ಒಟ್ಟು 580 ಕಡೆಗಳಲ್ಲಿ , 71 ದಾಸರು , 432 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೇವತಾಸ್ತುತಿ ಅಂಜಿಕೆ ಬರುತಾದವ್ವ ನಿನ್ನನು ನೋಡ ಲಂಜಿಕೆ ಬರುತಾದವ್ವ ಪ ಅಂಜಿಕೆ ಬರುತಿದೆ ಮಂಜುಳಾಂಗಿಯೆ ನಿನ್ನ ಮಂಜುಳ್ವಾಕ್ಯಕೆ ತಪಭಂಗವಾದದ್ದು ಕೇಳಿ ಅ.ಪ ಪತಿಗೆ ನೀ ಮೃತ್ಯುವಾದೆವ್ವ ಮತ್ತು ನೀನು ಸುತರಿಗೆ ಕಷ್ಟಕೊಟ್ಟೆವ್ವ ಸತಿಯಾಗಿ ತಮ್ಮಗೆ ಭಾವನ್ನ ಕೊಲ್ಲಿಸಿದಿ ಮತಿಗೇಡಿ ಅಣ್ಣನ ಸತ್ಯನಾಶನ ಗೈದಿ 1 ಶಾಪಕೊಡಿಸಿದೆವ್ವ ಪತಿಯಿಂದ ಶಾಪವ ಪಡಕೊಂಡೆವ್ವ ಶಾಪಕೊಡಿಸಿ ಮುಖ ಕಪ್ಪು ಮಾಡಿಟ್ಟೆವ್ವ ಬಸಿರು ಮಾಡಿಟ್ಟೆವ್ವ 2 ಪತಿಗೆ ವಂದಕಳಾದೆವ್ವ ಮೀರಿದ ತಾಯಿ ಪತಿ ಪ್ರೀತಿ ಕಳಕೊಂಡೆವ್ವ ಸುತನ ಕತ್ತಿಯಿಂದ ಕುತ್ತಿಗೆ ಕೊಯ್ಸಿಕೊಂಡು ಪತಿತಪಾವನಳಾಗಿ ಮತ್ತೆ ಮುಂದಕೆ ಬಂದಿ 3 ಗರಡಿಯ ಮನೆ ಹೊಕ್ಕೆವ್ವ ಪತಿಯಕೈಲೆ ದುರುಳನ್ನ ವಧಿಸಿದವ್ವ ಧುರಕೆ ನಿಲ್ಲನೆ ಮತ್ತೆ ಕುರುಪನ ಕುಲಮೂಲ ತರಿಸಿದಂಥ ಮಹಮರಗಿ ನೀನವ್ವ 4 ಮಾತ್ಯಾಗಿ ಪಡೆದ್ಹಡದವ್ವ ಮತ್ತು ನೀನು ಸತಿಯಾಗಿ ನಡೆದೆ ಅವ್ವ ರೀತಿ ತಿಳಿಯಿತು ನಿನ್ನದ್ಯಾತರ ಭೀತಿನ್ನು ದಾತ ಶ್ರೀರಾಮನ ಪ್ರೀತಿ ದಾಸರಿಗೆ 5
--------------
ರಾಮದಾಸರು
ದೇವತಾಸ್ತುತಿಗಳು ಅಂಧನೋ ನಾ ಬಲು ಅಂಧನೊ ಪ ಸುಂದರವಾದ ಹೃನ್ಮಂದಿರದಲಿ ನಿನ್ನಸುಂದರಮೂರ್ತಿಯ ಕಣ್ದೆರದು ಕಾಣದ ಅ.ಪ. ಕುಹಕ ಚಿಂತಿಸುವಅಹುದು ಸಜ್ಜನನೆಂದು ಬಹುಜನ ನುಡಿಯಲುಮಹಮೋದ ಮಡುವಿನೊಳ್ ಮಹದಜ್ಞನೆನಿಸಿದ 1 ವಿಷಮ ದುರ್ವಿಷಯಗಳಲಿ ಮನ ಹೊಗಿಸೀವಿಷವೆಂದು ತಿಳಿದು ವಿಷಯ ಸೇವಿಸೀಅಸಮ ಮಹಿಮ ನಮ್ಮ ಝಷಕೇತು ಜನಕನವಿಷಯಗಳ ಬಹು ವಿಷಯೀಕರಿಸಿದಂಥ 2 ಮಾನವ ನಾ3
--------------
ಗುರುಗೋವಿಂದವಿಠಲರು
ದೇವನಲ್ಲವೇನೋ ಸದ್ಗುರು ಮಹಾದೇವನಲ್ಲವೇನೋ | ಆದಿಯೋಳ್ ಸಿದ್ಧರು ಹೋದ ದಾರಿಯ | ತೋರಿ ಭೇದವ ಬಿಡಿಸಿದ ಮೂರುತಿ ಪ ನರಜನ್ಮದೊಳಗೆ ಬಂದು ನೀನು | ಪ್ರಪಂಚದ ಕಡಲು ಮಧ್ಯದಿ ನಿಂದು | ಅರಿತು ಮರೆತು ಒಮ್ಮೆ ಗುರುವೆಂದು ನೆನೆದರೆ | ಗುರುತಿಟ್ಟು ಅವರಿಗೆ ಪರತರ ತೋರುವ 1 ಆಶಾಪಾಶವ ಬಿಡಿಸಿ ಮಾಡಿದ | ದೋಷ ಭವಂಗಳ ಕರ್ಮವ ಕೆಡಿಸಿ | ನ್ಯಾಸ ಧ್ಯಾಸದಿ ಜಪ ಮಾಡೆ ಗುರು |ಬೋಧ ಪ್ರಕಾಶವ ತೋರಿದ ಈಶನು 2 ಭಕ್ತಿ ಜ್ಞಾನವ ಹಿಡಿದು ನಂಬಿದಗೆ | ಮುಕ್ತಿಯ ನಿಶ್ಚಯದಿ ಪಾಲಿಸುವ | ಕರ್ತೃ ಸದ್ಗುರು ಭವತಾರಕ ಧರೆಯಲಿ | ಪ್ರತ್ಯಕ್ಷವಾದಂಥ ಪರಬ್ರಹ್ಮರೂಪನು 3
--------------
ಭಾವತರಕರು
ದೇವಾ ಬಾರಯ್ಯಾ ವೈಭವದಿ ರಥವನೇರಿ ಸೇವಿಸುವೆನು ಮಧ್ಭಾವದಿ ನೆಲಸೆಂದು ಪಾವನ ಮಣಿಪುರ ಠಾವಿನೊಳಿಹ ಭೂದೇವ ವರ್ಯ ಸಂಶೇವಿತ ಕೇಶವ ಪ ದೇವಗಂಗೆಯಪೆತ್ತ ಪಾವನಗಾತ್ರಧ್ರುವ ಭೂವರೋÀಪಾಸಿತನಾಗಿ ಈ ವಸುಧಿಗೆ ಬಂದು ಪಾವಮಾನ ಶಾಸ್ತ್ರದಿ ಕೋವಿದಯತಿ ವರ ಶ್ರೀ ವಿದ್ಯಾನಿಧಿ ತೀರ್ಥ ಸೇವಿತ ಸಂಸ್ಥಾಪಿತ ಸೇವಕ ಜನ ಸಂಭಾವಿತ ಕಾಮಿತ ವೀವ ಕಾವ ಸದಶಾವತಾರ ನಮೋ ಶ್ರಿವಿರಂಚಿಮುಖ ದೇವನ ಮಿತ ಕಂಚೀವರದನೆ ಪೊರೆ ಶ್ರೀ ವರಕೇಶವ 1 ಕಡು ಶೋಭಿಸುವ ಬಿಳಿಗೊಡೆ ಚಾಮರಾದಿಗಳ ಪಿಡಿದು ಶೇವಿಪ ಜನರೆಡಬಲದಿ ಬರೆ ಸುರರು ಪಂಥsÀವಿಡಿದು ವೇದಪಠಣ ಬಿಡದೆ ಮಾಡುತ ಬರೆ ನುಡಿವ ವಾದ್ಯಗಳಿಂದ ಸಡಗರದಲಿ ದ್ವಿಜಮಡದಿಯರಾರುತಿ ಪಿಡಿದು ಬೆಳಗುತಿರೆ ಕಡು ವೈಭವದಲಿ ಅಡಿಗೆರಗುವೆ ಪಾಲ್ಗಡಲ ಶಯನ ಮೂ- ರಡಿ ರೂಪನೆ ಜಗದೊಡೆಯ ಕೇಶವ 2 ನಂದ ತೀರ್ಥರ ಮತ ಸಿಂಧುವಿಗೆ ಪೂರ್ಣ ಚಂದ್ರರೆನಿಪಯತೀಂದ್ರ ಸತ್ಯ ಪ್ರಮೋದ ರಿಂದ ಪೂಜಿತ ಪದ ದ್ವಂದ್ವ ಮಧ್ಯದೊಳಿಹ ಮಂದಾಕಿನಿಗೆ ಪಿತನೆಂದು ತೋರಿಸಿದಂಥ ಇಂದಿರೆಯರಸನೆ ಮಂದರಧರ ಗೋ ವಿಂದ ಪಾಹಿ ಮುಕುಂದನೆ ಬಾಬಾ- ರೆಂದು ಕರೆವ ದ್ವಿಜ ವೃಂದಮಧ್ಯದಲಿ ಶ್ಯಂದನ ವೇರಿದ ಸುಂದರ ಕೇಶವ 3 ಅಂಬುಜನಾಭನೆ ನಿತಂಬದಿ ಪೊಳೆವ ಪೀ- ತಾಂಬರ ಧೃತ ಶಾತಕುಂಭ ಮಕುಟವದ- ನಾಂಬೋಜವನು ತೋರೋಕುಂಭೀನಸ ಪರಿಯಂಕ ಶಂಭ್ವಾದಿನಮಿತ ನೀಲಾಂಬುಧ ನಿಭಗಾತ್ರ ಕಂಬುಚಕ್ರಸುತ- ದಾಂಬುಜಧರ ಬಲು ಸಂಭ್ರಮದಲಿ ಮುನಿಕುಂಭಜ ಪೂಜಿತ ಕದಂಬ ದುರಿತ ಕಾದಂಬನಿ ಪವನ ಕೃ ಪಾಂಬುಧೆ ಕೇಶವ 4 ಗರುಡ ಮಾರುತರಿಂದ ಪರಶೇವಿತನೆ ಬಾರೊ ಶರಣು ಜನರ ಸುರತರುವೆ ಚನ್ನಕೇಶವ ಧರೆಯೊಳಧಿಕ ಮಣಿಪುರ ಪಂಡಿತಾಗ್ರಣಿ ಸನ್ನುತ ಸರಸಿಜಾಸನ ಪಿತ ಸಿರಿದೇವಿಯು ಈರೆರಡು ರೂಪದಲಿ ಕರದೊಳಗಾರುತಿ ವರಚಾಮರಗಳ ಧರಿಸಿ ಸಿರಿ ' ಕಾರ್ಪರ ನರಹರಿ ' ರೂಪನೆ ಮಾಂ ಪೊರೆವುದು ಕೇಶವ 5
--------------
ಕಾರ್ಪರ ನರಹರಿದಾಸರು
ದೇಶದೊಳಗೀ ಕ್ಷೇತ್ರ ಬಲು ಉತ್ತಮಾ ದಾಸೋಹಂ ಎಂದೆನಲು ಗತಿಗೆ ಪಥವ ಕೊಡುವ ಪ ಹರಿಸರ್ವೋತ್ತಮನೆಂದು ನೆರಪಿದಂಥ ಮುನಿ ವರನ ಶಾಪದಲಿ ಪಾವಕನು ಬಂದು ಪರಮತಪ ಮಾಡಿದನು ವರವಿತ್ತ ಪುಷ್ಕರಣಿ ಎನಿಸುವುದು1 ದಿವಿಜರಿಗೆ ಸೋತು ದಾನವರು ಶುಕ್ರಗೆ ಹೇಳಿ ಶಿವನೊಲಿಸೆ ಅಮೃತವ ಮಾಳ್ಪೆನೆಂದು ಕವಿ ಇಲ್ಲೆ ತಪಮಾಡೆ ಅಂದು ಸುರಧೇನು ವಾ ಸವನ ಕೈಕೊಳಲು ಶ್ರೀರಾಮನಿಂದಲಿಗತಿ 2 ರಾಯ ಋಷಿಗಾಧೇಯು ಬ್ರಹ್ಮತ್ವಗೋಸುಗ ಗಾಯತ್ರಿ ಒಲಿಸಿದನು ಈ ಸಿಲೆಯಲೀ ಆಯು ಉಳ್ಳದರೊಳಗೆ ಇಲ್ಲಿ ಕುಳಿತು ಬಂದು ಗಾಯತ್ರಿ ಮಂತ್ರವನು ಜಪಿಸೆ ನರನು ಮುಕ್ತಾ 3 ಅಗಸ್ತೀಶ್ವರವಿಡಿದು ರಾಮಲಿಂಗ ಪರಿಯಂತ ಬಗೆಬಗೆ ತೀರ್ಥ ಎರಡೊಂದು ಪದ್ಮ ಮಿಗೆ ಷೋಡಶಕೋಟಿ ಅರವತ್ತು ಸಾವಿರ ಸೊಗಸಾಗಿವಿಪ್ಪವಿಲ್ಲಿ ಕಾವೇರಿ ಮಧ್ಯದಲ್ಲಿ 4 ರಾಮನಾಥನ ಪುರವೆಂಬೊ ಪೆಸರೆ ಉಂಟು ವ್ಯೋಮಕೇಶನು ನಾಲ್ಕು ಹೆಸರಿನಿಂದಾ
--------------
ವಿಜಯದಾಸ
ದೇಹವ್ಯಾಕೆ ಇಂಥ ದೇಹವ್ಯಾಕೆ ಪ ಹರಿಯ ಪಾದಕೆರಗದಂಥ ಶಿರವು ಏಕೆ ಪರಮ ಪುರುಷನ ಪಾಡದಂಥ ವದನವ್ಯಾಕೆ 1 ಹರಿಯಸ್ಮರಣೆ ಕೇಳದಂಥ ಕರ್ಣವ್ಯಾಕೆ ಹರಿಯಮೂರ್ತಿನೋಡದಂಥ ಕಂಗಳ್ಯಾಕೆ 2 ಹರಿಯ ನಿರ್ಮಾಲ್ಯವಾಘ್ರಾಣಿಸದಂಥ ನಾಸವ್ಯಾಕೆ ಹರಿಯ ನೈವೇದ್ಯ ಭುಂಜಿಸದಂಥಾ ಉದರವ್ಯಾಕೆ 3 ಶರಣಜನರ ಚರಣ ತೊಳೆಯದ ಕರವು ಏಕೆ4 ಜಿಹ್ವೆ ಏಕೆ ಜಾಣರೆಲ್ಲರು ತಿಳಿದು ನೋಡಿ ಬದುಕಿ ಜೋ 5
--------------
ಬಾಗೇಪಲ್ಲಿ ಶೇಷದಾಸರು
ದ್ರೌಪದಿ ಸುಳಾದಿ ಪುರಂದರ ಗುರು ನಾಗೇಶಾವೇಶ ಗುರು ಶ್ರೀಪಾದ ರಾಯ ಗುರು ಯೋಗಿ ಟೀಕಾರ್ಯ ಗುರು ಶ್ರೀಮದಾಚಾರ್ಯ ಗುರು ನಾಗಶÀಯನ ನೀನು ಸಕಲ ಜಗದ್ಗುರು ಈತ ಗುರು ಸಂತತಿಗೆ ವಂದೀಸಿ ತಾತ್ವಿಕರ ಜಾಗು ಮಾಡದೆ ನಮಿಪೆ ಜ್ಞಾನ ಪ್ರದಾತರೆಂದು ಆಗಮ ಪೌರಾಣ ಶೃತಿ ತತಿಗಳೊಳೆಲ್ಲ ಆಗುವಳಭಿಮಾನಿ ಭಾರತೀದೇವಿ ಎಂದು ಈಗ ಈ ಮಹಿಮಳ ಚರಿತೆ ಬುದ್ಧಿಗೆ ದೇವಿ ತಾಗಿಸಿದಂದದಿ ಸಾಗಲಿ ನುಡಿವುದು ನಾಗರಾಜನ ಜನನಿ ಸ್ವಪ್ನದಿ ಸುಳಿದಳು ಕೂಗಿದೆ ಅಯೋನಿಜೆ ದುಃಖರಹಿತಳೆಂದು ಭಾಗವತರ ಕಾಯ್ವ ಭಾಗ್ಯ ಸಂಪನ್ನದೇವಿ ಯೋಗಿ ಜನರಿಗೆಲ್ಲ ಗುರುಪತ್ನಿ ಎಂದೆನಿಪೆ ಆಗಾಗ ಅವತರಿಸಿ ಅನಿಲನ ಕಾರ್ಯಕ್ಕೆ ಆಗುವೆ ಸಹಕಾರಿ ಅಸುರರ ಸಂಹಾರಿ ಶ್ರೀ ಗುರೋರ್ಗುರು ಹರಿ ಗೋಪಾಲಕೃಷ್ಣವಿಠಲ ಭಾಗವತರ ಕಾಯ್ವ ನಿನ್ನದ್ವಾರದಿ ಸ್ಮರಿಸೇ 1 ಕೃತಿಸುತೆ ಕೊಂಡದಿ ಉದಿಸಿ ಸುತೆ ಎನಿಸಿದೆ ದ್ರುಪದನಿಗೆ ಚ್ಯುತರಹಿತ ಯೌವನಯುತೆ ಐವರಿಗರಸಿಯು ಆದೆ ಪ್ರತಿಯಿಲ್ಲದ ಪತಿವ್ರತೆ ಸುರತತಿ ಜನನಿಯು ನೀನೌ ಮಾ- ರುತ ಸುತನಲ್ಲದೆ ನಿನಗಿನ್ನಿತರರ ಸಂಗವು ಉಂಟೆ ಸುತರಂದದಿ ನಾಲ್ವರ ತಿಳಿದತಿಶಯದಲಿ ಅವರವರಾ ಸತಿಯರ ನಿನ್ನೊಳಗಡಿಗಿಸಿ ರತಿ ಕಾಲದಲೊಲಿದಿತ್ತೆ ಮತಿವಂತರಿಗಲ್ಲದೆ ಪ್ರತಿ ಜನರಿಗೆ ಮೋಹಕವು ಕ್ಷಿತಿಯೊಳು ನೀನವತರಿಸೀ ಕ್ಷಿತಿಗೇ ತೋರಿದ ಲೀಲೆ ಅತಿ ಸೌಭಾಗ್ಯದಿ ಮೆರೆದೆ ಕ್ಷಿತಿಪತಿಸೂಯಾಗದಲಿ ಖತಿಗೊಳ್ಳಲು ಖಳ ಜನರು ಸ್ಥಿತ ಸಾಮ್ರಾಜ್ಯವ ಕಂಡು ಕ್ಷಿತಿಭಾರವನಿಳುಹಲು ಶ್ರೀಪತಿ ಪತಿಮನವರಿಯುತ ಕುರು ಪತಿಸಭೆಯಲಿ ಭ್ರಮಿಸುತ ಜಾರುತ ಸರಸಿಯೋಳ್ ಬೀಳುತಿರೆ ಪತಿ ಶ್ರೀಪತಿ ಮೊಗವೀಕ್ಷಿಸಿ ಅತಿ ಹಾಸ್ಯದಿ ನೀ ನಗಲು ಖತಿಗೊಳ್ಳಲು ಕುರುಪತಿ ಕಲಕಿತು ದ್ವೇಷದ ಭಾವಗಳು ಪತಿ ಭಾರದ ಹರಣಕೆ ಮೂಲಾಯಿತು ನಿನ್ನಯ ನಗೆ ಕಿಡಿ ತಾ ಕಾತುರಕ್ಕಸ ತರುಗಳಿಗೆ ಸೋಕಿತು ಕಾಮನ ಬಿಸಿಯು ಮತಿಹೀನರು ನಿನ್ನನು ಬಯಸುತ ಬರೆ ದ್ವೇಷಾಗ್ನಿ ಜ್ವಲಿ ಸುತ ವಾಯು ಸಹಾಯದಲಿ ಹುತಗೈಸಿದೆ ಖಳತತಿಯ ಪತಿಯಂತರ್ಗತ ಕೃಷ್ಣನ ನುತಿಸುತ ಭಕ್ತ್ಯಾಜ್ಯಾಹುತಿ ಕ್ಷಿತಿ ಭಾರವನಿಳುಹಿಸಿದೆ ಹಿತತಂಗಿಯೆ ಗೋಪಾಲಕೃಷ್ಣವಿಠ್ಠಲಗೇ ನೀ ಪ್ರತಿಯುಂಟೆ ನಿನಗೆ ಈ ಕ್ಷಿತಿಯೊಳು ನಾಕಾಣೆ 2 ಮಡಿಯದೆ ದುರ್ಯೊüೀಧನನು ಮುಡಿಯನು ಕಟ್ಟೆನು ಎಂಬ ದೃಢ ಸಂಕಲ್ಪಳೆ ಪುಷ್ಪ ಮುಡಿಯಲಪೇಕ್ಷಿಸಿದೆ ನೀ ಒಡೆಯುವರುಂಟೇ ಇದರ ಒಡಲಿನ ಮರ್ಮವ ದೇವಿ ಒಡೆಯ ವೃಕೋದರ ನಿನ್ನ ನುಡಿ ಕೇಳುತ ವನ ಪೊಕ್ಕು ಮಡುಹುತ ಯಕ್ಷರ ತಂದು ಮುಡಿಸಿದ ಸೌಂಗಂಧಿಕವ ಪೊಡವಿಯೊಳ್ಹರಡಿತು ವಾರ್ತೆ ಒಡಲರಿಯದೆ ಜನತತಿಗೆ ಪಿಡಿಯುತ ಕರದಲಿ ಪುಷ್ಪ ಒಡೆಯನ ಪ್ರೇಮದಿ ನೋಡಿ ಮುಡಿಸಿದೆ ಸಿರಿಹರಿ ಮುಡಿಗೆ ಕಡು ಭಕ್ತಿಯೊಳಂತರದಿ ಬಿಡುಬಿಡು ಬಿಂಕವ ಲೀಲೆ ಕೊಡು ಕೊಡು ಭಕ್ತಿಯ ಬಾಲೆ ಪಡಿಸಾನಂದವ ಶೀಲೆ ನುಡಿಸಡಿಗಡಿಗ್ಹರಿ ಲೀಲೆ ಒಡಗೂಡತ ಪತಿಯೊಡನೆ ನಡೆಸಿದ ಚರಿತೆಗಳೆಲ್ಲ ಕಡು ಮೋಹವು ರಜ ತಮರಿಗೆ ಕೊಡುವುದು ಸುಖ ಸುಜನರಿಗೆ ಪೊಡವಿಪತಿ ಗೋಪಾಲಕೃಷ್ಣವಿಠಲ ನಿನ್ನ ನಡೆನುಡಿ ಮೆಚ್ಚುತ ನಡೆಸಿದ ಭಾರತ ನಾಟಕವÀ 3 ಆನಂದ ಜ್ಞಾನಪೂರ್ಣೆ ಆಗಾಗ ಒದಗಿದ ಹೀನ ದುಃಖದ ಸÉೂೀಂಕು ಉಂಟೆ ನಿನಗೆ ಇನ್ನು ಪ್ರಾಣಪತಿಗಳೈವರೆದುರಲಿ ಖಳ ನಿನ್ನ ಮಾನ ಹಾನಿಯ ಗೈಸೆ ಜಗವೆ ತಲ್ಲಣಿಸಿತು ಮಾನಾಭಿಮಾನ ಬಿಟ್ಟು ಶ್ರೀನಿಧಿ ಗತಿ ಎನ್ನೆ ಅಕ್ಷಯ ವಸನವು ಪ್ರಾಣಪಂಚಕ ಹರಿಯಾಧೀನವೆಂಬುವ ತತ್ವ ಪ್ರಾಣಕ್ಕೆ ಪ್ರಾಣಬಿಂಬ ಸ್ವಾಮಿ ಎಂಬುವ ತತ್ವ ಮಾನಾಭಿಮಾನ ತೊರೆದು ಪ್ರಾಣೇಂದ್ರಿಯವ ಜರಿದು ಮಾನಸದಲಿ ಹರಿಯ ಸ್ಮರಿಸಿದರಕ್ಷಯ ಸ್ಥಾನಪ್ರಾಪ್ತಿಯು ಎಂಬ ತತ್ವರಹಸ್ಯಗ- ಳಾನು ಸೂಚಿಸೆ ನಿನ್ನ ಕೃತಿಯಲ್ಲದಿನ್ನಿಲ್ಲ ದಾನವರೆಲ್ಲ ನಿನ್ನ ಕಾಮಿಸಿ ನೋಡಲವರು ಏನೆಂಬೆ ಮಾಡಿದಂಥ ಅಲ್ಪಸ್ವಲ್ಪದ ಪುಣ್ಯ ಕ್ಷೀಣಗೈಸುತ ಸೆಳೆದು ಹೀನ ಪಾಪದಿ ನೂಕಿ ಹಾನಿಗೈಸಿದೆ ಪವಮಾನಸುತನಿಂದಲಿ ಮಾನುನಿಮಣಿ ಸರ್ವಕ್ಷೇಮ ಪಾಲಿಪ ಭಕ್ತ- ರಾನನದಲಿ ನೋಡೆ ಜ್ಞಾನಾನಂದವನಿತ್ತು ಹೀನ ನರಕದಿ ಬಿದ್ದ ಭ್ರಾತೃಸಹಿತದಿ ಕುರುಪ ಕಾಣದೆ ನಿನ್ನ ಮಹಿಮೆ ಜ್ಞಾನರಹಿತನಾಗಿ ಜಾಣೆ ಶ್ರೀ ಗೋಪಾಲಕೃಷ್ಣವಿಠ್ಠಲನ ನಿಜ ಜ್ಞಾನ ಪಾಲಿಸಿ ಕಾಯೆ ಭೀಮಸೇನನ ಜಾಯೆ 4 ಮುಕ್ತರ ಬಂಧುವೆ ನೀನು ಭಕ್ತಿಯದಾತಳÉ ನೀನು ತತ್ವ ತಿಳಿಸುವೆ ನೀನು ಚಿತ್ತದೆ ನೆಲಸುವೆ ನೀನು ಹತ್ತದು ದುಃಖವು ನಿನಗೆ ಸುತ್ತದು ಶೋಕವು ನಿನಗೆ ಮುಕ್ತಾರ್ಥವ ಕೊಡುವವಳೆ ಮತ್ತೆ ಅಯೋನಿಜಹಳೆ ಮುತ್ತು ಮಾಣಿಕ್ಯವು ನವರತ್ನದ ಆಭರಣಗಳ ಕಂಚುಕ ನೆತ್ತಿಲಿ ಮಕುಟವನಿಟ್ಟು ಚಿತ್ತದೊಲ್ಲಭನಂಕದಲಿ ಹತ್ತಿ ಸಿಂಹಾಸನದಲಿರೆ ಸುತ್ತಲು ಸೌಪಣ್ರ್ಯಾದಿ ಸುರಸ್ತ್ರೀಯರು ಓಲೈಸೆ ಚಿತ್ತದಿ ಸಿರಿಹರಿಯನು ಭಕ್ತಿಲಿ ಭಜಿಸುತ ಮುಕ್ತಾ- ಮುಕ್ತರ ಕೃಪಪಾಂಗದಲಿ ಸುತ್ತಲೀಕ್ಷಿಸಿ ಕಾವೆ ಭಕ್ತಿಲಿ ದ್ರೌಪದಿ ಎಂದು ಎತ್ತಿದ ಸ್ವರದಲಿ ಕೂಗೆ ಚಿತ್ತದೊಲ್ಲಭನೊಡನೆ ಚಿತ್ತೈಸೆನ್ನಯ ಮನಕೆ ಹತ್ತಿಕಾಡುವ ಎನ್ನ ದುಷ್ಕøತ ಕರ್ಮಗಳೆಲ್ಲ ಕತ್ತರಿಸುತ ಕಾಯಮ್ಮ ಸತ್ಯಾಪ್ರಿಯನನು ತೋರೆ ಆರ್ತಜನರ ಪಾಲ ಗೋಪಾಲಕೃಷ್ಣವಿಠ್ಠಲನ್ನ ಅರ್ಥಿಯಿಂದಲಿ ಎನ್ನ ಚಿತ್ತದಿ ತೋರೆಲೆ ಜನನಿ 5 ಜತೆ ತತ್ವದೇವತೆಗಳ ಜನನಿ ತತ್ವಾರ್ಥ ತಿಳಿಸೇ ಆಪ್ತ ಗೋಪಾಲವಿಠ್ಠಲನೆಂದೆನಿಸೇ
--------------
ಅಂಬಾಬಾಯಿ
ಧಣಿ ನೀನಿರಲು ತಣಿಸಿ ಪರರ ದಣಿವುದುಂಟೆ ಲೋಕದಿ ಪ ಕ್ಷಣ ಕ್ಷಣದಲಿ ಪೊರೆವ ಚಿಂತಾ ಮಣಿ ನೀನಿರೆ ತ್ರಿಭುವನಕೆ ಅ.ಪ ಕರದಲಿರುವ ಮಣಿಯ ಬೆಲೆಯ ನರಿಯದಂಥ ಮೂಢ ಜನರು ಪರರಿಗಿತ್ತು ಹರುಷದಿಂದ ಪುರಿಯ ಕೊಂಬ ತೆರದಲಿ 1 ದುರಿತ ದೂರ ಮಾಡಿ ಸಾರ ಫಲಗಳನ್ನು ಕೊಡುವ ನಾರಸಿಂಗ ಮಂತ್ರವಿರಲು ಭೈರವನನು ಜಪಿಸುವಂತೆ 2 ಪಡೆದ ಜನಕನಲ್ಲದೆನ್ನ ನುಡಿಗೆ ಒಲಿವರುಂಟೆ ಜಗದಿ ಕಡಲಶಯನ ಎನ್ನ ಕರವ ಪಿಡಿಯುತ ಪ್ರಸನ್ನನಾಗೋ 3
--------------
ವಿದ್ಯಾಪ್ರಸನ್ನತೀರ್ಥರು
ಧಣೀ ಧಣೀ ಧಣೀ ಧಣೀ ಗುರುರಾಯ ನೀನೆ ಧಣೀ ಧಣೀ ಪ ನಿತ್ಯ ನೆನೆವರ ಪೊರೆವಂಥ ಅ.ಪ ಆದಿಯುಗದಿ ಪ್ರಹ್ಲಾದರಾಯನೆನಿಸಿ ಮಾಧವನುತ್ತಮನೆಂದು ಸಾಧಿಸಿದಂಥಾ 1 ತ್ರೇತಾಯುಗದಿ ರಘುನಾಥನನುಜನೆನಿಸಿ ಪಾದ ಈತೆರ ಭಜಿಸಿದಂಥ 2 ದ್ವಾಪರ ಯುಗದಲ್ಲಿ ಭೂಪ ಬಾಹ್ಲೀಕÀನೆನಿಸಿ ಶ್ರೀ ಪನಾಙ್ಞ ದಿಂದಲೀಪರಿ ಜನಿಸಿದಂಥ 3 ಕಲಿಯುಗದಲ್ಲಿ ನೀ ಚಲುವ ವ್ಯಾಸನೆನಿಸಿ ಇಳೆಯೊಳು ಗ್ರಂಥರಚಿಸಿ ಜಲಜನಾಭನೊಲಿಸಿದಂಥ 4 ಎರಡನೆ ಜನುಮದಿ ಗುರುರಾಘವೇಂದ್ರನಾಗಿ ! ಕಮಲ ಭಜಿಸಿದಂಥ 5
--------------
ಗುರುಜಗನ್ನಾಥದಾಸರು
ಧನವಗಳಿಸಬೇಕೆಂಥಾದು | ಈ | ಜನರಿಗೆ ಕಾಣಿಸದಂಥಾದು ಪ ಹರಿಹರ ಬ್ರಹ್ಮಾದಿಗಳೆಲ್ಲ | ಹೌದಹುದಹುದೆಂಬಂಥಾದು ಅ.ಪ ಕೊಟ್ಟರೆ ಹತ್ತಿರದಂಥಾದು | ತನ್ನ ಬಿಟ್ಟು ಹೊರ ಹೋಗದಂಥಾದು || ಬಿಚ್ಚಿದ ಗಂಟನು ಬಯಲೊಳಗಿಟ್ಟರೆ | ಮುಟ್ಟಬಾರದಾರಿಂಥಾದು 1 ಕರ್ಮವು ಬಾರದಂಥಾದು | ಜನರೋರ್ವರು ತೋರಿಸದಂಥಾದು | ನಿರ್ಮಲವಾದ ಮನಸಿಗೆ ದಾನ | ಧರ್ಮವ ಮಾಡಿಸುವಂಥಾದು 2 ಮರವನು ತಾರದಂಥಾದು | ನಿಜದರಿವಿನೊಳಗೆ ಇರುವಂಥಾದು |ಗುರು ಭವತಾರಕ ಭಜಕರ ಕಣ್ಣಿಗೆ | ತೊರಹಿಲ್ಲದೆ ತುಂಬಿದಂಥಾದು 3
--------------
ಭಾವತರಕರು
ಧರೆಯೊಳಗೆ ವ್ಯಾಸಮುನಿವರನ ಸಂಸ್ಥಾನಕಿ ನ್ನೆರಡನೆಯದಾವುದುಂಟು ಪ. ಪರಿಪರಿಯಲಿ ನೋಡೆ ಪರಮ ವೈಭವದಿಂದ ಧರಣಿಯೊಳು ಮೆರೆಯುತಿಹುದು ಇಹುದುಅ.ಪ. ಹಂಸನಾಮಕನಿಂದ ಹರಿದು ಬಂದಂಥ ಯತಿ ಸಂಸ್ಥಾನ ಸುರನದಿಯೊ ಕಂಸಾರಿಪ್ರಿಯ ಶ್ರೀ ಮಧ್ವಮುನಿ ಮತ ಸಾರ ಹಂಸಗಳು ಸುರಿಯುತಿರಲು ಸಂಶಯವ ಪರಿಹರಿಸಿ ಸದ್ಗ್ರಂಥಗಳ ಸ- ದ್ವಂಶರಿಗೆ ಸಾರುತಿರಲು ಅಂಶ ಹರಿಪರ್ಯಂಕ ಸಹಿತ ಬಾಹ್ಲೀಕ ಯತಿ ವಂಶದಲಿ ಉದಿಸಿ ಬರಲು ಬರಲು 1 ಬನ್ನೂರು ಸ್ಥಳದಲ್ಲಿ ಜನ್ಮವೆತ್ತುತಲಿ ಬ್ರ ಹ್ಮಣ್ಯರಾ ಕರದಿ ಬೆಳೆದು ಚಿಣ್ಣತನದಲಿ ಮೌಂಜಿಧರಿಸಿ ಕಿತ್ತೊಗೆಯುತಲಿ ಧನ್ಯಯತಿಯಾಗಿ ಮೆರೆದು ಘನ್ನ ಶ್ರೀಪಾದರಾಯರಲಿ ಸದ್ಗ್ರಂಥಗಳ ಚನ್ನಾಗಿ ಮನನಗೈದು ಸಣ್ಣ ಪೆಟ್ಟಿಗೆಯೊಳಡಗಿದ್ದ ಶ್ರೀ ಕೃಷ್ಣನ ತನ್ನ ಭಕ್ತಿಯೊಳ್ ಕುಣಿಸಿ ನಲಿದು 2 ಪಡೆದು ಪರಿಪರಿಯ ಮಹಿಮೆಗಳ ತೋರುತಲಿ ದುರ್ವಾದಿ ದುರುಳ ಮತಗಳನೆ ಮುರಿದು ಮರುತ ಮತ ಶೀತಾಂಶುಕಿರಣ ಚಂದ್ರಿಕೆಯನ್ನು ಹರಹಿ ಪ್ರಕಾಶಗೈದು ಸರ್ವ ಸಜ್ಜನರ ಮನದಂದಕಾರವ ಕಳೆದು ಸಿರಿವರನ ಪ್ರೀತಿ ಪಡೆದು ತಿರುವೆಂಗಳೇಶನ ಪರಮ ಮಂಗಳ ಪೂಜೆ ವರುಷ ದ್ವಾದಶವಗೈದು ಮೆರೆದು 3 ಆರಸನಿಗೆ ಬಂದಂಥ ಆಪತ್ಕುಯೋಗ ಪರಿ ಹರಿಸಿ ಸಂಸ್ಥಾನ ಪಡೆದು ಪರಮ ಸಾಮ್ರಾಜ್ಯ ಪಟ್ಟಾಭಿಷೇಕವ ತಳೆದು ಪರಮ ವೈಭವದಿ ಮೆರೆದು ಚಿರಕಾಲ ವಿಜಯನಗರವು ಮೆರೆಯಲೆಂದ್ಹರಸಿ ಅರಸನಿಗೆ ರಾಜ್ಯವೆರೆದು ಕರುಣಾಳುವೆನಿಸಿ ವೈರಾಗ್ಯ ಶಿಖರದಿ ಮೆರೆದು ಮೊರೆಪೊಂದಿದವರ ಪೊರೆದು ಬಿರುದು 4 ಎಲ್ಲೆಲ್ಲಿ ನೋಡಲಲ್ಲಲ್ಲಿ ಶ್ರೀ ಮರುತನ್ನ ನಿಲ್ಲಿಸುತ ಪೂಜೆಗೈದು ನಿಲ್ಲದಿರೆ ಹಂಪೆಯಲಿ ಪ್ರಾಣಾರಾಯನು ಯಂತ್ರ ದಲ್ಲಿ ಬಂಧನವಗೈದು ಚಲ್ಲಾಡಿ ಸುವರ್ಣವೃಷ್ಟಿಯಿಂ ದುರ್ಭಿಕ್ಷ ನಿಲ್ಲಿಸದೆ ದೂರಗೈದು ಎಲ್ಲ ಕ್ಷೇತ್ರಗಳ ಸಂಚರಿಸಿ ಬಹುದಿನ ಹಂಪೆ ಯಲ್ಲಿ ಶಿಷ್ಯರನು ಪಡೆದು ನಿಂದು 5 ನವಕೋಟಿ ಧನಿಕ ವೈರಾಗ್ಯ ಧರಿಸುತ ಭವದ ಬವಣೆಯಲಿ ನೊಂದು ಬಂದು ನವ ಜನ್ಮಕೊಟ್ಟು ಉದ್ಧರಿಸಬೇಕೆಂದೆರಗೆ ಅವನಂತರಂಗವರಿದು ಪವಮಾನ ಮತವರುಹಿ ತಪ್ತ ಮುದ್ರಾಂಕಿತದಿ ನವ ಜನ್ಮವಿತ್ತು ಪೊರೆದು ಪವನ ಗ್ರಂಥಾಂಬುಧಿಯೊಳಡಗಿದ್ದ ದಾಸ್ಯ ರ ತ್ನವ ಪೂರ್ವಗುರುವಿಗೊರೆದು ಸುರಿದು 6 ಪುರಂದರ ಕನಕರೆಂ ಬತುಲ ಶಿಷ್ಯರ ಕೂಡುತಾ ಸತತ ಹರಿ ಚರ್ಯ ಮಹಿಮಾದಿಗಳ ಸ್ಮರಿಸುತ್ತ ಸ್ಮøತಿ ಮರೆದು ಕುಣಿದಾಡುತಾ ರತಿಪಿತನ ಗಾನ ಭಕ್ತಿಯಲಿ ಕನ್ನಡ ಕವನ ಮತಿಯೊಳ್ ನಾಲ್ವರುಗೈಯುತಾ ಕ್ಷಿತಿಯಲ್ಲಿ ದಾಸಪದ್ಧತಿ ಬಾಳಲೆಂದೆನುತ ಯತಿವರರ ಸೃಷ್ಟಿಸುತ್ತಾ | ಸತತ 7 ಅಂದು ವಿಜಯೀಂದ್ರರನು ಯತಿವರರು ಬೇಡÉ ಆನಂದದಲಿ ಭಿಕ್ಷವಿತ್ತ ಬಂದು ಕೈ ಸೇರಿದಾ ರಾಜ್ಯವನು ಕ್ಷಿತಿಪನಿಗೆ ಮುಂದಾಳಲೆನುತಲಿತ್ತ ಪತಿ ವೆಂಕಟೇಶನ್ನ ಪೂಜೆ ವರ ಕಂದನಿಗೆ ಒಲಿದು ಇತ್ತ ಒಂದೊಂದು ವೈಭವವು ಕೈ ಸೇರೆ ವೈರಾಗ್ಯ ತಂದು ಅಭಿರೂಪ ಬಿಡುತಾ | ಕೊಡುತ 8 ನವವಿಧದÀ ಭಕ್ತಿಯಲಿ ಜ್ಞಾನ ವೈರಾಗ್ಯದಲಿ ಕವನದಲಿ ಶಾಂತತೆಯಲಿ ನವಗ್ರಂಥ ನಿರ್ಮಾಣ ಪವನ ಗ್ರಂಥೋದ್ಧಾರ ಸವಿನಯವು ಸದ್ಗುಣದಲೀ ಸುವಿವೇಕ ಸತ್ಕರ್ಮ ಅಂತರ್ಮುಖ ಧ್ಯಾನ ಅವನಿ ಸಂಚಾರದಲ್ಲಿ ಇವರ ಸರಿಯಿಲ್ಲ ದಾಸ ವ್ಯಾಸ ಕೂಟದಲಿ ಭುವನದಲಿ ಮೆರೆದ ಧನ್ಯಾ | ಮಾನ್ಯ 9 ಪಾಪಿಗಳ ಸಲಹಿ ಪಾವನ್ನಗೈಯುತ ಭವದ ಕೂಪದಿಂದುದ್ಧರಿಸಿದಾ ಆಪಾರ ಮಹಿಮೆ ಆದ್ಯಂತ ವರ್ಣಿಸಲಳವೆ ಶ್ರೀಪಾದ ಪದುಮ ರಜದಾ ವ್ಯಾಪಾರವೆನ್ನ ಗುರು ದಯದಿ ಎನ್ನೊಳು ನಿಂದು ತಾ ಪಾಲಿಸುತ ನುಡಿಸಿದ ಗೋಪಾಲಕೃಷ್ಣವಿಠಲ ಧ್ಯಾನದಲಿ ಹಂಪೆ ಗೋಪ್ಯಸ್ಥಳದಲಡಗಿದಾ 10
--------------
ಅಂಬಾಬಾಯಿ
ಧೇನಿಸೂ ಶ್ರೀಹರಿಯ ಮಹಿಮೆ ನೀ ಧೇನಿಸೊ ಪ ಧೇನಿಸು ಶ್ರೀಹರಿಯ ಲೀಲಾ ಸೃಷ್ಟಿ ಮಾನಸದಲಿ ನೆನೆಯೋ ಪರಿಯಾ ||ಆಹಾ|| ತಾನೆ ತನ್ನಯ ಲೀಲಾಜಾಲತನದಿ ತನ್ನ ಆನಂದದೊಳಿಪ್ಪ ಶ್ರೀ ಮುಕುಂದ ನನ್ನ ಅ.ಪ ಮೂಲ ನಾರಾಯಣ ದೇವ ತಾನು ಆಲದೆಲೆಯೊಳು ಲೀಲಾ ತೋರಿ ಬಾಲತನದಿ ತಾ ನಲಿವಾ ಅನೇಕ ಕಾಲ ಪರ್ಯಂತರದಿ ಸರ್ವ ||ಆಹಾ|| ಎಲ್ಲ ಜಗವ ತನ್ನ ಒಡಲೊಳಡಗಿಸಿ ಲೋಲನಾಗಿ ಬಾಲಕ್ರೀಡೆಯಾಡುವಪರಿಯಾ 1 ಇಂತು ಶಯನಗೈದ ಹರಿಯ ಅ- ನಂತ ವೇದಗಳಿಂದ ತ್ವರಿಯಾ ದುರ್ಗ ಸಂತಸದಿಂದ ಸಂಸ್ತುತಿಯ ಮಾಡೆ ಕಂತುಪಿತÀನು ತಾನೆಚ್ಚರಿಯ ||ಆಹಾ|| ಅಂತೆ ತÉೂೀರ್ದ ವಾಸುದೇವಾದಿ ಚತುರಾ- ಸಿರಿ ರೂಪಗಳ ಸಹಿತ 2 ಸಕಲ ರೂಪಗಳ ತನ್ನೊಳೈಕ್ಯಾ ಮಾಡಿ ಸಕಲ ಲಕುಮಿ ರೂಪಗಳಲಿ ಐಕ್ಯಾ ಇಟ್ಟು ಸಕಲ ಮರುತರ್ಗೆ ತನುಮುಖ್ಯಾ ಇತ್ತು ಸಕಲ ಕ್ರೀಡೆಯೊಳು ಸೌಖ್ಯಾ ||ಆಹಾ|| ಲಕುಮಿಯ ಸ್ತುತಿಗೆ ಒಲಿದು ತಾನೇತ- ನ್ನ ಕಡೆಗಣ್ಣಿಂದ ಪಂಚಜೀವರ ನೋಡಿದಾ 3 ಶುದ್ಧಸೃಷ್ಟಿಯೆಂಬುದೊಂದು ಪರಾ- ಧೀನ ವಿಶೇಷವು ಎಂದು ಮತ್ತೆ ಒಂದು ಮಿಶ್ರ ಸೃಷ್ಟಿಯೆಂದು-ಒಂದು ಕೇವಲ ಸೃಷ್ಟಿಯೆಂದೂ ||ಆಹಾ|| ತಮಾಂಧಕಾರವ ಪ್ರಾಶಿಸಿದ ವಿವರಾ 4 ತನ್ನೊಳೈಕ್ಯವಾಗಿದ್ದ ಮಹ ತಾನೆ ಪ್ರಕಟನಾಗಿ ನಿಂದ ಆಗ ಉನ್ನಂತ ಚತುರ ನಾಮದಿಂದ ||ಆಹಾ|| ಜನುಮ ಸ್ಥಿತಿ ಮೃತಿ ಮೋಕ್ಷದನಾಗಿರ್ಪ ಅನಿರುದ್ಧಾದಿ ಚತುರಮೂರ್ತಿಗಳ ವ್ಯಾಪಾರ5 ಪುರುಷನಾಮಕ ಪರಮಾತ್ಮ ತಾ ತರವರಿತು ಘನಮಾಡ್ದ ಮಹಿಮಾ ಸೃಷ್ಟಿ ತರತರ ಮಾಡ್ದ ಮಾಹಾತ್ಮ ||ಆಹಾ|| ಪ್ರಾಕೃತ ವೈಕೃತ ದೇವತೆ ಸುಮಾನ ಈ ಮೂರುವಿಧ ಸೃಷ್ಟಿಯಾನೆಸಗಿದ ಪರಿಯ ನೀ 6 ಮಹದಹಂಕಾರ ತತ್ವ ಪಂಚ ಮಹಭೂತಗಳು ಮನಸ್ತತ್ವ ಇನ್ನು ಮಹದಶೇಂದ್ರಯಗಳ ತತ್ವ ಮತ್ತೆ ಮಹತಾಮಿಶ್ರಾಂಧ ತಾಮಸ ತತ್ವ ||ಆಹಾ|| ಇಹುದು ಈ ಪರಿಯಲ್ಲಿ ಪ್ರಾಕೃತ ಸೃಷ್ಟಿಯು ಮುಹುರ್ಮುಹು ಇದನೆ ಆಲಿಸಿ ನಿನ್ನೊಳು 7 ವೈಕೃತದೋಳು ಸಕಲ ವೃಕ್ಷಾ ತಿರ್ಯಕ್ ಸಕಲ ಪ್ರಾಣಿಗಳ್ ಮನುಜ ಕಕ್ಷಾ ಎಲ್ಲ ವಿಕೃತ ಸೃಷ್ಟಿಯ ಮಾಡ್ದ ಅಧ್ಯಕ್ಷಾ ಇನ್ನು ಸುರಸಮಾನ ಸೃಷ್ಟಿಯ ಅಪೇಕ್ಷಾ ||ಆಹಾ|| ಸಕಲ ಸುರಾಸುರಪ್ಸರ ಗಂಧರ್ವರು ಪಿತೃಗಳು ಯಕ್ಷರಾಕ್ಷಸರ ಪರಿಯವರಾ 8 ಪುನ್ನಾಮ ವಿರಂಚಿ ಬ್ರಹ್ಮಾನು ಅಂದು ಘನ್ನವಾಸುದೇವ ತಾನು ಸೃಷ್ಟಿ ಯನ್ನ ಪ್ರಕಟಮಾಡಿದನು ಮುಂದೆ ಅನಿಲದೇವನು ಸಂಕರುಷಣನ ||ಆಹಾ|| ಅನಿಲನೆ ಸೂತ್ರನಾಮಕವಾಯುವಾಗಿಹ ಭಾವೀ ಬ್ರಹ್ಮನೀತನೆ ನಿತ್ಯಗುರುವೆಂದು 9 ಪ್ರದ್ಯುಮ್ನನಿಂದ ಸರಸ್ವತಿ ಇನ್ನು ಶ್ರಧ್ದಾನಾಮಕಳು ಭಾರತಿ ಸೃಷ್ಟಿ- ಯಾದ ವಿವರ ತಿಳಿಯೊ ಪೂರ್ತೀ ಇದೇ ಪ್ರದ್ಯುಮ್ನನ ಸೃಷ್ಟಿಯ ಕೀರ್ತಿ ||ಆಹಾ|| ಶ್ರದ್ಧಾದೇವಿಯೊಳು ಸೂತ್ರನ ವೀರ್ಯದಿಂ- ದುದ್ಭವಿಸಿದ ಜೀವ ಕಾಲನಾಮಕನು 10 ಈರ ಬ್ರಹ್ಮರಸೃಷ್ಟಿ ಚರಿತ್ರೆ ಚಿತ್ರ ಗಾತ್ರ ತರವೆಲ್ಲ ವಿಚಿತ್ರ ||ಆಹಾ|| ವಿರಂಚಿ ಬ್ರಹ್ಮ ಸರಸ್ವತಿಯಿಂದ ವೈ- ಕಾರಿಕ ರುದ್ರ ಶೇಷಗರುಡರ ನೀ 11 ಸೂತ್ರ ಶ್ರದ್ಧಾ ದೇವೇರಿಂದ ಪವಿ ತ್ರತೈಜಸ ರುದ್ರ ಬಂದಾ ಪ- ಪುತ್ರರಾಗಿಹರತಿ ಚೆಂದಾ ||ಆಹಾ|| ಪುತ್ರನಾದ ತಾಮಸ ರುದ್ರ ಶೇಷಗೆ12 ಪ್ರದ್ಯುಮ್ನ ಸೂಕ್ಷಶರೀರ ಕೊಟ್ಟು ಉದ್ಧಾರ ಮಾಡಿದ ಜೀವರ ಅನಿ ರುದ್ಧನ ಕೈಲಿ ಕೂಡಲವರಾ ಅನಿ ರುಧ್ದನು ಮಾಡ್ದ ವಿಸ್ತಾರಾ ||ಆಹಾ|| ತದಪೇಕ್ಷ ಮೂಲಪ್ರಕೃತಿಯಿಂದ ಗುಣತ್ರಿ- ವಿಧ ಕೊಂಡು ಮಹತ್ತತ್ವ ನಿರ್ಮಿಸಿದಾ 13 ಮಹತ್ತತ್ವದಿಂದಹಂಕಾರ ತತÀ್ತ ್ವ ಮಹದಹಂಕಾರವು ಮೂರುತರ ಇದ- ರೊಳು ಬ್ರಹ್ಮವೈಕಾರಿಕ ಶರೀರವಾಗಿ ಪರಿ ಈ ರೂಪ ವಿವರಾ ||ಆಹಾ|| ಅಹುದು ತೈಜಸದಿಂದ ಶೇಷನ ದೇಹವು ತಾಮಸದಿಂದಲಿ ರುದ್ರ ತಾನಾದನು 14 ಎರಡನೆಯ ಸಾರಿ ಪ್ರದ್ಯುಮ್ನ ಅರ್ಧ ನಾರೀ ರೂಪನಾಗಿ ಇನ್ನು ಎಡದಿ ಸ್ರೀರೂಪ ಜೀವರುಗಳನ್ನು ಬಲದಿ ಪುರುಷ ಜೀವರೆಲ್ಲರನ್ನು ||ಆಹಾ|| ಧರಿಸಿ ಅವರ ದೇಹಗಳನಿತ್ತು ಅ ನಿರುದ್ಧನ ಕೈಯೊಳಿತ್ತ ಪರಿಯನ್ನು 15 ಅದರಂತೆ ಅನಿರುಧ್ದದೇವ ತಾ ನದಕಿಂತ ಸ್ಥೂಲದೇಹವ ಮೂಲ ಪ್ರಕೃತಿಯಿಂದ ಗುಣವಾ ಕೊಂಡು ಅದುಭುತ ಮಹತ್ತತ್ವತೋರ್ವ ||ಆಹಾ|| ಅದುಭುತ ಮಹತ್ತತ್ವದಿಂದಹಂಕಾರ ಉದಿಸಿದ ಪರಿಯನು ಮುದದಿಂದಲಿ ಅರಿತು 16 ಪರಮ ಕರುಣೆಯಲೀ ರುದ್ರನು ಅರ್ಧ ನಾರೀರೂಪ ತಾಳಿ ಇನ್ನೂ ಎಡದಿ ಸುರರಸ್ತ್ರೀಗಳನ್ನು ಬಲದೀ ಸುರಪುರಷರನ್ನೂ ||ಆಹಾ|| ಭರದಿ ಪುಟ್ಟಿಸಿ ಪ್ರದ್ಯುಮ್ನನ ಕೈಲಿತ್ತ ಪರಿಪರಿ ಸೃಷ್ಟಿಯ ಕ್ರಮವರಿತು ನೀನೀಗ 17 ಅನಿರುಧ್ದ ದೇವನು ಜೀವರ ಸ್ಥೂಲ ತನುವ ಕೊಟ್ಟು ಪಾಲಿಪ ತದಭಿ- ಮಾನಿ ಶ್ರೀ ಭೂ ದುರ್ಗಾ ಮಾಡಿ ತಾನೆಲ್ಲರ ಸತತ ಪೊರೆವಾ ||ಆಹಾ|| ಮಹತ್ತತ್ತಾ ್ವಭಿಮಾನಿಗಳೆನಿಸಿದ ದೇವನ18 ಅಹಂಕಾರ ತತ್ತಾ ್ವಭಿಮಾನಿ ಅದಕೆ ಅಹಿಗರುಡರು ಅಭಿಮಾನಿ ಇನ್ನು ಅನಿರುದ್ಧಾದಿ ರೂಪತ್ರಯವು ಇದಕೆ ಇನ್ನು ನಿಯಾಮಕನು ಎನ್ನು ||ಆಹಾ|| ಮಹತ್ತತ್ವಾ ನಿಯಾಮಕ ವಾಸುದೇವನಿಂದ- ನವರತ ಈ ಸೂಕ್ಷ್ಮಪ್ರಮೇಯ ಗ್ರಹಿಸಿ ನೀನು 19 ಮನಸ್ತತ್ವಾಭಿಮಾನಿ ಸುರರಾ ಸೃಷ್ಟಿ ಯನ್ನೆ ವೈಕಾರಿಕದಿಂದಲವರಾ ಮಾಡಿ ಘನ್ನ ತೈಜಸದಿಂದಲಿಂದ್ರಿಯ ತತ್ಪವೆ- ಲ್ಲನೆಸಗಿದಂಥ ವಿವರಾ ||ಆಹಾ|| ಉನ್ನಂತ ತನ್ಮಾತ್ರ ಭೂತಪಂಚಕಗಳ ತಾಮಸದಿಂದಲಿ ಉದಿಸಿದ ಪರಿಯನು 20 ಯುಕ್ತಸ್ಥಾನಾದಿಗಳನ್ನು ಕೊಡೆ ಉತ್ತಮೋತ್ತಮನನ್ನು ತಾವು ಸುತ್ತಿ ಸ್ತುತಿಸಲು ಇನ್ನೂ ||ಆಹಾ|| ತತ್ವದೇವತೆಗಳ ಭಕ್ತಿಗೆ ಒಲಿದು ತತ್ವರೆಲ್ಲರ ತೋರೆ ರೂಪದಿ ಧರಿಸಿಟ್ಟನು21 ರಜಸುವರ್ಣಾತ್ಮಕವಾದ ಘನ ನಿಜ ಐವತ್ತು ಕೋಟಿ ಗಾವುದ ಉಳ್ಳ ಅಜಾಂಡವನ್ನು ತಾ ತೋರ್ದ ತನ್ನ ನಿಜಪತ್ನಿ ಉದರದಿ ಮಾಡ್ದ ||ಆಹಾ|| ಸೃಜಿಸಿ ಬ್ರಹ್ಮಾಂಡದಿ ತತ್ವಗಳೊಡಗೂಡಿ ನಿಜವಾಗಿ ತಾನೊಳ ಪೊಕ್ಕ ವಿರಾಟನ್ನ 22 ಪಾತಾಳಾದಿ ಸಪ್ತಲೋಕ ಕಡೆ ಪರಿಯಂತ ರೂಪ ತಾ ತಾಳಿದ ಆದ್ಯಂತ ಇಂತು ನಿರತನು ಸಚ್ಚಿದಾನಂದ ||ಆಹಾ|| ಇಂತು ವಿರಾಟ ತನ್ನಂತರದೊಳು ತತ್ವರೆಲ್ಲರ ತತ್‍ಸ್ಥಳದೊಳಿಟ್ಟು ಪೊರೆದನ್ನ23 ಸಕಲ ಉದಕ ಶುಷ್ಕದಿಂದ ಇರಲು ತಕ್ಕ ಮುಕ್ತಾಮುಕ್ತರ ಭೇದದಿಂದ ತಕ್ಕ ಸ್ಥಾನವೆ ಕಲ್ಪಿಸಿದ ಚೆಂದಾ ||ಆಹಾ|| ಅಕಳಂಕ ಪುನ್ನಾಮಕನು ಧಾಮತ್ರಯ ಮೊದಲಾದ ನರಕ ಪಂಚಕಗಳ ಮಾಡಿದ 24 ಉದಕ ಶೋಷಣೆಯನ್ನು ಮಾಡಿ ಇನ್ನುಮ- ಹದಹಂಕಾರವ ಕೂಡಿ ಭೂತ ಪಂಚಕವ ಮಿಳನ ಮಾಡಿ ಆಗ ಹದಿನಾಲ್ಕೂದಳಾತ್ಮಕ ಪದ್ಮತೋರಿ ||ಆಹಾ|| ಅದುಭುತ ಪದುಮದಿ ಉದಿಸಿದ ಬ್ರಹ್ಮನು ಚತುರ ನಾಲ್ಕುದಿಕ್ಕು ಮುದದಿಂದ ನೋಡಿದ 25 ಪದುಮದಲಿ ಚತುರಾಸ್ಯನಾಗಿ ಅದು ಭುತÀ ಮಹಿಮೆ ನೋಡುತ ತಾನೆ ಮುದದಿಂದ ಮೊಗತಿರುಗಿಸುತಾ ಅದ ಅದುಭುತ ಶಬ್ದಕೇಳುತ್ತಾ ||ಆಹಾ|| ತದಪೇಕ್ಷ ತಪವನಾಚರಿಸಿ ನಾಳದಿ ಬಂದು ಪದುಮನಾಭನು ತಾನು ಮುದದಿಂದ ನೋಡಿದ 26 ಪರಮಪುರುಷ ಉಕ್ತಿ ಲಾಲಿಸಿ ಮೆಚ್ಚಿ ವರವ ಕೊಟ್ಟು ಪಾಲಿಸಿ ಸೃಷ್ಟಿ ನಿರುತ ಮಾಡಲು ತಾ ಬೆಸಸೀ ತಾನು ಅವನಂತರದೊಳು ನೆಲೆಸೀ ||ಆಹಾ|| ಹೊರಗೂ ಒಳಗೂ ನಿಂತು ಸೃಷ್ಟಿಲೀಲೆಯ ತೋರ್ವ ಉರಗಾದ್ರಿವಾಸವಿಠಲ ವೇಂಕಟೇಶನ್ನ 27
--------------
ಉರಗಾದ್ರಿವಾಸವಿಠಲದಾಸರು
ಧ್ಯಾನಿಸು ಮನವೆ ನೀ ಧ್ಯಾನಿಸು ಪ. ಧ್ಯಾನಿಸು ಮನವೆ ಶ್ರೀಹರಿಯ ಪಾದಧ್ಯಾನನಿರುತ ಈ ಪರಿಯ ಆಹಾಪ್ರಾಣಾಪಾನವ್ಯಾನೋದಾನಸಮಾನರ್ಗೆ ಪ್ರಾಣನಾಗಿಪ್ಪ ಮುಖ್ಯ ಪ್ರಾಣಾಂತರ್ಗತನ ನೀ ಅ.ಪ. ಪರಮಾಣು ಪ್ರದೇಶದಲ್ಲಿ ಪ್ರಾಣರಾಶಿ ಅನಂತುಂಟಲ್ಲಿ ಹೀಗೆಒರಲುತಿದೆ ವೇದದಲ್ಲಿ ದೃಷ್ಟಾಂತವ ಪೇಳ್ವೆ ಕೇಳು ದೃಢದಲ್ಲಿ ಆಹಾಪರಮಸೂಕ್ಷ್ಮ ವಟಮರನಾಗಿ ಅದರಲ್ಲಿಪರಿಮಿತಿಲ್ಲದರ ಫಲದಬೀಜವನರಿತು ನೀ 1 ನಿರುತ ಸುವರ್ಣಬ್ರಹ್ಮಾಂಡದಲ್ಲಿ ಹರಿ ಪೂರ್ಣವ್ಯಾಪ್ತ ಅಖಂಡನಾಗಿಮಿರುವುತಲಿಪ್ಪ ಮಾರ್ತಾಂಡ ತೇಜೋಕಿರಣದಂತಿರುವ ಪ್ರಚಂಡ ಆಹಾಹೊರಗೆ ಒಳಗೆ ಸರ್ವತ್ತರದಲ್ಲಿ ಹರಿಮಯ-ವರಿತು ನಿನಗೆ ಎಲ್ಲಿ ದೊರಕಿದ ಸ್ಥಳದಿಂದ 2 ಸಲಿಲಭೂಗಿರಿಲತೆ ನಾನಾವೃಕ್ಷಫಲಖಗಮೃಗ ಕಾನನತೃಣ ಪೊಳೆವಪಾವಕತರುಪವನ ಮುಕ್ತಸ್ಥಳ ಅವ್ಯಾಕೃತ ಗಗನ ಆಹಾಒಳಗೆ ಹೊರಗೆ ಹರಿ ಚಲಿಸದೆ ಇರುತಿಪ್ಪಸ್ಥಳದ ನಿಲುವಿನಂತೆ ತಿಳಿದು ನೀ ಅದರಂತೆ 3 ತೈಜಸ ನಿತ್ಯ 4 ಸಪ್ತಾವರಣ ಶರೀರದಿ ದಶಸಪ್ತದ್ವಿಸಹಸ್ರ ನಾಡಿಯಲಿ ದಶ-ಸಪ್ತದ್ವಿಸಹಸ್ರ ರೂಪದಲ್ಲಿ ಹರಿವ್ಯಾಪ್ತ ನಿರ್ಲಿಪ್ತಸ್ಥಾನದಲ್ಲಿ ಆಹಾಆಪ್ತನಂತಿರುವ ಸುಷುಪ್ತಿ ಸ್ವಪ್ನ ಜಾಗ್ರದಿತಪ್ತಕಾಂಚನದಂತೆ ದೀಪ್ತಿಸುತಿಪ್ಪನ 5 ಜೀವರಿಂದತ್ಯಂತ ಭೇದ ಪ್ರತಿಜೀವಾಂತರದಲಿ ಪ್ರಮೋದನಾಗಿಆವಾಗ ಚರಿಸುವ ವೇದ ಪೇಳುವುದು ಸತ್ಯಂಭಿದಾ ಆಹಾಈ ವೇದಾರ್ಥವು ಸಾವಧಾನದಿ ತಿಳಿದುಶ್ರೀವಾಯುಮತವ ಕೋವಿದರೊಡಗೂಡಿ6 ಶ್ರೀ ಕೇಶವನೆ ಮೂಲಾಸಿ ಶ್ರುತಿ ಏಕೋನಾರಾಯಣಾಸಿ ನಾನಾಲೋಕ ಸೃಷ್ಟಿಪದ ತಾನಾಸಿ ತಾರಕಮಂತ್ರ ಉಪದೇಶಿ ಆಹಾನೀ ಕೇಳು ನಿಗಮಾರ್ಥ ನೀಕರಿಸು ಸಂಶಯಏಕಮೇವಾದ್ವಿತೀಯನೆಂಬೊ ಕೃಷ್ಣನಂಘ್ರಿಯ 7 ಗಂಗಾಜನಕ ಸಿರಿರಂಗ ಉತ್ತುಂಗಗುಣಗಣತರಂಗ ಕಾ-ಳಿಂಗಸರ್ಪನ ಮದಭಂಗ ಭುಜಂಗಶಯನ ಅಮಲಾಂಗ ಆಹಾಪಿಂಗಳ ಇಡಾ ಮಂಗಳ ಸುಷುಮ್ನ ಸುಸಂಗಮ ಮಧ್ಯದಿ ತಿಮಿಂಗಿಲಂತಿಪ್ಪನ 8 ಮೂರ್ತಿ ಬಲು ಅದುಭುತದಿವ್ಯಕೀರ್ತಿಅದೆ ಪದುಮಜಾಂಡದಿ ಪರಿಪೂರ್ತಿ ದೊರೆವುದಕೆ ಬೇಕು ವಾಯುಸಾರ್ಥಿ ಆಹಾಅದೆ ಬಿಂಬಮೂರ್ತಿ ಜೀವದಾಕಾರವಾಗಿ ತಾಪದುಮಜಾಂಡದಲಿಪ್ಪ ಸದಮಲಾತ್ಮಕನ 9 ಧರೆಯನಳೆದ ದಿವ್ಯಚರಣ ಅದು ಮೆರವುತಿಪ್ಪುದು ಕೋಟಿ ಅರುಣನಂತೆಪರಿಪೂರ್ಣಭರಿತವು ಕಿರಣ ತನ್ನ ಸ್ಮರಿಸುವರಿಗೆ ಮಾಳ್ಪ ಕರುಣ ಆಹಾತರುಣಿಯಂದದಿ ನಖದಿ ಸುರನದಿಯ ಪೆತ್ತ ನೂ-ಪುರ ಗೆಜ್ಜೆಪೆಂಡೆಯ ಎರಡೈದು ಬೆರಳನು 10 ಹರಡು ಜಂಘೆಯುಗಜಘನ ಸುರುಚಿರ ರೇಖಧ್ವಜವಜ್ರ ನಾನಾ ದಿವ್ಯ ವರರೇಖೆಯಿಂದಲೊಪ್ಪುವನ ಜಾನು ಪರಮಶೋಭಿಸುವ ಸುಂದರನ ಆಹಾಉರುಟುಕದಳಿಸ್ತಂಭದಂತಿರುವೊ ಊರುದ್ವಯಸರಿಗಾಣೆ ಹರಿ ಉಟ್ಟ ವರಪೀತಾಂಬರವನು 11 ಕುಕ್ಷಿ ನಿಜ ಸುಖಪೂರ್ಣನ 12 ವೈಜಯಂತಿ ಮಂದಾರವನ್ನು ಮುದದಿಂದ ಧರಿಸಿದ ಧೀರ ಆಹಾಪದುಮಜಭವರಿಂದ ತ್ರಿದಶರು ತಿಳಿದಿನ್ನುಸದಾಕಾಲ ಧೇನಿಪರು ಹೃದಯಾಂಬರದಲ್ಲಿ 13 ಕಂಬುಕಂಧರ ಅತಿಗುರುತರ ಭುಜವು ಚತುರ ಆಹಾಮರಿ ಆನೆ ಸೊಂಡಿಲಂತಿರುವ ಬಾಹುಕೀರ್ತಿ ಕೇತಕಿಬೆರಳು ನಕ್ಷತ್ರದರಸಿನಂದದಿ ನಖ14 ಸಿರಿ ಭುಜಕೀರುತಿ15 ಕಂಬು ಅಗಣಿತ ಮಹಿಮನ16 ಮುಗುಳು ಮಲ್ಲಿಗೆ ಮೊಗ್ಗೆ ದಂತಪಂಕ್ತಿ ಜಗವಮೋಹಿಸುವ ಸುಶಾಂತ ಜಿಹ್ವೆನಿಗಮಕ್ಕೆ ವೇದ್ಯವಾದಂಥ ಬಹು ಬಗೆಯಲ್ಲಿ ಮೆರೆವ ಸುಪಂಥ ಆಹಾನಗುವ ವದನ ಝಗಝಗಿಸುವ ಕುಂಡಲಕರ್ಣಮಿಗೆ ಕೂರ್ಮಕದಪು ಸಂಪಿಗೆನಾಸಿಕವನ್ನು 17 ಕರುಣಶಾಂತಶುಭನೋಟ ಕಂಗಳೆರಡರ ಚೆಲ್ವಿಕೆ ಮಾಟ ಇನ್ನುಅರವಿಂದದಳವೆನ್ನು ದಿಟ ಇನ್ನು ತರಣಿಚಂದ್ರಮರ ಕೂಟ ಆಹಾಶರಣಜನರ ಮನೋಹರ್ಷವಾರ್ಧಿಗೆ ಚಂದ್ರದುರುಳ ದಿತಿಜತಿಮಿರಕ್ಕೆ ಭಾಸ್ಕರನ 18 ಚಾಪ ತಲೆಯ ತಗ್ಗಿಸುವಂಥಾ ರಚನಾಫಾಲದಲಿಟ್ಟ ತಿಲಕ ಸುಂದರ ಲೋಕ ಕಳವಳಗೊಳಿಸುವ ಸುಗುಣ ಆಹಾನಳಿನವದನದಲ್ಲಿ ಅಳಿಗಳಂತೊಪ್ಪುವಸುಳಿಗುರುಳಿನ ಮ್ಯಾಲೆ ಒಲೆವ ಅರಳೆಲೆಯನ್ನು 19 ನಿತ್ಯ ನಖ ಲಲಾಟ ಪರಿಯಂತ್ರನೋಟದಿಂದಲಿ ಈಶಕೋಟಿ ಸಹಿತನ 20 ನಿತ್ಯ 21
--------------
ಗೋಪಾಲದಾಸರು
ಧ್ಯಾನಿಸು ಶ್ರೀಹರಿಯ ಧ್ಯಾನಿಸು ಪ ಧ್ಯಾನಿಸು ಮನವೆ ಶ್ರೀ ಹರಿಯ ಪಾದ ಧ್ಯಾನವಂತರ್ಯಾಮಿ ಹರಿಯ, ಆಹ ಪ್ರಾಣಾಪಾನ ವ್ಯಾನೋದಾನ ಸಮಾನರ್ಗೆ ಪ್ರಾಣನಾಗಿಹ ಮುಖ್ಯ ಪ್ರಾಣಾಂತರ್ಗತನ ಅ.ಪ ಪರಮಾಣು ಪ್ರದೇಶದಲ್ಲಿ, ಪ್ರಾಣಿ ರಾಸಿ ಅನಂತವುಂಟಲ್ಲಿ ಹೀಗೆ ವರಲುತಿದೆ ವೇದದಲ್ಲಿ ದೃಷ್ಟಾಂ ತರವ ಪೇಳುವೆ ದೃಢದಲ್ಲಿ-ಆಹ ಪರಮ ಸೂಕ್ಷ್ಮ ವಟತರು ಫಲದಲ್ಲಿಹ ನಿತ್ಯ 1 ನಿರುತ ಸುವರಣ ಬ್ರಹ್ಮಾಂಡದಲ್ಲಿ ಪರಿಪೂರ್ಣವಾಗಿ ಅಖಂಡವಾಗಿ ಮೆರೆವುತಲಿಪ್ಪ ಮಾರ್ತಾಂಡ ದಿವ್ಯ ಕಿರಣದಂತಿರುವ ಪ್ರಚಂಡ-ಆಹ ಹೊರಗೆ ಒಳಗೆ ಹರಿ ಚರಿಸುವ ಪರಿಯ ನೀ ನರಿತು ಆವಾಗಲು ದೊರಕಿದ ಸ್ಥಳದಲ್ಲಿ 2 ಸಲಿಲ ಭೂಗಿರಿ ಲತೆ ನಾನಾ-ವೃಕ್ಷ ಮೃಗ ಪಕ್ಷಿ ಕಾನನ-ಮುಕ್ತ ಸ್ಥಳಗಳವ್ಯಾಕೃತ ಗಗನ, ತೃಣ- ಪಾವಕ ತರು ಪವನ-ಆಹ ಒಳಗೆ ಹೊರಗೆ ಎಲ್ಲ ಸ್ಥಳದಲ್ಲಿ ಹರಿಮಯ ನೆಲೆಯ ನೀ ನಲವಿಂದ ತಿಳಿದು ಆವಾಗಲು3 ವಿಶ್ವ ಮತ್ಸ್ಯಾದಿ, ತೇಜೊ ರಾಶಿ ಹಯಗ್ರೀವಾದಿ, ಜೀವ ರಾಶಿಯೊಳಿದ್ದು ಅನಾದಿ ಸರ್ವ ದೇಶ ಭೇದಿಸುವಂಥ ವೇದಿ-ಆಹ ಮೂರ್ತಿ ಶ್ರೀಶ ರಂಗನೆಂದು ನಿತ್ಯ 4 ಸಪ್ತಾವರಣ ದೇಹದಲ್ಲಿ, ದಶ ಸಪ್ತ ದ್ವಿಸಹಸ್ರ ನಾಡಿಯಲಿ, ದಶ ಸಪ್ತ ದ್ವಿಸಹಸ್ರ ರೂಪದಲಿ ಹರಿ ವ್ಯಾಪ್ತ ನಿರ್ಲಿಪ್ತ ಸ್ಥಾನದಲಿ-ಆಹ ಆಪ್ತನಂತಿಪ್ಪ ಸುಷುಪ್ತಿ ಜಾಗರದೊಳು ತಪ್ತ ಕಾಂಚನದಂತೆ ದೀಪ್ತಿಸುತಿಪ್ಪನ್ನ5 ಜೀವರಿಂದತ್ಯಂತ ಭೇದ, ಪ್ರತಿ ಜೀವಾಂತರದಲ್ಲಿ ಮೋದನಾಗಿ ಯಾವಾಗಲಿರುತಿಹ ವೇದ-ದಲ್ಲಿ ಪೇಳುವುದು ಸತ್ಯಂಭಿದಾ-ಆಹ ಈ ವಿಧ ವೇದಾರ್ಥ ಸಾವಧಾನದಿ ತಿಳಿದು ಶ್ರೀ ವಾಯುಮತದ ಸುಕೋವಿದರೊಡಗೂಡಿ 6 ಶ್ರೀಕೇಶವನೆ ಮೂಲರಾಶಿ, ಶ್ರುತಿ- ಏಕೋ ನಾರಾಯಣ ಆಸೀತ್ ನಾನಾ ಲೋಕ ಸೃಷ್ಟಿಪ ಧಾತನಾಸೀತ್, ಜಗ ದೇಕತಾರಕ ಉಪದೇಶೀ-ಆಹ ನೀ ಕೇಳಿ ನಿಗಮಾರ್ಥ ನೀಕರಿಸು ಸಂಶಯ ಏಕಮೇವ ದ್ವಿತಿಯ ಶ್ರೀಕೃಷ್ಣನಂಘ್ರಿಯ 7 ಗಂಗಾಜನಕ ಸಿರಿರಂಗ ಉ- ತ್ತುಂಗ ಗುಣಾಂತರಂಗ, ಕಾ ಳಿಂಗ ಸರ್ಪನ ಮದಭಂಗ, ಭು ಜಂಗಶಯನ ಅಮಲಾಂಗ-ಆಹ ಮಂಗಳ ಇಡಾ ಪಿಂಗಳ ಸುಷುಮ್ನ ಸಂಗಡ ಮಧ್ಯದಿ ತಿಂಗಳಂತಿಪ್ಪನ್ನ 8 ಹೃದಯಸ್ಥಾನದಲಿದ್ದ ಮೂರ್ತಿ, ಬಲು ಅದುಭುತಾತನ ದಿವ್ಯಕೀರ್ತಿ, ಅದು ಪದುಮುಜಾಂಡದಿ ಪರಿಪೂರ್ತಿ ತರು ವುದಕೆ ಬೇಕು ವಾಯು ಸಾರಥಿ-ಅಹಾ ಅದು ಬಿಂಬಮೂರ್ತಿ ಜೀವದಾಕಾರಾವಾಗಿದ್ದ ಪದುಮಕೋಶದಲ್ಲಿ ಸದಮಲಾತ್ಮಕನನ್ನು 9 ಧರೆಯನಳೆದ ದಿವ್ಯ ಚರಣ, ಅದು ಮೆರೆವುತಿಹುದು ಕೋಟಿ ಅರುಣನಂತೆ ಪರಿಪೂರ್ಣ ಭರಿತವು ಕಿರಣ, ಸ್ಮರಿ- ಪರಿಗೆ ಮಾಡುವುದು ಕರುಣ-ಆಹ ತರಣಿಯಂಥ ನಖದಿ ಸುರನದಿಯನು ಹೆತ್ತ ಎರಡೈದು ಬೆರಳಲ್ಲಿ ಕಿರುಗೆಜ್ಜೆ ಪೆಂಡೆಯು 10 ಪೆರಡು ಜಾನು ಜಂಘೆ ಘನ್ನ ಸುರು- ಚಿರ ವಜ್ರಾಂಕುಶ ಧ್ವಜ ನಾನಾ, ದಿವ್ಯ ವರ ರೇಖೆಯಿಂದಲೊಪ್ಪುವನ, ಜಘನ ಪರಮ ಶೋಭಿತ ಸುಂದರನ-ಆಹ ಕದಳಿ ಕಂಬ ಇರುವೂರು ಶೋಭಿಸೆ ಸರಿಗಾಣೆ ಹರಿವುಟ್ಟ ವರ ಪೀತಾಂಬರವನ್ನು 11 ಗಜವೈರಿಯಂತಿಪ್ಪ ಮಧು ಬಲು ವಿಜಯ ವಡ್ಯಾಣ ಅಚ್ಛೇದ್ಯ, ಭೇದ್ಯ ನಿಜಘಂಟೆ ಘಣರೆಂಬೊ ವಾದ್ಯ, ಕು ಬುಜೆ ಡೊಂಕ ತಿದ್ದದನಾದ್ಯ-ಆಹ ಅಜ ಜನಿಸಿದ ನಾಭ್ಯಂಬುಜದಳ ಚತುರ್ದಶ ಕುಕ್ಷಿ ನಿಜಪೂರ್ಣ ಸಖನನ್ನು 12 ಉದರ ತ್ರಿವಳಿ ನಾನಾ ಹಾರ ದಿವ್ಯ ಪದಕ ಪವಳದ ವಿಸ್ತಾರ ರತ್ನ ಮುದದಿಂದ ಧರಿಸಿದ ಧೀರ ಸುಂದರ ವಾದ ಕಂಬುಕಂಧರ-ಆಹಾ ಪದುಮಜ ಭವರಿಂದ ತ್ರಿದಶರು ತಿಳಿಯುತ್ತ ಸದಾಕಾಲ ಧ್ಯಾನಿಪ ಹೃದಯಾಂಬರವನ್ನು 13 ಸಿರಿವತ್ಸ ಕೌಸ್ತುಭಹಾರ, ಮೇಲೆ ಸರಿಗೆ ನ್ಯಾವಳದ ವಿಸ್ತಾರ ಅಲ್ಲಿ ವೈಜಯಂತಿ ಮಂದಾರ, ಗುರು ತರವಾದ ಭುಜ ಚತುರ-ಆಹ ಮರಿಯಾನೆ ಸೊಂಡಿಲಂತಿರೆ ಬಾಹು ಕೇತಕಿ ಬೆರಳು ನಕ್ಷತ್ರದ ಅರಸಿನಂತೆ ನಖ14 ಕರಚತುಷ್ಟಯದಲ್ಲಿ ಶಂಖ, ಚಕ್ರ ವರಗದೆ ಪದುಮು ನಿಶ್ಶಂಕನಾಗಿ ಧರಿಸಿ ಮೆರೆವೊ ಅಕಳಂಕ, ದುರು ಳರ ದಂಡಿಸುವ ಛಲದಂಕ ಆಹ ಬೆರಳು ಮಾಣಿಕದುಂಗುರ ಕಡಗ ಕಂಕಣ ಬಿರುದಿನ ತೋಳ್ಬಂದಿ ವರ ಭುಜಕೀರ್ತಿಯ15 ಅಗರು ಚಂದನ ಗಂಧÀಲೇಪ, ಕಂಬು ಸೊಗಸಾದ ಕಂಠಪ್ರತಾಪ, ಮಾವು ಚಿಗುರಲೆ ಕೆಂದುಟಿ ಭೂಪ, ನಸು ನಗುವ ವದನ ಸಲ್ಲಾಪ-ಆಹ ಮಗನಾಗಿ ತಾನು ಗೋಪಿಗೆ ವದನದೊಳು ಅಗಣಿತ ಮಹಿಮನ್ನ 16 ಮುಗುಳು ಮಲ್ಲಿಗೆ ಮೊಗ್ಗೆ ದಂತ ಪಙÂ, ಜಗವ ಮೋಹಿಸುವ ಸುಶಾಂತ ಜಿಹ್ವೆ ನಿಗಮಕೆ ವೇದ್ಯವಾದಂಥ ಬಲು ಬಗೆಯಿಂದ ನಡೆಸುವ ಪಂಥ-ಆಹ ಪೊಗಳಲಾರದು ವೇದ ಖಗವಾಹನನ ಮಹಾ ಅಗಣಿತ ಮಹಿಮೆ ಸಂಪಿಗೆಯ ನಾಸಿಕನನ್ನು 17 ಪೊಳೆವೊ ವಿದ್ಯುತ ಕಪೋಲ, ನೀಲೋ- ತ್ಪಲದಳ ನೇತ್ರ ವಿಶಾಲ, ದಿವ್ಯ- ತಿಲಕವನಿಟ್ಟ ಸುಫಾಲ, ನೀಲಾ- ಚಲಕಾಂತಿ ತನುರುಹ ಜಾಲ-ಆಹ ಕುಂಡಲ ಕರ್ಣದೊಲುಮೆಯ ಚೆಲುವಿಕೆ ಇಳೆಯೊಳಗೆಣೆಗಾಣೆ ಇಂದಿರಾಲೋಲನ್ನ 18 ಶುಭ ನೋಟ, ಕಂಗ- ಳೆರಡ ಚೆಲುವಿಕೆ ಮಾಟಕಿನ್ನು ಅರವಿಂದ ಸರಿಯಿಲ್ಲ ದಿಟ ಅಲ್ಲಿ ತರಣಿ ಚಂದ್ರಮರ ಕೂಟ-ಆಹ ಶರಣ ಜನರ ಮನೋಹರುಷ ವಾರ್ಧಿಗೆ ಸುಧಾ ಕರ ದುಷ್ಟಜನರ ತಿಮಿರಕ್ಕೆ ಭಾಸ್ಕರನ್ನ 19 ಹೊಳೆವ ಹುಬ್ಬುದ್ವಯ ಸ್ಮರನ ಚಾಪ- ತಲೆ ತಗ್ಗಿಸುವಂಥ ರಚನ ಫಾಲ- ದಲ್ಲಿಟ್ಟು ತಿಲಕ ಸುಂದರನ ಲೋಕ- ಕಳವಳಗೊಳಿಸುವ ಸುಗುಣ-ಆಹ ನಲಿವ ವದನದಲ್ಲಿ ಅಳಿಗಳಂತೊಪ್ಪುವ ಸುಳಿಗುರುಳಿನ ಮೇಲೆ ವಲಿವಾರಳೆಲೆಯನ್ನು 20 ರೂಪ ಶೃಂಗಾರ ವಿಲಾಸ ಉಡು- ಭೂಪ ನಾಚುವ ಮುಖಹಾಸ ವಿಶ್ವ ರೂಪ ಧೃತ ಸ್ವಪ್ರಕಾಶ ಸರ್ವ ವ್ಯಾಪಕಾಖಿಳ ಜಗದೀಶ-ಆಹ ತಾಪಸರಿಗೆ ಕರುಣಾಪಯೋನಿಧಿ-ಅಣು ರೂಪಿನೋಳ್ ಪರಮಾಣು ರೂಪನಾಗಿಪ್ಪನ್ನ21 ಕೋಟಿಮಾರ್ತಾಂಡ ಸಂಕಾಶ ಕಿ ರೀಟಕ್ಕೆ ಅಸಮ ಪ್ರಕಾಶ ಎಲ್ಲು ಸಾಟಿಗಾಣೆನು ಲವಲೇಶ ಕಪಟ- ನಾಟಕ ಶ್ರೀ ಲಕುಮೀಶ-ಆಹ ನಖ ಲಲಾಟ ಪರಿಯಂತ ನೋಟದಿಂದಲೆ ಈಶ ಕೋಟಿ ಸಹಿತನಾಗಿ 22 ಕಾಮಾದಿಗಳನೆಲ್ಲ ತರಿದು ಮುಕು- ತೀ ಮಾರ್ಗವನ್ನೆ ನೀನರಿದು ಅತಿ- ಪ್ರೇಮದಿ ಗುರುಗಳ ನೆನೆದು ಹೇಮ ಭೂಮಿ ಕಾಮಿನಿಯರ ಜರಿದು-ಆಹ ಸಾಮಜ ವರದ ಶ್ರೀ ವಿಜಯವಿಠ್ಠಲನಂಘ್ರಿ ಯುಗ್ಮ ನಿತ್ಯ 23
--------------
ವಿಜಯದಾಸ
ಧ್ರುವತಾಳ ಬಂದೆನ್ನ ಕಾಯೊ ಕರುಣದಿಂದ ಕೈಪಿಡಿದು ದೀನ ಬಂಧುವೆ | ಒಂದೂರು ಮಂದಿರಾರ್ಯ | ಸಂದೇಹವ್ಯಾಕೆ ನಿನ್ನ ಪೊಂದಿದ ಸತ್ಯಶಿಷ್ಯವೃಂದದೊಳಗೆ ನಾ ಕಡೆಯವನೋ ತಂದೆ ನೀನಗಲಿದಕೆ ನೊಂದೆನೊ ನಾ ಭವ ಬಂಧದೊಳಗೆ ಬಿದ್ದು ಬಹುವಿಧದಿ ನಮಗಿನ್ನು ಹಿಂದು ಮುಂದು ಮನಕೆ ನೀ ತಾರದಲೆ ಕಣ್ಣೆರೆದು ಈಕ್ಷಿಸಿ ಎನ್ನೊಳಿದ್ದ | ಮಂದಮತಿಯ ಬಿಡಿಸಿ ಮಧ್ವಶಾಸ್ತ್ರವ ತಿಳಿಸೋ | ಮಂದರಕುಜ ಭಕ್ತಸಂದೋಹಕೆ | ಹಿಂದೆ ವರದಾತನೆಂದೆನಿಸಿದ ಕರ್ಮಂದಿಗಳರಸರ ಕ್ಷೇತ್ರದಲ್ಲಿ | ಬಂದ ಸಮಯವೆನ್ನ ಬಿನ್ನಪ ಚಿತ್ತಕೆ | ತಂದು ತವಕದಿಂದ ಭೂಸುರರ ಸಂದಣಿಯಲ್ಲಿ ನಿನ್ನ ಮಹಿಮೆ ಪ್ರಕಟಿಸಿ ಇಂದುವಿನಂತೆ ಪೊಳೆದು ಮೆರೆದ ಕರುಣೀ ಅಂದಿನಾರಭ್ಯ ನೀನೆ ಸ್ವರೂಪೋದ್ಧಾರಕರ್ತನೆಂದು ದೃಢನಾಗಿ ನಂಬಿ ತ್ವತ್ವಾದಕೆ ವಂದಿಸಿ ಮೊರೆ ಇಡೆ ಇಂದು ನೀನು ನಮ್ಮ ಛಾತ್ರಮಾಲೆಯಲ್ಲಿ ಸಂದವನೆಂದು ಮನದಿ ಭಾವಿಸಿದೆವು | ಎನುತ ಛಂದದಿ ಸಿಂಧು ಪೋಲುವ ಕರುಣಿ ಸುಜ್ಞಾನ ಸದ್ಭಕ್ತಿ ಕುಂದದ ವೈರಾಗ್ಯ ಭಾಗ್ಯವ ಕೊಟ್ಟು ಧಾಮ ಶಾಮಸುಂದರವಿಠಲನ ಒಂದೇ ಮನದಿ ಭಜಿಪಾನಂದ ಭಾಗ್ಯವ ನೀಡೋ 1 ಮಟ್ಟತಾಳ ಅನುಪಮಸುಚರಿತ್ರ | ಅನುದಿನದಲಿ ಎನ್ನ ಅಣುಗನೆಂದರಿತೊಂದು ಕ್ಷಣವಗಲದೆ ಇದ್ದು ಬಿನುಗು ಬುದ್ಧಿಯ ಕಳದು | ಧನದಾಶೆಯ ಕಡಿದು ಮನದ ಚಂಚಲ ಬಿಡಿಸಿ | ಹನುಮ ಭೀಮಾನಂದ ಮುನಿಕೃತ ಪಾದವನಜ ಸೇವಿಪುದಕೆ ತನುವಿಗೆ ಬಲವಿತ್ತು ದಿನದಿನದಲಿ ನೆನೆಯುವ ಸಂಪದ ಗುಣನಿಧಿಯನುಗ್ರಹಿಸೋ 2 ತ್ರಿವಿಡತಾಳ ಭವ ಮೊದಲಾದ ಬುಧರು ಹರಿಯಾಜ್ಞೆಯಲಿ ಮದಡಾರುದ್ಧರಿಸಲು ಜಗದಿ ಬಂದು | ಸುಧೆಯಂತೆ ಸವಿಯಾದ ಮಧುರ ಕನ್ನಡದಲ್ಲಿ | ಮುದದಿ ರಚಿಸಿದಂಥ | ಪದಸುಳಾದಿಗಳಲ್ಲಿ ಹುದುಗಿದ ವೇದಾರ್ಥ ತ್ವತ್ವಾದಾಶ್ರಿತರಿಗೆ | ವಿಧ ವಿಧದಿಂದಲಿ ಬೋಧಿಸುತಾ | ವದಗಿದ ಅಜ್ಞಾನ ಸದೆದು ಸುಮತಿ ಕೊಟ್ಟು ಸದಾಚಾರ ಸಂಪನ್ನನೆನಿಸಿ | ಅವರ ಬದಿಗನು ನೀನಾಗಿ ಸುಕ್ಷೇಮ ಚಿಂತಿಸಿ | ಅಧಮರಿಂದಲಿ ಬಾಧೆ ಬಾರದಂತೆ ಸದಯನೆ ಸಲಹಿದ ಕಾರಣದಿಂದಲಿ | ವಿದಿತವಾಯಿತು ನಿನ್ನ ಮಹಿಮೆ ಮನಕೆ ಪದೆ ಪದೆ ಪ್ರಾರ್ಥಿಪೆ ಸದಮಲಗಾತ್ರನೆ ಅಧೋಗತಿ ತಪ್ಪಿಸಿ ಬಿಡದೆ ಒಲಿದು | ಯದುಕುಲೋದ್ಭವ ಪೊಳೆವಂತೆ ಕೃಪೆಮಾಡು 3 ಅಟ್ಟತಾಳ ಗುರುವರ ಶ್ರೀ ನರದ್ವಿರದಾರಿ ನಾಮಕ | ವರ್ಣಿಸಲಳವಲ್ಲ ನಿನ್ನುಪಕಾರವು | ಜ್ವರಬಹುಜನರಿಗೆ ಪರಿಹಾರ ಮಾಡಿದಿ ತುರಗ ಕಚ್ಚಿದ ಘಾಯ ತಕ್ಷಣ ಮಾಯಿಸಿದಿ | ಶರಣಗೆ ಬಂದಪಮೃತ್ಯು ಓಡಿಸಿದಿ | ಅರಿಯದರ್ಭಕಿ ಹೋಮಕುಂಡದಿ ಬೀಳೆ | ತ್ವರಿತಭಿಮಂತ್ರಿಸಿ | ಭಿಸ್ಮವಲೇಪಿಸಿ ಉರಿತಂಪುಗೈಸಿದಿ || ಪುರದವರ ಮೊರೆ ಕೇಳಿ ಮಾರಿಯ ಭಯ ಕಳೆದಿ | ತರುಳರು ದಕ್ಕದ ದೀನಕುಟುಂಬಕ್ಕೆ ಚಿರಕಾಲ ಬಾಳುವ ಸಂತಾನ ನೀಡಿದಿ | ಸ್ಮರದೂರ ನಿಮ್ಮಾಜ್ಞೆ ಮೀರದ ಕಿಂಕರನ ತರುಣಿಗೆ ಸೋಂಕಿದ ಭೂತವ ಬಿಡಿಸಿದಿ | ನೆರೆನಿನ್ನ ಪದವನುಸರಿಸೀದ ಸುಜನಕ್ಕೆ ವರಭಾಗವತಶಾಸ್ತ್ರ ಅರುಹೀದಿ ಸಲುಹೀದಿ | ಹರಿಕಥಾಮೃತಸಾರವ ಸಾರೀದಿ | ತರತಮದ ಭೇದಜ್ಞಾನವ ಬೀರಿದಿ | ವರದಾಯಕ ಸತ್ಯದೇವನ ಪಾವನ ಚರಿತೆ ವಿಚಿತ್ರವಾಗಿ ಪರಿಪರಿ ಪೇಳುತ್ತ ಪೊರೆದೆ ನಿನ್ನವರನ್ನು ಧರೆ ಋಣ ತೀರಿದ ಕುರುಹು ಅರಿತು ಒಬ್ಬರಿಗೆ ಸೂಚಿಸದೆ ಪರಲೋಕಯಾತ್ರೆಗೆ ತೆರಳಿದದಕೆ ನಿನ್ನ ಪರಿವಾರದ ನಾವೆಲ್ಲರೂ ನಿತ್ಯಸಿರಿಯ ಕಳೆದುಕೊಂಡ ಲೋಭಿಗಳಂದದಿ ಶರಧಿ ಕಾಯ ತೊರೆದರೇನಾಯಿತು ಮರೆಯಾದೆ ಗೋವತ್ಸನ್ಯಾಯದಂತೆ ನೀ ದರುಶನ ಸ್ವಪ್ನದಿಗರೆದು ಸಂತೈಸುತ ನಿರಯಕೆ ನಮ್ಮನು ಗುರಿಮಾಡದೆ ಪೊರೆ ತರುಳಗೊಲಿದ ಶಾಮಸುಂದರವಿಠಲ ಸರಸಿಜಾಂಘ್ರಿಯುಗ್ಮ ಮಧುಪನೆಂದೆನಿಸಿ 4 ಆದಿತಾಳ ಭೂಮಿ ವಿಬುಧವರ ರಾಮವಿಠಲಾರ್ಯರ ಶ್ರೀ ಮುಖದಿಂದ ಸಕಲಶಾಸ್ತ್ರಮನನಮಾಡಿ | ಶ್ರೀಮತ್ಸು ಶೀಲೇಂದ್ರಸ್ವಾಮಿಗಳಿಂದಲಿ ನೀ ಮಾನಿತನಾಗಿ ಕಾಮಿತಫಲಪ್ರದ ರಾಯರ ದಯಪಡೆದು ಕಾಮಾದಿ ಷಡ್ರಿಪುವರ್ಗ ಜಯಿಸುತಲಿ | ನೇಮನಿಷ್ಟೆಯಲಿ ಜಪತಪಾಚರಿಸುತ ಹೇಮರಜತಧನ ತೃಣಸಮಾನೆನಿಸುತ ಸಾಮಜವರದನ ಕಳೆಯದೆ ಪಾಮರ ಜನರನು ಪ್ರೇಮದಿಂದದ್ಧರಿಸಿ | ಸಾಮಗಾನಪ್ರೇಮ ಶಾಮಸುಂದರನ ಧಾಮವ ಸೇರಿದ ಹೇ ಮಹಾಮಹಿಮನೆ 5 ಜತೆ ನಿನ್ನೊಡೆಯನ ದ್ವಾರಾ ಶ್ರೀ ಶಾಮಸುಂದರನ ಎನ್ನಂತರಂಗದಿ ನೋಳ್ವಂತೆ ಕರುಣಿಸೋ ||
--------------
ಶಾಮಸುಂದರ ವಿಠಲ