ಒಟ್ಟು 406 ಕಡೆಗಳಲ್ಲಿ , 77 ದಾಸರು , 378 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸೋ ಫಂಡರಿಪುರಾಯಾ ಪಾವನ ಕಾಯಾ ಪ ಶ್ಲೋಕÀ : ತರುಣ ತುಲಸಿಮಾಲಾ ತಪ್ತಗಾಂಗೇಯ ಚೇಲಾ ಶರಧಿ ತನಯಲೋಲಾ ಶಕ್ವರೀಕಾರಿ ಫಾಲ ಶಿರಿ ಅಜಭವ ಮೂಲಾ ಶುದ್ಧ ಕಾರುಣ್ಯ ಲೀಲಾ ವೈಜಯಂತಿ ಮಾಲಾ ಕುಂಡಲ ಕೇಯೂರ ಕೌಸ್ತ್ತುಭ ಲೋಕದಿ ವ್ಯಾಪ್ತಾ ದೋಷ ಸಿರ್ಲಿಪ್ತ ದೇವರ ದೇವಾ ಧರುಮಾದ್ಯರ ಭಾವಾ 1 ಅಮಿತ ಸುಗುಣಧಾಮಾ ಆತ್ಮಭೂಪೂರ್ಣ ರಾಮಾ ಅಮರಕುಲಲಲಾಮ ಅಬ್ಜಧಾಮಾಭಿರಾಮಾ ಯಮಿಕುಲೋದಧಿ ಸೋಮ ಯಜ್ಞ ಭೃದ್ಯಜ್ಞ ನಾಮಾ ಕರ್ಮ ಸಂರಕ್ಷಿತ ಸರ್ವ ಲೋಕಾ ವಿತತ ಮಹಿಮ ವಿಶ್ವನಾಟಕ ವತ್ಪ್ರ ಘೋಟಕಾ ಶೋ ನಳಿನ ಜಾಂಡೋದರಾ ಸರ್ವರಾಧಾರಾ ಸಂತತ ನಿರ್ವಿಕಾರಾ ಮತಿ ಮಂದನಾಗಿ ನಿನ್ನನು ಬಿಟ್ಟೆ ಮ ಬಟ್ಟೆ 2 ಶ್ಲೋಕ : ಜನನ ಮರಣ ದೂರ ಜಂಗಮಾಚಾg ವಿಹಾರಾ ದನುಜವನ ಕುಠಾರಾ ದೀನಮಂದಾರ ಧೀರಾ ಪ್ರಣತ ಭಯ ವಿಹಾರಾ ಪ್ರಾಕೃತಾತೀತ ಸಾರಾ ದಿನಪನಿಭ ಶರೀರಾ ದುಃಖವಾರಿಹ ಸಮೀರಾ 3 ವನಧಿ ಜಿತಾಸುರಯೂಥ ನಿರ್ಮಲ ಶ್ರುತಿಗಾಥಾ ಎನ್ನ ಸಂತತ ಸಂಪ್ರಸನ್ನಾ ಜೀಯ ಕರಣಾದಿ ಪಿಡಿಕಯ್ಯಾ ಗೋಪಕುಮಾರಾ 3 ಕಮಠ ಕೋಲಾ ಶತ್ರುಕಾಶ್ಯಪಿಬಾಲಾ ನೃಪಕುಲ ಈರವಾಳಾ ನೀಲಕಂಠಾಸ್ತ್ರಕಾಲಾ ದ್ರುಪದತನಯ ಪಾಲಾ ದುರವರ್ಜಿತದುಕುಲಾ ನಿರ್ಮಲ ಓಂಕಾರಾ ಪರಮ ಪ್ರೀಯ ಜಾಮಿ ಕಳೆದ್ಯೊ ತಾಪವಾ 4 ಶ್ಲೋಕ : ನಗಧರ ನಳಿನಾಕ್ಷ ನಾಕನಾಥಾದ್ಯ ಪಕ್ಷ ನೃಗ ನಗಪತಿ ಶಾಪಾ ನಿರ್ವಹಕಾರ ಶ್ರೀಪಾ ಭೃಗು ಮುನಿಗೇಯಾ ಭೂತನಾಥ ಸಹಾಯ ಅಗಣಿತ ಅಹಿತರನಳುಹಿದಾ ತೋರಿದೆ ಸತ್ಪುತ್ರರಾ ವಒತ್ತಿ ಕುಂತಿನಂದನಾ ಖಂಡ್ರಿಸಿದ್ಯೊ ಕೃಪಾಳು 5 ಶ್ಲೋಕ :ಶುಭತಮ ಸುಖತೀರ್ಥಾರಾಧ್ಯ ಸದ್ದಾನಪಾತ್ರಾ ಇಭವರರಿಪು ಹತಾನ ವಿಶ್ವಜನ್ಮಾವಿಕರ್ತಾ ಯುಗ್ಮ ಪ್ರಸಾದಾ ತರುಜನ್ಮ ವಿದೂರಾ ನಿರ್ಗುಣ ನಿರಂಜನಾ ಗೋಪರೊಡಗೂಡಿ ಮೆದ್ದೆ ತೋರಿದೆ ದಯಸಿಂಧೂ 6 ಶ್ಲೋಕ :ಅತಿವಮಲಸುಗಾತ್ರ ಅಖಿಳಲೋಕೈಕ ಪಾತ್ರಾ ಷತತಿಜದಳನೇತ್ರಾ ವೃತ್ತಹಾದ್ಯ ಮರಮಿತ್ರಾ ಶ್ರುತಿಕಮಂಜ ಸೂತ್ರಾ ಸ್ತುತ್ಯ ಪಾವನ ಪವಿತ್ರಾ ಕಳತ್ರ ನಿನ್ನಯ ದಿವ್ಯ ಖ್ಯಾತಿ ಈ ನಿತ್ಯ ಸುಖಿಸೋರು ಆನಂದಾಬ್ಧಿ ಸದ್ಗತರೋ ಮಾನವ ಜನಕ್ಲೇಶ ಭಂಜನಾ ಭಾಷಾ ಎನ್ನಯ ಅಭಿಲಾಷಾ 7 ಶ್ಲೋಕ :ವನರುಹಭವತಾತಾ ವೀತ ತನ್ಮಾತ್ರಭುತ ದ್ಯುನದಿ ಜಲವಿಧೂತ ದಿವ್ಯ ಪಾದಾಂಬುಜಾತಾ ಅನಿಲತನಯ ಪ್ರೀತಾ ಅತ್ರಿಸದ್ವಂಶಜಾತಾ ಅನಿಮಿಷಜಯಸೂತಾ ಆನತೇಷ್ಟಪ್ರದಾತಾ ಮಂಗಳಶ್ರೇಣಿ ಲೋಕೈಕಸತ್ರಾಣಿ ಶರಣು ಹೊಕ್ಕರ ಕಾಯುವ ಛಲದಂಕಾ ಕಾಳಿಂಗನ ಬಿಂಕಾ ಬಿಡಿಸಿದ್ಯೊ ನಿಷ್ಕಳಂಕಾ ಮುರ ದಂತವಕ್ತ್ರಾದ್ಯರ ಹಿಂಸಾ ಬಿಡಿಸಿದೆಯೋ ಓಜಿಷ್ಠಾ 8 ಶ್ಲೋಕ :ಹನುಮನತ ಪಾದಾಬ್ಜಹಂಸ ಸಂವಕ್ತ್ರುಕುಬ್ಜಾ ತನುವಿಕೃತ ವಿನಾಶಂ ಕಾಳಿ ಜಿಹ್ವಾಶುದೇಶಂ ದನುಜವಿಕರಾಳ ಮತ್ತೆ ಪೌಂಡ್ರೇ ಶೃಗಾಲಂ ಮೋದ ಸುಪದ ಮೂರುತಿಯನ್ನು ತೋರು ಮಾತಾ ಲಾಲಿಸು ಜಗನ್ನಾಥ ನಿನ್ನವರಿಗೀಯೋ ಶ್ರೀಶಾ 9
--------------
ಜಗನ್ನಾಥದಾಸರು
ಪಿಡಿ ಎನ್ನ ಕೈಯ್ಯ ರಂಗಯ್ಯ ಪ ಪಿಡಿ ಎನ್ನ ಕೈಯ ಪಾಲ್ಗಡಲ ಶಯನ ಮೋಹ ಮಡುವಿನೋಳ್ ಬಿದ್ದು ಬಾಯ್ಬಿಡುವೆ ಬೇಗದಿ ಅ ನೀರಜನಾಭಾ ನಂಬಿದೆ ನಿನ್ನ ನೀರಪ್ರದಾಭಾ ಕಾರುÀಣ್ಯ ನಿಧಿ ಲಕ್ಷ್ಮೀನಾರಸಿಂಹನ ಪರಿ ವಾರಸಹಿತ ಈ ಶರೀರದೊಳಡಗಿರ್ದು ಘೋರತರ ಸಂಸಾರ ಪಂಕದಿ ಚಾರು ವರಿವನ ದೂರ ನೋಡುವ ರೇ ರಮಾಪತೆ ಗಾರುಮಾಡದೆ ಚಾರುವಿಮಲ ಕರಾರವಿಂದದಿ 1 ಅನಿಮಿತ್ತ ಬಂಧೋ ನೀನೇ ಗತಿ ಗುಣ ಗಣಸಿಂಧೋ ವಿಧಿ ಭವಸಂಕ್ರಂ ದನ ಮುಖ್ಯ ವೇದ ಸನ್ಮುನಿ ಗಣಾರ್ಚಿತ ಪಾದಾ ಅನುಜ ತನುಜಾಪ್ತಾನುಗ ಜನನೀ ಸದನ ಸಂ ಹನÀನ ಮೊದಲಾದಿನಿತು ಸಾಕುವ ಘನತೆ ನಿನ್ನದು ಜನುಮ ಜನುಮದಿ 2 ಶ್ರೀ ಜಗನ್ನಾಥವಿಠ್ಠಲ ದ್ವಿಜರಾಜ ವರೂಥ ಓಜಕಾಮಿಕ ಕಲ್ಪ ಭೂಜ ಭಾಸ್ಕರ ಕೋಟಿ ತೇಜ ಮನ್ಮನದಿ ವಿರಾಜಿಸು ಪ್ರತಿದಿನ ಈ ಜಗತ್ರಯ ಭಂಜನನೆ ಬಹು ಸೋಜಿಗವಲಾ ನೈಜ ನಿಜನಿ ವ್ರ್ಯಾಜದಿಂದಲಿ ನೀ ಜಯಪ್ರದ ನೈಜ ಜನರಿಗೆ ಹೇ ಜಗತ್ಪತೇ 3
--------------
ಜಗನ್ನಾಥದಾಸರು
ಪುಂಡರೀಕ ವರದ ಹರಿ | ವಿಠಲ ಪೊರೆ ಇವಳಾ ಪ ತೊಂಡ ವತ್ಸಲ ದೇವ | ಕಾರುಣ್ಯ ಸಿಂಧೋಅ.ಪ. ಮೂರ್ತಿ ಸಂದರ್ಶನವಪೊತ್ತುದಕೆ ನಾನೀಗ | ಇತ್ತೆ ಉಪದೇಶಾ 1 ತಾಪ | ಎತ್ತಿವಳ ಸಲಹೋ 2 ಪರತಮಾತ್ಮಕ ಜ್ಞಾನ | ಎರಡು ಮೂರ್ಭೇದಗಳಅರಿವಾಗುತಿವಳೀಗೆ | ಸಾಧನವ ಗೈಸೋಹಿರಿಯರಾಶೀರ್ವಾದ | ನೆರವಾಗಿ ಇವಳ ಭವಶರಧಿಯನೆ ಬತ್ತಿಸೈ | ಸುರಸಾರ್ವಭೌಮಾ 3 ಬೇಕಾದ ವರಗಳನು | ನೀ ಕರುಣಿಸಿವಳೀಗೆಸಾಕುವಾಭಾರ ನಿನ್ನದು | ಶ್ರೀ ಕರಾರ್ಚಿತನೇಶೋಕ ಸುಖ ವೆರಡಕ್ಕು | ನೀಕಾರಣೆಂಬಂಥವಾಕನನುಭವ ವಿರಲಿ | ಶ್ರೀ ಕಾಂತ ಹರಿಯೇ 4 ಪೂವಿಲ್ಲ ಪಿತ ನಿನ್ನ | ಭಾವದಲಿ ಮೈ ಮರೆದುಸಾವಧಾನದಿ ಹರಿ ಪೊಗಳಿ | ಹಿಗ್ಗುವಂತೆಸಗೋಪಾವನಾತ್ಮಕ ಗುರೂ | ಗೋವಿಂದ ವಿಠ್ಠಲನೆನೀವೊಲಿದು ಪ್ರಾರ್ಥನೆಯ | ಓದಿ ಸಲಿಸುವುದೋ 5
--------------
ಗುರುಗೋವಿಂದವಿಠಲರು
ಪುಣ್ಯ ಕ್ಷೇತ್ರವ ಸ್ಮರಿಸಿ ಧನ್ಯರಾಗಿರೋ ಪ ನಿಮ್ಮ | ಮುನ್ನೆ ಮಿಕ್ಕಾದಘ ಮಹ ಅನ್ಯಾಯ ಅಳಿದು ಅನು ಕಾರುಣ್ಯನಿಧಿ ಹರಿ ಒಲಿವಾ ಅ.ಪ. ಕ್ಷೇತ್ರ ಮಧುರೆ ಗೋಕುಲ ವೃಂದಾವನ ನಾಸಿಕ ತ್ರಿಯಂಬಕ ಮುದ್ಗಲಕ್ಷೇತ್ರ ಪರಾಶರ ಮಗನಾಶ್ರಮ ವಾರಣಾಸಿ ಭಾರದ್ವಾಜ ಕ್ಷೇತ್ರ ಅರುಣಾಚಲ ದರ್ಭಶಯನ ಮಧ್ಯಾರ್ಜುನ 1 ಸುಂದರ ಸಿಲಾಚಯ ಜಂಬುಕೇಶ್ವರ ಮಹಾನಂದಿ ಚಿದಂಬರ ವೀರ ರಾಘವ ದೇವ ಸ್ಕಂದ ನಿಬ್ಬಣಸ್ವಾಮಿ ಕಾರ್ತಿಕ ಖಗಶೇಷ ನಂದ ಯೇಕಾಂಬರೇಶ ಮಂದಾಕಿನಿ ಇಪ್ಪ ಸಾಗರ ಯಯಾತಿಗಿರಿ ಒಂದೊಂದು ಕೋಟೀಶ್ವರಾ 2 ಸಿರಿ ದ್ವಾರಕಾ ಸಿಂಹಾದ್ರಿ ನೀಲಕಂಠನಿಧಿ ವೀರ ನಾರಾಯಣವೋ ಕೇದಾರ ಕುರುಕ್ಷೇತ್ರ ಪುಷ್ಕರ ಕ್ಷೇತ್ರ ಮಾರಕಾಪುರಿ ಚನ್ನಾ 3 ಉದ್ಭವ ಆದಿ ಅನಂತ ಬಲಕ್ಷೇತ್ರ ಪುಂಡರೀಕಾಕ್ಷ ಸುಧಿಯೆಂದು ಕನ್ಯಾಕುಮಾರಿ ಮುದದಿ ಮಹಂಕಾಳಿ ಹಸ್ತಿಪಳಿನಾಥ ಪದ ಮುರಳಿ ತ್ರಿವಿಕ್ರಮ 4 ಕೂರ್ಮ ನೆಲ್ಲನಪ ಧರಣೀಧರ ಚಾಪವಾಣಿ ಕ್ಷೇತ್ರ ಶ್ರೀನಿವಾಸನೆದ ನಿಧಿ ಗೌರೀ ಮನೋಹರ 5 ಶಂಕರನ ಕ್ಷೇತ್ರ ಗೋಗರ್ಭ ಶೇತುವನ ಗಜಾರಣ್ಯ ಓಂಕಾರನಾಥ ದೇವಾ ವೇದಿ ಗೋಪಾಲನಿಧಿ ಅಲಂಕಾರ ಮುಕ್ತಿ ಕ್ಷೇತ್ರ 6 ಮಳೂರಪ್ರಮೇಯ ಶಿವಾ ಅಂತಕನಗೆ ದ್ವಾಪುರತೀರ್ಥ ನಿವರ್ತಿ ಅಂತು ಆದಿಶ್ರೀರಂಗ ನೀಲಾರಣ್ಯ ರಾಜವನ ನೈಮಿಷ ಭೋಕ್ತ 7 ಅಂದದಲಿಯಿಪ್ಪ ನಿಧಿ ಮಾಧವಸ್ವಾಮಿ ಮೇಲು ಘಟಿಕಾಚಲ ಬದರಿ ನರಸಿಂಹ ರವಿಸೇತು ಗಣ ಮುಕ್ತೇಶ್ವರ ಕಾಲದೂತ ಗೆದ್ದ ಕ್ಷೇತ್ರ ಭವಾನಿಗುಡಿ ವ್ಯಾಳನಿಧಿ ಮಹಾಲಕುಮಿ ರಘುನಾಥ ಶಿವಗಂಗೆ ಬಾಲಕೃಷ್ಣ ಕ್ಷೇತ್ರ ಕರವೀರ ಪುರ ವಿಶಾಲ ವಿಹಂಗಕ್ಷೇತ್ರ 8 ಪೇಳಿದುದಕ್ಕೆ ಆರಿಗೆ ಅಳವಲ್ಲ ನೆನಸೋದು ಮಾನವರು ಮೀಸಲಾಮನದಲ್ಲಿ ಅನಂತ ಜನುಮದ ದೋಷ ವಿ- ಪಾಲಿಸುವ ಕುಲಕೋಟಿಗಳ9
--------------
ವಿಜಯದಾಸ
ಪುರಂದರ ದಾಸರಾಯಾ | ನಮಿಸೆ ನಿಮ್ಮಚರಣ ಸರಸೀರುಹವಾ ಪ ಮೊರೆಹೊಕ್ಕ ಜನರ ನೀ | ಪೊರೆಯದೆ ಬಿಡುವರೆವರಪ್ರಹ್ಲಾದ್ ಗರುಹಿದಂ | ತರುಹು ಮಂತ್ರಾರ್ಥಿವ ಅ.ಪ. ದ್ವಾರಕ ಪುರದೊಳಗೆ | ನರ್ತನ ಗೈಯ್ಯೆವಾರ ಕಾಂತೆಯರೆಲ್ಲರೂ |ಭೋರಿಟ್ಟು ಮೊರೆಯುವ | ಸ್ವರಕೇಳಿ ಸುರರೆಲ್ಲಹರಿಯ ಓಲಗವಾರು | ಹೊಗುವರು ಎಂದರು1 ಓಲಗ ಸೇರ್ದ 2 ಷೋಡಶದ್ವಯ ಸ್ವರದಿ | ಮೈ ಮರೆಯುತ್ತಪಾಡಿ ಪೊಗಳಿ ಮುದದೀ |ಮೃಡವಂದ್ಯ ಹರಿಯವನ | ಕಡುಭಕುತಿಗೆ ಮೆಚ್ಚಿನೀಡುವೆ ವರವ ನೀ | ಬೇಡು ಬೇಡನೆ ಪೇಳ್ದ3 ಎಚ್ಚತ್ತು ಮುನಿ ನೋಡಿದ | ನಗುತಿರ್ಪಅಚ್ಚ್ಯುತನ್ನಾ ಬೇಡಿದ |ಸಚ್ಛಾರಿತ್ರನೆ ಕೇಳು | ನಿಚ್ಚಾಟೆನ್ನಯ ಕೂಡೆಪೆಚ್ಚ ಪೇರ್ಮಲಿ ಆಡು | ಲಕ್ಷಣಾಗ್ರಜನೇ 4 ಪುರಂದರ | ಗಡದಲ್ಲುದೀಸಿದ 5 ಚಿನಿವಾರ ವರದನಲ್ಲೀ | ಜನಿಸುತ್ತಧನ ನವಕೋಟಿಯ ಗಳಿಸೀ |ಘನ ಲೋಭಿ ದ್ವಿಜನ | ಜ್ಞಾನೋದಯ ಮಾಡುತಘನಗುಣ ಸಿರಿಪತಿ | ಅಣುಗನ್ನ ಪೊರೆದ 6 ಪುರಂದರ ದಾಸರ 7 ಹಿರಿಯ ವೈರಾಗ್ಯ ಪೊಂದಿ | ಸಕಲವನ್ನುಸಿರಿಕೃಷ್ಣಗರ್ಪಣೆಂದೀ |ಗುರು ವ್ಯಾಸರಲಿ ಪುರಂ | ದರನೆಂಬಂಕಿತ ಪೊಂದಿಪರಿಸರ ಮತ ಸರ್ವೋತ್ತಮವೆಂದು ಬರೆದಂಥ8 ಸಾರ ವಿಸ್ತಾರದಿವೇದ ಗಮ್ಯಾನಂದ | ಮಯನ ಬೋಧಿಸಿದ 9ನಾಲ್ಕಾರು ಜನ ಶಿಷ್ಯರ | ಜ್ಞಾನೀಗಳ ಲೋಕೋದ್ದಾರಕೆ ಈಯುತೆ ಕಾಕು ಮಾಯ್ಮತಗಳ | ಸಾಕಷ್ಟು ಖಂಡಿಸಿಮಾಕಳತ್ರನ ಮಹಿಮೆ | ಮನೆಮನೆ ಬೀರಿದ 10 ಮಾಸ ಪುಷ್ಯವದ್ಯದೀ | ಪರಮೋತ್ತಮಶಶಿ ರವಿಗಳ ಮೇಳದೀ |ರಸೆಯ ತ್ಯಜಿಸಿ ಗುರು ಗೋವಿಂದ ವಿಠಲನಎಸೆವ ಪಾದಗಳ್ಬಿಸಜ | ಸೇರುತ ಮೆರೆದಾ 11
--------------
ಗುರುಗೋವಿಂದವಿಠಲರು
ಪೂರ್ವ ಜನ್ಮದಲಿ ನಾ ಮಾಡಿದ ಕರ್ಮದಿಂಉರ್ವಿಯೊಳು ಜನಿಸಿದೆನೊ ಕೃಷ್ಣ ಪ ಕಾರುಣ್ಯನಿಧಿ ಎನ್ನ ಕಾಯಬೇಕಯ್ಯ ಹರಿವಾರಿಜನಾಭನೆ ಮುದ್ದುಕೃಷ್ಣಅ ಪುಟ್ಟಿದಂದಿನಾರಭ್ಯ ಸುಖವೆಂಬುವುದನರಿಯೆಕಷ್ಟ ಪಟ್ಟೆನು ಕೇಳೋ ಕೃಷ್ಣತೊಟ್ಟಿಲ ಶಿಶು ತಾಯ್ಗೆ ಬಾಯ್ಬಿಟ್ಟ ತೆರದಿ ಕಂ-ಗೆಟ್ಟು ಶೋಕಿಪೆನೋ ಕೃಷ್ಣಮುಟ್ಟಲಮ್ಮರು ಎನ್ನ ಬಂಧುಗಳು ಕಂಡರೆಅಟ್ಟಿ ಬಡಿವುತಲಿಹರೊ ಕೃಷ್ಣದಟ್ಟ ದಾರಿದ್ರ್ಯವನು ಪರಿಹರಿಸದಿದ್ದರೆಮುಟ್ಟುವುದು ದೂರು ನಿನಗೆ ಕೃಷ್ಣ1 ಕಾಶಿಯಾ ವಾಸವನು ಬಯಸಿ ಬಹು ದಿನದಿಂದಘಾಸಿ ಪಟ್ಟೆನು ನಾನು ಕೃಷ್ಣಈ ಶರೀರವನಾಂತು ಹೀನಾಯಗೊಂಡೆನುನೀ ಸಲಹಬೇಕಯ್ಯ ಕೃಷ್ಣಹೇಸಿಗೆಯ ಸಂಸಾರದಿ ನೀನಿಂತು ಮಾಯಾಪಾಶದೊಳು ಬಿಗಿವರೇ ಕೃಷ್ಣಘಾಸಿ ಮಾಡದೆ ಎನ್ನ ಪಾಪವನು ಪರಿಹರಿಸೊಸಾಸಿರನಾಮದ ಮುದ್ದುಕೃಷ್ಣ 2 ಲೋಕದೊಳು ಎನ್ನಂಥ ಪಾಪಿಗಳು ಉಂಟೆಂದುನೀ ಕೇಳಿ ಬಲ್ಲೆಯಾ ಕೃಷ್ಣಸಾಕೇಳು ಎನಗೊಂದು ಗತಿಯ ತೋರಿಸಿ ಸದ್ವಿವೇಕಿಯನು ಮಾಡಯ್ಯ ಕೃಷ್ಣರಾಕೇಂದು ಮುಖಿ ದ್ರೌಪದಿಯ ಮಾನವನು ಕಾಯ್ದುಆಕೆಗಕ್ಷಯವಿತ್ತೆ ಕೃಷ್ಣನಾ ಕಾಣುವಂದದಲಿ ಉಡುಪಿಯಾದಿಕೇಶವಏಕೆ ದರಶುನವೀಯೆ ಕೃಷ್ಣ 3
--------------
ಕನಕದಾಸ
ಪೊರೆಯುವುದೆಮ್ಮನು ನರಹರಿ ನೀನು ಸ್ಮರಿಪೆವು ತವ ಪದಸರಸಿಜಗಳನು ಪ. ತರಳ ಪ್ರಹ್ಲಾದನು ಮೊರೆಯಿಟ್ಟು ತಾನು ಕರೆಯಲಾಕ್ಷಣ ಬಂದೆ ತ್ವರಿತದಿ ನೀನು 1 ದುರುಳ ಹಿರಣ್ಯಕಸುರನನು ಸೀಳಿ ಸುರರನ್ನು ಸಲಹಿದೆ ಕರುಣವ ತಾಳಿ 2 ಮಿತ್ರ ಮಂಡಳಿ ಶತಪತ್ರಕೆ ನೀನು ಮಿತ್ರನಂತೆಸಗು ವಿಮಿತ್ರತೆಯನ್ನು 3 ಕಾರುಣ್ಯಾಮೃತವಾರಿಧೇ ಮೂರ್ತೇ ವರ ಲಕ್ಷುಮಿನಾರಾಯಣ ಸತ್ಕೀರ್ತೇ 4
--------------
ತುಪಾಕಿ ವೆಂಕಟರಮಣಾಚಾರ್ಯ
ಪ್ರಸನ್ನ ಶ್ರೀ ನರಸಿಂಹ (ಪ್ರಹ್ಲಾದ ಚರಿತೆ)] ಪ್ರಥಮ ಅಧ್ಯಾಯ - ಹಿರಣ್ಯಕಶಿಪು ಪೂರ್ವ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ತೋಯಸ್ಥ ಪತ್ರಸ್ಥ ತೋಯಜಾಲಯಾ ಸ್ತುತ್ಯ ಅಂಡ ಸ್ರಷ್ಟಾ ಸರ್ವಸ್ಥ ಅಚ್ಯುತಾನಂತ ಗೋವಿಂದ ನೀ ಸಜ್ಜನರ ಭಯ ನಿವಾರಣ ಮಾಳ್ಪಿ ತೋರಿ ಆಗಾಗ 1 ಪ್ರಳಯ ಜಲಚರ ಶೈಲಧರ ಧರೋದ್ಧರ ನಮೋ ಬಾಲಕಗೆ ಒಲಿದು ಬಲಿಯಲಿ ದಾನ ಕೇಳಿ ಖಳ ಕುಪಾಲರ ಸದೆದು ಜಲಧಿಯ ಬಂಧಿಸಿದ ಲಲನೇರ ರಂಜಿತ ಶಿಶು ಶಂಭಳದಿ ತೋರ್ವಿ 2 ಏಕಾತ್ಮ ಶ್ರೀ ವಿಷ್ಣುಲೋಕಕ್ಕೆ ಬರಲು ದಿಗ್ವಾಸಸ ಶಿಶುರೂಪ ಆ ಮುನಿವರರ ಲೆಕ್ಕಿಸದೇ ತಡೆದರು ದ್ವಾರಪಾಲಕರು 3 ಜಯವಿಜಯರೆಂಬ ಆ ದ್ವಾರಪಾಲಕರಿಗೆ0 ಮಾಯೇಶ ಹರಿ ಪ್ರಿಯತರರು ಮುನಿವರರು ಈಯಲು ಶಾಪವ ಆ ವಿಷ್ಣು ಪಾರ್ಶದರು0 ದೈತ್ಯಜನ್ಮವ ಹೊಂದಿದರು ಪತನವಾಗಿ 4 ಸುತಪೋನಿಧಿ ಕಶ್ಯಪ ತೇಜೋಲ್ಬಣದಿಂ ದಿತಿದೇವಿ ಜಠರದಲಿ ವಿಷ್ಣು ಪಾರ್ಶದರು ಪತಿತ ಆ ಜಯ ವಿಜಯರು ಪ್ರವೇಶಿಸಿದರು ದಿತಿ ಹಡೆದಳು ಗಂಡು ಮಕ್ಕಳೀರ್ವರನು 5 ದಿತಿದೇವಿ ಅಗ್ರಸುತ ಹಿರಣ್ಯಕಶಿಪು ಜಯ ದಿತಿ ಅವರಸುತ ವಿಜಯನೇ ಹಿರಣ್ಯಾಕ್ಷ ಉಪಟಳ ಕೊಟ್ಟನು ಈ ಧರೆಯ ಅಬ್ಧಿಯ ಕೆಳಗೆ ಅಡಗಿಸಿದ 6 ಸುರಸುಜನ ಕ್ಷೇಮಾರ್ಥ ಪದುಮಜ ಪ್ರಾರ್ಥಿಸಲು ಕರದಿಂದ ಹೊಡೆದು ಹಿರಣ್ಯಾಕ್ಷನ ಕೊಂದು ಧರೆಯ ಲೀಲೆಯಿಂದ ಮೇಲೆತ್ತಿತಂದಿ ವರಾಹ ಹರಿ ನೀನು 7 ಜಯ ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 -ಇತಿ ಪ್ರಥಮಾಧ್ಯಾಯ ಸಂಪೂರ್ಣಂ - ದ್ವಿತೀಯ ಅಧ್ಯಾಯ ಹಿರಣ್ಯಕಶಿಪು ವರ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಮೂರ್ಜಗದ ದೊರೆ ಹರೇ ನೀ ತನ್ನ ತಮ್ಮನ ಭಂಜಿಸಿದೆ ಎಂದು ಕಡುಕೋಪಗೊಂಡು ದುರ್ಜನ ದಾನವ ವಂದಿತ ಹಿರಣ್ಯಕನು ರಜಸ್ತಮೋಚ್ಛದಿ ದ್ವೇಷ ಮಾಡಿದನು ನಿನ್ನಲ್ಲಿ 1 ಶೂಲದಿಂ ಅಚ್ಯುತನ ಕುತ್ತಿಗೆ ಕತ್ತರಿಸಿ ಗಳರುಧಿರ ತರ್ಪಣ ಕೊಡುವೆ ಎನ್ನುತ್ತ ಖಳ ದೈತ್ಯ ಪ್ರಮುಖರಿಗೆ ಹೇಳಿದನು ವೈಷ್ಣವ ಸ್ಥಳ ದ್ವಿಜ ಗೋ ಭಕ್ತರನ್ನ ತರಿ ಎಂದ 2 ಗರ್ಜಿಸುತ ದೈತ್ಯರು ಪುರ ಗ್ರಾಮ ಆಶ್ರಮ ವ್ರಜಕ್ಷೇತ್ರ ದಹಿಸÀಲು ಹಿರಣ್ಯಕಶಿಪು ಅಜೇಯಾಜರಾಮರತ್ವವ ಅಪ್ರತಿ ಮುಖ್ಯ ರಾಜತ್ವ ಹೊಂದಲು ತಪಸ್ಸು ಮಾಡಿದನು 3 ಊಧ್ರ್ವದಲಿ ಬಾಹುಗಳ ನಭದಲಿ ದೃಷ್ಟಿಯು ಪಾದಾಂಗುಷ್ಟ ಮಾತ್ರದಿ ನಿಂತು ತಪವ ಗೈದನು ಆ ತಪೋಧೂಮಾಗ್ನಿ ಪೀಡಿತ ತ್ರಿದಿವರು ಮೊರೆ ಇಟ್ಟರು ಬ್ರಹ್ಮನಲ್ಲಿ 4 ಪದುಮಭವ ಭೃಗು ದಕ್ಷಾದಿಗಳೊಡೆಯೈದು ದೈತ್ಯೇಶ್ವರ ಹಿರಣ್ಯಕನ ಆಶ್ರಮವ ಭದ್ರಂತೇ ತಪಸಿದ್ಧಿ ಆಯಿತು ವಶೀಕೃತನಾದ ಉತ್ತಿಷ್ಠೋತ್ತಿಷ್ಠ ವರ ಕೊಡುವೆನು ಎಂದ 5 ಬ್ರಹ್ಮನ್ನ ನೋಡಿ ಹಿರಣ್ಯಕನು ಸನ್ನಮಿಸಿ - ಬ್ರಹಾಂತರ್ಗತ ಹರಿ ವಿವಕ್ಷಿತ ಗುಣಗಳ ಬ್ರಹ್ಮ ಹರುಷದಿಂದಲಿ ಸಮ್ಯಕ್ ಕೀರ್ತನೆ ಮಾಡಿ ಆ ಹಂಸವಾಹನನ ವರಗಳ ಬೇಡಿದನು 6 ಸರೋರುಹಾಸನ ಸೃಷ್ಟ ಸರ್ವಭೂತಂಗಳು ಮೃಗ ಪ್ರಾಣ ಉಳ್ಳವು ಇಲ್ಲದವು ಹೊರ ಒಳಗೆ ಭೂಮ್ಯಾಂಬರ ದಿವಾ ರಾತ್ರಿಯು ಸುರಾಸುರ ಮೃತ್ಯು ಮಾ ಭೂನ್ಮ್‍ಮ ಎಂದ 7 ಏಕಪಥ್ಯವು ಅಪ್ರತಿ ಶಕ್ತಿಮತ್ಯವವು ಲೋಕಪಾಲಕರಂತೆ ಬಲವು ಮಹಿಮೆಗಳು ಯೋಗಿ ತಪಸ್ವಿಗಳಂತೆ ಸಿದ್ಧಿಗಳು ಸರ್ವವು ಬೇಕು ತನಗೆಂದು ವರ ಬೇಡಿದ ಬ್ರಹ್ಮನ್ನ 8 ಶತಧೃತಿಯು ಈ ದುರ್ಲಭ ವರಗಳನ್ನಿತ್ತು ತಾ ತೆರಳಿದನು ದೈತ್ಯನಿಂ ಪೂಜೆಗೊಂಡು ಭ್ರಾತೃವಧ ಅನುಸ್ಮರಿಸಿ ಹರಿದ್ವೇಷ ಬೆಳಸಿದನು ಲಬ್ಧವರ ದೈತ್ಯೇಶ ಇನ್ನೂ ಹೆಚ್ಚಾಗಿ 9 ನರಸುರಾಸುರ ಋಷಿ ಗರುಡೋರಗ ಸಿದ್ಧ ಚಾರಣ ವಿದ್ಯಾಧರ ಯಕ್ಷ ಗಂಧರ್ವ ಪಿತೃ ಪ್ರೇತ ಭೂತಪತಿ ರಾಕ್ಷಸ ಪಿಶಾಚೇಶ ಸರ್ವರನು ಜೈಸಿ ತನ್ನವಶ ಮಾಡಿಕೊಂಡ 10 ಮೂರ್ಲೋಕಂಗಳಲ್ಲಿ ದಶದಿಕ್ಕುಗಳಲ್ಲಿ ಈ ಹಿರಣ್ಯಕಶಿಪು ತನ್ನ ಜಯಭೇರಿ ಹೊಡೆದ ಸರ್ವಲೋಕಪಾಲರ ತೇಜಃಸ್ಥಾನಗಳ ಅಪ - ಹರಿಸಿ ತ್ರಿವಿಷ್ಟಪ ಭೋಗದಲಿ ಮನಸ್ಸಿಟ್ಟ 11 ಅಜಿತೇಂದ್ರಿಯ ಹೇಯ ಭೋಗರತ ಅಹಂಕಾರಿ ಮೂರ್ಜಗಾರಿಯು ಧರ್ಮ ಆಚಾರ ದ್ವೇಷಿ ನಿರ್ಜರರು ಅವನಿಂದ ಹಿಂಸೆ ತಾಳದೆ ವಿಷ್ಣೋ ತ್ರಿಜಗದೀಶನೇ ಮೊರೆ ಹೊಕ್ಕರು ನಿನ್ನಲ್ಲಿ 12 ಅಚ್ಯುತ ಈಶ್ವರ ನಿನ್ನ ಭದ್ರವಾಣಿ ಅಭಯ ಹೊಂದಿ ಸುರವರರು ನಿರೀಕ್ಷಿಸಿದರು ಪ್ರಶಾಂತ ಮಹಾತ್ಮಾ ನಿರ್ವೈರ ಪ್ರಹ್ಲಾದ ಹುಟ್ಟುವ ಕಾಲವನು 13 ಜಯತು ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 13 -ಇತಿ ದ್ವಿತೀಯ ಅಧ್ಯಾಯ ಸಂಪೂರ್ಣಂ - ತೃತೀಯ ಅಧ್ಯಾಯ - ಬಾಲಕ ಪ್ರಹ್ಲಾದ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಯುಕ್ತ ಕಾಲದಿ ಹೇಮಕಶಿಪುಗೆ ಐದು ಮಕ್ಕಳು ಹುಟ್ಟಿದರು ನಾಲ್ವರು ಗಂಡು ಮಕ್ಕಳು ನಾಲ್ವರಲ್ಲಿ ಪ್ರವರ ಪ್ರಹ್ಲಾದನು ಅಕಳಂಕ ಗುಣಶ್ರೇಷ್ಠ ಮಹದುಪಾಸಕನು 1 ಸತ್ಯಸಂಧನು ಶೀಲಸಂಪನ್ನ ಬ್ರಹ್ಮಣ್ಯ ಜಿತೇಂದ್ರಿಯ ಸಮದರ್ಶಿ ಆರ್ಯರ ವಿಧೇಯ ಸ್ನಿಗ್ಧರಿಗೆ ಭ್ರಾತೃವತ್ ಯಥಾದೇವೋ ತಥಾಗುರೋ ಭೂತಪ್ರಿಯ ಸುಹೃತ್ತಮ ದೀನವತ್ಸಲನು 2 ವಿಧ್ಯಾರ್ಥಿ ರೂಪಾದಿಗಳ ಗರ್ವ ಇವಗಿಲ್ಲ ಶ್ರುತ ದೃಷ್ಟ ವಿಷಯದಲಿ ಗುಣಗ್ರಾಹಿಯು ಶಾಂತನು ದಾಂತನು ಸಾಧುಗಳಲಿ ಪ್ರಿಯ ಸದಾ ಸ್ವಭಾವದಿ ಶ್ರೀ ವಿಷ್ಣುಭಕ್ತಿ 3 ವಾಸುದೇವ ನಿನ್ನಲ್ಲೇ ಸರ್ವದಾ ಮನವನು ನೆಲಸಿ ಈ ಬಾಲ ಸರ್ವ ನಡೆನುಡಿ ಊಟ ಶಯನ ಪರ್ಯಟನ ಸರ್ವಾವಸ್ಥೆಯಲೂ ನಿನ್ನ ಸ್ಮರಿಸುವನು 4 ಅಂಬುಜೋದ್ಭವ ತ್ರ್ಯಿಂಬಕ ಮುಖ್ಯವಿನುತ ನಿನ್ನ ಅಂಬುಜಾಂಘ್ರಿಗಳನ್ನ ಧ್ಯಾನಿಪ ಈ ಬಾಲಕನ ಅಂಬಕದಿ ಸುಜ್ಞಾನ ಭಕ್ತಿ ಪುಳಕಾಂಬುವು ತುಂಬಿ ತುಳುಕಾಡುವುದು ಕಂಡಿಹರು ಅಂದು 5 ಒಮ್ಮೆ ನಗುವನು ಒಮ್ಮೆ ರೋದಿಸುವನು ಒಮ್ಮೆ ಸುಮ್ಮನಿರುವ ಹರಿ ಪ್ರೇಮಾನಂದದಲಿ ಅಮ್ಮಮ್ಮ ಭಕ್ತಿಯಲಿ ಕೂಗಿ ಕುಣಿವನು ಮಹಾನ್ ರಮೆಯರಸ ನಿನ್ನ ದಾಸಾಗ್ರಣಿಯು ಪ್ರಹ್ಲಾದ 6 ಮಹಾತ್ಮನು ಮಹಾಭಾಗ ಮಹಾಭಾಗವತನು ಮಹಾಕಾರುಣಿಕ ಪ್ರಹ್ಲಾದಗೆರಗುವೆನು ಅಹರ್ನಿಶಿ ಧೃತಿಸ್ಥ ಹರಿ ನಿನ್ನಲ್ಲಿ ಭಕ್ತಿ ಇಹಪರದಿ ಸೌಭಾಗ್ಯ ಎಮಗೀಯಲೆಂದು 7 ಜಯ ಗುಣಾರ್ಣವ ಭೂಮನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 - ಇತಿ ತೃತಿಯಾ ಅಧ್ಯಾಯ ಸಂಪೂರ್ಣಂ - ಚತುರ್ಥ ಅಧ್ಯಾಯ ಪ್ರಹ್ಲಾದರ ವಿಧ್ಯಾಭ್ಯಾಸ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ದೈತ್ಯರಾಜನು ಪ್ರಿಯಪುತ್ರ ಪ್ರಹ್ಲಾದನಿಗೆ ವಿದ್ಯೆಕಲಿಸಲು ಶಂಡಾಮರ್ಕರು ಎಂಬ ಬೋಧಕರ ಏರ್ಪಾಡು ಮಾಡಿಸಲು ಆ ಮಹಾನ್ ಇತರ ಬಾಲಕರೊಡೆ ಕೂಡಿ ಓದಿದನು 1 ವಿದ್ಯೆ ಕಲಿಯುವಾಗ ಇತರ ಬಾಲರ ಮೀರಿ ಪ್ರತಿಭೆ ತೋರಿಸಿದನು ಬಾಲಪ್ರಹ್ಲಾದ ಕೇಳ್ದ ಕಲಿತದೆÀ್ದಲ್ಲಿ ಸಾಧು ಹೇಳೆಂದು 2 ಸಂಸಾರಿ ಜೀವರುಗಳು ಸದಾ ಐಹಿಕ ನಿಸ್ಸಾರ ವಿಷಯಂಗಳಲ್ಲಿ ಮುಳುಗಿ ತಮಃಸಿಲಿ ಬೀಳದಿರೆ ಸಾಧು ಜನಸಂಗ ಶ್ರೀಶ ಹರಿ ಸರ್ವವಂದ್ಯನ ಆಶ್ರಯಿಪುದು 3 ಹೀಗೆ ಪ್ರಹ್ಲಾದ ಪೇಳಲು ಹಿರಣ್ಯಕ ಕೇಳಿ ಪರ ಬೋಧಿತನಾಗಿಹನೆಂದು ನೆನೆದು ಶುಕ್ರ ಸುತರು ತಮ್ಮ ಮನೆಯಲ್ಲೇ ಇಟ್ಟುಕೊಂಡು ತಕ್ಕ ವಿಧದಲಿ ಬುದ್ಧಿ ತಿದ್ದಿಸುವುದು ಎಂದ 4 ಗುರುಗಳು ಮನೆಯಲ್ಲಿ ಒಳ್ಳೆಮಾತಿಂದಲಿ ಪರಕೃತವೋ ಸ್ವತಃ ಕೃತವೋ ಈ ಹರಿಪಕ್ಷಬುದ್ದಿ ಅನೃತವಾಡದೆ ಸತ್ಯ ಪೇಳೆಂದು ಕೇಳಿದರು ಭಾಗವತ ಪ್ರಹ್ಲಾದ ಬಾಲನ್ನ 5 ಸತ್ತಾ ಪ್ರವೃತ್ತಿ ಪ್ರತೀತ್ಯಾದಿಪ್ರದ ಸರ್ವ - ಚಕ್ರಧರ ವಿಷ್ಣು ವಿಧಿ ಶಿವಾದೀಡ್ಯನಲಿ ರತತಾನು ಕಾಂತವು ಅಯಸ್ಸನ್ನು ಸೆಳೆವಂತೆ ಎಂದು 6
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಾಣ ಗುರು ರಾಮ ವಿಠಲ | ನೀನೆ ಪೊರೆ ಇವಳಾ ಪ ಮೌನಿ ಸದ್ವಂದ್ಯಗೆ | ಶ್ರೀನಿವಾಸದೇವ ಅ.ಪ. ಅರುಹಳೆನ್ನಳವಲ್ಲ | ಗುರುಕರುಣ ಸತ್ಪಾತ್ರೆವರಸುತ್ಯೆಜಸನಿತ್ತ | ಪಾನಕವ ಕೊಂಡುಸಿರಿ ರಮಣ ಮಂದಿರವ | ಸೇರಿ ನಾರಿಳ ಫಲವುಕರಗತವು ಆಗಲದು | ವರಮೂರ್ತಿಎನಿಸೆ 1 ಸುಪ್ತೀಶನಾಜ್ಞೆಯಲಿ | ಇತ್ತಿಹೆನೊ ಅಂಕಿತವಕತೃಸಿರಿ ರಾಮನೆ | ವ್ಯಕ್ತ ತೆರನಾದಾಮಕ್ತಗೊಡೆಯನೆ ದೇವ | ಭಕ್ತವತ್ಸಲಹರಿಯೆಆರ್ತರುದ್ಧರತಾ ಹರಿ | ಅರ್ಥಿಯಲಿಸಲಹೊ 2 ಹರಿದಾಸ್ಯದೊರಕಲ್ಕೆ | ಪೂರ್ವಸುಕೃತವೇ ಮಾರ್ಗತರಳೆ ಅದ ಪಡೆದಿಹಳು | ಕಾರುಣ್ಯ ಮಾರ್ತೆಮರುತಮತದಲ್ಲಿರುವ | ಕಾರುಣದಿ ಪೊರೆ ಇವಳಸರ್ವಜ್ಞಸರ್ವೇಶ | ಸುರ ಸಾರ್ವ ಭೌಮ3 ಭ್ರೂತ ಪಂಚಕದೇಹ | ಸುಸ್ಥಿರವು ಅಲ್ಲೆಂಬಖ್ಯಾತ ಮತಿಯನೆ ಕೊಟ್ಟು | ಸಲಹ ಬೇಕಿವಳಾಮಾತುಮೂತಿಗೆ ನಿನ್ನ | ನಾಮ ಸಂಸೃತಿಯಿತ್ತುಈ ತರಳೆನುದ್ದರಿಸು | ಮಾತಳಾಂತಕನೆ4 ಹಲವು ಮಾತೇಕೆ ಹರಿ | ಕಲಿಯುಗದಿ ತವನಾಮಬಲುಮಂದಿ ಜಪಿಸುತ್ತ | ಭವವ ದಾಂಟಿಹರೊಒಲಿಮೆಯಿಂದವಳನ್ನು | ಸಲಹಲ್ಕೆ ಪ್ರಾರ್ಥಿಸಿಹೆಎಲರುಣಿ ಶಯ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಪ್ರಾಣನಾಥ ಪಾವನಗಾತ್ರ ಪ ನಿನ್ನಡಿಗಾನಮಿಸುವೆನು ಅ.ಪ ಬನ್ನಬಡಿಪ ಖಳರನ್ನು ಮುರಿದು ಶರ ಣನ್ನುವರನು ಕಾರುಣ್ಯದಿ ಪೊರೆಯುವ 1 ಸೇರಿದವರ ಭವದೂರಗೈದು ಮನ ಕೋರಿಕೆ ಸಲಿಸುವ ಧೀರ ಉದಾರ 2 ಎನ್ನ ಮನೋರಥವನು ಸಲಿಸುವೊಡೆ ನಿನ್ನ ಹೊರತು ನಾನನ್ಯರ ಕಾಣೆನು 3 ಮಂಜುಳ ವೇಷ ಪ್ರಭಂಜನ ಕುವರ ಧ ನಂಜಯ ಸೋದರ ಕುಂಜರಗಮನ 4 ಕರಿಗಿರೀಶ ಶ್ರೀ ನರಹರಿ ಚರಣವ ನಿರುತ ಸೇವಿಸುವ ಶರಣ ಶಿರೋಮಣಿ 5
--------------
ವರಾವಾಣಿರಾಮರಾಯದಾಸರು
ಪ್ರಾಣಪತಿ ಶ್ರೀನಿವಾಸ ವಿಠಲ ಪೊರೆ ಇವಳ ಪ ಆನತೇಷ್ಟ ಪ್ರದನು | ನೀನೆಂದು ಬಿನ್ನವಿಪೆಜ್ಞಾನ ಗಮ್ಯನೆ ದೇವ | ನೀನಾಗಿ ಪೊರೆಯೋ ಅ.ಪ. ಮಾನ್ಯ ಮಾನದ ಹರಿಯೆ | ಕನ್ಯೆಗಭಯದನಾಗಿಪುಣ್ಯ ಜೀವಿಯ ಸಲಹೆ | ಬಿನ್ನೈಪೆ ನಿನಗೇ |ನಿನ್ಹೊರತು ಜಗದೊಳಗೆ | ಅನ್ಯರನು ಕಾಣೆ ಕಾರುಣ್ಯ ನಿಧಿ ದಾನವಾ | ರಣ್ಯ ದಾವನಲಾ 1 ಭಾವಿಭಾರತಿ ಪತಿಯ | ಸೇವೆಯನೆ ಕೊಂಬಹಯಗ್ರೀವನೆ ನಿನ್ನ ಪದ | ತಾವರೆಯ ದಾಸ್ಯಾ |ಓದಿ ಬೇಡುತ್ತಿಹಳ | ತೀವರದಿ ಕೈ ಪಿಡಿಯೆದೇವ ನಿನ್ನಡಿಗಾನು | ಧಾವಿಸುತ ಬೇಡ್ವೇ 2 ಮಾರುತಾಂತರ್ಗತನೆ | ತಾರತಮ್ಯ ಜ್ಞಾನಮೂರೆರಡು ಭೇದಗಳ | ದಾರಿಯನೆ ತೋರೀ |ಸಾರತಮ ನೀನು ನಿ | ಸ್ಸಾರ ಜಗವೆಂತೆಂಬ ಚಾರುಮತಿಯನೆ ಇತ್ತು | ಪಾರು ಮಾಡಿವಳಾ 3 ವಿಷಯಗಳ ಅನುಭವದಿ | ಎಸೆವ ನಿನ್ನಯ ಸ್ಮರಣೆಹಸನಾಗಿ ನೀನಿತ್ತು | ಕೆಸರ ಕಳೆಯೋ |ಕುಶಲ ಕ್ಲೇಶಾದಿ ನಿ | ನ್ನೊಶವೆಂಬ ಧೃಡವಿರಲಿಬಿಸಜಾಕ್ಷ ಶ್ರೀರಾಮ | ಪ್ರಸರಿಸೋ ಜ್ಞಾನ 4 ದೇವ ದೇವೇಶ ಗುರು | ಸಾರ್ವಬೌಮರ ಪಾಲಶ್ರೀವರನೆ ಸರ್ವಜ್ಞ | ದುರ್ವಿಬಾವ್ಯಾ |ನೀವೊಲಿಯುತಿವಳಿನ್ನು | ಸಾರ್ವ ಕಾಲದಿ ಪೊರೆಯೊಗೋವಳರ ಪಾಲ ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಪ್ರಾಣಸನ್ನುತ ನರಸಿಂಹ | ವಿಠಲ ಪೊರೆ ಇವಳಾ ಪ ಕಾಣೆನಾನನ್ಯರನು | ಕಾರುಣ್ಯ ಮೂರ್ತೇ ಅ.ಪ. ವಾಸುದೇವ ಹರೀ |ಕೇಶವನೆ ಪೂಜಿಸೀ | ವೇಷದಲಿ ಸೂಚ್ಯ ಪರಿಆಶಿಷವನಿತ್ತು ಉಪ | ದೇಶ ಮಾಡಿಹೆನೋ 1 ಕಾಮಾರಿ ಸಖಕೃಷ್ಣ | ಕಾಮಿತವನೇ ಇತ್ತುಭಾಮಿನಿಯ ಸಲಹೆಂದು | ನೇಮದಲಿ ಬೇಡ್ವೇಶ್ರೀ ಮನೋಹರ ಹರಿಯೆ | ದುರಿತಾಳಿ ಪರಿಹರಿಸಿನಾಮಸ್ಮøತಿ ಸುಖ ಕೊಟ್ಟು | ಭವವನುತ್ತರಿಸೋ 2 ಪಾದ ಮಾನಿಯ ಪ್ರೀಯಪಾವನ್ನ ತವನಾಮ | ನಾಲಿಗ್ಯೆ ಒದಗೀಜೀವನದಿ ಸಂತೋಷ | ಒದಗಲೀ ಎನುತ ಹರಿದೇವ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 3
--------------
ಗುರುಗೋವಿಂದವಿಠಲರು
ಪ್ರಾಣೇಶ ಹರಿ ವಿಠಲ | ಪೊರೆಯ ಬೇಕಿವಳಾ ಪ ನಿನಲ್ಲದಿನ್ನಿಲ್ಲ | ಪ್ರಾಣಾಂತರಾತ್ಮಾ ಅ.ಪ. ಸಾರ ಕೂಪದಿಂದ |ಕಾರುಣ್ಯ ಮೂರುತಿಯೆ | ಆರು ಅನ್ಯರ ಕಾಣೆನೀರ ಜಾಸನ ವಂದ್ಯ | ನಿರ್ಮಲಾತ್ಮಕನೇ 1 ಕನ್ಯೆಮಣಿ ಇವಳೀಗೆ | ನಿನ್ನ ನಾಮಾಮೃತದಬೆಣ್ಣೆಯನು ಉಣಿಸುತ್ತ | ಕಾಪಾಡೊ ಇವಳಾಚಿನ್ನುಮಯ ಶ್ರೀ ಹರಿಯೆ | ಸಮ್ಮೋದ ಪಾಲಿಸುತಚೆನ್ನಾಗಿ ಪೊರೆ ಇವಳ | ಅನ್ನಂತ ಮಹಿಮಾ 2 ಸಾಧು ಸತ್ಸಂಗವನು | ನೀ ದಯದಿ ಕೊಟ್ಟವಳಸಾಧನವ ಗೈಸುವುದೊ ಮಾಧವನೆ ದೇವಾ |ಆಧ್ಯಂತ ರಹಿತ ಹರಿ | ವೇದಾಂತ ವೇದ್ಯನೆಕಾದುಕೋ ಬಿಡದಿವಳ | ಮಧ್ವಮುನಿ ವಂದ್ಯಾ 3 ಕಾಮ ಜನಕನೆ ದೇವ | ಕಾಮಿತವ ಕರುಣಿಸುತನೇಮ ನಿಷ್ಠೆಯನಿತ್ತು | ನೀ ಮುದದಿ ದೇವಾ |ಪಾಮರಳ ಉದ್ಧರಿಸೋ | ಶ್ರೀ ಮನೋಹರ ಹರಿಯೆಸಾಮಜಾಸದ್ವಂದ | ಸಾಮ ಸನ್ನುತನೇ 4 ಕೇವಲಾನಂದವೆನೆ | ಶಾಶ್ವತದ ಸುಖಕಾಗಿಬಾಳ್ವ ಅಳವಡಿಸುತ್ತ | ಕಾವುದೋ ಇವಳಾ |ಗೋವಿಂದಂ ಪತಿಯೆ ಗುರು | ಗೋವಿಂದ ವಿಠ್ಠಲನೆಈ ವಿಧದ ಭಿನ್ನಪವ | ನೀವೊಲಿದು ಸಲಿಸೋ 5
--------------
ಗುರುಗೋವಿಂದವಿಠಲರು
ಬಣ್ಣಿಸಲಳವಲ್ಲ ನಿಮ್ಮ ಪ್ರ ಸನ್ನ ಮೂರುತಿ ಯಲಗೂರ ವಾಸ ಹನುಮಾ ಪ ಅಂಜನಿಯುದರದಲಿ ಜನಿಸೀ ತೇಜ ಪುಂಜ ರಾಮನ ಸೇವೆಯಲಿ ಮನನಿಲಿಸಿ ಕಂಜ ಛವನ ಪಟ್ಟ ಧರಿಸಿ ಬಲು ರಂಜನೆ ಮೆರೆದ ಭಕ್ತಾಗ್ರಣಿಯೆನಿಸಿ 1 ಜ್ಞಾನ ಭಕುತ ವೈರಾಗ್ಯದಲಿ ಸರಿ ಉರಗ ಲೋಕದಲಿ ಮಾನನಿಧಿಯೇ ವಿಕ್ರಮದಲಿ ಚರ ಣಾಗತೆ ರಕ್ಷಕ ನೇಮ ಬರದಿರಲಿ2 ಮೂರವ ತಾರದಿ ಬಂದು ದೀನೋ ದ್ಧಾರಣ ಮಾಡಿದೆ ಸದ್ಬೋಧ ಗರದು ಕಾರುಣಿ ಗುರುವಾಗೆಂದೆಂದು ಸಹ ಕಾರದಿ ಮಹಿಪತಿ ಸುತಗೊಲಿದಿಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಣ್ಣಿಸುತ ಮಕ್ಕಳನು ಹರಸುವಳು ತಾುಎಣ್ಣೆ ಉಣಿಸುತ ತನ್ನ ಚಿನ್ನ ಚಿಕ್ಕರುಗಳಿಗೆ ಪಆಯುಷ್ಯವಂತನಾಗು ಆಸ್ತಿಕನು ನೀನಾಗುಭಕ್ತವತ್ಸಲ ಹರಿಯಭಕ್ತನಾಗುನಿತ್ಯನಿರ್ಮಲನಾಗು ನೀತಿವಂತನು ಆಗುಸತ್ಯನಿಷ್ಠನಾಗು ಸಿರವಂತನಾಗೆಂದು 1ಶೂರನೀನಾಗು ಬಲುಧೀರ ನೀನಾಗಯ್ಯಾಧೈರ್ಯದಿಂದ ಸತ್ಕಾರ್ಯ ನಿರತನಾಗುದುರುಳರನು ದೂರಿರಿಸು ಪರರ ಪೀಡಿಸದಿರುಕಾರುಣ್ಯ ನಿಧಿಯಾಗಿ ಸುಜನರನು ಪೊರೆಯೆಂದು2ದೇಶವನು ಪ್ರೀತಿಸು ದುರಾಶೆಗೊಳಗಾಗದಿರುಕರ್ಯಠನು ಆಗದಿರು ಧರ್ಮ ಬಿಡಬೇಡಾಉದ್ಯೋಗಪತಿಯಾಗು ಜಿಪುಣ ನೀನಾಗದಿರುಭೂಪತಿ'ಠ್ಠಲನ ಭಕ್ತ ನೀನಾಗೆಂದು 3
--------------
ಭೂಪತಿ ವಿಠಲರು