ಒಟ್ಟು 4316 ಕಡೆಗಳಲ್ಲಿ , 124 ದಾಸರು , 3032 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾನವಾಗ್ರಗಣ್ಯ ಭೂಪ ಪ ರಾವಣಾದಿ ದನುಜ ಹೃದಯ ಜೀವಮಕರ ಧೀವರೇಶ ಸೂರ್ಯ ರಾಮಚಂದ್ರ 1 ಜಲಧಿ ದನುಜ ಸಂಘ ಶೌರ್ಯ ವಾರಿವಾಹವಾತ ಸೂರ್ಯವಂಶ ಸುಪ್ರಕಾಶ2 ದಿಂದ ಧೇನುನಗರಪತಿಯೆ ಬಂದು ಪಾಲಿಸೈ ಶ್ರೀಹರಿಯೆ 3
--------------
ಬೇಟೆರಾಯ ದೀಕ್ಷಿತರು
ಮಾನವಾತ್ಮರೆ ನಿಮ್ಮ ಮಾನಸ ಪೂಜೆಯಿಂಮಾನವನಿಗೆ ಮೋಕ್ಷ ಸಾಧಿಸೀರಿ ಪ ರತ್ನ ನಿರ್ಮಿತ ಸುಚರಿತ್ರ ಮಂಟಪವನ್ನುಸತ್ಯಭಾಮೆಯ ಪತಿಗಿತ್ತು ಪೂಜಿಸುವೆ1 ಆಸನ ನೀಡುವೆ ಶೇಷಶಯನನೆ ಇಲ್ಲಿವಾಸ ಮಾಡಿ ಎನ್ನ ಸೇವೆ ಸ್ವೀಕರಿಸು2 ಧ್ಯಾನ ಮಾಡುವೆ ನಿನ್ನ ಗಾನ ಮಾಡುವೆ ನಿನ್ನಜ್ಞಾನ ಭೂಷಣ ಶೋಭಿತಾನನಾಂಬುಜ 3 ಧೃತ ವೇಣುಗೋಪಾಲ ಬಾರೋ ಮನಸಿಗೆ ತೋರೊಮೂರುತಿ ನಿನ್ನಯ ಸಮೀರ ಸಂಸ್ತುತನೆ 4 ಅಘ್ರ್ಯ ನೀಡುವೆ ನಾನು ಅನಘ್ರ್ಯ ವಸ್ತುಗಳಿಂದಸ್ವಘ್ರ್ಯಗ್ರಹಣ ಮಾಡೋ ಭರ್ಗ ಸೇವಿತನೆ 5 ಪಾದ್ಯ ನೀಡುವೆ ವೇದ ವೇದ್ಯ ಮಹಿಮನೇ ಮುನ್ನಾವದ್ಯ ಕಳೆದು ಭವದಿಂದ ಉದ್ಧರಿಸೆನ್ನ 6 ಆಚಮನವ ನೀಡುವೆ ಹೇ ಚತುರಾನನೇಶವಾಚಾಮಗೋಚರ ಮೋಚಕ ಹೇತು 7 ಸುದತಿ ಮೋಹನ ತವಮಧುಪರ್ಕವನೀವೆ ಮುದದಿ ಸ್ವೀಕರಿಸು 8 ಮತ್ತೆ ಆಚಮನವನಿತ್ತು ಪೂಜಿಪೆ ಕರವೆತ್ತಿ ಮುಗಿವೆ ಸರ್ವಭಕ್ತ ಪೋಷಕನೆ 9 ಗಂಗೆ ಯಮುನೆ ಗೋದಾ ತುಂಗೆ ಜಲವ ತಂದಿಹೆ ಅ-ನಂಗ ಜನಕ ಮಾಡೋ ಅಭ್ಯಂಗ ಸ್ನಾನ 10 ನಿರಿಗೆಗಳನೆ ಹಾಕಿ ಜರದ ಪೀತಾಂಬರ ಗ-ರುಡವಾಹನ ನೀನು ಧರಿಸು ಮಧ್ಯದಲಿ 11 ಹಾರ ಕಿರೀಟ ಕಾಂಚಿ ನೀರ ನೂಪುರ ಸು-ಕೇಯೂರ ನೂಪುರನೀವೆ ಧಾರುಣಿಪತಿಗೆ 12 ಸ್ವರ್ಣ ರಚಿಸಿದ ಸೂತ್ರವನು ಕೊಡುವೆ ಲಕ್ಷ್ಮೀರನ್ನ ಸೌರಭ ಗಂಧವನು ಸ್ವೀಕರಿಸು 13 ವಾಸುದೇವನೆ ದಿವ್ಯ ನಾಸಿಕೇಂದ್ರಿಯದಿಂದಈಸು ಧೂಪದ ಗಂಧ ವಾಸನೆ ಗ್ರಹಿಸೋ 14 ಮರುಗು ಮಲ್ಲಿಗೆ ಜಾಜಿ ಸುರಗಿ ಸೇವಂತಿಗೆಸುಮಗಳ ಪರಿಮಳ ಧರಿಸೋ ಮಧ್ಯದಲಿ 15 ಹತ್ತು ಅಂಗಗಳಿಂದ ಉತ್ತಮ ಸುಧೂಪವಎತ್ತುವೆ ನಿನಗೆ ಸರ್ವೋತ್ತಮ ಹರಿಗೆ16 ಆಕಳ ಘೃತದ ಅನೇಕ ದೀಪಗಳ್ಹಚ್ಚಿಶ್ರೀಕರ ತವ ಮುಖಾವಲೋಕಿಸುತ್ತಿಹೆನು 17 ಏಕಾರತಿ ಗೋಪಿಪ್ರೀತನೆ ಬೆಳಗುವೆನಾಕ ನಾಯಕ ಸುರಲೋಕ ಸೇವಿತನೆ 18 ಆರು ವಿಧದ ಅನ್ನ ಸಾರು ಪಾಯಸ ಭಕ್ಷ್ಯಭೂರಿ ಶಾಕಗಳೀವೆ ನೀರಜಾಂಬಕನೆ 19 ಮಾರಜನಕನೆ ಮುತ್ತಿನಾರತಿ ಬೆಳಗುವೆಶ್ರೀರಾಮನೆ ನಿನ್ನ ಮೋರೆಯ ತೋರೊ20 ಛತ್ರ ಚಾಮರ ವ್ಯಜನ ದರ್ಪಣ ಪರ್ಯಂಕಕರ್ಪುರ ತಾಂಬೂಲವಿತ್ತು ಪೂಜಿಸುವೆ 21 ಹತ್ತಾರು ಉಪಚಾರ ಚಿತ್ರ ಚರಿತನೆ ನಿನಗೆಅರ್ಥಿಯಲಿ ಕೊಡುವೆನು ಮುಕ್ತಿ ನೀಡೆನಗೆ 22 ಇಂದಿರೇಶನೆ ನಿನ್ನ ಮುಂದೆ ತುತಿಪನೆ ನಿಂತುನಂದಬಾಲನೆ ಕೃಪೆಯಿಂದ ನೋಡೆನ್ನ 23
--------------
ಇಂದಿರೇಶರು
ಮಾನವಿ ದಾಸರ | ನಿ ಸೇರೋಹೀನ ಮನುಜ ನಿನ್ನಘವನೆ ನೀಗುವ ಪ ಕೃತ ಯುಗದಲಿ ಹಿರಣ್ಯಜನೆನಿಸೀವಿತತ ಮಹಿಮ ಹರಿಯನೆ ಭಜಿಸೀ ||ಸತತದಿ ಸುಜನರ ಸಂತವಿಸಿ ಸಿರಿಪತಿಯ ಸೇವಿಸೆ ಸಹ್ಲಾದ ನೆನಿಸಿದಾ 1 ಎರಡೊಂದ್ಯು ಯುಗದಲಿ ಶಲ್ಯನಾಗಿ ಜನಿಸೀಕುರುಪಗೆ ಋಣರೂಪ ಸೇವೆ ಸಲಿಸಿ ||ಉರುತರ ಭಕುತಿಲಿ ಶೌರಿಯ ನೆನೆಯುತಹರಿಪದ ಸೇರಿದ ನೃಪಕುಲ ಮೌಳೀ 2 ವರಕಲಿಯಲಿ ದ್ವಿಜನಾಗವತರಿಸೀನರಮೃಗಾಖ್ಯಸುತ ಶ್ರೀನಿವಾಸನೆನಿಸೀ ||ವರದೇಂದ್ರ ಯತಿಯಲಿ ತರ್ಕವ ಕಲಿತುದುರುಳರ ಮುರಿದತಿ ಗರ್ವದಿ ಮೆರೆದಾ 3 ಭೃಗ್ವಂಶಜ ವಿಜಯಾಖ್ಯ ದಾಸ ಬಂಧೂಋಗ್ವಿನುತನ ಪ್ರಾಕೃತದೊಳು ಪಾಡೆ ||ದಿಗ್ಗಜ ಗರ್ವದಿ ಗೆಜ್ಜೆಯ ಕಟ್ಟಿದಅಗ್ಗದ ನಟನಿವನೆನುತಲಿ ಜರೆದಾ 4 ದಾಸರ ನಿಂದ್ಯದಿ ಬಂದುದು ಅಪಮೃತ್ಯುದೋಷನೀಗೆ ಗೋಪಾಲರ ಭಜಿಸೆನ್ನ ||ಔಷಧ ಪೇಳಲು ದಾಸರ ನಾಲ್ದಶವರ್ಷಾಯುಷ್ಯವ ಪೊಂದಿದವರನಾ5 ಇಂದು ಭಾಗದಲಾನಂದದಿ ಮೀಯೇಬಂದೊದಗಿತು ಜಗನ್ನಾಥ ನಾಮಾ ||ಪೊಂದುತ ಅಂಕಿತ ಕುಣಿಯುತ ಪಾಡುತಇಂದಿರೆಯರಸನ ಛಂದದಿ ತುತಿಸಿದ 6 ಪಾವನತರ ಹರಿಕಥೆ ಸುಧೆ ರಚಿಸೀಪವನ ಮತದವರನ್ನುತ್ತರಿಸೀ ||ಪವನನ ಹೃತ್ಕಂಜದಿ ನೆಲೆಸಿಹ ಗುರುಗೋವಿಂದ ವಿಠಲ ಪದಾಬ್ಜವ ಸೇರಿದ 7
--------------
ಗುರುಗೋವಿಂದವಿಠಲರು
ಮಾನಸ ಪೂಜೆಯನು ಮಾಡು | ಧ್ಯಾನ ಪೂರ್ವದಿಂದ ಕುಳಿತು ಪ ಜ್ಞಾನ ಭಕುತಿಯ ವಿಡಿದು ಲಕುಮಿ | ಪ್ರಾಣನಾಥನ ಪ್ರೇರಣೆಯಿಂದ ಅ.ಪ ಕಾಮ ಕ್ರೋಧವ ಹಳಿದು ವಿಷಾದವೆಂಬೋ | ಸ್ತೋಮಗಳನು ತೊರೆದು ರಜೋ ಮೊದಲಾದ || ತಾಮಸದ ಬುದ್ಧಿ ಬಿಟ್ಟು ನೇಮನಿತ್ಯ ತೀರಿಸಿಕೊಂಡು | ಈ ಮನಸ್ಸು ಇಟ್ಟು 1 ಹೃದಯ ಪದುಮದೊಳಗೆ ಹರಿಯ ಪದುಮ ಪದಗಳಿಟ್ಟು | ದೇಹ ಕದಲದಂತೆ ಇದ್ದು ಜ್ಞಾನ ಉದಿತವಾದ ದೃಷ್ಟಿಯ || ಹದುಳದಿಂದ ತಿಳಿದು ಅಂತರವೆಲ್ಲವನು ನೋಡಿ | ಕದವ ತೆರೆದು ಕೊಟ್ಟ ಮುದದಿ ದೃಢವ ಸಂಪಾದಿಸಿ2 ನೀಲ ರತುನದಂತೆ ಹೊಳೆವ ಪಾಲಸಾಗರತನುಜೆ | ಮೇಲು ಮಂಗಳರಮಣನಾದ ಮೇಲುಗಿರಿಯ ತಿಮ್ಮನ || ತವಕ ಬೀಳದಲೆ ಪೂಜೆ ವಿಧಾ | ಸಾಲುಗಳನು ತಿಳಿದು ವಿಶಾಲ ಬುದ್ಧಿ ಯುಕುತಿಯಿಂದ 3 ವೇದ ಮಂತ್ರಗಳನು ಪೇಳಿ ಆದಿಯಲ್ಲಿ ಪೀಠಪೂಜೆ- | ಯಾದ ತರುವಾಯ ವಿನೋದದಿಂದಲಾವರಣ || ಆದರಣೆಯಿಂದ ಬಳಿಕ ಮಾಧÀವರಿಗೆ ಸಕಲ ಭೂಷ- | ಣಾದಿಗಳನು ರಚಿಸಿ ಪುಣ್ಯಹಾದಿಯನು ತಪ್ಪದೆ 4 ದೋಷರಾಶಿಗೆ ದ್ವೇಷನಾಗಿ ಈ ಶರೀರವÀ ಘಾಸಿಮಾಡದೆ | ಪಾದ || ಲೇಸಿನಿಂದ ಭಜನೆಗೈದು ವಾಸವಾಗು ಪದದಲ್ಲಿ | ಶ್ರೀಶ ವಿಜಯವಿಠ್ಠಲರನ್ನ ದಾಸ-ದಾಸರ ದಾಸನೆಂದು5
--------------
ವಿಜಯದಾಸ
ಮಾನಸ-ಗಣ್ಯಚಿನ್ಮಯನ ಪ ವನಮಾಲಿಕಾಗಳನ ಮಿಂಚನು ಸೋಲಿಸುತಿಹನ ||ಕಣ್ಣಾರೆ|| 1 ಹೃದಯಾತಂಕಮೋಚನನ ಚಕುಂಕುಮಾಂಕಿತನ 2 ಗುಣವೃಂದ ಪೂರಿತನ ಚಕೋರನಂದ ಚಂದಿರನ 3 ಕುಂಡಲ ಭೂಷಣನಿಕರ ಭೂಷಿತನ ಸುಖದಾಯಕನ ||ಕಣ್ಣಾರೆ|| 4 ಶರಣೆಂದು ಕರದಿ ತೊರುವವನ ನೆಲಸಿಹ ವರದ ವಿಠಲನ 5
--------------
ಸರಗೂರು ವೆಂಕಟವರದಾರ್ಯರು
ಮಾನಸಾಂಡದಿ ಕಾಂಬೊನ್ಯಾರೇ | ನಮ್ಮಮೌನಿ ಧ್ಯಾನಾಗಮ್ಯ ಕೃಷ್ಣಮೂರುತಿಯೇ ಪ ಗುಂಗುರು ಕುಂತಲ ಶೋಭಾನೇ | ನಮ್ಮಗಂಗಾ ಜನಕ ಗೋಪಿರಂಗಾನೇ |ಮಂಗಳ ಮಹಿಮ ಶುಭಾಂಗಾನೇ | ಹೃದ-ಯಾಂಗಣದಲಿ ನಿಂತು ಕುಣಿವಾನೇ 1 ಕೊಳಲ ಕೈಯಲಿ ಧರಿಸ್ಯಾನೇ | ಚಂದ್ರಬೆಳಕಾಮಿತದಲಿ ಕುಣಿದಾನೇ |ಕಲಕುತ್ತಲೆನ್ನಯ ಮನವಾನೇ | ಹರಿಚಳಕದಿ ಕುಣಿವಂತೆ ಮಾಡ್ಯಾನೇ 2 ಅಗಣಿತ ಮಹಿಮ ಲಾವಣ್ಯಾನೇ | ಹರಿಸುಗುಣಿ ಕಾಲಲಿ ಗೆಜ್ಜೆ ಕಟ್ಯಾನೇಝಗಿ ಝಗಿಸುವ ಹಾರ ಪದಕಾನೇ | ಕೃಷ್ಣಮಘವನಾರ್ಚಿತ ದಿವ್ಯ ಚರಣಾನೇ 3 ಯಾದವರೊಡೆಯನು ಬಂದಾನೇ | ಗುರುವಾದಿರಾಜರ ಮಾತು ಸಲಿಸ್ಯಾನೇಸಾದರದಲಿ ಕೈಯ್ಯ ಪಿಡಿದಾನೇ | ಎನ್ನಮೋದದಿ ಕುಣಿವಂತೆ ಮಾಡ್ಯಾನೇ 4 ಗೋವಳರೊಡಯನು ನಗುತಾನೇ | ಹೃದಯನೋವನು ಕಳೆಯಲು ಬಂದಾನೇಸಾವನೀಪರಿ ಕರುಣಿ ಕಳೆದಾನೇ | ಗುರುಗೋವಿಂದ ವಿಠಲ ಹಯಾಸ್ಯಾನೇ 5
--------------
ಗುರುಗೋವಿಂದವಿಠಲರು
ಮಾನಸಾದಾತೂರ ಕಳವಳಗೊಳದಂತೇ ಪ ಮಾನವ ಕಾಡುವ ದುರಿತಾಗಳೋಡಿಸಿ ಸಲಹಲು 1 ನಿಷ್ಠೂರದಿಂದೆನಗೆ | ಕಷ್ಟಗೊಳಿಸದಂತೇ 2 ನಿತ್ಯಾ ಚಿತ್ತಕೆ ದುಃಖವೊತ್ತಿ ದೂಡುವರು 3 ಧ್ರಷ್ಟರಿಂದ್ಹದಿನೆಂಟು | ಕೆಟ್ಟಾ ದೋಷವ ತ್ಯಜಿಸಲ್ 4 ಎಂದೂ ರಕ್ಷಿಸೋ ಯೆನ್ನ | ತಂದೆ ಸದಾನಂದ 5
--------------
ಸದಾನಂದರು
ಮಾನಸೆ ಬಾಬಾ ಪ ಮೋದ ಭರಿತಳೆ1 ಸಮವಿಷಮ ಉಪಾಸೆ ಸಮನಿಷ ಮಂಗಳೆಕಮಲಾಸನನ ಸರ್ವಸಮ ಹಂಸಾರ್ಜಿತಳೆ 2 ಸುಂದರ ಸರಸ್ವತಿ ಮಿಂಚಿನಂದದಿ ಹೃದಯದಿ ಗೋಪಿನಂದನದ ತೋರೆ ಇಂದಿರೇಶಜಗಪ್ರಿಯೆ3
--------------
ಇಂದಿರೇಶರು
ಮಾನಹೀನನಿಗೆ ಇಲ್ಲದ ಅಭಿಮಾನವ್ಯಾತಕೋ ನಾನೇ ಬ್ರಹ್ಮನೆನ್ವನ ಮುಖ ನೊಡ್ವದ್ಯಾತಕೋ ಪ ಹರಿಯೇ ಸರ್ವಪರಾ ಎನ್ನದವನ ಜ್ಞಾನವ್ಯಾತಕೋ ತಾರತಮ್ಯವರಿಯದವನಾಚಾರ್ಯವ್ಯಾತಕೋ 1 ಆಶೆಯನು ಬಿಡದವಗೆ ಸನ್ಯಾಸವ್ಯಾತಕೋ ಭಾಷೆ ಹೀನನಾದವನ ವಿಶ್ವಾಸವ್ಯಾತಕೋ 2 ವರದ ಶ್ರೀ ಹನುಮೇಶ ವಿಠಲ ಒಲಿವನ್ಯಾತಕೋ 3
--------------
ಹನುಮೇಶವಿಠಲ
ಮಾನಾಗ, ಉರಿಯು ಹೆಣ್ಣು ಹೈಕಳ ಕೂಡೆಶ್ರೀನಾಥ ನಿನಗೆ ಸಲ್ಲದು ಮಕ್ಕಳಾಟ ಪ ತರಳ ನೀನೆಮ್ಮ ಸೀರೆಗಳನೆತ್ತಿಕೊಂಡುತರುವನೇರುತ ಕಕ್ಕಳ ಕೆಳೆವೆತರುವಳಿತನ ಸಾಕು ನಿನ್ನ ಪೇರುರದಲಿತರುಣಿ ನಗುತಾಳೆ ಪೊಕ್ಕಾಟ ಸಾಕು 1 ಅರಸಿನ ಮಗನೆಂದು ತಾಳಿದೆವಲ್ಲದೆಸರಸಿಜಾಕ್ಷಿಯ ಮನೆಯ ಮಳಲಲ್ಲಿಸರಸದೊಳಿಹರೆ ನಿನ್ನಂಗದೊಳಿರ್ದಸುರರೋಡಬೇಕು ಸಲ್ಲದು ಮಕ್ಕಳಾಟ2 ಬೊಮ್ಮ ನಿನ್ನುದರದ ಜಗನಿನ್ನ ಅಂಗದೊಳಿದ್ದ ಸುರಮುನಿಗಳುನಿನ್ನನೆ ನಗುವರೊ ನೀನರಿಯದೆ ಎಮ್ಮಚೆನ್ನ ಹೆದ್ದಾಟ ಹೊಕ್ಕಾಟ ಸಾಕು 3 ಕಾಲ ಪೆಂಡೆಯುಹೊಸ ಹೊಸ ಚೆನ್ನಿಗ ಪರಿಹಾಸ ಸಾಕೋ4 ತುತಿಸಿ ತುತಿಸಿ ಕಾಣರು ಬ್ರಹ್ಮರುದ್ರರುಮತಿಗೊಳಗಾಗೆ ಮುನೀಶ್ವರರಶ್ರುತಿಗಳು ನಿನ್ನನು ಪುಡುಕಲರಿಯವು ಬಾಲಸತಿಯರೊಡನೆ ಖೇಳಮೇಳವೆ ಸಾಕು 5 ಸ್ನಾನಮಾಡಲೀಯೆ ಮೌನಗೌರಿಯನೋನಲೀಯದೆ ಮೌನವ ಕೆಡೆಸಿಧ್ಯಾನ ಮಾಡಲೀಯೆ, ನಿನ್ನ ಚೆನ್ನಿಗರುಹಾನಿ ನೀಗುವರು ಎಂಬುದರಿಯೆವೊ 6 ಚೆಲುವರರಸ ಶಿಖರ ಶಿಖಾಮಣಿಯೆಲಲನೆಯರ ಮನ ಸೂರೆಗಾರಫಲಿಸಿತು ವ್ರತ ನಮ್ಮ ಕೃಷ್ಣ ನಿನ್ನೊಲುಮೆಯಬಲೆಗೆ ಸಿಕ್ಕದರಾರೊ ಸೊಬಗು ಸುಗ್ಗುಳಿಯೇ7
--------------
ವ್ಯಾಸರಾಯರು
ಮಾನಿನಿ ಕರೆದ ಪ ನನ್ನ ಕರೆವ ನೋಡೆ ನಿನ್ನ ಕರೆವ ನೋಡೆಅನ್ಯ ಗೋಪಿಯರನೆಲ್ಲ ಕರೆಯುತಾನೆಮನ್ಮಥನಂಘ್ರಿ ಇನ್ನು ಬಿಟ್ಟಿರಲಾರೆಸನ್ನುತಾಂಗಿಯರೆಲ್ಲ ಸಾಗಿ ಬನ್ನಿ 1 ವೇಣುಸ್ವರವು ತಮ್ಮ ಮಾನಸದೊಳು ತುಂಬಿಕಾನ ಮೇಲೆ ಮಾಡಿ ಕೇಳುತಾವಖಾನ ಪುಲ್ಲನೆ ಬಿಟ್ಟುವ ವೃಂದಗೋಷ್ಟದಿ ನಿಂತುಸ್ಥಾನದೊಳಗೆ ಕಣ್ಣಿ ಕೀಳುತಾವ 2 ಇಂದು ಪಿಡಿದು ಪೋಗಿಆನಂದವಾಲನ ಮುಖ ಕಾಂಬೋಣಮ್ಮಾಆನಂದವಾಲನ ಮುಖ ನೋಡೋಣಮ್ಮಾ 3
--------------
ಇಂದಿರೇಶರು
ಮಾನಿನಿ ಕಾಂತೆ ಪ. ಕಾಂತ ಕೃಷ್ಣರಾಯ ನಮಗೆ ಚಿಂತಾಮಣಿಯಂತೆ ಕೊಡುವ ಚಿಂತಾಮಣಿಯಂತೆ ಅನಂತ ಸುಖವಿತ್ತುಭಕ್ತರ ಸಂತೈಸುವನಂತೆ1 ಅಕ್ಷಯ ಸುಖವಿತ್ತು ಭಕ್ತರ ಸಂತೈಸುವನಂತೆ2 ಮುಂದು ಸಂಚಿತಗಾಮಿಯುಹಿಂದಾದುವಂತೆನಮಗೆ ಹಿಂದಾದುವಂತೆ ತಂದೆ ರಾಮೇಶನ ಪಾದಕ್ಕೆ ಹೊಂದಿವೆÉಯಂತೆ3
--------------
ಗಲಗಲಿಅವ್ವನವರು
ಮಾನಿನಿ ಕಾಂತೆ ಶ್ರೀನಿವಾಸ ನಡೆದ ಕಾಮಧೇನುವಿನಂತೆ ಪ. ಲಕ್ಷುಮಿ ರಮಣ ನಮಗೆ ಕಲ್ಪವೃಕ್ಷತಾನಂತೆಅಕ್ಷಯ ಸುಖವಿತ್ತು ಭಕ್ತರ ರಕ್ಷಿಪೋನಂತೆ1 ಕಾಂತೆ ಕೃಷ್ಣರಾಯ ನಮಗೆ ಚಿಂತಾಮಣಿಯಂತೆಅನಂತ ಸುಖವ ವಿತ್ತು ಭಕ್ತರ ಸಂತೈಸುವನಂತೆ2 ಇಂದು ಸಂಚಿತಾಗಾಮಿಯು ಹಿಂದಾದುವಂತೆ ತಂದೆ ರಾಮೇಶನ ಪಾದಕೆ ಹೊಂದಿವೆಯಂತೆ 3
--------------
ಗಲಗಲಿಅವ್ವನವರು
ಮಾನಿನಿ ಬಲು ನುಡಿಯೋದುಚಿತವೆಭಲಾ ಭಲಾ ಎನಿಸು ಅನುಗಾಲ ಪ. ಬಂದ ಜನರು ಬಲು ಚಂದಾಗಿ ಕುಳಿತಿಹರು ಚಂದಿರವದನೆ ಸುಭದ್ರಾಚಂದಿರವದನೆ ಸುಭದ್ರಾ ನಿನ್ನ ಮುಖಕುಂದಿತಾಕೆಂದು ಕಮಲಾಕ್ಷ 1 ಬಲ್ಲೆ ಭಾಷೆ ನಿನ್ನ ಕ್ಷುಲ್ಲತನದ ಬುದ್ಧಿಮಲ್ಲಿಗೆಯಂಥ ಸುಕುಮಾರಿಮಲ್ಲಿಗೆಯಂಥ ಸುಕುಮಾರಿ ಗರತಿಗೆ ಹೊಲ್ಲ ಮಾತುಗಳ ನುಡಿಯೋರೆ2 ಮಾನುಳ್ಳ ಮಗಳಿಗೆ ನಾನಾ ಮಾತುಗಳಂದಿ ಏನೆಂಬೋರಿದಕೆ ಜನರೆಲ್ಲಏನೆಂಬೋರಿದಕೆ ಜನರೆಲ್ಲ ಸತ್ಯಭಾವೆಮಾನಾಪಮಾನ ನಿನಗಿಲ್ಲ3 ಮದ್ಗುಣಕಿ ಹೂವು ಉದ್ದಾದರೇನ ಮುದ್ದು ಮಲ್ಲಿಗೆಯ ಸರಿಯೇನ ಮುದ್ದು ಮಲ್ಲಿಗೆಯ ಸರಿಯೇನ ಭಾವೆ ಸುಭದ್ರಾಗೆ ನೀನು ಸರಿಯೇನ 4 ತಂಗಿಗಾಡಿದ ಮಾತು ರಂಗರಾಮೇಶ ಕೇಳಿಬಂಗಾರದಂಥ ಗುಣನಿಧಿಬಂಗಾರದಂಥ ಗುಣನಿಧಿ ಸುಭದ್ರೆಗೆವ್ಯಂಗ್ಯ ಮಾತುಗಳ ನುಡಿವೋರೆ5
--------------
ಗಲಗಲಿಅವ್ವನವರು
ಮಾನಿನಿ ರನ್ನೆ ತಾನ್ಯಾಕೆ ಬಾರನುನೀನೆ ವಿಚಾರಿಸು ಇಬ್ಬರ ನ್ಯಾಯವ ಪ ಮಗಳಿಗೆ ಮಗಳಾದ ಮಗಳಿಗಳಿಯನಾದಮಗಳ ಗಂಡಗೆ ಭಾವ ಮಾವನಾದುದ ಕೇಳಿನಾ ನಿನ್ನ ಪಾದಕ್ಕೆ ಬಂದೆ ಶ್ರೀಹರಿಯೆ 1 ವೈರಿಗೆ ವೈರಿಯಾದೆ ವೈರಿಗೆ ಸುತನಾದೆವೈರಿ ಗಂಡಗೆ ತನ್ನ ಮಗಳ ಕೊಟ್ಟುದ ಕೇಳಿನಾ ನಿನ್ನ ಪಾದಕೆ ಬಂದೆ ಶ್ರೀಹರಿಯೆ 2 ಆನಿ ಬಿದ್ದರ ತನ್ನ ಗ್ಯಾನದಿಂದೇಳುವುದುಏನು ಮಾಡಿದರು ಅದರ ಭಾವ ಹಿಂಗದುಜ್ಞಾನವಂತ ಕಾಗಿನೆಲೆಯಾದಿಕೇಶವರಾಯ ಮುನಿದು ಪೋದನೆ 3
--------------
ಕನಕದಾಸ