ಒಟ್ಟು 3196 ಕಡೆಗಳಲ್ಲಿ , 112 ದಾಸರು , 2367 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ವಾಗತವು ಸ್ವಾಗತವು | ಯತಿವರ್ಯರೇಯೋಗೀಶ ಶ್ರೀಕೃಷ್ಣ | ಮೂತ್ರ್ಯುಪಾಸಕರೇ ಪ ವಿಶ್ವಭಿಧರಂತಸ್ಥ | ವಿಶ್ವರೂಪಿಯ ಹರಿಯವಿಶ್ವಸರ್ಜನ ಸ್ಥಿತೀ | ವಿಶ್ವಸಂಹರವಾ |ವಿಶ್ವತೊಮುಖವಾಗಿ | ಗುಣ ಕ್ರಿಯವ ಕೊಂಡಾಡೆವಿಶ್ವೇಶ ತೀರ್ಥರೆಂದುರು | ಕೀರ್ತಿಯುಕ್ತರೇ 1 ಬೋಧ | ಸಿದ್ಧ ಪಡಿಸಿದರೇ 2 ಶರಣ ಜನರಭಿಲಾಷೆ | ನಿರುತ ಪಾಲಿಸಿ ಪೊರೆವಸರಳ ಹೃದಯರೆ ನಿಮ್ಮ | ಚರಣದ್ವಂದ್ವಗಳಾ |ವರ ರಜವ ಶಿರದಲ್ಲಿ | ಧರಿಸುತ್ತ ಧನ್ಯನೆಹೆಮರಳಿ ಮಮಕುಲವೆಲ್ಲ | ಉದ್ಧಾರವಾಯ್ತು 3 ಕಾಲ | ಸೀಮೆ ಮೀರಿದ ಸಮಯನೇಮ ಮೀರದೆ ವೈಶ್ವ | ಹೋಮಾದಿ ಶೇಷಾ |ಪ್ರೇಮದಿಂ ವಿದ್ಯಾರ್ಥಿ | ಸ್ತೋಮ ಕುಣಿಸುತ ನಿತ್ಯಸಾಮ ಸನ್ನುತನ ನಿ | ಷ್ಕಾಮ ಭಜಿಸುವರೇ 4 ಕಾಣ್ವೋಪ ನಿಷದರ್ಥ | ಕನ್ನಡ ಸುಪದ್ಯದಲಿಇನ್ನು ರಚಿಸಿರ್ಪುದಕೆ | ಮುನ್ನುಡಿಯನಿತ್ತೂ |ಅನ್ನಂತ ಗುಣ ಗುರೂ | ಗೋವಿಂದ ವಿಠ್ಠಲನನನ್ನೆಯಿಂ ಭಜಿಸೆ ಪ್ರ | ಸನ್ನ ಮಾರ್ಗದರೇ 5
--------------
ಗುರುಗೋವಿಂದವಿಠಲರು
ಸ್ವಾಗತವು ಸ್ವಾಗತವು ಯೋಗಿವರ್ಯರಿಗೆ ||ವಿಶ್ವೇಶ ತೀರ್ಥ ಶ್ರೀ ವಿದ್ಯ ಮಾನ್ಯರಿಗೇ ಪ ಪ್ರೊದಟೂರು ಜನನಿಮ್ಮ | ಮೋದಮಯ ಆಗಮಕೆಆದರದಿ ಕಾದಿಹರು | ವೇದ ಘೋಷಿಸುತ |ಹೇದಯಾ ಪರಿಪೂರ್ಣ | ಸಾದುಗಳೆ ನಮಿಸುವೆವುಮೋದ ಪ್ರಮೋದ ಗುಣ | ಬೋಧಿಪುದು ನಮಗೇ 1 ಸಿರಿ ಮೂರ್ತಿ | ಗುರುರಾಘವೇಂದ್ರಾ |ವರಸು ಬೃಂದಾವನವ | ಸ್ಥಿರ ಪಡಿಸಿ ನಿಮ್ಮಾಮೃತಕರದಿಂದಲಿಂದೀಗ | ವರ ಮಹೂರ್ತದಲೀ 2 ವತ್ಸರವು ಆನಂದ | ವೈಶಾಖ ಸ್ಥಿತ ದಶಮಿವಾತ್ಸಲ್ಯ ಯತಿಗಳು | ಸುಸ್ಥಿರವು ಆಗೀ |ವತ್ಸಾರಿ ಹರಿಭೃತ್ಯ | ವತ್ಸಲತಯಿಂನಿಂದುಸುಸ್ಥಿರವು ಆಗಿಹುದು | ಭೃತ್ಯರಿಗೆ ವರದಾ 3 ಪತಿ ಮಹಿಮೆ | ಈಂಟಿ ಮುದ ಹೊಂದೇ 4 ಪಾದ | ಪಾಂಸುಗಳ ಧರಿಸೀಕೇವಲಾನಂದಮಯ | ಭಾವದೊಳು ಇಹೆವುಗುರುಗೋವಿಂದ ವಿಠಲ ಪವ ತಾವರ್ಯಾ ಶ್ರೀತರೇ 5
--------------
ಗುರುಗೋವಿಂದವಿಠಲರು
ಸ್ವಾಮಿ ನೀನಹುದೋ ಶ್ರೀಗುರು ಸಾರ್ವಭೌಮ ನೇಮದಿಂದಲಿ ಹೊರೆವ ದಯಗುಣನಿಸ್ಸೀಮ ಧ್ರುವ ಜಗತ್ರಯಕ ಜೀವಭಗತ ಜನಕಾವ ಸುಗಮ ಸುಪಥವೀವ ಸುಗುಣ ಶ್ರೀದೇವ 1 ದಾತ ದೀನದಯಾಳು ನೀನಹುದು ಶ್ರೀನಾಥ2 ನಿಜದಾಸರ ಪಕ್ಷ ಸುಜನರ ಸಂರಕ್ಷ ಗಜವರ ಸಮೋಕ್ಷ ಭಜಕರಿಗೆ ಸುಭಿಕ್ಷ 3 ತೇಜೋಮಯ ಸಾಂದ್ರ ನಿಜಸುಖ ಸಮುದ್ರ ರಾಜಾಧಿರಾಜ ಮಹಾ ರಾಜರಾಜೇಂದ್ರ 4 ಶರಣಜನಪಾಲ ಸಿರಿಯ ಸುಖಲೋಲ ತಗಳ ಮಹಿಪತಿ ಸ್ವಾಮಿ ನೀನಹುದೊ ಕೃಪಾಲ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ವೆಂಕಟರಮಣ ಭೂಮಿಪಾಲಕ ದೇವ ಸಂಜೀವ ಪ ಸುರರು ಅಸುರರೆಲ್ಲ ಶರಧಿಯ ಮಥಿಸಲು ಸಿರಿಯು ಜನಿಸಿ ಬಂದು ಹರಿಯ ಸೇರಿದಳು 1 ಸತಿ ಕುಸುಮಮಾಲೆಯನು ಅತಿ ಹರುಷದಿ ಜಗತ್ಪತಿಗೆಯಿಕ್ಕಿದಳು 2 ವಾರಿಧಿಯಾಕ್ಷಣ ಧಾರೆಯನೆರೆಯಲು ವಾರಿಜಾಂಬಕ ಲಕ್ಷ್ಮಿ ಒಡನೆ ನಿಂದಿರಲು 3 ಫಣ್ಭಿಹ್ತ್ರ1ಸೆಮಣಿಯೊಳು ರಮಣಿಯನೊಡಗೊಂಡು ಗುಣನಿಧಿಯು ಒಪ್ಪಿರಲು ತರುಣಿಯರೆಲ್ಲ 4 ಪಚ್ಚವ ಧರಿಸಿ ನವ ಸ್ವಚ್ಛವಾಗಿಯೆ ತುಳಿದು ಅಚ್ಯುತ ಮಹಾಲಕ್ಷ್ಮಿಗಚ್ಚಬೇಕೆನುತ 5 ಸಣ್ಣ ಮಲ್ಲಿಗೆ ಎಣ್ಣೆ ಬಣ್ಣವಾದರಿಸಿನವ ಪುಣ್ಯವಂತೆಗೆ ಕೈಗರ್ಣವ ಕೊಡಲು 6 ಸಿರಿ ತನ್ನ ತಲೆಗೆ ಪ್ರೋಕ್ಷಿಸಿಕೊಳಲು ಹರಿಯು ಮೆಚ್ಚಿದನು 7 ಗಟ್ಟಿಯಾದರಿಸಿನವ ಬಟ್ಟಲೆಣ್ಣೆಯಗೂಡಿ ಮುಟ್ಟಲಂಜಿಯೆ ನಿಲಲು ಸೃಷ್ಟಿಪಾಲಕನ 8 ಅಂಗೈಯ ಅರಿಸಿಣವ ಮುಂಗೈಗೆ ಒರಸುತ್ತ ರಂಗನ ಸಿರಿಮೊಗವ ಕಂಗಳಿಂದೀಕ್ಷಿಸುತ 9 ಅಭಯ ಹಸ್ತವನಿತ್ತ ತ್ರಿಭುವನದೊಡೆಯನು ಅಬುಜಲೋಚನೆ ಮುಖಾಂಬುಜಕೆ ತಿಮುರಿದಳು 10 ಸತಿ ಕೈಯ ಅರಿಶಿಣವ ಪತಿಯಾದಿಕೇಶವನ ನುತಿಸಿ ಊರಿದಳು 11 ಸಿರಿಯೆನೆತ್ತಿದ ಕೈಯ ಹರಿ ತಾನು ತೋರಿಸಲು ಸಿರಿ ನಾರಾಯಣ ಎಂದು ಅರಿಶಿಣವ ತಿಮುರೆ 12 ಶಂಖವ ಧರಿಸಿದ ಪಂಕಜಾಕ್ಷನೆ ವಿಷ್ಣು ವೆಂಕಟೇಶನ ಕರಪಂಕಜಕೆ ತಿಮುರೆ 13 ಕದನದೊಳ್ ಖಳರನು ಸದೆದು ಮರ್ದಿಸಿ ಗೆಲಿದು ಮಧುಸೂದನ ಶ್ರೀವತ್ಸದೆದೆಯ ತೋರೆನುತ 14 ಚಕ್ರವ ಪಿಡಿದು ಪರಾಕ್ರಮಿಯೆನಿಸಿಯೇ ಅಕ್ರೂರಗೊಲಿದ ತ್ರಿವಿಕ್ರಮಗೆ ತಿಮುರೆ 15 ವಾಮನನನಾಗೆ ಶ್ರಮವನು ಪಟ್ಟೆನುತ ಭೂಮಿಯ ಅಳೆದ ಪಾದವಿತ್ತಲು ತಾರೆನುತ16 ಕಾದಲನು ಕಾಣುತ್ತ ಪಾದವನಿತ್ತನು ಶ್ರೀಧರನೆನುತಲಿ ಅರಸಿನವ ತಿಮುರೆ 17 ವಾಮಪಾದವ ಕಂಡು ಭಾಮಿನಿ ತಾರೆನೆಲು ಸೋಮಸನ್ನಿಭ ಹೃಷಿಕೇಶ ತಾನಿತ್ತ 18 ಪದ್ಮಬÁಂಧವ ತೇಜ ಪದ್ಮಸಂಭವ ಪೂಜ ಪದ್ಮನಾಭಗೆ ಪದ್ಮಗಂಧಿ ತಾ ತಿಮುರೆ 19 ಆ ಮಹಾ ನಾಮದ ದಾಮೋದರನ ಕಂಡು ಭಾವೆ ಮಹಾಲಕ್ಷುಮಿ ವೀಳ್ಯವ ಕೊಡಲು 20 ವಾಸುದೇವನು ತನ್ನ ಅರಸಿ ಮಾಲಕ್ಷ್ಮಿಗೆ ಪೂಸಿದನರಿಸಿನದ ಎಣ್ಣೆಯ ಮೊಗಕೆ 21 ಪಂಕಜಾಕ್ಷನ ಕಂಡು ಕಂಕಣದ ಹಸ್ತವನು ಕುಂಕುಮದೆಣ್ಣೆಯ ಸಂಕರ್ಷಣ ತಿಮುರೆ 22 ಬುದ್ಧಿವಂತೆಯ ಎಡದ ಮುದ್ದು ಹಸ್ತವ ನೋಡಿ ಉದ್ಧರಿಸಿ ನವ ಪ್ರದ್ಯುಮ್ನ ನಗುತ 23 ಅನಿರುದ್ಧ ನಗುತಲೆ ಘನಕುಚಮಂಡಲಕೆ ಅರಿಸಿನವ ತಿಮುರೆ 24 ಪುರುಷರೊಳು ಉತ್ತಮನು ಹರುಷವನು ತಾಳಿಯೆ ಅರಸಿ ಮಹಾಲಕ್ಷುಮಿಗೆ ಅರಿಸಿನವ ತಿಮುರೆ 25 ಅಧೋಕ್ಷಜನು ತನ್ನ ತುದಿವೆರಳ ಅರಿಸಿನವ ಪದುಮನೇತ್ರೆಯ ಪದದೊಳಗೆ ಮಿಡಿದಿರ್ದ 26 ನಾರಸಿಂಹನು ಸತಿಯ ಮೋರೆಯಿಂದಾರಭ್ಯ ಓರಣವಾಗಿಯೇ ಅರಿಸಿನವ ತಿಮುರೆ 27 ನೆಚ್ಚಿಯೆ ಹರಿ ತಾನು ಅಚ್ಚ ಕರ್ಪೂರದೆಲೆಯ ಅಚ್ಯುತ ಕೊಡಲು 28 ಮನದಿ ಲಜ್ಜಿತೆಯಾಗಿ ಘನಮಹಿಮ ಮುನಿವಂದ್ಯ ತನಗೆ ವಲ್ಲಭ ನಿಜನಾದನೆನುತ 29 ಆ ಪರಮಹಿಮನು ರೂಪಸಂಪನ್ನ ದ- ಯಾಪರನಾಗಿಯೆ ಉಪೇಂದ್ರ ತಾನೊಲಿದು 30 ಹರಯೆಂಬ ನಾಮದಿ ಹರದಿ ಮಾಲಕ್ಷ್ಮಿಯ ವರಸಿದ ಶ್ರೀಹರಿಯು ಹರದಿಯರ್ಪೊಗಳೆ31 ಬೆಟ್ಟದೊಡೆಯನೆನಿಸಿ ದೃಷ್ಟಿಗೋಚರವಾದ ಶ್ರೀಕೃಷ್ಣ ಮಾಲಕ್ಷುಮಿಗೆ ಆರತಿಯ ತಿಮುರೆ 32 ವರಮಹಾಲಕ್ಷುಮಿಗೆ ವರಾಹತಿಮ್ಮಪ್ಪಗೆ ಅರಸಿನದೆಣ್ಣೆಯ ರಚಿಸಿದ ಪರಿಯು 33
--------------
ವರಹತಿಮ್ಮಪ್ಪ
ಹಗಲು ಸಮಯದಲಿ ಇರುಳು ನೋಡಿದ ಬಾವಿ ಗುರುಳಬಹುದೇ ನರರು ಈ ಜಗದೊಳು ಪ ಮರುಳು ಮಾಡುವ ಭವದುರುಳು ಬಂಧನದೊಳು ಸಿಗಲು ಬಯಸಬಹುದೇ ಅವಿವೇಕದಿ ಅ.ಪ ಅಡಿ ಐದು ಉದ್ದದ ಒಡಕು ಒಂಭತ್ತಿನ ಕಡು ದುಃಖ ದೇಹಕೆ ಸಿಡಿವುದು ತರವೆ ಪೊಡವೀಶನಾದರೂ ಮಡಿಯಲು ನಿನ್ನಯ ಸಡಗರವೆಲ್ಲವು ಹಿಡಿಯೊಳಗಲ್ಲವೇ 1 ಅನುದಿನದಲಿ ನೀನು ಹಣ ಹಣವೆನ್ನುತ ಕುಣಿಯುವುದನು ನೋಡಿ ಅಣಕಿಸುವರು ನಿನ್ನ ತನುಮನ ಕ್ಲೇಶವನನುಭವಿಸುತ ಸದಾ ಹಣವಗಳಿಸಲದನುಣುವರು ಬೇರಿಹರು 2 ಗೃಹಿಣಿ ಗೃಹಿಗಳೆಲ್ಲ ಕುಹಕವೆಂದರಿಯದೆ ಗೃಹವು ಎನ್ನದು ಎಂದು ಗೃಹಿಣಿ ಎನ್ನವಳೆಂದು ಬಹುವಿಧ ವೈಭವವೆನಗಿಹುದೆನ್ನುವ ಮಹದಾಗ್ರವನ್ನು ಸಹಿಸುವನೇ ಹರಿ 3 ಸಿರಿ ಸಂತತ ಗಳಿಸಲು ಅಂತಕ ತನುವನು ಸೆಳೆಯಲು ಗಳಿಸಿದ ಕಂತೆಗಳೆಲ್ಲವೂ ಎಂತು ನಿಲ್ಲಿಸುವುವು ಚಿಂತಿಸಿ ಮನದೊಳು ಹರಿಯನು ನಿಲಿಸೊ 4 ಊಹಿಸುತೆಲ್ಲವ ಈ ಮಹಿಯೊಳಗಿನ ಮೋಹವ ಜರಿಯುತ ಪಾಹಿ ಎಂದು ಆ ಮಹಾಮಹಿಮ ಪ್ರಸನ್ನ ಹರಿಯ ದಿವ್ಯ ಸ್ನೇಹಸುಜಲದ ಪ್ರವಾಹದೊಳಗೆ ನಲಿಯೊ 5
--------------
ವಿದ್ಯಾಪ್ರಸನ್ನತೀರ್ಥರು
ಹಚ್ಚಡವಗೆಯ ಬೇಕಮ್ಮಾ | ಬಹುಕೊಳೆ ಮುಚ್ಚಿ ಕೊಂಡಿಹುದು ನೋಡಮ್ಮಾ ಪ. ಸ್ವಚ್ಛವ ಮಾಡುತ ಅಚ್ಯುತನಂಘ್ರಿಗೆ ಬೆಚ್ಚಗೆ ಹೊದಿಸಲು ಇಚ್ಛೆಯ ಮಾಡುತ ಅ.ಪ. ಏಳು ಪದರವಿಹುದೊ | ಬಹು ಕಾಲದಿಂ ಬಾಳುತ ಬಂದಿಹುದೂ ಕಾಲಕಾಲಕೆ ಬದಲಾವಣೆ ಪೊಂದುತ ಬೀಳುತೇಳುತ ಬೆನ್ನು ಬಿಡದಿರುತಿಹುದೊ 1 ಹೊರಗಡೆ ನವ ದುರ್ಗಂಧಾ | ಒಳಗಡೆ ಇನ್ನು ಅರುಹಲಾರದ ಕಲ್ಮಷಾ ಸುರರೆಲ್ಲ ಇದಕಿನ್ನು ಸರಿ ಇಲ್ಲವೆಂಬೋರು ಮರುತಾಂತರ್ಯಾಮಿಗೆ ಸರಿತೋರುವಂದದಿ 2 ಎಪ್ಪತ್ತೆರಡು ಸಾಸಿರಾ | ನೂಲುಗಳಿಂದ ವಪ್ಪಾಗಿ ಹೊಲಿದ ಪಾರ ಕಪ್ಪು ಕೆಂಪು ಬಿಳಿ ವಪ್ಪೆ ಬಣ್ಣಗಳಿಂದ ಸರ್ಪಶಯನ ಸತತ ಸಲಹಿ ಕೊಡುವಂಥ 3 ನಿರ್ಮಲೋದಕವ್ಯಾವುದೇ | ಇದನೊಗೆಯಲು ಸಮ್ಮತ ಶಿಲೆಯಾವುದೇ ಬೊಮ್ಮನೈಯ್ಯನ ಸುಜ್ಞಾನ ಸುಕೊಳದೊಳು ವಮ್ಮನಸಿನೊಳದ್ದಿ ವದ್ದೆ ಮಾಡುತಲಿನ್ನು 4 ವ್ಯಕ್ತಿ ವೈರಾಗ್ಯ ಶಿಲೇ | ಶ್ರೀ ಹರಿಗುರು ಭಕ್ತಿ ಎರಡು ಕೈಗಳೇ ಎತ್ತಿ ವಗೆದು ಎಲ್ಲಾ ಕಶ್ಮಲ ಕಳೆಯುತ ಮತ್ತೆ ಜಾಲಾಡಿ ಹಿಂಡಿಕೆ ಮಾಡಿ ಶುಭ್ರದಿ 5 ಎತ್ತಿ ತಂದು ಕೊಡುವುತಾ | ಮತ್ತೆ ಕೊಳೆ ಹತ್ತದಂದದಿ ನೋಡುತಾ ಉತ್ತಮವಾದ ಮೈದಾನದೊಳಗೆ ಹರಹಿ ನೆತ್ತಿ ಜ್ಯೋತಿಯ ಘನ ದೀಪ್ತಿಯಲ್ಲೊಣಗಿಸು 6 ಶುದ್ಧ ಸಾತ್ವಿಕವರ್ಣದೀ | ಹೊಳೆವಂಥ ಈ ಶುದ್ಧ ಹೊದ್ದಿಕೆ ಸ್ಥಾನದೀ ಮುದ್ದುಕೃಷ್ಣನು ತನ್ನ ಪರಿವಾರ ಸಹಿತದಿ ಪೊದ್ದಿಕೊಂಡಿಪ್ಪ ಬಲು ಭದ್ರವ ಮಾಡುತ 7 ಹಿಂದೆ ಮುಂದಿನ ಭಯವೆಲ್ಲಾ | ತಪ್ಪುವುದಿನ್ನು ಸಂದೇಹಪಡಲು ಸಲ್ಲಾ ತಂದೆ ಮುದ್ದುಮೋಹನ್ನ ಗುರುಗಳು ಪೇಳಿದ ಒಂದೆ ವಾಕ್ಯವ ಆನಂದದಿ ನಂಬುತ 8 ನೂತನ ಹಚ್ಚಡವೂ | ನೂಲುಗಾರ ಜಾತಿಯರರಿಯರಿವೂ ಪ್ರೀತಿಯೋಳ್ ಗೋಪಾಲಕೃಷ್ಣವಿಠ್ಠಲ ಕೊಟ್ಟ ಖ್ಯಾತಿಯೊಳ್ ಬಾಳಿ ಶ್ರೀನಾಥನ್ನ ಪೊಂದುವೋ 9
--------------
ಅಂಬಾಬಾಯಿ
ಹಣವನರಸುವರೆಲ್ಲ ಗುಣವನರಸುವರೆ ಮಣಿಯನರಸುವ ಕೆಲರು ಹಣಕೆ ಬಾಯ್ ಬಿಡರೆ ಪ ನೀಡುವವನೊಬ್ಬನಿರೆ ಬೇಡವೆಂಬುವರಿಹರೆ ನೀಡಲೊಲ್ಲದ ನರನ ನೋಡುವವರಿಹರೆ ಬೀಡು ಹೆಚ್ಚಳಸಿರಿಯ ನೀಡೆನಗೆ ತನಗೆಂಬ ನಾಡಿಗರ ಗಡಣವನು ಎಣಿಸಲಳವೇ 1 ಕಲಿಯುಗದ ನೀತಿಯೋ ಬಲುದುರಾಸೆಯ ಬಲೆಯೋ ಸಲೆ ಬೆಳೆದಸೂಯೆಯೋ ಕಲಿತ ದುರ್ನೀತಿಯೋ ಜಲಜಾಕ್ಷನನೀ ದುಶ್ಶೀಲ ಪ್ರವಾಹದಲಿ ಅಲೆಯಬಿಡಬೇಡಯ್ಯ ಮಾಂಗಿರಿಯ ರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಹಣವೆÉ ನಿನ್ನಯ ಗುಣವೇನು ಬಣ್ಣಿಪೆನೊ ಪ. ಹಣವಿಲ್ಲದವನೊಬ್ಬ ಹೆಣವೇ ಸರಿ ಕಂಡ್ಯಾ ಅ.ಪ. ಬೆಲೆಯಾಗದವನೆಲ್ಲ ಬೆಲೆಯ ಮಾಡಿಸುವಿ ಎಲ್ಲ ವಸ್ತುಗಳನಿದ್ದಲ್ಲೆ ತರಿಸುವಿ ಕುಲಗೆಟ್ಟವರ ಸತ್ಕುಲಕೆ ಸೇರಿಸುವಿ ಹೊಲೆಯನಾದರೂ ತಂದೊಳಗಿರಿಸುವಿ 1 ಅಂಗನೆಯರ ಸಂಗ ಅತಿಶಯದಿ ಮಾಡಿಸುವಿ ಶೃಂಗಾರಾಭರಣಂಗಳ ಬೇಗ ತರಿಸುವಿ ಮಂಗನಾದರೂ ಅನಂಗನೆಂದೆನಿಸುವಿ ಕಂಗಳಿಲ್ಲದವಗೆ ಮಗಳ ಕೊಡಿಸುವಿ 2 ಚರಣಕ್ಕೆ ಬಂದಂಥ ದುರಿತವನು ಬಿಡಿಸುವಿ ಸÀರುವರಿಗೆ ಶ್ರೇಷ್ಠನರನ ಮಾಡಿಸುವಿ ಅರಿಯದ ಶುಂಠನ ಅರಿತವನೆನಿಸುವಿ ಸಿರಿ ಹಯವದನನ ಸ್ಮರಣೆ ಮರೆಸುವಿ 3
--------------
ವಾದಿರಾಜ
ಹಣವೆನಲು ಹಣವಲ್ಲ ಹಣವಿಲ್ಲದವರಿಲ್ಲ ಪ ಗಣಿಸಲು ಮಹಾತ್ಮರೆ ಹಣವಂತರಯ್ಯ ಅ.ಪ ಹಣವು ವಿದ್ಯೆಯು ತಪಸು ಊಂಛ ವೃತ್ತಿಗಳು ಬ್ರಾ- ಹ್ಮಣಗೆ ಕ್ಷತ್ರಿಯರಿಂಗೆ ಶೌರ್ಯಾದಿಗಳ್ ಘನಚಮತ್ಕøತಿ ಯುಕ್ತಿಗಳು ವೈಶ್ಯರಿಗೆ ಶೂದ್ರ ಜನಕೆ ಭೂಪರಿಚರ್ಯ ಕೃಷ್ಯಾದಿಗಳೆ ಹಣವು 1 ಸಟೆ ಕಪಟ ಬಾಯಬಡುಕತನ ತಸ್ಕರ ಅಧರ್ಮಗಳಿಂದಲಿ ಘಾಸಿಯಿಂ ಗಳಿಸಿರುವ ಲೇಶವಾದರು ಪುಣ್ಯ- ರಾಶಿಯನು ಕೆಡಿಸದೇ ಲೇಸು ಮಾಡುವದೇ 2 ಅತ್ಯಾಸೆ ಪಿಶುನತೆಯು ತಾಮಸರಿಗೆ ಸತ್ಯ ಸಂಕಲ್ಪ ಗುರುರಾಮ ವಿಠಲನ ಸ- ರ್ವತ್ರ ಚಿಂತಿಸುವವಗೆ ಕೈತುಂಬ ಹಣವೂ 3
--------------
ಗುರುರಾಮವಿಠಲ
ಹತ್ತಿಲಿಹÀ ವಸ್ತುನೋಡೊ ಮನವೆ ನಿತ್ಯ ನಿಜನಿರ್ಗುಣವ ಕೂಡೊ ಮನವೆ ಧ್ರುವ ಅತ್ತಲಿತ್ತಲಾಗದಿರು ಮನವೆ ಚಿತ್ತ ಚಂಚಲ ಮಾಡದಿರೆನ್ನ ಮನವೆ ಉತ್ತುಮ ಸುಪಥ ನೋಡು ಮನವೆ ನೆತ್ತಿಯೊಳಿಹ ಸುವಸ್ತು ಕೂಡೊ ಮನವೆ 1 ಹೋಕಹೋಗದಂತೆ ಎನ್ನ ಮನವೆ ಏಕರಸವಾಗಿ ಕೂಡೊ ಎನ್ನ ಮನವೆ ನಾಲ್ಕು ಶೂನ್ಯವ ಮೆಟ್ಟಿ ನೋಡು ಮನವೆ ಜೋಕೆಯಿಂದ ಜ್ಯೋತಿರ್ಮಯ ಕೂಡೊ ಮನವೆ 2 ಧನ್ಯವಿದು ರಾಜಯೋಗಮನವೆ ಭಿನ್ನವಿಲ್ಲದೆ ಬೆರೆದು ಕೂಡೊ ಮನವೆ ಚೆನ್ನಾಗಿ ಚಿನ್ಮಯ ನೋಡು ಮನವೆ ಅನ್ಯಪಥವಿನ್ಯಾತಕ ನೋಡು ಮನವೆ 3 ಗರ್ವಗುಣ ಹಿಡಿಯದಿರು ಮನವೆ ನಿರ್ವಿಕಲ್ಪನ ತಿಳಿದು ನೋಡು ಮನವೆ ಪೂರ್ವಪುಣ್ಯಹಾದಿ ಇದು ಮನವೆ ಸರ್ವರೊಳು ವಸ್ತುಮಯ ಒಂದೆ ಮನವೆ 4 ದೃಷ್ಟಿಸಿ ಆತ್ಮನ ನೋಡು ಮನವೆ ಪುಷ್ಟವಾಗಿ ಘನದೋರುವದು ಮನವೆ ಭ್ರಷ್ಟವಾಗಿ ಬಾಳಬ್ಯಾಡ ಮನವೆ ನಿಷ್ಠನಾಗಿ ನಿಜನೆಲೆಯಗೊಳ್ಳ ಮನವೆ 5 ಏರಿ ಆರುಚಕ್ರ ನೋಡು ಮನವೆ ಪರಮಾನಂದ ಸುಪಥ ಕೂಡೊ ಮನವೆ ಆರು ಅರಿಯದ ಹಾದಿ ಮನವೆ ತೋರಿಕೊಡುವ ಸದ್ಗುರು ಎನ್ನ ಮನವೆ 6 ಹರಿಭಕ್ತಿಯೊಳಗಿರು ಮನವೆ ಸಿರಿ ಸದ್ಗತಿ ಸುಖವ ಕೂಡೊ ಮನವೆ ಗುರುವಾಕ್ಯ ನಂಬಿ ನಡೆ ಮನವೆ ಪರಲೋಕಕ್ಕೆ ಸೋಪಾನವಿದು ಮನವೆ 7 ಪರದ್ರವ್ಯಗಲ್ಪದಿರು ಮನವೆ ಪರಸತಿಯ ನೋಡದಿರೆನ್ನ ಮನವೆ ಪರರ ನಿಂದ್ಯ ಮಾಡದಿರು ಮನವೆ ದಾರಿ ಹೋಗದಿರು ದುಷ್ಟರ ನೀ ಮನವೆ 8 ಸಜ್ಜನರ ಸಂಗ ಮಾಡೊ ಮನವೆ ಹೆಜ್ಜೆವಿಡಿದು ಪರಲೋಕ ಕೂಡೊ ಮನವೆ ಭೆಜ್ಜರಿಕೆ ಹಿಡಿಯೊ ಎನ್ನ ಮನವೆ ದುರ್ಜನರ ಸಂಗ ಮಾಡಬ್ಯಾಡೊ ಮನವೆ 9 ಕಂಗಳ ತೆರೆದು ನೋಡು ಮನವೆ ಮಂಗಳಾತ್ಮನ ಶ್ರೀಪಾದ ಕೂಡೊ ಮನವೆ ಹಿಂಗದಂತೆ ಕೂಡೊ ಬ್ಯಾಗೆ ಮನವೆ ಗಂಗೆಯೊಳು ಜಲಬೆರೆದಂತೆ ಮನವೆ 10 ಭೇದ ಬುದ್ಧಿಯ ಮಾಡಬ್ಯಾಡ ಮನವೆ ಸಾಧುಸಂತರ ಸುಬೋಧ ಕೇಳು ಮನವೆ ಭೇದಿಸಿ ತಿಳಿದುನೋಡು ಮನವೆ ಸದಮಲ ಬ್ರಹ್ಮ ಸೂಸುತಿದೆ ಮನವೆ 11 ಯುಕ್ತಿ ನಿನಗಿದು ನೋಡು ಮನವೆ ಭಕ್ತವತ್ಸಲ ಸ್ಮರಿಸು ಮನವೆ ಮುಕ್ತಿಯಿಂದಧಿಕಸುಖ ಮನವೆ ಭಕ್ತಿರಸದೊಳು ಮುಳಗ್ಯಾಡು ಮನವೆ 12 ಲೇಸು ಲೇಸು ಮಹಿಪತಿ ಸು ಮನವೆ ದಾಸನಾಗಿರುವ ವಾಸುದೇವನ ಮನವೆ ಭಾಸಿ ಪಾಲಿಪನ ಕೂಡೊ ಎನ್ನ ಮನವೆ ಭಾಸ್ಕರ ಮೂರ್ತಿಯ ನೋಡು ಮನವೆ 13
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹನುಮ ಅಣಿಯಾರೊ ನಿನಗೆ ಈ ತ್ರಿಭುವನದೊಳಗೆಹಣಮಂತ ಗುಣವಂತ ಮಣಿಯುವೆನೊ ನಿನಗೆ ಪ ಗಡ್ ಗಡ್‍ಗಡನೆ ರಾಮನ ಪಾದಾಂಬುಜಕೆ ವಂದಿಸುತಖಡ್ ಖಡ್ ಖಡನೆ ಸಿಡಿಲಂತೆ ನಭದೊಳಗೆ ಗರ್ಜಿಸುತಧಡ್ ಧಡ್ ಧಡನೆ ಕಡಲನ್ನೆ ಜಿಗಿಯುತ್ತ ಭಡ್ ಭಡ್ ಭಡನೆ ಸೀತೆಯನು ಶೋಧಿಸುತ ಬಂದಿಯೋ 1 ಬರಬರನೆ ಬಿಂಕದಲಿ ಉರಿಯುತಿಹ ರಕ್ಕಸರದರ್ ದರ್ ದರನೆ ರಣರಂಗಕೊಬ್ಬನೇ ಎಳೆತಂದುಕರ್ ಕರ್ ಕರನೆ ಹಲ್ಗಿಡಿದು ತರಿಯುತ್ತ ಧರೆಯೊಳಗೆಭರ್ ಭರನೆ ಸಿರಿವರನ ಇಚ್ಛೆಯನು ಪೂರ್ತಿಸಿದಿ 2 ಖುದ್ ಖುದ್ ಖುದನೆ ನಗುತ ರಘುರಾಮನನು ಹೃದಯದೊಳುಖುದ್ ಖುದ್ ಖುದನೆ ಬಿಡದೇಳ್ವ ಭಕುತಿಯಲಿ ಸೇವಿಸುತಗದ್ ಗದ್ ಗದುಗಿನೊಳು ವೀರನಾರಾಯಣನಮುದ್ ಮುದ್ ವಂದಿಸಿ ಪರಬ್ರಹ್ಮನ ಪದವಿಯನೆ ಪಡೆಯೊ3
--------------
ವೀರನಾರಾಯಣ
ಹನುಮ - ಭೀಮ - ಮಧ್ವರು ಅಮಮ ಎನಿತÀದ್ಭುತಮಹಿಮೆ ಪೊಗಳನು ಪಮ ದೇವ ಜೀವೋತ್ತಮ ಸುರಸಾರ್ವಭೌಮ ಹನುಮ ಪ ಭೀಮ ರಿಪುಕುಲಧೂಮ ಯತಿಕುಲಸೋಮ ಶ್ರೀಮದಾನಂದ ಮುನಿಮಹಿಮಾಅ.ಪ ಜೀಯ ಈ ಪಯೋಜಾಂಡದೊಳಿನ್ನೆಣೆಯಿಲ್ಲ ಬಲದೊಳು ಶೌರ್ಯ ಕಾಯನೋಡಲು ಆಖಣಾಶ್ಮಸಮನು ನಿನ್ನೊಳು ಹರಿಯರೂಪಗಳೆನಿತು ಇಹುದಯ್ಯ ನಿನ್ನಲ್ಲಿಹುದು ಇನ್ನೆಷ್ಟಯ್ಯ ಶ್ರೀಯರಸ ಶ್ರೀ ಶಿಂಶುಮಾರನು ನಿನ್ನ ಮುಖಕಮಲದಲ್ಲಿಹನೂ ವಾಯುಮೂರುತಿ ನಿನ್ನ ನಾಸಾಗ್ರದೊಳು ಶೋಭಿಪ ಮತ್ಸ್ಯಮೂರುತಿಯು ಜೀಯ ನಿನ್ನಯ ನಾಸಪೃಷ್ಠದಿ ಕೂರ್ಮ ಮೂರುತಿಯು ಅಲ್ಲಿ ನೆಲೆಸಿಹನು ನಯನದ್ವಯದಿ ಕಪಿಲವಿಷ್ಣು ಶ್ರವಣದ್ವಯಗಳೊಳು ಕೃಷ್ಣರಾಮರು ನಾರಾಯಣ ಇಹನು 1 ಬಾಹುದ್ವಯಗಳೋಳ್ಕಲ್ಕಿ ಬುದ್ಧರೂಪಿರೆ ಬಾಹುಬಲವಿನ್ನೆಷ್ಟಯ್ಯ ಅಹುದು ಪವನಹಸ್ತದೊಳ್ ಪಾವನ್ನ ಶ್ರೀ ಬಾದಾರಾಯಣ ಕಂಗೊಳಿಪನಯ್ಯ ಶ್ರೀ ಹರಿಯು ನೆಲೆಸಿಹನು ಪಾದ ಮಧ್ಯಸ್ಥಾನದಲಿ ಸಲೆ ಬೆಳಗುತಿಹನು ಮಹಮಹಿಮ ನಿನ್ನಯ ಪಾದಪೃಷ್ಠದಿ ಹೃಷೀಕೇಶ ಹರಿಯು ನಿಂತಿಹನು ಇಹರಯ್ಯ ದಕ್ಷಿಣ ವಾಮಜಾನುಗಳಲಿ ಯಜ್ಞ ಶ್ರೀಧರರಿಹರು ಕಟಿ ಪ್ರದೇಶದಿ ದಿಟ್ಟರಾಗಿಹರು 2 ದಕ್ಷಿಣದಲ್ಲಿಹ ವನಮಾಲೆಯಲ್ಲಿಹರು ಗುಣನಿಧಿಯೆ ತದುಪರಿ ಸೂರ್ಯವರುಣಅಶ್ವಿನಿಗಳೆಲ್ಲ ನಿನ್ನಯ ವನಮಾಲೆಯಲಿಹರು ಎಣಿಸೆ ದಕ್ಷಪ್ರಜಾಪತಿಯು ನಿನ್ನ ವಾಮ ವನಮಾಲದೊಳಲ್ಲಿ ಇರುತಿಹನು ಮಣಿದು ಸೇವಿಪ ಜಯಂತ ಮನುಯಮ ತದನಂತರ ವನಮಾಲೆಯಲ್ಲಿಹರು ಜಾಣ ಬೃಹಸ್ಪತಿ ದಕ್ಷಿಣ ವನಮಾಲದೊಳು ಆಶ್ರಯಿಸಿ ತಾವಿಹರು ಪ್ರಾಣ ಅಪಾನ ವ್ಯಾನೋದಾನ ಸಮಾನ ವನಮಾಲದಲ್ಲಿಹರು 3 ಪದುಮನಾಭನು ಸಲೆ ಬೆಳಗುತಿಹನು ವಾಮದಕ್ಷಿಣ ಕುಕ್ಷಿಯೊಳಿಹರು ಹರಿಮೂರುತಿ ನಿನ್ನಾಂತರದಿಂದ ನಿಂತಿಹನು ಪಾದಪಾಶ್ರ್ವಗಳಲ್ಲಿ ಋಷಭ ಗೋವಿಂದ ಮೂರುತಿ ಅಲ್ಲೆ ಇರುತಿಹರು ಮುದದಿ ನಿನ್ನಯ ವಕ್ಷದೊಳು ಶ್ರೀ ವರಹಮೂರುತಿ ಅಲ್ಲೆ ನೆಲೆಸಿಹನು ಎದುರಿಲ್ಲ ನಿನಗೆ ಕಪೋಲದೊಳು ಶ್ರೀ ವಾಸುದೇವನು ಇಹನು ವಿಧಿವಾಯುಗಳು ನಿನ್ನಯ ವಾಮಭುಜದೊಳು ಮುದದಿ ನಲಿಯುತಿಹರು ವಿಧಿ ವಾಯುಸತಿಯರು ದಕ್ಷಿಣಭುಜದೊಳು ನುತಿಸುತಿಹರು 4 ಪವನಶಕ್ತಿ ಹನ್ನೆರಡೆಲ್ಲ-ನಿನ್ನಯ ಹೃದಯದಾಭರಣ ಪವನಿಸಿರ್ಪುದು ಕ್ರಮದಿ-ಶಕ್ತಿ ಪ್ರತಿಷ್ಠೆ ಸಂವಿತ್ ಸ್ಪೂರ್ತಿ ಭವಹಾರಿ ನಿನಗೆ ಕಲಾವಿದ್ಯಾಮತಿ ನಿಯತಿ ಮಾಯಾ ಕಾಲಪುರುಷ ಈ ಪರಿಯು ಜೀವೇಶ ನಿನ್ನಯ ಮಹಿಮ ಗುಣಗಳ ಪೊಗಳಲಳವೇ ಹರಮುಖಾದ್ಯರಿಗೆ ಜೀವರೆಸಗುವ ಕಾರ್ಯಗಳು ಲವಲೇಶ ನಿನ್ನ ಬಿಟ್ಟು ನಡೆಯದೊ ಪವಮಾನಮೂರುತಿ ಹರಿಯ ಕರುಣಾಕಟಾಕ್ಷ ನಿನ್ನೊಳು ಇಟ್ಟುಇರುವುದು ಇನ್ನೆಷ್ಟೊ ದೇವ ನಿನ್ನಯ ಖ್ಯಾತಿ ಎಷ್ಟೋ ಬಲದಿ ಶೇಷಶೈಲವ ತಂದೆ ಕಾವುದಯ್ಯ ಶ್ರೀ ವೇಂಕಟೇಶನ ಪ್ರೇಮದ ದೂತ 5
--------------
ಉರಗಾದ್ರಿವಾಸವಿಠಲದಾಸರು
ಹನುಮ ವರದ ವಿಠಲ | ಪೊರೆಯ ಬೇಕಿವಳಾ ಪ ಗುಣಪೂರ್ಣ ಶ್ರೀ ಹರಿಯ | ದಾಸ್ಯಕಾಂಕ್ಷಿಪಳಾ ಅ.ಪ. ವಿನಯ ಸದ್ಗುಣ ಭರಿತೆ | ಸುಜನಾಳಿಸೇವೇಷ್ಟೆಅನಿಲಮತ ಸದ್ಭೋದೆ | ಗಾನಂದ ಜಾತೇಅನಲಾಕ್ಷಾ ಸಖ ಹರಿಯ | ಗಾನಕಲೆ ಚತುರೆ ಎಂದೆನಿಸಿರುವ ಈ ಕನ್ಯೆ | ಮಣಿಯ ನೀ ಪೊರೆಯೋ 1 ಪಾದ | ವೈಕುಂಠ ರಮಣ 2 ಸಲ್ಲಲಿತ ಸನ್ಮಾರ್ಗ | ದಲ್ಲಿ ವಿಹರಿಸುವಂಥವಲ್ಲಭನ ದೊರಕಿಸುತ | ನಲ್ಮೆಯಿಂದಿವಳಾಸಲ್ಲಿಸೊ ಮನದಾಶೆ | ಮಲ್ಲಮರ್ಧನ ಕೃಷ್ಣಾಚೆಲ್ವ ಹಯಮುಖಹರಿಯೆ | ಪ್ರಾರ್ಥಿಸುವೆ ದೇವಾ 3 ಪತಿ ಗೊಡೆಯಾಶೌದ್ದೋದನೀಯ ಮತ | ಪ್ರಧ್ವಂಸಗೈದವನೆಬುದ್ದಾವತಾರಿ ಹರಿ | ಉದ್ದರಿಸೊ ಇವಳಾ 4 ಜೀವ ಅಸ್ವಾತಂತ್ರ್ಯ | ಭಾವದಲಿ ನಿಲ್ಪಪರಿದೇವ ನೀ ಗೈಯುತ್ತ | ಭಾವುಕಳ ಪೊರೆಯೊ
--------------
ಗುರುಗೋವಿಂದವಿಠಲರು
ಹನುಮ-ಭೀಮ-ಮಧ್ವ ಭಾರತೀರಮಣ ಸಮೀರಣ ನಿನ್ನಯಚಾರುಲೀಲೆಯನೆಂತು ಬಣ್ಣಿಪೆ ಪ ಇನಕುಲ ರಾಮನ ವನಿತೆಯ ಶೋಧಿಸಿಮನುಜನ ರೂಪದ ಹರಿಯ ಚರಿತೆಯ ಸಾಧಿಸಿ 1 ತನುಮನಧನದಿಂದವನ ಸೇವೆಯನುಅನುದಿನ ಭಕುತಿಗಳಿಂದ ಮಾಡಿದಿಘನ ಭಕುತಿಯ ಫಲ ಬ್ರಹ್ಮ ಪದವಿಯಂದೆನಿತು ಮತವ ನೀ ಜಗಕೆ ತಿಳಿಸಿದಿ 2 ಭೀಮನ ನಾಮದಿ ಭೂಮಿಪರುಡಿಗೆಯನೇರಿಸಿಪಾಮರ ಜನರೊಳು ನಿಜ ಗಾರ್ಹಸ್ಥ್ಯರ ಬೀರಿಸಿಸ್ವಾಮಿಯ ವೈರಿಗೆ ಸೋಮನಧಾಮವ ತೋರಿಸಿಶ್ಯಾಮಲ ಕೃಷ್ಣನ ಪ್ರೇಮಕೆ ಸೀಮೆಯ ಮೀರಿಸಿ 3 ಶ್ರೀಮತ ಕೃಷ್ಣನ ಅಂತರಂಗದಲಿಕಾಮರಹಿತ ಭಕ್ತಿಗಳಿಂ ಮೆಚ್ಚಿಸಿಪ್ರೇಮದ ಫಲವಿದು ನೋಡಿರೆಂದು ಜನಸ್ತೋಮಕೆ ತಿಳುಹಿದ ಭೀಮ ಮಹಾತ್ಮಾ 4 ಸಾರಸ ನ್ಯಾಸವ ಯೋಜಿಸಿಸಾಸಿರನಾಮದ ಶ್ರೀಶನ ದಾಸ್ಯವನಾರ್ಜಿಸಿಭಾಸುರ ಗದುಗಿನ ವೀರನಾರಾಯಣ ನ್ಯಾಸದಿಂ ಬಹುಸರಳ ಭಾಷೆಯಲಿಈಶ ಜೀವಿಗಳ ತರತಮ ತಿಳಿಸುತಲೇಸಿದು ಮೋಕ್ಷಕ್ಕೆಂದು ತಿಳುಹಿದಿ 5
--------------
ವೀರನಾರಾಯಣ
ಹನುಮಂತ ಬಲವಂತ ಅತಿ ಗುಣವಂತಾ | ಇನ ಶಶಿ ಶಿಖಿನೇತ್ರ ರೂಪ ಚರಿತ್ರ | ವನಚರ ಪುಂಗವ ಸನಕ ಸನಂದನ | ವಿನುತ ಹರಿಚರಣನನುದಿನ ಜಪಿತಾ ಪ ಗಜ ಕಂಠೀರಾ | ರಾಯ ಕಪಿಗೆ ಹರಿಯಾ | ತೋರಿದ ಸಿರಿಯಾ | ಶ್ರೀಯರಸನ ನಾಮ ಸವಿದ ನಿಸ್ಸೀಮ | ಪ್ರಿಯ್ಯಾದಿಕೊಂಡು ಗುರುತು ಸಾಗರನರಿತು | ಮಾಯಾಛಾಯಾ ಗ್ರೀಯಾ ನೋಯ | ಸಾಯಬಡದ ಸೀತೆಯ ಮುಂದೆ ನಿಂದು | ಕೊಂಡ ಸ | ಮಾಯದ ಲಂಕಿಯ ನ್ಯಾಯವುರಹಿದ ಧೇಯಾಂಜನೇಯಾ 1 ವರ ಕುಂತಿನಂದನಾ ಕಲಿಯ ಭಂಜನಾ | ಉರಗ ಭಂಜನಾ | ಉರಿತಾಪ ಪರಿಹಾರ | ಕರುಣ ಸಾಗರಾ | ದುರುಳ ಕೀಚಕರ ಹಿಡಂಬಕಾಂತಕ | ಕೌರವಾ ಪಾರಾವಾರಾ ಉರಹಿದ ಬಲುಧೀರ ಶರ ಗದಾಧಾರಾ | ಗುರುವರ ಸುತದಿನ | ಕರಜನುವರದೊಳು | ಪರಿ ಪರಿಹರಿಸಿದೆ ಸಮರಾ 2 ಆನಂದತೀರ್ಥನಾಗಿ ಅತಿ ಹರುಷಯೋಗಿ ಕಾನನ ಪರಮತಾ ದಹಿಸಿದ ಖ್ಯಾತಾ | ಭಾನುಕುಲ ಸಾಂದ್ರಾ ಎನಿಸುವ ಚಂದ್ರಾ | ಧ್ಯಾನಾಮೃತ ಪಾನಾ | ಮುಕ್ತಿ ಸೋಪಾನಾ | ಜ್ಞಾನಾಹೀನಾ ದೀನಾ ಜನಾ | ಮಾನಿಸಫಲದಾನಾ ನಿರತ ನಿಧಾನಾ | ಶ್ರೀನಿಧಿ ವಿಜಯವಿಠ್ಠಲ | ಶ್ರೀನಿವಾಸನ ಮಾನಸ ಪೂಜಿಪೆ ಗಾನನ ಮುನಿಗಳ ಆನನಮಣಿ ಪವಮಾನಸೂನು 3
--------------
ವಿಜಯದಾಸ