ಒಟ್ಟು 2513 ಕಡೆಗಳಲ್ಲಿ , 118 ದಾಸರು , 2015 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆನಂದಾನಂತ ವಿಠಲ ನೀನಿವನ ಸಲಹೊ ಪ ಜ್ಞಾನಿಜನ ಸುಪ್ರೀಯ ನೀನೆಂದು ಭಿನ್ನವಿಪೆ ಅ.ಪ. ಪ್ರಾಚೀನ ದುಷ್ಕರ್ಮ ನಿಚಯದಿಂದಲಿ ಬಳಲಿಸ್ವೋಚಿತ ಸುಕರ್ಮಕ್ಕೆ ಅವಕಾಶ ವಿರದೇ |ವಾಚಿಸುತಲೀ ನಿನ್ನ ನಾಮಾಮೃತವ ಸವ್ಯಸಾಚಿ ಸಖನೇ ನಿನ್ನ ಮೊರೆಯ ಹೊಕ್ಕವನಾ 1 ಕರ್ಮ ಆಧೀನ ನಿನದಲ್ಲೆ |ನೀದಯದಿ ಸಂಚಿತವ ಮೋದದಲಿ ಕಳೆದು |ವೇದಗಮ್ಯನೆ ಹರಿಯೆ ಭೇದಮತ ಸುಜ್ಞಾನ ಭೋದಗೈವುದು ಎಂದು ಪ್ರಾರ್ಥಿಸುವೆ ನಿನ್ನಾ 2 ಮಂತ್ರನಿಲಯರ ನಿರುತ ಸ್ವಾಂತದಲಿ ಭಜಿಸುತ್ತಸಂತ್ರಸ್ತಸಜ್ಜನರ ಪೊರೆಯೆ ಮೊರೆಯಿಡುತ |ಭ್ರಾಂತ ಮಾಯಾತ್ಮ ತೊರೆದು ಅಂತರಂಗದಿ ಮಧ್ವಅಂತರಾತ್ಮನ ಭಜಿಪ ಸಂತದಾಸನ್ನಾ 3 ಅಂಬರ ಸುವಾಣಿಯಿಂದಂಬೆ ರಮಣನು ರುದ್ರಬಿಂಬ ನರಹರಿ ನೀನೆ ಇಂಬಿನಂಕಿತವನಂಬಿ ಬಂದಿಹಗಿತ್ತು ಸಂಭ್ರಮದಿ ಕರುಣಿಸಿಹೆಬಿಂಬ ಕ್ರಿಯ ಸುಜ್ಞಾನ ತುಂಬು ಇವನಲ್ಲೀ 4 ದೋಷದೂರನೆ ಹರಿಯೆ ದಾಸನ ಸದ್‍ಹೃದಯ ದಾಶಯದಿ ತವರೂಪ ಲೇಸು ತೋರೆಂಬಾ |ಮೀಸಲು ಪ್ರಾರ್ಥನೆಯ ಸಲಿಸೆಂದು ಭಿನ್ನವಿಪೆವಾಸುಕೀ ಶಯನ ಗುರು ಗೋವಿಂದ ವಿಠಲಾ5
--------------
ಗುರುಗೋವಿಂದವಿಠಲರು
ಆನಂದಾನಂದಂ ಶಿವಶಿವ ಆನಂದಾನಂದಂ ಪ. ಅಪ್ಪ ಅಣ್ಣನೆಂದು ಕರೆದರೆ ನಮಗಿಹ ತಪ್ಪುಗಳನು ಜಗದಪ್ಪನಿಗೊಪ್ಪಿಸುವಾನಂದಾನಂದಂ 1 ತತ್ತ್ವವರಿತು ಹರಿಭೃತ್ಯರೊಳಾಡುತ ಚಿತ್ತವ ಸಂತತೇಕಾತ್ಮನೊಳಿಡುವಂಥಾನಂದಾನಂದಂ 2 ಭೂರಿ ಸಂಸಾರಕೆ ಸೇರಿದೆ ನಿತ್ಯದಿ ಧೀರ ಲಕ್ಷ್ಮೀನಾರಾಯಣನೆಂಬುವದಾನಂದನಂದಂ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಆನಂದಾನಂದಂ ಶಿವಶಿವ ಆನಂದಾನಂದಂ ಪ. ಅಪ್ಪ ಅಣ್ಣನೆಂದು ಕರೆದರೆ ನಮಗಿಹ ತಪ್ಪುಗಳನು ಜಗದಪ್ಪನಿಗೊಪ್ಪಿಸುವಾನಂದಾನಂದಂ 1 ತತ್ತ್ವವರಿತು ಹರಿಭೃತ್ಯರೊಳಾಡುತ ಚಿತ್ತವ ಸಂತತೇಕಾತ್ಮನೊಳಿಡುವಂಥಾನಂದಾನಂದಂ2 ಭೂರಿ ಸಂಸಾರಕೆ ಸೇರಿದೆ ನಿತ್ಯದಿ ಧೀರ ಲಕ್ಷ್ಮೀನಾರಾಯಣನೆಂಬುವದಾನಂದನಂದಂ3
--------------
ತುಪಾಕಿ ವೆಂಕಟರಮಣಾಚಾರ್ಯ
ಆನೆ ಬಂದಿತಮ್ಮಾ ಮರಿ ಆನೆ ಬಂದಿತಮ್ಮಾ ಪ ವೆಂಕಟರಮಣನೆಂಬಾನೆ ಅ.ಪ. ಸಿರಿಯಿಲ್ಲದರಿಲಾರೆನೆಂದಾತುರದಲಿ ಧರೆಗಿಳಿದಾನೇ ವಲ್ಮೀಕ ದೊಳು ಅಡಗ್ಯಾನೇ1 ಯೋಚನೆ ಮಾಡ್ಯಾನೇ2 ಬೇಟೆನಾಡಲು ಹೊರಟ್ಯಾನೆ ದಿಟ್ಟಕುದುರೆಯನೇರ್ಯಾನೇ ಒಂದನು ಕಂಡ್ಯಾನೇ 3 ಪದ್ಮಾವತಿಯಳ ಕಂಡಾನೇ4 ಹಿಂದೆ ಸರಿದಾನೇ 5 ಬಕುಳೆ ಮಾತೆಯ ಕರೆದಾನೇ ಸಕಲವೃತ್ತಾಂತವ ತಿಳಿಸ್ಯಾನೇ ಬೇಗದಿ ಹೋಗಿ ಬಾರೆಂದಾನೇ ಮೌನದಿಂದಲಿ ಮಲಗ್ಯಾನೇ6 ಮಾತೆ ಬರುವುದ ಕಂಡಾನೇ | ಮುದ್ದದಿಂದಲಿ ಎದ್ದುಕುಳಿತಾನೇ ಮಂದಹಾಸದಿಂದ ನಲಿದಾನೇ7 ಬಂಧುಗಳೆಲ್ಲರ ಕರಿಸ್ಯಾನೇ ಮುಂದೆ ಮಾಡಿಕೊಂಡು ನಡೆಸ್ಯಾನೇ ಮದು ಮಗನಾಗಿ ನಿಂತಾನೆ | ಪದುಮಾವತಿ ಕೈ ಪಿಡಿದಾನೇ 8 ಜಯ ಜಯವೆಂದರು ಸುರಬ್ರಹ್ಮಾದಿಗಳು ವಾಣಿ-ಪಾರ್ವತಿಯರು ಜಯ ಜಯ ವೆಂದರುಗಗನದಿ ಅಮರರು ಮದುಮಳ ಮೇಲೆ ಪೂಮಳೆಗರೆದರು 9 ಪನ್ನಗ ಶಯನಗೆ ಮಂಗಳವೆನ್ನಿರೆ ಪರಮ ಕಲ್ಯಾಣಗೆ ಮಂಗಳವೆನ್ನಿರೆ ಶ್ರೀ ವೇಂಕಟ ವಿಠಲಗೆ ಮಂಗಳಾ ಜಯಮಂಗಳಾ10
--------------
ರಾಧಾಬಾಯಿ
ಆನೆಂತು ತುತಿಪೆ ನಿನ್ನಾ ಶ್ರೀ ಗುರು ರನ್ನಾ ಆನೆಂತು ತುತಿಪೆ ನಿನ್ನಾ ಪ ಆನೆಂತು ತುತಿಪೆ ಪಂಚಾನನಸುತ ಪವ ಮಾನ ಹನುಮ ಭೀಮ ಆನಂದತೀರ್ಥನೆ ಅ.ಪ. ಸನಕನಂದನ ಸನತಕುಮಾರಾದಿ ಮುನಿಗಳು ಹರಿ ದರುಶನವ ಮಾಡುವೆವೆಂದು ಘನಹರುಷದಿ ಮೋಕ್ಷವನು ಕುರಿತು ಬಂದೊ ಡನೆ ಬಾಗಿಲಲಿ ನಿಲ್ಲೆನಲು ಜಯ ವಿಜಯ ರನ ನೋಡಿ ಎರಡೊಂದು ಜನುಮದಲಿ ಕ್ರೂರ ಸಿರಿ ವನಜಾಕ್ಷರಗೋಸ್ಕರಾ ಅವತರಸಿ ಗುಣಪೂರ್ಣ ಗುರು ಸಮೀರಾ ಸೇವಿಪೆನೆಂದಾ ಕ್ಷಣದಿ ಜನಿಸಿ ವಾನರಾ ರೂಪಿಲಿ ಭುವ ವನದೊಳು ಮೆರೆದೆ ಅಸಮಶೂರಾ ಹರಿಹರಾ 1 ಕೋತಿ ಕಟಕಮಾಡಿ ಜಾತರಹಿತ ಹರಿ ಗೇ ತಲೆಬಾಗಿ ಸುಪ್ರೀತಿಯಿಂದಲಿ ರವಿ ಜಾತನ ಸಲಹಿ ಅತೀ ತೀವ್ರದಿಂದಲಿ ವಾತವೇಗದಿ ವನಧಿಯ ತಡಿಲ್ಲದೆ ದಾಟಿ ಮಾತೆಗುಂಗುರವಿತ್ತ ಶೋಕತರುಗಳ ಭೀತಿ ಬಡದಲೆ ಕಿತ್ತಿ ರೋಮ ಬಳ ವ್ರಾತವೆಲ್ಲವ ನುಗ್ಗೊತ್ತೀ ಲಂಕಾಪುರ ಜಾತವೇದಸಗೆ ಇತ್ತೀ ಹನುಮಶಿರಿ ನಾಥನಿಗೆರಗಿ ಪಡೆದ ಬಹುಕೀರ್ತಿ 2 ದುರುಳ ಕಲ್ಯಾದ್ಯರು ಊರ್ವಿಯೊಳ್ಪುಟ್ಟಿ ಸಂ ಚರಿಸುತ್ತ ಇರಲಾಗಿ ಮರುತದೇವನು ಅವ ತರಿಸಿ ಅವನಿಯೊಳು ದುರಿಯೋಧನುಣಲಿತ್ತ ಗರಳವ ಭುಂಜಿಸಿ ಅರಗಿನ ಸದನದಿ ಪುರೋಚನಾದಿಗಳನ್ನು ಉರುಹಿ ಏಕಚಕ್ರಾ ಪುರದಲ್ಲಿದ್ದ ಬಕಾಸುರನ ಸದೆದು ಭೂಮಿ ಸುರವೇಷವನೆ ಧರಿಸೀ ಪಾಂಚಾಲಿ ಸ್ವಯಂ ವರ ಪತಿಕರಿಸಿ ಮಗಧದೇಶ ದರಸನ ಸಂಹರಿಸೀ ರಾಜಸೂಯಜ್ಞ ಹರಿಗೆ ಅರ್ಪಿಸಿದಿ ಮೆರೆಸೀ 3 ಭಕುತಳಾದ ಇಂದುಮುಖಿ ದ್ರೌಪದಿಗೆ ಸೌಗಂ ಧಿಕವ ತರುವೆನೆಂದು ವೃಕೋದರ ಪೋಗಲು ಅಕುಟಿಲ ಹನುಮಂತನನು ಅವಲೋಕಿಸ್ಯಂ ಜಿಕೆಯಿಂದ ನಿಂದು ಮಾರಕಜನರಿಗೆ ಮೋ ಕುಪಥ ಖಳರನೊರಿಸಿ ನೀ ಸಖಿಗೆ ಪೂವಿತ್ತು ಗುರುಕುಮಾರನಸ್ತ್ರಕ ಳುಕದೆ ಯುದ್ಧವ ಮಾಡಿದೆ ದುಶ್ಯಾಸನ ರಕುತ ವೆರಿಸಿ ಕುಡಿದೆ ಉಭಯಗಳ ರ ಥಿಕರ ಬಲವಕರೆದೆ ಭಯದಲಿ ಉ ದಕದಲಿರ್ದ ದುರ್ಯೋಧನನೂರು ಕಡಿದೆ 4 ಭೀಮ ಭಯಂಕರ ಕಾಮಕೋಟಿ ಚಲ್ವ ಧೀಮಂತಜನ ಮನೋಪ್ರೇಮ ಪಾವನ ಗುಣ ಸ್ತೋಮ ಸರ್ವಾಧಾರ ಭ್ರಾಮಕಜನ ವನ ಧೂಮಕೇತುವೆ ಸರ್ವಾಸೀಮ ಸೌಖ್ಯ ಪೂರ್ಣ ಸಾಮಜ ಹರಿಗುರು ರೋಮ ಕೋಟೇಶ್ವರ ಶ್ರೀಮಾನ್ಯ ಭಕುತಲ ಲಾಮ ಭವ್ಯ ಚರಿತಾ ಸೋಮಕುಲ ಸೋಮ ಸುಖ ಭರಿತಾ ಭಕುತ ಪ್ರೀತಾ ಕಾಯ ಹಿತದಿಂದ ನಿರುತಾ 5 ಮಣಿಮಂತನೆಂಬವನಿಯೊಳು ಪುಟ್ಟಿ ವೇ ನನ ಮತ ಪಿಡಿದು ಜೀವನೆ ಪರಮಾತ್ಮನೆಂ ದೆನುತ ಸ್ಥಾಪಿಸಿ ಪಣೆಗಣ್ಣೆನ್ವರದಿಂದ ಅನಿಮಿಷರೆಲ್ಲರು ವನಜಜಗುಸುರಲು ಮುನಿಗಳು ಸಹ ನಾರಾಯಣನ ಪದಕೆ ದಂಡ ಪ್ರಣಾಮವ ಮಾಡಿ ಸ್ತೋತ್ರವಿನಯದಿ ಗೈಯೆ ಅನಿಲನ ಅವಲೋಕಿಸಿ ಪೇಳಲು ಹರಿ ಮನ ಭಾವವನು ಗ್ರಹಿಸಿ ಮಧ್ಯಗೇಹ ಮನೆಯೊಳಗವತರಿಸಿ ಮೆರೆದೆ ಗುರು ಅನುಗಾಲದಲಿ ನಿನ್ನ ಗುಣಗಳಾಶ್ರೈಸೀ 6 ವಾಸುದೇವನೆಂಬ ಭೂಸುರನಾಮದಿ ಲೇಸಾಗಿ ಚರಿಸಿ ಸಂತೋಷ ಭರಿತರಾಗಿ ಸಂ ನ್ಯಾಸಾಚ್ಯುತ ಪ್ರೇಕ್ಷರಾ ಕರಸರಸಿಜ ದೀ ಸಂತೋಷದಿ ಕೊಂಡು ಆಶÀಂಕರರÀ ಭಾಷ್ಯ ದೂಷಿಸೆ ಗರುಗಳುಲ್ಲಾಸ ಸನ್ಮುಖದಲಿ ವಿ ಶೇಷದಿಂದಲಿ ವಿರಚಿಸುವುದೆನಲು ಉ ಲ್ಲಾಸದಿಂದಲಿ ಕೇಳಿ ಆಕ್ಷಣದಿ ಸಂ ತೋಷ ಮನದಲಿ ತಾಳಿ ಮೋಹಕವ ಪರಿಹ ಆಶೆ ಪೂರೈಸಿದ ಘನನಿನ್ನ ಲೀಲೆ 7 ತರಳತನದಲಿ ಬದರಿಗೈದಿ ಪಾರಾ ಶರ ನಾರಾಯಣನ ಸಂದರುಶನ ಕೊಂಡು ತೀ ವರದಿಂದ ಹರಿತತ್ವ ನಿರ್ಣಯ ಶಾಸ್ತ್ರವ ವಿರಚಿಸುವುದಕಿನ್ನು ವರವ ಪಡೆದು ಬಂದು ದುರುಳ ಭಾಷ್ಯಗಳೆಂಬ ಗರಳ ತರುಗಳ ಮುರಿದಿಕ್ಕಿ ನೀ ಮೂವ ತ್ತೆರಡೈದು ಗ್ರಂಥಗಳ ನಿರ್ಮಿಸಿ ವಿಬು ಧರಿಗೆಲ್ಲ ಪೇಳಿ ವ್ಯಾಳ ಭೂಷಣದೇವ ಪರನೆಂಬ ಯುಕುತಿಜಾಲ ಹರಿದು ಹರಿ ಪರ ಶ್ರೀ ಬೊಮ್ಮಾದ್ಯರೆ ಗುರುಗಳೆಂದೆನಲು 8 ನಮೋ ನಮೋ ಸಮೀರನೆ ನಮೋ ಶ್ರೀ ಮುಖ್ಯಪ್ರಾಣ ನಮೋ ನಮೋ ದಯಾಸಿಂಧು ನಮೋ ಭಕ್ತಜನ ಬಂಧು ನಮೋ ನಮೋ ಗುಣಶೀಲ ನಮೋ ಭಾರತಿಲೋಲ ನಮೋ ನಮೋ ಭವ್ಯಾಂಗ ನಮೋ ಅರಿಗಜಸಿಂಗ ನಮೋ ನಮೋ ಜಗದ್ವ್ಯಾಪ್ತ ನಮಿತಜನರಾಪ್ತ ನಮೋ ನಮೋ ಸುಖತೀರ್ಥ ನಮೋ ಮೂರ್ಲೋಕದ ಕರ್ತ ನಮೋ ಗುರುಕುಲ ತಿಲಕ ಪಾಲಿಸು ಎನ್ನ ತಮಹರದೂರಶೋಕ ಸಜ್ಜನರಿಗೆ ಅಮಿತ ಮೋದದಾಯಕ ಶ್ರೀಭೂ ದುರ್ಗಾ ರಮಣ ಜಗನ್ನಾಥವಿಠಲ ಭಕ್ತಾಧಿಕಾ 9
--------------
ಜಗನ್ನಾಥದಾಸರು
ಆಪದ್ಭಾಂಧವ ವಿಠಲ | ಕಾಪಾಡೊ ಇವಳಾ ಪ ಶ್ರೀಪತಿ ಶೀರಂಗ ಸ | ಮೀಪಗನೆ ಹರಿಯೇ ಅ.ಪ. ದುರಿತ ರಾಶಿಗಳಳಿದು | ಹರಿನಾಮ ಸುಧೆ ಸವಿಯೆವರಮಾರ್ಗ ತೋರಿ ಪೊರೆ | ಶ್ರೀದ ನರಹರಿಯೇ |ತರುಣಿಮಣಿ ಹರಿದಾಸ್ಯ | ನೆರೆಸುಕಾಂಕ್ಷಿಸಲಾಗಿವಿರಚಿಸಿಹೆ ಉಪದೇಶ | ಪರಿಪಾಲಿಸಿವಳಾ 1 ತಾರತಮ್ಯಾಂತರದಿ | ಹರಿಯ ಉತ್ಕರ್ಷತ್ವಸುರಸಾದಿ ಸುರರೆಲ್ಲ | ಹರಿದಾಸರೆಂಬಾ |ಎರಡು ಮೂರ್ಭೇದ ಸಹ | ವರ ಜಗದ ಸತ್ಯತೆಯಅರುಹಿ ಪಾಲಿಸು ಇವಳ | ಕರಿವರದ ಹರಿಯೇ2 ಸೀಮೆ ಮೀರಿದ ಮಹಿಮ | ಭೂಮ ಗುಣ ಸಂಪೂರ್ಣಕಾಮಾರಿ ಸಖಕೃಷ್ಣ | ಕಾಮಿತಾರ್ಥದನೇನೇಮ ನಿಷ್ಠೆಗಳಿತ್ತು | ಸಾಧನಗಳಳವಡಿಸಿಕಾಮಿನಿಯ ಪೊರೆಯೊ ಹರಿ ಸ್ವಾಮಿ ಭೂವರಹಾ 3 ಜಲಜಾಕ್ಷನಮಲ ಗುಣ | ತಿಳಿಯಲ್ಕೆ ಸಾಧನವುಕಲಿಯುಗದಿ ಸತ್ಸಂಗಾ | ಬಲ ಉಳ್ಳದೋಹಲವು ಮಾತೇಕೆ ನಿನ್ನ | ಮಲಗುಣ ನಾಮಗಳತಿಳಿಸಿ ಪೊರೆ ಇವಳನ್ನು | ಕಲಿಮಲಧ್ವಂಸೀ 4 ಪಾವ ಮಾನಿಯ ಪ್ರೀಯ ದೇವ ದೇವೋತ್ತಮನೆಭಾವುಕಳ ಪೊರೆಯಲ್ಕೆ | ತೀವ್ರ ಭಿನ್ನವಿಪೇಕಾವ ಕರುಣಾಳು ಗುರು | ಗೋವಿಂದ ವಿಠ್ಠಲನೆಈ ವಿಧದ ಭಿನ್ನಪವ | ನೀ ವೊಲಿದು ಸಲಿಸೋ5
--------------
ಗುರುಗೋವಿಂದವಿಠಲರು
ಆಮಿತ ಮಹಿಮೋಪೇತ ವಿಠಲ ಸಲಹೋ ಪ. ವಿಮಲಮತಿ ಇತ್ತಿವಗೆ ಕಾಮಿತಾರ್ಥವನೇಅ.ಪ. ತೈಜಸನೆ ನೀನಾಗಿ ನಿಜಯಾರ್ಯನುಗ್ರಹವಯೋಜಿಸಿಹೆ ಸ್ವಪ್ನದಲಿ ಕಾರುಣ್ಯಮೂರ್ತೇಭ್ರಾಜಿಷ್ಣು ಸುಜ್ಞಾನ | ವೈರಾಗ್ಯ ಭಾಗ್ಯಗಳಮಾಜದಲೆ ಕರುಣಿಸೆಂದಾನಮಿಪೆ ಹರಿಯೇ 1 ಹೇ ಸದಾಶಿವ ವಂದ್ಯ | ಕ್ಲೇಶತೋಷಗಳಲ್ಲಿಭಾಸಿಸಲಿ ತವನಾಮ | ಮೀಸಲದ ಮನದೀ |ಆಶುಗತಿಮತ ಪೊಂದಿ | ದಾಸದೀಕ್ಷಾಕಾಂಕ್ಷಿವಾಸವಾನುಜ ಇವನ | ದಾಸನೆಂದೆನಿಸೋ 2 ಭವ ಉತ್ತರಿಪಸದ್ವಿದ್ಯ ಪಾಲಿಪುದು ಮಧ್ವಾಂತರಾತ್ಮಾ 3 ಹರಿಗುರೂ ಸದ್ಭಕ್ತಿ | ದುರ್ವಿಷಯನಾಸಕ್ತಿಎರಡು ಮೂರ್ಭೇದಗಳ | ಅರಿವ ನೀನಿತ್ತೂತರತಮದ ಸುಜ್ಞಾನ | ಕರುಣಿಸುವುದೆಂದೆನುತಕರಿವರದ ಭಿನ್ನವಿಪೆ ಪ್ರಾರ್ಥನೆಯ ಸಲಿಸೋ 4 ಕಾಯ ಬೇಕೋ 5
--------------
ಗುರುಗೋವಿಂದವಿಠಲರು
ಆರತಿಪದ ಆರುತಿಯ ಮಾಡುವೆನೆ ಮಾರಜನನಿಯೆ ಲಕ್ಷ್ಮೀ ಪ ಭಂಗಾರದ ತಾಟಿನೊಳು ಶೃಂಗಾರದಾರುತಿ ಪಿಡಿದುರಂಗನಂಗನೀಯ ಲಕ್ಷ್ಮೀ ಮಂಗಳ ಪದವಪಾಡಿ 1 ಮುತ್ತಿನಾರತಿ ನಿನಗೆ ಎತ್ತಿನಿಂತೆನೆ ತಾಯಿಭಕ್ತಹೃದಯೆ ಇತ್ತಕಡೆ ನೋಡೆ ದೇವಿ 2 ಇಂದಿರೇಶನ ರಾಣಿ ಸುಂದರ ಸರೋಜವದನೆಇಂದುರಂಗ ರಾಮಕೃಷ್ಣರನ್ನು ತೋರಿಸಮ್ಮಾ ರಾಮೆ 3
--------------
ಇಂದಿರೇಶರು
ಆರತಿಯನು ಎತ್ತಿರಮ್ಮ ವರ ಮಹಾಲಕ್ಷುಮಿಗೆ ಚಾರುಮತಿಗೆ ವರವನಿತ್ತಪಾರ ಕರುಣಾಂಬುಧಿಗೆ ಪ ಶ್ರಾವಣ ಶುಕ್ರವಾರದಲಿ ಸಾವಧಾನ ಮನದಿ ನಿತ್ಯ ಸೇವಿಸುವರಿಗೊಲಿದು ಭಾಗ್ಯವೀವ ಮಹಾಲಕ್ಷುಮಿಗೆ 1 ಹೆತ್ತತಾಯಿ ತನ್ನ ಶಿಶುವನರ್ಥಿಯಿಂದ ಸಲಹುವಂತೆ ಭೃತ್ಯವರ್ಗವನ್ನು ಪೊರೆದು ನಿತ್ಯಲೋಕ ಮಾತೆಗೀಗ 2 ಚಿಂತಿತಾರ್ಥನೀವ ಲಕ್ಷ್ಮೀಕಾಂತನುರ ಸ್ಥಳದಿ ನಿಂತು ದಂತಿವರದನನಂತ ಗುಣಗಳನಂತಗಾಣದಿರುವಳಿಗೆ 3
--------------
ಲಕ್ಷ್ಮೀನಾರಯಣರಾಯರು
ಆರತಿಯನೆತ್ತಿರೆ ನಾರೇರೆಲ್ಲರು ಪ ಕಾರುಣ್ಯ ಪಾಂಗಳಿಗೆ ಗೌರಿದೇವಿಗೆಅ.ಪ. ದೇವರಾಜ ಸೇವ್ಯಮಾನ ಪಾವನಾಂಘ್ರಿಗೆ ಜೀವಕೋಟಿಗನ್ನವಿತ್ತು ಕಾವ ದೇವಿಗೆ 1 ಸರ್ವ ಸೌಭಾಗ್ಯವೀವ ಶರ್ವಜಾಯೆಗೆ ಪರ್ವತೇಶ ತನಯಳಿಗೆ ಗರ್ವರಹಿತೆಗೆ 2 ರಕ್ಷೌಘ ಧ್ವಂಸಿನಿಗೆ ದಕ್ಷ ಕನ್ಯೆಗೆ ಲಕ್ಷ್ಮೀಕಾಂತನ ಭಗಿನಿ ಲಕ್ಷಣಾಂಗಿಗೆ 3
--------------
ಲಕ್ಷ್ಮೀನಾರಯಣರಾಯರು
ಆರಾಧನೆ ಪರಮಾನಂದ ಪ ತಾರಾನಾಥ ಕುಲೋದ್ಭವ ಕೃಷ್ಣನ ಅ.ಪ ಘೋರವು ಈ ಸಂಸಾರವೆನ್ನುವುದು ದೂರಿನ ನುಡಿಯಿದು ಬಾಳುವಗೆ ನೂರು ವರುಷಗಳ ಮೀರಿ ಜೀವಿಸಲು ಕೋರಿಕೆ ಬರುವುದು ಧೀರ ಜನರಿಗೆ 1 ನಿರ್ಮಲ ದೇಹವು ನಿರ್ಮಲ ಹೃದಯವು ನಿರ್ಮಲ ನಡೆನುಡಿ ಕರ್ಮಗಳು ಮರ್ಮಜ್ಞರ ಮಾರ್ಗಗಳಲಿ ಸ್ವೋಚಿತ ಧರ್ಮಗಳಲಿ ವಿಶ್ವಾಸವಿರುವವರಿಗೆ 2 ಅನ್ನವಿರುವವರಿಗೆ ತಿನ್ನಲಾಗದು ತಿನ್ನಬಲ್ಲವರಿಗೆ ಅನ್ನವು ಸಿಗದು ಘನ್ನ ಮಹಿಮನ ಪ್ರಸನ್ನತೆಯಿಂದಲಿ ಅನ್ನ ಪಡೆದು ತಿನ್ನಲು ಬಲ್ಲವರಿಗೆ 3
--------------
ವಿದ್ಯಾಪ್ರಸನ್ನತೀರ್ಥರು
ಆರುತೀಯ ಬೆಳಗಿರೀಗ ನಾರಿಯೇರು ಶ್ರೀನಿವಾಸಗಾರುತೀಯ ಪ. ಆರುತೀಯ ಬೆಳಗಿರೀಗ ಸಾರಸಾಕ್ಷ ಪದ್ಮಿನೀಯ ಸೇರಿ ಲಕುನಿಯಿಂದ ಮೆರೆವೊ ಮೂರುಲೋಕದೊಡೆಯ ಕೃಷ್ಣಾ ಅ.ಪ. ಮೀನನಾಗಿ ವೇದ ತಂದು ದಾನವರ ವಂಚಿಸುತ್ತ ಯಾನದಲ್ಲಿ ಭೂಮಿ ತಂದ ದೀನರಕ್ಷಕ ನಾರಸಿಂಹಗೆ 1 ಚಲುವ ಬ್ರಹ್ಮಚಾರಿಯಾಗಿ ಛಲದಿ ಕ್ಷತ್ರಿಯೇರ ಕೊಂದು ಒಲಿವ ಶಿವನ ಬಿಲ್ಲ ಮುರಿದು ನಲಿದು ಬಂದ ಗೋಪಿಕಂದಗಾ 2 ನಾರಿಯೇರ ವ್ರತವನಳಿದು ತೆÉೀಜಿಯೇರಿ ಮೆರೆವ ಧೀರ ವಾರವಾರ ಪೂಜೆಗೆಂದು ಶೂರ ಶ್ರೀ ಶ್ರೀನಿವಾಸಗಾರುತೀಯ 3
--------------
ಸರಸ್ವತಿ ಬಾಯಿ
ಆರೇನು ಮಾಡುವರು ಅವನಿಯೊಳಗೆ | ಕರ್ಮ ಫಣಿಯಲ್ಲಿ ಬರೆದುದಕೆ ಪ ಮಾಡಿದಡಿಗಿಯು ಕೆಡಲು ಮನಿಯ ಗಂಡನು ಬಿಡಲು | ಸತಿ ತನ್ನ ಕುಣಿಸ್ಯಾಡಲು ನಿಜದಿ || ಗೋಡೆಗೆ ಬರೆದ ಹುಲಿ ಘಡಘಡನೆ ತಿನಬರಲು | ಆಡಿದ ಮತುಗಳು ಅಖಿಳಿರು ನಿಜವೆನಲು 1 ಹೊಲ ಬೇಲಿ ಮೆಯ್ದರೆ ಮೊಲ ಇರಿಯ ಬಂದರೆ | ತಲೆಗೆ ತನ್ನ ಕೈ ಪೆಟ್ಟು ತಾಕಿದರೆ || ಹೆರಳು ಹಾವಾದರೆ ಗೆಳೆಯ ರಿಪುವಾದರೆ | ಕಲಿಸಿದ ಅವಲಕ್ಕಿ ಕಲಪರಟಿ ನುಂಗಿದರೆ 2 ಹೆತ್ತ ತಾಯಿ ಹಿಡಿದು ಮಕ್ಕಳಿಗೆ ವಿಷ ಹಾಕಿದರೆ | ಪೆತ್ತ ತಂದೆಯು ಹೊರಗೆ ಮಾಡಿದರೆ || ತೊತ್ತು ಅರಸಿಗೆ ಪ್ರತ್ಯುತ್ತರವನಾಡಿದರೆ | ಕತ್ತಲೆ ಬೆನ್ನಟ್ಟಿ ಕರಡ್ಯಾಗಿ ಬಂದರೆ 3 ಕಣ್ಣವೊಳಗಿನ ಗೊಂಬಿ ಕಾದ ಬಂದರೆ | ಹೆಣ್ಣಿನ ಹರಟೆ ಹೆಚ್ಚಾದರೆ | ಅನ್ನವನು ಉಣ್ಣಲು ಅಜೀರ್ಣವಾದರೆ | ಪುಣ್ಯಕ್ಷೇತ್ರಗಳಲ್ಲಿ ಪಾಪ ಅಟ್ಟಿಸಿದರೆ 4 ಏರಿ ಕುಳಿತ ಕುಂಬಿ ಎರಡಾಗಿ ಮುರಿದರೆ | ವಾರಿಧಿಗಳು ಮೇರೆ ಮೀರಿದರೆ || ಆರಿದ ಇದ್ದಲಿಗಳು ಅಗ್ನಿಯಾದರೆ | ನಮ್ಮ ವಿಜಯವಿಠ್ಠಲನಿರುವ ತನಕ 5
--------------
ವಿಜಯದಾಸ
ಆರ್ತಭಾವ ಸುಳಾದಿ ಧ್ರುವತಾಳ ವೊಂದು ತೋರೆನಗರವಿಂದನಯನ ಮಂದಾಕಿನಿಯ ಪಡೆದ ಮುದ್ದು ಚರಣ ಸುಂದರಾಂಗ ತೋರೆನಗೆ ಸುರೇಂದ್ರನಾಥ ಕಂದರ್ಪಪಿತನ ಕಾಲಂದಿಗೆ ರುಳಿ ಗೆಜ್ಜೆ ಚೆಂದುಳ್ಳ ಪದ್ಮರೇಖೆಯಿಂದೊಪ್ಪುವೊ ಇಂದಿರೆ ಕರಕಮಲದಿಂದ ಪೂಜಿತನಾದ ಚಂದ್ರವದನ ನಿನ್ನ ಚೆಲುವ ಪಾದ ಇಂದ್ರಾದಿ ಹರ ನಾರಂದ ಸುರಬ್ರಹ್ಮಾದಿ ವಂದ್ಯ ನಿನಗೆ ಕೋಟಿ ನಮೋ ನಮೋ ಎಂದು ಬೇಡುವೆ ದಯಾಸಿಂಧು ಎನಿಸಿದಾತ ಕಂದನಂದದಿ ನೋಡಿ ಸಲಹೋ ಎನ್ನ ಮಂದಬುದ್ಧಿಯ ಮಹಾಮದಡ ಪಾಮರ ಭವ ಬಂಧನದೊಳು ಸಿಲುಕಿ ನೊಂದೆನಯ್ಯ ಸಂದೇಹ ಮಾಡದೆ ಸಲಹದಿದ್ದರೆ ನಿನ್ನ ಹೊಂದಿ ಬಾಳುವುದೆಂತೊ ಮುಂದರಿಯೆ ಬಿಂದು ಮಾತ್ರದಿ ನಾಮಾಮೃತವ ಭೀಮೇಶಕೃಷ್ಣ ತಂದು ನೀಡೆನಿಗೆ ಇಂದೀವರಾಕ್ಷ 1 ಮಠ್ಯತಾಳ ಯುಗಳ ಪಾದಕೆ ಕೈಯ ಮುಗಿದು ಬೇಡುವೆನಯ್ಯ ಜಗದುದರನೆ ನಿನ್ನ ಜಾಣತನವ ಬಿಟ್ಟು ಅಗಣಿತಗುಣಮಹಿಮ ಅಂತರಾತ್ಮಕ ದೇವ ಬಗೆಬಗೆಯಲಿ ಸಲಹೋ ಭಕ್ತವತ್ಸಲ ನಿನ್ನ ಮಗುವೆಂದೆನ್ನ ಕಾಯೊ ಮಂದರೋದ್ಧರ ದೇವ ನಿಗಮಗೋಚರ ಸ್ವಾಮಿ ನಿಂತು ನೋಡುತ ಎನ್ನ ಚಿಗುರುದೋಷದಕುಡಿಯ ಚಿವುಟಿ ಹಾಕುತ ನಿನ್ನ ಸುಗುಣಗಳನೆ ಬಿಟ್ಟೆನ್ನವಗುಣವೆಣಿಸಿದರೆ ಇಗೋ ನಿನಗಪಕೀರ್ತಿ ಈಗ ಒಪ್ಪಿಸುವೆನು ಬಿಗಿದ ಭವಪಾಶ ಬಿಚ್ಚಿ ಭೀಮೇಶಕೃಷ್ಣ ತೆಗೆಯದೆ ನಿನ್ಹೊರತೀ ಜಗದೊಳಗುಂಟೇನಯ್ಯ 2 ವಚನ ಸಕಲ ಸ್ನಾನವು ನೇಮ ಹೋಮ ಜಪಂಗಳು ಸಕಲ ಪುಣ್ಯಕ್ಷೇತ್ರ ಮೂರ್ತಿನಾಮಂಗಳು ಸಕಲ ಪುರಾಣ ವೇದಾದಿಗ್ರಂಥಗಳು ಸಕಲ ಕಾರ್ಯವು ಸರ್ವೇಷ್ಟ ಫಲಂಗಳು ಸಾಯುಜ್ಯ ಪದವಿಗಳು ಲಕುಮೀಶ ಇವು ನಿನ್ನ ನಖಶಿಖ ಪರಿಯಂತ್ರ ಸಾರಥಿ ಸಮದೃಷ್ಟಿಲಿ ನೋಡಲು ಸಕಲಸಿದ್ಧ್ದಿಯು ಸರಿಯಾಗಿ ಕೈಗೂಡೋದು ಶಕಟಸುರಾಂತಕ ಕಕುಲಾತಿ ಮಾಡದೆ ಬಕನ್ವೈರಿಯೆನ್ನ ಭಾರವ ನೀ ವಹಿಸಲಿ ಬೇಕೊ ಇಕೋ ನಿನ್ನ ಚರಣಕ್ಕೆ ಈ ದೇಹ ಅರ್ಪಿಸುವೆ ಗೋಕುಲಾವಾಸ ನಿನ್ನ ಪಾದಕೆ ನಮಸ್ಕರಿಸುವೆ ಮುಕುತಿದಾಯಕ ಮುದ್ದು ಭೀಮೇಶಕೃಷ್ಣನೆ ಭಕುತಿಜ್ಞಾನದಲಿಡೊ ಭಯಹಾರಿ ಎನ್ನ 3 ಗೋಪಸುತನೆ ನಿನ್ನ ಗುರುವಿನ್ವಲ್ಲಭೆ ಮಹ ದಪರಾಧವೆಣಿಸದೆ ನೀ ಕರುಣದಲೆ ಸಾಂ- ದೀಪಗೆ ಸುತರನಿಟ್ಟ ಪಯಾಂಬುಧಿವಾಸ ಕೋಪದಿ ಬಯ್ದ್ದಾ ಶಿಶುಪಾಲಗೊಲಿದೆಯೊ ಶ್ರೀಪತಿ ಶರಣೆಂದಾ ದ್ರೌಪದಿ ಕಾಯ್ದಂತೆ ಕಾಪಾಡೊ ಈ ಭವಕೂಪದೊಳಗೆ ಬಿದ್ದೆ ನೀ ಪಿಡಿಕೈಯ ದಯಾಪರಮೂರುತಿ ಆಪತ್ತು ಬಾಂಧವ ಈ ದೇಹವೃಕ್ಷದಲಿ ದ್ವಾ- ಸೂಪರಣನಂತೆ ದೂರೇನೋ ಎನ್ನ ಸ- ಮೀಪದಲ್ಲಿದ್ದು ಸ್ವರೂಪ ತೋರದಲೆ ಸಂ- ತಾಪ ಬಡಿಸದಿರೆಂದಾಪನಿತು ಪೇಳ್ವೆ ಭೂಪಾಲ ಭೀಮೇಶಕೃಷ್ಣ ನಿನ್ನ ಪಾದ ನಾ ಪೊಂದಿದೆನೊ ದೊರೆ ನೀ ಪೊರೆಯೆಂದು 4 ಜತೆ ಏಸೇಸು ಕಾಲಕೆ ಬ್ಯಾಸರದೆ ಭೀಮೇಶಕೃಷ್ಣ ಲೇಸು ನೀಡೆನಗೆ ಸದಾ ಸುಮಂಗಳವ 5
--------------
ಹರಪನಹಳ್ಳಿಭೀಮವ್ವ
ಆಲದೆಲೆಯ ಮ್ಯಾಲೆ ಮಲಗಿದ್ದಾದಿಕೇಶವ(ನ) ನೋಡ ಬನ್ನಿರಾಲದೆಲೆಯ ಮ್ಯಾಲೆ ಕೃಷ್ಣ ಬಾಲರೂಪ ಧರಿಸಿ ಅಂಧಕಾರ ಪ್ರಳಯ ಜಲದ ಒಳಗೊಂದಾಲದೆಲೆÉಯ ಮ್ಯಾಲೆ ಕೃಷ್ಣ ಪ ಪ್ರಳಯ ಕಾಲದಲ್ಲೆ ಹರಿಯು ಸರ್ವ ಜೀವರನೆಲ್ಲ ತನ್ನ ಉದರದೊಳಗಿಂಬಿಟ್ಟುಕೊಂಡು ಛಲವ ಮಾಡದಂತೆ ರಂಗ ಬೆರಳು ಬಾಯೊಳಗಿಟ್ಟು ಚೀಪುತ ಹರಳು ಮಾಣಿಕ್ಯದರಳೆಲೆ ಮಾಗಾಯಿ ಕೌಸ್ತುಭ ಕಟಿಸೂತ್ರ ಕರುಣ ಸಾಗರಗಿನ್ನು ವರ ವೈಕುಂಠವಾಸ ಒಂದಾಲದೆಲೆಯ ಮ್ಯಾಲೆ 1 ಅಷ್ಟು ಜೀವರನೆಲ್ಲ ತನ್ನ ಹೊಟ್ಟೆಯೊಳಗಿಂ ಬಿಟ್ಟು ಕೊಂಡು ಸೃಷ್ಟಿ ಲಯಕೆ ಕರ್ತನಾದ ಶ್ರೇಷ್ಠ ಸುಂದರಾಂಗ ತನ್ಹೆಬ್ಬೆಟ್ಟು ಬಾಯೊಳ ಗಿಟ್ಟು ಚೀಪುತ ವಕ್ಷಸ್ಥಳದಿ ಹೆಚ್ಚಿನ ಶ್ರೀವತ್ಸ ತೋರುತ ಉತ್ತಮ ವೈಜ(ಯಂ)ತಿ ವಜ್ರ ಕೆತ್ತಿದ ಕಿರೀಟ ಲಕ್ಷ್ಮೀಚಿತ್ತ ಚೋರನಾದ ಪರಮಾತ್ಮ ಪರಮ ಹರುಷದಿಂ ದ್ವೊಂದಾಲದೆಲೆಯ ಮ್ಯಾಲೆ 2 ಗಂಧ ಕಸ್ತೂರಿ ಪರಿಮಳ ಸುಗಂಧವಾದ ಕುಸುಮ ಕೆಲದಿ ಹೊಂದಿ ಕಟ್ಟಿದ ತುಳಸಿಮಾಲಿಕಿಂದೆ ಪರಮ ಶೋಭಿತವಾದ ಬಂದಿ ಕಂಕಣ ಬಾಹುಪ್ಪುರಿಗಳು ದುಂಡುಮುತ್ತಿನ ಕೂದಲ ಕಾಂತಿ ಕದಪಿಲೆಸೆಯಲು ಅಂದಿಗೆ ಪಾಗಡ ಗೆಜ್ಜೆ ಚೆಂದವಾದ ನಾದಗಳಿಂದ ಇಂದುಕೋಟಿ ರವಿಯ ತೇಜ ಮಂದಹಾಸ ಮುಖದ ಹರಿ ಒಂದಾಲದೆಲೆಯ ಮ್ಯಾಲೆ 3 ಥಳಥಳಿಸುವಂತ್ಹೊಳೆವೊ ಚಕ್ರ ಧವಳವರಣ ಶಂಖ ಕರದಿ ಹವಳದುಟಿಯು ಹರಿಯ ಪದ್ಮ ದಳಗಳಂತಕ್ಷಿಗಳ ಚೆಲುವ ಅರುಣನಂತೆ ಚರಣ ಕರದಲ್ಲಿ ಒತ್ತುವೊ ಸಿರಿಯ ಪರಮಪುರುಷ ನೋಡಿ ಸರಸದಿ ಜರ ಪೀತಾಂಬರ ನಾಭಿಕಮಲಕ್ಕೊಲೆವೊ ಒಡ್ಯಾಣವನೆ ಇಟ್ಟು ಹಲವು ಸೂರ್ಯರಂತೆ ಲಕ್ಷ್ಮೀರಮಣ ಶ್ಯಾಮವರಣ ಹರಿ ಒಂದಾಲದೆಲೆಯ ಮ್ಯಾಲೆ 4 ಅಳಕÀನಂದನ ಪಿತನು ತಾ ಘ- ನೋದಕÀದೊಳು ತಾ ರಂಗ ಚಾಮರ ಎಣಿಕಿಲ್ಲದೆ ಮಾ ಣಿಕ್ಯದಾಭರಣ ಫಣಿಪಮಂಚಶಯನ ನೀಲ ಕನಕರತ್ನ ಬಿಗಿದ್ಹಾಸಿಕೆಯಲಿ ಪಂಚಶರನ ಜನಕ ಜಗವ ನಿಟ್ಟು ತನ್ನಲ್ಲಿ ಅಳಕಗೂದಲು ಚೆಂಡಿಕೆಲ್ಲೆ ಅರಳುಮಲ್ಲಿಗೆ ಸುತ್ತಿಹರಿಗೆ ಝಳಕು ಮಿಂಚಿನಂತೆ ಜಗಕÉ ಬೆಳಕಿನÀಲಿ ಭೀಮೇಶ ಕೃ ಷ್ಣೊಂದಾಲದೆಲೆಯ ಮ್ಯಾಲೆ 5
--------------
ಹರಪನಹಳ್ಳಿಭೀಮವ್ವ