ಒಟ್ಟು 3814 ಕಡೆಗಳಲ್ಲಿ , 122 ದಾಸರು , 2565 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವ್ಯಾಸಕೂಟ-ದಾಸಕೂಟದ ಇತರ ಗುರುಗಳ ವರ್ಣನೆ ಮುನಿವರ್ಯ ಶ್ರೀಕಾರ್ಪರ ಮುನಿವರ್ಯ ಪ ಗೃಂಥಾರ್ಥ ಜ್ಞಾನ ವಿಷಯವ ನೆನೆಸದಂದದಿ ಮಾಡೋ ವನಜನಾಭನ ಪ್ರೀಯ ಅ.ಪ ಮುನಿವರ್ಯ ಮನವಾಚಾಕಾಯಾ ದಿಂದ ಅನುದಿನ ನಡೆಯುವ ಕ್ರಿಯಾ ಶ್ರೀ ಕೃಷ್ಣನೆ ಮಾಡಿಸುವನೆಂಬೊ ಮತಿಯಾ ಕೊಡು ಯನಗೆಂದು ಮುಗಿವೆನು ಕೈಯಾ ಆಹಾ ಭವ ವನಧಿ ದಾಟಿಸುವ ಸಜ್ಜನರ ಸಂಗವ ಕೊಡು 1 ಶ್ರೀಕಾಂತನಶ್ವತ್ಥ ರೂಪ ದಿಂದ ಒಲಿದು ಬಂದು ನಿಂತು ಭಕ್ತ ವೃಂದವ ಪಾಲಿಪ ನಿರುತ ಆಹ ಇಂದುಮೌಲಿ ಮುಖರಿಂದ ಸಹಿತನಾಗಿ ಮಂದ ಜಾಸನನಿಲ್ಲಿ ಬಂದು ಪೂಜಿಪನಿತ್ಯ 2 ಶ್ರೀ ಕಾರ್ಪರಾಗಾರ ಬಹುಶರಣು ಜನರಿಗೆ ಮಂದಾರ ನರಹರಿಯನೊಲಿಸಿದಂಥ ಧೀರಾ ಆಹಾ ಕರುಣ ಶರಧೆಯನ್ನ ದುರಿತಗಳೋಡಿಸಿ ಹರಿಗುರು ಚರಣದಿ ಪರಮಭಕ್ತಿಯ ಕೊಡೊ 3
--------------
ಕಾರ್ಪರ ನರಹರಿದಾಸರು
ವ್ಯಾಸರಾಯರ ಸ್ಮರಿಸಿ ಏಸು ಜನ್ಮದ ಪಾಪ ನಾಶವಾಗುವುದು ನಿಮ್ಮಾಶೆ ಸಿದ್ಧಿಸುವುದು ಲೇಸಾಗಿ ಸುಖಿಸಿ ಆನಂದ ವೈಕುಂಠದಲಿ ವಾಸವಾಗುವುದು ನಿಜ ಭಕುತಿಯಲಿ ಬಿಡದೆ ಪ ಪಿತನಿಂದ ನೊಂದು ರತಿಪಿತನ ಸ್ಮರಿಸುತ ಪ್ರತಿಬಂಧಕಗಳ ಪ್ರತಿಯಾಗಿ ಬಂದಿರಲು ಬಲು ಮತಿವಂತನಾಗಿ ಮುದದೀ ಕ್ಷಿತಿಯ ಭಾರವ ವೊಹಿಸಿ ಕೃತಭುಜ ಮುನೀಶ್ವರನ ಸ್ತುತಿಸುತಲ್ಲಿದ್ದು ಮಿತಿಕಾಲ ಹಿಂಗಳದು ಅಚ್ಯುತನ ವರದಿಂದ ಬಂದು 1 ಅಲ್ಲಿ ತ್ರಿಣಿನೇತ್ರ ಶ್ರೀ ವಲ್ಲಭನ ಶ್ರೀಪಾದ ಪಲ್ಲವಾರುಣಿ ಚಿತ್ತದಲ್ಲಿ ಪ್ರತಿದಿವಸದಲಿ ನಿಲ್ಲಿಸಿ ನಿಗಮಾರ್ಥದಿಂದ ಪೂಜಿಸುತ್ತಿದ್ದ ಬಲ್ಲ ಭಕುತಿಂದ ಸತತ ಖುಲ್ಲನಲಿ ಪುಟ್ಟಿದ ಪ್ರಲ್ಹಾದ ದೇವನು ಬಲ್ಲಿದಾನಾಗೆಲ್ಲಿ ಸಂಸಾರನುತ್ತರಿಸಿ ಮುನಿ ಮೆಲ್ಲನೇ ನಡತಂದನು2 ಬಂದ ನಾರದಗೆ ಪ್ರಲ್ಹಾದ ದೇವನು ಎರಗಿ ನಿಂದು ಕಂಗಳ ಮುಗಿದು ತ್ರಾಹಿ ತ್ರಾಹಿ ಎಂದು ಇಂದು ನಿಮ್ಮಯಾ ದರುಶನಾ ಛಂದವಾಯಿತೆನಗೆತ್ತಲಿಂದ ಬಂದಿರಿ ಇತ್ತ ಬಂದ ವಿಚಾರ ಪೇಳೆಂದು ಬಿನ್ನೈಸಲು ನಂದದಲಿ ಹಾಹಾ ಎನುತಾ 3 ವೃಕೋದರನಿಂದ ನೊಂದು ದೇಹವನು ಬಿಡುವಾಗ ಬಾ ಲ್ಹಕರಾಯನಾಗಿ ಹುಟ್ಟಿದ ಪ್ರಲ್ಹಾದನು ವೈದಿಕ ಮಾರ್ಗವನ್ನೇ ಧರಿಸಿ ಉಕುತಿಯನೇ ಸಾಧಿಸಿ ಕಲಿಯೊಳಗೆ ನಿಮ್ಮ ಪೂ ಜಕನಾಗಿಪ್ಪೆನೆಂದು ತಲೆವಾಗಲು ಇಂದು ಪ್ರಕಟವಾಯಿತು ಧರೆಯೊಳು 4 ದಿಕ್ಕುಗಳಂ ಮರದು ಧಿಗಿಧಿಗಿನೆ ಚಿಗಿದಾಡುತ್ತ ಉಕ್ಕಿದವು ಕಣ್ಣಿಂದ ಅಶ್ರು ಜಲಧಾರೆ ತಾ ಮೈಮರೆದು ದೇವಕಿ ನಂದನನ ನೆನೆದು ನಕ್ಕು ಕಿಲಿಕಿಲಿ ರಾಹಸ್ಯಗಳನುಚ್ಚರಿಸುತಾ ತಕ್ರ್ಕೈಸಿ ತಿಳುಪಿದನು ಮುಂದಣಾಗಮವೆಲ್ಲ ವೃತ್ತಾಂತ ಅಕ್ಕಟ ಅದ್ಭುತವೇನೆಂಬೆ 5 ಬನ್ನೂರು ಗ್ರಾಮದಲಿ ಜನಿಸಿದನು ಭೂಸ್ವರೂಪ ಮುನ್ನಿಲ್ಲದೇ ಬೆಳೆದು ಮುನಿ ಸುಬ್ರಾಹ್ಮಣ ರನ್ನು ಪಾಲಿಸುವ ಪರಮಾನಂದವುಳ್ಳ ಬ್ರಹ್ಮಣ್ಯತೀರ್ಥರ ಕರದಿ ಚೆನ್ನಾಗಿ ಪೋಷಿಸಿಕೊಂಡು ಉಪನೀತವಾಗಿ ಸನ್ಯಾಸಿ ಪಟ್ಟವನೆ ಧರಿಸಿ ಧರ್ಮದಲಿ ಸ ವಿದ್ಯವನೋದಿ ಧನ್ಯ ಕೀರ್ತಿಯಲಿ ಮೆರೆದಾ 6 ರಾಯಗದ್ದುಗೆನೇರಿ ಅವನಿಗೆ ಬಂದ ಮಹಾ ಕುಹುಯೋಗವ ನೂಕಿ ರಾಜ್ಯದೊಳಗೆ ಇದ್ದ ಸುವರ್ಣ ಛಾಯದಂತೆ ಕಾಂತಿಲೀ ನ್ಯಾಯಾಮೃತ ತರ್ಕ ತಾಂಡವ ಚಂದ್ರಿಕೆ ಎಂಬ ಸ್ಥಾಯವಾದರು ಪೊಂಪದಿ7 ಯಂತ್ರೋದ್ಧಾರಕನ ಪ್ರತಿಷ್ಠಿಸಿ ವಿಜಯೀಂದ್ರ ಸಂತ ವಾದಿರಾಜಗೊಲಿದು ಪುರಂದರ ಮಂತ್ರ ಸಿದ್ಧಿಯನೆ ಕೊಟ್ಟು ಭ್ರಾಂತಗೊಳಿಸುವ ಮಹಾ ಅನ್ಯಾಯ ಮತವೆಂಬ ಕಾಂತಾರ ಪಾವಕನೆ ವ್ಯಾಸಾಬ್ಧಿಯನು ಬಿಗಿದು ಚಿಂತಿತಾ ಫಲದಾಯಕ 8 ಮಧ್ವಮತವೆಂಬ ದುಗ್ಧಾಬ್ಧಿಗೆ ಪೂರ್ಣೇಂದು ಹೃದ್ವನಜದೊಳಗಿರಿಸಿ ಕೃಷ್ಣನ ಪದಾಂಬುಜವ ಚಿದ್ವಾತ್ಯದಲಿ ನಿಲಿಸಿ ಕಾವ್ಯದಲಿ ಕೊಂಡಾಡಿ ಸದ್ವೀರ ವೈಷ್ಣವರಿಗೆ ಪದ್ಧತಿಯನು ಪೇಳಿ ತವಕದಿಂದಲಿ ತಾವು ಸದ್ವೈಷ್ಣವ ಲೋಕ ಸಿರಿಮರಳೈದಿದರು ಪಾದದ್ವಯವ ಭಜಿಸುವವರೂ ಕೇಳಿ 9
--------------
ವಿಜಯದಾಸ
ವ್ರತವನಲ್ಲದೆ ಅನುವ್ರತ ಮಾಡಬಹುದೇಶತಮುಖ ಸ್ಥಿತನಾದ ದಿವಿಜಪತಿಯ ಪ ದಾನಶೀಲನೆನಿಸಿ ವಿಬುಧರಿಗೆ ಮೃಷ್ಟಾನ್ನಪಾನಗಳುಂಬೋ ಪಂಕ್ತಿಯಲ್ಲಿ ||ದೀನನೊಬ್ಬನು ಬರಲು ದೋಷಿಯಾದವನೆಂದು ಆನನವ ತಿರುಹುವನೇ ಅವನಿಯೊಳಗೇ 1 ಅನ್ನ ಕಾರಣವಾದ ಪರ್ಜನ್ಯದಿಂದಲಿ ಸಕಲಜನರನು ಪರಿತೋಷ ಬಡಿಸಿ ಕೃಪದಿ ||ಚೆನ್ನಿಗನೆ ಈ ಅಲ್ಪ ಪ್ರಾದೇಶಸ್ಥಿತರನ್ನುಬನ್ನ ಬಡಿಸುವರೇನೊ ಘನ್ನ ಮಹಿಮಾ 2 ಭಕ್ತವತ್ಸಲನೆಂಬೊ ಬಿರುದು ನಿನಗೆ ಉಂಟೆಸಖತನದಿ ಬಿನ್ನೈಪೆ ಸಾರ್ವಭೌಮ ||ಭಕುತ ಸುರಧೇನು ಗುರು ವಿಜಯ ವಿಠಲರೇಯಉಕುತಿ ಲಾಲಿಸಿ ವೃಷ್ಟಿಗರಿವುದು ಕರುಣದಲಿ 3
--------------
ಗುರುವಿಜಯವಿಠ್ಠಲರು
ಶಂಕರ ಗಂಡನ ಹಾಡು ಸರಸ್ವತಿಗಭಿವಂದಿಸುವೆ ಒಡೆಯನು ಎನ್ನ ಮನದೊಡೆಯ 1 ಸಂಭ್ರಮ[ದಾ] ಕೇಳಿ ಸಜ್ಜನರು 2 ವಿಶಾಲ ವಿಲಾಸ ಪಟ್ಟಣದಿ ಖಚಿತ ಮಂದಿರದಿ 3 ಮಂದಮಾರುತ ತಂಪೆÉಸೆಯೆ ಗಂಧ ಕಸ್ತೂರಿ ಕದಂಬವನೇರಿಸಿ ಆನಂದವಾಗಿದ್ದ ಮನ್ಮಥನು4 ಮಯೂರ ಪಕ್ಷಿಗಳು ನಳಿನ ನಾಭನ ಓಲಗವು 5 ನಿರ್ಭಯದಲಿನಲ್ಕಾವತಿಯು ಪಾಲಿಸುತ್ತ 6 ಮರಿಹಾವುಗಳ ನೆರೆಹುವಳು ಗೊಂಬೆಯಾಟವನೆ ಆಡುವಳು 7 ಕೂಡಿದ್ದ ಗೆಳತಿಯರ ಒಡನೆ ನೋಡಿದ ನವಯೌವನೆಯನು 8 ಕುಚವು ತೋರಿದವು ಚಿತ್ತದೊಳಗೆ ಚಿಂತಿಸುತ್ತಿದ್ದ 9 ಚೆನ್ನಿಗನು ಮನ್ಮಥನು ಉದಯಕ್ಕೆ ಕರೆತನ್ನಿರೆಂದ 10 ಬಂದು ವಿಲಾಸ ಪಟ್ಟಣದೊಳು ಮದನಗೆ ಪ್ರೀತಿಲಿ ನಿಂದು ಕೈ ಮುಗಿದರು ಹೋ ಗ್ಯೆಂದು ಶಂಕರಗಂಡ ಕಳುಹಿದ ನಿಮ್ಮನೆಗೈತಂದೆವೆನಲು 11 ಮಾತಾಡಿ ನಗುತ ಭೂ ಕೇಳಿದ ಮನ್ಮಥನ 12 ರಾಜ್ಯವು ಕ್ಷೇಮವೆನ್ನಲು ಬ್ರಹ್ಮಾನಂದದಲಿದ್ದ ಶಂಕರಗಂಡನು 13 ವಿವಾಹ ಮಾಡಲಿಚ್ಛಿಸುವೆ ಚಂದ್ರಮುಖಿಯು 14 ಸಂಭ್ರಮದಿಂದ ಕುಳಿತರು ತಂದಿಡುವರು ಮನ್ಮಥಗೆ 15 ಅಂಗಜ ಅತಿ ದೈನ್ಯ ಉಕ್ತಿಯಿಂದಲಿ ಬಹು ಮಂಗಳ ಮೃದು ವಾಕ್ಯವನ್ನು ಪ್ರ ತಂಗಿಯನೆನಗೀಹುದೆಂದ 16 ಮಲ್ಲಿಗಿಸರ ಕಬ್ಬು ಬಿಲ್ಲು ಹಿರಿಯರು ಹೇಳುವರು 17 ಒಬ್ಬಳೇ ರತಿ ನಮ್ಮ ತಂಗಿ ಹಬ್ಬ ಹುಣ್ಣಿಮೆಗೆ ಕಳಿಸದೆ ನಮ್ಮನೆಗೆ ನಿರ್ಬಂಧ ಮಾಡುವಿರೆಂದ 18 ಕಡುಮೋಹದಿಂದ ಸಾಕಿದೆನು ಕೊಡಲಾರೆ ತಂಗಿಯನೆಂದ 19 ಅವಳಿಗೆ ಸ್ವತಂತ್ರವಿಲ್ಲೇನು ನುಡಿದ ದೈನ್ಯದಲಿ 20 ಭಾಗ್ಯದಿಂದಲಿ ನೋಡಿದರು ಮದನ ನೇಮವನೆ ಮಾಡಿದರು 21 ಪ್ರತಿಬಿಂಬ[ದಂದ]ದಲಿ ಎಣಿಕೆಯಿಲ್ಲದ ಬಂಧು ಜನರ 22 ಎಲ್ಲರು ನೆರೆದು ಸಂಭ್ರಮದಿ ಮಲ್ಲಿಗೆ ಸರದಿ ಮದನರತಿದೇವಿಗೆ ಕಲ್ಯಾಣವನೆ ಮಾಡಿದರು 23 ಬಟ್ಟಲು ಗಿಂಡಿಗಳನ್ನು ಬಳುವಳಿ ತಂಗಿಗೆ ಇತ್ತ 24 ಸಾಸಿರ ಗೋವು ಗಜವು ತುರಗವು ಬ್ಯಾಸರಿಯದೆ ತಂಗಿಗಿತ್ತ ವಿಲಾಸಪಟ್ಟಣಕೆ ಕಳಿಸಿದ 25 ದಿನ ಬಾಳುತಿರಲು ತಾನೇ ಯೋಚಿಸಿದ 26 ಬಿಗಿದ ನಾಡಗಂಬಳಿಯ ನಗುವಂತೆ ಮಾಡಿ ರೂಪವನು 27 ಕುಡಗೋಲು ಕÀವಣೆಯ ಪಿಡಿದು ಮಾಡುವೆನೆನುತ 28 ರೂಢಿಯೊಳಗೆ ಅತಿಚೆಲುವ ಸತಿಗೆ ತೋರಿದನು 29 ಒಡಹುಟ್ಟಿದಣ್ಣ ತಾ ಮುನಿಯೆ ನಮಗೆ ಬೇಡವೆಂದ್ಲು 30 ಕಾರಣವ ಹೇಳದಂತೆ ದಿನÀಕರ ನಂತೆ ಹೊಳೆಯುತ ಸಭೆಯಲಿತವಕದಿಂದಲಿ ಬಂದು ಕುಳಿತು31 ಗೆಲುವಿನಿಂದ ಮಾತಾಡಲಿಲ್ಲ ಜುಲ್ಮಿಂದ ತಾನೆ ಕೇಳಿದನು 32 ನಮ್ಮನೆಯಲಿ ನಾವೀಗ ಕಳಿಸುವೋರಲ್ಲ 33 ತೌರುಮನೆಯ ಹಾರೈಸುವರು ಉಂಡು ಸಂಭ್ರಮದಿಂದ ಬಾಹೋಳೆಂದ 34 ಕರುವ ಕಾಯಿ ನಮ್ಮ ಮನೆಯ ಮರೆಯದೆ ಹೊಯ್ಸುವೆಂನೆಂದ 35 ಜೋಳವ ಕೊಂಡು ಹೋಗೆನಲು ಬೇಡೆಲವೊ ಕಾಮ ನಿನ್ನ ಐಶ್ವರ್ಯವ ಹಾಳು ಮಾಡುವೆನೊಂದÀು ಗಳಿಗೆಯಲಿ 36 ಗಮಕದಿಂದಲಿ ಬೆಳೆವೆನೆಂದು ಚಮತ್ಕಾರದಿಂದ ಮಾಯವಾದ 37 ಅಟ್ಟ ಅಡಿಗೆ ಮನೆಂiÉ
--------------
ಹೆಳವನಕಟ್ಟೆ ಗಿರಿಯಮ್ಮ
ಶಂಕರ ದೇವನಾಲಂಕಾರ ಶಯನ ಶಂಖ ನೃಪನ ಪಾಲಾ ಶಂಖಾದಿ ಸೂದನ ಶಂಕೆಯಿಲ್ಲದೆ ತಾಯಿ ಸಂಕಲೆ ಕಡಿದ ಶಶಾಂಕಕೋಟಿ ಪ್ರಭಾವ ಸಂಕರುಷಣ ದೇವ ಶಂಖಾರಿಧರನೆ 1 ಕಂಬದಿ ಬಂದಚ್ಯುತನೆ ಗೊಲ್ಲರ ಸಲಹಿದ ಗೋವರ್ಧನಧರ ಪುಲ್ಲ ಲೋಚನನೆ2 ಅಖಿಳ ಅಸುರರ ಶಕುತಿಯ ಅಪಹರಿಸಿದ ಅದಿತಿ ರುಕ್ಮಿಣಿಯೊಡನೆ ವಿಹಾರ ಸಕಲ ಸುರರೊಡೆಯ ಸಾಮಗಾಯನಲೋಲ ಶಕುಜನಕನೆ3 ಶಾಮಲ ಶರೀರ ವರ್ಣ ವಿನುತ ರೋಮ ರೋಮ ಕೂಪದಿ ಆನಂದ ಭರಿತ ದಾಮೋದರ ವಿಶ್ವದಾನಿಗಳರಸನೇ ಸಾಮಜವರದ 4 ಸನ್ನುತ ಚರಣ ಅನಿರುದ್ಧ ದೇವನೆ ಅಸುರ ಸಂಹರಣಾ ಕನಕಗರ್ಭಾದಿ ಸುರಕಟಕ ಪಾಲಕನೆ ವನಜ ಜಾಂಡವ ಪೆತ್ತ ವೈಕುಂಠ ಪುರಾಧೀಶ 5 ಫಣಿ ಫಣ ಮರ್ದನ ಪ್ರಣವ ಪ್ರತಿಪಾದ್ಯ ಪ್ರ ಸನ್ನವದನಾ ರಣರಂಗ ಭೀಮಾ ಭಕುತ ಜನ ಮೋದನಾ ಅಣು ಸ್ಥೂಲದಲಿ ಗಮನ 6 ಶ್ವೇತವಾಹನನ ಸಮರದಿ ಕಾಯಿದಾ ಅಖಿಳ ಜೀವ ಭೇದಾ ದರ ಪರಮ ಸುಮೋದಾ ಭೀತಿರಹಿತ ಕಲ್ಪಭೂಜನೆನಿಪ ಜಗನ್ನಾಥವಿಠ್ಠಲನೆ 7
--------------
ಜಗನ್ನಾಥದಾಸರು
ಶತ್ರುಭಯ ಪರಿಹರಿಸೊ ಭೂತರಾಜ ಪ ಭವಕೆ ಭೀಕರ ಭಾವಿ ಭೀಮನ ಭಜಿಪ ಭೋಜಾ ಸುತೇಜಾ ಅ.ಪ. ಇಂದು ನೀನೆ ನಾನೆಂದು ಕಮರಿ ಕೂಪದಿ ನೊಂದೆನೊ ಭಾವಿ ನಂದಿವಾಹನ ಮಂಗಳ ಪ್ರದ ನೀಲಕಂಠಾ 1 ಇಲ್ಲೆಲ್ಲಿ ಸರ್ವಸ್ಥಳದಲ್ಲಿ ವ್ಯಾಪ್ತವಾಗಿಹ ನಿನ್ನ ಲೋಲ ಮೂರುತಿಯ ನೆನೆವೆ ಫಾಲನಯನಾ ಪಾಲಿಗೇ ಪಾಲನೆಂತೆಂದು ಕಾಲಮೀರದೆ ಚಲಿಸದೆಲೆ ಬಾರೊ ಗರಳಧಾರಿ 2 ಶ್ರೀಕೃಷ್ಣದಾಸನೆ ನಿನ್ನ ಇಷ್ಟನೆಂತೆಂದು ಮನಮುಟ್ಟಿ ಭಜಿಸುವೆನೊ ಚಾರುದೇಷ್ಣೆಪಾಲಾ ದಿಟ್ಟ ಗುರು ಕೃಷ್ಣವಂದಿತ ತಂದೆ-ವರದಗೋಪಾಲವಿಠ್ಠಲನ ಸಹಜ ಬಂದು 3
--------------
ತಂದೆವರದಗೋಪಾಲವಿಠಲರು
ಶಯನ ಸುಖವೇ ಸುಖವೆ ರಂಗನಾಥ ಭಯಗೊಂಡ ಭಕ್ತರೊಳು ದಯವಿಲ್ಲವೆ ಪ ಶರಣನ ಕೈ ನೀಡಿ ಪೊರೆಯೆಂದು ಪೇಳ್ವಾಗ ದುರಿತಗಳ ಹರಿಸೆಂದು ಬೇಡುವಾಗ ಕರುಣಾನಿಧಿ ನೀನೆಂದು ಹಾಡಿ ಹಂಬಲಿಪಾಗ ಶಿರಬಾಗಿ ಪಾದಕೆ ವಂದಿಸುವಾಗ ರಂಗಾ 1 ಜೀವಿಗಳ ಪಾಲಿಸುವ ಹೊಣೆ ನಿನಗೆ ಸಲುವಾಗ ದೇವ ನೀನೋಬ್ಬನೇ ದಿಕ್ಕೆನುವಾಗ ಭಾವದಲಿ ನಿನ್ನಮೂರ್ತಿಯ ನೆನೆದು ನಲಿವಾಗ ದೇವ ಎನ್ನಪ್ಪ ಬಾಯೆನುವಾಗ ರಂಗಾ 2 ಸ್ವಾಭಿಮಾನದಿ ನೀನು ಲೋಕವನು ಮರೆವಾಗ ಲೋಭಿ ನೀನೆನ್ನದೇ ಜಗವೆಲ್ಲ ರಂಗಾ ಲಾಭವುಂಟೇ ಭಕ್ತಜನಕೆಲ್ಲ ಕ್ಷಯರೋಗ ನಾಭಿಗಂಟದೆ ಪೇಳು ಮಾಂಗಿರಿಯರಂಗ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶರಣ ನೀನೆಲೊ ನರಹರಿ ಶರಣನೀನೆಲೊ ನರಹರಿ ಚರಣ ಪ ಶರಣ ನೀನಿರ್ದು ಮರವೆಗೂಡಿ ಜರಾಮರಣ ಪಡೆವರೇನೊ ಅ,ಪ ಯೋಗಮಾರ್ಗ ವಹಿಸಿ ನಿಜವಾದ ಭಾಗವತರ ಒಲಿಸಿ ರಾಗರಹಿತನಾಗಿ ನೀಗದ ಸಂಸಾರ ಭೋಗ ತ್ಯಜಿಸಿ ಭವರೋಗ ಗೆಲಿಯುವಂಥ 1 ಮಿಥ್ಯೆ ಮಾಯ ನೀಗಿ ಸತತ ನೀ ಸತ್ಯ ಜನಕೆ ಬಾಗಿ ಸತ್ಯಸಂಧನಾಗಿ ಚಿತ್ತಜತಾತನ ಭಕ್ತನೆನಿಸಿ ಯಮ ಮೃತ್ಯುಗೆಲಿಯುವಂಥ 2 ಪಾಮರತ್ವ ತೊರೆದು ನಿಜವಾದ ನೇಮನಿತ್ಯ ಪಿಡಿದು ಭೂಮಿಗಧಿಕ ಮಮಸ್ವಾಮಿ ಶ್ರೀರಾಮನ ನಾಮ ಭಜಿಸಿ ಮುಕ್ತಿ ಸಾಮ್ರಾಜ್ಯಪಡೆಯೆಲೊ 3
--------------
ರಾಮದಾಸರು
ಶರಣಾಗ್ರಣಿ ರಾಮ ಚರಣಾಂಬುಜ ಬಿಡೆ ನಳಿನ ಷಟ್ ಚರಣ ಬಿಡ ಬಲ್ಲದೆ ಪ ಹನುಮನ ಭಜನೆಂಬ ಘನವಾರಿ ಪೂರಿತ ಮನ ಸರೋವರ ಅಯನವಾಗಿಪ್ಪಾ ಜನಕಸುತೆ ಹಂಸಿ ಮನಸಾಪ ಹಾರಿ ದಿನಕರನ್ವಯದಿಂದ ವಿನುತವಾಗಿಪ್ಪ 1 ಅಮರರೋತ್ತಮರೆಂಬ ಭ್ರಮರರಾ ರವಗಳ ಸಮಯೋಚಿತ ಸಾಮಭಿ ಸೇವಿತ ವಿಮಲಾತಮದಿಂದ ಸಾಂದ್ರ ಶಮಲಾತಿ ದೂರ ಪಾದ 2 ಶಿಲೆಯ ಬಾಲೆಯ ಮಾಡಿ ಮಲವಳಿದು ಮುನಿ ಕುಲವಗೆಡಿಸಿ ಸತ್ಕುಲನೆನಿಸಿದೆ ಜಲಧಿಯೊಳಗೆ ಸೇತು ನಿಲಿಸಿ ಸಜ್ಜನರಿಗೆ ನೆಲೆ ವಾಸುದೇವವಿಠಲದೇವ ಪಾದಪದುಮ3
--------------
ವ್ಯಾಸತತ್ವಜ್ಞದಾಸರು
ಶರಣಾರ್ಥಿ ಶಿವಶರಣಾರ್ಥಿ | ಹರಿಹರ ಎಂದು ಶಿವಪದ ಕಂಡವಗೆ ಪ ಗುರುವಿಗೆರಗೆ ನಿಜ ಗುರುತಕೆ ಬಂದಿನ್ನು | ಧರೆಯೊಳು ಪುಣ್ಯ ಜಂಗಮನೆ ವಾಸಿ | ಅರಹುಮರಹು ಮೀರಿ ಸಹಜಾವಸ್ಥಿಗೆ | ಬೆರದಿಹ ಶರಣಗೆ 1 ಎದೆಸೆಜ್ಜೆಯೊಳಗಿಹ ಘನಲಿಂಗ ಪೂಜಿಸಿ | ಮುದದಿಂದ ಭಕ್ತಿಯ ಪಾವುಡದೀ | ಸದ್ಭಾವ ಸೂತ್ರದಿ ಆವಗುಧರಿಸಿಹ | ವಿದಿತ ಲಿಂಗಾಂಗಿಗೆ 2 ಆಶೆಯಸುಟ್ಟು ವಿಭೂತಿಯ ಹಚ್ಚಿದ | ಧ್ಯಾಸದಂಡ ಕೈಲಿ ಪಿಡಿದು | ಲೇಸಾದ ಸುಗುಣ ರುದ್ರಾಕ್ಷಿಯ ತೊಟ್ಟು | ಭಾಸಿಪ ಸಂತಗೆ 3 ಶಾಂತಿಯ ತೊಡರವ ಕಟ್ಟಿ ವಿವೇಕದ | ಮುಂತಾದ ಕಾಷಾಯ ಪೊದ್ದಿಹನಾ | ಸಂತತ ಗುರುಧರ್ಮ ಭಿಕ್ಷೆಯನುಂಡು | ವಿಶ್ರಾಂತಿಯ ಮಠ ಹಿಡಿದ ವಿರಕ್ತಗೆ 4 ಶರಣನೆನುತಾ ಅನ್ಯರ ಶರಣರ ಮಾಡೀ | ಶರಣ ತಾನೆಂಬ ವೃತ್ತಿಯನುಳಿದು | ದ್ಧರಿಸಿದ ಮೂರ್ತಿಗೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಕೃಷ್ಣವೇಣಿ ಶರಣು ಪುಣ್ಯಾಭರಣಿ ಶರಣು ಇಹಪರದಾಯಿನೀ ಪ ಸರ್ವವ್ಯಾಪಕನಿರಂಜನನೆನಿಪ ಶ್ರೀವಿಷ್ಣು ಉರ್ವಿಯೊಳು ದ್ರವರೂಪದೀ ಹರ್ವಿತಿಹಸಂದೇಹವಿಲ್ಲದಕೆ ಭಕುತಿಯಲಿ ಅರ್ವವನೆ ಗತಿಯ ಪಡದಾ ಮುದದಿ 1 ಅಚ್ಯುತನು ಕೃಷ್ಣನದಿ ಹರಿವುತಿಹನೆಂದು ಮೆಚ್ಚಿವೇಣಿಯ ನಾಮದಿ ನಿಚ್ಚ ಸತ್ಸಂಗವೆಂದರಿತು ಕೂಡಿದ ಶಿವನು ಸಚ್ಚರಿತನಾಮಮಹಿಮಾನೇಮಾ 2 ನಿನ್ನ ಪೂರೆಲುದಿತ ಪವನದಿ ದುರಿತವೋಡಿದವು ಇನ್ನು ಮಿಂದವನ ಗತಿಯಾ ಬಣ್ಣಿಸುವ ನಾವನೆಲೆ ಜನನೀತಾರಿಸುಯನ್ನ ಮನ್ನಿಸು ಗುರುವಿನಾಸುತನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಗಜಾನನನೆ ಶರಣು ಲಂಬೋದರನೆ ಶರಣು ಪಾರ್ವತಿ ಪುತ್ರ ಶುಭಗಾತ್ರ ಪ ಆದಿಯಲಿ ನಿನ್ನ ಪಾದಭಜನೆಯ ಮಾಡೆ ಸಾದರದಿ ಸಲಹುವೆ ಮೋದವಿತ್ತು ಮೇದಿನಿಯಲಿ ನಿನ್ನಾರಾಧನೆಯ ಮಾಡದವ ನ- ರಾಧಮನೆನಿಸುವನಿದು ಪುಸಿಯಲ್ಲ 1 ಆಖುವಾಹನನೆ ನೀ ಕಳೆ ವಿಘ್ನಗಳ ಸಾಕು ಲಾಲಿಸೆನ್ನ ಏಕದಂತ ಮಣಿ ಭೂಷಣ ಕಾಕುಜನ ಕುಠಾರ ಲೋಕೈಕ ವೀರ 2 ಸಿತಿಕಂಠ ವರಪುತ್ರ ಪ್ರತಿ ವಾಸರವು ನಾ ನುತಿಸಿ ಬೇಡುವೆ ನಿನ್ನ ಸತಿರಹಿತನೇ ಸಿರಿ ರಂಗೇಶವಿಠಲನ ಅತಿಪ್ರೀತಿಯಿಂದ ಭಜಿಪ ಮತಿಯ ನೀಡೋ 3
--------------
ರಂಗೇಶವಿಠಲದಾಸರು
ಶರಣು ಗುರು ಬ್ರಹ್ಮಣ್ಯ | ಶರಣು ಶಿರಿ ಸುರಮಾನ್ಯಪರಿಹರಿಸು ಭವತಾಪ | ಬಿನ್ನವಿಪೆ ಮುನಿಪ ಪ ಪುರುಷೋತ್ಮ ಕರಜಾತ | ಕಣ್ವತಟದಲಿ ಖ್ಯಾತನರಹರಿಯ ಪದಕಮಲ | ಭಜಕಶೀಲಶರಣ ಜನ ಸುರಕಲ್ಪ | ತರುವೆ ಎನ್ನಯ ಪಾಪಪರಿಹರಿಸೊ ಮುನಿಮೌಳಿ | ನಾನು ಪದಧೂಳಿ 1 ಯೋನಿ ಅನೇಕದಲಿ | ಬಂದಿರುವೆ ನಾಬಳಲಿಮಾನ ನಿಧಿ ನೀಯನ್ನ | ಕಾಯೊ ದಯ ಪೂರ್ಣ |ಜ್ಞಾನಾರ್ಕನೆನಿಸಿರುವ | ಮೌನಿ ತವ ಸದ್ಭಾವಪೂರ್ಣ ಹರಿ ಸುಜ್ಞಾನ | ಪಾಲಿಸೈ ನಿಪುಣ 2 ವಿಕಳ ಮತಿಯನು ಹರಿಸು | ಅಕಳಂಕನೆಂದೆನಿಸುಸುಖತೀರ್ಥ ಮತ ಸುಧೆಯ | ಉಣುವ ಪರಿಯ |ಸುಖದಿಂದ ಕರುಣಿಸುತ | ಸುಖ ಹರಿಯ ನೋಳ್ಪಂಥಪ್ರಕರಣದಲಿರಿಸೆನ್ನ | ಮೌನಿ ಕುಲರನ್ನ 3 ಸುಕೃತ ಒಂದಿರಲಿ | ನಿನ್ನ ದಯವಿರಲಿ 4 ವಿಠ್ಠಲ ಸುಪೂಜಕನೆ | ಕಷ್ಟಗಳ ಕಳೆಯುವನೆಶಿಷ್ಟ ಸಜ್ಜನ ಪಾಲ | ಹರಿಪದ ವಿಲೋಲ ಕೃಷ್ಣ ಗುರು ಗೋವಿಂದ | ವಿಠ್ಠಲನ ಪದದ್ವಂದ್ವಸುಷ್ಠು ಹೃದ್ಗುಹದಲ್ಲಿ | ಕಾಣಿಪುದು ಅಲ್ಲಿ 5
--------------
ಗುರುಗೋವಿಂದವಿಠಲರು
ಶರಣು ಚಿನ್ಮಯರೂಪ ಅತ್ರಿಮುನಿ ಕುಲದೀಪ ಶರಣು ವಿಶ್ವಂಭರನೇ ದತ್ತ ದಿಗಂಬರನೆ ಶರಣು ನೆನುವರ ಸಾರಿ ಸುಳಿದು ಹೊರೆವ ಉದಾರಿ ಶರಣು ದುರಿತಾಪಹಾರಿ ಶರಣು ಸಿಂಹಾದ್ರೀಶ ಯೋಗ ಮಾರ್ಗ ಪ್ರಕಾಶ ಶರಣು ಸರ್ವರ ಗುರುವೆ ಎನಿಸಿ ಲೋಕದಿ ಮೆರೆವೆ ಶರಣು ಮಹಿಪತಿ ನಂದನನ ನೋಡದವೆ ಕುಂದಾ ಸಲಹು ಪದ ದೋರಿ ದ್ವಂದ್ವಾ 1
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ವಾಯು ತನುಜ ಶರಣು ಭಾಸ್ಕರÀ ತೇಜ | ಶರಣು ರಾಜಾಧಿರಾಜ | ಶರಣು ಗೋಸಹಜ | ಶರಣಾರ ಸುರಭೋಜ ಪ ಸೂತ್ರನಾಮಕ ದೇವ | ಸ್ತೋತ್ರ ಮಾಳ್ಪರ ಕಾವ | ಚಿತ್ರ ಮಹಿಮರ ಕಾವ ವಿ | ಚಿತ್ರ ಶರೀರ ಸ | ಹೇಮ | ಪಾತ್ರಿಯೊಳಗೆ ಸವಿದು ಶ್ರೀಪತಿಯ ಶತ | ಪತ್ರ ಪಾದವ ಕಾ | ಲತ್ರಯ ನೆನೆಸುವನೆ 1 ಇದೆ ಭಾಗ್ಯ ನಾನಾವದೂ ಒಲ್ಲೆ | ಆ ನಾಮದ ಸೊಲ್ಲೆ ಮೇಣು ಪಾಲಿಪುದು ಮುಖ್ಯ | ಪ್ರಾಣಪಾವನ ಲೀಲ | ದಾನವರ ಕುಲಕಾಲ | ಏನೇನು ಮಾಳ್ಪಾಧಿಷ್ಠಾನದಲಿ | ನೀನೇ ನಾನೆಲ್ಲಿ ಎಣೆಗಾಣೆ2 ವಂದಿಸುವೆ ಜಗದ್ಗುರುವೆ | ಎಂದು ನಿನ್ನನು ಕರೆವೆ | ಮುಂದೆ ಈ ಜನ್ಮವು | ಹಿಂದೆ ಮಾಡಿ ನೇಮವು | ಪೊಂದಿಸು ಮೇಲುಗತಿ | ತಂದೆ ತಾಯಿ ಮಿಕ್ಕ | ನಿತ್ಯ | ವೆಂದೆ ಬಂದೆ ಸತ್ಯ ಕುಂದದೆ ಉದ್ಧರಿಸು 3 ದಾತ | ರೋಮ ರೋಮ ಕೋಟಿ ಕಾಮ ಸಂಹಾರನೇ | ಭೂಮಂಡಲಧರನೆ ಭೀಮಶೈನ | ಭೀಮ ರಿಪು ಗಂಟಲಗಾಣ | ತಾಮಸ ಜ್ಞಾನವಳಿ | ಸುಳಿ | ಶ್ರೀ ಮದಾನಂದತೀರ್ಥ4 ಶ್ರೀ ಸಪುತ ಕುಜನರ | ಭಾಷ್ಯ ಮುರಿದ ಧೀರ | ಭಾಸುರ ಕೀರ್ತಿ ಹಾರಾ | ದೋಷರಾಶಿ ದೂರ | ಹ್ರಾಸವಿಲ್ಲದ ಮಹಿಮ | ಶ್ರೀಶ ವಿಜಯವಿಠ್ಠಲನ್ನ | ದಾಸರೊಳಧಿಕ ನಿನ್ನ ಲೇಶವಾದರು ಬಿಡೆ | ನಾ ಸರ್ವಥಾ ಕರೆ | ತೋಷದಲಿಡುವುದೆನ್ನ 5
--------------
ವಿಜಯದಾಸ