ಒಟ್ಟು 4142 ಕಡೆಗಳಲ್ಲಿ , 122 ದಾಸರು , 2736 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶೌರಿ ನಿನ್ನಯ ಭಕ್ತ ನಾನೆನ್ನಿಸೊ ಪ ಇಂದುವರನಂದದಲಿ ಬಂದೆ ನೀ ಕನಸಿನಲಿ ಇಂದಿರಾಪತಿಯೆಂದೆ | ಹುಸಿನಗೆಯಲಿ ಒಂದು ಶಿವಚರಿತೆ ಪೇಳೆಂದು ಗುರುರೂಪದಲಿ ಅಂದಿತ್ತ ದರ್ಶನವೆ ಸಾಕು ಎನಗೆ 1 ವಾರಿನಿಧಿಯೊಳು ಮುಳುಗಿ ದಾರಿಕಾಣದ ಮುನಿಗೆ ತೋರಿದಾ ಶಿಶುರೂಪ ಸಾಕು ಎನಗೆ ಘೋರ ಕಾನನದಲ್ಲಿ ಜಾನಿಸಿದ ಬಾಲನಿಗೆ ಸಿರಿ ಮೊಗವೆ ಸಾಕು ಎನಗೆ 2 ಅರಸಿಯಾಲಿಂಗನವ ಅರೆಘಳಿಗೆ ಬಿಡದವಗೆ ಕರುಣದಿಂ ನೀತೋರ್ದ ಚರಣ ಸಾಕೆನಗೆ ಪರರ ದಂಡಿಸಿ ಧನವ ಅಪಹರಿಸಿದಾತಂಗೆ ಗುರುವೆನಿಸಿದಾ ರೂಪ ಸಾಕು ಎನಗೆ 3 ಘೋರ ರೂಪವ ಗಳಿಸಿ ನಾರಣಾಯೆಂದವಗೆ ತೋರಿದಾ ಕಾರುಣ್ಯವಿರಲಿ ಎನ್ನೊಳಗೆ [ಹದಿ ನಾ]ರು ಸಾಸಿರ ಜನರ ಗುಂಪಿಂದಲೈತಂದು ತೋರಿದಾ ದ್ವಿಜರೂಪ ಸಾಕು ಎನಗೆ4 ರಂಗನಾಥನು ನೀನೆ ಗಂಗಾಧರನು ನೀನೇ ಮಾಂಗಿರಿಯ ಶೃಂಗಾರ ನಿಲಯ ನೀನೇ ಅಂಗಜನ ಪಿತನೀನೆ | ಅಂಗಜಾರಿಯು ನೀನೆ ಮಂಗಳಾಂಗನೆ ಭವದ ಹಂಗ ಬಿಡಿಸೋ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ಯಾಮಸುಂದರ ಶ್ರೀಮಾಧವ ಕಾಮಿಸುವಳಾ ಕಾಮಿನಿಯು ಪ. ಭಾಮಾಮಣಿಯು ನಿನ್ನನೀಕ್ಷಿಸದೆ ಯಾಮಯಾಮಕೆ ತಾಮಸಗೊಂಬಳು ಅ.ಪ. ಚಂದನಾದಿ ಸೌಗಂಧಕುಸುಮ ವಿಷ- ದಂದವೆಣಿಸುವಳು ಚಂದ್ರಮುಖಿ ಮಂದಾನಿಲ ಮಕರಂದ ಪಾನರಸ- ವೊಂದನೊಲ್ಲಳ ಪ್ರಿಯಸಖಿ ನಂದನ ಕಂದನೆ ವಂದನೆ ವಲ್ಲಭಗೈವಳು 1 ಹಾರ ಹೀರ ಬಂಗಾರ ಭೂಷಣವ ಭಾರವೆಂದು ಶೃಂಗರಿಸಳು ಕೀರಕೀಕಿ ಪಿಕ ಚೀರುಸ್ವನ ಶರ- ಧಾರೆಯೆಂದು ತಾ ಸೈರಿಸಳು ಕಾರುಣ್ಯವಾರಿಧೆ ಬಾರದೆ ಬಾಯಾರಿರುವಳು 2 ಮೀನಧ್ವಜನುರುಬಾಣದುರುಬೆಗೆ ಕ್ಷೀಣವಾಗಿಹಳು ಮೀನಾಕ್ಷಿ ಭಾನುತೇಜ ಲಕ್ಷ್ಮೀನಾರಾಯಣ ಧ್ಯಾನಿಸುವಳು ನಿನ್ನ ಪ್ರಾಣಸಖಿ ಮಾನಾಭಿಮಾನಾಧೀನವನಿನ್ನೊಳಗಿಟ್ಟಿಹಳು 3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರವಣ ಮಂಗಳನೀವುದೊ ಎನ್ನ ಕರ್ಣಗಳಿಗಾ- ನಂದ ಕೊಡುವುದು ಶರಣ ಜನರಿಗೆ ಬಂದ ದುರಿತಗಳ್ಹರಣ ಮಾಡುವುದು 1 ಭರಣ ಭೂಷಿತನಾದ ಲಕ್ಷ್ಮೀರಮಣ ನೀಲಾ- ವರಣ ನಿನ್ನ ಝಣ ಝಣಂದಿಗೆ ನಾದ ನೂಪುರ ಚರಣಕ್ವಂದಿಸುವೆ 2 ಕಮಲನಾಳದಿ ಪುಟ್ಟಿದಾತನ ಜನನಿ ಪತಿ ಜಗಜ್ಜನಕ ನಿನ್ನ ವನಜಪಾದಕೆ ನಮಿಸುವೆನೊ ಈ ಮನವು ನಿನ್ನಲ್ಲಿ 3 ನಿಲಿಸಿದರೆ ನಾ ನಿನ್ನ ನಾಮವ ನೆನೆಸಿದರೆ ಫÀಲಫಲಿಸಿ ಬಾಹೋದು ಒಲಿಸುವನು ವೈಕುಂಠಪತಿ ನೀ ಮನಸು ಮಾಡುವರೆ 4 ಘನಮಹಿಮ ಗಾಂಧಾರಿ ಸುತರನು ಹನನ ಮಾಡಿದ ಪವನ ಪ್ರಿಯನೇ ಜನುಮ ಜನುಮದಿ ನಿನ್ನ ಬಿಡೆ ನಾ ಜಗದ ವಲ್ಲಭನೆ 5 ಪತಿ ನಿನ್ನ ಸುಂದರಾಂಗವನು ತೋರದಲೆ ಭವ ಭಂಗ ಬಿಡಸುವು- ದ್ಯಾತಕೋ ಶ್ರೀರಂಗ ಪೇಳಿನ್ನು 6 ಚಕ್ರದಂದದಿ ತಿರುಗೊ ಎನಮನ ಚಕ್ರಧಾರಿಯೆ ನಿನ್ನ ಕಾಣದೆ ಶಕ್ರಸುತನ ಸಖನೆ ದಯಮಾಡ್ಹಕ್ಕಿವಾಹನನೆ 7 ಅನ್ನದಾತನು ಇರಲುಕಾಣದೆ ಅನ್ಯರಿಗೆ ಬಾಯ್ತೆರೆಯಲ್ಯಾತಕೆ ಪನ್ನಗಾದ್ರಿಶಯನ ನೀ ಸಲಹೆನ್ನ ಶ್ರೀಹರಿಯೆ 8 ಸರ್ವಗುಣ ಸಂಪನ್ನ ಸರ್ವೋತ್ತಮನೆ ಸರ್ವ ವ್ಯಾಪಾರಗಳನು ಸರ್ವಕಾಲದಿ ನಡೆಸುತಿರುವ ಸರ್ವರಾಧಾರಿ 9 ವರಮಹಾಲಕ್ಷ್ಮೀಪತಿಯೆ ವಾರಣವರದ ನಿನ್ನ ಸುರ ವಿರಿಂಚನಾ ಹರನು ವೀಣಾ- ಪಾಣಿನಾರದ ಬರಿದೆ ನಮಿಸುವರೆ 10 ಪರಮ ಕರುಣಾಶರಧಿ ಎನ್ನ ದುರಿತಗಳ ನೀ ದೂರ ಮಾಡುವೆ ಬಿರುದು ನಿನ್ನದÀು ಬಿಡದೆ ಭೀಮೇಶಕೃಷ್ಣ ಸಲಹೆನ್ನ 11
--------------
ಹರಪನಹಳ್ಳಿಭೀಮವ್ವ
ಶ್ರೀ ಇಭರಾಮಪುರ ಕೃಷ್ಣಾಚಾರ್ಯರ ಸ್ತೋತ್ರ (ಅಪ್ಪಾವರು) 140 ಇಭರಾಮಪುರ ಅಪ್ಪ ಸೌಭಾಗ್ಯದಾಯಕರೇ | ಶುಭನಾಮ ಶ್ರೀ ಕೃಷ್ಣಾಚಾರ್ಯರೇ ನಮಸ್ತೇ || ಇಭರಾಜ ವರದನಿಗು ದ್ರುಪದಾತ್ಮಜಾಪತಿಗು | ಶುಭಚರಿತ ರಾಘವೇಂದ್ರಾರ್ಯರಿಗು ಪ್ರಿಯ ಪ ಶ್ರೀರಾಮನರಹರಿ ಶ್ರೀಕರನಾರಾಯಣ | ವರಾಹ ಹಯಶೀರ್ಷ ಶ್ರೀಕೃಷ್ಣನ ಪೂರ್ಣಾ || ನುಗ್ರಹಕೆ ಪೂರ್ಣಪಾತ್ರರೇ ನಿಮ್ಮ ಚರಣ | ಅರವಿಂದದಲಿ ನಾನು ಶರಣು ಶರಣಾದೆ 1 ಪಂಚಮುಖ ಹನುಮಂತ ನರಸಿಂಹ ಗರುಡ ವರಾಹ ಹಯವದನ || ಈ ಅಂಜನಾಸುತನನ್ನು ತತ್ ಅಂತಸ್ಥ | ಪಂಚರೂಪ ಶ್ರೀಶನ್ನ ಪೂಜಿಪಮಹಂತ 2 ಅಪ್ಪಾವರೆಂದು ಪ್ರೇಮದಿ ಕರೆಸಿಕೊಂಡು ಅಪ್ಪಮಕ್ಕಳಂತೆ ಕಾಯ್ದಿರಿ ಜನರ || ಅಪ್ಪಾ ಎಂದೀಗಲೂ ಸ್ಮರಿಸಿದರೂ ನಿಮ್ಮ ಸಹ ಶ್ರೀಪ ತಿಮ್ಮಪ್ಪ ಬಂದೆಮ್ಮನು ಕಾಯ್ವ 3 ಮೇಲಿಂದ ಬಿದ್ದವನ್ನ ದೂರ ಇದ್ದರೂ ಕಾಯ್ದು ತಾಳಿಗೋರೂಪ ಪಾದಜ ಧಾನ್ಯ ಉಂಡು || ಜಲದಿಂದ ವಿಪ್ರತಮ ಭಕ್ತವರನನ್ನ ಕಾಯ್ದು | ಜಲಜನಾಭನ ಗಾಯಕನೆಂದು ಆಶಿಸಿದಿರಿ 4 ಬೊಮ್ಮನ ಪಿತ `ಶ್ರೀ ಪ್ರಸನ್ನ ಶ್ರೀನಿವಾಸನಲಿ' ಪ್ರೇಮ ಅಚ್ಛಿನ್ನ ಭಕ್ತಿ ನಿಮಗೆ ದ್ವಿಜವರರೆ || ನಿಮ್ಮವನು ಭುವಿಯಲ್ಲಿ ತೋರಿಹ ಎನ್ನನ್ನು ಪ್ರೇಮಾನುಗ್ರಹದಯದಿ ಪಾಲಿಪುದು ಶರಣು 5 ಪ || ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಕಲ್ಯಾಣಿ ಸುಗುಣಮಣಿ ಗಿರಿಜೆ ಪ-ರಾಕೆ ಬಾಗಿಲ ತೆಗೆಯೆಸಾಕು ನೀನಾರು ನಿನ್ನಯ ನಾಮವನು ಪ-ರಾಕು ಮಾಡದೆ ಪೇಳಯ್ಯ 1 ಕಾಮಿನಿಯರೊಳು ಕಟ್ಟಾಣಿ ಪಾರ್ವತಿ ಕೇಳೆಕೌಮಾರಿ ಕಾಣೆ ಜಾಣೆಕೌಮಾರಿಯಾದರೊಳ್ಳಿತು ನಡೆ ಋಷಿಗಳಸ್ತೋಮದ ವನಕಾಗಿ 2 ಕಾಳ ಪನ್ನಗವೇಣಿ ಕಲಕೀರವಾಣಿಕೇಳೆ ಶೂಲಿ ಕಾಣೆಲೆ ಕೋಮಲೆಶೂಲಿ ನೀನಾದರೊಳ್ಳಿತು ನಡೆ ವೈದ್ಯರಜಾಲವಿದ್ದೆಡೆಗಾಗಿ3 ನೀಲಕುಂತಳೆ ನಿಗಮಾಗಮನುತೆ ಕೇಳೆನೀಲಕಂಠನು ಕಾಣೆನೀಲಕಂಠನು ನೀನಾದರೆ ತರುಗಳ ಮೇಲೆಕುಳ್ಳಿರು ಪೋಗಯ್ಯ4 ಸೋನೆ ಕೋಕಿಲಗಾನೆಸ್ಥಾಣು ನಾನೆಲೆ ಜಾಣೆನೀನಾದರೊಳ್ಳಿತು ನಡೆ ವಿಪಿನಸ್ಥಾಣದೊಳಿರು ಪೋಗಯ್ಯ5 ಎಸಳುಗಂಗಳ ಬಾಲೆ ಎಸವ ಮೋಹನಮಾಲೆಪಶುಪತಿ ಕಾಣೆ ಕೋಮಲೆಪಶುಪತಿಯಾದರೊಳ್ಳಿತು ನಡೆಗೋಗಳವಿಸರವ ಕಾವುದಕೆ 6 ಜಾತಿನಾಯಕಿ ಕೇಳೆ ನೂತನವೇತಕೆಭೂತೇಶ ಕಾಣೆ ಜಾಣೆಭೂತೇಶನಾದರೊಳ್ಳಿತು ನಡೆ ಭೂತವ್ರಾತದ ವನಕಾಗಿ7 ಮಿಂಚಿನ ಗೊಂಚಲ ಮುಂಚಿ ಪಳಂಚುವಚಂಚಲನೇತ್ರಯುಗೆಅಂಚಿತಮಾದ ವಿಪಂಚಿಯ ಸ್ವರವ ಪಳಂಚುವಿಂಚರದಬಲೆ 8 ಕರಗಿಸಿ ಕರುವಿಟ್ಟೆರದ ಚಿನ್ನದ ಬೊಂಬೆಸುರುಚಿಕರ ಸುನಿತಂಬೆಪರಿಪೂರ್ಣ ಶರದಿಂದುವದನೆ ಕುಂದರದನೆವರಸುಗುಣಾವಲಂಬೆ 9 ಕುಂಕುಮರೇಖಾಲಂಕೃತೆ ಪರತರೆಪಂಕಜಸಮಪಾಣಿಶಂಕರಿ ಪಾಪಭಯಂಕರಿ ಸರ್ವವಶಂಕರಿ ಶುಭವಾಣಿ10 ಚಂಡಮುಂಡಾಸುರಖಂಡನ ಪಂಡಿತೆಮಂಡಲತ್ರಯನಿಲಯೆಮಂಡಿತ ನವರತ್ನಖಚಿತ ಮಹೋಜ್ವಲಕುಂಡಲೆ ಮಣಿವಲಯೆ 11 ವರದಾನದಿಯ ತೀರವಾಸ ಶ್ರೀ ಕೆಳದಿಯಪುರದ ರಾಮೇಶ ಕಾಣೆಪುರದ ರಾಮೇಶನಾದರೆ ನೆರೆಬಾಯೆಂದುಕರೆದಳು ಗಿರಿಜಾತೆ12 ಗಿರಿಜಾ ಶಂಕರರ ಸಂವಾದದ ಪದಗಳಬರೆದೋದಿ ಕೇಳ್ದರಿಗೆಪರಮ ಸೌಭಾಗ್ಯ ಸಂತಾನಗಳನು ಕೊಟ್ಟುಪೊರೆವನು ರಾಮೇಶ13
--------------
ಕೆಳದಿ ವೆಂಕಣ್ಣ ಕವಿ
ಶ್ರೀ ಕೃಷ್ಣ ಚರಿತ್ರೆ ಅಧ್ಯಾಯ ಒಂದು ರಾಗ:ಸೌರಾಷ್ಟ್ರ ತಾಳ:ತಿವಿಡೆ ಸ್ವರ ಋಷಭ ಶ್ರೀ ರಮಣ ಚರಣಾರವಿಂದವ ಆರಡಿ ಪರಿಯಾಗಿ ಸೇವಿಸಿ ಶ್ರೀ ರಮಾ ಬ್ರಹ್ವಾದಿ ಗುರುಪದ ಸೇರಿ ಸೇವಿಸುವೆ| ನಾರಿಮಣಿ ಶಿರಿದೇವಿ ಅಪಾರ ಮಹಿಮೆಯ ತಿಳಿವುದಕೆ ಪೂರ ಮನಗಂಡಿಲ್ಲ ಮತ್ತಿನ್ನಾರು ಬಲ್ಲವರು 1 ಆರಗೊಡವಿನ್ನೇನು ಮತ್ತಿನ್ನಾರು ದೂರಿದರೇನುಸರ್ವವು ಪೂರಮಾಡುವ ನಮ್ಮ ಗುರುಗಳ ಪೂರದಯವಿರಲು| ಮನದಲಿ ಘೋರತರ ಅಭಿಲಾಷೆ ಯೋಗ್ಯತೆ ಮೀರಿ ಇರುವುದು 2 ಮನಸಿನಲಿ ಮಾತ್ಸರ್ಯವಿಲ್ಲದೆ ಘನಕವೀಶ್ವರಗಳಿಗೆವಂದಿಸಿ ಅನುಸರಿಸಿ ಭಾಗವತವನು ಬಹುವಿನುತ ದಶಮ ಸ್ಕಂದದರ್ಥವ ಕನ್ನಡಿ ತೋರಿಸಿದಂತೆ ಸ್ಪಷ್ದದಿ ಕನ್ನಡಿಲ್ಹೇಳುವೆನು 3 ಪದ್ಯ ಭಾರ ಆಘೋರದುಃಖವನು ಶ್ರೀ ರಮೇಶನ ಸ್ತುತಿಸುತಿರುವ ಕಾಲದಲಿ| ಸಾರ ಸಾರಿ ಹೇಳಿದನು ವೃಂದಾರ ಕರುಗಳಿಗೆ 1 ಪದ, ರಾಗ:ಯರಕಲಕಾಂಬೋದಿ ಅಟತಾಳ ಸ್ವರಧೈವತ ಕೇಳಿರೋ ಭೋ ದೇವತೆಗಳಿರಾ ಹೇಳುವೆ ಹರಿಭಾವವ ಹೇಳಿರೋ ನಿಮ್ಮವರಿಗೆಲ್ಲಾ ಭಾಳ ಸಂತೋಷದಿಂದಲೇ ಪ ಇಷ್ಟುದಿವಸ ಭೂದೇವಿ ಕಷ್ಟವ ಬಟ್ಟಳು ಬಹಳ ಸ್ಪಷ್ಟವಾಗಿ ಆಕೆಯಾ ಕಷ್ಟವು ದೂರಾಗುವುದಿನ್ನು || ವಿಷ್ಣುನಾಜ್ಞೆಯಲಿ ನೀವು ವೃಷ್ಣಿ ಕುಲದಲ್ಹುಟ್ಟಿರೋ|| ವಿಷ್ಣುತಾ ದೇವಕಿಯಲ್ಲಿ ಕೃಷ್ಣನಾಗಿ ಹುಟ್ಟುವಾ1 ಪದ ಈ ವಚನವ ಕೇಳಿ ದೇವತಿಗಳಾಗ ಹರಿಸೇವೆ ಆಗಲಿಯೆಂಬೋ ಭಾವದಲಿ ಜನಿಸಿದರು| ಈ ವಸುಧಿಯೊಳಗವರು ಭಾವಕನು ಕಶ್ಯಪ ವಿಭಾವಸುವನ ಪೋಲ್ವ ವಸು ದೇವನಾದನು ಅದಿತಿದೇವಿ ತಾ ಜನಿಸಿದಳು ದೇವಕಿಯು ಆಗಿ| ದೇವ ಪೂಜಕನು ವಸುದೇವ ತಾ ಪ್ರೀತಿಯಲಿ ದೇವಕಿಗೆ ಕೊಟ್ಟ ಸದ್ಭಾವದಲಿ ಬೇಕಾದ್ದು ದೇವಕಿಯಲಿ ವಸುದೇವ ರಥವೇರಿದನು ಆವಾಗ ಕಂಸ ತಾ ತೀವ್ರ ನÀಡಿಸಲಾವತ್ತಿಗಾಯಿತಲ್ಲೆ ವಿಯದ್ವಾಣಿ ಪದ, ರಾಗ(ದೇಸಿ) ಅಟತಾಳ, ಸ್ವರಷಡ್ಜ ಕೇಳು ಕಂಸನೆ ನಿನಗೇಳುವೆ ನಾ ಬಂದು| ಕೇಳು ಕಂಸಾ|| ಬಹಳ ದಿವಸ ಬಾಳಿ ಇರುವವನಲ್ಲ ಕೇಳು ಕಂಸ ಪ ಮಂಗಳಾಂಗಿಯು ಈಕೆ ತಂಗಿ ಎಂದೆನಬೇಡ ಕೇಳು ಕಂಸಾ| ತಂಗಿಯ ಮಗನೇ ನಿನ್ನಂಗಕ್ಕೆ ವೈರಿಯು ಕೇಳು ಕಂಸಾ|| 1 ಭಂಡ ನಾನೆಂದು ಉತ್ಕಂಠಿದಿಂದರ ಬೇಡ ಕೇಳು ಕಂಸಾ| ಎಂಟನೆಯವ ನಿನ್ನ ಘಂಟಸಿ ಕೊಲ್ಲುವನು ಕೇಳು ಕಂಸಾ|| 2 ವೈರಿ ದಾವಾತಿದ್ದಾನೆಂದೆನ ಬೇಡ ಕೇಳು ಕಂಸಾ| ಶುದ್ಧ ಅನಂತಾದ್ರೀಶ ಅವತಿಳಿ ಕೇಳು ಕಂಸಾ|| 3 ಪದ್ಯ ನುಡಿದಿರುವ ಆ ಸತ್ಯವಾಣಿಯ ಕೇಳಿ ಮೃತ್ಯುಗಂಜಿಕೀನ್ನ ಹೊತ್ತುಗಳೆಯದಲೆ ಆ ಹೊತ್ತು ಕೊಲಬೇಕೆಂದು ಸತ್ವರದಿ ಕೇಶದಲಿ ಒತ್ತಿ ಹಿಡಿದು ಕತ್ತಿ ಹಿರಿದೆತ್ತಿದನು ಕÀಂಸಾ| ಆ ವೃತ್ತಿಯನು ತಿಳಯುತಲೆ ಅತ್ಯಂತವಾಗಿ ತನ್ನ ಚಿತ್ತದಲಿ ಮಿಡುಕಿ ಮದಮತ್ತ ಕಂಸಗೆ ನುಡಿದ ಒತ್ತಿ ಈ ಪರಿಯಾ || 1 ಪದ, ರಾಗ:ಆನಂದಭೈರವಿ ಆದಿತಾಳ ಬೇಡಲೊ ನೋಡಿ ಈಕೆಯಲಿ ಮಾಡು ಮಮತೆಯನು ಮಾಡಬೇಡ ಹಿಂಸಾ|| ಪ ಯಾಕೆಕೊಲ್ಲುವಿಯೋ ನೀ ಕರುಣಿಸು ಸಣ್ಣಾಕಿ ನಿರ್ಮಲಾಂಗಿ|| 1 ಕೊಂದರೆ ಎನಗೆ ಕೇಡು | ಮತ್ತದರಿಂದ ನಿನಗೆ ಕೇಡು ತಿಳಿದು ನೋಡು|| 2 ಏಸು ದಿವಸ ನೀನು ಬದುಕುವಿ ನಾಶವಿಲ್ಲವೇನು| ಮೋಸವಾಗದಿರು ಶ್ರೀಶ ಅನಂತಾದ್ರೀ ಕೋಪಿಸುವನು 3 ಆರ್ಯಾ ಬಹಳ ರೀತಿಯಲಿ ಹೇಳಿಕೊಂಡರೂ ಕೇಳಲಿಲ್ಲ ಕಂಸನು ಶೌರಿಯು ಹೀಗೆ || 1 ಪದ, ರಾಗ:ಅನಂದ ಭೈರವಿ ತಾಳ:ಆದಿ ಬೇಡಿದ್ದು ಕೊಡುವೆನು ನಾನು| ಪ ಜೇವ ಹತ್ಯವೇ ಮುಂಚೆ ಕೇವಲ ನಿಂದ್ಯದು ಸ್ತ್ರೀ ವಧಕಂತು ಇನ್ನು ದಾವುದು ಸರಿಯದು || 1 ಹುಟ್ಟುದರೀಕೆಯ ಹೊಟ್ಟೆ | ಮಕ್ಕಳು ಘಟ್ಟಿ ಮನಸು ಮಾಡಿ ಕೊಟ್ಟುಬಿಡುವೆನು ಕೇಳು || 2 ಬಲ್ಲಿದಾನಂತಾದ್ರಿವಲ್ಲಭನ ಆಣಿ|| 3 ಪದ, ರಾಗ:ಯರಕಲಕಾಂಬೋಧಿ ಶೌರಿಯ ವಚನವ ಕೇಳಿ ವೈರಿಯ ಕಂಸನು ಆಗ ಮೋರೆಯ ತೆಗ್ಗಿಬಿಟ್ಟನು ನಾರಿಯ ಕೊಲ್ಲುವದು | ವೈರಿಯ ಭಯ ಕಳೆವುತ ನಾರಿಯ ಕರಕೊಂಡು ||1 ಮುಂದಾ ದೇವಕಿಯಲಿ ಕಂದನು ಆದಾಕ್ಷಣಕೆ ತಂದೊಪ್ಪಿಸಿದನು ಕಂಸಗೆ ನೊಂದ ವಸುದೇವ| ಮುಂದಾ ಕಂಸನ ನೋಡಿ| ಮನನ ಹಾಸ್ಯದಿ ಮತ್ತ ಕಂದನ ತಿರಿಗಿ ಒಪ್ಪಿಸಿ ಆಗಂದನು ಈ ಪರಿಯು || 2 ಶಿಷ್ಟನೆ ನೀಕೇಳೈ ಬಂದಿಷ್ಟಿಲ್ಲಿವನಿಂದೆನಗೆ| ಸ್ಪಷ್ಟದಿ ನಿನಗ್ಹೇಳುವೆ ಎನಗಷ್ಟಮನೇ ವೈರಿ| ದುಷ್ಟನ ಮಾತಿಗೆ ಶೌರಿಯು ತುಷ್ಟನು ಇದು ಎಂದು || 3 ಪದ, ರಾಗ:ಕನ್ನಡ ಕಾಂಬೋದಿ ತಾಳ:ಬಿಲಂದಿ ಮುಂದ ಶೌರಿಯು ತನ್ನ ಮಂದಿರಕ್ಕೆ ಪೋಗಲು ಬಂದ ನಾರದನು ಆಗಲ್ಲೆ ಕಂಸ ಇದ್ದಲ್ಲೆ || 1 ಮಾಡಿದಾ | ಮಾತನಾಡಿದಾ|| 2 ಸುದ್ದಿಯಂಬೋದ್ಹುಟ್ಟಿತು | ಕೆಲಸ ಕೆಟ್ಟಿತು|| 3 ದಾವ ಮೊತೇನ್ಹೇಳಲಿ ದೇವದೇವ ಶ್ರೀಹರಿ ದೇವಕಿಯಲ್ಲಿ ಪುಟ್ಟುವಾ| ನಿನ್ನ ಕೊಲ್ಲುವಾ|| 4 ಅಸುರರಾದವರುಗಳಾ ಅಸುಗಳನ್ನೆ ಹೀರುವಾ ವಸುಧಿ ಭಾರವನಿಳಿಸುವಾ ಕೀರ್ತಿ ಬೆಳಿಸುಮವಾ|| 5 ನಂದಗೋಪಾದಿUಳೆÀಲ್ಲ ನಂದ ಬಾಂದವರು ಮತ್ತು ಮುಂದ ವಸುದೇವಾದಿಗಳು | ದೇವತಿಗಳು|| 6 ಇನ್ನಕೇಳು ಇವರ ಹೊರ್ತು ಅನ್ನರಾದವರು ಎಲ್ಲಾನಿನ್ನ ಅನುಸರಿಸೆ ಇರುವುವರು | ಅಸುರರೇ ಅವರು|| 7 ಮೂಲದಲ್ಲೇ ಮುಂಚೆ ನೀ ಕಾಲನೇಮಿಯೆನಿಸಿ ಈ ಕಾಲಕ್ಕೆ ಕಂಸನಾಗಿರುವಿ | ಮೈಮರ್ತು ಇರುವಿ || 8 ನಿನ್ನ ಪೂರ್ವ ವೈರಿಯು ಚನ್ನಿಗಾನಂತಾದ್ರೀಶಾ ನಿನ್ನ ಕೊಲ್ಲುವನೆಂಬುದದು |ನಿನಗೆ ತಿಳಿಯದು || 9 ಧಿಟ್ಟ ನಾರದನು ಮುನಿಮುಟ್ಟಿ ಬಂದ್ಹೀಂಗನಲು ಥಟ್ಟನೆ ಕಂಸ ಭಯಬಟ್ಟು ಅವರಿಬ್ಬರಿಗೆ ಘಟ್ವ ಬೇಡಿಯ ಬಿಗಿದು ಹುಟ್ಹುಟ್ಟದವರನ್ನ ಬಿಟ್ಟು ಬಿಡುದಲೆÀ ಕೊಂದ ಹುಟ್ಟಿದಾಕ್ಷಣಕೆ|| ಹುಟ್ಟುಗ್ರ ಸೇನನಲಿ ಹುಟ್ಟಿದಾರಭ್ಯ ಬಹು ದಿಟ್ಟಾದ ಸ್ನೇಹವನು ಬಿಟ್ಟ ಆ ಕಂಸ ಕಂಗೆಟ್ಟು ಬಹುಕಾಸೋಸಿ ಬಟ್ಟವನ ಬಂದಿಯ ಲ್ಲಿಟ್ಟುತಾನೆ ಆದ ಪಟ್ಟಕಾಧಿಪತಿಯು|| 1 ಪದ:ರಾಗ:ಶಂಕರಾಭರಣ ಸ್ವರ:ಷಡ್ಜ, ತಾಳ:ಆದಿ ಯೂದವರನ್ನು ಬಹುಪೀಡಾ ಬಡಿಸೀದಾ || 1 ದುಷ್ಟನ ಕೈಯೊಳು ಸಿಕ್ಕು ಶಷ್ಟ ಬಡಲಾರೆವು ಎಂದು ಅಷ್ಟೂರು ನಿಲ್ಲದೆ ದೇಶಭ್ರಷ್ಟರಾಸರು|| 2 ಅನುಬಂಧಿಗಳೆಂಬುವರು ಅನುರಾಗದಿಂದಲ್ಲೆ| ಅವನ ಅನುಸರಿಸಿಕೊಂಡಿರುತಿಹರು ಅನುದಿನದಲ್ಲಿ||3 ಕ್ರೂರಾಗಿ ಇರುವೊನು ಕಂಸಾ ನಾರಿ ದೇವಕ್ಕಿ ದೇವಿಯು ಆರು ಮಹಾಕಾಳಿಯ ಹರೊ ಆಜ್ಞೆಯಿಂದ ಕೀಳುತು ರೋಹಿಣಿ ಗರ್ಭದೊಳಿಟ್ಟಳು|| 4 ದೇವಕಿದೇವಿಯು ವಸುದೇವಾದಿಗಳೆಲ್ಲ ಗರ್ಭ ಸ್ರಾವವಾಯಿತೆಂದೊದರಿದರು ಆ ವ್ಯಾಳ್ಯದಲ್ಲಿ|| 5 ಎಂಟನೆ ಗರ್ಭಾಗಿ ಶ್ರೀ ವೈಕುಂಠೇಶ | ನಿಂತಾನು ಸಾಧು ಕಂಟಕರನ್ನು ಕೊಲ್ಲುವೆ ನೆಂದುತ್ಕಂಠದಿಂದಲಿ || 6 ಶಂಜಾಕ್ಷಿ ದೇವಕಿ ದೇವಿ ಶಂಜನಾಭನುದರವೆಂಬೋ ಪಂಜರದೊಳಿರಲು ತೇಜಃ ಪುಂಜಳಾದಳು7 ಇಂಥಾಕಿಯ ಕಂಡು ಕಂಸಾನಂತಾದ್ರೀಶ ಗರ್ಭದಲ್ಲಿ ನಿಂತಾನೆಂದು ತಿಳದೀಪರಿ ಚಿಂತಿ ಮಾಡಿದಾ|| 8 ಪದ:ರಾಗ:ಶಂಕರಾಭರಣ ಏನು ಮಾಡಲಿ | ನಾ ಇನ್ನೇನು ಮಾಡಲಿ | ಏನು ಮಾಡಲೇನು ವಿಷ್ಟು ತಾನೆ ಬಂದಿನ್ನೇನು ಗತಿ ಇನ್ನೇನು|| ಪ ವೀರರೊಳಗೆ ಸೇರಿ ಎನ್ನ ಮಾರಿ ಹ್ಯಾಂಗ ತೋರಲಿನ್ನೇನು ||1 ತಂಗಿ ವಧ ಜಗಂಗಳೊಳಗೆ ಅಮಂಗಳಿದು ಸು
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ಕೃಷ್ಣದೇವ ಸದಾನಂದ ಶ್ರೀ ಕೃಷ್ಣದೇವ ಪ ಶ್ರೀ ಕೃಷ್ಣ ಕರುಣಾನಿಧೇ ಭಕ್ತವತ್ಸಲ ಶ್ರೀ ಕೃಷ್ಣ ಪರಮ ಪುರುಷ ಸಚ್ಚಿದಾನಂದ ಅ.ಪ ವಸುದೇವ ನಂದನ ಕಂಸನಿಷೂದನ ಕುಸುಮೇಷು ಕೋಟಿ ಸಮಾನ ಪದಾಂಭೋಜ 1 ಲೀಲಾಮಾನುಷ ಮೂರ್ತೇ ಶ್ರೀವತ್ಸ ವಕ್ಷಸ್ಕ ನಿರಂಜನ 2 ಪೂತನಾ ಶಕಟ ತೃಣಾವರ್ತ ಭಂಜನ ಪಾತಕಹರ ಪುಣ್ಯಕೀರ್ತೇ ಜನಾರ್ದನ 3 ದರ ಪದ್ಮ ಚಕ್ರ ಗದಾಧರ ರವಿಕೋಟಿ ಸಂಕಾಶ 4 ಮಣಿ ರಂಜಿತ ಪದಯುಗ್ಮ ನೀಲಮೇಘಶ್ಯಾಮ ನೀರಜಲೋಚನ 5 ಕೌಸ್ತುಭಮಣಿ ಭೂಷ ಕನಕಕುಂಡಲ ಕರ್ಣ ಸಂಸ್ತುತ ಮಹಿಮ ಶ್ರೀ ಧರಣೀ ಸೇವಿತ ಪಾಶ್ರ್ವ 6 ನಂದ ಕಿಶೋರ ಯಶೋದಾ ಮನೋಹರಸುಂದರ ತಿರುಪತಿ ಧರಣೀಧರಾವಾಸ 7
--------------
ತಿಮ್ಮಪ್ಪದಾಸರು
ಶ್ರೀ ಕೃಷ್ಣವೇಣಿ ಕಲ್ಯಾಣೀ ಪಂಕಜಾಸನ ಸ್ವೀಕೃತ ಬುಧ ಶ್ರೇಣೀ ನೀ ಕೃಪೆÉಯಿಂದ ಮಹಾಕೃತು ಹರಿಯ ನಿ ಜಾಕೃತಿ ತೋರ್ದೂರಿಕೃತ ದುರಿತೇ ಪ ಸುಜನ ಮಾತೆ ಶಮಲ ಸಂಕೂಲ ನರ್ಧೂತೆ ಸುಮನಸ ಜನ ಸನ್ನುತೆ ಸನ್ಮೋದ ದಾತೆ ವಿಮಲ ಸದ್ಗುಣ ಸಂಭೃತೆ ನಮಿಸುವೆ ತ್ವತ್ಪದÀ ಕಮಲಯುಗಳಿಗನು ಪಮ ಸುಂದರೆ ಭ್ರಮೆಗೊಳಿಸುವ ದುರ್ಮಮ ಕಳೆದು |ಸೋ ತ್ತಮರ ಪದಾಬ್ಜಕೆ ಭ್ರಮರನೆನಿಸಿ ಮಾರಮಣನ ದುಹಿತ್ರೆ 1 ಮದಗಜಯಾನೆ ಪಿಕಗಾನೆ ಉಭಯಾನೆ ಮಾನಿನಿ ಮದನಾರಿ ಜಟಜಸೊನೆ ಪಾಪೌಘದಹನೆ ಮುದವ ಕೊಡು ಎಮಗೆ ನಿ ೀನೆ ಮದಡನರನು ಒಂದು ದಿನ ಮಜ್ಜನವ ವಿಧಿಸೆ ಶರೀರದಿ ಹುದುಗಿದ ಪಾಪಗಳುದುರಿಸಿ ಕಾಲನ ಸದನವ ಹೋಗಗೊಡದುದಧಿ ಮಥನ ಪದ ಪದುಮವ ತೋರ್ಪೆ 2 ನೀಲ ಪುನತ ಹೃತ್ಕುಮುದಾ ಭೇಶೇ ಅನುದಿನ ಪೂರೈಸೇ ಜನನಿಯೆನ್ನ ದುರ್ಗುಣವೆಣಿಸದೆ | ಮಾ ತನು ಲಾಲಿಸು ಸುಹೃದ್ವನರುಹದಲಿ ಶ್ರೀ ವನತೆಯರಸ ಜಗನ್ನಾಥ ವಿಠಲನ ಅನವರತ ನಿಲಿಸು ಘನ ಮಾಂಗಲ್ಯೇ 3
--------------
ಜಗನ್ನಾಥದಾಸರು
ಶ್ರೀ ಕ್ರೋಧನ ನಾಮ ಸಂವತ್ಸರ ಸ್ತೋತ್ರ 157 ಕ್ರೋಧನ ಸಂವತ್ಸರ ನಿಯಾಮಕ ಸ್ವಾಮೀಶ್ರೀ ಪದುಮಾಲಯಪತಿ ನಾರಸಿಂಹನ ಪಾದ ಕೃತಿ ನಡೆಸಿ ಶರಣರ ಕಾಯ್ವ ಪ ಈ ಸಂವತ್ಸರ ರಾಜಾ ಶುಕ್ರ ಮಂತ್ರೀ ಶನಿಯು ಶನೈಶ್ಚರನೇ ಸೈನ್ಯಾರ್ಘ ಮೇಘ ಸಸ್ಯಪತಿ ರಸಪಗುರು ನಿರಸ ಸಸ್ಯಪ ಮಂಗಳ ಸುಸೌಖ್ಯ ಬಹುಕ್ಷೀರ ಧಾನ್ಯ ವೃಷ್ಟಿದ ಚಂದ್ರ 1 ಕಾಡು ಕಿಚ್ಚು ಮೊದಲಾದ ಅಗ್ನಿಭಯ ರೋಗ ಪೀಡೆ ಜನರಲ್ಲು ರಾಜರಲು ಪರಸ್ಪರ ಅಡಿಗಡಿಗೆ ಸ್ನೇಹಹಾನಿ ಸೈನ್ಯಕಲಹ ದುಷ್ಟಭಯ ಕಳೆದು ಭಕ್ತರ ಕಾಯ್ವ ಹರಿ 2 ತತ್ವದೇವರ್ಗಳು ಸಭಾರ್ಯಾ ರವಿಸೋಮರು ಶಿವಾಶಿವ ವರ ಸಮೀರ ಇವರುಗಳಿಂ ಸೇವ್ಯ ಶ್ರೀ ಶ್ರೀಯುಕ್ ಪ್ರಾಣಯಮ್ಮೊಳ್‍ಜ್ವಲಿಸಿಕಾಯ್ವ ಸರ್ವಗ ವೇಧಪಿತ ಪ್ರಸನ್ನ ಶ್ರೀನಿವಾಸ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಗಣಪತಿ ಗಿರಿಜೆ ಪುರಾಂತಕ ಬಾಗಿನಮಿಸುವೆ ಲಕ್ಷುಮಿಗೆ ನಾರಾಯಣಗನು- ರಾಗದಲಿ ವಂದಿಸಿ ಪೇಳುವೆನು 1 ನವರತ್ನಖಚಿತ ಮಂಟಪದಲಿ ನವನವ ಚಿತ್ರಗಳನು ಬರೆಯಿಸಿ ಭವನರಸಿ ಮುಖ್ಯಾ ಮುತ್ತೈದೆಯರು ಹರುಷದಿ ಲಕ್ಷ್ಮೀ ಧವನಡಿಗಳ ಬೇಡಿ ಪ್ರಾರ್ಥಿಸುವರು 2 ಮುತ್ತು ಮಾಣಿದ ಹಸೆಗಳ ಹಾಕಿಸಿ ಪಚ್ಚೆಯ ಮಣಿಗಳ ತಂದಿರಿಸಿ ಮಿತ್ರೇ ಮಹಲಕ್ಷ್ಮಿಯ ರಮಣೆಗೆ ಅಕ್ಷತೆಯನು ತಳಿದು ವತ್ತೀದಾರೆಣ್ಣೆ ವಧೂವರರಿಗೆ 3 ಅಂಕಿತವಾಗಳವಡಿಸಿ ಪಣೆಗೆ ಪಂಕಜಾನನೆಯರು ವೀಳ್ಯವನು ಕರದಲಿಕೊಟ್ಟು ವೆಂಕಟಾಗೆಣ್ಣೆ ವತ್ತೀದಾರು 4 ನಲ್ಲೆಯರೊತ್ತಲು ನಸುನಗುತಲಿ ಚಲ್ವಾಗುರುರಾಮವಿಠಲಗೆ ಹರಸಿದರು ಸುರ ರೆಲ್ಲ ಪೂಮಳೆಯ ಕರೆದಾರು 5
--------------
ಗುರುರಾಮವಿಠಲ
ಶ್ರೀ ಗಣಾಧಿನಾಥಾಶ್ರಿತ ಸೌಖ್ಯಧಾತ ಪ ನಾಗಭೂಷಣಸುತ ನಾರದಾದಿವಂದಿತ ಅ.ಪ ಗಜವದನ ಗಣೇಶ ಲಂಬೋದರ ಗಿ- ರಿಜಾಮಲ ಸಮುದ್ಭವ ಭೂತೇಶ ಭೂರಿ ಭಜಿಸುವೆ ನಾನಿನ್ನ ಸುಜನರ ಕಾರ್ಯಕೆ ಬರುತಿಹ ವಿಘ್ನ ರಜಗಳಿಗೆ ನಮೊ ನಮೋ ಎಂಬುವೆನಾಂ 1 ಇಂದುಧರನ ತನಯಾ ರವಿ ಶಶಿ ಸಂ- ಕ್ರಂದನ ಮುಖ ಸುರಬೃಂದ ಸೇವ್ಯಮೃದು ಮಂದಹಾಸ ಪೂರ್ಣೇಂದುವದನ ಸ್ಫುರಿ- ತೇಂದೀವರನಯನಾ ಇಂದಿನದಿನ ಸಕಲ ದೇಶದವರು ಮುದ- ದಿಂದ ನಾಟಿ ಭೈರವಿ ಶ್ರೀರಾಗಗ- ದ್ವಂದ್ವಗಳನು ಕೊಂಡಾಡುತಲಿಹರೊ 2 ಪಾಶಾಂಕುಶಗಳ ಕರದಿ ಹಿಡಿದು ನಿಜ- ದೋಷದೂರ ಗುರುರಾಮವಿಠಲನ ದಾಸರದಾಸ್ಯವನಿತ್ತು ಸದಾಸಂ- ತೋಷದಿಂದ ಪಾಲಿಸು ಎನ್ನನು ಸ- ರ್ವೇಶ ಮೋದಕ ಪ್ರಿಯ ವಿಘ್ನೇಶಾ 3
--------------
ಗುರುರಾಮವಿಠಲ
ಶ್ರೀ ಗಣೇಶ ಪ್ರಾರ್ಥನೆ ಅಗ್ರಪೂಜಾ ವಿಘ್ನರಾಜ ಅಗ್ನಿಜಾಗ್ರಜ ಮಹೋಜ ಪ. ಲಗ್ನವಾಗಲಿ ಹರಿಪದಾಬ್ಜ ನಿಗ್ರಹೀತ ಕಾಮಬೀಜ ಅ.ಪ. ಭಾನುತೇಜ ಭಕ್ತಿಭಾಜ ಧ್ಯಾನಗಮ್ಯ ಮುನಿಸಮಾಜ ದೀನಕಾಮದ ಕಲ್ಪಭೂಜ ಗಾನಲೋಲ ಭಾವ ನಿಯಾತ್ಮಜ 1 ಚತುರಭುಜ ಸಚ್ಚರಿತ ವಿರಜ ಯತಿವರೇಣ್ಯಗಣ ವಿರಾಜ ಮತಿಮತಾಂವರ ನತಬಿಡೌಜ ಪಂಕಜ 2 ರುಕುಮಿಣೀಜ ರುದ್ರಗಣವ್ರಜ ಭಕುತ ವತ್ಸಲ ಮನೋಜ ಮುಖಮತಂಗಜ ಮೂಷಿಕಧ್ವಜ ಲಕುಮಿನಾರಾಯಣ ಗುಣಜ್ಞ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶ್ರೀ ಗಣೇಶ ಪ್ರಾರ್ಥನೆ ಅಗ್ರಪೂಜಾ ವಿಘ್ನರಾಜ ಅಗ್ನಿಜಾಗ್ರಜ ಮಹೋಜ ಪ. ಲಗ್ನವಾಗಲಿ ಹರಿಪದಾಬ್ಜ ನಿಗ್ರಹೀತ ಕಾಮಬೀಜಅ.ಪ. ಭಾನುತೇಜ ಭಕ್ತಿಭಾಜ ಧ್ಯಾನಗಮ್ಯ ಮುನಿಸಮಾಜ ದೀನಕಾಮದ ಕಲ್ಪಭೂಜ ಗಾನಲೋಲ ಭಾವ ನಿಯಾತ್ಮಜ 1 ಚತುರಭುಜ ಸಚ್ಚರಿತ ವಿರಜ ಯತಿವರೇಣ್ಯಗಣ ವಿರಾಜ ಮತಿಮತಾಂವರ ನತಬಿಡೌಜ ಪಂಕಜ 2 ರುಕುಮಿಣೀಜ ರುದ್ರಗಣವ್ರಜ ಭಕುತ ವತ್ಸಲ ಮನೋಜ ಮುಖಮತಂಗಜ ಮೂಷಿಕಧ್ವಜ ಲಕುಮಿನಾರಾಯಣ ಗುಣಜ್ಞ 3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀ ಗೋಪಾಲದಾಸರು ನಿನ್ನ ದಯದಿಂದಲೇ ಎನ್ನ ಜೀವನವು ಘನ್ನ ಗೋಪಾಲ ವಿಠ್ಠಲ ದಾಸರಾಯ ಪ ತುಂಗೆ ಕೃಷ್ಣೆ ಮಧ್ಯರಂಗ ಕ್ಷೇತ್ರದಿ ಮುದದಿ ತುಂಗ ವಿಜಯಾರ್ಯರ ಪದಂಗಳಿಗೆ ಎರಗಿ ಗಂಗೆಪಿತ ಮಾತಂಗ ವರದನಾಮನ ಅಂತ ರಂಗದಿ ನೋಡಿ ಗುಣಗಳನು ಪಾಡಿದೆಯೊ 1 ಅನುಜರಿಗು ಅಚಲ ಮಾತೆಗು ಶರಣು ಸುಜನರಿಗು ಮೌನಿ ಪಂಡಿತರಿಗೂ ಎನ್ನಂಥ ಪಾಮರಗು ಜ್ಞಾನ ಸುತತ್ವ ಸನ್ಮಾರ್ಗ ಬೋಧಿಸಿ ಜಗ ನ್ನಾಥನ ಮನಸಿನ ಅನುಭವಕೆ ತಂದೆ 2 ಬೇಸರದಿ ನಾ ಸೀತಾಪತಿಪಲ್ಲಿಯಲಿ ಮಲಗೆ ಏಸು ಕರುಣವೊ ದಾಸರಾಜ ನೀ ಬಂದು ವ್ಯಾಸಮುನಿಮಠ ಗುರುಪೂಜೆಗೆ ಕರೆದೊಯ್ದು ದಶಪ್ರಮತಿ ಭಾಷ್ಯಪಠನಾರ್ಚನೆಯ ತೋರಿಸಿದೆ 3 ಗೋ ಎನಲು ಗರುಡವಾಹನ ಪೀಡೆ ಪರಿಹರಿಪ ಪಾ ಎನಲು ಪರಮಪೂರುಷ ಪಾಲಿಸುವ ಲ ಎನಲು ಲಕ್ಷ್ಮೀಶ ನಿಖಿಳೇಷ್ಟಗಳನೀವ ಅನವರತ ಗೋಪಾಲದಾಸರಿಗೆ ಶರಣು 4 ಆನಂದಮುನಿಹೃಸ್ಥ ವನಜಸಂಭವಪಿತ ಪ್ರ ಸನ್ನ ಶ್ರೀನಿವಾಸ ಜಗನ್ನಾಥ ನಿನ್ನ ಪಾದ ಸಂಸ್ಮರಿಸುವ ಸುಜನರನು ಅನವರತ ಪಾಲಿಸುವ ಸಂದೇಹವಿಲ್ಲ 5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಜಗನ್ನಾಥದಾಸರು ನಮೋ ದಾಸವರ್ಯ ಪೂತಾತ್ಮ ಪದ ನಮೋ ದೇವತಾತ್ಮ || ಪ ರಮಾ ರಮಣಪದ ಅಮಲ ಭಜನೆ ಕೊಡುನಮೋ ನಮೋ ಭವ್ಯಾತ್ಮ ಅ.ಪ. ನಾರಸಿಂಹ ಸತ್ಪೋರನೆಡರ ಪರಿಹಾರ ಪದದಿ ದೀಕ್ಷಪಾರುಮಾಳ್ಪಕೂಪಾರ ಭವವ ಸತ್ಸರಾಮೃತ ಕೃತದಕ್ಷ |ಭಾರ ನಿನ್ನದಾಪಾರ ಕೃಪೆಯ ನೀತೋರ್ವುದೆಂಬ ಮಹರಕ್ಷಬಾರಿ ಬಾರಿ ನಿರ್ಧಾರ ಮನದಿ ಹಾರೈಸುತಿಹೆನೂ ಹರಿಪಕ್ಷ 1 ಮಾನವೀಶ ಪ್ರಾಣೇಶ ದಾಸನುತ ಆನತೇಷ್ಟ ತೋಷಗಾನಲೋಲ ಮೌನೀಶ ಪದಾಂಬುಜ ಆನಮಿಪರ ಆಶೇಷ |ಹೀನವೆನಿಪ ಕುಯೋನಿ ನಿವಾರಕ ಧ್ಯಾನಗಮ್ಯ ಸುವಿಶೇಷಪ್ರಾಣನಾಥ ಮಹಿಮೋನ್ನತಿ ಗಾನದಿ ಕಳೆದೆ ದೋಷ 2 ಪಾದ ಮೂರ್ತಿ ಪಾದ ತೋರೊ ದೇವ 3
--------------
ಗುರುಗೋವಿಂದವಿಠಲರು