ಒಟ್ಟು 796 ಕಡೆಗಳಲ್ಲಿ , 81 ದಾಸರು , 727 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಾಲವಾಲ ಪ ಸಿರಿಯರಸನೆ ನಿನ್ನ ಚರಣವ ನಂಬಿದೆ ಸುರಗಣ ಸೇವಿತ ಸುರರಾಜಪಾಲ ಅ.ಪ ಇಂದ್ರನಕೂಡಿ ಮುನೀಂದ್ರನ ಸತಿಶಾಪ ದಿಂದರೆಯಾಗಿರಲಂದು ನೀ ದಯದಿ ಸುಂದರ ಚರಣಾರವಿಂದಗಳಿತ್ತ ಧೂಳಿ ಯಿಂದ ಪಾವನಗೈದ ಇಂದಿರೇಶನೆ ನೀ 1 ಚಕ್ರವರ್ತಿಯು ಮರೆಹೊಕ್ಕರೆ ನುತಿಸಿ ರಕ್ಷಿಸಿದಾಪರಿಯಕ್ಕರೆ ತೋರಿಸಿ 2 ಶಿರಸರಿಸಕ್ಕೆ ಗುರಿಯಿಡಲು ನರನ ಶಿರವುಳುಹಿದ ಸಿರಿವರದವಿಠಲ ಹರಿ3
--------------
ವೆಂಕಟವರದಾರ್ಯರು
ಕರುಣಾಸಾಗರ ದೀನೋದ್ಧಾರಣ ಎನ್ನನು ಕಾಯ್ವ ಪರಿಯ ಚಿಂತಿಸಿ ರಕ್ಷಿಸೊ ಪರಮ ಪಾವನ ನಾಮಸ್ಮರಣೆಯಲ್ಲದೆ ಕರ್ಮ ಚರಣರಹಿತ ಪಾಪಕರನಾಬ್ಧಿಪತಿತನ ಪ. ವರ್ಣಾಶ್ರಮಾಚಾರ ಕರ್ಮಕೃತ್ಯವ ನೀಗಿ ನಿರ್ಮಲಚಿತ್ತದಿ ನಿನ್ನ ಪೂಜಿಸದೆ ವರ್ಮವಿಡಿದು ವರ ದ್ರೋಹ ಚಿಂತೆಗಳಿಂದ ಧರ್ಮಮಾರ್ಗವ ದೂರದಲಿ ತ್ಯಜಿಸಿ ನಿರ್ಮಲಾಂತ:ಕರಣ ನಿಜಕುಲ ಧರ್ಮರತ ಸಜ್ಜನರ ದೂಷಿಸಿ ದುರ್ಮದಾಂಧರ ಸೇರಿ ಕೂಪದ ಕೂರ್ಮನಂದದಿ ಬರಿದೆ ಗರ್ವಿಪೆ 1 ನೇತ್ರ ದರ್ಶನಕೆ ಸಂಸ್ಮರಕೆ ಜಿಹ್ವೆಯ ಗಾತ್ರ ಸೇವೆಗೆ ನೈರ್ಮಲ್ಯಕೆ ಶಿರವ ಶ್ರೋತ್ರವ ಮಾಹಾತ್ಮ ಶ್ರವಣಕೆ ಪಾದಗಳ ಕ್ಷೇತ್ರಯಾತ್ರೆಗೆ ಕರಗಳ ಪೂಜಾವಿಧಿಗೆ ಇತ್ತ ದೊರೆಯನು ಮರೆತು ಇಂದ್ರಿಯ ವೃತ್ತಿಗಳ ಸ್ವೈರಿಣಿಯ ದರುಶನ ಭುಕ್ತಿ ಚುಂಬನ ಧ್ಯಾನ ದುಷ್ಟ ಕಥಾ ಶ್ರವಣಸಲ್ಲಾಪಕಿತ್ತೆನು 2 ಪತಿತ ಪಾವನ ನೀನು ಪತಿತಾಗ್ರೇಸರ ನಾನು ಅತಿಶಯಿತನು ನೀನು ಅತಿನೀಚನು ನಾನು ಗತಿಹೀನ ಜನಕ ಸದ್ಗತಿಯೆಂಬ ಬಿರುದುಳ್ಳ ಮಿತಚಿತ್ರ ಚರಿತಾತ್ಯದ್ಘುತರೂಪ ಗುಣಪೂರ್ಣ ಪಶುಪತಿ ಸುರೇಶ ಪ್ರ- ಭೃತಿ ದಿವಿಜಗಣ ಸುತ ಪದಾಂಬುಜ ಕ್ಷಿತಿಜಲಾಗ್ನಿ ಮರುನ್ನಭೋಹಂ ಕೃತಿ ಮಹ ಸುಖತತಿನಿಯಮಕ 3 ಕರಿರಾಜ ಧ್ರುವಾಕ್ರೂರನರ ವಿಭೀಷಣ ನಾರದರು ಮೊದಲಾಗಿ ನಿನ್ನನುದಿನವು ಸ್ಮರಿಸಿ ಪೂಜಿಸಿ ಮನವೊಲಿಸಿದವರನ್ನು ಪರಿಪಾಲಿಸಿದನೆಂಬೊ ಗರುವದಿಂದ ನಿರುಪಮಾನಂದೈಕ ಸದ್ಗುಣ ಭರಿತರೆಂಬುದ ಹೆಮ್ಮೆಯಿಂದಲಿ ಮರೆತರೆನ್ನನು ಪರಮಕರುಣಾ ಶರಧಿಯೆಂದ್ಹೆಸರಿರುವುದೇತಕೆ 4 ನಾ ನಿನ್ನ ಮರೆತರು ನೀ ಎನ್ನ ಮರೆದರೆ ಹಾನಿಯಾಗದೆ ನಿನ್ನ ಭಕ್ತ ವತ್ಸಲಕೆ ದಾನವಾಂತಕ ಅಕಿಂಚನಾರೆ ಎಂಬ ಪ್ರಮಾಣ ಉನ್ನತ ವಚನವಾಗದೆ ಮಾನನಿಧಿ ಪವಮಾನ ತತ್ವಮತ ಮಾನಿಜನ ಸಂಸ್ತುತ ಪದಾಂಬುಜ ಶ್ರೀನಿವಾಸ ಕೃಪಾನಿಧೆ ಕಮಲಾ ನಿಲಯ ವೆಂಕಟನಿಜಾಲಯ 5 ವೇದವನು ತಂದು ಭೂಧರನ ಬೆನ್ನಲಿ ನೆಗಹಿ ಈ ಧರೆಯ ಸಲಹೆ ಪ್ರಹ್ಲಾದನನು ಕಾಯ್ದೆ ಮೇದಿನಿಯನಳೆದಿ ಕಾರ್ತದಶಾಸ್ಯ ಕಂ ಸಾದಿಗಳ ತರಿದ ಬೌದ್ಧಾದಿ ಕಲ್ಕಿ ಧಾರಣನೆ ಪತಿತ ಪಾವನನೆಂಬ ಪರಮ ಬಿರುದನು ವಹಿಸಿ ಜತನ ಮಾಡುವಿ ಭಕ್ತತತಿಗಳನು ಬಿಡದೆ ಪತಿತ ಶೇಖರನನ್ಯಗತಿಯಾಗಿರುವ ಎನಗೆ ಗತಿಯ ಪಾಲಿಸು ರಮಾಪತಿಯೆನ್ನುಪೇಕ್ಷಿಸದೆ 6 ನಾರದಕ್ರೂರ ನರ ಹೈರಣ್ಯಕಾದಿಗಳು ಪಾದ ನೀರರುಹಗಳನು ಘೋರತರ ಸಂಸಾರಪಾರವಾರವ ದಾಟಿ ಧೀರರೆನಿಸಿದರೆಲ್ಲಪಾರಸನ್ಮಹಿಮ ತರಣಿ ಉದಿಸಿದ ಮೇಲೆ ತಿಮಿರದೊಂದಿರವ್ಯಾಕೆ ಗರಳ ಭಯವ್ಯಾಕೆ ಸಿರಿಸಹಿತ ಶೇಷಾದ್ರಿ ವರ ನಿನ್ನಪಾದ ಸಂ- ದರುಶನವು ದೊರೆತಮ್ಯಾಲರಿಬಾಧೆಯಾಕೆ ಎನಗೆ 7
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಿಸು ದೇವ ಶರಣ ಸಂಜೀವ ಮರೆಯದಿರೆನ್ನನು ಮನೆಯೊಳಗಿರುವ ಪ. ಸಿರಿನಲ್ಲ ನೀ ಬೆಂಬಲ ವಲ್ಲದೆ ಬೇರೆ ದಾತರಿಲ್ಲವೆಂಬುದು ಸಿದ್ಧ 1 ಆದರು ಲೌಕಿಕವಾದ ಲಾಭಗಳನ್ನು ನೀ ದಯಮಾಡುವ ಹಾದಿಯನರಿಯೆನು ವ್ಯರ್ಥಹಂಕೃತಿಯಿಂದ ಧೂರ್ತನಾದೆನು ಕೃಷ್ಣ ಕರ್ತ ನೀ ಕರುಣದಿ ಕರಸಿಕೊ ಬೇಗ 2 ಚಂದನ ವಿಗ್ರಹ ಚೆಲುವ ಶೋಭಿತ ಗ್ರಹ ಹೊಂದದಿರಾಗ್ರಹ ಹರಿಸು ಸರ್ವಾಗ್ರಹ 3 ನೋಡದೆ ನಿನ್ನನು ನಡುವಿಲಿ ನೆನೆದೆನು ಬೇಡಿಕೊಂಬೆನು ಶ್ರೀಶ ಮೂಡಲಭೂಧರೇಶ 4
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಿಸೆನ್ನೊಳು ದೀನಬಂಧು ಪ. ಕರುಣಿಸೆನ್ನೊಳಿರುವ ಸಕಲದುರಿತಜಾತ ರೋಗಗಳನು ಪರಿಹರಿಸಿ ಪಾದಾರವಿಂದ ಸಿರದೊಳಿರಿಸಿ ಸಲಹು ಬೇಗ ಅ.ಪ. ಮೂರು ವಿಧದಲಿ ಸುತ್ತಿಕೊಂಡ ಘೋರ ತಾಪದಿ ಸೂರೆಗೊಳುವ ಗಹನ ಸಂಸಾರ ಕೂಪದಲ್ಲಿ ಬಿದ್ದು ಚೀರುತಿಹೆನು ಚಿತ್ತದಲ್ಲಿ ತಾರೊ ತರಳಗೊಲಿದ ದೇವ 1 ಆದಿ ಭೌತಿಕಾದೇಹಜನಿತಾಗಾಧ ಮೋಹ ತಾ ಬಾಧೆ ಸಹಿಸಲಾರೆ ಮುನಿಸಮಾಧಿಗಮ್ಯ ನಿನ್ನ ಮರವ ವೇಧೆ ವದಗಿ ಬರುವ ಮೊದಲೆ ಮಾಧವನೆ ಮದೀಯನೆಂದು 2 ಮಂದನಾದೆನು ಮಮತೆಯಿಂದ ಕುಂದಿಹೋದೆನು ಮುಂದುಗಾಣವಂದ ಕಾಣದಿಂದು ನಿನ್ನ ಬೇಡಿಕೊಂಬೆ ಇಂದಿರೇಶ ವೆಂಕಟೇಶ ಎಂದು ನಿನ್ನ ಪದವ ಕಾಂಬೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾದನಾ ವತ್ಸವ ಹರಿ ಕಾದನಾ | ಮಾಧವ ಪ ವೇದವೇದ್ಯ ಸಾಧುವಿನುತÀರಾದಿಕಾ ರಮಣ ಕೃಷ್ಣ ಅ.ಪ. ಎಳೆಯ ಗರಿಕೆ ಇರುವ ಸ್ಥಳದಿ ನೆರೆದು ವತ್ಸಗಳನೆ ನಿಲಿಸಿ || ಕೊಳಲು ಕೈಲಿ ಪಿಡಿದು ಮುರಲಿಗಾನ ಮಾಡುತ್ತಾ 1 ತನ್ನ ಶೆರಗು ತೆಗೆದು ಕೃಷ್ಣ ಕರುಗಳನ್ನೆ ಬೆನ್ನೊರಿಸಿ | ತಿನ್ನು ತಿನ್ನು ಪುಲ್ಲು ಯೆನುತ ಘನ್ನ ಕರುಗಳೊತ್ತುತ್ತ 2 ಉಡುಗಳಂತೆ ಕರಗಳು ನಡುವೆ ಚಂದ್ರ ಧರೆಯೊಳು || ಪೊಡವಿಯೊಳಗೆ ಬೆಳಗಲು ಆ ಮೃಡನು ಕೊಂಡಾಡಲು3 ಒಂದು ತಿಂಗಳ ಕರುಗಳು ಇಂದಿರೇಶನು ಮೇಯಿಸಲು | ಬಂದು ವರುಷ ಕರುಗಳಂತೆ ಆನಂದದಿಂದ ಬೆಳೆದವು 4 ಕನಕ ರಜತ ಸರಪಳಿ ದನಕರುಗಳ ಕೊರಳಲ್ಲಿ | ಇಣಕುವಂತರಳೆಲೆ ಅನೇಕ ನಾದ ಬೆರಳಲಿ ಮಾಡುತ5 ಮರದ ನೆರಳು ವೊಳಗೆ ಕೃಷ್ಣ | ಮೆರೆದು ವತ್ಸಗಳನೇ ನಿಲಿಸಿ | ಕರೆದ ಪಾಲು ಕರದಿ ಪಿಡಿದು ನೆರೆದು ಬಾಯಲುಣಿಸುತ6 ಅಜಗಳ್ಹಾಂಗ ಇದ್ದ ಕರುಗಳು ಗಜಗಳ್ಹಾಂಗ ಆದವು | ತ್ರಿಜಗದೊಡೆಯ ವಿಜಯವಿಠ್ಠಲ ವ್ರಜಕೆ ದೊರೆಯಾಳುವ | 7
--------------
ವಿಜಯದಾಸ
ಕಾಯಬೇಕೋ ಶಂಕರೇಶ್ವರ ನೀನೆನ್ನನೂ ದೇವಾ ಪ ಮಾಯಧಾರಿಪ್ರೀಯನಹುದೋ ಕಾಯಜಾಂತಕನೇ ಆಯತಾರ್ಥವನ್ನು ತೋರೋ ಪಾರ್ವತೀಶನೆ ದೇವನೆ 1 ಇಂತುದಿನವು ಗಳಿಸಿಯಿರುವ ಅಂತು ದು:ಖಕ್ಕೆ ಪಂತವ್ಯಾಕೊ ಪಾಲಿಸೆನ್ನೊಳಂತರಂಗಮಂ ಶಂಭೂ 2 ದಾಸ ತುಲಸಿರಾಮ ನಿನ್ನ ದಾಸನಾದೆನೂ ದೋಷ ರಹಿತನ ಮಾಡೆನ್ನ ಮೋಸಹೋದೆನೂ-ಗುರುವೇ 3
--------------
ಚನ್ನಪಟ್ಟಣದ ಅಹೋಬಲದಾಸರು
ಕಾಯೊ ಕರುಣಾಳು ಅಂಬುದಛಾಯ ಬಿನ್ನಹ ಕೇಳು ತಾಯೊಳು ಶಿಶು ಗುಡಪಾಯಸಗೋಸುಗ ಬಾಯತೋರ್ಪುದು ನ್ಯಾಯವೇ ಪೇಳು ಪ. ಭೂತಿದೇವಿಯ ರಮಣಾ ನೃಪ ಸಂಪ್ರೀತಿ ಪೂರ್ತಿ ಕರಣಾ ಚಾತೂರ್ಯ ಕರಣಾ ದಿವಿಜಾರಾತಿ ಶಿರೋಹರಣಾ ಮಾತು ಮಾತಿಗೆ ವಿಖ್ಯಾತಿಗೊಳಿಪ ತೆರ ನೀ ತಿಳಿಯೇಯ ಖಗಕೇತನ ಶುಭದಾ 1 ಮಧುಮಯ ಮೃದುಭಾಷಾ ಮಧುಹರ ಮಧುಕರ ಮುಖಭೂಷಾ ಅಧರೀಕೃತ ತೋಷಾ ದಾನವ ಮದಜಲನಿಧಿಶೋಷಾ ಮಧುರಾ ಪಟ್ಟಣ- ಕಧಿಪನೆಂದೆಸೆವ ಬುಧರಿಪು ಕಂಸನ ಸದೆದ ಪರೇಶಾ 2 ಶ್ರೀಪತಿ ಸರ್ವೇಶಾ ದುರಿತಮಹಾಪದ್ಗಣನಾಶಾ ತಾಪೋನ್ಮಥನೇಶಾ ಪಾಲಿಸು ಭೂಪ ಶೇಷಗಿರೀಶಾ ನೂಪುರ ಕಿಂಕಿಣಿಕ್ವಣಿತ ಚರಣ ಲ- ಕ್ಷ್ಮೀ ಪರಿರಂಭಿತ ಪರಮಾನಂದದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಯೊ ಕಾಯೋ | ಗುರುವರ್ಯ | ಕಾಯೊ ಕಾಯೋ ಪ ಕಾಯೊ ಕಾಯೊ ಗುರುವರ್ಯ ಪರಮ ಪ್ರಿಯಜೀಯ ನಿನ್ನಯ ಪಾದಕೆರಗುವೆನಯ್ಯಾ ಅ.ಪ. ಒಂದರಿತವನಲ್ಲ | ಕಂದನು ಎಣಿಸದೆಬಂದು ಸಲಹೊ | ತಂದೆ ಮುದ್ದು ಮೋಹನ್ನ 1 ಹಿಂದಿನ ಸುಕೃತದಿ | ಬಂದು ಜನಿಸಿದೆನಂದ ಮುನಿಯ ಮತ | ಸಿಂಧುವಿನಲ್ಲಿ 2 ಇಂದಾದರು ತವ | ದ್ವಂದ್ವಪದವ ಮನಮಂದಿರದಲಿ ತೋರಿ | ದಂದುಗ ಬಿಡಿಸೋ 3 ಎಂದಾಗುದೊ ತಂದೆ | ಇಂದಿರೇಶ ಪದದ್ವಂದ್ವ ಸಂದರ್ಶನ | ಸಂಧಿಸೊ ಬೇಗನೆ 4 ತಂದೆ ನಿನ್ನಲಿ ಗುರುಗೋ | ವಿಂದ ವಿಠಲನಅಂದ ಮೂರುತಿಯನು | ಛಂದದಿ ತೋರೊ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾಯೊ ಬಾರೊ ಹರಿಯೆ ಕರುಣಾ ಪಯೋಂಬುಧಿ ಪ. ಕಾಯೊ ಬಾರೊ ಕರುಣಾಂಬುಧಿ ಕಮಲದ- ಳಾಯತ ನೇತ್ರ ರಸಾಯನ ಸುರಿವುತ ಅ.ಪ. ಸಿಲುಕಿ ಬಾಧೆಗೊಂಡು ಬಹು ಬೆದರುವ ದಾಸನ ಕಾದುಗೊಳ್ಳು ಕಂಬ್ವರಿಗದಾಬ್ಜಧರ ಮಾಧವ ಮಧುಮಥನ ಮನದಿ ವಿನೋದಿಸುವ ಕಥನ ಶ್ರೀ ಪದಾಬ್ಜಾಮೋದಯುಗ ಸಾಸ್ವಾದನಾತ್ಮಕ ವಿನೋದ ನಲಿವುತ 1 ಕತ್ತಲೆ ಮುಸುಕಿರುವ ಸಮಯದಿ ಸುತ್ತ ವ್ಯಾಘ್ರವಿರುವ ವನದಲಿ ಸತ್ವಹೀನವಾದೆತ್ತಿನ ಕೆಡಹುವದುತ್ತಮವೆ ಪುರುಷೋತ್ತಮ ನಿನ್ನಯ ತತ್ವಮಾರ್ಗ ತಿಳಿಸಿ ತ್ರಿಕರಣವೆತ್ತಿ ಬೋಧೆಗೊಳಿಸಿ ಜನೋತ್ತಮನೆನಿಸುತ 2 ಇಂದಿರೇಶ ನಿನ್ನ ಚರಣವನೆಂದಿಗು ನಂಬಿದನ ಬಂಧ ಬಿಡಿಸಿ ಕೃಪೆಯಿಂದ ಪೊರೆವನೆಂಬಂದಕಪಾಯವ ಕರುಣಾಸಿಂಧು ನಿನ್ನ ಕೀರ್ತಿ ಮನೋಗತ ಸಂದಣಗೊಳಿಸುತ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಯೋ ನೀ ಅನಸೂಯಾ ಪುತ್ರನೇ ಜೀಯಾ ದತ್ತಾತ್ರೇಯ ದೇವನೇ ಪ ಪತ್ರೇಂದ್ರ ಗಮನಾ ಪರಮಾನಂದಾ ಶತ ಪತ್ರದಳ ನಯನಾ ಕೇಶವಾ ಮಿತ್ರ ಶತಕೋಟಿ ಪ್ರಕಾಶ ಸುರೇಶನೇ ಅತ್ರಿ ಗೋತ್ರ ಸಮುದ್ಭವಾ 1 ಸರ್ವಾಧಾರವ್ಯಯ ತ್ರಯ ಮೂರು ಸರ್ವ ಲೋಕ ವ್ಯಾಪ್ತನು ಚಾರು ತತ್ವರಿತ ಸರ್ವಾತೀತ ಮುಕುಂದನೇ 2 ಯೋಗಿ ಜನರ ಮಾನಸ ಹಂಸಾ ಸಂತ ಗುಣ ಸಂಪನ್ನನು ಅನಂತ ರೂಪ ಮಹಿಪತಿ ನಂದನ ಪ್ರಭು ಅನಂತ ಮಹಿಮ ಶ್ರೀ ಕೃಷ್ಣನೇ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಲು ತೊಳೆದವನೊಬ್ಬ ತೊಳೆಸಿಕೊಂಡವನೊಬ್ಬ ಮೌಳಿ ಮೇಲಾಜಲವ ಸತತ ಧರಿಸಿದನೊಬ್ಬ ಪಾಲಿಸುವ ಪ್ರಭುವೊಬ್ಬ ಕೊಲುವ ತಳವಾರನೊಬ್ಬ ಮೂರ್ಲೋಕವರಿಯೆ ಪುಟ್ಟಿಸಿದ ಪಿತನೊಬ್ಬ ಆಲೋಚನೆಯ ಬಲ್ಲವಗೆ ಸಂಶಯ ಸಲ್ಲ ಮಾಲೆಯನು ಮಹಲಕ್ಷುಮಿ ಹಯವದನಗಿತ್ತಳಾಗಿ 1 ರಾವಣನ ಕೊಂದ ಪಾಪವ ಕಳೆಯಬೇಕೆಂದು ದೇವ ರಘುಪತಿ ಸದಾಶಿವನ ಪೂಜಿಸಿದ ಗಡಾ ಆ ವಿಧಿಯ ಒಂದು ತಲೆಯನು ಕಡಿದ ಮಾತ್ರದಿಂದ ಆವಾಗ ಕರದಲ್ಲಿ ಇಹ ಕಪಾಲವ ಕಾಣನೆ ದಾವಘದೊಳು ಪೊರಳುವನ ದಾವಾತ ಭಜಿಸುವನು ಜೀವರಿಗೆ ಉಳ್ಳಷ್ಟು ವಿವೇಕ ಹಯವದನಗಿಲ್ಲವೆ 2 ರಾಮಾಯಣದ ಕತೆಯು ಮಹಾಪುಣ್ಯ ಕಥೆಯು ಗಡಾ ರಾಮ ರಾವಣನ ಕೊಂದದ್ದು ಮಹಾಪಾಪ ಗಡಾ ಆ ಮನುಮುನಿಗಳೆಲ್ಲ ಪಾಪಕಂಗೀಕರಿಸಿದರೆ ಸ್ವಾಮಿಯು ಲಯದಿ ಬೊಮ್ಮನ ಮೊದಲು ಕೊಲಿಸದೆ ಧೀಮಂತ ಹಯವದನ ಕೊಂದ ಹಿರಣ್ಯಕ ಮುಖ್ಯ ತಾಮಸ ದಿತಿಜರು ಕಶ್ಯಪ ಋಷಿ ಸುತರಲ್ಲವೆ3 ಶ್ರುತಿಯಿವ ಕರ್ಮಣಾನೋಕನೀಯ ಎಂದು ತುತಿಸುತಿರೆ ನಿಮ್ಮ ನಿರ್ಗುಣ ಬೊಮ್ಮಗೆ ಕರ್ಮವುಂಟೆ ಕ್ಷಿತಿಯೊಳಗೆ ರಾವಣನ ವಧೆಯ ಮಾಡಿದ ಸೇತುಪತಿಯ ಪಾವನನೆನಲು ಅವನ ಕೊಂದವನ ಪತಿತಪಾವನನೆಂಬುದೆ ಕುಚಿತ್ತಯುಕುತಿಯು ಸತತ ಹಯವದನನೊಬ್ಬನೆ ಶುದ್ಧ ಕಾಣಿರೊ 4 ಒಂದು ಕಡೆಯಲಿ ವಿಭೀಷಣನ ಪ್ರತಿಷ್ಠಿಸಿದನು ಮ- ತ್ತೊಂದು ಕಡೆಯಲಿ ಸದಾಶಿವನ ಪೂಜಿಸಿದ ಇಂ- ತೆಂದು ಪುರಾಣಗಳು ಕೂಗುತಿವೆ ತ್ರಾಸಿನೊಳು ಹೊಂದಿಸಿ ಸಮನೆಂದು ತೂಗಿ ತೋರು ಮದದಲಿ ಸಂದೇಹ ಸಲ್ಲ ಹಯವದನ ರಘುಪತಿಗಿಬ್ಬರು ಸಂದ ಭಕುತರೆಂಬುದು ಸಲೆ ಸುಪ್ರಸಿದ್ಧ 5 ಸೇತುವೆಯ ಕಂಡ ನರರಿಗೆ ಬ್ರಹ್ಮಹತ್ಯಾದಿ ಪಾತಕವು ಬಿಡುವುದೆಂಬ ಶ್ರುತಿಯ ಮನ್ನಿಸಲು ಖ್ಯಾತ ಬೊಮ್ಮನ ತಲೆಯ ಕಡಿಯೆ ಕರದಲಿಕೊಟ್ಟ ತಾ- ಸುಕೃತ ಸೇತುಮುಖದಿಂದ ಸೀತೆಯರಸನು ಶಿವನ ನಿಲ್ಲಿಸಿ ಪ್ರತಿಷ್ಠಾಪಿಸಿದ ಜಗನ್ನಾಥ ಹಯವದನ ಭಕ್ತರಬಂಧು ಕಾಣಿರೊ 6 ರಾಮ ಶ್ರೀರಾಮರಾಮೇತಿ ರಮೆಯೆಂಬ ಆ ಮಹಾದೇವ ಭಗವದ್ಭಕ್ತನಲ್ಲವೆ ಸ್ವಾಮಿ ತನ್ನ ಭಕ್ತರÀನು ಪ್ರತಿಷ್ಠಿಸಿದ ನಿ- ಸ್ಸೀಮ ಕರುಣಾಂಬುಧಿ ಮಹಾಮಹಿಮನೆಂಬರು ಭ್ರಾಮಕದ ನುಡಿಗೆ ಮರುಳಾಗದಿರು ಹಯವದನ ರಾಮಚಂದ್ರನೆ ಕಾಶಿಯ ತಾರಕಬೊಮ್ಮ ಕಾಣಿರೊ 7 ಕಾಶಿಯಲಿ ರಾಮಮಂತ್ರೋಪದೇಶವ ಮಾಳ್ಪ ಈಶ ಜಾಣರ ಮತದಿ ಜಗಕೆ ಗುರುವೆಂತೆಂಬ ಆ ಶಿವನ ಮಂತ್ರದೇವತೆ ತಾರಕಬೊಮ್ಮಯೆನಿಪ ವಾಸುದೇವನೆ ಜಗಕೆ ಪರದೈವ ಕಾಣಿರೊ ಈ ಸುತತ್ವÀವ ಪೇಳ್ವ ಹರಗೆ ನಮ್ಮ ಹಯವದನ ಏಸುಮನ್ನಣೆ ಮಾಡಿದರುಚಿತ ಕಾಣಿರೊ 8 ಕರವ ಶಿರದ ಮೇಲೆ ಇರಿಸಬಂದ ಖಳಗಂಜಿ ಹರ ಸಕಲ ಸುರೇಶ್ವರರ ಅರಮನೆಗಳಿಗೆ ಪೋಗಿ ಪರಿಹರವ ಕಾಣದೆ ನಮ್ಮ ಸಿರಿವರನ ಮರೆಹೊಗಲು ಪÀರಿಣಾಮವನು ಪೊರೆದ ಗಡಾ ಶರಣರಕ್ಷಕನೆಂಬ ಬಿರುದುಳ್ಳ ಹಯವದನ ಹರಿಯಲ್ಲದೆ ಪಿರಿದೊಂದು ಪರದೈವವಿಲ್ಲವಯ್ಯ 9 ರೋಮಕೋಟಿಲಿಂಗನೆನಿಸಿದ ಹನುಮನೊಂದು ರೋಮಕೆ ಕೋಟಿ ಶಿವರ ಮಾಡುವ ಶಕ್ತ ಕಾಣಿರೊ ಆ ಮಹಾತ್ಮನ ತನ್ನ ಆಳುಮಾಡಿ ನಡೆಸಿಕೊಂಡ ರಾಮಚಂದ್ರನೆ ಜಗಕ್ಕೆ ಪರದೈವ ಕಾಣಿರೊ ಸ್ವಾಮಿ ಹಯವದನ ವೇದವ ತಂದು ಕಮಲಜನ ಕಾಮಿತವನಿತ್ತನಾಗಿ ಅವನೆ ಜಗದೊಡೆಯ 10 ನೂರು ರುದ್ರರು ಪೇಳೆ ಕಾರ್ಯವಾದರೇನವರು ಈರೇಳು ಜಗವ ಸಂಹರಿಸಲರಿಯರು ಗಡಾ ಕಾರ್ಯವಿಲ್ಲದ ಶಿವರ ಪೇಳಲದ್ವೈತಮತ ಹಾರಿಹೋಗದೆ ಬರಿದೆ ಹಲವು ಹಂಬಲಿಸದೆ ಶ್ರೀರಮಣ ಹಯವದನನೊಡಂಬಟ್ಟನಿ ಬರನು ದೂರ ಕಳಚಿದನೆಂದು ಪೂರ್ವದವರನೆ ನಂಬು 11 ಯಾತ್ರೆಯ ಮಾಡಿಸಿಕೊಂಡು ಹರ ಹಿರಿಯ ತಾನಾಗಿ ಯುಕ್ತಿ ಬಾಧಕವಾಯಿತ್ತು ಹರಿಹರರೊಳೈಕ್ಯ ಚಿತ್ರ ನಿನ್ನ ಮತಕೆ ನೀನೆ ಶತ್ರುವಾದೆ ಪ್ರತ್ಯುತ್ತರವ ಪೇಳೆ ಪರಾಜಯ ಬಾರದಿಹುದೆ ಮತ್ತೆ ನೆನೆಯೊ ಶ್ರೀಹಯವದನಗಿದು ಲೀಲೆಯಾದರೆ ಸತ್ವ ಹೆಚ್ಚಿತು ಸರ್ವೋತ್ತಮನೆಂಬ ಶ್ರುತಿಗೆ 12 ವಂದ್ಯಮಾನಂ ಪಿತಾನಾಂ ಪ್ರತಿ ಪ್ರಮಾಣಂ ಎಂದು ರುದ್ರನ ಕೂಡೆ ಶ್ರುತಿ ಪೇಳಿತಾಗಿ ತಂದೆ ಮಕ್ಕಳ ಮನೆಗೆ ಪೋದಂತೆ ಪೋಗಿ ಮು- ಕುಂದ ಮೊಮ್ಮಗನಿಗೆ ಹಿರಿತನವ ಕೊಡಲೆಂದು ಮುಂದೆ ಜನಿಸುವ ಕಿರಿಯ ಕುವರರೊಳು ತನ್ನ ಕಂದನ ಸೃಜಿಸಿದ ಹಯವದನ ಚತುರನಲ್ಲವೆ 13 ಸುರರು ದ್ವಾರಕಾಪುರ ಯಾತ್ರೆಯಲಿ ಪಾಲಸಾಗರಯಾತ್ರೆ ಗರ್ಭಯಾತ್ರೆ ಕಳೆಯೆ ಶೂಲಧರ ಖಳಗಂಜಿ ಭುವನವೆಲ್ಲವ ಸುತ್ತಿ ಶ್ರೀ- ಲೋಲನಿಹ ವೈಕುಂಠಯಾತ್ರೆಯಿಂದ ಬದುಕನೆ ಭೂಲೋಕದಲಿ ಪುಟ್ಟಿ ಹಯವದನ ಕೃಷ್ಣ ಮಾಡಿದ ಕೈಲಾಸಯಾತ್ರೆ ಕೈವಲ್ಯಪತಿಗೆ ಲೀಲೆ 14 ಹರನಾರು ಪುರಾಣಗಳು ವಿರಿಂಚನಾರು ಪುರಾಣಗಳು ಹರ ವಿರಿಂಚರವಲ್ಲವೆಂದು ಹಿರಿಯರೆ ಮನ್ನಿಸಲಾಗಿ ಪರಮ ಸಿದ್ಧಾಂತಕೋವಿದರೆನಿಪ ಬುಧರಿಗೆ ಪುರಾಣಗಳ ಮ್ಯಾಲೆ ಮಾಡುವ ಪರಮಾದÀರ ಸಲ್ಲದಯ್ಯ ದುರಾಗ್ರಹವ ಮಾಡಬ್ಯಾಡ ಗುರುಮತವ ಬಿಡಬ್ಯಾಡ ಸಿರಿ ಹಯವದನನಾರುಪುರಾಣಗಳ ನೋಡಿರೊ 15 ಒಂದು ಬೊಮ್ಮಚಿತ್ತು ಒಂದು ಜೀವಚಿತ್ತು ಇಂ- ತೆಂದು ಶ್ರುತಿಸ್ಕಂಧÀ ಚೇತವೆಲ್ಲ ಗ್ರಂಥ[ಆ]ಸ್ಯ ದಿಂದ [ಒರೆಯೆ] ಹರಿಜಡನೋ ಹರಜಡನೋ ಮಂದಹಾಸದಿಂದ ಜಡರು ಮನುಮುನಿಗಳೆಲ್ಲ ಇಂಥ ಶಿವನ ವಹಿಸಿಕೊಂಡು ವಾದಿಸುವರು ಹಿಂದು ಮುಂದರಿಯರೆಂದು ಹಯವದನ ನಗನೆ 16 ಯಂ ಬ್ರಹ್ಮವೇದಾಹಂ ಬ್ರಹ್ಮ ವೇದಶ್ರುತಿಶಬ್ದ ಬ್ರಹ್ಮ- ವೆಂಬ ವೇದ ಬೋಧಿಸಿತಾಗಿ ಇಂಥ ಮನುಜರಿಗೆಲ್ಲ ಭಾವಾಭಾವ ಪೇಳ್ವ ಹೊಂದಿಬದುಕು ಹಯವದನನ ಚರಣವ ಹೊಂದಿಬದುಕೊ ಜೀವ ಹರಿಯೆ ನಾನೆನ್ನಬ್ಯಾಡ 17
--------------
ವಾದಿರಾಜ
ಕಾವೇರಿ ಕನ್ಯಾರ್ಚಿತ ಸುಚರಿತ ದಿವಾಕರಾನತ ಸುರೇಶ ವಿನಮಿತ ಪ ಭವಾಬ್ಧಿ ವಿರಹಿತ ಸಮೀರಸುತನುತ ಶಿವಾ ನೃಹರಿ ಮಾಧವಾ ಕೃಪಾಯುತ ಅ.ಪ ರಮೇಶ ಧರಣಿಪ ಕುಮಾರ ಶಿರಧರ ಸುಮಾನ ವಿರಹಿತ ಪರಾತ್ಪರಾ ಶಮಾ ದಮಯು ತಕ್ಷಮಾ ಸುಧಾಕರ ನಮಾಮಿಶಂಕರ ವಿಮಾನಮಂದಿರ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕುಣಿಸೋ ನಾರದಾ ಎನ್ನ ಕುಣಿಸೋ ನಾರದಾ ಪ ಕುಣಿಸೋ ಎನ್ನ ಕಾಲಿಲಿಂದ ಕಣಕಣೆಂಭೊ ಗೆಜ್ಜೆಕಟ್ಟಿ ಅ.ಪ. ಮೋದ ವನವ ಚರಿಸುವಂತೆಮಾಡೋ 1 ವದನದಲ್ಲಿ ಹರಿಯ ಸ್ಮರಣೆ ಮುದದಿ ಪಾಡುತಾಲೆ ಕಥೆಯಗದಗದಾನೆ ರೋಮ ಉಬ್ಬಿ ಒದಗುವಂತೆ ಭಾಷ್ಯ ಮಾಡೋ 2 ಏಸು ಲೇಸು ವಿಷಯಗಳಲಿ ವಾಸಮಾಡದಂಥ ಇಂದಿರೇಶಸುಕಧಾರ್ಥಸಾರ ಲೇಶ ಬಂದು ಸತತ ಮಾಡೋ 3
--------------
ಇಂದಿರೇಶರು
ಕೂಸಿನಲ್ಲಿ ಬಾಲಕೃಷ್ಣ ಕೇಶವಾರ್ಯ ಪುತ್ರನಲ್ಲಿವಾಸಮಾಡಿ ಸತತ ಮನವ ಪೋಷಿಸೂವನು 1 ತರುಣಿಯಲ್ಲಿ ಮಾಧವವಿರುವ ಶರಣರೊಳಗೆ ವಸುದೇವನರಿತು ತೋಷಿಸುವುದು ಸತತ ಹರುಷದಿಂದಲೀ 2 ವಾಸುದೇವ ಖಗವರೇಣ್ಯನು 3 ದಿವಿಜ ನಾರಾಯಣನು ವಸ್ತಿ ಮಾಡಿಹನು4 ಸುರಭಿಯಲ್ಲಿ ವಿಷ್ಣುರೂಪಿ ತುರಗದಲ್ಲಿ ವಾಮನಾತ್ಮಇರುವ ಸಂಕರ್ಷಣಾಖ್ಯ ಚರಮ ಜಾತಿಯಲೀ 5 ನಿತ್ಯ ವೈಶ್ಯ ಪ್ರದ್ಯುಮ್ನಭೃತ್ಯರಲ್ಲಿ ಮಹಿದ್ರಾಸ ಕೃತ್ಯ ನಡೆಸುವಾ 6 ಮಹಿಷಿಯಲ್ಲಿ ಉಪೇಂದ್ರ ಗಜದಲ್ಲಿ ಚಕ್ರಪಾಣಿಬೆಕ್ಕಿನಲ್ಲಿ ವಿಶ್ವರೂಪ ಸತತ ತಿಳಿವುದೂ 7 ಶುನಕ ಭೂತ ಭಾವನಸರ್ವರೊಳಗೆ ಅನಂತರೂಪ ಹರಿ ನಿವಾಸಿಪ 8 ನಿತ್ಯದಲ್ಲಿ ಹರಿಯು ಹೀಗೆ ಚಿತ್ತವಿಟ್ಟು ಲಕ್ಷಣೀಯುವರ್ತಿಸುತಲಿ ಯದುವರೇಣ್ಯನ ಪತ್ನಿಯಾದಳು 9 ಪರಮಪುರುಷನಮಲ ರೂಪ ಸ್ಮರಿಸುತಲೆ ಪೋಷ್ಯರಲ್ಲಿತೊರೆದು ಕರ್ಮಲೇಪ ಶಿರಿಯ ಹೋದುವಾ 10 ನಂದಸುತನ ತಿಳಿದು ಪೋಷ್ಯ ವೃಂದದಲ್ಲಿ ಭೋಗ ನೀಡಿಇಂದಿರೇಶ ನಮಗೆ ಮೋಕ್ಷಾನಂದ ಕೊಡುವನು 11
--------------
ಇಂದಿರೇಶರು
ಕೃಪಣ ಶ್ರೀಪಾದಾರ್ಚನೆಯನಿತ್ತು ಪ ಅಪಾರ ಜನುಮದ ಪಾಪೌಘ ಬೆನ್ನಟ್ಟಿ ತಾಪಗೊಳಿಸುತ್ತಿದೆ ಈ ಪರಿಭವದೊಳು ಅ.ಪ. ಪತಿತ ನಾನಾದರೂ ಪತಿತ ಪಾವನ ನೀನು ಪಶುಪತಿ ಪಾಪಹರ ಗತಿಹೀನರಿಗೆ ನೀನೆ ಗತಿದರ್ಶಕನೆಂದು ತುತಿಸುತ್ತಿಹುದು ವೇದತತಿ ಸಮ್ಮತವಾಗಿ 1 ಭವಭವದಲಿ ಬಂದು ಬವಣೆಗಳಲಿ ಬೆಂದು ಬಳಲಿದೆ ಭಕ್ತ ಬಂಧು ಭವಹರ ನೀನೆಂಬುದನು ಭವಿಗಳಿಂ ನಿತ್ಯ ಶ್ರವಣದಿ ಕೇಳಿ ನಿನ್ನವರವನೆನಿಸಿದೆ 2 ಗೌರಿ ಮನೋಹರ ಗೌರಾಂಗ ಭಕ್ತರು ದ್ಧಾರಿಯೆ ಶೂಲಧರ ಸಾರಿದೆ ನಿನ್ನಂಘ್ರಿವಾರಿಜಯುಗಳವ ಕಾರುಣ್ಯದಲಿ ನೋಡು ಅಭಯವ ನೀಡು 3 ಮುಪ್ಪುರಹರ ಮುಕ್ಕಣ್ಣ ಗಂಗಾಧರ ಮೃತ್ಯು ಮೃತ್ಯುವೆ ಶಂಕರಾ ಸರ್ಪಭೂಷಣ ಅಪಮೃತ್ಯು ನಿವಾರಣ ಕಪ್ಪುಗೊರಳ ಕೃತ್ತಿವಾಸ ಸುರೇಶ 4 ಅಜ ಸಂತನಧ್ವರ ಭಜನೆಯ ಕೆಡಿಸಿದ ವಿಜಯ ವಿಗ್ರಹ ಶರೀರ ಸುಜನರ ಹೃದಯಾಂಬುಜದಲ್ಲಿ ಮಿನುಗುವ ರಜದೂರ ಶ್ರೀಕಾಂತ ನಿಜಭಕ್ತ ಗುರುವರ 5
--------------
ಲಕ್ಷ್ಮೀನಾರಯಣರಾಯರು