ಒಟ್ಟು 6145 ಕಡೆಗಳಲ್ಲಿ , 127 ದಾಸರು , 3945 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪೂರ್ವ ಜನ್ಮದಲಿ ನಾ ಮಾಡಿದ ಕರ್ಮದಿಂಉರ್ವಿಯೊಳು ಜನಿಸಿದೆನೊ ಕೃಷ್ಣ ಪ ಕಾರುಣ್ಯನಿಧಿ ಎನ್ನ ಕಾಯಬೇಕಯ್ಯ ಹರಿವಾರಿಜನಾಭನೆ ಮುದ್ದುಕೃಷ್ಣಅ ಪುಟ್ಟಿದಂದಿನಾರಭ್ಯ ಸುಖವೆಂಬುವುದನರಿಯೆಕಷ್ಟ ಪಟ್ಟೆನು ಕೇಳೋ ಕೃಷ್ಣತೊಟ್ಟಿಲ ಶಿಶು ತಾಯ್ಗೆ ಬಾಯ್ಬಿಟ್ಟ ತೆರದಿ ಕಂ-ಗೆಟ್ಟು ಶೋಕಿಪೆನೋ ಕೃಷ್ಣಮುಟ್ಟಲಮ್ಮರು ಎನ್ನ ಬಂಧುಗಳು ಕಂಡರೆಅಟ್ಟಿ ಬಡಿವುತಲಿಹರೊ ಕೃಷ್ಣದಟ್ಟ ದಾರಿದ್ರ್ಯವನು ಪರಿಹರಿಸದಿದ್ದರೆಮುಟ್ಟುವುದು ದೂರು ನಿನಗೆ ಕೃಷ್ಣ1 ಕಾಶಿಯಾ ವಾಸವನು ಬಯಸಿ ಬಹು ದಿನದಿಂದಘಾಸಿ ಪಟ್ಟೆನು ನಾನು ಕೃಷ್ಣಈ ಶರೀರವನಾಂತು ಹೀನಾಯಗೊಂಡೆನುನೀ ಸಲಹಬೇಕಯ್ಯ ಕೃಷ್ಣಹೇಸಿಗೆಯ ಸಂಸಾರದಿ ನೀನಿಂತು ಮಾಯಾಪಾಶದೊಳು ಬಿಗಿವರೇ ಕೃಷ್ಣಘಾಸಿ ಮಾಡದೆ ಎನ್ನ ಪಾಪವನು ಪರಿಹರಿಸೊಸಾಸಿರನಾಮದ ಮುದ್ದುಕೃಷ್ಣ 2 ಲೋಕದೊಳು ಎನ್ನಂಥ ಪಾಪಿಗಳು ಉಂಟೆಂದುನೀ ಕೇಳಿ ಬಲ್ಲೆಯಾ ಕೃಷ್ಣಸಾಕೇಳು ಎನಗೊಂದು ಗತಿಯ ತೋರಿಸಿ ಸದ್ವಿವೇಕಿಯನು ಮಾಡಯ್ಯ ಕೃಷ್ಣರಾಕೇಂದು ಮುಖಿ ದ್ರೌಪದಿಯ ಮಾನವನು ಕಾಯ್ದುಆಕೆಗಕ್ಷಯವಿತ್ತೆ ಕೃಷ್ಣನಾ ಕಾಣುವಂದದಲಿ ಉಡುಪಿಯಾದಿಕೇಶವಏಕೆ ದರಶುನವೀಯೆ ಕೃಷ್ಣ 3
--------------
ಕನಕದಾಸ
ಪೆಣ್ಣೆಂದರಿದು ಮೆಚ್ಚಿ ಕೆಡಬೇಡ ನಿನ್ನ ತಿನ್ನುವ ಮರಿಗಿದು ತಿಳಿ ಮೂಢ ಪ ತಾಯಾಗಿ ಮೊದಲು ನಿನ್ನ್ಹಡೆದಿಹ್ಯದು ಪುನ: ಮಾಯಾಗಿ ಬೆನ್ನ್ಹತ್ತಿ ಸುಡುತಿಹ್ಯದು ಬಾಯೊಳು ಮೊಲೆಯಿಟ್ಟು ಬೆಳೆಸಿಹ್ಯದು ಮತ್ತು ಕೈಯೊಳು ಮೊಲೆಯಿಟ್ಟು ಕೊಲುತಿಹ್ಯದು 1 ಸುತನೆಂದು ಮುದ್ದಿಟ್ಟು ಒಲುತಿಹ್ಯದು ಮತ್ತು ಪತಿಯೆಂದು ನಿಜಮತಿ ಸುಲಿತಿಹ್ಯದು ರತಿಗೊಟ್ಟು ಅತಿಮೋಹದಾಡುವುದು ನಿನ್ನ ಗತಿಗೆಡಿಸಿ ಜವಗೀಡು ಮಾಡುವುದು 2 ಕಣ್ಣುಸನ್ನೆಯ ಮಾಡಿ ಕರಿತಿಹ್ಯದು ಬಹು ಬಣ್ಣ ಮಾತಾಡಿ ಸೋಲಿಪುದು ಕುನ್ನಿಯಂತೆ ನಿನ್ನ ಮಾಡುವುದು ಬಲು ಬನ್ನಬಡಿಸಿ ಬಾಯಿ ಬಿಡಿಸುವುದು 3 ಶ್ವಾನನಂದದಿ ಕೂಗಲ್ಹಚ್ಚುವುದು ಮಾನಾಭಿಮಾನ ತೊರೆಸುವುದು ನಿಜ ಜ್ಞಾನಕೆಡಿಸಿ ಪಾಪದ್ಹಾಕುವುದು 4 ತಂದ ಪುಣ್ಯವನೆಲ್ಲ ಸೆಳೆತಿಹ್ಯದು ಬಲು ಮಂದನೆನಿಸಿ ಕುಣಿಸ್ಯಾಡುವುದು ತಂದೆ ಶ್ರೀರಾಮಪ್ರೇಮ ಕೆಡಿಸುವುದು ನಿಜಾ ನಂದ ಮುಕ್ತಿಗೆ ಕಿಡಿ ಹಾಕುವುದು 5
--------------
ರಾಮದಾಸರು
ಪೊಗಳಲರಿಯೆನೆ ಲೋಕಮಾತೇ ನಿನ್ನ ಸೊಗಸಾದ ರೂಪುರೇಖೆಯ ಸಿಂಧುಜಾತೇ ನಿಗಮವಿಖ್ಯಾತೇ ಪ ಅಳಕ ನಿಚಯವು ಇಂದ್ರನೀಲಗಳು ತುಂಬಿಗಳು ತಳಪುಗಳು ಯೆಸೆವ ನಳಿನಗಳು ಬಾಳೆಗಳು ಚೆಲುವಹಿ ಸುನಾಸಿಕವು ಅಲಕೆ ಸುಮವು ಚಂಪಕವು ಅಲರ್ವಿಲ್ಲಿನ ಧನುವೋ ಪುರ್ಬುಗಳೋ ಪೊಳೆವರದನದಸಾಲುಗಳುಕಳಸಗಳೋ ಕುಂಡಲಗಳೋ ವಿಲಸದಧರವು ಬಿಂಬಫಲವೋ ನವವಿದ್ರುಮವೋ ಅಳವಟ್ಟ ಸವಿನುಡಿಯು ಗಿಣಿಯ ಸೋಲಿಪ ಪರಿಯೋ ಕಳೆ ಪೆರ್ಚಿದಾನನವೋ ಶಶಿಯೋ ಭಳಿರೆ ಮಳಯಜಗಂಧಿನಿ ಮಹೇಶರಿಪು ಜನನೀ 1 ಗಳವು ಶಂಖವು ಮೆರೆವ ಕದಪುಗಳು ಮುಖರಗಳು ಕುಸುಮ ಮಾಲೆಗಳು ಸುಲಲಿತವಯವವೋ ಲತಾವಳಿಗಳ ತರಂಗವೋ ತಳಿವ ಪೂಜಡೆಯೋ ಸುಲಿಪಲ್ಲವವೋ ತೊಳಗುವ ತೊಡೆಯೆನಲೋ ಸಲಿಲಜಾಗಾರೇ ಸಮ್ಮೋಹನಾಕಾರೇ ಸೌಂದರ್ಯಭರಿತೆ 2 ವರಜಂಘೆಗಳು ಪಂಚಶರನ ಶರಧಿಗಳೋ ಸರಸೀರುಹ ಕೆಂದಳಿರೋ ಚರಣಗಳು ನಖಗಳು ಸುರುಚಿರಾಂಬಕೀ ದಯಾಕಾರೇ ಶುಭಚರಿತೆ ವಿಖ್ಯಾತೆ ಪುರಹರ ಸುರೇಶ್ವರ ಸುಪೂಜಿತಾಂಘ್ರಿಸರೋಜೇ ಭಕ್ತ ಮಂದಾರೇ ವರವೇಲಾನಗರವಾಸಿ ವೈಕುಂಠಚನ್ನಿಗರಾಯನರಸಿ ಗುಣರಾಸಿ ದುರಿತಾಸಿ ನಮೋ ಪರಮಪದದಾಯಕಿಯೆ ಸೌಮ್ಯನಾಯಕಿಯೆ 3
--------------
ಬೇಲೂರು ವೈಕುಂಠದಾಸರು
ಪೊರಿಯದಲಿರುವರೇನು ಶ್ರೀಹರಿ ನೀನು ಪ ನಿರುತ ನಿನ್ನನಾನು ಸ್ಮರಿಸುತಲಿರುವೆನು ಕೌಸ್ತುಭ ಭೂಷಾ ಹರುಷದಿ ಮಂಜುಭಾಷಾ 1 ಭವಾರ್ಣವ ಪಾರಗಾಣಿಸೋ ದೇವಾ ಸಾರಸದಲನೇತ್ರ ನೀರದ ನಿಭಗಾತ್ರ 2 ದಿನಕರ ಕೋಟಿ ತೇಜ ಘನ ಗರುಡಧ್ವಜ ವನಧಿ ಕನ್ಯಾಧವ 3 ವರಗಿರಿಧರ ಕರುಣಾಕರ ಶುಭವದನ ಶರಣರ ಕಾಯುವಂತಹ ಬಿರುದು ನಿನ್ನದೊ ಅನಂತ 4 ಪರಮ ಪಾವನನಾದ ತರುಳ ಪ್ರಹ್ಲಾದಗೊಲಿದ ನರಹರಿ `ಹೆನ್ನೆಯ ಪುರನಿಲಯ ಪ್ರಮೇಯ 5
--------------
ಹೆನ್ನೆರಂಗದಾಸರು
ಪೊರೆ ದೊರೆಯೆ ಪ. ನಿನ್ನ ಮಾಯ ಅ.ಪ. ಎಷ್ಟು ಛಲವೋ ಎನ್ನಿಂದಲಿ ಸೇವೆಯನು ಕೈಕೊಳ್ಳು ಇನ್ನು ಶ್ರೇಷ್ಠರಾದ ಶ್ರೀ ಗುರುಗಳ ಆಜ್ಞೆಯಲಿ ಬಂಧಿಸಿ ಎನ್ನಿಲ್ಲಿ ಮಹ ಮಹಿಮನೊ ನೀನು ಗುಟ್ಟು ಪೇಳಲು ಎನ್ನಿಂದಲಿ ಅಳವೇ ನಿತ್ಯದಿ ನಿನ್ನ ನೆನವೆ 1 ನಾನಾ ರೂಪ ಧ್ಯಾನದಲಿ ಬಂದ್ಯೊ ಎನ್ನಲಿ ನಿಂದ್ಯೊ ಮಾನವ ಜನ್ಮ ಸಾರ್ಥಕವೆನಿಸಿದ್ಯೊ ಶ್ರೀ ಗುರುದಯ ನೀಡ್ದ್ಯೊ ನಿನ್ನ ಪಾದದಲಿ ಮಮತೆ ಸಾನುರಾಗದಿ ಕೊಟ್ಟು ಎನ್ನ ಸಲಹೊ ಬಿಡೆನು ನಿನ್ನೆಲವೊ 2 ಮಚ್ಛಕೂರ್ಮ ಹರಿ ಸ್ವಚ್ಛ ವರಹರೂಪ ನರಹರಿ ಪ್ರತಾಪ ಸ್ವಚ್ಛಮನದಲಿಹ ಬಲಿಯನೆ ಬಂಧಿಸಿದ್ಯೊ ರಾಜರ ಮರ್ಧಿಸಿದ್ಯೊ ಅಚ್ಚ ಜೀವೋತ್ತಮಗಜನ ಪದವನಿತ್ಯೊ ಗೋಪಿಗೆ ಮುದವಿತ್ಯೊ ಬಿಚ್ಚಿ ವಸನವ ಹಯವನೇರಿದ್ಯಲ್ಲಾ ಗೋಪಾಲಕೃಷ್ಣವಿಠಲಾ 3
--------------
ಅಂಬಾಬಾಯಿ
ಪೊರೆ ಸುರೇಶ ಶ್ರೀಶ ಶ್ರೀನಿವಾಸ ದುರಿತವಿನಾಶ ಪರಮಪ್ರಕಾಶ ಪ ಅನುದಿನ ನಿಮ್ಮಯ ನೆನವಿನಘನಸುಖ ಕರುಣಿಸಿ ಎನ್ನ ಕನಿಕರದೊಡನೆ 1 ಚಿಂತೆನಿವಾರಣ ಚಿಂತೆನೀಗಿಸಿ ಎನ್ನ ಸಂತತದಿಂಪೊರೆ ಸಂತರ ಪ್ರಿಯಕರ 2 ಹರಣಹೋದರು ನಿಮ್ಮ ಚರಣಭಕ್ತಿಯನು ಮರೆಯದದಟ ಮಿಗೆ ಕರುಣಿ ಶ್ರೀರಾಮ 3
--------------
ರಾಮದಾಸರು
ಪೊರೆಯದಿರುವರೇ _ ಶ್ರೀ ರಮಣಾ ಪ ದುರಿತಗಜಕೆ ನೀ ಪಂಚಾನನಾ ಅ.ಪ. ಸಿರಿಯ ಮದದಿ ನಾನರಿಯದೆ ಪೋದರೆ ಗರುಡಗಮನ ನೀ ಮರೆತುಬಿಡುವರೇ ಕರುಣಶರಧಿ ಸರಿ ಬಿರುದು ಪೊಳ್ಳಾಗದೇ ಚರಣಪಿಡಿವೆ ಪೊರೆ ಮರುತನೊಡೆಯ ಹರಿ1 ಪಾತಕಿ ಎಂಬುವ ನೀತಿಯನುಡಿದೊಡೆ ಪೂತರಮಾಡುವ ಖ್ಯಾತಿಯ ಬಿಡುವೆಯ ನಾಥನೆ ನಂಬಿದೆ ಕಾತರ ಪಡುತಿಹೆ ಪ್ರೀತಿಲಿ ಕಾಣಿಸು ಆರ್ತಿವಿದೂರ 2 ನಡಿಯುವ ಚರಣವು ಎಡುವುದು ಸಹಜವೆ ಮೃಡ ಭೃಗು ಭೀಷ್ಮರು ದುಡುಕಲಿಲ್ಲೆ ದೊರೆ ಮಿಡಕಿ ನಡುಗುತಿಹೆ ನಡೆವುದು ಜಗಬಿಡೆ ಕಡಲಶಯನ ಪಿಡಿ ಬಿಡದೆ ಕೊಡುತ ರತಿ 3 ಸಿರಿವಿಧಿ ಶಿವನುತ ಸ್ವರತ ಸ್ವತಂತ್ರನೆ ಶರಣರ ಪೊರೆಯುವ ವರಗುಣ ಭೂಷಣ ಅರಿಯೆನುಪಾಯವ ಶರಣುಶರಣೈಯ ಪರಮಪುರುಷ ಭಗಸರಸದಿ ನಲಿನಲಿ 4 ಸಾಕುವ ಬಿಂಬನೆ ನೂಕಿದೆ ಯಾತಕೆ ಹಾಕುತ ಮಂಕನು ಏಕಾಯತನ ನಾಕರೊಡೆಯ ಭವನೂಕುತ ಬೇಗನೆ ಸ್ವೀಕರಿಸೆನ್ನನು ಶ್ರೀ ಕೃಷ್ಣವಿಠಲಾ 5
--------------
ಕೃಷ್ಣವಿಠಲದಾಸರು
ಪೊರೆಯುವಳು ದೇವಿ ಪೊರೆಯುವಳು|| ಕರುಣದಿಂದ ನಮ್ಮ ಪೊರೆಯುವಳು ಪ ಶರಣರಿಗೊಲಿದವರಿಷ್ಟವ ಸಲಿಸುವ| ಪರಮಪಾವನೆ ದೇವಿ ಪೊರೆಯುವಳು ಅ ಪ ತೋಷದಿಂದಲವಳಾಶ್ರಿತ ಜನರಭಿ| ಲಾಷೆಯ ಸಲಿಸುತ ಪೊರೆಯುವಳು|| ವಾಸವಾದಿ ಸುರವಂದಿತೆ ಶ್ರೀ ಪರ| ಮೇಶ್ವರಿದೇವಿಯು ಪೊರೆಯುವಳು 1 ಮಹಿಷಾಸುರನನು ಮಹಿಯೊಳು ಕೆಡಹಿದ| ಮಹಿಷಮರ್ದಿನಿದೇವಿ ಪೊರೆಯುವಳು|| ಮಹಿಮೆಯದೋರುತ ಖಳ ಧೂಮ್ರಾಕ್ಷನ| ದಹಿಸುತ ಮಹಿಯನು ಪೊರೆದವಳು 2 ಚಂಡ ಮುಂಡ ಖಳ ತಂಡವಳಿಸಿ ಬ್ರ | ಹ್ಮಾಂಡದ ಭಾರವ ಕಳೆದವಳು|| ರುಂಡವ ತರಿಯುತ ಚೆಂಡಾಡಿದ ಶ್ರೀ| ಚಾಮುಂಡೇಶ್ವರಿ ಪೊರೆಯುವಳು 3 ಭಕ್ತರ ಪೊರೆಯಲು ರಕ್ತಬೀಜಾಖ್ಯನ| ರಕ್ತ ಪಾನÀವನು ಗೈದವಳು|| ಯುಕ್ತಿಯಿಂದಲಾ ನಕ್ತಂಚರನನು| ಶಕ್ತಿಸ್ವರೂಪಿಣಿ ತರಿದವಳು 4 ಶುಂಭ ನಿಶುಂಭರ ವಧಿಸಿದ ಶ್ರೀ ಜಗ| ದಂಬಾದೇವಿಯು ಪೊರೆಯುವಳು|| ಅಂಬುಜಲೋಚನೆ ಶಂಭುಮನೋಹರೆ | ಇಂಬುಗೊಡುತ ನಮ್ಮ ಪೊರೆಯುವಳು 5 ದುರುಳರ ಬಾಧೆಗೆ ಬೆದರುತ ಸುರತತಿ | ಮೊರೆಯಿಡಲಭಯವನಿತ್ತವಳು|| ಅರುಣಾಸುರನ ಸಂಹರಿಸುತ ನಂದಿನಿ| ನದಿಯೊಳು ಶರಣರಿಗೊಲಿದವಳು 6 ಪರಿಪರಿ ವಿಧದಲಿ ಧರಣಿಯ ಭಾರವ ಪರಿಹರಿಸುತಲಿ ಪೊರೆದವಳು|| ಪರಮಕೃಪಾಕರಿ ಶ್ರೀ ಜಗದೀಶ್ವರಿ ಶರಣರಾದ ನಮ್ಮ ಪೊರೆಯುವಳು 7 ಶಂಕರಿ ಶುಭಕರಿ ಕಿಂಕರಪ್ರಿಯಕರಿ|| ಪಂಕಜಲೋಚನೆ ಪೊರೆಯುವಳು|| ಶಂಖಚಕ್ರಾಂಕಿತೆ ಶ್ರೀ ದುರ್ಗಾಂಬಿಕೆ| ಕಿಂಕರರೆಮ್ಮನು ಪೊರೆಯುವಳು 8 ಕೈಟಭಾದಿ ಖಳಸಂಕುಲವಳಿಸಿದ| ನಿಟಿಲಾಂಬಕಿ ಶಿವೆ ಪೊರೆಯುವಳು|| ಜಟಾಮಕುಟ ಸುರತಟನೀಧರಸತಿ| ಕಟಿಲಪುರೇಶ್ವರಿ ಪೊರೆಯುವಳು9
--------------
ವೆಂಕಟ್‍ರಾವ್
ಪೊರೇ ಶೈಲಜಾಪತೇ ಶಿವಶಂಕರ ಶರಣಾಗತ ಕ್ಷೇಮಂಕರ ಪ ಕರಗುವೆ ಹಿತರನ್ನು ಕಾಣೆನು 1 ಭವಸಾಗರ ಸಂತಾರಕ 2 ಭಂಜಿಪ ನಾಥರ ಕಾಣೆ ಭೂತೇಶನೆ 3 ಕರ ಕಮಲ ಕಮಲಾನುಜ ಕಮಲಾಂಚಿತ 4 ವರಧೇನುನಗರ ಸನ್ನಿವಾಸನೆ 5
--------------
ಬೇಟೆರಾಯ ದೀಕ್ಷಿತರು
ಪೋತರಾಜನಲ್ಲವೋ ನಮ್ಮ ರಂಗ ಪೋತರಾಜನಲ್ಲವೋ ಭೂತಳದೊಳಜಾತನಾಗಿ ಮೆರೆವ ಪ ಏಕಾರಾರ್ಣವದೊಳು ಎಲ್ಲರ ವೊಡಲೊಳು ಸಾಕಿಕೊಳ್ಳುತ ಪೊಂದಲಿಟ್ಟುಕೊಂಡು ಲೋಕನಾಯಕ ಹರಿವಟದೆಲಿಯ ಮೇಲೆ ಮಾಕಾಂತಿಯ ಕೂಡ ಮಲಗಿದ ಗುಣನಿಧಿ 1 ಜಿನಮತದಲಿ ಪುಟ್ಟಿ ದಾನವರು ಸ ಜ್ಜನಕರ್ಮ ಮಾಡುತಲಿರೆ ವೇಗಾ ಅನಿಮಿಷರಾಡಿದ ಮಾತಿಗೆ ದೈತ್ಯನ ಮನವಂಚಿಸಿ ಉಪದೇಶ ಮಾಡಿದ ಹರಿ2 ನಂದ ವ್ರಜದಲ್ಲಿ ಪೂತಿನಿ ಶಕಟನ್ನ ಗಜ ಮಲ್ಲರ ಸವೆದು ಅಂದವಾಗಿ ಮೆರೆದ ವಿಜಯವಿಠ್ಠಲರೇಯಅಂದು ದೇವಕಿ ಬಾಲಕನಾಗಿ ತೋರಿದಾ 3
--------------
ವಿಜಯದಾಸ
ಪೋದರಯ್ಯ ತೆರಳಿ ಪೋದರು | ಸಾಧುನರಸಿಂಹಾರ್ಯರು ಮಾಧವನ ಮಂದಿರಕೆ ಪ ಶ್ರೀಕರ ಕೃಷ್ಣಾತಟದಿ ಐಕೂರು ಗ್ರಾಮದಿ ನೆಲೆಸಿ | ಏಕೋ ಭಾವದಿಂ ಸದಾ ಶ್ರೀಕಾಂತನ್ನ ಧ್ಯಾನಂಗತರು 1 ಭಾಗವತ ಸಾರೋದ್ಧಾರ ಸತ್‍ಶಿಷ್ಯರಿಗೆ ಸಾರುತ ಸದ್ಭಕ್ತಿಜ್ಞಾನ | ವೈರಾಗ್ಯಮಾರ್ಗವ ತೋರಿ 2 ಮಧ್ವಮತದಿ ಸಿದ್ಧಾಂತ ಪದ್ಧತಿಯನುಸರಿಸಿ | ಸದ್ಧರ್ಮದಿ ನಡೆಸುವ ಪ್ರಸಿದ್ಧ ವಿದ್ವಾಂಸರು 3 ವ್ಯಾಸದಾಸಕೂಟ ಮರ್ಮಲೇಸಾಗಿ ಸಜ್ಜನ ತತಿಗೆ ಬ್ಯಾಸರಿಲ್ಲದಲೆ ಪ್ರತಿವಾಸರುಪದೇಶಿಸುವರು 4 ನಿತ್ಯಗೈವ ಕೃತ್ಯಂಗಳು | ತತ್ವೇಶ್ವರ ದ್ವಾರಾ ಹರಿಗೆ ಚಿತ್ತಪೂರ್ವಕರ್ಪಿಸುವ ಸೋತ್ತುಮರೋತ್ತುಮರು ಲೋಕಕೆ 5 ಅಂತರಂಗದಲ್ಲಿ ಲಯದ ಚಿಂತನೆಯಗೈದು ಮುಕ್ತಿ ಪಂಥವನ್ನೆ ಪಿಡಿದು | ಜ್ಞಾನ ಸಂತತಿಯ ಜಗದಿ ನೆಲೆಸಿ 6 ಯಾವ ಸಂಶಯವ್ಯಾಕೆ ಕೋವಿದವರ್ಯರಾದ | ಭಾವಜ್ಷರ ಮುಖದಿಂದ ದೇವಾಂಶರೆನಿಸಿಕೊಂಡವರು 7 ವ್ಯಯ ಸಂವತ್ಸರಂತ್ಯಮಾಸ | ದ್ವಯತಿಥಿ ಸಿತವರ್ಷ ಹಯಸಪ್ರಸುತನ ವಾರದಿ ತ್ರಯ ಝಾವ ರಜನಿಯಲ್ಲಿ 8 ಆಸನಸ್ಥರರಾಗಿ ನಾಸಿಕಾಗ್ರದಲಿಟ್ಟು ಶ್ವಾಸಮಂತ್ರ ಜ ಪಿಸಿ ಬಿಂಬೋಪಾಸನಗೈವ ಬುಧರು 9 ಸಾಗರಶಯನನ ಧ್ಯಾನ ಯೋಗ ಬಲದಿ ತಿಳಿದು ಭುವಿ ಭೋಗ ತೀರಿತೆಂದು ಕೊಯಿಲು ತಾಗಿದ್ದೊಂದೆ ನೆವನದಿಂದ 10 ಆಶೆಕ್ರೋಧಂಗಳನಳಿದು | ಕ್ಲೇಶಮೋದ ಸಮ ತಿಳಿದು | ಭೂಸುರ ವೃಂದಕೆ ಸುಗ್ರಾಸವಿತ್ತು ತೋಷಿಸುವರು 11 ಹರಿಯಪುರಕೆ ಪೋಪ ಸಮಯ ಹರಿಸು ಬಂದು ಕೃಪ್ಣೆ ಇವರ ಚರಿಯ ನರೆÉದ ಜನಕೆ ತೋರಿ 12 ಸ್ವಾಮಿಶಾಮಸುಂದರನ | ನಾಮದ ಸನ್ಮಹಿಮ ಸತತ | ಪಾಮರ ಜನಕೆ ಪೇಳಿ ಪ್ರೇಮದಿಂ ಸಲಹಿದವರು 13
--------------
ಶಾಮಸುಂದರ ವಿಠಲ
ಪೋಷಿಸು ಎನ್ನಯ ದೋಷಗಳೆಣಿಸದೆ ದಾಸರಾಯ ಶೇಷನಾಮಕನೆ ವಿಶೇಷ ಜ್ಞಾನವ ನೀಡೋ ದಾಸರಾಯ ಪ ಸಂತತ ಕರಪಿಡಿ ಸಂತರೊಡೆಯ ಗುರು ದಾಸರಾಯ ಸಂತೋಷ ತೀರ್ಥರಂತಃ ಕರಣ ಪಾತ್ರ ದಾಸರಾಯ 1 ಚಿಂತಿಪ ಜನರಿಗೆ ಚಿಂತಾಮಣಿತಯ ನೀನೆ ದಾಸರಾಯ ಚಿಂತಿರಹಿತವರ ಚಿಂತಾಮಣಿಯು ನೀನೆ ದಾಸರಾಯ 2 ಚಿಂತ ರಹಿತವರ ಚಿಂತರವೇಲಿವಾಸ ದಾಸರಾಯ ಕದಂಬ ವಿನುತ ದಾಸರಾಯ 3 ಬೆಂಬಿಡದಲೆ ಮನದ್ಹಂಬಲ ಪೂರೈಸು ದಾಸರಾಯ ನಂಬಿದ ದ್ವಿಜರಿಗೆ | ಶಂಭುಗಿರಿಯಲ್ಲಿ ದಾಸರಾಯ 4 ಬಾಂಬೊಳೆ ತೋರಿಸಿ ಸಂಭ್ರಮಗೊಳಿಸಿದ ದಾಸರಾಯ ಹರಿಕೇತು ಹರಿಸುತ ಹರಿಣಾಂಕ ಕುಲಜಾತ ದಾಸರಾಯ 5 ಹರಿಕೇತು ಹರಿಸುತಾದ್ಯರನ ಸಂಹರಿಸಿದ ದಾಸರಾಯ ಹರಿದಾಡುತಿಹ ಮನ | ಹರಿಯಲ್ಲಿ ನಿಲಿಸಯ್ಯದಾಸರಾಯ 6 ಹರಿವೈರಿ ಮತಕರಿ | ಪರಿಪರಿ ಹರಿಸಘು ದಾಸರಾಯ ಪೂರ್ತಿಸುವ ನಿನ್ನ ವಾರ್ತೆಕೇಳಿ ಬಂದೆ ದಾಸರಾಯ 7 ಪಾರ್ಥಸಾರಥಿ ಭವ್ಯದಾಸರಾಯ ಮೂರ್ತಿಯ ಸ್ಥಾಪಿಸಿ ಕೀರ್ತಿಯ ಪಡೆದ ದಾಸರಾಯ 8 ನೇಮನಿಷ್ಟೆಯ ಬಿಟ್ಟು ಪಾಮರನಾದೆನಗೆ ದಾಸರಾಯ ಶ್ರೀಮಧ್ವನಿಗಮಾರ್ಥ | ಪ್ರೇಮದಿ ತಿಳಿಸಯ್ಯ ದಾಸರಾಯ 9 ಕಾಮಾದಿ ಷಡ್ವೈರಿ | ಸ್ತೋಮಾದಿ ಕುಲಿಶನೆ ದಾಸರಾಯ ಕಾಮಿತ ಫಲದಾಯಕ ಶಾಮಸುಂದರ ದೂತ ದಾಸರಾಯ 10
--------------
ಶಾಮಸುಂದರ ವಿಠಲ
ಪೋಷಿಸೆನ್ನ ದಾಸಶ್ರೇಷ್ಠನೆ ವಸುಧಿದೇವ ನಿಕರಪಾಲ ವ್ಯಾಸರಾಯನ ಪ್ರೇಮಪಾತ್ರನೆ ಪ ವೇದಸಾರವಾದ ಕವನಗೈದು ಪ್ರಾಕೃತದಿ ಜಗದಿ ಭೇದಜ್ಷಾನ ತಾರತಮ್ಯ ಬೋಧಿಸಿದ ಸಾಧುಶೀಲ 1 ಜ್ಞಾನಿ ವೀಣಾಪಾಣೆ ದೇವ ಮೌನಿ ದಾನಿ | ಸ ನ್ಮಾನಿ ಗಾನಲೋಲ ದೀನಪಾಲನ 2 ನಂದಗೋಪಕಂದ ಶಾಮಸುಂದರವಿಠಲಗೆ ಪರಮ ಯೆಂದು ಸಾರಿ ಸುಪಥ ತೋರಿ ಮಂದÀರನ್ನು ಪೊರೆದ 3
--------------
ಶಾಮಸುಂದರ ವಿಠಲ
ಪೋಷಿಸೆನ್ನ ವೆಂಕಟೇಶ ಶ್ರೀಶ ಶ್ರೀನಿವಾಸ ಶೇಷಗಿರಿನಿಲಯ ಶ್ರೀ ಇಂದಿರೇಶ ಈಶ ಪ ಹೇಸಿಯಿವನೆಂದೆನುತ ದೂಷಣೆಯ ಮಾಡದಿರು ದೋಷದೂರನೆ ನಿನ್ನ ದಾಸ ನಾನಭವ ದಾಸಜನರ ಮನದುಲ್ಲಾಸದೇವರು ನೀನು ದಾಸನ ಆಸೆಯನು ಪೂರೈಸಿ ಸಲಹಯ್ಯ 1 ಕುನ್ನಿಕುಲದಲಿ ಜನಿಸಿ ಬನ್ನಬಡಲಾರದೆ ಉನ್ನತೋನ್ನತಮಹಿಮ ನಿನ್ನ ಬೆನ್ನು ಬಿದ್ದೆ ಭಿನ್ನತಾರದೆ ಎನಗೆ ನಿನ್ನ ದರ್ಶನವಿತ್ತು ಉನ್ನತಮತಿ ನೀಡಿ ಮನ್ನಿಸಿ ಸಲಹು 2 ನಿತ್ಯ ತವ ಶರಣಜನರುಂಡು ಮಿಕ್ಕ ಪರಮಪ್ರಸಾದ ಶರಣೆಂದು ಚರಣಕ್ಕೆ ಮರೆವೊಕ್ಕೆ ನೆರೆನಂಬಿ ತಿರುಪತೀಶನೆ ಭಕ್ತ ಕರುಣಿ ಶ್ರೀರಾಮ 3
--------------
ರಾಮದಾಸರು
ಪೌರಾಣಿಕ ಕಥನ ಸೃಷ್ಟಿಯಲಿ ಕಡು ದುಷ್ಟ ರಾವಣ ಕಟ್ಟಳೆಯ ಕಂಗೆಡಿಸಲು ಅಷ್ಟರೊಳು ಭಯಪಟ್ಟು ದಿವಿಜರು ಒಟ್ಟುಗೂಡುತ ಸ್ತುತಿಸಲು ಥಟ್ಟನೆ ದಯವಿಟ್ಟು ದಶರಥಪಟ್ಟಮಹಿಷಿಯೊಳುದಿಸಲು ದಿಟ್ಟ ಕೌಶಿಕನಿಷ್ಟಿಯನು ಕೈಗೊಟ್ಟು ಸಲಹಿದ ಶ್ರೇಷ್ಠಧನುಜಘರಟ್ಟಗಾರತಿಯ ಬೆಳಗಿದರು1 ಪಾದರಜದಿಂ ಪೊರೆಯುತ ಸಾಧಿಸಿದ ಧನು ಭೇದಿಸುತ ಹಿತಳಾದ ಸೀತೆಯ ಒಲಿಸುತ ಕ್ರೋಧದಿಂದೆದುರಾದ ಪರಶುವನಾ ದಯಾನಿಧಿ ಗೆಲ್ಲುತ ಸಾಧುಮಾರ್ಗವಿನೋದ ಸೀತಾಹ್ಲಾದ ಪಾಪವಿರೋಧ ದಾನವಸೂದನಗಾರತಿಯ ಬೆಳಗಿದರು 2 ಚಿಕ್ಕ ತಾಯಿಯ ಸೊಕ್ಕುನುಡಿಗತಿಸೌಖ್ಯವನು ಹೋಗಾಡುತ ಘಕ್ಕನನುಜನ ನಿಜಸತಿಯತಾ ಸೌಖ್ಯದಿಂದೊಡಗೂಡುತ ವನಕ್ಕೆ ತಾ ಸಂಚರಿಸುತ ಮಿಕ್ಕಿ ಬಂದಾ ರಕ್ಕಸಿಯ ಕುಚದಿಕ್ಕೆಲವ ಖಂಡಿಸಿದ ಪ್ರಭುಗೆ ಮಾಣಿಕ್ಯದಾರತಿಯ ಬೆಳಗಿದರು 3 ಧೂರ್ತ ಖರತ್ರಿಶಿರಾದಿ ದಾನವ ಮೊತ್ತವನು ಸಂಹರಿಸುತ ದೈತ್ಯಮಾಯಾವೃತ್ತಿಮೃಗವನು ಮತ್ತಕಾಶಿನಿ ಬೇಡುತ ಸತ್ತ್ವನಿಧಿ ಬೆನ್ನಟ್ಟಿ ಸೀತೆಯ ದೈತ್ಯಪತಿ ಕೊಂಡೋಡುತ ಮತ್ತೆ ಕಾಣದೆ ಕೋಪದಿಂದರಸುತ್ತ ಬಂದ ಮಹಾತ್ಮ ರಾಮಗೆ ಮುತ್ತಿನಾರತಿಯ ಬೆಳಗಿದರು 4 ತೋಯಜಾಕ್ಷಿಯ ಸುದ್ದಿ ಪೇಳ್ದ ಜಟಾಯುವಿಗೆ ಗತಿ ತೋರುತ ವಾಯುತನುಜಸಹಾಯದಿಂ ಕಪಿರಾಯ ಸಖ್ಯವ ಮಾಡುತ ನ್ಯಾಯಗರ್ಭಿತ ಸಾಯಕದಿ ಮಹಕಾಯ ವಾಲಿಯ ಕೊಲ್ಲುತ ಪ್ರಾಯಶದಿ ಗಿರಿಯೊಡ್ಡಿ ಶರಧಿಗುಪಾಯದಿಂ ಬಂಧಿಸಿದ ಜಾನಕೀಪ್ರಿಯಗಾರತಿಯ ಬೆಳಗಿದರು 5 ಮನವಿವೇಕವ ನೆನೆದು ಬಂದಾ ಧನುಜಪತಿ ಸೋದರನಿಗೆ ಇನಶಶಿಗಳುಳ್ಳನಕ ಲಂಕಾವನಿಯ ಪಾಲಿಸುತ ಮಿಗೆ ರಣದಿ ರಾವಣಕುಂಭಕರ್ಣರ ಹನನಗೈಯುತ ಲೋಕಕೆ ಸೀತೆಯ ವಿನಯ ಗೈದಗೆ ಮೇರುಗಿರಿನಿಭ ಇಂದ್ರಪುಷ್ಪಕಾವೇರಿ ತಾ ಸಾಕೇತಕೆ ಸೇರಿ ಸಾನುಜರಿಂದ ಧರ್ಮದ ಮೇರೆದಪ್ಪದೆ ಸುಜನಕೆ ಸಾರಸಂಪದವಿತ್ತು ಲೋಕೋದ್ಧಾರನಾಗುತ್ತಖಿಳಕೆ ನೀರಜೇಕ್ಷಣ ಕರುಣಪಾರಾವಾರ ಶರಧೀಗಂಭೀರ ಲಕ್ಷುಮೀ ನಾರಾಯಣ ರೂಪ ಜಯ ಜಯ 7
--------------
ತುಪಾಕಿ ವೆಂಕಟರಮಣಾಚಾರ್ಯ