ಒಟ್ಟು 250 ಕಡೆಗಳಲ್ಲಿ , 59 ದಾಸರು , 239 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವರ್ಣಿಸಲಳವೆ ಕರುಣಾಳು ಗುರುವರ ನಿಮ್ಮ ವರ್ಣವರ್ಣದ ಚರಿತೆ ಗುಣಗಣಗಳ ಪ. ವರ್ಣಪ್ರತಿಪಾದ್ಯ ದೇವತೆಗಳಿಗೆ ಅಳವಲ್ಲ ಇನ್ನಿದನು ಪಾಮರರು ಅರಿಯುವರೆ ಜಗದಿ ಅ.ಪ. ಪ್ರತಿಪ್ರತಿ ಕಲ್ಪದಲಿ ಅತಿಶಯದ ತಪಚರಿಸಿ ಪತಿತಪಾವನ ಹರಿಯ ಮನ ಮೆಚ್ಚಿಸಿ ಕ್ಷಿತಿಯೊಳಗೆ ಅವತರಿಸಿ ದೇವಾಂಶರೆಂದೆನಿಸಿ ಪತಿತರನು ಪಾವನವಗೊಳಿಪ ಘನಮಹಿಮ 1 ಭಕ್ತರು ಕರೆದಲ್ಲಿ ಆಸಕ್ತಿಯಿಂ ಬಂದು ಯುಕ್ತಯುಕ್ತಗಳಿಂದ ತತ್ವಗಳನರುಹಿ ಮುಕ್ತಿಗೊಡೆಯನ ಮಾರ್ಗ ಮುಕ್ತಾರ್ಥ ಜನಕರುಹಿ ಮುಕ್ತಿಪಥ ಸವಿತೋರ್ವ ಶಕ್ತಿ ಮಹಿಮೆಗಳ 2 ಪಾದ ಪದ್ಮಸುತ ತಂದೆ ಮುದ್ದು ಮೋಹನದಾಸರಾಯರೆಂದೆನಿಸಿ ಮಧ್ವಮತಸಾರಗಳ ಹೀರಿ ಮಕರಂದವನು ಸಿದ್ಧಿಗೊಳಿಸಿ ಸುಜನಕೀವ ಶ್ರೀ ಗುರುವೆ3 ಕರಿಗಿರಿ ನರಹರಿಯ ಚರಣಕಮಲ ಧ್ಯಾನ ಅರಘಳಿಗೆ ಬಿಡದೆ ಮನಮಂದಿರದಿ ಸ್ಮರಿಪ ಕರುಣಜಲನಿಧಿಯೆ ನಿಮ್ಮ ಮೊರೆಹೊಕ್ಕವರ ಕಾಯ್ವ ಪರಮಪ್ರಿಯರೆಂತೆಂಬ ಬಿರುದುಳ್ಳ ಗುರುವೇ 4 ಕಮಲಾಂತ ಪ್ರೀತ ಶ್ರೀ ಕಮಲನಾಭನ ಪಾದ ಕಮಲ ಮನದಲಿ ಸ್ಮರಿಪ ಕಮನೀಯ ಗಾತ್ರ ಕಮಲಾಕ್ಷ ಗೋಪಾಲಕೃಷ್ಣವಿಠ್ಠಲನ ಪದ ಕಮಲ ಮನದಲಿ ತೋರಿ ಕೃಪೆಯಗೈಯ್ಯುವುದು 5
--------------
ಅಂಬಾಬಾಯಿ
ವರ್ಣಿಸಲು ಸಾಧ್ಯವೆ ಧರೆಯೊಳಿನ್ನು ಗುರುವರ್ಯಸುಶೀಲೇಂದ್ರ ತೀರ್ಥರ ಮಹಿಮೆಯನ್ನು ಪ ಭಾನುನಂದನನಂತೆ ದೀನ ಮಾನವರಿಗೆ ಸಾನುರಾಗದಿ ಕೊಡುವ ದಾನ ನೋಡಿ || ಏನು ಹೇಳಲಿ ದಿವಿಜಧೇನು ಭೂರುಹಮಣಿ ಕ್ಷೋಣಿಯೊಳು ಜಡಪಶು ರೂಪ ತಾಳಿದವು 1 ಪರಮಠಾಧೀಶರು ಪರಿಪರಿಯಲಿಂದವರ ಪರಮ ಔದಾರ್ಯಗುಣ ಪರೀಕ್ಷಿಸುತಲಿ ಬೆರಳು ಕಚ್ಚುತಲಿ ಬೆರಗಾಗಿ ಜಗದೊಳಗೆ ಸರಿ ಇವರಿಗಿಲ್ಲೆಂದು ಶಿರದೂಗಿ ಹೊಗಳಿದರು 2 ಧೀಮಂತ ಜನರೊಡೆಯ ಶ್ರೀಮಂತಮಂದಿರದ ಸ್ವಾಮಿಗಳ ಪೂರ್ಣ ಪ್ರೇಮ ಪಡೆದು | ತಾಮರಸ ಭಾವ ಪೂಜ್ಯ ಶಾಮಸುಂದರ ಮೂಲ ರಾಮ ಮೂರ್ತಿಯನು ಭೂಮಿಯೊಳು ಮೆರೆಸಿದರು 3
--------------
ಶಾಮಸುಂದರ ವಿಠಲ
ವಾಣಿ ಬಾರೆ ಬೇಗ ವದನದಿ ವಾಣಿ ಬಾರೆ ಬೇಗ ಪ. ಜಾಣೆ ಕಲ್ಯಾಣಿ ಬ್ರಹ್ಮನ ರಾಣಿ ಭಾರತಿ ವಾಣಿ ಅ.ಪ. ಹೃದಯ ಮಂದಿರದಿಲಿದು ಸುವರ್ಣದ ಪದುಮ ಮಂಟಪಕೆ ಮುದವ ಬೀರುತೆನ್ನ ವದನದಿ ಸೇರುತ ಮುದ ಸುವಾಣಿಯ ಚದುರೆ ನುಡಿಸುವ ಶುಕವಾಣಿ 1 ಮಂಗಳ ಮಹಿಮನ ಅಂಗುಟದಿಂ ಬಂ ದಂಬರದಿಂದುದಿಶಿದಾಮರ ತರಂಗಿಣಿ ಗಂಗಾಸ್ನಾನವ ಮಾಡಿಶಿ ನಿನಗೆ ರಂಗನ ದಯಸೈತ ಪೀತಾಂಬರನುಡಿಸುವೆ ವಾಣಿ 2 ಭಕ್ತಿಯರಿಶಿಣ ಯುಕ್ತಿಯ ಕುಂಕುಮ ಶಕ್ತಿಯ ಗಂಧವ ಪರಶಕ್ತಿಯ ಪೂವನು ಮುಕ್ತಿದಾತೆ ಪೂಜಿಪೆ ಶ್ರೀ ಶ್ರೀನಿವಾಸ ಮುಕ್ತಿಪಥದಪೂರ್ವ ಮುತ್ತಿನರಗಿಣಿ ವಾಣಿ 3
--------------
ಸರಸ್ವತಿ ಬಾಯಿ
ವಾಣಿ ಬ್ರಹ್ಮನ ರಾಣಿ ಕಲ್ಯಾಣೀ| ಫಣಿವೇಣಿ ಸದ್ಗುಣ | ಶ್ರೇಣಿ ವೀಣಾ ಪುಸ್ತಕ ಪಾಣಿ ಪ ಜಾಣೆ ಶ್ರೀ ಜಗತ್ರಾಣಿ ಶಾಸ್ತ್ರ ಪ್ರ- ವೀಣೆ ವೇದ ಪ್ರಮಾಣಿ ನಿನಗೆಣೆ | ಗಾಣೆ ಸಂತತಕೇಣವಿಡದೆನ್ನಾಣೆ | ನೆಲಸಿರು ಮಾಣದೆನ್ನೊಳು ಅ.ಪ. ತ್ರಿಜಗ ಶುಭ ಕಾಯೇ | ಓಂಕಾರರೂಪಿಣಿ | ಮಾಯೆ ಮುನಿಜನಗೇಯೆ ಸುಖದಾಯೇ || ತೋಯಜಾಂಬಕಿ ಶ್ರೀಯರ ಸೊಸೆ | ಆಯದಿಂದಲಿ ಶ್ರೇಯಸ್ಸುಖಪದ - ವೀಯೆ ಸಂತತ ಕಾಯೆ ಶತಧೃತಿ ಪ್ರೀಯೆ | ನೀನೆನಗೀಯೆ ವಾಕ್ಸುಧೆü 1 ಅಕ್ಷರ ಸ್ವರೂಪೆ ನಿರ್ಲೇಪೇ | ಮೌನಿಜನ ಮಾನಸ | ಪಕ್ಷ ಸಕಲಾಧ್ಯಕ್ಷೆ ಶುಭಚರಿತೇ | ಸೂಕ್ಷ್ಮ ಸ್ಥೂಲ ಸುಲಕ್ಷಣಾನ್ವಿತೆ | ಮುಮುಕ್ಷು ಜನ ನಿಜ | ಭಕ್ತಿ ಭುಕ್ತಿವರ ಪ್ರದಾಯಕಿ | ಮುಕ್ತಿ ಸುಖ ಸೌಖ್ಯ ಪ್ರದಾಯಕಿ 2 ಸುಂದರಾಂಗಿ ಆನಂದ ಗುಣ ಭರಿತೇ | ವಂದಿಸುವೆ ತವಪದ -| ದ್ವಂದಕಾನತನಾಗಿ ಸಚ್ಚರಿತೇ | ಯೆಂದು ಮದ್‍ಹ್ವನ್ ಮಂದಿರದಿ ನೀ | ನಿಂದು ಆಪದ್ ಬಂಧು ಕರುಣಾ | ಸಿಂಧುವನು ನಾನೆಂದು ಪೊಗಳ್ವಾ -| ನಂದವರ ಸದಾನಂದ ಪಾಲಿಸೇ 3
--------------
ಸದಾನಂದರು
ವಾರಿಜಗಣ ನಿಲಯೇ ಕಮನೀಯೆ ತಾಯೇ ಕಾಯೇ ನರಹರಿ ಜಾಯೇ ಪ ಸಾರಸಭವಮುಖ ಸುರ ಮಹನೀಯೆ ಚಾರುವದನೆ ಜಾಂಬೂನದ ಛಾಯೆ ಅ.ಪ ನಿನ್ನ ಕಟಾಕ್ಷ ಮಹಾಸುರಧೇನು ನಿನ್ನ ಮನವು ಚಿಂತಾಮಣಿಯು ನಿನ್ನಯ ಕರಗಳು ಸುರತರುವೆನಗೆ ಇಂದಿರೆ 1 ಹೃನ್ಮಂದಿರದಲಿ ಜ್ಞಾನವನು ಮನ್ಮಂದಿರದಲಿ ಭಾಗ್ಯವನು ಅಮ್ಮ ಬೆಳಸೆ ಕಮಲೆ ಸುವಿಮಲೆ ಇಂದಿರೆ 2 ಈಶನಂಘ್ರಿಯಲಿ ಭಕ್ತಿಯನು ಹರಿ ದಾಸದಾಸ್ಯದಲಿ ಶಕ್ತಿಯನು ಮೋಸಕೆ ಸಿಗದ ವಿರಕ್ತಿಯನು ಕರುಣದಲಿ ನೀಡೆ ಪ್ರಸನ್ನೆ3
--------------
ವಿದ್ಯಾಪ್ರಸನ್ನತೀರ್ಥರು
ವಾಲೆ ಬಂದಿಹುದೇ ತಂಗೀಯನ ವ್ವಾಲೆ ಬಂದಿಹುದೆ ಪ. ವಾಲೆ ಬರೆದ ಭಕ್ತ ಪಾಲ ಶೀಲ ಕರುಣಾಲ ವಾಲೆ ಅ.ಪ. ಅಂಬುರುಹೋದ್ಭವ ಅಖಿಲ ಸುರಾ ರಂಬರದಲಿ ಸ್ತುತಿಸೆ ಶಂಬರಾಸುರ ಸಂಹರನೈಯ್ಯನ ಹಡಗು ಅಂದು ಮಾರುತನಿಲ್ಲದೆ ಗೋಪಿ ಚಂದನಸಹಿತನಿಲ್ಲೇ ಮಧ್ಯದಿಂದಲೀ ಅಂದದಿ ಮುನಿಗಳ ನಿಂದು ಸ್ತುತಿಸುತಾ ನಂದದಿಂದಾನಂದಕಂದನ ಮುಂದೆ ಕರೆಯೆ ಮುನಿ ದಂದುಗ ಹರಿಸುತ ಬಂದೆನೆಂದು ಇಂಥಾ 1 ಬಂದೆನೆಂದು ತೋರನೆ ಹರಿ ನಿಂದಿರುವನೆ ಬದಿಲಿ ಇಂದುಧರನ ಆಣೆ ಎನ್ನ ಮಂದಿರದಲಿ ತೋರುತ ಬಂದ ಭಕ್ತರ ಸೇವಿಸೆಂದು ಬರೆದಿಹ ಬಂಧು ನಾನೆಂದು ತಿಳಿ ಎಂದು ಹೇಳುವತೆರ ಬರಹವ ಇಂದಿರೇಶ ತಾ ಬಂದು ನಿಂದು ಕೈ ಪಿಡಿದ ವಾಲೆ 2 ಶ್ರೀ ಶ್ರೀನಿವಾಸನ ತೋರುವೆ ವಾಸವಾಗುತ ಮನದಿ ಕ್ಲೇಶವ ಕಳೆ ಮನದಾಸೆ ಬಿಟ್ಟರೇನು ಶ್ರೀಶನಾಜ್ಞೆಯೆಂದು ಎನ್ನ ಶುಭ ಪತ್ರವ ದಾಸಳಾದ ಎನ್ನ ಮನದಾಸೆ ಪೂರೈಸುವ ವಾಲೆ ವಾಸುದೇವನ 3
--------------
ಸರಸ್ವತಿ ಬಾಯಿ
ವಾಸುಕೀಶಯನ ವಿಠಲ ನೀನಿವಳ ಕಾಪಾಡಬೇಕೋ ಹರಿಯೇ ಪ ಭಾಸುರಾಂಗನೆ ದೇವ ಸರ್ವೇಶ ಸರ್ವವಿಧದಲಿ ಕಾಯೊ ಹರಿಯೇ ಅ.ಪ. ಜಗದೀಶ ಜಗಜನ್ಮಾದಿಕಾರಣನೆ ಶ್ರೀಹರಿಯೆಹಗರಣಗಳಾ ಕಳೆದು ಮಿಗೆ ಭಕುತಿ ಸುಜ್ಞಾನವಿತ್ತು |ಬಗೆಬಗೆಯ ಮಹಿಮೆಗಳ ನೀತೋರಿ ನಿನವ್ಯಾಪ್ತಿಮಿಗಿಲಾಗಿ ತಿಳಿಸುತ್ತ ಸಲಹ ಬೇಕಿವಳಾ 1 ಮಧ್ವಮತ ದೀಕ್ಷೆಯನು ಉದ್ಧರಿಸಿ ಇವಳಲ್ಲಿಸದ್ಧರ್ಮ ಪದ್ಧತಿಯ ಶ್ರದ್ಧೆಗಳ ನಿತ್ತೂ |ಮಧ್ವೇಶ ಶ್ರೀಹರಿಯೆ | ಸರ್ವೋತ್ತುಮನೆಂಬಶುದ್ದ ಬುದ್ಧಿಯನಿತ್ತು ಸಲಹ ಬೇಕಿವಳಾ 2 ಚಾರು ಮೂರುತಿಯ |ಬಾರಿಬಾರಿಗೆ ಹೃದಯ ವಾರಿಜದಿ ಕಾಂಬಂಥಚಾರು ಮಾರ್ಗವ ತೋರಿ ಕಾಪಾಡೊ ಹರಿಯೇ 3 ಲೌಕೀಕ ಮಾರ್ಗಗಳು ವೈದೀಕ ವಾಗ್ವಪರಿನೀ ಕರುಣಿಸಿ ಕಾಯೊ ಕಮಲಾಯ ತಾಕ್ಷ |ನೀ ಕಾಯದಿರಲಿನ್ನು ಕಾಯ್ವರ್ಯಾರಿಹರಯ್ಯಮಾಕಾಂತ ಸಲಹಯ್ಯ ಗೋಕುಲಾನಂದ 4 ಕಂದರ್ಪ ಜನಕ ಮನ ಮಂದಿರದಿ ನೀತೋರಿನಂದವನೇ ನೀನಿತ್ತು ಇಂದಿರೇಶನೆ ಕಾಯೊತಂದೆ ಎನ ಬಿನ್ನಪವ ಛಂದದಲಿ ಮನ್ನೀಪುದುನಂದ ನಂದನ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಿಜಯ ಗುರು ತವಪಾದರಜವ ಕರುಣಿಸಿ ಎನಗೆ ಭುಜಗಶಯನನ ಧ್ಯಾನ ಭಜನೆ ನೀಡುವುದು ಪ. ತವ ಶಿಷ್ಯವಂಶ ಸಂಜಾತಳೆನ್ನುತಲಿ ಬಹು ತವಕದಲಿ ಕರುಣಾರ್ದ ದೃಷ್ಟಿಯಿಂದ ತವ ಸೇವೆ ಎನಗಿತ್ತು ತವ ಕೀರ್ತನೆಯ ನುಡಿಸಿ ಮೂರ್ತಿ ತೋರೆನ್ನ ಭವತಾಪ ಹರಿಸಯ್ಯ 1 ನಿನ್ನ ಮಹಿಮೆಯ ಗುಟ್ಟು ವರ್ಣಿಪರು ಯಾರಿನ್ನು ನಿನ್ನ ಚರ್ಯೆಯ ಚರಿತೆ ಬರೆದವರ್ಯಾರೊ ನಿನ್ನ ನಿಜ ಸಂಕಲ್ಪ ಇನ್ನು ಅರಿಯುವರುಂಟೆ ಬನ್ನ ಭವ ಉಂಟೆ 2 ಆ ದೇವಮುನಿ ಆಜ್ಞೆ ಮೋದದಲಿ ಸ್ವೀಕರಿಸಿ ಪಾದನ್ಯೂನತೆ ಕವನ ಪೂರ್ಣಗೊಳಿಸಿ ವೇದಶಾಸ್ತ್ರಗಳರ್ಥ ಸುಲಭದಲಿ ತಿಳಿಸುತಲಿ ಹಾದಿ ತೋರಿದೆ ಶಿಷ್ಯರಾದ ಸುಜನರಿಗೆ 3 ಸತ್ಕರ್ಮ ಫಲಗಳನು ನಿತ್ಯದೊಳಗರ್ಪಿಸಲು ಉತ್ತಮನು ಆರೆಂಬ ಚಿತ್ತದಳಲ ಮುಕ್ತಿಯೋಗ್ಯರಿಗೆ ಬಹು ಯುಕ್ತಿಯಿಂದಲಿ ತೋರಿ ಉತ್ತಮನು ಹರಿಯೆಂದು ಶಕ್ತಿಯಿಂ ಸ್ಥಾಪಿಸಿದ 4 ವೈಕುಂಠಪುರದೊಳಗೆ ಶ್ರೀ ಕರನ ವಕ್ಷಕ್ಕೆ ಸೋಕಿಸಿದೆ ಚರಣವನು ಜೋಕೆಯಿಂದ ಈ ಕಾರ್ಯಕಾರಣವ ನಾ ಕೇಳಿ ನುಡಿವಂಥ ವಾಕು ಲಾಲಿಸುತ ವಿವೇಕ ಮತಿ ಕರುಣಿಪುದು 5 ಆ ಕಮಲನಾಭನಾ ಹೃದಯ ಕರುಣಾಮೃತವು ಸೋಕಿ ತುಂಬಿಹುದು ತವ ಚರಣ ಕಮಲದಲಿ ನಾ ಕೇಳ ಬಂದೆನಾ ಕರುಣಾಮೃತದ ಕಣವ ಯಾಕೆ ಮರೆಮುಚ್ಚಿನ್ನು ನೀ ಕೊಡೈ ತವಕದಲಿ 6 ಪಾದ ರೂಢಿಗೊಡೆಯಗೆ ಲಕುಮಿ ಓಡಿದಳು ಕರವೀರಪುರಕೆ ಸ್ವಾಮಿ ಬೇಡಾಗೆ ವೈಕುಂಠ ನೋಡಿ ಆನಂದಾದ್ರಿ ಮಾಡಿದನು ಮಂದಿರವ ಕೂಡಿ ಪದ್ಮಿನಿಯ 7 ನೋಡಿ ವೈಕುಂಠದೊಳು ನಾಡಿಗೊಡೆಯನ ಚರ್ಯ ರೂಢಿಯೊಳು ಜನಿಸಿ ಭೂಸುರವಂಶದಿ ದುರಿತ ಈಡಾಡಿ ಹರಿದಾಸ್ಯವನು ಬೇಡಿ ಬಯಸುತ ಪೊಂದಿ ನಾಡಿನೊಳು ಮೆರೆದೆ 8 ಪ್ರತಿವರ್ಷ ಬಿಡದೆ ತಿರುಪತಿ ಯಾತ್ರೆ ಭಕ್ತಿಯಲಿ ಪತಿತಪಾವನನ ಓಲೈಸಿ ಮೆರೆದೆ ಕ್ಷಿತಿಯಕ್ಷೇತ್ರ ಅಪ್ರತಿಮಹಿಮ ಸಂಚರಿಸಿ ಕ್ಷಿತಿಗೆ ತೋರಿದೆ ನಿನ್ನ ಮಹಿಮೆ ಜಾಲಗಳ 9 ಅಂಕಿತವದಲ್ಲದೆ ದಾಸತ್ವ ಸಿದ್ಧಿಸದು ಕಿಂಕರಗೆ ಅಂಕಿತವೆ ಕುರುಹು ಎಂದು ಅಂಕಿತವ ಪಡೆದು ಚಕ್ರಾಂಕಿತನ ಗುಣ ಮಹಿಮೆ ಶಂಕಿಸದೆ ಪೇಳ್ದೆ ತವ ಕಿಂಕರೋದ್ಧಾರಕನೆ 10 ನಿನ್ನ ಮಹಿಮಾದಿಗಳ ವರ್ಣಿಸಲು ಎನ್ನಳವೆ ಚನ್ನ ಗುರು ವಿಜಯವಿಠ್ಠಲನ ಪದಕಮಲ ಚನ್ನಾಗಿ ಕಂಡು ಹೃನ್ಮಂದಿರದಿ ಸತತದಲಿ ತನ್ಮಂತ್ರ ಕಿರಣವೆಮ್ಮಲ್ಲಿ ಬೀರಿದ ಕರುಣಿ 11 ವಿಕ್ರಮ ಕಾರ್ತೀಕ ಶುದ್ಧ ದಶವಿೂ ದಿವ್ಯ ಶುಕ್ರ ನಾಮರು ವಾರ ಶುಭದಿನದಿ ಇಂದು ಅಕ್ಕರದಿ ಕರಸಿಲ್ಲಿ ಉಕ್ಕಿಸಿದೆ ತವ ಸ್ತೋತ್ರ ಮಕ್ಕಳಂದದಿ ಪೊರೆವ ಅಕ್ಕರೆಯು ಉಂಟೊ 12 ಮಧ್ವರಾಯರ ಕುಲದಿ ಉದ್ಭವಿಸಿದಂಥ ಈ ಶುದ್ಧ ವೈಷ್ಣವ ಕುಲದಿ ಜನಿಸಿ ಬಂದೆ ಶುದ್ಧ ದಾಸತ್ವದ ಮುದ್ರಾಂಕಿತದ ರತ್ನ ಪಾದ ಕಂಡೆ 13 ಪಾಪಿ ಜನರುದ್ಧರಿಪ ಪಾವನಗಾತ್ರನೆ ಆ ಪಯೋಜಾಸನರ ತರತಮ್ಯವ ಸ್ಥಾಪಿಸಿದ ಮಹಿಮನೆ ಸದ್ಗುಣಾಂಬುಧಿ ನಿಲಯ ಗೋಪಾಲಕೃಷ್ಣವಿಠ್ಠಲನ ಪದಭೃಂಗ 14
--------------
ಅಂಬಾಬಾಯಿ
ವಿಠ್ಠಲನ ಪದವನಜ ತುಂಬೆ ಸೃಷ್ಟಿಯೊಳಗೆ ಎನ್ನ ಬಿಡದೆ ಪೊರೆ ಎಂಬೆ ಪ ಜ್ಞಾನ ಭಕುತಿ ವೈರಾಗ್ಯದಲಿ ಜಾಣ ದಾನ ಮಾಡುವರೊಳಗೆ ಪೂತುರೆ ನೀನೆ ನಿಪುಣ ಮಾನಸದಲಿ ಹರಿಯ ಧ್ಯಾನ ಮಾಡುವ ಆನಂದಮತಿ ವಿಮಲ ಸರ್ವವಿಧಾನ 1 ಮಾತುಮಾತಿಗೆ ನೆನೆಸಿದವರ ಭವದ ಮಾಯಾ ಸೇತುವಿಯ ಕಡಿದು ಸಂತತವಾಗಿ ಸಹಾಯಾ ಪ್ರೀತಿಯಲಿ ಬಂದು ಶ್ರೀ ಹರಿಯ ಪದ ಸೇವಿಯಾ ತಾ ತೋರಿ ತಿಳಿಸುವಾ ಪ್ರಿಯನೆನಿಸುವಾ ಪುರಂದರ ರಾಯಾ 2 ವಜ್ರ ಪಂಜರಾ ಕೂವಾದಿ ಮತಹರ ನಂಬಿದವರಾಧಾರ ಪಾವಮಾನಿಯ ಮತದಲಿಪ್ಪ ಮನೋಹರ ಶ್ರೀ ವಿಜಯನಗರ ಮಂದಿರದೊಳಗುಳ್ಳ ಶ್ರೀ ವಿಜಯವಿಠಲನ್ನ ಪೂಜಿಸುವ ಧೀರ 3
--------------
ವಿಜಯದಾಸ
ವೃಂದಾವನದೊಡೆಯ ಸ್ವಾಮಿ ಮಂತ್ರಾಲಯನಿಲಯ ಚಂದದಿ ಬಂದು ದರುಶನವಿತ್ತರು ಸ್ವಾಮಿ ಯತಿರಾಯ ಪ. ಮೂಢಮತಿಯು ನಾನು ಎನ್ನಗಾಢ ನಿದ್ರೆಯಲಿ ಮಾಡುತ ಪೂಜೆಯ ಎನಗಾನಂದ ಪಡಿಸಿದನು 1 ಗುರುನಾರದ ದಿನದಿ ಸ್ವಾಮಿ ಹರಿದಾಸರ ಗೃಹದಿ ಕರುಣ ತೋರಿ ದರುಶನವಿತ್ತು ಎನಗಾನಂದ ಪಡಿಸಿದರು 2 ಕರಿರಾಜವರದಾ ಗುರುರಾಜರಿಗೊಲಿದು ಪರಮಭಕ್ತರ ಮಂದಿರದಿ ಎನಗಾನಂದ ಪಡಿಸಿದರು 3 ತುಂಗಾತೀರದಲಿ ತಾವು ಚಂದದಿ ನಿಂತು ಎನಗಾನಂದ ಪಡಿಸಿದರು 4 ರಾಮ ಪೂಜೆಯ ಮಾಡಿ ರಾಮಧ್ಯಾನದಿ ನಿರಂತರ ರಮಾವಲ್ಲಭವಿಠಲ ಭಜಿಸುವ ಪ್ರಿಯರಿವರು 5
--------------
ಸರಸಾಬಾಯಿ
ವೃಂದಾವನಿ ದೇವಿ ತಂದೆ ಮಹಿಪತಿ ಪಾದಾ | ದ್ವಂದ್ವವೆನಗೆ ತೋರಮ್ಮಾ ಪ ಗೊಪ್ಪಿಸು ವಂದದ ಲೀಗ ಒಪ್ಪುವಂಘ್ರಿಯಾ ಬಿಗಿದಪ್ಪುವೆ ಮನದಿಂದೆ 1 ಚಾತಕ ನಲಿದು ಜೀಮೂತ ಬಯಸುವಂತೆ | ಶೀತಾಂಶುವಿಗೆ ಚಕೋರಾ | ಪರಿಧಾತು ವಾಗಿದೆಯನ್ನ2 ಹರಿದಯ ಪಡೆದರಂತೆ | ಮರೆಯದೆ ಹೃದಯ ಮಂದಿರದಿ ಚಿದ್ಘನ ಗೋ | ಚರಿಸುವಾ ಪರಿಯಲಿ ಕರುಣಿಸೆನಗೆ ತಾಯೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವೇಂಕಟೇಶನೆ ಎನ್ನಾ ಪಾಲಿಪುದೊ ಹರಣ ಪ ಪಂಕಜೋದ್ಭವ ಹರ ವಂದ್ಯ ಪರಾತ್ಪರ ನಿಖಿಲಾಗಮೈಕವಿಜ್ಞೇಯ ಲೋಕೋದ್ಧಾರ ಅ.ಪ ವತ್ಸರ ಬ- ಹುಧಾನ್ಯ ಸಂದ ಶುಕ್ಲ ದ್ವಿತೀಯ ಸಂಧ್ಯಾಸವನ ಬಂದು ಕೀರ್ತನ ಸೇವಾ- ನಂತರದಿ ಎನ್ನಾ ಮಂದಿರದೊಳು ಸುಪ್ತಾವಸ್ಥೆ ಯಿಂದಿರಲಾಗ ಅಂದು ಕಡೆಯ ಯಾ- ಮದಿ ತೈಜಸನೆ ನೀ ಹಂಸರಿಂದೆನ್ನ ಮನಸಂಶಯ ಹರಿಸಿದೆ1 ಅರುಣೋದಯಲೆದ್ದು ಮುದದಿ ಕರಣಶುಧ್ದನಾಗಿ ತ್ವರಿತದಿ ಸ್ವಪನದ ವಿ- ವರಕಾಗಿ ಹರುಷದಿ ಹರಿಪೂಜಾಕಾಲದಿ ಅರುಹಿದ ಮರುತ ಮೂರುತಿಯಾ ಉರುತರ ಚರಿತೆಯ ನಿರುತಪೊಗಳಲಾಯತವಿತ್ತ ತಿರುಪತಿಶೈಲಾಧಿಪ ಮಮಕುಲಸ್ವಾಮಿ2 ಹರಿಗುರುಸೇವೆಯನು ಸರ್ವಸದ್ಯೋಗ್ಯಸಾಧನವನ್ನು ಪರಮಹಂಸರು ಇತ್ತವೇಂಕಟೇಶಾಂಕಿತ ಮೂರುತಿಯ ನುತಿಪಾ ನಿಜ ಹರಿಭಕುತರ ಚರಣಕಮಲಬಂಡುಣಿಯೆನಿಸಿ ಇವನನಿರುತ ರಕ್ಷಿಸೋ ಉರಗಾದ್ರಿವಾಸವಿಠಲಾ 3
--------------
ಉರಗಾದ್ರಿವಾಸವಿಠಲದಾಸರು
ಶಂಕರ ಗಂಡನ ಹಾಡು ಸರಸ್ವತಿಗಭಿವಂದಿಸುವೆ ಒಡೆಯನು ಎನ್ನ ಮನದೊಡೆಯ 1 ಸಂಭ್ರಮ[ದಾ] ಕೇಳಿ ಸಜ್ಜನರು 2 ವಿಶಾಲ ವಿಲಾಸ ಪಟ್ಟಣದಿ ಖಚಿತ ಮಂದಿರದಿ 3 ಮಂದಮಾರುತ ತಂಪೆÉಸೆಯೆ ಗಂಧ ಕಸ್ತೂರಿ ಕದಂಬವನೇರಿಸಿ ಆನಂದವಾಗಿದ್ದ ಮನ್ಮಥನು4 ಮಯೂರ ಪಕ್ಷಿಗಳು ನಳಿನ ನಾಭನ ಓಲಗವು 5 ನಿರ್ಭಯದಲಿನಲ್ಕಾವತಿಯು ಪಾಲಿಸುತ್ತ 6 ಮರಿಹಾವುಗಳ ನೆರೆಹುವಳು ಗೊಂಬೆಯಾಟವನೆ ಆಡುವಳು 7 ಕೂಡಿದ್ದ ಗೆಳತಿಯರ ಒಡನೆ ನೋಡಿದ ನವಯೌವನೆಯನು 8 ಕುಚವು ತೋರಿದವು ಚಿತ್ತದೊಳಗೆ ಚಿಂತಿಸುತ್ತಿದ್ದ 9 ಚೆನ್ನಿಗನು ಮನ್ಮಥನು ಉದಯಕ್ಕೆ ಕರೆತನ್ನಿರೆಂದ 10 ಬಂದು ವಿಲಾಸ ಪಟ್ಟಣದೊಳು ಮದನಗೆ ಪ್ರೀತಿಲಿ ನಿಂದು ಕೈ ಮುಗಿದರು ಹೋ ಗ್ಯೆಂದು ಶಂಕರಗಂಡ ಕಳುಹಿದ ನಿಮ್ಮನೆಗೈತಂದೆವೆನಲು 11 ಮಾತಾಡಿ ನಗುತ ಭೂ ಕೇಳಿದ ಮನ್ಮಥನ 12 ರಾಜ್ಯವು ಕ್ಷೇಮವೆನ್ನಲು ಬ್ರಹ್ಮಾನಂದದಲಿದ್ದ ಶಂಕರಗಂಡನು 13 ವಿವಾಹ ಮಾಡಲಿಚ್ಛಿಸುವೆ ಚಂದ್ರಮುಖಿಯು 14 ಸಂಭ್ರಮದಿಂದ ಕುಳಿತರು ತಂದಿಡುವರು ಮನ್ಮಥಗೆ 15 ಅಂಗಜ ಅತಿ ದೈನ್ಯ ಉಕ್ತಿಯಿಂದಲಿ ಬಹು ಮಂಗಳ ಮೃದು ವಾಕ್ಯವನ್ನು ಪ್ರ ತಂಗಿಯನೆನಗೀಹುದೆಂದ 16 ಮಲ್ಲಿಗಿಸರ ಕಬ್ಬು ಬಿಲ್ಲು ಹಿರಿಯರು ಹೇಳುವರು 17 ಒಬ್ಬಳೇ ರತಿ ನಮ್ಮ ತಂಗಿ ಹಬ್ಬ ಹುಣ್ಣಿಮೆಗೆ ಕಳಿಸದೆ ನಮ್ಮನೆಗೆ ನಿರ್ಬಂಧ ಮಾಡುವಿರೆಂದ 18 ಕಡುಮೋಹದಿಂದ ಸಾಕಿದೆನು ಕೊಡಲಾರೆ ತಂಗಿಯನೆಂದ 19 ಅವಳಿಗೆ ಸ್ವತಂತ್ರವಿಲ್ಲೇನು ನುಡಿದ ದೈನ್ಯದಲಿ 20 ಭಾಗ್ಯದಿಂದಲಿ ನೋಡಿದರು ಮದನ ನೇಮವನೆ ಮಾಡಿದರು 21 ಪ್ರತಿಬಿಂಬ[ದಂದ]ದಲಿ ಎಣಿಕೆಯಿಲ್ಲದ ಬಂಧು ಜನರ 22 ಎಲ್ಲರು ನೆರೆದು ಸಂಭ್ರಮದಿ ಮಲ್ಲಿಗೆ ಸರದಿ ಮದನರತಿದೇವಿಗೆ ಕಲ್ಯಾಣವನೆ ಮಾಡಿದರು 23 ಬಟ್ಟಲು ಗಿಂಡಿಗಳನ್ನು ಬಳುವಳಿ ತಂಗಿಗೆ ಇತ್ತ 24 ಸಾಸಿರ ಗೋವು ಗಜವು ತುರಗವು ಬ್ಯಾಸರಿಯದೆ ತಂಗಿಗಿತ್ತ ವಿಲಾಸಪಟ್ಟಣಕೆ ಕಳಿಸಿದ 25 ದಿನ ಬಾಳುತಿರಲು ತಾನೇ ಯೋಚಿಸಿದ 26 ಬಿಗಿದ ನಾಡಗಂಬಳಿಯ ನಗುವಂತೆ ಮಾಡಿ ರೂಪವನು 27 ಕುಡಗೋಲು ಕÀವಣೆಯ ಪಿಡಿದು ಮಾಡುವೆನೆನುತ 28 ರೂಢಿಯೊಳಗೆ ಅತಿಚೆಲುವ ಸತಿಗೆ ತೋರಿದನು 29 ಒಡಹುಟ್ಟಿದಣ್ಣ ತಾ ಮುನಿಯೆ ನಮಗೆ ಬೇಡವೆಂದ್ಲು 30 ಕಾರಣವ ಹೇಳದಂತೆ ದಿನÀಕರ ನಂತೆ ಹೊಳೆಯುತ ಸಭೆಯಲಿತವಕದಿಂದಲಿ ಬಂದು ಕುಳಿತು31 ಗೆಲುವಿನಿಂದ ಮಾತಾಡಲಿಲ್ಲ ಜುಲ್ಮಿಂದ ತಾನೆ ಕೇಳಿದನು 32 ನಮ್ಮನೆಯಲಿ ನಾವೀಗ ಕಳಿಸುವೋರಲ್ಲ 33 ತೌರುಮನೆಯ ಹಾರೈಸುವರು ಉಂಡು ಸಂಭ್ರಮದಿಂದ ಬಾಹೋಳೆಂದ 34 ಕರುವ ಕಾಯಿ ನಮ್ಮ ಮನೆಯ ಮರೆಯದೆ ಹೊಯ್ಸುವೆಂನೆಂದ 35 ಜೋಳವ ಕೊಂಡು ಹೋಗೆನಲು ಬೇಡೆಲವೊ ಕಾಮ ನಿನ್ನ ಐಶ್ವರ್ಯವ ಹಾಳು ಮಾಡುವೆನೊಂದÀು ಗಳಿಗೆಯಲಿ 36 ಗಮಕದಿಂದಲಿ ಬೆಳೆವೆನೆಂದು ಚಮತ್ಕಾರದಿಂದ ಮಾಯವಾದ 37 ಅಟ್ಟ ಅಡಿಗೆ ಮನೆಂiÉ
--------------
ಹೆಳವನಕಟ್ಟೆ ಗಿರಿಯಮ್ಮ
ಶರಣಾಗತರಕ್ಷಕ ಬೇಗದಿ ಬಂದು ಮನಮಂದಿರದಿ ನಿಲ್ಲೋ ಪ ಈ ಕರೆಕರೆ ಸಂಸಾರಶರಧಿಯೊಳು ನಿಂದೆ ಹರಿಯೆ ನಿಲ್ಲೊಂದರಘಳಿಗೆಯಾದರೂ ಮನದಿಅ.ಪ ತೋಯಜಾಂಬಕ ನಿನ್ನ ನಾನೆಂದಿಗೆ ಕಾಯದೊಳು ಕಾಂಬೆನೊ ಮಾಯಾರಮಣನೆ ನೀ ಮಾಯವ ಹರಿಸಯ್ಯ ಆಯಾಸಗೊಳಿಸದೆ ಕಾಯುವುದೀಗಲೆ 1 ನಾನಾಯೋನಿಗಳಲ್ಲಿ ನಾ ಬರಲಂಜೆನೋ ಶ್ವಾನಸೂಕರ ಜನ್ಮದಿ ನೀನಿಟ್ಟರಾದರು ಶ್ರೀನಿಧಿಯೆ ನಿನ್ನಯ ಸ್ಮ- ರಣೆ ಒಂದಿದ್ದರೆ ನಾ ಧನ್ಯ ಧನ್ಯನೋ2 ಲೋಕಾಲೋಕೋದ್ಧಾರನೆ ನಿನ್ನಾಜ್ಞೆಯಿಂ ನಾಕೇಶ ಮೊದಲಾದ ಪಿ- ನಾಕಿ ಪ್ರಮುಖರು ಅನೇಕ ಕಾರ್ಯವೆಸಗಿ ಶೋಕಪಡಿಸುವರಯ್ಯ 3 ದುರ್ಗಾಶ್ರೀರಮಣ ಎನ್ನ ಸಂಸೃತಿಯೆಲ್ಲ ದುರ್ಗಮವಾಗಿಹುದೊ ಸ್ವರ್ಗ ಅಪ- ವರ್ಗಪ್ರದನೆ ಎನ್ನಯ ಭವ- ದುರ್ಗಕಡಿದು ಸನ್ಮಾರ್ಗ ಕರುಣಿಸೊ 4 ಸ್ವಾಮಿತೀರ್ಥದಿವಾಸ ಶ್ರೀಜಗದೀಶ ಸ್ವಾಮಿ ಶ್ರೀ ವೆಂಕಟೇಶ ಪಾಮರನಾದೆನ್ನ ತಾಮಸ ಹರಿಸಿ ಹೃತ್ಕಮಲದಲಿ ನಿಲ್ಲೊ ಕಮಲಾಪತಿಯೆ ದೇವ 5
--------------
ಉರಗಾದ್ರಿವಾಸವಿಠಲದಾಸರು
ಶರಣು ಶ್ರೀ ಗುರುರಾಯ | ಶರಣು ಬುಧ ಜನಪ್ರೀಯ | ಶರಣು ಪಾವನ | ಶರಣು ನಮ್ಮಯ್ಯ ಪ ಧರಣಿಯೊಳಗ ವಿದ್ಯ ದಾವರಣವಿಕ್ಷೇಪದಿ ಹರಿಯ ಭವ ಜನುಮ ಮರಣ ಬಲಿಗೆ ಸಿಲುಕಿ | ಹರಣ ಹಾಕುತಿದೆ ನೋಡೀ ಕರುಣದಿಂದ ಭಯ ನೀಡಿ | ತರಣೋಪಾಯ ದೋರಿ ದೀನೋದ್ಧರಣ ಮಾಡಿ ಹೊರೆದೇ 1 ನರದ ಹುಳುವ ತಂದು ಮಂದಿರದೊಳಿಟ್ಟು | ತನ್ನಂಗ ತೆರದಿ ಮಾಳ್ಪಾ ಭೃಂಗಿಯ ತೆರದೆ ನಂಬಿದವರಾ | ಕರೆದು ಬೋಧಾಮೃತದ ನುಡಿವೆರದು ಚಿನುಮಯಾನಂದ ಮರದ ಠಾವ ತಪ್ಪಿಸಿ ಎಚ್ಚರದೊಳು ನಿಲಿಸಿದೇ 2 ಮುಕುತಿ ಸಾಧನವಾದಾ ಭಕುತಿ ನವ ವಿಧ ಶಾಸ್ತ್ರ | ಯುಕುತಿ ಪ್ರಾಬಲ್ಯ ವಿರಕ್ತಿಯನಗಿಲ್ಲಾ | ಶಕುತ ಗುರು ಮಹಿಪತಿಯ ಭಕುತ ನೆನಿಸಿದಕಿನ್ನು ಅಕುತೋ ಭಯ ಹೊಂದುವಾ ಶಕುತಿ ನೀಡಯ್ಯಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು