ಒಟ್ಟು 251 ಕಡೆಗಳಲ್ಲಿ , 34 ದಾಸರು , 239 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಲಹೊ ಶ್ರೀಹರಿಯೆ ಎನ್ನ ಮೊರೆಯ ಚಿತ್ತೈಸಿ ಉರಗಾದ್ರಿವಾಸ ಶ್ರೀಹರಿ ಕೇಶಿಧ್ವಂಸಿ ಪ ಸಾರ ಶೃಂಗಾರ ಯದುವೀರ ಸಲಹೆನ್ನ ಮಧುವೈರಿ ಮೋಹನ್ನ 1 ಅಪ್ಪ ತಿಮ್ಮಪ್ಪ ಎನ್ನ ತಪ್ಪನೆಣಿಸದಲೆ ಸರ್ಪಶಯನ ಸರ್ವ ಶ್ರೇಷ್ಠ ಸಲಹೆನ್ನ 2 ರಂಗಉತ್ತುಂಗ ಅಂತರಂಗದಿ ಒಲಿದು ಮಂಗಳಕರ ಪಾಂಡುರಂಗ ಸಲಹೆನ್ನ 3 ಬಾರಿಬಾರಿಗೆ ನಿನ್ನ ಹಾರೈಸುತಿರುವೆ ಸಾರಸಾಕ್ಷನೆ ಸಾರ್ವಭೌಮ ಸಲಹೆನ್ನ 4 ಕಮಲ ಸಂಭವನಯ್ಯ ವಿಮಲಸ್ವರೂಪ ಕಮಲನಾಭ ವಿಠ್ಠಲ ಪೊರೆ ಎನ್ನದಾತ5
--------------
ನಿಡಗುರುಕಿ ಜೀವೂಬಾಯಿ
ಸಾಕೇತಪುರ ವಾಸಿ ಕಪಟವೇಷ | ಶ್ರೀಕಮಲನಾಭನ ನಖದಲಿ ಕಾಶೀ ಪ ವಿಶ್ವತೋಮುಖ ಬ್ರಹ್ಮ ವಿಶ್ವತೋಚಕ್ಷು | ವಿಶ್ವ ವಿಶ್ವಬಾಹು ವಿಶ್ವರೂಪ ರೂಪ || ವಿಶ್ವ ಬ್ರಹ್ಮಾಂಡ ಆಧಾರ ಕಾರಣ | ವಿಶ್ವೇಶ್ವರ ಪ್ರಾಣ ಮಂತ್ರ ರಾಮ ರಾಮ 1 ಪರಿಯಂತ ರೋಮಕೂಪ | ಅಗಣಿತ ಕಮಲಜ | ಹಸ್ತಿ ಚರ್ಮಾಂಬರರು ಇದ್ದು ನೆಲೆಗಾಣರು | ನಾಸ್ತಿ ವಿಷ್ಣು ಪರದೈವ ಇಹಪರದಲಿ2 ಕಷ್ಟವಿಲ್ಲದೆ ಮಕ್ಕಳಾಟಕೆ ತ್ವರದಿಂದ | ಸೃಷ್ಟಿಸುವ ಕಣ್ಣು ಎವೆ ಹಾಕುವ || ಅಷ್ಟರೊಳನೇಕ ಬ್ರಹ್ಮಾಂಡ ನಾಟಕ | ವಿಷ್ಣು ಕರ್ಮಾಣಿ ಪಶ್ಯತೆ ಪಶ್ಯತೆ 3 ನಿತ್ಯ ತೃಪ್ತಿ ನಿರಾಹಾರಿ ನಿತ್ಯಾನಂದ | ಮೃತ್ಯು ಹಾ ಕಾಲಪ್ರಮಾಣ ಪರುಷಾ || ಶರಧಿ | ಸತ್ಯ ಸಂಕಲ್ಪ ನಿಷ್ಠನಾಹಂತೆ 4 ಅಜನಯ್ಯ ಅದ್ಭುತ ಮಹಿಮ ಪುರುಷೋತ್ತಮ | ಭುಜಧರನಯ್ಯಯಾ | ಅಮಿತಕಾಯಾ | ವಿಜಯಸಾರಥಿ ವಿಚಕ್ಷಣ ದೀಪ್ತ ಮೂರುತಿ | ಭುಜಗಂಗಿರಿ ವಿಜಯವಿಠ್ಠಲ ವೆಂಕಟೇಶಾ 5
--------------
ವಿಜಯದಾಸ
ಸಾಧನಕ್ಕೆ ಬಗೆಗಾಣೆನೆನ್ನಬಹುದೆ ಸಾದರದಿ ಗುರುಕರುಣ ತಾ ಪಡೆದ ಬಳಿಕ ಪ ಕಂಡಕಂಡದ್ದೆಲ್ಲ ಕಮಲನಾಭನ ಮೂರ್ತಿ ಉಂಡು ಉಟ್ಟದ್ದೆಲ್ಲ ವಿಷ್ಣು ಪೂಜೆ ತಂಡತಂಡದ ವಾರ್ತೆ ವಾರಿಜಾಕ್ಷನ ಕೀರ್ತಿ ಹಿಂಡು ಮಾತುಗಳೆಲ್ಲ ಹರಿಯ ನಾಮ 1 ವಾಗತ್ಯಪಡುವದೆ ವಿಧಿನಿಷೇಧಾರಚರಣೆ ರೋಗಾನುಭವವೆಲ್ಲ ಉಗ್ರತಪವು ಆಗದವರಾಡಿಕೊಂಬುವುದೆ ಆರ್ಶೀವಾದ ಬೀಗುರುಪಚಾರವೇ ಭೂತದಯವು 2 ಮೈಮರೆತು ಮಲಗುವುದೆ ಧರಣಿ ನಮಸ್ಕಾರ ಕೈಮೀರಿ ಹೋದದ್ದೆ ಕೃಷ್ಣಾರ್ಪಣ ಮೈ ಮನೋವೃತ್ತಿಗಳೆ ವಿಷಯದಲಿ ವೈರಾಗ್ಯ ಹೋಯ್ಯಾಲಿತನವೆಲ್ಲ ಹರಿಯ ವಿಹಾರ 3 ಹಿಡಿದ ಹಟ ಪೂರೈಸಲದು ಹರಿಯ ಸಂಕಲ್ಪ ನಡೆದಾಡುವೋದೆಲ್ಲ ತೀರ್ಥಯಾತ್ರೆ ಬಡತನವು ಬರಲದೇ ಭಗವದ್ಭಜನೆಯೋಗ ಸಡಗರದಲ್ಲಿಪ್ಪುದೆ ಶ್ರೀಶನಾಜ್ಞಾ 4 ಬುದ್ಧಿಸಾಲದೆ ಸುಮ್ಮನಿರುವುದೇ ಸಮ್ಮತವು ಯದೃಚ್ಛಾಲಾಭವೇ ಸುಖವುಯೆನಲು ಮಧ್ವಾಂತರ್ಗತ ಶ್ರೀ ವಿಜಯವಿಠ್ಠಲರೇಯ ಹೃದ್ಗತಾರ್ಥವ ತಿಳಿದು ಒಪ್ಪಿಸಿಕೊಳನೆ 5
--------------
ವಿಜಯದಾಸ
ಸೀಸಪದ್ಯ ಸುಂದರಾಂಗನ ಪಾದಕೊಂದಿಸುತ ಭಕ್ತಿಯಲಿ ಮಂದರೋದ್ಧಾರ ಮುಚುಕುಂದ ವರದ ನೆಂದು ಸ್ತುತಿಸುವ ಭಕ್ತವೃಂದವನು ರಕ್ಷಿಸುವ ಕುಂದನೆಣಿಸದಲೆ ನಾರಸಿಂಹ ಹರಿಯು 1 ಇಂದಿರಾರಮಣಗೆ ಜಯ ಗೋವಿಂದ ಗೋಪಕುಮಾರ- ನೆಂದವರ ಬಂಧನವ ಬಿಡಿಸಿ ಕಾಯ್ವ ಕಂದರ್ಪಜನಕ ಕಮಲಾಕ್ಷ ಹರಿ ಗತಿ ಎನುತ ಬಂದವನ ಕೈ ಬಿಡನು ಇಂದಿರೇಶ 2 ದುಂದುಭಿ ವತ್ಸರದಿ ಸುಜನರೆಲ್ಲ ತಂದೆ ಕಮಲನಾಭ ವಿಠ್ಠಲನೆನುತ ಒಂದೆ ಮನದಲಿ ಭಜಿಸಿ ಸ್ತುತಿಪ ಜನರ ಚಂದದಲಿ ಕಾಯ್ವ ನಾರಸಿಂಹ ಹರಿಯು3
--------------
ನಿಡಗುರುಕಿ ಜೀವೂಬಾಯಿ
ಸುನಾಮ ಕೇಶವ ಮಾಧವ ನಾಶನ ಭವನಿಧಿಬಂಧನ ಪ ಬೋಲೋ ರಾಧಾಕೃಷ್ಣ ಸುಲೀಲ ಪಾಲಯ ಕುಲಕೋಟಿ ಪಾವನ ಅ.ಪ ವೃಂದಾವನ ಮಾಲಾನಂದ ಲೀಲಾ ಇಂದಿರೆಪ್ರಿಯ ಮಣಿಮಾಲನ ಸಂದರಮಂದರ ಮಂದಿರ ದೇವಕಿ ಕಂದ ಮುಕ್ಕುಂದ ಗೋಪಾಲನ1 ನೀಲಶ್ಯಾಮ ಭವಮಾಲಹರಣ ದಯ ಆಲಯ ಭಜನಾನಂದನ ಕಾಲ ಕುಜನ ಕುಲಶೀಲ ಶಿಷ್ಟಪ್ರಿಯ ಲೋಲಗಾನ ಹರಿ ಗೋವಿಂದನ 2 ಅಮಿತಮಹಿಮ ಅಸುರಮರ್ದನ ಕಮಲನಾಭ ಕರಿಪಾಲನ ಕಾಮಿತದಾಯಕ ಸುಮಶರಪಿತ ಮಮ ಸ್ವಾಮಿ ಶ್ರೀರಾಮ ಮುಕ್ತಿ ಸೋಮನ 3
--------------
ರಾಮದಾಸರು
ಸುಶೀಲ ಶ್ರೀಲೋಲ ಪ ಗೋಕುಲದಿ ಪುಟ್ಟಿ ಆಕಳನೆ ಕಾಯ್ದ ಗೋವರ್ಧನವನೆತ್ತಿ ಗೋಪವೃಂದ ಕಾಯ್ದ 1 ಬಾಲತನವ ನೋಡಿ ಪಾಲುಬೆಣ್ಣೆ ಸೂರೆ ಬಾಲಗೋಪರೊಡನೆ ಚೋರನೆನಿಸಿ ಮೆರೆದ 2 ಮುರಳಿನಾದಗೈದು ಪರಿಪರಿಯ ಜನರ ಮರುಳುಗೈಸಿ ಮೆರೆದ ಸುರಮುನಿ ವಂದ್ಯ 3 ಮಡದಿಯರು ಜಲದಿ ಮುದದಿಂದಾಡುತಿರಲು ಮದನನಯ್ಯ ವಸ್ತ್ರಗಳನೆ ಕದ್ದ ಚೋರ 4 ಕಾಳಿ ಮಡುವ ಧುಮುಕಿ ಕಾಳಸರ್ಪನ ತುಳಿದಕಾಮಜನಕ ಹರಿ ಶ್ರೀ ಕಮಲನಾಭ ವಿಠ್ಠಲ5
--------------
ನಿಡಗುರುಕಿ ಜೀವೂಬಾಯಿ
ಸೇವೆ ಮಾಳ್ಪೆ ನಾರಾಯಣಈವುದಯ್ಯ ನಿನ್ನ ಚರಣ ಪ ಸುರಮುನಿಗಳಿಗಿದು ದುರ್ಲಭಸಿರಿದೇವಿಗೆ ಮಾತ್ರ ಸುಲಭಕರುಣಿಸು ಹೇ ಕಮಲನಾಭಇರದೆ ಭೌವ್ಯ ನಿನ್ನ ಚರಣ 1 ತ್ರಿಜಗಂಗಳ ಗೆಲ್ದ ಚರಣಭಜಕ ಗುಹಕಗೊಲಿದ ಚರಣರಜತ ನದಿಯ ಹೆತ್ತ ಚರಣಕಲ್ಲಹಲ್ಯೆ ಪೊರೆದ ಚರಣ2 ಕುರುನೃಪನನು ಕೆಡೆದ ಚರಣಉರಗ ಕಾಳಿ ಹಣಿದ ಚರಣಧರೆಗೆ ಮೆರೆದ ಗದಗು ವೀರನಾರಾಯಣ ನಿನ್ನ ಚರಣ 3
--------------
ವೀರನಾರಾಯಣ
ಸ್ಮರಿಸಿ ಬದುಕಿರೊ ಗುರುವರರಾ ನರ- ಹರಿಸ್ಮರಣೆ ಮರೆಯದಲೆ ಕೀರ್ತಿಸಿ ನಲಿದವರ ಪ ದಾಸದೀಕ್ಷೆಯ ವಹಿಸಿದವರ ಹರಿ ದಾಸರ ಕೂಡಿ ನರ್ತಿಸಿ ನಲಿದವರ ಶ್ರೀಶನ ಮಹಿಮೆ ಬಲ್ಲವರ ಭವ ಪಾಶಗಳಳಿವ ಸನ್ಮಾರ್ಗಬೋಧಕರ 1 ಬಡತನದಲಿ ಬಳಲಿದವರ ಭಾಗ್ಯ ಬಿಡದೆ ಬಂದೊದಗೆ ಹಿಗ್ಗದೆ ತಗ್ಗಿದವರ ಮೃಡಸಖನೊಲುಮೆ ಪಡೆದವರ ಬಹು ಸಡಗರದಲಿ ಹರಿ ಭಜನೆ ಮಾಡ್ದವರ 2 ಪಂಕಜಾಕ್ಷನ ಪೊಗಳಿದವರ ತಂದೆ ವೆಂಕಟೇಶ ವಿಠ್ಠಲ ದಾಸರಿವರ ಬಿಂಕದಿ ಹರಿಯ ಮರೆತವರ ಗರ್ವ ಬಿಂಕಗಳಳಿಯ ಸನ್ಮಾರ್ಗಕೆಳದವರ3 ತಾಳ ತಂಬೂರಿ ಪಿಡಿದವರ ಗೆಜ್ಜೆ ತಾಳ ಮೇಳದಿ ನರ್ತಿಸಿ ನಲಿದವರ ವ್ಯಾಳ ಶಯನನ ಭಕ್ತರಿವರ ಸಂಜೆ ವೇಳೆ ಹರಿಭಜನೆ ಮಾಡಿ ನಲಿದವರ 4 ಮಡದಿ ಮಕ್ಕಳು ಬಂಧು ಜನರ ಕೂಡಿ ಕಡು ಸಂಭ್ರಮದಿ ಹರಿಭಜನೆ ಮಾಡ್ದವರ ಕಡಲ ಶಯನನ ಭಕ್ತರಿವರು ಭಾಗ್ಯ ಬಡತನ ಸಮವೆಂದು ತಿಳಿಯ ಹೇಳ್ದವರ 5 ಹರಿಗುಣ ಕೀರ್ತಿಸಿದವರ ನರ ಹರಿಯ ಮಹಿಮೆಗಳ ಶಿಷ್ಯರಿಗೊರೆದವರ ಹರಿಯೆ ಸರ್ವೋತ್ತಮನೆಂದವರ ನಮ್ಮ ಉರುಗಾದ್ರಿವಾಸ ವಿಠ್ಠಲನ ನಂಬಿದವರ6 ಮಮತೆಯ ಬಿಡಬೇಕೆಂದವರ ದೇಹ ಮಮತೆಯ ಬಿಡುತ ಹರಿಪುರ ಸೇರಿದವರ ಕಮಲಾಕ್ಷನ ಭಕ್ತರಿವರ ನಮ್ಮಕಮಲನಾಭನ ವಿಠ್ಠಲನ ನಂಬಿದವರ 7
--------------
ನಿಡಗುರುಕಿ ಜೀವೂಬಾಯಿ
ಸ್ಮರಿಸಿ ಬೇಡುವೆ ಗುರುವರರ ಪಾದ- ಸರಸಿಜ ಸ್ಮರಿಪರಘುಪರಿಹರಿಸುವರಪ ಇಂದಿರೇಶನ ಮಹಿಮೆ ಬಲ್ಲ ಭಕ್ತ ಸಂದಣಿಯೊಳು ಇವರಿಗೆ ಸಮರಿಲ್ಲ ತಂದೆ ವೆಂಕಟೇಶ ವಿಠ್ಠಲನೆಂದು ಸಂಭ್ರಮ ಪಡುವ ಶಿಷ್ಯರಿಗೆಣೆಯಿಲ್ಲ 1 ಸಿರಿವೆಂಕಟೇಶನ್ನ ಸ್ಮರಿಸಿ ಬಹು ಪರಿಯಿಂದ ಪಾಡಿ ಕೊಂಡಾಡಿ ಸ್ತುತಿಸಿ ಗಿರಿಯ ವೆಂಕಟನನ್ನು ಭಜಿಸಿ ನಮ್ಮ ಉರಗಾದ್ರಿವಾಸ ವಿಠ್ಠಲದಾಸರೆನಿಸಿ2 ಸದ್ವೈಷ್ಣವರ ಸುರಧೇನು ಸರ್ವ ರುದ್ಧಾರವಾಗಲು ಜನಿಸಿದರಿನ್ನು ಬುದ್ಧಿ ಶಿಷ್ಯರಿಗೊರೆದರಿನ್ನು ತಂದೆ ಮುದ್ದು ಮೋಹನ್ನ ವಿಠ್ಠಲದಾಸರನ್ನು 3 ಸುಂದರ ಮೂರ್ತಿಯ ತಂದು ದುರ್ಗ ಮಂದಿರದಲಿ ಸ್ಥಾಪಿಸಿದರೊ ಅಂದು ಛಂದದಿ ಸೇವಿಸಿರೆಂದು ಶಿಷ್ಯ ಮಂಡಲಿಗಳಿಗೆ ಬೋಧಿಸಿದರೆಂತೆಂದು 4 ಕಳವಳ ಪಡುತಿಹೆನಲ್ಲ ಕಾಲ ಕಳೆದು ಹೋಗುತಲಿದೆ ಅರಿವು ಬರಲಿಲ್ಲ ಪರಮ ಭಕ್ತರ ಪರಿಯನೆಲ್ಲ ತಿಳಿವಕಮಲನಾಭ ವಿಠ್ಠಲನಲ್ಲದಿಲ್ಲ 5
--------------
ನಿಡಗುರುಕಿ ಜೀವೂಬಾಯಿ
ಸ್ಮರಿಸಿ ಬೇಡುವೆ ಹರಿಯ ಮುರಾರಿಯ ಸ್ಮರ ಕೋಟಿತೇಜನ ಸುರಮುನಿವಂದ್ಯನ ಪ ಮನ್ಮಥಕೋಟಿ ಲಾವಣ್ಯರೂಪದಿ ಮೆರೆವ ಮನ್ಮಥಯ್ಯನ ಪೊಗಳುತ್ತಲಿ ಚಿನ್ಮಯರೂಪನ ಚಿದ್ರೂಪನಾದನ ಹೃನ್ಮನದಲಿ ಪಾಡಿಪೊಗಳಿ ಕೊಂಡಾಡುತ ಅ.ಪ ಮನ್ಮನÀದೊಳು ಸ್ಮರಿಸಿ ಸ್ಮರಿಪ ಭಾಗ್ಯವು ಮುನ್ನ ಕರುಣಿಸಿ ಸಲಹು ಬಲು ಸಂ- ಪನ್ನ ನಿನಗೆದುರಿಲ್ಲ ಧರೆಯೊಳು ಪನ್ನಗಾದ್ರಿ ನಿವಾಸ ಶ್ರೀಶನ1 ವಿಶ್ವವ್ಯಾಪಕ ನೀನೆ ವಿಶ್ವಮೂರುತಿ ನೀನೆ ವಿಶ್ವ ನೀನೆ ಶ್ರೀ- ವಿಶ್ವವಸುನಾಮ ಸಂವತ್ಸರದೊಳು ಮೆರೆವ ವಿಶ್ವಮೂರುತಿ ಶ್ರೀ ಸರ್ವೇಶ್ವರ ನೀನೆಂದು2 ವಿಶ್ವಮಯ ವಿಶ್ವೇಶ ಶ್ರೀಹರಿ ವಿಶ್ವನಾಮಕ ವಿಮಲ ಸುಖಮಯ ವಿಶ್ವವನು ಉದರದೊಳು ಧರಿಸಿದ ವಿಶ್ವವನು ವದನದಲಿ ತೋರ್ದನ 3 ಕಮಲದಳಾಕ್ಷನ ಕಮನೀಯ ರೂಪನ ಕಮಲ ಸಂಭವನ ಪೆತ್ತಿಹ ಧೀರನ ಕಮಲಮುಖಿಯ ಕರಕಮಲದಿ ಪೂಜ್ಯನ ಕಮಲೆಯೊಡಗೂಡುತ ನಲಿವನ 4 ಕಮಲ ಕರದೊಳು ಪಿಡಿದ ಕಮಲೆಯ ಕಮಲನಾಭನ ಪಿತನೆ ಮುದದೊಳು ಕಮಲೆಯನು ಕೈಪಿಡಿದು ಮೆರೆಯುವ ಕಮಲನಾಭವಿಠ್ಠಲನ ಪ್ರತಿದಿನ5
--------------
ನಿಡಗುರುಕಿ ಜೀವೂಬಾಯಿ
ಸ್ಮರಿಸಿದದರಘನನಾಶನ ಸ್ಮರಿಸಿದವರಘನಾಶಸ್ಮರನಯ್ಯನಂಘ್ರಿ ಯುಗ ಸರಸಿಜವ ಪೂಜಿಸುವಗುರು ವಿಜಯರಾಯರ ಚರಣಾಬ್ಜ ಸಾರಿದವದುರಿತಾಬ್ಧಿ ಮೀರಿದವ ಹರಿಪುರವ ಸೇರಿದವನೊ ಪ ಅಘ ಬಂಧ ಪರಿಹರ ಮಾಡುತಾ ಜನರು 1 ಇನಿತು ಜನಸಮುದಾಯದೊಳು ಯಿರುತಿರ್ದ ಇಭವರದ ನನುದಿನವು ಗಾಯನದಿ ಕೊಂಡಾಡಿ ಮನಮುಟ್ಟಿವಿನಯಾತಿಶಯದಲ್ಲಿ ಗುರುವರ್ಯರಾ ಸೇವೆ ಘನವಾಗಿ ಮಾಡಿ ಮುದದಿ ||ತನುವೆತ್ತಿ ವರಸರಿತ ತೀರದಾ ಅಣು ಬದರಿಜನ ಶ್ರೇಷ್ಠರೊಳು ಹರಿಯ ದಾಸ ಪೆಸರಲಿ ಬಂದುಘನ ಯಾದವಾದ್ರಿ ಪಟ್ಟಣದೊಳಗೆ ಯಿದ್ದು ಬಗೆ ಜನನಿ ಅನುಜಾತಿ ಸಹಿತ 2 ಕೆಲವು ದಿನ ಸಂಸಾರ ಗಲಭಿಯೊಳು ಯಿರುತಿರ್ದುಜಲದೊಳಗೆ ಅಂಬುಜವು ಮಿಳಿತವಾಗಿದ್ದ ತೆರಹಳಿದು ದುಷ್ಟಾಸಿಯನು ಕಳೆದು ಕಡು ಮಮತೆಯನು ಪುಳಕೋತ್ಸ ಮನದಿ ತಾಳಿ ||ಜಲದೊಳುತ್ತಮವಾದ ಭಾಗೀರಥೀ ಯಾತ್ರಿಛಲ ಭಕುತಿಯಿಂದಲಿ ಮಾಡಿ ಮೋದದಿ ಹರಿಯಹಲವು ಬಗೆ ಲೀಲೆಯನು ಹರುಷದಿಂದಲಿ ಯಿನ್ನು ತಿಳಿದು ಗುರು ಕರುಣ ಬಲದಿ 3 ಮೂರ್ತಿ ಮನದೊಳು ಕಂಡು ಸುಖವನಧಿಯಲ್ಲಿ ಲೋಲ್ಯಾಡಿಕೊಳುತ ||ಅಲ್ಲಿಂದ ತೆರಳಿ ಗಿರಿಯಲ್ಲಿದ್ದ ವೆಂಕಟನಸಲ್ಲುವಾ ಭಕುತರೊಳು ಸಲೆ ಶ್ರೇಷ್ಠನೆಂದೆನಿಸಿಮಲ್ಲ ಮರ್ದನನಾದ ಮುರಹರನ ಮಹಿಮೆ ಮನ ಬಲ್ಲನಿತು ವಿಸ್ತರಿಸುತ ಜನರು 4 ಈ ತೆರದಿ ಇಭವರದನಾತುಮದೊಳಗೆ ತಂದುಭೂತಳದ ಬಲು ವಿಧದ ತೀರ್ಥಕ್ಷೇತ್ರಗಳಲ್ಲಿಪ್ರೀತಿಯಿಂದಲಿ ಪರಮ ಪುರುಷನ್ನ ಧೇನಿಸುತ ಖ್ಯಾತಿ ಮಹಿಯೊಳಗೆ ಮೆರದು ||ವಾತಜಾತನ ಮತದ ವೊಳಗಿಪ್ಪ ವೈಷ್ಣವರತಾತನೆಂದೆನಿಸಿ ಸುಖವ್ರಾತದೊಳಗಿಡುವಲ್ಲಿಚಾತುರ್ಯದಿಂದ ಬಲುದಾತನೆನಿಸುತಲಿ ಭವತೀತರನ ಮಾಡಿ ಪೊರವ ಜನರು 5 ಆ ಬಗೆಯಲೀ ಕಮಲನಾಭ ಕರುಣಿಸಿ ಯಿವರಈ ಭುವನದೊಳು ಯಿಟ್ಟು ಜನರ ವುದ್ಧರಿಸುವಲೋಭದಿಂದಲಿ ಸಕಲ ಸಜ್ಜನರ ಸನ್ಮಾರ್ಗ ಲಾಭದೊಳು ಸೇರಿಸಿದನೊ ||ತ್ರ್ರಿಭುವನದೊಡೆಯನ್ನ ಕಥೆಯ ತಿಳಿಸುವ ಜನಕೆಶೋಭಿಸುವ ಗಾಯನದ ಸೊಬಗಿನಿಂದಲಿ ಕೇಳಿಶ್ರೀಭೂರಮಣ ವೊಲಿದು ಪಾಲಿಸುವನಾಮೇಲೆ ಶೋಭನ ಗತಿಯ ನೀವನೊ 6 ಕಲುಷ ವಾಕು ವುಪಜೀವರಿಗೆ ಏಕ ಮನದಿಂದಿರುವದೇ ಈ ಕಲಿಯುಗದಲಿಸಾಕಾರ ಗುಣಪೂರ್ಣ ಶ್ರೀನಿವಾಸನು ಬಿಡದೆ ಸಾಕುವನು ಸಮ್ಮೊಗದಲಿ ಜನರು 7 ದೇವಮುನಿ ನಾರದನು ಜೀವಿಗಳನುದ್ಧರಿಪಭಾವದಲಿ ಯಮಪುರಿಯ ದೇವನಲ್ಲಿಗೆ ಪೋಗಿಸಾವಧಾನದಿ ಸಕಲ ಸತ್ಕಾರಕೊಳಗಾಗಿ ನೋವು ಬಡವರನೀಕ್ಷಿಸಿ || ಸಾವಧಾನದಿ ಕೇಳಿ ಕಲಶಾರುಣೀ ಭಕ್ತ- ರಾವಳಿಯ ಸಲಹುವ ದೇವ ದೇವೇಶನನುತಾ ವದರಿ ಕೂಗಲಾ ಜೀವರೆಲ್ಲರು ಕೇಳಿ ಪಾವಿತ್ರವನೆಗೈದರೊ ಜನರು 8 ಭವ ಸಿರಿ ಚರಣಕೆ ಜನರು 9 ಸಿರಿ ತರಣಿ ಶರಧಿ ಶಯನನ ತೋರುವ ಜನರು 10 ದಾನವಾಂತಕ ದನುಜರನ್ನು ಸಂಹರಿಸುವಾಜ್ಞಾನಪೂರ್ಣನು ಗುಪ್ತ ತಾನಾಗಿ ಜಗದೊಳಗೆಹಾನಿ ವೃದ್ಧಿಂಗಳಿಗೆ ಹೊರಗಾಗಿ ಜೀವಿಗಳ ಮಾಣದಲೆ ಪರಿಪಾಲಿಪ ||ಕ್ಷೋಣಿಯೊಳು ಭಕುತರಘ ಹಾನಿಗೈಸುವ ಬಗಿಗೆಈ ನಿರುದ್ಧಕೆ ಯಿವರಧೀನ ಮಾಡಿದ ನಮಗೆವೇಣುಗೋಪಾಲ ವಿಠಲರೇಯ ತಾನೊಲಿದು ಸ್ವಾನಂದವನೆ ವುಣಿಸುವ ಜನರು 11
--------------
ವೇಣುಗೋಪಾಲದಾಸರು
ಸ್ಮರಿಸುವರ ಪಾಲಿಪ ಬಿರುದು ಭಕುತರ ಪೊರೆವ ಕರುಣಿಯೆಪ ಪರಿಪರಿವಿಧದಲಿ ಪರಿತಪಿಸುವರನು ಕರವಿಡಿದುದ್ಧರಿಸುತ ಸಂತೈಸುವ ಉರಗಾದ್ರಿವಾಸ ವಿಠ್ಠಲ ಸಂತೈಸು ಚರಣಕಮಲಗಳಿಗೆರಗಿ ಭಿನ್ನೈಸುವೆ1 ಮಂದಮತಿಯು ನಾನೆಂದು ವಂದಿಪರ ಬಂಧನ ಕಳೆಯುತ ಮುಂದೆ ಗತಿಯು ತೋರಿ ತಂದೆ ವೆಂಕಟೇಶ ವಿಠ್ಠಲ ಭಕುತರ ಸಂದಣಿ ಪೊರೆಯುವರೆಂಬ ಬಿರುದು ದೇವ 2 ಆಶಾಪಾಶಗಳಿಗೊಳಗಾಗಿಹ ಮನ- ದಾಸೆ ಪೂರೈಸುತ ನೀ ಸಲಹೈ ಗುರು ವಾಸುದೇವ ವಿಠ್ಠಲ ಹರಿ ಭಕುತರ ದಾಸ್ಯವ ಕೊಟ್ಟು ಉಲ್ಲಾಸ ಒದಗಿಸುತ 3 ಮೊದಲೆ ನಿನ್ನಯಪಾದ ಹೃದಯದಿ ಭಜಿಸದೆ ಒದಗಿದ ಪಾಪದಿ ಹೆದರÀುತಲಿದೆ ಮನ ಪದುಮಜಾಂಡ ಸೃಜಿಸಿದ ಪರಮಾತ್ಮನಿ- ಗದ್ಭುತವೇ ಪಾಮರರನು ಪೊರೆವುದು 4 ಮಣಿದು ಬಿನ್ನೈಸುವೆ ಪವನಮತವÀ ತೋರಿ ಬಿನಗು ಬುದ್ಧಿಗಳ ಗಮನಕೆ ತಾರದೆ ಕಮಲನಾಭ ವಿಠ್ಠಲ ತವ ಕರುಣದಿ ಮನದ ಕ್ಲೇಶಗಳ ಕಳೆದು ಉದ್ಧರಿಸುತ 5
--------------
ನಿಡಗುರುಕಿ ಜೀವೂಬಾಯಿ
ಸ್ವಾಮಿ ಕ್ಷೇಮೇಂದ್ರರ ಪ್ರೇಮ ಭಜಕ ಶ್ಯಾಮಸುಂದರ ಪ ಅಷ್ಟಭೋಗ ಪಟ್ಟಾರೋಹಣ ನಿಷ್ಟಜನರ ಕಷ್ಟಹರಣ ಸೃಷ್ಟಿ ಈರೇಳು ಇಟ್ಟು ಹೃದಯದಿ ಮುಟ್ಟಿರಕ್ಷಿಪ ಅಷ್ಟಮೂರುತಿ 1 ಕಮಲನಾಭ ಕಮಲವದನ ಕಮಲಪಾಣಿ ವಿಮಲಚರಿತ ಕಮಲಪೀಠನಯ್ಯ ಸುದಯ ಕಮಲನೇತ್ರ ಕಮಲಪ್ರಿಯಾ2 ಭಕ್ತಜನರ ಪ್ರಾಣಧವ ನಿತ್ಯ ನಿರ್ಮಲ ಮುಕ್ತಿಪದವ ಭಕ್ತಗಿತ್ತು ನೀಡು ಕ್ಷೇಮ ನಿತ್ಯ ನಿರ್ಮಲಾತ್ಮ ಶ್ರೀರಾಮ 3
--------------
ರಾಮದಾಸರು
ಸ್ವೀಕರಿಸೈ ಕರುಣಾಕರ ಶ್ರೀವರ ಲೋಕವಂದಿತ ಪ್ರಭುವೆ ಪ ಮಾಕಮಲಾಸನ ನಾಕಪಾಲವಂದ್ಯ ಮಾತುಳಾಂತಕ ಮಧುಸೂದನ ಶ್ರೀಹರಿ ಅ.ಪ ಮಾವು ಮಾದಳ ದ್ರಾಕ್ಷ ಬಾಳೆ ಕಿತ್ತಳೆ ಮೊದಲಾದ ಫಲಗಳೆಲ್ಲ ಮಾಧವ ನೀನಿದನಾರೋಗಣೆ ಮಾಡು ಶ್ರೀ ರಮಣಿಯ ಪ್ರಿಯ ಶ್ರೀನಿವಾಸನೆ ಬೇಗ 1 ನಾನಾ ವಿಧದ ಫಲ ಹಾಲು ಸಕ್ಕರೆ ಬೆಣ್ಣೆ ನಾರಾಯಣ ನಿನಗೆ ಬಾಲೆ ಲಕುಮಿ ಪರಮಾದರದಿಂದಲಿ ಸೇವೆಗೆ ಪರಮಾನ್ನವನರ್ಪಿಸುವಳು2 ತನುವೆಂಬೊ ತಟ್ಟೆಯೊಳಿರಿಸಿ ಫಲವ ನಿ- ರ್ಮಲಮನವೆಂಬ ವಸ್ತ್ರವನ್ಹೊದಿಸಿ ಸನ್ಮತವೆಂಬ ಸಾರಣೆಮಾಡಿ ನಮ್ಮ ಗುರುಕರುಣದ ರಂಗವಲಿಯನ್ಹಾಕುವೆ 3 ನವವಿಧ ಭಕುತಿಯ ನಳನಳಿಸುವ ವೀಳ್ಯ ಚಲುವ ಶ್ರೀ ಹರಿ ನಿನಗೆ ಸವಿನಯ ನುಡಿಗಳ ಮಂತ್ರ ಪುಷ್ಪಗಳು ಸನಕಾದಿವಂದ್ಯ ಸರ್ವೇಶ ಶ್ರೀ ಕೃಷ್ಣ 4 ಕ್ಷೀರ ಸಾಗರವಾಸಿ ಶ್ರೀ ಭೂರಮಣನೆ ಮಾರಜನಕ ಹರಿಯೆ ಕಾರುಣ್ಯಸಾಗರ ಕಮಲನಾಭ ವಿಠ್ಠಲ ಪಾರುಗಾಣಿಸೊ ಭವಸಾಗರದಿಂದಲಿ5
--------------
ನಿಡಗುರುಕಿ ಜೀವೂಬಾಯಿ
ಹನುಮ ಭೀಮ ಮಧ್ವಮುನಿಯೆ ರಕ್ಷಿಸೆನ್ನ ಅನುದಿನವು ಶ್ರೀ ಹರಿಯ ಸ್ಮರಣೆ ಮರೆಯದಂತೆ ಪ ತಂದೆ ತಾಯಿ ನೀನೆಂದು ನಂಬಿದೆನೊ ಬಂಧ ಬಿಡಿಸಿ ಕಾಯೋ ತಂದೆ ಹನುಮವೀರ 1 ದುರುಳ ದೈತ್ಯನಾದ ಜರೆಯ ಸುತನ ಸೀಳಿ ಕರುಣಿ ಕೃಷ್ಣನಂಘ್ರಿ ನಿರುತ ಭಜಿಪ ವೀರ 2 ಸದ್ವೈಷ್ಣವರನೆಲ್ಲ ಉದ್ಧರಿಸಿ ಜಗದಿಮುದ್ದು ಕಮಲನಾಭ ವಿಠ್ಠಲನಂಘ್ರಿ ಭಜಿಪ3
--------------
ನಿಡಗುರುಕಿ ಜೀವೂಬಾಯಿ