ಒಟ್ಟು 6439 ಕಡೆಗಳಲ್ಲಿ , 132 ದಾಸರು , 3726 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದು ನಿಲ್ಲೋ ಶ್ರೀಹರೇ-ಬಂದುನಿಲ್ಲೊ ಪ ಇಂದು ಹಿಂದು ನೀನೆಂದಿಗು ತಂದೆ ಗೋ- ವಿಂದ ಅನಿಮಿತ್ತಬಂಧು ಕಣ್ಣಮುಂದೆ ಅ.ಪ ಸ್ವಾಂಶದಿಂದ ಅಭಿವ್ಯಕ್ತಿಯಾದೆ ಪಂ- ಚಾಂಶತೋರಿ ಸರಸ ಜನನ ಮಾಡಿದೆ ಸ್ವಾಂಶನಾಗಿ ಅವತರಿಸಿ ಮೆರೆವ ಸ- ರ್ವಾಂಶದಿಂದಿಹ ತ್ರಿಂಶ ರೂಪನೇ 1 ಸ್ವಗತಭೇದವಿವರ್ಜಿತನೆನಿಸಿ ತ್ರಿಗುಣಮಯದಿ ಬ್ರಹ್ಮಾಂಡ ನಿರ್ಮಿಸಿ ಅಗಣಿತಮಹಿಮಾಧಾರನಾಗಿ ನಿಂದು ಮಿಗೆ ಶೋಭಿಸುವ ವಿರಾಟಮೂರುತಿಯೆ2 ಕಾರಣನೆನಿಸಿದ ಕರ್ಮನಿವೃತ್ತಿಗೆ ಸಾರವಾದ ಜ್ಞಾನಯೋಗ ಮಾರ್ಗವ ನಾರದಾದಿ ಮಹಾಮುನಿಗಳಿಗರುಹಿದ ನರನಾರಾಯಣ ಬದರಿ ಆಶ್ರಯನೇ 3 ಹಂಸಕಪಿಲ ದತ್ತಾತ್ರೇಯ ರೂಪನೆ ಹಂಸರಹಸ್ಯಗಳೆಲ್ಲವ ಪೇಳಿ ಸಂಶಯ ಬಿಡಿಸಿದೆ-ಜೀವಪರಮಾತ್ಮರ ಅಂಶಗಳರುಹಿದ ಹಂಸಮೂರುತಿಯೆ4 ಅಜಪಿತ ನೀ ಗಜರಾಜನ ಸಲಹಿದೆ ಭಜಿಸಿದ ವಾಲಖಿಲ್ಯರ ಕಾಯ್ದೆ ಅಜಹತ್ಯವು ವೃತ್ರವಧೆಯಿಂದ ಕಾಯ್ವ ಬಿ- ಡೌಜನ ಸಲಹಿದ ಗಜರಾಜ ವರದಾ5 ಪುರುಹೂತನ ಅಹಂಕಾರ ಖಂಡಿಸಿ ಕಿರುಬೆರಳಲಿ ಗೋವರ್ಧನಗಿರಿ ಎತ್ತಿ ಪರಿಪಾಲಿಸಿ ಗೋಬೃಂದವನೆಲ್ಲವ ಸುರರಿಂದ ಪೊಗಳಿಸಿಕೊಂಡೆ ಗೋವಿಂದ6 ಬುಧರರಿಯುಲು ಆ ವೇದ ವಿಭಾಗಿಸೆ ಉದಯಿಸಿ ಮುದದಿಂದ ಬದರಿಯ ಸದನದಿ ಬೋಧಿಸುತ್ತಲಿಹ ಬಾದರಾಯಣನೇ7 ಅಖಿಳಾಂಡಕೋಟಿಬ್ರಹ್ಮಾಂಡನಾಯಕ ವಿಕುಂಠಳೆಂಬೊ ಉದರದಿ ಜನಿಸಿ ಲಕುಮಿರೂಪಿಯಾದ ಸುಂದರಿಯ ಕೂಡ ಭೂ- ವೈಕುಂಠ ನಿರ್ಮಿಸಿದ ವೈಕುಂಠಮೂರುತಿಯೆ 8 ಸತ್ಯವ್ರತನೆಂಬೊ ಮನುವಿನುದ್ಧರಿಸಿ ಉತ್ತಮ ಔಷಧಿಗಳೆಲ್ಲವ ಸಲಹಿದೆ ದೈತ್ಯನಾದ ಉನ್ಮತ್ತನ ಕೊಂದು ಶ್ರುತಿಯ ತಂದಿತ್ತ ಮತ್ಸ್ಯಮೂರುತಿಯೆ 9 ಸುರಭಿನೆವನದಿ ಶರಧಿಮಥಿಸೆ ತಾ ಭರದಿ ಬೆನ್ನೊಳು ಧರಿಸಿಹೆ ಮಂದರ ಗಿರಿಧರನೆನಿಸಿದೆ ಕಮಠರೂಪನೆ 10 ಪ್ರಳಯ ಜಲಧಿಯೊಳು ಇಳೆಯನು ಕದ್ದಾ ಖಳಹಿರಣ್ಯನಾ ಶಿರವ ಚೆಂಡಾಡಿ ಜಲಧಿಯ ಶೋಧಿಸಿ ಇಳೆಯನು ತಂದು ಜಲಜಸಂಭವಗಿತ್ತ ಕ್ರೋಢರೂಪನೆ 11 ದುರುಳತನದಿ ತನ್ನ ತರಳನ ಬಾಧಿಪ ಹಿರಣ್ಯಕಶಿಪುವಿನ ಉದರವ ಬಗೆದು ಶರಣನಿಗಭಯವ ಕರುಣಿಸಿ ತೋರಿದ ಸರ್ವವ್ಯಾಪ್ತನೆಂದರುಹಿದ ನರಹರಿಯೇ12 ಬಲಿಯಿಂದಪಹೃತವಾದ ಸಾಮ್ರಾಜ್ಯವ ಸುಲಭದಿಂದಲಿ ಪುರಂದರಗಿತ್ತು ಸಲಹಿದೆ ಒಲಿದು ಬಲಿಯ ಭಕ್ತಿಗೆ ನೀ ಬಾ- ಗಿಲ ಕಾಯ್ದ ವಟು ವಾಮನನೆ 13 ದುರುಳತನದಿ ಆ ಹೈಹಯರೆಂಬ ನರಪರದುರ್ಮದ ಮರ್ದಿಸಲೋಸುಗ ನೃಪರ ಶಿರವನೆಲ್ಲ ತರಿದು ನಿಗ್ರಹಿಸಿದ ಭಾರ್ಗವ ಮೂರ್ತೇ 14 ಶರಧಿ ಬಂಧಿಸಿ ಸೇತುಕಟ್ಟಿ ಕಪಿ- ವೀರರೊಡನೆ ಆ ರಾವಣನಡಗಿಸಿ ಭೂ ಭಾರವನಿಳುಹಿಸಿ ಭೂಮಿಜೆಯನು ತಂದ ಅ- ಸುರ ಮರ್ದನ ದಾಶರಥಿ ರಾಘವ 15 ವಸುಮತಿಭಾರವನಿಳುಹಲೋಸುಗ ವಸುದೇವಸುತ ಶ್ರೀಕೃಷ್ಣನೆನುತಲಿ ಶಿಶುಪಾಲಾದಿಗಳಾಂತಕನೆನಿಸಿದ ಶಶಿಮುಖಿರುಕ್ಮಿಣಿ ಸಹಿತ ಶ್ರೀಕೃಷ್ಣ 16 ವೇದ ಕರ್ಮಗಳಿಗನರ್ಹರೆಲ್ಲರು ಸಾದರದಿಂದಲಿ ಅಧಮರೆಸಗುತಿರೆ ವೇದವಿರುದ್ದವಾದಗಳಿಂದಲೇ ಮೋಹವ ತೋರಿದೆ ಬುದ್ಧಸ್ವರೂಪನೆ17 ದುರುಳತನದಿ ಇಳೆಯಾಣ್ಮರುಗಳು ಕ್ರೂರತನದಿ ಪರಪೀಡಕರಾಗಿರೆ ಪರಿಹರಿಸಲು ಭೂಭಾರಕ್ಕಾಗಿ ಅವ- ತರಿಸಿ ಮೆರೆಯುವ ಕಲ್ಕಿರೂಪನೆ 18 ಏಕರೂಪ ಅನೇಕರೂಪನೆ ಏಕಮೇವ ನೀ ಪ್ರಕಟ ಮಾಡುವೆ ಪಿನಾಕಿ ಪ್ರಮುಖರು ಏಕದೇಶದಿ ಸಾಕಲ್ಯವ ತಿಳಿಯರೊ 19 ದೋಷದೂರ ಶೇಷಾಚಲವಾಸ ಪೋಷಿಸೊ ನಿನ್ನಯ ದಾಸಜನರ ಸರ್ವ ದೋಷಕಳೆದು ಮನೋಕಾಶದಲಿ ನಿಲ್ಲೊ ಶೇಷಗಿರೀಶ ಶ್ರೀ ವೆಂಕಟೇಶನೆ 20
--------------
ಉರಗಾದ್ರಿವಾಸವಿಠಲದಾಸರು
ಬಂದು ಸಂಸಾರದಿ ನೊಂದು ತಾಪತ್ರಯದಿ ಬೆಂದು ಕಂದಿ ಕುಂದಿದೆ ದೇವಾ ಪ ಪರಮ ಕರುಣಿಯೆ ನಿನ್ನ ಶರಣು ಪೊಕ್ಕಾ ಜನರ ಪರಿಪಾಲಿಪನೆಂಬ ಬಿರಿದೊ ಅರಿದೂ ನೀನೆ ಮೆರೆಯದಲೆ ಸಲಹÀಬೇಕೆನ್ನ ನಿನ್ನ ಚರಣನೀರಜಯುಗ್ಮವನ್ನಾ ತೋರಿ ಹರುಷವನೆ ನೀಡೆಲೋ ಮುನ್ನಾ ಘನ್ನ ಪರಮಭಕುತಿ ವಿರಕುತಿ ನೀನೆ ಎನಗಿತ್ತೆನ್ನ ಹರುಷದಲಿ ಪಾಲಿಸೈಯ್ಯಾ ಜೀಯಾ 1 ಮಾನುಷಾಧಮ ನಾನು ಹೀನಮತಿಯಲಿ ನಿನ್ನ ಧ್ಯಾನವನು ಮಾಡದಲೆ ಬರಿದೆ ಜರಿದೆ ಇಂಥ ಹೀನಭವದೊಳಗೆ ಬಾಯಿದೆರದೆ ದಿವ್ಯ ಜ್ಞಾನಿಜನರನ್ನು ನಾ ಜರಿದೆ ಙÁ್ಞನ ಹೀನನಾಗಿ ಕಾಲಕಳೆದೆ ಇನ್ನು ಶ್ರೀನಿವಾಸನೆ ನಿನ್ನ ಧ್ಯಾನ ಮಾಡುವೆನೋವಿ - ಜ್ಞಾನವನೆ ಪಾಲಿಸಯ್ಯಾ ಜೀಯಾ 2 ಈಸುವತ್ಸರ ನಿನ್ನುಪಾಸನವ ಮಾಡದಲೆ ರಾಸಭಾನಂತೆ ಬದುಕಿದೆ ದೇವಾ ಈಗ ವಾಸವಾಗೆಲೋ ಮನದಿ ಸ್ವಾಮೀ ನಾನು ಈಸಲಾರೆನು ಭವದಿ ಪ್ರೇಮೀ ಎನ್ನ ಆಸೆ ಪೂರ್ತಿಸೊ ಅಂತರ್ಯಾಮಿ ಇನ್ನು ಎಸುವಿಧದಲಿ ಸರ್ವೇಶ ಪೇಳಲಿ ಮುನ್ನೆ ಈಶ ಭವಶ್ರಮ ಕಳಿಯೋ ಈಗಾ ವೇಗಾ 3 ಆವ ಕರ್ಮದಲಿಂದ ಈ ವಸುಮತಿಯಲ್ಲಿ ಈ ವಿಧಾದಿಂದ ಬಂದೆ ನಿಂದೆ ನಿನ್ನ ಸೇವಕಾನಲ್ಲವೆ ತಂದೆ ಎನ್ನ ಆವಾಗ ನೋಡುವಿಯೊ ಮುಂದೆ ಈಗ ಕಾವವನಾರು ನಾ ಎಂದೆ ವೇಗ ದೇವ ನಿನ್ನಯ ಪಾದಸೇವೆ ಸುಖವನು ಇತ್ತು ಆವ(ಅವ)ರಂತೆ ಪೊರೆಯೊ ಎನ್ನಾ ಚೆನ್ನಾ 4 ಉರಗಾದ್ರಿ ನಿಲಯನೆ ವರಭೋಗಿಶಯನನೆ ಪರಮಪುರುಷನು ಎಂದು ಮೊರೆಯಾ ಇಡುವೆ ನಿನ್ನ ಪರಿಪರಿಯ ಜನರನ್ನು ಪೊರೆವೆ ಎನ್ನ ತಿರಸ್ಕಾರ ಮಾಡುವುದು ಥsÀರವೇ ನಿನ್ನ ಮರಿಯಾದೆಯಲ್ಲಮರತರುವೇ ಕೃಪಾ ಕರನೇ ಸರ್ವರಿಗು ಸರಿಯಾಗಿ ಇರುತಿರುವಿ ಗುರುಜಗನ್ನಾಥ ವಿಠಲಾ ವತ್ಸಲಾ 5
--------------
ಗುರುಜಗನ್ನಾಥದಾಸರು
ಬಂದು ಹೃದಯಮಂದಿರದೊಳಗೆಕೂಡೋ ಕೇಶವಮಾಧವ ಪ ತಂದೆಯೆನಾಂ ವಂದಿಪೆನೋ ಕಂದನ ಕುಂದನೆಣಿಸದೆ ಅ.ಪ ಭ್ರಮರ ಕೀಟನ್ಯಾಯದಿ ಬೇಗದಿ ತಾನೆ ತಾ ತನ್ಮಯತೇ ದಿವ್ಯಮಂಗಳ ವಿಗ್ರಹನೇ 1 ನಾಲಗೆಯ ನಡೆಮುಡಿ ಹಾಸುವೆ ಪಾಲ ಸುಮೃದುಪದಾ ಶುಭದ ನೀನೊಲಿಯುತೆ ನಲಿದು 2 ಗಾತ್ರ ಮೂರ್ತಿ ಶ್ರೀಕರ ತಂಗದಿರಾ ಬೆಂಗದಿರಾ ಶಂಕಚಕ್ರ ಚತುರ್ಭುಜ 3 ಸಂಚಿತವೆಂತೋ ಸ್ವಾಮಿ ಹಂಚಿ ನಿನ್ನ ಸೇವೆಯ ಗೈಸುತ 4 ಮುನಿಜನಗಳ ಪೊರೆವುದು ಹೆಚ್ಚೇ ಚಿನುಮಯಾತ್ಮನೇ ಚೆನ್ನಿಗ ಅಣುಗನು ನಾನಜ್ಞಾನಿ ಕನಿಕರದೆನ್ನ ಕಾಯ್ದರೆ ಕೀರ್ತಿ 5 ಮಾಯಮುಚ್ಚಿ ಕಾಯನೆಚ್ಚಿ ನೋಯುತ್ತಿಹೆನೋ ನರಹರಿ ಜೀಯ ಜಾಜೀಶಹರಿ ರಾಮ ರಕ್ಷಿಸು ಶ್ರೇಯ ಕೊಟ್ಟು6
--------------
ಶಾಮಶರ್ಮರು
ಬಂದೆಯಾ ಕೃಷ್ಣಯ್ಯಾ ಬಂದೆಯಾ ಪ ಸುಂದರ ನರರೂಪದಿಂದಲೀ ಧರೆಯೊಳು ಅ.ಪ. ಲೋಕೈಕ ದೇವನೆಂದು ಜ್ಞಾನಿಗಳೇಕಾಗಿ ಸಾರ್ವರಿಂದುಆಕಾರ ರಹಿತನ ಲೋಕ ಸಾಮಾನ್ಯರುಸ್ವೀಕರಿಸರು ಎಂದು ಸಾಕಾರನಾಗಿ 1 ಪೂರಾ ವಿಶ್ವದಲ್ಲೆಲ್ಲ ತುಂಬಾ ನಿಂತಿಹ ನಿನ್ನ _ನಾರು ನಂಬರು ಎಂತೆಂಬಕಾರಣ ಜಗಕೆ ತೋರರೆಲ್ಲಾ ಗುಣಸಾರ ಸಂಗ್ರಹಿಸಿ ನೀ ಧೀರ ಮಾನವನಾಗಿ2 ಜಗದೊಳಂದದ್ಭುತ ಶಕ್ತಿ ಇರುವುದೆಂ _ದುಗಮಿಕೆ ಜನದೊಳಾಸಕ್ತಿಜಗದೊಳು ಗದುಗಿನ ವೀರನಾರಾಯಣಬಗೆ ಬಗೆ ಮಹಿಮೆಯ ಸುಗುಣ ಮಾನವನಾಗಿ 3
--------------
ವೀರನಾರಾಯಣ
ಬಂದೆಯಾ ಬಂಧುವೆ ಭಾಗ್ಯದ ನಿಧಿಯೆ ಮಂದರದರ ನಿನ್ನ ಮಂದಿರಕ್ಕೆ ಪ ತಂದೆಯ ಮಮ ಹೃನ್ಮಂದಿರಕಾಗಲೇ ಬಂದೆಯೊ ಕರುಣಾಸಿಂಧುವೆ ಸ್ವಾಮಿ ಅ.ಪ ಆಗಮನುತ ನಿನ್ನಾಗಮನದಿ ಇನ್ನು ನೀಗಿತು ಚಿಂತೆಯು ನೀರಜನಯನ ಯಾಗ ಸಾಫಲ್ಯಕೆ ಸೂಚನೆಯಿದು ಮಹಾ ಭಾಗವತ ಪ್ರಿಯ 1 ಮುಂದಿನ ಕಾರ್ಯವ ನೀನೆ ವಹಿಪುದು ಎಂದೆಂದಿಗೂ ನೀನೆ ಗತಿಯು ನಂದನಂದನ ಗೋವಿಂದ ಮುಕುಂದನೆ ನಿಂದಿರಿಸಯ್ಯಾ ನಿನ್ನಾಜ್ಞೆಯಲೆಮ್ಮನು 2 ನಾಗಶಯನ ನಳಿನಾಯತ ಲೋಚನ ಯೋಗಿನಿಲಯ ಕಮಲಾಲಯವಾಸ ಯಾಗರಕ್ಷಕನೆ ಯಾಗ ಫಲಪ್ರದ ಬಾಗುವೆ ಚರಣಕೆ ಕರಿಗಿರೀಶನೆ 3
--------------
ವರಾವಾಣಿರಾಮರಾಯದಾಸರು
ಬಂದೊದಗಿತು ಪುಣ್ಯಫಲವು ಮುಚುಕುಂದವರದ ವಾಸುದೇವಾರ್ಯರೊಲವು ಪಸಂಚಿತಾಗಾಮಿಪ್ರಾರಬ್ಧವೆಂಬ ಕಂಚುಕಿಯಾದ ಕರ್ಮದ ಬಹುಬದ್ದದಂಚುಗಾಣುವುದಾವ ಸಿದ್ಧ ಇದು ಕಿಂಚಿದಾದುದು ಗುರುಚರಣರೇಣಿಂದ 1ಏನು ಸುಕೃತವ ಮಾಡಿದೆನೊ ನಿನಗಾನತ ನಾನಾದ ಬಗೆಯು ತಾನೇನೊನೀನೆ ಕರುಣವಿತ್ತುದೇನೊ ನಾನು ಜ್ಞಾನವೆಂತೆಂಬ ಸ್ವರೂಪವನರಿಯೆನೊ 2ಪರಿಹರಿಸಿತು ಜನ್ಮ ಮರಣ ದುಃಖ ದುರವಣೆ ದಹಿಸಿತು ಲಕ್ಷ್ಮಿಯರಮಣತಿರುಪತಿ ವೆಂಕಟರಮಣ ನೀನೆ ಗುರು ವಾಸುದೇವರೂಪಿನಲಿತ್ತೆ ಕರುಣ3ಓಂ ನರನಾರಾಯಣಾತ್ಮಕಾಯ ನಮಃಕಂ||ಭೃಗುವಾರದರ್ಚನೆಯನಿದನಿಗಮಾಗಮವೇದ್ಯ ಗ್ರಹಿಸಿ ಸಿರಿ ಧರಣಿಯು ಸಹಭಗವಂತ ನಿನ್ನ ಭಕ್ತರೊಳಗಲದೆ ನಾನಿಹುದ ಮಾಡು ವೆಂಕಟರಮಣಾ
--------------
ತಿಮ್ಮಪ್ಪದಾಸರು
ಬಂಧನ ಬಿಡಿಸು ಶ್ರೀಶಾ ಇಂದಿರೇಶಾ ಪ. ಇಂದು ಈ ಭವದಲ್ಲಿ ನೊಂದು ನೊಂದೆನೊ ದೇವಾ ಗೋವಿಂದಾ ಪಾಲಿಸಬೇಕಯ್ಯಾ ಗೋಗಳರಾಯ ಅ.ಪ. ಇಂದಿರೇಶನೆ ನಿನ್ನ ಒಂದಿನಾದಿ ನಾನು ದೈನ್ಯದಿ ಭಜಿಸದೆ ಸುಂದರ ಮೂರುತಿ ನೀನು ಯನ್ನ ಹೃದಯ ಮಂದಿರದಲ್ಲಿ ಸಂದರುಶನ ಕೊಡೊ ಇಲ್ಲಿ 1 ಸದೋಷಿಯು ನಾನು ದೋಷರಹಿತ ನೀನು ಶೇಷಶಯನ ನಿಮ್ಮ ನಾಮವೇ ಭೂಷಣ ಸ್ವರಮಣನೀ ನಿನ್ನ ಸ್ಮರಣೆಯಾ ಮಾಡದೆ ಹಾಳು ಮಾತುಗಳಿಂದ ಹೊತ್ತುಗಳದೆ ಮುಕುಂದಾ 2 ಮತ್ಗ್ಯಾದ್ಯನಂತವತಾರ ನೀನು ತುಚ್ಛದೈತ್ಯಸ ಸಂಹಾರ ಇಚ್ಛಾದಿಂದಲಿ ನೀನು ಸುರರಿಗಾಧಾರ ಕಾಳಿಯಮರ್ದನ ಕೃಷ್ಣಧೀರ ಗಂಭೀರಾಸುತಸುಕುಮಾರಾ 3
--------------
ಕಳಸದ ಸುಂದರಮ್ಮ
ಬನ್ನ ಪರಾಕು ಭಾಗ್ಯದ ನಿಧಿಯೆ ಪ. ನಿನ್ನ ನಂಬಿದೆ ನೀರಜಾಕ್ಷ ಪರಾಕು ನಿನ್ನ ರನ್ನೆಯ ಒಲುಮೆ ಬೇಕು ಪರಾಕು ಅನ್ಯರ ಸಂಗವನೊಲ್ಲೆ ಪರಾಕು ಪರಾಕು 1 ಶೇಷಶಯನ ಶ್ರೀನಿವಾಸ ಪರಾಕು ಸಾಸಿರನಾಮದ ಒಡೆಯ ಪರಾಕು ದೋಷ ದುರಿತಹರ ಸ್ವಾಮಿ ಪರಾಕು ವಾಸುದೇವ ಪರಾಕು 2 ರತಿಪತಿಪಿತ ಮಾಧವನೆ ಪರಾಕು ಅತಿರೂಪ ಎನ್ನಯ್ಯನೆ ಪರಾಕು ಹಿತ ವಿರಹಿತರ ಕಾಯೊ ಪರಾಕು ಪರಾಕು 3
--------------
ಹೆಳವನಕಟ್ಟೆ ಗಿರಿಯಮ್ಮ
ಬನ್ನ ಬಡಿಸುವುದು:ಖನೀಗುವಂತೆ ಸಿರಿ ಮನ್ನಣೆಯ ಪಡಿಯ ಕಂಡ್ಯಾಮನವೆ ಪ ಘನ್ನವಿದ್ಯದಮಬ್ಬಿಲಿನ್ನ ಖಳಜಗದ ಜೀ ವನ್ನ ಮಲಗಿದೆರೊಳಗ ಮುನ್ನ ಮಾಡಿದ ಸುಕೃತ ಪುಣ್ಯ ತಂಗಾಳಿ ಸಂಪನ್ನ ಗುರು ಕರುಣೋದಯ ದುನ್ನತೆಯ ಬೆಳಗು ಕಂಡು ಸನ್ನುತುದಯರಾಗಸ್ತವನ್ನು ಪಡುತಜ್ಞಾನ ಚನ್ನ ನದಿಯೊಳುಮಿಂದು ತನ್ನ ಸಂಚಿತದ ತ್ರೈಯ ಘ್ರ್ಯನ್ನೆರದು ಮೆರುವುತಿಹ ನಿನ್ನ ಸಿರಿಕರ ನೋಡು ಇನ್ನು ನಾಚಿಕೆ ಬಾರದೇ 1 ಬಂದು ನರದೇಹದಲಿ ನಿಂದಾಗ್ರ ಜನ್ಮದಲಿ ಹೊಂದುಪಥವನೆ ಬಿಟ್ಟು ಛಂದ ಹೊಲಬದಿ ಕೆಟ್ಟು ಮಂದಮತ ತನವೆರಿಸಿ ಮಂದಿಯೊಳಗಲ್ಲೆನಿಸಿ ಪರಿ ಪರಿಯ ಬಯಸೀ ಬೆಂದ ವಡಲನೆ ಹೊರೆದಿ ಕುಂದದಾಟಕೆ ಬೆರೆದಿ ತಂದಾಯುಷವ ಹೊತ್ತು ಇರದಯೇರಿತು ಬೆರೆತು ಮುಂದ ನಿನ್ನಯ ಗತಿಯ ಯಂದು ಘಳಿಸುವೆ ಸ್ಥಿತಿಯಾ ಇಂದಿರೇಶನ ವಲುಮೆಯಾ 2 ಮರಹು ಮುಸುಕವ ತೆಗೆದು ಅರಹುನಯನವ ತೆರೆದು ಪರಮ ಭಾವನೆ ಬಲಿದು ವರ ಭಕುತಿಗಳ ಜಡಿದು ತರಣೋಪಾಯವ ಕೂಡು ಹರಿಯ ಸೇವೆಯ ಮಾಡು ನೆರೆ ಸಾಧು ಸಂಗ ಬೇಡು ಸುರಸ ಬೋಧವ ಕೇಳು ಸರಕುಮಾತನೆ ಕೀಳು ಧರಿಯೊಳಗ ಸಾರ್ಥಕಲಿ ಪರಿಬಾಳುತಲಿರಲಿ ಗುರು ಮಹಿಪತಿಸ್ವಾಮಿ ಹೊರೆವದಯದಲಿ ನೇಮಿ ಶರಣ ಜನರಂತರ್ಯಾಮೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬನ್ನ ಮಂದ ಸಿಂಧು ವಕ್ತ್ರ ಭಾಗವತ ಸಿರಿ ಪಾದ ಕರ ಕಮಲ ಭಾರತೀಶ ಭವ ಕಾಲ ವಜ್ರ ವಿಧಿ ಸಖನೋ ಗುರುರಾಜ ವಾದಿಗಳ ಕುಲವದ್ದು ದಶರಥ ಹೇಯನೆನಿಸಿದ ಬೌದ್ಧದೇವನ ಗುರುರಾಜ ಶ್ರದ್ಧೆಯಿಂದಲಿ ಸಿದ್ಧಪಡಿಸುವದೆಂದು ಗುರುರಾಜ ಜನರ ಬುದ್ಧಿ ಭೇದವ ಮಾಡಿ ದಿವದಿ ಕದ್ದು ದೇವನಭಾವದಿಂದಲಿ ಪೂಜಿಸಲು ನೀ ಗುರುರಾಜಅದು ಬಲು ಸುದ್ದಿಯ ತಿಳಿಯಲು ಸದ್ದು ಇಲ್ಲದೆ ಬೌದ್ಧ ಜನರು ಬಂದು ನೋಡೆ ಗುರುರಾಜ ತಿದ್ದಿ ವಿಗ್ರಹ ತೋರಿ ಸರ್ವ ಸುರರನು ಸಲಹಿ ಅಸುರರ ವದ್ದ ಪಲ್ಗಳ ಮುರಿದು ಮೆರೆದೇ ಗುರುರಾಜ ನೀ ಪದ್ಮಜಾತನ ಪದವಿ ಪೊಂದುವಿ ಎಂದು ನಿನ್ನಯಪದ್ಮಪಾದಕೆ ಬಿದ್ದೆನಾ ಗುರುರಾಜ ನೀ ಗುರು ಮಧ್ವವಲ್ಲಭನಿಂದ ರಮಣವ ಕೊಂಡು ಭಜಿಸುವೆ ಗುರುರಾಜ ಸಿದ್ಧ ಶೇಖರ ಸೋಮ ವಂದ್ಯನೊ ನೀ ಗುರುರಾಜ ಹರುಷದಿಂದಲಿ ನಿನ್ನ ದರುಶನವಾದ ದಿನದಾರಭ್ಯ ಗುರುರಾಜ ಮನದಲಿ ಮಿಂಚಿನಂತೆ ಪೊಳೆವೊ ಸುಂದರ ಸುಂದರಾಂಗಿಯ ಸಹಿತ ವಂದಿಪೆನೊ ಗುರುರಾಜ
--------------
ಗುರುತಂದೆವರದಗೋಪಾಲವಿಠಲರು
ಬರತಾರಂತ್ಹೇಳೆ ಬಾಲೆಕರೆಯಲು ಬಾಯಿಮಾತಿನಲೆಬರತಾರಂತ್ಹೇಳೆ ಪ. ರಂಗನ ಪಾದಕಮಲ ಭೃಂಗಳೆ ದ್ರೌಪದಿಮಂಗಳಾದೇವಿ ರುಕ್ಮಿಣಿ ಸಖಿಯೆಮಂಗಳಾದೇವಿ ರುಕ್ಮಿಣಿ ಕರೆಯಲು ಅಂಗಳದೊಳಗೆ ಬರುತಾಳೆ ಸಖಿಯೆ 1 ಇಂದಿರೇಶನೆಂಬೊ ಚಂದ್ರಗೆಚಕೋರ ಕುಂದದಂಥವಳ ಸುಭದ್ರಾ ಸಖಿಯೆಕುಂದದಂಥವಳೆ ಸುಭದ್ರೆ ಕರೆಯಲೆ ಬಂದಳು ಭಾಮೆ ಎದುರಲಿ ಸಖಿಯೆ 2 ನಗ ಧರನ ಮುಖವೆಂಬೊ ಮುಗಿಲಿಗೆನವಿಲಸುಗಣಿರೈವರ ಮಡದಿಯರುಸುಗುಣರೈವರ ಮಡದಿಯರು ಕರೆಯಲುಮೂರ್ಜಗದ ಮೋಹನೆಯರು ಬರ್ತಾರೆ ಸಖಿಯೆ3 ಹರಿಯಾಗ್ರಜ ತನ್ನ ಹಿರಿಯರ ಕೂಡಿಕೊಂಡುಬರುವನು ಪರಮ ಹರುಷದಿ ಸಖಿಯೆಬರುವನು ಪರಮ ಹರುಷದಿ ಈ ಮಾತುದೊರೆಗಳಿಗೆ ಹೇಳೆ ವಿನಯದಿ ಸಖಿಯೆ4 ಎಲ್ಲರೂ ಮುತ್ತುರತ್ನ ಝಲ್ಲಿ ವಸ್ತ್ರಗಳಿಟ್ಟುಚಲುವ ಪ್ರದ್ಯುಮ್ನನ ಒಡಗೂಡಿ ಸಖಿಯೆಚಲುವ ಪ್ರದ್ಯುಮ್ನನ ಒಡಗೂಡಿ ಐವರಿಗೆ ಮಲ್ಲಿಗೆ ತೂರಾಡಿ ಕರೆಯಲಿ ಸಖಿಯೆ5 ಅಷ್ಟೂರು ಬಗೆಬಗೆ ಪಟ್ಟಾವಳಿಯನುಟ್ಟುಧಿಟ್ಟ ಸಾಂಬನ ಒಡಗೂಡಿಧಿಟ್ಟ ಸಾಂಬನ ಒಡಗೂಡಿ ಐವರಿಗೆ ಬುಕ್ಕಿಟ್ಟು ತೊರ್ಯಾಡಿ ಕರೆಯಲಿ ಸಖಿಯೆ6 ಮಾನಿನಿ ಮಾನಿನಿ ಸಹಿತಾಗಿ ರಮಿಅರಸುಮಾನದಲಿ ಐವರನ ಕರೆಸುವ ಸಖಿಯೆ7
--------------
ಗಲಗಲಿಅವ್ವನವರು
ಬರಹೇಳಮ್ಮಾ ಭಾವೇ ಮನೆಗೆ ಬಿರದಂಕ ಹರಿಯಾ| ಚರಣವನ್ನು ಗಾಣದೆನ್ನ ಚಿತ್ರನೆಲೆ ಗೊಳ್ಳದಮ್ಮಾ ಪ ಬಾಲೆಕೇಳೆ ಕುಂತಳೆ ಬೇಸರ ವಿದೇನೇ| ಪಾಲಗಡಲ ಮನೆಯಾ ಬಿಟ್ಟು ಪವನಾಹಾರನ ಪರ್ಯಂಕವನು| ಜಾಳಿಸಿ ತಾನ್ಯಾಕ ಪೋದನೇ ಜಲರುಹ ನಾಭ| ಕಾಲಿಲಲ್ಲದವನಾಗಿ ಕೊಂದು ತಮನನೀಗಿ| ಮ್ಯಾಲಗಿರಿಯ ಪೊತ್ತ ಮರರಿಗ ಮೃತವಿತ್ತಾ| ಭೂಲಲನೆ ಬಡಿಸಿ ಭೂವರಾಹೆನಿಸಿ| ಬಾಲಕರಿಯಲು ರೂಪ ಬೆಡಗಾ ವಿಡಿಸು 1 ಉಡುರಾಜದವನೆ ಕೆಳದೀ ಉನ್ನತಿಯ ನೋಡೇ| ಷಡ್ಗುಣೈಶ್ವರ್ಯವುಳ್ಳಾ ಸುರಮುನಿಸೇವಿತ ಪಾದಾ| ಬೇಡಿ ಭಾಗ್ಯವ ನೀಡುವ ಬಲುದೊರೆ ತಾನಾಗಿ| ಬಡಹಾರುವನಂತೆ ಭೂಮಿ ಬೇಡಿದನಂತೆ| ಕೊಡಲಿಪಿಡಿದರೆ ಸಕುಲ ಮಾಡಿದ ನಾಶಾ ವಡನೆ ವಾನರ ಸಂಗ ವಿರಹರಿಸಿ ಸುರತುಂಗಾ| ತುಡುಗತನದಿ ಬೆಣ್ಣೆತಿನ್ನುವರೆ ರನ್ನೆ 2 ಕರಿರಾಜ ಗಾಮಿನೀ ಕಿರೀಟ ಕುಂಡಲದಾ ಶಿವತ್ವಕುಂಡಲದಿಂದಾ| ಪರಮಪುರಷದೇವನು ಪೀತಾಂಬರಧಾರೀ| ಬರಿಯ ಬತ್ತೆಲೆಯಾಡಿ ಬೌದ್ಯರೋಳಗ ಕೂಡೀ| ತುರಗೀರಿಯ ವನರ ತುಳಿಸುತ ಸುರವರ ಮೊರೆಗೇಳಿ ಬಂದನು ಮನದೊಳು ನಿಂದನು| ಗುರು ಮಹಿಪತಿ ಪ್ರೀಯಾ ಗುಣಗಣನಿಲಯಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬರಿದೆ ಹಾಳು ಶರೀರ ಬಾಳು ಅರಿದಡಿದು ಮಹ ಟೊಳ್ಳು ಟೊಳ್ಳು ಪ ನಾರಿಪುರುಷರು ಮಾರಕದನದಿಂ ಸೇರಿ ಸುಖಿಸಲು ಜಾರಿದಿಂದ್ರಿಯ ಕಾರಣಾಗಿ ಮೂರುದಿನದಿ ತೋರಿ ಪೋಗ್ವಸಾರಮಯ 1 ಮಿಡುಮಿಡುಕಿ ಒಡಲಿಗಾಗಿ ದುಡಿದು ಮೂಢರಡಿಯ ಪಿಡಿದು ಬಿಡದೆ ರೋಗದೊಡನೆ ನರಳಿ ಪಡುತಕಷ್ಟ ಕಡೆಗೆ ಸಾಯ್ವ 2 ಪರರಸೇವೆ ನಿರುತಗೈದು ಪರಕೆ ಇಹ್ಯಕೆ ತಿರುಗಿ ತಿರುಗಿ ಗರುವದಿಂದ ಚರಿಸಿ ನಮ್ಮ ಸಿರಿಯರಾಮನ ಚರಣಕ್ಹೊಂದದ 3
--------------
ರಾಮದಾಸರು
ಬರುವ ಸಂಭ್ರಮವನ್ನು ನೋಡಿ ಪರಮ ಕರುಣಾಕರೆಯ ಪಾಡಿ ಪ. ಹೆದ್ದಾರಿ ಮಧ್ಯದಿ ಸ್ವಾರಿ ಬರುತಾ ದಾರಿದ್ರ್ಯ ದೈನ್ಯವೋಡಿಸುತಾ ಸ್ವರ್ಣಧಾರೆಯನು ಸರ್ವತ್ರ ತರುತಾ ಸಾರಿಸಾರಿಗೆ ವರವ ಕೊಡುತ 1 ಶುಕ್ಲನಭಮಾಸಭೃಗುವಾಸರದಲಿ ಶುಭಲಗ್ನಸಂಜೆ ವೇಳ್ಯದಲಿ ವಿಭವದಲಿಪೂಜಿಸುವುದೆಂದು ವಲ್ಲಭೆಗೆಂದ ವಚನ ತಿಳಿದಿಂದು 2 ಲಕ್ಷ್ಮೀದೇವಿಯನು ತನ್ನ ದಾಸರನು ಮೀಸಲಳಿಯದ ಸೌಖ್ಯಗಳನು ಮೆರೆವುದನು 3
--------------
ತುಪಾಕಿ ವೆಂಕಟರಮಣಾಚಾರ್ಯ
ಬಲು ತಿಗಡೋ ಇದು ಬಲು ತಿಗಡೋ ಗಲಿಬಿಲಿ ಸಂಸಾರ ತಾರತಿಗಡೋ ಪ ತಿಳಿಯದರು ಎಲ್ಲ ಅಳಿದರೊಳಗೆ ಬಿದ್ದು ತಿಳಿದವರು ಗೆಲಿದರೀಮೊಲೆಮುಡಿಯೊ ಅ.ಪ ಅಲಕುಮಲಕು ಇದು ಬಲುತಂಟೋ ಜರ ಸಿಲುಕಲು ಬೀಳ್ವುದು ಕಗ್ಗಂಟೋ ಸೆಳೆದು ಮಾಯದಿಂ ಒಳಗೆ ಹಾಕಿಕೊಂಡ ಬಳಿಕ ಬಿಚ್ಚದಿದು ಬ್ರಹ್ಮಗಂಟೋ 1 ಎಣಿಕೆಗೆ ಮೀರಿದ ಹಳೆ ಗುದ್ದೋ ಇದು ಘನ ಘನ ಜನರನು ನುಂಗಿದ್ದೋ ಗುಣಿಸಿ ನೋಡದೆ ಮರ್ತು ಹಣಿಕಿಹಾಕಲಿದು ಕುಣಿ ಕುಣಿಸಿ ಕೊಲ್ಲುವ ಮೆಚ್ಚು ಮದ್ದೋ 2 ಆರಿಗೆ ತಿಳಿಯದು ಇದರ್ಹೊಲಬೋ ಜಗ ದ್ಹಾರಿಬಿದ್ದರಪ್ಪ ಸುತ್ತಿ ಮೆಚ್ಚೋ ಧೀರ ಶ್ರೀರಾಮನ ಚಾರುಚರಣಕ್ಕೆ ಸೇರಿದವರಿಗೊಂದೆ ಬಲು ಸುಲಭೋ 3
--------------
ರಾಮದಾಸರು