ಒಟ್ಟು 726 ಕಡೆಗಳಲ್ಲಿ , 89 ದಾಸರು , 652 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಾಮರವನು ಹಾಕಿರೆ ಕೋಮಲಾಂಗಿಯರುಶ್ರೀ ಮಹಾಮಾರುತನ ಸ್ಮರಿಸುತ ನೀವೆಲ್ಲರು ಪ. ರಾಮ ನರಹರಿ ಕೃಷ್ಣ ಶ್ರೀಮಹಿಧರಗೆಇಹ ಆಲದೆಲೆಯ ಮೇಲಿದ್ದು ಕ್ರೀಡಿಪಗೆ ಅ.ಪ. ಗೋಪಿ ಪುತ್ರಗೆ ನೀವು 1 ರಾಮ ಕುಳಿತಿರುವ ನಿಜ ಕಾಮಿನಿಯ ಸಹಿತಶ್ರೀ ಮಹೀ ಸಹಿತ ಭೂಮಿಧರನುತಾತಾಮಸರ ನಯನ ಮುನಿ ಕಾಮಿನಿವರ ಪ್ರೀತಶ್ರೀಮಲಸಹಾರ ಸಿರಿಧಾಮ ವಿಖ್ಯಾತ 2 ಸುಂದರಾಂಗಿಯರು ತ್ವರದಿಂದ ಪಾಡುತಲಿಮಂದಾಕಿನಿಯರ ಪ್ರಮುಖರಿಂದ ಸರತಿಗಳೇಮಂದಹಾಸ್ಯಗಳ ಮುಖದಿಂದ ನೋಡುತಲಿಇಂದಿರೇಶನ ಹತ್ತಿರ ಹೊಂದಿ ನಿಲ್ಲುತ್ತಲೆ3
--------------
ಇಂದಿರೇಶರು
ಚಿಂತಯಾಮಿ ತ್ವಾಮದ್ಯಾಹಂ ಚಿಂತಯಾಮ್ಯಹಂ ಚಿಂತಿತಾರ್ಥದಂ ಭಜತಾಂ ಚಿಂತಾಮಣಿಂ ಚಿಂತಾಪಹಂ ಪ ಭಾನುನಿಭ ನಖರಾಜಂ ಜ್ಞಾನಾಶ್ರಯಪಾದಾಂಭೋಜಂ ದೀನಜನ ಭಯೋದ್ವೇಜಂ ಜಾನೂರು ಸುರುಚಿ ಭಾಜಂ 1 ಹೇಮಾಂಬರ ವಿರಾಜಿತಂ ಹೇಮಸೂತ್ರ ಸುಶೋಭಿತಂ ವ್ಯೋಮಾಲಯ ಪಾದಯುಕ್ತಂ ಕೋಮಲ ಶ್ಯಾಮಾಂಗ ದ್ಯುತಿಂ 2 ಇಂದಿರಾಶ್ರಿತ ವಕ್ಷಸಂ ಗಂಧಹಾರಮಣಿಭಾಸಂ ಮಂದರಮಾಲಾವತಂಸಂ ಕಂದರ್ಪಕೋಟಿ ವರ್ಚಸಂ 3 ಚಕ್ರಾದ್ಯಾಯುಧ ಭ್ರಾಜಿತಂ ನಕ್ರಕುಂಡಲ ಶೋಭಿತಂ ಶಕ್ರಾನನಂ ಸುವಿಸ್ಮಿತಂ ವಕ್ರಾಳಕ ತತಿ ತತಂ 4 ಕಸ್ತೂರೀ ತಿಲಕ ಫಾಲಂ ವಿಸ್ತøತಮೌಳಿ ಭಾಜಾಲಂಪ್ರಸ್ತುತ ವೆಂಕಟಶೈಲಂ ಸುಸ್ಥಿತ ಕೀರ್ತಿವಿಶಾಲಂ 5
--------------
ತಿಮ್ಮಪ್ಪದಾಸರು
ಚಿಂತಾಮಣಿ ನಾರಸಿಂಹ ಪ ಪಾಹಿ ಕರುಣಾಸಾಗರ ಶ್ರೀಹರಿಯೆ ಅ.ಪ ಯೋಗಿ ನೀ ಗಣಗಳ ಕೊಂದು ನಾಗಭೂಷಣನಿಗೊಲಿದಂಥ ರಾಗದಿ ದೋಷವಿದೂರರ ರಾಗದಿಂದಲಿ ಪಾಲಿಸುತಿರುವೆ ದೊರೆಯೆ 1 ಕೋಲಾವತಾರದ ಹರಿಯ ದಿವ್ಯ ಲೋಲ ನೇತ್ರದಿ ಬಂದ ನದಿಯ ಮಾಲಾದಿ ಭೂಷಿತನಿರುವಿ 2 ಶೂಲಿಗೊಲಿದೆ ಪಾತಾಳದಲ್ಲಿ ಚೆಲ್ವ ರಾಜೇಶಮುಖ ಹರಿಯೇ ನಿನ್ನ ಬಲ್ಲಿದ ಜನರಿಗೆ ಸುಲಭ 3
--------------
ವಿಶ್ವೇಂದ್ರತೀರ್ಥ
ಚಿಂತಾಮಣಿಗಮಿತ ಚಿಂತಾಮಣಿ ಚಿಂತಲವಾಡಿ ಶ್ರೀ ನೃಸಿಂಹಸ್ವಾಮಿ ಪ ಕಂತುಪಿತ ಕೊಟ್ಟರುವ ಸಾಮಥ್ರ್ಯದಿಂದಲೇ ಐಹಿಕ ವಸ್ತುವೀವುದು ಅನಂತ ಶ್ರೀಪತಿ ಚಿಂತಲವಾಡಿ ಕರುಣಿ ಸ್ವ - ತಂತ್ರನು ಇಹಪರದಿ ಐಶ್ವರ್ಯವ 1 ಕಾಕುಮನ ವಾಕ್ಕಾಯ ಶುದ್ಧ ಮಾಡುವ ದೇವಿ ಶ್ರೀ ಕಾವೇರಿ ತೀರದಲಿ ಕುಳಿತು ಸರ್ವ ಭಕುತರಿಗೆ ವರವೀವ ಶ್ರೀಕಾಂತ ನರಸಿಂಹ ಸುಖಜ್ಞಾನಮಯ ದೋಷದೂರ ಗುಣನಿಧಿಯು 2 ಮಮಕಾರ ಅಹಂಕಾರ ಡಂಭತನವನು ಬಿಟ್ಟು ಮಮಸ್ವಾಮಿ ಸರ್ವರಿಗೂ ಪರಮೈಕಸ್ವಾಮಿಯು ಸುಮನಸಾರ್ಚಿತ ಕುಸುಮಸಂಭವನ ತಾತನು ರಮಾಪತಿ ಪ್ರಸನ್ನ ಶ್ರೀನಿವಾಸ ನಮೋ ಎನ್ನಿ 3
--------------
ಪ್ರಸನ್ನ ಶ್ರೀನಿವಾಸದಾಸರು
ಚಿಂತಿಸು ಮನವೆ ಶ್ರೀಹರಿಯ ನಿ- ಶ್ಚಿಂತೆಯೊಳಗೆ ಪುಲಿಗಿರಿದೊರೆಯ ಪ ಮಾರ ಚತುರ್ಮುಖರಿಗೆ ಪಿತನ ನಾರದ ಶರ್ವ ಪಿತಾಮಹನ ಮದ ವಾರಣಮುಖ ಪ್ರಪಿತಾಮಹನ 1 ನಿಜಶಿರದಿ ಕೀರಿಟವನಿರಿಸಿಹನ ನಿಜಕರುಣದಿ ಭಕ್ತರಿಗೊಲಿದಿಹನ 2 ಮಾಲೆಯ ಕೊರಳೊಳು ಪೊತ್ತಿಹನ ಬಾಲಕ ಸುಕೃತಾನುಗ್ರಹನ ನಿಜ ಲೀಲೆಯೊಳಾಸುರ ನಿಗ್ರಹನ 3 ಅಂಗಜನಿಭ ಸುಂದರನ ಸುರ ಗಂಗೆಯ ಪಡೆದ ಪಾದಾಂಬುಜನ ತುಂಗ ವಿಹಂಗಮ ರಂಗಮನ ಶುಭ ಮಂಗಳ ಗುಣಗಣ ಸಂಗತನ 4 ಸರಸಜಸನ್ನಿಭಲೋಚನನ ನಿಜ ಶರಣರ ಭವಭಯ ಮೋಚನನ ವರದ ವಿಠಲ ವರದಾಯಕನ 5
--------------
ವೆಂಕಟವರದಾರ್ಯರು
ಚಿಂತೆ ಪರಿಹರ ಮಾಡೋ ಎನ್ನಯ್ಯ ಸಜ್ಜನರ ಪ್ರಿಯ ಪ ಚಿಂತೆ ಪರಿಹರ ಮಾಡೊ ಎನ್ನಯ ಚಿಂತೆ ಪರಿಹರ ಮಾಡಿ ಎನ್ನ ಅಂತರಂಗದಿ ನಿಮ್ಮ ನಿರ್ಮ ಲಂತ:ಕರುಣದ ಚರಣವಿರಿಸಿ ಸಂತಸದಿ ಪೊರೆ ಸಂತರೊಡೆಯ ಅ.ಪ ನಿಮ್ಮ ಪಾದವ ನಂಬಿಕೊಂಡಿರುವ ಈ ಬಡವನನ್ನು ಕಮ್ಮಿ ದೃಷ್ಟಿಯಿಂ ನೋಡದಿರು ದೇವ ನಿನ್ನ ಬಿಟ್ಟೆನ ಗ್ಹಿಮ್ಮತನ್ಯರದಿಲ್ಲ ಜಗಜೀವ ಭಜಕಜನ ಕಾವ ಮೂಡಿಮುಳುಗುತಿಹ್ಯದೈ ಸಮ್ಮತದಿ ಸಲಹೆನ್ನ ದಯಾನಿಧಿ ಬ್ರಹ್ಮಬ್ರಹ್ಮಾದಿಗಳ ವಂದ್ಯನೇ 1 ಆರುಮೂರರಿಕ್ಕಟ್ಟಿನೊಳು ಗೆಲಿಸೋ ಘನಪಿಂಡಾಕಾರ ಆರು ಎರಡರ ಸಂಗ ತಪ್ಪಿಸೋ ಮಹಬಂಧ ಬಡಿಪ ಘೋರ ಸಪ್ತಶರಧಿ ದಾಂಟಿಸೋ ತವದಾಸನೆನಿಸೊ ಗಾರುಮಾಡಿ ಕೊಲ್ಲುತಿರ್ಪ ದೂರಮಾಡೆನ್ನ ದುರಿತದುರ್ಗುಣ ಸೇರಿಸು ತ್ವರ ದಾಸಸಂಗದಿ ನಾರಸಿಂಹ ನಾರದವಿನುತ 2 ಪಾಮರತ್ವ ತಾಮಸವ ಬಿಡಿಸೋ ವಿಷಯಲಂಪಟ ಪ್ರೇಮ ಮೋಹ ಕಾಮ ಖಂಡ್ರಿಸೋ ಹರಲಿರುಳು ನಿಮ್ಮ ಭಜನಾನಂದ ಕರುಣಿಸೊ ಸುಚಿಂತದಿರಿಸೊ ಕಾಮಿತಜನಕಾಮಪೂರಿತ ನಾಮರೂಪರಹಿತಮಹಿಮ ಸ್ವಾಮಿ ಅಮಿತಲೀಲ ವರ ಶ್ರೀರಾಮ ಪ್ರಭು ತ್ರಿಜಗದ ಮೋಹ 3
--------------
ರಾಮದಾಸರು
ಚಿತ್ತಜನೈಯ ಮಿತ್ರೆರಾಡಿದ ಉತ್ರಮನಸಿಗೆ ತಂದನು ಅವರ ಉತ್ರ ಮನಸಿಗೆ ತಂದನು ಮಿತ್ರೆ ದ್ರೌಪತಿ ಸುಭದ್ರೆ ಮುಯ್ಯವಇವತ್ತೆ ತಿರುಗಿಸಿರೆಂದನು ಪ. ಧನ್ಯ ಭಕ್ತರ ಮನೆಗ್ಹೋಗುವ ಎನ್ನ ಸನ್ಮತವೆಂದನುಮುನ್ನ ಆಲಶ್ಯವÀ ಮಾಡದೆಹೊನ್ನ ರಥ ಹೊರಗಿನ್ನು ಇಡಿಸೆಂದ1 ಕುಂತಿ ಮಕ್ಕಳು ಸಂತೋಷಿಸುವುದು ಎಂಥ ಹರುಷವಿದೆಂದನು ಎನಗ ಕಾಂತೆಯರೇರುವ ಕುದುರೆ ರಥಗಳು ಚಿಂತಾಮಣಿ ತಾ ಪಂಥವ ಗೆಲಿಸೆಂದ2 ಕಾತಿಲೆ ಐವರು ನೀತಿ ನೋಡಲು ಪ್ರೀತನಾಗುವೆÉನೆಂದನು ಭೂತಳದಿ ಕುಂತಿ ಜಾತರನ ನೋಡೋ ಆತುರದಿಒಂದೂ ಮಾತು ಸೊಗಸದು 3 ಮಾನಿನಿ 4 ಮೋದ ಸೂಸುತ 5
--------------
ಗಲಗಲಿಅವ್ವನವರು
ಚ್ಚಂದಿರವದನೆ ಶಾರದೆ ಪ ಇಂದೀವರಾಕ್ಷಿ ಶತಾನಂದನ ಪ್ರಿಯೆ ದೇವಿ ಕುಂದು ನೋಡದೆ ಶ್ರುತಿವಂದೆ ಜ್ಞಾನವ ನೀಡೆ ಅ.ಪ. ಸಿತಾಬ್ಜಾಸನೆ ಸುಖದಾಯಕಿ ಸುರ ನಾಥಾರಾಧಿತೆ ವಿಶ್ವನಾಯಕೀ ವೀತದುರಿತೆ ಶಿವ ಮಾತೆ ಸದ್ಗುಣಮಣಿ ವಾಗ್ದೇವಿ ಮಾತೆ 1 ಕೋಕಿಲವಾಣಿ ಕವಿಸೇವಿತೆ ಎನ್ನ ವಾಕು ಲಾಲಿಸೆ ಮನಿವಂದಿತೆ ತೋಕನೆಂದು ಸುವಿವೇಕ ಬುದ್ಧಿಯನಿತ್ತು ವಾಕು ಮನ್ನಿಸು ತಾಯೆ 2 ಪಾತಕಿಗಳೊಡನಾಡಿ ನಾ ನಿನ್ನ ಪೋತಾಬ್ಜಪದ ಭಜಿಸದ್ಹೋದೆ ನಾ ಪಾತಕವೆಣಿಸದೆ ಸೀತಾರಮಣ ಜಗ ನ್ನಾಥವಿಠ್ಠಲನಘ್ರಿ ಗೀತಾಮೃತವನುಣಿಸು 3
--------------
ಜಗನ್ನಾಥದಾಸರು
ಜಗದಾದಿವಂದ್ಯನಿಗೆ ಶರಣುಪ ಪನ್ನಗಾನಗದೊಡೆಯ ಶರಣು 1 ತವಪದನಖಾಗ್ರಕೆ ಶರಣು2 ಮೂಡಲಾಗಿರಿಗೆ ಶರಣು ಗಿರಿಯ ಅಡಿದಾವರೆಗಳಿಗೆ ಶರಣು3 ನಡೆರ್ವಡಿಗಳಿಗೆ ಶರಣು4 ಮೆಟ್ಟು ಮೆಟ್ಟಲಿಗೆ ಶರಣು ಮನಮುಟ್ಟ ಮೆಟ್ಟಲೇರುತಿಹ ನಿನ್ನಿಷ್ಟ ಭಕ್ತರಿಗೆ ಶರಣು 5 ತನುಕಷ್ಟ ಹರಿಸಿ ಮನತುಷ್ಟಿಯನು ತೋರ್ವ ಬೆಟ್ಟದಂದಕ್ಕೆಲ್ಲ ಶರಣು 6 ಪರಿವಾರಕ್ಕೆಲ್ಲ ಶರಣು7 ಸ್ವರಶಬ್ದವಾಚ್ಯತವ ಶರಣು 8 ಚೆಲ್ವ ಗಾಳಿಗೋಪುರ ದ್ವಾರಕ್ಕೆ ಶರಣು 9 ಲೀಲೆಯಿಂದಲಿ ನಿನ್ನನೋಲೈಪ ಭಕ್ತರ ಪಾದಪಲ್ಲವಂಗಳಿಗೆ ಶರಣು 10 ಗೋವಿಂದ ಸಚ್ಚಿದಾನಂದ ಮುಕುಂದನೆಂದು- ಚ್ಚರಿಪ ಭಕ್ತರಿಗೆ ಶರಣು11 ಹರಿ ಹರೀ ಹರಿ ಎಂದು ಹರಿದಾರಿ ಪಿಡಿದ ವರ ಅಡಿದಾವರೆಗಳಿಗೆ ಶರಣು 12 ಪರಿಪರಿ ಭಾಧೆಯಿಂ ತರಳನ್ನ ಕಾಯ್ದ ಶ್ರೀ ನರಹರಿಯ ಚರಣಾರವಿಂದಕ್ಕೆ ಶರಣು 13 ತಿರುದಾರಿ ಮೊಣಕಾಲ ಮುರಿಗೆ ಶರಣು 14 ಭಕ್ತರಾಪತ್ತಳಿವ ಶಕ್ತಿಸಂಪತ್ತೀವ ಉತ್ತಮೋತ್ತಮ ಭಕ್ತರಾ ಮಂಟಪಕ್ಕೆ ಶರಣು 15 ಭಕ್ತಿಯಿಂದಲಿ ಸಪ್ತಗಿರಿಯ ದಾಟಿದ ಹರಿ- ಭಕ್ತಜನಸಂದೋಹಗಳಿಗೆ ಶರಣು 16 ಭಕ್ತರುಧ್ಧರಿಸಲು ನಿಂದ ಸಮೀರನಿಗೆ ಶರಣು17 ಜೀವರಿವರೆನ್ನುವರು ದರುಶನವನೀಯೆಂದು ಕ- ರವ ಮುಗಿದು ಹರಿಯ ಸ್ತುತಿಸುವಗೆ ಶರಣು 18 ಪಾವನಾ ಮೂರ್ತಿಯನು ಮಾನಸದಿ ಧೇನಿಸಲು ಭಾವಶುಧ್ದಿಯನೀವ ಜೀವೇಶನಿಗೆ ಶರಣು 19 ಸಚ್ಚಿದಾನಂದಾತ್ಮ ಶ್ರೀ ಮುಕುಂದನ ದಿವ್ಯ ಅರಮನೆಯ ಮಹಾದ್ವಾರಕ್ಕೆ ಶರಣು 20 ಸಿರಿ ಅವ್ಯಾಕೃತಾಕಾಶಾವರಣಕ್ಕೆ ಶರಣು 21 ತೀರ್ಥಮಹಿಮೋಪೇತ ಸ್ವಾಮಿಪುಷ್ಕರಣೀ- ತಟವಿರಾಜಿತ ಅಶ್ವತ್ಥವೃಕ್ಷರಾಜನಿಗೆ ಶರಣು22 ಭೂದೇವಿಯಾರಮಣ ಆದಿಭೂವರಹ ಮೂರ್ತಿಯ ಶ್ರೀಪಾದಯುಗ್ಮಕ್ಕೆ ಶರಣು 23 ಬ್ರಹ್ಮಾಂಡದೊಡೆಯನ ದಿವ್ಯ ನಿಲಯದೊಳಿರುವ ಬಹಿರಾವರಣಕ್ಕೆ ಶರಣು 24 ಸರ್ವಗುಣಸಂಪೂರ್ಣ ವೈಕುಂಠಮಂದಿರನ ಸ್ವರ್ಣಮಯ ಸುಪರ್ಣಸ್ಥಂಭಕ್ಕೆ ಶರಣು 25 ಗಮನ ನಿರ್ಗಮನವುಳ್ಳ ಸುಮನಸರ ಭಕ್ತಜನಸಂಘಕ್ಕೆ ಶರಣು26 ಅಂತರಾವರಣಕ್ಕೆ ಶರಣು 27 ಕಾಂಚನರೂಪ ಸುವರ್ಣಮುಖರೀನದಿ ವಿ- ರಾಜಿತ ತೊಟ್ಟಿತೀರ್ಥ ಸಮಸ್ತ ತೀರ್ಥಗಳಿಗೆ ಶರಣು 28 ಸುಮನಸರು ಹೃನ್ಮನದಿ ಧೇನಿಸುವ ಕಾಂಚನ ವಿಮಾನದಲಿ ಬೆಳಗುತಿಹ ಶ್ರೀ ಶ್ರೀನಿವಾಸನಿಗೆ ಶರಣು 29 ಭೂಗಿರಿಯ ಸೇರಿದ ಶ್ರೀಹರಿಗೆ ಶರಣು 30 ವಾರಿಯೊಳಗ್ಯೋಲಾಡಿ ಶ್ರೀಶೈಲದೊಳು ನಿಂ- ತ ಶ್ರೀಲೋ¯ನಾಗಿರ್ಪಗೆ ಶರಣು31 ಶೇಷ್ಠನೆನಿಸಿದ ದಿಟ್ಟ ಮೂರುತಿಗೆ ಶರಣು 32 ಧರೆಯ ಕೆದರೀ ಬಂದು ಗಿರಿಯ ವರಹನ ಬೇಡಿ ಮರುಳುಮಾಡಿದ ಮಾಯಾರಮಣನಿಗೆ ಶರಣು 33 ತರಳರೂಪವ ಕೆಡಿಸಿ ಗಿರಿಯ ಹುದರಯೊಳಡಗಿ ಸುರಜೇಷ್ಠನೆಂದೀಗ ಪೂಜೆ ಗೊಂಬುವಗೆ ಶರಣು 34 ವಟಪತ್ರಶಾಯಿ ನೀ ವಟುವಾಗಿ ಬೇಡಿ ಭ- ವಾಟವಿಯ ದಾಟಿಸಲು ನಿಂದವಗೆ ಶರಣು 35 ಪೆತ್ತಮಾತೆಯ ಹರಿಸಿ ಮೆತ್ತನಿಲ್ಲಿಗೆ ಬಂದು ಉತ್ತಮಾಗತಿಪ್ರದ ಸರ್ವೋತ್ತಮಗೆ ಶರಣು 36 ಕ್ಷಿತಿಸುತೆಯ ಮಾತನು ಹಿತದಿ ಪಾಲಿಸೆ ವೇದ- ವತಿಯ ಪತಿಯಾಗಿ ನಿಂದವಗೆ ಶರಣು 37 ಗುಟ್ಟಾಗಿ ಪಾಲ್ಕುಡಿದು ಪೆಟ್ಟಿನಾ ನೆಪದಲ್ಲಿ ದೃಷ್ಟಿಗೋಚರನಾದ ಬೆಟ್ಟದೊಡೆಯನಿಗೆ ಶರಣು38 ಉತ್ತಮಾಸ್ತ್ರೀಯರಿಗೆ ನಾಚಿ ಬತ್ತಲೆಯಾಗಿ ಹುತ್ತದೊಳು ಅಡಗಿಯೆ ಮೆರೆದವಗೆ ಶರಣು 39 ಸಿರಿಯ ಹಯವನು ಮಾಡಿ ಚರಿಸಿ ಹರಿಸಿಕೊಂಡವನಿಗೆ ಶರಣು 40 ಹಿರಣ್ಯಗರ್ಭನ ಜನಕ ಸನ್ಮಹಿಯ ಸನ್ನಿಧಿಯ ಕನಕಮಯಕವಾಟಕ್ಕೆ ಶರಣು 41 ತಟಿಕ್ಕೋಟಿನಿಭ ಪೂರ್ಣ ಸಂಪೂರ್ಣ ಲಕ್ಷಣ ಸನ್ಮಾಂಗಳಾ ಸುಂದರ ಮೂರ್ತೇ ತವ ಶರಣು42 ಮುಕ್ತಾಮುಕ್ತಗಣ ವಂದಿತಾ ತವ ಶರಣು43 ನಂದಸುನಂದನ ಜಯವಿಜಯಾದಿ ಪಾ- ಸಂಸೇವ್ಯಮಾನ ತವ ಶರಣು44 ಸರ್ವಾಂಗುಳ್ಳಂಗುಷ್ಠದಳ ವಿಲಸಿತ ಸತ್ ಪಾದ- ಪಂಕಜ ಧ್ವಜ ವಜ್ರಾಂಕುಶಾದಿ ಸುಚಿಹ್ನ ಚಿಹ್ನಿತ ತವ ಶರಣು 45 ಗುಲ್ಫಾರುಣನಖ ಧೃತಾ ದೀಧಿತಿಯುಕ್ತ ತವ ಶರಣು 46 ಬೃಹತ್ ಕಟಿತಟಶ್ರೋಣಿ ಕರಭೋರು ದ್ವಯಾನಿಶ್ರ ತವ ಶರಣು 47 ವೈಜಯಂತಿ ವನಮಾಲ ತವ ಶರಣು 48 ಪ್ರಲಯ ಪೀವರಭುಜ ತುಂಗಂಶೋರಸ್ಥ ಲಾಶ್ರಯ ತವ ಶರಣು 49 ನ್ವಿತ ತವ ಶರಣು50 ಚಾರುಪ್ರಸನ್ನವದನ ಮಂದಹಾಸ ನಿರೀಕ್ಷಣ ಸು- ಭದ್ರನಾಸ ಚಾರುಸುಕರ್ಣ ಸುಕಪೋಲಅರುಣ ತವ ಶರಣು 51 ಸಹಸ್ರ ಫÀಣಶಿರೋಮಣಿಪ್ರಭಾನ್ವಿತ ಶೇಷಶೈಲಸ್ಥ ಶಾಂತ ಪದ್ಮಪತ್ರಾಯತೇಕ್ಷಣ ತವ ಶರಣು 52 ಅನಂತವೇದೋಕ್ತ ಮಹಿಮೋಪೇತ ಸರ್ವಸ್ವರವರ್ಣ ಸರ್ವಶಬ್ದವಾಚ್ಯ ಪ್ರತಿಪಾದ್ಯ ಶರಣು 53 ಸಚ್ಚಿದಾನಂದಾತ್ಮ ಸರ್ವಸುಗುಣೋಪೇತ ಸರ್ವ ಹೃತ್ಕಮಲಸ್ಥಿತ ತವ ಶರಣು 54 ಅಣುತ್ರ್ಯಣು ತೃಟಿಲವ ಕ್ಷಣಾದಿಕಾಲ ಮಹ- ತ್ಕಾಲಾತ್ಮಕ ನಿತ್ಯನಿರ್ಮಲಮೂರ್ತೇ ತವ ಶರಣು 55 ಪರ ಮೇಷ್ಟಿವಂದಿತ ತವ ಶರಣು 56 ತೈಜಸ ಪ್ರಾಜ್ಞ ತುರ್ಯಾ ದ್ಯಷ್ಟರೂಪಾತ್ಮಕ ತವ ಶರಣು57 ಕಂಸಾರಿ ಮುರಾರಿ ಶ್ರೀಹರಿಯೆ ಶರಣು58 ಭವರೋಗಭೇಷಜ ಭಕ್ತಜನಬಂಧೋ ಮುಚುಕುಂದವರದ ಗೋವಿಂದ ಶರಣು 59 ಮುಕ್ತಾಮುಕ್ತಾಶ್ರಯ ಭಕ್ತಜನಸಂರಕ್ಷಣಾ ವ್ಯಕ್ತಾವ್ಯಕ್ತ ಮಹಿಮ ತವ ಶರಣು 60 ತತ್ತದಾಕಾರ ಜಗದಾಪ್ತ ಶರಣು 61 ಚೇತನಾಚೇತನ ವಿಲಕ್ಷಣ ಸ್ವಗತಭೇದವಿವ- ರ್ಜಿತ ಪತಿತಪಾವನಮೂರ್ತೇ ತವ ಶರಣು 62 ಕ್ಷರಾಕ್ಷರ ಪರುಷಪೂಜಿತ ಪಾದ ಪುರಾಣಪುರುಷೋತ್ತಮನೆ ಶರಣು 63 ರವಿಕೋಟಿಕಿರಣ ರತ್ನಕನಕಮಯ ಮುಕು- ಟಾನ್ವಿತ ತವಶಿರಸ್ಸಿಗೇ ತವ ಶರಣು 64 ಸುಂದರಾನಂದ ಆನನಕೆ ಶರಣು 65 ಶ್ರೀಲೋಲ ಶರಣು 66 ಪೂವಿಲ್ಲನಾ ಬಿಲ್ಲ ಪೋಲ್ವ ಹುಬ್ಬು ಕಂಜ - ದಳದೋಲ್ ಚಂಪಕಾಮುಗುಳಿಗೆಣೆನಾಸಿಕಕೆ ಶರಣು 67 ಮಕರ ಕರ್ಣಕುಂಡಲಾನ್ವಿತ ತವ ಕರ್ಣಕ್ಕೆ ಶರಣು 68
--------------
ಉರಗಾದ್ರಿವಾಸವಿಠಲದಾಸರು
ಜಗನ್ನಾಥದಾಸರು ರಕ್ಷಿಸೋ-ಗುರುವರ-ರಕ್ಷಿಸೋ ಪ ಈಕ್ಷಿಸೊ ಕರುಣ ಕಟಾಕ್ಷದಲಿನ್ನ ಶಿಕ್ಷಿಸು ಮಧ್ವಾಗಮವ ಮುನ್ನ ಉಕ್ಕಿಸು ಭಕ್ತಿ ವಿರಕ್ತಿ ಚೆನ್ನ | ಆಹ ಲಕ್ಷ್ಮೀಕಾಂತನ ಅಪರೋಕ್ಷದಲಿ ಕಂಡು ಪ್ರ- ತ್ಯಕ್ಷ ಔತಣ ಉಂಡ ದಕ್ಷ ಶ್ರೀ ಜಗನಾಥ ವಿಠಲನ ದೂತ ಅ.ಪ. ನರಸಿಂಹದಾಸರ ಕುವರಾ-ಧರಿಸಿದೆ ಶ್ರೀನಿವಾಸನಪೆಸರ ವರಕವಿತಾ ಹುಟ್ಟಿನ ಸಾರ-ಮೆರೆಯಿತು ಕೀರ್ತಿ ಅಪಾರ \ಆಹ ವರದೇಂದ್ರನ್ನ ಅಶುಕವಿತಿಯಲಿಪೊಗಳಿ ವರಶಿಷ್ಯನಾಗುತ ಮೂರೊಂದು ಶಾಸ್ತ್ರದಿ ಕಡುಹುಲಿ ಎನಿಸಿದೆ 1 ನ್ಯಾಯಶಾಸ್ತ್ರದಿ ಜಗಜ್ಜಟ್ಟೀ-ವೇದಾಂತರಸಗಳ ಭಟ್ಟಿ ಮಾಯಾವಶಿರ ಮೆಟ್ಟಿ-ಅಹಂಕಾರ ಶಿರದಲಿಟ್ಟಿ ಆಹ ಶ್ರೇಷ್ಠವಿಜಯದಾಸರು ಮನೆ ಮುಟ್ಟಿ ಕರೆದರು ನಿನ್ನ ಬಹು ಬಹು ಕಂಗೆಟ್ಟೀ ಬತ 2 ಹೋಯಿತು ಕಳೆಮುಖದಿಂದ ಕಚ್ಚಿತು ಭರದಿಂದ ಆಹ ಭರದಿ ಹರಿಯ ಕರುಣ ಜರುಗಿ ಪೋದುದಕಂಡು ಕೊರಗಿ ಕೊರಗುತ ಕ್ಷೇತ್ರ ತಿರುಗುತ ಕೊನೆಗೆ ಗುರು ರಾಘವೇಂದ್ರರ ಪುರವ ಸೇರುತ ಬಹಳ ಕಾಯ ದೆರಗಿ ಸೇವೆಯಗೈದೆ 3 ಕರುಣಾಮಯನು ಸ್ವಪ್ನದಿ ಗುರುವು- ಗುರು ದ್ರೋಹ ಕಾರಣ ವರುಹಿ ಸುರಿಸಿ ಆಶೀರ್ವಾದವ ಶಿರದಿ- ತೆರಳೆಂದ ವಿಜಯದಾಸರ ಬಳಿ ಆಹ ತೆರೆದು ಕಂಗಳು ಒಡನೆ ತರಿದು ಮದಮಾತ್ಸರ್ಯ ಕರೆದು ಕುಡಿಯುತ ಶಿಷ್ಯ- ವರನು ಎನಿಸುತ ಚರಣಸಾರುವ ಬಿಡದೆ ಗೋಪಾಲದಾಸರ 4 ಸ್ವಗುರುಭಾವವತಿಳಿದು ತನ್ನಾಯುವನೆ ಇತ್ತ ಆಹ ಕೊಂಡು ಆಯುರ್ದಾನ ತೊಂಡನೆಂದಡಿಗೆರಗಿ ಕೊಂಡು ಶ್ರೀಹರಿದಾಸ ಗಂಡುದೀಕ್ಷೆಯ ಒಡನೆ ತಾಂಡವಾಡುತ ಪೋಗಿ ಪಾಂಡುರಂಗನ ಪುರದಿ ಮಂಡೆ ಮುಳುಗಿಸೆ ನದಿಲಿ ಕಂಡೆ ಅಂಕಿತ ಶಿರದಿ 5 ಪಂಡಿತನಾನೆಂಬ ಹೆಮ್ಮೆ ಬರಿ-ಪುಂಡತನವಲ್ಲದೆ ಹರಿಯ ನಿಜ ನಿನ್ನ ಚರಿತೆ ಆಹ ತಂಡತಂಡದ ಕವನ ದಂಡೆ ಹಾರಲು ಹರಿಗೆ ಕೊಂಡು ಔಡಣ ನಡಿಸೆ ಉಂಡು ಸಂತಸದಿಂದ ತುಂಡುಗೈಯುವ ಭವವ ಕಂಡೆ ನಾಕವ ಭುವಿಲಿ 6 ದೇಶದೇಶಗಳ ಸಂಚರಿಸಿ-ಹೇಸಿ ಮತಗಳ ನಿರಾಕರಿಸಿ ಪೊರೆದೆ ಹರೆಸಿ ಆಹ ಭಾಷಾದ್ವಯ ಯೋಜನೆ ಮೀಸಲು ನಿನಗೆಂಬೆ ವ್ಯಾಸ ರಾಜಾದಿಗಳ ಆಶೆಯಂದದದಿ ತತ್ವ- ರಾಶಿ ತುಂಬುತ ಗ್ರಂಥರಾಜ ರಚಿಸುತ ಜಗಕೆ ತೋಷ ತಂದಿತ್ತಿಯೊ ದಾಸಜನರುಲ್ಲಾಸ 7 ಶ್ರೀಮದ್ಧರಿಕಥಾಮೃತಸಾರ-ನೇಮ ದಿಂದೋದುವನೆ ಧೀರ ತಾಮಸರಿಗಿದು ಬಹಳದೂರ- ನೀಮಾಡಿದೆ ಮಹೋಪಕಾರ ಆಹ ಕಾಮವರ್ಜಿತವಾಗಿ ಪ್ರೇಮದಿ ನರಹರಿಯ ಭಾಮಸಹ ಸಂತತ ನೇಮದಿಂ ಧ್ಯಾನಿಸುತ ನಿತ್ಯ ಸಕಲೇಂದ್ರಿಯ ವ್ಯಾಪಾರ ಧೂಮಕೇತುವು ಎನಿಸುತ ನಮ್ಮಘಕಾನನಕೆ 8 ಪ್ರಾಣೇಶ ಕರ್ಜಗಿ ದಾಸಾರ್ಯರವೃಂದ- ನೀನಾಗಿ ಪೂರೆದಂತೆ ಘನ ಅಭಿಮಾನದಿಂದ ದೀನರೆಮ್ಮಯವೃಂದ ಕಾಯೆಂಬೆ ಮುದದಿಂದ- ತಾಣ ನಿಮ್ಮದೆ ನಮಗೆ ದಾಸಪಂಥ ಸ್ತಂಭ ಆಹ ಕೃಷ್ಣಾಗ್ರಜ ಶಲ್ಯ ಸಹ್ಲಾದ ಮತ್ತಾ ಪುರಂದರ ದಾಸಾತ್ಮಜನೀನಂತೆ ದೀನಜನೋದ್ಧಾರಗೈಯ್ಯೆ ಮುಂದೇಳುಬಾರಿ ಜನ್ಮಯೆತ್ತು ವಿಯಂತೆ ಶರಣು ಕರುಣಾಮಯ 9 ಕನ್ನಡಕೆ ಮುಳ್ಳು ಕುವರ ನೀಮುದ್ದು ಆಹ ಶರ್ಕರಾಕ್ಷಸಗೋಸ್ಥ ಅನುಸಂಧಾನ ಕ್ರಮ ಸು ನೀಕವಡಗಿಸಿ ಕವನ ಕಡಲೊಳು ಸಾಕಿಹೆ ಹರಿ ಭಕ್ತಸಂಘವ ಹಿರಿಯ ದಾಸರ ಪಥವನನುಸರಿಸಿ ಶಕ್ತನಾವನು ಗುಣಿಸೆ ನಿನ್ನುಪಕಾರ ಜಗಕೆ 10 ಸಣ್ಣವನು ನಾ ನಿನ್ನು ಗುರುವೇ-ನಿನ್ನವ ಸತ್ಯ ಮನ್ಮನ ಪ್ರಭುವೆ ಮನ್ನಿಸಪರಾಧ ಕಲ್ಪ ಧ್ರುಮವೆ-ಚಿಣ್ಣರ ಸಲಹೆ ಪಿತಗೆ ಶ್ರಮವೆ ಆಹ ಘನ್ನ ಜಯತೀರ್ಥ ವಾಯ್ವಂತರ್ಗತ ಶ್ರೀ ಕೃಷ್ಣವಿಠಲ ತದ್ವನನೆಂದು ಭಜಿಸುವ ಭಾಗ್ಯ ಜನ್ಮಜನ್ಮಂತರ ಕೊಟ್ಟು ಕಾಪಾಡುವಂಥ ನಿನ್ನಭಯಕರವೆನ್ನ ಶಿರದಲಿಡುವಲಿ ಸತತ 11
--------------
ಕೃಷ್ಣವಿಠಲದಾಸರು
ಜನ್ಯಧರ ದೂರ್ವಾಸ ಪ್ರಮುಖ ಮುನಿ ಸ ನ್ಮಾನ ಕರುಣಿ ವಿಲಾಸ ಶ್ರೀ ಶ್ರೀನಿವಾಸ ಪ ಎನ್ನವಗುಣ ಸಹಸ್ರವೆಣಿಸದೆ ನಿನ್ನವರೊಳಗೆಣಿಸಿ ಅನುದಿನ ಮನ್ಮನಾಲಯದೊಳು ನೆಲಸು ಮೈ ಗಣ್ಣನನುಜ ವರಾಭಯ ಶ್ರೀಕರ ಅ.ಪ. ಕಾಮಿತಪ್ರದಕೋಲಾ ಅಂಜನಾಧಿರÀ ಧಾರ ಧಾಮ ಭೂಮಿ ವಿಲೋಲಾ ಶಂಖಣನೃಪವರದ ಹೇಮ ಲೋಚನ ಕಾಲಾ ದ್ವಿಜ ಮಹಿಳೆಯುಳುಹಿದ ಶಾಮಲಾಂಗ ಸುಶೀಲಾ ವೆಂಕಟ ಕುಲಾಲ ಭೀಮಗೊಲಿದ ಮಹಾಮಹಿಮನೆ ಪಿ ತಾಮಹನ ನಾಸೋದ್ಭವನೆ ವಿಯ ಜಾಮಾತ ಕಟಿಸು ತ್ರಾಮಸುತಸೂತ ಪ್ರಮೋದಾಸು ಧಾಮ ಸೌಖ್ಯ ಪ್ರದವರಾಹ ತ್ರಯೀಮಯನೆ ಪ್ರಣತಾರ್ತಿಹರ ಬಲ ಸದನ ಸಹಸ್ರನಾಮ ಸಾಮಜಪತಿ ಪೋಷಕ ರಿಪುವನ ಧೂಮಧ್ವಜ ವಿಧಿಭ ಸೇವಿತ ವ್ಯೋಮಾಳಕಸಖ ಸರ್ವಜ್ಞರ ಮಾಮನೋಹರ ಮನ್ನಿಪುದೆಮ್ಮ 1 ದೀನಜನ ಮಂದಾರ ದೇವಕಿಸುತ ಜಗ ತ್ರಾಣ ಗುಣ ಗಂಭೀರ ಪೃಥ್ವೀಶ ತೋಂಡ ಮಾನವರದ ಉದಾರ ಲುಬ್ದಕನ ವಿಷ್ವ ವೈನತೇಯ ವರೂಥ ಖಳ ಸ್ವ ರ್ಭಾನುವಿನ ತಲೆಗಡಿದು ರವಿಶಶಿ ಕವಿ ಶನಿಗಳ ಶ್ರೇಣಿಯಲಿ ಮಾನಿಗಳ ಮಾಡ್ಡ ಮ ಕಲಿಮಲಾಪಹಾರಿ ಕೃ ಶಾನುಸಖ ಸಂಪೂಜ್ಯ ಸುಮನಸ ಧೇನು ಶರಣ ಜನರ್ಗೆ ಸಂತತ ಆ ನಮಿಸುವೆ ನಳಿನಜಪಿತ ನಿ ನಿರವದ್ಯ ನಿರುಜ ಬ್ರ ಹ್ಮಾಣಿ ಸುರನಿಕರ ನಿಲಯನುಸಂ ಧಾನಕೆ ಕೊಡು ಬಹುವಿಧಕರ್ಮ 2 ಸೇವ್ಯ ದಾರವಿಂದ ಮಹಂತಾ ಸತ್ವಾದಿ ತ್ರಿಗುಣವಿ ದೂರ ದಿತಿಜ ಕೃತಾಂತಾ ಗುಣರೂಪ ಪಾರಾ ವಾರ ವಿಗತಾದ್ಯಂತಾ ಶ್ರೀ ಭೂಮಿಕಾಂತಾ ಕಮಠ ವರಹ ಕ ಕಶಿಪು ವಿದಾರಣನೆ ಭಾ ಗೀರಥಿಯ ಪದನಖದಿಪಡದಂಗಾರ ವರ್ಣನೆ ಭೃಗುಕುಲೋದ್ಭವ ವಾರಿನಿಧಿಬಂಧನ ವನೌಕಸ ವಾರ ಪೋಷಕ ನಂದಗೋಪ ಕು ಮಾರ ತ್ರಿಪುರ ವಿದೂರ ತುರಗವನೇರಿದ ಜಗನ್ನಾಥವಿಠಲ ಸಾರುವೆ ತವÀ ಪದಪಂಕಜ ಜಂ ಭವ ಭಯ ತಾರಕ ನಿನ್ನವರೊಳು ತತ್ವ ವಿಚಾರಕೊಡು ಚಿರಕಾಲದಲಿ 3
--------------
ಜಗನ್ನಾಥದಾಸರು
ಜಂಭಾರಿಸುತ ಅಭವ ಪ ಪುರಹರ ಸಾಂಬ ತ್ರಿಯಂಬಕ ಶಂಬಕಾರಿ ರಿಪುಗಂಭೀರ ಕರುಣಿ ಅ. ಪ. ಭಸಿತ ಭೂಷಿತ ಶರೀರ-ಭಕ್ತರುದ್ಧಾರ ವಿಷಕಂಠ ದುರಿತಹರ ಪಶುಪತಿ ಫಣಿಹಾರ-ಪಾವನಕಾರ ನೊಸಲನಯನ ವಿಕಸಿತಾಂಬುಜ ಮುಖ ಶಶಿಧರ ಮತ್ತರಕ್ಕಸ ಮದ ಮರ್ದನ ಘಸಣೆಗೊಳಿಪ ತಾಮಸವ ಕಳೆದು ಮಾ- ಬಿಸಜ ಪಾದವ ತೋರೊ 1 ರಜತ ಪರ್ವತ ನಿವಾಸ ನಿರ್ಮಲ ಭಾಸ ಗಜವೈದ್ಯನಾಶ ಗಿರೀಶ ಸುಜನರ ಮನೋವಿಲಾಸ ವ್ಯೋಮಕೇಶ ತ್ರಿಜಗದಲ್ಲಣ ಗೌರೀಶ ಅಜಸುತನಧ್ವರ ಭಜನೆಯ ಕೆಡಸಿದೆ ಅಜಗರ ಮಂದಿ ಗಜಮುಖ ಜನಕನೆ ಗಜಗಮನ ಮುನಿ ತನುಜನ ಕಾಯ್ದನೆ ವಜ್ರಮುನಿ ವಂದಿತ ಭಜಿಸುವೆ ನಿನ್ನ2 ಮಧರಾಪುರಿ ನಿಲಯ ಮೃತ್ಯುಂಜಯ ಸದಮಲ ಸುಮನಗೇಯ ಸದಾ ನಮಿಪರ ಹೃದಯದೊಳಗುಳ್ಳ ಭಯ- ಸದೆಯುತ್ತ ಕೊಡು ಅಭಯ ಜಾಹ್ನವಿ ಧರಕೃತ ಮಾರಾ ನದೀತೀರದಿ ವಾಸವಾಗಿಪ್ಪ ಸೌಂದರ್ಯ ಮಧುಪುರಿ ವಿಜಯವಿಠ್ಠಲನ ಪದಾಬ್ಜಕೆ ಮಧುಪನೆನಿಪ ಪಂಚವದನ ಕೈಲಾಸ 3
--------------
ವಿಜಯದಾಸ
ಜಯ ಜಯ ಭೀಮಶ್ಯಾಮಾ ಜಯ ಸತ್ಯಾವರ ಪ್ರೇಮಾ ಜಯ ಕೃಷ್ಣಾಗತ ಕಾಮಾ ಜಯ ಪುಣ್ಯನಾಮಾ ಪ. ಪಂಚಬಾಣನ ಜನಕ ಪಾಂಚಾಲೆಯನು ಕರೆದು ಪಂಚ ಮೂರುತಿಗರಿಸಿನವ ಹಚ್ಚೆನಲೂ ಪಂಚರತ್ನಗಳಿಂದ ಮಿಂಚುತ ಭಾವಿ ವಿ- ರಿಂಚಿಯ ಕಡೆಗಾಗಿ ನಡೆತಂದಳಾಗ 1 ಅಣಿಮಾದಿ ಗುಣ ಚಿಂತಾಮಣಿಯ ಹತ್ತಿರೆ ಬಂದು ಮಣಿದು ಪಾದಕೆ ನಾರಿಮಣಿ ನಸುನಗುತಾ ಝಣಝಣವೆನಿಪ ಕಂಕಣ ಶೋಭಿತದಿಂದ ಪುನುಗಿನೆಣ್ಣೆಯ ಕೂಡಿದರಿಶಿಣ ಹಚ್ಚಿದಳು 2 ಕ್ಷತ್ರಿಯ ಗಣ ಶಿರೋರತ್ನನಾಗಿರುವಿ ಸ- ರ್ವತ್ರ ವ್ಯಾಪಕ ಫಾಲನೇತ್ರ ವಂದಿತನೆ ಕೃತ್ರಿಮ ದ್ವಿಜ ಭಿಕ್ಷಾ ಪಾತ್ರ ಸಲ್ಲದು ಕಂಜ ಪತ್ರ ತೋರಿದರೆ ನಾನರಿಶಿಣ ಹಚ್ಚುವೆನು 3 ಖುಲ್ಲ ಬಕಗೆ ಭಂಡಿಯಲ್ಲಿ ತುಂಬಿದ ನಾನಾ ಪಲ್ಯ ಭಕ್ಷಗಳ ಮೇಲೆ ಚೆಲ್ಲಿದನ್ನವನು ಎಲ್ಲ ಉಂಡಸುರನ ನಿಲ್ಲದಂತೊರಸಿದ ಮಲ್ಲ ನಿನ್ನಯ ದಿವ್ಯ ಗಲ್ಲವ ತೋರೊ 4 ಅಂಗಸಂಗದಿ ಶತಶೃಂಗಗಿರಿಯನೊಡದ ಮಂಗಳಮೂರ್ತಿ ಮಾತಂಗ ವೈರಿಗಳ ಭಂಗಿಸಿ ಬಲುಹಿಂದ ರಂಗನರ್ತನ ಗೈವ ಶೃಂಗಾರ ಕರಗಳಿಗರಸಿನ ಹಚ್ಚುವೆನು 5 ಮುಂದೆ ಕೀಚಕಬಾಧೆಯಿಂದ ರಕ್ಷಿಸುವಿ ಸೌ ಗಂಧಿ ಕುಸುಮವನ್ನು ತಂದು ಮುಡಿಸುವಿ ಮಂದಮತಿಯ ಕುರುನಂದ ನರನು ಬೇಗ ಕೊಂದು ಮನ್ಮನಸಿಗಾನಂದ ಪಾಲಿಸುವಿ 6 ಕುಂಡಲೀ ಗಿರೀಶ ಬ್ರಹ್ಮಾಂಡ ನಾಯಕ ಹೃ- ನ್ಮಂಡಲದೊಳಗಿಟ್ಟುಕೊಂಡು ಸಂತಸದಿ ಚಂಡ ವೈರಿಗಳನ್ನು ಖಂಡಿಸಿ ಸುಖದಿಂದ ಶುಂಡಾಲ ಪುರವಾಳಿಕೊಂಡು ನೀನಿರುವಿ7
--------------
ತುಪಾಕಿ ವೆಂಕಟರಮಣಾಚಾರ್ಯ
ಜಯ ಜಯ ಮಂಗಳ ಮುನಿಜನ ಪಾಲ ಜಯ ಜಯ ಸ್ವಾಮಿ ಸದ್ಗುರು ಕೃಪಾಲ ಧ್ರುವ ತೇಜ:ಪುಂಜವು ನಿಮ್ಮ ಘನಸುಖಸಾಂಧ್ರ ರಾಜ ತೇಜೋನಿಧಿ ರಾಜ ರಾಜೇಂದ್ರ ಸುಜನರ ಹೃದಯ ಸುಜ್ಞಾನ ಸಮುದ್ರ ಅಜಸುರವಂದ್ಯ ಶ್ರೀ ದೇವದೇವೇಂದ್ರ 1 ಪತಿತ ಪಾವನ ಪೂರ್ಣ ಅತಿಶಯಾನಂದ ಯತಿ ಮುನಿಗಳಿಗೆ ನೀ ದೋರುವೆ ಚಂದ ಪಿತಾಮಹನ ಪಿತನಹುದೊ ಮುಕುಂದ ಸತತ ಸುಪಥದಾಯಕ ನೀ ಗೋವಿಂದ 2 ದೇಶಿಕರಿಗೆ ದೇವ ನಿಮ್ಮ ಸ್ವಭಾವ ಋಷಿ ಮುನಿಗಳಿಗೆ ನೀ ಜೀವಕೆ ಜೀವ ದಾಸ ಮಹಿಪತಿಗೇನಹುದೊ ಮನದೈವ ವಾಸುದೇವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಜಯ ಮೃತ್ಯುಂಜಯ ಜಗದಾಶ್ರಯ ಭಯಹರ ವಿಗತಾಮಯ ಶಿವ ಸದಯಪ. ಭಾಗವತೋತ್ತಮ ಭಾಸುರಕಾಯ ಭಾಗೀರಥೀಧರ ಭಗವತೀಪ್ರಿಯ1 ಅಗಜಾಲಿಂಗನ ಸುಗುಣನಿಕಾಯ ಮೃಗಧರಚೂಡ ಮುನಿಜನಗೇಯ2 ಲಕ್ಷ್ಮೀನಾರಾಯಣಪರಾಯಣ ರಕ್ಷಿಸು ತ್ರಿಜಗಾಧ್ಯಕ್ಷ ಸುಶ್ರೇಯ3
--------------
ತುಪಾಕಿ ವೆಂಕಟರಮಣಾಚಾರ್ಯ