ಒಟ್ಟು 815 ಕಡೆಗಳಲ್ಲಿ , 98 ದಾಸರು , 659 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೇಶವ ಜಗದೀಶ ಸಾಸಿರಭಾಸುರಕೋಟಿಸಂಕಾಶ ವಾಸವಾದಿಗಳ ವಂದ್ಯ ಸೀತಾಪತೆ 1 ನಾರಾಯಣ ಸಕಲವೇದಪಾರಾಯಣ ಕೃಷ್ಣ ನಾರದಾದಿಗಳ ವಂದ್ಯ ಸೀತಾಪತೆ 2 ಮಾಧವ ಮಂಗಳಗಾತ್ರ ವೇದವನ್ನೆ ಕದ್ದು ಒಯ್ದ ಆ ಖಳನ ಕೊಂದೆ ಸೀತಾಪತೆ 3 ಗೋವಿಂದ ಗೋಕುಲಬಾಲ ಗೋಪಿಯರ ಮನೋಹರ ಆದಿ ಕೂರ್ಮಾವತಾರ ಸೀತಾಪತೆ 4 ವಿಷ್ಣುವೆ ಯತಿಗಳ ವಂದ್ಯ ಅಷ್ಟಲಕ್ಷ್ಮಿಯರ ನಾಥ ದಿಟ್ಟ ವÀರಾಹರೂಪನಾದ ಸೀತಾಪತೆ 5 ವೈರಿ ಯದುಕುಲಕ್ಕೆ ತಿಲಕನಾದ ಚೆಲುವನಾದ ಹರಿ ನೀನೆ ಸೀತಾಪತೆ 6 ತ್ರಿವಿಕ್ರಮರೂಪನಾಗಿ ತ್ರಿಜಗವನ್ನೆ ಪಾಲಿಸಿದ ವಾಮನರೂಪಿ ನೀನೆ ಸೀತಾಪತೆ7 ವಾಮನರೂಪವ ತಾಳಿ ಆ ಮಹಾಬಲಿಯನ್ನೆ ತುಳಿದು ನೇಮದಿ ಕ್ಷತ್ರೇರ ಕೊಂದ ಸೀತಾಪತೆ 8 ಶ್ರೀಧರ ನೀನೆಂದೆನಿಸಿ ಶೋಷಿಸಿ ಖಳg Àನೆಲ್ಲ ಜಾನಕಿಯ ತÀಂದ ರಾಮ ಸೀತಾಪತೆ 9 ಹೃಷೀಕೇಶ ನೀನೆಂದು ಋಷಿಗಳು ಸ್ತುತಿಯ ಮಾಡಿ ವಸುದೇವಸುತ ಕೃಷ್ಣ ಸೀತಾಪತೆ 10 ಬುದ್ಧಾವತಾರ ಕೃಷ್ಣ ಸೀತಾಪತೆ 11 ದಾಮೋದರನೆಂದು ನಿಮ್ಮ ದೇವತೆಗಳೆಲ್ಲ ಕರೆಯೆ ಆ ಮಹಾ ಕಲ್ಕ್ಯ್ಕನಾದ ಸೀತಾಪತೆ 12 ಸಂಕರುಷಣ ದೇವ ನಿಮ್ಮ ಕಿಂಕರರು ನಾವೆಲ್ಲರಯ್ಯ ಪಂಕಜಾಸನವಂದ್ಯ ರಾಮ ಸೀತಾಪತೆ 1 3 ವಾಸುದೇವ ನಿಮ್ಮ ಪಾದಕ್ಕೆ ವಂದನೆಯ ಮಾಡುವೆನಯ್ಯ ದೋಷರಾಶಿ ನಾಶಮಾಡು ಸೀತಾಪತೆ 1 4 ಸುರರು ಎದ್ದು ನಿನ್ನೆ ಪೊಗಳುತ್ತಿರೆ ಉದ್ಧಾರ ಮಾಡಿದ ದೇವ ಸೀತಾಪತೆ 15 ಅನುದಿನ ನಿನ್ನ ಕರೆಯೆ ಅನಿಮಿತ್ತಬಂಧು ಕೃಷ್ಣ ಸೀತಾಪತೆ 16 ಮನೋಹರುಷ ನೀಡಿದ ರಾಮ ಸೀತಾಪತೆ 17 ಅಧೋಕ್ಷಜ ಲೋಕಗಳಿಗೆ ಆಧಾರಭೂತನಾ ಗಿರುವೆ ವೇದವೇದ್ಯರಾಮ ಸೀತಾಪತೆ 18 ಬೋಧನೆಯನ್ನು ಮಾಡಿದ ಸೀತಾಪತೆ 19 ಅಚ್ಯುತ ವಿಶ್ವಾಮಿತ್ರ ಅತಿಶಯ ಯಾಗವ ಕಾಯ್ದ ಭಕ್ತವತ್ಸಲ ರಾಮ ಸೀತಾಪತೆ 20 ಜನಾರ್ದನರೂಪನಾಗಿ ಜಾನಕಿಯ ತಂದ ಜಾಹ್ನವೀಜನಕ ರಾಮ ಸೀತಾಪತೆ 21 ಉಪೇಂದ್ರನೆ ಉದ್ಧÀವಗೆ ಉಪದೇಶವನೆ ಮಾಡಿ ಅಪರಿಮಿತಪದವಿ ಕೊಟ್ಟ ಸೀತಾಪತೆ 22 ಕಾಲ ತಪವ ಮಾಡಿ ಚರಿಸುವರಿಗೆ ಮೋಕ್ಷವಿತ್ತೆ ಸೀತಾಪತೆ 2 3 ರÀಕ್ಷಿಸಯ್ಯ ಕೃಷ್ಣ ರಾಮ ರಕ್ಷಿಸಯ್ಯ ಹಯವದನ ಪಕ್ಷಿವಾಹನ ರಾಮ ಸೀತಾಪತೆ 24
--------------
ವಾದಿರಾಜ
ಕೇಳೆ ನಂದನ ಕಾಂತೆ ಹೇಳೆ ಮಗಗೆ ಬುದ್ದಿ ಬಾಲೆಯರನು ಇರಗೊಡನೆ ದಮ್ಮಯ್ಯ ಪ ಕುತ್ತಿಗೆಯೊಳಗಣ ಮುತ್ತಿನ ಸರಗಳ ಕಿತ್ತು ಹರಿದು ಚೆಲ್ಲಿ ಪೋದ ದಮ್ಮಯ್ಯ 1 ಕಟ್ಟಿದ ಕರುಗಳ ಬಿಟ್ಟು ಒಲೆಯ ಮೇಲೆ ಇಟ್ಟ ಪಾಲ್ಗಳನೆಲ್ಲ ಕುಡಿದ ಗೋಪಮ್ಮ 2 ಪಿಕ್ಕದೊಳಿಹ ಬೆಣ್ಣೆ ಚೊಕ್ಕನೆಲ್ಲವ ಮೆದ್ದು ಮರ್ಕಟಗಳಿಗಷ್ಟನಿತ್ತ ದಮ್ಮಯ್ಯ 3 ಬೇಡವೆಂದರೆ ಛಲಗೇಡಿ ಹಿಡಿದು ಎನ್ನ ನೋಡಿ ಮೋಸವ ಮಾಡಿ ಹೋದ ದಮ್ಮಯ್ಯ 4 ಮರುತಾತ್ಮಜ ಕೋಣೆ ಲಕ್ಷ್ಮೀರಮಣಗೊಮ್ಮೆ ನಾರಿ ನೀ ಬುದ್ದಿಯ ಹೇಳೆ ದಮ್ಮಯ್ಯ 5
--------------
ಕವಿ ಪರಮದೇವದಾಸರು
ಕೈಲಾಸದಾಶೆಯಲ್ಲಿಹುದೊಶೈಲೇಂದ್ರಸುತೆಯರಸ ಶಿವನ ಒಲವಿಲ್ಲದವಗೆ ಪ. ಗುರುಹಿರಿಯರರಿಯದಗೆ ಪರಗತಿಯ ತೊರೆದವಗೆವರಧರ್ಮಪಥವ ಮರೆದವಗೆದುರುಳರನೆ ಪೊರೆದು ಪರಸತಿಯ ನೆರೆದವಗೆ 1 ದೀನಜನರೊಡನಾಡಿ ಹೀನಕರ್ಮವ ಮಾಡಿಆನೆಂಬ ಮಮತೆಯನೆ ಕೂಡಿದಾನವನೆ ಬೇಡಿ ದುರ್ದಾನಕೆ ಮರುಳಹಗೆ 2 ಅನಾಚಾರಂಗಳ ಬಿಡÀದೆ ಮನೆಗೆ ಬಂದರು ಕೊಡದೆಧನದ ಗಂಟುಗಳನು ಕಡಿಯದೆಅನುಸರಿಸಿ ನಡೆಯದೆ ಪರರ ಜರಿದು ನುಡಿವವಗೆ 3 ವಾದಿರಾಜನ ನುಡಿಯ ಹಿತವೆಂದು ಲಾಲಿಸದೆಕ್ರೋಧಮಯನಾಗಿ ದೂಷಿಪಗೆಪಾದಕೆರಗದೆ ಜನನಿಯನಾದರಿಸದವಗೆ 4 ಹಯವದನನಲ್ಲೆಂದು ತಾನೆಲ್ಲ ಬಲ್ಲೆಯೆಂದುದಯವುಳ್ಳವರ ದೈವನೆನದೆ ಈಸ್ವಯಂಭು ಲಿಂಗದ ಕಲ್ಲೇ ದೈವವೆಂಬುವಗೆ 5
--------------
ವಾದಿರಾಜ
ಕೊಕೊಕೋ ಎನ್ನಿರೊ ಕುಂಭಿನಿಯವರೆಲ್ಲಕೊಕೊಕೋ ಎನ್ನಿರೊ - ನಮ್ಮ ಪ ಗೋಕುಲದೊಳಗೊಬ್ಬ ಕಳ್ಳ ಬರುತಾನೆಂದುಕೊಕೊಕೋ ಎನ್ನಿರೊ ಅ ಹೊದ್ದಿ ಮೊಲೆಯನುಂಡವಳಸುವನೆ ಕೊಂದಮುದ್ದುಗಾರ ಕಳ್ಳ ಕೊಕೊಕೋ ಎನ್ನಿರೊಕದ್ದುಕೊಂಡೊಯ್ವ ರಕ್ಕಸರನೆಲ್ಲರ ಕಾಲಲೊದ್ದೊರಸಿದ ಕಳ್ಳ ಕೊಕೊಕೋ ಎನ್ನಿರೊಹದ್ದು ಹಗೆಯ ಹಾಸಿಗೆಯ ಮೇಲೊರಗಿದಮುದ್ದುಗಾರ ಕಳ್ಳ ಕೊಕೊಕೋ ಎನ್ನಿರೊಅರ್ಧದೇಹನ ಕೈಯ ತಲೆಯ ಕಪಟದಿಂದಕದ್ದು ಬಿಸುಟ ಕಳ್ಳ ಕೊಕೊಕೋ ಎನ್ನಿರೊ 1 ಮಣಿ ಮಲ್ಲಿಗೆ ದಂಡೆಯರಂಜೆ ಕದ್ದ ಕಳ್ಳ ಕೊಕೊಕೋ ಎನ್ನಿರೊಗುಂಜಿಯ ದಂಡೆಯ ಕಲ್ಲಿಯ ಚೀಲದಮಂಜು ಮೈಯ್ಯ ಕಳ್ಳ ಕೊಕೊಕೋ ಎನ್ನಿರೊಅಂಜದೆ ಗೊಲ್ಲರ ಹಳ್ಳಿಯೊಳಗೆ ಹಾಲನೆಂಜಲಿಸಿದ ಕಳ್ಳ ಕೊಕೊಕೋ ಎನ್ನಿರೊಸಂಜೆ ಬೈಗಿನಲ್ಲಿ ಕರೆಯುವ ಸತಿಯರಅಂಜಿಸಿದ ಕಳ್ಳ ಕೊಕೊಕೋ ಎನ್ನಿರೊ 2 ಕೇಸರಿ ಎಂಬ ರಕ್ಕಸರನೆಲ್ಲರ ಕೊಂದವೇಷಧಾರಿ ಕಳ್ಳ ಕೊಕೊಕೋ ಎನ್ನಿರೊಮೋಸದಿ ಬಲಿಯ ದಾನವ ಬೇಡಿ ಅನುದಿನಬೇಸರಿಸಿದ ಕಳ್ಳ ಕೊಕೊಕೋ ಎನ್ನಿರೊಮೀಸಲ ಅನ್ನವ ಕೂಸಾಗಿ ಸವಿದುಂಡವೇಷಧಾರಿ ಕಳ್ಳ ಕೊಕೊಕೋ ಎನ್ನಿರೊಸಾಸಿರ ನಾಮಕ್ಕೆ ಹೆಸರಾದ ಚಪ್ಪನ್ನದೇಶದ ದಾರಿಗಳ್ಳ ಕೊಕೊಕೋ ಎನ್ನಿರೊ 3 ಆಕಳೊಳಾಡಿ ಪರಲೋಕಕೆ ನಡೆದಂಥಆಕೆವಾಳ ಕಳ್ಳ ಕೊಕೊಕೋ ಎನ್ನಿರೊಭೂಕಾಂತೆಯ ಸೊಸೆಯರನೆತ್ತೆ ಬಲುಹಿಂದನೂಕಿ ತಂದ ಕಳ್ಳ ಕೊಕೊಕೋ ಎನ್ನಿರೊಗೋಕುಲದೊಳು ಪುಟ್ಟಿ ಗೊಲ್ಲರೆಲ್ಲರ ಕೈಲಿಸಾಕಿಸಿಕೊಂಡ ಕಳ್ಳ ಕೊಕೊಕೋ ಎನ್ನಿರೊಸಾಕಾರನಾಗಿ ಈ ಲೋಕವನೆಲ್ಲವಆಕ್ರಮಿಸಿದ ಕಳ್ಳ ಕೊಕೊಕೋ ಎನ್ನಿರೊ4 ಕ್ಷೀರವಾರಿಧಿ ವೈಕುಂಠನಗರಿಯನುಸೇರಿಸಿದ ಕಳ್ಳ ಕೊಕೊಕೋ ಎನ್ನಿರೊದ್ವಾರಾವತಿಯನು ನೀರೊಳು ಬಚ್ಚಿಟ್ಟಊರುಗಳ್ಳ ಬಂದ ಕೊಕೊಕೋ ಎನ್ನಿರೊದ್ವಾರಕೆಯಾಳುವ ಉಭಯದಾಸರ ತನ್ನಊರಿಗೊಯ್ದ ಕಳ್ಳ ಕೊಕೊಕೋ ಎನ್ನಿರೊಕಾರಣಾತ್ಮಕ ಕಾಗಿನೆಲೆಯಾದಿಕೇಶವಕ್ಷೀರ ಬೆಣ್ಣೆಯ ಕಳ್ಳ ಕೊಕೊಕೋ ಎನ್ನಿರೊ 5
--------------
ಕನಕದಾಸ
ಕೊಟ್ಟಿಗೋತ್ಸವ ಗೀತೆ ಕೊಟ್ಟೊಗೋತ್ಸವ ನೋಡಿ ಸೃಷ್ಟಿಗೀಶ್ವರನ ಪ. ವಾಸುದೇವನ ಸಹಸ್ರಸ್ತಂಭಮಂಟಪವ ದಾಸರು ಬಂದು ಶೃಂಗಾರವ ಮಾಡಿ ದೇಶದ ಮೇಲುಳ್ಳ ಬೊಂಬೆಗಳನು ರಚಿಸಿ ಲೇಸಾದ ಮೇಲುಕಟ್ಟುಗಳ ಕಟ್ಟಿದರು 1 ಸೃಷ್ಟಿಗೀಶ್ವರನಾದ ರಂಗನಾಥನಿಗೆ ಕೊಟ್ಟಿಗೋತ್ಸವವನ್ನು ನಡೆಸಬೇಕೆನುತ ಕಟ್ಟಿ ಕಂಕಣವನ್ನು ನಾಲ್ಕುವೇದಗಳಿಂದ ಭಟ್ಟರು ಓದಿ ಪೇಳಿದರು ಸಂಭ್ರಮದಿ 2 ವಜ್ರದ ಕಿರೀಟವಿಟ್ಟು ರತ್ನದಂಗಿಯ ತೊಟ್ಟು ಅರ್ಜುನಸಖ ಸಂಭ್ರಮದಲಿ ಪೊರಟು ಸ್ವರ್ಗದ ಬಾಗಿಲೊಳಗೆ ತಾ ನಿಂದು ಮೂರ್ಜಗವೆಲ್ಲ ಮೋಹಿಸುತಲೆ ಬಂದು 3 ಮಂದಹಾಸದಲಿ ನಿಂದು ಮಂಟಪದಲಿ ಬಂದ ಆಳ್ವಾರರಿಗಾಸ್ಥಾನವಿತ್ತು ಚಂದದಿಂದ ದಿವ್ಯ ಪ್ರಬಂಧವ ಕೇಳಿ ಒಂದುಅಂಕಣ ಬಿಡದೆ ಬಂದ ಶ್ರೀರಂಗ 4 ಸಂಕ್ರಾಂತಿಯಲಿ ಶಂಕರನ ಪ್ರಿಯನು ಶಂಕೆ ಇಲ್ಲದೆ ಆಭರಣವನು ಧರಿಸಿ ಪಂಕಜಮುಖಿಯರೊಡಗೊಂಡು ಹರುಷದ ಲಂಕಾರವಾಗಿ ಬಂದನು ಮಂಟಪಕೆ 5 ಮತ್ತೆ ಮರುದಿನದಲ್ಲಿ ಭಕ್ತವತ್ಸಲನು ಮುತ್ತಿನಅಂಗಿ ಮುಂಡಾಸನಳವಡಿಸಿ ಮುತ್ತಿನಛತ್ರಿ ಚಾಮರ ಸೂರೆಪಾನದಿ ಮುತ್ತರಸಿಯ ಮಂಟಪಕೆ ನಡೆತಂದ 6 ಅರ್ಥಿಯಿಂಬಂದು ತಾ ಅಶ್ವವನೇರಿ ಮತ್ತೆ ಬೇಟೆಯಮೃಗವನೆ ಕೊಂದು ಸಂ ಕ್ರಾಂತಿಯ ಪಾರ್ವೇಟೆಯನಾಡಿ ಸಂತೋಷದಿ ಬಂದ 7 ನಾರಿವೇಷವ ಆಳ್ವಾರರಿಗೆ ಧರಿಸಿ ಪೇರಿಯ ತಾ ಬಿಟ್ಟು ತೇಜಿಯನೇರಿ ಚೋರತನವ ಮಾಡಿದ ಭಕ್ತರಿಗೆ ಮೂಲಮಂತ್ರವ ಪೇಳಿ ಮುಕ್ತಿಯನಿತ್ತ 8 ಮಿಂದು ಮಡಿಯನುಟ್ಟು ಅಂದು ರಾತ್ರಿಯಲಿ ಹ ನ್ನೊಂದು ವಿಧ ಭಕ್ಷ್ಯಗಳನು ತಾ ಗ್ರಹಿಸಿ ಬಂದ ಆಳ್ವಾರರಿಗೆ ಮುಕ್ತಿಯನಿತ್ತು ಬಂದು ಆಸ್ಥಾನದಿ ನಿಂದ ಶ್ರೀರಂಗ 9 ಭಕ್ತರು ಮಾಡಿದ ಪ್ರಬಂಧವನೆಲ್ಲ ಭಕ್ತಿಯಿಂದಲೆ ಪೇಳಿದ ಆಚಾರ್ಯರಿಗೆ ಯುಕ್ತಿ ತೋರಿದ ಪರಾಶರವ್ಯಾಸರಿಗೆ ಬ್ರಹ್ಮ ರಥವನಿತ್ತ ಬ್ರಹ್ಮಾಂಡರೂಪ 10 [ಶೌ]ರಿಯು ತಾನಿರಲು ಮೇಘಮಂಡಲದಂತೆ ತೋರುವುದು ತಾರಕೆಯಂತೆ ಮೈಯುಡುಗೆ ವಾರಿಜನಾಭನ ಮುತ್ತಿನಂಗಿಯ ನೋಡು ವವರಿಗೆ ತಾ ಆನಂದವಾಗಿಹುದು 11 ಕ್ಷೀರಸಾಗರದಲ್ಲಿ ಪವಡಿಸಿಹ ಹರಿಗೆ ಕ್ಷೀರಬಿಂದುಗಳು ಮೈಯೊಳಗೆ ಬಿದ್ದಂತೆ ವಾರಿಜನೇತ್ರಗೆ ವಜ್ರದನಾಮವು ಧರಿಸಿದರು ಹೇಮದ ಪಾದಹಸ್ತಗಳ 12 ಮುತ್ತಿನಂಗಿಸೇವೆ ನೋಡಬೇಕೆನುತ ಹತ್ತುಸಾವಿರ ಪ್ರಜೆ ಬಂದು ನಿಂತಿರಲು ಇತ್ತು ಕಾಣಿಕೆಯನು ನೋಡಿ ವೆಂಕಟರಂಗನ ಮುಕ್ತರಾದೆವೆಂದು ಭಕ್ತರು ನುಡಿದರು 13
--------------
ಯದುಗಿರಿಯಮ್ಮ
ಕೊಡುಕೊಡು ವರವನು ತಡವು ಮಾಡದೆ ಎ ನ್ನೊಡೆಯ ಶ್ರೀಹರಿ ಕೃಪೆ ಮಾಡಯ್ಯ ಪ ಬಿಡದಿರೆನ್ನನು ಜಗದೊಡತಿಯಾಣೆ ನಿ ನ್ನಡಿಗಳನೆಂದಿಗೂ ಬಿಡೆನಯ್ಯಾ ಅ.ಪ ಕ್ಷಿತಿಯೊಳಗತಿಶಯ ಪತಿತ ಪಾವನ ಶ್ರೀ ಪತಿ ನೀಗತಿ ಎನುತಿಹೆನಯ್ಯ ರತಿಪತಿಪಿತನೆ ಸುಮತಿಯನು ಪಾಲಿಸಿ ಗತಿಯನು ತೋರಿಪುದೆನಗಯ್ಯ1 ನಿನ್ನ ಪದವ ನಂಬಿ ನಿನ್ನವನೆನಿಸಿದ ಎನ್ನನುಪೇಕ್ಷಿಪರೇನಯ್ಯ ಸನ್ನುತ ನಿನ್ನನು ಮನ್ನಿಸಿ ಕೇಳುವ ಬಿನ್ನಪವಿನಿತೆ ಕೇಳಯ್ಯ 2 ಎಲ್ಲರ ಹೃದಯದೊಳಲ್ಲಿ ನೆಲೆಸಿರುವ ಫುಲ್ಲನಯನ ನೀ ಪೇಳಯ್ಯ ಕಲ್ಲುಮನದಿ ನೀನೊಲ್ಲದೊಡೀ ಜಗ ದಲ್ಲಿ ಪೋಪುದಿನ್ನೆಲ್ಲಯ್ಯ 3 ಪತಿಯಗಲಿದ ಪತಿವ್ರತೆಗೆ ಇತರರಲಿ ರತಿ ಸಂಜನಿಸುವದೇನಯ್ಯ ಗತಿಪತಿಯೆಲ್ಲರಪತಿ ನೀನೆನ್ನುತ ಶ್ರುತಿನುತಿಪುದು ಪುಸಿಯೇನಯ್ಯ 4 ಜಗದೊಳು ನಿನ್ನನೆ ಸುಗುಣಿಯು ಎನ್ನುತ ನಿಗಮವು ಪೊಗಳುತಲಿಹುದಯ್ಯ ಖಗಪತಿಗಮನನೆ ಬಗೆ ಬಗೆಯಲಿ ರತಿ ಸೊಗಯಿಸು ನಿನ್ನೊಳು ಎನಗಯ್ಯ 5 ಸೃಷ್ಟಿನಾಥಪದ ವಿಷ್ಟರ ಭಕ್ತಿಯ ಕೊಟ್ಟರಭೀಷ್ಟವು ಎನಗಯ್ಯ ಇಷ್ಟರ ಮೇಲಿನ್ನು ಲಕ್ಷ ಕೊಟ್ಟರೂ ಎನ ಗಿಷ್ಟವಲ್ಲ ಶ್ರೀ ಕೃಷ್ಣಯ್ಯ 6 ಚರಣಕಮಲದೊಳಗೆರಗುವೆ ಪುಲಿಗಿರಿ ವರದವಿಠಲ ದಯೆಯಿರಿಸಯ್ಯ ಚರಣಶರಣನಿಗೆ ಕರುಣಿಸದಿದ್ದರೆ ಕರುಣಿಗಳರಸರಿನ್ನಾರಯ್ಯ 7
--------------
ವೆಂಕಟವರದಾರ್ಯರು
ಕೋಣ ಕೇಳಲೋ ಕೋಣ ನೀನು ಕೋಣನಲ್ಲವು ಬ್ರಹ್ಮ ಕೋಣ ಪ ಶಾಸ್ತ್ರ ಪುರಾಣವ ಕೋಣ ನೀನು ವಿಸ್ತರವೋದಿದೆ ಕೋಣವಸ್ತು ತಿಳಿಯಲಿಲ್ಲ ಕೋಣ ನಿನ್ನ ಪುಸ್ತಕ ಬಟ್ಟೆಯಲ್ಲೋ ಕೋಣ 1 ಎಲ್ಲವನೋದಿದೆ ಕೋಣ ನಾನು ಬಲ್ಲೆನೆನುತಿಹೆ ಕೋಣಬಲ್ಲೆನು ನಿನ್ನ ಕೋಣ ನೀನು ಬಲ್ಲಿಡೆ ಬಲ್ಲೆಯೋ ಕೋಣ2 ಹೆಂಡಿರು ಮಕ್ಕಳು ಕೋಣ ಪ್ರಪಂಚ ಯಮನಾಳು ಕೋಣಖಂಡಿಸಿ ತಿಳಿ ನೀನು ಕೋಣ ಪ್ರಾಣ ಕೊಂಡವರವರೀಗ ಕೋಣ3 ಎಲ್ಲಿಂದ ಬಂದೆಯೋ ಕೋಣ ನೀನೆಲ್ಲಿಗೆ ಹೋಗುವೆ ಕೋಣಬಲ್ಲವಿಕೆ ನಿನಗಿಲ್ಲ ಕೋಣ ನೀ ಎಲ್ಲರ ಹೊಡೆಗೆಡೆ ಕೋಣ 4 ಅರಿ ಕೋಣ ಇನ್ನು ಚಿದಾನಂದನರಿಯದಿದ್ದಡೆ ಕೋಣ5
--------------
ಚಿದಾನಂದ ಅವಧೂತರು
ಕೋಪವೇನೋ ಕೃಷ್ಣ ಕೋಪವೇನೊ ಪಾಪಿ ಜನಗಳಿಗೆ ನಿನ್ನ ರೂಪವÀ ತೋರಿದೆನೆಂದು ಪ ಪೇಳು ಕೃಷ್ಣ ನಿನ್ನ ಕೇಳುವೆನೊ ಗಾಳಿ ಚಳಿಮಳೆಗಳಲಿ ನಿನ್ನ ಧಾಳಿಯ ಮಾಡಿದೆನೆಂದು 1 ಸುಳ್ಳಿದಲ್ಲ ಕೃಷ್ಣ ಒಲ್ಲೆನೆಲ್ಲ ಹಳ್ಳ ಕೊಳ್ಳಗಳಲಿ ನುಗ್ಗಿ ಹಳ್ಳಿ ಹಳ್ಳಿಗೆ ತೋರಿದೆನೆಂದು 2 ಗುಟ್ಟಿದಲ್ಲ ಕೃಷ್ಣ ಬಿಟ್ಟಿದ್ದಲ್ಲ ಹೊಟ್ಟೆಪಾಡಿಗಾಗಿ ನಿನ್ನ ರಟ್ಟುಮಾಡಿ ದಣಿಸಿದೆನೆಂದು 3 ನಿನ್ನ ತ್ಯಾಗ ಕೃಷ್ಣ ಎನ್ನ ಯೋಗ ಮನ್ನಿಸಲಾರೆಯ ದಯದಿ ಚಿನ್ಮಯ ಪ್ರಸನ್ನ ಕೃಷ್ಣ 4
--------------
ವಿದ್ಯಾಪ್ರಸನ್ನತೀರ್ಥರು
ಕೋಪವ್ಯಾತಕೊ ಕರುಣಾನಿಧೆ ಭೂಪನೆಂದು ನಿನ್ನ ನಂಬಿದೆ ಶ್ರೀಪತೇ ಶರಣಾಗತ ಮೇಲಾಪದ್ಗಣ ತರಬಾರದು ಬರಿದೆ ಪ. ಆವ ಕಾಲಕು ನಿನ್ನ ಸೇವೆ ಮಾಡುವುದೆನ್ನ ಪಾವನವಂತಿರಲು ನೋವನು ಪೊಂದಿಪುದ್ಯಾವ ಘನತೆ ಭದ್ರನಾವನೆ ನಿನಗೆ 1 ಹಸ್ತಪಾದಾದಿಗಳನಿತ್ತುದೆ ಸೇವನಗೆಂದುತ್ತಮ ಭಾವವಿಡ- ಪರಿ ಚಿತ್ತಜ ಜನಕ 2 ನಿತ್ಯ ನೇಮಂಗಳನು ತಕ್ಕಕಾಲದಿ ನಡೆಸುತ ಶಕ್ತಿಯನಿತ್ತು ಸಲಹು ಪುರುಷೋತ್ತಮ ನಿರುಪದಿ 3 ಮುನ್ನಿನ ಭವಗಳನೆಲ್ಲ ಕಳೆದ ಮ- ಹೋನ್ನತಿಯನು ತವ ಕರುಣದಿ ಸೇರಿದೆ4 ತಪ್ಪುಗಳೆಷ್ಟಿದ್ದರೂ ಒಪ್ಪಿಕೊ ಮುನಿಸದಿರು ಅಪ್ಪ ನೀನೆಂಬುವಶ್ರುತಿ ಕೃತ ಬಿರುದನು ತಪ್ಪಿಸಿಕೊಳದಿರು ಸರ್ಪ ಗಿರೀಶನೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಕೋಲು ಕೋಲೆ ಕೋಲು ಕೋಲನ್ನ ಕೋಲೆ ಮೂಲೆ ಮೂಲೆಯ ಹೊಕ್ಕು ಅಡಗಿರ್ದ ಕೋಲೆ ಪ ಕೆಂಜಿಗ ಉಡನು ಬಂದು ಮುಂಚಿಕವಲ ಕೊಟ್ಟು ಅಂಚೆಡೆಗಳನೆಲ್ಲ ಸುಲಿದರ್ದ ಕೋಲೆ 1 ಆನೆ ಕುದುರೆಯಿಲ್ಲ ಸೇನೆ ಬಹಳವಿಲ್ಲ ಏನೆಂದು ಬೆಸಗೊಂಬರಿಲ್ಲದ ಕೋಲೆ 2 ಮುನಿಯ ಭಾವನದಂಡು ಮನೆ ಮನೆಗಳ ಹೊಕ್ಕು ಧನಕನಕಂಗಳ ಸುಲಿದಿರ್ದ ಕೋಲೆ 3 ಮಕ್ಕಳು ಮರಿಗಳು ವೃದ್ಧ ಜವ್ವನರನ್ನು ದಿಕ್ಕುದಿಕ್ಕಿನ ಕಾನಿಗಟ್ಟಿದ ಕೋಲೆ 4 ಜನರನ್ನು ತರಿದು ಸುಲಿದು ಕರುಗಳ ತರುಗಳ ಹಿಂಡನು ಹೊಡೆದಿರ್ದ ಕೋಲೆ 5 ಕೊಟ್ಟ ಕಣ್ಣಿಯನೆಲ್ಲ ಕಿತ್ತೊಯ್ದು ಸೂಸ್ಯಾನು ಪಟ್ಟೆ ಪೀತಾಂಬರಗಳ ನೊಯ್ದ ಕೋಲೆ 6 ಕಾಣಿ ಜೀವರನೆಲ್ಲ ಹಾಡಿ ಹಿಳಿದು ಹಿಪ್ಪೆಹೀರಿದ ಕೋಲೆ 7 ಇಟ್ಟವಡವೆ ವಸ್ತು ಇಟ್ಟಲ್ಲಿ ಇಲ್ಲದೆ ಕೆಟ್ಟು ಜನರು ಹೊಟ್ಟೆ ಹೊಡಕೊಂಬರು 8 ಉಟ್ಟು ತೊಟ್ಟುದನೆಲ್ಲ ಸುಲಿದುಬೆತ್ತಲೆ ಮಾಡಿ ಬಿಟ್ಟು ಮನೆಗೆ ಬೆಂಕಿ ಕೊಟ್ಹೋದ ಕೊಲೆ 9 ಕೆಲರ ತಲೆಯ ಕುಟ್ಟಿ ಕೆಲರು ಸುಲಿದು ಬಿಟ್ಟು ಕೆಲರಿಗೆ ಮುರುವಾಳ ವಿಕ್ಕಿದ ಕೋಲೆ 10 ಅಟ್ಟಡಿಗೆಯ ನುಂಡು ಇಟ್ಟೊಡವೆಯ ಕೊಂಡು ಕುಟ್ಟಿ ಖಂಡವ ಚೂರು ಮಾಡಿದ ಕೋಲೆ 11 ಉಪ್ಪಿನಕಾಯಿ ಕೊಡ ತುಪ್ಪ ತೈಲದ ಪಾತ್ರೆ ಜಪ್ಪಿ ವಡೆದು ನೆಲ ಕುಣಿಸಿದ ಕೋಲೆ 12 ಚಿನ್ನ ಚಿಗುರು ಬೆಳ್ಳಿ ಕಂಚು ತಾಮ್ರಗಳನ್ನು ನುಣ್ಣಗೆ ಹೊರೆಗಟ್ಟಿ ಹೊತ್ತೊಯ್ದ ಕೋಲೆ 13 ಉಣ್ಣ ಉಡಲಿಕ್ಕಿಲ್ಲ ಹೊನ್ನು ಕೈಯೊಳಗಿಲ್ಲ ಎಣ್ಣೆ ಬೆಣ್ಣೆಗೆ ಬಾಲ ನಳಿಸಿದ ಕೋಲೆ 14 ಮುಂಜ ಮುಚ್ಚಲಿಕಿಲ್ಲ ಗಂಜಿಗೆ ಲವಣಿಲ್ಲ ಸಂಜೆ ದೀಪಕೆ ತೈಲವಿಲ್ಲದೆ ಕೋಲೆ 15 ಅತಿಥಿಗಿಕ್ಕಲಿಲ್ಲ ಪ್ರತಿಮೆ ಪೂಜೆಗಳಿಲ್ಲ ವ್ರತನೇಮಗಳನು ಕಟ್ಟಿರಿಸಿದ ಕೋಲೆ 16 ತೆಪಕಾರನ ಪದಾರ ಕಾಲಟದೊಳು ಜಪ ತಪಗಳಿಲ್ಲದೆ ಕೊಳ ತನ್ನಿಸಿದ ಕೋಲೆ 17 ನಗರದ ಕೋಲೆದ್ದು ತೆಪರಾರ ಮೇಲ್ಬಿದ್ದು ಜಿಗಿದು ಹಿಂದಕೆ ಜಾರಿ ಜುಣುಗಿದ ಕೋಲೆ 18 ಹಿಂದಣ ಬೆಳೆಮಣ್ಣ ಕೂಡಿತು ಕುಳಿಯಲಿ ಮುಂದಣ ದುದುರಿತು ಹಣ್ಣಾಗಿ ಕೋಲೆ 19 ಕೆಳಗು ಮೇಲಕು ದಂಡು ಬಳಪ್ರಾಂತ ದೊಳುದಂಡು ನೆಲೆಗೊಂಡು ಜನರು ತಲ್ಲಣಿಪರು ಕೋಲೆ 20 ಸುಬ್ಬರಾಯನ ವೀರಭದ್ರನ ಪ್ರಸಾದ ಸರ್ವಜನರ ಬಾಯ್ಗೆ ಬಿತ್ತಣ್ಣ ಕೋಲೆ 21 ನರರೂಪ ಧರಿಸಿ ಲಕ್ಷ್ಮೀಶನು ಹೊಯ್ಸೂವ ಕೋಲೆ 22
--------------
ಕವಿ ಪರಮದೇವದಾಸರು
ಕೋಲು ಕೋಲೆನ್ನ ಕೋಲೆ ಕೋಲು ಕೋಲೆನ್ನ ಕೋಲೆ ಕೋಲು ಶ್ರೀಹರಿಯ ಬಲಗೊಂಬೆ ಕೋಲೆ ಧ್ರುವ ನಿಗಮ ಚೋರ ರಾಕ್ಷಸನ ಕೊಂದು ರಕ್ಷಿಸಿ ವೇದವನುಳುಹಿದ ಕೋಲೆ ರಕ್ಷಿಸಿ ವೇದವನುಳುಹಿದ ಕ್ಷಿತಿಯೊಳು ಮಚ್ಛಾವತಾರನ ಬಲಗೊಂಬೆ ಕೋಲೆ 1 ಧರ್ಮ ನಡೆಯಲಾಗಿ ವರ್ಮವ ತಾಳಿದ ಕರ್ಮಹರ ಶ್ರೀ ಮೂರ್ತಿಯ ಕೋಲೆ ಕರ್ಮಹರ ಶ್ರೀಮೂರ್ತಿಯ ಧರೆಯ ಪೊತ್ತ ಕೂರ್ಮಾವತಾರನ ಬಲಗೊಂಬೆ ಕೋಲೆ 2 ಧರೆಯ ಕದ್ದಸುರನ ಕೋರೆದಾಡಿಂದ ಸೀಳಿ ಹೋರಿ ಹೊಯ್ದಾಡಿದ ನರಹರಿ ಕೋಲೆ ಹೋರಿ ಹೊಯ್ದಾಡಿದ ನರಹರಿ ಧರೆಯ ಗೆದ್ದ ವರಹಾವತಾರನ ಬಲಗೊಂಬೆ ಕೋಲೆ3 ದುರುಳ ದೈತ್ಯನ ಕೊಂದು ಕರುಳು ವನಮಾಲೆಯ ಧರಿಸಿದ ಕೋಲೆ ಕರುಳು ವನಮಾಲೆಯ ಧರಿಸಿದಾ ಹರಿ ನರಸಿಂಹಾವತಾರನ ಬಲಗೊಂಬೆ ಕೋಲೆ 4 ಪಾದ ಭೂಮಿಯ ಬೇಡಿ ಹೆಮ್ಮೆಯ ತಾ ಪರಿಹರಿಸಿದ ಕೋಲೆ ಹೆಮ್ಮೆಯ ತಾ ಪರಿಹರಿಸಿದ ಬ್ರಾಹ್ಮಣನಾಗಿ ವಾಮನಾವತಾರನ ಬಲಗೊಂಗೆ ಕೋಲೆ 5 ಆಜ್ಞೆಯ ಮೀರದೆ ಅಗ್ರಜಳ ಶಿರ ಶೀಘ್ರದಿಂದಲಿ ಇಳುಹಿದ ಕೋಲೆ ಶೀಘ್ರದಿಂದಲೆ ಇಳುಹಿದ ಶಿರವನು ಭಾರ್ಗವ ರಾಮನ ಬಲಗೊಂಬೆ ಕೋಲೆ 6 ಕಾಮದಿ ಸೀತೆಯನೊಯ್ದ ತಾಮಸದವನ ಕೊಂದು ನೇಮ ಸ್ಥಾಪಿಸಿದ ಇಳೆಯೊಳು ಕೋಲೆ ನೇಮ ಸ್ಥಾಪಿಸಿದ ಇಳೆಯೊಳು ರಾಮಾವತಾರನ ಬಲಗೊಂಬೆ ಕೋಲೆ 7 ದುಷ್ಟ ದೈತ್ಯರನೆಲ್ಲ ಕುಟ್ಟಿ ಮಡುಹಿದ ನೆಟ್ಟನೆ ಗಿರಿಯನೆತ್ತಿದ ಕೋಲೆ ನೆಟ್ಟನೆ ಗಿರಿಯನೆತ್ತಿದ ಬೊಟ್ಟಿಲೆ ಕೃಷ್ಣಾವತಾರನ ಬಲಗೊಂಬೆ ಕೋಲೆ 8 ಕದ್ದು ತ್ರಿಪುರವ ಪೊಕ್ಕು ಇದ್ದ ಸತಿಯರ ವ್ರತ ಸಿದ್ದಿಯ ತಾನು ಅಳಿದನು ಕೋಲೆ ಸಿದ್ದಿಯ ತಾನು ಅಳಿದನು ಬುದ್ದಿಯಲಿ ಭೌದ್ದಾವತಾರನ ಬಲಗೊಂಬೆ ಕೋಲೆ 9 ಮಲ್ಲ ಮಾನ್ಯರನೆಲ್ಲ ಹಲ್ಲು ಮುರಿಯಲಾಗಿ ನಲ್ಲ ತೇಜಿಯನೇರಿದ ಕೋಲೆ ನಲ್ಲ ತೇಜಿಯ ನೇರಿದ ಬಲ್ಲಿಹನಾಗಿ ಕಲ್ಕ್ಯಾವತಾರನ ಬಲಗೊಂಬೆ ಕೋಲೆ 10 ವಸ್ತು ಪರಾತ್ಪರ ವಿಸ್ತಾರ ತೋರಲಾಗಿ ಹತ್ತಾವತಾರ ಧರಿಸಿದ ಕೋಲೆ ಹತ್ತಾವತಾರ ಧರಿಸಿದ ಮಹಿಪತಿಯ ಅಂತರಾತ್ಮನ ಬಲಗೊಂಬೆ ಕೋಲೆ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೌಶಿಕೋತ್ಸವ ಗೀತೆ ಕೌಶಿಕೋತ್ಸವ ನೋಡುವ ಜನರಿಗೆ ಕಣ್ಗಳೆರಡು ಸಾಲದು ಪ. ಕಾರ್ತೀಕ ಶುದ್ಧ ಏಕಾದಶಿಯಲ್ಲಿ ಕಂ ದರ್ಪಜನಕನು ಪೊರಟುಬಂದು ಮಜ್ಜನ ಮಾಡಿ ಎಂದಿನಂದದಿ ತನ್ನ ಮಂದಿರಕೆ ನಡೆದನು1 ನಿತ್ಯಕರ್ಮವನೆಲ್ಲ ಗ್ರಹಿಸಿ ರಂಗಸ್ವಾಮಿ ಅರ್ತಿಯಿಂದಲೆ ನೀರಾಡಿ ಎದ್ದು ಪರಾಕು ಎಂದೆನುತಿರೆ ಅರ್ತಿಯಿಂದಲೆ ಬಂದ ಅರ್ಜುನಮಂಟಪಕೆ 2 ಮಂಟಪದಲಿ ಶ್ರೀರಂಗನಿರೆ ವ್ಯಾಸ ಭಟ್ಟರು ಬಂದು ಪುರಾಣ ಪೇಳೆ ಮುನ್ನೂರುಅರವತ್ತು ವಲ್ಲಿಗಳನ್ನು ಧರಿಸಿ ಮು[ನ್ನ]ಸೇವೆಯನಿತ್ತ ಮೋಹನರಂಗನ 3 ಕರಿಯಕುಲಾವಿ ಕುತ್ತನಿಅಂಗಿ ವಜ್ರ ದರಳೆಲೆ ಮುತ್ತುಗಳಲುಗಾಡುತಾ ಕರ್ಣ ಕುಂಡಲ ಹಾರ ಪದಕಗಳ್ಹೊಳೆಯುತ ಪಡಿಯನೇರಿ ಬಂದ ಕರ್ಪೂರಧೂಳಿಯಿಂದ 4 ನೋಡಿದ ಅಗ್ನಿ ನಾಲ್ಕು ಕಣ್ಗಳಿಂದ ಬಂದು ನೋಡಿದ ರುದ್ರ ಹತ್ತು ಕಣ್ಗಳಿಂದ ನೋಡಿದ ಇಂದ್ರ ಸಹಸ್ರಕಣ್ಗಳಿಂದಲೆ ಹರಿಯ ನೋಡಿದನೆಂಟು ಕಣ್ಗಳಿಂದ ಬ್ರಹ್ಮ ವೆಂಕಟರಂಗನ 5
--------------
ಯದುಗಿರಿಯಮ್ಮ
ಖಗವರಧ್ವಜ ವಿಠಲ ಪೊರೆಯ ಬೇಕಿವನ ಪ ಭಾಗವತ ಸುಶ್ಲೋಕ್ಯ ಬಗೆಬಗೆಯಲಿಂದಿವನಮಿಗಿಲಾಗಿ ಪೊರೆಯಲ್ಕೆ | ಪ್ರಾರ್ಥಿಸುವೆ ಹರಿಯೇ ಅ.ಪ. ವಿತ್ತಪತಿಯೊಲಿಮೆಗಳು | ಕತ್ತರಿಸಿ ಪೋಗಿ ಕೃತಕೃತ್ಯತಾನೆಂಬ ಉ | ತ್ಕøಷ್ಟಮತಿಯೊದಗೇಕೃತಿವಾಸನ ತಾತ | ಇತ್ತುದಕೆ ಸಂತೃಪ್ತಿಪೊತ್ತು ತವದಾಸ್ಯವನು | ಅರ್ಥಿಸುವ ಹರಿಯೇ 1 ಪೋರನಾ ಮಯಕಳೆದು | ತಾರತಮ್ಯ ಜ್ಞಾನ ಮೂರೆರಡು ಭೇದಗಳ | ಸಾರವನೆ ಅರುಹೀಕಾರಣಿಕ ನೀನೆ ಉ | ದ್ದಾರವನೆ ಮಾಡೊ ಹರಿಬೇಕೊಂದ ಪ್ರಾರ್ಥಿಪೆನೊ | ಕಾರುಣ್ಯ ಮೂರ್ತೇ 2 ಅನೇಕ ಜನ್ಮದಲಿ | ಹೀನಯೋನಿಲಿ ನೊಂದುಜ್ಞಾನ ಸಾಧನ ವಿರದೆ | ದೀನ ನಾದವಗೇಮಾನ ನಿಧಿ ಶಾಸ್ತ್ರ ಸಂ | ಧಾನ ವೀಯುತ ತ್ವರ್ಯಧ್ಯಾನ ಸಾಧನ ವೀಯೊ | ಪ್ರಾಣಾಂತರಾತ್ಮಾ 3 ಲೌಕಿಕವನೆಲ್ಲ ವೈ | ದೀಕ ವೆಂದೆನಿಸೊ ಹರಿಕಾಕು ಸಂಗವ ಕೊಡದೆ | ನೀ ಕೊಡೊ ಸತ್ಸಂಗಏಕಮೇವನೆ ಸ್ವಾಮಿ | ಮಾಕಳತ್ರನೆ ನಿನ್ನ_ನೇಕ ಬಗೆಯಲಿ ತುತಿಪ | ವಾಕ್ಸಿದ್ಧಿ ಈಯೋ 4 ಪದ್ಮನಾಭನೇ ಹೃ | ತ್ಪದ್ಮದಲಿ ತವರೂಪಸಿದ್ಧಿಸುತ ಸಂಚಿತವ | ಪ್ರಧ್ವಂಸ ಗೈದೂಅದ್ವೈತ ತ್ರಯದರಿವು | ಬುದ್ದಿಗೆ ನಿಲುಕಿಸೆನೆಹೃದ್ಯ ಗುರು ಗೋವಿಂದ ವಿಠಲ ಬಿನ್ನವಿಪೇ 5
--------------
ಗುರುಗೋವಿಂದವಿಠಲರು
ಗಂಗಾ ಗಂಗಾ ಎಂದು ನಿನ್ನ ಸಾನ್ನಿಧ್ಯದಲ್ಲಿಯೇಇರುವೆನೋ? ಸುಖದಿ ಗಂಗಾ ಪಧರೆಗೊಪ್ಪುವ ಹಾರ'ದೆಂಬಂದದಿಮೆರೆಯುತ್ತಿರುವಾ ಪರಮಪಾವನೆಯೆ 1ಸುರಲೋಕಕೆ ಹತ್ತುವದನು ಸೂಚಿಸುತಿರುವ ಪತಾಕೆಯ ಪರಿಯಳೊಪ್ಪಿರುವ2ಹರಿಚರಣಾಂಬುಜದಿಂದ ಹೊರಡುತಹರನಶಿರಸ್ಯಂ ಹರಿಯುತಾ ಇರುವ 3ಮುಳುಗಿದವರ ಪಾಪಗಳನೆಲ್ಲವನುತೊಳೆಯುವ ಚಿನ್ಮಯೆ ಕಲಿಮಲಾಪಹರೆ 4
--------------
ಹೊಸಕೆರೆ ಚಿದಂಬರಯ್ಯನವರು
ಗಣಪತಿ ಶಾರದೆಗೆರಗಿದೆ ಇಂದೇ | ಇಬ್ಬರ ಹೃದಯದಿ ಕರುಣದಿ ಬಂದೆ | ನುಡಿಸಿದರ್ವಚನವ ಒಂದೊಂದು ತಂದೆ | ಕೇಳಿರಿ ಜನರೆಲ್ಲಾ ಕಿವಿಗೊಟ್ಟು ಬಂದೆ 1 ನರನಾಗಿ ಬಂದು ನೀ ಮಾಡಿದಿ ಏನಾ | ತಿಳಿಯದೆ ಬೊಗಳುವಿಯಾತಕೆ ಶ್ವಾನಾ | ಎಳ್ಳಷ್ಟು ಇಲ್ಲದೆ ಹೋಯಿತು ಜ್ಞಾನಾ | ಇನ್ನಾದರೂ ಮಾಡೊ ಸದ್ಗುರುವಿನ ಧ್ಯಾನಾ2 ಮಾಡಲಿಲ್ಲಾ ಪುಟ್ಟಿ ನೀ ದಾನ ಧರ್ಮಾ | ಮಾಡಿದಿ ತಿಳಿಯದೆ ನೀ ಕೆಟ್ಟ ಕರ್ಮಾ | ಆಡಿದಿ ನೀ ಸಾಧುಸಂತರಿಗೊರ್ಮಾ | ನೋಡಿಕೊ ನಿನಗಿಲ್ಲದಾಯ್ತು ಶರ್ಮಾ 3 ಮಾಡಿದ ಬದುಕನು ಸುಮ್ಮನೆ ಕಳೆದೆ | ಮಾಡುವಾಗ ಬಹು ನಿಜವೆಂದು ತಿಳಿದೆ | ನೋಡದೆ ಪೂರ್ವದ ಸುಕೃತವನಳಿದೆ | ರೂಢಿಯೊಳಗೆ ಪಾಮರನಾಗಿ ಬೆಳೆದೆ 4 ಮಾಡುವ ಕರ್ಮಕೆ ಮನವೇ ಸಾಕ್ಷೀ | ಮಾಡುವಿ ಜಪ ನಿನಗ್ಯಾಕೀ ರುದ್ರಾಕ್ಷೀ | ಮಾಡಿದನೇ ಗುರು ಹೀಗೆಂದು ದೀಕ್ಷಾ | ಆಡಲ್ಯಾತಕೊ ನಾಳೆ ಆದೀತೋ ಶಿಕ್ಷಾ 5 ಹುಣಶಿ ಹಣ್ಣ ಹಚ್ಚಿ ಬೆಳಗಿದಿ ಗಿಂಡೀ | ಎಣಕೀ ಶರಣ ಮಾಡಿ ಅಲ್ಲೇನು ಕಂಡೀ | ಸಂತರ ನಿಂದಾ ಬಲು ಮಾಡಿ ಉಂಡೀ | ಅಂತರಂಗದಿ ಇರು ಛೇ ಹುಚ್ಚ ಮುಂಡೀ 6 ಹಗಲೂ ಇರುಳೂ ಎದ್ದುಂಬುವಿ ಕೂಳೂ | ಕೂಳಿಗೆ ಆದಿ ನೀ ಒಬ್ಬರ ಆಳೂ | ಬಲು ಮಂದಿ ಮನೆಯನು ಮಾಡಿದಿ ಹಾಳೂ |ಏನು ಪುಣ್ಯ ಬಂದದ ಅದನಾರ ಹೇಳು 7 ಹಗಲೂ ಇರುಳೂ ಎದ್ದು ಮಾಡಿದಿ ಬದಕಾ | ಮಾಡುತ ಮಾಡುತ ಆದೆಲ್ಲೊ ಮುದುಕಾ | ಸಾಯುವ ತನಕಾ ಬಿಡಲಿಲ್ಲೊ ಚುದಕಾ | ಸತ್ತಮೇಲೆ ನೀ ಆಗುವಿ ಶುನಕಾ 8 ಏನೇನಿಲ್ಲದೆ ಹೋಯಿತು ಬುದ್ಧೀ | ಶಾಸ್ತ್ರ ಪುರಾಣದಿ ಕೇಳಿಲ್ಲ ಸುದ್ದೀ | ಇರುಳ ಕಂಡ ಕುಣಿ ಹಗಲ್ಯಾಕೆ ಬಿದ್ದೀ | ಮರುಳಾದ್ಯಾ ಯಮ ನಾಳೆ ಕೊಂದಾನೊ ಗುದ್ದೀ 9 ಸಂಸಾರ ನಂಬಿದಿ ನಿಜದಲಿ ಹ್ಯಾಂಗ | ಸದ್ಗುರು ಪಾದವ ನಂಬೋ ನೀ ಹಾಂಗ || ಸಂಶಯಾ ಅದಕಂಜಿ ಬಿಟ್ಟರೆ ಈಗ |ಕಾಂಶಿಲಿ ಬಡಿದಾರು ತಿಳಿದೀತು ಆಗ 10 ಬೆಳಕಿನೊಳಗ ಒಂದು ನೋಡುವ ಕಣ್ಣು | ಕತ್ತಲಿಯೊಳ ಗೊಂದು ಕಾಂಬುವ ಕಣ್ಣು | ಕತ್ತಲಿ ಬೆಳಕನ್ನು ನೋಡುವ ಕಣ್ಣು | ಅದ ಬಿಟ್ಟು ಏನ ನೋಡುತಿ ಮಣ್ಣು 11 ಅನುದಿನ ಶಾಸ್ತ್ರ ಪುರಾಣಾ | ಅದರೊಳಗಿನ ಮಾತ ತಿಳಿಯದೆ ಕೋಣಾ || ಅರ್ಥವ ಹೇಳುವಿ ಮಂದಿಗೆ ಜಾಣಾ | ರುವ್ವಿಯ ಬೇಡಲು ಹೋಯಿತು ಪ್ರಾಣಾ12 ಕಂಡರೆ ನೋಡುವಿ ಹೆರವರ ಹೆಣ್ಣು | ಚೆಲುವೆಂದೂ ಇಟ್ಟೆಲ್ಲೊ ಆಕೆಗೆ ಕಣ್ಣೂ | ಆದರೆ ಹತ್ತ್ಯಾವೊ ಆಕೆಯ ಹುಣ್ಣು | ಕಡೆಯಲಿ ಬಿದ್ದಿತು ಬಾಯಲಿ ಮಣ್ಣು 13 ನಿತ್ಯ ತೆಗೆದುಕೊಳ್ಳುವಿ ದೇವರ ತೀರ್ಥಾ | ಮತ್ತಿನ್ನು ಬಿಡಲಿಲ್ಲ ಮನದ ಸ್ವಾರ್ಥಾ || ಕತ್ತೆಯ ಹಾಂಗ ನೀನೊದರುವಿ ವ್ಯರ್ಥಾ | ಎಂದೆಂದಿಗೂ ದೊರೆಯದು ಆ ಪರಮಾರ್ಥಾ 14 ತನುವು ನಾನೆಂಬುವಿ ತನುವಿದು ತೊಗಲು | ತನುವಿಗೆ ಅವ ನೋಡು ಒಂಬತ್ತು ಹುಗಲು | ಚಿಂತಿ ಮಾಡುವದ್ಯಾಕೊ ಹಗಲೂ ಇರುಳೂ | ನಿನ್ನಾಧೀನವು ಹೀಗೆಂದು ಇರಲು 15 ದೂರ ಹೋಗದಿನ್ನು ಆಗದು ಕಾಶೀ | ದೂರ ಮಾಡಿ ಕಳಿ ನೀನು ಮೂರಾಶಿ | ತೀರದು ಶಿವಯೋಗ ಪುಣ್ಯ ರಾಶಿ | ಸೇರುವಿ ಸಾಯುಜ್ಯದಲಿ ಮಿರಾಶಿ 16 ಮಾಯಾ ಮಾಯಾ ಮಾಯಾ | ದುಡ್ಡಿನಂತೆ ಮಾಡೊ ಮನಕೆ ನಿರ್ಮಾಯಾ 17 ಮೀಶಿಯ ಹುರಿ ಮಾಡಿ ಮೇಲಕೆ ನೋಡಿ | ಕಾಲಾಗ ಸಿಕ್ಕವು ಮೋಹದ ಬೇಡಿ || ಮಾಡಬಾರದಂಥ ಕೆಲ್ಸವ ಮಾಡಿ | ಸಿಕ್ಕಿದೆಲ್ಲೊ ಗಾಂಡೂ ಇನ್ನೆತ್ತ ಓಡೀ 18 ಪಾದ ದೊರೆವುದಿನ್ನೆಲ್ಲಿ 19 ಕಾಮನ ಸುಡುವುದು ನೋಡು ಹೀಂಗಲ್ಲಾ | ಕಾಮನ ಶಿವ ಸುಟ್ಟರವ ಸಾಯಲಿಲ್ಲ || ಕಾಮನು ಸುಡುವ ಮೂರು ಲೋಕವನೆಲ್ಲ | ಕಾಮರಹಿತ ಭವತಾರಕ ಬಲ್ಲ 20 ಕಟ್ಟಿದಿ ಮನೆಯನು ನೀ ಬಲು ಛಂದಾ | ಬಿಟ್ಟು ಹೋಗುತಿ ಇದದಾವಂದಾ || ತೊಟ್ಟಿಲೊಳಗೆ ಇದ್ದ ಹೇಳಿದ ಕಂದಾ | ಎಷ್ಟಂತ ಹೇಳಲಿ ನೀ ಮತಿಮಂದಾ 21 ಪಾತಕ ಬರುವದು ಬಿಡಬ್ಯಾಡ ವಾಜಿ | ನೀತಿಯಿಂದಲಿ ಮಾಡು ನೀ ಗುರು ಪೂಜಿ | ಯಾತನ ಬಡಿಸುವ ನಾಳಿನ ಪಾಜಿ 22 ಒದರುವಿ ಯಾತಕೆ ಬಾಯನು ಕಿಸ್ತು | ಬೆದರ ಬೇಡಾದುದಕೆನ್ನು ಅಸ್ತು || ಚತುರ ತನದಲಿ ಸಾಧಿಸು ನೀ ವಸ್ತು |ಆದರಿಂದಲಾಗುವದು ಆ ಮನ ಸ್ವಸ್ತು 23 ಪಾತಕ ಬರುವದು ತಿಳಿಯದೆ ಕೋಳಿ || ನೀತಿಯಿಂದಲಿ ತತ್ತ್ವ್ವ ಮಾತನು ಕೇಳಿ | ಘಾತಕ ಯಮ ನಾಳೆ ಬರುವನು ದಾಳಿ 24 ಭವ ಬಿಟ್ಟಿ | ಮಾಡದೆ ದಾನ ಧರ್ಮವ ಕೆಟ್ಟೀ || ಮಾಡಿದುದೆಲ್ಲಾ ನೀ ಜೋಕಿಲಿ ಇಟ್ಟಿ | ಮಾಡಲು ಬಾಧೆಯ ನೀ ಬಾಯ ಬಿಟ್ಟಿ 25 ನೆನೆದರೆ ದೃಢದಲಿ ರಾಮ ನಾಮ | ತನುವಿದು ಮುಂದೆ ಬಾರದು ನೇಮ || ಮನದೊಳು ಪುಟ್ಟಿತು ತಾನೆ ನಿಷ್ಕಾಮ | ಘನಸುಖ ತೋರಿತು ಅದು ಸಾರ್ವಭೌಮ 26 ಹುಟ್ಟಿ ಹುಟ್ಟಿ ನೀ ಯಾತಕೆ ಸತ್ತೀ | ಹುಟ್ಟುತ ಸಾವುತ ನಿತ್ಯದಿ ಅತ್ತೀ || ಹುಟ್ಟು ಸಾವನ್ನು ಕಳೆಯಲೊ ಕತ್ತೀ | ಕೆಟ್ಟಿಯೊ ಇನ್ನಾರ ಬೆಳಿ ಧರ್ಮಾ ಬಿತ್ತೀ 27 ಶಾಸ್ತ್ರ ಪುರಾಣವ ಓದುವಿ ಬರಿದೇ | ಉತ್ತಮ ಸ್ತ್ರೀಯರ ಕಂಡು ನೀ ಕರೆದೆ || ನಿನ್ನೊಳು ತಿಳಿದು ನೀ ನೋಡುದು ಮರೆದೇ | ಸಾಧು ಸಂತರುಗಳ ಸೇವೆಗೆ ಮರೆದೆ 28 ಪಡಿ ಜೋಳಕೊಬ್ಬರ ಅಡಿಗಳ ಹಿಡಿವೆ | ಕೊಡುವದಿಲ್ಲೆಂದರೆ ದವಡಿಯ ಕಡಿವೆ || ಕೊಟ್ಟರೆ ಮನದೊಳು ಸಂತೋಷ ಪಡುವೆ | ಕೆಟ್ಟ ಮಾರ್ಗದಿಂದ ಕಡೆ ತನಕಾ ನಡಿವೆ 29 ಭವ ಪರಿಹರಿಸುವದಿದು ಏನು ಅರಿದು || ಭವದೊಳು ಬಿಟ್ಟರು ನಾಮವ ಮರೆದು | ಭವಕಿನ್ನು ಕರಸ್ಯಾರೊ ಆತನ ಬರದು 30 ಮಾಡಿದೆ ಏನು ಬದುಕನು ಹೇಳು | ಮಾಡಿದುದೆಲ್ಲಾ ತಿಂದೆಲ್ಲಾ ಕೂಳು || ಕೂಳಿಗಾಗಿ ಆದಿ ಒಬ್ಬರ ಆಳು | ನೋಡಿ ಏನು ಸದ್ಗತಿಯ ಹೇಳು 31 ಮನದೊಳು ಗಳಿಸಿದಿ ಕೆಂಚೀ ಹೊನ್ನು | ಗಳಿಸಿದವರು ಏನು ಒಯ್ದಾರು ಇನ್ನು || ಬಿಟ್ಟು ಹೋದರು ಹ್ಯಾಂಗ ಬಲ್ಲೆಲ್ಲಾ ನೀನು | ನಿಷ್ಠೆಯಿಂದಲಿ ಒಮ್ಮೆ ಹರಗುರು ಎನ್ನು 32 ಮಾಡಲಿಲ್ಲ ಒಂದು ನರನಾಗಿ ಯೋಗಾ | ಮಾಡುವಿ ಸುಖವೆಂದು ಸ್ತ್ರೀಯರ ಭೋೀಗಾ | ಆಡಲ್ಯಾಕೆ ಆಯುಷ್ಯ ಹಾರಿತು ಬೇಗಾ | ನೋಡಿಕೊಳ್ಳೊ ಇನ್ನು ತಿಳಿದೀತು ಈಗಾ 33 ಪರಿ ಸಂಸಾರ ಯುಕ್ತಿ | ಮಾಡಲು ಒಲ್ಲ್ಯೋ ಶ್ರೀ ಗುರು ಭಕ್ತಿ || ಹೋಯಿತೊ ದೇಹದೋಳ್ ನಿನ್ನ ಶಕ್ತಿ | ಸಾಧಿಸಲರಿಯೊ ನೀ ಜೀವನ್ಮುಕ್ತಿ 34 ಅನುದಿನ ವೇದಾ | ಸಾಧಿಸಿ ತಿಳಿಯದೆ ಜೀವಶಿವ ಭೇದಾ || ಕಾದಾಡಿ ಕೊಂಬುವದು ಸುಮ್ಮನೆ ವಾದಾ |ಬ್ಯಾಡಿನ್ನು ಶೋಧಿಸು ನಿನ್ನೊಳು ಬೋಧಾ 35 ಭವ ಬೀಜವ ಕೊಂಬೆ 36 ಮಾಯಾ ಮರವನು ತ್ಯಜಿಸು || ಧ್ಯಾನ ಮುದ್ರೆಯೋಳ್ ಮನವನು ನಿಲಿಸು | ಜಗವಿದು ನಿಜವೇ ನೋಡೆಲು ಕನಸು 37 ರೂಪದೊಳಗಿಲ್ಲಾ ಗುಣವೊಂದು ತೃಣವು | ಗುಣದೊಳಗಿಲ್ಲವು ರೂಪದ ಅಣುವು || ರೂಪ ನಾಮಕ್ರಿಯಾ ಆದೀತು ಹೆಣವು | ಆ ಪರಬ್ರಹ್ಮನೆ ತಿಳಿಯಿನ್ನು ಪ್ರಣವು 38 ಪಾದ | ಅರಿತು ಪೂಜಿಸಿದವ ಪರಶಿವನಾದ || ಅನುಭವಿ ಬಲ್ಲನು ಆ ಸುಖ ಸ್ವಾದ | ತನ್ನೊಳು ಆಲಿಸುತಲಿ ನಿಂತ ನಾದ 39
--------------
ಭಾವತರಕರು