ಒಟ್ಟು 7546 ಕಡೆಗಳಲ್ಲಿ , 133 ದಾಸರು , 4390 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ಮಾತಿಗೆ ಮೆಚ್ಚುವನಾವಾವಾ ಪರಾಕು ಎಲೊ ಎಚ್ಚರಿಕೆ ಪ ಎಂತಾಗುವದೆಂದು ನುಡಿಯದಿರಿ ಕಂತುವಿನ ಪಿತ ನಿನಗೆ ನಮೊ ನಮೊ ಬಿನ್ನೈಪೆ ಸಂತು ಧ್ರುವರಾಯನು ಸಂತತ ಇದಕೆ ಸಾಕ್ಷಿ 1 ಒಂದೆ ರೂಪದಲಿ ಪೂಜೆಯಗೊಂಬೆ ಎನಗೆ ಮ ತ್ತೊಂದು ರೂಪಕೆ ಶಕ್ತಿ ಇಲ್ಲೆನ್ನದಿರು ಸಂದೇಹ ಎನಗಿಲ್ಲ ಎಲ್ಲಿದ್ದರು ದೇವ ನಂದನಂದನ ಇದಕೆ ರಾಯ ಬ್ರಾಹ್ಮಣ ಸಾಕ್ಷಿ 2 ಬದಿಯಲಿದ್ದರೆ ಇಷ್ಟೆ ಮುಂದೆ ಬರುವ ಆಪತ್ತು ಒದಗಿ ಕಳೆವೋಪಾಯ ಕಡಿಮೆನ್ನದಿರೊ ಮುದದಿಂದ ನಿನ್ನಂಘ್ರಿಗೆರಗುವೆನು ಗತಿಪ್ರದಾ ಕದನದೊಳು ಬದುಕಿ ನರಧ್ವಜನೆ ಸಾಕ್ಷಿ3 ಆಪತ್ತು ಕಳೆವೆ ಬೇಡಿದ ಭೋಜನ ಕೊಡುವೆ ಈ ಪರಾಕ್ರಮ ನಿನಗಲ್ಲೆನ್ನದಿರು ಶ್ರೀಪತಿ ನಿನ್ನ ಲೀಲೆಗೆ ಬೆರಗಾಗುವೆನೊ ತಾಪಸರ ಮಧ್ಯದಲಿ ದುರ್ವಾಸಮುನಿ ಸಾಕ್ಷಿ 4 ನಾನಾ ಭಕ್ತರು ಇನಿತು ಸಾಕ್ಷಿಯಾಗಿರಲಿಕ್ಕೆ ಏನು ಸೋಜಿಗವೆಂಬೊ ಸೋಗು ಯಾಕೆ ಸಿರಿ ವಿಜಯವಿಠ್ಠಲರೇಯಾ ನಾನು ಬೇಡುವದೇನು ಸರ್ವಪ್ರೇರಕೆ ಪ್ರೀಯಾ5
--------------
ವಿಜಯದಾಸ
ನಿನ್ನ ವಲಿಸುವ ಭಾಗ್ಯ ನಿನ್ನ ಭಕ್ತರಿಗೆ ನೀ ಕೊಟ್ಟು ಸನ್ನುತ ಚರಿತರಿಗೀವೆಯಲ್ಲದೆ ನಿನ್ನ ಮಹಿಮೆಯ ತೋರುವ ಅನ್ಯರಿಗೆ ಈ ಭಾಗ್ಯವುಂಟೆ ನಿನ್ನ ವಲಿಸಲು ಸಂಪನ್ನ ಶ್ರೀ ಶ್ರೀನಿವಾಸ 1 ಸೂರ್ಯ ತೇಜಕೆ ಪ್ರತಿ ಕೋಟಿಸೂರ್ಯ ತೇಜ ಧರಿಸಿ ಆರ್ಯ ರಾಮರಾಯರಾ ಕರಗತದಿ ಮೆರೆದೊ ಜಗತ್ಸಿರಿಯೆ ಆ ಆರ್ಯರಾ ಮಡದಿ ಸೀತಾಬಾಯಿ ಎಂಬುವರಾ ಆ ಈರ್ವರಾ ಸೇವೆಯಲಿ ಮೆರೆದ ಸುರತರುವೆ ಶ್ರೀ ಶ್ರೀನಿವಾಸ 2 ನಿನ್ನ ಸೇವಾಕಾರ್ಯ ಆವಾವುದೆಂದ್ಯೋಚಿಸದೆ ನಿನ್ನ ಸೇವಾಕಾರ್ಯದಲಿ ನಿರುತ ತಪವನೆಗೈಯೆ ಮಾನವ ವೇಷಧಾರಿಣಿಯರಾಗಿ ಪುಟ್ಟಿಹರೂ ಜಗದಿ ಬಕುಳಾವತಿಯ ತೆರದಿ ನಿನ ಸೇವ ನಿರತದಿ ಶ್ರೀ ಶ್ರೀನಿವಾಸ 3 ಸಾರ ಗುರುಮುಖದಿಂದ ತಿಳಿದು ನಿ ಲಕುಮಿ ಆವಾಹಿಸಿದ ಬಿಲ್ವರÀಸವ ನಿನಗರ್ಪಿಸಿ ಅಕಳಂಕ ಮಹಿಮರು ಸೇವಿಸಿ ಸೌಳ ವರುಷ ತಪವಗೈದಿಹರೊ ಗುರುವಾಜ್ಞೆಯಲಿ ನಿನ್ನ ಸೇವಿಸೆ ಶ್ರೀ ಶ್ರೀನಿವಾಸ 4 ನಿನ್ನ ಸೇವಕರಾದ ಆ ಮಾನುನಿಯರನುದ್ಧರಿಶೆ ನಿನ್ನ ಇಂಥ ಆಟಗಳ ಗೋಪಿಗೆ ಕೃಷ್ಣ ತೋರಿದಂದದಲಿ ಸನ್ನುತಾಂಗನೆ ತೋರಿ ಭಕ್ತರಭೀಷ್ಟವನು ಉನ್ನತದಿ ಸಲಿಸೆ ಜಗದಿ ಘನ್ನ ಸಂಪನ್ನ ಲೀಲೆನೋಡಲು ಶ್ರೀ ಶ್ರೀನಿವಾಸ 5 ಗಂಗಾಜನಕನೆ ನಿನ್ನುಂಗುಟದಿಂ ಬಂದ ಗಂಗೆಯ ಕೇಸರಿತೀರ್ಥದಾ ಸೊಬಗೇನೆಂದು ಬಣ್ಣಿಪೆನೊ ಶ್ರೀ ರಂಗನಾಥಾ ಸರ್ವರಿಗೆ ದಾತಾ ರಂಗನಾಥನೇ ನಿನ್ನ ಪಂಚಾಮೃತದ ಅಭಿಷೇಕ ಕಂಗಳಿಗ್ಹಬ್ಬವೊ ಜಗದ ಜಂಗುಳಿ ಭಕ್ತರಿಗೆನುತೆ ಶ್ರೀ ಶ್ರೀನಿವಾಸಾ 6 ತನ್ನ ತೊಡೆಯೊಳಗಿಟ್ಟು ಉನ್ನತದ ಆಭರಣ ಗೋಪಿ ಇಡುವ ತೆರದಿ ಇನ್ನು ನಿನಗಲಂಕಾರ ಮಾಡುವದೇನ ಬಣ್ಣಿಪೆನೋ ಸನ್ನುತ ಚರಿತರವರೈಸೇ ನಿನ್ನ ನೇವೇದ್ಯ ಘನ್ನ ಮಂಗಳಾರುತಿ ಬೆಳಗಿ ನಿನ್ನ ಸ್ತುತಿ ಮಾಡುತ್ತ ನಿನ್ನ ತೀರ್ಥವನ್ಹಂಚುವರೊ ಭಕ್ತರಿಗೆಲ್ಲ ಶ್ರೀ ಶ್ರೀನಿವಾಸ 7 ಏನು ಸುಕೃತವ ಮಾಡಿ ಈ ಮಾನುನೀಯರು ಪುಟ್ಟಿಹರೊ ಗಾನಲೋಲನೆ ನಿನ್ನ ಲೀಲೆ ಜಗಕೆ ಬೇರೆ ತೋರೆ ಮನಸಾರೆ ಸಾನುರಾಗದಿ ಬಂದು ನಿನ್ನ ಭಕ್ತರಾ ಮಂದಿರಕೆ ದೀನನಾಥನೆ ನಿನ್ನ ಸಹಿತದಲಿ ಮಾನುನಿಯು ದಾನವಾಂತಕ ನಿನ್ನ ಮಹಿಮೆ ತೋರುವರೊ ಏನೆಂದು ಬಣ್ಣಿಸಲಿ ಎನ್ನಳವೇ ಶ್ರೀ ಶ್ರೀನಿವಾಸ 8 ಒಬ್ಬೊಬ್ಬ ಭಕ್ತರಲಿ ಒಂದೊಂದು ಮಹಿಮೆಯನು ಅಬ್ಬರದಿ ತೋರುವರೊ ನಿನ್ನ ಮಹಿಮೆಯ ದೇವ ಮತ್ತೊಬ್ಬರಾ ಮನೆಯಲ್ಲಿ ಪ್ರಸಾದದಾ ಮಹಿಮೆಯನು ಮತ್ತೊಬ್ಬರಾ ಮನೆಯಲಿ ತೀರ್ಥದಾ ಮಹಿಮೆ ತೋರಿ ಅಬ್ಬರದಿ ಮೆರೆಸುವರೋ ಶ್ರೀ ಶ್ರೀನಿವಾಸ 9 ಗಾನ ಪ್ರಿಯನೆ ನಿನ್ನ ಕಲ್ಯಾಣದುತ್ಸವವು ಏನೇನು ಮಾಡುವ ಕಾರ್ಯ ನಿನ್ನದೇ ಎಂದು ಆನಂದದಿಂದ ಮಾಡುವರೊ ಹರಿಯೆ ದೋರೆಯೆ ದೀನನಾಥ ಎನ್ನ ಹೃದಯದಲಿ ನೀನಿಂತು ನುಡಿದಂತೆ ನುಡಿದಿರುವೆ ಅನಾಥ ಬಂಧು ಶ್ರೀ ಶ್ರೀನಿವಾಸಾ ಶ್ರೀಶಾ 10
--------------
ಸರಸ್ವತಿ ಬಾಯಿ
ನಿನ್ನ ಸಂಭ್ರಮದೊಳಗೆ ನೀನೆ ಇರುತಿರುವಿ ಎನ್ನಯ್ಯ ಮರೆದೇನು ಮುನ್ನಾದ ಬವಣೆ ಪ ಅನ್ನವನು ಕಾಣದೆ ಅನ್ನದಿಕ್ಕಿಲ್ಲದೆ ಉನ್ನತೋನ್ನತವಾದ ಚಿನ್ನದರಮನೆಯಲ್ಲಿ ಬಿನ್ನವಿಲ್ಲದೆ ಸಿರಿಯರನ್ನಬಡಿಪ ಮದವೋ 1 ಮಡದಿಯನು ಕಳಕೊಂಡು ಎಡೆಬಿಡದೆ ಅಡವ್ಯಡವಿ ಹುಡುಹುಡುಕಿ ಬೇಸತ್ತು ಕಡುಬಾಯ ಬಿಡುವಗೆ ಮೃಡಮಹಾದೇವತೇರು ಸಡಗರದಿ ನಿನ್ನಡಿಯ ದೃಢದಿ ಪೂಜಿಪರೆಂಬ ಕಡುಗರವದಿರವೇ 2 ನೀರೊಳ್ಜೀವಿಸಿ ಬಲು ನಾರುತಲಿರುವವಗೆ ಹಾರ ಹೀರಾವಳಿ ಗಂಧ ಕಸ್ತುರಿಯ ಮದವೋ ಸಾರಿ ಮನು ಮುನಿಗಳು ಸೇರಿ ನಿಮ್ಮಯ ಚರಣ ವಾರಿಜ ಭಜಿಪ ಮದ ಮೀರಿಹ್ಯದೋ ನಿನಗೆ 3 ತಿರುಕನು ತಾನಾಗಿ ಧರೆಯ ದಾನವ ಬೇಡಿ ಧರೆವರನ ಬಾಗಿಲವ ನಿರುತ ಕಾಯ್ದವಗೆ ಸುರರು ಗಂಧರ್ವ ತುಂಬುರರು ಸಂಗೀತದಿಂ ಹರುಷಗೊಳಿಪುದಕೆ ನೀ ನೇತ್ರ ಮುಚ್ಚಿರುವ್ಯೋ 4 ಭಾರಬೆನ್ನಲಿ ಪೊತ್ತು ಘೋರ ಬಡುತಿರುವವಗೆ ಈರೇಳುಲೋಕದ ದೊರೆಯೆಂಬಹಂಕಾರವೋ ಮಾರಪಿತ ಗತಿಯೆಂದು ಸೇರಿ ಭಜಿಸುವ ದಾಸರರಿಕೆ ಪೂರೈಸದಿದು ತರವೆ ಶ್ರೀರಾಮ 5
--------------
ರಾಮದಾಸರು
ನಿನ್ನ ಸೇರಿದೆ ಮಹಾಲಿಂಗ ಎನ- ಗಿನ್ಯಾರು ಗತಿ ಕಾಣೆ ಕರುಣಾಂತರಂಗ ಪಾರ್ವತಿ ಮೋಹನಾಂಗ ಪ. ನಿನ್ನಂತೆ ಕೊಡುವ ಉದಾರ ತ್ರಿಭು- ವನ್ನದೊಳಿಲ್ಲದಕ್ಯಾವ ವಿಚಾರ ಮುನ್ನ ಮಾರ್ಕಾಂಡೇಯ ಮುನಿಯ ಭಯ ವನ್ನು ಪರಿಹರಿಸಿದೆಯೊ ಸದುಪಾಯ ನಮೋ ಶಿವರಾಯ 1 ಸರ್ವಾಪರಾಧವ ಕ್ಷಮಿಸು ಮಹಾ- ಗರ್ವಿತರಾಶ್ರಯಕ್ಕೊಲ್ಲದು ಮನಸು ಶರ್ವರೀಶಭೂಷ ನಿನ್ನ ಹೊರ- ತೋರ್ವರಿಲ್ಲ ರಣಮಲ್ಲ ಮುಕ್ಕಣ್ಣ ಕಾಯೊ ಸುಪ್ರಸನ್ನ 2 ಅಂತರಂಗದ ದಯದಿಂದ ಯುದ್ಧ- ಮಂ ತೊಡಗಿದೆ ಪಾರ್ಥನೊಳತಿಚಂದ ಪಂಥದ ನೆಲೆಯನ್ನು ತಿಳಿದು ಸರ್ವ- ದೊಡ್ಡದು ನಿನ್ನ ಬಿರುದು 3 ಸಿದ್ಧಿಸು ಸರ್ವಸಂಕಲ್ಪ ಅಡ್ಡ- ಬಿದ್ದು ಬೇಡುವೆ ನಿನಗ್ಯಾವದನಲ್ಪ ಹೊದ್ದಿದವರಿಗಿಲ್ಲೆಂದಿಗು ಕೇಡು ದುಷ್ಟರದ್ಯಾವ ಪಾಡು4 ಅಂಜಿಕೆ ಬಿಡಿಸಯ್ಯ ಹರನೆ ಪಾ- ವಂಜಾಖ್ಯವರಸುಕ್ಷೇತ್ರಮಂದಿರನೆ ಸಂಜೀವನ ತ್ರಿಯಂಬಕನೆ ನವ- ಸಲಹೊ ಪಂಚಮುಖನೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ನಿನ್ನ ಸೇವೆಯನೊಂದನಿತ್ತು ಸಲಹೋಎನ್ನ ಮನ ನಿನ್ನಲ್ಲಿ ನಿಲುವಂತೆ ಮಾಡಿ ಪ ಅನ್ನವನು ಬೇಡಿಕೊಂಬುವದೆಂತು ವಿಪುಳ ವಿಷವನ್ನು ಕುಡಿದಿಹ ನೀಲಕಂಠನೊಡನೆಸನ್ನುತಾಂಬರವ ಬೇಡುವುದೆಂತು ಕರಿಚರ್ಮ-ವನ್ನು ಪೊದೆದಿಹ ದಿಗಂಬರನೊಡನೆ ಶಂಭೋ 1 ಮಿರುಗುವಾಭರಣಗಳ ಬೇಡಿಕೊಂಬುದೆಂತುಉರಗಕುಂಡಲಹಾರ ವಲಯನೊಡನೆಪರಮ ಭಾಗ್ಯವ ಬೇಡಿಕೊಂಡೆ ನಾನೆಂತು ವಿಧಿಶಿರದಿ ಭಿಕ್ಷವ ಬೇಡಿ ತಿರಿದುಂಡನೊಡನೆ 2 ಕರಿತುರಗ ಮುಖ್ಯವಾಹನವ ಬೇಡುವುದೆಂತುನಿರುತ ಬಸವನ ಮೇಲೆ ಚರಿಪನೊಡನೆಕರುಣದಿಂದೆನಗೆ ಕೊಡಲೇನುಂಟೊ ಕೆಳದಿಪುರ-ದೆರೆಯ ರಾಮೇಶ ಶ್ರೀಕರ ಪಾರ್ವತೀಶ 3
--------------
ಕೆಳದಿ ವೆಂಕಣ್ಣ ಕವಿ
ನಿನ್ನ ಸೊಬಗಿದೇನೊ ಶ್ರೀಹರಿ ವಿಭವ ಚನ್ನಕೇಶವಾ ಪ ಸತಿ ಸಿರಿದೇವಿಯು ಅತಿ ಚಂಚಲೆಯು ಸುತಮದನ ತಾನನಂಗನೂ ಸುತೆ ಬಾಗೀರಥಿ ವಕ್ರಮಾರ್ಗಳೋ ಅತಿಶಯ ಮೈದುನ ಕ್ಷಯರೋಗಿ 1 ಇರುವ ಮಂದಿರವು ಸಾಗರ ಮಧ್ಯವು ಉರಗನ ಮೇಲೆ ಪವಡಿಸಿಹೆ ಗರುಡನೇರಿ ಗಗನದಿ ತಿರುಗಾಡುವೆ ನೆರೆ ತುಲಸಿಯ ಮಾಲೆಯ ಹಾಕಿರುವೆ 2 ದಾನಕೊಟ್ಟವನ ಭೂಮಿಗೆ ತುಳಿದೆ ಧ್ಯಾನ ಗೈದವನ ಶಿರವರಿದೆ ಮಾನಿನಿ ಕೊಟ್ಟ ಸವಿಫಲಭಂಜಿಸಿ ಕೂರ್ಮ ವರಹನು ನೀನಾದೆ 3 ಹೀಗಿದ್ದರೂ ಸತ್ಸತಿಸುತ ಬಾಂಧವ ಭೋಗ ಭವನ ಭಾಗ್ಯಗಳಿತ್ತು ರಾಗದಿ ರಕ್ಷಿಪೆ ಶರಣರ ನಿರುತವು ಭಾಗವತಪ್ರಿಯ ಜಾಜಿಕೇಶವಾ 4
--------------
ಶಾಮಶರ್ಮರು
ನಿನ್ನನಗಲಿ ಪೋಗಲಾರೆವೋ ನೀರಜಾಕ್ಷ ನಿನ್ನ ಸೇರಿ ಸುಖಿಸ ಬಂದೆವೊ ಪ ಮನ್ನಿಸದೆ ಮಮತೆಯಿಂದ ಭಿನ್ನ ನುಡಿಗಳಾಡಿ ನಮಗೆ ಹಣ್ಣು ತೋರಿ ಕಾಳಕೂಟವನ್ನು ಕೊಡುವರೇನೊ ಕೃಷ್ಣ ಅ ಐದುವದಕೆ ಶಕ್ಯವಲ್ಲದ ಅಪ್ರಮೇಯ ಆದಿಪುರುಷ ಅಮರಸನ್ನುತ ಶ್ರೀದ ನಮ್ಮ ಕೈಯ ಬಿಡದೆ ಆದರಿಸಬೇಕು ಪರವ- ರಾದರೇನು ನಿನ್ನ ಶರಣರಾದ ಮೇಲೆ ಬಿಡುವುದುಂಟೆ1 ಬಂಧುವರ್ಗವನ್ನು ಬಿಡುವುದು ಸ್ತ್ರೀಯರಿಗೆ ನಿಂದ್ಯವೆಂದು ಶಾಸ್ತ್ರ ಪೇಳ್ವುದು ಎಂದೆಗೆಂದಿಗೆಮಗೆ ನೀನೆ ಬಂಧುವೆಂದು ಬಂದಿಹೆವೊ ಇಂದು ಹೋಗಿರೆಂಬೆ ನೀನು2 ಶಮದಮಾದಿ ಗುಣಗಳಿಂದಲಿ ಸಜ್ಜನರು ಮೂರ್ತಿ ಮನದಲಿ ಮಮತೆಯಿಂದ ಪೂಜಿಸುತ್ತ ಗಮಿಸುವರೊ ನಿನ್ನ ಪುರಕೆ ನಮಗೆ ಮಾತ್ರ ಪತಿಸುತಾದ್ಯರಮಿತ ಸುಖವ ಕೊಡುವರೇನೊ 3 ಮೋಕ್ಷ ಇಚ್ಛೆಯಿಂದ ನಿನ್ನನು ಭಜಿಪ ಜನರಾ ಪಕ್ಷ ವಹಿಸಿದಂತೆ ನಮ್ಮನು ರಕ್ಷಿಸದೆ ಬಿಡುವರೇ ಕಟಾಕ್ಷದಿಂದ ಈಕ್ಷಿಸದೆ ಲಕ್ಷ್ಮೀದೇವಿ ನಿಮಗೆ ಬಹಳಾಪೇಕ್ಷೆಯಿಂದ ಮೋಹಿಸಿದಳೆ 4 ಅನಘ ನಿನ್ನ ನೋಡಿ ಮೋಹಿಸಿ ಅಂತರಾತ್ಮ ತನುವು ಮನವು ನಿನಗೆ ಅರ್ಪಿಸಿ ಜನನ ಮರಣದಿಂದ ಜನರು ದಣಿವರೇನೂ ಕಾಂತ ನಮ್ಮ ಮನಸಿನಂತೆ ಒಲಿದು ಸಲಹೊ ವನಜನಾಭ ವಿಜಯವಿಠ್ಠಲ 5
--------------
ವಿಜಯದಾಸ
ನಿನ್ನನೀ ತಿಳಿದು ನೋಡು | ಯನ್ನ ಮನವೇ ಪ ನಿನ್ನ ನೀ ತಿಳಿದು ನೋಡು | ಎನ್ನ ಹಿತವು ದಾವುದೆಂದು | ಮುನ್ನಿನವ ಗುಣ ಜರಿದು | ಇನ್ನಾರೆ ನೀ ಮನವೇ 1 ಒಳ್ಳೆವರಾ ಕಂಡು ಬಾಗಿ | ಬಡಿವಾರ ನೀಗಿ | ಸೊಲ್ಲವ ನಾಲಿಸು ಅವರಾ | ನಿಲ್ಲದೇ ನೀ ಮನವೇ 2 ತಂದೆ ಮಹಿಪತಿ ದಯಾ | ದಿಂದ ಪಡೆಯೋ ವಿಜಯಾ | ಮಂದ ನಾಗದಿರು ಬಂದಾ | ಛಂದ ವಿಂದು ಮನವೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನನೇ ನಂಬಿಹೆನೋ ಶ್ರೀನಿವಾಸಾಪನ್ನಗ ನಗಧೀಶ ಉದಯಾದ್ರಿ ವಾಸಾ ಪ ನಿತ್ಯ ನೂತನ ಮಹಿಮ ಎತ್ತ ನೋಡಿದರತ್ತ ಮುಕ್ತ ಜನ ಸೇವ್ಯಾ |ಕೀರ್ತಿ ಭವ್ಯ ವಿಶಾಲ ವರ್ತಿಪುದು ಸದಾಕಾಲಆರ್ತವರಿಗಪವರ್ಗ ಮೋಕ್ಷಮಾರ್ಗಾ 1 ಸೇವ್ಯ ಸೇವಕ ಭಾವ ದಿವ್ಯ ಸುಜ್ಞಾನವನುಪ್ರೀತಿಯಿಂದೆನಗಿತ್ತು ಕಾಯಬೇಕೋ |ಪ್ರೇರ್ಯ ಪ್ರೇರಕ ನೀನೇ ಕಾರ್ಯ ಕಾರಣ ಕರ್ತೃಭಾರ್ಯರಿಂದೊಡಗೂಡಿ ವೀರ್ಯಪ್ರದನಾಗೋ 2 ಸೃಷ್ಠಿ ಸ್ಥತಿ ಸಂಹಾರ ಅಷ್ಟಕರ್ತೃಸ್ವಾಮಿನಷ್ಟ ಗೈಸಜ್ಞಾನ | ಇಷ್ಟ ಮೂರ್ತೇದಿಟ್ಟ ಗುರು ಗೋವಿಂದ | ವಿಠಲನೆ ಮದ್ ಹೃದಯಅಷ್ಟ ಕಮಲದಿ ತೋರೋ | ಶಿಷ್ಟಜನಪಾಲಾ 3
--------------
ಗುರುಗೋವಿಂದವಿಠಲರು
ನಿನ್ನಪಾದ ದೊರಕುವುದು ಎಂತೆನಗೆ ರಂಗ ಗನ್ನಗತಕ ನಾನು ಪುಣ್ಯದ್ಹಾದ್ಯರಿಯೆ ಪ ಕಳ್ಳನಾಗಿ ಜೀವಿಸಿದೆ ಸುಳ್ಳನಾಡಿ ನಾ ದಣಿದೆ ತಳ್ಳಿಕೋರತನದನ್ಯರ್ಹಾಳು ಮಾಡಿದೆನೊ ಖುಲ್ಲತನದಿಂ ಪರರ ನಲ್ಲೆಯರೋಳ್ಮನಸಿಟ್ಟು ಕ್ಷುಲ್ಲಕನಾದೆ ನಾನೆಲ್ಲಿ ನೋಡಲವ 1 ಅನ್ನಕೊಟ್ಟವರಿಗೆ ಅನ್ಯಾಯಯೋಚಿಸಿದೆ ಬನ್ನ ಬಡಿಸಿದೆನಯ್ಯ ನನ್ನನಂಬಿದವರ ಎನ್ನ ಪಡೆದವರನ್ನು ಮನ್ನಿಸಿನೋಡಿಲ್ಲ ನಿನ್ನ ಧ್ಯಾನದ ಖೂನವನ್ನರಿಯೆ ದೇವ 2 ಗುರುಹಿರಿಯರನು ಜರಿದೆ ಪರಿಪರಿಯಲಿ ನಾನು ಪರರಿಗೊಂದಿಕ್ಕಿ ನಾನುಂಡಿರುವೆನೊಂದು ಧರೆಯೊಳೆಣೆಯಿಲ್ಲದ ದುರಿತವನು ಗಳಿಸಿರುವೆ ಕರುಣಾಳು ಶ್ರೀರಾಮ ನೀನೆ ಪೊರಿಬೇಕೊ 3
--------------
ರಾಮದಾಸರು
ನಿನ್ನವ ನಾನೆಂದು ಸಿರಿನಲ್ಲಾ ರಕ್ಷಿಸೋ | ಎನ್ನವಗುಣಗಳ ಎಣಿಸದೆ ದಯದಿಂದ ಪ ನಿನ್ನ ಮೂರುತಿಯ ಬೆಳಗವದೋರಿಸಿ | ನಿನ್ನ ಪಾದಾಂಬುಜ ಪರಿಮಳ ಸುಳಿಸಿ | ನಿನ್ನ ನಾಮಾಮೃತ ಸವಿಸವಿ ಉಣಿಸಿ1 ನಿನ್ನ ಪೂಜಿಸಿಕೊಂಡು ಕರಗಳಿಂದ | ಚೆನ್ನಾಗಿ ಪ್ರದಕ್ಷಿಣೆಯಾ ಪಾದಗಳಿಂದ | ಕಾಯ ನಮನದಿಂದ - ಎನ್ನ ಮನವಿಟ್ಟು ನಿನ್ನ ನೆನುವಿನಿಂದಾ2 ಅನುದಿನ ಕೊಟ್ಟು ನಿನ್ನ ದಾಸರ ಸಂಗ | ಕೊನೆದೇಳದಿರಲೆನ್ನಾ ವಿಶ್ರಾಮದಂಗ | ನೀನಾಗಿರು ತುಂಬಿಯೆನ್ನಾ ಬಾಹ್ಯಾಂತರಂಗ | ಘನಗುರು ಮಹಿಪತಿ ಪ್ರಭುಶ್ರೀರಂಗ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನವಗುಣ ಜರಿದು ಎನ್ನ ಮನವೇ | ನಿನ್ನವಗುಣ ಜರಿದೆನ್ನ ಮನವೇ | ಶಿರಿ | ಪನ್ನಗಾದ್ರೀಶನಾ ಕೂಡೋ ಸುಖ ಸೂರ್ಯಾಡೋ ಪ ಕೆಲವು ಪುಣ್ಯವನೇ ಮಾಡಿ | ನರದೇಹದಲ್ಲಿ | ಇಳಿಯೊಳಾಗ್ರದಲಿ ಮೂಡಿ | ಹಲವು ಹಂಬಲಿಂದ ಗೆಳೆಯರೈವರ ಛಂದಾ | ಬೆಳೆಸಿ ಸದ್ಗುಣ ಬಿಡುವರೇ ಅಂಧರಾಗುವರೇ 1 ಮರಹು ಮನೆಯನೆ ಸೇರಿ | ಮಂದತನದೀ | ಅರಿವ ಪಂಥದಲಿ ಜಾರಿ | ಅನುದಿನ | ಕೊರವನಾ ಕೋಡಗದಂತೆ ಕುಣಿದುಚಿತೆ 2 ಒಂದೇ ನಿಷ್ಟೆಯಾ ವಿಡಿದು | ಸದ್ಭಾವದಿಂದಾ | ದುಂದುಗಾವೃತ್ತಿ ಕಳೆದು | ತಂದೆ ಮಹಿಪತಿದಯಾ ನಂದ ಪಡೆದು | ನಿನ್ನಾ ಬಂದ ಸಾರ್ಥಕದಿ ಬಾಳು ಮುನ್ನಿನ ಕೇಳು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನವನು ನಾನಯ್ಯ ಅನ್ಯರವನಲ್ಲಾನಿನ್ನ ಕರುಳಿನ ಬಳ್ಳಿ 'ುಡಿಯು ಮ'ಪತಿರಾಯ ಪನಿನ್ನ ಪೌತ್ರನ ಮಗಳ ಬಳ್ಳಿಯೊಳು ಜನಿಸಿ ನಾನಿನ್ನ ಮ'ಮೆಯ ಗುರುತ ಅರಿಯಲಿಲ್ಲಾಸಣ್ಣವನು ನಾನೀಗ ತಪ್ಪು ಒಪ್ಪಿದ ಮೇಲೆಇನ್ನು ದಯಮಾಡು ಮುತ್ತಜ್ಜ - ಅಜ್ಜರ ಅಜ್ಜ 1ನಿನ್ನ ಕರುಳಿನ ಬಳ್ಳಿ ಎಲ್ಲಿ ಹುಟ್ಟಿದರೇನುಮೂಲದಿಂದಲ್ಲವೇ 'ುಡಿಗೆ ಆಹಾರಮೂಲ'ುಡಿಗಳ ಮರೆತು ಆಹಾರ ಕೊಡದಿರಲು'ುಡಿಯು ಬಾಡುವದಿಲ್ಲವೇನೊ ತಾತಯ್ಯ 2ನಿನ್ನವನು ನಾನೆಂದು ಒಪ್ಪಿಸಿದ ಗುರುರಾಯಇನ್ನು ಸಲಹುವ ಭಾರ ನಿನ್ನದಯ್ಯಾನಿನ್ನ ಘನತೆಗೆ ಕೂಂದು ತರದಂತೆ ಕಾಪಾಡುಘನ್ನ ಭೂಪತಿ 'ಠ್ಠಲನ ತೋರು ದಯಮಾಡು 3
--------------
ಭೂಪತಿ ವಿಠಲರು
ನಿನ್ನವರ ಧರ್ಮ ವಿಹಿತವಾಗುವುದು ಮ ತ್ತನ್ಯರಾಚರಿಸಿದ ಧರ್ಮ ಅಧರ್ಮ ಪ ಕಡಲ ಮಥನದಲಿ ಕಪರ್ದಿ ಕಾಳಕೂಟ ಕುಡಿಯಲು ಕಂಠಭೂಷಣವಾಯಿತು ಒಡನೆ ರಾಹು ಕೇತು ಸುಧೆಯ ಪಾನದಿಂದ ಮಡಿದರೆಂದು ಮೂರ್ಲೋಕವೇ ಅರಿಯೆ 1 ಬಲಿನಿನ್ನ ಮುಕುಟ ಕದ್ದೊಯ್ಯ ಪಾತಾಳಕೆ ಸಲೆ ಭಕ್ತನೆಂದು ಬಾಗಿಲ ಕಾಯ್ದೆ ಇಳೆಯೊಳು ಸುರರಿಗೆ ಗೋ ಭೂ ಹಿರಣ್ಯವಿತ್ತಾ ಖಳ ಜರಾಸಂಧನ ಕೊಲಿಸಿದೆ ಹೋಗಿ 2 ಪತಿವ್ರತ ಧರ್ಮದಿ ಮೃತರಾದ ತ್ರಿಪುರರ ಸತಿಯರು ಶಿವನಿಂದ ಹತರಾದರು ಸತಿ ಉಡುಪ ಪತಿಯಿಂದಲಿ ನಿತ್ಯ ಸೇವೆಯೊಳಿರುವಳು 3 ಮೇದಿನಿಯೊಳು ಪ್ರಾಣಿ ಹಿಂಸಕನೆನಿಸಿದಾ ವ್ಯಾಧನ ಯಮಿಕುಲೇಶನ ಮಾಡಿದೆ ವೇದೋಕ್ತ ಕರ್ಮವಾಚರಿಸಿದ ಜಿನನೊಳ್ ಪ್ರಾದುರ್ಭೂತನಾಗಿ ಕೆಡಹಿದೆ ತಮಕೆ 4 ಪರಾಶರನು ಸತ್ಯವತಿಯ ಸಂಬಂಧಿಸೆ ಶ್ರೀರಮಣ ನೀನವತರಿಸಿದಲ್ಲಿ ಭವ ಸರೋಜ ಕನ್ನಿಕೆಯಸಾರಲು ಬಿಡುವ ಜಗನ್ನಾಥ ವಿಠಲ 5
--------------
ಜಗನ್ನಾಥದಾಸರು
ನಿನ್ನಾಧೀನ ----------- ವೆಂಕಟಾದ್ರಿವಾಸ ವೆಂಕಟ ಪರಹರಿಸೊ ನೀ ಎನ್ನ ಸಂಕಟ ಪ ಚಿನ್ಮಯ-----ನಾದ-----ಶ್ರೀನಿವಾಸ ಪರಮಪುರಷ ಮುನ್ನ ನಾ ಮಾಡಿದ ದೋಷದಿಂದ ಅಮಲನಾಗಿ ವ್ಯರ್ಥ ಬಳಲುತಿಹೆನಾ ------ ಘನವೆ ನಿನಗೆ ಇರುವುದಿನ್ನು ಅನಿಮಿಷವು ನಿಮ್ಮ ಧ್ಯಾನದಲ್ಲಿ ಮಗ್ನರಾದ ಅವರಾ 1 ಶರಣರಾದ ಅವರಾ ಪೊರೆವ ಬಿರುದು ನಿನ್ನದಾಗಿ ಇರಲು ಪರಮ ಪತಿತ ಪಾವನನೆ ಭಕ್ತ ಜನರ ಬಿಡದೆ ಕಾಯ್ವ ಧೊರಿಯು ನೀನೇ ಎಂದು ನಿನ್ನ ಚರಣಕಮಲ ನೆಚ್ಚಿದವನಾ ಪರಿವೆ ಮಾಡದೆ ಇರುವುದಿನ್ನು ಭರದಿ ಮೋಚನ ಪಾಪನಾಶನ 2 --------ದೊಳಧಿಕನಾದವನ ವರಹೊನ್ನ ನಿ--------- ನಿಗಮಗೋಚರ 'ಹೊನ್ನವಿಠ್ಠಲಾ’ ನಿತ್ಯ ಸತ್ಯ ಜಗವಿಲಾಸ --------ಯಿಂದ ನಿನ್ನ ಪಾಡುವಂಥ ಭಜಕರನ್ನ------------- ರಕ್ಷಿಸುವ ಅಭಯ ನಿನ್ನದಾಗಿ ಇರಲೂ 3
--------------
ಹೆನ್ನೆರಂಗದಾಸರು