ಒಟ್ಟು 1707 ಕಡೆಗಳಲ್ಲಿ , 105 ದಾಸರು , 1247 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನಯ್ಯ ಎಲ್ಲ ನಿನ್ನದಯ್ಯ ಹರಿ ನಿನ್ನ ಮಾಯ ಜಗ ವಿಷ್ಣುಮಯ ಪ ಎತ್ತನೋಡಿದರು ನಿನ್ನ ಕ್ಷೇತ್ರ ಹರಿ ಸುತ್ತ ತಿರುಗೋದೆಲ್ಲ ನಿನ್ನ ಸೂತ್ರ ನಿತ್ಯ ನಡೆವುದೆಲ್ಲ ನಿನ್ನ ಯಾತ್ರ ಹರಿ ಭವ ನಿನ್ನ ಚಿತ್ರ 1 ವೇದ ನಾದವೆಲ್ಲ ನಿನ್ನ ಮಂತ್ರ ಹರಿ ಓದು ವಾದ ಎಲ್ಲ ನಿನ್ನ ತಂತ್ರ ಬಾಧೆ ವಿನೋದ ಎಲ್ಲ ನಿನ್ನ ಯಂತ್ರ ಹರಿ ಆದಿ ಅನಾದಿ ಸರ್ವ ನಿನ್ನ ಸ್ವತಂತ್ರ 2 ರೋಗ ರಾಗ ಎಲ್ಲ ನಿನ್ನ ಶೂಲ ಹರಿ ಭೋಗ ಭಾಗ್ಯವೆಲ್ಲ ನಿನ್ನ ಜಾಲ ಜಾಗರ ಸದಾ ನಿನ್ನ ಶೀಲ ಹರಿ ಬೈಗುಬೆಳಗುಯೆಲ್ಲ ನಿನ್ನ ಲೀಲಾ 3 ಆಟ ನೋಟವೆಲ್ಲ ನಿನ್ನ ಮತಿ ಹರಿ ಝಾಟ ಮಾಟ ಎಲ್ಲ ನಿನ್ನ ಕೃತಿ ಊಟ ಕೂಟವೆಲ್ಲ ನಿನ್ನ ರತಿ ಹರಿ ಕೋಟಿ ಕೋಟಿ ಕಲ್ಪ ನಿನ್ನ ಸ್ಮøತಿ 4 ಕುಂದು ನಿಂದೆಯಲ್ಲ ನಿನ್ನ ಜಪವು ಹರಿ ಬಂದ ಬಂಧವೆಲ್ಲ ನಿನ್ನ ತಪವು ಅಂದಿಗಿಂದಿಗು ನಿನ್ನ ನಾಮ ನೆನವು ಸ್ಥಿರ ವೊಂದೆ ಕೊಟ್ಟು ಶ್ರೀರಾಮ ಸಲಹು 5
--------------
ರಾಮದಾಸರು
ಎನ್ನಳವೆ ಯೋಗದಭ್ಯಾಸ ಹರಿಯೇ ಎನ್ನಕೈ ನೀ ಪಿಡಿಯದಿಹುದು ಸರಿಯೇ ಪ ದಿವ್ಯಯೋಗದ ಬಗೆಯ ಪೇಳಿದೈ ಗೋಪಾಲ ಸವ್ಯಸಾಚಿಯ ಧನ್ಯನೆನಿಸಿದೈ ಶ್ರೀಲೋಲ ಭವ್ಯವಾದಾಕೃತಿಯ ತೋರ್ದೆ ಗೋಪಿಬಾಲಾ ಅವ್ಯಯಾನಂದ ಮಾಂಗಿರಿರಂಗ ವಿಠಲ 1 ನಿರ್ಮಮತೆಯೇ ಬೀಜ ಸರ್ವಸೇವೆಯೇ ಬೇರು ಕರ್ಮದೊಳಗುತ್ಸಾಹವಿರಲದೇ ಸುರಿನೀರು ಮರ್ಮವಿಲ್ಲದ ಹೃದಯವೈಶಾಲ್ಯವೇ ಕುಸುಮ ನಿರ್ಮಲತೆಯೇ ಫಲವು ಇದು ಕರ್ಮಯೋಗ 2 ಭಕ್ತಿಯೆಂಬುದೆ ಬೀಜ ಸಮ್ಮತಿಯೆ ತಾಬೇರು ಭಕ್ತಜನರ ಸೇವೆಯೇ ಮೇಲೆರೆವ ನೀರು ಏಕಾಗ್ರಚಿತ್ತವೇ ಸರಸಪರಿಮಳಪುಷ್ಪ ಮುಕ್ತಿಯೇ ಫಲಮಿದೆ ಭಕ್ತಿಯೋಗ3 ಆಸನವೇ ಬೀಜ ಪ್ರಾಣಾಯಾಮವೇ ಬೇರು ಆಸೆಯಿಂ ಗೈವ ದಿನಚರ್ಯೆಯೇ ನೀರು ಮಾಸದಿರುವಾರೋಗ್ಯ ಪುಷ್ಪತಾನೊಮ್ಮನಮೆ ಭಾಸಿಪಾ ಫಲಮಿದೆ ಹಟಯೋಗವಯ್ಯ 4 ಯಮನಿಯಮಗಳೆ ಬೀಜಧಾರಣವೆ ತಾಂಬೇರು ಕ್ರಮಮಾದಘ್ರಣಿದಾನ ಮೇಲೆರೆವ ನೀರು ವಿಮಲಮಾಗಿಹ ಧ್ಯಾನ ಪೂರ್ವಸಂಪ್ರಜ್ಞತಾ ಕ್ರಮಸಮಾಧಿಯೆ ಫಲವು ಇದು ರಾಜಯೋಗ 5 ವರವಿವೇಕ ಬೀಜ ವೈರಾಗ್ಯವೇ ಬೇರು ಗುರುಕರುಣಮೆಂಬುದೇ ಮೇಲೆರೆವ ನೀರು ಪರಬ್ರಹ್ಮ ಜ್ಞಾನವೇ ಪರಿಮಳಿಸುವ ಪುಷ್ಪ ವರಮೊಕ್ಷವೇ ಫಲವು ಇದು ಜ್ಞಾನಯೋಗ 6 ಯೋಗಮಾರ್ಗವ ತಿಳಿದು ಅನುಸಂಧಿಯಿಂ ಸಕಲ ತ್ಯಾಗ ಮಾಡುವ ನಿಯಮವೆನಗಸಾದ್ಯ ಆಗಾಗ ನಿನ್ನ ನಾಮಂಗಳನು ಪೇಳ್ವುದೇ ಯೋಗವೆಂದೆನಿಸುವ ಮಾಂಗಿರಿರಂಗ ನೀಲಾಂಗ 7
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಎಲ್ಲ ಲೀಲೆ ಇದೆಲ್ಲ ಲೀಲೆಎಲ್ಲ ಲೀಲೆ ರಂಗಗೆಲ್ಲ ಲೀಲೆ ಪ. ಪುಟ್ಟಿಸುವುದು ಮನವಿಟ್ಟು ಕಾವುದುದುಷ್ಟರ ಶಿಕ್ಷೆ ಅಲ್ಲಿ ವಿಶಿಷ್ಟರ ರಕ್ಷೆ1 ನೀರೊಳುಲ್ಲಾಸ ಮತ್ತಾರಣ್ಯವಾಸಹಾರುವರಾಟ ತನ್ನ ನಾರಿಯ ಬೇಟ 2 ಗೊಲ್ಲರಾಕೃತಿ ಬತ್ತಲೆಯ ಸ್ಥಿತಿಬಲ್ಲಿದ ದೈವ ಕಲಿಯ ಗೆಲ್ಲುವ ಭಾಗ 3 ವರನಿಪ್ಪುದು ಕರೆದರೆ ಬಪ್ಪುದುಧರೆಯಜಮ ಪರಿಪರಿಯ ಕರ್ಮ4 ಹೆಂಗಳಕೂಟ ಅಪಾಂಗದ ನೋಟ ಹಾಸ್ಯದಂಗದಿಂದೂಟ ರಣರಂಗದಿಂದೋಟ 5 ಅಂಬಿನ ವೇಧ ನಿನ ತುಂಬಿದ ಕ್ರೋಧ ತ್ರಿ-ಯಂಬಕ ಪೂಜೆ ತ್ರಿವಿಡಂಬನವೋಜೆ6 ಕರ್ತುಮಾಕರ್ತು ಮತ್ತನ್ಯಥಾಕರ್ತು ಎಂಬಶಕ್ತಿದೇವಗೆ ಬಲುಯುಕ್ತಿ ಇವಗೆ7 ನಾವೆಕರ್ತವ್ಯಂ ಸುಪ್ರವೆ ವಕ್ತವ್ಯಂಏಸು ಮಹಿಮೆಗೆ ಕೃತಕೃತ್ಯ ನಮಗೆ 8 ಪ್ರಿಯಮೋದನ ದೈತ್ಯೇಯಭೇದನಹಯವದನ ನಿನ್ನರ್ಥಿ ಕಾಯಿದನ9
--------------
ವಾದಿರಾಜ
ಏಕಮೇವಾ | ಅದ್ವಿತೀಯನೆ ಪಾಹಿ | ಏಕಮೇವ ಪ ಏಕಮೇವ ತ್ರೈಲೋಕ ಜನಕ ಕರುಣಾಕರ ಹರಿಯೇ ಅ.ಪ. ಮಾನ್ಯ ಮಾನದ | ನಾನ್ಯಪ ಹರಿ ಸತ್‍ಶೂನ್ಯಾಭಿಧ ಸರಿ | ವಾಣ್ಯಾದಿಯ ಹರ 1 ಭವ ಸುರ | ಕರಣಶಕ್ತಿ ಹರ 2 ಉದರದೊಳಗೆ ಜಗ | ಹುದುಗಿಸಿ ಸರ್ವವಅದುಭುತ ತಮದಲಿ | ವಿಧಿಸಿದ ಹರಿಯೇ 3 ಪ್ರಲಯೋದಧಿ ಶಯ | ಚೆಲುವ ಬಾಲ ಬಲ್‍ಒಲವಿನಿಂದ ಪದ ಬೆ | ರಳನೆ ಸವಿದಾ 4 ಸೃಷ್ಟಿಗೊಡೆಯ ಲಯ | ಅಷ್ಟ ಭಾಗವಿರೆಚೇಷ್ಟಿಸಿ ದುರ್ಗೆಯ | ಹೃಷ್ಟಳ ಮಾಡಿದೆ 5 ಕರ್ಮ ತವಕೃತ್ಯವನಂತವು | ಭೃತ್ಯರ ಸುದತರು 6 ಕಮಲಾರಮಣನೆ | ಕಮಲಜಾದಿ ನುತನಿಮಿಷೋನ್ಮಿಕರ | ಸುಮನಸಕಪ್ಪುದೆ 7 ದುರ್ಗೆ ತುತಿಸೆ | ಕರ್ಗತ್ಲೆ ಕುಡಿದು ನಿಜಸರ್ಗಕೆಣಿಸಿದೇ | ದುರ್ಗಮ ಮಹಿಮ 8 ಮುಕ್ತರೊಡನೆ ಸೇ | ವ್ರ್ಯಕ್ತಿಗಳಲಿ ಅಭಿವ್ಯಕ್ತನು ಲೀಲಾ | ಸಕ್ತ ಸುಪುರುಷಾ 9 ಗೂಹಿಸಿ ಸರ್ವವ | ವ್ಯೂಹ ಚತುರಕೆಮೋಹಿಸಿ ಪುಮಜನ | ಬಾಹಿರ ತೆಗೆದ 10 ಪತಿ ತಾ ಸರ | ಸ್ವತಿ ಭಾರತಿ ಎಂಬಸುತೆಯರ ಪಡೆದು | ಸುತರೊಡನೈರಸಿದ12 ಪುಮಜಗೆ ಪ್ರಕೃತಿಯಿಂ | ಸುಮನಸ ಶೇಷನುಕ್ರಮದಿ ಸೂತ್ರನಿಂ ಜ | ನುಮವು ಕಾಲಿಗೆ 13 ಎರಡು ಒಂದು ತನು | ಹರನಿಗೆ ಬಂದವುಸರಸಿಜ ಸಂಭವ | ಮರುತೋರಗದಿಂ14 ಪತಿ ಸೇವೆಗೆ 15 ವಿಧ ವಿಧ ಜೀವರು | ಉದುಭವವಾದರುವಿಧಿ ಪಿತ ಮಹಿಮೆಯ | ಅದು ಭುತ ಕೇಳೀ 16 ಮುದದಿ ಇಟ್ಟ ತನ್ | ಉದರದೊಳೆಲ್ಲರಅದುಭುತ ಚರಿತ ಅನಿ | ರುದ್ಧ ಮೂರುತಿ 17 ಗುಣೋಪಾದಾನದಿ | ತನು ಸೂಕ್ಷ್ಮಗಳನುಅನಿರುದ್ಧನು ನಿ | ರ್ಮಾಣವ ಮಾಡಿದ 18 ಪರಿ ಬಹು ಲಿಂ | ಗೋಪ ಚಯಿವಗೈದಾಪರ ಬೊಮ್ಮನು | ಸ್ಥಾಪಿಸಿದನು ಜಗ 19 ಪದುಮ ಕಲ್ಪ ಮುನ್ | ಉದುಭವಿಸಿತು ಮತ್‍ತದನನು ಸಿತವರ | ಹದ ಕಲ್ಪೋದಯ 20 ಸರಸಿಜ ಭವನಿಂ | ವಿರಚಿಸಿದನು ಜಗವೈಡೇಳ್ಭುವನವು | ಭರಿತವು ಜೀವರಿಂ 21 ಈ ವಿಚಿತ್ರ ಸ | ರ್ಗಾವವ ತಿಳಿಯಲುಸೇವಿಸುವುದು ಸತ್ | ಕೋವಿದ ಜನಪದ 22 ಪಾವಮಾನಿ ನಿಜ | ಭಾವಕೆ ಸರಿಯಾಹಸೇವೆಗೊಲಿದ ಗುರು | ಗೋವಿಂದ ವಿಠ್ಠಲ 23
--------------
ಗುರುಗೋವಿಂದವಿಠಲರು
ಏಕೆ ಚಿಂತಿಪೆ ನೀ ಎಲೆ ಕೋತಿಮನವೆ ಪಾದ ಗಟ್ಟ್ಯಾಗಿ ನಂಬದಲೆ ಪ ಹಿತದ ಭಕ್ತನು ಎಂದು ಮತಿಹೀನ ಭಸ್ಮಗುರಿ ಹಸ್ತವರವಿತ್ತ್ಹರನು ಮತಿದಪ್ಪೋಡುತಿರೆ ಗತಿನೀನೆ ಹರಿಯೆನಲು ಅತಿದಯದಿಂ ಶಿವನ್ನುಳಿಸಿ ಕೃತ್ತಿಮನ್ನಳದ ಹರಿ ಪತಿತಮಹಾತ್ಮರಿಯೆ 1 ಘುಡುಘುಡಿಸಿ ಹಿರಣ್ಯನು ಜಡಮತಿ ಹರಿಯೆಲ್ಲಿ ಗಡ ತೋರೀ ಕಂಬದಿ ಎಂದಾರ್ಭಟಿಸಿ ಬರಸೆಳೆಯೆ ನಡುನಡುಗಿ ಪ್ರಹ್ಲಾದ ಜಡಜಾಕ್ಷ ಪೊರೆಯೆನಲು ಮೂಡಿ ಕಂಬದಿ ಖಳನ ಒಡಲ ಬಗೆದದ್ದರ್ಹಿಯೆ 2 ಕುರುಪನ ಸಭೆಯೊಳಗೆ ಮೊರೆಯಿಟ್ಟ ದ್ರೌಪದಿಗೆ ಕರುಣದಕ್ಷಯವಿತ್ತು ಪೊರೆದ ಪರಮಾತ್ಮ ಕರುಣಾಳು ಶ್ರೀರಾಮ ಚರಣದಾಸರ ನೆರ ಅರೆಘಳಿಗೆ ಬಿಟ್ಟಿರನು ನಿರುತ ನೀ ಸ್ಮರಿಸೋ 3
--------------
ರಾಮದಾಸರು
ಏಕೆ ದೂರುವಿರೇ ರಂಗಯ್ಯನಏಕೆ ದೂರುವಿರೇ ಪ ಸಾಕು ನಿಮ್ಮ ದೂರ ಬಲ್ಲೆನುಈ ಕುವರನಾಕೃತ್ಯ ಮಾಳ್ಪನೆಅ.ಪ. ದಟ್ಟಡಿಯಿಡಲರಿಯ ಗೋವತ್ಸವಬಿಟ್ಟು ಚಲಿಸಬಲ್ಲನೆಘಟ್ಟಿಯಾಗಿ ಗೊತ್ತಿನಲ್ಲಿಕಟ್ಟಿನೊಳು ಕಟ್ಟಿದ್ದ ಕರುಗಳಬಿಟ್ಟನೇ ಈ ಕೃಷ್ಣನ ಮೇ-ಲೆಷ್ಟು ಹೊಟ್ಟೆಕಿಚ್ಚೆ ನಿಮಗೆ 1 ಕೆನೆಹಾಲು ಬೆಣ್ಣೆಯನು ಇತ್ತರೆ ಆದಿನವೊಲ್ಲನು ಊಟವಮನೆಮನೆಗಳನು ಪೊಕ್ಕುಬೆಣ್ಣೆ ಪಾಲ್ಮೊಸರನ್ನು ತಿನ್ನುತವನಿತೆಯರ ಕೂಡಾಡಿದನೆಂ-ದೆನಲು ನಿಮಗೆ ನಾಚಿಕಿಲ್ಲವೆ 3
--------------
ಶ್ರೀಪಾದರಾಜರು
ಏನಂತ ನರನೆನ್ನಬೇಕೋ ಜಾನಕೀಶನ ಧ್ಯಾನ ಮನದೊಳಿಲ್ಲದವಗೆ ಪ ಸುಕೃತ ಒಡಗೂಡಿ ಮಾನವನಾದದ್ದು ಖೂನವಿನತಿಲ್ಲದೆ ಜ್ಞಾನಶೂನ್ಯನಾಗಿ ಶ್ವಾನನಂದದಿ ಕೂಗಿ ಹೀನಭವಕೆ ಬಿದ್ದು ನರಕಕ್ಹೋಗುವನಿಗೆ 1 ತಾನಾರೆಂಬ ವಿಚಾರವು ಇಲ್ಲದೆ ಏನೇನು ಸುಖವಿಲ್ಲದ್ಹೇಯಸಂಸಾರದ ಕಾನನದೊಳು ಬಿದ್ದು ಕುನ್ನಿಯಂದದಿ ಮಹ ಜಾಣರ ಜರೆಯುತ ಜವಗೀಡಾಗುವನಿಗೆ 2 ಹೇಸಿಪ್ರಪಂಚದ ವಾಸನ್ಹಿಡಿದು ಹಿಂದ ಕ್ಕೇಸೇಸು ಜನಮದಿ ಘಾಸಿಯಾದಂಥಾದ್ದು ಸೋಸಿಲಿಂ ತಿಳಕೊಂಡು ದಾಸಾನುದಾಸರ ದಾಸನಾಗದೆ ಕಾಲಪಾಶಕ್ಹೋಗುವನಿಗೆ 3 ಮಿಥ್ಯೆ ಕಾಣುವುದೆಲ್ಲ ನಿತ್ಯವಲ್ಲೆನ್ನುತ ಸತ್ಯವೃತ್ತಿ ತನ್ನ ಚಿತ್ತದೋಳ್ಬಲಿಸಲು ನಿತ್ಯ ಸುಖವನೀವ ಉತ್ತಮವಾದಂಥ ಹೊತ್ತನು ಕಳಕೊಂಡು ಮೃತ್ಯುವಶನಾಗುವಗೆ 4 ಸುಮನಸಕಲ್ಪದ್ರುಮ ತಂದೆ ಶ್ರೀರಾಮ ನಮಿತ ಚರಣ ಕಂಡು ನಮಿಸಿ ಪ್ರಾರಬ್ದವ ಕ್ರಮದಿ ಗೆಲಿದು ನಿಜ ವಿಮಲಪದ ಪಡೆವ ಸಮಯವನರಿಯದೆ ಯಮಲೋಕ ಸೇರುವಗೆ 5
--------------
ರಾಮದಾಸರು
ಏನಂತೆನ್ನಲಿ ಎನ್ನನುತಾಪ ನೀನಾದ್ದರಿಂದೆಂಬೆ ಗೈಯದೆ ಲೋಪ ಪ. ಕಣ್ಣೆದುರಾದ ಕಂದರ್ಪಲಾವಣ್ಯ ಸನ್ನುತ ಸಕಲ ಲೋಕೈಕಶರಣ್ಯ ಪುಣ್ಯಪುರುಷ ಸುಪ್ರಸನ್ನ ಕೇಳಮ್ಮ 1 ಕೆಂದಾವರೆಯಂತೆ ಚೆಂದುಳ್ಳ ಚರಣ ಸೌಂದರ್ಯಸಾರ ಪೀತಾಂಬರಾವರಣ ವಂದನೀಯ ಪೂರ್ಣಾನಂದ ಮುಕುಂದ ಸಂದೇಹವಿಲ್ಲ ತೋರಿದನು ಗೋವಿಂದ 2 ಶಂಕ ಚಕ್ರ ಗದಾ ಪಂಕಜಪಾಣಿ ಶಂಕರನುತ ಶ್ರೀವತ್ಸಾಂಕಿತ ಜನನಿ ಬಿಂಕದ ಕೌಸ್ತುಭಾಲಂಕೃತಗ್ರೀವ ವೆಂಕಟೇಶ ನಿಷ್ಕಳಂಕ ಕೇಳವ್ವ 3 ಚಂದ್ರಶತಾನನ ಕುಂದಸುಹಾಸ ಇಂದಿರಾ ಹೃದಯಾನಂದ ಪರೇಶ ಸುಂದರ ನಳಿನದಳಾಯತನಯನ ಮಂದರಧಾರ ಧರಾಧರಶಯನ 4 ಲಕ್ಷ್ಮೀನಾರಾಯಣ ಸುಕ್ಷೇಮಧಾಮ ಅಕ್ಷರಾರ್ಚಿತ ನೀಲನೀರದಶ್ಯಾಮ ಪಕ್ಷೀಂದ್ರವಾಹನ ಪಾವನಚರಿತ ಸಾಕ್ಷಿರೂಪ ಸಚ್ಚಿದಾನಂದಭರಿತ 5
--------------
ತುಪಾಕಿ ವೆಂಕಟರಮಣಾಚಾರ್ಯ
ಏನಂತೆನ್ನಲಿ ಎನ್ನನುತಾಪ ನೀನಾದ್ದರಿಂದೆಂಬೆ ಗೈಯದೆ ಲೋಪ ಪ. ಕಣ್ಣೆದುರಾದ ಕಂದರ್ಪಲಾವಣ್ಯ ಸನ್ನುತ ಸಕಲ ಲೋಕೈಕಶರಣ್ಯ ಪುಣ್ಯಪುರುಷ ಸುಪ್ರಸನ್ನ ಕೇಳಮ್ಮ 1 ಕೆಂದಾವರೆಯಂತೆ ಚೆಂದುಳ್ಳ ಚರಣ ಸೌಂದರ್ಯಸಾರ ಪೀತಾಂಬರಾವರಣ ವಂದನೀಯ ಪೂರ್ಣಾನಂದ ಮುಕುಂದ ಸಂದೇಹವಿಲ್ಲ ತೋರಿದನು ಗೋವಿಂದ 2 ಶಂಕ ಚಕ್ರ ಗದಾ ಪಂಕಜಪಾಣಿ ಶಂಕರನುತ ಶ್ರೀವತ್ಸಾಂಕಿತ ಜನನಿ ಬಿಂಕದ ಕೌಸ್ತುಭಾಲಂಕೃತಗ್ರೀವ ವೆಂಕಟೇಶ ನಿಷ್ಕಳಂಕ ಕೇಳವ್ವ 3 ಚಂದ್ರಶತಾನನ ಕುಂದಸುಹಾಸ ಇಂದಿರಾ ಹೃದಯಾನಂದ ಪರೇಶ ಸುಂದರ ನಳಿನದಳಾಯತನಯನ ಮಂದರಧಾರ ಧರಾಧರಶಯನ 4 ಲಕ್ಷ್ಮೀನಾರಾಯಣ ಸುಕ್ಷೇಮಧಾಮ ಅಕ್ಷರಾರ್ಚಿತ ನೀಲನೀರದಶ್ಯಾಮ ಪಕ್ಷೀಂದ್ರವಾಹನ ಪಾವನಚರಿತ ಸಾಕ್ಷಿರೂಪ ಸಚ್ಚಿದಾನಂದಭರಿತ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಏನಿದು ಚಿತ್ರ ಎಲೋ ಕಂಜನೇತ್ರ ಪ ದೀನನು ನಾನೆಂದು ದಿನ ದಿನ ಮೊರೆಯಿಡೆ ನೀನು ಮಾಡಿದ ಕರ್ಮವೆಂದು ತಪ್ಪಿಸಿಕೊಂಬ ಅ.ಪ ಮಾನಸದಲಿ ಸಾಕ್ಷಿಯಾಗಿ ನೀನಿಲ್ಲವೇ 1 ಯುಕುತಿ ಮಾತು ಇದಲ್ಲ ವೇದಶಾಸ್ತ್ರ ಪ್ರಮಾಣ2 ಸತ್ಯ ಸಂಕಲ್ಪನೆಂದು ಪೇಳುವರೆಲ್ಲರು ಭೃತ್ಯರ ಸಲಹದ ಪ್ರಭುತ್ವವೇತಕೆ ನಿನಗೆ 3 ದೇವ ನಿನ್ನ ಚಿತ್ತವೋ ಎನ್ನ ಪುರಾಕೃತವೋ 4 ಕರಣಾಭಿಮಾನಿಗಳಿಗೊಡೆಯ ನೀನಲ್ಲವೇ 5 ಭಾವ ಕೊಡುವುದಕೆ ಬಡತನವೆ ನಿನಗೆ 6 ನೀನೆ ಸರ್ವ ಸ್ವತಂತ್ರ ಗುರುರಾಮ ವಿಠಲ 7
--------------
ಗುರುರಾಮವಿಠಲ
ಏನಿದು ಮಹದಪರಾಧ ಮಾಡಿದೆ ನಾನು ನಿನ್ನವರನೆ ನಿಂದಿಸಿದೆ ತಿಳಿಯದಭವ ದೇವ ಪ ಜ್ಞಾನವಿಡಿದಿ ನೋಡದೆ ತುಸು ಏನುಕಾಣದೆ ನಾನಾಪರಿಯಲಿ ಶ್ವಾನನಂದದಿ ಚೀರುತ್ಹಾರುತ ಹೀನವಾಚಗಳ್ವಾಚಿಸಿದೆನೋ ಅ.ಪ ತತ್ತ್ವದರ್ಥಕರಾಗಿ ಗುಪ್ತದಿಂದಿರ್ವವರ ನರ್ತುನೋಡದೆ ಅನರ್ಥವಾಡಿದೆನೋ ಪ್ರಭೋ ಮತ್ರ್ಯಗುಣಗಳ ಮರ್ತುಬಿಡದೆ ನಿರ್ತಮಾನಿಸರ ಗುರ್ತುತಿಳಿಯದೆ ಕತ್ತೆಯಂತೊದರುತ್ತ ಸತ್ಯರ ಕೃತ್ತಿಮರೆಂದೆನುತ ಜರಿದೆ 1 ಮೀನು ಜಿಹ್ವೆಯ ರುಚಿಗಾ ಗೇನು ತಿಳಿಯದೆ ಪೋಗಿ ಗಾಣ ಸೆಳೆದುನುಂಗಿ ಪ್ರಾಣಕೊಟ್ಟಂತೆ ಹರಿಯೆ ಗಾನಲೋಲನ ಮನದೊಳಿಟ್ಟು ಧ್ಯಾನಿಪ ಕೋವಿದಸುಜನರ ಖೂನವಿಲ್ಲದೆ ಮನಕೆ ಬಂದಂತೆ ಕಾಣದಂಧಕನಂತೆ ಜರಿದೆ 2 ನಿನ್ನಿಂದೆ ನಾ ಬಂದೆ ನೀನೆನ್ನ ತಂದೆ ಮುಂ ದಿನ್ನಿಂಥ ದುರ್ಮತಿಯನ್ನು ಕೊಡದಿರೊ ರಂಗ ನಿನ್ನ ದಾಸರೊಳಿಟ್ಟು ಅನುದಿನ ಭಿನ್ನವಿಲ್ಲದೆ ರಕ್ಷಿಸಯ್ಯ ನಿನ್ನ ಚರಣದಾಸರ ನಾಮ ಪನ್ನಂಗಶಾಯಿ ವರ ಶ್ರೀರಾಮ 3
--------------
ರಾಮದಾಸರು
ಏನು ಭ್ರಮೆ ಮನುಜರಿಗೆ ಎಷ್ಟು ಮಮತೆ ಪ್ರಕೃತಿಯಲಿಮೀನು ಗಾಳವÀ ನುಂಗಿ ಮೋಸಹೋದ ತೆರನಂತೆ ಧ್ರುವ ಸತಿ ನನ್ನ ಸುತರೆಂದೆನಿಸಿಹೊನ್ನುಗಳ ಗಳಿಸಿ ಹೆಚ್ಚಾಗಿ ಹೋರ್ಯಾಡಿಸಣ್ಣವರ ಮದುವೆ ಸಂಭ್ರಮದಿ ಮಾಡುವೆನೆಂದುಅನ್ನ ಮೊದಲು ಕಾಣದೆ ಅಂತರ ಪಿಶಾಚಿಯಂತೆ 1 ಬಲುವೋದಿಕೆಯಲ್ಲಿ ಬಲ್ಲವರೆನಿಸಬೇಕೆನುತಹಲವು ಬುದ್ಧಿಯಲ್ಲಿ ಹಿರ್ರನೆ ಹಿಗ್ಗುತಮಲಿನ ಮನಸಿನಜ್ಞಾನದಲಿ ತಾನರಿಯದೆ 2 ಮಿಗಿಲು ಆಸೆಗೆ ಬಿದ್ದು ಬಗೆ ಬಗೆ ಹೂಣಿಕೆಯಲಿಹೊಗದಲ್ಲಿ ಹೊಗುವರು ಹೂ ಬಿಟ್ಟು ತಿಳಿಯರುಖಗವಾಹನ ಮುದ್ದು ರಂಗವಿಠಲನ ನಾಮ ಸ್ಮರಿಸಲುವಿಗಡ ಸಂಸಾರ ಹಗರಣ ನೀರಗುಳ್ಳೆಯಂತೆ3
--------------
ಶ್ರೀಪಾದರಾಜರು
ಏನು ಸುಕೃತದ ಫಲವೋ ಶ್ರೀನಿವಾಸನೆ ಹೇಳು ಹಾನಿಯಾಗಿಯೆ ಅವಮಾನ ತೋರುತಿದೆ ಪ ವಾಸುದೇವನೆ ಎನ್ನ ಈಸು ದಿನ ಪರಿಯಂತ ಬೇಸರಿಲ್ಲದೆ ಕಾಯ್ದೆ ಲೇಸ ಕರುಣಿಸಿದೆ ಈಸಾಡಿದೆನು ನಾನು ಈ ಗೃಹದೊಳೀಗೇನು- ದಾಸಿನವು ನಿನಗಾಯಿತು ಮೋಸ ಯೋಚಿಪರೆ 1 ಹಗಲುಗತ್ತಲೆಯಾಗಿ ಮೊಗವು ಕಾಣದೆ ಎನಗೆ ಜಗದುದರ ನಿನ್ನಾಣೆ ನಗೆಯಾಯ್ತು ಜಗಕೆ ಹಗಯ ಮಧ್ಯದಿ ಸಿಲುಕಿ ಮೃಗವು ಬಾಯ್ಬಿಟ್ಟಂತೆ ಮಿಗ ಕ್ಲೇಶಬಟ್ಟು ನರಮೃಗವು ತಾನಾದೆ 2 ಆರು ಹಿತವರು ಇಲ್ಲ ಧಾರುಣಿಯ ಬಲವಿಲ್ಲ ಪಾರಾಗಿ ನಾಚಿಕೆಯು ಬೇರೂರಿತು ಘೋರ ಅಡವಿಯೊಳಗೆ ಗಾರುಗತ್ತಲೆ ಸುತ್ತಿ ಮಾರಿದೆಯ ಚೋರರಿಗೆ ದಾರಿಗಾಣಿಸದೆ 3 ದೊರೆಯು ಮನ್ನಿಸಿ ಕೊಡಲು ನೆರೆಹೊರೆಯ ಕರೆಕರೆಯು ಹರದಿಯೊಳು ನಂಬಿಗೆಯು ಕಿರಿದಾಯಿತು ನೆರವಾಗಿ ತೋರುತಿದೆ ಬರಿಯ ವೃಕ್ಷದ ತೆರದಿ ಮರುಳು ಕಣ್ಣಿಗೆ ಇರುವೆ ಕರಿಯ ತೆರನಂತೆ 4 ಇನ್ನು ಬಂಧಿಸಬೇಡ ಎನ್ನಿಂದ ಅಳವಲ್ಲ ಬನ್ನಬಡುವುದು ಎಲ್ಲ ನಿನ್ನ ಮನಕರುಹು ಕರ್ಮ ಬೆನ್ನು ಬಿಡುವಂದದಲಿ ಪನ್ನಗಾದ್ರಿನಿವಾಸ ಪಾಲಿಸೈ ಲೇಸ 5 ದಾಸ ಬಳಲಿದನೆಂಬ ಹೇಸಿಕೆಯ ಮಾತುಗಳ ಕಾಸಕೊಟ್ಟೇಕೆ ನಿರಾಸೆ ಮಾಡುವಿಯೊ ಬೇಸರಾಗದೆ ಪಂಥವಾಸಿಯಿಲ್ಲವೆ ನಿನಗೆ ಸಾಸಿರಾಕ್ಷನೆ ಎನಗೆ ಲೇಸಿತ್ತು ಸಲಹೊ 6 ಪಡೆದ ತಂದೆಯು ನೀನೆ ಕೊಡುವ ಒಡೆಯನು ನೀನೆ ಕಡೆಗೆ ಕೈವಿಡಿದು ಎನ್ನ ರಕ್ಷಿಪನು ನೀನೆ ಮಡದಿ ಮಕ್ಕಳನೆಲ್ಲ ಬಿಡದೆ ಸಲಹುವ ನೀನೆ ಪೊಡವಿಗಧಿಪತಿಯಾದ ವರಾಹತಿಮ್ಮಪ್ಪ 7
--------------
ವರಹತಿಮ್ಮಪ್ಪ
ಏನು ಸುಕೃತವ ಮಾಡಿ ಜನಿಸಿದಳೊ ಯಶೋದೆ ದೀನಪಾಲಕ ನಿನ್ನ ಮಗನೆಂದು ಮನದಣಿಯೆ ಸೇವಿಪೆಳೊ ಪ. ಅನುದಿನ ಜಪತಪಾನುಷ್ಠಾನದಿಂದಿರುತಾ ಪಾದ ಸೇವಿಪ ಮುನಿಗಳಿಗೆ ದೊರೆಯುವ ವನಜನಾಭನೆ ನಿನ್ನ ವನರುಹಾನನ ನೋಡಿ ದಿನದಿನದಿ ಸುಖಿಸುವ ಘನ ಪುಣ್ಯ ಗಳಿಸಿದಳೋ 1 ದುಷ್ಟರನು ಸಂಹರಿಸಿ ಮೈ ಎಷ್ಟು ನೋವೊ ಎಂದು ದಿಟ್ಟೆ ಬಿಸಿನೀರೆರೆಯುವಳೊ ಇಷ್ಟ ಮೂರುತಿ ನಿನ್ನ ಶ್ರೇಷ್ಠತರ ಆಭರಣ ದಿಟ್ಟ ಕೃಷ್ಣ ನಿನಗಿಟ್ಟು ನೋಡುವಳೊ 2 ಕಸ್ತೂರಿ ತಿಲಕವನು ಶಿಸ್ತಿನಲಿ ಶೃಂಗರಿಸಿ ಕಸ್ತೂರಿರಂಗ ಶ್ರೀ ಶ್ರೀನಿವಾಸ ನಿನ್ನೆತ್ತಿ ತೊಡೆಯಲ್ಲಿ ಸ್ವಸ್ಥದೊಳು ಮಲಗೆಂದು ಪೊಂಬಟ್ಟಲೊಳು ಕ್ಷೀರವನು ಹಸ್ತಿವರದನೆ ಕುಡಿಯೆಂದು ಜೋಗುಳವ ಪಾಡುವಳೊ 3
--------------
ಸರಸ್ವತಿ ಬಾಯಿ
ಏನು ಸುಕೃತವ ಮಾಡಿದಳೊ ಯಶೋದೆಶ್ರೀನಿಧಿಯಾದ ಕೃಷ್ಣನ್ನ ಕರೆದು ಮುದ್ದಿಸುವಳಂತೆಪ ಗಂಗಾಜನಕನಿಗೆ ಗಡಿಗೆನೀರೆರೆವಳಂತೆಮಂಗಳಾಂಗಗೆ ಭಾಮೆ ಶೃಂಗರಿಸುವಳಂತೆತುಂಗ ಭೂಧರನ್ನ ತೊಟ್ಟಿಲೊಳು ತೂಗುವಳಂತೆಕಂಗಳಿಗಗೋಚರನ ಕರೆದಪ್ಪಿಕೊಂಬಳಂತೆ1 ನಗವನೆತ್ತಿದವನ ಮಗುವೆಂದೆತ್ತುವಳಂತೆನಿಗಮಗೋಚರನ ತಾ ನಿಟ್ಟಿಪಳಂತೆಅಗಣಿತ ಸತ್ವನ್ನ ಹಗ್ಗದಿ ಕಟ್ಟುವಳಂತೆಮಿಗೆ ನಿತ್ಯತೃಪ್ತಗೆ ಪಾಲನೆರೆವಳಂತೆ 2 ಬಹುಮುಖನಿಗೆ ಭಾಮೆ ಮುದ್ದುಕೊಡುವಳಂತೆಅಹಿತಲ್ಪನಿಗೆ ಹಾವತುಳಿದೀಯೆಂಬಳಂತೆಮಹಾದೈತ್ಯದಲ್ಲಣನಿಗೆ ಬಹು ಭಯವ ತೋರುವಳಂತೆಮಹಿಮ ನರಸಿಂಹಗೆ ಗುಮ್ಮನ ತೋರುವಳಂತೆ 3 ಚತುರ್ಮುಖಪಿತನ ಸುತನೆಂದೆತ್ತುವಳಂತೆಶ್ರುತಿವಿನುತಗೆ ಜೋಗುಳ ಪಾಡುವಳಂತೆಶತರವಿತೇಜಗಾರತಿಯನೆತ್ತುವಳಂತೆಗತಭೀತನಿಗೆ ಭಾಮೆ ರಕ್ಷೆಯಿಕ್ಕುವಳಂತೆ 4 ಕಡೆಗೋಲ ನೇಣ ಕೈಯಲಿ ಪಿಡಿದೊಲವಿಂದಪಡುಗಡಲತಡಿಯ ದ್ವಾರಕೆನಿಲಯಬಿಡದೆ ನೆಲೆಸಿದ ಹಯವದನ ಮುದ್ದುಉಡುಪಿನ ಕೃಷ್ಣನ ಉಡಿಯೊಳೆತ್ತುವಳಂತೆ5
--------------
ವಾದಿರಾಜ