ಒಟ್ಟು 3697 ಕಡೆಗಳಲ್ಲಿ , 112 ದಾಸರು , 1938 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುಮ್ಮನೆ ವೈಷ್ಣವನೆಂದಿರಿ -ಪರ - |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಬ್ರಹ್ಮ ಸುಜ್ಞಾನವನರಿಯದ ಮನುಜನ ಪ.ಮುಖವ ತೊಳೆದು ನಾಮವಿಟ್ಟವನಲ್ಲದೆ |ಮಿಕ್ಕ ಶಾಸ್ತ್ರಂಗಳ ನೋಡಿದನೆ ? ||ಸುಖ ಶೃಂಗಾರಕೆ ಮಾಲೆ ಧರಿಸಿದನಲ್ಲದೆ |ಭಕುತಿಯ ರಸದೊಳು ಮುಳುಗಿದನೇನಯ್ಯ 1ಊರ ಮಾತುಗಳೆಲ್ಲನಾಡಿದನಲ್ಲದೆ |ನಾರಾಯಣ ಕೃಷ್ಣ ಶರಣೆಂದನೆ ? |ನಾರಿಯರಿಗೆ ಮೆಚ್ಚಿ ಮರುಳಾದನಲ್ಲದೆ |ಗುರುಹಿರಿಯರಿಗೆಲ್ಲ ಎರಗಿದನೇನಯ್ಯ 2ಗಂಗೆಯಲಿ ಮಣ್ಣು ತೊಳವವನಲ್ಲದೆ |ಹಿಂಗದೆ ಸ್ನಾನವ ಮಾಡಿದನೆ ? |ರಂಗ ಶ್ರೀ ಪುರಂದರವಿಠಲನ ದಾಸರ |ಸಂಗಡ ಕೂಡಾಡಿ ತಿರುಗಿದನೇನಯ್ಯ 3
--------------
ಪುರಂದರದಾಸರು
ಸುರ ಮುನಿಜನನುತಪಾದನಿನ್ನಶರಣು ಪೊಕ್ಕೆನೊ ಗೋವಿಂದ ನೀಚರಕೈಯಲಿ ಕೊಡದಿರೊ ಎನ್ನ ಮೇಲ್ಗಿರಿ ಶ್ರೀನಿವಾಸಪಾವನ್ನಪ.ದುಷ್ಟದೂಷಕ ಸಂಗದಿಂದೆ ನನ್ನನಿಷ್ಠೆ ಜಾರುತಲಿದೆ ತಂದೆ ಸಲೆಭ್ರಷ್ಟನಾಗುವುದೇನು ಚಂದೆ ಬಲುಕಷ್ಟಿಸಿ ಭವದಲಿ ನೊಂದೆ 1ಅಮಿತ ದುರ್ಗುಣ ದೋಷಹಾರಿಶುಭಅಮಲ ಮುಕ್ತಿದಾತ ಉದಾರಿ ಎನ್ನಭ್ರಮಣ ನೀಗಿಸು ಹೊರೆ ಸ್ವಾಮಿ ಹೃತ್ಕಮಲದಿ ಪ್ರಕಟಿಸು ಪ್ರೇಮಿ 2ಅರಿಯೆನರಿಯೆ ಅನ್ಯಮರೆಯೆ ನಿನ್ನಸ್ಮರಣೆಗೆಚ್ಚರವಿತ್ತು ಹೊರೆಯೊಸಿರಿಗುರು ಆನಂದಮುನಿ ದೊರೆಯೆನಿತ್ಯಪರಸನ್ನ ವೆಂಕಟ ಭಕ್ತರ ಸಿರಿಯೆ 3
--------------
ಪ್ರಸನ್ನವೆಂಕಟದಾಸರು
ಸುಲಭಪೂಜೆಯಕೇಳಿ ಬಲವಿಲ್ಲದವರು<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಕಾಲಕಾಲದಕರ್ಮಕಮಲಾಕ್ಷಗರ್ಪಿಸಿರಿಪ.ಇರುಳು ಹಚ್ಚುವ ದೀಪ ಹರಿಗೆ ನೀಲಾಂಜನವು |ಮರುವುಡುವ ಧೋತರವು ಪರಮವಸ್ತ್ರ ||ತಿರುಗಾಡಿ ದಣಿಯುವುದು ಹರಿಗೆ ಪ್ರದಕ್ಷಿಣೆಯುಮರಳಿ ಹೊಡಮರುಳುವುದು ನೂರೆಂಟು ದಂಡ 1ನುಡಿವ ಮಾತುಗಳೆಲ್ಲ ಪಾಂಡುರಂಗನ ಜಪವುಮಡದಿ ಮಕ್ಕಳು ಎಲ್ಲ ಒಡನೆ ಪರಿವಾರ ||ನಡುಮನೆಯ ಅಂಗಳವುಉಡುಪಿ ಭೂವೈಕುಂಠಎಡ ಬಲದ ಮನೆಯವರು ಕಡುಭಾಗವತರು 2ಹೀಗೆ ಈ ಪರಿಯಲಿನಿತ್ಯ ನೀವರಿತಿರಲುಜಗದೊಡೆಯ ಶ್ರೀ ಕೃಷ್ಣ ದಯವ ತೋರುವನು ||ಬೇಗದಿ ತಿಳಿದುಕೇಳಿ ಹೋಗುತಿದೆ ಆಯುಷ್ಯಯೋಗಿಪುರಂದರವಿಠಲ ಸಾರಿ ಪೇಳಿದನು3
--------------
ಪುರಂದರದಾಸರು
ಸುಲಭಲ್ಲ ಹರಿಭಕುತಿ ಗುರುಕೃಪೆ ಇಲ್ಲದಿಲ್ಲ ಪ.ಸಿದ್ಧಿ ಸೊಲ್ಲುವ ಗುರುಗಳುಂಟು ಧರೆಯೊಳಲ್ಲಿಗಲ್ಲಿ ಅವರೆಲ್ಲ ಹಿತಕಾರಿಗಳೆಂದಿಗಲ್ಲಸಲ್ಲ ಕೈವಲ್ಯದ ಮಾರ್ಗವ ಬಲ್ಲಬಲ್ಲಿದಭಾರತಿನಲ್ಲಗೆ ಸಲ್ಲಲಿಬಲ್ಮತದಲ್ಲಿರಿರ್ಯೆಲ್ಲ 1ಭವಸಾಗರ ವೈರಾಗ್ಯದ ನಾವೆಲಿನೀಗಿಸಾಗಿ ಜ್ಞಾನಾಗರದಾಗಮವಕೇಳಿವೇಗದೀಗ ನಿರಯಾಗಾರ ತಪ್ಪಿಸದೆ ಶ್ರೀರಂಗ ಬ್ಯಾಗೊದಗ ಸುಜÕನಾಗಿರದೆಮಗೆ ಮ್ಯಾಗೆ ಲೋಗರೋಗರಕಾಗಿ ರಹಿತಧರ್ಮರಾಗಿರೆ ತಾಗೂದು ರೋಗ 2ನಾ ನನ್ನದು ಸಂಪದೆಂಬಭಿಮಾನಿ ನೀಚನುನೀ ನಿನ್ನದು ಕೃಷ್ಣನೆಂಬ ಮತಿವಂತನೆ ಧನ್ಯ ಬಹುಪುಣ್ಯಶ್ಲೋಕರ ವೈಭವವಾಯಿತನ್ಯೋನ್ಯ ನನಗಿನ್ನ್ಯಾತರ ನೆಚ್ಚಿಕ್ಯಣ್ಣ ಪ್ರಸನ್ವೆಂಕಟರನ್ನನಪುಣ್ಯದ್ವಾರನ್ನಾಂತ ಸನ್ನುಮತಿಗನ್ಯದೆ ಏನಣ್ಣ 3
--------------
ಪ್ರಸನ್ನವೆಂಕಟದಾಸರು
ಸುವ್ವಿ ಸುವ್ವಾಲಿ |ಸುವ್ವಿ ಸಾಧ್ವಿಯರು ರಾಘವೇಂದ್ರರ ಪಾಡಿ ಪಅಂದಿನ ಕಾಲದ ಮಧ್ವಶಾಸ್ತ್ರವ ಮನಕೆ ತಂದು |ಅಂದದಿ ಟಿಪ್ಪಣಿ ಮಾಡಿದ ದೇವರಾರು | ಸುವ್ವಿ ||ಅಂದು ವಾದಿಸುವ ಜನರನ್ನು ಬಾಯಿ ಮುಚ್ಚಿಸಿದ |ಚಂದಿರ ವದನೆ ಈತನಮ್ಮ ಗುರುವು | ಸುವ್ವಿ 1ಇವರ ಚರಿತೆಯನ್ನು ತೋರಿದಷ್ಟು ತುತಿಸುವೆ |ಕಿವಿಗೊಟ್ಟು ಕೇಳುವದುಬುಧಜನರು | ಸುವ್ವಿ ||ಪವನಾಂಶರಿವರು ಕವಲಿಲ್ಲ ಖ್ಯಾತರಾಗಿ |ಅವನಿಯ ಸುರರಿಂದರ್ಚನೆಗೊಂಗುವರು | ಸುವ್ವಿ 2ಅಷ್ಟಾಕ್ಷರ ಮಂತ್ರವನು ತಪ್ಪದಲೆ ನಿತ್ಯವಾಗಿ |ನಿಷ್ಠೆಯಿಂದ ಭಜಿಸಲು ಭೂತ ಭಯವು | ಸುವ್ವಿ ||ಕುಷ್ಠರೋಗ ಕ್ಷಯ ಪಾಂಡು ಜ್ವರ ಸನ್ನಿ ಮೊದಲಾದ |ಅಷ್ಟುಪದ್ರವಾಕ್ಷಣ ಬಿಟ್ಟು ಓಡುವುದು | ಸುವ್ವಿ 3ಮೃತ್ತಿಕೆಮಾಲೆಅಂಗಾರದಿವ್ಯ ಮಂತ್ರಾಕ್ಷತೆಯು |ಹತ್ತಿರವಿರಲು ಕ್ಲೇಶವ ಲೇಶ ಕಾಣರು | ಸುವ್ವಿ ||ಎತ್ತ ಹೋದರು ಜನರಿಗೆ ಜಯಪ್ರದ ತೋರುವದು |ಕತ್ತಲಿಲ್ಲ ಶತಸಿದ್ಧ ಮತ್ತೇನುಕೇಳಿ| ಸುವ್ವಿ 4ಪಂಡಿತರು ಮೊದಲಾಗಿಹಸ್ತಿಉಷ್ಟ್ರ ಕುದುರೆಯ |ಹಿಂಡುಗಳು ತೃಷೆಯಿಂದ ಬಳಲುತಿರೆ | ಸುವ್ವಿ ||ದಂಡ ಜಗತಿಗೂರಿ ತೋಯ ತೆಗಿಸಿಯವನೀ |ಮಂಡಲದೊಳಗೆ ಪೆಸರಾದರಿವರು | ಸುವ್ವಿ 5ಕಟ್ಟಲಿಯ ಭತ್ತದೊಳು ಭೂಪದಳಯುಕ್ತ ಬರ |ಲಿಟ್ಟುಕೊಂಡು ಉಣಿಸಿ ಉತ್ತಮ ವರವ | ಸುವ್ವಿ ||ಕೊಟ್ಟು ಕಳಿಸಿದ ಮೇಲೆ ಆವು ಕೊಂಚಿಯಾಗಲಿಲ್ಲ |ಗಟ್ಟಿ ಸಂಕಲ್ಪರಿವರು ಮುನಿವರರು | ಸುವ್ವಿ 6ವಿಪ್ರರೆಲ್ಲರು ಹೇಳಿಸಿ ಕಟ್ಟಿಸಿದ ಸದನವ |ಥಟ್ಟನೆ ಕೆಡಿಸಿ ಭೂಪ ಮೆಚ್ಚುವಂದದಿ | ಸುವ್ವಿ ||ನೆಪ್ಪು ಧರೆಗಾಗಲೆಂದುಗುರುಸುಧೀಂದ್ರ ಕುಮಾರ |ಸರ್ಪನ ತೋರಿಸಿ ಸುಪ್ರಖ್ಯಾತರಾದರು | ಸುವ್ವಿ 7ದ್ವಿಜರ ಸ್ತೋಮವು ಬಾಯಿ ಬಿಡುತಿರೆ ದಯದಿಂದ |ನಿಜಕಾಷ್ಟವಿಳೆಗೆ ನಿಲ್ಲಿಸಿ ಮರವ | ಸುವ್ವಿ ||ಸೃಜಿಸಿ ಪಲ್ಲವ ಫಲಯುಕ್ತವಾಗಿ ತೋರಿಸಿದ |ಭಜಿಸಿರಿವರನ್ನು ಮಕ್ಕಳು ಬೇಡುವವರು | ಸುವ್ವಿ 8ಮುತ್ತಿನ ಮಾಲಿಕೆನೃಪಭಕ್ತಿಯಿಂದ ಕೊಡಲಾಗಿ |ಸಪ್ತಜಿಹ್ವಗುಣಿಸಿದ ಸರ್ವರು ನೋಡಿ | ಸುವ್ವಿ ||ಮತ್ತೆ ಬೇಡಲು ಪಾವಕನಿಗೆ ಪ್ರಾರ್ಥನೆಯ ಮಾಡಿ |ಮತ್ರ್ಯಪಗೆ ಇತ್ತರು ಮೊದಲಂತೆಯೆ ತಂದು | ಸುವ್ವಿ 9ಹಿಂದೆ ಮಾಡಿದ ದುಷ್ಕರ್ಮ ತೀರ ಬಂದದನು ನೋಡಿ |ಬಂದಾಕ್ಷಣದಲ್ಲಿ ಅವನ ವಿಚಾರಿಸಿ | ಸುವ್ವಿ ||ಇಂದಿರೇಶನ ಕಾರುಣ್ಯ ಬಲದಿಂದ ಜನನೋಡೆ |ಸಂದೇಹವಿಲ್ಲದೆ ಸುಲೋಕವನಿತ್ತರು | ಸುವ್ವಿ 10ತುಂಗಾತೀರ ಮಂತ್ರಾಲಯದಲ್ಲಿಶ್ರಾವಣಬಹುಳ |ಮಂಗಳ ಬಿದಿಗಿಯಲ್ಲಿ ನಿವಾಸವಾದರು | ಸುವ್ವಿ ||ಶೃಂಗಾರ ವೃಂದಾವನ ದ್ವಾದಶನಾಮ ಶ್ರೀ ಮುದ್ರೆಯು |ಕಂಗಳುಸಾಲವು ನೋಡ ಹೊದ್ದ ಶಾಠಿಯ | ಸುವ್ವಿ 11ಅಂಧಕಬಧಿರಕುಂಟ ನಾನಾ ರೋಗಿಗಳು ಮತ್ತೆ |ಕಂದ ವಜ್ರ್ಯ ಮೊದಲಾದವರಿಗೆಕಾಮ್ಯ| ಸುವ್ವಿ ||ತಂದುಕೊಡುವರು ಬೇಗ ಇತರ ಸಂಶಯವಿಲ್ಲ |ಮಂದಭಾಗ್ಯರಿಗೆ ಇವರ ಸೇವೆ ದೊರೆಯದೇ || ಸುವ್ವಿ 12ಕೌತುಕವೇನೆನ್ನಲಿ ಮುಂಜಿ ವಿವಾಹ ಮಾಡಿಸುವರು |ಚಾತುರ್ಮಾಸದೊಳಗೆ ಗ್ರಹಗಳಸ್ತವಾಗೆ | ಸುವ್ವಿ ||ಧಾತಾ ಪಿತ ನಿಲಯವಿದೇನೋಯೆಂದು ತೋರುವದು |ಪ್ರೀತಿಯುಳ್ಳ ಭಕ್ತರಿಗೆ ಅಧಮರಿಗಲ್ಲ | ಸುವ್ವಿ 13ಪಾಡ್ಯ ಪೂರ್ವಾರಾಧನೆ ಉತ್ತರಾರಾಧನೆಗೆ |ಒಡ್ಡಿಬರುವುದು ಎಂಟು ದಿಕ್ಕುಗಳಿಂದ ಜನವು | ಸುವ್ವಿ ||ಕಡ್ಡಿಹಿಡಿಯದಂಥ ಸಂದಣಿಯೊಳು ಸನ್ಮುಹೂರ್ತದಿ |ದೊಡ್ಡ ರಥವೇರಿ ಮಠವ ಸುತ್ತುವರು | ಸುವ್ವಿ 14ಇಷ್ಟೇಯೆನ್ನಲು ವಶವಲ್ಲ ಮಹಿಮೆಗಳಿನ್ನೂ ಉಂಟು |ನಷ್ಟ ಮಾಡುವರು ದುರ್ಮತ ದಾರಿದ್ರ್ಯವ | ಸುವ್ವಿ ||ಸೃಷ್ಟಿಗೊಡೆಯ ಪ್ರಾಣೇಶ ವಿಠ್ಠಲನೆಂದು ಪೇಳ್ವರು |ಎಷ್ಟು ಪೇಳಿದರೂ ಎನ್ನಿಂದಲಿ ತೀರದು | ಸುವ್ವಿ 15
--------------
ಪ್ರಾಣೇಶದಾಸರು
ಸುಳಾದಿಧ್ರುವತಾಳರಾಮ ರಘುಕುಲ ಸಾರ್ವಭೌಮ ಪೂರಣಕಾಮಜೀಮೂತಶಾಮ ಶ್ರೀಮೂಲರಾಮಕೋಮಲ ಶರೀರ ಸೀತಾ ಮುಖಾಂಬುಜಭ್ರಮರಪ್ರೇಮಸಾಗರ ಭಕ್ತಜನ ಮನೋಹರಸಾಮಜಾತಿಹರ ಸಾಮಗಾನಾದರ ನಿಸ್ಸೀಮ ಗುಣಗಂಭೀರ ಏಕವೀರಸ್ವಾಮಿ ಮಠದರಸ ಮುನಿಸ್ತೋಮ ಮಾನಸಹಂಸನೀ ಮನ್ನಿಸು ಪ್ರಸನ್ನವೆಂಕಟಾದ್ರೀಶ ರಘುರಾಮ 1ಮಠ್ಯತಾಳಪಿಂತೆ ಸಮೀರಜನ ಸೇವೆಗೆ ಮೆಚ್ಚತ್ಯಂತ ಪ್ರಸನ್ನನಾಗ್ಯವನ ಶುಭಕರಸಂತತಿಗಭಯವನಿತ್ತಪೆನೆಂದೀಶನಿಂತಿಹೆ ಪ್ರಸನ್ನವೆಂಕಟಪತಿರಾಮಕಂತುಜನಕನಿತ್ಯಾನಂದನೆ ನಿನ್ನಂತವರಿಯೆ ನಿಗಮಾಗಮಕಳವೆ 2ತ್ರಿಪುಟತಾಳನಿರುತ ವೈಕುಂಠ ಮಂದಿರವಿದ್ದುಪರಣ ಕುಟೀರವನಾಶ್ರಯಿಸುವ ಘನತೆಯೆತ್ತವರಪೀತಾಂಬರ ದಾಮವನು ಬಿಟ್ಟುವಲ್ಕಲಧರಿಸಿ ಕಾನನದಿ ಸಂಚರಿಪೋದೆತ್ತನರಲೀಲೆಗಿದು ಶ್ಲಾಘ್ಯವೆಂದು ತೋರಿದೆ ಜಗದೆರೆಯ ಪ್ರಸನ್ನವೆಂಕಟಾದ್ರಿ ರಘುರಾಮ 3ಅಟ್ಟತಾಳಹರವರದಲಿ ಬಲು ಮತ್ತಾದ ರಜನೀಚರವರ ಲಂಕೆಯಲಿ ಬಲಿದು ಗರ್ವದಿಸುರವರರನುರೆ ಬಾಧಿಸಲವರನುಪೊರೆವರು ದಾರಯ್ಯ ನಿನ್ನಿಂದಸ್ಥಿರವರದಾಯಕ ಪ್ರಸನ್ವೆಂಕಟಗಿರಿವರನಿಲಯ ಕೌಸಲ್ಯೆಯ ಕಂದ 4ಆದಿತಾಳಅಕಳಂಕ ಅಕುತೋತಂಕ ಅಕಳಂಕಮಕುಟಕುಂಡಲಕೌಸ್ತುಭಕೇಯೂರ ವಲಯಾಂಕಿತಕೋದಂಡಕಾರ್ಮುಕಪಾಣಿಅಕಳಂಕ ಸುಖತೀರ್ಥವಂದಿತ ಪಾದಕಮಲ ವಿಧಿನುತ ಮಖಪಾಲಕ ಪ್ರಸನ್ನವೆಂಕಟಾಧಿಪ ಅಕಳಂಕ 5ಜತೆಅಂದು ನರಹರಿಯತಿಗೆ ಅಂದದಲ್ಲೊಲಿದಿಲ್ಲಿಬಂದು ನೀನಿಂತೆ ನಿಜರಮಣಿಯೊಡನೆಎಂದೆಂದು ಸತ್ಯಾನಭಿವ ತೀರ್ಥಗುರುಹೃದಯಮಂದಿರನೆ ಪ್ರಸನ್ನವೆಂಕಟವರದ ರಾಮ
--------------
ಪ್ರಸನ್ನವೆಂಕಟದಾಸರು
ಸುಳಿದವನಾರಮ್ಮಯ್ಯ ಬೆಟ್ಟದಮೇಲೆಹಳುವದೊಳಿಹ ತಿಮ್ಮಣ್ಣ ಪ.ವಾರೆದುರುಬಿಗೆ ಸಂಪಿಗೆಗೂಡಿ ವಿಹಗವನೇರಿ ಬರುವನಕ್ಕವಾರಿಜಾನನವಜ್ರಮಣಿದಂಥಾನಗೆ ಸೊಬಗೇರಿದಹರಿಕಾಣಕ್ಕ1ಅಡಿಗೊಮ್ಮೆ ಜೀಯಾ ಪರಾಕೆಂಬ ಸುರಮುನಿಗಡಣದ ವೀರನಾರಮ್ಮನುಡಿದರೆ ನುಡಿವ ನುಡಿಯದಿದ್ದರೊಲ್ಲದಬೆಡಗಿನ ಮಹಿಮ ನೀರೆ 2ಮಕರಕುಂಡಲಶಂಖ ಚಕ್ರಕೌಸ್ತುಭಶಿರಿಯುಕುತ ವಕ್ಷದವನಾವನೆಅಖಿಳಜಗವ ತನ್ನ ಬಸುರಲಿ ಬಚ್ಚಿಟ್ಟಸಖಶ್ರೀನಿವಾಸದೇವನೆ3ಸಾಮಗಾನವನಾದರಿಪ ಶಾಮಲಾಂಗದಕೋಮಲದಾರುಹೇಳೆವ್ಯೋಮಕಚಾಜಾದಿ ವಂದಿತಾನತಜನಪ್ರೇಮವಾರಿಧಿ ನೋಡೆಲೆ 4ಸಿರಿಅಂಜನಾದ್ರಿಯೊಳಾವಾಗ ಮಂಗಳಚರಿತನು ದಾರೆ ತಂಗಿಮರೆಹೊಕ್ಕವರಕಾವಪರಸನ್ನವೆಂಕಟವರದನ ನಂಬು ಬೇಗ 5
--------------
ಪ್ರಸನ್ನವೆಂಕಟದಾಸರು
ಸುಳ್ಳು ಮಾತಿನ ನಿನ್ನಾಚಾರವು ತಿಳಿವಿಕೆ ಏನೇನಿಲ್ಲಎಲ್ಲ ಡಂಭವು ನಡತೆಯ ವಿವರವು ಗತಿಗೆನೀ ದೂರಾದೆಯಲ್ಲಪಮಂಡೆಯ ಬೋಳಿಸಿ ಕಣ್ಣನೆ ಮುಚ್ಚುವಿಪಿಟಿಪಿಟಿ ಏನದು ಮಂತ್ರದಂಡವೇತಕೆ ಮನಸದು ಚಂಚಲಏತಕೆ ಮಾಡುವಿ ತಂತ್ರ1ಕೈಯಣ ಗಿಂಡಿಯ ಕಂಕುಳ ಪೆಟ್ಟಿಗೆಕಟ್ಟಿಯಿಹುದು ತಲೆಗಟ್ಟುಬೈಗಳೆಂಬುವು ಪರಿಪರಿ ನೋಡಲುಕೋತಿ ಹಾರಿಕೆಯಳವಟ್ಟು2ಜ್ಞಾನವದಿಲ್ಲವು ಪುಸ್ತಕ ಮನೆಯೊಳುಹೋಳಿಗೆ ತುಪ್ಪದ ಗಬಕುಧ್ಯಾನವಿಲ್ಲವು ಮೌನವಿಲ್ಲವು ಯಮನಕೈಯಿಂದ ದುಬುಕು3ನಿರಿವಿಡಿದುಟ್ಟಿಹ ಪಂಚೆಕಚ್ಚೆಯಧೋತ್ರನಾಮ ವಿಭೂತಿಯ ಬೆಳಕುಪರಮಾನ್ನವ ಸಕ್ಕರೆಯನು ಕಲಸಿನುಂಗುವೆ ಗುಳುಕು ಗುಳುಕು4ಮುಂದೆ ಹೇಳುವನ ಮೆಟ್ಟಿಕೊಂಡುಂಬುದುಇಂತಿದು ನಿನ್ನಯ ಬದುಕುಸುಂದರ ಚಿದಾನಂದ ಸ್ವರೂಪವ ತಿಳಿವುದುಎಂದುಎಂದಿಗೆ ಬಲುಧಡಕ5
--------------
ಚಿದಾನಂದ ಅವಧೂತರು
ಸೇವಕತನದ ರುಚಿಯೇನಳೆದೆಯೋ |ದೇವ ಹನುಮರಾಯ ನೀ ವೈರಾಗ್ಯ ಬೇಡಿ ಪಉದಧಿಯ ದಾಟಿ ಸೀತೆಯ ಕಂಡು ಬಂದಾಗಮದುವೆಯ ಮಾಡೆನ್ನಬಾರದಿತ್ತೆ ||ಪದದಿ ಪಾಷಾಣವ ಪೆಣ್ಣ ಮಾಡಿದನಿಗೆಇದು ಏನಾಶ್ಚರ್ಯವೊ ನೀ ಬಯಸಲೊಲ್ಲದೆ 1ಕ್ಷಣದೊಳು ಸಂಜೀವನ ಗಿರಿ ತಂದಾಗಧನವನು ಬೇಡಲು ಕೊಡದಿಹನೇ ||ವಿನಯದ ವಿಭೀಷಣಗೆ ರಾಜ್ಯಪದವನಿತ್ತವನಿಗೆನಾಶ್ಚರ್ಯವೊ ಹನುಮ ನೀನೊಲ್ಲದೆ 2ಸಾರ್ವಭೌಮನು ತಾನೆ ಮೆಚ್ಚಿ ಬಂದಾಗಲೆಉರ್ಪಿಯ ಬೇಡಲು ಕೊಡದಿಹನೇಸರ್ವವ ತೊರೆದು ಶ್ರೀ ಪುರಂದರವಿಠಲನನಿವ್ರ್ಯಾಜ ಭಕುತಿಯ ಬೇಡಿಕೊಂಡೆಯಲ್ಲದೆ 3
--------------
ಪುರಂದರದಾಸರು
ಸೈಸಲಾರೆನೆಗೋಪಿನಿನ್ನ ಮಗನ ಲೂಟಿ |ಏಸೆಂದು ಪೇಳಲಮ್ಮ ||ವಾಸುದೇವನು ಬಂದು ಮೋಸದಿಂದಲಿ ಎನ್ನ |ವಾಸವಸೆಳಕೊಂಡು ಓಡಿ ಪೋದನಮ್ಮಪದೇವರ ಪೆಟ್ಟಿಗೆ ತೆಗೆದು ಸಾಲಿಗ್ರಾಮ |ಸಾವಿರ ನುಂಗುವನೆ ||ಭಾವಜನಯ್ಯಇದೇನೆಂದರೆ ನಿಮ್ಮ |ಕಾಮದೇವರು ನಾನು ಕೇಳಿಕೊ ಎಂಬನೆ 1ಅಗ್ರೋದಕತಂದು ಜಗುಲಿ ಮೇಲಿಟ್ಟರೆ |ವೆಗ್ಗಳದಲಿ ಕುಡಿವ ||ಮಂಗಳ ಮಹಿಮನ ವಿೂಸಲೆಂದರೆ ನಿಮ್ಮ |ಮಂಗಳಮಹಿಮನ ಅಪ್ಪನಾನೆಂಬುವ 2ಅಟ್ಟಡಿಗೆಯನೆಲ್ಲ ಉಚ್ಛಿಷ್ಟವ ಮಾಡಿ |ಅಷ್ಟು ತಾ ಬಳಿದುಂಬನೆ ||ವಿಷ್ಣು ದೇವರ ನೈವೇದ್ಯವೆಂದರೆ ನಿಮ್ಮ |ಇಷ್ಟದೇವರು ತೃಪ್ತನಾದನೆಂತೆಂಬುವ 3ಋತುವಾದ ಬಾಲೆಯರು ಪತಿಯೆಡೆ ಪೋಪಾಗ |ಕೃತಕದಿಂದಡಗಿಹನೆ ||ಮತಿಗೆಟ್ಟ ಪೆಣ್ಣೆ ಸುಂಕವ ಕೊಡು ಎನುತಲಿ |ಪ್ರತಿಯಾಗಿ ಮಾರನ ಸೂರೆಗೊಂಬುವನೆ 4ಅಚ್ಚಪಾಲು-ಮೊಸರುನವನೀತಮಜ್ಜಿಗೆ |ರಚ್ಚೆಮಾಡಿ ಕುಡಿವ ||ಅಚ್ಚ ಪುರಂದರವಿಠಲರಾಯನ |ಇಚ್ಛೆಯಿಂದಲಿ ನಿಮ್ಮ ಮನೆಗೆ ಕರೆದುಕೊಳ್ಳಿ 5
--------------
ಪುರಂದರದಾಸರು
ಸೊಕ್ಕು ನೋಡಿ ಯೋಗೀಶನ ಸೊಕ್ಕು ನೋಡಿಮಿಕ್ಕು ಮೀರಿ ಮೂರಕ್ಕರಗಳಕಂಡುನಕ್ಕು ಪಶ್ಚಿಮಗಿರಿ ಪೊಕ್ಕು ಬೆಳಗಿ ಜನಪಮೂರಕಟ್ಟಿಮೂರನು ಅರಶೀರಗುಟ್ಟಿಆರು ಎಂಟನೆ ಅಟ್ಟಿ ಐದು ಏಳನು ಮೆಟ್ಟಿತೋರುವ ಎರಡು ನಾಲ್ಕನು ತೊಲಗಿಸಿದಾತನ1ಲೋಕದ ಕೂಡ ಕೂಡಿಯೆ ವಿವೇಕ ಬೇಡಏಕವೆಂಬುದು ಬಿಡ ಅನೇಕವೆಂಬುದ ನಾಡಮೂಕ ಪದಗಳೆಂದು ನಿರಾಕರಿಸುತಲಿಹನು2ಅಕ್ಷಯಮುಚ್ಚಿ ತೆರದು ತೆರದಕ್ಷಯ ಮುಚ್ಚಿರಕ್ಷಿಸುತಿಪ್ಪ ಭಾಳೇಕ್ಷಣ ತಾನೆಂದು-ಪೇಕ್ಷೆಮಾಡುತ ಸರ್ವವ ನಿರೀಕ್ಷಿಸುತಿರುವವನ3ಮತಗಳ ನೆನೆದು ಶಾಸ್ತ್ರಗಳ ಗೆಲಿದುಪಾತಾಳಕಿಟ್ಟ ಮತಿ ಮೋಕ್ಷಗಳ ಬಿಟ್ಟ ತಿರುಗಿಸಿ ತಿರುಗಿಸಿ ಹುಟ್ಟಸತತ ಕಾಲದಿ ತನ್ನ ಮತಿ ಹಿಡಿಯೆಂಬನ4ಏನುಪಾಯ ಈ ಯೋಗಿಗೆ ಇನ್ನೇನು ನ್ಯಾಯತಾನಾಗದಗುರುಚಿದಾನಂದನ ತಾ ಕಂಡುತಾನೆ ತಾನಾಗಿ ತೋರುವ ನಿಜ ಯೋಗಿಯ5
--------------
ಚಿದಾನಂದ ಅವಧೂತರು
ಸ್ಥಳವಲ್ಲದ ಸ್ಥಳದಲ್ಲಿ ಕಸ್ತೂರಿಯನಿಟ್ಟ ಬ್ರಹ್ಮಬಳಿಕ ಬೈದರೆ ವಿವೇಕವಹುದೇ ಎಲೆ ತಮ್ಮಪಶೀಲಮೃಗ ನಾಭಿಯಲಿ ಕಸ್ತೂರಿಯನಿಡುವುದುಖೂಳರ ಜಿಹ್ವೆಯಲಿ ಅದನಿಡಲು ನೀತಿಯಹುದುನಾಲಗೆಯ ಲೋಕೋಪಕಾರವಹುದುಮೇಲೆ ಕಸ್ತೂರಿಬಹುದು ಜಗಸಮ್ಮತವಹುದು1ಕಸ್ತೂರಿಗೋಸ್ಕರವೆ ಧರ್ಮ ಮೃಗವಾದುದನು ಬಿಡದೆಕೊಲ್ಲುವವನು ವ್ಯಾಧನೀಗಸಂಚಲ ಚಿತ್ತವುಳ್ಳವನು ವಿಧಿವರವರಿಯನುಅಸ್ತವ್ಯಸ್ತದಿ ಪಶುಗೆ ನೀರತಿದ್ದಿದನು2ಧರಿಸಿದನು ದೋಷವನು ತಾನೀಗ ಎರಡನ್ನಹಿರಿಯರನು ನಿಂದಿಪುದು ಮೃಗವ ಕೊಂದವನುಕರುಣೆ ಚಿದಾನಂದ ಸದ್ಗುರುವಿಗೆ ಮೆಚ್ಚಿಸು ಅದುಮರವಾದ ಮುಪ್ಪಿನಲಿ ವಿಧಾತ್ರನು3
--------------
ಚಿದಾನಂದ ಅವಧೂತರು
ಸ್ಥಿರವಲ್ಲೀಕಾಯಸ್ಥಿರವಲ್ಲ ಹೀಗರಿವಿದ್ದು ಹರಿಪಾದ ಮರೆವರೆ ಪ್ರಾಣಿ ಪ.ಅಟ್ಟಡಿಗೆಎರವುಉಟ್ಟುಡುಗೆಎರವುಇಟ್ಟರೆ ಸಂತತಿಸಿರಿಎರವುಕಟ್ಟೊಡೆದು ಬೆಮರಿಡಿಸಿ ಜವನವರೊಯ್ಯೆಇಟ್ಟಿರುವ ಧಾನ್ಯ ಧನವೆಲ್ಲೊ ಪ್ರಾಣಿ 1ಕೃಪಣತೆಯೊಳಗಿನ ನಿಪುಣತೆ ಬಾರದುಸ್ವಪನ ಸುಖ ಭೋಗಕೆ ಬಾರದುವಿಪಿನದಹನ ಮೃಗದಂತಾಪ್ತರು ಬರರುನೃಪನಾರಾಧನೆ ಫಲವು ಸ್ಥಿರವೆಲೊ ಪ್ರಾಣಿ 2ಹರಿಕೊಟ್ಟಾಗಲೆ ಧರ್ಮ ದೊರಕಿಸಬೇಕುಸರಕಿದ್ದು ತಿರುಕಬುದ್ಧಿಯನು ಬಿಡುಅರಿವುಳ್ಳವರ ಕೂಡಿ ಕೋಟೆಜತನಮಾಡುಮರುಗಲಿ ಬೇಡ ಮುತ್ತಿಗೆ ಬಂತು ಪ್ರಾಣಿ 3ಹವಳ ಮುತ್ತಿನಂಥ ಅವಳಿ ಮಕ್ಕಳ ನಂಬಿಕುವಲಯೇಶನ ಪ್ರಿಯಕುಲೇಶನ ಪುರದಲವಲವಿಕೆಯಲಿ ನಿರಯವಾರ್ತೆ ಜರೆವರೆ ತನ್ನವಳೆ ತನಗೆ ಓಕರಿಸುವಳೊ ಪ್ರಾಣಿ 4ಫಣಿತಲ್ಪಗೊಪ್ಪಿಸಿ ಹಣ ತೃಣ ಮಾಡದಹೆಣ ತನ್ನ ತಾನೆ ಹೊಗಳಿಕೊಂಡರೆಎನಿತುಕಾಲಕೆ ಮೆಚ್ಚ ಪ್ರಸನ್ವೆಂಕಟಪತಿಘನತಪ್ಪ ಕಾಯೆ ತನ್ನವರನು ಪ್ರಾಣಿ5
--------------
ಪ್ರಸನ್ನವೆಂಕಟದಾಸರು
ಸ್ಮರಿಸುವೆ ನಾ ನಿಮ್ಮ ಚರಣಕಮಲಗುರುವಿಜಯರಾಯಜನ್ಮಾರಭ್ಯವು ನಿಮ್ಮ ಗುಣಕರ್ಮಗಳೆಲ್ಲ ವಿಜಯರಾಯದಿವಿಜರ ವೇಷದಿಂದವನಿಯೊಳುದಿಸಿದ್ಯೊ ವಿಜಯರಾಯಭಾಗವತಧರ್ಮವಹಿಸಿ ತ್ರಿರಾವರ್ತಿ ವಿಜಯರಾಯಕಂಚಿಕಾಳ್ಹಸ್ತಿ ಶ್ರೀರಂಗ ಸೇತುಯಾತ್ರೆ ವಿಜಯರಾಯಮರಿಯಾದೆಯಿಲ್ಲದೆ ವರಗಿರಿಯಾತ್ರೆಯ ವಿಜಯರಾಯಮಹಿಯಲ್ಲಿ ತಿರುಗಿ ಸರ್ವಕ್ಷೇತ್ರದಿ ವಿಜಯರಾಯಗುರೂಪದೇಶಕನಾಗಿ ವ್ಯಾಸಕಾಶಿಯಲ್ಲಿದ್ಯೊ ವಿಜಯರಾಯಸ್ವಚ್ಛವಾಗಿ ಗಂಗಾತೀರ ವಾಸಮಾಡಿ ವಿಜಯರಾಯತುಂಗಾತೀರದಿ ಕುಳಿತು ಗಂಗೆ ಪೆಚ್ಚಿಸಿದಿ ವಿಜಯರಾಯಮಧ್ವಮತದಸಾರಕವನದಿ ರಚಿಸಿದ್ಯೊ ವಿಜಯರಾಯಶುದ್ಧ ತತ್ವಸಾರ ಸುಳಾದಿ ಪದಮಾಡಿ ವಿಜಯರಾಯಸದಾಚಾರಸಂಪತ್ತು ಮಧುಕರವೃತ್ತಿಯು ವಿಜಯರಾಯಭಕ್ತರ ಅಪಮ್ಯತ್ಯುಬಿಡಿಸಿ ಆಯುನಿತ್ತೆ ವಿಜಯರಾಯನಿತ್ಯಾನ್ನ ಪುತ್ರೋತ್ಸವಗಳು ಭೃತ್ಯರಿಗೆ ವಿಜಯರಾಯಭಕ್ತಜನರಿಗೆ ತತ್ವೋಪದೇಶವ ಮಾಡಿ ವಿಜಯರಾಯಎಲ್ಲರಲಿ ಸಿರಿನಲ್ಲನ ಅಂಶವ ವಿಜಯರಾಯಬಲ್ಲಿದನೀನೊಂದುರೂಪದಿ ಎನ್ನಲ್ಲಿ ವಿಜಯರಾಯನಿಮ್ಮ ಪುಣ್ಯದ ಶೇಷವಿನ್ನು ಉಂಬೆವೊ ನಾವು ವಿಜಯರಾಯಎನ್ನಿಂದ ಆಗೋ ಸಾಧನವೆಲ್ಲ ನಿನ್ನದೊ ವಿಜಯರಾಯಈಗ ಈ ಯುಗದಿ ಸಾಧನವೆಂಬುದು ಕಾಣೆ ವಿಜಯರಾಯಗುರುನಿನ್ನ ಕರುಣಕವಚತೊಟ್ಟ ಭಕುತರ್ಗೆ ವಿಜಯರಾಯ
--------------
ಗೋಪಾಲದಾಸರು
ಸ್ವಾಮಿ ಸತ್ಯಾಧಿರಾಜ ಮುನಿಗೆಣೆಗಾಣೆ ನಾಭೂಮಿಯ ಮೇಲೆ ಚತುರನಸಾಮಥ್ರ್ಯ ನೋಡಿರಿ ಭಕುತಿಯನರಿಯದಪಾಮರನನು ಬಾಗಿಸುವನ ಪ.ಗುರುಸತ್ಯಾಭಿನವರಾಯನ ಪಟ್ಟದಾನೆಯುಧÀರೆಯ ಮೇಲೋಡಾಡುವಂತೆಚರಿಸುತ ಖಳರನಂಜಿಸಿ ತಪ್ಪ ಕೈಕೊಂಡುಗುರುಪಾದಕೊಪ್ಪಿಸಿ ನಿಂತ 1ಕಲ್ಲು ಕರಗುವುದು ಕೆಚ್ಚು ಮಣಿವುದು ಇದೆಲ್ಲಿಯ ಗಾದೆಯೆಂದೆನಲುಕಲ್ಲೆದೆ ಮಾನಿಸರ ದ್ರವಿಸುವ ಕೆಚ್ಚೆದೆಕ್ಷುಲ್ಲರ ಮಣಿಸುವಕೇಳಿ2ಆಲಸ್ಯವೆ ಮೋಕ್ಷೋಪಾಯ ದಹನೆಂದುಕಾಲವ ಕಳೆಯನು ವ್ಯರ್ಥಮೂಲ ರಘುಪತಿ ಪಾದಾರವಿಂದವ ಮೇಲೆಮೇಲರ್ಚಿಪ ಸಮರ್ಥ 3ಜ್ಞಾನ ಭಕುತಿ ವೈರಾಗ್ಯಪ್ರಣವಜಪಧ್ಯಾನ ಮೌನ ಪರಿಪೂರ್ಣಆನಂದತೀರ್ಥ ಶಾಸ್ತ್ರಾಂಬುಧಿ ತಿಮಿಂಗಿಲದೀನರಸುರತರುಜಾಣ4ತಂದೆ ಸತ್ಯಾಭಿನವ ತೀರ್ಥ ಕರಜಾತಎಂದೆಂದು ಸುಜನರ ಪ್ರಿಯಇಂದಿರೆರಮಣ ಪ್ರಸನ್ವೆಂಕಟೇಶನಹೊಂದಿದ ಸದ್ಗುಣಗೇಹ5
--------------
ಪ್ರಸನ್ನವೆಂಕಟದಾಸರು