ಒಟ್ಟು 5098 ಕಡೆಗಳಲ್ಲಿ , 128 ದಾಸರು , 3277 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭೂರಿ ನಿಗಮವ ಕದ್ದ ಚೋರದೈತ್ಯನ ಗೆದ್ದ ಸಾರ ವೇದಗಳ ವಿಧಿಗಿತ್ತ ಸಾರ ವೇದಗಳ ವಿಧಿಗಿತ್ತ ಮತ್ಸ್ಯಾವ- ತಾರಗಾರತಿಯ ಬೆಳಗಿರೆ 1 ವಾರಿಧಿ ಮಥನದಿ ನೀರೊಳು ಗಿರಿ ಮುಳುಗೆ ತೋರಿ ಬೆನ್ನಾಂತ ಸುರನುತ ತೋರಿ ಬೆನ್ನಾಂತ ಸುರನುತ ಕೂರ್ಮಾವ- ತಾರಗಾರತಿಯ ಬೆಳಗಿರೆ 2 ಧಾತ್ರಿಯ ಕದ್ದೊಯ್ದ ದೈತ್ಯನÀ ಮಡುಹಿದ ಎತ್ತಿ ದಾಡೆಯಲಿ ನೆಗಹಿದ ಎತ್ತಿ ದಾಡೆಯಲಿ ನೆಗಹಿದ ವರಾಹ- ಮೂರ್ತಿಗಾರತಿಯ ಬೆಳಗಿರೆ 3 ಕಡು ಬಾಲನ ನುಡಿಗೆ ಒಡೆದು ಕಂಬದೊಳುದಿಸಿ ಒಡಲ ಸೀಳಿದ ಹಿರಣ್ಯಕನ ಒಡಲ ಸೀಳಿದ ಹಿರಣ್ಯಕನ ನರಸಿಂಹ ಒಡೆಯಗಾರತಿಯ ಬೆಳಗಿರೆ 4 ಸೀಮಾಧಿಪತಿ ಬಲಿಯ ಭೂಮಿ ಮೂರಡಿ ಬೇಡಿ ಈ ಮೂರು ಜಗವ ಈರಡಿಯ ಈ ಮೂರು ಜಗವ ಈರಡಿ ಮಾಡಿ ಅಳೆದ ವಾಮನಗಾರತಿಯ ಬೆಳಗಿರೆ 5 ಅಂಬರಕೇಶನ್ನ ನಂಬಿದ ಕತ್ರಿಯರ ಸಂಭ್ರಮ ಕುಲವ ಸವರಿದ ಸಂಭ್ರಮ ಕುಲವ ಸವರಿದ ಪರಶುರಾ- ಮೆಂಬಗಾರತಿಯ ಬೆಳಗಿರೆ 6 ತಂದೆ ಕಳುಹಲು ವನಕೆ ಬಂದಲ್ಲಿ ಸೀತೆಯ ತಂದ ರಾವಣನ ತಲೆಹೊಯ್ದ ತಂದ ರಾವಣನ ತಲೆಹೊಯ್ದ ರಘುರಾಮ- ಚಂದ್ರಗಾರತಿಯ ಬೆಳಗಿರೆ 7 ಶಿಷ್ಟ ಯಮಳಾರ್ಜುನರಭೀಷ್ಟವ ಸಲಿಸಿದ ದುಷ್ಟ ಕಂಸನ್ನ ಕೆಡಹಿದ ದುಷ್ಟ ಕಂಸನ್ನ ಕೆಡಹಿದ ನಮ್ಮ ಶ್ರೀ ಕೃಷ್ಣಗಾರತಿಯ ಬೆಳಗಿರೆ 8 ರುದ್ರನ್ನ ತ್ರಿಪುರದೊಳಿದ್ದ ಸತಿಯರ ಬುದ್ಧಿ ಭೇದಮಾಡಿ ಕೆಡಿಸಿದ ಬುದ್ಧಿ ಭೇದಮಾಡಿ ಕೆಡಿಸಿ ಬತ್ತಲೆ ನಿಂದ ಬೌದ್ಧಗಾರತಿಯ ಬೆಳಗಿರೆ 9 ಪಾಪಿಜನ ಭಾರಕ್ಕೆ ಈ ಪೃಥ್ವಿ ಕುಸಿಯಲು ತಾ ಪಿಡಿದು ಖಡ್ಗ ತುರಗವ ತಾ ಪಿಡಿದು ಖಡ್ಗ ತುರಗವೇರಿದ ಕಲ್ಕಿ- ರೂಪಗಾರತಿಯ ಬೆಳಗಿರೆ 10 ಮುತ್ತೈದೆ ನಾರಿಯರು ಮುತ್ತಿನಾರತಿ ಮಾಡಿ ಹತ್ತವತಾರಿ ಹಯವದನ ಹತ್ತವತಾರಿ ಹಯವದನನ ಪಾಡುತ ಚಿತ್ರದಾರತಿಯ ಬೆಳಗಿರೆ 11
--------------
ವಾದಿರಾಜ
ಭೃಂಗ ಜಯ ಶರಣು ಶ್ರೀ ಸುಜ್ಞಾನ ಭಕುತಿ ವೈರಾಗ್ಯಪರನೆ ಜಯ ಶರಣು ದಾಸೋತ್ತಮರ ಮಣಿಯ ನಿನಗ್ಯಾರೆಣಿಯೆ ಗುರು ಪುರಂದರದಾಸರೆ ನಿಮಗೆ ಪ ಪಾಕಶಾಸನಪುರದ ಚಿನಿವಾರ ವರದಪ್ಪ ನಾ ಕುಮಾರನಾಗಿ ಜನಿಸಿ ಸಂಸಾರದೊಳು ಸಂಚರಿಸಿ ಲೌಕಿಕವನ್ನೆ ತೊರೆದು ಈ ಕಲಿಯುಗದಲ್ಲಿ ತುಂಗಾತೀರ ಪಂಪಾ ರಾಕಾಬ್ಜನಂತೆ ಪೊಳೆವ ನಿಧಿಗೆ ಬಂದು ನಿ ರಾಕರಿಸಿ ದುಸ್ಸಂಗ ವೈಷ್ಣವರಾಗಿ ಪತಿಕರಿಸಿ ಹರಿಭಕುತಿಯಾ 1 ಕಾಮಕ್ರೋಧ ಲೋಭ ಮದ ಮತ್ಸರ ಡಂಭ ಈ ಮರಿಯಾದಿಗಳ ಮರ್ಮವನೆ ಕಡಿದು ನಿ ಸಿರಿ ಕೈಕೊಂಡು ಆ ಮಹಾ ರಚನೆಯಲ್ಲಿ ಸೀಮೆಯೊಳು ಪ್ರಾಕೃತದ ಗೀತೆಯಲಿ ಕೊಂಡಾಡಿ ತಾಮರಸ ಸದೆ ಬಡಿದು ಮಧ್ವಸಿದ್ಧಾಂತ ಲ ಹುಯಿಸಿ ಕಾವನೈಯನ ಕುಣಿಸಿದ 2 ಸಿರಿ ವಿಠ್ಠಲನ್ನ ಮೃದು ಪದ್ಮಗಂಧವನು ಮಧುಪÀನಂತೆ ಸೇವಿಸುತ್ತ ಬುದ್ಧಿ ಪೂರ್ವಕದಿಂದಲಿ ಶುದ್ಧ ಮಂದರನೆಲ್ಲ ಎಂದೆಂದಿಗೂ ಬಿಡದೆ ಪೊದ್ದರ್ದ ಪಾಪಗಳು ತಿರುಗಗೊಡದಲೆ ಕಾಲಿ ಮಾರ್ಗದ ಪದ್ಧತಿಯ ಸ್ಥಿತಿ ಪೇಳಿದ 3 ವರದಪ್ಪನೇ ಸೋಮ ಗುರುರಾಯ ದಿನಕರನು ಗುರು ಮಧ್ವಪತಿಯೆ ಭೃಗು ಅಭಿನವನೆ ಜೀವ ಉಪದೇಶಿಸಿ ಪರಮ ಜ್ಞಾನಿಗಳ ಮಾಡಿ ಶರಧಿ ತೆರೆಯಂತೆ ಹರಿಗುಣಗಳನ್ನು ಪೊಗಳುತಿಹ ತರಳರನು ನೋಡಿ ಗುರು ವ್ಯಾಸಮುನಿರಾಯರಿಗೆ ಕರಣ ಚರಿತೆಯಲಿ ನಲಿದಾಡಿದ 4 ಫೃತದ ಬಿಂದಿಗೆ ತಂದ ಅತಿಥಿಯ ವೋಗರನುಂಡ ಸತಿಯಳೆಂದಾ ನುಡಿಗೆ ಚತುರ ಭಾಗ್ಯವನಿತ್ತ ಹಿತನಾಗಿ ದೃಢನೋಡಿದ ಯತಿಯ ಪಂಕ್ತಿಗೆ ಭಾಗೀರಥಿ ನದಿಯ ತರಸಿದ ಸುತನಾಗಿ ನೀರು ನಿಶಿತದಲಿ ತಂದ ಅ ಪ್ರತಿ ದೈವತಾ ಕಿಂಕರ 5 ವಜ್ರ ಪ್ರಹರವಿದು ಸಜ್ಜನರ ದಿವ್ಯ ಚರಣಾಬ್ಜಕ್ಕೆ ಭೃಂಗವಿದು ಹೆಚ್ಚು ಲಜ್ಜೆಯನು ತೊರೆದು ನಿತ್ಯ ಹೆಜ್ಚ್ಚಿ ಹೆಜ್ಚಿಗೆ ಬಿಡದೆ ದಾಸರ ಕರುಣವೆಂಬ ವಜ್ರ ಕವಚವ ತೊಟ್ಟು ನುಡಿದವನ ನುಡಿ ಸತ್ಯ ಅಬ್ಜಭವನೊಡನೆ ಗತಿಗೆ 6 ಎಂತು ವರ್ಣಿಸಲಿ ಎನಗಳವಲ್ಲ ಧರೆಯೊಳಗೆ ಸಂತತಿ ನೆಲಸಿದಂತೆ ಕಾವ್ಯವನೆ ಸ್ಥಾಪಿಸಿ ದಾಸರನ ಸಂತರಿಸಿ ಧರೆಗೆ ತೋರಿ ಸಿರಿ ವಿಠಲನ ಸ್ಮರಿಸುತ ಸು ಪಂಥವನು ಹಿಡಿದು ಸದ್ಗತಿಯಲ್ಲಿ ಸೇರಿದರು ಚಿಂತೆಯೊಳಗಿಟ್ಟ ಗುರುವೆ 7
--------------
ವಿಜಯದಾಸ
ಭೃಂಗ ಭಕ್ತ ಕಾಮಿತಾರ್ಥದ ಮಂಗಳಾಂಗ ತಾಮಸಬಲ ನಿಗ್ರಹಣ ಪತಂಗ ಭ ವಾಮಯಹರ ಭಾರತಿ ಮುಖ ಸಂಗ ಪ. ಮಾನ ಸೇವರಾತಿ ಭೂಪ ಭಾನುಸರಣ ಸುಪ್ರತಾಪ ದೈತ್ಯ ಕ್ಷೋಣಿ ಸಂದರ್ಶಿತ ಕೋಪ ಜಾನಕಿವರನ ನಿಜಾನುಗನೆನಿಪ ಮ- ಹಾನುಭಾವ ಪವಮಾನ ದಯಾಪರ 1 ಇಂದು ಕುಲದಿ ತಾ ಜನಿಸಿ ನಿಜ ಬಂಧುಗಳನು ಸತ್ಕರಿಸಿ ಇಂದಿರೆಯರಸನ ಒಲಿಸಿ ಜರಾ- ಸಂಧ ಮುಖರನು ಸಂಹರಿಸಿ ಒಂದೇ ಕ್ಷಣದಿ ಸೌಗಂಧಿಕ ಕುಸುಮವ ತಂದು ಮಡದಿಗಾನಂದ ತೋರಿದ 2 ಕಲಿಯುಗದೊಳು ತಾ ಬಂದು ಮಾಯಿ ಬಲಿ ಭುಜರನು ಗೆಲವಂದು ಜಲಜನಾಭವ ಕರೆತಂದು ರೌಪ್ಯ ನಿಲಯದಿ ಸ್ಥಾಪಿಸಿ ನಿಂದು ಚೆಲುವ ಶೇಷಗಿರಿ ಪತಿಗತಿಯೆಂದು ನೆಲೆಯ ತೋರಿದ ಪುರುಕರುಣಾಸಿಂಧು 3
--------------
ತುಪಾಕಿ ವೆಂಕಟರಮಣಾಚಾರ್ಯ
ಭೋ ದಾತಾ ಬಾರೋಗುರುವರಿಯಾ || ನಂಬಿದೆ ನಾನಿನ್ನ ಪಾದ ಭೂನಾಥ ದಾಸಾಗ್ರಣಿ ಪ ದೀನ ಜನರ ಧೇನು ಚಿಂತಾಮಣಿ ಮಾನಿತ ನಿನ್ನ ಅನುದಿನ ಪಾಲಿಸು ಘನ ಹರಿನಾಮವ | ಸ್ತಂಭ ನಿವಾಸನೆ ದಯತೋರೋ 1 ಪೋತನೊಳೀಪರಿ ಯಾತಕೆ ನಿರ್ದಯ ತಾತನೆ ನಿನಗೆ ರೀತಿಯ ನೋಡೈ | ಸುತನಪರಾಧವ ಪಾತಕ ಬಿಡಿಸೊ ಮತಿ ಬೀರೋ 2 ಕರುಣಿಸು ಶಾಮಸುಂದರ ವಿಠಲ | ವರಿಚರಿ ತಾಮೃತ ಸವಿಯನು ಎನಗೆ | ಸೂರಿವರೇಣ್ಯನೆ ಮೂಕÀಗೊಲಿದಂತ | ತ್ವರಿತದಿ ನೋಡೈ ತಡವ್ಯಾತಕೆ 3
--------------
ಶಾಮಸುಂದರ ವಿಠಲ
ಭೋರನೆ ನಿಜಪರಿವಾರವೆಲ್ಲವೂ ಸೇರಿ ಪ. ಮಕರಕುಂಡಲಧರ ವಿಕಸಿತ ಮುಖಪದ್ಮ ಕೌಸ್ತುಭ ಶುಭ ವನಮಾಲಿ ಭಕುತ ವತ್ಸಲನೆಂಬ ಬಿರುದು ತೋರುತ ನಮ್ಮ ಶಕುತಿಗೆ ಸರಿಯಾದ ಸೇವೆ ಕೊಳ್ಳುವೆನೆಂದು 1 ಒಡೆಯನೀ ಗತಿಯೆಂಬ ಬಡವ ಭಕ್ತರನೆಲ್ಲು ಬಿಡನೆಂದು ಭವಸಿಂಧು ಪೊತ್ತನಿಂದು ತಡವ ಮಾಡದಲೆ ಸಂಗಡ ಬಂದೀ ನಿಲಯದಿ ನಡು ಮನೆಯಲಿ ನಿಂದು ಕೊಡುವೆ ಸೌಖ್ಯವನೆಂದು 2 ತುಳಸಿಧಾಮ ಸುಶೋಭಿತ ನಮಗೆ ಬೆಂ- ಬಲವಾಗಿರುವ ಸರ್ವ ಸ್ಥಳಗಳಲಿ ಅಲಸನಾಗದೆ ಶೇಷಾಚಲವಾಸನು ಶ್ರೀಭೂ- ಲಲನೆಯರೊಡಗೂಡಿ ನಲಿವ ಸಂಭ್ರಮದಿಂದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಭ್ರಮೆಯ ಪುಟ್ಟಿಸಬೇಡ ಭಾವಿ ಭಾರತೀಶಾ ಪ ದಾತ ಭವದಿ ಪ್ರಖ್ಯಾತ ಅ.ಪ. ಕೃತ ಪ್ರತೀಕದಿ ನಿಂದು ನಾಮರೂಪವ ಧರಿಸಿ ನಿರುತತ್ವದ್ದಾಸರಿಂದ ಪೂಜೆಯಾ ಗೊಂಬೀಮನ ಪಾಶದಿಂ ಬಿಗಿದೆನ್ನ ಮನಶೆಳೆಯುತಿಹರೈ ಕೃತಿರಮಣನ ಪ್ರೀಯನಿನ್ನ ಕೃತ್ಯಗಳಿಗೆ ನಮೋ ನಮೋ ಎಂಬೆನಲ್ಲದೆ 1 ಪಾದ ಕುಸುಮ ಶರವೈರಿ ಪದ ಪಿತನೆ 2 ಜ್ಞಾನವಿಲ್ಲದೆ ಮಧ್ಯಜ್ಞಾನ ಶರಧಿಯೊಳು ಮುಳುಗಿ ದೂರಾದೆನೋ ರಾಯಾನಿನ್ನ ವಿಷಯ ವಿರಕ್ತಿ ಅನ್ಯ ವಿಷಯ ಸುಭಕ್ತಿಯಿಂದ ನಿಜಭಕ್ತಿಗಾಣೆನೋಭಕುತಿರಮಣನೇ ನಿನ್ನ ಯುಕುತಿಗಳಿಗಭಿವಂದಿಪೆ ತಂದೆವರದಗೋಪಾಲವಿಠಲನ ತೋರಿಸೋ ಜೀಯಾ 3
--------------
ತಂದೆವರದಗೋಪಾಲವಿಠಲರು
ಭ್ರಷ್ಟನೆಂದಿಸಿದೆಯಾ ಕೃಷ್ಣನೇ ಎನ್ನ ಪ ಭ್ರಷ್ಟನೆಂದಿನಿಸಿದ್ಯಾ ಸೃಷ್ಟಿಗೀಶನೆ ಪರ ಮೇಷ್ಟಿ ಜನಕ ದಿವ್ಯ ದೃಷ್ಟಿ ಕೊಡದಲೆನ್ನ ಅ.ಪ ನರರ ಸಂದಣಿಯಲಿ ವಿರತಿ ಮಾತಾಡಿಸಿ ಮಾರನಾಟದಿ ಮನವೆರಗುವಂದದಿ ಮಾಡಿ 1 ಕಾಷಾಯ ದಂಡಿ ವೇಷವ ಧರಿಸಿ ಮುನ್ನ ಮೋಸಪಡಿಸಿ ಸ್ತ್ರೀಯರಾಸೆ ಬಿಡಿಸಿದೆನ್ನ 2 ಸೀಲರಂದಲಿ ಜಪಮಾಲೆ ಕೈಯಲಿ ಪಿಡಿಸಿ ಕಾಳಿಮರ್ಧನ ದೇವ ಮಲಿನ ಮನವನಿತ್ತು 3 ಕರವಶವನೆ ಮಾಡಿ ಸರಸದಿಂದ ಕಲೆಹಾಕಿ ಮರೆಸಿ ನಿನ್ನನೆ ಕೃಷ್ಣ ನಿರಯಭಾಗಿಯ ಮಾಡಿ4 ಕರುಣವಾರಿಧಿ ಎನ್ನ ಮರುಳುಗೊಳಿಸಿ ವಿಷಯ ಶರಪಂಜರದಿ ಬಿಗಿದು ಚರಣ ತೋರಿಸದೆಲೆ 5 ಮದ ಮತ್ಸರ ಕಾಮ ಕ್ರೋಧ ಲೋಭ ಮೋಹ ಮಾಧವ 6 ಪತಿತಾಗ್ರಣಿಯು ನಾನು ಪತಿತ ಪಾವನ ನೀನು ಸತತ ನಿನ್ನಯ ಸಂಸ್ಮøತಿಯ ನೀಡದಲೆನ್ನ 7 ದ್ವಿಜ ಅಜಮಿಳ ನಿಜನಾಮದಿಂದಲಿ ಸುಜನನೆಂದೆನಿಸಿದ್ದು ನಿಜತೋರದಲೆನ್ನ 8 ಹೀನರೊಳೆನ್ನೆಂಥ ಹೀನ ಜನರ ಕಾಣೆ ಸಾನುರಾಗದಿ ಕಾಯೊ ಶ್ರೀ ನರಹರಿಯೆ 9
--------------
ಪ್ರದ್ಯುಮ್ನತೀರ್ಥರು
ಮ'ಪತಿ ಸುತ ಕೃಷ್ಣರಾಯ ಕೃಪೆಯಮಾಡೊ ಮಹರಾಯಾಸ'ಸಲಾರೆ ತಾಪತ್ರಯ ಕರುಣದಿ ಪಿಡಿಕೈಯ್ಯಾ ಪನಿನ್ನ ಕರುಳ ಬಳ್ಳಿಯಲಿ ಜನಿಸಿ ನಿನ್ನ ಮರತೆನೆಂದುನೀನು ಮರೆಯಬೇಡಾ ತಾತಾ ಶಿರದಲಿ ಇಡು ವರದಹಸ್ತಾ1ನಿಮ್ಮ ಕೀರ್ತನೆ ಕೇಳುವಾಗ ಮೈ ಮರೆತರು ಸತ್ಯಪೂರ್ಣರುಚಕ್ರಧರನ ನಕ್ರಹರನ ತಂದು ತೋರಿದ ಮಹಾಮ'ಮನೆ 2ಜ್ಞಾನ ಭಕ್ತಿ ವೈರಾಗ್ಯ ತ್ರಿವೇಣಿ ನಿಮ್ಮ ವಾಣಿಶ್ರೀನಿಧಿ ಭೂಪತಿ'ಠ್ಠಲನ ಒಲಿಸಿದ ಹರಿದಾಸ ಸುಮಣಿ 3
--------------
ಭೂಪತಿ ವಿಠಲರು
ಮಂಗಲಂ ಗುರುರಾಜಗೆ ಮಂಗಲ ಪರಮಾನಂದಸ್ವರೂಪಗೆ ಪ ಜೀವÀಪರಮರೈಕ್ಯವ ತಿಳುಹಿಸುವಾ ದೇವನೆ ನೀನೆನ್ನುತ ಬೋಧಿಸುವಾ ಸಾವು ಸಂಕಟಗಳ ಮೂಲವ ಕಡಿಯುವಾ ಪಾವನಾತ್ಮ ಘನಜ್ಞಾನರೂಪಗೆ 1 ಶೋಧಿಸಿ ದೇಹತ್ರಯಗಳ ಕಳಹಿ ಬಾಧರಹಿತ ಪರಮಾತ್ಮನ ಅರಿವನು ಬೋಧಿಸಿ ಅನುಭವದಲಿ ನೆಲೆಸಿದಗೆ 2 ತೋರಿಕೆ ಅನಿಸಿಕೆ ಎನಿಸುವ ದ್ವೈತವ ಧೀರತನದಿ ಸುಳ್ಳೆಂದು ತಿಳಿಸುವಾ ನಾರಾಯಣಗುರುವರನ ಕೃಪಾಪ್ರಿಯ ಪೂರಣಬ್ರಹ್ಮಸ್ವರೂಪ ಶಂಕರಗೆ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಮಂಗಲಾರತಿಯ ಪಾಡಿರೇ | ರಂಗನಾಥರುಕ್ಮಿಣೀಗೆ ಪ ಸಿಂಧು ಸುತೆಗೇ | ಸೀತಾರಾಮಚಂದ್ರಗೇ | ಉಪೇಂದ್ರಗೇ ಅ.ಪ ಮತ್ಸ್ಯ ಕೂರ್ಮವರಹಾವತಾರಗೇ ಕರುಳ ಮಾಲೆಧರಿಸಿದಾ ಲಕ್ಷ್ಮಿನಾರಸಿಂಹಗೇ 1 ಬಲಿಯ ದಾನವನ್ನೇ ಬೇಡಿ ಮಾತೆ ಶಿರವನಳಿದವಗೇ ಜಗವತೋರ್ದವಗೇ 2 ಬೆತ್ತಲಾಗಿ ನಿಂತಿದ್ದ ಉತ್ತಮ ಬೌದ್ಧ ಕಲ್ಕಿಗೇ ಸೃಷ್ಟಿಗೊಡೆಯ ಬಳ್ಳಾರಿ ಲಕ್ಷ್ಮೀನಾರಸಿಂಹವಿಠಲಗೇ 3
--------------
ಓರಬಾಯಿ ಲಕ್ಷ್ಮೀದೇವಮ್ಮ
ಮಂಗಳ ಇಂದಿರಾವರನಿಗೆ ಜಯ ಮಂಗಳ ವೃಂದಾವನಶಾಯಿಗೆ ಪ. ಆಷಾಢ ಶುಕ್ಲೈಕಾದಶಿಯಾರಂಭಿಸಿ ನಾಲ್ಕು ಮಾಸವು ನೆಲೆಗೊಂಡ ನಳಿನಾಕ್ಷಗೆ ದಾಸ ಮನೋರಥದಾಯಿ ವೃಂದಾವನ ವಾಸಿ ದಾಮೋದರ ಶ್ರೀಶನಿಗೆ 1 ಹಲವು ವಿಧದ ಪುಷ್ಪಗಳಿಕಿಂತ ಅಧಿಕ ಶ್ರೀ ತುಳಸಿ ಎಂದು ಎಲ್ಲ ತಿಳಿಯಿರೆಂದು ನೆಲೆಯದೋರಿ ಮೂಲದಲಿ ಪವಡಿಸಿದಂಥ ನಳಿನಾಕ್ಷ ಗೋಪಾಲ ಕೃಷ್ಣನಿಗೆ 2 ವಿಧಿಭವ ಶಕ್ರಾದಿ ಬುಧರು ಪರಾಕೆಂದು ವಿವಿಧ ವಿಧ ಸ್ತುತಿಸುತ ಕಾದಿರಲು ಮುದದಿಂದಲೆದ್ದು ಮುಖಾಬ್ಜ ತೋರುವ ನಮ್ಮ ಪದುಮನಾಭ ವೆಂಕಟರಾಯನಿಗೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮಂಗಳ ಜಯ ಜಯ ಮಂಗಳ ತುಳಸಿಗೆ ಮಂಗಳ ಜಯ ಜಯ ರಂಗನಾಯಕಗೆ ಪ ವಾರಿಧಿ ಮಥÀನದಿ ವಾರಿಜನಾಭನ ವಾರಿಜನೇತ್ರನ ವಾರಿಗಳಿಂದ ತೋರಿದ ತುಳಸಿಯು ಸೇರಿದಳೆಲ್ಲ ಶ- ರೀರವ ಪಾವನ ಮಾಡಬೇಕೆನುತ 1 ತುಳಸಿಯ ನಾಮವ ಬೆಳೆಸಿಯೆ ಲೋಕವ ಬಳಸಿಕೊಂಡಿರುವೆನು ಎನುತಲೆ ಬಂದು ಕಳಸಿದ ಮನುಜರ ಉಳಿಸಬೇಕೆನುತಲೆ ಕಳಸದ ತೆರನಂತೆ ಉದಿಸಿದಳು ತುಳಸಿ 2 ಸಾಲಿಗ್ರಾಮವು ಇಲ್ಲದಾತನ ಮನೆಯೊಳು ಕಾಲೂರಿ ನಿಲ್ಲಳು ಹರುಷದೊಳಿವಳು ಪಾಲಿಪ ಹರಿಶಿಲೆಯಿರುವಂಥ ಸ್ಥಳದೊಳು ಓಲಗವಾಗಿಯೆ ತೋರುತ್ತಲಿಹಳು3 ಎಲ್ಲಿಯು ತುಳಸಿಯು ಅಲ್ಲಿಯೆ ಶ್ರೀಹರಿ ವಲ್ಲಭೆ ಸಹವಾಗಿ ಇರುತಿಪ್ಪ ಬಿಡದೆ ಫುಲ್ಲನಾಭನು ಕೃಷ್ಣ ಆಡಿದ ಪರಿಯನು ಗೊಲ್ಲತಿಯರು ಕಂಡು ನಾಚಿ ಹಿಗ್ಗಿದರು 4 ಬಂದಳು ಭಕ್ತರ ಮಂದಿರದೆಡಗೆ ಗೋ- ವಿಂದನ ಕಂಡಿರೆ ಎಂದು ಕೇಳಿದಳು ವೃಂದಾವನದೊಳು ನಿಂದಳು ತುಳಸಿಯು ಚಂದವು ನಿಮ್ಮಯ ಭವನದೊಳೆನುತ 5 ಗೋವಿನ ತುಪ್ಪದಿ ದೀವಿಗೆಯಿರಿಸಿಯೆ ಭಾವ ಶುದ್ಧತ್ವದಿ ಬಲವಂದರವಳು ಕಾವಲು ಪೋಗಿಯೆ ಕರ್ಣದ ಒಳಗಿದ್ದು ಜೀವಿತ ಮುಕ್ತಿಯ ತೋರುವೆನೆನುತ 6 ಸರ್ವತೀರ್ಥಗಳನ್ನು ಮೂಲದಿ ಧರಿಸಿಯೆ ಸರ್ವ ದೇವರ್ಕಳ ಮಧ್ಯದೊಳಿರಿಸಿ ಸರ್ವ ವೇದಂಗಳ ಶಿರದೊಳು ಧರಿಸಿಯೆ ಸರ್ವವ ಕಾಲಗೆ ನಿರ್ವಹಿಸುತಿಹಳು 7 ಅಂಗಳದೊಳಗಿಹ ಮಂಗಳ ಮಹಿಮಗೆ ರಂಗುವಲ್ಲಿಯನಿಕ್ಕಿ ಶೃಂಗಾರವಾಗಿ ಸಾಂಗ್ಯದೊಳಿಹ ಒಂದು ಮಂಗಳ ಬರೆದರೆ ಬಂಗಾರ ಮನೆಯನ್ನು ತೋರುವಳಿವಳು 8 ಮೂಲದ ಮೃತ್ತಿಕೆ ಮೂಲ ಪಣೆಯೊಳಿಟ್ಟು ಕಾಲದಿ ಸ್ನಾನವ ಮಾಡಿದ ನರರು ಭಾಳವಾಗಿಹ ಅಘರಾಶಿಯನೆಲ್ಲವ ಚಾಳಿಸಿ ಕಳೆವರು ಕಾಲನ ಗೆಲಿದು 9 ತನ್ನ ಕಾಷ್ಟವ ತಂದು ಚಿನ್ನದಿ ಸುತ್ತಿಸಿ ಕರ್ಣದಿ ಧರಿಸಿದ ಮನುಜರಿಗೆಲ್ಲ ಉನ್ನತ ಪದವಿಯ ತೋರುವೆನೆನುತಲೆ ಪನ್ನಗಶಯನಗೆ ಪ್ರೀತಿಯಾಗಿಹಳು 10 ಉತ್ತಮವಾಗಿಹ ಕಾರ್ತಿಕ ಮಾಸದಿ ಅರ್ತಿಯಿಂದಲೆ ನಲಿನಲಿಯುತ್ತ ದೇವಿಯ ಕರ್ತನ ಕೀರ್ತನೆ ರಚಿಸುವ ಮನದಿ 11 ಬ್ರಾಹ್ಮಿ ಮುಹೂರ್ತದಿ ಸ್ನಾನ ತರ್ಪಣವನ್ನು ನಿರ್ಮಲ ತೀರದಿ ತಿದ್ದಿಯೆ ಕೊಂಡು ಧರ್ಮಕ್ಕೆ ಯೋಗ್ಯಳ ಪೂಜೆಯ ಮಾಡಲು ಕರ್ಮ ಬಂಧಗಳೆಲ್ಲ ಕಡಿದುಕೊಳುವುದು 12 ಸಾಯಂಕಾಲದಿ ದೀವಿಗೆ ಹಚ್ಚಲು ಮಾಯಗಳೆಲ್ಲವು ಮರುಗಿ ಪೋಗವುವು ದಾಯವಾಗಿಯೆ ಸುರರಾಯನೊಳರ್ಥವ ಬೇವಿನವರು ಕಂಡು ಹೊರಸಾರುತಿಹರು 13 ಸರ್ವದಾನಗಳನ್ನು ಸರ್ವಪೂಜೆಗಳನ್ನು ಸರ್ವರು ಋಷಿ ಪಿತೃ ತರ್ಪಣಗಳನು ಸರ್ವಥಾ ತುಳಸಿಯ ತಪ್ಪಿಸಬೇಡೆಂದು ನಿರ್ವಾಹವಾಗಿಯೆ ಶ್ರುತಿಯು ಪೇಳಿದುದು 14 ಅಂಗದೊಳಗಿಹ ಮಂಗಳ ಮಹಿಮಗೆ ಸಾಂಗ್ಯದೊಳಿದನು ಪಠಿಸಿ ಪೇಳಿದರೆ ಗಂಗೆ ಗೋದಾವರಿ ತುಂಗಭದ್ರೆಯ ಮಿಂದು ರಂಗನ ಕ್ಷೇತ್ರವ ನೋಡಿದ ಫಲವು 15 ಅಂಗಳ ತುಳಸಿಯ ದಿನ ದಿನದಿ ತಾವೆದ್ದು ಹಿಂಗದೆ ನೋಳ್ಸ ಶ್ರೀರಂಗನ ಭಕ್ತರಿಗೆ ಬಂಗಾರಗಿರಿವಾಸ ವರಾಹತಿಮ್ಮಪ್ಪನ ಮಂಗಳಮೂರ್ತಿಯ ನೋಡಿದ ಫಲವು 16
--------------
ವರಹತಿಮ್ಮಪ್ಪ
ಮಂಗಳಂ ಜಯ ಜಯ ಮಂಗಳಂ ಪ ಪರಮಾಸನದಲಿ ಕುಳಿತವಗೆ ಪರತತ್ವವ ತಾ ತಿಳಿದವಗೆ ಕರುಣದಿಂದ ದುರಿತಾವಳಿಗಳನು ಸ್ಮರಿಸಿದ ಮಾತ್ರದಿ ಪರಿಹರಿಸುವಗೆ 1 ಪೊಡವಿಯಲಿ ಶೋಭಿಸುವವಗೆ ಕಡಲಶಯನನ ಭಕ್ತನಿಗೆ ಅಡಿಗಳ ಬಿಡದೆ ಭಜಿಪ ಸುಜನರಿಗೆಲ್ಲ ಕಡುತರ ಜ್ಞಾನವ ನೀಡುವಗೆ 2 ಸತ್ಯಧೀರರ ಕುವರನಿಗೆ ಸತ್ಯಜ್ಞಾನನೆಂದೆನಿಸುವಗೆ ಅತ್ಯಾದರದಿಂದ ರಾಮನ ಧ್ಯಾನಿಸಿ ಪ್ರತ್ಯಕ್ಷವ ಕರೆಸಿರುವವಗೆ 3 ಕಾಮಕ್ರೋಧವ ಬಿಟ್ಟವಗೆ ಪ್ರೇಮ ಆಶೆಗಳ ಸುಟ್ಟವಗೆ ಧೂಮಕೇತು ಸಖ ಸೂನುವಾಹನನ ನೇಮದಿಂದ ಆರಾಧಿಪಗೆ 4 ದಂಡ ಕಮಂಡಲ ಪಿಡಿದವಗೆ ಪಂಡಿತರಿಂದತಿ ಪೂಜಿತಗೆ ಕೊಂಡಾಡಿದರ್ಯಮ ದಂಡನೆ ತಪ್ಪಿಸಿ ಶೊಂಡನಾದ ನರಹರಿ ತೋರ್ಪಗೆ 5
--------------
ಪ್ರದ್ಯುಮ್ನತೀರ್ಥರು
ಮಂಗಳಂ ಜಯ ಮಂಗಳಂ ಲಿಂಗಾಕಾರದ ಪರಶಿವಗೆ ಪ ರಜತಾದ್ರಿಪುರದೊಳು ನಿಂದವಗೆ ಭಜಕರ ಸಲುಹಲು ಬಂದವಗೆ ನಿಜಸುರ ಸೇವಿತ ಗಜಚರ್ಮಾಂಬರ ತ್ರಿಜಗ ವಂದಿತನಾದ ಪರಶಿವಗೆ1 ಬಾಣನ ಬಾಗಿಲ ಕಾಯ್ದವಗೆ ತ್ರಾಣದಿ ತ್ರಿಪುರವ ಗೆಲಿದವಗೆ ಕಾಣದ ಅಸುರಗೆ ಪ್ರಾಣಲಿಂಗವನಿತ್ತು ಮಾಣದೆ ಭಕ್ತರ ಸಲುಹುವಗೆ 2 ಗಂಗೆಯ ಜಡೆಯೊಳು ಧರಿಸಿದಗೆ ಸಿಂಗಿಯ ಕೊರಳೊಳು ನುಂಗಿದಗೆ ತಿಂಗಳ ಸೂಡಿಯೆ ಅಂಗ ಭಸ್ಮಾಂಗದಿ ಕಂಗಳು ಮೂರುಳ್ಳ ಕೃಪಾಂಗನಿಗೆ 3 ಅಸ್ಥಿಯ ಮಾಲೆಯ ಧರಿಸಿದU É ಹಸ್ತದಿ ಶೂಲವ ಪಿಡಿದವಗೆ ವಿಸ್ತರವಾಗಿಯೆ ಭಸ್ಮಸುವಾಸಿಗೆ ಸತ್ಯದಿ ವರಗಳನಿತ್ತವಗೆ 4 ಅಂಬಿಕಪತಿಯೆಂದೆನಿಸಿದಗೆ ತ್ರಿ- ಯಂಬಕ ಮಂತ್ರದಿ ನೆಲೆಸಿದಗೆ ನಂಬಿದ ಸುರರಿಗೆ ಬೆಂಬಲವಾಗಿಯೆ ಇಂಬಾದ ಪದವಿಯ ತೋರ್ಪವಗೆ 5 ಪಂಚಾಕ್ಷರದೊಳು ಒಲಿದವಗೆ ಪಂಚಮ ಶಿರದೊಳು ಮೆರೆವವಗೆ ಪಾತಕ ಸಂಚಿತ ಕರ್ಮವ ವಂಚಿಸಿ ಭಕ್ತರ ವಾಂಛಿತವೀವಗೆ 6 ಪಾಶುಪತವ ನರಗಿತ್ತವಗೆ ಶೇಷಾಭರಣವ ಹೊತ್ತವಗೆ ಕಾಶಿಗಧಿಕವಾಗಿ ಕೈವಲ್ಯವಿತ್ತು ವಿ- ಶೇಷದಿ ಜನರನು ಸಲುಹುವಗೆ7 ಯಕ್ಷ ಸುರಾಸುರ ವಂದಿತಗೆ ದಕ್ಷನ ಮಖವನು ಕೆಡಿಸಿದಗೆ ಕುಕ್ಷಿಯೊಳೀರೇಳು ಜಗವನುದ್ಧರಿಸಿಯೆ ರಕ್ಷಿಸಿಕೊಂಬಂಥ ದೀಕ್ಷಿತಗೆ 8 ಕಾಮಿತ ಫಲಗಳ ಕೊಡುವವಗೆ ಪ್ರೇಮದಿ ಭಕ್ತರ ಸಲಹುವಗೆ ಭೂಮಿಗೆ ವರಾಹತಿಮ್ಮಪ್ಪನ ದಾಸರ ಸ್ವಾಮಿಯೆಂದೆನಿಸುವ ಈಶನಿಗೆ 9
--------------
ವರಹತಿಮ್ಮಪ್ಪ
ಮಂಗಳಂ ಜಯ ಮಂಗಳಂ ಪ ಆದಿನಾರಾಯಣನೆನಿಸಿದಗೆ ಪಾದದಿ ಗಂಗೆಯ ಪಡೆದವಗೆ ಸಾಧುಸಜ್ಜನರನ್ನು ಸಲುಹುವ ದೇವಗೆ ವಿ ನೋದ ಮೂರುತಿಯಾದ ವೆಂಕಟಗೆ 1 ಶಂಖ ಚಕ್ರಧರಿಸಿಪ್ಪವU ಪಂಕಜ ಹಸ್ತವ ತೋರ್ಪವಗೆ ಬಿಂಕದೊಳಸುರರ ಕೆಡಹಿದ ಧೀರಗೆ ಮೀ ನಾಂಕನ ಪಿತನಾದ ವೆಂಕಟಗೆ 2 ಪೀತಾಂಬರಧರನೆನಿಸಿದಗೆ ನೂತನ ನಾಮದಿ ಮೆರೆವವಗೆ ಪಾತಕನಾಶನ ಪರಮಪಾವನಗೆ ಅ ತೀತ ಮಹಿಮನಾದ ವೆಂಕಟಗೆ 3 ಖಗವಾಹನನೆಂದೆನಿಸಿದಗೆ ನಗಧರನಾಗಿಹ ಅಘಹರಗೆ ಮೃಗಧರರೂಪಗೆ ಮುಂಚಕಲಾಪಗೆ ಜಗದಾಧಾರಕ ವೆಂಕಟಗೆ 4 ಲೋಕನಾಯಕನಾದ ಕೇಶವಗೆ ಶೋಕಭಂಜನನಾದ ಮಾಧವಗೆ ಸಾಕಾರ ರೂಪಗೆ ಸರ್ವಾತ್ಮಕನಿಗೆ ಶ್ರೀಕರನೆನಿಸುವ ವೆಂಕಟಗೆ 5 ಆಲದ ಎಲೆಯೊಳ್ವೊರಗಿದಗೆ ಆ ಕಾಲದಿ ಅಜನನು ಪೆತ್ತವಗೆ ನಿಗಮ ವಿದೂರಗೆ ಕಾಲಕಾಲಾಂತಕ ವೆಂಕಟಗೆ 6 ಸ್ವಾಮಿ ಪುಷ್ಕರಣಿಯ ವಾಸನಿಗೆ ಭೂಮಿ ವರಾಹತಿಮ್ಮಪ್ಪನಿಗೆ ಪ್ರೇಮದಿ ಜಗವನು ಸಲುಹುವ ನಾಮದ ಸೋಮ ಸನ್ನಿಭನಾದ ವೆಂಕಟಗೆ 7
--------------
ವರಹತಿಮ್ಮಪ್ಪ