ಒಟ್ಟು 2362 ಕಡೆಗಳಲ್ಲಿ , 116 ದಾಸರು , 1873 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದು ಕಲಿಗಾಲದ ಮಹಿಮೆಯ ಗುಟ್ಟು ಮುದಿತನ ಬಂದರೆ ಮಾಯದ ಪೆಟ್ಟು ಪ ವಿಧವೆಯಾದರೆ ತಲೆಯ ಮೇಲ್ಮೊಟ್ಟು ವಿಧುರನಾಗೆ ದುರ್ನೀತಿಯ ಕಟ್ಟು ಅ.ಪ ಕುರುಡನಾದರೆ ಅಣಕದ ಬಾಳು ಅರೆಕಿವುಡಗೆ ಬೈಗುಳ ಕೂಳು ನರಳಿದರೆ ಸಾಯಲಿಲ್ಲವೆಂಬ ಗೀಳು ಕೊರಗಿ ಕಣ್ಣೀರನು ಸುರಿಸುವ ಗೋಳು 1 ಇತ್ತಬಾರದಿರು ಎಂಬರು ಕೆಲರು ಅತ್ತಲೆ ಹೋಗು ಹೋಗೆಂಬರು ಕೆಲರು ಎತ್ತಹೋದರೂ ಬಂದುದೇಕೆಂಬರು ತುತ್ತೊಂದಾದರೂ ಸಿಗದೆಂಬುವರು 2 ಹದ್ದುಹದ್ದೆಂಬುವ ಬಿರುನುಡಿಯಿಂದ ಒದ್ದೋಡಿಸುವಳು ಸೊಸೆ ಮನೆಯಿಂದ ಕದ್ದೋಡುವನು ಮಗ ಭಯದಿಂದ ಮದ್ದುಕೊಡಯ್ಯ ಮಾಂಗಿರಿಯ ಗೋವಿಂದ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಇಂದು ದಯದಿ ಸಂದರ್ಶನವಿತ್ತೆಯಾ ಇಂದಿರಾಧವಾ ದೇವಾ ಪ ಸುಂದರಾಂಗ ರಂಗ ಮುಂದೆ ಬಂದುನಿಂದೆ ಬೆಳಕಿನೊಳ್ ನಭದೆ ಅ.ಪ ವಿಭವದಿರ ರಥದಿ ಹಿತದಿ ಶುಭದ ಶ್ರೀಭೂನೀಳಾಸಹಿತ ಆಭಯವ ನೀಯುತಾ ನಾಥಾ 1 ಭಕ್ತ ಬೃಂದ ಗೈವ ಸೇವೆಯಾ ಸಕ್ತಿಯಂ ಪಡೆದು ದೃಢದಿ ನಿತ್ಯಗಾರುಡ ಸೂರ್ಯಮಂಡಲ ಡೊಲೊತ್ಸವದಿ2 ಮುದಗೆರೆರಂಗ ವೊರಿದಗೆನಗೆ ಮಹಿಮೆತೋರುತಾ ನಿರುತ ಪೊರೆವುದು ಜಾಜೀನಾಥ 3
--------------
ಶಾಮಶರ್ಮರು
ಇದು ನಿನಗೆ ಧರ್ಮವೇ ಇಂದಿರೇಶ ಬದಿಗ ನೀನಾಗಿದ್ದು ಭೀತಿ ಪಡಿಸುವುದು ಪ ನಿನ್ನ ಗುಣಗಳ ತುತಿಸಿ ನಿನ್ನನ್ನೇ ಹಾರೈಸಿ ನಿನ್ನವರ ಪ್ರೀತಿಯನು ಸಂಪಾದಿಸಿ ಅನ್ಯರನು ಲೆಕ್ಕಿಸದೆ ಚೆನ್ನಾಗಿ ಬಾಳುವ ಮಾನ್ನವರನ ಈ ಪರಿಯ ಬನ್ನಬಡಿಸುವುದು 1 ದುರುಳನಲ್ಲವೊ ನಿನ್ನ ಚರಣ ಸೇವಕರವನೊ ಪರಿಪಾಲಿಸುವುದು ನಿನ್ನ ಪರಮ ಧರ್ಮ ಗುರುಗಳಂತರ್ಯಾಮಿ ಕರಮುಗಿದು ಬಿನ್ನೈಪೆ ಶರಣ ರಕ್ಷಕನೆಂಬೊ ಬಿರಿದು ಸುಳ್ಳಾಗುತಿದೆ 2 ಶೋಕನಾಶಕ ವಿಗತಶೋಕನೆಂಬೋ ನಾಮ ನಾ ಕೇಳಿ ಮೊರೆಹೊಕ್ಕೆ ಲೋಕಬಂಧು ನಿ ರಾಕರಿಸದೆಮ್ಮ ನೀ ಸಾಕಬೇಕನುದಿನವು ವಾಕು ಮನ್ನಿಪುದು ಲೋಕೈಕ ರಕ್ಷಾಮಣಿಯೆ 3 ಗುಣವೆ ನಿನಗಿದು ಬರಿದೆ ದಣಿಸುವುದು ಶರಣರನು ಪ್ರಣತಾರ್ತಿಹರ ವಿಭೀಷಣ ಪಾಲಕ ಕ್ಷಣಕನಂತಪರಾಧವೆಣಿಸುವರೆ ಕಡೆಯುಂಟೆ ಮಣಿದು ಬಿನ್ನಹ ಮಾಳ್ಪೆ ದನುಜದಲ್ಲಣನೆ 4 ನಮೋ ನಮೋ ಬ್ರಹ್ಮಣ್ಯ ದೇವರ ದೇವ ದುರಿತ ನಮೋ ನಮೋ ಕಾರುಣ್ಯ ಶೀಲ ಸಜ್ಜನ ಪಾಲಾ ನಮೋ ನಮೋ ಜಗನ್ನಾಥವಿಠಲ ವಿಖ್ಯಾತ 5
--------------
ಜಗನ್ನಾಥದಾಸರು
ಇದು ಬಲು ಸುಖದಾಟ ಸಾಧಿಸಿ ನೋಡಿರೋ ನೀಟ ಧ್ರುವ ಕರ್ಮಕಮಂಧವಿಲ್ಲ ವರ್ಮ ತಿಳಿದವ ಬಲ್ಲ ಧರ್ಮ ಗುರುವಿನ ಸರಿ ಇಲ್ಲ ನಿರ್ಮಲ ನಿಜವೆಲ್ಲ 1 ಅನುಭವಕನುಭವದ ಅನಂದೋ ಬ್ರಹ್ಮದ ಬೋಧ ಏನೇಂದ್ಹೇಳಲಿ ಸುಸ್ವಾದ ತಾನೆ ತಾನಾದ 2 ಸಾಧಿಸಿದಲ್ಲದೆ ಖೂನ ಇದರಿಟ್ಟು ಮಹಿಪತಿ ಪೂರ್ಣ ಒದಗಿ ಕೈಗೂಡದು ಧನ ಸದ್ಗುರು ಚರಣ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ರಂಗಾನಟ್ಟೂಳಿಗೆ | ಇರಲಾರೆವಮ್ಮಾ ನಾವುಬಂದುಪಾಯವ ಕಾಣೆವೆ | ವನಿತೆ ಗೋಪ್ಯಮ್ಮಾ ಕೇಳೆ ಪ ಹಿರಿಯರಾದವರಿಗೆ | ಭರದಿ ಪೇಳೇವೆಂದರೆಸರಸಿಜ ಸಂಭವನಿಗೆ ಹಿರಿಯನೀತ ಕಾಣಮ್ಮ 1 ಮಾಯಗಳ ಮಾಡಿ ನಾವೂ | ಹೊಯಿಲೆಬ್ಬಿಸೇವೆಂದರೆಮಾಯಾದೇವಿಗೆ ಸಿಗದೆ | ಮಾಯಾವ ತೋರುವನಮ್ಮ 2 ಗುಮ್ಮನ ತೋರಿದರೀಗಾ | ಒಮ್ಮೊಮ್ಮೊ ಲೆಕ್ಕಿಸನಮ್ಮ ಅಮ್ಮಮ್ಮ ಶ್ರೀ ನಾರಸಿಂಹ | ಅದ್ಭತಾದ ದೈವ ಕಾಣಮ್ಮ 3 ಅರಿವಿ ಸರ್ಪಾನ ಮಾಡಿ | ಭರದಿ ಅಂಜಿಸೇವೆಂದರೆಖರೆಯವಾಗಿದ್ದ ದೊಡ್ಡಾ | ಉರಗಶಾಯಿ ಕಾಣಮ್ಮ 4 ಅರಸರಿಗ್ಹೇಳಿದರೂ | ಬರಿದಾಗುವುದೇ ನಿಜಧರೆ ಗಗನ ಪಾತಾಳದ | ಅರಸನಲ್ಲವೇನಮ್ಮ 5 ಕಾಸು ವೀಸಾ ಕೈಯ್ಯಾಳಿಟ್ಟೂ | ಕೂಸಿಗೆ ಬುದ್ಧಿ ಹೇಳುವೆಕೋಶ ಭಾಗ್ಯದಭಿಮಾನಿ | ಶ್ರೀಶನೇ ಈಶ ಕಾಣಮ್ಮ 6 ಪಾಪದ ಭೀತಿ ತೊರದು | ಭೂಪ ರಂಗ ಅಂಜಾನಮ್ಮಪಾಪ ರಹಿತರಾದವರ | ತಪಸಿಗಳೊಡೆಯಾನಮ್ಮ 7 ಮ್ಯಾಣದ ಚೇಳು ತೋರುವೆ | ಜಾಣ ರಂಗ ಅಂಜಾನಮ್ಮಮೇಣು ಮೂವತ್ತಾರು ಲಕ್ಷ | ತಾಂ ಶಿಂಶುಮಾರಾನಮ್ಮ 8 ಅನ್ನ ವಸನಗಳಿತ್ತು | ಮನ್ನಿಸೆವೆಂದಾರೆ ಪುಸಿಕನ್ಯೆ ದ್ರೌಪದಿ ದುಮ್ಮಾನ | ಮುನ್ನೆ ಇದಕ್ಕೇ ಸಾಕ್ಷಿಯಲ್ಲೆ 9 ಅಣ್ಣ ತಮ್ಮಾ ಬಂಧೂ ಬಳಗ | ಜನರುಂಟೇನೆ ಹೇಳೇವೆಅನಾದಿ ಕಾಲದಿಂದಾ | ಘನ್ನ ತಾನೇ ಏಕಮೇವ 10 ಚಿಣ್ಣ ನೀ ಅಣ್ಣಾ ಬಾಯೆಂದು | ಮನ್ನಿಸೇವೆಂದಾರೆ ಪುಸಿಅನಂತ ವೇದಗಳಿವನ | ಬಣ್ಣಿಸಿ ಹಿಂದಾಗಲಿಲ್ಲೆ 11 ಊರು ಕೇರಿಗಳಾ ಬಿಟ್ಟು | ದೂರ ಬಾರ ಹೋದೇವೇನೆಸಾರ ವ್ಯಾಪ್ತನಾಗಿ ಇಪ್ಪಾ | ಯಾರಿಗೆ ದೂರುವೆನಮ್ಮಾ 12 ಕದ್ದು ಕದ್ದೋಡುವಾ ನಮ್ಮ | ಲಿದ್ದು ಪಿಡಿಯಾಲೊಶವಲ್ಲೆ ರುದ್ದರನ್ನಾ ಓಡೀಸಿದಾ | ಮುದ್ದು ರಂಗಾನಿವನಮ್ಮ 13 ಹಗ್ಗದಿ ಕಟ್ಟೀದರಾಗ | ಬಗ್ಗನಮ್ಮಾ ನಿನ್ನ ಮಗಅಗ್ಗಳೀಕೆ ಖಳರ ಉಕ್ಕು | ತಗ್ಗಿಸಿ ಬಂದಿಹಾನಮ್ಮ 14 ಇಂದು ನಿನ್ನಾ ಕಂದನಾಟಾ | ಚಂದಾವೆಂದೂ ವಂದಿಸುವೆವೆತಂದೆ ವ್ಯಾಸಾ ವಿಠಲೆ*ಮಗೆ | ಬಾಂಧವಾನಾದನು ಕಾಣೆ 15
--------------
ವ್ಯಾಸವಿಠ್ಠಲರು
ಇದುವೇ ಸಾಧಕ ವೃತ್ತಿಗಳು | ಇದೇ ಅಬಾಧಕ ಯುಕ್ತಿಗಳು ಪ ಸದ್ಗುರು ಪಾದಕ ಸದ್ಭಾವದಿ ನಂಬಿ | ಹೃದ್ಗತ ಗುಜವನು ಪಡೆದಿಹನು | ಸದ್ಗತಿಕಾಂಕ್ಷಿತ ಹರಿ ಕೀರ್ತನೆಗಳ | ಉದ್ಗಾರ ಪ್ರೇಮದ ಮಾಡುವನು 1 ಬಲ್ಲವನು ಕಂಡೆರಗಿ ಸಿದ್ಧಾಂತದಾ | ಉಳ್ಳಸದ್ಭೋಧವ ಕೇಳುವನು | ಮೆಲ್ಲನೆ ಮನನದಿ ಧ್ಯಾಸವು ಬಲಿಯುತ | ಕ್ಷುಲ್ಲರ ಮಾತಿಗೆ ಮನ-ವಿದನು 2 ಅನ್ಯರ ಸದ್ಗುಣ ವಾರಿಸಿ ಕೊಳುತಲಿ | ತನ್ನವಗುಣಗಳ ಜರಿಸಿದವನು | ಸನ್ನುಡಿ ಬಿರುನುಡಿಗಳಕದೆ ಕುಜನರ | ಮನ್ನಿಸಿ ಶಾಂತಿಯನು ಜಡಿದಿಹನು 3 ಬುದ್ಧಿಯ ಹೇಳಿದರೆ ನೀ ಹಿತ ಬಗೆಯದೆ | ತಿದ್ದುದರಂದದಿ ತಿದ್ದುವನು | ಇದ್ದಷ್ಟರೊಳಗೆ ಸಾರ್ಥಕದಲಿ ದಿನ | ಗದ್ದಿರ ಹೊರಿಯಲು ಉದರವನು 4 ಸರ್ವರೊಳಗೆ ಬಾಗಿ ಶಮೆ ದಮೆಯಿಂದಲಿ | ಗರ್ವವ ತ್ಯಜಿಸಿಹ ಜನರೊಳಗೆ | ಸರ್ವಭಾವದಿ ಗುರು ಮಹಿಪತಿ ಸ್ವಾಮಿಯು | ಅರ್ವವ ಜಗಸನ್ಮತನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇದುಸ್ನಾನ ಇದುಸ್ನಾನ ಇದುಸ್ನಾನವಯ್ಯ ಸದಮಲಜ್ಞಾನಿಗಳು ಮನವೊಪ್ಪಿ ಮಾಡ್ವ ಪ ಇಟ್ಟು ಹಂಗಿಸದ್ದೆ ಸ್ನಾನ ಕೊಟ್ಟು ಕುದಿಯದ್ದೆ ಸ್ನಾನ ಕೊಟ್ಟದ್ದು ಕೊಡುವುದೇ ಶಿಷ್ಟ ತುಂಗಾಸ್ನಾನ ನಿಷ್ಠರಾಡದ್ದೆ ಸ್ನಾನ ದುಷ್ಟಸಂಗಳಿವುದೇ ಸ್ನಾನ ಶಿಷ್ಟಜನಸಂಗವೇ ನಿಜ ಕೃಷ್ಣಾಸ್ನಾನ 1 ಭವ ಅದು ಸ್ನಾನ ಕ್ಷೀರಸಾಗರ ಸ್ನಾನ ರಾಗನೀಗ್ವುದೆ ಸ್ನಾನ ಜಾಗರಣ ಸದಾಸ್ನಾನ ಭಾಗವತರೊಲುಮೆ ನಿಜ ಭಾಗೀರಥೀಸ್ನಾನ 2 ಮರೆವ ತರಿವುದೆ ಸ್ನಾನ ಅರಿವು ತಿಳಿವುದೆ ಸ್ನಾನ ಪರಮಜ್ಞಾನ ನಿಜ ಸುರಗಂಗಾಸ್ನಾನ ಕರುಣ ಪಡೆವುದೆ ಸ್ನಾನ ಮರಣಗೆಲಿವುದೆ ಸ್ನಾನ ಹರಿದಾಸರೊಡನಾಟ ಸರಸ್ವತೀ ಸ್ನಾನ 3 ವಾದನೀಗ್ವುದೆ ಸ್ನಾನ ಭೇದ ಅಳಿವುದೆ ಸ್ನಾನ ಮಾಧವನ ಕಥಾಶ್ರವಣ ಸದಾ ಯಮುನಾ ಸ್ನಾನ ವೇದವನರಿವುದೆ ಸ್ನಾನ ಬೋಧಪಡೆವುದೆ ಸ್ನಾನ ಸಾಧುಸಜ್ಜನಸೇವೆ ಗೋದಾವರೀಸ್ನಾನ 4 ನೇಮನಿತ್ಯವೆ ಸ್ನಾನ ತಾಮಸ್ಹರಣವೆ ಸ್ನಾನ ಕಾಮತೊಳೆವುದೆ ನಿಜ ಭೀಮಾನದೀಸ್ನಾನ ಕ್ಷೇಮಸಾಗರ ತ್ರಿಭೂಮಿಯೊಳಧಿಕ ಶ್ರೀ ರಾಮನಡಿಭಕುತಿಮುಕ್ತಿ ಹೇಮಾನದೀಸ್ನಾನ 5
--------------
ರಾಮದಾಸರು
ಇದೇ ನೋಡಿ ನಿಜ ಉಪಾಯ ಸದಮಲ ಸುಖದಾಶದಾಶ್ರಯ ಧ್ರುವ ಸಾಧನವಿಲ್ಲಿದೆ ಶ್ರೇಯಸುಖ ಬ್ಯಾರದೆ ಕೇಳತಿಸೂಕ್ಷ್ಮ ಮಾತು ಭೇದಿಸಿ ನೋಡೇನೆಂದರೆ ತಿಳಿದೀತು ಸಾಧಿಸಿ ಕೈಗೊಟ್ಟಿತು 1 ಗೋವಗೋಂತಲ್ಲದೆ ಬ್ಯಾರೆದೆ ಘನ ಭಾವಿಸದೆ ನಿಜಖೂನಾ ಸಾವಧವಾದವಗಿದೇನಿಧಾನ ಭವಹರ ಗುರುಕರುಣಾ 2 ತಾನೆಂಬುದರೊಳು ತಾನೆತಾನಾಗೇದ ಭಾನುಕೋಟಿ ಉದಿತ ದೀನ ಮಹಿಪತಿಸ್ವಾಮಿಯು ಸಾಕ್ಷಾತಾನಂದ ಘನಭರಿತಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನೋಡು ನಿನ್ನ ನಿಜವಾದ ಸ್ವರೂಪ ಜೀವ ಇದೇ ಸಕಲ ಜಗದ ಕಾರಣಾ ಬ್ರಹ್ಮ ಪೂರಣ ಪ ಅನಿಸುವಿಕೆಯು ಇಲ್ಲದಿರುವಾ ತೋರಿಕಿಲ್ಲದಾ ಬರಿ ಇರವಿದೇ ಮನಸಿಲ್ಲದೆ ಬೆಳಗುತಿರುವ ನಿದ್ರೆಹೊದ್ದದಾ ಬರಿ ಅರಿವಿದೆ ಘನ ನಿರಾಕಾರವೇ 1 ವಿಷಯಜನಿತ ದುಃಖಸುಖದ ಸುಳಿವು ತೋರದ ಘನಾನಂದವೇ ಶೇಷ ಮಾತ್ರನಾಗಿ ಸದಾ ಶಾಂತಿರೂಪದ ನಿರ್ವಿಕಾರ ನೀ ಹಸನಾಗಿ ತಿಳಿದುಕೊಳ್ಳು ಬೋಧವಾ ನೀನದೆ ಎಂಬುದ ಈ ಸತ್ಯಸ್ವರೂಪವೇ 2 ಸ್ವರೂಪಾತ್ಮ ಮಾತ್ರ ಪರಮಸತ್ಯನಾಗಿಹ ನಿತ್ಯನಾಗಿಹ ಬರೀ ತೋರಿ ಅಡಗುತಿರುವ ಜಗವು ಭ್ರಾಮಕಾ ಮಿಥ್ಯಾಭಾಸಕ ಗುರುವರ್ಯ ಶಂಕರಾತ್ಮಬೋಧನಾವೇದಾಂತಸಾರವಾ ಪರಮಾತ್ಮ ಜ್ಞಾನವಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಇದೇ ಸುಪಥನೋಡಿ ಸ್ವಹಿತ ಸಾಧು ಜನರ ಸುಸನ್ಮತ ವೇದಾಂತದ ಸುಸಾರಬೋಧವ್ಹೇಳಿದ ವಸ್ತು ಭಗವದ್ಗೀತಾ ಸಂದಿಸೀಹ್ಯದÀು ಸದೋದಿತ ಭೇದಿಸಿ ನೋಡಲು ತನ್ನೊಳಗ ತಾಂ ದೋರುತಿದೆ ಸಿದ್ದಾಂತ 1 ಮಮೈವಾಂಶೋ ಜೀವಲೋಕೇ ಜೀವಭೂತ ಸನಾತನ ಃ ಸ್ವಾಮಿ ಹೇಳಿದ್ದ ತಿಳಿಯಲಿಕ್ಕೆ ಆತ್ಮಾನುಸಂಧಾನದ ಖೂನ ನೇಮದಿಂದಲಿ ಹೇಳಿದ ಮಾತಿಗೆ ಮುಟ್ಟಿದನೊಬ್ಬರ್ಜುನ ತುಂಬೇದ ವಿಶ್ವದಿ ಪರಿಪೂರ್ಣ 2 ಏಕಾಂಶೇನ ಸ್ಥಿತೋ ಜಗತ ವೆಂಬ ವಾಕ್ಯದನುಭವ ಸೇವಿಸಿದೊಬ್ಬ ಶುಕದೇವ ನಾಲ್ಕುಶೂನ್ಯವು ಮೆಟ್ಟಿನೋಡಲು ಭಾಸುತಿದೆ ಸುಮನದೈವ ತಾನಾಗೀ ಹ್ಯದು ಜೀವ 3 ಜಾನಾತಿ ಪುರುಷೋತ್ತಮಂ ಮನುಷ್ಯರೊಳಗಧಮಾಧಮಾ ಕ್ರಮತಿಳಿದವನೆ ಪರಮಯೋಗಿ ಆತನೇ ಉತ್ತಮೋತ್ತಮಾ ತಾಂ ಕೇಳಿ ನಿಜಾಧ್ಯಾತ್ಮಾ 4 ` ಹರಿ ಃ ಓಂ ತತ್ಸದಿತಿ ' ವೆಂಬ ನಿಜ ತಿಳಯಬೇಕಿದೆ ಮುಖ್ಯ ಏಳುನೂರು ಶ್ಲೋಕದವಾಕ್ಯ ತ್ವರ ತಾಂ ತಿಳಿಯದು ಒಂದೇ ಮಾತಿನ ಬ್ರಹ್ಮಾದಿಕರಿಗಾಟಕ್ಯ ತರಳಮಹಿಪತಿಗಿದೆ ಸೌಖ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಹೌದು ಭವತರಿಯುವ ಶಸ್ತ್ರ ಪದೇ ಪದೇ ಸಿರಿವರನ ಸ್ತೋತ್ರ ಪ ಅಧಮಮತಿಯ ಬಿಟ್ಟು ಸದಮಲ ಮನದಿಂ ವಿಧವಿಧ ಹರಿಯೆಂದೊದುರುತ ಕಾಣುವುದೆ ಅ.ಪ ದಾನಧರ್ಮಯಜ್ಞ ಇವು ಯಾಕೊ ಸ್ನಾನ ಮೌನ ಜಪ ಮತ್ತ್ಯಾಕೊ ನಾನಾ ಮಂತ್ರ ತಂತ್ರ ಗೋಜ್ಯಾಕೆಬೇಕೊ ಕ್ಷೋಣಿ ತಿರುಗಿ ಬಹು ದಣಿಲ್ಯಾಕೊ ನಾನಾಪರಿಯಲಿಂದ ದೀನದಯಾಪರ ಗಾನಲೋಲನ ಭಜನಾನಂದ ಪಡೆವುದೆ1 ವೇದಪುರಾಣ ಪುಣ್ಯ ಶಾಸ್ತ್ರಗಳ್ಯಾತಕೊ ಸಾಧನಸಿದ್ಧಿಗಳ ಬಲವ್ಯಾಕೋ ಭೇಧಯೋಗದ ಬಹು ಬೋಧಗಳ್ಯಾತಕೊ ಓದಿಓದಿ ದಿನಗಳಿಲ್ಯಾಕೊ ವೇದಗಮ್ಯದಾದಿ ಮೂರುತಿ ಶ್ರೀ ಪಾದವರಿತು ಆರಾಧಿಸುತಿರುವುದೆ 2 ಕಾಶಿ ಕಂಚಿ ಕಾಳಹಸ್ತಿ ತಿರುಗಲ್ಯಾಕೊ ಸಾಸಿರದೈವಕೆ ಬಾಗುವುದ್ಯಾಕೊ ಮಾಸಪಕ್ಷ ವ್ರತ ನೇಮಗಳ್ಯಾತಕೊ ಘಾಸಿಯಾಗಿ ದೇಹ ದಂಡಿಸಲ್ಯಾಕೊ ಶೇಷಶಯನ ನಮ್ಮ ಶ್ರೀಶ ಶ್ರೀರಾಮನ ಲೇಸಾದ ನಾಮವೊಂದೆ ಧ್ಯಾಸದಿಟ್ಟು ನುಡಿ 3
--------------
ರಾಮದಾಸರು
ಇದ್ದರಿರಬೇಕು ಅನುದಿನಾ | ಒಳ್ಳೆವರ ಸಹವಾಸಾ ಪ ಅಂಗಸಂಗಗಳಿಂದ | ಮಂಗಳೋತ್ಸಾಹವಾಗಿ | ಕಂಗಳಿಗಿದಿರಿಡುವದು ಉಲ್ಹಾಸಾ1 ಸಾರಿ ಬೀರಿ ಬೋಧವಾ | ದಾರಿದೋರಿ ಭಕ್ತಿಯಾ | ದೂರ ಮಾಡುವರು | ಭವಭಯ ಕ್ಲೇಶಾ 2 ಗುರುವರ ಮಹಿಪತಿಸುತಪ್ರಭು ಸ್ಮರಣೆಯಾ | ಮರಹು ಮರೆಸುವರದರುದ್ದೇಶಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇನಿಯಗೆನ್ನೊಡನೆ ಮುನಿಸೋ ಪ್ರೀತಿಯೋ ಪೇಳೆವನಜಾಕ್ಷಿಯವನೆಸಗಿದುದಾ ಪೇಳ್ವೆನೆ ಪ ಮೃಗಮದ ತಿಲಕವ ಪಣೆಗೆ ತಾನಿಡಲಿಲ್ಲಅಗಿಲುಗಂಧವ ಮೈಗೆ ತೀಡಲಿಲ್ಲ ಸೊಗಸು ಸಂಪಿಗೆ ಸರವಮುಡಿಸಿ ಝಗಝಗಿಪ ಮುತ್ತಿನ ಸರವಹಾಕದೆ ಎನ್ನ ಮುಗುಳು ಮೊಲೆಗೆಸೆಳ್ಳುಗುರಿಕ್ಕದಿದ್ದ ಮೇಲೆ1 ಗುರುಕುಚರ್ಚಿತ ಮೃಗಮದ ಪತ್ರವ ಸೆರಗಿನಿಂದೊರಸಿದನೆಕುಂಕುಮಗಂಧವ ಭರದಿ ಲೇಪಿಸಿದನೆ ತಾನೆತಾಂಬೂಲವ ಹರುಷದಿ ಕರದಿತ್ತನೆಆಲಿಂಗಿಸಿ ಪರಮ ಸಂತೋಷದಿ ತಿರುಗಿ ನೋಡಿದನೆ 2 ಧರಿಸಿದ ಮಿಸುನಿಯ ಆಭರಣಂಗಳ ಭರದಿಂದ ತೆಗೆದ ತಾನೆಚಿನ್ನದುಂಗುರವ ಬೆರಳಿಗೆ ನಲಿದಿಟ್ಟನೆತರುಣಿ ಬಾರೆಂದು ನಂಬುಗೆಗೊಟ್ಟನೆಶ್ರೀ ಕೆಳದಿಯ ಪುರದ ರಾಮೇಶ ಎನ್ನನೆರೆದು ಮನ್ನಿಸಿದನೆ3
--------------
ಕೆಳದಿ ವೆಂಕಣ್ಣ ಕವಿ
ಇನ್ನಾದರೂ ದಯಬಾರದೇ ದಾಸನಮೇಲೆ ಇನ್ನಾದರೂ ದಯಬಾರದೇ ಪ ಪನ್ನಗ ಶಯನನೇ ಚೆನ್ನಕೇಶವನೇ ನಿಂನ್ನನು ನಂಬಿದ ಶರಣನಮೇಲೇ ಅ.ಪ ಹಲವು ಯೋನಿಗಳಲ್ಲಿ ನೆರೆ ಪುಟ್ಟಿ ಬಂದೇ ಹಲವು ಯಾತನೆಗಳ ಸಹಿಸುತ್ತ ಬಂದೇ ಹಲವು ರೀತಿಗಳಿಂದ ದುಃಖವ ತಿಂದೇ ಸಲೆ ನಂಬಿ ಹರಿಗೀಗ ಶರಣೆಂದು ಬಂದೇ 1 ಸೇರಿ ಬಗೆಯುತಲಿವೆ ಪಂಚ ವ್ಯಾಘ್ರಗಳೂ ಗಾರು ಮಾಡುತಲಿದೆ ಅಹಂ ಎಂಬ ಸಿಂಹವು ಶೆರಿಯ ಭಜಿಸುತ್ತ ಬಲೆದಾಟಿ ಬಂದೇ 2 ಬಂಧು ಬÁಂಧವರೆಂಬ ಕ್ರೂರವರ್ಗಗಳೆನ್ನ ತಿಂದು ಸುಲಿಯುತಲಿವೆ ವಂಚಿಸಿ ಹರಿಯೇ ಅಂದದಿ ದೂರ್ವಾ ಪಟ್ಟಣದಿ ನಿತ್ತಿರುವಂಥ ಸಿಂಧು ಶಾಯಿಯೇ ರಂಗ ಸಲಹೆನ್ನ ತಂದೇ 3
--------------
ಕರ್ಕಿ ಕೇಶವದಾಸ
ಇನ್ಯಾತಕನುಮಾನವಯ್ಯಾ ಪ ಅನ್ಯಥಾ ಗತಿ ಕಾಣೆ ನಿನ್ನ ಚರಣಗಳಾಣೆ ಅ.ಪ. ನಾಶರಹಿತನೆ ನಮಗೆ ಏಸೇಸು ಕಲ್ಪಕ್ಕು ವಾಸ ಏಕತ್ರದಲ್ಲಿ ನೀ ಸಾಕ್ಷಿಯಾಗಿದ್ದು ದಾಸನಾದವಗಪ್ರ- ಯಾಸದಿ ಫಲಗಳುಣಿಸಿ ಲೇಶ ಘನಮಾಡಿ ಸಂತೋಷಪಡುವಾ ನಿನ್ನ ದ್ವೇಷಿ ನಾನಲ್ಲವಯ್ಯ ದೇಶಕಾಲಾದಿಗಳಿಗೀಶ ನೀನೆಂದರಿದು ದಾಸನಾಗಿರುವೆನೆಂದಾಶೆ ಪುಟ್ಟಿದ ಬಳಿಕ 1 ನಿತ್ಯ ತೃಪ್ತನೆ ನಿನ್ನ ಕೃತ್ಯಕೇನೆಂಬೆನೋ ಸತ್ಯಸಂಕಲ್ಪ ಹರಿಯೇ ಮೃತ್ಯುಮಾರಿಗಳೆನಗೆ ಹತ್ತಿಕೊಂಡದರಿಂದ ಸತ್ತುಪುಟ್ಟುವೆಯಿನ್ನು ದತ್ತಕರ್ತೃತ್ವ ಬೆನ್ಹತ್ತಿಕೊಂಡದರಲ್ಲಿ ಅತ್ಯಪರಾಧಿಯಂದತ್ತ ಮೊಗದಿರುಗದಿರು ಭೃತ್ಯವತ್ಸಲನೆಂದಗತ್ಯ ಮನಸೋತ ಬಳಿಕ 2 ವೇದವೇದ್ಯ ಸ್ವಗತ ಭೇದವರ್ಜಿತ ಪೂರ್ಣ ಮಾಧವ ಮಹಿದಾಸ ಆದಿನಾರಾಯಣ ವಿನೋದ ವಿಷ್ವಕ್ಸೇನ ಶ್ರೀದವಿಠಲಾ ನಿನ್ನ ಕ್ರೋಧ ವರರೂಪ- ವಾದ ವಾರ್ತೆಯು ಕೇಳಿ ಧೈರ್ಯಬಿಡದಾ ಬಳಿಕಿನ್ನು 3
--------------
ಶ್ರೀದವಿಠಲರು