ಪೂಜೆ ವಿಧ ವಿಧದಲಿ ಮಾಡಿದನೂ 8 ಹರುಷದಿ ಈ ರೀತಿ ಧರಣಿ ದೇವನು ಮಾಡೆ | ಶಿರಿಸತಿ ಸುತರಿಂದ ತಾನೂ || ಧರೆಯೊಳು ಸುಖಬಿಟ್ಟು ಪರಮ ದುರ್ಲಭವಾದ ಪಥ ಹಿಡಿದನೂ 9 ಸೂತರೆ ಅತ್ಯಂತ ಕೌತುಕವಾಗಿಹ ಧಾತ ಪಿತನ ಈ ವ್ರತವು ಭೂತಳದೊಳಗೆಂತು ಖ್ಯಾತಿಯ ಪೊಂದಿತು ಪ್ರೀತಿಲಿ ಪೇಳಿರಿ ನೀವು 10 ಸತಿಸುತ ಪರಿವಾರ ಸಹಿತಾ ಅತಿ ಹಿತದಲಿ ಮನೋರಥ ಪೂರೈಸುವ ಈ ವ್ರತ ಮಾಡುತಿರಲಾಗತ್ವರಿತಾ 11 ಚರಣನೋರ್ವನು ಶಿರದಿ ಕಾಷ್ಟಭಾರವ ಧರಿಸಿ ಮಾರಲು ಬೀದಿಗಳಲಿ ಬರುತಿರೆ ಮಾರ್ಗದಿ ಧರಣಿದೇವನೆ ಮಂ ದಿರ ಕಂಡ ಪರಮ ಮೋದದಲಿ 12 ಶ್ರೀನಿವಾಸನ ಘನಧ್ಯಾನದಿಂರ್ಚಿಪ ಕ್ಷೋಣಿ ಸುರನ ನೋಡಿ ಜವದಿ ಮಾನವ ಕೇಳಿದ ಏನಿದೆಂದೆನು ತಲಾಕ್ಷಣದಿ 13 ಶೂದ್ರನ ನುಡಿ ಕೇಳಿ ಆ ದ್ವಿಜ ಪೇಳ್ದನು ಶುದ್ಧ ಮನದಿ ಚರಣೋಧ್ಭವ ಗೈದನಿ ಶುದ್ಧನ ಪಾದಾರ್ಚನವಾ 14 ಹರುಷದಿಂದಲಿ ಸತ್ಯ ಹರಿ ಪೂಜಿಸಿದ ಶೂದ್ರ ಪರಮ ಸೌಜನ್ಯದಿ ಇದ್ದು ಕೊನೆಗೆ ಪರಿವಾರಯುತನಾಗಿ ತೆರಳಿದ ಸ್ಥಿರ ಉಳ್ಳ ಶಿರಿಶಾಮಸುಂದರನ ಪುರಿಗೆ 15 ಇತಿ ದ್ವಿತೀಯೋಧ್ಯಾಯ ಸಂಪೂರ್ಣಂ ಅಥಾಃತೃತೀಯೋಧ್ಯಾಯ ಋಷಿ ಜನಗಳೆ ಕೇಳಿ ವಸುಧಿ ತ್ರಯದಿ ಘನ ಪೆಸರಾದ ಇನ್ನೊಂದು ಕಥೆಯಾ ಉಸುರುವೆ ಕೇಳ್ವರ ವ್ಯಸನವು ಪರಿಹಾರ ಪುಸಿಯಲ್ಲಿ ಈ ನುಡಿ ಖರಿಯಾ 1 ವರ ಉಲ್ಕಮುಖನೆಂಬ ಧರಣೀಶನೋರ್ವನು ಹರುಚದಿಂದಲಿ ತನ್ನ ಹಿತದಾ ಶರಧಿ ತೀರದಿ ನಿಜ ಹರಿಯನ್ನು ಪೂಜಿಸುತಿರ್ದ 2 ಕ್ಷೋಣಿಪಾಲಕನಿದ್ದ ಆ ನದಿತೀರದಿ | ವಾಣಿಜ್ಯ ಮಧುನಾಯಕನೂ || ಸಾನುರಾಗದಿ ಬಂದು ಶ್ರೀನಿಧಿ ವ್ರತದ ವಿ ಧಾನವೇನೆಂದು ಕೇಳಿದ 3 ಭೂಮಿಪಾಲಕ ಮಧುನಾಮಕ ವೈಶ್ಯನ ಆ ಮೃದು ನುಡಿಕೇಳಿ ಜವದಿ ಕಾಮಿತದ ಸತ್ಯ ಸ್ವಾಮಿಯ ವ್ರತ್ತದಾ ನೇಮವ ಪೇಳ್ವ ಸಮ್ಮುದದಿ 4 ರಕ್ಕಸಾರಿಯ ಕಥಾ ಭಕ್ತಿಲಿ ಕೇಳುತ ಲಕ್ಕುಮಿಯುತ ಮುದದಿಂದ ಮಕ್ಕಳೆನಗಾಗಲು ಚಕ್ರಿಯ ಸುವೃತ ಅಕ್ಕರದಲಿ ಮಾಳ್ಪೆನೆಂದ 5 ಈ ರೀತಿ ಧೃಡ ಬ್ಯಾಪಾರಿಯು ತಾಗೈದು ಶೌರಿ ಪ್ರಸಾದ ಸ್ವೀಕರಿಸಿ || ಸಾರಿ ಪೇಳಿದ ತನ್ನಾಗಾರಕ್ಕೆ ಬಂದು ತಾ ನಾರಿಯ ಮುಂದೆ ವಿಸ್ತರಿಸಿ 6 ಸತಿ ಶಿರೋಮಣಿ ಲೀಲಾ ವತಿಯು ತನ್ನ ಮಂದಿರದಿ || ಪತಿ ಕರುಣದಿ ಗರ್ಭ ವತಿ ತಾನಾದಳಾಕ್ಷಣದಿ 7 ಹತ್ತನೆ ಮಾಸದ ಉತ್ತಮ ಪುತ್ರಿಯ ಪೆತ್ತಳು ಆ ನಾರಿ ತಾನೂ || ಅತ್ಯಂತ ಸನ್ಮುದ ಚಿತ್ತನಾಗಿ ಸಾಧು ಮರ್ತನು ಹರಿವ್ರತವನ್ನು 8 ಸತಿ ಲೀಲಾವತಿ ತನ್ನ ಪತಿಗಭಿವಂದಿಸಿ ನಿಂದು || ಅತಿ ಭಕ್ತಿಯಿಂದಲಿ ಕಥಿಸಿಕೊಂಡಳಲ ಯದು ಪತಿ ವ್ರತ ಮಾಡಬೇಕೆಂದು 9 ಸುದತಿಯ ನುಡಿಕೇಳಿ ಮಧುನಾಮಕ ಸಾಧು ವಿಧಿಸಿದ ಸುತೆ ಕಲಾವತಿಯಾ || ಮದುವೆಯ ಕಾಲದಿ ಉದುಪನರ್ಚಿಪೆನೆಂದು ಮುದದಿಂದ ಪೇಳ್ದನುಪಾಯಾ 10 ಪರಿಪರಿ ಸೌಖ್ಯದಿಂದಿರುತಿರೆ ವೈಶನ ತರುಳೆಗೆ ಪೂರ್ಣಯೌವನವು | ಬರಲು ಮಾಡಿದ ತಕ್ಕವರ ತಂದು ಲಗ್ನವ ಮರೆತು ಬಿಟ್ಟನು ಹರಿವ್ರತವಾ 11 ಶ್ರೀಮಂತವೈಶ್ಯನು ಪ್ರೇಮದಿಂದಲಿ ತನ್ನ ಜಾಮಾತನೊಡನೆ ವ್ಯಾಪಾರಾ ನೇಮದಿ ಗೈಯಲು ಗ್ರಾಮ ತ್ಯಜಿಸಿ ಪೋದಾ ಆ ಮಹಾಪುರ ರತ್ನಸಾರಾ&ಟಿbs
--------------
ಶಾಮಸುಂದರ ವಿಠಲ