ಒಟ್ಟು 3122 ಕಡೆಗಳಲ್ಲಿ , 120 ದಾಸರು , 2350 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುಂದರ ಮೂರುತಿ ಹರಿಯೆ ಬಾ- ರೆಂದು ಕಶ್ಯಪ ಋಷಿ ಅದಿತಿಯರು ಮಂದಹಾಸದಿ ನಮ್ಮ ಮಂದಿರಕೀಗ ಗೋ- ವಿಂದ ಬಾ ಶ್ರೀಮುಕುಂದ ಬಾ ಯಾದವ ವೃಂದ ಬಾ ಬಲುಮುದದಿಂದ ಬಾ ಬಾ- ರೆಂದು ಕರದಾರು ಶೋಭಾನೆ 1 ಅಚ್ಚುತಾನಂತ ಶ್ರೀಹರಿ ನೀನು ಸಚ್ಚಿದಾನಂತಾತ್ಮನೆ ನೀನು ಮಿತ್ರೆ ಲಕುಮಿ ಒಡಗೂಡುತ ಬಾರೆಂದು ಅತ್ರಿಯರು ಸ್ತುತಿಪರು ಮಿತ್ರೆಯರು ಪಾಡ್ವರು ಕೀರ್ತಿಪರು ಅನಸೂಯಾತ್ರಿಯರು ಬಾರೆಂದು ಕರೆದಾರು ಶೋಭಾನೆ 2 ಭಾಗವತರ ಪ್ರಿಯ ಬಾರೆಂದು ಭಾರದ್ವಾಜರು ಭಕ್ತಿಯಲಿ ಸತಿ ಸುಶೀಲೆ- ಯರು ಸುಂದರ ನಾರಿಯರು ಕರೆವರು ಕಂಸಾರಿ ಬಾರೆಂದು ಕರದಾರು ಶೋಭಾನೆ 3 ಹಸ್ತಿವರದ ಹರಿ ಬಾರೆಂದು ವಿಶ್ವಾಮಿತ್ರರು ಹರುಷದಲಿ ಸತಿ ಸಹಿತದಿ ಕರೆವರು ಭಕ್ತಿಯಲಿ ಪರಮಾಸಕ್ತಿಯಲಿ ಹರಿಯನು ಸ್ತೋತ್ರದಲಿ ಭೂ ರಮಾ ಪಾರ್ಥಸಾರಥಿಯ ಕರದಾರು ಶೋಭಾನೆ 4 ಕೌಶಿಕ ಯಜ್ಞಪಾಲನೆ ಬಾ ಕಂಸನ ಸಭೆಯಲಿ ಸೆಳೆದನೆ ಬಾ ಹಂಸವಾಹನಪಿತ ಬಾರೆಂದು ಕರೆವರು ಗೌತಮರು ಪತ್ನಿ ಅಹಲ್ಯೆಯರು ಪಾಡುತ ಪ್ರಾರ್ಥಿಪರು ಮುರಹರಿ ಗೋಪಾಲ ಬಾರೆಂದು ಕರದಾರು ಶೋಭಾನೆ 5 ಜಗದುದರನೆ ಶ್ರೀ ಹರಿಯೆ ಬಾ ನಿಗಮತಂದು ಸುತಗಿತ್ತನೆ ಬಾ ಝಗಿಝಗಿಸುವ ಆಭರಣಗಳ್ಹೊಳೆಯುತ ಬಾರೆಂದು ಜಯ ಜಯವೆನ್ನುವರು ಋಷಿ ಜಗದಗ್ನಿಯರು ರೇಣುಕ ಸಹಿತ ಶ್ರೀಶನ ಕರದಾರು ಶೋಭಾನೆ 6 ಮದನ ಗೋಪಾಲನಿಗೆ ಮಂಗಳ ಯದುಕುಲ ತಿಲಕನಿಗೆ ಮಂಗಳ ಕಮಲಾನಾಭ ವಿಠ್ಠಲನಿಗೆ ಸತಿ ಅ- ರುಂಧತಿಯರು ಜಯ ಜಯ ಮಂಗಳವೆಂದು ಕರದಾರು ಶೋಭಾನೆ7 ಶೋಭನವೆನ್ನಿರೆ ಶ್ರೀಹರಿಗೆ ಶೋಭನವೆನ್ನಿರೆ ಮಾಧವಗೆ ಶೋಭನವೆನ್ನಿರಿ ಸೊಬಗುಳ್ಳ ದೇವಗೆ ಶೋಭಾನೆ ಸಿರಿಯರಸಗೆ ದಿವ್ಯ ಶೋಭಾನೆ ಪರಮಪುರುಷನಿಗೆ ಶೋಭಾನೆ ಶೋಭನ ಗರುಡಗಮನಗÉಶೋಭನವೆನ್ನಿರೆ ಶೋಭಾನೆ 8
--------------
ನಿಡಗುರುಕಿ ಜೀವೂಬಾಯಿ
ಸುನಾಮ ಕೇಶವ ಮಾಧವ ನಾಶನ ಭವನಿಧಿಬಂಧನ ಪ ಬೋಲೋ ರಾಧಾಕೃಷ್ಣ ಸುಲೀಲ ಪಾಲಯ ಕುಲಕೋಟಿ ಪಾವನ ಅ.ಪ ವೃಂದಾವನ ಮಾಲಾನಂದ ಲೀಲಾ ಇಂದಿರೆಪ್ರಿಯ ಮಣಿಮಾಲನ ಸಂದರಮಂದರ ಮಂದಿರ ದೇವಕಿ ಕಂದ ಮುಕ್ಕುಂದ ಗೋಪಾಲನ1 ನೀಲಶ್ಯಾಮ ಭವಮಾಲಹರಣ ದಯ ಆಲಯ ಭಜನಾನಂದನ ಕಾಲ ಕುಜನ ಕುಲಶೀಲ ಶಿಷ್ಟಪ್ರಿಯ ಲೋಲಗಾನ ಹರಿ ಗೋವಿಂದನ 2 ಅಮಿತಮಹಿಮ ಅಸುರಮರ್ದನ ಕಮಲನಾಭ ಕರಿಪಾಲನ ಕಾಮಿತದಾಯಕ ಸುಮಶರಪಿತ ಮಮ ಸ್ವಾಮಿ ಶ್ರೀರಾಮ ಮುಕ್ತಿ ಸೋಮನ 3
--------------
ರಾಮದಾಸರು
ಸುಬ್ರಹ್ಮಣ್ಯ ಇನ್ನೂ ದಯೆದೋರೆಯ ಪ ಕರ್ಮ ಬೆನ್ನ ಪಿಡಿಯುತೀಗ-ಲೆನ್ನ ಕಾಡುತಲಿದೆ ನಿನ್ನಾಶ್ರಯವ ಗೈದೆ ಅ ಅನುದಿನ ಕೊರಗುವೆ ಅನಪತ್ಯಕೋಸುಗ ಕೊನೆಗಾಣಿಸೆಂದು ನಾ ಮಣಿಯುತ ಬೇಡುವೆ 1 ಬಲವೆಲ್ಲಿ ಕುಗ್ಗಿತು ಗೆಲವೆಲ್ಲಿ ನಿಂತಿತು ಛಲ ಬಿಟ್ಟು ಎನ್ನನೀ ಸಲಹೆಂದು ಬೇಡುವೆ 2 ಲೇಶವು ಸುಖವಿಲ್ಲ ಘಾಸಿಯಾದೆನು ಪಾವಂ-ಜೇಶನೆ ತವಪದ ದಾಸರ ಮೇಲೆ ನೀ | ಇನ್ನೂ 3
--------------
ಬೆಳ್ಳೆ ದಾಸಪ್ಪಯ್ಯ
ಸುಬ್ರಹ್ಮಣ್ಯನೆ ಶುಭ್ರವದನನೆ | ನಿರ್ಭಯವನುರೆ ಮಾಳ್ವನೆ | ಶರಣು ಶರಣು 1 ಕರುಣಿ ನಿತ್ಯಾನಂದನೆ | ಶರಣು 2 ರಾಮನ ತೋಷನೆ | ಶರಣು 3 ಶೋಕ ನಾಶ ಉಮಾ ಕುಮಾರಕ | ಶ್ರೀ ಕುಮಾರ ಗಿರೀಶನೆ | ಶರಣು 4 ದಾಸರಾ ಮನ ತೋಷನೆ 5
--------------
ಬೆಳ್ಳೆ ದಾಸಪ್ಪಯ್ಯ
ಸುಮ್ಮನಿರಬಾರದೆ ಮನವೆ ನೀನು ಸುಮ್ಮನಿರಬಾರದೆ ಹಮ್ಮುಅಹಂಕಾರ ಹೆಮ್ಮೆಗಳೆದು ಪನ್ನಗಾದ್ರಿಯ ಧ್ಯಾನಮಾಡುತ್ತ ಪ ಚಿಂತೆಯನು ತೊರೆದು ಮನವೆ ಲಕ್ಷೀಕಾಂತನೊಳು ಬೆರೆದು ಅಂತರಂಗದಿ ಕಂತುಜನಕನ ಸಂತತವಿಟ್ಟು ಪಂತವನು ಬಿಟ್ಟು 1 ಆಸೆಯನು ತೊರೆದು ಮನವೆ ನೀ ಶ್ರೀಶನೋಳು ಬೆರೆದು ಘಾಸಿಯಾಗದೆ ವಾಸುದೇವನ ದಾಸನಾಗಿ ಉಲ್ಲಾಸದಿಂದಲೆ 2 ಯಾರು ಬೈದರೇನು ಈ ದೇಹ ಇನ್ಯಾರು ಕೊಯ್ದರೇನು ಘೋರಮಾಯೆ ದೂರಮಾಡಿ ನೀ ವಾರಿಜಾಕ್ಷನ ಪಾದವನು ಸೇರಿ 3 ಎಲ್ಲರಲ್ಲಿ ವಾಸುದೇವನಿಲ್ಲದಿಲ್ಲೆನುತ ಹುಲ್ಲು ಹುಳುವಿನೊಳು ಸೊಲ್ಲು ಪಾಡುತ್ತ 4 ಸೃಷ್ಟಿಯೊಳಗಧಿಕ ಮೂಡಲಗಿರಿ ಬೆಟ್ಟದೊಳಗಿರುವ ದಿಟ್ಟವೆಂಕಟನ ಮುಟ್ಟಿ ಭಜಿಸಿ ನೀ ಮಾಡಿದಷ್ಟು ಪಾಪವ ನಷ್ಟ ಮಾಡುತ್ತ 5
--------------
ಯದುಗಿರಿಯಮ್ಮ
ಸುಮ್ಮನೊಲಿವನೆ ಪರಬೊಮ್ಮನಾದ ತಿಮ್ಮರಾಯ ಸುಮ್ಮನೊಲಿವನೆ ಪ ಮಂದವಾರ ದಿವಸದಲ್ಲಿ ಮಿಂದು ಮಡಿಯನುಟ್ಟುಕೊಂಡು ಗೋ ವಿಂದ ಎನುತ ನಾಮವಿಕ್ಕಿ ವಂದನೆಯ ಮಾಡದನಕ 1 ಗರ್ವವನು ಉಳಿದು ಮನದಿ ಸಾರ್ವಭೌಮನನ್ನು ನೆನೆದು ನಿರ್ವಹಿಸಿ ಶೇಷನು ಸುತ್ತಿದ ಪರ್ವತವನ್ನು ಏರದನಕ 2 ಕಾಸು ದುಡ್ಡು ಚಕ್ರ ನಾಣ್ಯ ವೀಸವುಳಿಯದಂತೆ ಬಡ್ಡಿ ವಾಸಿಯಿಕ್ಕಿ ಗಂಟ ಕಟ್ಟ ಈಸುಕೊಂಡು ಸೂಸದನಕ 3 ದೇಶ ದೇಶದಿಂದ ಕಪ್ಪ ಗಾಸಿಯಾಗದಂತೆ ತರಿಸಿ ಕೋಶಕಿಕ್ಕಿ ಕೊಂಬ ಲಕ್ಷ್ಮಿಯ ಈಶನನ್ನು ನೆನೆಯದನಕ 4 ಗುಡವ ಕದಡಿಕೊಂಡು ಸಂಗಡ ಕಡಲೆಯನ್ನು ನೆನಸಿಯಿಟ್ಟು ಒಡೆದ ನಾರಿಕೇಳವು ಸಹಿತ ಒಡೆಯಗೆಂದು ಇಡದ ತನಕ 5 ಆಶಾಪಾಶವನ್ನು ಬಿಟ್ಟು ದೇಶವನ್ನು ತೊಳಲಿ ಬಳಲಿ ಕೇಶವಾದಿ ನಾಮದೊಳಗೆ ವಾಸುದೇವನ ನೆನೆಯದನಕ 6 ಸೃಷ್ಟಿಪಾಲ ಮೆಟ್ಟಿದಂಥ ಬೆಟ್ಟವನ್ನು ಏರಿ ಹೋಗಿ ವರಾಹ ತಿಮ್ಮ ಶೆಟ್ಟಿಯನ್ನು ನೋಡದನಕ 7
--------------
ವರಹತಿಮ್ಮಪ್ಪ
ಸುರನರವಂದಿತ ಪಾಹಿ ಮುಕುಂದ ಶರಣರ ಪಾಲಕ ತ್ರಾಹಿ ಗೋವಿಂದ ಪ ಅಶನವಸನ ನೀಡಿ ಪಾಹಿ ಮುಕುಂದ ಅಜಹರ ಪೂಜಿತ ಪಾಹಿ ಮುಕುಂದ ಭಜಿಸುವೆ ಚರಣವ ತ್ರಾಹಿ ಗೋವಿಂದ 1 ಶಂಖ ಚಕ್ರಾಂಕಿತ ಪಾಹಿ ಮುಕುಂದ ಪಂಕಜ ಲೋಚನ ತ್ರಾಹಿ ಗೋವಿಂದ 2 ಇಂದಿರ ರಮಣನೇ ಪಾಹಿ ಮುಕುಂದ ಚಂದದಿ ದಾಸನ ತ್ರಾಹಿ ಗೋವಿಂದ 3 ಪನ್ನಗಶಯನನೇ ಪಾಹಿ ಮುಕುಂದ ಚನ್ನಕೇಶವ ಸ್ವಾಮಿ ತ್ರಾಹಿ ಗೋವಿಂದ 4
--------------
ಕರ್ಕಿ ಕೇಶವದಾಸ
ಸುಲಭ ನೀನೆನಗಲ್ಲ ತಿಳಿವೆ ಶ್ರೀನಲ್ಲ ಪ ಸುಲಭನೆಂದಾಡುವರು ಹರಿದಾಸರೆಲ್ಲ ಅ.ಪ. ದರುಶನವು ಸಿಗಲೆಂದು ಪಂಢರಿಗೆ ನಾ ಬಂದೆಪರಮಪಾವನ ನಿನ್ನ ಮೂರುತಿಯ ಮುಂದೆತ್ವರದಿನಿಲೆ ಬರಲು ಬಹುಭಕ್ತಿಯಿಂದೆತೆರೆಯಲಿಲ್ಲವೊ ದ್ವಾರ ಏನೆಂದೆ ತಂದೆ 1 ಶಿಲೆಯ ಪ್ರತಿಮೆಯನೀಗ ತೋರದವ ನೀ ಮುಂದೆಬಲು ನಿಜದ ರೂಪವನು ತೋರುವುದು ಹೇಗೆಂದೆಜಲಜಾಕ್ಷ ಭರವಸೆಯ ನೀಡಲೆಂತು ಮನ ಗುಂದೆಸಲಹು ವಿಠ್ಠಲರಾಯ ಕೈ ಮುಗಿಯುವೆನು ತಂದೆ 2 ಸುಲಭದೊಳು ಸುಲಭನೈ ಪಂಢರಿಯ ವಿಠಲಾಬಲು ಪಾಪಿಗಳನು ಉದ್ಧರಿಪ ಸಕಲಬಲುಹಿ ನೀ ನುಡಿಯು ನನಗೆಲಾಸುಲಭ ಗದುಗಿನ ವೀರನಾರಾಯಣನು ಅಚಲ 3
--------------
ವೀರನಾರಾಯಣ
ಸುಲಭದಿಂದ ಪಾಂಡವರ ಗೆಲಿದುಕೊಂಡುನಗುತಬಾಹೊ ಬಲವ ಹೇಳೆಂದ ಕೃಷ್ಣ ಪ. ಭರದಿ ಕೃಷ್ಣನಂಫ್ರಿಗಳಿಗೆ ಎರಗಿಬೃಹಸ್ಪತಿಯು ನಗುತ ಬರುವೋದು ಚಂದ್ರನ ಬಲವ ಹರಿಯೇ ತೆgಳೆಂದ 1 ಮತ್ತೆ ಪಾಂಡವರ ಗರುವ ಒತ್ತೇವೋ ಮೂಲೆಗೆ ಈ ಹೊತ್ತೆ ಸೂರ್ಯನ ಬಲವ ಚಿತ್ತೈಸÉಂದನು ಬೃಹಸ್ಪತಿ ಚಿತ್ತೈಸೆಂದನು 2 ಗುರುಬಲ ಎಂಬೋದು ಎಲ್ಲ ಹರದೆಯರಿಗೆ ತೋರುತಿರೆÉ ಗರವು ಮುರಿದು ಸುಭದ್ರೆಯಬರುವಿರಮ್ಮಯ್ಯ ನಗುತ ಬರುವಿರಮ್ಮಯ್ಯ 3 ಶೀಘ್ರದಿ ಸತ್ಯಭಾಮೆ ರುಕ್ಮಿಣಿದೇವಿಯರು ತೆರಳಿ ದುರ್ಗೆರವಿ ದ್ರೌಪತಿಯ ಮಾನ ತಗ್ಗೋದೆಂದನು ಮಾರಿ ಕುಗ್ಗೋದೆಂದನು4 ಹದಿನಾರು ಸಾವಿರ ವೀರ ರಾಮೇಶನ ಮಡದಿಯರು ಮಾರಿ ಮೇಲಾಗಿ ಬಾಹೋದು ನಿಜವೆಂದ ಆಮಾತು ನೀರೆ ನಿಜವೆಂದ 5
--------------
ಗಲಗಲಿಅವ್ವನವರು
ಸುವ್ವಿ ಸುವ್ವಿ ನಮ್ಮ ಶ್ರೀರಮಣಗೆ ಸುವ್ವಿ ಸುವ್ವಿ ಸುವ್ವಿ ನಮ್ಮ ಶ್ರೀರಮಣನೆನೆಸಿದ ವಿನೋದಿ ಹರಿ ಸರ್ವೋತ್ತಮಗೆ ಸುವ್ವಿಪ. ಹರಿಗೆ ಶರಣೆಂಬೆ ಸಿರಿಗೆ ಶರಣೆಂಬೆ ಪರಮೇಷ್ಠಿ ಗುರುಗಳಿಗೆ ಶರಣೆಂಬೆ ಸುವ್ವಿ ಪರಮೇಷ್ಠಿ ಗುರುಗಳಿಗೆ ಹರಿ ಪರನೆಂದು ಪೇಳ್ವ ಶ್ರೀಮದಾನಂದತೀರ್ಥರಿಗೆ ಸಾಸೀರ ಶರಣೆಂಬೆ 1 ವಾಸುದೇವ ಪರ ಸಂಕರ್ಷಣ ಅತಿಕ್ರೂರಸಂಹಾರಕಾರ ಸುವ್ವಿ ಸಂಕರ್ಷಣ ಅತಿಕ್ರೂರಸಂಹಾರಕಾರ ಪ್ರದ್ಯುಮ್ನ ಬೊಮ್ಮ ಕುಮಾರನಂತೆ ಸುವ್ವಿ 2 ಸೂಕರ ನರಹರಿ ಕಾಯ ವಾಮನ ಭಾರ್ಗವ ರಾಮನೆನಿಪ ಭೂಪ ಕೃಷ್ಣ ಸುವ್ವಿ ವಾಮನ ಭಾರ್ಗವ ರಾಮನೆನಿಪ ಭೂಪ ಕೃಷ್ಣನಾದ ಬೌದ್ಧ ಕಲ್ಕಿ ರೂಪ ಪ್ರಸಿದ್ಧವಂತೆ ಸುವ್ವಿ3 ಮುಖ್ಯಪ್ರಾಣ ಆವಲ್ಲಿ ನಾರಾಯಣ ಇವರಿಬ್ಬರ ಗುಣವನರಿಯದವನೆ ಸುವ್ವಿ ಇವರಿಬ್ಬರ ಗುಣವ ಅರಿಯದವನೆ ಗೌಣನೆಂಬರ್ಥದಲಿ ಬ್ರಹ್ಮಸೂತ್ರ [ದಂಬಂತೆ] ಸುವ್ವಿ4 ಆತ್ಮನು ಅತಂತ್ರ ಪರಮಾತ್ಮನು ಸ್ವತಂತ್ರ ದುಃ- ಖಾತ್ಮನು ಜೀವಾತ್ಮ ಪರಮಾತ್ಮನಲ್ಲ ಸುವ್ವಿ ದುಃ- ಖಾತ್ಮನು ಜೀವಾತ್ಮ ಪರಮಾತ್ಮನಲ್ಲ ವಾದಿ ಜ್ಞಾನಾನಂದಕ ಹರಿಗೆ ಸಮರಿಲ್ಲ ಸುವ್ವಿ 5 ಜಡದಲ್ಲಿ ಜೀವಾತ್ಮ ಜಡ ಜೀವರÀಲಿ ಪರಮಾತ್ಮ ಕ್ರೀಡೆಯಿಂದ ಏಕಾತ್ಮ ಬಿಡದಿಹ ಸುವ್ವಿ ಕ್ರೀಡೆಯಿಂದ ಏಕಾತ್ಮ ಬಿಡದಿಹುದು ವಾದಿ ದ್ವಾಸುಪರ್ಣ ವೆಂಬೋ ಶ್ರುತಿ ಲೇಸು ಲೇಸು ಸುವ್ವಿ 6 ಜಡ ಹರಿಗಳ ಭೇದ ಜೀವ ಜೀವಕೆ ಭೇದ ಜೀವೇಶ್ವರಗೆ ಭೇದ ಶರೀರ ಭೇದ ಸುವ್ವಿ ಜಡ ಜೀವರಿಗೆ ಭೇದ ಶರೀರ ಭೇದ [ವೆನ್ನಿ] ಜಡಜೀವ ಭೇದ ಪಂಚಭೇದಗಳು ಸುವ್ವಿ 7 ಪಂಚಭೇದಗಳೆಂಬ ಪ್ರಪಂಚದಲಿ ಸಕಲ ವೈಕುಂಠದೊಳಗಿನ ವಿವರ ಒಂದುಂಟು ಕೇಳು ಸುವ್ವಿ ವೈಕುಂಠÀದೊಳಗಿನ ವಿವರ ಒಂದುಂಟು ಕೇಳು ವಾದಿ ಸಾಕು ಸಾಕು ನಾಲ್ಕುವಿಧ ಮುಕ್ತಿಯುಂಟಲ್ಲಿ ಸುವ್ವಿ 8 ಶ್ರವಣಕೀರ್ತನ ಹರಿಸ್ಮರಣೆ ಸೇವನ ಪೂಜನ ವಂದನ ಹರಿದಾಸ್ಯ ಸಖ್ಯಮಾತ್ಮನಿವೇದನೆ ಸುವ್ವಿ [ಹರಿದಾಸ್ಯ ಸಖ್ಯಮಾತ್ಮ ನಿವೇದನೆಗಳು ತಮ್ಮ] ಅರ್ಥ ಕೂಡೊಂಬತ್ತುಭಕ್ತಿ ಸತ್ಯ ಉಂಟು ಸುವ್ವಿ 9 ಜೀವೇಶ[ನೊಂದು] ಹರಿನಿರ್ಗುಣನೆಂದು ಅಪೂರ್ಣ ಗುಣನೆಂದು ಬ್ರಹ್ಮಾದಿಗಳೊಂದು ಸುವ್ವಿ ಬ್ರಹ್ಮಾದಿಗಳೊಂದು ಸಮರಧಿಕಾರ ಅವತಾರ ಎಲ್ಲ ಒಂದೆ ಎಂಬುವಗೆ ಸುವ್ವಿ 10 ಅವತಾರವೆಲ್ಲ ಅಂಶವತಾರವೆಂದ ಹರಿಭಕ್ತರಲ್ಲಿ ಕೋಪ ಸುವ್ಯಕ್ತವಾಯಿತು ಸುವ್ವಿ ಕೋಪ ಸುವ್ಯಕ್ತವಾಯಿತು ವಾದಿ ಹರಿಭಕ್ತರೊಡನೆ ಕೋಪಂಗಳು ವ್ಯರ್ಥವಾಯಿತು ಸುವ್ವಿ 11 ಪಂಚಮಹಾಭೂತ ದೇಹ ಸಂಚಯರೆಲ್ಲ ಸಂಚಿತಾದಾ ಕರ್ಮಗಳ ಸಂಚಯರೆಲ್ಲ ಸುವ್ವಿ ಸಂಚಿತಾದಾ ಕರ್ಮಗಳ ಸಂಚಯರೆಲ್ಲ ಮುಕ್ತರ ದೇಹವೆಲ್ಲ ಸುಖದ ಸಂದೋಹವಂತೆ ಸುವ್ವಿ 12 ಶರೀರದಲ್ಲಿ ಎಪ್ಪತ್ತೆರಡು ಸಾವಿರ ನಾಡಿಗಳಲ್ಲಿ ಪಿರಿಯವಾದವು[ನೂರೊಂದು] ಐದು ಸುವ್ವಿ ಪಿರಿಯವಾದವು[ನೂರೊಂದು] ಐದು ಮೂರು ಒಂದು ಈ ಪರಿಯಾಗಿ ಇಪ್ಪುವಂತೆ ಸುವ್ವಿ 13 ಇಳಾನಾಡಿ ಸಾವಿರ ಸೀಳುಮಾಡಿ ಅದರೊಳು ಸೀಳುಮಾಡಿದರೇಳು ವಿರಳನಂತೆ ಸುವ್ವಿ ಸೀಳುಮಾಡಿದರೇಳು ವಿರಳನಂತೆ ನಾಡಿಯಲ್ಲಿ ರಕ್ತವರ್ಣನಾಗಿ ನಾರಾಯಣನಿಹ್ಯ ಸುವ್ವಿ 14 ಒಂದುನಾಡೀ ಪೆಸರು ಸುಷುಮ್ನನಾಡಿಯೆಂಬರು ಅದರಂತರ ಕಡೆಯಲಿ ರಂಧ್ರವಂತೆ ಸುವ್ವಿ ಅದರಂತರ ಕಡೆಯಲಿ ರಂಧ್ರÀ್ರವಂತೆ ನಾಡಿಯಲಿ ಕಮಲ ಮಧ್ಯದಲಿ ತಾ ವಿಮಲನಂತೆ ಸುವ್ವಿ 15 ನಾಡಿ ಮೂಲದೊಳು ನಾಲ್ಕುದಳದ ಕಮಲವುಂಟು [ನೀಲ]ವರ್ಣದಿಂದ ಸಂಪೂರ್ಣನಂತೆ ಸುವ್ವಿ [ನೀಲ]ವರ್ಣದಿಂದ ಸಂಪೂರ್ಣ[ನೀಲವರ್ಣ ಅನಿರುದ್ಧ] ನಲ್ಲಿ ತಾ ವಾಸನಂತೆ ಸುವ್ವಿ 16 ಪೊಕ್ಕುಳಲಿ ಆರುದಳ ಇಕ್ಕ್ಕು ರೀತಿಯಿಂದಲೇಳು [ಬಿಂಕನಾದ] ಸಂಕರ್ಷಣ ಮುಖ್ಯನಂತೆ ಸುವ್ವಿ [ಬಿಂಕನಾದ ಸಂಕರ್ಷಣ] ಮುಖ್ಯನಂತೆ ಜೀವಗೆ ಪಿಂಗಳ ವರ್ಣನಾಗಿ ಹಿಂಗದಿಹ ಸುವ್ವಿ 17 ಇಡಾನಾಡಿ [ಉದೀಚಿ] ಪಿಂಗಳ ದಕ್ಷಿಣದಲಿ ಪ್ರತೀಚಿ [ವಜ್ರಿಕೋ ಪೂರ್ವಾ ಅಂತೆ] ಸುವ್ವಿ ಪ್ರತೀಚಿ ವಜ್ರಿಕೋದೀಚಿ ಬ್ರಹ್ಮನಾಡಿ ಸುತ್ತಾ ಪಂಚನಾಡಿಗಳ ಪಂಚರೂಪಗಳೆ ಸುವ್ವಿ 18 ಎಂಟುದಳ ಕೆಂಪು ಉಂಟು ಹೃದಯ ಕಮಲದಲಿ ವೈಕುಂಠಪತಿ ಚತುರನ ಮಂಟಪವೆ ಸುವ್ವಿ ವೈಕುಂಠಪತಿ ಚತುರನ ಮಂಟಪದ ಮಧ್ಯದಲಿ ವಾಯು ಜೀವರಿಗೆ ಸಹಾಯನಂತೆ ಸುವ್ವಿ 19 ಕೂದಲ ಕೊನೆಯ ಹತ್ತು ಸಾವಿರ ವಿಧವನೆಮಾಡಿ ಜೀವ ಪರಿಮಾಣ ಒಂದೆ ಕಂಡ್ಯ ಸುವ್ವಿ ಜೀವ ಪರಿಮಾಣ ಒಂದೆ ಕಂಡ್ಯ ಚತುರನ ಅಂಗುಷ್ಟದÀಷ್ಟು ಜೀವ [ಅಂಶನಂತೆ] ಸುವ್ವಿ 20 ಸ್ಥೂಲಾಂಗುಷ್ಠ ಪರಿಮಾಣ ಪ್ರಾಜ್ಞನಾದ ನಾರಾಯಣ ಹೃದಯಕಮಲದ ಒಳಗೆ ವಿಮಲನಂತೆ ಸುವ್ವಿ ಹೃದಯಕಮಲದ ಒಳಗೆ ವಿಮಲನಂತೆ [ಜೀವಂಗಾ ರೂಪದಲಿ] ಹರಿ ತಾ ರಕ್ಷಿಪನಂತೆ ಸುವ್ವಿ 21 ಹೃದಯಾಕಾಶದಲಿ ಪ್ರಾದೇಶ ಪರಿಮಾಣ ಆದಿ ಪುರುಷನಿಹ್ಯ ಈ ವಿಧವಾಗಿ ಸುವ್ವಿ ಆದಿ ಪುರುಷನಿಹ್ಯ ಈ ವಿಧವಾಗಿ ಜೀವಗೆ ಗೃಹದೋಪಾದಿಯಲಿ ಹರಿ ರಕ್ಷಕನಂತೆ ಸುವ್ವಿ 22 ಕಂಠದೇಶದಲಿ ಉಂಟು ತೈಜಸಮೂರ್ತಿ ಕರ ಹತ್ತೊಂಬತ್ತು ಶಿರಗಳು ಸುವ್ವಿ ಕರ ಹತ್ತೊಂಬತ್ತು ಶಿರಗಳು ಮಧ್ಯದಲ್ಲಿ ಕರಿಮುಖ ಹಸ್ತಿಯಾಗಿಪ್ಪನಂತೆ ಸುವ್ವಿ 23 ಕಿರುನಾಲಗೆಯಲ್ಲಿ ಎರಡುದಳ ಕಮಲ ಅರವಿಂದ ಪದ್ಮದಲಿ ನಾರಾಯಣನಿಹ್ಯ ಸುವ್ವಿ ಅರವಿಂದ ಪದ್ಮದಲಿ ನಾರಾಯಣನಿಹ್ಯ ಹರಿಯು ರೂಪವೆಲ್ಲವಾಗಿ ಇಪ್ಪನಂತೆ ಸುವ್ವಿ 24 ದÀಕ್ಷಿಣಾಕ್ಷಿಯಲಿ ಲಕ್ಷಣ ವಿಶ್ವಮೂರ್ತಿ ಶಿಕ್ಷಕನಾಗಿ ಜೀವರ ವಂಶರಕ್ಷಕನಂತೆ ಸುವ್ವಿ ಜೀವರ ವಂಶರಕ್ಷಕನನ್ನೆ [ಜಾಗರವ ಕಾಣಿಸೋನಷ್ಟೆ] ವಾಣಿ ನಿಪುಣನಂತೆ ಸುವ್ವಿ 25 ಈ ದೇವರು ಪ್ರಾಜ್ಞನಾದ ಹರಿಯ ಕೂಡಿ ನಿದಾನಿಸಲು ಜೀವಂಗೆ ಸುಖತೇಜಸವು ಸುವ್ವಿ ನಿದಾನಿಸಲು ಜೀವಂಗೆ ಸುಖತೇಜಸವು ಅನೇಕಾಗಿ ತೈಜಸನಲ್ಲಿ ಸ್ವಪ್ನಭಾಗ್ಯ ಸುವ್ವಿ 26 ಹುಬ್ಬುಗಳ ಮಧ್ಯದಲಿ ಶುಭ್ರ ನಾಲ್ಕುದಳ ಕಮಲ ಅನಿರುದ್ಧ ನೀಲಾಭ್ರವರ್ಣ ಸುವ್ವಿ ಅನಿರುದ್ಧ ನೀಲಾಭ್ರವರ್ಣನಾಗಿ ಹರಿ ಅಲ್ಲಿ ಅದೃಶ್ಯವಾಗಿರುವನಂತೆ ಸುವ್ವಿ 27 ಶಿರದಲ್ಲಿ ಶುಭ್ರ ಹನ್ನೆರಡುದಳ ಕಮಲ ಅರುಣವರ್ಣನಾದ ನಾರಾಯಣನಿಹ್ಯ ಸುವ್ವಿ ಅರುಣವರ್ಣನಾದ ನಾರಾಯಣನಿಹ್ಯ ಹರಿಯು ಈ ಪರಿಯಲಿ ತಿಳಿದವರಧಿಕರಂತೆ ಸುವ್ವಿ 28 ಬ್ರಹ್ಮಹತ್ಯ ಶಿರಸ್ಕಂಚ ಸ್ವರ್ಣಸ್ತೇಯ ಭುಜದ್ವಯಂ ಸುರಾಪಾನ ಹೃದಾಯುಕ್ತಂ ಗುರುತಲ್ಪ ಸುವ್ವಿ ಸುರಾಪಾನ ಹೃದಾಯುಕ್ತಂ ಗುರುತಲ್ಪ ಕಟಿದ್ವಯಂ ಪಾದ ಪಾಪರೂಪಗಳೆ ಸುವ್ವಿ29 ಪಾತಕ ಪ್ರತ್ಯಂಗಗಳು ಉಪಪಾತಕ ರೋಮಂಗಳು ಪಾಪಪುರುಷ ರಕ್ತನೇತ್ರ ನೀಲಪುರುಷ ಸುವ್ವಿ ಪಾಪಪುರುಷ ರಕ್ತನೇತ್ರ ನೀಲಪುರುಷನಾಗಿ ವಾಸ ವಾಮಕುಕ್ಷಿಯಲಿ ನ್ಯಾಸವಂತೆ ಸುವ್ವಿ 30 ಪುರುಷ ಷೋಡಶನಾದ ಷಟ್ಕೋಣದಲ್ಲಿ ಪ್ರದ್ಯುಮ್ನನಿಹ್ಯ ತ್ರಿಕೋಣದಲಿ ಧ್ಯಾನ ಸಂಕರ್ಷಣ ಕೊಡುವ ಸುವ್ವಿ ತ್ರಿಕೋಣದಲಿ ಧ್ಯಾನ ಸಂಕರ್ಷಣ ಕೊಡುವ ದೇಹ ಪವಿತ್ರ [ವಾಸುದೇವರಲ್ಲಿ ಸುವ್ವಿ]31 ಹನ್ನೆರಡಂಗುಲಮೇಲೆ ಹನ್ನೆರಡುದಳ ಕಮಲ [ಪ್ರಪÀನ್ನರಿಗೆ] ಮೋಕ್ಷ ಪ್ರಸನ್ನ ಕೊಡುವ ಸುವ್ವಿ [ಪ್ರಪÀನ್ನರಿಗೆ] ಮೋಕ್ಷ ಪ್ರಸನ್ನ ಕೊಡುವ ತುರಿಯ ಸಿತದಳದಲ್ಲಿ ನಿಧಾನಿಸಲು ಸುವ್ವಿ 32 ಮುಖ್ಯಪ್ರಾಣನೆಂಬೊ ಗುರುವು ಹರಿಗೆ ಸಖ್ಯನಾದ ಬಂದ ದುಃಖ ಪರಿಹರಿಸಿ ಸುಖಬಡಿಸುವ ಸುವ್ವಿ ಬಂದ ದುಃಖ ಪರಿಹರಿಸಿ ಸುಖಬಡಿಸುವ ಮಾರುತನು ಹನುಮ ಭೀಮಸೇನ ರೂಪಗಳು ಸುವ್ವಿ 33 ಮೂರನೆ ಅವತಾರ ಆನಂದತೀರ್ಥರು ವೀರವೈಷ್ಣವರಿಗೆ ಆದಿಗುರುಗಳು ಸುವ್ವಿ ಪಾದ ನೆನೆದರೆ ಘೋರ ಸಂಸಾರವನು ನೀಗಿಸುವನು ಸುವ್ವಿ 34 ಘೋರ ಸಂಸಾರವನು ನೀಗಿಸುವ ಹಯವದನ ತನ್ನ ಪಾದದ ಸಮೀಪದಲಿಟ್ಟು ಸಲಹುವ ಸುವ್ವಿ ಪಾದದ ಸಮೀಪದಲಿಟ್ಟು ಸಲಹುವ ಹಯವದನ ಖೇದಗಳ ಬಿಡಿಸಿ ರಕ್ಷಿಸುವ ಸುವ್ವಿ 35
--------------
ವಾದಿರಾಜ
ಸುವ್ವಿಸತ್ಯಭಾವೆ ಸುವ್ವಿ ರುಕ್ಮಿಣಿದೇವಿ ಸುವ್ವಿ ಸುವ್ವಿ ಕೃಷ್ಣರಾಯ ಸುವ್ವಿ ಎಂದರು ಪಲ್ಲ ಮುಯ್ಯ ತಂದು ದ್ರೌಪದಿ ಸೈಯ ಸೈಯ ಎನ್ನಿಸಿಕೊಂಡು ಕೈಯ ಹೊಯಿದು ನಗುತ ಕೃಷ್ಣಸುವ್ವಿ ಎಂದರು1 ಮುದ್ದು ಸುಭದ್ರಾತಾನು ಗೆದ್ದು ಭಾವೆ ರುಕ್ಮಿಣಿಯರು ಬಿದ್ದು ನಗುತ ಕೈಯ ಹೊಯಿದು ಸುವ್ವಿ ಎಂದರು2 ದಿಟ್ಟೆರಿಬ್ಬರ ಗರ್ವಕುಟ್ಟಿ ಕೇರಿ ತೌಡು ತೆಗೆದು ಕೃಷ್ಣರಾಯನ ನೆನೆಸಿ ಸುವ್ವಿ ಎಂದರು3 ಚಲುವಿಭಾವೆ ರುಕ್ಮಿಣಿಯರು ಸುಲಭದಿಂದ ಗೆದ್ದುಕೊಂಡು ಹಲಧರನ ಪ್ರೀತಿ ಪಡಿಸಿ ಸುವ್ವಿ ಎಂದರು 4 ವೀತ ದೋಷ ರಾಮೇಶನ ಪ್ರೀತಿ ಬಡಿಸಿ ದ್ರೌಪತಿಯ ಮಾತಿನಿಂದ ಗೆದ್ದು ಕೊಂಡು ಸುವ್ವಿ ಎಂದರು 5
--------------
ಗಲಗಲಿಅವ್ವನವರು
ಸುಳಾದಿ ಕೌಸ್ತುಭ ಫಾಲ ಸಿಂಗಾಡಿಯಂತಿಪ್ಪ ಪುರ್ಬುಕೂರ್ಮನಂದದಿಗಲ್ಲ ಚುಬುಕ ಚುಬುಕಾಗ್ರದಿಂಸಿರಿಯರಸ ಹಯವದನ ಶೇಷಗಿರಿ ಅರಸನ ಕಿರೀಟದÀಪರಿಪರಿಯ ಸೊಬಗ ನಾ ಕಂಡು ಕೃತಾರ್ಥನಾದೆ ನಾ 1 ಮಠ್ಯತಾಳ ಇಂದಿನದಿನ ಸುದಿನ ಗೋವಿಂದನ ಕಂಡ ಕಾರಣಹಿಂದಿನ ಪಾಪವೃಂದವು ಬೆಂದುಹೋಯಿತು ಎನಗೆಮುಂದಿನ ಮುಕುತಿ ದೊರಕಿತುತಂದೆ ಹಯವದನನೊಲವಿಂದ 2 ತ್ರಿಪುಟತಾಳ ಪಾದ ಪದುಮದ ನೆನಹೊಂದಿದ್ದರೆ ಸಾಕು 3 ರೂಪಕತಾಳ ಗುರು ಭಕುತಿಯಿರಬೇಕು ಹಿರಿಯರ ಕರುಣವು ಬೇಕುಹರಿಕಥೆಗಳ ನಿತ್ಯದಲಿ ಕೇಳುತಿರಬೇಕುವಿರಕುತಿ ಬೇಕು ವಿಷ್ಣುವಿನಾರಾಧನೆ ಬೇಕುವರಮಂತ್ರ ಜಪಬೇಕು ತಪಬೇಕು ಪರಗತಿಗೆಪರಿಪರಿಯ ವ್ರತಬೇಕು ಸಿರಿಪತಿ ಹಯವದನನಪರಮಾನುಗ್ರಹ ಬೇಕು ವಿಷಯನಿಗ್ರಹಬೇಕು 4 ಝಂಪೆತಾಳ ಹರಿಸಗುಣ ಸಾಕಾರ ಸಕಲಸುರರೊಡೆಯ ನಿ-ರ್ಜರರೆಲ್ಲ ಹರಿಯ ಕಿಂಕರರೆಂದರಿಯಬೇಕುಮರಣಜನನ ದೋಷಗಳಿಗತಿ ದೂರತರನೆನಿಪಸ್ಮರಣೆ ಸಂತತಬೇಕು ದುರಾಚಾರ ಬಿಡಬೇಕುಸಿರಿ ಹಯವದನ ಶೇಷಗಿರಿ ಅರಸನಸ್ಮರಣೆಯಿದ್ದವನು ಸಂಸಾರ ಭಯವನುತ್ತರಿಸುವ 5 ಆದಿತಾಳ ಶ್ರೀನಾಥ ಪ್ರಭುವೆತ್ತ ಹೀನಯೋನಿಗಳೊಳುನಾನಾದುಃಖಗಳುಂಬ ಹೀನ ಮಾನವನೆತ್ತಭಾನುಮಂಡಲವೆತ್ತ ಶ್ವಾನನುಬ್ಬರವೆತ್ತಮಾನವ ಹರಿ ನಾನೆಂಬುದ ನೆನೆಯದಿರುದಾನವಕುಲವೈರಿ ಹಯವದನ ವೆಂಕಟಶ್ರೀನಿವಾಸನ ದಾಸರ ದಾಸನೆನಿಸಿಕೊ 6 ಏಕತಾಳ ಕೈವಲ್ಯವನೀವ ನಮ್ಮಶ್ರೀವಲ್ಲಭನ ಕೈಯಿಂದನೀವೆಲ್ಲ ಕ್ಷುದ್ರವ ಬೇಡಿಗಾವಿಲನ ಪೋಲದಿರಿಸಾವಿಲ್ಲದ ಮುಕುತಿಪಥವಬೇಡಿಕೊಳ್ಳಿರೊನೋವಿಲ್ಲದಂತೆ ಸುಖಿಸಬಲ್ಲಕೋವಿದರೆಲ್ಲರುಪೂವಿಲ್ಲನಯ್ಯ ವೆಂಕಟಪತಿ ಹ-ಯವದನನ್ನ ಪ-ದವಲ್ಲದನ್ಯತ್ರ ದಾವಲ್ಲಿ ಭಯ ತಪ್ಪದು 7 ಅಟ್ಟತಾಳ ಗಾತ್ರವ ಬಳಲಿಸಿ ಸ್ತೋತ್ರವ ಪಾಡುತ್ತಯಾತ್ರೆಯ ಮಾಡಿ ವೆಂಕಟೇಶನ ಮೂರ್ತಿಯನೇತ್ರದಿ ನೋಡಿ ತಮ್ಮಿಷ್ಟವ ಪಡೆವ ಸ-ದ್ಭಕ್ತರ ಕಂಡುನಿನ್ನ ಮನದ ಭ್ರಮೆಯ ಬಿಡುದೈತ್ಯ ಪೌಂಡ್ರಕಮತವ ನೆಚ್ಚಿ ಕೆಡಬೇಡಚಿತ್ರಚರಿತ್ರ ಹಯವದನನೊಲಿಸಿಕೊ 8 ದಿಲ್ಲಿಯರಾಯನ ಕಂಡು ಪುಲ್ಲಿಗೆಯ ಬೇಡುವರೆತಲ್ಲೆಯೂರಿ ತಪಸು ಇದ್ದಲ್ಲಿ ಸಾಧಿಸಿಕೊಳ್ಳಿರೊಕ್ಷುಲ್ಲಕರೆಂಜಲನುಂಡು ಬಾಳ್ವರ ನೋಡು ಲಕ್ಷುಮಿವಲ್ಲಭನಲ್ಲದೆ ಹೀನಫಲದಾಸೆ ಸಲ್ಲದಯ್ಯಚೆಲ್ವ ಹಯವದನ ತಿಮ್ಮನಲ್ಲದೆ ಕೈವಲ್ಯಕೆಹಲ್ಲು ಹಂಚಿಗೆ ಬಾಯಿತೆರೆದಂತೆ ಅಲ್ಲಲ್ಲಿಗೆ ಪೋಗದಿರಿ 9 ರೂಪಕತಾಳ ಹನುಮಂತನ ನೋಡು ತನುಮನಧನಂಗಳಶ್ರೀನರಸಿಂಹಗರ್ಪಿಸಿದಪ್ರಹ್ಲಾದನ ನೋಡುಅನುದಿನ ವನದಲ್ಲಿ ತಪವ ಮಾಡುವಮುನಿಜನರ ಕಂಡು ನಿನ್ನ ಮನದ ಭ್ರಮೆಯ ಬಿಡುಘನಮಹಿಮ ವೆಂಕಟಪತಿ ಹಯವದನನ ಭೃತ್ಯರ ಪರಿಚಾರಕರ ಭೃತ್ಯನೆನಿಸಿಕೊ 10 ಜತೆÀ ತಿರುಮಲೆರಾಯ ತ್ರಿವಿಕ್ರಮಮೂರುತಿಸಿರಿ ಹಯವದನನ [ಚರಣವೆ ಗತಿಯೆನ್ನು]
--------------
ವಾದಿರಾಜ
ಸುಳ್ಳುಗಳ ಬೋಧಿಸಿ ನೀ ಪೊಳ್ಳಾಗದಿರಲೊ ಪ ನೀರ್ಗುಳ್ಳೆಯಂಥ ದೇಹ ನಂಬಿ ನಿಜಭಕ್ತ ನಾನೆಂದೂ ಅ.ಪ ಎಳ್ಳುಕಾಳಿನಷ್ಟಾದರೂ ಈಶನಲ್ಲಿ ಭಕ್ತಿಕಾಣೆ ಡೊಳ್ಳತುಂಬುವದಕೆ ನಾಲ್ಕಲ್ಲಿ ಇಲ್ಲಿ ಕಲಿತುಕೊಂಡು 1 ಪರರಿಗೆ ಹೇಳುವಂತೆ ನೀ ನಡೆಯುವೆಯೇನೊ ಪರಗತಿಯಾಗದು ನಿಜ ನಿಜ ನಿಜ ಕಾಣೊ 2 ನಿನ್ನಯೋಗ್ಯತಾನುಸಾರ ನೀನರಿಯಲೊ ಬನ್ನಬಡುವದೆ ಸಾಕ್ಷಿ ಪುಣ್ಯವೇನಿದರೊಳು 3 ಹಿಡಿ ಹಿಡಿ ಹಿಡಿ ಹಿಡಿ ಹಿರಿಯರ ಪಾದವ 4 ಶರಣ ಜನರ ನೋಡಿ ಶಾಂತನಾಗುತ ಗುರುರಾಮವಿಠಲನ ಗುರುತರಿಯದೇ ನೀ 5
--------------
ಗುರುರಾಮವಿಠಲ
ಸೂನು ಪ ನಡೆದು ಬರಲು ಒಬ್ಬ ಮಡದಿಯುಕೊಡಿರಿ ಸ್ಥಳವು ಎಂದು ನುಡಿಯುತಲಿಗಡಿಬಿಡಿಯಲಿ ನಮ್ಮ ನಡುಮನೆಯೊಳು ಬಂದು ಇಂಥಕಡುಮುದ್ದು ಬಾಲನ ಪಡೆದು ತೋರಿದಳಂತೆ 1 ಮಾತೆ ಬಾಣಂತಿಯು ನವಜಾತ ಶಿಶುವು ಸದ್ಯೋಜಾತನ ನಿಶೇಷ ಧಾತ್ರಿಧರನಾಥಾಅತಿಶಯ ಥಂಡಿ ಪ್ರಾತಃಕಾಲವು ತವಸೀತವಾಗಿದೆ ಎಂದು ಭೀತಿ ಉಂಟಾಗಿದೆ 2 ಒಂದು ನಾಲಕು ದಿನ ಸಂಧಿಸಿ ಗುಡಿ ವೃಜದಿಂದ ಕರದಿ ತನ್ನ ಕಂದನ್ನೆತ್ತಿಇಂದಿರೇಶನ ಪ್ರಿಯೇ ಒಂದಿನಿತು ಧ್ಯಾನಮಂದಿರದೊಳು ಬಂದು ಚಂದ ತೋರಿದಳಂತೆ 3
--------------
ಇಂದಿರೇಶರು
ಸೂರ್ಯ ಪುತ್ರೀ |ತ್ರಿವಿಧ ತಾಪಂಗಳನು ಕಳೆವ ಶುಭಗಾತ್ರೀ ಪ ಕಾಳಕೂಟವ ಮೆದ್ದು ದೇವತತಿ ಸಲಹಿದಗುಕಾಲಾಖ್ಯ ಗರುಡಂಗು ಕಾಳ ಉರಗನಿಗೂ |ನೀಲಾಖ್ಯೆಯಂದದಲಿ ಪಂಚಗುಣದಿಂ ನ್ಯೂನಕಾಳಿಂದಿ ದೇವಿಯರಿಗಾ ನಮಿಪೆ ಸತತ 1 ಸಂಚಿತ ಸುಪಾಪಕ್ಕೆ ಅನುತಾಪವೆಂಬುವುದುಚಿಂತಿಸುವ ತತ್ವಗಳ ನಿರ್ಣಯಾದಿಗಳ |ಇಂತಪ್ಪ ಸತ್ಕರ್ಮ ಸಂತರಿಂ ತಿಳಿಸುತ್ತಚಿಂತಿಪುದೆ ಸತ್ತಪವು ಚಿತ್ತ ನಿಗ್ರಹವೆಂಬ 2 ಮೂರ್ತಿ ಕಾಣದಿಹ ಕಂಗಳಿನ್ನೇಕೇ 3 ಹರಿ ಕಥೆಯ ಕೇಳದವ ಬಧಿರನೇಸರಿ ಅವನುಹರಿಯೆ ನಿರ್ಮಾಲ್ಯ ಮೂಸದಿಂದ್ರಿಯ ವ್ಯರ್ಥ|ಹರಿಯ ನೈವೇದ್ಯಗಳ ರುಚಿಸದಿಹ ನಾಲಗೆಯುಹರಿಯಂಗ ಸ್ಪರ್ಶಿಸದ ಇಂದ್ರಿಯವು ವ್ಯರ್ಥ 4 ಮೂರ್ತಿ ಧ್ಯಾನಿಸದ ಮನಿಸಿನಿಂದ್ರಿಯ ವ್ಯರ್ಥಇನಿತು ದಶ ಕರಣಗಳ ವ್ಯಾಪಾರವಾ |ಗುಣಿಸಿ ತಪವೆಂದೆನುತ ಹರಿಯರ್ಪಣೆಂಬುವುದೆಘನ ತಪವು ಎಂದೆನುತ ಚಿಂತಿಪ ಸುಗಾತ್ರೀ 5 ಕಮಲ ದರ್ಶನವು ಎನಗೆಂದುಪರಿ ಪರಿಯ ಚಿಂತಿಸುತ ಚರಿಸಿ ಸತ್ತಪವಾ |ಹರಿಯ ದರ್ಶನ ಪಡೆದು ಹರಿಯನುಗ್ರಹದಿಂದಹರಿ ಮಡದಿ ನೀನಾಗಿ ಹರಿಗೆ ಪ್ರಿಯಳಾದೇ 6 ನಿತ್ಯ ಭಿನ್ನವಿಪೇ 7
--------------
ಗುರುಗೋವಿಂದವಿಠಲರು