ಒಟ್ಟು 2782 ಕಡೆಗಳಲ್ಲಿ , 117 ದಾಸರು , 2136 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಸಿರಿ ರಮಣಿಯೆ ಕರಗಳ ಮುಗಿಯುವೆ ವರಮತಿ ನೀಡೆನಗೆ ಪ ಸರಸಿಜಾಕ್ಷನ ವಕ್ಷಸ್ಥಳದಿ ನಿವಾಸಿಯೆ ನಿರುತದಿ ಹರಿಪಾದ ಸ್ಮರಣೆ ಎನಗೆ ಕೊಡು ಅ.ಪ ಮಂದರೋದ್ಧರ ಗೋವಿಂದ ಗುಣಗಳಾ- ನಂದದಿ ಸ್ತುತಿಸಿ ಹಿಗ್ಗುವ ಜನನಿ ಇಂದಿರೆ ರಮೆ ಭಾರ್ಗವಿಯೆ ನಿನ್ನಯ ಪಾದ ದ್ವಂದ್ವಕೆ ನಮಿಪೆ ಸುಗಂಧಿ ಸುಂದರಿಯೆ 1 ಪರಮಪುರುಷ ಪುರುಷೋತ್ತಮನರಸಿಯೆ ಪಾವನಿ ಜನನಿ ಸುರರು ಕಿನ್ನರರು ಕಿಂಪುರುಷರು ಸ್ತುತಿಪರು ವರ ಮಹಾಲಕ್ಷ್ಮಿ ಸುಂದರಿ ಜಯ ಜಯ ಎಂದು 2 ಗಂಗಾಜನಕ ಪಾಂಡುರಂಗ ನಿಜ ಸತಿ ಭೃಂಗಕುಂತಳೆ ಭಾಗ್ಯದ ಖಣಿಯೆ ಅಂಗಜಜನಕ ವಿಹಂಗವಾಹನನ ಪಾ- ದಂಗಳ ಸ್ಮರಣೆಲಿ ನಲಿವ ಮನವ ಕೊಡು 3 ಪಕ್ಷಿವಾಹನ ಕಮಲಾಕ್ಷನ ಮಹಿಮೆಯ ವೀಕ್ಷಿಸಿ ಮನದಿ ಹಿಗ್ಗುವ ಜನನಿ ರಾಕ್ಷಸನಾಮ ವತ್ಸರದಲಿ ಭಕುತರ ಮೋಕ್ಷದಾತನು ಸಲಹುವ ಸುಜನರನು4 ಕಮಲಸಂಭವ ಕಮಲಾಲಯೆ ಹರಿಪಾದ ಕಮಲಭೃಂಗಳೆ ಹಿರಣ್ಯಹರಿಣಿ ಕಮಲನಾಭ ವಿಠ್ಠಲನೊಡಗೂಡಿ ಹೃ- ತ್ಕಮಲದಿ ಶೋಭಿಸು ಎನುತ ಸ್ತುತಿಸುವೆನು 5
--------------
ನಿಡಗುರುಕಿ ಜೀವೂಬಾಯಿ
ಹರುಷದಿಂದಲಿ ಮನವೇ | ಪ ಭವ ಜಲದಿಂದಲಿ ದಾಟಿಸುವನು ಕಣ್ಣವರಿಸುತಲಿದ್ದು|ಅಚ್ಯುತಾನಂತ ಹರಿ| ಯನ್ನದೆವೆ ಕಂಡ ಚಿಂತೆಯನು ಮಾಡಿ| ಬನ್ನ ಬಡುತಲಿ ಉದರ|ಧಾವತಿಯವಳಗಾಗಿ| ದಣ್ಣನೇ ದಣಿದು ಬಂದು ಬಯಿಗೋರಗುವೇ 1 ಬಳ್ಳಿನೊರಳಗ ತೊಡರಿದ|ಕಾಲಿನಂತೆ ಭವಾ ತಳ್ಳಿಯೊಳುಸಿಲ್ಕಿ ಬಳಲುತಾ ಗುಂದುತಾ| ನಿಲ್ಲದೆವೆ ತಿರುಗುತಿಹೆ ಸಾಧು ಸಂಗಕಬರಲು ಯಳ್ಳಿಸಿತು ಅವಕಾಶ ಕಾಣೆ ನಾನು 2 ಕೆರೆಯ ನೀರನು ಕೆರೆಗೆ ಚೆಲ್ಲಿ|ವರವಪಡಿಯಲಿಕ್ಕೆ ಭರದಿಂದ ಬಂದ ಅಲತ್ಯ ನೋಡ್ಯಾ| ಹರಿನಾಮ ಹರಿಗರ್ಪಿಸಿ ಗತಿ ಪಡಿಯಲೊಲ್ಲಿ ಹರ ಹರಾ ನಿನಗೆಂತು ಮತಿ ವದಗಿತೋ 3 ಹಾಡಿ ಕೊಂಡಾಡಿದರ ಹರಿನಾಮ ನಾಲಿಗ್ಗೆ ಬಾಡಿಗೆಯು ಬೀಳುವದೋ ನಾನರಿಯೆ ನೋ ಮೂಢ ಪಾಮರನೆಮರ ಹುಟ್ಟಿ ಮರಬಿದ್ದಂತೆ ನೋಡು ನರ ದೇಹದಲಿ ಬಂದಾಯಿತು 4 ಹಿಂದಿನಪರಾಧಗಳಯೇನಾದರಾಗಲಿ ಮುಂದೆ ಇನ್ನಾರ ಸ್ವಹಿತ ವಿಚಾರಿಸೋ ತಂದೆ ಮಹಿಪತಿಸ್ವಾಮಿ ದ್ವಂದ್ವ ಚರಣಕ ಹೊಂದಿ ಇಂದಿರೇಶನ ವಲಮೆ ಪಡೆದು ಸುಖಿಸೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಸೆಗೆ ಕರೆಯುವ ಹಾಡು ಇಂದಿರಾ ದೇವಿಯ ರಮಣ ಬಾವೃಂದಾರಕ ಮುನಿ ವಂದ್ಯ ಬಾ ಶೋಭಾನೇ ಪ ಸಿಂಧು ಶಯನ ಗೋವಿಂದ ಸದÀಮಲಾನಂದ ಬಾತಂದೆಯ ಕಂದ ಬಾ ಮಾವನಾ ಕೊಂದ ಬಾ ಗೋಪಿಯಕಂದ ಬಾ ಹಸೆಯ ಜಗುಲಿಗೇ ಅ.ಪ. ಕೃಷ್ಣವೇಣಿಯ ಪಡೆದವನೆ ಬಾಕೃಷ್ಣನ ರಥ ಹೊಡೆದವನೆ ಬಾಕೃಷ್ಣೆಯ ಕಷ್ಟವ ನಷ್ಟವ ಮಾಡಿದ ಕೃಷ್ಣನೆ ಬಾ ||ಯದುಕುಲ ಶ್ರೇಷ್ಠ ಬಾಸತತ ಸಂತುಷ್ಟನೆ ಬಾಉಡುಪೀಯ ಕೃಷ್ಣ ಬಾ ಹಸೆಯ ಜಗುಲಿಗೇ 1 ನಾಗಾರಿ ಮಧ್ಯಳೆ ಹೊಂತಕಾರಿ ಬಾ ||ಬಲು ದುರಿತಾರಿ ಬಾಬಹು ವೈಯ್ಯಾರಿ ಬಾಸುಂದರ ನಾರೀ ಬಾ ಹಸೆಯ ಜಗುಲಿಗೇ 2 ಮಣಿ ಖಣಿಯೇ ಬಾಸೌಭಾಗ್ಯದ ಪನ್ನಗವೇಣಿ ಬಾ ||ಪರಮ ಕಲ್ಯಾಣಿ ಬಾನಿಗಮಾಭಿಮಾನೀ ಬಾಭಾಗ್ಯದ ನಿಧಿಯೇ ಬಾ ಹಸೆಯ ಜಗುಲಿಗೇ 3 ಸಿರಿ ಮೋಹನ ವಿಠಲನ ಸತಿಯೇ ಬಾವೇದಾವತಿಯೇ ಬಾಬಲು ಪತಿವ್ರತೆಯೇ ಬಾ ಹಸೆಯ ಜಗುಲಿಗೇ 4
--------------
ಮೋಹನದಾಸರು
ಹಸೆಗೆ ಬಾರೆ ಶುಭಾಂಗಿವಿಭಾವ ಪ ಸಿರಿ ಅ.ಪ ಜೀವರ ಸ್ವಭಾವಗಳಂತೆಯೆ ಮಾನಿನಿ ಜನನಿಯೆ ಬೇಗದಿ 1 ಭಾಸುರಾಂಗಿಯೇ ಬಾರೇ ರಮಾ ನೀ ಸಲಹಬೇಕು ನಮ್ಮಮ್ಮ ವಂದಿಸುವೆನೂ 2 ಗುರುರಾಮ ವಿಠಲನ ಪ್ರಿಯೆ ಕರುಣಾಬ್ಧಿಯೆ ಕಾಯೆ ಮಾಯೆ ವರಗಳ ನೀ ಕೊಡು ತಾಯೆ ಮಹಾಲಕ್ಷ್ಮಿಯೇ 3
--------------
ಗುರುರಾಮವಿಠಲ
ಹಿಡಿ ಮನವೇ ಸಂತರ ಸಂಗ ಪ ಹಿಡಿಮನವೇ ಸಂತರ ಸಂಗಾ | ಭವ ಭಯ ಭಂಗಾ | ಅಡಿಗಳಗೆರಗುತ ಸಾಷ್ಟಾಂಗಾ | ಪಡಕೋ ಚಿತ್ಸುಖದಂಗಾ 1 ಸಿಕ್ಕಿದು ಭಾಗವತರಣ | ಶರಣಾ | ಸಿಕ್ಕಲು ದಕ್ಕಿಸಿಕೋ ಕರುಣಾ | ಉಕ್ಕಲು ಜ್ಞಾನದಾ ನಿಜ ಸ್ಪರಣಾ | 2 ಗುಕ್ಕದವನೇ ತಾ ಹರಿಶರಣಾ | ಶರಣೆಂಬುದು ಸು¯ಭವಲ್ಲಾ | ಹರಿಮಯ ಕಾಂಬನು ಜಗವೆಲ್ಲಾ | ನೆರೆ ಹಮ್ಮ ಮಾತುಗಳುಳದಿಲ್ಳಾ | ಸರಿ ಸ್ತುತಿ ನಿಂದೆಗೆ ಬಗಿಬಲ್ಲಾ 3 ಎಲ್ಲರ ಮನದಂತಾನಾಗಿ | ನಿಲ್ಲುವ ಜನದೊಳು ನಿಜಯೋಗಿ | ಫುಲ್ಲನಾಭನ ಭಕುತಿಲಿ ಮುಣುಗಿ | ಬಲ್ಲವಿಕೆಯ ದೋರನು ಬಾಗೇ 4 ಏನೋ ಜ್ಞಾನಿಗಳಾನಂದಾ | ತಾನೇ ಬಲ್ಲನು ಶ್ರೀ ಗೋವಿಂದಾ | ಖೂನಕ ಸಾರಿದ ನುಡಿವಂದಾ | ಸ್ವಾನುಭವದೀ ಮಹಿಪತಿ ಕಂದಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಿಡಿದ ಕೈಬಿಡಬೇಡವೋ ರಾಮಾ ಪ ಹಿಡಿದ ಕೈ ಬಿಡಬೇಡ ಕಡಲವಾಸವು ಬೇಡ ತಡಿಗೆ ತಳೆಯದಿರಬೇಡ ಕಡೆಗಣ್ಣಿಡ ಬೇಡ ಅ.ಪ ನುಡಿ ಕೇಳದೆನಬೇಡ ಅಡಿದೋರದಿರ ಬೇಡ ಕುಡುಕ ಹೋಗೆನಬೇಡ ನುಡಿಸದಿರ ಬೇಡ ಕೊಡು ಕೊಡೆನ್ನಿಸಬೇಡ | ಪಡೆಯುವಾಸೆಯು ಬೇಡ ದೃಢವಾಗಿ ನಿನ್ನಡಿಯ ಹಿಡಿಸದಿರ ಬೇಡ 1 ಬಿಗುಮಾನ ಬೇಡಯ್ಯ ನಗುಮೊಗವ ತೋರಯ್ಯ ಬಗೆಯರಿತು ನಡೆಸಯ್ಯ ಸುಗತಿದೋರಯ್ಯ ಬಿಗಿಹಿಡಿದ ಕೈಯ ಜಗುಳಿಸಲು ಬೇಡಯ್ಯ ನಿಗಮ ವಂದಿತಜೀಯ ಮಾಂಗಿರಿಯ ರಂಗಯ್ಯ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಹಿಂಡು ಕರ್ಮಗಳ್ಯಾಕೆ | ಬಂಡಿ ದೈವಗಳ್ಯಾಕೆಪಂಡರಿ ದೊರೆಯು ಇರಲು ಪ ಪುಂಡರೀಕಾಕ್ಷ ಪದಬಂಡುಣಿಯವೋಲ್ ತುತಿಸಲಿಲ್ಲಾ | ಬಲ್ಲಾ 1 ಕಂಬು ಸಾರಥಿ ಕೃಷ್ಣಚರಿತೆಗಳ ಪೊಗಳುತಿರಲೋ | ಕೇಳೋ 2 ಇಂದು ಭಾಗದಿ ಭಕ್ತಸಂದಣೀಯಲಿ ಸೇರುತಾ |ತಂದೆ ತಾಯಿಯ ಸೇವೆ | ಮುಂದು ಮಾಡಿದಗೊಲಿದುನಿಂದು ಇಟ್ಟಿಗೆ ಮೆಟ್ಟಿಹಾ |ನಂದ ನಂದನ ಗುರೂ ಗೋ | ವಿಂದ ವಿಠಲನವಂದಿಸೆಲೊ ಮುದದಿ ಸತತಾ | ವಿತತಾ 3
--------------
ಗುರುಗೋವಿಂದವಿಠಲರು
ಹುಚ್ಚು ಹಿಡಿಯಿತು ಎನಗೆ | ಹುಚ್ಚು ಹಿಡಿಯಿತು ಪ ಸ್ವಚ್ಛ ಭಾಗವತವ ಕೇಳಿ | ಅಚ್ಯುತನ್ನ ಮಹಿಮೆ ಎಂಬಮೆಚ್ಯಮದ್ದು ಶಿರಕೆ ಏರಿ | ಹುಚ್ಚು ಹಿಡಿಯಿತು ಅ.ಪ. ಶ್ರವಣ ಸ್ತವನ ಸ್ಮರಣೆ ಸೇವೆ | ಅವನ ಅರ್ಚನೆ ವಂದನೆ ಸಖ್ಯಅವ ದಾಸ್ಯ ಆತ್ಮ ಅರ್ಪಣ | ನವವು ವಿಧದ ಭಕ್ತಿಗಳಿಪ 1 ಸಪ್ತ ದಿನದ ಕ್ಲುಪ್ತಿಯಿಂದ | ಸರ್ಪಶಯನ ಮಹಿಮೆ ಶ್ರವಣಶೃತಿ ಬಧಿರ ವಾಯ್ತು ಆತ್ಮ | ರಿಕ್ತ ವಿಷಯ ಶ್ರವಣಕೆಲ್ಲ 2 ಸ್ತವನ ಮಾಳ್ಪ ಶುಕರ ದೇಹ | ಭವಣೆ ಮರೆತು ಕೀರ್ತಿಸಿದರುಅವರ ಕಂಡು ಲೋಕವಾರ್ತೆ | ಸ್ತವನ ಗೈವರ ದೂಡುವಂಥ 3 ಹರಿಯ ಸ್ಮರಿಸಿ ಪ್ರಹಲ್ಲಾದ | ಹರಿಯ ಕಂಡು ಭವವ ಗೆದ್ದಸ್ಮರಿಸಿ ಸ್ಮರಿಸಿ ಅದನ ನಾನು | ನರರ ನಡುವೆ ಮೂಕನಾಗ್ದ 4 ನಿತ್ಯ ಮಾಳ್ಪ ಹರಿಯ ಸೇವೆಅರ್ತುಸಂತರ ಸೇವೆ ವ್ಯತಿ | ರಿಕ್ತಕೆಲ್ಲ ಪ್ರತಿಯ ಭಟಿಪ 5 ಅಂಬೆ ರಮಣನರ್ಚಿಸೀದ | ಕುಂಬಾರ ಭೀಮನ ಕೇಳಿ ನಾನುಅಂಬುಜಾಕ್ಷನರ್ಚನೆಗಲ್ಲದ | ತುಂಬಿದ್ವ್ಯೊಭವ ಚೆಲ್ಲುವಂಥ 6 ಕೃಷ್ಣ ವಂದನ ಅಕ್ರೂರ ಗೈದು | ಸುಷ್ಠು ಹರಿಯ ರೂಪ ಕಂಡಜಿಷ್ಣು ಸಖನ ನಮಿಸದವರ | ಭ್ರಷ್ರ್ರರೆಂದು ಬೈಯ್ಯುವಂಥ 7 ನಿತ್ಯ ನೆನೆಯದವರ | ಕ್ಷಣವು ಅವರ ಸಂಗಜರಿವ 8 ಪಾರ್ಥ ಸಖ್ಯತನದಿ ಪರಮ | ಅರ್ಥ ಪಡೆದುದನ್ನ ಕೇಳಿನಿತ್ಯ ಸಖನ ಮರೆತ ಜನರು | ವ್ಯರ್ಥರೆಂದು ಅರ್ಥಿಲಿ ನಗುವ9 ಭೃತ್ಯ ಬಲಿಯು ತನ್ನನಿತ್ತಸತ್ಯ ವಾರ್ತೆ ಕೇಳಿ ಕೇಳಿ | ಪ್ರವೃತ್ತಿ ಗೈದಿನ್ಯತ ನೆದಿ 10 ನಿಚ್ಚ ಗುರು ಗೋವಿಂದ ವಿಠಲ11
--------------
ಗುರುಗೋವಿಂದವಿಠಲರು
ಹುಚ್ಚುಮನವೆ ನಿನ್ನ ಹುಚ್ಚಾಟವನೆ ಕಂಡು ರೊಚ್ಚುಬರುತಿದೆ ಎನಗೆ ಎಚ್ಚರಿರೆಲೆಲೇ ಪ ಉಚ್ಚೆಕುಣಿಯಲಿ ಬಂದು ಭವದ ಮಾಯಾ ಜಗವ ನೆಚ್ಚಿ ಸಕಲ ಮರೆದು ಮುಂದಿನ ಎಚ್ಚರವೆ ಮರೆತೆಲ್ಲೋ ಪಾಪಿ ಅ.ಪ ಒಳಗೊಂದು ಹೊರಗೊಂದು ತಿಳಿಯುತಲಳಿಯುವಿ ಅಳಿದುಹೋಗುವ ಇಳೆಯ ಸಲೆ ಸುಖಕೊಲಿದು ಮಲದ ಭಾಂಡದಿ ಸಿಲುಕಿ ಅನುದಿನ ಮಲಿನಗುಣದಿಂ ತೊಳಲಿಬಳಲುತ ಗಳಿಸಿಕೊಂಡು ಬಂದ ಸಮಯ ಕಳೆದುಕೊಳ್ಳುವಿಯಲ್ಲೋ ಪಾಪಿ 1 ಹಿಂದೊಂದು ಮುಂದೊಂದು ವಂದಿಸಿ ನುಡಿಯುತ ಮಂದ ನೀನಾಗಿ ಹಂದಿಯು ಮಲ ಮೆದ್ದತೆರದಿ ಕುಂದಿಪೋಗುವ ಬಂಧುಬಳಗಕೆ ನಂದುನಂದೆಂಬ ವಿಷಯಲಂಪಟ ರಂಧ್ರೆಯಲ್ಲಿ ಬಿದ್ದು ಕೆಡುವಿ ಪಾಪಿ 2 ನುಡಿಯೊಂದು ನಡೆಯೊಂದು ಕಡುದೃಢ ನುಡಿಯಾಡಿ ಒಡಲಕಿಚ್ಚಿಗೆ ಬಲು ಮಿಡುಕುತಲಿ ಕೆಡುವ ತನುವಿನ ಮೋಹ ಬಿಡದೆ ಪೊಡವಿಗಧಿಕ ನಮ್ಮೊಡೆಯ ಶ್ರೀರಾಮ ನಡಿಯ ನಂಬದೆ ಮಡಿದುಪೋಗುವಿ ಕಡೆಗೆ ಹೆಡತಲೆಮೃತ್ಯುಗೆದೆಯಾಗಿ 3
--------------
ರಾಮದಾಸರು
ಹುರುಡು ನಿನಗೆ ಥರವೇನೊ ಸ್ವಾಮಿ ಗರುಡವಾಹನ ಸುರಧೇನು ಪ. ಕುರುಡ ಕಾಣದೆ ಕೂಪದಲಿ ಬಿದ್ದರೆತ್ತದೆ ಮೊರಡುತನದಿ ಮುಖ ನೋಡುತ ನಗುವಂಥ ಅ.ಪ. ಜ್ಞಾನಮಾರ್ಗವ ಕಾಣದಿರುವ ದೀನ ಮಾನವನಿಗೆ ಮೋಹಭರವ ತಾನೆ ಕಲ್ಪಿಸಿ ತತ್ವದಿರುವ ಮುಚ್ಚಿ ನಾನಾ ಯೋಗಿಗಳಲ್ಲಿ ತರುವ ಮಾನವು ಸರಿಯೆ ಮಹಾನುಭಾವ ನಿನ್ನ ದೀನ ಬಂಧುತ್ವಕೆ ಹಾನಿ ಬಾರದೆ ಕೃಷ್ಣ 1 ಇಂದ್ರಿಯಾರ್ಥ ಸನ್ನಕರ್ಷವೆಂಬ ಬಂಧನದಲ್ಲಿ ಸಿಕ್ಕಿ ಬೀಳ್ವ ನಾನಾ ತಂದ್ರ ಸಾಗರ ಮುನಿಗಳ ಬಹು ಮಂಜನು ಮಾಯೆಯ ಗೆಲ್ವ ಹೊಂದಿಕೆಯನು ಸುಖ ಸಾಂದ್ರ ನೀನರಿಯೆಯ ಇಂದ್ರಾದಿಗಳನು ಎಂದೆಂದಿಗೂ ಸಲಹುವಿ 2 ಅದರಿಂದ ಸರ್ವಕಾಲದಲಿ ನೀನೆ ಒದಗಿ ಪೊಳೆವುತ್ತ ಮನದಲಿ ಪದಯುಗವಿರಿಸಿ ಶಿರದಲಿ ದಾಸಪದವ ಪಾಲಿಸು ಕರುಣದಲಿ ಭವ ವಂದ್ಯ ವೆಂಕಟಗಿರಿನಾಯಕ ಪದುಮಾಲಯೆ ಕೂಡಿ ಸದನದಿ ನೆಲೆಯಾಗು 3
--------------
ತುಪಾಕಿ ವೆಂಕಟರಮಣಾಚಾರ್ಯ
ಹೃತ್ಪದ್ಮದೊಳಿದ್ದು ಹೃತ್ತಾಪಗಳ ಕಳೆಯೊ ಜೀ- ವತ್ಪಿತಾಮಹ ಜನಕನೇಪ ಮೃತ್ಪಿಂಡದಂತೆನ್ನ ಉತ್ಪತ್ತಿಗೆ ಕ- ಣ್ಣೆತ್ತಿ ನೋಡಲರಿಯಾ ಜೀಯಾ ಅ.ಪ ನಿತ್ಯ ನಿತ್ಯ ಜಗವೆಲ್ಲವು ನಿತ್ಯವು ನಿತ್ಯತ್ವವೆಲ್ಲ ಸರಿಯೇ ಏನಿದ್ದರೇನು ಅನಾದಿಕರ್ಮದ ಬವಣೆ ಬೆನ್ನಟ್ಟಿ ಬರುತಿರ್ಪುದ- ಜ್ಞಾನಾಂಧಕಾರದಿಂ ಧ್ಯಾನವನು ತಿಳಿಯದೇ ಕಾನನದೊಳಿಪ್ಪೆನೋ ಜ್ಞಾನಗಮ್ಯನೆಂದು ಸಾರುತಿದೆ ಶ್ರುತಿ ಶಾಸ್ತ್ರ ಜ್ಞಾನಗುರು ದೊರೆತಿಲ್ಲವೋ ಸಾನುರಾಗದಿ ನೀನೆ ಸಾಧನಕೆ ಕರುಣಿಸಿ ಧ್ಯಾನದಲಿ ಮನಸು ನಿಲಿಸೋ ಉಳಿಸೋ 1 ಬಂಧ ಮೋಕ್ಷಕೆ ಎಲ್ಲ ಮನವೆ ಕಾರಣವೆಂದು ಎಂದೆಂದಿಗು ಪೇಳುತಿಹರು ಸಿಂಧುಶಯನನೆ ಭವಬಂಧಮೋಚಕನೆಂದು ವಂದಿಸಿ ಪೊಗಳುವರೊ ಮಂದರೊದ್ಧರ ನಿನ್ನ ಮಂದಮತಿಯಿಂದಲಿ ವಂದಿಸಲು ನಾನರಿಯೆನೊ ಕಂದರ್ಪಜನಕ ನೀ ಮಂದಭಾಗ್ಯನ ಮನವ ನೋಯಿಸದೆ ನಿನ್ನ ಪದದಲ್ಲಿರಿಸೊ ಅಂದೆ ಎನ್ನಯ ಭವಬಂಧನಾಶವಾಗುವು- ದೊಂದೆ ನಿನ್ನನು ಬೇಡುವೆನೊ ಜೀಯ 2 ಜೀವರೆಲ್ಲರು ಗುಣತ್ರಯಾವರಣದಿಂದ ಕರ್ಮ- ಪ್ರವಹದೊಳಿಪ್ಪರೊ ಕವಿಸಿ ಮೋಹವ ನೀನು ಭವಕೆ ಕಾರಣವಹುದು ದೇವೇಶ ನಿನ್ನಾಟವೋ ಶ್ರವಣದಿಂದಲಿ ಭವಬಂಧಮೋಚಕನೆಂದು ತವ ಬಿರುದು ಸಾರುತಿದೇಕೋ ಭಾವ ಬಲ್ಲವರಾರೋ ಕಾವ ಕರುಣಿ ನೀನೆ ಭಾವಜನ ಪಿತನು ಅದೇ ಭವಪಾಶ ಬಿಡಿಸೆ ನಾ ಭಕುತಿಪಾಶದಿಂದ ಪಾದ ಬಿಗಿವೆನಯ್ಯ ಜೀಯ 3 ಸ್ವಾತಂತ್ರ್ಯವೆಲ್ಲಿಹುದು ಸ್ವಾಮಿತ್ವವೆಲ್ಲಿಹುದು ಅ- ಸ್ವತಂತ್ರನಾಗಿಪ್ಪೆನೊ ಕಾತುರದಿ ನಾ ಮಾಳ್ಪ ಕ್ರಿಯೆಗಳೆಲ್ಲವು ಎನ್ನ ಸ್ವಾತಂತ್ರ್ಯವೆಂದ್ಹೇಳುವೆ ನೀ ತಂತ್ರಿಯಾಗಿದ್ದೆನ್ನ ನಡೆಸುವುದನರಿಯೆ ಕು- ತಂತ್ರವನು ನಾ ಮಾಡುವೆ ಸ್ವಾ- ತಂತ್ರನು ನೀನು ಸೂತ್ರನಾಮಕ ದೇವ ಮಂತ್ರಿಯಾಗೀದೇವ ಯಂತ್ರ ನಡೆಸುವ ಎಂತಾದರಡಿಗಡಿಗೆ ಅತಂತ್ರನಾಗಿಹೆ ನಾನೇ ಭ್ರಾಂತಿಪರಿಹರಿಸಿ ಕಾಯೊ ಶೌರೇ 4 ಭಕ್ತಿ ಇಲ್ಲದೆ ನಿನ್ನ ಭಕ್ತನಾಗುವುದೆಂತೋ ಭುಕ್ತಮಾತ್ರನು ನಾನು ಮುಕ್ತರೊಡೆಯ ನೀನು ಯುಕ್ತಿತೋರಿಸು ಎನಗೆ ಭಕ್ತಾಪರಾಧಸಹಿಷ್ಣು ಶಕ್ತ ನೀನಹುದೊ ವೇದೋಕ್ತ ಮಹಿಮಾತೀತ ಸಕ್ತವಾಗಲಿ ನಿನ್ನ ಪದದಿ ಮನಸು ವ್ಯಕ್ತನಲ್ಲವೊ ಸರ್ವ ಸಾರಭೋಕ್ತನು ನೀನು ಭಕ್ತವತ್ಸಲ ಪುರುಷಸೂಕ್ತಮೇಯ ಅಪ್ರಮೇಯ ಯುಕ್ತಿಮಾತಲ್ಲಿದು ಭಕ್ತಿಪೂರ್ವಕ ನಿನ್ನ ಭಕ್ತ ಶ್ರೇಷ್ಠರ ಸೇವೆ ಕೊಟ್ಟು ರಕ್ಷಿಸೊ ದೇವಾ 5 ನಾದಕ್ಕೆ ಪರನಾಗಿ ವಾದಕ್ಕೆದೊರೆಯೇ ನೀ ವೇದವೇದಾಂತವೇದ್ಯ ಸಾಧನವು ಕಾಣೆ ಸಾಧನಶರೀರವಿದು ಸಾದರದಿ ಕರುಣಿಸಿದೆ ಅನಿರುದ್ಧದೇವ ಬಾಧಿಪುದು ಬಂಧಗಳು ಅನಾದಿಕರ್ಮದಿ ಬಂದು ನಾ ಅಧಮತಮಸಾಧನವನ್ನೆಸಗಿದೆ ನೀ ದಯಾಸಿಂಧು ಎಂದಡಿಗಡಿಗೆ ಬೇಡುವೆನು ಕೃದ್ಧನಾಗದೆ ಇನ್ನು ಉದ್ಧರಿಸು ತಂದೇ ಎಂದೇ 6 ಶಂಖಚಕ್ರಾಂಕಿತನೆ ಮಂಕುಬುದ್ಧಿಯ ಬಿಡಿಸೋ ಅಂಕಿತವೆನಗೆ ಇಲ್ಲ ಅಂಕೆ ಇಲ್ಲವೊ ನಿನ್ನ ನೆನೆಹುದಕೆ ಎಂದಿಗೂ ಶಂಕೆಯ ಪಡುವನಲ್ಲ ವೇಂಕಟಾದ್ರಿಯ ವಾಸ ಶ್ರೀ ವೇಂಕಟೇಶನು ಮಮಕುಲಸ್ವಾಮಿ ದೈವವೆಂದನುದಿನ ಸಂಕಟಾಗಾಮಿಗಳ ಕಂಟಕವ ಹರಿಸಿ ಪದ ಪಂಕಜದಿ ಮನವ ನಿಲ್ಲಿಸೋ ಬಿಂಕದ ಮಾತಲ್ಲ ಪಂಕಜದಳಾಯತಾಕ್ಷ ಅಕ- ಳಂಕಮಹಿಮ ಕಾಯೋ ಜೀಯಾ7
--------------
ಉರಗಾದ್ರಿವಾಸವಿಠಲದಾಸರು
ಹೆಜ್ಜೆ ತೋರೆ ಕಾಲಗೆಜ್ಜೆ ತೋರೆ ಸಾರಥಿ ಪಟ್ಟದ ರಾಣಿ ಹೆಜ್ಜೆ ತೋರೆ ಪ ಕಾಲಲಂದಿಗೆ ನೂಪುರವಿಟ್ಟ ಹೆಜ್ಜೆ ತೋರೆ ಕಾಳಿಮರ್ದನ ಕೃಷ್ಣನರಸಿಯೆ ಹೆಜ್ಜೆ ತೋರೆ ಕಾಲಸರವು ಪಾಡಗನಿಟ್ಟ ಹೆಜ್ಜೆ ತೋರೆ ಕಾಳಿಂದಿ ರಮಣನ ಸತಿಯೆ ಹೆಜ್ಜೆ ತೋರೆ 1 ಬಡವರ ಮನೆಗೆ ನಡದು ಬರುವ ಹೆಜ್ಜೆ ತೋರೆ ಬಡನಡು ಬಳುಕುತ ನಡೆಯುವ ಪುಟ್ಟ ಹೆಜ್ಜೆ ತೋರೆ ಸಡಗರದಲಿ ಹರಿಯೊಡನೆ ಬರುವ ಹೆಜ್ಜೆ ತೋರೆ ಪೊಡವಿಗೊಡೆಯ ಶ್ರೀ ಕೃಷ್ಣನರಸಿಯೆ ಹೆಜ್ಜೆ ತೋರೆ2 ಲುಲ್ಲುರುಳಿ ಪೈಜನಗಳು ಹೊಳೆವ ಹೆಜ್ಜೆ ತೋರೆ ಉಲ್ಲಾಸದಿ ಸುರರೆಲ್ಲರು ಸ್ತುತಿಪ ಹೆಜ್ಜೆ ತೋರೆ ಫುಲ್ಲಾಕ್ಷನ ಒಡಗೂಡುತ ಬರುವ ಹೆಜ್ಜೆ ತೋರೆ3 ಪದ್ಮ ರೇಖೆಗಳಿಂದ ಶೋಭಿಪ ಹೆಜ್ಜೆ ತೋರೆ ಪದ್ಮನಾಭನ ಕೂಡಿ ಬರುವ ಹೆಜ್ಜೆ ತೋರೆ ಪದ್ಮದೊಳು ಪುಟ್ಟಿರುವ ಪುಟ್ಟ ಹೆಜ್ಜೆ ತೋರೆ ಪದ್ಮಮುಖಿಯೆ ಶ್ರದ್ಧೆಲಿ ಭಜಿಪರು ಹೆಜ್ಜೆ ತೋರೆ4 ವಿರೋಧಿಕೃತ ಸಂವತ್ಸರ ಬರುತಿರೆ ಹೆಜ್ಜೆ ತೋರೆ ವಿರೋಧಿಗಳ ದೂರೋಡಿಪ ದಿವ್ಯ ಹೆಜ್ಜೆ ತೋರೆ ಸರೋಜದಳದೊಳು ಶೋಭಿಪ ದಿವ್ಯ ಹೆಜ್ಜೆ ತೋರೆ ಸುರರೆಲ್ಲರು ಕೊಂಡಾಡುತ ಸ್ತುತಿಪ ಹೆಜ್ಜೆ ತೋರೆ5 ನಿಗಮವೇದ್ಯಳೆ ನಿನ್ನ ಪೊಗಳುವೆ ಹೆಜ್ಜೆ ತೋರೆ ಅಗಣಿತ ಮಹಿಮನ ಗುಣಗಳ ಪೊಗಳುವೆ ಹೆಜ್ಜೆ ತೋರೆ ಬಗೆ ಬಗೆ ಭಕುತರು ಪೂಜಿಪ ನಿನ್ನ ಹೆಜ್ಜೆ ತೋರೆ ಖಗವಾಹನನೊಡಗೂಡುತ ಬರುವ ಹೆಜ್ಜೆ ತೋರೆ6 ಕಮಲ ಮುಖಿಯೆ ಕರುಣವ ಮಾಡಿ ಹೆಜ್ಜೆ ತೋರೆ ಕಮಲನಾಭ ವಿಠ್ಠಲನ್ನ ರಾಣಿ ಹೆಜ್ಜೆ ತೋರೆ ಕಮಲಾಕ್ಷಿಯರಿಂದ ಪೂಜೆಗೊಳ್ಳುವ ಹೆಜ್ಜೆ ತೋರೆ ಸುಮನಸವಂದ್ಯನ ಸತಿಯೆ ನಮಿಪೆ ಹೆಜ್ಜೆ ತೋರೆ7
--------------
ನಿಡಗುರುಕಿ ಜೀವೂಬಾಯಿ
ಹೇಳಯ್ಯಾ ಶ್ರೀ ಗುರುವೇ ಬಾಳುವೆನದರಂದವಿ ಸುರ ತರುವೇ ಪ ಹೀನ ಯೋನಿಯ ಮುಖದಲಿ ಬಂದು ನಾನಾ ತಾಪತ್ರಯದಿ ಬಹುನೊಂದು ನೀನೆ ಗತಿಯನುತ ಬಂದೆ ನಿಂದು ನಾನು ಭವದಿಂದ ತರಿಸುವ ಉಪಾಯವ ವಂದು 1 ಕೇಳಯ್ಯಾ ನೀ ಕಂದಾ ಹೇಳುವ ನುಡಿ ಗ್ರಹಿಸಲಾನಂದಾ ಆದಿಯಲಿ ದುರ್ಜನ ಸಂಗವಳಿದು ಸಾಧುಜನಸಂಗವನೇ ಬೆರೆದು ಬೋಧೆಯಂದಲಿ ಮನನವ ಬಲಿದು ಸಾಧಕನ ಉದ್ಯೋಗಿಸ ಸಿದ್ಧಿಯಹುದು2 ಸ್ವಾಮಿ ಸಜ್ಜನ ಸಂಗವನೇ ಬಯಸಿ ಪ್ರೇಮದಿರಬೇಕು ಇದೇ ನಿತ್ಯವೆನಿಸಿ ತಾಮತ್ತರ ಘಳಿಗಿಯೊಳು ವಲಿಸಿ ಭ್ರಮಿಸುತಿಹಿದು ಅದು ಏನೆಂದು ವಿಸ್ತರಿಸಿಹೇ3 ಕೇಳಯ್ಯಾ ಲೋಕವೆಲ್ಲಾ ಛಲನೆ ಮಾಡುವುದು ವಿಕಲ್ಲುಳ್ಳದು ನೋಡುಮನವದು ನಾಕು ತೆರದೊಳಿಸಿ ಕೊಳ್ಳಲದು ಬೇಕಾದುದನು ವಸ್ತು ಇದಿರಿಡುತಲಿಹುದು4 ನಳಿನ ಜಪರಾಸುರಗಳಿಗೆ ಛಲಿಸಲಿಕೆ ಮನ ಅಂಗನಿಗೆ ಬಲಿ ವಿಡಿದು ಮೋಹಿಸಿದ ರಾಗ ಇಳಿಯೊಳಗ ವಶಯಂತಹುದು ಮನುಜಗ5 ಕೇಳಯ್ಯಾ ಶುಕನಾರದ ಭೀಷ್ಮರ ನೋಡಾ ವಿಕಳಿಗೊಳ್ಳದೆ ಮನಕೂಡಾ ಸಕಲಗೆದ್ದರು ಅತಿಗಾಢಾ ಯುಕುತಿಲೆ ಮನೊಲಿಕೊವೈರಾಗ್ಯದಿಂದ ಧೃಡಾ6 ಹೇಳೈಯ್ಯಾ ಜ್ಞಾನಸಾಧನವೆಂಬುದನರಿಯೇ ಎನಗೆಂತಹದಿಂತಿದು ಧೋರಿಯೇ ನೀನೇ ತಾರಿಸುದಯದೆನ್ನ ಸಿರಿಯೇ ನಾನು ಎಂದೆಂದು ತವಪಾದಸ್ಮರಣಿ ಮರಿಯೆ7 ಎಂದು ಬಾಗುವ ಕಂದನನು ನೋಡಿ ಕರ ನೀಡಿ ಛಂದದಲಿ ತರಿಪಂತೆ ಮಾಡಿ ಬಂದು ಧನ್ಯ ಗೈಸಿದ ಗುರು ಮಹಿಪತಿ ಕೈಯ್ಯಗೂಡಿ8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೊಟ್ಟೆಪಾಡಿನ ಕೃತ್ಯವಲ್ಲವಿದು ವಿಠ್ಠಲನ ಸೇವೆ ಪ. ಶ್ರೇಷ್ಠ ಗುರುಗಳ ಆಜ್ಞೆಯಿಂದ ಮನ ಮುಟ್ಟಿ ನಡೆಸುವ ದಾಸವೃತ್ತಿಯು ಅ.ಪ. ವಂದನೆ ನಿಂದ್ಯಗಳನ್ನು ಗಮನಿಸದೆ ಇಂದಿರೇಶನ ಪದಕರ್ಪಿಸುತ ಮಂದಭಾಗ್ಯರ ಮಾತನೆ ಗಣಿಸದೆ ಬಂದ ಭಯಗಳ ದೂರೋಡಿಸುತಲಿ 1 ಆಶಪಾಶಗಳ ನಾಶಗೈಸಿ ಮನ ಕ್ಲೇಶಪಡದೆ ಸಂತೋಷಿಸುತ ವಾಸುದೇವ ಆನಂದಪೂರ್ಣ ಸ ರ್ವೇಶ ನಿನಗೆ ನಾ ದಾಸನೆಂತೆಂಬುದು 2 ಗೆಜ್ಜೆ ಕಾಲಿಗೆ ಕಟ್ಟಿ ತಾಳವ ಲಜ್ಜೆಯ ತೊರೆದು ಬಾರಿಸುತ ಮೂರ್ಜಗದೊಡೆಯ ಜಗಜ್ಜನ್ಮಾಧಿಕಾರಣನೆಂದು ಘರ್ಜಿಸುತಲಿ ಸಂಚಾರಮಾಳ್ಪುದೆ 3 ಇಂದು ನಾಳೆಗೆಂಬೋ ಮಂದಬುದ್ಧಿಯ ಬಿಟ್ಟು ಬಂದದರಿಂದಾನಂದಿಸುತ ತಂದೆ ಮುದ್ದುಮೋಹನದಾಸರ ಪದ ದ್ವಂದ್ವವ ಭಜಿಸುತ ಮುಂದೆ ಸಾಗುವುದು 4 ಗುರುಗಳ ಕರುಣದಿ ಅಂಕಿತ ಪಡೆಯಲು ದೊರೆವುದು ದಾಸತ್ವದ ಸಿದ್ಧಿ ಅರಿಯದೆ ವೇಷವ ಧರಿಸಿ ಮೆರೆದರೆ ಸಿರಿವರ ಮೆಚ್ಚನು ಗುರುವು ಒಲಿಯನು 5 ಉಚಿತ ಧರ್ಮಕರ್ಮಗಳನೆ ಮಾಡುತ ಖಚಿತ ಜ್ಞಾನ ಮನದಲಿ ತಿಳಿದು ವಚನದಿ ಹರಿನಾಮಗಳನೆ ನುಡಿಯುತ ಶುಚಿರ್ಭೂತರಾಗಿ ಆನಂದಪಡುವುದು 6 ದುಷ್ಟರ ತೊರೆದು ಶಿಷ್ಟರೊಳಾಡುತ ಶ್ರೇಷ್ಠವಾದ ದಾಸತ್ವದಲಿ ಬಿಟ್ಟು ಪ್ರಪಂಚವ ಸೃಷ್ಟೀಶ ಗೋಪಾಲ ಕೃಷ್ಣವಿಠಲನು ಶ್ರೇಷ್ಠದಿ ಭಜಿಪುದು 7
--------------
ಅಂಬಾಬಾಯಿ
ಹೊಡೀ ನಗಾರಿ ಮೇಲೆ ಕೈಯಾ ಕಡ ಕಡ ಪ ದೃಢಮತಿಯಲಿ ಕಡು ವಾದಿರಾಜರು ರುಜುಗುಣಪರೆಂದ್ಹೊಡೇ ಅ.ಪ. ಕಾಮನಯ್ಯನ ನೇಮದಿ ಸ್ಮರಿಸುವ ಕಾಮರಹಿತ ನಿಷ್ಕಾಮ ಕರೆವರೆಂದ್ಹೊಡೀ 1 ಅವನಿಯೊಳಗೆ ತಾ ಬಂಧುರ ಕುಲೇಂದ್ರಿನಿ ಗೊಲಿದವ ನಿಂದ್ಯಂದ್ಯರೆಂದೊಡಿ2 ಮೋದ ಮುನಿಯ ಮತ ಮೋದದಿ ಸಾಧಿಪ ಸದ್ವಾದಿರಾಜ ಗುರು ಮೋದತೀರ್ಥರು ಸಮರೆಂದ್ಹೊಡಿ 3 ಶೋಣಿತ ಶೂನ್ಯರಿವತೆಂದ್ಹೊಡಿ4 ಕಾಮಿನಿಗೋಸುಗ ಪ್ರೇಮದಿ ಕುಸುಮವ ತಂದಿಟ್ಟತುಳ ಭೀಮನ ಸರಿಸಮರಿವತೆಂದ್ಹೊಡಿ 5 ಸೀತೆಯಗೋಸುಗ ಸೇತುವೆಗಟ್ಟಿದ ರಘುನಾಥನ ಪ್ರೀತಿಯ ಘನವಾತನಪದ ಪೊಂದುವರೆಂದ್ಹೊಡಿ 6 ಇಂದಿರೇಶನ ಪದಮಂದಿರದಲಿ ಭಜಿಸುವ ನಂದಿವಾಹ ಮುಖವೃಂದ ವಂದ್ಯರೆಂದ್ಹೊಡಿ 7 ವೃಂದಾವನದೊಳು ಕೂತುಚ್ಛಂದದಿ ದ್ವಿಜರಿಗೆ ಬೋಧಿಪರಿವರೆಂದ್ಹೊಡಿ 8 ಕಂತುವಿನಲಿ ತಾನಿಂತು ಜಪಿಸುವ ತಂದೆವರದಗೋಪಾಲವಿಠಲನ ಪ್ರೀತಿಮಂತ್ರಿಯೆನಿಪವರೆಂದೊಡಿ 9
--------------
ತಂದೆವರದಗೋಪಾಲವಿಠಲರು