ಒಟ್ಟು 2793 ಕಡೆಗಳಲ್ಲಿ , 119 ದಾಸರು , 2185 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಸಗೀಡಾಗದಿರು ಮನವೆ ವಿಷಯವಾಸನೆ ಕೂಡ ಧ್ರುವ ಸತ್ಯವೆಂದೆನಬ್ಯಾಡ ದೃಶ್ಯ ಮಿಥ್ಯಾಮಾಯದ ಮೋಡ ನಿತ್ಯವಾಗಿಹದ ಸತ್ಯ ಸುಪಥ ಕೂಡೊ 1 ಹೊನ್ನು ಹೆಣ್ಣಿನ ಕೂಡ ನೀ ದಣ್ಣನೆ ದಣಿಬ್ಯಾಡ ಸುಣ್ಣ ಸಾರಿಸಿ ಮ್ಯಾಲೆ ಬಣ್ಣದೋರುವದಕ್ಕೆ ಕಣ್ಣಗೆಟ್ಟಿರಬ್ಯಾಡ ಮಣ್ಣೆÀಂದರಿಯದೆ ಕಣ್ಣಗೆಟ್ಟಿರಬ್ಯಾಡ 2 ಗುಹ್ಯಗೂಢವ ತಿಳಿಯೊ ನಾ ದೇಹವೆಂಬುದನಳಿಯೊ ತಿಳಿದು ನೋಡೊ ಶ್ರೀ ಹರಿಯ ಮಹಿಮೆ ಸೋಹ್ಯ ತಿಳಿದು ನೋಡೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಂಸವಾಹನಪಿತನೆ _ ಹಂಸಾ ಢಿಭಿಕವೈರಿ ಶೌರಿ _ ಬಾ ಬಾ ಬಾ ಪ ಸಾಸಿರನಾಮದೊಡೆಯ ವಾಸವವಿನುತನೆ ಲೇಸಾಗಿಸ್ತುತಿಸುವೆ _ಬಾ ಬಾ ಬಾ ಅ ವೇದಾವಕದ್ದಂಥ ಉದ್ದಂಡ ದೈತ್ಯನ ಮರ್ಧಿಸಿ ವೇದವ ತಂದು ವೇಧನ ಸಲಹಿದ ಮತ್ಸ್ಯ ಬಾ ಬಾ ಬಾ 1 ಸಿಂಧು ವಿನೊಳಗಿದ್ದ ಮಂದರಗಿರಿಯನ್ನು ಬಂದು ಬೆನ್ನಿಲಿಪೊತ್ತು ತಂದು ಪೀಯೂಷವ ಚಂದದಿ ಸಲಹಿದ ಕೂರ್ಮಸ್ವರೂಪನೆ _ ಬಾ ಬಾ ಬಾ 2 ಕನಕನೇತ್ರನ ಕೊಂದು ಕಾಂತೆಯಹಿಡಿದೆತ್ತಿ ಕನಕಗರ್ಭನಿಗೊಲಿದ ಕಾರುಣ್ಯನಿಧಿಚಂದ್ರ ಕ್ರೋಢ ಯಜ್ಞ ಸ್ವರೂಪನೆ _ ಬಾ ಬಾ ಬಾ 3 ತರುಳನಮೊರೆಕೇಳಿ ದುರುಳನ ಕರುಳನೆ ಬಗೆದು ಕೊರಳೊಳು ಕರುಳ ಧರಿಸಿ ಸುರರನ್ನು ಪೊರೆದಂಥ ಸರ್ವವ್ಯಾಪಿ ಕರುಣಿಯೆ ಮೂರ್ತಿ _ ಬಾ ಬಾ ಬಾ 4 ಅನುಜನ ಪೊರೆಯಲು ತನುವನು ಮರೆಸಿಕೊಂಡು ದಾನವನು ಬೇಡುತ ಬಲಿ ಯನು ತುಳಿದು ಪೊರೆದ ಘನ್ನ ಮಹಿಮ ವಟು ವಾ ಮನ ರೂಪಿಯೆ _ ಬಾ ಬಾ ಬಾ 5 ಕೊಡಲಿಯ ಪಿಡಿಯುತ ಒಡೆಯರ ತರಿದು ಕಡಿದು ಮಾತೆಯ ಪಿತ ನುಡಿಯನು ಸಲಿಸಿದ ಚಂಡವಿಕ್ರಮ ಮಹಿಮ ಭಾರ್ಗವ ಮೂರುತಿ _ ಬಾ ಬಾ ಬಾ 6 ಕಾಂತೆಯನೆಪದಿಂದ ಕದನವ ಹೂಡಿಕೊಂಡು ಅಂತಕಸದನಕೆ ಅರಿಗಳ ತಳ್ಳುತ ಶಾಂತತೆ ಬೀರಿಪೊರೆದ ದಶರಥ ರಾಮನೆ _ ಬಾ ಬಾ ಬಾ 7 ಚೋರತನದಿ ಬಲು ಬೆಣ್ಣೆಯ ಮೆಲ್ಲುತ ಜಾರತನದಿ ಋಷಿ ಸ್ತ್ರೀಯರಿಗೊಲಿದಂಥ ಮಾರಜನಕ ಶ್ರೀ ರುಕ್ಮಿಣಿ ಕೃಷ್ಣ _ ಬಾ ಬಾ ಬಾ 8 ವೇದಗೋಚರ ವಿಶ್ವ ವೇದ ಬಾಹ್ಯರಿಗೆಲ್ಲ ವೇದ ವಿರುದ್ಧವಾದ ವಾದಗಳ ತೋರಿ ನಿಂದು ಬೆತ್ತಲೆ ಮೆರದ ಬೌದ್ಧ ಸ್ವರೂಪನೆ _ ಬಾ ಬಾ ಬಾ 9 ಕಲಿಬಾಧೆ ಹೆಚ್ಚಾಗೆ ಕಲಿಯುಗ ಕೊನೆಯಲ್ಲಿ ಮಲಿನಾರ ಮರ್ಧಿಸಿ ಉಳಿಸಲು ಧರ್ಮವ ಚಲುವ ರಾಹುತನಾದ ಕಲ್ಕಿ ಸ್ವರೂಪನೆ _ ಬಾ ಬಾ ಬಾ 10 ಸತ್ಯಸಂಕಲ್ಪನೆ ನಿತ್ಯಸ್ವರೂಪನೆ ಉತ್ತಮನೀನೆಂದು ಒತ್ತೊತ್ತಿ ಪೊಗಳುವೆ ಭೃತ್ಯನು ನಿನ್ನವನು ಕಣ್ಣೆತ್ತಿ ನೋಡುತ _ ಬಾ ಬಾ ಬಾ11 ಏಕರೂಪನೆ ನಿನ್ನನೇಕ ರೂಪಂಗಳ ಸಾಕಲ್ಯದಿಂದಲಿ ಶ್ರೀಕಾಂತೆ ಅರಿಯಳು ಕಾಕುಮತಿಯು ನಾನು ಎಂತು ವರ್ಣಿಸಲಯ್ಯ _ ಬಾ ಬಾ ಬಾ12 ಪೂರ್ಣಸ್ವರೂಪನೆ _ ಪೂರ್ಣ ಗುಣಾಬ್ಧಿಯೆ ಪೂರ್ಣನಂದಾನೆ ಪೂರ್ಣ ಸ್ವತಂತ್ರನೆ ಪೂರ್ಣಬೋಧರ ಪೂರ್ಣ ಕರುಣಾವ ಬೀರಿಸು _ ಬಾ ಬಾ ಬಾ 13 ಮಾತುಮಾತಿಗೆ ನಿನ್ನ ನಾಮದಸ್ಮರಣೆಯ ನಿತ್ತು ಪಾಲಿಸು ಎನ್ನ ಮೃತ್ಯೋಪಮೃತ್ಯುವೆ ದೇವ ಭಕ್ತಿಭಾಗ್ಯವನಿತ್ತು ಮನ್ನಿಸಿ ಸಲಹುತ _ ಬಾ ಬಾ ಬಾ 14 ದೋಷದೂರನೆ ನಿನ್ನ ದಾಸನುನಾನಯ್ಯ ವಾಸವ ಜಯಮುನಿ ವಾತನೊಳ್ವಾಸಿಪ ಈಶ ಸಿರಿಕೃಷ್ಣ ವಿಠಲರಾಯನೆ ಬೇಗ ಬಾ ಬಾ ಬಾ 15
--------------
ಕೃಷ್ಣವಿಠಲದಾಸರು
ಹಸ್ತವ ಕರುಣಿಸು ವಿಸ್ತಾರ ಮಹಿಮದ ಪ ಹಸ್ತವ ಕರುಣಿಸೋ ರಂಗಯ್ಯ ಹಸ್ತ ಕರುಣಿಸೆನ್ನ ಮಸ್ತಕದ ಮೇಲೆ ಹಸ್ತವ ಕರುಣಿಸೊ ಅ.ಪ ಸೋಮಕಾಸುರನ ವಧಿಸಿ ವೇದತಂದ ಹಸ್ತವ ಕರುಣಿಸೋ ರಂಗಯ್ಯ ತಾಮಸ ದೈತ್ಯನ ಉದರವ ಬಗಿದ ಹಸ್ತವ ಕರುಣಿಸೊ ರಂಗಯ್ಯ ಭೂಮಿಭಾರ ಶಿವಧನುವನು ಮುರಿದ ಹಸ್ತವ ಕರುಣಿಸೊ 1 ಎಸೆದು ಬಾಣ ವಾಲಿಗಭಯ ಪಾಲಿಸಿದ ಹಸ್ತವ ಕರುಣಿಸೋ ರಂಗಯ್ಯ ಅಸಮಮೂರುತಿಗೆ ಒಸೆದು ಉಂಗುರವಿತ್ತ ಹಸ್ತವ ಕರುಣಿಸೊ ಅಸುರನಿಗೊಲಿದು ಸ್ಥಿರ ಮುಕುಟವನಿಟ್ಟ ಹಸ್ತವ ಕರುಣಿಸೋ ರಂಗಯ್ಯ ವಸುಧೆ ಭಾರಿಳುಹಲು ನಿರುತದಿಂದೆತ್ತಿದ ಹಸ್ತವ ಕರುಣಿಸೊ 2 ಸುರಗಣಕಮೃತ ಹರುಷದಿ ನೀಡಿದ ಹಸ್ತವ ಕರುಣಿಸೋ ರಂಗಯ್ಯ ಪರಮಗೋವರ್ಧನ ಗಿರಿಯೆನೆತ್ತಿದ ಹಸ್ತವ ಕರುಣಿಸೊ ಸಾರಸ ಗಂಧಿಯರುಟ್ಟಿರ್ದ ಸೀರೆಯ ಕದ್ದ ಹಸ್ತವ ಕರುಣಿಸೋ ರಂಗಯ್ಯ ಮೆರೆವ ರುಗ್ಮನ ಮಹಗರುವವ ಮುರಿದ ಹಸ್ತವ ಕರುಣಿಸೊ 3 ಜನನಿ ಜನಕರ ಸೆರೆಯನು ಬಿಡಿಸಿದ ಹಸ್ತವ ಕರುಣಿಸೋ ರಂಗಯ್ಯ ಜನನಿಮುಂದಾಡುತ ಕಡಗೋಲು ಪಿಡಿದ ಹಸ್ತವ ಕರುಣಿಸೊ ವರರುಗ್ಮಿಣಿಕೈಯ ಸರಸದಿ ಪಿಡಿದ ಹಸ್ತವ ಕರುಣಿಸೋ ರಂಗಯ್ಯ ನರಗೆ ಸಾರಥಿಯಾಗಿ ಕುದುರೆ ತಿರುವಿದ ಹಸ್ತವ ಕರುಣಿಸೊ 4 ವಿದುರನ ಮನೆಯಲಿ ಹಾಲೆತ್ತಿ ಕುಡಿದ ಹಸ್ತವ ಕರುಣಿಸೋ ರಂಗಯ್ಯ ಸುದತಿಗೆ ಮೆಚ್ಚಿ ಅಕ್ಷಯಾಂಬರವಿತ್ತ ಹಸ್ತವ ಕರುಣಿಸೊ ಮುದದಿ ಧ್ರುವಗೆ ಮೆಚ್ಚಿ ಸದಮಲ ಪದವಿತ್ತ ಹಸ್ತವ ಕರುಣಿಸೋ ರಂಗಯ್ಯ ಸುದಯದಿಂದ ಅಂಬರೀಷನುದ್ಧರಿಸಿದ ಹಸ್ತವ ಕರುಣಿಸೊ 5 ದಿನವಿರೆ ದಿನಮಣಿಯನು ಮಾಯಮಾಡಿದ ಹಸ್ತವ ಕರುಣಿಸೋ ರಂಗಯ್ಯ ರಣದಿ ಭಕ್ತರ ಶಿರ ಕನಿಕರದೆತ್ತಿದ ಹಸ್ತವ ಕರುಣಿಸೊ ಸೆಣದಾಡಿ ಭಕ್ತನಿಂ ದಣಿದು ಕಟ್ಟಿಸಿಕೊಂಡ ಹಸ್ತವ ಕರುಣಿಸೋ ರಂಗಯ್ಯ ಸನಕಾದಿಗಳು ಘನ ಅನಂದದ್ಹೊಗಳಿಸುವ ಹಸ್ತವ ಕರುಣಿಸೊ 6 ಫಡ ಫಡ ಎನ್ನುತ ತೊಡೆಯ ಚಪ್ಪರಿಸಿದ ಹಸ್ತವ ಕರುಣಿಸೋ ರಂಗಯ್ಯ ಬಿಡದೆ ಸೋಳಸಹಸ್ರ ಮಡದಿಯರ್ಹಿಡಿದ ಹಸ್ತವ ಕರುಣಿಸೊ ಅಡಿಯ ದಾಸರ ಪಿಡಿದಪ್ಪಿ ರಕ್ಷಿಸುವ ಹಸ್ತವ ಕರುಣಿಸೋ ರಂಗಯ್ಯ ಒಡೆಯ ಶ್ರೀರಾಮ ನಿನ್ನಡಿ ನಂಬಿ ಬೇಡುವೆ ಹಸ್ತವ ಕರುಣಿಸೊ 7
--------------
ರಾಮದಾಸರು
ಹಾರವ ಕಟ್ಟಿ ಕೊಡುವೆ ಲಕ್ಷ್ಮೀ ವರ ಭಕುತಿಯ ಪ. ಮಾರಮಣನಿಗೆ ಹಾರ ಹಾಕಿ ತೋರಿಪೆ ಪಥವೆಂದು ಅ.ಪ. ರಾಮ ಅಮೃತವೆಂಬ ನೇಮದ ಗಂಗೆಯ ಕಾಮಿಸಿ ತಂದು ನಿರಾಮಯ ಕೃಷ್ಣಗೆಂದು ಪ್ರೇಮದ ನಾರನು ಕಾಮಿತ ಪುಷ್ಪ ಮಂದಾರ ಮಲ್ಲಿಗೆಯನು ಸ್ವಾಮಿಗೆ ಸಲಿಸೆಂದು 1 ಅಗಣಿತ ಮಹಿಮಗೆ ಸೊಗವಿನ ತುಳಸಿಯ ಚಿಗರಿನ ಹಾರವ ಜಗಿದಾನಂದದಿ ಸೊಗಸಿನ ರೋಜವ ಬಗೆಬಗೆ ಭೋಗಗ ಳೊಗೆದುಗೆಂಡಸಂಪಿಗೆ ಚಿಗಿಚಿಗಿದಾಡುತ 2 ಯುಕ್ತಿಯ ಮರುಗ ಶಕ್ತಿ ಸ್ವರೂಪಳೆ ಭಕ್ತ ವತ್ಸಲನಿಗೆ ಇತ್ತಪೆ ನಾನೀಗ ಸ್ತುತ್ಯ ಶ್ರೀ ಶ್ರೀನಿವಾಸ ದೇವಕ್ಕಳಿಂ ನೀನೆಂದು 3
--------------
ಸರಸ್ವತಿ ಬಾಯಿ
ಹಿಗ್ಗದಿರು ಹಿಗ್ಗದಿರು ಮನುಜಪಶುವೆ | ಮುಗ್ಗಿತಗ್ಗುವುದು ಮುಂದರಿಯದಲೆ ಮರುಳಾದೆ ಪ ಆಯುದಲಿ ದ್ರೋಣಸುತ ಕೃಪ ವಿಭೀಷಣನೇನೊ | ಶ್ರೇಯದಲಿ ದಶರಥ ನಹುಷನೇನೊ || ಈಯುದ್ದಕೆ ಮಯಾರ ಧ್ವಜ ಶಿಬಿ ಬಲಿಯೇನೊ | ಮಾಯಾ ಬಿಡುವಲ್ಲಿ ಜಡ ಭರಿತ ನೀನೇನೊ 1 ಶೂರತ್ವದಲಿ ಭೀಷ್ಮ ಅಭಿಮನ್ಯು ನೀನೇನೊ | ಘೋರ ತಪಸಿನಲಿ ವಿಶ್ವಾಮಿತ್ರನೇನೊ || ವಿರುಕುತಿಯಲಿ ಸುರಸೈನ್ಯ ನಾಯಕನೇನೊ | ಹಾರುವ ಬಿಂಕದಲಿ ಗರುಡ ನೀನೇನೊ 2 ಬಲದಲ್ಲಿ ಬಲರಾಮ ಶಲ್ಯ ಕೀಚಕನೇನೊ | ತಿಳಿವಳಿಕೆಯಲಿ ವಿದುರ ಸಂಜಯನೇನೊ || ಒಲಿದು ಪಾಡುವಲಿ ನಾರದ ತುಂಬುರನೇನೊ | ಛಲ ಮಾಡುವಲ್ಲಿ ಧ್ರುವರಾಯ ನೀನೇನೊ 3 ಭಕುತಿಯಲಿ ಪ್ರಹ್ಲಾದ ಪುಂಡರೀಕನೇನೊ | ಭುಕುತಿಯಲಿ ಅಗಸ್ತ್ಯ ಬಕ ನೀನೇನೊ || ಉಕುತಿಯಲಿ ಸೂತ ಸಹದೇವ ಶೌನಕನೇನೊ | ಶಕುತಿಯಲಿ ವಾಲಿ ಯಮರಾಯ ನೀನೇನೊ 4 ಶುಕ ಜನಕ ಸನಕಾದಿಗಳೇನೊ | ಕರ್ಣ ನೀನೇನೊ || ಭೋಗ ಬಡುವಲ್ಲಿ ಮಹಾಭಾಗ ಇಂದ್ರನೇನೊ | ವೇಗದಲಿ ಪುರುಷ-ಮೃಗನು ನೀನೇನೊ 5 ಸಖತನ ಮಾಡುವಲ್ಲಿ ಶ್ವೇತವಾಹನನೇನೊ | ನಿಖಿಳ ಕಥೆ ಕೇಳುವಲ್ಲಿ ಪರೀಕ್ಷಿತನೇನೊ || ಅಖಿಳರನು ಗೆಲುವಲ್ಲಿ ಕಾರ್ತವೀರ್ಯನೇನೊ | ಸುಖದಲ್ಲಿ ಇಪ್ಪದಕೆ ಪವನ ನೀನೇನೊ 6 ವಿತ್ತದಲಿ ನೀನು ವೈಶ್ರವಣನೇನೊ | ಮತ್ತೆ ಕ್ಷಮೆಯಲಿ ಹರಿಶ್ಚಂದ್ರನೇನೊ | ಭೃತ್ಯತನ ಪಡೆವಲ್ಲಿ ಅಕ್ರೂರ ನೀನೇನೊ | ಸುತ್ತವಲಿ ಪ್ರಿಯವ್ರತ ರಾಯನೇನೊ 7 ವ್ರತದಲ್ಲಿ ಅಂಬರೀಷ ರುಕುಮಾಂಗದನೇನೊ | ಸ್ತುತಿಯಲ್ಲಿ ಮುಚುಕುಂದರಾಯನೇನೊ || ಅತಿ ಚೆಲುವತನದಲ್ಲಿ ಮನ್ಮಥ ನಕುಲನೇನೊ | ಕ್ರತು ಮಾಡುವಲ್ಲಿ ಧರ್ಮಪುತ್ರ ನೀನೇನೊ8 ಶಾಪಗಳ ಕೊಡುವಲ್ಲಿ ಬ್ರಹ್ಮಪುತ್ರನೇನೊ | ತಾಪ ತೋರುವಲ್ಲಿ ರವಿ ಅನಳನೇನೊ | ಕೋಪ ಮಾಡುವಲ್ಲಿ ಗಿರಿಜಾರಮಣನೇನೊ | ತಾಪಸಿರ ನಡುವೆ ವಸಿಷ್ಠ ನೀನೇನೊ9 ಉನ್ನತದಲಿ ನೀನು ಮೇರು ಪರ್ವತನೇನೊ | ಘನ ಮದದಲಿ ಧೃತರಾಷ್ಟ್ರನೇನೊ || ಇನ್ನು ಮತಿಯನ್ನು ಕೊಡುವಲಿ ಗಜಮೊಗನೇನೊ | ಮುನ್ನೆ ಕವನದಲ್ಲಿ ಶುಕ್ರದೇವನೇನೊ 10 ಹಮ್ಮಿನಲಿ ಬಾಳದಿರು ಹಿತವಾಗದೊ ನಿನಗೆ | ಆ ಮಹಿಮರ ಸರಿ ನೀನಲ್ಲವೊ || ಸಿರಿ ವಿಜಯವಿಠ್ಠಲರೇಯನ್ನ | ನೆಮ್ಮಬೇಕಾದರೆ ಸೋಹಂ ನಿರಾಕರಿಸು11
--------------
ವಿಜಯದಾಸ
ಹಿತದಿಂದ ಪೊರೆಯೆನ್ನ | ವಿತತ ಮಹಿಮ ಹರಿಯೇ ಹಿತ ಅಹಿತವೆರಡನ್ನು | ಸಹಿಸುವಂತೇ ಪ ಅತಿ ದಯಾಪರನೆಂದು | ಖತಿದೂರನೆಂದೆನುತಶ್ರುತಿ ನಿಚಯ ಸಾರುತಿದೆ | ಗತಿ ಪ್ರದನೆ ದೇವಾ ಅ.ಪ. ವೇದ ವೇದ್ಯನೆ ದೇವ | ಆದ್ಯಂತ ರಹಿತನೇಕಾದುಕೋ ಎನ್ನನು | ಮೋದಗಳನಿತ್ತೂ ||ಸಾಧನ ಸುಮಾರ್ಗದಲಿ | ಹಾದಿಯನು ಕಾಣದಲೆಬಾಧೆಗೊಳಗಾಗಿಹನ | ಆದರಿಸು ದಯವನಧೀ 1 ಪ್ರಾಣಪತಿಯೇ ಎನ್ನ | ಪ್ರಾಣಗಳು ವಶವಿಲ್ಲಧ್ಯಾನ ಮಾಡುವೆನೆನ್ನ | ಮನನಿಲ್ಲಧ್ಹರಿಯೇ ||ಜ್ಞಾನ ಕರ್ಮೇದ್ರಿಗಳು | ಏನೊಂದು ನಿನ್ನಯಾಧೀನವಿರಲೂ ನಾನು | ಏನು ಮಾಡಲು ಸಾಧ್ಯ 2 ಗೋವರ್ಧನೋದ್ಧರನೆ | ಗೋವುಗಳ ಪರಿಪಾಲಕಾವ ಕರುಣೀ ನಮ್ಮ | ದೇವರ ದೇವಾ ||ಗೋವಿದಾಂಪತಿ ಗುರು | ಗೋವಿಂದ ವಿಠಲನೆನೀವೊಲಿಯದಿನ್ನಾರು | ಕಾವರನು ಕಾಣೆನಯ್ಯಾ 3
--------------
ಗುರುಗೋವಿಂದವಿಠಲರು
ಹಿಮಾಚಲೇಂದ್ರನ ಕುಮಾರಿ ಶಂಕರಿ ಉಮಾಂಬೆ ಬಾರಮ್ಮ ಪ ಕುಮಾರ ಶಕ್ರಾದಿ ಸಮಸ್ತ ಸುರಗಣ ಸಮರ್ಚಿತಾಂಘ್ರಿಯೆ ನಮೋನಮೋ ಎಂಬೆ ಅ.ಪ. ಬುದ್ಧ್ಯಾಭಿಮಾನಿಯೆ ಸದ್ಯೋಜಾತನ ರಾಣಿ ಹೃದ್ಧ್ಯೋಮದಲಿ ಪೊಳೆದು ವಿದ್ಯಾ ಬುದ್ಧಿಯನಿತ್ತು ಶುದ್ಧಾತ್ಮನನು ಮಾಡಿ ಸದ್ಭಕ್ತಿ ಪಂಥದ ಸಿದ್ಧಾಂತ ತಿಳಿಸಮ್ಮ 1 ಘೋರ ಭವಾಬ್ಧಿಯ ತಾರಿಪ ಸುಲಭದ ದಾರಿಯ ತೋರೆನುತ ಮುರಾರಿಯನು ಬೇಡಿ ಶ್ರೀ ರಾಮ ನಾಮದ ರುಚಿ ಬೀರಿದೆ ಜಗದೊಳು 2 ಲಕ್ಷಾಘ ಧ್ವಂಸಿನಿ ದಾಕ್ಷಾಯಿಣೀ ಗಣಾ ಧಕ್ಷನ ವರ ಜನನಿ ಲಕ್ಷ್ಮೀಕಾಂತನ ಅಪರೋಕ್ಷದಿ ಕಾಂಬುವ ಸೂಕ್ಷ್ಮವನೊರೆದೆನ್ನ ರಕ್ಷಿಸು ಅಮ್ಮಯ್ಯ 3
--------------
ಲಕ್ಷ್ಮೀನಾರಯಣರಾಯರು
ಹುಚ್ಚು ಹಿಡಿಯಿತು ಎನಗೆ | ಹುಚ್ಚು ಹಿಡಿಯಿತು ಪ ಸ್ವಚ್ಛ ಭಾಗವತವ ಕೇಳಿ | ಅಚ್ಯುತನ್ನ ಮಹಿಮೆ ಎಂಬಮೆಚ್ಯಮದ್ದು ಶಿರಕೆ ಏರಿ | ಹುಚ್ಚು ಹಿಡಿಯಿತು ಅ.ಪ. ಶ್ರವಣ ಸ್ತವನ ಸ್ಮರಣೆ ಸೇವೆ | ಅವನ ಅರ್ಚನೆ ವಂದನೆ ಸಖ್ಯಅವ ದಾಸ್ಯ ಆತ್ಮ ಅರ್ಪಣ | ನವವು ವಿಧದ ಭಕ್ತಿಗಳಿಪ 1 ಸಪ್ತ ದಿನದ ಕ್ಲುಪ್ತಿಯಿಂದ | ಸರ್ಪಶಯನ ಮಹಿಮೆ ಶ್ರವಣಶೃತಿ ಬಧಿರ ವಾಯ್ತು ಆತ್ಮ | ರಿಕ್ತ ವಿಷಯ ಶ್ರವಣಕೆಲ್ಲ 2 ಸ್ತವನ ಮಾಳ್ಪ ಶುಕರ ದೇಹ | ಭವಣೆ ಮರೆತು ಕೀರ್ತಿಸಿದರುಅವರ ಕಂಡು ಲೋಕವಾರ್ತೆ | ಸ್ತವನ ಗೈವರ ದೂಡುವಂಥ 3 ಹರಿಯ ಸ್ಮರಿಸಿ ಪ್ರಹಲ್ಲಾದ | ಹರಿಯ ಕಂಡು ಭವವ ಗೆದ್ದಸ್ಮರಿಸಿ ಸ್ಮರಿಸಿ ಅದನ ನಾನು | ನರರ ನಡುವೆ ಮೂಕನಾಗ್ದ 4 ನಿತ್ಯ ಮಾಳ್ಪ ಹರಿಯ ಸೇವೆಅರ್ತುಸಂತರ ಸೇವೆ ವ್ಯತಿ | ರಿಕ್ತಕೆಲ್ಲ ಪ್ರತಿಯ ಭಟಿಪ 5 ಅಂಬೆ ರಮಣನರ್ಚಿಸೀದ | ಕುಂಬಾರ ಭೀಮನ ಕೇಳಿ ನಾನುಅಂಬುಜಾಕ್ಷನರ್ಚನೆಗಲ್ಲದ | ತುಂಬಿದ್ವ್ಯೊಭವ ಚೆಲ್ಲುವಂಥ 6 ಕೃಷ್ಣ ವಂದನ ಅಕ್ರೂರ ಗೈದು | ಸುಷ್ಠು ಹರಿಯ ರೂಪ ಕಂಡಜಿಷ್ಣು ಸಖನ ನಮಿಸದವರ | ಭ್ರಷ್ರ್ರರೆಂದು ಬೈಯ್ಯುವಂಥ 7 ನಿತ್ಯ ನೆನೆಯದವರ | ಕ್ಷಣವು ಅವರ ಸಂಗಜರಿವ 8 ಪಾರ್ಥ ಸಖ್ಯತನದಿ ಪರಮ | ಅರ್ಥ ಪಡೆದುದನ್ನ ಕೇಳಿನಿತ್ಯ ಸಖನ ಮರೆತ ಜನರು | ವ್ಯರ್ಥರೆಂದು ಅರ್ಥಿಲಿ ನಗುವ9 ಭೃತ್ಯ ಬಲಿಯು ತನ್ನನಿತ್ತಸತ್ಯ ವಾರ್ತೆ ಕೇಳಿ ಕೇಳಿ | ಪ್ರವೃತ್ತಿ ಗೈದಿನ್ಯತ ನೆದಿ 10 ನಿಚ್ಚ ಗುರು ಗೋವಿಂದ ವಿಠಲ11
--------------
ಗುರುಗೋವಿಂದವಿಠಲರು
ಹುಡುಕಿ ಕರೆತಾರೆ ಸಖಿ ಜಡಜನಯನ ಒಡೆಯನ್ಹಂಬಲ ಪಾದ ಗಡನೆ ಪೋಗಿ ಪ ಧ್ಯಾನಧೃಢ ಅವನು ಇರುವ ಸ್ಥಾನ ಪೇಳುವೆ ಜಾಣೆ ಕೇಳೆ ಹಗಲು ಇರುಳು ಖೂನವಿಲ್ಲವನಿಹ್ಯ ಸ್ಥಳದಿ ತಾನೆತಾನಾಗಿ ಸೂಕ್ಷ್ಮದಿ ಶೂನ್ಯ ಪೀಠದಿ ವಾಸಿಪ ಜಾಣನ ಜವದಿಂ ಪೋಗಿ 1 ಅರಿದು ಮರೆದಿರೆ ಅವನ ಗುರುತು ಒರೆಯುವೆ ಜರಾಮರಣಿವಲ್ಲವಗೆ ಧರಿಸಿರುವಂತವತಾರ ತಿರುಗಲು ಮೂಡವು ಅಡಿಗಳು ನೆರಳೇ ಇಲ್ಲವು ನಿಲ್ಲಲು ಶರೀರವಿಲ್ಲದೆ ತೋರುವ ಪರಮನ ತ್ವರಿತದಿ ಹಿಡಿದು 2 ಪ್ರೇಮ ಸುಂದರೀ ಅವನ ನಾಮ ಪೇಳುವೆ ನೇಮದಿಂದ ಕೂಗುತಿಹ್ಯವು ಸಾಮಯಜುರಾದಿ ವೇದವು ಆಮಹಮಹಿಮನ ಘನತರ ನಾಮದ ನೆಲೆಯೇ ಸಿಗದಿದೆ ಕಾಮಿನಿಯಂಥ ಸ್ವಾಮಿ ಶ್ರೀ ರಾಮ ಸದ್ಗುರು ಪ್ರಭುವಿನ 3
--------------
ರಾಮದಾಸರು
ಹೃತ್ಪದ್ಮದೊಳಿದ್ದು ಹೃತ್ತಾಪಗಳ ಕಳೆಯೊ ಜೀ- ವತ್ಪಿತಾಮಹ ಜನಕನೇಪ ಮೃತ್ಪಿಂಡದಂತೆನ್ನ ಉತ್ಪತ್ತಿಗೆ ಕ- ಣ್ಣೆತ್ತಿ ನೋಡಲರಿಯಾ ಜೀಯಾ ಅ.ಪ ನಿತ್ಯ ನಿತ್ಯ ಜಗವೆಲ್ಲವು ನಿತ್ಯವು ನಿತ್ಯತ್ವವೆಲ್ಲ ಸರಿಯೇ ಏನಿದ್ದರೇನು ಅನಾದಿಕರ್ಮದ ಬವಣೆ ಬೆನ್ನಟ್ಟಿ ಬರುತಿರ್ಪುದ- ಜ್ಞಾನಾಂಧಕಾರದಿಂ ಧ್ಯಾನವನು ತಿಳಿಯದೇ ಕಾನನದೊಳಿಪ್ಪೆನೋ ಜ್ಞಾನಗಮ್ಯನೆಂದು ಸಾರುತಿದೆ ಶ್ರುತಿ ಶಾಸ್ತ್ರ ಜ್ಞಾನಗುರು ದೊರೆತಿಲ್ಲವೋ ಸಾನುರಾಗದಿ ನೀನೆ ಸಾಧನಕೆ ಕರುಣಿಸಿ ಧ್ಯಾನದಲಿ ಮನಸು ನಿಲಿಸೋ ಉಳಿಸೋ 1 ಬಂಧ ಮೋಕ್ಷಕೆ ಎಲ್ಲ ಮನವೆ ಕಾರಣವೆಂದು ಎಂದೆಂದಿಗು ಪೇಳುತಿಹರು ಸಿಂಧುಶಯನನೆ ಭವಬಂಧಮೋಚಕನೆಂದು ವಂದಿಸಿ ಪೊಗಳುವರೊ ಮಂದರೊದ್ಧರ ನಿನ್ನ ಮಂದಮತಿಯಿಂದಲಿ ವಂದಿಸಲು ನಾನರಿಯೆನೊ ಕಂದರ್ಪಜನಕ ನೀ ಮಂದಭಾಗ್ಯನ ಮನವ ನೋಯಿಸದೆ ನಿನ್ನ ಪದದಲ್ಲಿರಿಸೊ ಅಂದೆ ಎನ್ನಯ ಭವಬಂಧನಾಶವಾಗುವು- ದೊಂದೆ ನಿನ್ನನು ಬೇಡುವೆನೊ ಜೀಯ 2 ಜೀವರೆಲ್ಲರು ಗುಣತ್ರಯಾವರಣದಿಂದ ಕರ್ಮ- ಪ್ರವಹದೊಳಿಪ್ಪರೊ ಕವಿಸಿ ಮೋಹವ ನೀನು ಭವಕೆ ಕಾರಣವಹುದು ದೇವೇಶ ನಿನ್ನಾಟವೋ ಶ್ರವಣದಿಂದಲಿ ಭವಬಂಧಮೋಚಕನೆಂದು ತವ ಬಿರುದು ಸಾರುತಿದೇಕೋ ಭಾವ ಬಲ್ಲವರಾರೋ ಕಾವ ಕರುಣಿ ನೀನೆ ಭಾವಜನ ಪಿತನು ಅದೇ ಭವಪಾಶ ಬಿಡಿಸೆ ನಾ ಭಕುತಿಪಾಶದಿಂದ ಪಾದ ಬಿಗಿವೆನಯ್ಯ ಜೀಯ 3 ಸ್ವಾತಂತ್ರ್ಯವೆಲ್ಲಿಹುದು ಸ್ವಾಮಿತ್ವವೆಲ್ಲಿಹುದು ಅ- ಸ್ವತಂತ್ರನಾಗಿಪ್ಪೆನೊ ಕಾತುರದಿ ನಾ ಮಾಳ್ಪ ಕ್ರಿಯೆಗಳೆಲ್ಲವು ಎನ್ನ ಸ್ವಾತಂತ್ರ್ಯವೆಂದ್ಹೇಳುವೆ ನೀ ತಂತ್ರಿಯಾಗಿದ್ದೆನ್ನ ನಡೆಸುವುದನರಿಯೆ ಕು- ತಂತ್ರವನು ನಾ ಮಾಡುವೆ ಸ್ವಾ- ತಂತ್ರನು ನೀನು ಸೂತ್ರನಾಮಕ ದೇವ ಮಂತ್ರಿಯಾಗೀದೇವ ಯಂತ್ರ ನಡೆಸುವ ಎಂತಾದರಡಿಗಡಿಗೆ ಅತಂತ್ರನಾಗಿಹೆ ನಾನೇ ಭ್ರಾಂತಿಪರಿಹರಿಸಿ ಕಾಯೊ ಶೌರೇ 4 ಭಕ್ತಿ ಇಲ್ಲದೆ ನಿನ್ನ ಭಕ್ತನಾಗುವುದೆಂತೋ ಭುಕ್ತಮಾತ್ರನು ನಾನು ಮುಕ್ತರೊಡೆಯ ನೀನು ಯುಕ್ತಿತೋರಿಸು ಎನಗೆ ಭಕ್ತಾಪರಾಧಸಹಿಷ್ಣು ಶಕ್ತ ನೀನಹುದೊ ವೇದೋಕ್ತ ಮಹಿಮಾತೀತ ಸಕ್ತವಾಗಲಿ ನಿನ್ನ ಪದದಿ ಮನಸು ವ್ಯಕ್ತನಲ್ಲವೊ ಸರ್ವ ಸಾರಭೋಕ್ತನು ನೀನು ಭಕ್ತವತ್ಸಲ ಪುರುಷಸೂಕ್ತಮೇಯ ಅಪ್ರಮೇಯ ಯುಕ್ತಿಮಾತಲ್ಲಿದು ಭಕ್ತಿಪೂರ್ವಕ ನಿನ್ನ ಭಕ್ತ ಶ್ರೇಷ್ಠರ ಸೇವೆ ಕೊಟ್ಟು ರಕ್ಷಿಸೊ ದೇವಾ 5 ನಾದಕ್ಕೆ ಪರನಾಗಿ ವಾದಕ್ಕೆದೊರೆಯೇ ನೀ ವೇದವೇದಾಂತವೇದ್ಯ ಸಾಧನವು ಕಾಣೆ ಸಾಧನಶರೀರವಿದು ಸಾದರದಿ ಕರುಣಿಸಿದೆ ಅನಿರುದ್ಧದೇವ ಬಾಧಿಪುದು ಬಂಧಗಳು ಅನಾದಿಕರ್ಮದಿ ಬಂದು ನಾ ಅಧಮತಮಸಾಧನವನ್ನೆಸಗಿದೆ ನೀ ದಯಾಸಿಂಧು ಎಂದಡಿಗಡಿಗೆ ಬೇಡುವೆನು ಕೃದ್ಧನಾಗದೆ ಇನ್ನು ಉದ್ಧರಿಸು ತಂದೇ ಎಂದೇ 6 ಶಂಖಚಕ್ರಾಂಕಿತನೆ ಮಂಕುಬುದ್ಧಿಯ ಬಿಡಿಸೋ ಅಂಕಿತವೆನಗೆ ಇಲ್ಲ ಅಂಕೆ ಇಲ್ಲವೊ ನಿನ್ನ ನೆನೆಹುದಕೆ ಎಂದಿಗೂ ಶಂಕೆಯ ಪಡುವನಲ್ಲ ವೇಂಕಟಾದ್ರಿಯ ವಾಸ ಶ್ರೀ ವೇಂಕಟೇಶನು ಮಮಕುಲಸ್ವಾಮಿ ದೈವವೆಂದನುದಿನ ಸಂಕಟಾಗಾಮಿಗಳ ಕಂಟಕವ ಹರಿಸಿ ಪದ ಪಂಕಜದಿ ಮನವ ನಿಲ್ಲಿಸೋ ಬಿಂಕದ ಮಾತಲ್ಲ ಪಂಕಜದಳಾಯತಾಕ್ಷ ಅಕ- ಳಂಕಮಹಿಮ ಕಾಯೋ ಜೀಯಾ7
--------------
ಉರಗಾದ್ರಿವಾಸವಿಠಲದಾಸರು
ಹೆಜ್ಜೆ ತೋರೆ ಕಾಲಗೆಜ್ಜೆ ತೋರೆ ಸಾರಥಿ ಪಟ್ಟದ ರಾಣಿ ಹೆಜ್ಜೆ ತೋರೆ ಪ ಕಾಲಲಂದಿಗೆ ನೂಪುರವಿಟ್ಟ ಹೆಜ್ಜೆ ತೋರೆ ಕಾಳಿಮರ್ದನ ಕೃಷ್ಣನರಸಿಯೆ ಹೆಜ್ಜೆ ತೋರೆ ಕಾಲಸರವು ಪಾಡಗನಿಟ್ಟ ಹೆಜ್ಜೆ ತೋರೆ ಕಾಳಿಂದಿ ರಮಣನ ಸತಿಯೆ ಹೆಜ್ಜೆ ತೋರೆ 1 ಬಡವರ ಮನೆಗೆ ನಡದು ಬರುವ ಹೆಜ್ಜೆ ತೋರೆ ಬಡನಡು ಬಳುಕುತ ನಡೆಯುವ ಪುಟ್ಟ ಹೆಜ್ಜೆ ತೋರೆ ಸಡಗರದಲಿ ಹರಿಯೊಡನೆ ಬರುವ ಹೆಜ್ಜೆ ತೋರೆ ಪೊಡವಿಗೊಡೆಯ ಶ್ರೀ ಕೃಷ್ಣನರಸಿಯೆ ಹೆಜ್ಜೆ ತೋರೆ2 ಲುಲ್ಲುರುಳಿ ಪೈಜನಗಳು ಹೊಳೆವ ಹೆಜ್ಜೆ ತೋರೆ ಉಲ್ಲಾಸದಿ ಸುರರೆಲ್ಲರು ಸ್ತುತಿಪ ಹೆಜ್ಜೆ ತೋರೆ ಫುಲ್ಲಾಕ್ಷನ ಒಡಗೂಡುತ ಬರುವ ಹೆಜ್ಜೆ ತೋರೆ3 ಪದ್ಮ ರೇಖೆಗಳಿಂದ ಶೋಭಿಪ ಹೆಜ್ಜೆ ತೋರೆ ಪದ್ಮನಾಭನ ಕೂಡಿ ಬರುವ ಹೆಜ್ಜೆ ತೋರೆ ಪದ್ಮದೊಳು ಪುಟ್ಟಿರುವ ಪುಟ್ಟ ಹೆಜ್ಜೆ ತೋರೆ ಪದ್ಮಮುಖಿಯೆ ಶ್ರದ್ಧೆಲಿ ಭಜಿಪರು ಹೆಜ್ಜೆ ತೋರೆ4 ವಿರೋಧಿಕೃತ ಸಂವತ್ಸರ ಬರುತಿರೆ ಹೆಜ್ಜೆ ತೋರೆ ವಿರೋಧಿಗಳ ದೂರೋಡಿಪ ದಿವ್ಯ ಹೆಜ್ಜೆ ತೋರೆ ಸರೋಜದಳದೊಳು ಶೋಭಿಪ ದಿವ್ಯ ಹೆಜ್ಜೆ ತೋರೆ ಸುರರೆಲ್ಲರು ಕೊಂಡಾಡುತ ಸ್ತುತಿಪ ಹೆಜ್ಜೆ ತೋರೆ5 ನಿಗಮವೇದ್ಯಳೆ ನಿನ್ನ ಪೊಗಳುವೆ ಹೆಜ್ಜೆ ತೋರೆ ಅಗಣಿತ ಮಹಿಮನ ಗುಣಗಳ ಪೊಗಳುವೆ ಹೆಜ್ಜೆ ತೋರೆ ಬಗೆ ಬಗೆ ಭಕುತರು ಪೂಜಿಪ ನಿನ್ನ ಹೆಜ್ಜೆ ತೋರೆ ಖಗವಾಹನನೊಡಗೂಡುತ ಬರುವ ಹೆಜ್ಜೆ ತೋರೆ6 ಕಮಲ ಮುಖಿಯೆ ಕರುಣವ ಮಾಡಿ ಹೆಜ್ಜೆ ತೋರೆ ಕಮಲನಾಭ ವಿಠ್ಠಲನ್ನ ರಾಣಿ ಹೆಜ್ಜೆ ತೋರೆ ಕಮಲಾಕ್ಷಿಯರಿಂದ ಪೂಜೆಗೊಳ್ಳುವ ಹೆಜ್ಜೆ ತೋರೆ ಸುಮನಸವಂದ್ಯನ ಸತಿಯೆ ನಮಿಪೆ ಹೆಜ್ಜೆ ತೋರೆ7
--------------
ನಿಡಗುರುಕಿ ಜೀವೂಬಾಯಿ
ಹೆದರಿಕೆ ಬರುತದೆಲೋ ಪದುಮಾಕ್ಷ ನಿನ್ನ ಮುಂದೆ ಹೇಳಿಕೊಳ್ಳಲು ಎನಗೆ ಪ ಹೆದರಿಕೆ ಬರುತಿದೆ ಜಗದ ಜನರು ನಿನಗೆ ವಿಧವಿಧದಾಡುವ ಸುದ್ದಿಯ ಪೇಳಲು ಅ.ಪ ಹಳಿವರು ಹೆಳವನೆಂದು ಅಂಜದೆ ನಿನಗೆ ತಲೆಯಿಲ್ಲದವನೆನುವರು ಇಲ್ಲದೆ ಹೊಟ್ಟಿಗೆ ಹುಲ್ಲುಮೆದ್ದವನೆಂದು ಹಲವು ಬಗೆಯಲಿ ಹೀಯಾಳಿಪುದ್ಹೇಳಲು 1 ದೃಢದಿ ಭಕುತಜನರು ಬೇಡಿದ ವರವು ಕೊಡಬೇಕಾಗುವುದೆನುತ ಓಡಿ ಹಾವಿನಮೇಲೆ ಪವಡಿಸಿದ ಮಹ ಕಡುಲೋಭಿಯೆಂದೆಂಬ ನುಡಿನಿನ್ನೊಳ್ಪೇಳಲು 2 ಒದೆಸಿಕೊಂಡ್ವೊಯ್ಕುಂಠದಿ ಶೇಷಾಚಲದಿ ಸದನಗೈದನುಯೆಂಬರು ಇದು ಅಲ್ಲದತಿ ವಿಧವಿಧ ಲೋಕ ಸುಲಿದರ್ಥ ನಿಧಿಗಳಿಸಿದ ಚಿನಿವಾರೆಂಬದ್ಹೇಳಲು 3 ಕುದುರೆಮಾವುತನೆಂಬರು ಎಲವೋ ರಂಗ ಕದನಗಡಕನೆನುವರು ಹದಿನಾರು ಸಾವಿರ ಸುದತಿಯರೊಶನಾದ ಸುಧೆಗಳಜಾರನೆಂಬ ವಿಧಿಯನ್ನು ಪೇಳಲು 4 ವಿಪಿನವಾಸಿಕನೆನುವರು ನಿಷ್ಕರುಣದಿ ನೀ ಕಪಿವರನ ತರಿದೆನುವರು ಕಪಟ ತಿಳಿಯುವರಾರು ಅಪರೂಪಮಹಿಮನೆ ಕೃಪಾನಿಧಿ ಶ್ರೀರಾಮ 5
--------------
ರಾಮದಾಸರು
ಹೇ ಪಾಪಿ ಮನಸೇ ನೀ ನಾರಾಯಣೆನೆಲೋ ಅಪಾರ ಮಹಿಮನ ಮಹಿಮೆ ತಿಳಿದು ನೋಡೋ ಪ ‘ನಾ’ ಎಂಬೋ ಮಹದಾದಿಬೀಜದಕ್ಷರ ತುದಿ ನಾಲಿಗೆಯಿಂದ್ಹೊರಡುವನಿತರೊ ಳ್ಹಿಂದಿನ ನಾನಾಜನುಮದ ಪಾಪ ಪರ್ವತವೆಲ್ಲವು ನಿವೃತ್ತಿಯಾಗಿ ಮಹ ಪಾವನನೆನಿಪುದು 1 ‘ರಾ’ ಎಂದು ಮುಖದಿಂದ ಹೊರಟ ಕೂಡಲೆ ಸರ್ವ ರವರವನರಕದ ಯಾತನಳಿದು ಭವ ರೋಗವೆಲ್ಲನು ನೀಗಿ ಕಾಯಕರ್ಮವ ಕಡಿದು ರಾಜಿಪ ಪರಲೋಕ ಸದರವೆನಿಸುವುದೆಲೊ 2 ‘ಯ’ ಎಂದು ನುಡಿಯುತಲೆ ಜನುಮ ಸಫಲವಾಗಿ ಎಷ್ಟೋ ಕೋಟ್ಯಜ್ಞದ ಪುಣ್ಯ ಫಲವು ದೊರಕಿ ಯಮನ ಭೀತಿಯ ಗೆಲಿಸಿ ದಾಸರೊಲುಮೆ ಲಭಿಸಿ ಎಸೆವ ತ್ರಿಕಾಲಜ್ಞಾನ ಸ್ಥಿರವಾಹುದೆಲೊ 3 ‘ಣ’ ಎಂದು ಸಂಪೂರ್ಣ ಉಚ್ಚರಿಸಿದ ಮಾತ್ರವೆ ಕರತಲ ಮಾಗಿ ನಿತ್ಯ ನಿರ್ಗುಣನಂಘ್ರಿ ಕಂಗಳೊಳ್ಹೊಳೆಯುತ ನಿತ್ಯಾನಂದದ ಪದವಿ ಕೈವಶವಹದೆಲೊ 4 ನಿರಾಮಯ ಶ್ರೀರಾಮ ನಿಗಮಗೋಚರ ನಿರಂಜನ ನಿಜಗುಣನನುಪಮಮಹಿಮೆ ನಿಜಮತಿಯಿಂದರಿತು ನಿರ್ಮಲ ಮನಸಿನಿಂ ನೆನೆಯಲು ಘನಮುಕ್ತಿ ಸಾಮ್ರಾಜ್ಯ ಪಡೆಯುವಿ 5
--------------
ರಾಮದಾಸರು
ಹೊಡಿ ಚೋಕ ಒಡೆಯ ಶ್ರೀ ಹರಿಪಾದ ಪೊಡವಿತ್ರಯದಧಿಕೆಂದು ಪ ಸಾಧು ಸಜ್ಜನರಿಗೆ ಆಧಾರವಾದ ಪಾದ ಪಾದ ಬಹು ಮಿಗಿಲೆಂದು 1 ಪಾರವಾರಿಧಿ ಕಡೆದು ಪೀರಿದಮೃತಪಾದ ಘೋರರಕ್ಕಸರೊದೆದಪಾರಮಹಿಮ ಪಾದೆಂದು 2 ಗೋವಳರಾಳಿದ ಪಾವನ ಶ್ರೀಪಾದ ದೇವ ಶ್ರೀರಾಮಪಾದಕಾವಪಾದೀಡಿಲ್ಲೆಂದು 3
--------------
ರಾಮದಾಸರು
ಹೊಡೆಯಿರೋ ನಗಾರಿ ಗಡಗಡನೆ ಮೂರು ಬಾರಿ ಪ ದೃಢಭಕ್ತ ಸಮೂಹವ ಸಿರಿ ಯೊಡೆಯನು ಕೈಬಿಡನೆಂದು ಅ.ಪ ವಿಧಿಸೃಷ್ಟಿಯೊಳಿಲ್ಲದರೂ- ಪದಿ ಬಂದು ನಖದಿ ಅಸುರನ ಉದರ ಬಗೆದು ಕರುಳ ತೆಗೆದು ಮುದದಿ ಗಳದಿ ಧರಿಸಿದನೆಂದು 1 ಪರರು ತನ್ನ ಹಿಂಸೆಗೈ ದರು ಸಹಿಸಿ ಸಮಾಧಾನದಿ ಸಿರಿಯರಸನ ನೆನೆವಗೆ ಭಯ ವಿರದಿರದಿರದಿರದೆಂದು 2 ದ್ವೇಷಿಗಳನುದಿನ ಯೋಚಿಪ ಮೋಸಗಳನು ತಿಳಿಯುತ ಲ- ಕ್ಷ್ಮೀಶನು ಪರಿಹರಿಸಿ ತನ್ನ ದಾಸರಿಗೊಶವಾಗುವನೆಂದು 3 ತಿಳಿಯಗೊಡನು ಸತ್ಯವಿದೆಂದು 4 ಕಾಮಾದಿಗಳನು ಗೆದ್ದು ಮ- ಹಾಮಹಿಮರೆನಿಸುವರ ಯೋಗ- ಕ್ಷೇಮವನ್ನು ವಹಿಸಿಹ ಗುರು- ರಾಮವಿಠಲ ನರಹರಿಯೆಂದು 5
--------------
ಗುರುರಾಮವಿಠಲ