ಒಟ್ಟು 3169 ಕಡೆಗಳಲ್ಲಿ , 124 ದಾಸರು , 2261 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈ ಜೀವನಿಂದು ಫಲವೇನು |ರಾಜೀವಲೋಚನನ ಮರೆದಿಹ ತನುವಿನಲಿ ಪ.ಅರುಣನುದಯಲೆದ್ದು ಹರಿಸ್ಮರಣೆಯ ಮಾಡಿ |ಗುರು - ಹಿರಿಯರ ಚರಣಕಮಲಕೆರಗಿ ||ಪರಮಶುಚಿಯಾಗಿ ನದಿಯಲಿ ಮಿಂದು ರವಿಗಘ್ಯ |ವೆರೆಯದೆ ಮರೆಹ ಈ ಪಾಪಿತನುವಿನಲಿ 1ಹೊನ್ನಗಿಂಡಿಯಲಿ ಅಗ್ರೋದಕವನೆ ತಂದು |ಚೆನ್ನಾಗಿ ಹರಿಗೆ ಅಭಿಷೇಕ ಮಾಡಿ ||ರನ್ನದುಡಿಗೆಯುಡಿಸಿ ರತುನಗಳಳವಡಿಸಿ |ಕಣ್ಣಿರಲು ನೋಡಲರಿಯದ ಪಾಪಿತನುವಿನಲಿ 2ನಳನಳಿಸುವ ನಾನಾ ಪುಷ್ಪಗಳು ಶ್ರೀತುಳಸಿ |ಹೊಳೆವ ಕಿರೀಟ ಕೊರಳಲಿ ಪದಕ ||ನಳಿನಾಕ್ಷನಿಗೆ ಕರ್ಪುರದಾರತಿಯನೆತ್ತಿ |ಕಳೆಯ ನೋಡಲರಿಯದ ಪಾಪಿತನುವಿನಲಿ 3ವರಭಕ್ಷ್ಯಗಳುಪರಮಾನ್ನ ಶಾಲ್ಯನ್ನವು |ವರವಾದ ಮಧುಘೃತ ಕ್ಷೀರವನ್ನು ||ಸಿರಿನಾರಾಯಣಗೆ ಸಮರ್ಪಣೆ ಮಾಡಿ ತಾ - |ಎರಡು ಕೈಮುಗಿಯದ ಪಾಪಿತನುವಿನಲಿ 4ಉರಗಾದ್ರಿ - ಸ್ವಾಮಿಪುಷ್ಕರಣಿಗಳು ಮೊದಲಾದ |ಪರಿಪರಿ ತೀರ್ಥಗಳನೆಲ್ಲ ಮಿಂದು ||ತಿರುವೆಂಗಳಪ್ಪ ಶ್ರೀ ಪುರಂದರವಿಠಲನ |ಚರಣವನು ಭಜಿಸಲಯದ ಪಾಪಿತನುವಿನಲಿ 5
--------------
ಪುರಂದರದಾಸರು
ಈ ಪರಿಯ ಅಧಿಕಾರ ಒಲ್ಲೆ ನಾನು |ಶ್ರೀಪತಿಯೆ ನೀನೊಲಿದು ಏನ ಕೊಟ್ಟುದೆ ಸಾಕು ಪಚಿರಕಾಲ ನಿನ್ನ ಕಾಯ್ದು ತಿರುಗಿದುದಕೆ ನಾನು |ಕರುಣದಲಿ ರಚಿಸಿ ನೀ ಈ ದುರ್ಗದಿ ||ಇರ ಹೇಳಿದುದಕೆ ನಾ ಹೊಕ್ಕು ನೋಡಿದೆ ಒಳಗೆ |ಹುರುಳ ಲೇಶವು ಕಾಣೆ ಕರಕರೆಯು ಬಲುನೋಡು 1ದಾರಿಯಲಿ ಹೋಗಿ ಬರುವವರಉಪಟಳಘನ|ಚೋರರಟ್ಟುಳಿಗಂತೂ ನೆಲೆಯೆ ಇಲ್ಲ ||ವೈರಿವರ್ಗದ ಜನರು ಒಳಗೆ ಬಲು ತುಂಬಿಹರು |ಮಿರಿ ನಿನ್ನಲಿ ಮನವನೂರಿ ನಿಲಗೊಡರು 2ಸರಿಬಂದ ವ್ಯಾಪಾರ ಮಾಡಿ ತಾವೆನ್ನನ್ನು |ಬರಿಯ ಲೆಕ್ಕಕೆ ಮಾತ್ರ ಗುರಿಯ ಮಾಡಿ ||ಕರಕರೆಯ ಬಡಿಸಬೇಕೆಂದು ಯೋಚಿಸುತಿಹರು |ಕರೆದು ವಿಚಾರಿಸಿ ನ್ಯಾಯ ಮಾಡಿಸು ದೊರೆಯೇ 3ನಾಮಾಂಕಿತಕೆ ಮಾತ್ರ ಅಧಿಕಾರವೆನಗಿತ್ತೆ |ಸ್ವಾಮಿತ್ವವೋನೋಡುಮನೆಮನೆಯಲಿ ||ಭೀಮ ವಿಕ್ರಮರವರು ದುರ್ಬಲಾಗ್ರಣಿ ನಾನು |ಗ್ರಾಮ ಒಪ್ಪಿಸೆ ನಮಿಪೆ ಸಂಬಂದ ತೆರಮಾಡು 4ಕಾಲಕ್ಕೆ ಕರೆಯ ಬಂದವರಿಗೆ ಒಳಗಾಗಿ |ಪಾಳೆಯವನೊಪ್ಪಿಸಿ ಕೊಡುವೆವೆಂದು ||ಆಲೋಚಿಸಿಹರಯ್ಯ ಈಗಲೆನಗೆ ನಿನ್ನ |ಆಳುಗಳ ಬಲಮಾಡಿ ಎನ್ನ ರಕ್ಷಿಸು ದೊರೆಯೆ 5ಕ್ಷಣಕೆ ನೂರುಪಟಳ ಈ ಕೋಟೆಗೆಲೊ ರಾಯ |ಅನುವಾದ ದಿವಸವೊಂದಾದರಿಲ್ಲ ||ಮೊನೆಗಾರ ಜನವಿಲ್ಲ ಇದ್ದವರು ವಶವಿಲ್ಲ |ಕೊನೆಗೊಂಡು ಗ್ರಾಮ ಕಾಪಾಡುವ ತೆರನೆಂತೊ 6ಎನಗೆ ಈ ಬಹುನಾಯಕರ ಕೊಂಪೆಯೊಳು ವಾಸ-|ವನು ಬಿಡಿಸಿ ನಿನ್ನ ನಿಜ ಪಟ್ಟಣದೊಳು ||ಮನೆ ಮಾಡಿಕೊಡಲು ನಾನಿನ್ನ ನೋಡಿಕೊಳುತ |ಅನುಗಾಲಬದುಕುವೆನೊ ಪುರಂದರವಿಠಲ7
--------------
ಪುರಂದರದಾಸರು
ಈ ವಸುಧೆಯೊಳೆಲ್ಲರಿಗಿಂತ ಕೃಷ್ಣನು ಆವುದರಿಂದಧಿಕಾ ಪವಾರಿಧಿಮನೆಯಲ್ಲೆ ಈಗಿನರಸರಿಗೆ |ನೀರೊಳಗೇಸೊಂದು ಊರಿಲ್ಲವೇ ||ಶಾಙ್ರ್ಗ ಧನುವಾದರೇನು ದುರ್ಲಭವಲ್ಲ |ಧಾರಿಣಿಯೊಳು ಮನೆ ಮನೆಯಲ್ಲಿ ಕಾರ್ಮುಖವು 1ಲೇಸೇನು ಕೌಸ್ತುಭವೊಂದೆಯೇ ಮಣಿಗಳು |ಏಸೊಂದಿಲ್ಲದೆ ಭಾಗ್ಯವಂತರಲ್ಲಿ ||ಶೇಷನ ಹಾಸಿಗೆ ಹಾವಾಡಿಸಿ ಹೊಟ್ಟೆ |ಪೋಷಿಸಿಕೊಳ್ಳರೆ ಗಾರುಡಿಗರೆಲ್ಲ 2ಪೀತಾಂಬರಂತು ಎಲ್ಲರಿಗಿಹದು ದೊಡ್ಡ |ಮಾತಲ್ಲ ವನಮಾಲೆವೈಜಯಂತಿ||ಖ್ಯಾತಿಗೆ ಶಂಖಚಕ್ರವು ಹೇಳಿಕೊಳ್ಳಲು |ಜಾತಿಕಾರಗಿಲ್ಲೇ ಬಡಿವಾರವೇತಕೆ3ಶ್ರೀವತ್ಸ ಶ್ರೀವತ್ಸವೆಂಬರು ಮಂದೆಲ್ಲ |ಆವ ಹುಣ್ಣಿನ ಕಲೆಯಾಗಿಹದೋ ||ಆವಾನಿ ಹಯರಥ ಮುದಿಹದ್ದುಯೇರುವ |ಕೋವಿದರೆಲ್ಲೇನು ನೋಡಿ ವಂದಿಸುವರೋ 4ವೈಕುಂಠ ಮೊದಲಾದ ಮೂರೇ ಊರವನಿಗೆ |ಲೋಕದೊಳರಸರಿಗೇಸೋ ವೂರು ||ಶ್ರೀಕಾಂತ ಪ್ರಾಣೇಶ ವಿಠಲನ ಸಂಗ |ಬೇಕೆಂದು ಬಯಸುವರೆಲ್ಲರೂ ತಿಳಿಯದೆ 5
--------------
ಪ್ರಾಣೇಶದಾಸರು
ಈಗಲೆ ಭಜಿಸಲೆಜಿಹ್ವೆ - ನೀ - |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಜಾಗುಮಾಡದೆಶ್ರೀ ಹರಿಪಾದಾಂಬುಜವಪ.ದೇಹದೇಹ ಸಂಬಂಧಿಗಳು - ಅವರು |ಮೋಹಬದ್ಧರಾಗಿ ಕುಳಿತಿಹರು ||ಆಹಾರ ಗುಹ್ಯೇಂದ್ರಿಯವೆಂಬ ಎರಡರ |ಬೇಹಾರದಲಿ ನೀನು ಮುಳುಗಿಸದಲೆ ಮನ 1ಮರಣ ತೊಡಗಿ ನಾಲಗೆಯುಡುಗಿ - ನಿನ್ನ - |ತರುಣಿ ಪುತ್ರ ಮಿತ್ರರಳುತಿರಲು ||ಕೊರಳೊಳು ಗುರುಗುರು ಗುರುಗುಟ್ಟುವಾಗನರ - |ಹರಿಯ ನಾಮವೆನ್ನಗೊಡದೆಲೊ ಪ್ರಾಣಿ 2ಅಸಿಪತ್ರವನದೊಳು ಹೊಗಿಸಿ - ನಿನ್ನ - |ಬಸೆವಸೆಖಂಡ ಹೊರವೊಡಿಸಿ |ಬಿಸಿಬಿಸಿ ನೆತ್ತರು ಬಸಿದು ಹೋಗುವಾಗ |ಕುಸುಮನಾಭನ ನಾಮ ನೆನೆಯಗೊಡದು ಮನ 3ತಪ್ತಲೋಹದ ಮೋಲೊರಗಿಸಿ - ನಿನ್ನ - |ಕತ್ತರಿಸಿದ ಖಂಡ ಬೇಯಿಸುವರು ||ನೆತ್ತಿಯ ಕೊರೆದು ನಾಲಗೆ ಹಿರಿದೊಗೆವಾಗ |ಚಿತ್ತಜನಯ್ಯನ ನೆನೆಯಗೊಡದು ಮನ 4ಕುಂಭಿಪಾಕದೊಳಗೆ ಕುದಿಸಿ - ನಿನ್ನ |ಅಂಬುಮೊನೆಗಳಿಂದಿರಿಯಿಸಿ ||ಅಂಬರಕೊಗೆಯ ಕಾಗೆಯು ಕಚ್ಚಿ ಕಡ್ಞಿಗ |ಅಂಬುಜಾಕ್ಷನ ನಾಮ ನೆನೆಯಗೊಡದು ಮನ 5ದುರುಳ ಯವದೂತರಾರ್ಭಟಿಸಿ - ನಿನ್ನ - |ಎರಕದ ಕಾಯ್ದ ಕಂಬಕೆ ತಕ್ಕೆಗೆಯ್ಸಿ ||ಪರಿಪರಿ ಭವದೊಳು ಬಳಲಿಸುತಿರುವಾಗ |ಪುರುಷೋತ್ತಮನ ನಾಮ ನೆನೆಯಗೊಡದು ಮನ 6ದುರಿತಕೋಟಿಗಳ ಹರಿಸುವ - ನಿನ್ನ - |ನರಕಬಾಧೆಗಳ ತಪ್ಪಿಸುವ ||ಪರಮ ಪುರುಷ ನಮ್ಮ ಪುರಂದರವಿಠಲನ |ನಿರುತದಿ ನೆನೆದು ನೀ ಸುಖಿಯೊಗೋ ಮನವೆ 7
--------------
ಪುರಂದರದಾಸರು
ಈಚೆಗೆ ದೊರೆತ ಹಾಡುಗಳು506ನರಹರಿಯ ನೋಡಿರೈಸರಸಿಜನಾಭನ ನಿರುಕಿಸಲೀಕ್ಷಣ ಪ.ಮನದಣಿಯಾ ನೋಡಿರೈಮನಮೊರೆಯಾ ಬೇಡಿರೈ ಅ.ಪ.ತರಳಪ್ರಲ್ಹಾದನ ಮೊರೆಯನುಕೇಳಿಭರದಿಂನರಮೃಗರೂಪವ ತಾಳಿದುರುಳಹಿರಣ್ಯಕಶ್ಯಪನನು ಸೀಳಿದಪರಿಯ ನೋಡಿರೈ 1ಭವಪಿತ ಭವನುತ ಭವತಾಡರಹಿತಭವನಾಮಾಂಕಿತ ಭವಭವ ವಂದಿತನವ ಮನ್ಮಥ ಶತಧೃತನ ಮೃತನೊಳಮಿತ ಸಿರಿಯಾ ಬೇಡಿರೈ 2ಸುರನರ ಕಿನ್ನರನುತವಿಶ್ವಂಭರಮುರಹರವಂದಿತ ವಳಲಂಕಾಪುರವರಲಕ್ಷ್ಮೀನಾರಾಯಣನರಕೇ-ಸರಿಯಾ ನೋಡಿರೈ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಉಡುಪಿಕೃಷ್ಣನ ನೋಡಿರಿ ಶ್ರೀಹರಿ ಚರಿತಸಡಗರವನು ಕೇಳಿರಿ ಪಪೊಡವಿಯೊಳು ಸಮರಿಲ್ಲ ಈತನಉಡುಪ ಮುಖ ಶ್ರೀ ಕೃಷ್ಟರಾಯನಕಡಲತಡಿಯಲಿ ನೆಲಸಿದಾತನಮೃಡಪುರಂದರೊಡೆಯ ದೇವನ 1ಮಧ್ವಸರೋವರ ಸ್ನಾನವ ಮಾಡುತ ಮನಶುದ್ದಭಾವದಿ ನಲಿದುಮಧ್ವಶಾಸ್ತ್ರÀವ ಸಾಧು ಸಜ್ಜನರಿಗೆ ಪೇಳ್ದಪದ್ಧತಿ ಮೀರದೆ ಶ್ರದ್ಧಾಭಕುತಿಯಿಂದ 2ಮಧ್ಯದಲ್ಲಿಹ ಅನಂತೇಶ್ವರನನುಶುದ್ಧ ಭಕುತಿಲಿ ನಮಿಸಿ ಸ್ತುತಿಸುತಮುದ್ದು ಕೃಷ್ಣನ ಹೆಜ್ಜೆ ಪಂಙ್ತಯಶ್ರದೆÀ್ಧ ಸಡಗರ ನೋಳ್ಪಸುಜನರು 3ಕಾಲಲಂದುಗೆ ಗೆಜ್ಜೆಯು ಕಯ್ಯೊಳು ಕಡ-ಗೋಲನೇಣನೆ ಪಿಡಿದುಬಾಲನಂದದಿ ಗೋಪಾಲರೂಪವ ತೋರ್ದಶ್ರೀ ಲಲಾಮನ ದಿವ್ಯ ಬಾಲಕೃಷ್ಣನರೂಪ4ಬಾಲಯತಿಗಳು ವೇಳೆ ವೇಳೆಗೆಬಾಲಕೃಷ್ಣನ ಪೂಜೆ ಮಾಡುತಬಾಲರೂಪವ ನೋಡಿ ಸುಖಿಪರುಶೀಲಗುಣಸುರವರನ ಸ್ತುತಿಪರು5ಮಧ್ವರಾಯರಿಗೊಲಿದು ಉಡುಪಿಯ ಮಣ್ಣ-ಗೆಡ್ಡೆಯೊಳಗೆ ಪೊಳೆದುಅದ್ವೈತಮತದ ಸದ್ದಡಗಿಸಿ ಮೆರೆದಂಥಮುದ್ದು ಸರ್ವಜÕರ ಆಜ್ಞಾಧಾರಕರೆಲ್ಲ 6ಶುದ್ಧ ತತ್ವಜÕರು ರಚಿಸಿದಪದ್ಧತಿಯ ಸಾಧಿಸುತ ಸಂತತಶ್ರದ್ಧೆಯೊಳು ಹರಿಕಾರ್ಯ ನಡೆಸುವಶುದ್ಧಯತಿಗಳ ಸೇವೆಗೊಲಿಯುವ 7ಪರಿಯಾಯದಿನ ಬರಲು ಶ್ರೀ ಹರಿಯನ್ನುಪರಿಪರಿವಿಧ ಪೂಜಿಸಿಪರಮವೈಭವದಿಂದ ಹರಿಯನ್ನುಕರತಂದುವರರಥÀವೇರಿ ಕುಳ್ಳಿರಿಸುವ ಭಕುತಿಯಲಿ 8ಪರಿಪರಿಯ ವಾದ್ಯಗಳು ಮೊಳಗಲುಸರುವ ಯತಿಗಳು ನೆರೆದು ಹರುಷದಿಪರಮಮಂಗಳಮೂರ್ತಿಕೃಷ್ಣನಹರುಷದಲಿ ಕೊಂಡಾಡಿ ಸುತ್ತಿಪರು 9ಕೊರಳಕೌಸ್ತುಭಮಾಲೆಯು ವೈಜಯಂತಿಯುಮುರುಡಿ ಸರಪಣಿ ಗೆಜ್ಜೆಯುಪರಿಪರಿ ರತ್ನಾಭರಣಗಳ್ಹೊಳೆಯುತಜರದ ಪೀತಾಂ¨Àರದಿಂದ ಶೋಭಿಪ ದಿವ್ಯ 10ಕನಕಕಸ್ತೂರಿ ತಿಲಕ ಫಣೆಯಲಿಮಿನುಗುತಿಹ ಸ್ತ್ರೀರೂಪಧರಿಸಿದಕನಕಪೀಠದಿ ಮೆರೆದ ಕಮಲ-ನಾಭವಿಠ್ಠಲನ ಸೇವಿಸುವ ಜನ11
--------------
ನಿಡಗುರುಕಿ ಜೀವೂಬಾಯಿ
ಉತ್ಥಾನ ದ್ವಾದಶಿಯ ದಿವಸ(ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ)ರಂಭೆ : ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ.ಮಾನಿನೀಮಣಿ ಈತನ್ಯಾರೆ ಕರುಣಾನಿಧಿಯಂತಿಹ ನೀರೆ ಹಾ ಹಾಭಾನುಸಹಸ್ರ ಸಮಾನಭಾಷಿತ ಮ-ಹಾನುಭಾವನು ಸುಪ್ರವೀಣನಾಗಿಹ ಕಾಣೆ 1ಭಯಭಕ್ತಿಯಿಂದಾಶ್ರಿತರು ಕಾಣಿ-ಕೆಯನಿತ್ತುನುತಿಸಿಪಾಡಿದರು ನಿರಾ-ಮಯ ನೀನೇ ಗತಿಯೆಂದೆಲ್ಲವರು ಹಾ ಹಾಭಯನಿವಾರಣ ಜಯ ಜಯವೆಂದು ನುತಿಸೆ ನಿ-ರ್ಭಯಹಸ್ತತೋರುತ ದಯಮಾಡಿ ಪೊರಟನೆ2ಭೂರಿವಿಪ್ರರ ವೇದ ಘೋಷದಿಂದಸ್ವಾರಿಗೆ ಪೊರಟ ವಿಲಾಸ ಕೌಸ್ತು-ಭಾರತ್ನ ಹಾರ ಸುಭಾಸ ಹಾ ಹಾಚಾರುಕಿರೀಟಕೇಯೂರಪದಕಮುಕ್ತಾಹಾರಾಲಂಕಾರ ಶೃಂಗಾರನಾಗಿರುವನು 3ಸೀಗುರಿ ಛತ್ರ ಚಾಮರದ ಸಮವಾಗಿ ನಿಂದಿರುವ ತೋರಣದ ರಾಜಭೋಗನಿಶಾನಿಯ ಬಿರುದ ಹಾ ಹಾಮಾಗಧಸೂತ ಮುಖ್ಯಾದಿ ಪಾಠಕರ ಸ-ರಾಗ ಕೈವಾರದಿ ಸಾಗಿ ಬರುವ ಕಾಣೆ 4ಮುಂದಣದಲಿ ಶೋಭಿಸುವ ಜನಸಂದಣಿಗಳ ಮಧ್ಯೆ ಮೆರೆವ ತಾರಾವೃಂದೇಂದುವಂತೆ ಕಾಣಿಸುವ ಹಾಹಾಕುಂದಣಖಚಿತವಾದಂದಣವೇರಿ ಸಾ-ನಂದದಿ ಬರುವನು ಮಂದಹಾಸವ ಬೀರಿ 5ತಾಳ ಮೃದಂಗದ ರವದಿಶ್ರುತಿವಾಲಗಭೇರಿರಭಸದಿ ಜನಜಾಲಕೂಡಿರುವ ಮೋಹರದಿ ಹಾಹಾಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ-ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6ಊರ್ವಶಿ: ಈತನೆ ಭಾಗ್ಯನಿಧಿ ನೋಡೆ ನೀ ಮುದದಿ ಪ.ಈತನೆ ಈರೇಳು ಲೋಕದದಾತನಾರಾಯಣ ಮಹಾ ಪುರು-ಹೂತ ಮುಖ್ಯಾಮರವಿನುತನಿ-ರ್ಭೀತ ನಿರ್ಗುಣ ಚೇತನಾತ್ಮಕ ಅ.ಪ.ಮೀನ ರೂಪವೆತ್ತಾಮಂದರಪೊತ್ತಭೂನಿತಂಬಿನಿಯ ಪ್ರೀತಮಾನವಮೃಗಾಧಿಪ ತ್ರಿವಿಕ್ರಮದಾನಶಾಲಿ ದಶಾನನಾರಿ ನ-ವೀನ ವೇಣುವಿನೋದ ದೃಢ ನಿ-ರ್ವಾಣ ಪ್ರವುಢ ದಯಾನಿಧಿ ಸಖಿ 1ವಾರಿಜಾಸವಾನವಂದಿತ ಶ್ರೀಪಾದಯುಗ್ಮವತೋರಿಕೊಂಬುವ ಸಂತತಕೇರಿಕೇರಿಯ ಮನೆಗಳಲಿ ದಿ-ವ್ಯಾರತಿಯ ಶೃಂಗಾರ ಭಕ್ತರ-ನಾರತದಿ ಉದ್ಧಾರಗೈಯಲುಸ್ವಾರಿ ಪೊರಟನು ಮಾರಜನಕನು 2ಮುಗುದೆ ನೀ ನೋಡಿದನು ಕಾಣಿಕೆಯ ಕ-ಪ್ಪಗಳ ಕೊಳ್ಳುವನು ತಾನುಬಗೆಬಗೆಯ ಕಟ್ಟೆಯೊಳು ಮಂಡಿಸಿಮಿಗಿಲು ಶರಣಾಗತರ ಮನಸಿನಬಗೆಯನೆಲ್ಲವ ಸಲ್ಲಿಸಿ ಕರುಣಾಳುಗಳ ದೇವನು ಕರುಣಿಸುವ ನೋಡೆ 3ರಂಭೆ : ದೃಢವಾಯಿತೆಲೆ ನಿನ್ನ ನುಡಿಯು ಸುರಗಡಣಓಲಗಕೆ ಇಮ್ಮಡಿಯು ಜನ-ರೊಡಗೂಡಿ ಬರುತಿಹ ನಡೆಯು ಹಾ ಹಾಮೃಡಸರೋಜ ಸುರಗಡಣ ವಂದಿತಕ್ಷೀರಕಡಲ ಶಯನ ಜಗದೊಡೆಯನಹುದು ಕಾಣೆ 1ಮದಗಜಗಮನೆ ನೀ ಪೇಳೆ ದೇವಸದನವ ಪೊರಡುವ ಮೊದಲೇ ಚಂದ-ನದಪಲ್ಲಂಕಿಯ ತಂದು ಮ್ಯಾಲೆ ಹಾ ಹಾಮುದದಿಂದ ಬಾಲಕರೊದಗಿ ಸಂತೋಷದಿಚದುರತನದಿ ಪೋಗುವನು ಪೇಳೆಲೆ ನೀರೆ 2ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವಶ್ರೀರಮಾಧವನ ಲೀಲೆಘೋರದೈತ್ಯಕುಠಾರ ಲಕ್ಷ್ಮೀನಾರಾಯಣನ ಬಲಕರ ಸರೋಜದಿಸೇರಿ ಕುಳಿತ ಗಂಭೀರ ದಿನಪನಭೂರಿತೇಜದಿ ಮೆರೆವುದದು ತಿಳಿ 1ದೊರೆಯು ಬರುವನು ಎಂದು ಎಲ್ಲರಿಗೆ ಗೋ-ಚರಿಸುವನೊಲಿದುಇಂದುತರ ತರದ ಆರತಿಗಳನು ನೀವ್ಧರಿಸಿ ನಿಂದಿರಿಯೆಂದು ಜನರಿಗೆ-ಚ್ಚರಿಗೆಗೋಸುಗ ಮನದ ಭಯವಪ-ಹರಿಸಿ ಬೇಗದಿ ಪೊರಟು ಬಂದುದುರಂಭೆ :ಸರಸಿಜನಯನೆ ನೀ ಪೇಳೆಸೂರ್ಯಕಿರಣದಂತಿಹುದೆಲೆ ಬಾಲೆ ಸುತ್ತಿಗೆರಕವಾಗಿಹುದು ಸುಶೀಲೆ ಆಹಾಹರಿಯ ವೈಕುಂಠ ನಗರದಂತೆ ಜ್ಯೋತಿ ವಿ-ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1ಊರ್ವಶಿ : ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧದ್ವಾದಶಿಯೊಳಗೆ ಬಾಲೆಮಾಧವನ ಪ್ರೀತ್ಯರ್ಥವಾಗಿ ಶು-ಭೋದಯದಿ ಸಾಲಾಗಿ ದೀಪಾರಾಧನೆಯ ಉತ್ಸಹದ ಮಹಿಮೆಯಸಾದರದಿ ನೀ ನೋಡೆ ಸುಮನದಿ 1ನಿಗಮಾಗಮದ ಘೋಷದಿ ಸಾನಂದ ಸು-ತ್ತುಗಳ ಬರುವ ಮೋದದಿಬಗೆ ಬಗೆಯ ನರ್ತನ ಸಂಗೀತಾದಿಗಳ ಲೋಲೋಪ್ತಿಯ ಮನೋಹರದುಗುಮಿಗೆಯ ಪಲ್ಲಂಕಿಯೊಳು ಕಿರು 2ನಗೆಯ ಸೂಸುತ ನಗಧರನು ಬಹಚಪಲಾಕ್ಷಿ ಕೇಳೆ ಈ ವಸಂತ ಮಂ-ಟಪದಿ ಮಂಡಿಸಿದ ಬೇಗಅಪರಿಮಿತ ಸಂಗೀತ ಗಾನ ಲೋ-ಲುಪನು ಭಕ್ತರ ಮೇಲೆ ಕರುಣದಿಕೃಪೆಯ ಬೀರಿ ನಿರುಪಮ ಮಂಗಲಉಪಯಿತನು ತಾನೆನಿಸಿ ಮೆರೆವನು 3ಪಂಕಜಮುಖಿನೀ ಕೇಳೆ ಇದೆಲ್ಲವುವೆಂಕಟೇಶ್ವರನ ಲೀಲೆಶಂಕರಾಪ್ತನು ಸಕಲ ಭಕ್ತಾತಂಕವನು ಪರಿಹರಿಸಿಕರಚಕ್ರಾಂಕಿತನು ವೃಂದಾವನದಿ ನಿಶ್ಯಂಕದಿಂ ಪೂಜೆಯಗೊಂಡನು 4ಕಂತುಜನಕನಾಮೇಲೆ ಸಾದರದಿ ಗೃ-ಹಾಂತರಗೈದ ಬಾಲೆಚಿಂತಿತಾರ್ಥವನೀವ ಲಕ್ಷ್ಮೀಕಾಂತ ನಾರಾಯಣನು ಭಕುತರತಿಂಥಿಣಿಗೆ ಪ್ರಸಾದವಿತ್ತೇ-ಕಾಂತ ಸೇವೆಗೆ ನಿಂತಮಾಧವ5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಉಪ್ಪವಡಿಸಯ್ಯ ಕೃಷ್ಣ ಪ.ಉಪ್ಪವಡಿಸೈ ಬೊಮ್ಮನಪ್ಪ ಭುವನಾವಳಿಯಸ್ವಪ್ಪನಾದಿ ತ್ರಯವನಪ್ಪಿ ಪಾಲ್ಗಡಲ ಮಗಳಪ್ಪಿ ಅಹಿವರನ ಸುಪ್ಪತ್ತಿಗೆಲಿ ಒರಗಿಪ್ಪತಿಮ್ಮಪ್ಪವ್ರಜದಿ ದಯದಿಅ.ಪ.ಅರುಣಮೂಡಣವೇರೆ ತ್ವರಿತ ತಮಕುಲ ಜಾರೆಹರಿದವಭ್ರದ ತಾರೆ ತರಣಿಕರ ಬಳಿ ಸಾರೆಸರಸಿಜವಿಕಸತೋರೆ ಮರುತ ಪರಿಮಳ ಬೀರೆ ನೆರೆದುಹರುಷ ದಿವಿಗಣ ಬೀರೆ ಮೊರೆಯುತಿವೆ ಸುರಭೇರೆಪರಮಹಂಸರು ಮೇರೆ ಮರೆದು ಸ್ಮರಿಸುತಲೈದಾರೆಸರ್ವವೇದ ಘೋಷ ಹರಿಪರವೆನುತಲೈದಾರೆ ಕರುಣದಲಿವಸುಧ್ಯೆರೆದಕಾಷ್ಠಗಂಧಕುಸುಮಸರ ತಂದಿಹಳುಬಿಸಜಲೋಚನ ನಿಮ್ಮ ಸೊಸೆ ವಾಣಿ ಭಾರತಿಯುಲ್ಲಸದಿ ಪೊಂಭಾಂಡದಲಿ ಬಿಸಿನೀರು ತುಂಬಿಹರುಪಶುಪಸುಸುಪರ್ಣವಸನಉರಗೇಶ ರತುನನಾಸನಮಾಲ್ಯಸುರಪತಿಕಲಶ ವಹಿಸಿ ವರುಣಸ್ಮರತಿಲಕಹಸನ ಮಾಡುವ ಪಾವುಗೆಶಶಿಧರಿಸಿ ನಿಂದ ಸಂತಸದಿಸ್ವರ್ಧುನಿಯು ಗೋದೆ ಗೋವರ್ಧಿನಿಯು ಗಾತ್ರೆಅಜನರ್ಧಾಂಗಿ ಸರಸ್ವತಿ ಶ್ರೀವರ್ಧಿನಿಯು ಕಾವೇರಿನಿರ್ದೋಷಿ ಸರಯು ತುಂಗಭದ್ರೆ ಕಾಳಿಂದಿ ನರ್ಮದ್ಯೆಮರ್ದಿತಘೌಘೆಯು ಕುಮುದ್ವತಿ ವಂಜರೆ ಭೀಮೆನಿರ್ಧೂತಕಲಿಮಲಕಪರ್ದಿನಿಯು ತಾಮ್ರಪರ್ಣಿಊಧ್ರ್ವಗತಿಪ್ರದ ನದಿ ಬಂದಿರ್ದವಿದೆ ತೀರ್ಥ ಕ್ರಮಕಿನ್ನರರು ಸುರನಾಯಕ ಮನ್ನೆಯರು ಸಲೆ ದೇವಗನ್ನೆಯರುಕಿಂಪುರುಷಪನ್ನಗರು ವಿದ್ಯಾಧರನಿಕರ ತುಂಬುರರು ನಿನ್ನಗುಣಕೀರ್ತನೆಯ ಮಾರ್ಗೋನ್ನತದಚೆನ್ನ ಭೂಪಾಳಿ ದೇವ ಧನಶ್ರೀ ದೇಶಾಕ್ಷಿಸನ್ನುತವಸಂತ ಮಲಹ ನವೀನ ಮಾಳ್ಪ ಶ್ರೀಘನ್ನ ಸ್ವನಾಮಂಗಳನು ಪಾಡುವರಿದಕೋ ಧನ್ಯ ಸಂಗೀತಲೋಲ4ಸುರಮುನಿ ಭೃಗು ವಸಿಷ್ಠ ನರಪಋಷಿ ಸನಕಾದ್ಯಮರೀಚ್ಯತ್ರಿ ಪುಲಸ್ತ್ಯ ಆಂಗಿರ ಚ್ಯವನ ಸೌಭರಿಯು ಭಾರಧ್ವಾಜಗಸ್ತ್ಯ ಪರಾಶರ ಕಶ್ಯಪ ಜಮದಗ್ನಿ ಗಾಗ್ರ್ಯಮಾರ್ಕಂಡೇಯ ಬಕದಾಲ್ಭ್ಯ ಕರಂಧಮೋದ್ಧಾಲಕನುವರದಾಂಕ ಜಹ್ನುಮುನಿ ವರ್ಣಿಕುಲದಗಣಿತರುನೆರೆನೆರೆದುತುತಿಸಿಸುಖಭರಿತರಾಗುತ ನಿಮ್ಮ ಚರಣದೂಳಿಗಕ್ಷಿತಿಪರೊಳು ಮರುತ ಪ್ರಿಯವ್ರತ ಪ್ರಾಚೀನ ಬರ್ಹಿಪ್ರಥು ಗಯ ಧ್ರುವಿಕ್ಷ್ವಾಕು ದಿತಿಜಸುತ ಮಾಂಧಾತಪ್ರತಿಸಗರ ನಹುಷಬಲಿಶತಧನ್ವಿದೇಹಿ ದಶರಥಶ್ರುತಕೀರ್ತಿ ಶಿಬಿ ದೇವವ್ರತ ಅಂಬರೀಷನು ಭರತದ್ವಯ ಪುರೂರವ ಯಯಾತಿ ರಂತಿದೇವ ಪರೀಕ್ಷಿತನು ಮುಚುಕುಂದ ನಳ ಶತಪುಣ್ಯಶ್ಲೋಕ ನೃಪರತಿನಂದಗೋಕುಲದ ಗೋವಿಂದಗಾರ್ತರು ನಿದ್ರೆಹೊಂದೆದ್ದಾನಂದದಿಂ ದೀಪಗಳ ಪ್ರಜ್ವಲಿಸಿಮಿಂದು ಬ್ರಾಹ್ಮಿಯಲುಟ್ಟು ಪೊಂದೊಡಿಗೆ ಮಣಿದೊಡಿಗೆವಂದಿಸುತ ಗೃಹದೇವರ ದಧಿಮಥಿಸಿ ಬೆಣ್ಣೆಯಇಂದಿರೆರಮಣ ಮೆಲ್ಲಲೆಂದು ತೆಗೆದಿಡಲರುಹಬಂದಿಹರು ಗೋವಳರು ಮುಂದೆದ್ದು ತಮ್ಮ ಏಳೆಂದುಶ್ರೀಪತಿಯೆ ಬ್ರಹ್ಮಾದಿ ತಾಪಸರ ಪ್ರಭು ಏಳುದ್ವೀಪ ದ್ವೀಪಾಂತರದ ಭೂಪರರಸನೆ ಏಳುಕಾಪುರುಷ ಕಾಳ ಕುಮುದಾಪಹರಹರಿಏಳು ಕೋಪಹೇಪಾರ್ಥಸಖಸುಪ್ರತಾಪ ಜಗ ಎರಡೇಳುವ್ಯಾಪಕನೆ ವಿಬುಧಕುಲಸ್ಥಾಪಕನೆ ಮೂರೇಳುಕೂಪಕುಲನಾಶಕ ಚಮೂಪ ಸಂಹರ ಏಳು ದ್ರೌಪದೀ ಬಂಧು ಏಳು 8ಶ್ರುತಿಯ ತರಲೇಳು ಭೂಭೃತವ ಹೊರಲೇಳುಶುಭಧೃತಿಯನಾಳೇಳು ದುರ್ಮತಿಯ ಸೀಳೇಳಮರತತಿಯ ಸಲಹೇಳು ನಿಜಪಿತನ ಕಾಯೇಳು ಮಹಿಸುತೆಗೆಸತಿಯರಾಳೇಳು ಪತಿವ್ರತೆರ ಗೆಲಲೇಳುಕಲಿಖತಿಯ ಕಳಿಯೇಳು ಪಂಡಿತರುಳುಹಲೇಳು ನಮಗತಿಶಯ ಪ್ರಸನ್ನವೆಂಕಟಪತಿ ಕೃಷ್ಣ ಸದ್ಗತಿದಾತ ತಾತಯೇಳೈ 9
--------------
ಪ್ರಸನ್ನವೆಂಕಟದಾಸರು
ಉಪ್ಪವಡಿಸಯ್ಯ ಹರಿಯೇಏಳೈ ಹೃಷಿಕೇಶ ಏಳುರವಿ-ಶಶಿನಯನಪ.ಏಳು ಪಶುಗಳ ಕಾಯ್ದು ಪಾಲಿಸಿದೆ ಗೋಕುಲವಏಳು ಸುರವಂದಿತನೆ ಏಳು ಭೂಸತಿರಮಣಉಪ್ಪವಡಿಸಯ್ಯ ಹರಿಯೇ ಅಪಪಚ್ಚೆ ಮುಡಿವಾಳಗಳು ಅಚ್ಚ ಸೇವಂತಿಗೆಯುಬಿಚ್ಚು ಮಲ್ಲಿಗೆ ಜಾಜಿ ಸಂಪಿಗೆಯುಪುನ್ನಾಗಅಚ್ಚರಿಯ ಬಕುಲ ಕೆಂಜಾಜಿ ಕೇತಕಿಕುಸುಮಗುಚ್ಛಗಳಅಚ್ಚ ಜಾಣೆಯರು ಶ್ರೀಗಂಧ ಕಸ್ತೂರಿ ಪುನುಗುಬಿಚ್ಚು ಬಿಳಿಯೆಲೆಯಡಿಕೆ ಪಿಡಿದು ನಿಂತಿಹರಯ್ಯಮುಚ್ಚುತಿವೆ ತಾರೆಗಳು ಹೆಚ್ಚುತಿವೆ ರವಿಕಿರಣ ಅಚ್ಯುತನೆಉಪ್ಪವಡಿಸೊ 1ಚೆನ್ನೆಯರು ಚದುರೆಯರು ಸುಗುಣಸಂಪನ್ನೆಯರುಪನ್ನೀರು ತುಂಬಿರ್ದ ಪೊನ್ನ ತಂಬಿಗೆಗಳನುರನ್ನಗನ್ನಡಿಯನ್ನು ಪಿಡಿದು ನಿಂತಿರುವರೈ ಪನ್ನಂಗಶಯನ ಏಳೈ ||ಮನ್ನಣೆಯ ನಾರದರು ಮೊದಲಾದ ಮುನಿನಿಕರನಿನ್ನ ಮಹಿಮೆಗಳನ್ನು ಪಾಡಿ ನಲಿಯುವರಯ್ಯಇನ್ನು ಏಳೇಳು ಉದಯದ ಸಮಯ ಸಿರಿಯರಸಚೆನ್ನಿಗನೆ ಉಪ್ಪವಡಿಸೊ 2ದೇವದುಂದುಭಿ ಮೊಳಗೆ ದೇವಕನ್ನೆಯರೆಲ್ಲದೇವಾಂಗ ವಸ್ತ್ರವನು ಪಿಡಿದು ನಿಂತಿಹರಯ್ಯದೇವ ದೇವೇಶ ನಿಮ್ಮೋಲಗದ ಸಂಭ್ರಮಕೆ ದೇವತೆಗಳೆಲ್ಲ ಕರೆದು ||ದೇವ ಪ್ರಹ್ಲಾದಬಲಿ ಮುಖ್ಯರನು ಕಾಯ್ದವನೆದೇವ ಬ್ರಹ್ಮನ ಪಡೆದ ದೇವಗಂಗೆಯ ಪಿತನೆದೇವ ದೇವೋತ್ತಮನೆ ದೇವಾಧಿದೇವ ಪುರಂದರವಿಠಲಉಪ್ಪವಡಿಸೊ 3
--------------
ಪುರಂದರದಾಸರು
ಉಪ್ಪವಡಿಸೆಲೆಲೆ ತಂದೆಸರ್ಪಗಿರಿವಾಸ ಶ್ರೀನಿವಾಸ ದಯದಿ ಪ.ಕಮಲಸಖಸೂರ್ಯಮೂಡದ ಮುನ್ನೆ ಮುನಿಜನರುತಮ ತಮಗೆ ನೀನೊಲಿದ ನಿನ್ನ ಪ್ರತಿಮೆಯ ಪದಕೆನಮಿಸುತೈದಾರೆ ಧ್ಯಾನಮೌನ ಜ್ಞಾನದೊಳವರುರಮೆಯರಸ ಯೋಗನಿದ್ರನೆ 1ಸುಳಿಗಾಳಿ ಸೌರಭಿಯ ಬಳಿವಿಡಿದು ಮಧುಪಕುಲಸುಲಲಿತ ಸ್ವನದಿ ಪಾಡುತಿರೆಸಾರಸಮಯೂರಗಿಳಿಕೋಕಿಲ ಮರಾಳ ಚಕ್ರವಾಕ ಶಕುಂತಬಳಗ ಬಲು ತುತಿಸುತಿವೆ ಕೋ 2ಪವಿತ್ರೆಯೆನಿಸುವ ದೇವನದಿ ಯಮುನೆ ಗೋದಾವರಿ ಸರಸ್ವತಿ ಶ್ರೀಕೃಷ್ಣ ಕಾಳಿಂದಿಕಾವೇರಿ ತುಂಗಭದ್ರೆ ಭೀಮಾದ್ಯರೈತರಲುಪಾವನಿಸುತೀರ್ಥಪದನೆ3ಹನುಮಸುರಋಷಿದೇವ ಗಂಧರ್ವ ಕಿಂಪುರಷರನುನಯದಿ ದಂಡಿಗೆ ಸುವೀಣೆಯಂ ಮುಟ್ಟಿ ನಿಜತನುವ ಮರೆದು ಉಗ್ಗಡಿಸುತಿರೆ ಸರಸಪ್ರಿಯಸನಕಾದಿ ವಂದ್ಯ ಕೃಷ್ಣ 4ತಮಜಾರಿ ಕೇಳುಮಂದರಪೊರೆಯಲೇಳೈ ವಸುಮತಿಲ್ಭಕ್ತ ಇಂದ್ರಾದಿಗಳ ಮೊರೆ ಕೇಳುಕುಮತಿಜನರಿಪುಭವಾಬ್ಧಿತ್ರಾತ ಸುಖಿಯೋಗಿಅಮಲಪ್ರಸನ್ನ ವೆಂಕಟೇಶ 5
--------------
ಪ್ರಸನ್ನವೆಂಕಟದಾಸರು
ಊದೊ ಕೊಳಲನು ಕೃಷ್ಣ ಊದೊ ಕೊಳಲನುವೇದ ವೇದ್ಯ ಊದು ಕೊಳಲ ನಾದ ತುಂಬೆ ನಭದಿ ಕೃಷ್ಣ ಪಮದನಜನಕ ಮೋಹನಾಂಗಚದುರೆಯರಿಗೊಲಿದು ವನದಿವಿಧ ವಿಧ ಕ್ರೀಡೆಗಳನಾಡಿಮುದವನಿತ್ತ ಮಧುಸೂದನನೆ 1ಗೋಪಿಕಾ ಸ್ತ್ರೀಯರ ವಾಕ್ಯಶ್ರೀಪತಿಯುಕೇಳಿಮುದದಿತಾಪಕಳೆದುಸುರರುತಲೆಯತೂಗೆ ಹರುಷದಿಂದಕೊಳಲನೂದಿದ ಚಲುವ ಕೊಳಲನೂದಿದ 2ನಾರಿಯರು ನಲಿದು ಬಂದುವಾರಿಧಿಯೊಳು ಸರಸವಾಡೆಮಾರಮಣನು ಸೀರೆಗಳನುಗಾರುಮಾಡಿ ಕದಿವರೇನೊತಾರೊ ವಸನವದುರುಳಕೃಷ್ಣ ತಾರೊ ವಸನವÀ3ಅಂಗನೆಯರೆ ನಿಮ್ಮ ವ್ರತಕೆಭಂಗವಾದ ಕಾರ್ಯವೆಸಗೆವಂದಿಸಿದರೆ ಕೊಡುವೆನೆಂದುರಂಗ ನಲಿದು ನುಡಿದ ಮುದದಿವಸನನೀಡಿದ ರಂಗವಸನನೀಡಿದ4ತರುಳರೆಲ್ಲ ಕೂಡಿಕೊಂಡುಕರುಗಳನ್ನೆ ಪಾಲಿಸುತಿರೆಮರೆಯ ಮಾಡಿ ಕರುಗಳನ್ನುದುರುಳತನವು ತರವೆ ಕೃಷ್ಣತಾರೊ ಕರುಗಳ ಕೃಷ್ಣ ತಾರೊ ಕರುಗಳ 5ಮಾತೆಯರನೆ ಅರಸುತಿರಲುಪ್ರೀತಿಯಿಂದ ಕರುಗಳನ್ನುಜೋಕೆಯಿಂದ ಪಿಡಿದು ತರಲುಯಾತಕೀಪರಿ ನಿಂದಿಸುವದುನೋಡಿ ಕರುಗಳ ನಿಂತಿರುವದು ನೋಡಿ ಕರುಗಳ 6ಗೊಲ್ಲತಿಯರ ಮನೆಯ ಪೊಕ್ಕುಮೆಲ್ಲುತಿರಲು ಬೆಣ್ಣೆ ಮೊಸರುನಲ್ಲೆಯರು ಪಿಡಿದು ಹರಿಯನಿಲ್ಲೊ ನಿಲ್ಲೊ ನಿಲ್ಲೊ ಕೃಷ್ಣಚೋರ ಕೃಷ್ಣನೆ ತೋರೊ ನಿಜವಜಾರಕೃಷ್ಣನೆ7ಚಿಕ್ಕ ಪ್ರಾಯದವರೆಕೇಳಿಸೊಕ್ಕಿನಿಂದ ನುಡಿವರೇನೆಬೆಕ್ಕು ತಿಂದ ತೆರವರಿಯದೆಧಿಃಕರಿಸುವುದುಚಿತವಲ್ಲನುಡಿವರೇನೆಲೆ ನಿಷ್ಠುರ ನುಡಿವರೇನೆಲೆ 8ಮಕ್ಕಳೆಲ್ಲ ಆಡುತಿರಲುಕಕ್ಕು ಬಿಕ್ಕು ಮಾಡಿಅವರದಿಕ್ಕು ದಿಕ್ಕುಗಳಿಗೆ ನಡೆಸಿಠಕ್ಕುತನವು ತರವೆ ಕೃಷ್ಣನಡತೆಯಲ್ಲವೊತುಡುಗಕೃಷ್ಣ ನಡತೆಯಲ್ಲವೊ9ಮಕ್ಕಳಾಡುತಿರಲು ಮಧ್ಯಸರ್ಪವೆರಡು ಕಾದಿ ಬರಲುದಿಕ್ಕು ತೋರದಂತೆ ಭಯದಿದಿಕ್ಕು ದಿಕ್ಕಿಗೆ ಓಡದಿಹರೆದುಡುಕು ನನ್ನದೆ ದೂರುವಿರೆನ್ನ ದುಡುಕು ನನ್ನದೆ 10ಹರಿಯ ಮಾತುಕೇಳಿಮುದದಿಹರುಷದಿಂದ ನಮಿಸಿ ಕೃಷ್ಣಗೆತ್ವರಿತದಿಂದಲಿ ಒಲಿಯೊ ಮುರಳೀ-ಧರನೆ ಹರುಷದಿಂದ ಕೃಷ್ಣನಮಿಸಿ ಬೇಡುವೆವೊ ಕೃಷ್ಣ ಸ್ಮರಿಸಿ ಪಾಡುವೆವೊ 11ಸರಸವಾಡÀುತಿಹಿರಿ ಎನ್ನಸ್ಮರಣೆಯಿಂದ ತನುವ ಮರೆತುಕ್ಷಮಿಪೆ ನಿಮ್ಮ ಗೃಹಕೆ ತೆರಳಿವನಜಮುಖಿಯರೆಲ್ಲರುತೆರಳಿರೆಂದನು ತರುಣಿಯರೆನ್ನ ಸ್ಮರಿಸಿರೆಂದನು 12ಕರುಣದಿಂದ ಸಲಹುತಿಹೆನುದುರಿತವೆಲ್ಲ ತರಿದು ಮುದದಿಕಮಲನಾಭ ವಿಠ್ಠಲನೆಂದುಕುಣಿದು ಪಾಡಿ ವನಿತೆಯರೆನಲಿದು ಪಾಡಿರೆ ನಾರಿಯರೆಲ್ಲ ಕುಣಿದು ಪಾಡಿರೆ 13
--------------
ನಿಡಗುರುಕಿ ಜೀವೂಬಾಯಿ
ಎಂತಹ ಸಣ್ಣವನೆ-ನಿನ್ನ ಮಗನಂತಹರೆಲ್ಲಿಲ್ಲವೆ |ಹೊಂತಕಾರಿಬಲವಂತರಿಗಧಿಕನುಪತರಳನಂತಿಪ್ಪನು ತರಳೆಯರೊಡನಾಡುವ |ಕಿರುಬೆರಳುಗುರಲಿ ಗಿರಿಯನೆತ್ತಿದವ 1ಕಾಳಿಯ ಸರ್ಪನ ಕಾಲಲ್ಲಿ ತುಳಿದವ |ಪಲಾಯನ ಮಾಡಿ ಕಾಲಯವನನ ಸುಟ್ಟ 2ಕಿಚ್ಚು ಪಾನವ ಮಾಡಿ ಅಚ್ಚರಿ ತೋರಿದ |ರಚ್ಚೆಮಾಡುವಿರೆಂದು ಮುಚ್ಚಿಕೊಂಬುವಿಯಲ್ಲೆ3ಬಾಯಿ ತೆರೆದನಲ್ಲೆ ನೀನಂಜುವಂದದಿ |ಆಯಮಳಾರ್ಜುನರಾಯಾಸ ಬಿಡಿಸಿದ 4ದಿಟ್ಟತನದಿ ಮೊಲೆಗೊಟ್ಟವಳನು ಕೊಂದ |ಪುಟ್ಟ ಪುರಂದರವಿಠಲರಾಯನು 5
--------------
ಪುರಂದರದಾಸರು
ಎಂತಹುದೊ ನಿನ್ನ ಭಕುತಿ ? |ಸಂತತ ನಿನ್ನ ದಾಸರ ಸಂಗವಿರದೆನಗೆ ಪ.ವೃಣವನಾಶಿಪ ಕುರುಡು ನೊಣ ಮೊಸರ ಕಂಡಂತೆ |ಧನಿಕರ ಮನೆಗೆ ಕ್ಷಣಕ್ಷಣಕ್ಕೆ ಪೋಗಿ ||ತನುಬಾಗಿ ತುಟಿಯೊಣಗಿ ಅಣಕನುಡಿ ಕೇಳ್ವ - ಕೃ - |ಪಣ ಮನಕೆ ಎಂತಹದು ನಿನ್ನಯ ಭಕುತಿ 1ಅಡಿಯಾಡಿ ಮುಖಬಾಡಿ ನುಡಿಯಡಗಿ ಬಡವನೆಂದು |ಒಡಲ ತೋರಿಸಿದೆನೊ ಕಡುದೈನ್ಯದಿ ||ಒಡೆಯ ನೀನಹುದೆಂದು ಮಡದಿ - ಮಕ್ಕಳಿಗೆ ಹೆಸ - |ರಿಡುವ ಅವರಡಿಗೆ ಎರಗುವನ ಮನಕೆ 2ಹೋಗಿಬಾರೈ ಎಂದು ಅತಿಗಳೆದರು ತಲೆ - |ಬಾಗಿ ನಿಂತು ಅಲ್ಲಿ ಮೌನವಾಗಿ ||ಓಗರತೆ ಮನೆಮನೆ ತಪ್ಪದೆ ತಿರುಗುವ |ಜೋಗಿಯ ಕೈಯಕೋಡಗದಂಥ ಮನಕೆ 3ಅವನ ತೋರಿ ಬೆಟಿಕಿರಿಯ ಬಾಲವ ಬೀಸಿ |ಕುನ್ನಿ ಸುಳಿದಾಡಿ ಕಾಲ್ಗೆರಗುವ ತರದಿ ||ಹೆಣ್ಣಿನಾಶೆಗೆ ಬಾಯಬಿಡುವ ಸ್ತ್ರೈಣನಪರಿ - |ಘನ್ನವಯ್ಯ ಘನ್ನವಯ್ಯ ಬನ್ನಬಡುವ ಕುನ್ನಿಮನಕೆ 4ವಟುವಾಗಿ ಬಲಿಯ ದಾನವನು ಬೇಡಹೋದ |ಕಟು ಕಷ್ಟಗಳನೆಲ್ಲ ನೀನೆ ಬಲ್ಲೆ ||ವಟಪತ್ರಶಾಯಿ ಶ್ರೀಫಣಿ ವರದಪುರಂದರ - |ವಿಠಲ ನಿನ್ನ ದಾಸರ ಸಂಗಸುಖವಿರದೆ 5
--------------
ಪುರಂದರದಾಸರು
ಎತ್ತಿಕೊಳ್ಳೆ ಗೋಪೀ ರಂಗನ |ರಚ್ಚೆಮಾಧವರಾಯ ನಿಲುವನಲ್ಲ||ಪ||ಕರ್ಣದ ಮಾಗಾಯಿ ಕದಪಲಿ ಹೊಳೆಯುತ |ಎಣ್ಣೆಮಣಿಯ ಕೊರಳಲಿ ಹುಲಿಯುಗುರು ||ಚಿನ್ನದ ಬಾಯೊಳು ಅಮೃತವ ಸುರಿಯುತ್ತ |ಬೆಣ್ಣೆ-ಹಾಲನುಂಬುವೆನೆಂದು ಬಂದ 1ಅಂಬೆಗಾಲಿಕ್ಕುತ ತುಂಬಿಯೊಲ್ ಮೊರೆಯುತ &mಜಚಿsh; |[ಚೆಂದದ] ಅರಳೆಲೆ ನಲಿದಾಡುತ ||ಬಂದು ಸರಳನಂದದಿ ಬಾಯ ಬಿಡುತ ಮು &mಜಚಿsh; |ಕುಂದನು ಮೊಲೆಯನುಂಬುವೆನೆಂದು ಬಂದ 2ಬಿಗಿದ ಪಟ್ಟೆಯಲಿ ಬಾಯ್‍ತಲೆಯು ಹೊಳೆಯುತಿರೆ |ಚಿಗುಟುತ ಎಡದ ಕೈಯಲಿ ಕುಚವ ||ನಗುತ ನಾಚುತ ಗೋಪಿಯ ಮುಖ ನೋಡುತ |ಮಿಗೆ ನಲಿನಲಿದುಂಡ ಪುರಂದರವಿಠಲ 3
--------------
ಪುರಂದರದಾಸರು
ಎತ್ತೋದೆಯಮ್ಮ ನಂಗನ್ನೆತ್ತಿಕೊ ಅಮ್ಮ ಬಲುಹೊತ್ತು ಹತ್ತು ಬಂದೇನೆ ಇತ್ತೆಅಮ್ಮಿತಿಂದೇನೆಪ.ತುತಿಬಾಯಿ ವಂಗ್ಯಾವೆ ಬಿತಿ ಆವು ವಾಕಿಕ್ಕಿ ಬತ್ತಾವೆಅತಿ ಆವು ಉಪ್ಪುಕಾಯಿ ಅಮ್ಮ ಮಮ್ಮೊಲ್ಲೆಉತ್ತತ್ತಿ ಹನ್ನು ಬೆನ್ನೆ ತಿಂದೇನೆ 1ಕಲ್ಲ ಕಿತ್ನ ಎಂತಾಡೆ ಬಂಗಾಡ ಬುಲ್ಲಿ ಬೆಲ್ಲ ತಿಂತಾಡೆಗಲ್ಲ ಕತ್ತಿಉಮ್ಮುಕೊತ್ತು ಹಲ್ಲು ನತ್ತುತಾಡೆಕೊಲ್ಲಬಾಲದೆ ದೂತ್ತ ಗೊಲ್ಲತೇಲನ 2ಎಕ್ಕೋ ಬಾ ಎಂಬ್ಯಾಡೆ ಬಿಸಿ ನೀಲು ಬುಕಶ್ಶಿ ಮಾಬ್ಯಾಡೆಸಕ್ಕರಿ ಚಿನ್ನಿಪಾಲು ಬತ್ತಲ ತುಂಬ ಕೊಡುಬಕ್ಕು ಮರಿಗಳ ಕೂಡ ಉಂಡೇನೆ 3ನತ್ತೆತ್ರ ತಂದುಕೊಡೆ ಚಂದಮಾಮನಿತ್ತಿತ್ತ ಕಡತಾಡೆಪುತ್ತಮಿಲ್ಲಿ ತುಂಬ ವಲ್ಲೆ ಮುತ್ತು ಕೊತ್ತರೆ ಶನ್ನಬುತ್ತಿ ತುಂಬ ಹನ್ನು ತಂದು ತಿಂದೇನೆ 4ಲಾಲಿಮಾಡಿಸಬ್ಯಾಡೆ ಕಿತ್ತನ್ನ ಮ್ಯಾಲೆ ದೋಗುಲ ಪಾಡೆಬಾಲ ಬವು ಕಂಡ್ಯನಗಂಜಿಕಿ ಬತ್ತದೆದೂಲ ಎನ್ನ ಬಿತ್ತು ನೀ ವೋಗಬ್ಯಾಡೆ 5ಉಗ್ಗು ಕೂಸು ಬಾಯಂಗೆ ಬಚ್ಚನಿಗೆ ಮಗ್ಗಮ್ಮಿ ಕೂಯಂಗೆಕೊಗ್ಗ ಮೀಸಿ ಜೋಗಿಗೆ ಕೋಬ್ಯಾಡೆ ಬಾಗಿಲಹೊಗ್ಗೆ ಹೋಗದಿಲ್ಲ ಜತ್ತಿಗನಾಣೆ 6ಕೂಚಿಗಮ್ಮಿ ಕೋಬ್ಯಾಡೆ ನಂಗಂಗಚ್ಚತಾನೆ ಅಮ್ಮ ನೋಡೆಪೆಚನ್ನ ವೆಂಕತ ಕಿತ್ತಪ್ಪ ಕನ್ನಡೀಲಿನಚುನಗಿ ನಗುತಾನೆ ಕಡತಾಡೆ 7
--------------
ಪ್ರಸನ್ನವೆಂಕಟದಾಸರು