ಒಟ್ಟು 1121 ಕಡೆಗಳಲ್ಲಿ , 101 ದಾಸರು , 945 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಾನಿಧಿ ನೀ ಶ್ರೀರಾಮ ನಿನ್ನ ಚರಣ ಸೇವಿಪರಾನತ ಪ್ರೇಮ ಪ. ಕರುಣ ತೋರುತ್ತೆನ್ನ ಪೊರೆ ರಾಮ ನಿನ್ನ ಸ್ಮರಣೆ ನಿರುತ ನೀಡೆಲೊ ಶ್ರೀರಾಮ ಅ.ಪ. ಆಶ್ರಿತ ಜನರಿಗೆ ನೀನಲ್ಲದೆ ನಿ ನ್ನಾಶ್ರಯಗೊಡದಿರೆ ಗತಿ ಕಾಣೆ ಸ್ತೋತ್ರದಿ ಸ್ತುತಿಸುವೆ ನಿನ್ನಾಣೆ ಜಗತ್ರಯ ಸಲಹೊ ಕೋದಂಡಪಾಣಿ 1 ಭವಭಯಭಂಜನ ಶ್ರೀರಾಮ ಎನ್ನ ಭಯವ ಬಿಡಿಸೊ ಜಾನಕಿ ರಾಮ ಕವಿಗೇಯ ನೀನೆ ಜಗದಭಿರಾಮ ಎನಗೆ ಜವನ ಬಾಧೆಯ ಬಿಡಿಸೊ ರಘುರಾಮ 2 ತಂದೆ ಶ್ರೀ ಶ್ರೀನಿವಾಸ ನೀನೆ ಎನಗೆ ಬಂದ ಕಷ್ಟದಿ ಸಲಹುವ ನೀನೆ ಮುಂದೋರಿ ಸಲಹೋ ತಾಯಿ ಗುರು ನೀನೆ ಇನ್ನೂ ಸಂದೇಹವಿಲ್ಲ ಕೇಳೆಲೊ ರಾಮ 3
--------------
ಸರಸ್ವತಿ ಬಾಯಿ
ಕರುಣಾಮೃತವ ಸಿರದಿ ಸುರಿಯೊ ವರದ ಧನ್ವಂತರಿಯೆ ಚರಣಯುಗಳ ಕಮಲವನ್ನು ಕರುಣಿಸೆನಗೆ ದೊರೆಯೆ ಪ. ಶ್ರವಣ ನಯನ ಚಿತ್ತ ಜಿಹ್ವೆಗನುಕೂಲವಾಗಿರುವ ಲೀಲಾ ಪ್ರವರ ಕಾಂತಿ ಸ್ಮರಣ ನಾಮಗಳನು ಪಾಲಿಸಿ ಭವಜನೀತ ಭ್ರಮಣ ನಿಲಿಸಿ ಕುವರನಂತೆ ರಕ್ಷಿಸೆನ್ನ ಕವಿಭಿರೀಡ್ಯ ಕಂಜಜಾತಶಿವರ ಸೌಖ್ಯಗೊಳಿಸದವನೆ 1 ಕಲಿಕೃತ ಕಲ್ಮಶಗಳಿಂದ ಬಳಲುವಂಥ ಬಾಧೆಯನ್ನು ನಿಲಿಸಿಕೊಳ್ಳಲು ಅನ್ಯಮಾರ್ಗಂಗಳನು ಕಾಣೆನು ನಳಿನನಾಭ ನಿನ್ನ ಪಾದಗಳನೆ ನಂಬಿಕೊಂಡಿರುವೆನು ಬಲಿಯ ಕಾಯ್ವ ಭೂಮಿಜೇಶ ಘಳಿರನೆ ಬಂದೊದಗಿ ಬೇಗ 2 ನಿಖಿಳ ಭೋಗಗಳನನುಭವಿಸುತ ಶ್ರೀಗುರು ಮಧ್ವಾಂತರಾತ್ಮ ನಾಗಗಿರಿನಾಥ ರಾಗ ರೋಗ ದೋಷಗಳನು ನೀಗಿ ನಿನ್ನ ನಂಬಿ ಸ್ತುತಿಪ ಭಾಗವತರ ಭಕ್ತನೆನಿಪ ಭಾಗ್ಯವಿರಿಸೋ ಭೀಮವರದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಾಸಾಗರ ದೀನೋದ್ಧಾರಣ ಎನ್ನನು ಕಾಯ್ವ ಪರಿಯ ಚಿಂತಿಸಿ ರಕ್ಷಿಸೊ ಪರಮ ಪಾವನ ನಾಮಸ್ಮರಣೆಯಲ್ಲದೆ ಕರ್ಮ ಚರಣರಹಿತ ಪಾಪಕರನಾಬ್ಧಿಪತಿತನ ಪ. ವರ್ಣಾಶ್ರಮಾಚಾರ ಕರ್ಮಕೃತ್ಯವ ನೀಗಿ ನಿರ್ಮಲಚಿತ್ತದಿ ನಿನ್ನ ಪೂಜಿಸದೆ ವರ್ಮವಿಡಿದು ವರ ದ್ರೋಹ ಚಿಂತೆಗಳಿಂದ ಧರ್ಮಮಾರ್ಗವ ದೂರದಲಿ ತ್ಯಜಿಸಿ ನಿರ್ಮಲಾಂತ:ಕರಣ ನಿಜಕುಲ ಧರ್ಮರತ ಸಜ್ಜನರ ದೂಷಿಸಿ ದುರ್ಮದಾಂಧರ ಸೇರಿ ಕೂಪದ ಕೂರ್ಮನಂದದಿ ಬರಿದೆ ಗರ್ವಿಪೆ 1 ನೇತ್ರ ದರ್ಶನಕೆ ಸಂಸ್ಮರಕೆ ಜಿಹ್ವೆಯ ಗಾತ್ರ ಸೇವೆಗೆ ನೈರ್ಮಲ್ಯಕೆ ಶಿರವ ಶ್ರೋತ್ರವ ಮಾಹಾತ್ಮ ಶ್ರವಣಕೆ ಪಾದಗಳ ಕ್ಷೇತ್ರಯಾತ್ರೆಗೆ ಕರಗಳ ಪೂಜಾವಿಧಿಗೆ ಇತ್ತ ದೊರೆಯನು ಮರೆತು ಇಂದ್ರಿಯ ವೃತ್ತಿಗಳ ಸ್ವೈರಿಣಿಯ ದರುಶನ ಭುಕ್ತಿ ಚುಂಬನ ಧ್ಯಾನ ದುಷ್ಟ ಕಥಾ ಶ್ರವಣಸಲ್ಲಾಪಕಿತ್ತೆನು 2 ಪತಿತ ಪಾವನ ನೀನು ಪತಿತಾಗ್ರೇಸರ ನಾನು ಅತಿಶಯಿತನು ನೀನು ಅತಿನೀಚನು ನಾನು ಗತಿಹೀನ ಜನಕ ಸದ್ಗತಿಯೆಂಬ ಬಿರುದುಳ್ಳ ಮಿತಚಿತ್ರ ಚರಿತಾತ್ಯದ್ಘುತರೂಪ ಗುಣಪೂರ್ಣ ಪಶುಪತಿ ಸುರೇಶ ಪ್ರ- ಭೃತಿ ದಿವಿಜಗಣ ಸುತ ಪದಾಂಬುಜ ಕ್ಷಿತಿಜಲಾಗ್ನಿ ಮರುನ್ನಭೋಹಂ ಕೃತಿ ಮಹ ಸುಖತತಿನಿಯಮಕ 3 ಕರಿರಾಜ ಧ್ರುವಾಕ್ರೂರನರ ವಿಭೀಷಣ ನಾರದರು ಮೊದಲಾಗಿ ನಿನ್ನನುದಿನವು ಸ್ಮರಿಸಿ ಪೂಜಿಸಿ ಮನವೊಲಿಸಿದವರನ್ನು ಪರಿಪಾಲಿಸಿದನೆಂಬೊ ಗರುವದಿಂದ ನಿರುಪಮಾನಂದೈಕ ಸದ್ಗುಣ ಭರಿತರೆಂಬುದ ಹೆಮ್ಮೆಯಿಂದಲಿ ಮರೆತರೆನ್ನನು ಪರಮಕರುಣಾ ಶರಧಿಯೆಂದ್ಹೆಸರಿರುವುದೇತಕೆ 4 ನಾ ನಿನ್ನ ಮರೆತರು ನೀ ಎನ್ನ ಮರೆದರೆ ಹಾನಿಯಾಗದೆ ನಿನ್ನ ಭಕ್ತ ವತ್ಸಲಕೆ ದಾನವಾಂತಕ ಅಕಿಂಚನಾರೆ ಎಂಬ ಪ್ರಮಾಣ ಉನ್ನತ ವಚನವಾಗದೆ ಮಾನನಿಧಿ ಪವಮಾನ ತತ್ವಮತ ಮಾನಿಜನ ಸಂಸ್ತುತ ಪದಾಂಬುಜ ಶ್ರೀನಿವಾಸ ಕೃಪಾನಿಧೆ ಕಮಲಾ ನಿಲಯ ವೆಂಕಟನಿಜಾಲಯ 5 ವೇದವನು ತಂದು ಭೂಧರನ ಬೆನ್ನಲಿ ನೆಗಹಿ ಈ ಧರೆಯ ಸಲಹೆ ಪ್ರಹ್ಲಾದನನು ಕಾಯ್ದೆ ಮೇದಿನಿಯನಳೆದಿ ಕಾರ್ತದಶಾಸ್ಯ ಕಂ ಸಾದಿಗಳ ತರಿದ ಬೌದ್ಧಾದಿ ಕಲ್ಕಿ ಧಾರಣನೆ ಪತಿತ ಪಾವನನೆಂಬ ಪರಮ ಬಿರುದನು ವಹಿಸಿ ಜತನ ಮಾಡುವಿ ಭಕ್ತತತಿಗಳನು ಬಿಡದೆ ಪತಿತ ಶೇಖರನನ್ಯಗತಿಯಾಗಿರುವ ಎನಗೆ ಗತಿಯ ಪಾಲಿಸು ರಮಾಪತಿಯೆನ್ನುಪೇಕ್ಷಿಸದೆ 6 ನಾರದಕ್ರೂರ ನರ ಹೈರಣ್ಯಕಾದಿಗಳು ಪಾದ ನೀರರುಹಗಳನು ಘೋರತರ ಸಂಸಾರಪಾರವಾರವ ದಾಟಿ ಧೀರರೆನಿಸಿದರೆಲ್ಲಪಾರಸನ್ಮಹಿಮ ತರಣಿ ಉದಿಸಿದ ಮೇಲೆ ತಿಮಿರದೊಂದಿರವ್ಯಾಕೆ ಗರಳ ಭಯವ್ಯಾಕೆ ಸಿರಿಸಹಿತ ಶೇಷಾದ್ರಿ ವರ ನಿನ್ನಪಾದ ಸಂ- ದರುಶನವು ದೊರೆತಮ್ಯಾಲರಿಬಾಧೆಯಾಕೆ ಎನಗೆ 7
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಿಸು ಕರುಣಿಸು ಕರುಣಿ ಶ್ರೀ ರಂಗಯ್ಯಾ ಹರಣ ಪೋದರು ನಿಮ್ಮ ಸ್ಮರಣೆ ಮರೆಯದಂತೆ ಪ ಮರವೆ ಮಾಯದಿ ಸಿಲುಕಿ ಮರುಳ ಮಾನವರಿಗೆ ಶಿರವ ಬಾಗದಂತೆ 1 ಘನದು:ಖಮಯವಾದ ಜನನಮರಣವೆಂಬ ಕುಣಿಯೊಳಗೆ ಸಿಕ್ಕಿ ಜನಿಸಿಬಾರದಂತೆ 2 ದುರಿತ ದಾರಿದ್ರ್ಯದಿಂದ ಪರಿಪಕ್ವನೆನಿಸೆನ್ನ ವರದ ಶ್ರೀರಾಮ ನಿಮ್ಮ ಚರಣ ಸೇವೆಯ ಘನತೆ 3
--------------
ರಾಮದಾಸರು
ಕರುಣಿಸು ನರಹರಿಯೇ ಸ್ಮರಣಿಯ ಕರುಣಿಸು ನರಹರಿಯೇ ಪ ಕರುಣಿಸುವದು ತವಸ್ಮರಣೆ ನಿರಂತರ ಧರಣಿ ಸುರಪ್ರಿಯ ಚರಣಕೆರಗುವೆನು ಅ.ಪ ಶರಣರ ಸುರತರುವೇ ಕರುಣಾ ಶರಧಿ ಶಿರಿಯಧೊರೆಯೆ ಸರಸಿಜ ಭವಮುಖರರಸನೆ ತವಪದ ಸರಸಿಜದಲಿ ಮನವಿರಿಸುವಂತೆ ಜವ 1 ಕಂದನನುಡಿಕೇಳಿ ಸ್ತಂಭದಿ ಬಂದಿಯೊ ವೇಗದಲಿ ವಂದಿಸುವೆನು ಭವಬಂಧ ಬಿಡಿಸಿ ಮನ ಮಂದಿರದಲಿ ತವ ಸಂದರುಶನವನು 2 ಚಾರು ಕೃಷ್ಣ ತೀರಾಕಾರ್ಪರಾ ಗಾರನೆ ಸ್ಮರಿಸುವರ ಘೋರದುರಿತ ಹರನಾರಸಿಂಹ ನಿ ನ್ನಾರಧಕರೊಳು ಸೇರಿ ಸುಖಿಸುವಂತೆ 3
--------------
ಕಾರ್ಪರ ನರಹರಿದಾಸರು
ಕರುಣಿಸುವ ಹರಿ ನಿರಂತರವು ಮನವೆ ಪಾದ ಸ್ಮರಣಿಯನು ನೆರೆನಂಬು ಪ ಕಂದ ಪ್ರಹ್ಲಾದನ ತಂದೆ ಭಾಧಿಸಲು ಗೋ ವಿಂದ ಘನ ಸ್ತಂಭದೊಳ್ ಬಂದು ತಾಮುದದಿ ಮಂದ ದನುಜನ ಬಿಡದೆ ಕೊಂದ ಶ್ರೀವರ ಮುಚು ಕುಂದ ವರದ ಯೆಂದು ನೀ ಭಜಿಸು 1 ಛಲದಿಂದ ಮಲತಾಯಿ ಸಲೆ ಧ್ರುವನ ಕಾನನಕೆ ಕಳುಹಲಾಕ್ಷಣವೆ ಶ್ರೀ ನಳಿನನಾಭ ಒಲಿದು ಪೊರಿದನು ಮಹಾಒಳಿತೆಂದು ಅವಗೆ ನಿಶ್ಚಲ ಪದವಿಯನು ಇತ್ತ ಜಲನಿಧಿಶಯನ 2 ಅರಸು ಮುನಿಶಾಪದಲಿ ಕರಿಯಾಗಿ ಜನಿಸಿ ಮ- ಕರ ಬಾಧೆಗೆ ಶಿಲ್ಕಿ ಮೊರೆಯನಿಡಲು ತ್ವರದಿ ಪೊರದಂಥ ಹೆನ್ನೆಪುರ ಲಕ್ಷ್ಮೀನರಶಿಂಹ ಸಿರಿ ಕೃಷ್ಣಾ 3
--------------
ಹೆನ್ನೆರಂಗದಾಸರು
ಕರುಣಿಸುವುದೆನಗಿತು | ಕರಿವರದ ಕೃಷ್ಣಾ |ನಿರುತ ನಿನ್ನಯ ಸ್ಮರಣೆ | ವೆರಕವಾಗಲಿ ಮನಕೆ ಪ ಪರಸತಿಯರೊಲಿಮೆಗೇ |ಎರಗುವೀ ಮನವನ್ನು ಬರ ಸೆಳೆದು ನಿನ್ನಂಘ್ರಿ | ಸರಸಿಜದೊಳಿರಿಸೋ |ಶರಣ ವತ್ಸಲನೆಂಬೊ | ಬಿರಿದು ನಿನ್ನದು ಇರಲುಬರಿದೇಕೆ ತಡಗೈವೆ | ಮರುತಾಂತರಾತ್ಮಾ 1 ಮುದಿತನದ ತನುವಿನಲಿ | ಮದಡಾಗಿ ಮೈಮರೆವೆಹೃದಯ ಸದನದಿ ನಿನ್ನ | ಪದವ ನೋಡದಲೇಎದುರಾಳಿ ತತ್ವೇಶ | ರಧಿಕಾರ ತಪ್ಪಿಸುತಪದುಮನಾಭನೆ ನಿನ್ನ | ಪದ ತೋರೊ ಘನ್ನಾ 2 ಪುಂಡಲೀಕನಿಗೊಲಿದೆ | ಪಾಂಡವರ ಪಾಲಿಸಿದೆಪುಂಡರೀಕಾಕ್ಷ ದೃಹಿ | ಣಾಂಡಗಳ ವಡೆಯಾ |ಅಂಡಜಾಧಿಪ ತುರಗ | ಕುಂಡಲಿಯ ಶಯನ ಹೃತ್‍ಪುಂಡರೀಕದಿ ತೋರೊ | ಗುರು ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಕರುಣಿಸೊ ಗುರುವೆ ಚರಣ ಸ್ಮರಣೆಯು ನಿಮ್ಮ ಧ್ರುವ ಸ್ಮರಿಸಲಿಕ್ಕೆ ನಾ ನಿಮ್ಮ ತರಳ ಪ್ರಹ್ಲಾದನಲ್ಲ ಅರಿತು ಮಾಡುವದು ದಯ ತರಣೋಪಾಯದ 1 ಒಲಿಸಿಕೊಳ್ಳಲು ನಿಮ್ಮ ಫÀಲ್ಗುಣನಂಥವನಲ್ಲ ಗೆಲಿಸುವದೊ ನೀ ಸುಪಥ ನೆಲೆನಿಭದೋರಿ 2 ಮೊರೆ ಇಡಲು ನಾ ನಿಮ್ಮ ಕರಿರಾಜನÀಂಥವನಲ್ಲ ಕರುಣಿಸುವದೊ ಎನಗೆ ಕರವಿಡಿತು ಪೂರ್ಣ 3 ಶರಣ ಹೋಗಲು ನಿಮ್ಮ ಧೀರ ವಿಭೀಷಣನಲ್ಲ ಪಾರ ಗೆಲಿಸುವದೊ ನಿಮ್ಮ ವರಕೃಪೆಯಿಂದ 4 ಭಕ್ತಿ ಮಾಡಲು ನಿಮ್ಮ ಶಕ್ತಸಮಥನಲ್ಲ ಯುಕ್ತಿದೋರುವದೊ ನಿಮ್ಮ ಮುಕ್ತಿಮಾರ್ಗದ 5 ಸ್ತುತಿಯ ಮಾಡಲು ನಿಮ್ಮ ಅತಿಶಯ ಭಕ್ತ ನಾನಲ್ಲ ಗತಿಸುಖದೋರುದೆನಗೆ ಪತಿತಪಾವನ 6 ದಾಸರ ದಾಸನೆಂದು ಲೇಸಾಗಿ ಮಹಿಪತಿಗೆ ವಾಸನೆ ಪೂರಿಸೊ ಪೂರ್ಣ ದೇಸಿಗರ ದೇವ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಲಿಮುಖ್ಯ ದೈತ್ಯರನು ಸ್ಮರಿಸಿ ಬಿಡದೆ ಕಲುಷವರ್ಜಿತ ಭಾಗವತರು ಮರೆಯದಲೆ ಪ ಮಲಮೂತ್ರಗಳ ವಿಸರ್ಜನೆ ಗೈವಾಗ ಎಂ ಜಲ ಕೈ ಬಾಯ್ದೊಳೆದು ಉಗುಳುವಾಗ ಹುಳಿ ಬೀಜ ಕವಡೆ ಪಗಡೆಗಳಾಡುವಾಗ ಮ ಕ್ಕಳನಾಡಿಸುತಲಿ ವಿಸ್ಮರಣೆಯಿಂದಿರುವಾಗ 1 ಸಂಧಿಕಾಲದಲಿ ಸತಿಯೊಡನೆ ಪವಡಿಸಿದಾಗ ನಿಂದ್ಯ ಕರ್ಮಗಳನಾಚರಿಸುವಾಗ ತಂದೆ ತಾಯಿಗಳ ದಿನ ಮರೆತು ಒಟ್ಟಾಗ ಕ ರ್ಮೇಧಿ ಭಿಕ್ಷಕೆ ಬರಲು ಇಲ್ಲೆಂಬುವಾಗ 2 ಮಾಸೋಕ್ತ ಧರ್ಮವನು ತೊರೆದಾಗ ವಿಪ್ರಗೋ ಗ್ರಾಸಗಳ ಕೊಡದೆ ಭುಂಜಿಸುವಗಲೇ ಮೀಸಲು ಮಡಿ ಮೈಲಿಗೆಗಳ ನೋಡದಲೆ ದು ಷ್ಯಾಸೆಯಲಿ ನೀಚರಾಲಯದಲುಂಬಾಗ 3 ಪ್ರಾಯ ಧನ ಮದದಿಂದ ಹೇಯ ವಿಷಯಗಳು ಪಾ ದೇಯವೆಂದರಿದು ಭುಂಜಿಸುವಾಗಲು ಜಾಯಾತ್ಮ ದೇಹಾದಿಗಳು ತನ್ನದೆಂಬಾಗ ಮಾಯವಾದಿಯ ಉಕುತಿ ಮನಕೆ ತಂದಾಗ 4 ಮತಿವಮತರೊಡನೆ ಮತ್ಸರ ಪುಟ್ಟಿದಾಗವ ರ್ಪಿತ ಪದಾರ್ಥಗಳ ಭುಂಜಿಸುವಾಗಲು ಮೃತ ವತ್ಸ ಗೋವಿನ ಚಲಮಂಬಾಗ ಶ್ರೀ ಪತಿ ಜಗನ್ನಾಥವಿಠಲನ ಸ್ಮøತಿ ಬಿಟ್ಟಾಗ 5
--------------
ಜಗನ್ನಾಥದಾಸರು
ಕವನ ಪೇಳು ನೀ ಮನವೆ ಆವಾವ ನೆವದಿದಾದ್ದು ಘನವೆ ಪ ಭುವನ ಪಾವನ ಲಕ್ಷ್ಮೀ - ಧವನ ನವಗುಣ ರೂಪ ಕ್ರಿಯವನ್ನೆ ಅ.ಪ ಸ್ತವನ ಮಾಡಬೇಡÀ ನ್ಯಪನನ್ನು ನವ ಯುವತೇರ ಮೆಚ್ಚಬೇಡ ಭವ ಮತ ಬಿಡಬ್ಯಾಡ ಭವದೊಳು ಮಮತೆ ಕೊಡಬ್ಯಾಡÉ 1 ಹರಿಕಥಾ ಶ್ರವಣ ಬಿಡಬ್ಯಾಡ ಹರಿದಾಸರೊಳು ಛಲ ಇಡಬ್ಯಾಡ ದುರುಳ ಮಾಯವಾದಿರ ಸ್ನೇಹ ಅರಿತು ಮಾಡಲು ಅದು ಮಹಾಮೋಹ 2 ಅಜನಪಿತನ ಸ್ಮರಣೆ ಮರಿಬ್ಯಾಡ ರುಜುಮಾರ್ಗವ ಬಿಟ್ಟು ನಡಿಬ್ಯಾಡ ವಿಜಯ ರಾಮಚಂದ್ರವಿಠಲನ ಮರೆದು ಗೋಜು ಕರ್ಮವ ಮಾಡಲಲ್ಲೇನು ಮಾತು 3
--------------
ವಿಜಯ ರಾಮಚಂದ್ರವಿಠಲ
ಕಷ್ಟ ತನುವಿನಲಿ ಹುಟ್ಟಿ ತೊಳಲುವಂಥಎಷ್ಟೆಂದು ತಾಳುವೆನೊ ಶ್ರೀರಂಗ ಪ ಅಷ್ಟರೊಳೆಂದೆನ್ನ ಅವಗುಣವೆಣಿಸದೆ ಕಷ್ಟ ಪಡಿಸುವುದೇನು ಶ್ರೀರಂಗ ಅ ನರಜನ್ಮವನು ಎತ್ತಿ ನರಕದೊಳಗೆ ಸುತ್ತಿಗುರಿ ಗೊತ್ತು ಕಾಣೆನಯ್ಯ ಶ್ರೀರಂಗಪರಮಪಾತಕನಾಗಿ ಹರಿ ನಿಮ್ಮ ಸ್ಮರಣೆಯನುಮರೆದು ಪಾಮರನಾದೆ ಶ್ರೀರಂಗ1 ಮಂದ ದು-ರ್ಮತಿಗೆ ಮರುಳಾದೆನೊ ಶ್ರೀರಂಗಅತುಳ ಪ್ರಪಂಚಕ್ಕೆ ಹಿತನಾಗಿ ದುಷ್ಟ ಸಂ-ಗತಿಯ ನಾನರಿದಿದ್ದೆನೊ ಶ್ರೀರಂಗ 2 ಮಿತಿಮೀರಿ ಮನ ಹರಿ ಪದವ ನೆನೆಯದೆ ಪರಸತಿಯರಿಗಳುಪಿದೆನೊ ಶ್ರೀರಂಗಕೃತಬುದ್ಧಿಯೊಳು ಉನ್ನತನಾಗಿ ತಾನೆರೆದುಸ್ತುತಿ ಮಾಡಿಕೊಂಡಿದ್ದೆನೈ ಶ್ರೀರಂಗ 3 ಆಶಾಪಾಶಗಳೆಂಬ ದೇಹಕ್ಕೆ ಸಿಲ್ಕಿ ಸ-ದ್ವಾಸನೆಯನು ಬಿಟ್ಟೆನು ಶ್ರೀರಂಗಮೋಸದಿಂದಾತ್ಮಘಾತುಕನಾಗಿ ಅಪರಾಧವೇಸೊಂದು ಮಾಡಿದೆನಯ್ಯ ಶ್ರೀರಂಗ 4 ಈಸಲಾರದೆ ಹೊಳೆಯಲಿ ಕಾಸಲಾರದೆ ಒಲೆಯಲಿಸೋಸುತ್ತ ಕುಳಿತಿಹೆನು ಶ್ರೀರಂಗವಾಸುಕಿ ಶಯನ ನೆಲೆಯಾದಿಕೇಶವ ನಿಮ್ಮಾಶ್ರಿತದಾಸರ ದಾಸನಯ್ಯ ಶ್ರೀರಂಗ 5
--------------
ಕನಕದಾಸ
ಕಾಖಂಡಕಿ ಪ್ರಸನ್ನ ವೆಂಕಟದಾಸರು ಸಿರಿ ಪ್ರಸನ್ನವೆಂಕಟನ್ನನಿರುತ ಸ್ಮರಿಪ ಕಾಖಂಡಿಕಿ ವೆಂಕಪ್ಪನವರ ಚರಣವನೆ ನೆನೆವನೆ ಧನ್ಯಾಮಾನ್ಯ ಪ ಮರುತ ಮತಾಬ್ಧಿ ಮರಕತ ಭೂಸುರಜನ್ಮ ಧರನಾಗಿಭೂಮಿಯೊಳುದಿಸಲುತರುಳತ್ವ ಕಳೆದು ತರುಣತನ ಬರಲಿನ್ನು ಅರಿವ ಕಾಣದೆ ಇರುತಿರಲುಹರಿನಾಮಾವಳಿಗಳು ಬರೆದು ಓದುವ ಭಾಗ್ಯ ಅರಿವೆನೆಂದರೆ ಬಾರದಿರಲುತೊರೆದು ಮನೆಯವರ ಗಿರಿಯಾತ್ರೆ ಮಾಳ್ಪರನನುಸರಿಸಿ ತೆರಳಿಬರುತಿರಲು 1 ವರಾಹ ಮೂರ್ತಿಯನೆ ಕಂಡಾಲಸವ ಮಾಡದಲೆಚೆನ್ನಾಗಿಝಷಕೇತು ಜನಕನ ಪುಟ್ಟಿಸಿದ ಕಾರಣವೇನು ಉಸಿರೆಂದು ಚರಣಕ್ಕೆಬಾಗಿ 2 ವಂದಿಸಿದ ಕ್ಷಣ ಸ್ವಪ್ನದಿ ಪ್ರಸನ್ನವೆಂಕಟನೆಂದು ಬರೆಯೆ ನಾಲಿಗೆಲಿನಂದದಿಂದೆಚ್ಚೆತ್ತು ಜ್ಞಾನವುದಿಸೆ ಮುಕುಂದನ ಕಂಡು ಎದೆಯಲಿಚಂದ ಚಂದದಿ ಪೊಗಳುತ್ತ ಕಂಗಳಿಂದಾ ನಂದಬಾಷ್ಪ ಸುರಿಸುತಲಿಇಂದು ಧನ್ಯನಾದೆನೆಂದು ತೋಷಾಬ್ಧಿಯ ಹೊಂದಿ ಹರಿಯಾಜ್ಞೆಯಲಿತೆರಳಿ 3 ಭಾಗವತ ಪೂರ್ವಾರ್ಧಕನ್ನಡದಿಮತಿಪೂರ್ವಕ ರಚಿಸುತಾನಂದವು ತುಳುಕು ತಿಹುದು ಕವಿತೆಯಲಿನುತಿಸಿ ದುರ್ಮತ ನಿರಾಕರಿಸಿ ಬಾಳಿ ಬಲು ಕುಲ ತತಿ ಶುದ್ಧಮಾಳ್ಪರು ಹರಿಪುರವಹೊಂದಿ 4 ಕಲಿಕಾಲದಿ ನರಹರಿ ನಾಮ ಸ್ಮರಣೆಯು ಮುಖದಿಂದ ಬರುವುದು ಅತ್ಯಸಾಧ್ಯಲಲಿತಕವನದಿ ತುತಿಸೆ ರಮಾಪತಿವಿಠಲನು ಒಲಿವನು ಇದು ಸತ್ಯಹಲವು ಮಾತೇಕಿವರು ಸುರರೇ ಸರಿ ನರರಲ್ಲ ಇದು ಸಿದ್ಧವೇ ಸಿದ್ಧಛಲದಿ ಮನುಜನೆಂಬಧಮನು ಹರಿಯಾಜ್ಞೆಯಲಿ ಬಲು ಬಲು ನರಕದೊಳು ಬೇಳುವುದುರಾದ್ಧ 5
--------------
ರಮಾಪತಿವಿಠಲರು
ಕಾದಿರುವೆನೋ ಕೃಷ್ಣ ಕಾದಿರುವೆನೋ ಪ ಮೋದಕ ನಿನ್ನ ನೆನಪಿನ ದೇಗುಲದಲ್ಲಿ ಆದಿನ ಕಾದಿದ್ದ ರಾಧೆ ಶಬರಿಯೊಲು ಅ.ಪ ಹಗಲಿರುಳೂ ನಿನ್ನ ಸ್ಮರಣೆಯ ಮಾಡುತ ಬಗೆಬಗೆಯಲು ನಿನ್ನ ಬಾಹ್ಯದಲೂ ನಿನ್ನ ನಗಧರ ಕಾಣಲು ಕಾದಿಹೆನೋ ಚ- ನ್ನಿಗ ನಿನ್ನ ನೆನೆನೆನೆದು ಹಾಡುವೆನೋ 1 ನನ್ನೀ ಸ್ಮರಣೆಯ ನುಡಿ ನುಡಿಯಲ್ಲೂ ಚಿನ್ಮಯ ನೀ ಕುಣಿದಾಡುತಿಹೆ ನನ್ನಯ ಪೂಜೆಯ ಆಡಿ ಅಡಿಯಲ್ಲೂ ಎನ್ನಯ್ಯ ಸಾಮೀಪ್ಯವಾಗಿರುವೆ 2 ಜಾಜಿಪುರಿಯ ಚೆನ್ನಕೇಶವ ನಿನ್ನ ಮೋಜಿನ ಚಿತ್ರವ ಚಿತ್ತದಿ ನಿಲಿಸಿಹೆ ಈಜಿಸಬೇಡಯ್ಯ ಸಾಕು ಸಂಸಾರ ಪಾದ ತೋರೊ ಪವಡಿಸುವೆ3
--------------
ನಾರಾಯಣಶರ್ಮರು
ಕಾಮಾನ ಜನನಿಯೆ ಸೋಮಾನ ಸೋದರಿ ಸಾಮಾಜ ವರದನ ಪ್ರೇಮವ ಕೊಡಿಸಮ್ಮ ಪ ನೇಮಾದಿಂದಲಿ ಹರಿ ನಾಮಾವ ನುಡಿಸುತ ತಾಮಾಸ ಓಡುವಂತೆ ನೀಮಾಡಬೇಕಮ್ಮ ಅ.ಪ ನಿತ್ಯ ತೃಪ್ತಳೆನಿನ್ನ ನಿತ್ಯದಿ ಬೇಡಿಕೊಂಬೆ ಭೃತ್ಯರೊಳಗೆ ಎನ್ನ ಎತ್ತಿ ಸೇರಿಸೆ ತಾಯೆ || ಮತ್ತನಾಗದೆ ಭವದಿ ಉತ್ತುಮನೆನಿಸುತ ಆತ್ಮದಿ ಹರಿ ತೋರಿ ಕೃತಕೃತ್ಯನೆನಿಸಮ್ಮ 1 ದೇಶಕಾಲದಿನೀನು ಶ್ರೀಶಗೆ ಸಮಳಮ್ಮ ನಾಶಮಾಡುತ ದೋಷ ದಾಸಾನು ಎನಿಸಮ್ಮ || ಶ್ವಾಸಾಶೇಷರನೆಲ್ಲ ಲೇಸಾಗಿ ಆಳುವಳೆ ವಾಸುದೇವನಲ್ಲಿ ಆಸೇಯ ನೀಡಮ್ಮ 2 ಶೃತಿಯಲ್ಲಿ ನೀನಿದ್ದು ಸ್ತುತಿಸೀ ಶ್ರೀಹರಿಯನ್ನ ಮತ್ತೆಸೃಜಿಸುವಂತೆ ಎತ್ತಿಗಾನವ ಮಾಳ್ವೆ || ಎತ್ತ ನೋಡಲು ಬಲು ಕತ್ತಲೆಕಣಿ ತಾಯೆ ಸತ್ಯವ ಬಿಡದಂತೆ ಹತ್ತೀಸೆ ಹರಿದಾರಿ3 ಹರಿಯಂತೆ ಅವತಾರ ನಿರುತನೀ ಮಾಡುತ ಪರಿ ರೂಪದಿಂದ ಪರಿಚರಿಯ ನೀಮಾಳ್ವೆ || ಸರ್ವೇಶ ಹರಿಯಿಂದ ಸರ್ವಕಾಲದಿ ಕೂಡಿ ಸರ್ವಕಾರ್ಯವ ಮಾಳ್ವೆ ಸರಿಯಾರೆ ನಿನಗಮ್ಮಾ 4 ಅಕ್ಷರ ರೂಪಳೆ ಈಕ್ಷಿಸುಕರುಣದಿಂದ ತ್ರ್ಯಕ್ಷೇಶ ವಿಧಿಮಾತೆ ಅಕ್ಷರನರ್ಧಾಂಗಿ || ಕುಕ್ಷೀಲಿ ಬ್ರಹ್ಮಾಂಡ ಲಕ್ಷ್ಯವಿಲ್ಲದೆ ಪಡೆದಿ ಅಕ್ಷಯ ಮಾಡಿ ಜ್ಞಾನ ಮೋಕ್ಷಾವ ಕೊಡಿಸಮ್ಮಾ5 ವಿಕಾರ ಶೂನ್ಯಳೆ ಪ್ರಕೃತಿಗೆ ಮಾನಿಯೆ ನೀಕಾರ್ಯ ಕಾರಣಕ್ಕೆ ಮುಖ್ಯ ಹೇತುವೆ ತಾಯೆ || ಪ್ರಕೃತಿ ಬಂಧವ ಬಿಡಿಸಿ ಸಾಕಾರ ಮೂರುತಿ ಲೋಕನಾಯಕ ಹರಿಯ ಏಕಾಂತದಲಿ ತೋರೆ6 ತ್ರಿಗುಣ ಕಾರ್ಯಗಳೆಲ್ಲ ಸುಗುಣಿ ನೀ ಮಾಡುತ ನಿತ್ಯ ಪೊಗಳಿ ಹಿಗ್ಗುವೆ ಮಾತೆ || ಜಗವೆಲ್ಲ ಕುಣಿಸುತ ನಗುತಲೀಲೆಯಿಂದ ನಿಗಮಾದಿಗಳ ಮೀರಿ ಬಗೆ ಬಗೆ ಲೀಲೆ ಕಾಂಬೆ 7 ನಿತ್ಯಾ ಮುಕ್ತಳು ನೀನು ಪ್ರೀತಿಲಿ ನಮಿಪೆನೆ ಮಾತುಲಾಲಿಸಿ ಎನ್ನ ನಿತ್ಯದಿ ಸಲಹೆಮ್ಮ || ಹೆತ್ತ ತಾಯಿಯು ನೀನು ಎತ್ತಿ ಪೊರೆಯದಿರೆ ಎತ್ತ ಪೋಗಲಿ ನಾನು ಉತ್ತುಮರಮೆ ಹೇಳೆ 8 ಸಾಗರನ ಮಗಳೆ ಆಗಮರೂಪಳೆ ಹೋಗೀಸುಲಿಂಗವ ಸಾಗಿಸಿಗುಣಕಾರ್ಯ || ಭಾಗ್ಯ ಸ್ವರೂಪಳೆ ಬಾಗಿ ನಮಿಸುವೆ ಆಗು ಮಾಡಿಸು ಹರಿ ಗೀತೆಗಳೆನ್ನಿಂದ 9 ಮರುತ ದೇವನ ಪಿತನ ಉರದಲಿ ವಾಸಿಪಳೆ ಹರಿಗುರು ಚರಣದಿ ನಿರುತ ಭಕ್ತಿಯ ಕೊಟ್ಟು || ವಾರಿಜನಾಭನಲ್ಲಿ ಧಾರೆ ಧಾರೆಯ ಭಕ್ತಿ ಸಾರಸ ದಳನಯನೇ 10 ಮಾತು ಮಾತಿಗೆ ನಮ್ಮ ಖ್ಯಾತಾಜಯತೀರ್ಥ ನವನೀತ ಧರಿಸೀಹ || ಶ್ರೀ ತಾಂಡವ ಕೃಷ್ಣ ವಿಠಲರಾಯನ ಸ್ಮರಣೆ ಆತ್ಮಾದೊಳಗೆ ನಿಂತು ಖ್ಯಾತೀಲಿನಡಿಸಮ್ಮಾ 11
--------------
ಕೃಷ್ಣವಿಠಲದಾಸರು
ಕಾಯಬೇಕೆನ್ನ ಕರುಣದಲಿ ಧನ್ವಂತ್ರಿ ಶ್ರೀಯರಸ ನರಹರಿಯೆ ಪ್ರಾರ್ಥಿಸುವೆ ನಿನ್ನ ಪ. ಸುರರಿಗೆ ಮರಣ ಕಾಲವು ಪ್ರಾಪ್ತವಾಗಲು ಗಿರಿಯಿಂದ ಶರಧಿಯನು ಮಥಿಸೆ ಪೇಳಿ ಕರುಣದಿಂದಮೃತ ಕರದಿಂದ ಸುರರಿಗೆ ಎರೆದು ಜರೆ ಮೃತ್ಯು ಬಿಡಿಸಿದಗೆ ಇದು ಒಂದು ಘನವೆ 1 ಸಕಲ ನಾಡಿಗಳಲ್ಲಿ ಚೇಷ್ಟಪ್ರದ ನೀನಾಗಿ ಸಕಲ ವ್ಯಾಪಾರಗಳ ನಡೆಸುತಿರಲು ಯುಕುತಿಯಿಂದಲಿ ನಾಡಿ ನೋಡಿ ತಿಳಿಯುವನ್ಯಾರೊ ಮುಕುತಿದಾಯಕ ನಿನಗೆ ಇದು ಒಂದು ಘನವೆ 2 ಅನಾದಿಯಿಂದ ಅಪಥ್ಯದಲಿ ನರಳುವೆನೊ ಈಗ ಪಥ್ಯವ ಮಾಳ್ಪ ಬಗೆ ಯಾವುದೊ ಶ್ರೀನಿವಾಸನೆ ನಿನ್ನ ಧ್ಯಾನವೆ ಔಷಧವೊ ಶ್ರೀ ಗುರುಗಳಾಜ್ಞೆಯೆ ಪಥ್ಯವೆನಗಿನ್ನು 3 ಭಕ್ತಪ್ರಹ್ಲಾದನನು ಯುಕ್ತಿ ಶಕ್ತಿಗಳಿಂದ ಮುಕ್ತಿಮಾರ್ಗವ ತೋರಿ ಸಲಹಲಿಲ್ಲೇ ಭಕ್ತಿಹೀನರನೆ ಕಂಡು ಎನ್ನ ರಕ್ಷಿಸದಿರಲು ಯುಕ್ತವೇ ನಿನಗಿನ್ನು ಭಕ್ತಪಾಲಕನೆ 4 ನಿನ್ನ ದಾಸತ್ವದಲಿ ನೆಲಸಬೇಕಾದರೆ ಬಿನ್ನಣದ ರೋಗಗಳ ಪರಿಹರಿಸಿ ಸಲಹೊ ನಿನ್ನವರಾದ ಮೇಲಿನ್ನು ಕಾಯದೆ ಇಹರೆ ಘನ್ನ ಶ್ರೀ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ