ಒಟ್ಟು 2659 ಕಡೆಗಳಲ್ಲಿ , 115 ದಾಸರು , 2043 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜೋ ಜೋ ಜೋ ಅಂಜನಿ ಕಂದಾ ಜೋ ಜೋಸಂಜೀವನ ತಂದಾ | ಜೋ ಜೋ ಸಾಧುಸಜ್ಜನ ವೃಂದಾ | ಜೋ ಜೋ ವಾಯು ಬಾಲಮುಕುಂದಾ ಜೋ ಜೋಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಭೂತೈದೆಂಬೊ ಕನ್ನಡಿ ಮಂಟಪದೊಳಗೆ |ಜ್ಯೋತಿ ದೀಪದ ಭಾಸ ಉನ್ಮನಿಯೊಳಗೆ |ಪ್ರೀತಿಂದ ಪ್ರಣವೆಂಬ ಮೇಲ್ಕಟ್ಟ ಕೆಳಗೆ ರಕ್ತಶ್ವೇತಶ್ಯಾಮನೀಲಖಿಡಕಿಯೊಳಗೆ ಜೋ ಜೋ1ಪಂಚ ಭೂತವೆಂಬ ಮಂಚವ ನಿಲಿಸಿ |ಪಂಚವಿಂಶತಿ ತತ್ತ್ವ ನವಾರ ಬಿಗಿಸಿ | ಪಂಚಕರಣವೆಂಬೋ ಹಾಸೀಗಿ ಹಾಸಿ | ಪಂಚ ಪ್ರಾಣವೆಂಬೋಲೇಪ ತೀವಿಸಿ ಜೋ ಜೋ2ಆರು ಚಕ್ರ ಮೀರಿದ ಸ್ಥಾನದಲ್ಲಿ |ಘೋರಘೋರಘೋಷ ಉನ್ಮನಿಯಲ್ಲಿ |ತುರ್ಯಾತೀತ ಶಂಕರ ತಾನೇ ಅಲ್ಲಿ |ಸೂರ್ಯಚಂದ್ರ ಅಗ್ನಿ ಮೂಜಗದಲ್ಲಿ ಜೋ ಜೋ3
--------------
ಜಕ್ಕಪ್ಪಯ್ಯನವರು
ತದಿಗೆಯ ದಿವಸ(ಶೇಷ ದೇವರನ್ನು ಕುರಿತು)ರಂಭೆ :ನ್ಯಾರೆಂಬುದನೆನಗೆ ಪೇಳೆಕ್ರೂರತನದಿ ತಾ ತೋರುವನೀಗ ಮ-ಹೋರಗನೆನ್ನುತ ಕೋರಿಕೆ ಬರುವದು 1ಒಂದೆರಡು ಶಿರವಲ್ಲ ಬಹುಹೊಂದಿಹವು ಸಟೆಯಲ್ಲಕಂಧರದಲಿ ಕಪ್ಪಂದದಿ ತೋರ್ಪವುಚಂದಿರಮುಖಿ ಯಾರೆಂದೆನಗರುಹೆಲೆ 2ಊರ್ವಶಿ : ಕೋಮಲಗಾತ್ರೆ ಮಹಾಮಹಿಮನು ಇವನ-ಸಾಮಾನ್ಯನೆ ಕಾಣೆಭೂಮಿಯ ಪೊತ್ತ ನಿರಾಮಯನಾದಸುಧೀಮನಿವನು ಜಾಣೆ 1ವಾಸುದೇವಗೆ ಈತ ಹಾಸಿಗೆಯವ ನಿ-ರ್ದೋಷನಿವನು ಜಾಣೆಸಾಸಿರಮುಖದ ವಿಲಾಸನಾಗಿಹ ಮಹಾ-ಶೇಷನಿವನು ಕಾಣೆ 2ಅದರಿಂದಲಿ ಕೇಳ್ ತದಿಗೆಯ ದಿವಸದಿಮಧುಸೂದನನಿವನಅಧಿಕಾನಂದದಿ ಒದಗಿಸಿ ಬರುವನುಇದೆಯಿಂದಿನಹದನ3ಎಂದಿನಂತೆ ಪುರಂದರವಂದ್ಯ ಮುಕುಂದಸಾನಂದದಲಿಅಂದಣವೇರಿ ಗೋವಿಂದ ಬರುವನೊಲ-ವಿಂದತಿ ಚಂದದಲಿ 4ಕಂಟಕಗಳು ಎಲ್ಲುಂಟೆಂಬಂತೆ ನೃಪ-ಕಂಠೀರವಗೈದಘಂಟಾನಾದದಿ ಮಂಟಪದೊಳು ವೈ-ಕುಂಠನು ಮಂಡಿಸಿದಾ 5ಕಾಂತಾಮಣಿ ಕೇಳಿಂತೀಪರಿ ಶ್ರೀ-ಕಾಂತ ನತತಂಡಸಂತವಿಸುತ ಮಹಾಂತಮಹಿಮನೇ-ಕಾಂತಸೇವೆಯಗೊಂಡ 6* * *ಪರಶಿವನನ್ನು ಕುರಿತುರಂಭೆ : ಯಾರಮ್ಮಾ ಮಹಾವೀರನಂತಿರುವನುಯಾರಮ್ಮಾ ಇವನ್ಯಾವ ಶೂರ ಯಾವಊರಿಂದ ಬಂದ ಪ್ರವೀರ ಆಹಾಮಾರಜನಕನ ವಿಸ್ತಾರಪೂಜೆಯ ವೇಳ್ಯಧೀರನಂದದಿ ತಾ ವಿಚಾರ ಮಾಡುವನೀತ 1ಕರದಿ ತ್ರಿಶೂಲವ ಧರಿಸಿ ಮತ್ತೆವರಕೃಷ್ಣಾಜಿನವನುಕರಿಸಿಹರಿಚರಣಸನ್ನಿಧಿಗೆ ಸತ್ಕರಿಸಿ ಆಹಾಜರಿಯ ದುಕೂಲವ ನಿರಿದುಟ್ಟುಕೊಂಡು ವಿ-ಸ್ತರವಾದ ತೋಷದಿ ಮೆರದು ನಲಿವ ಕಾಣೆ 2ಊರ್ವಶಿ : ಈತನೀಗ ಕಾಲಭೈರವ ಕೇಳೆಲೆಗೆ ನೀರ ಪ.ಈತನೀಗ ಪೂರ್ವದೊಳಗೆಭೂತನಾಥ ಸೇವೆಯೊಲಿದಓತು ವಿಷ್ಣುಭಕ್ತಿಯಿಂದಪೂತನಾದ ಪುಣ್ಯಪುರುಷ ಅ.ಪ.ಊರು ಇವಗೆ ಮೊದಲು ಗಂಗಾತೀರವಾಯ್ತುವೇಣುತಾ ವಿ-ಚಾರದಿಂದ ಪೊದನೈಉದಾರತನದಿ ರಾಮೇಶ್ವರಕೆಸಾರಗ್ರಹಿತ ಮುಕ್ತಿ ಪಥವನು ಕರುಣದಿಂದತೋರಿಸುವನು ವಿಷ್ಣುವೆಂದೆನುತ ಗಿರಿಯನೇರಿ ಕರುಣ ವಾರಿಧಿಯಪದಾರವಿಂದಸೇವೆಗೈದುಮಾರಪಿತನ ಭಕ್ತಿಯೊಳು ತಾ ಹೇರಿನಲಿವ ಚಾರುಚರಿತ 1ಪರಮಪುರುಷ ಹರುಷದಿಂದೀಪುರಕೆಬರುವಕಾಲದಲ್ಲಿಚರಣವನ್ನು ಬಿಡದೆ ಯಿಲ್ಲಿರುವನೈ ಮಹಾತ್ಮನೀತಸ್ಫುರಿತತೇಜೋಮೂರ್ತಿ ಈತನು ಲೋಕದೊಳಗೆಚರಿಸುವ ತ್ರಿಕಾಲಪ್ರಜÕನು ಇವನ ಗುಣವ-ನರಿವರ್ಯಾರು ಮನುಜಭುಜಂಗರಲಿಮಹತ್‍ಕಾರಣೀಕಪುರುಷನಿವ ಮಹಾ ಬಲಾಢ್ಯಕರುಣವುಳ್ಳ ವಿಷ್ಣುಭಕ್ತ 2ಶ್ರೀನಿವಾಸ ಕರುಣದಿಂಪ್ರಧಾನಿಯೆಂದು ನಡೆಸಿಕೊಡುವಏನಗೈದರೀತ ಮನದಿ ತಾನುತೋಷಪಟ್ಟು ಇರುವಕಾಣಿಕೆಗಳ ತರಿಸಿ ಇರಿಸುವ ಬೇತಾಳಪ್ರೇತನಾನಾ ಉಪದ್ರವಗಳ ಬಿಡಿಸುವ ಧನಿಯ ಆಜೆÕಏನ ದೊರಕಿತದನು ಬೇಗ ತಾನೆಬಂದು ಪೇಳಿ ಜನರಮಾನಿಸುತ ನಿಧಾನಗೊಳಿಸಿಕ್ಷೋಣಿಯೊಳಗೆ ಕೀರ್ತಿಪಟ್ಟ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತಲ್ಲಿಕಾರರು ನಿನ್ನ ಬಂಟರು ರಂಗನಿಲ್ಲಲೀಸರು ಸಂಸಾರಿಗಳನು ಕೃಷ್ಣ ಪ.ಮಳ್ಳಿದರಾಗಿ ಮಾತಾಡಿ ಬಲುಂಡುಟ್ಟುಇಲ್ಲದ ತಪ್ಪನೆಣಿಸಿ ಹೊರಿಸಿಸುಳ್ಳುಕಳವು ಹಾದರದ ಪಾಪಭವಬಳ್ಳಿಯ ಹರಿದು ಮೊಳೆಯನೊತ್ತಗೊಡರು 1ಕಾಂಚನವಿಡಿದು ಕಕ್ಕಸಬಟ್ಟು ಪೂರ್ವದಸಂಚಿತದಿ ನರಪಶುಗ್ರಾಸದಮುಂಚುವ ಬಣವೆಗೆ ಕಿಚ್ಚಿಕ್ಕಿ ಹುಡಿದೂರಿಪಂಚಾನನಂತೆ ಖೋ ಇಟ್ಟು ಕೂಗುವರು 2ಇದಿರೆದ್ದು ಕರೆದು ಮನ್ನಿಸಿ ಪೂಜಿಸಿಪಾದೋದಕ ಪ್ರೋಕ್ಷಿಸಿಕೊಂಡು ಮರೆಹೊಕ್ಕರೆಬದಿಯ ಸಂಪದ ಬಂದ ಕಬ್ಬು ಬಾಳೆÉ ನೆಲ್ಲುಗದ್ದೆಯ ಸಂಹರಿಸುವರುಪಕಾರಿಗಳು 3ಛಲದಿ ಮಂದಿರ ಹೊಕ್ಕು ಹರಿಸೇವೆ ಗೊಂದಣಗಳಲಿ ಬೇಡಿ ಚಾಮುಂಡೆರೋಡಿಸಿಹೊಲ ಮನೆ ಮಧ್ಯದ ಪಾಮರರ ಹಿಡಿ ತಂದುಬಲು ಕಾಸಿಸಿ ಮುದ್ರೆಯೊತ್ತದೆ ಬಿಡರು 4ಈಪರಿಭವಸುಖಸೂರ್ಯಾಡಿಎಳೆದೊಯ್ದುಶ್ರೀಪದಪುರದಿ ಸೆರೆಯಿಕ್ಕುವರುಶ್ರೀಪ್ರಸನ್ವೆಂಕಟಪತಿ ಮುಖ್ಯ ಪ್ರಾಣೇಶಈ ಪುಂಡರಿಗೆ ಹೇಳೊ ಇವರ ಸಾಕೆಂದು 5
--------------
ಪ್ರಸನ್ನವೆಂಕಟದಾಸರು
ತಾತ್ತ್ವಿಕತೆ245ಆರಿಗಾದರು ಪೂರ್ವಕರ್ಮ ಬಿಡದುವಾರಿಜೋದ್ಭವಅಜಭವಾದಿಗಳ ಕಾಡುತಿಹುದುಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ವೀರಭೈರವನಂತೆ ತಾನು ಬತ್ತಲೆಯಂತೆಮಾರಿಮಸಣಿಗಳಂತೆ ತಿರಿದು ತಿಂಬರಂತೆಸೂರ್ಯ ಚಂದ್ರಮರಂತೆ ರಾಹುವಟ್ಟುಳಿಯಂತೆಮೂರೆರಡು ತಲೆ ಹರಗೆ ಕೈಲಿ ಕಪ್ಪರವಂತೆ1ಶಿಷ್ಟ ಹರಿಶ್ಚಂದ್ರನಿಗೆ ಮಸಣದಡಿಗೆಯಂತೆಸೃಷ್ಟಿಸುವ ಬೊಮ್ಮನಿಗೆ ಶಿರ ಹೋಯಿತಂತೆಅಷ್ಟದಿಕಾಲ್ಪಕರು ಸೆರೆಯಾಗಿರುವರಂತೆಕಟ್ಟುಗ್ರದಿಂದ್ರನಿಗೆ ಮೈಯೆಲ್ಲ ಕಣ್ಣಂತೆ2ಹನ್ನೊಂದಕ್ಷೋಹಿಣಿ ಬಲವುಳ್ಳ ಕೌರವನುರಣದೊಳಗೆ ತೊಡೆಮುರಿದು ಬಿದ್ದನಂತೆವನಜಾಕ್ಷ ಸಿರಿಯರಸ ಬಲಿಯ ಬೇಡಿದನಂತೆವನಿತೆ ಧರ್ಮಜನ ತಾಯ್ತಿರಿದುಂಡಳಂತೆ3ಧರೆಗೆ ಧರ್ಮಜನಂತೆ ಕಂಕಭಟ್ಟನಂತೆಶೂರ ಭೀಮನು ಬಾಣಸಿಗನಾದನಂತೆವೀರ ಫಲುಗುಣನಂತೆ ಕೈಯೊಳಗೆ ಬಳೆಯಂತೆಕಿರಿಯ ನಕುಲ ಸಹದೇವರು ತುರುಗಾಯ್ದರಂತೆ4ಹರನ ವಾಹನವಂತೆ ಹುಲ್ಲು ತಿಂಬುವುದಂತೆವಿರಿಂಚಿವಾಹನವಂತೆಕಮಲಭಕ್ಷಿಪನಂತೆಹರಿಯ ಹೊತ್ತಿಹನಂತೆ ಹಾವು ಭಕ್ಷಿಪನಂತೆಸಿರಿಯಾದಿಕೇಶವನು ತಾ ಬೆಣ್ಣೆಗಳ್ಳನಂತೆ5
--------------
ಕನಕದಾಸ
ತುಂಬಿತುಂಬಿತುಂಬಿದೆ ಮುಕ್ತಿಯುತುಂಬಿದೆ ಮುಕ್ತಿಯು ತುಂಬಿದೆ ಮುಕ್ತಿಯುತುಂಬಿಪಧಡಧಡ ಧಡಿಸುತ ದಟ್ಟಣೆಯಿಂದಲಿ ದಯೆಗೈಯುತಲಿದೆತುಂಬಿಎಡದೆರಹಿಲ್ಲದೆ ಏಕವೆ ಎನಿಸುತ ಎಲ್ಲೆಡೆ ತುಂಬಿದೆತುಂಬಿ1ಅಂಬರದೊಳು ಚಿದಂಬರವೆನಿಸುವ ಅಂಬರತಾನಿದೆತುಂಬಿಬಿಂಬದಿ ತೋರುವ ಬಿಂಬಂತೆಲ್ಲವನಿಂಬಿಡುತಿದೆತಾತುಂಬಿ2ಜ್ಞಾನಾಮೃತ ರಸರಸವನೆ ಬೀರುತ ಜ್ಞಾನಕೆ ದೂರಿದೆತುಂಬಿತಾನೆ ತಾನೆ ತಾನಾದ ಪುರುಷಗೆ ತಾನೆಯಾಗಿದೆತುಂಬಿ3ನಾದದ ಮನೆಯಲಿ ನಾದದಿ ಮರೆಸುವ ನಾದದಿಬೆರೆತಿದೆತುಂಬಿಭೇದಾಭೇದಗಳಹ ದೃಗ್‍ದೃಶ್ಯದ ಭೇದವ ಸಾಕ್ಷಿಪತುಂಬಿ4ಇಂದುಅಮೃತಕರ ಸೂಸುವ ತೆರದಲಿಹೊಂದಿರುವವರನು ತಾತುಂಬಿಮಂದಹಾಸ ಮಹಾಲೀಲಾತ್ಮಕಸಿಂಧುಚಿದಾನಂದತುಂಬಿ5
--------------
ಚಿದಾನಂದ ಅವಧೂತರು
ತುಳಸಿ205ಎಲ್ಲಿ ಶ್ರೀ ತುಳಸಿಯ ವನವು |ಅಲ್ಲೊಪ್ಪುವರು ಸಿರಿ-ನಾರಾಯಣರು ಪಗಂಗೆ ಯಮುನೆ ಗೋದಾವರಿ ಕಾವೇರಿ |ಕಂಗೊಳಿಸುವ ಮಣಿಕರ್ಣಿಕೆಯು ||ತುಂಗಭದ್ರೆ ಕೃಷ್ಣವೇಣಿ ತೀರ್ಥಗಳೆಲ್ಲ |ಸಂಗಡಿಸುತ ವೃಕ್ಷಮೂಲದಲ್ಲಿರುವುವು 1ಸರಸಿಜಭವಭವಸುರಪಪಾವಕಚಂ-|ದಿರಸೂರ್ಯಮೊದಲಾದವರು ||ಸಿರಿರಮಣನ ಆಜೆÕಯಲಿ ಅಗಲದಂತೆ |ತರುಮಧ್ಯದೊಳುನಿತ್ಯನೆಲಸಿಪ್ಪರು2ಋಗ್ವೇದ ಯಜುರ್ವೇದಸಾಮಅಥರ್ವಣ |ಅಗ್ಗಳಿಸಿದ ವೇದಘೋಷಗಳು ||ಅಗ್ರಭಾಗದಲಿವೆ ಬೆಟ್ಟದೊಡೆಯನಲ್ಲಿ |ಶ್ರೀಘ್ರದಿ ಒಲಿವ ಶ್ರೀಪುರಂದರವಿಠಲ3
--------------
ಪುರಂದರದಾಸರು
ತೂಗಿರೆ ರಂಗನ್ನ ತೂಗಿರೆ ಕೃಷ್ಣನತೂಗಿರೆ ಅಚ್ಯುತಾನಂತನ ಪ.ತೂಗಿರೆ ವರಗಿರಿ ಅಪ್ಪ ತಿಮ್ಮಪ್ಪನತೂಗಿರೆ ಕಾವೇರಿ ರಂಗಯ್ಯನ ಅಪಇಂದ್ರಲೋಕದೊಳುಪೇಂದ್ರ ಮಲಗಿಹನೆಬಂದೊಮ್ಮೆ ತೊಟ್ಟಿಲ ತೂಗಿರೆಮಂದಗಮನೆಯರು ಚೆಂದದಿ ಪಾಡುತನಂದನ ಕಂದನ ತೂಗಿರೆ 1ನಾಗಲೋಕದಲ್ಲಿ ನಾರಾಯಣ ಮಲಗಿಹನೆಹೋಗಿ ನೀವ್ ತೊಟ್ಟಿಲ ತೂಗಿರೆನಾಗವೇಣಿಯರು ನಾಲ್ಕು ನೇಣನು ಪಿಡಿದುಭಾಗ್ಯವಂತನೆಂದು ತೂಗಿರೆ 2ಜಲಧಿಯೊಳಾಲದ ಎಲೆಯಲ್ಲಿ ಮಲಗಿದಚೆಲುವನ ತೊಟ್ಟಿಲ ತೊಗಿರೆಸುಲಭ ದೇವರ ದೇವ ಬಲಿಬಂಧಮೋಚಕಎಳೆಯನ ತೊಟ್ಟಿಲ ತೂಗಿರೆ 3ಸೂಸುವ ಮಡುವಿನೊಳ್ ಕಾಳಿಯನ ತುಳಿದಿಟ್ಟದೋಷವಿದೂರನ ತೂಗಿರೆಸಾಸಿರ ನಾಮದ ಸರ್ವೋತ್ತಮನೆಂದುಲೇಸಾಗಿ ತೊಟ್ಟಿಲ ತೂಗಿರೆ 4ಅರಳೆಲೆ ಮಾಗಾಯಿ ಕೊರಳ ಪದಕ ಸರತರಳನ ತೊಟ್ಟಿಲ ತೂಗಿರೆಉರಗಾದ್ರಿವಾಸ ಶ್ರೀ ಪುರಂದರವಿಠಲನಹರುಷದಿ ಪಾಡುತ ತೂಗಿರೆ 5
--------------
ಪುರಂದರದಾಸರು
ತೋರುವದುಘನತೋರದಡಗದುಸಹಜವಾದುದೆಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಶ್ರೋತೃವಕ್ತ್ರವೆಂಬ ಬರಣಿಗಳು |ಸೂತ್ರಸುಮನದಿ ಮಂಥನ ಮಾಡಲು1ಸಂತ ಸಾಧು ಮಹಂತಸಿದ್ಧ ವೇ-ದಾಂತ ಚರ್ಚದಿ ಭಕುತಿ ನೋಡಲು2ಆದಿನಾಥ ಪರಂಪರೆ ಶಂಕರಬೋಧಸದ್ಗುರು ಸತ್ಸೀಲದಲ್ಲಿ3
--------------
ಜಕ್ಕಪ್ಪಯ್ಯನವರು
ತ್ರಿಜಗದ್ವಾ ್ಯಪಕಹರಿಎನುವರು ಸುಜನರುನಿಜದಲಿ ಪೇಳಿವದಾರಕ್ಕಾಅಜಭವಾದಿಗಳಿಗರಸನಾದಹದಿನಾಲ್ಕು ಲೋಕಕೆ ದೊರೆ ತಂಗಿ 1ನೀರೊಳು ಮುಳುಗುತ ಮೀನರೂಪದಿಸಾರುವ ಮಯ್ಯವದಾರಕ್ಕನೀರೊಳು ಮುಳುಗಿ ವೇದವ ತಂದು ಸುತಗಿತ್ತಧೀರ ಮತ್ಸ್ಯಮೂರುತಿ ತಂಗಿ 2ಭಾರಬೆನ್ನಿಲಿ ಪೊತ್ತು ಮೋರೆ ಕೆಳಗೆ ಮಾಡಿನೀರೊಳು ವಾಸಿಪದಾರಕ್ಕವಾರಿಧಿಮಥಿಸಿದಮೃತ ಸುರರಿಗೆ ಇತ್ತಧೀರಕೂರ್ಮಮೂರುತಿ ತಂಗಿ3ಕೋರೆದಾಡಿಯಲಿ ಧಾರುಣಿ ನೆಗಹಿದಫೋರನೆನುವರಿವದಾರಕ್ಕಕ್ರೂರ ಹಿರಣ್ಯಾಕ್ಷನ ಕೊಂದು ಭೂಮಿಯ ತಂದಶೂರ ವರಹ ಮೂರುತಿ ತಂಗಿ 4ಕ್ರೂರರೂಪತಾಳುತ ಕರುಳ್ವನಮಾಲೆ ಹಾಕಿದವದಾರಕ್ಕಪೋರನ ಸಲಹಲು ಕಂಬದಿಂದುಸಿದನಾರಸಿಂಹ ಮೂರುತಿ ತಂಗಿ 5ಮೂರಡಿ ಭೂಮಿಯ ದಾನವ ಬೇಡಿದಹಾರ್ವನೆನುವನಿವದಾರಕ್ಕಧೀರ ಬಲಿಯ ಭಕ್ತಿಗೆ ಮೆಚ್ಚಿ ಬಾಗಿಲು ಕಾಯ್ದವಾಮನ ಮೂರುತಿ ಇವ ತಂಗಿ 6ಮೂರು ಏಳುಬಾರಿಧಾರುಣಿ ಚರಿಸಿದಶೂರನೆನುವರಿವದಾರಕ್ಕವೀರ ಕ್ಷತ್ರಿಯರ ಮದವನಡಗಿಸಿದ ಪರಶು-ರಾಮ ಮೂರುತಿ ತಂಗಿ 7ಕೋತಿಗಳೊಡನಾಡಿ ಸೇತುವೆ ಕಟ್ಟಿದ ಪ್ರ-ಖ್ಯಾತನೆನುವರಿವದಾರಕ್ಕಮಾತರಿಶ್ವನಿಗೆ ಒಲಿದಂಥ ದಶರಥರಾಮ ಚಂದ್ರ ಮೂರುತಿ ತಂಗಿ 8ಗೋಕುಲದೊಳು ಪಾಲ್ಬೆಣ್ಣೆ ಮೊಸರುನವನೀತಚೋರನಿವದಾರಕ್ಕಲೋಕಗಳೆಲ್ಲಾ ತಾಯಿಗೆ ಬಾಯೊಳುತೋರ್ದಗೋಪಾಲಕೃಷ್ಣ ಮೂರುತಿ ತಂಗಿ 9ತ್ರಿಪುರರ ಸತಿಯರ ವ್ರತಗಳನಳಿದನುಗುಪಿತನೆನುವರಿವದಾರಕ್ಕಕಪಟನಾಟಕ ಸೂತ್ರಧಾರಿ ಶ್ರೀ-ಹರಿಬೌದ್ಧ ಮೂರುತಿ ತಂಗಿ10ಅಶ್ವುವನೇರುತ ಹಸ್ತದಿ ಖಡ್ಗ ಪುರು-ಷೋತ್ತಮನೆನುವರಿವದಾರಕ್ಕಸ್ವಸ್ತದಿ ಕಲಿಯೊಳು ಸುಜನರ ಪಾಲಿಪಕರ್ತೃ ಕಲ್ಕಿ ಮೂರುತಿ ತಂಗಿ 11ಶಂಖು ಚಕ್ರ ಗದೆ ಪದುಮವು ಸಿರದಿ ಕಿ-ರೀಟಧಾರಿ ಇವದಾರಕ್ಕಪಂಕಜಾಕ್ಷಿ ಪದ್ಮಾವತಿಪತಿಶ್ರೀ-ವೆಂಕಟೇಶ ಮೂರುತಿ ತಂಗಿ 12ಮಮತೆಲಿ ಸುಜನರ ಶ್ರಮ ಪರಿಹರಿಸುವಕಮಲಾಪತಿ ಇವದಾರಕ್ಕಕಮಲಪತ್ರಾಕ್ಷ ಶ್ರೀ ಕಮಲನಾಭ ವಿ-ಠ್ಠಲ ಮೂರುತಿ ಕೇಳಿವ ತಂಗಿ 13
--------------
ನಿಡಗುರುಕಿ ಜೀವೂಬಾಯಿ
ತ್ರುಟಿಗೆ ಕ್ಷಣಕೆ ನೆನೆಮನವೇ - ಹರಿಯ |ತ್ರುಟಿಗೆ ಕ್ಷಣಕೆ ನೆನೆಮನವೆ ಪತ್ರುಟಿಗೆ ಕ್ಷಣಕೆ ನೆನೆ ಕ್ಷಣಕೆ ಲವಕೆ ನೆನೆ |ಘಟಿಗೆ ಘಟಿಗೆ ನೆನೆ, ಇರುಳು ಹಗಲು ನೆನೆ ಅ.ಪಜಠರದಿ ಜಗತಿಗೆ ಹಿರಿಯ-ಜಗ |ನ್ನಾಟಕಮೋಹ ಸೂತ್ರಧಾರಿಯ ||ಪಟು ಹಿರಣ್ಯಾಕ್ಷ ಸಂಹಾರಿಯ |ನಿಷ್ಠುರನಾದ ಕಂಸಾರಿಯ 1ರಣಿತ ಕಂಕಣ ನೂಪುರಿಯ-ರು |ಕ್ಮಿಣಿಯನಾಳುವ ದೊಡ್ಡ ದೊರೆಯ ||ಗುಣನಿಧಿ ಗೋವರ್ಧನಧಾರಿಯ-ನೀ- |ಕರುಣಿಯು ಅವನೆಂದರಿಯ 2ನವನೀತದಧಿತಸ್ಕರಿಯ -ಈ |ಭವಹರಒಡೆಯನೆಂದರಿಯ ||ಜವನು ಕೇಳಲು ನಿನ್ನ ಮೊರೆಯ -ಚಿಹಿ |ಅವನ ನಾಲಗ್ಗೆ ಮುಳ್ಳು ಮುರಿಯ 3ಮನಕಭಾಗಿಗೆ ಶ್ರುತಿಯರಿಯ -ದಂಥ |ಘನಪಾಪಿಗಳಿಗವ ದೊರೆಯ ||ನೆನೆವರ ಪಾಲಿಪುದ ಮರೆಯ -ಸು |ಮ್ಮನೆ ಇರಲವ ನಮ್ಮ ಪೊರೆಯ4ಸ್ಮರಿಸಲು ಯಮ ನಿನ್ನ ದಾರಿಯ -ಹೋಗ |ವರಭಾರತಿಪತಿ ಮರೆಯ |ಪುರಂದರವಿಠಲ ದೊರೆಯ -ನೆನೆ-ದಿರೆ ಯಮ ನಿನ್ನನು ಕೊರೆಯ 5ತ್ರುಟಿಗೆ ಕ್ಷಣಕೆ ನೆನೆಮನವೇ-ಹರಿಯತ್ರುಟಿಗೆ ಕ್ಷಣಕೆ ನೆನೆಮನವೇ ||
--------------
ಪುರಂದರದಾಸರು
ದಯವಿರಲಿ ವ್ಯಾಸ ದಯವಿರಲಿಕೈವಲ್ಯಪತಿ ನಮಗೆ ಕರುಣೆ ಮಾಡೊ ಪೂರ್ಣ ಪಚಲ್ವರಾಯರ ಮನೆಯ ಕುಲದೈವ ವ್ಯಾಸನುಬಲರಾಮ ಪಾದವ ತೊಳೆದನು ಪೂರ್ಣಬಲರಾಮಪಾದತೊಳೆದು ಪ್ರಾರ್ಥಿಸಿದನುಹಲವು ಪದಾರ್ಥ ಕೈಕೊಳ್ಳೊ ಪೂರ್ಣ 1ತಂದೆ ವ್ಯಾಸ ಮುನಿಗೆ ಗಂಧ ಅಕ್ಷತೆ ಪುಷ್ಪಚಂದದ ತುಳಸಿಜಲದಿಂದ ಪೂರ್ಣಚಂದದ ತುಳಸಿಜಲದಿಂದ ಬಲರಾಮನುಗೋವಿಂದ ಗರ್ಪಿಸಿದ ಹರುಷದಿ ಪೂರ್ಣ 2ಸತ್ಯವತಿಯ ಮಗನ ಮುತ್ತು ರತ್ನದ ವಸ್ತಲಕ್ಷ ಸೂರ್ಯರ ಬೆಳಕಿಲೆ ಪೂರ್ಣಲಕ್ಷ ಸೂರ್ಯರ ಬೆಳಕಿಲೆ ಉಚಿತವಅರ್ಥಿಲೆ ರಾಮೇಶ ಕೈಕೊಳ್ಳೊ ಪೂರ್ಣ 3
--------------
ಗಲಗಲಿಅವ್ವನವರು
ದಾಟು ಭವಾಟವಿಯನ್ನು ಮನುಜ ನೀದಾಟು ಭವಾಟವಿಯನ್ನುಕೈಟಭಾಂತಕನಾಮಪಾತಕರೊಡಗೂಡಿನೀಟಾಗದಂದದ ಪಾಟಿಯ ಕೇಳಿನ್ನು ಪ.ಹೆಣ್ಣೆಂಬ ಹೆದ್ದೋಳ ತಿರುಗುತಿವೆ ಬಲುಪುಣ್ಯಮಾರ್ಗವ ನಡಿಗುಡವುಬಣ್ಣ ಬಣ್ಣದ ಮೃತ್ಯುಗಳೆಂಬ ಹೆಬ್ಬುಲಿಕಣ್ಣಲಿ ಕಂಡರೆ ಬಿಡವುಸಣ್ಣಮಕ್ಕಳು ನೆಂಟರಿಷ್ಟ ನರಿಗಳರ್ಥಪೆಣ್ಣಿನ ನಾತಕೆ ಓಡ್ಯಾಡುವುವುಹಣ್ಣುಕಾಯಿಗಳೆಲ್ಲ ವಿಷಮಯವಾಗಿಹ ಅರಣ್ಯದ ಖಳರೆಂಬ ಗಿಡವು 1ಆರಿಂದ್ರಿಯ ಕಳ್ಳರೆಂಬ ಕಾಮವೆಂಬಚೋರನಾಯಕನುಪಟಳವುಭೂರಿಕಾಲದ ಧರ್ಮವೆಂಬ ದ್ರವ್ಯವೆಲ್ಲಸೂರ್ಯಾಡಿಸುಲಕೊಂಬ ಹಯವುಮೂರು ಬಗೆಯಿಂದ ಸುಡುತ ಕಂಗೆಡಿಸುವದಾರುಣತರ ದಾವಾನಳವುಚೀರುವ ನಿಂದಕ ಝಲ್ಲಿಕದುಶಾಸ್ತ್ರ ನಿಸ್ಸಾರ ಘೂಕಗಳ ರವವು 2ಅಡ್ಡಡ್ಡ ಬಂದು ಅಜ್ಞಾನ ಕಾಳೋರಗವೆಡ್ಡುಗೊಳಿಸಿ ಕಚ್ಚುತಿವೆದೊಡ್ಡೆಂಟು ಮದವೆಂಬೊ ಮದ್ದಾನೆ ಎದೆಯೆಂಬಗುಡ್ಡದೊಳಗೆ ಸುತ್ತುತಿವೆಹೆಡ್ಡನೆಂದು ಚುನ್ನವಾಡಿ ಮನೋಬುದ್ಧಿಗಡ್ಡದ ಕಪಿ ಕಾಡುತಿವೆ 3ಜನ್ಮಮರಣ ಹಸುತೃಷೆಜರಾವ್ಯಾಧಿಯೆಂಬುಮ್ಮಳಿಕೆಯ ಪೊರೆಯುಂಟುಹಮ್ಮುಮಮತೆ ಎಂಬ ತಲೆಹೊರೆ ಭಾರಾಗಿಒಮ್ಮೆಗಿಳಿಯಲಿಲ್ಲ ಗಂಟುಸ್ವರ್ಮಂದಿರವೆ ಹೆಬ್ಬೆಟ್ಟನಾಯಕನರ್ಕಕಮ್ಮರಿಗಳು ಇಪ್ಪತ್ತೆಂಟುಸನ್ಮಾನ ರಾಗಭೋಗಗಳೆಂಬ ಬಯಲಾಸೆಯ ಮೃಗತೃಷ್ಣೆಯ ನಂಟು 4ಅಲ್ಲಿಗಲ್ಲಿಗೆ ಸುಖದು:ಖನೆಳಲುಬಿಸಲಲ್ಲಿಗಲ್ಲಿಗೆ ಪ್ರಿಯತರುವುಬಲ್ಲಿದರಿಂದಾಹ ಭಯದಂತೆ ಸೂಚಿಪಕಲ್ಲುಕೊಳ್ಳಗಳ ನಿರ್ಝರವುಕೊಲ್ವಾರಿನೃಪದೂತರೆಂಬ ಸೂಕರಮೋಹÀಹಲ್ಲೊಳಗಘಕೂಪದಿರವುಕ್ಷುಲ್ಲಕ ಪಿಸುಣರೆಂಬುವ ಋಕ್ಷಬಿಡಾಲಹೊಲ್ಲನಖಿಗಳ ಸಂಚರವು 5ಈಷಣತ್ರಯಯಂತ್ರ ಏಳು ಪ್ರಾಕಾರದಿದ್ವೇಷಿಗಳಿದ್ದ ದುರ್ಗಗಳುದೂಷಣ ಸ್ತುತಿ ಎಂಬ ಕಾಕಪಿಕೋಕ್ತಿ ಪ್ರದೋಷದ ಮಳೆ ಮಂಜುಗಳುನೈಷಧನುಂಡು ಕೊಬ್ಬಿದ ಇಂದ್ರಿಯಗೋಳಕಮೂಷಕಗಳಿಹ ಬಿಲಗಳುದೋಷ ದುರ್ವಾರ್ತೆ ದುರಿತವೆಂಬ ಕ್ರವ್ಯಾದಘೋಷಣ ಭಯಂಕರಗಳು 6ಈ ರೀತಿಕಾಂತಾರದಾಟುವ ಧೀರಗೆಮಾರುತಿ ಮತ ಪಕ್ಷ ಬೇಕುನಾರಾಯಣನೆ ಸರ್ವೋತ್ತಮನೆಂದೆಂಬತೋರ ಗಧಾಯುಧ ಬೇಕುಘೋರಾದ್ವೈತ ಕಕ್ಷವ ಛೇದಿಸುವ ಸುಕುಠಾರ ತತ್ವಗಳಿರಬೇಕುಸಾರಜÕಜನಪ್ರಭು ಪ್ರಸನ್ವೆಂಕಟಕೃಷ್ಣನಾರಸಿಂಹನಸ್ಮøತಿಬೇಕು7
--------------
ಪ್ರಸನ್ನವೆಂಕಟದಾಸರು
ದಾರಿ ಏನಿದಕೆ ಮುರಾರಿ - ನೀ ಕೈಯ ಹಿಡಿಯದಿದ್ದರೆ-|ದಾರಿ ಏನಿದಕೆ ಮುರಾರಿ? ಪಕಷ್ಟ-ಕರ್ಮಂಗಳ ಎಷ್ಟಾದರು ಮಾಳ್ಪೆ |ಎಷ್ಟಾದರೂ ನುಡಿದೆ ಗುರುಹಿರಿಯರ ||ದುಷ್ಟರ ಸಂಗವ ಬಹಳ ಮಾಡಿದರಿಂದ |ಶಿಷ್ಟರ ಸೇವೆಯೆಂದರಾಗದೆನಗೆ 1ಪರರ ದೂಷಣೆ ಪರಪಾಪಂಗಳನೆಲ್ಲ |ಪರಿಪರಿಯಲ್ಲಿ ಆಡಿಕೊಂಬೆ ನಾನು ||ಹರಿನಾಮಾಮೃತವ ಹೇಳದೆ ಕೇಳದೆ |ಹರಟೆಯಲ್ಲಿ ಹೊತ್ತುಗಳೆದೆ ನಾ ಹರಿಯೆ 2ಪಾತಕಕರ್ಮಗಳ ಮಾಡಿದಜಾಮಿಳಗೆ |ಪ್ರೀತಿಯಿಂದಲಿ ಮುಕ್ತಿ ಕೊಡಲಿಲ್ಲವೆ? ||ನೂತನವೇಕಿನ್ನುಸೂರ್ಯಮಂಡಲ |ರೀತಿಯಾದನು ಸಿರಿಪುರಂದರವಿಠಲ 3
--------------
ಪುರಂದರದಾಸರು
ದಾರುದಾರಿಲ್ಲೆಲೆ ರಂಗದಾರುದಾರಿಲ್ಲ ಸಂಗನೀರಜಾಕ್ಷನೀನೆ ಭವಸಾಗರತಾರಿಸಿ ಕೀರ್ತಿ ಪಡೆಯೊ ದಾತಾರ ಪ.ಮೀನವಾಮಿಷವುಂಡಂತೆ ಸುಖಮಾನಿನಿಯರ ತಡಿಯುಧೇನುಜರಿಯಾದಂತೆ ಏಳಿಲುಸೂನುಗಳ ಬಿರುನುಡಿಯುಏನು ಬಳಗಾಮೃಗ ದಗ್ಧ ವಿಪಿನದ ಸ್ನೇಹದೆ ಕಡಿಯುಪ್ರಾಣ ಪಯಣಕೆ ಬುತ್ತಿಲ್ಲಭವಸಂಧಾನ ಹರಿದರೆ ಆರಿಲ್ಲ ಒಡೆಯಾ 1ಏಸೋ ದಿನ ನೆಚ್ಚಿದಕಾಯಹೇಸಿಕೆಘನವಾಯಿತುಆಸೆಬಟ್ಟಾರ್ಥ ವೃಥಾವ್ರಯಕಾಸು ನಾಶಾಯಿತುಲೇಶ ಮಾತ್ರವು ಹಿತ ಹೊಂದದೆ ಮನದ್ವೇಷಿ ತಾನಾಯಿತು ಆಯುಷ್ಯ ಸೂತ್ರವು ಹರಿದರೆ ಭವರೋಗಭೇಷಜರಿಲ್ಲದಂತಾಯಿತು 2ಕುನ್ನಿ ಸಂತೆಗೆ ಹೋದಂತೆ ಬಹುಜನ್ಮ ನೋವಾದವುಮಣ್ಣಿನೊಳು ಹಾಲ ಕೊಡ ಒಡೆದಂತೆನನ್ನ ಧರ್ಮಕರ್ಮವುನನ್ನೆಚ್ಚರ ನನಗಿಲ್ಲವುನಿನ್ನೆಚ್ಚರವೆಲ್ಲಿಯದು ಪ್ರಸನ್ನವೆಂಕಟ ನಿನ್ನ ಯಾತ್ರೆಗೆ ನೀನೆಬೆನ್ನಾದರೆನಗೆಲ್ಲ ಗೆಲುವು 3
--------------
ಪ್ರಸನ್ನವೆಂಕಟದಾಸರು
ದಿಟ್ಟ ಮುಖ್ಯಪ್ರಾಣನೆ ಜಗಜಟ್ಟಿ ಬಾ ಸುತ್ರಾಣನೆಶ್ರೇಷ್ಠದನುಜಘರಟ್ಟ ಸುಗುಣವಿಶಿಷ್ಟ ಭಕ್ತಶಿಖಾಮಣಿ ಪ.ವಾಯುಪುತ್ರ ವಿಚಿತ್ರ ಬಲಿಸುರರಾಯರಾಯರ ಗಂಡನೆಪ್ರೀಯರಾಮಪದಾಬ್ಜಮಧುಕರ ಮಾಯಿಕದನಪ್ರಚಂಡನೆ 1ಶ್ರೀವರೋತ್ತಮ ಹನುಮ ಭೀಮಕೃಪಾವಲಂಬ ಮಹೋಜನೆಪಾವಮಾನಿಪರೇಶ ಪದ್ಮಜ ಭಾವಿ ಯತಿಕುಲರಾಜನೆ2ಶೂರಾಗ್ರಣಿ ಸುಗುಣಿ ಲಕ್ಷುಮಿನಾರಾಯಣದಾಸನೆಭಾರತೀವದನಾರವಿಂದಕೆ ಸೂರ ನಿತ್ಯವಿಲಾಸನೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ