ಒಟ್ಟು 25998 ಕಡೆಗಳಲ್ಲಿ , 137 ದಾಸರು , 9262 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯೊ ಕರುಣಾಕರ ಕೃಪಾಲ ಶ್ರೀ ಗುರು ಎನ್ನ ಕಾಯೊ ದಯದಿಂದೆನ್ನ ಪರಮಪಾವನ ಧ್ರುವ ಹುಟ್ಟಿಸಿಹ್ಯ ಜೀವನ ಸೃಷ್ಟಿಯೊಳು ನಾ ನಿಮ್ಮ ದೃಷ್ಟಿಸಿ ನೋಡಲು ಎನ್ನ ಕಷ್ಟಪರಿಹಾರ ಶಿಷ್ಟಜನ ಪ್ರತಿಪಾಲ ದುಷ್ಟಜನ ಸಂಹಾರ ಎಷ್ಟೆಂದು ಪೊಗಳಲಯ್ಯ ಕೃಷ್ಣಕೃಪಾಲ 1 ಇನ್ನೊಂದು ಅರಿಯೆ ನಾ ಅನ್ಯಪಥÀವೆಂಬುದನು ನಿನ್ನ ಚರಣಕೆ ಪೂರ್ಣ ನಂಬಿಹ್ಯನು ಭಿನ್ನವಿಲ್ಲದೆ ಎನ್ನ ಚನ್ನಾಗಿ ಸಲಹಯ್ಯ ಧನ್ಯಗೈಸೊ ಪ್ರಾಣ ಚಿನ್ಮಯನೆ 2 ವಾಸನೆಯ ಪೂರಿಸೊ ವಿಶ್ವವ್ಯಾಪಕ ಎನ್ನ ಭಾಸ್ಕರಕೋಟಿ ಪ್ರಕಾಶ ಪೂರ್ಣ ಲೇಸು ಲೇಸಾದಿ ಪಾಲಿಸೊ ವಾಸುದೇವನೆ ದಾಸಾನುದಾಸ ನಿಜದಾಸ ಮಹಿಪತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕರುಣಾಕರನೆ ಕಡು ಪಾಪಿ ನಾನುನ್ಯಾಯವೆಂಬುದು ಎನ್ನೊಳೆಳ್ಳನಿತಿಲ್ಲ ಪ ಎಣ್ಣೆ ಕೊಪ್ಪರಿಗೆಯೊಳ್ಬಿದ್ದು ಸ್ತುತಿಸಿದವನಲ್ಲಚಿನ್ನಕಶಿಪು ಬಾಧೆಗೊಳಗಾದವನಲ್ಲಬಣ್ಣಗೆಟ್ಟಡವಿಯಲಿ ತಪಸು ಮಾಡಿದವನಲ್ಲಹೆಣ್ಣನೊಲ್ಲದೆ ನಿನ್ನ ಬಂಟನಾದವನಲ್ಲ 1 ಒಲಿದು ದಾನವನಿತ್ತ ವೈರಿಕುಲದವನಲ್ಲಬಲು ಭಕುತಿಯ ದಾಸಿ ಪುತ್ರ ನಾನಲ್ಲಕಲಹದಲಿ ಪಣೆಗೆ ಬಾಣವ ನೆಡಿಸಿದವನಲ್ಲಕಳವಳದಿ ಕರೆದ ಪಾಂಚಾಲಿ ನಾನಲ್ಲ 2 ಡಿಂಗರಿಗ ಮಾತ್ರ ನಾನಾಗಿಹೆನೆಂದು 3
--------------
ಕನಕದಾಸ
ಕಾಯೊ ಕರುಣಾಕರನೆ ನೀಯನ್ನಾ ಕಾಯೋ ಆನಾಥರಕ್ಷಕ ದಯಾಸಿಂಧೂ ಪ. ಕಾಯೊಯನ್ನನು ಕರವಿಡಿದು ಕೃಪೆಯಿಂದ ನೀಯನ್ನಾ ಕಾಯೊದೇವರದೇವ ಶ್ರೀ ವೆಂಕಟೇಶ್ವರನೆ ಕಾಯೊ ಅ.ಪ. ನೀನಲ್ಲದೆ ಅನ್ಯತ್ರ ತಾಯಿ ತಂದೆಗಳಿಲ್ಲಾ ನೀನಲ್ಲದೆ ಬಂಧುಬಳಗವೆನಗಿಲ್ಲಾ ನೀ ಯನ್ನ ಕಾಯೊ ಶ್ರೀ ವೆಂಕಟೇಶ್ವರನೆ 1 ತರುಳ ಕರಿಯಲು ಕಂಭದಿ ಬಂದು ಹಿರಣ್ಯಾಕ್ಷಕನ ಕರುಳ ತೆಗದು ವನಮಾಲೆ ಹಾಕಿ ನಿಂದೀ ನರಮೃಗರೂಪಿನಲಿ ಪ್ರಹ್ಲಾದಗೆ ವರವಿತ್ತೆ ನೀಯನ್ನ ಕಾಯೊ ಶ್ರೀ ವೆಂಕಟೇಶ್ವರನೆ 2 ಜಲದೊಳಗೆ ನೆಗಳೆಯು ಹಿಡಿದು ಎಳೆಯುತ್ತಿರೆ ಬಹುಬಾಧೆಬಡಿಸೆ ನಿಮ್ಮ ನೆನೆಯಲು ನಿಲ್ಲದೆ ಬಂದೊದಗಿನೆಗಳೆಯನು ಶೀಳ್ದು ಕರಿರಾಜಗೊಲಿದು ರಕ್ಷಿಸಿದೊ ಶ್ರೀ ವೆಂಕಟೇಶ್ವರನೆ 3 ದುರುಳದುಶ್ಯಾಸ ದ್ರೌಪತಿ ಸೀರೆಯನು ಸೆಳೆಯೆ ಹರಿಣಾಕ್ಷಿ ಸಭೆಯೊಳಗೆ ಕೃಷ್ಣಾಯೆಂದುವದರೆ ಪರಿಪರಿ ವಸ್ತ್ರವನು ಕೊಟ್ಟೆ ಅಭಿಮಾನವನು ಕಾಯ್ದೊ ದೇವರದೇವ ಶ್ರೀ ವೆಂಕಟೇಶ್ವರನೆ 4 ಶಂಖಚಕ್ರಧರ ನಿನ್ನ ಚರಣವನು ನಂಬಿದೆ ಪಕ್ಷಿವಾಹನಸ್ವಾಮಿ ಕರುಣಾನಿಧೆ ಹೆಳವನಕಟ್ಟೆಯೊಳು ನಿಂದು ಭಕ್ತರನ್ನೆಲ್ಲಾ ಕಾಯ್ದ ದೇವರದೇವ ಶ್ರೀ ವೆಂಕಟೇಶ್ವರನೆ 5
--------------
ಹೆಳವನಕಟ್ಟೆ ಗಿರಿಯಮ್ಮ
ಕಾಯೊ ಕರುಣಾನಂದ ಶ್ರೀಗುರು ಕೃಪಾನಿಧೆ ಕಾಯೊ ಕರುಣಿಸಿ ಎನ್ನ ಪೂರ್ಣ ನೀ ಕಾಯೊ ಪರಮದಯಾನಿಧೆ ಧ್ರುವ ತೊಡಿಸಿ ಕರುಣಾನಂದ ಕವಚವ ಇಡಿಸೊ ಭಗುತಿ ವೈರಾಗ್ಯವ ದೃಢಗೊಳಿಸುವ ಙÁ್ಞನಪೂರ್ಣ ನೀ ಕಡಿಸೊ ಕಾಮಕ್ರೋಧವ ನಡೆಸಿ ನಿತ್ಯವಿವೇಕ ಪಥದಲಿ ಕೂಡಿಸೊ ನಿಜಸುಬೋಧವ ಬಿಡಿಸೊ ಭವಭವ ಮೂಲದಿಂದಲಿ ಬಡಿಸೊ ಹರುಷಾನಂದವ 1 ಬಟ್ಟೆ ಕೊಟ್ಟು ಕಾಯೊ ಸತ್ಸಂಗವ ಮುಟ್ಟಿಮುದ್ರಿಸೊದೃಷ್ಟಾಂತವ ಸಟೆಯ ಮಾಡೊ ಅವಿದ್ಯವ ನಿಷ್ಠತನ ನೆಲೆಗೊಳಿಸಿ ಕಾಯೊ ನೀ ಇಟ್ಟು ಶಿರದಲಿ ಅಭಯವ 2 ಭಿನ್ನವಿಲ್ಲದೆ ನೋಡಿ ಎನ್ನನು ಧನ್ಯಗೈಸೊ ನೀ ಪ್ರಾಣವ ಕಣ್ದೆರಿಸಿ ಅಣುರೇಣುದಲಿ ಪೂರ್ಣಖೂನದೋರೊ ಸಾಕ್ಷಾತವ ಎನ್ನೊಳಗೆ ನಿಜಾನಂದ ಸುಖದೋರಿ ಪುಣ್ಯಗೈಸೊ ನೀ ಜೀವನ ಚಿಣ್ಣಕಿಂಕರ ದಾಸ ಮಹಿಪತಿ ರಕ್ಷಿಸೊ ಸಂತತವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕರುಣಾಬ್ಧಿ ಗುರು ಎನಗೆ ದಯವುಳ್ಳ ಸ್ವಾಮಿ ನೀನಹುದೊ ಜಗದೊಳಗೆ ಧ್ರುವ ಶಿರದಲಭಯವ ನೀಡಿ ಕರುಣದಯದಲಿ ನೋಡಿ ಹರುಷ ಮನವನು ಮಾಡಿ ದುರಿತಭವ ಈಡ್ಯಾಡಿ ಗುರುತ ನಿಜ ಮಾಡರಹು ನೀಡಿ ಪರಮ ಗತಿ ಇದರಿಡಿ ವರಕೃಪೆಯ ಮಾಡಿ 1 ಒಂದು ಪಥವನು ತಿಳಿಸಿ ದ್ವಂದ್ವ ಭೇದವನಳಿಸಿ ಕುಂದ ದೋಷವ ತೊಳಿಸಿ ಒಂದರೊಳು ನಿಲಿಸಿ ನೆಲೆಗೊಳಿಸಿ ಸಂದು ಜನ್ಮಗಳಳಿಸ್ಯಾನಂದ ಸುಖ ಹೊಳಿಸಿ 2 ಕರುಣಿಸೊ ಗುರು ಎನಗೆ ಶರಣ ಹೊಕ್ಕಿದೆ ನಿಮಗೆ ದೋರುದನುಭವ ಈಗೆ ಕರಗಿ ಮನವೆರಗುವ್ಹಾಂಗೆ ಸ್ಮರಣ ಸುಖ ಎದುರಿಡು ಬ್ಯಾಗೆ ತರಣೋಪಾಯದಲೆನೆಗೆ ಪೊರೆಯೊ ಮಹಿಪತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕರುಣಾಭಯ ಕೃದ್ಭಯ ನಾಶನ ಧ್ರುವ ಕಂದ ಪ್ರಲ್ಹಾದಗಾಗಿ ಸಂಧಿಸೊದಗಿನಿಂತು ಬಂದು ರಕ್ಷಿಸಿದೆ ಪ್ರಾಣ ಚಂದವಾಗಿ ನೀ 1 ಕರಿಯ ಮೊರೆಯ ಕೇಳಿ ನೆರಯ ಬಿಡಿಸಿದೆ ಎಂದು ಮೊರೆಯ ಹೊಕ್ಕೆನು ನಿಮಗೆ ಹರಿಹರಿಯೆಂದು 2 ದ್ರೌಪದಿಯ ಅಭಿಮಾನ ಕೃಪೆಯಿಂದ ನೀ ಪೂರ್ಣ ಉಪಾಯದಲಿಗಾಯ್ದ ಅಪಾರ ಮಹಿಮ 3 ಸ್ಮರಿಸಿದಾಕ್ಷಣ ಬಂದು ಕರುಣದಿಂದನ್ಯರಿಗೆ ಪರಿಪರಿಯಿಂದ್ಹೊರೆದೆ ವರಮುನಿಗಳ 4 ಶರಣು ಹೊಕ್ಕೇನು ನಿಮ್ಮ ತರಳ ಮಹಿಪತಿ ಪ್ರಾಣ ಹೊರೆದು ರಕ್ಷಿಸು ಎನ್ನ ಪರಮಪಾವನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕಾಯೊ ಕರುಣಕಾರ ಗೋವಿಂದ ಕಾಯೊ ನಮ್ಮ ಕೃಪಾಸಿಂಧು ಹರಿ ಮುಕುಂದ ಧ್ರುವ ಬೊಮ್ಮನಾ ಪಡೆದ ಪರಾವರ ದೊರಿಯೆ ಸಮ್ಯಜ್ಞಾನವಿತ್ತು ಕಾಯೊ ಮುರಾರಿಯೆ ನಿಮ್ಮ ವಿನಾ ಅನ್ಯಪಥವ ನಾನರಿಯೆ ನಮ್ಮ ದೈವ ನೀನಹುದೊ ನರಹರಿಯೆ 1 ದುರಿತ ಪರಿಹರಿಸೊ ಭಾವ ಭಕ್ತಿಯೊಳೂ ಮನಪೂರ್ಣವಿರಿಸೊ ಕಾವಕರುಣನೆ ನಿಮ್ಮ ದಯ ಬೀರಿಸೊ ದಿವಾರಾತ್ರೆಯಲಿ ನಿಮ್ಮ ಸ್ಮರಣಿಲಿರಿಸೊ 2 ಕಾಯೊ ಕಾಯೊ ಕೊಟ್ಟು ನಿಮ್ಮ ನಿಜಧ್ಯಾನವ ಕಾಯೊ ಕರುಣಿಸಿ ಎನ್ನ ಜೀವನದ ಕಾಯೊ ದಯದಿಂದ ಎನ್ನ ಅಭಿಮಾನ ಕಾಯೊ ನಿಜ ದಾಸ ಮಹಿಪತಿ ಪ್ರಾಣವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕಾಯೊ ಕಾಮಿತ ಫಲದ ಕಾಯೊ ಕಾಯೊ ಪ ಕಾಯೊ ಕಾಯೊ ಎನ್ನ ಕಾಯಜನಯ್ಯನೆ ಕಾಯದಿದ್ದರೆನ್ನ ಕಾವವರಾರೊ ಅ.ಪ ಎಂದೆಂದಿನ ಕರ್ಮಗಳನೆಣಿಸುತಲಿ ಕಂದಿಸಿ ಕುಂದಿಸಿ ಬಂಧಿಪರೇನೋ 1 ತಾಳಲಾರೆ ಈ ಕಾಲನ ಬಾಧೆಯು ಬೇಳುವೆ ನಿನ್ನಯ ಕಾಲಿಗೆ ಸ್ವಾಮಿ 2 ಆಲಸ ಮಾಡದೆ ಆರ್ತಿಗಳೋಡಿಸಿ ಪಾಲಿಪುದೆನ್ನನು ಪಾವನ ಮೂರ್ತೆ3 ಮಾಡಿದ ಪಾಪಗಳೋಡಿಸಿ ಸುಖದಿಂ ದಾಡಿಸು ಕಣ್ಣಿಗೆ ಕಾಣಿಸಿಕೊಂಡು 4 ವಾಸುದೇವವಿಟ್ಠಲ ನೀ ಎನಗಿನ್ನು ವಾಸಿ ಮಾಡಿಸಿ ಕೀರ್ತಿಯ ಪಡೆಯೊ 5
--------------
ವ್ಯಾಸತತ್ವಜ್ಞದಾಸರು
ಕಾಯೊ ಕಾಯೊ ಗುರು ವಿಜಯರಾಯಕಾಯೊ ಕಾಯೊ ವರವೀಯೊ ವಿಜಯ ಗುರುರಾಯ ನೀನಲ್ಲದೆ ಉಪಾಯವೆ ಯಿಲ್ಲ ಪ ಪರಿ ಪರಿ ಥರವೆ 1 ಪಾಪಗಳೆಣಿಸದೆ ಪಾವನ ಮಾಳ್ಪದುಶ್ರೀಪತಿ ಪಡೆದ ಸುರಾಪಗದಂತೆ 2 ದುರಿತ 3 ಮಾಳ್ಪದು ನೀ ಕರಿಸದೆ ಬಲುವ್ಯಾಕುಲನಾಗಿಹೆ ನೀ ಕರುಣದಲಿ 4 ಪರಿಹರಿಸಲಿ ಸಲ್ಲ ಕರವಿಡಿ ಬ್ಯಾಗನೆಗುರುವೆ ನಿಮ್ಮಯ ಚರಣ ಸೇವಕನ 5 ನೀನಾಳುವರೊಳು ಈ ನರಮೂರ್ಖನುಏನು ಅರಿಯೆ ಬಲು ದೀನವಾಗಿಹನೊ 6 ಆಲಸ ತಾಳದು ಪಾಲಿಸು ವೇಣು ಗೋ- ಪಾಲ ವಿಠಲನ ಆಳು ಕೃಪಾಳೊ 7
--------------
ವೇಣುಗೋಪಾಲದಾಸರು
ಕಾಯೊ ಕಾಯೊ ಜಿತಕಾಯ ಗುರು ಬಾದ ರಾಯಣ ತತ್ವಜ್ಞರಾಯ ಪ ನಾ ಯಾರಿಗೆ ಬಿನ್ನೈಪೆ | ಹೇಯಸಂಸಾರದ ಎರಡೊಂದು ಮಠದಲಿ ಧರಿಸಿ ತೂರ್ಯಾಶ್ರಮ ಸಿರಿಯರಸನ ದಿವ್ಯ ಮೂರ್ತಿಗಳ ಕರದಿಂದ ಪೂಜಿಸಿ | ಮರುತ ದೇವನ ಮತ ಪರಮಾನಂದವೆಂದು ಧರೆಗೆ ಬೀರಿದ ಕರುಣಿ 1 ಜ್ಷಾನಿಗಳರಹುವ | ವಾಣಿಯಿಂದಲಿ ದೇ ಮೌನಿವರಿಯ ಎನ್ನ | ಹೀನಪಾತಕವೆಂಬ ಕಾನನ ದಹಿಸೆಂದು | ಸಾನುರಾಗದಿ ನೋಡಿ 2 ಭೂಸುರ ಪರಿಪಾಲ | ಶ್ರೀ ಶಾಮಸುಂದರನ ಲೇಸಾಗಿ ಒಲಿಸುತಲಿ ಕಿಟಜದಲಿ ಭಾಸುರ ಘನವೇಣಿ | ಭೇಶಪುರದಿ ನೆಲಸಿ ದಾಸರ ಮನದಭಿಲಾಷೆ ನೀಡುವ ದಾನಿ 3
--------------
ಶಾಮಸುಂದರ ವಿಠಲ
ಕಾಯೊ ಕಾಯೋ | ಗುರುವರ್ಯ | ಕಾಯೊ ಕಾಯೋ ಪ ಕಾಯೊ ಕಾಯೊ ಗುರುವರ್ಯ ಪರಮ ಪ್ರಿಯಜೀಯ ನಿನ್ನಯ ಪಾದಕೆರಗುವೆನಯ್ಯಾ ಅ.ಪ. ಒಂದರಿತವನಲ್ಲ | ಕಂದನು ಎಣಿಸದೆಬಂದು ಸಲಹೊ | ತಂದೆ ಮುದ್ದು ಮೋಹನ್ನ 1 ಹಿಂದಿನ ಸುಕೃತದಿ | ಬಂದು ಜನಿಸಿದೆನಂದ ಮುನಿಯ ಮತ | ಸಿಂಧುವಿನಲ್ಲಿ 2 ಇಂದಾದರು ತವ | ದ್ವಂದ್ವಪದವ ಮನಮಂದಿರದಲಿ ತೋರಿ | ದಂದುಗ ಬಿಡಿಸೋ 3 ಎಂದಾಗುದೊ ತಂದೆ | ಇಂದಿರೇಶ ಪದದ್ವಂದ್ವ ಸಂದರ್ಶನ | ಸಂಧಿಸೊ ಬೇಗನೆ 4 ತಂದೆ ನಿನ್ನಲಿ ಗುರುಗೋ | ವಿಂದ ವಿಠಲನಅಂದ ಮೂರುತಿಯನು | ಛಂದದಿ ತೋರೊ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾಯೊ ಬಾರೊ ಹರಿಯೆ ಕರುಣಾ ಪಯೋಂಬುಧಿ ಪ. ಕಾಯೊ ಬಾರೊ ಕರುಣಾಂಬುಧಿ ಕಮಲದ- ಳಾಯತ ನೇತ್ರ ರಸಾಯನ ಸುರಿವುತ ಅ.ಪ. ಸಿಲುಕಿ ಬಾಧೆಗೊಂಡು ಬಹು ಬೆದರುವ ದಾಸನ ಕಾದುಗೊಳ್ಳು ಕಂಬ್ವರಿಗದಾಬ್ಜಧರ ಮಾಧವ ಮಧುಮಥನ ಮನದಿ ವಿನೋದಿಸುವ ಕಥನ ಶ್ರೀ ಪದಾಬ್ಜಾಮೋದಯುಗ ಸಾಸ್ವಾದನಾತ್ಮಕ ವಿನೋದ ನಲಿವುತ 1 ಕತ್ತಲೆ ಮುಸುಕಿರುವ ಸಮಯದಿ ಸುತ್ತ ವ್ಯಾಘ್ರವಿರುವ ವನದಲಿ ಸತ್ವಹೀನವಾದೆತ್ತಿನ ಕೆಡಹುವದುತ್ತಮವೆ ಪುರುಷೋತ್ತಮ ನಿನ್ನಯ ತತ್ವಮಾರ್ಗ ತಿಳಿಸಿ ತ್ರಿಕರಣವೆತ್ತಿ ಬೋಧೆಗೊಳಿಸಿ ಜನೋತ್ತಮನೆನಿಸುತ 2 ಇಂದಿರೇಶ ನಿನ್ನ ಚರಣವನೆಂದಿಗು ನಂಬಿದನ ಬಂಧ ಬಿಡಿಸಿ ಕೃಪೆಯಿಂದ ಪೊರೆವನೆಂಬಂದಕಪಾಯವ ಕರುಣಾಸಿಂಧು ನಿನ್ನ ಕೀರ್ತಿ ಮನೋಗತ ಸಂದಣಗೊಳಿಸುತ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಯೊ ಸುಗುಣ ಮಣಿಯೆ ಪ ಪ್ರೀಯ ಮುರಾರಿ ವಿನಾಯಕ ಸೋದರ ||ಅ|| ಅಘ ಪಾವನಮೂರ್ತಿ ಶರಣರ ರಕ್ಷಕ 1 ಕುಂದ ಕುಂದಕುಟ್ಮಲಪದನಾನಂದಿಧ್ವಜ ಸುತ ಸುಂದರ ಮೂರುತಿ | ಇಂದುವದನ ಮುನಿವೃಂದ ವಂದಿತ ಗುಹ 2 ಮಯೂರ ಧ್ವಜಾ | ಕ್ಲೇಶದಿ ನರಳುವ ದಾಸರ ರಕ್ಷ ಸ-ರ್ವೇಶಕರಜ ನಿರ್ದೋಷಿ ಸುಬ್ರಹ್ಮಣ್ಯ 3
--------------
ಬೆಳ್ಳೆ ದಾಸಪ್ಪಯ್ಯ
ಕಾಯೊನೀನೆ ಕರುಣದಿ ಪ ರಾಮರಾಮಯೆಂದು ಪೊಗಳುವನು ಮಹಾರಾಜ ಸಾರ್ವಭೌಮ ಪೂರ್ಣ ಕಾಮನೆ ದಶರಥಾವನೀಶ ಕುಮಾರ 1 ದೇವದೇವನೆ ಕೃಪಾವಲೋಕನದಿ ದೀನಜನರ ನೋಡೊ ನೀದಯಮಾಡೊ ನೀಡೋಯನ್ನದುರಿ- ಜಯಜಯ ಪ್ರಭೋ ಭಂಜನ ಜಗ ಜ್ಜೀವನ ನತಜನ ಸಂಜೀವನಸು- ಶುಭ ಕುಶೀಲವರತಾತ ಸುಪ್ರೀತ2 ಸರಿಸಿಜೋದ್ಭವಾದ್ಯಮರನಾಯಕ ಸಾಧುರಕ್ಷಸ್ಸದ್ಧರ್ಮ ಪಾಲಕ ಮನುಜವೇಷ ದುರ್ಜನ ಕಾಲ ಶರಧಿ ಸೇತು ಬಂಧನ ಕಂಜೇಕ್ಷಣ ಮಾಂ ಪಾಹಿ ರಘುವೀರ 3
--------------
ಗುರುರಾಮವಿಠಲ
ಕಾಯೋ ಕರುಣ ಕೃಪೆಯಿಂದ ಹರಿ ಮುಕುಂದ ಧ್ರುವ ಕರುಣಾನಂದದ ಸಾಗರ ಕರಿವರ ಶರಣಾಗತಜನರ ಮಂದಾರ ಪರಮ ಉದ್ಧಾರ ಸುರ ಸಂಸಾರಾಯದಾಗರ ಪರಾತ್ಪರ ತರಣೋಪಾಯದಾಧಾರ 1 ಅನಾಥ ಜನರಾಶ್ರಯ ನೀನೆ ನಿಶ್ಚಯ ಅನುಭವಾನಂದಾ ಹೃದಯ ಘನಮಯ ದಿನಕರಕೋಟಿ ಪ್ರಭೆಯೆ ಜನವನಲಿಹ್ಯ ಮುನಿಜನರ ಹೃದಯ ಅನುದಿನದಲಕ್ಷಯ 2 ವಿಹಿತವಿಚಾರದ ವಿವರ ಈಹ್ಯಶ್ರೀಧರ ಸ್ವಹಿತ ಸುಖದ ಸುಸಾರ ಬಾಹ್ಯಾಂತರ ಮಹಿಮೆ ನಿನ್ನದು ಅಪಾರ ಮಹೇಶ್ವರ ಇಹ್ಯ ಪರದ ದಾತಾರ ಮಹಿಪತಿ ಸಹಕಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು