ಒಟ್ಟು 5111 ಕಡೆಗಳಲ್ಲಿ , 126 ದಾಸರು , 3233 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾನಿನಿ ರನ್ನೆ ತಾನ್ಯಾಕೆ ಬಾರನುನೀನೆ ವಿಚಾರಿಸು ಇಬ್ಬರ ನ್ಯಾಯವ ಪ ಮಗಳಿಗೆ ಮಗಳಾದ ಮಗಳಿಗಳಿಯನಾದಮಗಳ ಗಂಡಗೆ ಭಾವ ಮಾವನಾದುದ ಕೇಳಿನಾ ನಿನ್ನ ಪಾದಕ್ಕೆ ಬಂದೆ ಶ್ರೀಹರಿಯೆ 1 ವೈರಿಗೆ ವೈರಿಯಾದೆ ವೈರಿಗೆ ಸುತನಾದೆವೈರಿ ಗಂಡಗೆ ತನ್ನ ಮಗಳ ಕೊಟ್ಟುದ ಕೇಳಿನಾ ನಿನ್ನ ಪಾದಕೆ ಬಂದೆ ಶ್ರೀಹರಿಯೆ 2 ಆನಿ ಬಿದ್ದರ ತನ್ನ ಗ್ಯಾನದಿಂದೇಳುವುದುಏನು ಮಾಡಿದರು ಅದರ ಭಾವ ಹಿಂಗದುಜ್ಞಾನವಂತ ಕಾಗಿನೆಲೆಯಾದಿಕೇಶವರಾಯ ಮುನಿದು ಪೋದನೆ 3
--------------
ಕನಕದಾಸ
ಮಾನಿನಿ ಆ ಮಹಾಭಕುತಿಗಭಿಮಾನಿ ಪ ಸುತ್ರಾಮ ಕಾಮ ರವಿ ಸೋಮವಿನುತೆ ಮದಸಾಮಜ ಗಮನೆ ನೀಲಕುಂತಳೆ ಮೋಹನ್ನೇ-ಸುವಾಣಿ ಚನ್ನೆ ಬಾಲಾರ್ಕ ತಿಲಕರನ್ನೆ ಫಾಲೆ ವಿಶಾಲೆ ಗುಣರನ್ನೆ -ಕುಂದರದನ್ನೆ ಮೂರ್ಲೋಕದೊಳು ಪಾವನ್ನೆ ಕಾಳವ್ಯಾಳ ವೇಣಿ ಮ್ಯಾಲೆ ರ್ಯಾಗಟೆ ಪೊ ನ್ನೊಲೆ ಚವುರಿಗೊಂಡ್ಯ ಹೆರಳು ಭಂಗಾರ ಕು- ನಾಸಿಕ ನೀಲೋ ತ್ಪಲೆ ನೇತ್ರಳೆ ಪಾಂಚಾಲಿ ಕಾಳಿ ನಮೋ 1 ಪೊಳಿವೊ ಕೆಂದುಟಿ ನಸುನಗೆ ಪತ್ತು ದಿಕ್ಕಿಗೆ ಬೆಳಕು ತುಂಬಿರಲು ಮಿಗೆ ಥಳಕು ವೈಯಾರದ ಬಗೆ ಮೂಗುತಿಸರಿಗೆ ಸಲೆ ಭುಜಕೀರ್ತಿ ಪೆಟ್ಟಿಗೆ ಥಳಥಳಿಸುವ ಕೊರಳೊಳು ತ್ರಿವಳಿ ನ್ಯಾ ವಳಿ ತಾಯಿತು ಸರಪಳಿಯ ಪದಕ ಪ್ರ ವಳ ಮುತ್ತಿನ ಸರಪಳಿಗಳು ತೊಗಲು ಎಳೆ ಅರುಣನ ಪೋಲುವ ಕರತಳವ 2 ಕಡಗ ಕಂಕಣ ಮಣಿದೋರೆ-ದೋಷ ವಿದೂರೆ ಝಡಿತದುಂಗುರ ಶೃಂಗಾರೆ ಮುಡಿದ ಮಲ್ಲಿಗೆ ವಿಸ್ತಾರೆ-ಕಂಚುಕಧರೆ ಉಡಿಗೆ ಶ್ವೇತಾಂಬರ ನೀರೆ ಬಡ ನಡು ಕಿಂಕಿಣಿ ನಿಡುತೋಳ್ಕದಳಿಯ ಪೊಡವಿಗೊಡೆಯ ನಮ್ಮ ವಿಜಯವಿಠ್ಠಲನ್ನ ಅಡಿಗಳರ್ಚಿಪುದಕೆ ದೃಢಮನ ಕೊಡುವಳ 3
--------------
ವಿಜಯದಾಸ
ಮಾನಿಸರಿಗೊಶವಲ್ಲ ಪೊಗಳಿ ಪೇಳುವುದು ಪ ಮೇಧಾದಿ ಮುನಿ ತನ್ನ ತಪೋಸಿದ್ಧಿಗೆ ಸರ್ವ | ಮೇದಿನಿ ತಿರುಗಿ ಬರುತಲಿ ಇತ್ತಲು | ಸಾಧನಕೆ ಸೌಮ್ಯವಾದ ಭೂಮಿಯನು ನೋಡಿ ಇವ | ಮಣಿ ಮುಕ್ತಿ ತೀರದಲಿ1 ನೆಸಗಿದ ತಪಕೆ ಮೆಚ್ಚಿ ಹರಿ ಒಲಿದ ತೀವ್ರದಲಿ | ಬಿಸಿಜದಳ ಲೋಚನೆ ಲಕುಮಿಯಿಲ್ಲೀ || ಎಸೆವ ಮಂಜರಿ ವೃಕ್ಷದಲಿ ವಾಸವಾಗಿ | ವಸುಧಿಯೊಳು ವಾಸವಾಗಿ ಅಗ್ರದಲಿ ಮೆರೆದನು 2 ಪರಮೇಷ್ಠಿ ಬಂದು ಈ ಕ್ಷೇತ್ರದಲಿ ನಿಂದು ಚ ಪರಮ ಗತಿ ಕೊಡು ಎಂದು ಸ್ತುತಿಸಿದನು ಹರಿಯ3 ಇಲ್ಲಿಗೆ ಬಂದು ಸತ್ಕರ್ಮವನು ಮಾಡಿದಡೆ | ಎಲ್ಲ ಕ್ಷೇತ್ರದಲಿ ಮಾಡಿದ ಫಲಕಿಂತ | ಎಳ್ಳಿನಿತು ಮಿಗಿಲೆನಿಸಿ ಪುಣ್ಯ ತಂ | ದುಣಿಸುವುದು | ಎಲ್ಲೆಲ್ಲಿ ಇದ್ದರು ಸ್ಮರಣೆ ಮಾಡಿರೊ ಜನರು 4 ಸುಗಂಧ ಪರ್ವತವಾಸ ಪುರುಷೋತ್ತಮ | ನಿಗಮಾದಿಗಳಿಗೆ ಅತಿದೂರತರನೋ | ಸುಗುಣನಿಧಿ ವಿಜಯವಿಠ್ಠಲರೇಯ ಸರ್ವದ | ಗಗನದಲಿ ಪೊಳೆವನು ಬ್ರಹ್ಮಾದಿಗಳ ಸಹಿತಾ 5
--------------
ವಿಜಯದಾಸ
ಮಾಯಾ ಕಾರ್ಯವಾಕೆಯೆ ಮಿಥ್ಯವೂಈ ರೀತಿುಂದಲಾತ್ಮನಿಛ್ಛೆಯಲಿದುಸೇರಿದಂತಿಹುದಾಗಿ ಭ್ರಾಂತಿಯು ಜಾರುವನ್ನೆಗ ಪೊಳೆಯಲು1ಮುನ್ನ ನೀ ಬಂದೆನೆಂಬಲ್ಲಿ ಪರವiನುಭಿನ್ನವಿಲ್ಲದೆ ಪೂರ್ಣವಾಗಿರಲಿನ್ನು ನಿನಗೆಡೆಯಾವದೂಅನ್ಯ ವಿಲ್ಲದನನ್ಯನೀಶನೆ ನಾನುನಿನ್ನ ಕಾರ್ಯದ ನೇತ್ರಮಾತ್ರಕ್ಕುನ್ನತ ಕೃತಿಯಾಗಿರೇ 2ಮರುಭೂಮಿಯೊಳು ಮುಸುಕೆ ಮಿತ್ರನ ಕಾಂತಿಕೆರೆಯ ನೀರಿನ ಹಾಗೆ ಕಾಣುತಲಿರಲು ನೋಡಿದರುದಕವೆಬರಿಯ ಚೌಳೆಂತಾ ಪರಿಯು ನಿನ್ನಯ ತೋರ್ಕೆನಿರತ ಉಂಟೆಂಬಂತೆ ನಿನ್ನಯ ಮರುಳಿನಿಂ ಮುಂದಿರುತಿರೆ 3ಹೊಳೆಯಲಿಲ್ಲವು ಹುಸಿಯಾಗಿ ನೀ ಮುನ್ನಬಳಿಕ ನಿನ್ನೊಳು ಬದ್ದನೆಂಬೀ ಬಗೆಯು ತನಗೆಂತಪ್ಪುದೂತಿಳಿದು ನೋಡಲು ತಾನೊಬ್ಬನಾತ್ಮನುಕಳೆದು ಕೂಡುವ ಮಾತು ಮಾತ್ರವೆಯಳವಿಗೊಂಡಿರವಿಷ್ಟಕೆ 4ಅರಿವಿನಾ ಘಟ್ಟಿಯಾಗಿಹೆ ನಾ ನಿತ್ಯವರಿವು ಮರವೆಗಳೆಂದು ತೋರ್ದರು ಕರಣಧರ್ಮಗಳಲ್ಲದೆಬೆರದು ಬೇರಾಹ ಬಗೆಯಂದಿಗಿಲ್ಲವುತಿರುಪತಿಯ ಶ್ರೀ ವೆಂಕಟೇಶನೆ ತರುಬಿಕೊಂಡಿರೆ ವಿಶ್ವವಾ 5ಕಂ||ನುಡಿಯಲು ಜೀವನು ಕೋಪದಿಕಿಡಿಗೆದರುವ ಕಂಗಳಿಂದಭಿಮಾನನ ಬಲದಿಂತಡೆಯದೆ ತನು ಜೀವನನಾರ್ಭಟಿಸುತ ವಾದಿಸಿದುದ ಪುಸಿತನ ಬಂತೆಂಬುದರಿಂ
--------------
ತಿಮ್ಮಪ್ಪದಾಸರು
ಮಾಯಾ ಜಯಕೃತಿಗೆ ಮಂಗಳಂ ಶಾಂತಿ ಸ್ವರೂಪಳಿಗೆ ಮಂಗಳಂ ಭಕ್ತರ ಕಂಗಳಿಂದಲಿ ನೋಡಿ ರಂಗನ ಪಾದವ ತೋರ್ವಳಿಗೆ ಪ. ಮಂಗಳಂ ಜಯ ಮಂಗಳಂ ಅ.ಪ. ಅಲ್ಲಿ ವೈಕುಂಠದೊಳಗೆ ಇರಲು ಬಲ್ಲಿದ ಭೃಗು ಋಷಿ ತಾ ಬರಲು ವಲ್ಲಭನ ವಕ್ಷಸ್ಥಳ ಒದೆಯಲು ಹರಿ ಸೊಲ್ಲು ಕೇಳದೆ ಓಡಿ ಬಂದಳಿಗೆ 1 ಕೊಲ್ಲಾಪುರದಲಿ ನಿಂದಳಿಗೆ ಎಲ್ಲರಭೀಷ್ಟವ ಸಲಿಪಳಿಗೆ ಖುಲ್ಲರ ಮರ್ಧಿಪ ಹರಿಯ ವಕ್ಷಸ್ಥಳ ದಲ್ಲಿ ಸದಾ ನೆಲಸಿರ್ಪಳಿಗೆ 2 ಶ್ರೀ ಜಯದೇವಿಗೆ ಶ್ರೀ ಲಕ್ಷ್ಮಿಗೆ ಶ್ರೀ ರುಕ್ಮಿಣೀ ಸತ್ಯಭಾಮಳಿಗೆ ಶ್ರೀ ಪದ್ಮಾವತಿ ನಾಮಕ ನಾನಾರೂಪ ಗುಣಾನ್ವಿತೆಗೆ 3 ಮುಕ್ತಾಮುಕ್ತರಿಗೊಡೆಯಳಿಗೆ ಮುಕ್ತಿಯ ಭಕ್ತರಿಗೀವಳಿಗೆ ಮುಕ್ತಳೆನಿಸಿ ಮುಕ್ತಾಶ್ರಯನಿಗೆ ಆ- ಸಕ್ತಿಯಿಂದ ಸೇವೆ ಮಾಳ್ಪಳಿಗೆ 4 ಗೋಪಾಲಕೃಷ್ಣವಿಠ್ಠಲನ ಆಪಾದ ಮೌಳಿಯ ಗುಣಗಳನು ತಾ ಪರಿಪರಿಯಿಂದ ವರ್ಣಿಸುತ್ತಿದ್ದರು ಅಪಾರವಾಗಿಯೆ ಕಾಂಬಳಿಗೆ 5
--------------
ಅಂಬಾಬಾಯಿ
ಮಾಯಾದೊಳಗೆ ಶಿಲ್ಕಿ ಮಗ್ನನಾಗಿ ಮರವೆಗೆ ಒಳಗಾದೆ ಕಾಯಬೇಕಯ್ಯ ನಿನ್ನ ಕರುಣ ರಸವನ್ನು ಕಾಣದೆ ನಾ ಬರಿದೆ ಪ ದೀನದಯಾಪರ ದನುಜಾಂತಕ ನಿಧಾನ ಸುಜನವಂದ್ಯಾ ಮಾನವಾದಿ------ಜನಕ ಸನ್ಮಾನಿತ ಮುಚುಕುಂದ ನಿತ್ಯ ಶ್ರೀ ರಂಗಾ 1 ಇತರ ಜ್ಞಾನತೊರೆದು ಮನಬಣ್ಣ ಮರೆದು ಪಾದ ಸೌಖ್ಯವ ಕಾಣದಿನ್ನೂ ಪಿಡಿವರು ಇನ್ನೂ 2 ಏಸೋ ಬಾರಿ ನಾ ಹುಟ್ಟಿದರೇನು ಇನ್ನು ನಿನ್ನ ಕಾಣದೆ ಮನವು ನಿನ್ನಲ್ಲಿಲ್ಲದೆ ಘಾಸಿಗೆ ಬಿದ್ದೆನು ಕರುಣಿಸೊ ಬೇಗನೆ ಘನ್ನ `ಹೆನ್ನ ವಿಠ್ಠಲನೆ ' ವಾಸುದೇವ ಎನ್ನ ವೈನದಿ ರಕ್ಷಿಸೋ ವಸುಧೆಯ ಪಾಲಕ 3
--------------
ಹೆನ್ನೆರಂಗದಾಸರು
ಮಾರಕೋಟಿ ಸುಂದರಾಂಗ ಪ ಸರುವಾಂತರಯಾಮಿಯೆಂದು ಶೃತಿಯು ನಿನ್ನ ಪೊಗಳವೆಅ.ಪ ಬಲ್ಲಿದನೀ ಒಳಗೆ ಇದ್ದು ಬರಿದೆ ಬನ್ನಬಡಿಸುವರೆ 1 ಶರಣಾಗತ ಪ್ರಾಣನೆಂಬ ಬಿರುದು ಪೋಗದೆ ನಿನಗೆ 2 ಮ್ಮಪ್ಪಕಾಯೊ ಶ್ರೀ ಗುರುರಾಮ ವಿಠಲರಾಯ ಸ್ವಾಮಿ 3
--------------
ಗುರುರಾಮವಿಠಲ
ಮಾರಜನಕ ಮುರಾರಿ ಕಾಣಮ್ಮ ಪ ಅರುಣ ಚರಣ ಕಳದಿರವು ಅಂಕುಶಧ್ವಜ ಅರವಿಂದ ರೇಖಾಂಕ ಪುರುಷನಾರಮ್ಮ ಉರಗಶಯನ ಕರಸರೋಜ ಮಧ್ಯದೊಳಿಟ್ಟು ಸುರರಿಂದರ್ಚನೆಗೊಂಬ ಹರಿಯು ಕಾಣಮ್ಮ 1 ಪೊಳೆವ ಉದಯ ಶಶಿ ಬೆಳಗು ಸೋಲಿಪ ನಾಖಾ ವಳಿಯಿಂದ ಒಪ್ಪುವ ಚಲುವನಾರಮ್ಮಾ ಕುಲಿಶ ಪಾಣಿಗೆ ಒಲಿದಿಳೆಯೊಳು ಬಂದು ಖಂ ಜಲಧಿ ಕಾಣಮ್ಮ 2 ಅಂದುಗೆ ಗೆಜ್ಜೆ ಕಡಗ ಪೊನ್ನೂಪುರ ತೊಡಂದ ಬರುತಿಹ ಪ್ರೌಢನಾರಮ್ಮ ದೃಢ ಭಕ್ತರೆಡೆಯಲಿ ಬಿಡದೆ ನಲಿಯುತಲಿಪ್ಪ ಮೃಡಸುರಪಾದ್ಯರ ಪತಿಯು ಕಾಣಮ್ಮ 3 ಕರಿಗಲ್ಲಿನಂತೆ ಸುಂದರ ಜಂಘೆ ಜಾನುಗ ಳೆರಡು ತರಣಿಯಂತೆ ಇವನಾರಮ್ಮಾ ಪರಮೇಷ್ಠಿ ಪ್ರಳಯದಿ ಸಿರಿಯಿಂದ ನುತಿಗೊಂಬ ಪರಮ ಪುರುಷ ನರಹರಿಯು ಕಾಣಮ್ಮ 4 ಇಭವರಕರದಂತೆ ಉಭಯ ಊರು ಕಟಿ ಪ್ರಭ ವಸನವನುಟ್ಟ ಸುಭಗನಾರಮ್ಮಾ ರಭಸದಿಂದಲಿ ಕಂಭ ಬಿಗಿದು ಪ್ರಹ್ಲಾದಗೆ ಅಭಯವಿತ್ತ ಸುರಪ್ರಭುವು ಕಾಣಮ್ಮ 5 ವಲಿವಿೂಕ ಬಿಲದಂತೆ ಸುಳಿನಾಭಿ ಜಠರತ್ರಿ ವಳಿಗಳಿಂದಲಿ ಬಲು ಪೊಳೆವನಾರಮ್ಮಾ ನಳಿನೋದ್ಭವನ ಪುತ್ರಾಖಿಳ ಲೋಕ ತಾಳಿದಾ ಹಾಲಾಹಲಕಂಠನ ಗೆಳೆಯ ಕಾಣಮ್ಮಾ 6 ಕೌಸ್ತುಭ ವೈಜಯಂತೀ ಸರ ಸಿರಿಯಿಂದಲೊಪ್ಪೋ ನಿರಯನಾರಮ್ಮ ವರಭೃಗುಮುನಿಪನ ಸ್ಪರುಶವನು ತಾಳ್ದ ಕರುಣ ಸಾಗರ ಸಿರಿಧರನು ಕಾಣಮ್ಮ 7 ಅರಿ ಶಂಖ ಸತತ ಪಿಡಿದಿಹ ಚತುರನಾರಮ್ಮ ದಿತಿಜರ ಸದೆದು ದೇವತೆಗಳ ಸಲಹಿದ ಚತುರಾಸ್ಯ ಕೃತಿದೇವಿ ಪತಿಯು ಕಾಣಮ್ಮ 8 ಧರದಿಂದೊಪ್ಪುತಲಿಹ ಪಿರಿಯ ನಾರಮ್ಮಾ ಸಿರಿಯೊಡನೆ ಕ್ಷೀರಶರಧಿ ಯೊಳೊರಗಿಪ್ಪ ವಜ್ರ ಪಂಜರವನು ಕಾಣಮ್ಮ 9 ಸುರಕಪೋಲ ನಾಸ ಸರಸಿಜನಯನ ಪು ಕುಂಡಲಿ ಯುಗಧರನು ಆರಮ್ಮಾ ಶರಧಿ ಮಥನದಲ್ಲಿ ತರುಣಿಯಾಗಿ ಅಸು ರರ ಮೋಹಿಸಿದ ಅಜರನು ಕಾಣಮ್ಮ10 ಬಾಲಶಶಿಯಂತೆ ಫಾಲಕಸ್ತೂರಿನಾಮ ಮೌಳಿ ಸುಳಿಕೇಶ ಬಾಲನಾರಮ್ಮಾ ಮೂಲೇಶನಾದ ಜಗನ್ನಾಥ ವಿಠ್ಠಲ ಮೂರ್ಲೋಕಾಧಿಪ ಶ್ರೀ ಗೋಪಾಲ ಕಾಣಮ್ಮ11
--------------
ಜಗನ್ನಾಥದಾಸರು
ಮಾರುತನ ನಿಜ ಜಾಯೆ ಪ ಬಾರಿ ಬಾರಿಗೆ ನಿನ್ನ ಚರಣವ ಸ್ಮರಿಸುವೆ ಚಾರುಮತಿಯನೀಯೆ ಅ.ಪ. ಮೂರನೆ ಯುಗದಲಿ ಧೀರ ದ್ರುಪದನಧ್ವರದೊಳುದಿಸಿ ಶೂರ ಪಾಂಡವರೈವರ ವೀರಪತ್ನಿಯು ನೀನೆನಿಸಿ ಕೌರವನ ಸಭೆಯಲಿ ಸೀರೆಯನು ಸೆಳೆಯಲು ನೀ ಮಾರಪಿತನ ಭಜಿಸಿ ಭೂರಿವಸನ ಪೊಂದಿದೆ ಧೀರೆ 1 ವೀರ ಮಾರುತಿಯ ಗದೆ ಕುರುಪನ ಊರು ಮುರಿಯಲೆಂದು ವಾರಿಧಿ ಮಿತಿ ಮೀರುತಿರೆ ನೀ ಸಾರಿದೆ ಪತಿಗಳ ಗಂಭೀರೆ 2 ಆ ರಣಾಗ್ರದಿ ಕ್ರೂರ ದುಶ್ಶಾಸನ ಸಾರಿ ಬರುವುದ ನೋಡಿ ದಾರಿ ಹಿಡಿದಪ್ಪಳಿಸವನ ದೋರೆ ಕರುಳ ಹಿರಿದೀಡ್ಯಾಡಿ ಮೋರೆಯಿರಿದು ಪಲ್ಮುರಿದು ಹಂಗಿಸಿದಂಥ- ಸತಿ 3
--------------
ರಂಗೇಶವಿಠಲದಾಸರು
ಮಾರುತಿ ನಿಲ್ಲಿಸಯ್ಯ ನಿನ್ನ ಮೂದಲೆ ಮಾರುತಿ ಪ ನಿಲ್ಲಸಯ್ಯ ನಿನ್ನ ಮೂರುತಿಫುಲ್ಲವಿಸಿದೆ ನಿನ್ನ ಕೀರುತಿಬಲ್ಲಭಕ್ತಿಪಥವ ತೋರುತಿಎಲ್ಲರೊಳಗೆ ಸುಖವ ಬೀರುತಿ ಅ.ಪ. ಗಾಡಿಕಾರ ರಾಮನನ್ನು ನೋಡಿ ನೋಡಿಯವನ ಮೂರ್ತಿಮೂಡಿನಿಂತ ನಿನ್ನ ಕಣ್ಣ ನೋಡಿ ಧನ್ಯನಪ್ಪೆ ಮೂರ್ತಿ1 ಪ್ರೇಮಭಕುತಿಯಿಂದ ನಿರುತ ರಾಮನನ್ನು ಭಜಿಸಿ ನುಡಿವನಾಮವೆನ್ನ ಪಾಪಿ ಕಿವಿಯ ಧಾಮದಲ್ಲಿ ಸೇರುವಂತೆ 2 ಎನ್ನ ಕಾಡುವಂಥ ದುರಿತವನ್ನು ಸೌಖ್ಯವನ್ನುಇನ್ನು ಕೊಡುವ ನಿನ್ನ ದಿವ್ಯ ಸನ್ನಿಧಿ ತಾನಾಗುವಂತೆ 3 ನಿತ್ಯ ಸೇವಿಪಂತೆ ಧೀರತೆ ಬರುವಂತೆ ಎನ್ನೊಳು 4
--------------
ವೀರನಾರಾಯಣ
ಮಾಲಕೌಸ್ತುಭ ಸತ್ಯಭಾಮಲೋಲ ನೀಲಶಾಮಸುಂದರ ಕಾಲಕಾಲದಿ ಬಿಡದೆ ಎನ್ನ ಪಾಲಿಸಭವನೆ ಪ ಭುವನವೀರೇಳು ಸೂತ್ರಧಾರ ಭವದರೋಗಕ್ವೈದ್ಯ ಭಕ್ತಭಯ ಪರಿಹಾರ ಸತ್ಯ ಬುವಿಜಾಮನೋಹರ 1 ಕೋಮಲಾಂಗ ಭಜಕಜನರ ಕಾಮಿತಾರ್ಥ ಕೊಡುವ ಸುರ ಕಾಮಧೇನು ಕಲ್ಪವೃಕ್ಷ ಸ್ವಾಮಿ ದಯಾಕರ 2 ಸಾರ ಮಾಯಾಮೋಹವಿದೂರ ಕೇಶವ 3 ಪರಕೆ ಪರಮ ಪರಾತ್ಪರ ಮರಣರಹಿತ ಮಾರಮಣ ಉರಗಶಾಯಿ ಪರಮಪುರುಷ ಶರಣು ಸುಖಕರ 4 ನಿಗಮವೇದ್ಯ ನಿರುಪಮಾತ್ಮ ಅಗಣಿತಗಣಿತಗಮ್ಯಚರಿತ ಸುಗುಣ ಶಾಂತಾಕಾರ ಮೂರು ಜಗದ ಪಾಲಯಾ 5 ಸಕಲವಿಘ್ನದೂರ ನಿನ್ನ ಭಕುತಿಯಿಂದ ಭಜಿಸಿಬೇಡ್ವೆ ಮುಕುತಿಸಂಪದ ನೀಡಿ ಸಲಹು ಭಕ್ತವತ್ಸಲ 6 ಕಂದಮಾಡಿದಪರಾಧಗಳ ತಂದೆ ದಯದಿ ಕ್ಷಮಿಸಿ ಬಂದ ಬಂಧಗಳನು ಪರಿಹರಿಸಯ್ಯ ಸಿಂಧುಮಂದಿರ 7 ನಾನಾಯೋನಿಯೊಳಗೆ ಪುಟ್ಟಿ ಜ್ಞಾನಗೆಟ್ಟು ಬಳಲುವಂಥ ಹೀನ ಬವಣೆ ತಪ್ಪಿಸಯ್ಯ ದೀನಪಾಲ 8 ನಿರುತ ನಿನ್ನ ಚರಣದೆಡೆಗೆ ಬರುವ ಸುಲಭಮಾರ್ಗ ಆವು ದ್ವರವ ಪಾಲಿಸೊಲಿದು ಎನಗೆ ಕರುಣಸಾಗರ 9 ದೋಷದಾರಿದ್ರ್ಯಗಳೆಲ್ಲ ನಾಶಗೈದು ಹರಿಯೆ ನಿಮ್ಮ ದಾಸನೆನಿಸುದ್ಧಾರಮಾಡು ದೋಷನಾಶನ 10 ಮರೆಯಬಿದ್ದ ತರಳನನ್ನು ಕರುಣದೃಷ್ಟಿಯಿಂದ ನೋಡಿ ಸರ್ವಭಯ ಪರಿಹಾರಮಾಡು ಹರಿಸರ್ವೋತ್ತಮ 11 ನಿನ್ನ ಒಲವು ಬಲವು ಎನಗೆ ಅನ್ಯಬಲವ ಒಲ್ಲೆಸ್ವಾಮಿ ಮನ್ನಿಸಬೇಕಿನ್ನು ಮಗನ ಸನ್ನುತಾಂಗನೆ 12 ನಂಬಿ ಭಜಿಪ ಬಕ್ತಜನರ ಇಂಬುದಾಯಕ ನೀನು ಇಂಬುಗೊಟ್ಟು ಸಲಹು ಎನ್ನ ಅಂಬುಜಾಕ್ಷನೆ 13 ಏನುತಪ್ಪು ಇರಲು ನೀನೆ ದಯದಿ ಕ್ಷಮಿಸಿ ಇನ್ನು ನಾನಾಬೇನೆ ಕಳೆದು ಕಾಯೊ ಜಾನಕೀಶನೆ 14 ಚಾರುವೇದ ಪೊಗಳುವಂಥಪಾರ ನಿನ್ನ ದಿವ್ಯಮೂರ್ತಿ ತೋರಿಧನ್ಯನೆನಿಸು ಎನ್ನ ನಾರಸಿಂಹನೆ 15 ಭಾರ ನಿನ್ನದಯ್ಯ ಬಂದ ಘೋರ ತಾಪತ್ರಯಂಗಳಿಂದ ಪಾರುಮಾಡಿ ಕಾಯುವುದು ಕಾರುಣ್ಯ ನಿಧೆ 16 ಪ್ರಾಣಹಾರಿ ಹೋಗಲು ನಿನ್ನ ಧ್ಯಾನವಗಲದಂತೆ ಎನಗೆ ತ್ರಾಣಪಾಲಿಸಯ್ಯ ಮೊದಲು ಧ್ಯಾನದಾಯಕ 17 ದಾಸನರಿಕೆ ದಯದಿ ಪೂರೈಸಿ ಕಾಯಬೇಕು ದೇವ ಘಾಸಿಗೈಯದೆ ರಕ್ಷಿಸಯ್ಯ ದಾಸಪ್ರಿಯನೆ 18 ಕೆಟ್ಟಶಕುನರಿಷ್ಟ ಸ್ವಪ್ನ ತಟ್ಟಬೇಕೆ ನಿನ್ನ ಪಾದ ನಿಷ್ಠೆಯಿಂದ ಭಜಿಪರ್ಗೆ ಸೃಷ್ಟಿಕರ್ತನೆ 19 ನಿತ್ಯ ನಿರ್ಮಲಾತ್ಮ ನಿನ್ನ ನಿತ್ಯಭಕ್ತಿ ಸುಖವನಿತ್ತು ಸತ್ಯಸಂಧನೆನಿಸು ಎನ್ನ ಸತ್ಯರಾಧಾರ 20 ಮರವೆ ತರಿದು ಹರಿಯೆ ನಿಮ್ಮ ಕರುಣ ನೀಡಿ ಮರಣ ಭಯವ ಪರಿಹರಿಸಯ್ಯ ಸಿರಿಯವಲ್ಲಭ 21 ಭಾನುಕೋಟಿಪ್ರಕಾಶ ನಿನ್ನ ಧ್ಯಾನಿಸಿ ಮರೆಹೊಕ್ಕೆ ನಾನಾಬೇನೆ ಗೆಲಿಸಿ ಕಾಯೊ ದಾನವಾಂತಕ 22
--------------
ರಾಮದಾಸರು
ಮಾವಿನಕೆರೆ ಎಲ್ಲಿರುವೆ ಬಾರಂಗ ಬಾ ಮೋಹನಾಂಗ ಎಲ್ಲಿರುವೆ ನೀಲಾಂಗ ಮಾಂಗಿರಿರಂಗ ಪ ಇಲ್ಲಿರುವೆಯಾರಂಗ ಸಲ್ಲಲಿತ ರಂಗ ಮೆಲ್ಲನೇ ರಂಗ ಓ ಮುದ್ದುರಂಗಾ ಅ.ಪ ಅಲ್ಲಿ ನೋಡಿದರಿಲ್ಲ ಇಲ್ಲಿ ಕಾಣಿಸಲಿಲ್ಲ ಬಲ್ಲೆ ನಾನೀ ಚೆಲ್ಲ ವರದಾತನಲ್ಲ ಇಲ್ಲಿ ತಿಳಿಗೊಳವಿಲ್ಲ ಮಲ್ಲಿಗೆಯ ಹೂವಿಲ್ಲ ಇಲ್ಲಿರುವ ಧೃಢವಿಲ್ಲ ನೀ ಬರುವೆ ಅರಿವಿಲ್ಲ 1 ಗಜರಾಜ ಕರೆದನೆ ಅಜಾಮಿಳನು ಕೂಗಿದನೆ ಅಜನು ಬಾರೆಂದನೆ ಲೋಕವಂದಿತನೆ ರಜತಾದ್ರಿ ವಾಸನೆ ಪೂಜಿಸಲು ಕರೆದನೊ ಸುಜನ ವರದಾಯಕನೆ ವಿಜಯ ಪೂರಿತನೇ 2 ವನವನದಿ ಸಂಚರಿಸಿ ದನಿದನಿಯನನುಸರಿಸಿ ಮನದಿ ನೋವನನುಭವಿಸಿ ಕನಸೆಂದು ಭಾವಿಸಿ ಕನವರಿಪ ಯೆನ್ನೊಳಗೆ ಕನಿಕರವ ಸೂಸಿ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾವಿನಕೆರೆ 3 ನಮ್ಮೂರ ದ್ಯಾವರೇ ಬೊಮ್ಮನಪ್ಪನು ಎಂದು ಹೊಯ್ಸಿರೋ ಡಂಗುರವನು ಪ ನಿಮ್ಮ ನೆಂಟರಿಗೆಲ್ಲ ನಿಮ್ಮ ಮಕ್ಕಳಿಗೆಲ್ಲಾ ರಂಗಪ್ಪನವನೆಂದು ಸಾರಿಸಾರಿ ಅ.ಪ ಭೋರಪ್ಪನೆಂದರೂ ತಿಮ್ಮಪ್ಪನೆಂದರೂ ಈರಪ್ಪನೆಂದರೂ ಒಬ್ಬನಣ್ಣ ಸಾರಿ ಡಂಗುರವನು ಹೊಯ್ಸಿರಣ್ಣ 1 ಕುರಿಕೋಳಿ ಕೋಣಗಳ ಶಿರವ ತರಿಯಲು ಬೇಡಿ ನರರಂತೆ ಜೀವಿಗಳು ಅವುಗಳಣ್ಣ ಬರಿಯ ಭಕ್ತಿಯೇ ಸಾಕು ಗುರುಡವಾಹನನವನು ಪರಮಾತ್ಮನವನೆಮ್ಮ ಕಾಯ್ವನಣ್ಣ 2 ರಂಗ ನರಶಿಂಗನು ಗಂಗೆಯನು ಹೆತ್ತನೂ ಗಂಗೆಯನು ಹೊತ್ತವನೂ ಒಬ್ಬನಣ್ಣ ಶಿಂಗರದ ಗೋಪಾಲ ಮಾಂಗಿರಿಯ ರಂಗನೂ ಒಬ್ಬನೇ ತಾನೆಂದು ತಿಳಿಯಿರಣ್ಣ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾವಿನಕೆರೆ 4 ನೀನಿಲ್ಲದೆನಗಾರೋ ಮಾಂಗಿರಿಯ ರಂಗ ಪ ಮಾನಾಪಮಾನಕ್ಕೆ ಹೊಣೆಗಾರ ರಂಗಾ ಅ.ಪ ಗಿರಿಯೊಳಗೆ ವಾಸಿಸುವೆ ನರರ ಗೋಜೆನಗೇಕೆ ನರರ ನೇತ್ರಂಗಳಿಗೆ ಹರನಂತೆ ಕಾಂಬೇ ಧರೆಯೊಳಗೆ ವಾಸಿಸುವರಾರ ಹಂಗೆನಗಿಲ್ಲ ಕೊರತೆಯೇ ಎನಗಿಲ್ಲವೆಂದರಿಯಬೇಡಾ 1 ಗಿಯಾದರೇನಯ್ಯ ಸುರಲೋಕಕದು ಪೂಜ್ಯ ಹರನಾದಡೇನಯ್ಯ ಹರಗೆ ಪಿತನೀನು ನರರ ಹಂಗೇಕಿಲ್ಲ ಗಿರಿಯನೇರುವ ಭಕ್ತ [ಜ] ನರಅಂಜಿಟ್ಟಾ ಹರಕೆಗಳು ಸಾಲವೇ ರಂಗ 2 ಶಾಮಜೋಯಿಸ ನಿನ್ನ ಸೋಮಧರನೆಂಬರಿಗೆ ವಿಭೂತಿ ಅಕ್ಷತೆಯ ನೀಡುವಾ ಸೋಮಸುಂದರ ನಮ್ಮ ಮಾಂಗಿರಿಯ ರಂಗಯ್ಯ ಸ್ತೋಮ ಜನಗಳಿಗದು ತಿರುಮಣಿಯೂ ಜೀಯ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾವಿನಕೆರೆ 8 ರಂಗಗಿರಿಯನೇರಿಬರುವಾ ತಂಗಿ ಬರುವೆಯಾ ಪ ಅಂಗನೆಯರು ಕುಣಿದು ಮಣಿವ ಸಂಗದೊಳಿರುವಾ ಅ.ಪ ಅವನ ಪಾದದ ನಡಗೆ ಚಂದ | ಧವಳಹಂಸ ಮನಕಾನಂದಾ ಅವನ ನಲಿವು ನವಿಲಿಗಂದ | ಅವನ ಉಲಿವು ಕೋಗಿಲೆಯಂದಾ 1 ಅವನ ಕರದ ವೇಣುಗಾನ ಭುವನಕೆಲ್ಲ ಅಮೃತಪಾನ ಅವನ ನಗೆಯ ತೋರ್ಪ ಭವವ ಕಳೆವ ಪುಣ್ಯಸದನ 2 ವಾರಿವಾಹ ವರ್ಣದವನು ಹಾರಪದಕ ಧರಿಸಿದವನು ಚಾರುಸುಂದರ ಪೀತಾಂಬರನು 3 ಹಿಂದೆ ನೀನು ನೋಡಲಿಲ್ಲ ಮುಂದೆ ನಾನು ಕರೆವುದಿಲ್ಲ ಇಂದು ಬಂದೆಬರುವನಲ್ಲ ಸಂದೇಹ ಎಳ್ಳಷ್ಟೂ ಇಲ್ಲ 4 ಬೊಮ್ಮನಪ್ಪನವನೆ ನೀರೆ ನಮ್ಮ ಮಾಂಗಿರಿಗೊಪ್ಪುವ ತಾರೆ ಹೊಮ್ಮಿದಾ ಸಂಪ್ರೀತಿಯ ಬೀರೆ ಸುಮ್ಮನೆ ನನ್ನೊಡನೆ ಬಾರೆ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್