ಒಟ್ಟು 3635 ಕಡೆಗಳಲ್ಲಿ , 113 ದಾಸರು , 2258 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹನುಮಂತ ಬಲವಂತ ಅತಿ ಗುಣವಂತಾ | ಇನ ಶಶಿ ಶಿಖಿನೇತ್ರ ರೂಪ ಚರಿತ್ರ | ವನಚರ ಪುಂಗವ ಸನಕ ಸನಂದನ | ವಿನುತ ಹರಿಚರಣನನುದಿನ ಜಪಿತಾ ಪ ಗಜ ಕಂಠೀರಾ | ರಾಯ ಕಪಿಗೆ ಹರಿಯಾ | ತೋರಿದ ಸಿರಿಯಾ | ಶ್ರೀಯರಸನ ನಾಮ ಸವಿದ ನಿಸ್ಸೀಮ | ಪ್ರಿಯ್ಯಾದಿಕೊಂಡು ಗುರುತು ಸಾಗರನರಿತು | ಮಾಯಾಛಾಯಾ ಗ್ರೀಯಾ ನೋಯ | ಸಾಯಬಡದ ಸೀತೆಯ ಮುಂದೆ ನಿಂದು | ಕೊಂಡ ಸ | ಮಾಯದ ಲಂಕಿಯ ನ್ಯಾಯವುರಹಿದ ಧೇಯಾಂಜನೇಯಾ 1 ವರ ಕುಂತಿನಂದನಾ ಕಲಿಯ ಭಂಜನಾ | ಉರಗ ಭಂಜನಾ | ಉರಿತಾಪ ಪರಿಹಾರ | ಕರುಣ ಸಾಗರಾ | ದುರುಳ ಕೀಚಕರ ಹಿಡಂಬಕಾಂತಕ | ಕೌರವಾ ಪಾರಾವಾರಾ ಉರಹಿದ ಬಲುಧೀರ ಶರ ಗದಾಧಾರಾ | ಗುರುವರ ಸುತದಿನ | ಕರಜನುವರದೊಳು | ಪರಿ ಪರಿಹರಿಸಿದೆ ಸಮರಾ 2 ಆನಂದತೀರ್ಥನಾಗಿ ಅತಿ ಹರುಷಯೋಗಿ ಕಾನನ ಪರಮತಾ ದಹಿಸಿದ ಖ್ಯಾತಾ | ಭಾನುಕುಲ ಸಾಂದ್ರಾ ಎನಿಸುವ ಚಂದ್ರಾ | ಧ್ಯಾನಾಮೃತ ಪಾನಾ | ಮುಕ್ತಿ ಸೋಪಾನಾ | ಜ್ಞಾನಾಹೀನಾ ದೀನಾ ಜನಾ | ಮಾನಿಸಫಲದಾನಾ ನಿರತ ನಿಧಾನಾ | ಶ್ರೀನಿಧಿ ವಿಜಯವಿಠ್ಠಲ | ಶ್ರೀನಿವಾಸನ ಮಾನಸ ಪೂಜಿಪೆ ಗಾನನ ಮುನಿಗಳ ಆನನಮಣಿ ಪವಮಾನಸೂನು 3
--------------
ವಿಜಯದಾಸ
ಹನುಮಂತ ವಿಠ್ಠಲಾ | ಪೊರೆಯ ಬೇಕಿವಳಾ ಪ ಘನ ಮಹಿಮ ನಿನ್ಹೊರತು | ಅನ್ಯರನು ಕಾಣೇ ಅ.ಪ. ಸ್ವಾಪದಲಿ ಗುರುದರ್ಶ | ಅಂತೆ ಅಂಕಿತ ಪತ್ರತಾ ಪಿಡಿದು ನಿಂತಿಹಳೊ | ಶ್ರೀಪ ಸೀತಾಪತೇ |ಕಾಪಟ್ಯರಹಿತಳನು | ಕೈಪಿಡಿದು ಸಲಹೆಂದುನಾ ಪ್ರಾರ್ಥಿಪೆನೊ ನಿನ್ನಾ | ತಾಪಸ ಸುವಂದ್ಯಾ 1 ಕನ್ಯೆಯಗಭಯದನಾಗಿ | ಮುನ್ನಪತಿ ಸೇವೆಯನುಚೆನ್ನಾಗಿ ದೊರಕಿಸುತ | ಕಾಪಾಡೊ ಹರಿಯೇ |ಅನ್ನಂತ ಮಹಿಮ ಕಾರುಣ್ಯ | ಸಾಗರನೆ ಹರಿನಿನ್ನನೇ ನಂಬಿಹಳೊ | ಭಾವಜ್ಞಮೂರ್ತೇ 2 ಭವ ಶರಧಿ ಸನ್ನುತ ಸ್ವಾಮಿ | ಭೂಮಗುಣ ಧಾಮಾ 3 ಮರುತ ಮತ ತತ್ವಗಳು | ಸ್ಛುರಿಸಲಿವಳಿಗೆ ಹರಿಯೇತರತಮಾತ್ಮಕ ಜ್ಞಾನ | ದರಿವು ವೃದ್ಧಿಸಲೀ |ಹರಿಯ ಸರ್ವೋತ್ತಮತೆ | ಸ್ಥಿರವಾಗಿ ಇವಳೀಗೆಪರಮಸಾಧನ ಮಾರ್ಗ | ಕ್ರಮಿಸುವಂತೆಸಗೋ 4 ಕಾಮಿತಪ್ರದ ದುಷ್ಟ | ಆಮಯವ ಪರಿಹರಿಸಿಈ ಮಹಿಳೆಯುದ್ಧರಿಸೊ | ಸ್ವಾಮಿ ರಾಮಚಂದ್ರಾ |ನಾಮಾಂತ ಇತ್ತುದಕೆ | ಸಾರ್ಥಕವ ಮಾಡೆಂದುಸ್ವಾಮಿ ಗುರು ಗೋವಿಂದ | ವಿಠಲ ಭಿನ್ನವಿಪೆ 5
--------------
ಗುರುಗೋವಿಂದವಿಠಲರು
ಹನುಮಂತಾ | ಮದ್ಗುರುವೆ | ಹನುಮಂತ ಪ ಹನುಮಂತ - ಗುಣಗಣ ನಿಲಯ | ಮುನಿಸನಕಾದಿ ಜನ ಮನಾಲಯ | ಆಹಮನ ಆದೀಂದ್ರಿಯ ನಿಯ | ಮನವನೆ ಮಾಡುತ್ತಅನುನಯದಿಂದಲಿ | ಪಾಲಿಪೆ ಸರ್ವರ ಅ.ಪ. ಅಂಜನೆ ಕುವರನೆ ಹನುಮ | ಚಿಣ್ಣಕಂಜ ಸಖಗೆ ಹಾರ್ದನಮ್ಮಾ | ಇಂದ್ರಸಂಜಯನನ ಹೊಡೆದನಮ್ಮಾ | ಶಿಶುಅಂಜಲಿಲ್ಲವು ನೀ ನೋಡಮ್ಮಾ | ಆಹಸಂಜಯಪಿತ ತನ್ನ | ಶ್ವಾಸ ನಿರೋಧಿಸೆಅಂಜಲು ಮೂರ್ಜಗ | ಕಂಜಾಕ್ಷ ಸಲಹೀದ 1 ರಾಮರ ಭಂಟ ಧೀಮಂತಾ | ಬಲಭೀಮ ಭಯಂಕರ ಅಮಿತಾ | ರೂಪನಾಮಗಳ್ ಪೊಂದುವ ಸತತಾ | ನೋಡುಕಾಮನಯ್ಯನ ಕಾಣ್ವ ನಿರತಾ | ಆಹಭೀಮ ಪ್ರಾಣಾನಂದ | ಮುನಿಯೆಂದು ಕರೆಸುತ್ತಬೊಮ್ಮನ ಪದವಿಯ | ಸಮ್ಮುದದಿ ಪಡೆವಂಥ 2 ಹರಿಯೆ ನೀನು ಪ್ರತಿಬಿಂಬಾ | ಪುರಹರಿಗೆ ನೀನು ಗುರು ಬಿಂಬಾ | ಸುರಾಸುರರ ನೀದಂಡಿಪಾ ಡಿಂಬಾ | ನಿನ್ನವರಣ ವರ್ಣಿಸುವುದು ಗುಂಭಾ | ಆಹಹರ ಮುಖಾದ್ಯರು ನಿನ್ನ | ನಿರುತದಿ ಸುತ್ತಿಸುತ್ತಪರಿಪರಿ ಗುಣರೂಪ | ಕ್ರಿಯೆಗಳ ನೋಳ್ಪರು 3 ನಿನಗೆಣೆ ಯಾರೊ ಸಮೀರ | ಮಹವನಧಿಯ ದಾಟಿದ ಧೀರ | ದೈತ್ಯಜನರ ನೀ ಸವರಿದ್ಯೋ ವೀರ | ದಶಾನನನ ನೀ ಸದದೆಯಾ ಶೂರ | ಆಹಜನಕಜ ರಮಣನ | ನೆನೆ ನೆನೆ ನೆನೆಯುತಅನುಗಾಲ ಕಿಂಪುರುಷ | ಖಂಡದಲಿರುವಂಥ 4 ಕುರುಕುಲ ವನಕೆ ಕುಠಾರ | ದುಷ್ಟಜರೆಯ ಸುತನ ಸೀಳ್ದ ಧೀರ | ಸತಿತರಳೆ ದ್ರೌಪದಿ ಕಾಯ್ದ ವೀರ | ದುರುಳದುರ್ಯೋಧನನ ಅಸು ಹರ | ಆಹಕುರುವಂಶಕನಳನೆ | ಧರಣಿ ಭಾರವ ನಿಳುಹನರಮೃಗ ಲೀಲೆಯಂ | ದರಿಗಳ ತರಿದಂಥ 5 ಯತಿಕುಲ ಕುಮುದಕೆ ಸೋಮ | ದಶಮತಿಯೆ ಮಾಯ್ಗಳ ತರಿದ ಭೀಮ | ಅಹಂಮತಿಯ ಕಳೆ ಸಾರ್ವಭೌಮ | ಜಗತ್ಪತಿಗೆ ನೀ ಸುಪವಿತ್ರ ಧಾಮಾ | ಆಹವಿತತ ಶ್ರೀ ಹರಿಯೆ ಸ | ರ್ವೋತ್ತಮನೆಂಬಂಥಸೂತ್ರಾರ್ಥ ರಚಿಸಿ ಸ | ಚ್ಛಾಸ್ತ್ರವನರುಹಿದ 6 ಪವಮಾನ ಪೊಗಳುವೆ ನಿನ್ನ | ಭವಭವಣೆಯ ಪಡಲಾರೆ ಘನ್ನ | ಗುರುಗೋವಿಂದ ವಿಠಲಾನ | ಚರಣ | ತೋರೊತವಕದಿ ನಿನ್ನೊಳು ಪವನ | ಆಹನವ ವಿಧ ಭಕುತಿಗೆ | ನೆಲೆಯು ನೀನಾಗಿಹೆತವಕೀರ್ತಿ ಪೊಗಳಲು | ಶಿವನಿಗು ಅಳವಲ್ಲ 7
--------------
ಗುರುಗೋವಿಂದವಿಠಲರು
ಹನುಮದ್ಭೀಮ ಮಧ್ವನಾಮ ಪ್ರಣತಕಲ್ಪದ್ರುಮ ಘನಕೃಪಾಳು ಭಕ್ತಚಿಂತಾಮಣಿ ಯೋಗೀಂದ್ರಲಲಾಮ ಪ. ಭಾರತಿಪತಿ ನಿಖಿಲವಿಶ್ವಾಧಾರ ಭಾವೀಬ್ರಹ್ಮ ಸಾರತತ್ತ್ವ ವೇದಾರ್ಥಕೋವಿದ ಧೀರ ಜೀವೋತ್ತಮ 1 ಭರ್ಗವಾಸವಾದಿ ದಿವಿಜವರ್ಗಸುಖಧಾಮ ನಿರ್ಗುಣೋಪಾಸಕ ಮೋಕ್ಷಮಾರ್ಗದರ್ಶಿ ನಿಷ್ಕಾಮ 2 ಸೂತ್ರನಾಮಕ ವಾಯುದೇವ ವಿಚಿತ್ರಕರ್ಮನಿಸ್ಸೀಮ ಭೃತ್ಯ ಸಾರ್ವಭೌಮ 3
--------------
ತುಪಾಕಿ ವೆಂಕಟರಮಣಾಚಾರ್ಯ
ಹಯಗ್ರೀವ ವಿಠಲ | ಪೊರೆಯ ಬೇಕಿವನಾ ಪ ಭಯ ಭರಿತ ಭಕ್ತಿಯಿಂ | ಪ್ರಾರ್ಥಿಸುತ್ತಿಹನು ಅ.ಪ. ಗುರುತಂದೆ ಮುದ್ದು ಮೋಹ | ನರಿತ್ತಂಕಿತ ಪದಮರೆಯಾಗಿ ಕಾಣದಲೆ | ಪೋದುದಕ್ಕಾಗೀಪರಿತಪಿಸಿ ಬಹುವಾಗಿ | ಮೊರೆಯನಿಡುತಿಹ ಹರಿಯೆಕರುಣಿಗಳು ಗುರು ಪರವು | ಪದರಚಿಸಿ ಇತ್ತೇ 1 ಪರಿ ಪರಿಯಸೂಚಿಸೋ ಸನ್ಮಾರ್ಗ | ಸಾಧನಕೆ ಹರಿಯೇ ವಾಚಾಮ ಗೋಚರನೆ | ನೀಚೋಚ್ಚ ತರತಮವವಾಚಿಸುತ ಇವನಲ್ಲಿ | ಮೋಚಕನು ಆಗೋ 2 ಭವ ಶರಧಿ ದಾಟಿಸಲುತವನಾಮ ಸಂಸ್ಮøತಿಯ | ಶ್ರವಣ ಸುಖವಿತ್ತೂಭವರೋಗ ವೈದ್ಯ ಗುರು | ಗೋವಿಂದ ವಿಠ್ಠಲನೆಹವಣದಲಿ ಪೊರೆಯಲ್ಕೆ | ಪ್ರಾರ್ಥಿಸುವೆ ಹರಿಯೇ 3
--------------
ಗುರುಗೋವಿಂದವಿಠಲರು
ಹರಣ ಪ ಜಗದಿ ಧರ್ಮಾ ಧರ್ಮವೆಂಬ ಅನುವರವು ಹುಟ್ಟುವ ಕಾರಣ ಅಗಣಿತಾಘಘನ ನಿವಾರಣ ಅರಿನಿಕರ ಸಂಹಾರಣ 1 ಸುಗುಣ ದುರ್ಗುಣಗಳ ಸಮೂಹಕೆ ಸುಲಭವಾಗಿಹುದೀ ಕಥಾ ಸುಜನ ಮೇಲುಪಂಕ್ತಿಯೆನಿಸುತಿಹುದು 2 ತಾಮಸರ ನಿರ್ನಾಮ ವೈದಿಸಿ ತಾಮನವಲಿದ ಸುಜನಕೆ ಸ್ವಾಮಿ ಶ್ರೀಗುರುರಾಮ ವಿಠಲನ ಪ್ರೇಮ ಸಂಪಾದಿಸುವುದಕೆ 3
--------------
ಗುರುರಾಮವಿಠಲ
ಹರಣ ಸೀಳಿದ ದಾರಿತಾರಾತಿಸಂಘ ನಮಿಪೆನನವರತ ಪ ಜ್ಞಾನ ಜ್ಞೇಯ ಜ್ಞಾತೃನಾಮಕ ರಮಾಪತಿಗೆ ಕರ್ಮ ಕರಣಾ ನೀನೆನಿಸಿ ತತ್ವದೇವತೆಗಳಿಂದೊಡಗೂಡಿ ಪ್ರಾಣಪಂಚಕ ರೂಪ ಜಗವ ಪಾಲಿಸುವೆ1 ಕಾರುಣ್ಯನಿಧಿಯೆ ಇಪ್ಪತ್ತೊಂದು ಸಾವಿರದ ಈ ರೀತಿ ಮಾಳ್ಪೆನೆಂದೆಲ್ಲರಿಗೆ ತೋರ್ಪಿ 2 ಉದ್ಧರಿಸಬೇಕು ಯಂತ್ರೋದ್ಧಾರ ಪ್ರಾಣ ಶ್ರೀ ಮದ್ಧನುಮ ಭೀಮ ಗುರುಮಧ್ವ ಮುನಿಪ ಸಿದ್ಧಾಂತ ತತ್ವಜ್ಞ ಸದ್ವೈಷ್ಣವರ ಸಭಾ ಮಧ್ಯದೊಳಗಸಮ ಸದ್ವಿದ್ಯೆಗಳನೊರೆದೆ3 ದಾಶರಥಿ ಪ್ರೀಯತಮ ವಿಭೀಷಣನ ಮನದಭಿ ಲಾಷೆಗಳನೆಲ್ಲ ಪೂರೈಸಿ ನಿಂದೆ ವ್ಯಾಸಮುನಿ ಹೃತ್ಕುಮುದ ಭೇಶ ಬಿನ್ನೈಪೆ ಸಂ ತೈಸು ನಿನ್ನವರ ಭವಕ್ಲೇಶಗಳ ಕಳೆದು 4 ಅಪರೋಕ್ಷ ಪವ ಮಾನ ನಿನ್ನವತಾರ ಅಂಶಗಳಲಿ ನ್ಯೂನವಿಲ್ಲದೆ ಜಗನ್ನಾಥವಿಠಲನ ಚರಿ ತಾನುಸಾರದಲಿ ತವ ಚರಿತೆ ತೋರಿಸುವೆ 5
--------------
ಜಗನ್ನಾಥದಾಸರು
ಹರನಮಃ ಪಾರ್ವತೀ ಪತೆಯೇ ನಮೋ ಹರನಮಃ ಪಾರ್ವತೀ ಪತೆಯೇ ಪ ಹರಹರ ಶಂಕರ ಶಂಭೋ ಮಹಾದೇವ ಹರನಮಃ ಪಾರ್ವತೀ ಪತೆಯೇ ಅ.ಪ ಹರಿಯ ಪಾದೋದಕ ಶಿರದಲಿ ಧರಿಸಿದ ಪರಮ ವೈಷ್ಣವ ನಿನ್ನ ಚರಣಗಳಿಗೆ ನಮೋ 1 ಅತ್ರಿಯ ಪತ್ನಿಯ ಉದರದಿ ಜನಿಸಿದ ದತ್ತನಾಮಕ ಹರಿ ಭ್ರಾತ ದೂರ್ವಾಸನೆ 2 ಹರಿಯು ಪ್ರಸನ್ನನಾಗುವ ತೆರದಲಿ ಮನ ಕರುಣಿಸೋ ಉರಗಭೂಷಣ ಗಿರಿಜಾಪತೆ 3
--------------
ವಿದ್ಯಾಪ್ರಸನ್ನತೀರ್ಥರು
ಹರಹರ ಮಹಾದೇವ ಮಹಾನುಭಾವಾ | ಭವ ಯ್ಯೋಮಕೇಶ | ಅಂಧಕ ಸುರರಿಪು ಜಾಣಾ | ಸುರವರ ಪುರ ಮುರಹರ ಪದವಿನುತಾ ಪ ಸಂಜೀವ | ವಿಷ ಕರ್ತುವಾಭರಣ ಜಗದ ಸೂತ್ರಾಣ | ಎಸೆವ ರುಂಡಮಾಲಾ ಪಾರ್ವತಿಯ ಲೋಲ | ಪಶುಪತಿ ಪಾವನ್ನ ವರಸುಪ್ರಸನ್ನ | ಅಸಮಾನಸಮಾ ಕುಸುಮಾಭಿಸಮ | ನಿಶಕರ ದಿನಕರ ಬಿಸಿ ನಯನ | ದಶಶಿರ ಪ್ರಸನ್ನ ಭಜಿಪರ 1 ಗುರುಕುಲೋತ್ತ,ಮ ತುಂಗ ವೃಷಭ | ಸುರನದಿ ಧರ ಧೀರ ಜಗದೋದ್ಧಾರ | ನಿರಂಜನ ಸುಂದರ ವದನ | ಕರಿ ಚರ್ಮಾಂಬರ ಶೋಭಾಂತರವಾದನಾ ಭಾ | ಹರಣ ಚರಾಚರ ಸುರವರ ಡಮುರಗ ತ್ರಿಶೂಲಧರ | ನರವರ ಶರಭೂತ ಪರಿವಾರ ಭಯಂಕರ | ದುರಿತ ವಿದೂರಾ 2 ಅಂಬರ ವ್ಯಾಘ್ರಾವಾಸಾ | ಯ್ಯೋಮ | ಕೇಶ ಸ್ಮಶಾನವಾಸ | ಭಾಸುರೋನ್ನತ ಲೀಲಾ | ಸುರಮುನಿಪಾಲಾ | ಚಾಪ ಪಿನಾಕಿ ಚಮುಪಾ | ಕಾಸೀವಾಸಿ ತೋಷಿಸೆ | ದಾಶರಥಿ ನಾಮತಾರಕ ಉಪದೇಶಿ | ಕೋಶ ಶ್ರೀ ವಿಜಯವಿಠ್ಠಲ ವೆಂಕಟೇಶನ | ಪುರಂದರ ದಾಸನ ದಾಸನ ಕ್ಲೇಶವಿನಾಶಾ 3 (ಔ) ಶ್ರೀತುಳಸೀ
--------------
ವಿಜಯದಾಸ
ಹರಿ ಎನ್ನು ಹರಿ ಎನ್ನು ಹರಿ ಎನ್ನು ಮನವೆ ಪ. ನಿರುತದಿ ಪೊರೆವನ ಮರೆವರೆ ಮನವೆ ಅ.ಪ. ಸರಿಯುವುದು ಆಯುಷ್ಯ ಸಂಪತ್ತು ನೋಡು ಬರುತಿದೆ ಮೃತ್ಯುವು ಕರೆಯಲು ನೋಡು ಹರಿನಾಮ ಯಮದಂಡ ಕಡಿವುದು ನೋಡು ಪರಮಪುರುಷನ ನೀ ಬಿಡದೆ ಕೊಂಡಾಡು 1 ಹರಿಯ ನಾಮಾಮೃತ ಸುಜನಕೆ ನೀಡು ಹರಿಯ ಜ್ಞಾನಾನಂದಾಂಬುಧಿಯೊಳೊಲ್ಯಾಡು ಹರಿಯ ಮೂರುತಿಯನ್ನು ಮನದಲ್ಲಿ ನೋಡು ಹರಿಭಕ್ತಿ ಮದವೇರಿ ಕುಣಿ ಕುಣಿದಾಡು 2 ಹರಿಗುರು ಸ್ಮರಣೆಯ ನಿರುತದಿ ಮಾಡು ಹರಿಭಕ್ತಿ ಲಾಂಛನ ಮೈಯಲ್ಲಿ ಮೂಡು ಹರಿದಾಸ ಸಂಪತ್ತಿನೊಳಗೆ ಓಲಾಡು ಹರಿಯ ಮನದಿ ಕಂಡು ನಲಿನಲಿದಾಡು 3 ಕಾಮಕ್ರೋಧಗಳನ್ನು ಖಂಡಿಸೀಡ್ಯಾಡು ನೇಮ ಶ್ರೀ ಗುರು ಆಜ್ಞೆಯಂದದಿ ಮಾಡು ಯಾಮ ಯಾಮಕೆ ಹರಿನಾಮವ ಪಾಡು ಶ್ರೀಮದಾನಂದತೀರ್ಥರ ಮತ ನೋಡು 4 ಶ್ರೀ ಪರಮಾತ್ಮನ ಗುಣವ ಕೊಂಡಾಡು ಶ್ರೀಪತಿ ಭಕ್ತರ ಸಂಗದಿ ಕೂಡು ಭವ ಹರ ಸ್ತುತಿ ಮಾಡು ಗೋಪಾಲಕೃಷ್ಣವಿಠ್ಠಲನ ದಯ ಬೇಡು 5
--------------
ಅಂಬಾಬಾಯಿ
ಹರಿ ಎಂಬ ನಾಮ ಎರಡಕ್ಷರವ ದುರಿತ ಕಾನನ ಛೇದ ಪ ವೇದರಾಶೀ ಎಂಬ ಭೂಸುರನು ಯಮಪುರದ ಹಾದಿಯಲಿ ಪೋಗುತಿರೆ ಎಡಬಲದಲಿ ಬಾಧೆ ಬಡುವ ಪಾಪಿ ಜೀವರಾಶಿಯ ನೋಡಿ ಮಾಧವಾ ಹರಿ ಎನಲು ಮುಕ್ತರಾದರು ಎಲ್ಲಾ 1 ಮತ್ತೆ ಪುಷ್ಕರನೆಂಬ ಹರಿಭಕ್ತ ಬರಲಾಗಿ ಮೃತ್ಯು ನಡುಗೀ ನಿಂದು ಪೂಜೆ ಮಾಡೀ ಉತ್ತಮಗೆ ಅಲ್ಲಿದ್ದ ನರಕಗಳು ತೋರಿಸೆ ಬತ್ತಿ ಪೋದವು ಹರಿ ಎಂಬ ಶಬ್ದವ ಕೇಳಿ 2 ಕೀರ್ತಿ ಮಾನವನೆಂಬೊ ಭೂಪಾಲ ಯಮಪುರದ ಆರ್ತಿಯನು ಕಳೆದ ಶ್ರೀಹರಿಯ ವೊಲಿಸೀ ಅಂತಕ ಬಂದು ಕಾದೆ ಸ ಮರ್ಥನಾಗದೆ ಪೋದ ಏನೆಂಬೆ ಜಗದೊಳಗೆ3 ಹದಿನಾರು ಸಾವಿರ ತರುಣಿಯರು ಅಸುರನ್ನ ಸದನದಲಿ ಸೆರೆಬಿದ್ದು ಹರಿಯ ತುತಿಸೇ ಮುದದಿಂದ ಹರಿಪೋಗಿ ಖಳನ ಕೊಂದು ಆ ಸುದತಿಯರಿಗೆ ತನ್ನ ಅಂಗಸಂಗವನಿತ್ತ4 ಕಂಡವರ ಮನೆ ಉಂಡು ಚಾಂಡಾಲರ ಕೂಡ ಮಂಡಲದೊಳಗೆ ಪಾತಕನಾದರೂ ಗಂಡುಗಲಿ ವಿಜಯವಿಠ್ಠಲ ಹರೆ ಹರೇ ಎಂದುಕೊಂಡಾಡಿದರೆ ಮುಕುತಿ ಸುರರಿಗಿಂತಲೂ ವೇಗ5
--------------
ವಿಜಯದಾಸ
ಹರಿ ಕುಣಿದ ನಮ್ಮ ಹರಿ ಕುಣಿದ ಹರಿ ಕುಣಿದ ನಮ್ಮ ಹರಿ ಕುಣಿದ ಹರಿ ಕುಣಿದ ನಮ್ಮ ಕೃಷ್ಣ ಕುಣಿದ ಪ. ಹರಿದಾಸುರಗಳ ನೆರೆದಿಹ ಸಭೆಯಲಿ ಭಜನೆಯ ಸಮಯದಿ ಹರಿ ಕುಣಿದ ಅ.ಪ. ಅತಿಭಕ್ತಿಯಿಂದ ಪತಿತ ಪಾವನನ ಪೂಜೆ ಅತಿ ಸಂತೋಷದಿ ಮಾಡುವ ಸಮಯದಿ 1 ವೇದಮಂತ್ರದಿಂದಾ ವೇದಘೋಷದಲ್ಲಿ ವೇದ ವ್ಯಾಸರೆಂಬೋ ನಾಮದಿಂದಿರುವ 2 ಅಂದಿಗೆ ಕಿರುಗೆಜ್ಜೆ ಚಂದದಿ ಪೊಳೆಯುತಾ ಗೋವಿಂದ ದಾಸರ ಮಂದಿರದೊಳಗೆ 3 ಪುರಂದರ ದಾಸರ ಆರಾಧನೆ ದಿನ ಪುರದೊಳಗೆಲ್ಲಾ ಮೆರವಣಿಗೆ ದಿನ ಯತಿಗಳೀರ್ವರು ಪೂಜಿಸಿ 4 ವರದ ಅತಿ ಸಂಭ್ರಮದಿ ಗತಿ ಕೊಡುವವ ಬಂದ ರಮಾವಲ್ಲಭವಿಠಲನ ಪೂಜೆಯ ಸಮಯದಿ 5
--------------
ಸರಸಾಬಾಯಿ
ಹರಿ ಕೃಪೆಯಿಂದಲಿ ದೊರೆದಿತು ಯನಗೀ ಶಿರಿಕರ ತಂಬೂರಿಪ ನರಹರಿ ನಾಮ ಸ್ಮರಣೆಯಗೈಯುವಾ ನರಂಗೆ ಸಹಕಾರಿ ಅ.ಪ. ತಾಪತ್ರಯವನು ಲೊಪಗೈವ ಸುಖ ರೂಪಿನ ತಂಬೂರಿ ಶ್ರೀಪತಿ ಭಕ್ತಿನಿರೂಪಣದಿಂದಖಿಲಾಪತ್ಪರಿಹಾರಿ 1 ವಾಸುದೇವ ನಿಜದಾಸರು ಪಿಡಿಯುವ ಭಾಸುರ ತಂಬೂರಿ ವಾಸುಕಿ ಶಯನ ವಿಲಾಸದ ಕೀರ್ತಿವಿಕಾಸದ ಜಯಭೇರಿ 2 ಅಂಬುಜಭವನ ಕುಟುಂಬಿನಿಯ ಕರಾಲಂಬನ ತಂಬೂರಿ ತುಂಬುರನಾರದ ರಂಬುರುಹಾಕ್ಷನ ಹಂಬಲಿಗನುಸಾರಿ 3 ಗಂಧರ್ವರ ಕರಪೊಂದಿ ಮೆರೆವ ಬಲು ಸುಂದರ ತಂಬೂರಿ ಸುಂದರಿಯರ ನಲವಿಂದಲಿನುಡಿಸುವಾನಂದ ಸುಗುಣಧಾರಿ 4 ಶ್ರುತಿಯುತ ಮಾಗಲು ಮತಿಯುತರಿಗೆ ಸಮ್ಮತವಹತಂಬೂರಿ ಶ್ರುತಿಹೀನತೆಯಿಂದ ತಿಶಯಮಾಗದು ಕೃತಿಶತವನುಸಾರಿ 5 ಸುಕೃತ ಪರಿಪಾಕದ ತಂಬೂರಿ ಈ ಕಲಿದೋಷ ನಿರಾಕರಣೆಗೆ ಬಹು ಭೀಕರ ಮುಖಧಾರಿ 6 ಧರೆಯೊಳು ಪುಲಿಗಿರಿ ವರದ ವಿಠಲನ ಬಿರಿದಿನ ತಂಬೂರಿ ದುರಿತವೆಂಬ ಮದಕರಿಯನು ಸೀಳುವ ಹರ್ಯಕಾರಿ 7
--------------
ಸರಗೂರು ವೆಂಕಟವರದಾರ್ಯರು
ಹರಿ ಗೋಪಾಲ ವಿಠಲ | ಪೊರೆಯ ಬೇಕಿವಳಾ ಪ ದುರಿತ ದುಷ್ಕøತವೆಲ್ಲ | ದೂರ ಓಡಿಸುತಾ ಅ.ಪ. ತರಳೆ ದ್ರೌಪದಿ ವರದ | ಮರಳ್ಯಹಲ್ಯಯ ಪೊರೆದತರಳ ಪ್ರಹ್ಲಾದನನ | ಪೊರೆದ ನರಹರಿಯೇ |ವರುಷ ಐದರ ಧೃವಗೆ | ವರದನಾಗೀ | ತೋರ್ದೆಕರುಣಾಳು ನಿನ್ಹೊರತು | ಬೇರನ್ಯಕಾಣೇ 1 ಕಂಸಾರಿ ನಿನ್ನ ಪದಪಾಂಸುವನೆ ಶಿರದಿ ನಿ | ಸ್ಸಂಶಯದಿ ಧರಿಸೀಶಂಸಿಸಲು ಮಹಿಮೆ ತವ | ದಾಸ್ಯ ಪಾಲಿಸುತಿನ್ನುಹಂಸವಾಹನ ಪಿತನೆ | ವಂಶ ಉದ್ಧರಿಸೋ 2 ಕರ್ಮ ಪ್ರಾಚೀನಗಳ | ಮರ್ಮ ತಿಳಿದವರ್ಯಾರೊಕರ್ಮನಾಮಕನೆ ದು | ಷ್ಕರ್ಮ ಪರಿಹರಿಸೀ |ಪೇರ್ಮೆಯಿಂದಿವಳ ಪೊರೆ | ನಿರ್ಮಲಾತ್ಮಕ ದೇವಧರ್ಮ ಗೋಪ್ತ ಸ್ವಾಮಿ | ಬ್ರಹ್ಮಾಂಡದೊಡೆಯಾ 3 ಮಧ್ವಮತ ಸಿದ್ಧಾಂತ | ಪದ್ಧತಿಗಳರುಹೃತ್ತಶುದ್ಧಸಾಧನ ಗೈಸೊ | ಮಧ್ವಾಂತರಾತ್ಮಾಅಧ್ವಯನು ನೀನೆಂಬ | ಶುದ್ಧ ಬುದ್ಧಿಯನಿತ್ತುಉದ್ಧರಿಸೊ ಈಕೆಯನು | ಪ್ರದ್ಯುಮ್ನ ದೇವಾ 4 ಸರ್ವಜ್ಞ ಸರ್ವೇಶ | ನಿರ್ವಿಕಾರನೆ ದೇವಸರ್ವದ ತವನಾಮ | ಸ್ಮರಿಪ ಸುಖವಿತ್ತುದುರ್ವಿ ಭಾವ್ಯನೆ ದೇವ | ಅಸ್ವತಂತ್ರಳ ಕಾಯೊಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಹರಿ ಗೋವಿಂದ ಮುಕುಂದ ಮನುವಂದ್ಯ ಮಾಧವ ಹರ ಅಜನುತ ಪರಮಾನಂದ ಪ ದೇವ ಗಿರಿಧರ ಸುರನರ ಮುರಹರ ಪರತರ ಶರಧಿಜಾ ವರ ನರಹರಿ ಕೇಶವ ಸ್ಮರಿಪರ ಸುರತರು ಪರಮಪ್ರಕಾಶನೆ ಪುರಹರವರಸುಖ ಸುರೇಶ 1 ಈಶ ಮುನಿಕುಲ ವಸುಕಾಲ ತನುಶೀಲ ವನಮಾಲ ಜನಕಜೆಪತಿ ಭಕ್ತರಾನಂದ ವನಜಾಕ್ಷ ದಿನಕರ ಘನಪ್ರಭೆತನುಶೋಭ ವಿನಮಿತ ಸನಕಾದಿಸಾನಂದ 2 ಜಗದೀಶ ಅಘಪೋಷ ಮೃಗನಾಶ ಲಕುಮೀಶ ಖಗಗಮನ ದಶಶತನಾಮ ಬಗೆಬಗೆ ಪೊಗಳುವ ನಿಗಮ ಆಗಮನುತ ಶ್ರೀರಾಮ 3
--------------
ರಾಮದಾಸರು