ಒಟ್ಟು 2471 ಕಡೆಗಳಲ್ಲಿ , 118 ದಾಸರು , 1647 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಕ್ಕುವ ತುಪ್ಪಕೆ ಕೈಯಿಕ್ಕುವೆ ನಾನು ಪ ಚಕ್ರಧರ ಪರಮಾತ್ಮನೊಬ್ಬನಲ್ಲದಿಲ್ಲವೆಂದು ಅ.ಪ ಕರಿ ಮೊರೆಯಿಡಲು ಕಂಡುನೆರೆದ ಬೃಂದಾರಕರು ಅಂದು ಪೊರೆದರೆ ಬಂದುಕರದಲೊಪ್ಪುವ ಮುತ್ತಿಗೆ ಕನ್ನಡಿಯ ನೋಡಲೇಕೆಭರದಿ ಗಜೇಂದ್ರನ್ನ ಕಾಯ್ದ ಹರಿಯೆ ಪರದೈವವೆಂದು 1 ಮತಾಂತರದಲ್ಲಿ ಭಗವದ್ಗೀತೆಯನದ್ವೈತವೆಂದುವಾತಗುದ್ಧಿ ಕೈಗಳೆರಡು ನೋಯಿಸಲೇಕೆ‘ಏತತ್ಸರ್ವಾಣಿ ಭೂತಾನ್ಯೆಂ’ಬ ಶೃತ್ಯರ್ಥವ ತಿಳಿದುಜ್ಯೋತಿರ್ಮಯ ಕಿರೀಟಿ ಅಚ್ಯುತಾಂತರ್ಯಾಮಿಯೆಂದು 2 ತಾನೆ ಪರಬ್ರಹ್ಮನೆಂಬ ಮನುಷ್ಯಾಧಮನು ತಾನುಜ್ಞಾನಹೀನನಾಗೆ ಲೋಕದಾನವನೆಂದುಭಾನು ಕೋಟಿ ತೇಜೋತ್ತಮ ವರದ ಶ್ರೀಹರಿಯೆಂಬಜ್ಞಾನವೆ ಕೈವಲ್ಯದ ಸೋಪಾನವೆಂದು ಸಭೆಯಲ್ಲಿ 3 ತಪ್ಪಾದ ವಿಚಾರದಿಂದ ತತ್ತರವ ಪಡಲೇಕೆತಪ್ಪು ಶಾಸ್ತ್ರ ವೋದಿ ದೇಹ ದಂಡಿಸಲೇಕೆಕಲ್ಪ ಕಲ್ಪಾಂತರದಲ್ಲಿ ವಟಪತ್ರಶಯನನಾಗಿಮುಪ್ಪು ಮೊದಲಿಲ್ಲದ ಮುಕುಂದನಲ್ಲದಿಲ್ಲವೆಂದು 4 ಶಕ್ತಿ ಶೂನ್ಯನಿವನೆಂದು ಸಂಶಯವ ಪಡಲೇಕೆಕೃತ್ಯದಿಂದ ನೋಡೆ ಶ್ರೀಕೃಷ್ಣನೊಬ್ಬನೆಹತ್ತಾರು ಸಾಸಿರ ನೂರು ಗೋಪಸ್ತ್ರೀಯರನ್ನು ಆಳಿನಿತ್ಯ ಬ್ರಹ್ಮಚಾರಿಯೆನಿಪ ನಿಷ್ಕಳಂಕನೊಬ್ಬನೆಂದು 5
--------------
ವ್ಯಾಸರಾಯರು
ಉತ್ತರಾದಿಯ ಮಠದ ಪೀಠವಾಸಾ ಪ ಸತ್ಯಧರ್ಮಾಖ್ಯ ಯತಿ ಭಕ್ತ ಜನ ಪೋಷಾ ಅ.ಪ. ಪಂಚಮುಖ ಪ್ರಾಣನೂಪಾಸಕನೆ ಎನ್ನವಂಚಿಸದೆ ಭವದೊಳಗೆ ಕಾಯೊ ಬೇಗಾ |ಸಂಚಿತವ ಪರಿಹರಿಸೊ ವಾಂಛಿತಾರ್ಥದ ಹರಿಯಮಂಚ ಪದ ಯೋಗ್ಯಾಂಶ ಸಂಭೂತ ಯತಿಯೇ 1 ಭದ್ರೆ ತೀರದಿ ವಾಸ ಭವದುಪದ್ರವ ಕಳೆಯೊಕಾದ್ರ ವೇಯನ ಪದವು ಭದ್ರ ನಿನಗೇ |ಮಾದ್ರ ವೇಯಾಗ್ರಜಗೆ ವಲಿದಿತ್ತೆ ಅಸ್ತ್ರವನುರೌದ್ರ ಮೂರುತಿ ಕಾಯೋ ಗುರು ವರೇಣ್ಯಾ 2 ಭಾಗವತ ವ್ಯಾಖ್ಯಾ |ಸಜ್ಜನೋದ್ಧಾರಿಯನ್ನ ಜ್ಞಾನ ಪರಿಹರಿಸಿವಿಜ್ಞಾನಮಯ ಹರಿಯ ತೋರೈಯ್ಯ ಜೀಯಾ 3 ಸತ್ಯವರ ಕರಜಾತ ಶ್ರೀ ಸತ್ಯ ಧರ್ಮಾಖ್ಯನಿತ್ಯ ತವ ಸಚ್ಚರಣ ಸ್ತುತಿಪ ಜನರಾ |ಅತ್ಯಧಿಕ ಪ್ರೀತಿಯಲಿ ಹತ್ತಿರಕೆ ಕರೆಯುತ್ತಸತ್ಯ ಮೂರುತಿ ಪುರಕೆ ಎತ್ತೊಯಿವ ಗುರುವೇ4 ವತ್ಸರ ಸುವಿಕೃತವು ಅಸಿತ ಶ್ರಾವಣದಲ್ಲಿಮತ್ಸ್ಯಾದಿ ದಶ ಮತ್ತೆ ಮೂರನೆಯ ದಿನದೀ |ವತ್ಸಾರಿ ಶ್ರೀ ಗುರು ಗೋವಿಂದ ವಿಠ್ಠಲನಹೃತ್ಸರೋಜದಿ ಭಜಿಸಿ ತನುವ ತ್ಯಜಿಸಿದನೇ 5
--------------
ಗುರುಗೋವಿಂದವಿಠಲರು
ಉತ್ಥಾನ ದ್ವಾದಶಿಯ ದಿವಸ (ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ) ರಂಭೆ ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ. ಮಾನಿನೀಮಣಿ ಈತನ್ಯಾರೆ ಕರು ಣಾನಿಧಿಯಂತಿಹ ನೀರೆ ಹಾ ಹಾ ಭಾನುಸಹಸ್ರ ಸಮಾನಭಾಷಿತ ಮ- ಹಾನುಭಾವನು ಸುಪ್ರವೀಣನಾಗಿಹ ಕಾಣೆ 1 ಭಯಭಕ್ತಿಯಿಂದಾಶ್ರಿತರು ಕಾಣಿ- ಕೆಯನಿತ್ತು ನುತಿಸಿ ಪಾಡಿದರು ನಿರಾ- ಮಯ ನೀನೇ ಗತಿಯೆಂದೆಲ್ಲವರು ಹಾ ಹಾ ಭಯನಿವಾರಣ ಜಯ ಜಯವೆಂದು ನುತಿಸೆ ನಿ- ರ್ಭಯ ಹಸ್ತ ತೋರುತ ದಯಮಾಡಿ ಪೊರಟನೆ2 ಭೂರಿ ವಿಪ್ರರ ವೇದ ಘೋಷದಿಂದ ಸ್ವಾರಿಗೆ ಪೊರಟ ವಿಲಾಸ ಕೌಸ್ತು- ಚಾರುಕಿರೀಟಕೇಯೂರಪದಕಮುಕ್ತಾ ಹಾರಾಲಂಕಾರ ಶೃಂಗಾರನಾಗಿರುವನು3 ಸೀಗುರಿ ಛತ್ರ ಚಾಮರದ ಸಮ ವಾಗಿ ನಿಂದಿರುವ ತೋರಣದ ರಾಜ ಭೋಗ ನಿಶಾನಿಯ ಬಿರುದ ಹಾ ಹಾ ಮಾಗಧ ಸೂತ ಮುಖ್ಯಾದಿ ಪಾಠಕರ ಸ- ರಾಗ ಕೈವಾರದಿ ಸಾಗಿ ಬರುವ ಕಾಣೆ4 ಮುಂದಣದಲಿ ಶೋಭಿಸುವ ಜನ ಸಂದಣಿಗಳ ಮಧ್ಯೆ ಮೆರೆವ ತಾರಾ ವೃಂದೇಂದುವಂತೆ ಕಾಣಿಸುವ ಹಾಹಾ ಕುಂದಣ ಖಚಿತವಾದಂದಣವೇರಿ ಸಾ- ನಂದದಿ ಬರುವನು ಮಂದಹಾಸವ ಬೀರಿ5 ತಾಳ ಮೃದಂಗದ ರವದಿ ಶ್ರುತಿ ವಾಲಗ ಭೇರಿ ರಭಸದಿ ಜನ ಜಾಲ ಕೂಡಿರುವ ಮೋಹರದಿ ಹಾಹಾ ಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ- ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6 ಊರ್ವಶಿ:ಈತನೆ ಭಾಗ್ಯನಿಧಿ ನೋಡೆ ನೀ ಮುದದಿಪ. ಈತನೆ ಈರೇಳು ಲೋಕದ ದಾತ ನಾರಾಯಣ ಮಹಾ ಪುರು- ವಿನುತ ನಿ- ರ್ಭೀತ ನಿರ್ಗುಣ ಚೇತನಾತ್ಮಕಅ.ಪ. ಮಂದರ ಪೊತ್ತ ಭೂನಿತಂಬಿನಿಯ ಪ್ರೀತ ಮಾನವಮೃಗಾಧಿಪ ತ್ರಿವಿಕ್ರಮ ದಾನಶಾಲಿ ದಶಾನನಾರಿ ನ- ವೀನ ವೇಣುವಿನೋದ ದೃಢ ನಿ- ರ್ವಾಣ ಪ್ರವುಢ ದಯಾನಿಧಿ ಸಖಿ 1 ವಾರಿಜಾಸವಾನವಂದಿತ ಶ್ರೀಪಾದಯುಗ್ಮವ ತೋರಿಕೊಂಬುವ ಸಂತತ ಕೇರಿಕೇರಿಯ ಮನೆಗಳಲಿ ದಿ- ವ್ಯಾರತಿಯ ಶೃಂಗಾರ ಭಕ್ತರ- ನಾರತದಿ ಉದ್ಧಾರಗೈಯಲು ಸ್ವಾರಿ ಪೊರಟನು ಮಾರಜನಕನು 2 ಮುಗುದೆ ನೀ ನೋಡಿದನು ಕಾಣಿಕೆಯ ಕ- ಪ್ಪಗಳ ಕೊಳ್ಳುವನು ತಾನು ಬಗೆಬಗೆಯ ಕಟ್ಟೆಯೊಳು ಮಂಡಿಸಿ ಮಿಗಿಲು ಶರಣಾಗತರ ಮನಸಿನ ಬಗೆಯನೆಲ್ಲವ ಸಲ್ಲಿಸಿ ಕರುಣಾ ಳುಗಳ ದೇವನು ಕರುಣಿಸುವ ನೋಡೆ3 ರಂಭೆ :ದೃಢವಾಯಿತೆಲೆ ನಿನ್ನ ನುಡಿಯು ಸುರ ಗಡಣ ಓಲಗಕೆ ಇಮ್ಮಡಿಯು ಜನ- ರೊಡಗೂಡಿ ಬರುತಿಹ ನಡೆಯು ಹಾ ಹಾ ಮೃಡ ಸರೋಜ ಸುರಗಡಣ ವಂದಿತ ಕ್ಷೀರ ಕಡಲ ಶಯನ ಜಗದೊಡೆಯನಹುದು ಕಾಣೆ1 ಮದಗಜಗಮನೆ ನೀ ಪೇಳೆ ದೇವ ಸದನವ ಪೊರಡುವ ಮೊದಲೇ ಚಂದ- ನದ ಪಲ್ಲಂಕಿಯ ತಂದು ಮ್ಯಾಲೆ ಹಾ ಹಾ ಮುದದಿಂದ ಬಾಲಕರೊದಗಿ ಸಂತೋಷದಿ ಚದುರತನದಿ ಪೋಗುವನು ಪೇಳೆಲೆ ನೀರೆ2 ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವ ಶ್ರೀರಮಾಧವನ ಲೀಲೆ ಘೋರ ದೈತ್ಯಕುಠಾರ ಲಕ್ಷ್ಮೀ ನಾರಾಯಣನ ಬಲಕರ ಸರೋಜದಿ ಸೇರಿ ಕುಳಿತ ಗಂಭೀರ ದಿನಪನ ಭೂರಿತೇಜದಿ ಮೆರೆವುದದು ತಿಳಿ1 ದೊರೆಯು ಬರುವನು ಎಂದು ಎಲ್ಲರಿಗೆ ಗೋ- ಚರಿಸುವನೊಲಿದು ಇಂದು ತರ ತರದ ಆರತಿಗಳನು ನೀವ್ ಧರಿಸಿ ನಿಂದಿರಿಯೆಂದು ಜನರಿಗೆ- ಚ್ಚರಿಗೆಗೋಸುಗ ಮನದ ಭಯವಪ- ಹರಿಸಿ ಬೇಗದಿ ಪೊರಟು ಬಂದುದು ರಂಭೆ :ಸರಸಿಜನಯನೆ ನೀ ಪೇಳೆ ಸೂರ್ಯ ಕಿರಣದಂತಿಹುದೆಲೆ ಬಾಲೆ ಸುತ್ತಿ ಗೆರಕವಾಗಿಹುದು ಸುಶೀಲೆ ಆಹಾ ಹರಿಯ ವೈಕುಂಠ ನಗರದಂತೆ ಜ್ಯೋತಿ ವಿ- ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1 ಊರ್ವಶಿ:ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧ ದ್ವಾದಶಿಯೊಳಗೆ ಬಾಲೆ ಮಾಧವನ ಪ್ರೀತ್ಯರ್ಥವಾಗಿ ಶು- ಭೋದಯದಿ ಸಾಲಾಗಿ ದೀಪಾ ರಾಧನೆಯ ಉತ್ಸಹದ ಮಹಿಮೆಯ ಸಾದರದಿ ನೀ ನೋಡೆ ಸುಮನದಿ1 ನಿಗಮಾಗಮದ ಘೋಷದಿ ಸಾನಂದ ಸು- ತ್ತುಗಳ ಬರುವ ಮೋದದಿ ಬಗೆ ಬಗೆಯ ನರ್ತನ ಸಂಗೀತಾ ದಿಗಳ ಲೋಲೋಪ್ತಿಯ ಮನೋಹರ ದುಗುಮಿಗೆಯ ಪಲ್ಲಂಕಿಯೊಳು ಕಿರು2 ನಗೆಯ ಸೂಸುತ ನಗಧರನು ಬಹ ಚಪಲಾಕ್ಷಿ ಕೇಳೆ ಈ ವಸಂತ ಮಂ- ಟಪದಿ ಮಂಡಿಸಿದ ಬೇಗ ಅಪರಿಮಿತ ಸಂಗೀತ ಗಾನ ಲೋ- ಲುಪನು ಭಕ್ತರ ಮೇಲೆ ಕರುಣದಿ ಕೃಪೆಯ ಬೀರಿ ನಿರುಪಮ ಮಂಗಲ ಉಪಯಿತನು ತಾನೆನಿಸಿ ಮೆರೆವನು3 ಪಂಕಜಮುಖಿ ನೀ ಕೇಳೆ ಇದೆಲ್ಲವು ವೆಂಕಟೇಶ್ವರನ ಲೀಲೆ ಶಂಕರಾಪ್ತನು ಸಕಲ ಭಕ್ತಾ ಕರ ಚ ಕ್ರಾಂಕಿತನು ವೃಂದಾವನದಿ ನಿ ಶ್ಯಂಕದಿಂ ಪೂಜೆಯಗೊಂಡನು4 ಕಂತುಜನಕನಾಮೇಲೆ ಸಾದರದಿ ಗೃ- ಹಾಂತರಗೈದ ಬಾಲೆ ಚಿಂತಿತಾರ್ಥವನೀವ ಲಕ್ಷ್ಮೀ ಕಾಂತ ನಾರಾಯಣನು ಭಕುತರ ತಿಂಥಿಣಿಗೆ ಪ್ರಸಾದವಿತ್ತೇ- ಕಾಂತ ಸೇವೆಗೆ ನಿಂತ ಮಾಧವ5
--------------
ತುಪಾಕಿ ವೆಂಕಟರಮಣಾಚಾರ್ಯ
ಉದಯ ಕಾಲವದಗಿತೀಗಲೂ ನಿನ್ನಿನ್ನಂತೆ ರವಿ ಪಪದುಮನಾಭನ ಸ್ಮರಿಸುತ ಮೋ-ದದಿಯಾನ್ಹೀಕ ಬುಧರು ಮಾಳ್ಪ ಅ.ಪಅಪರಾತ್ರಿಯಲ್ಲಿ ಎದ್ದುಚಪಲಚಿತ್ತರಾಗದಲೆ ಸು-ರಪನ ದೆಸೆಯ ನೋಡಿ ನಮಿಸಿಸುಫಲಗಳನು ಪಡೆಯುವರಿಗೆ 1 ಕಣ್ಣುತೆರೆದು ಕೈಗಳುಜ್ಜಿ ಕನ್ನಡಿಯನು ನೋಡಿ ಶೌಚ ವನ್ನು ತೀರಿಸಿ ಸ್ನಾನ ಸಂಧೆÀ್ಯಗ- ಳನ್ನು ಮಾಳ್ಪ ಸದ್ವಿಜರಿಗೆ2 ಬ್ರಂಹ್ಮಯಜ್ಞ ಜಪವು ಮುಖ್ಯ ಕರ್ಮಗಳಿಂ ಸವಿತೃನಾಮಕ ಒಮ್ಮನದಲಿ ಧ್ಯಾನಿಸುವರಿಗೆ 3
--------------
ಗುರುರಾಮವಿಠಲ
ಉದಯಕಾಲದೊಳೆದ್ದು ಗೋಪಿಯು ದಧಿಯ ಮಥಿಸುವ ಎಂಬ ಸಮಯದಿ ಉದರಗಣ್ಣನು ಎದ್ದು ತೊಟ್ಟಿಲೊಳ್ ತೊದಲು ನುಡಿಗಳಿಂ ಕರೆದ ತಾಯಿಯ 1 ನುಡಿಯ ಲಾಲಿಸಿ ನಳಿನನೇತ್ರನು ಕರೆದ ಹಾಲನು ಕೊಡುವೆನೆಂದರೆ ಕೊಡುವೆನೆಂದರೆ ಕಣ್ಣಮುಚ್ಚನು ಒಡನೆ ಮಲಗುವ ಮಲಗದೇಳುವ 2 ನಿದ್ರೆ ತೀರದೆ ನೀ ಎದ್ದ ಕಾರಣ ಬುದ್ಧಿ ಸಾಲದು ಮುದ್ದು ಮಗುವಿಗೆ ಒದ್ದು ಕೆಲಸವ ತಿದ್ದಿ ಉನ್ಮತ ಅಮ್ಮ ಬಾರೆಲೆ ಎನ್ನಗಲಬೇಡವೆ 3 ಗುಮ್ಮ ಬರುತದೆ ಗುಸುಗುಸೆನುತದೆ ಶ್ರೀದವಿಠಲನಾ ಶ್ರೀಲತಾಂಗಿಯು ಮೋದಪಡಿಸುವ ಮಾನವೀಯಳೇ ವೇದಗೋಚರ ನೀ ಏಳಬೇಡವೋ ಪಾದಕೆರಗುವೆ ಪವಡಿಸೆಂದಳು 4
--------------
ಶ್ರೀದವಿಠಲರು
ಉದಯವಾಯಿತು ಹೃದಯ ಕಮಲದೊಳಗೆ ಧ್ರುವ ಗುರುಕರುಣಾನಂದಬೋಧ ಅರುಣೋದಯವಾಯಿತು ಸ್ಮರಣಿಗರವು ದೊರೆಯಿತು ಹರಿಯ ಚರಣದ 1 ಸಮ್ಯಜ್ಞಾನದ ಪ್ರಭೆ ಸಮ್ಯವಾಗಿದೋರಿತು ತಾಮಸನಿದ್ರೆ ಹರಿಯಿತು ತಿಮಿರಾಂಧದ 2 ಥಳಥಳಿಸುವ ರವಿಕೋಟಿ ಬೆಳಗಾಯಿತು ಹೊಳೆಯುತ ತೇಜೋನ್ಮಯವು ಒಳಗೊರಗೆಲ್ಲ 3 ಒದಗಿ ಬಂತೆದುರಿಟ್ಟು ಮೊದಲೆ ಪುಣ್ಯದ ಘಲ ಉದಯವಾಯಿತದೃಷ್ಟವು ಸದೃಷ್ಟವಾಗಿ 4 ಸದ್ಗತಿ ಸುಖವಿದು ಸದೋದಿತವಾಯಿತು ಸಾಧಿಸಿ ಮಹಿಪತಿಗೆ ಸದ್ಗರು ಕೃಪೆಯು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಉದಾರಗುಣ ಶಾರದಾಮನೋಹರ ಸದಾನಂದ ರಾಮಾನುಜಂ ಪ ಮದೀಯ ಗುರುವರ ಸದಾ ಶ್ರಿತಾಕರ ತ್ರಿದಂಡಧರ ರಾಮಾನುಜಂ ಅ.ಪ ವಿಭೂತಿಯುಗ ಸತ್‍ಪ್ರಭಾವಿರಾಜಿತ ಸುಭೂಜವರ ರಾಮಾನುಜಂ ವಿಭುಂ ಭಜೇ ರಾಮಾನುಜಂ 1 ಪಾತಕನಾಶನ ಭೂತವಿಮೋಚನ ಪತಿತಪಾಲ ರಾಮಾನುಜಂ ಭೀತಿವಿದಾರಣ ಭವಭಯಹರಣ ಕರುಣಾಮಯ ರಾಮಾನುಜಂ 2 ಧರಾಂಬುಧರ ರಾಮಾನುಜಂ ಪರಾತ್ಪರ ಮಾಂಗಿರೀಶ ಪದ ಚಂಚರೀಕ ಮುನಿ ರಾಮಾನುಜಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಉದ್ಧರಿಸಿರೋ ನೀವು ನಿಮ್ಮ ತಿಳಿಯಬೇಕು ಪರಬೊಮ್ಮ ಪ ಮನುಜ ಜನ್ಮಕೆ ಬಂದು ಮರೆತರೆ ಕಷ್ಟವು ಮುಂದುಇನಿತು ವಿಚಾರವಿಲ್ಲ ಇದುವೆ ವಿವೇಕವದಲ್ಲ 1 ಕೊನಬುಗಳೆಲ್ಲವ ಬಿಡಿರೋ ಕೋಪವನೆಲ್ಲವ ಸುಡಿರೋತನು ಸುಖವಾಗಿಹುದಲ್ಲ ತಪ್ಪಿದರೆ ಬಳಿಕೆಲ್ಲ 2 ಭ್ರಮೆಯೆಲ್ಲವ ಬಿಡಬೇಕು ಬಂಧನ ಹರಿಯಲು ಬೇಕುನಮಗಿದು ನೀತಿಯಿದಲ್ಲ ನಾಚಿಕೆ ಕಿಂಚಿತ್ತು ಇಲ್ಲ 3 ತನ್ನ ತಿಳಿದರೆ ತಾ ಬಂಧು ತನ್ನ ಮರೆತರೆ ಶತ್ರುವಹಸನ್ನುತವಚನವಿದೀಗ ಸಾಧಿಸುವುದು ಬಹುಬೇಗ4 ಚೆನ್ನಾಗಿ ಶ್ರವಣದ ಕೇಳಿ ಚಿತ್ತ ಶುದ್ಧಿಯ ತಾಳಿಚಿನ್ಮಯನನು ನೀವು ಧರಿಸಿ ಚಿದಾನಂದ ತಾವೆಂದು ಸ್ಮರಿಸಿ5
--------------
ಚಿದಾನಂದ ಅವಧೂತರು
ಉದ್ಧಾರ ಮಾಡಯ್ಯ ಉಡುಪಿ ನಿಲಯ ಹೃದ್ವನಜದಲಿ ನೆಲಸಿ ಅನುಗಾಲ ನಿನ ತೋರಿ ಪ. ಬಂದೆ ಬಹುದೂರದಲಿ ನಿಂದೆ ತವಚರಣದಡಿ ತಂದೆ ಮುದ್ದುಮೋಹನ ಗುರುಕರುಣದಿಂದ ಕುಂದುಗಳನೆಣಿಸದೆಲೆ ಸಿಂಧುಶಯನನೆ ಹೃದಯ ಮಂದಿರದಿ ಮನೆ ಮಾಡು ಸುಂದರಾತ್ಮನೇ 1 ಜನ್ಮಜನ್ಮಾಂತರದ ಅಜ್ಞಾನಗಳ ಕಳೆದು ಕರ್ಮಸಾಸಿರ ಕಡಿದು ಕರುಣದಿಂದ ರಮೆಯರಸನೆ ನಿನ್ನ ಅನುಗಾಲ ಸ್ಮರಿಪಂಥ ಸನ್ಮಾರ್ಗವನೆ ತೋರೊ ಸರ್ವಲೋಕೇಶ 2 ಜಪತಪಗಳೊಂದರಿಯೆ ವ್ರತ ನೇಮಗಳ ಕಾಣೆ ಉಪವಾಸದುಪಟಳವು ಗತಿ ತೋರದೆನಗೆ ಗುಪಿತಮಾರ್ಗದಿ ನಿನ್ನ ನಾಮಾಮೃತವನುಣಿಸಿ ಅಪಹಾಸಗೊಳಿಸದಲೆ ಆದರಿಸೊ ಜೀಯ 3 ಬೇಡಲೇನನು ನಿನ್ನ ಕಾಡಲೇತಕೆ ನಾನು ದಾತ ನೀ ಸರ್ವಜ್ಞನಿರಲು ಮಾಡುವೆನು ಸಾಷ್ಟಾಂಗ ಬೇಡುವೆನು ಪದದಾಸ್ಯ ನೋಡು ಕರುಣಾದೃಷ್ಟಿಯಿಂದೆನ್ನ ಕಡೆಗೆ 4 ಅಂತರಂಗದಲಿಪ್ಪ ಸರ್ವಾಂತರಾತ್ಮಕನೆ ಚಿಂತನೆಗೆ ನೆಲೆತೋರು ಚಿನ್ಮಯಾತ್ಮಕನೆ ಕಂತುಪಿತ ಗೋಪಾಲಕೃಷ್ಣವಿಠ್ಠಲನೆ ಸಿರಿ ಕಾಂತ ಕಾಪಾಡು ಕಡು ಕರುಣಿ ಮಧ್ವೇಶ 5
--------------
ಅಂಬಾಬಾಯಿ
ಉರುಟಣೆ ಪದ ಜಯ ಜಯ ರಾಮ ಜಯಜಯ ಜಯ ನಮ್ಮ ಜಾನಕೀ ರಮಣಗೇ ಪ ಇಂದಿರಾದೇವಿ ರಮಣಿ ಶರಣ್ಯಮಂದರ ಗಿರಿಧರ ಶರಣ್ಯಕಂದನ ನುಡಿ ಕೇಳಿ ಕಂಬದಿಂದಲಿ ಬಂದಸಿಂಧು ಶಯನ ಸಲಹುವಾದೆನ್ನ 1 ಗುರು ವಿಜಯದಾಸರ ಚರಣಾಸರಸಿರುಹವ ಮನದೊಳಾಗಿರಿಸಿಹರಿ ಸರ್ವೋತ್ತಮ ಮಂಗಳ ಚರಿತೆಯವಿರಚಿಸುವೆನು ಸುಜನರು ಕೇಳಿ 2 ಮುತ್ತೈದೆರೆಲ್ಲಾ ಬೇಗಾದಿ ಬಂದುಅರ್ತಿಯಿಂದಲಿ ಶೃಂಗಾರವಾಗಿಚಿತ್ತಜನಯ್ಯನ ಉರುಟಣೆ ಎನುತಾಲಿಮತ್ತ ಗಮನೇರು ಬಂದರಾಗಾ 3 ಸರಸ್ವತಿ ಭಾರತಿ ಮೊದಲಾದಸರಸಿಜ ಮುಖಿಯರೆಲ್ಲಾರು ನೆರೆದುಸರಸ ಉರುಟಣಿಯ ಮೊಡಬೇಕೆನುತಾಲಿಕರೆಸಿದರಾಗ ಮುತ್ತೈದೆರಾಗ 4 ಹೇಮಮಯದ ಮಂಟಪದೊಳಗೆಪ್ರೇಮದಿಂದಲಿ ಹಾಸಿಕೆ ಹಾಕಿಸೋಮವದನನ ಗುಣವ ಕೊಂಡಾಡುತಕಾಮಿನಿಯರು ಕರೆದಾರು ಹಸೆಗೇ 5 ಕೌಸಲ್ಯಾದೇವಿ ತನಯಾನೆ ಕೇಳುಹರ್ಷದಾಯಕ ರಕ್ಷಕನೇಳುಹಂಸವಾಹನನಯ್ಯನೆ ಹಸೆಗೆ ಏಳೇಳೆಂದುಹಂಸಗಮನೆಯರು ಕರೆದರು ಹಸೆಗೆ 6 ನಿಗಮವ ತಂದಾ ಮಚ್ಚ್ಯಾನೇಳುನಗವ ಬೆನ್ನಿಲಿ ಪೊತ್ತ ಕೂರ್ಮನೇಳುಜಗವನುದ್ಧರಿಸಿದ ವರಹ ಮೂರುತಿ ಏಳುಮೃಗ ನರ ರೂಪ ಹರಿಗೇಳೆಂದಾರು 7 ಸುರನದಿಯ ಪಡೆದ ವಾಮನನೇಳುಪರಶುರಾಮ ಮೂರುತಿ ಏಳುಶರಧಿಯ ದಾಟಿ ಸೀತೆಯ ತಂದಶಿರಿ ರಾಮಕೃಷ್ಣ ಹಸೆಗೇಳೆಂದರು 8 ವ್ರತವನಳಿದ ಬೌದ್ಧನೇಳುಅತಿಬಲ ರಾಹುತನೇಳುಪೃಥಿವಿಗೊಡೆಯ ರಾಮನೇಳೆಂದುಅತಿ ಚಮತ್ಕಾರದಿ ಕರೆದರಾಗ 9 ಇಂತು ಬಗೆಯಾಲಿ ತುತಿಸಿ ಕರೆಯೇಕಂತುಜನಕನು ಹರುಷದಾಲೆದ್ದುಕಾಂತೆ ಕೈ ಪಿಡಿದು ನಡೆ ತರಲಾಗಲುನಿಂತಾರು ನಾರಿಯರೆಲ್ಲರಾಗ 10 ಎತ್ತಿಕೊಂಬುವದು ರಾಘವ ನಿಮ್ಮಪತ್ನಿಯ ನಡೆಸಲಾಗದು ಕೇಳಿನೀ ಪೃಥ್ವೀಶನಾದರೆ ನಮಗೇನೆನುತಾಲಿಸುತ್ತು ಕಟ್ಟಿದರು ವಾಮಾಕ್ಷಿಯರು 11 ಮಂಗಳಾಂಗಿಯನು ಎತ್ತಿಕೊಂಡು ರಾಮಹಿಂಗಾದೆ ದ್ವಾರದಲ್ಲಿಗೆ ಬರಲುಮಂಗಳದೇವಿಯ ಹೆಸರು ಹೇಳೆನುತಾಲಿಅಂಗನೆಯರು ಅಡ್ಡಗಟ್ಟಿದರಾಗಾ 12 ನಾಳೆ ಹೇಳುವೆನು ಇವಳ ಹೆಸರುತಾಳಲಾರೆನು ಭಾರವು ಎನಲುಶ್ರೀ ಲಕ್ಷ್ಮೀದೇವಿಯ ಹೆಸರು ಹೇಳಿದೆ ಬಿಡೆವೆಂದುಬಾಲೆಯರೆಲ್ಲಾರು ಇಟ್ಟರು ಕದವಾ 13 ಪುತ್ಥಳಿ ಗೊಂಬೆ ಹೆಸರು ಹೇಳೆನೆ ರಘು-ನಾಥಾನು ಎಂದಾಳು ಜಾನಕೀ 14 ಅಂಗಜನಯ್ಯಾ ಸತಿಯು ಸೀತೆಯ ಸಹಿತರಂಗು ಮಾಣಿಕದ ಹಾಸಿಕೆಯ ಮೇಲೆಶೃಂಗಾರದಿಂದಾಲಿ ಬಂದು ಕುಳ್ಳಿರಲಾಗಸುರರೆಲ್ಲಾ ಹಿಗ್ಗಿ ಕರೆದರು ಪೂ ಮಳೆಯಾ 15 ಸಾಸಿರ ನಾಮದ ಒಡೆಯ ಬಂದಾಶೇಷಶಯನಾ ಮೂರುತಿ ಬಂದಾಭಾಸುರಾಂಗನೆ ಸೀತೆ ಆಳಿದಾ ರವಿಕುಲಾ-ಧೀಶ ಬಂದಾನು ಎಂದಾರು ಕೇಳೆ 16 ವಾನರಾಧೀಶನೊಡೆಯಾ ಬಂದಾದಾನವಾಂತಕ ರಾಘವ ಬಂದಾ ಶ್ರೀ-ಜಾನಕೀದೇವಿ ಪ್ರಾಣದೊಲ್ಲಭ ಜಗ-ತ್ರಾಣ ಬಂದಾನು ಎಂದಾರು ಕೇಳೆ 17 ಸತ್ಯ ಸಂಕಲ್ಪ ಶ್ರೀ ಹರಿಯು ಬಂದಾಭೃತ್ಯ ಪಾಲಕ ದೊರೆಯು ಬಂದಾಮಿತ್ರೆ ಜಾನಕಿದೇವಿ ಪ್ರಾಣದೊಲ್ಲಭ ಸ-ರ್ವೋತ್ತಮ ಬಂದನೆಂದಾರು ಕೇಳೇ 18 ಸುಗ್ರೀವನ ಪರಿಪಾಲಕ ಬಂದಾ ಕ-ರಿಗ್ರಾಹ ಸಂಹಾರಿಕ ಬಂದಾವ್ಯಾಘ್ರ ಚರ್ಮಾಂಬರ ಸಖ ಸುಂದರವಿಗ್ರಹ ಬಂದಾ ಎಂದಾರು ಕೇಳೇ 19 ಇಂದ್ರನ್ನ ಪರಿಪಾಲಕ ಬಂದಾಚಂದ್ರನ್ನ ಪ್ರಭೆಯಾ ಸೋಲಿಪ ಬಂದಾಇಂದುವದನೆ ಸೀತೆ ಪ್ರಾಣದೊಲ್ಲಭ ರಾಮ-ಚಂದ್ರ ಬಂದನೆಂದಾರು ಕೇಳೇ 20 ಚಂದನ ಗಂಧೆಯರು ಎಲ್ಲಾರು ಕೂಡಿಗಂಧ ಕುಂಕುಮ ಅರಿಷಿಣ ಕಲಿಸಿಇಂದುವದನೆ ಸೀತೆಯ ಕೈ ಒಳಗಿಟ್ಟು ಶ್ರೀರಾಮ-ಚಂದ್ರಗೆ ಹಚ್ಚಿಸಿರೆಂದರಾಗ 21 ವಾರಿಜೋದ್ಭವ ಮೊದಲಾದವರುತಾರತಮ್ಯದಿಂದಾಲಿ ಕುಳಿತುವಾರಿಜಾಮುಖಿ ಸೀತೆ ನುಡಿಯೆಂದೆನುತಾಲಿಸಾರಿದರಾಗ ಸಂದಣಿಯರೆಲ್ಲಾ 22 ವಾಕು ಕೇಳಬೇಕೆಂದುಜಲಜ ಸಂಭವನು ನುಡಿದಾನು ನಗುತಾ 23 ಕಂಜವದನೆ ಜಾನಕೀದೇವಿಅಂಜಲಾಗ ನಿಮ್ಮ ಪುರುಷಾರಿಗೆಕುಂಜರ ವರದಾ ದಾಕ್ಷಿಣ್ಯ ಬ್ಯಾಡೆಂದುಅಂಜಾದೆ ನುಡಿದಾರು ನಸುನಗುತಾ 24 ದೋಷ ವರ್ಜಿತನೇ ಹರಿ ನಿಮ್ಮದೂಷಣೆ ಮಾಡಿದಳೆನ ಬ್ಯಾಡಿಮೋಸದಿಂದಲಿ ಬಲು ದೈತ್ಯರ ಕೊಂದ ಜಗ-ದೀಶ ನಿಮ್ಮ ಮುಖವಾ ತೋರೆಂದಾಳು 25 ದೇವಿ ಹಸ್ತದೊಳು ಅರಿಶಿನವ ಪಿಡಿದುಭಾವಜನಯ್ಯನ ನುಡಿದಾರಾಗದೇವರ ದೇವೋತ್ತಮ ಶಿಖಾಮಣಿದೇವಾ ನಿಮ್ಮಯ ಮುಖವಾ ತೋರೆಂದಾಳು 26 ಭಸ್ಮಾಸುರನ ಕೊಂದಾ ಬಹು ಶೂರನಾರಿಕಂಸನಳಿದಾ ಧೀರ ಅಸುರ ಹಿರಣ್ಯಕನಅಸುವ ಹೀರಿದ ದೊಡ್ಡಅಸುರಾಂತಕ ಮುಖವಾ ತೋರೆಂದಾಳು 27 ವಾಲಿಯ ಸಿಟ್ಟಿನಿಂದಾಲಿ ಕೊಂದುಕಾಲ ಯಮನಾನಸುವ ಯುಕ್ತಿಯಿಂದಾಭಳಿರೆ ಮಧುಕೈಟಭರ ಕೊಂದಾಕಾಲಾಂತಕ ಮುಖವ ತೋರೆಂದಾಳು 28 ಶ್ರೀನಾಥ ದ್ವಾರಕಾಪುರ ಮಾಡಿಆ ನಂದಿ ಗೋಮಂತಾ ಗಿರಿಗೊಲಿದೆವಾನರಾಧೀಶನಾ ಬಲು ಕೊಂಡಾಡುತ್ತದಾನವಾಂತಕಾ ಮುಖವಾ ತೋರೆಂದಾಳು 29 ಅರಿಶಿನವಾನು ಹಚ್ಚಿದಳು ಸೀತೆಅರಸನ ಫಣೆಗೆ ಕುಂಕುಮವಾ ಹಚ್ಚಿಸರಸದಿ ವದನಕ್ಕೆ ಗಂಧವಾ ಹಚ್ಚಲುಸುರರೆಲ್ಲಾ ನಕ್ಕಾರು ಕೈ ಹೊಡೆದು 30 ಪತಿ ಮೊದಲಾಗಿ ಚಪ್ಪಾಳೆನಿಟ್ಟುಹರಸಿದರಾಗ ಜಾನಕಿದೇವಿಶಿರಿಯು ಗೆದ್ದಳು ಅಯೋಧ್ಯದಅರಸು ಸೋತನೆಂದು ನಗುತೆ 31 ಬಾಹುಗಳಿಗೆ ಗಂಧವಾ ಹಚ್ಚಿಸಿಮ್ಯಾಲೆ ಪರಿಮಳಾ ಪೂಸಿದಳುಶ್ರೀ ಹರಿಯ ಚರಣಾವ ಪಾಲಿಸಬೇಕೆನುತಲಿಸರಸಾದಿಂದಾಲಿ ನುಡಿದಾಳು ಜಾನಕೀ 32 ಪಾಷಾಣ ಪೆಣ್ಣಾ ಮಾಡಿದಾ ಚರಣಶೇಷನಾ ಮ್ಯಾಲೆ ಮಲಗಿದ ಚರಣಭಾಸುರಾಂಗಿ ನಿನ್ನ ಲೀಲೆಯಾ ತೋರಿದಾಶೇಷಶಯನ ಚರಣಾ ಪಾಲಿಸೆಂದಾಳು 33 ಆಕಾಶಗಂಗೆಯ ಪಡೆದಾ ಚರಣಾಶಕಟನ ಮುರಿದೊಟ್ಟಿದ ಚರಣಾಭಕುತ ಜನರ ಸೇವೆ ಕೊಂಬ ಚರಣರಕ್ಕಸ ದಲ್ಲಣ ಚರಣಾವ ಪಾಲಿಸೆಂದಾಳು 34 ಅಂಕುಶದೊಜ್ರ ರೇಖೆಯ ಚರಣಾಕುಂಕುಮಾಂಕಿತ ರಾಶಿಯ ಚರಣಾಬಿಂಕದಿಂದ ಕುರುಪತಿಯ ಕೆಡಹಿದ ಬಿರು-ದಾಂಕ ನಿನ್ನಯ ಚರಣಾ ಪಾಲಿಸೆಂದಾಳು 36 ನಸುನಗುತ ಹರಿ ಚರಣ ವೀಕ್ಷಿಸಿಶಶಿಮುಖಿ ಸೀತೆ ಆನಂದದಿಂದಾಮಿಸಣಿಯಂತೊಪ್ಪುವ ಅರಿಶಿನೆಣ್ಣೆಯಾಎಸೆವ ಪಾದಕ್ಕೆ ಹಚ್ಚಿದಳಾಗ 37 ಪಾದ ಪದ್ಮಕ್ಕೆ ಎರಗಿಪಾಲಿಸಬೇಕೆಂದಾಳು ಅಂಗನೆ 38 ಕರಗಳ ಪಿಡಿದೆತ್ತಿದನು ರಾಮಾಹರಸಿದ ಮುತ್ತೈದಾಗೆಂದುಪರಮ ಪತಿವ್ರತೆಯೆನಿಸು ಎನುತಾಲಿಹರಿ ಹರಸೀದಾನು ಹರುಷದಲ್ಲಾಗ 39 ಅಂಡಜವಾಹ ಭಗವಂತನುಹೆಂಡತಿಯ ಮುಖವ ನೋಡೆನುತಲಿಗಂಡು ಮಕ್ಕಳ ಘನವಾಗಿ ಪಡೆಯೆಂದುಪುಂಡರೀಕಾಕ್ಷ ಹರಸಿದನಾಗ 40 ಮಂದಗಮನಿಯ ಕುಳ್ಳಿರಿಸಿಇಂದಿರೇಶ ಮುಂಗುರಳಾ ತಿದ್ದಿಎಂದೆಂದಿಗೆ ಅಗಲದಿರೆಂದು ರಾಮ-ಚಂದ್ರಾನು ಹರಸಿದನಾಗ 41 ಭೂಲೋಕದೊಡೆಯ ರಾಘವರಾಯನಶ್ರೀಲತಾಂಗಿಯ ಕುಳ್ಳಿರಿಸಿದನುಬಾಲಕಿಯರೆಲ್ಲಾರು ಗಲಿಬಿಲಿ ಮಾಡಾದಿರೆಂದುಫಾಲಾಲೋಚಾನು ನುಡಿದನು ನಗುತ 42 ಕಂತುಜನಕ ರಾಘವಾ ನಿಮ್ಮಾಪಂಥ ಸಲ್ಲಾದು ಜಾನಕಿಯೊಡನೆಯಂತ್ರವಾಹಕ ಶ್ರೀರಾಮ ಏಳೇಳೆಂದುಕಾಂತೆಯರೆಲ್ಲರು ನುಡಿದಾರು ನಗುತಾ 43 ಭಾಗೀರಥಿ ಪಾರ್ವತಿದೇವಿಬೇಗದಿ ಅರಿಷಿನ ಕೈಲಿ ಕಲಿಸಿಸಾಗರ ಶಯ್ಯನ ಕೈಯೊಳಗಿಟ್ಟುಬಾಗಿ ಸೀತೆಯ ಮುಖಕೆ ಹಚ್ಚೆಂದಾರು 44 ನಿಂದಲ್ಲಿ ನಿಲ್ಲಾದೆ ಚಂಚಳೆ ಲಕ್ಷ್ಮೀಬಂಧು ಬಳಗವನಗಲಿಸುವ ತರಳೆತಂದೆ ಮಕ್ಕಳೊಳಗೆ ಕದನವ ನಿಡುವಂಥಮಂದಹಾಸೆ ಮುಖವ ತೋರೆಂದಾನು ರಾಮಾ 45 ಅಣ್ಣನ ವಂಚಿಸಿ ಬೇಡಿದವಳೇಮನ್ನೆ ಮನ್ನೆಯರಾ ಕಳಿಸಿದವಳೇಚೆನ್ನಾಗಿ ಮನೆಯೋಳಿದ್ದು ಪೋಗುತಚೆನ್ನಾಯಿತೆ ಮುಖವ ತೋರೆಂದಾನು 46 ಭಾಷೆಯನು ಕೊಟ್ಟು ತಪ್ಪಿಸುವಳೆಕಾಸುವೀಸಾಕೆ ವತ್ತಿ ಬೀಳುವಳೆಹೇಸಿಕಿಲ್ಲದೆ ಕುಲಹೀನನ ಮನೆಯೊಳುವಾಸವಾಗಿರುವಾ ಮುಖವ ತೋರೆಂದಾನು 47 ರಾಮಚಂದ್ರಾನು ಅರಿಶಿನ ಗಂಧವಭೂಮಿಜಳಿಗೆ ಹಚ್ಚಿದನಾಗಾಸಾಮಜಗಮನೆಯ ಹಣೆಗೆ ಕುಂಕುಮ ಹಚ್ಚಿಪ್ರೇಮದಿ ಪರಿಮಳ ಪೂಸಿದಾನು 48 ಕುಸುಮ ದಂಡೆಯ ಮಾಡಿದರುಬಾಸಿಂಗವನು ಕಟ್ಟಿದಾರುಭೂಸುರರೆಲ್ಲರು ಮಂತ್ರಾಕ್ಷತೆ ತಳಿದು ನಿ-ರ್ದೋಷನಾಗೆಂದು ಹರಸಿದರು 49 ಇಂದುಮುಖಿಯರೆಲ್ಲಾರು ಕೂಡಿನಂದದಿ ಜಾನಕಿಗೆ ವೀಳ್ಯವನಿತ್ತುಅಂದಮಾಣಿಕದ ಅಕ್ಷತೆಗಳ ತಳಿದುಮಂದರೋದ್ಧರನ ಹರಿಸಿದರು 50 ದೇವಿಯನ್ನೆತ್ತಿಕೊಂಡು ರಾಮದೇವರ ಮನೆಗೆ ಬಾಹೋದು ಕಂಡುಭಾವುಕರೆಲ್ಲಾ ಹೆಸರು ಪೇಳೆಂದೆನುತದೇವಿ ರಘುನಾಥನೆಂದು ಪೇಳಿದಳಾಗ 51 ಇಂದುಮುಖಿಯರೆಲ್ಲಾರು ಕೂಡಿಇಂದಿರೇಶಾನೆ ಹೆಸರು ಪೇಳೆನಲುಎಂದಾ ಮೇಲೆ ಜಾನಕಿಯೆಂತೆಂದುಮಂದರಧರನು ನುಡಿದನಾಗ 52 ಸತಿಪತಿಯರಿಬ್ಬರು ಕೂಡಿಅತಿಶಯದಲಿ ನಮಸ್ಕರಿಸಿದಾರುಕ್ಷಿತಿಯ ಸುರರಿಗೆ ಲೀಲೆಯ ತೋರಿದ ದೇವಾಪತಿತ ಪಾವನ್ನ ಎನ್ನ ಸಲಹು ಎಂದಾನು 53 ಈ ಕಥೆಯನು ಆದರದಿಂದಾ ಬರೆದು ಹೇ-ಳಿ ಕೇಳುವ ಜನರಾಶ್ರೀಕಾಂತನೊಲಿದು ಕರುಣಿಸುವ ತಾ ಸಿದ್ಧನೇಮದಿಂದಾ ಪಾಡಿರಿ ಜನರು 54 ಕುರುಡಾನು ಈ ಕಥೆಯಾನು ಕೇಳಿದರೆಕರುಣದಿಂದಾಲಿ ಕಂಗಳ ಬರಿಸುವಶರಣವತ್ಸಲ ತನ್ನ ಶರಣರೊಳಿಟ್ಟುಪರಿಪಾಲಿಸುವನು ಶತಸಿದ್ಧ 55 ಸಿರಿ ಒದಗುವದುದಾರ ಇಲ್ಲದ ಬ್ರಹ್ಮಚಾರಿ ತಾ ಕೇಳಲುನಾರಿಯ ಸಹಿತೆ ವಾಸಿಸುವನು 56 ಉದ್ಯೋಗ ಇಲ್ಲದವನು ಕೇಳಿದರೆಸದ್ಯ ಐಶ್ವರ್ಯ ಒದಗುವದು ಸಿದ್ಧಮುದ್ದು ಸುತರಿಲ್ಲದ ಸ್ತ್ರೀಯು ಕೇಳಲುಬುದ್ಧಿವಂತ ಸುತರಾಗುವರು ಸಿದ್ಧ 57 ಮೂರ್ತಿ 58 ಕಮಲ ಧರಿಸಿಪ್ಪಪಾವನ ಮೂರುತಿ ಹೃದಯಾದಲ್ಲಿದೇವಿ ಸಹಿತವಾಗಿ ಕಾವನು ಕರುಣಾದಿನೀವೆಲ್ಲಾರು ತಿಳಿರಿ ಜನರು 59 ಜಾಹ್ನವಿ ಜನಕನುಜಯ ಜಯವೆಂದು ಮಂಗಳವ ಪಾಡೇ 60
--------------
ಮೋಹನದಾಸರು
ಊರ್ವಶಿ : ಬಂದ ಕಾಣೆ ಗೋವಿಂದ ಕ್ಷೀರ- ಸಿಂಧುಶಯನ ವನದಿಂದ ಇಂದಿರೇಶ ಮುದದಿಂದ ಮೌನಿಮುನಿ- ವೃಂದದಿಂದ ಸ್ತುತಿವಂದನೆಗೊಳ್ಳುತ1 ಏಸು ಲೋಭಿಯೊ ತಿಮ್ಮಶೆಟ್ಟಿ ಒಂದು ಕಾಸಿಗೆ ಮಾರುವ ರೊಟ್ಟಿ ದಾಸರ ಕೂಡಿ ಜಗಜಟ್ಟಿ ಬಹು ದೇಶವ ತಿರುಗುವ ಶೆಟ್ಟಿ ದೂಷಣಾರಿ ಪಾದಾಶ್ರಿತಜನರಭಿ- ಲಾಷೆ ಸಲಿಸಿ ಇಲ್ಲಿ ತೋಷದಿ ನಿಂತವ2 ದೊಡ್ಡವನೈ ಮಹಾರಾಯ ಹಳೆ ದುಡ್ಡಿಗೆ ನೀಡುವ ಕೈಯ ಅಡ್ಡಿಗೈದರೆ ಬಿಡನಯ್ಯ ಇವ ಬಡ್ಡಿಕೇಳುವ ತಿಮ್ಮಯ್ಯ ದಡ್ಡುಕೇಸಕ್ಕಿಯ ಮಡ್ಡಿಪ್ರಸಾದವ ಗುಡ್ಡೆಯ ಮೇಲಿದ್ದು ದುಡ್ಡಿಗೆ ಕೊಡುವವ3 ತಿರುಪತಿಗೆ ಪ್ರತಿಯಾಗಿ ಪಡು ತಿರುಪತಿಯೆಂದಿಹ ಯೋಗಿ ಮೆರಸುವನೈ ಸ್ಥಿರವಾಗಿ ಶ್ರೀ ವರ ವೆಂಕಟ ಲೇಸಾಗಿ ಶರಣರು ಏನೆಂದು ಸಂತೋಷಿಪ ಕರುಣಾಕರ ಚಪ್ಪರ ಶ್ರೀನಿವಾಸನು4 ಈ ಪರಿಯಲಿ ಒಲಿದಿಪ್ಪಾ ಬಹು ಕಾಪಟ್ಯರಿಗೆ ತಾನೊಪ್ಪನಮ್ಮ ಗೋಪಾಲಕ ಜಗದಪ್ಪ ಶ್ರೀಪರಮಾತ್ಮ ನಾನಾಪರಿ ವಿಭವದಿ ಗೋಪುರದಲಿ ತಾ ವ್ಯಾಪಿಸಿ ನಿಂದನು5 ರಂಭೆ : ನಾರೀವರ್ಯಾರಮ್ಮ ನೋಡಲು ಸಾರಹೃದಯರಮ್ಮ ತೋರಣಛತ್ರಚಾಮರ ಬಿರುದುಗಳಿಂದ ಭೂರಿ ವಿಭವದಿಂದ ಸಾರಿಬರುವರಮ್ಮ1 ಕರದಿ ಕಲಶವಿಹುದು ಶಾಲಿನ ನಿರಿ ಮುಂದಿರುತಿಹುದು ಬೆರಳಿನೊಳುಂಗುರು ವರ ದ್ವಾದಶನಾಮ ಧರಿಸಿ ಸಮಂತ್ರೋಚ್ಚರಿಸುತ ಬರುವರು2 ಮಂದಿಗಳೊಡ್ಡಿನಲಿ ಬರುವರು ಮಂದಸ್ಮಿತದಲಿ ಚಂದದಿ ಜನಗಳ ಸಂದಣಿ ಮಧ್ಯದಿ ಇಂದಿರೆಯರಸನ ಧ್ಯಾನದಿ ಬರುವರು3 ಹಿಂಗದೆ ಬರುತಿಲ್ಲಿ ಮನಸಿನ ಇಂಗಿತವರಿತಿಲ್ಲಿ ಬಂಗಾರದ ಭೂಷಣಸಮುದಾಯದಿ ಅಂಗಜಪಿತನಿಗೆ ಶೃಂಗಾರಗೈವರು4 ವಿಪ್ರೋತ್ತಮರ ಗುಣ- ಕೆಂತು ಸೈರಣೆಯಾಂತು ನಾನಿರಲಿ ಚಿಂತಿತಾರ್ಥವನೀವ ಲಕ್ಷ್ಮೀ- ಸಂತಸದಿ ಪೂಜಾದಿ ಸತತಿ- ಯಾಂತಕೊಂಡಿಹೇಕಾಂತಭಕ್ತರು1 ಕೀರ್ತಿಯನು ಧರಿಸಿ ಮ- ತಾವೆಂದು ಧರ್ಮವನು ಪಾಲಿಸಿ ಸಿಂಧುಶಯನನ ಚಾರುಚರಣ- ದ್ವಂದ್ವಕಾನತರಾಗಿ ಲೋಕದಿ ವಂದ್ಯರೆನಿಸಿಯಾನಂದ ಪರರಿವ- ರೆಂದು ಶ್ರೀಗೋವಿಂದ ನಡೆಸುವ2 ವೇದಶಾಸ್ತ್ರಪುರಾಣತರ್ಕವನೋದಿ ಬಲ್ಲವರು ವಿಪ್ರರಿ ಗಾದಿ ಗೌಡಸಾರಸ್ವತ ಋಗ್ವೇದಿ ಬ್ರಾಹ್ಮಣರು ಇವರಲಿ ವಾದಗೈವ ಕುವಾದಿಗಳ ಮನ- ಭೇದಿಸುತ ನಿಜವಾದ ಮಾರ್ಗವ ಸಾಧುಗಳಿಂದ ದೃಢವಾದ ಮಾತಿದು3 ಮೇಗರೆಡಂಭಮಾತಲ್ಲ ಧನಿಯ ಕು- ಗೊಂಬರೆ ಎಲ್ಲ ಸಂತಸ ಸಂಭ್ರಮದಿ ವೇದ್ಯಾಂಬುನಿಧಿಯಲಿ ತುಂಬಿರುವರೀ ಕುಂಭಿನಿಯೊಳು ಜ- ಸಂಬಡುವುದು ವಾಸಿಷ್ಠಗೋತ್ರಜ- ರೆಂಬ ವಿಪ್ರಕದಂಬಪೂಜ್ಯರು4 ರಂಭೆ : ಬಾಲೇ ನೀ ಪೇಳಿ ದಿನದ ಲೀಲೆಯೇನೆಂದೆನಗೆ ಆಲಯದೊಳಿದ್ದ ಜನಜಾಲವಿಂದೀ ನೆಲೆಗೆ1 ಮೇಳವಿಸುತ್ತ ಕೂಡಿರುವರು ಪೇಳೆಲೆ ಸುಶೀಲೆ ಮಹಾಲೀಲೆ2 ಕೇಳುವೆನರಿದಾಲಸ್ಯವ ತಾಳಬೇಡ ಸಖಿಯೇ ಲೀಲೆಯ ನಾನರಿಯೆ3 ಫಾಲೇಂದು ಕುಂದದ ವರ್ಣಕೋಲು ಚಾಮರಗಳ ನಲುಗಿಸಿಕೊಂಡು ಬಗ್ಗಿ ಪೇಳುವರು ಸ್ತೋತ್ರಗಳು4 ಚಂಡವೈಶ್ವಾನರನ ತೇಜಾಖಂಡದಿಂದೋರಂತೆ ಮಂಡಲೈದರೊಳಗೆ ಪ್ರಭೆಗೊಂಡಿಹುದು ಕಾಂತೆ5 ಪಾದುಕೆಯ ಮುಂದೆಯಿರಿಸಿ ಮೋದದಿಂದಿಕ್ಕೆಲದಿ ಆದಿನಾರಾಯಣ ಮದುಸೂದನನೆ ಮುದದಿ6 ಕಾದುಕೊಳ್ಳೆನುತ ಸ್ತುತಿಸಿ ಪಾದಕೆರಗುವರು ನಾದಿನಿ ಕೇಳಿದರ ಪರಿಯನೀ ದಯದಿಂದುಸುರು7 ಊರ್ವಶಿ :ಭಾವೇ ನೀ ಕೇಳೆ ಇದನು ತ್ರೈಲೋಕ್ಯ- ದೇವನಾಗಮನವೆಲ್ಲನೂ ದೀವಟಿಗೆ ಸೇವೆಯೆಂದು ಪೇಳುವರು ಭಾವುಕರು ಮನದೊಳಂದು1 ಸಾಯನವನು ಸುರಿದು ಸಾವಿರ ಸಾಲದು ಶ್ರೀಯರಸನ ಮಹಿಮೆಯರಿವದಾರಿಗಳವಲ್ಲ3 ದೈತ್ಯವಿನಾಶನ ಜಯಜಯ ಜಾಹ್ನವಿತಾತ ಜಯಜಯ ಜಗದಾತ ಆಶ್ರಿತ ಸುರಭೂಜ ತೋರುತ ಒಲಿದು4 * * * ವಾರೀಜನೇತ್ರೆ ಕಳ್ ಭೂರಿವಿಭವವನ್ನು ನೋಡೆ ತಂಗಿ ಭಕ್ತ- ರೋರಂತೆ ಬಂದು ಕರೆಯುವಾನಂದವ ನೋಡೆ ತಂಗಿ1 ಭಾವದಿ ನೀ ದಯಮಾಡೆಂದು ಪೇಳ್ದರು ನೋಡೆ ತಂಗಿ 2 ದೇವಕಾರುಣ್ಯ ಸುಭಾವದಿ ಶರಣರ್ಗೆ ನೋಡೆ ತಂಗಿ ಪ್ರತಿ- ಭಾವವ ತೋರಿ ಗೋಪುರ ಸೇವೆಗೊಂಡರು ನೋಡೆ ತಂಗಿ3 ಪಲ್ಲಂಕಿಯಲಿ ಭಕ್ತಸುಲಭವೇರುವನು ನೋಡೆ ತಂಗಿ ರಥ- ದಲ್ಲಿ ತಾನೇರುತ್ತ ಮೆಲ್ಲನೆ ಬರುವನು ನೋಡೆ ತಂಗಿ4 ಭೇರಿನಗಾರಿಮೃದಂಗೊಂದು ಕಡೆಯಲ್ಲಿ ನೋಡೆ ತಂಗಿ ರಥ ಮೌರಿ ಪಟಿಹ ತಂಬಟೆಯೊಂದು ಕಡೆಯಲ್ಲಿ ನೋಡೆ ತಂಗಿ5 ಸಾಲಿನೊಳೆಸೆವ ಬೊಂಬಾಳ ಹಿಲಾಲುವ ನೋಡೆ ತಂಗಿ ಜನ- ಜಾಲಗಳೆಲ್ಲರು ಮೇಳವಿಸಿರುವರು ನೋಡೆ ತಂಗಿ6 ಪಟ್ಟದರಸನಾಗಮವನ್ನು ಕಾಣುತ ನೋಡೆ ತಂಗಿ ತಮ್ಮ- ಪಟ್ಟವನು ಶೃಂಗರಿಸಿದರೇನೆಂಬೆ ನೋಡೆ ತಂಗಿ7 ಕಟ್ಟಿದ ಗೂಡುದೀಪದ ಚಮತ್ಕಾರ ನೋಡೆ ತಂಗಿ ಹೇಮ- ಬೆಟ್ಟವ ಇಳೆಗೆ ತಂದೊಟ್ಟಿಹರೆಂಬಂತೆ ನೋಡೆ ತಂಗಿ8 ನಿತ್ಯ ರರ್ತಿಯ ಸಲಿಸಿ ಪ್ರವರ್ತಕನಾದನು ನೋಡೆ ತಂಗಿ9 ಕಾಣಿಕೆಯಾರತಿಗಳನೆಲ್ಲ ಕೊಳ್ಳುತ ನೋಡೆ ತಂಗಿ ಬಂದ ಶ್ರೀನಿವಾಸನು ಭಕ್ತರ ಒಡನಾಡುತ್ತ ನೋಡೆ ತಂಗಿ10 ನೋಡೆ ತಂಗಿ ನಮ್ಮ ದೇವರು ಬಂದರೆಂದುರುತರ ತೋಷದಿ ನೋಡೆ ತಂಗಿ11 ಜೋಡಿಸಿ ಕೈಗಳ ಭಯದಿ ಬಗ್ಗಿ ನೋಡೆ ತಂಗಿ ದಯ- ಮಾಡೆಂದು ಹರಿಯನ್ನು ಬೇಡಿಕೊಂಡೊಯ್ದರು ನೋಡೆ ತಂಗಿ12
--------------
ತುಪಾಕಿ ವೆಂಕಟರಮಣಾಚಾರ್ಯ
ಎಚ್ಚರಾದರು ದೇವಗಣರಿಂದು ನಮ್ಮ ಲಕ್ಷ್ಮೀರಮಣ ಕೃಷ್ಣ ರಥವನೇರುವನೆಂದು ಪ. ಶಿಂಶುಮಾರ ಚಕ್ರದಂಶಮಕರ ತಿ- ಗ್ಮಾಂಶು ಸಂಕ್ರಮಿಸುವ ಸಮಯದಲಿ ಕಂಸಮರ್ದನ ಯದು ವಂಶಾಬ್ಧಿ ಚಂದ್ರ- ವಿಪಾಂಗಗಮನನಾಗಿ ವೀಧಿಗೆ ಬಹನೆಂದು 1 ಕಂದನ ಸಂಭ್ರಮ ತಂದೆಗೆ ಸುಖಕರ- ವೆಂದು ಪೇಳುವ ಮಾತ ನಿಜವ ದೋರಿ ಮಂದರಧರ ಮನ್ಮಥನ ಕೇತು ಬೆಳಗುವಾ- ನಂದದಿ ರಥವೇರುತ್ತಿಂದು ಬರುವನೆಂದು 2 ಮೋಕ್ಷದಾಯಕ ಕಮಲಾಕ್ಷ ಕೃಷ್ಣನ ಸ- ತ್ಕಟಾಕ್ಷ ಸಂಪಾದಿಪಪೇಕ್ಷೆಯಲಿ ತ್ರ್ಯಕ್ಷಾಧ್ಯಕ್ಷಲೋಕಾಧ್ಯಕ್ಷರೆಲ್ಲರು ಕೂಡಿ ಪಕ್ಷಿವಾಹನನನ್ನು ಈಕ್ಷಿಪ ತವಕದಿ 3 ಪೃಥೆಯ ಕುಮಾರನ ರಥವ ನಡಸುತತಿ- ರಥರನು ಗೆಲಿಸಿ ಸಾಮ್ರಾಜ್ಯವಿತ್ತ ಕಥೆಯ ಕೇಳ್ಪರ ಮನೋರಥಗಳ ಕೊಡುವ ಮ- ನ್ಮಥನ ಜನಕ ಮುಕ್ತಿ ಪಥವ ತೋರುವನೆಂದು 4 ಸಿದ್ಧಿ ವಿಘ್ನಮುಖ ದೋಷಭೇಷಜ ಭಕ್ತಿ ಸಿದ್ಧ ಜಪರಿಗೆ ಸಿದ್ಧಿಸುವನೆಂದು ಮಧ್ವಮುನಿಯು ತಂದಿಲ್ಲಿರಿಸಿ ಪೂಜಿಸಿದಂಥ ಸಿದ್ಧಾಂತವೇದ್ಯನಿರುದ್ಧನಿಲ್ಲಿಹನೆಂದು 5 ಧಾರುಣಿಯೊಳಗಿನ ವಿಷ್ಣುಭಕ್ತರ ಸಂಘ ಸೇರಿ ಸಂತೋಷದಿ ಜಯವೆನಲು ಪಾರಿವ್ರಾಜರು ಕೂಡಿ ಪರತತ್ವ ನುಡಿಯೆ ಸ- ರ್ಪಾರಿಯನೇರಿ ಸಮೀರೇಡ್ಯಬಹನೆಂದು 6 ಮಾಯಿಜನರ ಮುರಿದೊತ್ತುತ ತತ್ವರ- ಸಾಯನ ಸುಧೆಯ ಸಜ್ಜನರಿಗಿತ್ತು ವಾಯುಮುನಿಯು ಪ್ರತಿಷ್ಠೆಯ ಗೈದ ಪುರುಷಾರ್ಥ ದಾಯಕ ವೆಂಕಟರಾಯನೀತನೆಯೆಂದು 7
--------------
ತುಪಾಕಿ ವೆಂಕಟರಮಣಾಚಾರ್ಯ
ಎಚ್ಚರಿಕೆ ಎಚ್ಚರಿಕೆ ಎಲೋ ದೇವ | ಎಚ್ಚರಿಕೆ ಎಚ್ಚರಿಕೆ | ಅಚ್ಚ ಕಲ್ಯಾಣ ಮೂರುತಿ ತಿರುವೆಂಗಳಾ ಪ ಅಜ ದ್ವಿಜಗಜ ಅಜಾಮಿಳ ಪರಿಪಾಲನೆಯಾ | ದ್ವಿಜ ರಾಜಾಂಗಾ ಗಂಗಜ ಭಕ್ತವರದನೆಯಾ | ಗಜ ಕುಜ ದನುಜ ಭೂ ಭುಜರ ಸಂಹಾರನೆಯಾ | ಪಂಕಜ ಹೃದಯಾರ್ಕನೆಯಾ1 ಪರಮೇಷ್ಠಿ ವಂದನೆಯಾ | ಶರಧಿ ತಾರಾ ಕರುಗಳ ಕಾಯಿದನೇಯಾ | ಎರಡೇಳು ಲೋಕ ಪೊರೆವಾ ಭಾರಣ ಹರಿಯಾ | ಶರಣು ಹೊಕ್ಕೆನು ಎನ್ನ ಮೊರೆ ವಿಚಾರಿಸೊಯಾ 2 ಜಯ ಜಯಾ ಚಿತ್ತಾವಾಧಾರು ಪರಾಕ್ರಮಯಾ | ಭಯ ನಿವಾರಣ ನಿಜ ಭಂಟರಿಗೆ ಬಂಟಯಾ | ನಯ ಮೂರುತಿ ನಮ್ಮ ವಿಜಯವಿಠ್ಠಲರೇಯಾ ಯಾ | ತ್ರಿಯಗುಣ ವಿರಹಿತ ಶೇಷಗಿರಿವಾಸಯಾ 3
--------------
ವಿಜಯದಾಸ
ಎಂಟು ದಿನವಾಯಿತಲ್ಲೊ ಭಕ್ತ ನೆಂಟನ್ಯಾಕೆ ತಡವು ಮನೆಗೆ ಕರೆಸಯ್ಯ ಕರುಣವಿರಿಸಯ್ಯ ಪ. ಆವಲ್ಲಿ ಪೋದರು ನಿನ್ನ ಸೇವೆ ಮಾಳ್ಪ ಸುಖಕೆ ಸರಿಯಾ ಪಡೆಯದೆ ಎಲ್ಲೂ ತಡೆಯದೆ ಶ್ರೀವಲ್ಲಭ ನಿನ್ನ ಕಾಂ¨ ಭಾವನೆಯಿಂದೆನ್ನ ಮನಸು ತಿರುಗಿತು ಬಹಳ ಕರಗಿತು 1 ಯೋಗಿವರದ ನಿನ್ನ ಮೂರ್ತಿ ಬೇಗದಿಂದ ನೋಳ್ಪೆನೆಂದು ಯೋಚಿಸಿ ಮುಂದೆ ಸೂಚಿಸಿ ನಾಗೂರ ಪಟ್ಟಣವ ಬಿಟ್ಟು ಸಾಗಿ ಬರುವ ಸಮಯದಲ್ಲಿ ಆಶೆಯಾ ಪಾಶ ಸೂಸಿತು 2 ದೋಷಿಯೆಂದು ಗ್ರಹಿಸದೆ ಸ- ರ್ವಾಸೆ ಪೂರಿಸಖಿಳ ಜಗದೀಶನೆ ವೆಂಕಟೇಶನೆ ಶ್ರೀಶ ನಿನ್ನ ಕಡೆಗೆ ಕರೆಸಿ ನಿತ್ಯ ಸೇವೆ ಕೊಳ್ಳಯ್ಯ ಖಜ್ಜಬಿಲ್ಲಯ್ಯ 3
--------------
ತುಪಾಕಿ ವೆಂಕಟರಮಣಾಚಾರ್ಯ
ಎಂತವಗೊಲಿದು ನೆರೆದೆ ಎಲೆ ಬಾಲೆ ನೀ ಬರಿದೆ ಪ ಕಾಂತೆಯುದರದಲಿ ತಾಳ್ದ ಕಮನಿಯೊಳ್ ಬಾಳ್ದಅ.ಪ ಮೈಮೊಗ ಬೇರಾದವಗೆ ಮಾತೃಘಾತಕನಿಗೆ ಬೈಯಲು ಭಾವನಕೊರಳ ಭಾವಿಸದರಿದವಗೆ ಕೈವಿಡಿದ ಕಾಂತೆಯನು ಕಾಡಿಗಟ್ಟಿದವಗೆ ತಮ್ಮಯ್ಯನರ್ಧಾಂಗಿಯನು ಅಣ್ಣನ ನೆರೆಸಿದವಗೆ1 ಹದ್ದನೇರಿದವಗೆ ಹಾವಿನಮೇಲೊರಗಿದವಗೆ ಶುದ್ಧ ಕರಡಿಯಮಗಳ ಸರಿ ಎಂದು ಆಳ್ದವಗೆ ಮುದ್ದಾಡಿ ಮೊಲೆಯೂಡಿದವಳಸುವನೆ ಕಳೆದವಗೆ ಕದ್ದು ಬೆಣ್ಣೆಯ ಮೆದ್ದ ಕರಿಮೈಯವಗೆ2 ಸುರನಿಶಾಚರ ಮಧ್ಯೆ ಅರಿಯೆ ಪೆಣ್ಣಾದವಗೆ ಸುರಪನಂದನ ಶಕಟನ ನೆರೆ ಹೊಡೆದವಗೆ ಸುರಪುರದರಸು ಶ್ರಿ ಲಕ್ಷ್ಮೀರಮಣಗೆ 3
--------------
ಕವಿ ಲಕ್ಷ್ಮೀಶ