ಒಟ್ಟು 16359 ಕಡೆಗಳಲ್ಲಿ , 135 ದಾಸರು , 7416 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ಜಾನಕೀಪ್ರಿಯ ರಾಘವ ಜಯ ಪಾವನ ಚರಣಾ ಪ ಜಯ ದಾನವಭಯ ತಾರಣ ಜಯ ಭವಸಾಗರ ತರಣಾ ಅ.ಪ ಸೇವ್ಯ ಚರಣ ದಾನವ ಕುಲ ಹರಣಾ ಚಾರು ಚರಿತ ಮಾರಜನಕ ಸಾಗರಜಾ ರವiಣಾ 1 ಸುರುಚಿರ ಮಣಿಗಣ ವಿತರಣ ಸುರನಾಯಕ ಶರಣಾ ಉರಗಶಯನ ಮರಕತ ಮಾಂ ಗಿರಿನಾಯಕ ಕರುಣಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜಯ ದೇವ ಜಯ ದೇವ ಜಯ ಗುರು ಮೈಲಾರಿ ಮನಮೈಲ ಮರ್ದಿಸಿದಯ್ಯ ನೀನೆ ಅಸುರಾರಿ ಧ್ರುವ ಖಡ್ಗವ ಕರದಲಿ ಪಿಡಿದು ಖಂಡಿಸಿದಙÁ್ಞನ ಖಂಡೇರಾಯೆನಿಸಿಕೊಂಡು ಪ್ರಕಟಿಸಿದನುದಿನ ಹಿಂಡದೈವಕೆ ಪ್ರಚಂಡನಹುದೊ ಪರಿಪೂರ್ಣ ಮಂಡಲದೊಳು ನಿಮ್ಮ ಕೊಂಡಾಡುದು ತಾ ಸುರಜನ 1 ಮಲಹರಣ ಮಾಡಲು ಧರಿಸಿ ಅವತಾರ ಮೂಲೋಕ ಪಾವನಮಾಡುವ ಸಹಕಾರ ಸಲಹುವೆ ಭಕ್ತಜನರಿಗೆ ನೀ ಘನ ಮಂದಾರ ಮಲೆತಿಹ ದೈತ್ಯರ ಸಂಹರಿಸುವೆ ನೀ ಅತಿಶೂರ 2 ಪತಿ ಅಹದು ಶ್ರೀಗುರು ಭೂಪತಿ ಬಾಹ್ಯಾಂತ್ರಿ ಬೆಳಗುವೆ ಶ್ರೀಪಾದಕೆ ಆರ್ತಿ ಇಹಪರಕೆ ದಾತನಹುದೊ ಶ್ರೀಪತಿ ಜಯಜಯವೆಂದು ಬೆಳಗುವೆ ದಾಸ ಮಹಿಪತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ದೇವ ಜಯ ದೇವ ಜಯ ಜಗಜೀವನ ಕರ ರತ್ನ ಧ್ರುವ ಅಜ ಸುರ ಮುನಿ ಪ್ರಾಣ ರಾಜೀವ ನಯನ ಸುಜನ ಸುಭೂಷಣ ತ್ರಿಜಗ ಪಾವನ 1 ಭಕ್ತ ಜನ ಉದ್ಧಾರ ಘನಗುರು ದಾತಾರ ಪತಿತಪಾವನಮೂರ್ತಿ ಮುನಿಜನ ಮಂದಾರ ಅತಿಶಯಾನಂದ ಅನುಪಮ ವ್ಯಾಪಕ ನಿರ್ಧಾರ ಸತತ ಸುಪಥ ಸದ್ಗುರು ಸಹಕಾರ 2 ಸಹ್ಯಾದ್ರಿ ಗಿರಿವಾಸ ಶ್ರೀಗುರು ಸರ್ವೇಶ ಬಾಹ್ಯಾಂತ್ರ ಪರಿಪೂರ್ಣ ಜಗದೀಶ ಮಹಿಪತಿಸ್ವಾಮಿ ಶ್ರೀ ದೇವದೇವೇಶ ದಾತ ಭಾಸ್ಕರಕೋಟಿ ಪ್ರಕಾಶ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ದೇವ ಜಯ ದೇವ ಜಯ ಬ್ರಹ್ಮಾನಂದ ಜಯ ಜಯವೆಂದು ಬೆಳಗುವೆ ಬೆಳಗಿಲಿ ನಿಮ್ಮಿಂದ ಧ್ರುವ ಅರುವಿಗೆ ನಿಮ್ಮರುವುದೋರಿತು ಘನದರುವು ಅರುವೆ ಅರುವಾಗಿದೋರಿತು ಅರುವೆ ಘನ ಅರುಹು ತಿರುಹುಮುರವ್ಹಿನ ಕುರುವುದೋರಿತು ಘನದರುವು ಕುರುವ್ಹೆ ಕುರುವ್ಹಾಗಿದೋರಿತು ಘನ ಪರಾತ್ಪರವು 1 ಬೆಳಗಿನ ಘನ ಬೆಳಗು ಹೊಳೆವದು ಥಳಥಳವು ಹೇಳೇನಂದರೆ ಬಾರದು ತಿಳವ್ಹಿಗೆ ನಿಜಸುಳಹು ಕಳೆ ಮೊಳೆಗಳ ಉಳಹು ತುಳಕುತ ಘನದೊಲವು ಭಳಭಳ ಭಾಸುವ ನಿಮ್ಮ ಬೆಳಗೆ ನಿರ್ಮಳವು 2 ಅನುಭವದಾರತಿ ಸ್ವಾನುಭವದ ಪ್ರೀತಿ ಅನುದಿನ ಬೆಳಗುವದು ತಾ ಘನಗುರು ನಿಜಪ್ರೀತಿ ತಾನೆತಾನಾಗಿಹ ಙÁ್ಞನಸಾಗರ ಮೂರ್ತಿ ದೀನಮಹಿಪತಿ ಬೆಳಗುವೆ ಮನ ಮಂಗಳಾರ್ತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ದೇವ ಜಯ ದೇವ ಜಯ ಮಂಗಳ ಮಹಿಮ ದಯಗುಣದಲಿ ನಿಸ್ಸೀಮ ಜಯಗುರು ನಿರುಪಮ ಧ್ರುವ ಅನುಭವಕಾಗುವ ಚಂದ ಸ್ವಾನುಭವದÀ ಕಂದ ಜ್ಞಾನ ವಿಜ್ಞಾನಂದ ಘನಮಯ ನಿದ್ರ್ವಂದ್ವ ದ್ವಂದ್ವನಿರ್ದೂಂದ್ವ ತಾನೆ ತನ್ನಿಂದ ಎಂದೆಂದಿಗೆ ಬ್ಯಾರಿಲ್ಲ ದೋರುದು ನಿನ್ನಿಂದ 1 ದ್ವೈತಾದ್ವೈತಕೆ ರಹಿತಾಶ್ರಯಗುರು ನಿಜದಾತ ತ್ರೈಗುಣಾತೀತ ಶಾಂತ ನಿರ್ಗುಣ ನಿಶ್ಚಿಂತಾ ನಂತಾನಂತಕೆ ಸಂತತ ನೀನೆ ಏಕಾಂತ ಪಂಥ ಪರಮಗುಹ್ಯಾನಿಹ ಶ್ರೀ ಅವಧೂತ 2 ಸ್ವಸಂವೇದ್ಯ ನೀ ಪೂರ್ಣಋಷಿಮುನಿಗಳ ಧ್ಯಾನ ಲೇಸುಲೇಸಾಗಿಹ ಆತ್ಮನುಭವ ಖೂನ ಈಶ ನೀನೊಬ್ಬನಾಗಿಹ ಅನುದಿನ ದಾಸ ಮಹಿಪತಿ ಪ್ರಾಣ ಭಾಸ್ಕರ ಘನಕರುಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ದೇವ ಜಯ ದೇವ ಜಯ ವರ ಗುರುಮೂರ್ತಿ ಜಯ ಜಯವೆಂದು ಬೆಳಗುವೆ ಬೆಳಗುವೆ ಮನದಾರ್ತಿ ಧ್ರುವ ಜ್ಯೋತಿಗೆ ಸ್ವಜ್ಯೋತಿ ಘನಪರಂಜ್ಯೋತಿ ನೇತಿ ನೇತಿಯೆಂಬುದು ನೋಡಲು ಘನಶ್ರುತಿ ಶ್ರುತಿಸ್ಮøತಿಗೆ ತಿಳಿಯ ನೀ ಅಪ್ರತಿ ಅತಿಸೂಕ್ಷ್ಮ ನಿನ್ನರಿವುದು ಸದ್ಗುರು ದಯಕೀರ್ತಿ 1 ರಾಜಿಸುತಿಹ ನಿಜ ವಿಶ್ವದ ನೀ ಬೀಜ ರಾಜತೇಜೋನಿಧಿ ಸಹಜೆ ಸಹಜ ಅಜ ಸುರವಂದ್ಯ ಸುಜನರಾತ್ಮದ ನೀಗ್ರೂಜ ರಾಜಮಹಾರಾಜ ಸದ್ಗುರು ಸುಭೋಜ 2 ಮಗುಟ ಸ್ವಾನುಭವಕೆ ನೀಟ ಜ್ಞಾನರಹಿತ ಕೂಟ ಘನ ದಯನೋಟ ಅನುವಾಗಿದೋರಿತು ನೀಟಕೆ ನಿಜನೀಟ ದೀನಮಹಿಪತಿಸ್ವಾಮಿ ನೀನೆ ಘನಪ್ರಗಟ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಪಾಂಡುರಂಗ ವಿಠಲ | ದಯದಿ ಪೊರೆ ಇವನಾ ಪ ಭಯ ಕೃತೂ ಭಯನಾಶ | ಹಯಮೊಗನೆ ಹರಿಯೇ ಅ.ಪ. ಹಿಂದಿನ ಸುಸಂಸ್ಕಾರ | ಛಂದದಲಿ ಅನುಭವಿಸಿಇಂದು ತವದಾಸ್ಯವನು | ಕಾಂಕ್ಷಿಸುವ ಹರಿಯೇಅಂದ ಪುಣ್ಯದರಾಶಿ | ಬಂದೊದಗಿತೋ ಎನೋಇಂದಿರಾ ನಂದದಾ | ನಂದವನೆ ಈಯೋ 1 ಕರ್ಮಾಕರ್ಮಗಳ | ಮರ್ಮವನೆ ತಿಳಿಸುತ್ತಧರ್ಮನಾಮಕ ನಿನ್ನ | ಪೇರ್ಮೆ ಸನ್ನಾಮಾಒಮ್ಮನದಿ ಸರ್ವದಾ | ಸುಸ್ಮರಣೆ ಈಯುವುದುದುಮ್ಮಾನಗಳ ಕಳೆದು | ಸಲಹಬೇಕಿವನಾ 2 ಪಂಚ ಭೇದ ಜ್ಞಾನ | ಸಂ ಚಿಂತನೆಯ ಕೊಟ್ಟುವಾಂಛಿತಾರ್ಥವನೀಡೋ | ಪಂಚ ಪಂಚಾತ್ಮಾಹೆಂಚು ಹಾಟಕದಿ ಸಮ | ಚಿಂತನೆಯು ಬರುತಿರಲಿಅಂಚೆವಾಹನ ಪಿತನೆ | ಸಂಚಿತಾಗಮ ಕಳೆಯೋ3 ಭೂರಿ ಭಕ್ತಿಗಳಾ 4 ಧೀವರರ ಆಶಿಷವು | ತೀವರಾಗಲಿ ಇವಗೆಮಾವಾರಿ ಪದಚಿಂತೆ | ಯಾವಾಗ್ಯೂ ಇರಲೀಕೇವಲಾನಂದಗಳು | ಭಾವದಲಿ ಮೈದೋರೆದೇವಗುರು ಗೋವಿಂದ | ವಿಠಲ ಪ್ರಾರ್ಥಿಸುವೆ 5
--------------
ಗುರುಗೋವಿಂದವಿಠಲರು
ಜಯ ಭಾಗೀರಥಿದೇವಿ ಜಯ ಜಾನ್ಹವಿ | ಭವ ಭಯನಿವಾರಿಣಿ ಸುಖಕಾರಣಿ ಪ ಪಟು ತ್ರಿವಿಕ್ರಮನ ಉಂಗುಟ ಸೋಂಕಲಾರ್ಭಟದಿ | ಸ್ಫುಟಿತ ಬ್ರಹ್ಮಾಂಡ ನಿಜಕಟಹದಲ್ಲುದಿಸಿ | ನೆಟನೆ ಪದುಮಜಪಾತ್ರ ತಟಕೆೃದು ತೀರ್ಥೆನಿಸಿ | ನಿಟಲಲೋಚನ ನಘನಜಟೆಗೆ ಬಂದು 1 ಕೆಲವು ಕಾಲಕೆ ಹಿಮಾಚಲದಿಂದ ಭಗೀರಥಗೆ | ಒಲಿದು ಕಾಶೀ ಪ್ರಯಾಗದಲಿ ಬಂದು | ಸಲೆಜಗವ ತಾರಿಸುತಲಿ ಮುಖ ಸಹಸ್ರದಿಂ | ಫಣಿ ನಿಲಯಕಿಳಿದೇ2 ಸ್ಮರಣೆಯಿಂದಘಹರಿಪೆ ದರುಶನದಿ ಗತಿಯೀವೆ | ನೆರೆ ಸ್ನಾನದಾ ಫಲವನರಿವರಾರು | ಗುರುಮಹೀಪತಿಜನುದ್ಧರಿಸು ಕರುಣದಲಿ | ಸಾಗರಪ್ರೀತೆ ಖ್ಯಾತೆ ಲೋಕಮಾತೆ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯ ಭೀಮಸೇನ ಪ. ಉದ್ದಂಡ ಕದನಪ್ರಚಂಡಅ.ಪ. ಕಿಮ್ಮೀರ ಬಕ ಹಿಡಿಂಬ ಕೀಚಕಧ್ವಂಸದುರ್ಮತವನಚ್ಛೇದೋತ್ತಂಸ 1 ಅನುಜ ಸೇನಾಸಹಿತ ಕಲಿಧಾರ್ತರಾಷ್ಟ್ರನ್ನದನುಜಗಜ ಪಂಚಾಸ್ಯನೆಂದೆನಿಸಿದ ಘನ್ನ 2 ದ್ರೌಪದೀಪ್ರಿಯ ಸಕಲವಿದ್ಯಾಪ್ರದೀಪಪಾಪಹರ ಹಯವದನಪದಕಂಜಮಧುಪ3
--------------
ವಾದಿರಾಜ
ಜಯ ಮಂಗಳಂ ಮಹಾ ಶುಭಮಂಗಳಂ ಶ್ರೀಯಕರಾನಂದ ಘನಚಿನ್ಮೂರ್ತಿಗೆ ಪ ಅನಿಮಿಷಾಕ್ಷಗ ಧರಮಹೀಗ ಸಂಭೋದ್ಬವಗ ಮುನಿಪಟು ಕ್ಷತ್ರಿ ಕುಲಸಂಹಾರಗ ಇನಕುಲೋದ್ಭವ ವಾಸುದೇವಶ್ರೀ ಬೌದ್ಧಗ ಘನತರದ ತುರಗ ಹರರಾವುತಂಗೆ 1 ಮರಮತ್ಸ್ಯ ಶ್ರೀಕಮಠ ಹಿರಣ್ಯಕ್ಷಮರ್ಧನಗೆ ಕೊರಳೊನಮೂಲಿ ವಾಮನದೇವಗೆ ಧರಿ ಭೂಸುರಗಿತ್ತು ಧಾಶರಥಿ ಶ್ರೀ ಹರಿಗೆ ಸಿರಿದಿಂಗಬರ ಕಲ್ಕಿ ಯವತಾರಗೆ 2 ಕೂರ್ಮ ವರಾಹನರಸಿಂಹಗೆ ಅಗವೈರಿಯನುಜ ಪರಶುರಾಮಗ ರುಘುನಾಥ ಕೃಷ್ಣ ಬೌದ್ದೇಶಕಲಿನಾಶಗ ಜಗದ್ಗುರು ಮಹಿಪತಿ ಸುತಪ್ರಿಯಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯ ಮಂಗಳೆಂದು ಪಾಡಿರೆ ಶ್ರೀರಂಗನಾಥಗೆ ಲಕ್ಷ್ಮೀರಂಗನಾಥಗೆ ಮಂಗಳಪುರಿ ಜಾಲ ಹಳ್ಳಿರಂಗ ನಿಲಯಗೆ ಬ್ಯಾಗೆ ಪ ಅಂಗನೆಯರು ಶೃಂಗಾರದಿ ಸಂಗೀತಪ್ರಿಯಗೆ ಮಂಗಳಾಂಗ ದೇವಗೆ ಮಾತಂಗವರದಗೆ ಬ್ಯಾಗೆ 1 ಇಂದಿರವರ ಮಂದರೋದ್ಧರ ನಂದಕುವರಗೆ ಹಿಂದಕೆ ಮುದಗಲ್ಲು ಪುರದಿ ಬಂದು ನಿಂದಗೆ ಬ್ಯಾಗೆ 2 ದಾರಿಯೊಳು ಉಪ್ಪಾರಜನರ ಸೇರಿಬಂದವಗೆಸಾರಿದವರ ಪೊರೆವ 'ಕಾರ್ಪರ ನಾರಶಿಂಹಗೆ' ಬ್ಯಾಗೆ 3
--------------
ಕಾರ್ಪರ ನರಹರಿದಾಸರು
ಜಯ ರಮಾದೇವಿ ಸಾಗರ ಕನ್ನಿಕೆ ಪ ಪದ್ಮ ಪದ್ಮಾಲಯೇ ಪದ್ಮದಳಲೋಚನೆ | ಪದ್ಮಪ್ರಿಯೆ ದಿವ್ಯ ಪದ್ಮವದನೆ | ಪದ್ಮವಕ್ಷೋಜಾತಿ ಪದ್ಮಕಲ ಶೋಭಿತೆ | ಪದ್ಮಾಸನಾದೆನುತ ಪದ್ಮಚರಣೆ 1 ಮಂಗಲಾತ್ಮಕ ನೀಲಭ್ರಂಗ ಕುಂತಲಶಶಿ ಪ- ತಂಗ ಸನ್ನಿಭ ಕೋಮಲಾಂಗಿ ವರದೆ || ಗಾಂಗೆಯ ವಸನ ಸರ್ವಾಂಗ ರತ್ನಾಭರಣೆ | ಅಂಗಜಾಜನನಿ ಶ್ರೀರಂಗಪ್ರಿಯೆ 2 ಸತತ ಜಗದುತ್ಪತೆ ಸ್ಥಿತಿಯಂತೆ ಕಾರಿಣೆ | ನುತಗುಣ ಮಹಿಮಾಯ ಶ್ರುತಿ ಪೂಜಿತೆ || ಪತಿತಪಾವನ ಮಹೀಪತಿನಂದನಿಷ್ಟ | ದೇ ವತಿ ಭಕ್ತ ಜನಸುಖದಿ ಮತಿದಾಯಿತೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯ ಸದ್ಗುರು ಮೂತಿ ದಯವುಳ್ಳ ನಿಮ್ಮ ದಯ ಕೀರ್ತಿ ಧ್ರುವ ದಯಗುಣದಲಿ ಬಲು ಉದಾರ ತ್ರೈಲೋಕ್ಯಕೆ ನೀನೆ ಆಧಾರ ಜಯ ಸದ್ಗುರು ಮಾಮನೋಹರ ಇಹಪರ ಸಹಕಾರ 1 ಮುನಿಜನರಿಗೆ ನೀ ಪ್ರತಿಪಾಲ ಸ್ವಾನುಭವದ ಸುಖದ ಕಲ್ಲೋಳ ಘನಗುರು ನೀನೆ ಕೃಪಾಲ ದೀನದಯಾಳ 2 ಜೀವದ ಸುಪ್ರಾಣ ಪರಮಾಮೃತದ ನಿಧಾನ ಹೊರಿಯೊ ನೀ ಕರುಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯಕೃಷ್ಣವೇಣಿ | ಜಗಪಾವನೀ | ಜಯಕರುಣಿ ಭಯಹರಿಣಿ ಭವತಾರಿಣಿ ಪ ಮಾಬಳೇಶ್ವರನ ಸುಜಟಾ ಭಾಗದಲಿ ಪದ್ಮ | ನಾಭನಂಶದಿ ಬಂದು ಶೋಭಿಸುತಲಿ | ಈ ಭುವನಜನರ ಮನದಾಭೀಷ್ಟಮಂ ಕೊಡಲು | ತಾ ಭರದಿ ನದಿರೂಪನಾಗಿ ಪ್ರವಹಿಸಿದೆ 1 ನಿನ್ನೆಡೆಗೆ ನಡೆತಂದು ನಿನ್ನ ಜಲ ವೀಕ್ಷಿಸುತ | ನಿನ್ನ ಘೋಷವ ಕೇಳಿ ತನ್ನ ಕರದಿ | ನಿನ್ನ ಸ್ಪರ್ಶನ ಅಚಮನ ಮಾರ್ಜನದಿಂದ | ತನುಮನೇಂದ್ರಿಯಗಳು ಪಾವನವಾದವು 2 ಪೊಡವಿಯೊಳಧಿಕ ತೀರ್ಥ ತಡಿಯಗ್ರಾಮವೇ ಕ್ಷೇತ್ರ | ಸುರರು | ಒಡಲೊಳಿಹ ಜಲಚರಗಳೊಡನೆ ಗತಿಸಾಧಕರು | ನುಡಿವ ಪಕ್ಷಿಗಳು ಸಲೆ ಗಿಡಮರಗಳು 3 ಸಾಗಿಸುವ ಕರ್ಮೇದ್ರಿ ತ್ಯಾಸದ್ಧರ್ಮದಿಂ | ಯೋಗ ಅಷ್ಟಾಂಗದಿಂ ಯಾಗದಿಂದ | ಭೋಗಿಸುವ ಪುಣ್ಯವನು ರಾಗದಿಂ ತೀರದಿಹ | ಯೋಗಿಜನಕೀವೆ ತಾನೀಗ ದಯದಿ 4 ಬಿಂದುಮಾತ್ರವೇ ಬೀಳಲೊಂದು ಕಾಯದಿ ಅಘದ | ವೃಂದ ನಾಶನವಹುದು ಮಿಂದಡವನ | ಛಂದಮಂ ಬಣ್ಣಿಸುವದಿಂದು ತಿಳಿಯದು ಎನುತ | ತಂದೆ ಮಹೀಪತಿ ಜ ಕರದ್ವಂದ್ವ ಮುಗಿಯೇ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯಜನನೀ ಶಾರದೆ ಜನನಮೃತಿಭಯಭಿದೆ ಪ. ನಯವಿದೆ ತ್ರಿಜಗನ್ಮಯೆ ವೀಣಾವಿನೋದೆ ಅ.ಪ. ಭಕ್ತಿಜ್ಞಾನ ಮಾನದೆ ಭಗವತ್ಪ್ರಾಪ್ತ ಪ್ರಸಾದೆ ಮುಕ್ತಿಶಕ್ತಿಪ್ರದೆ ನಿಜ ಭೃತ್ಯವತ್ಸಲೆ ಪ್ರಬುದ್ಧೆ 1 ವೇದಾರ್ಥತತ್ವಪ್ರಬೋಧೆ ಆದಿತೇಯಾನತಪದೆ ಶ್ರೀಧರೆ ಸದಾನಂದೆ ಸಾಧು ಸೌಭಾಗ್ಯನಿಧೆ 2 ಅನಘ ಲಕ್ಷುಮಿನಾರಾಯಣನ ಭಕ್ತ ಪ್ರಹ್ಲಾದ ಸನಕನುತೆ ಸನ್ನುತೆ ಘನಪಾಪಾಪಹ್ನುತೆ 3
--------------
ತುಪಾಕಿ ವೆಂಕಟರಮಣಾಚಾರ್ಯ