ಒಟ್ಟು 5051 ಕಡೆಗಳಲ್ಲಿ , 129 ದಾಸರು , 3317 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಹಾಲಕ್ಷ್ಮೀ ಎನ್ನ ಪಾಲಿಸೆ ಇಂದಿರಾದೇವಿ ಜ- ಗನ್ನುತ ಚರಿತೆ ಭಕ್ತ ಸಂಜೀವಿ ಪ ಸನ್ನುತಾಂಗಿಯೆ ದೀನ ಜನರಾಪನ್ನರಕ್ಷಕಳಲ್ಲವೇ ನೀ- ಕೃಪಾ ಕಟಾಕ್ಷದಿ ಅ.ಪ ಕಮಲನಾಭನರಾಣಿ | ಕಲ್ಯಾಣಿ ಪಂಕಜ ಪಾಣಿ ಶಮದಮಾದಿ ಸುಖಂಗಳಿತ್ತೆಮ್ಮಮಿತದುರಿತಗಳೋಡಿಸಿ ಅಹಂ ಕ್ರಮದಿ ತೋರಿಸಿ 1 ಎಷ್ಟೊ ಜನ್ಮಗಳೆತ್ತಿದೆನಮ್ಮಾ | ಬಲು ಕಷ್ಟಕಾಡುತಿಹುದು ಕರ್ಮ ಪೊಟ್ಟೆಗೋಸುಗ ತಿರುಗಿ ತಿರುಗೆಳ್ಳಷ್ಟು ಸುಖವನು ಕಾಣದೆ ಸಂ- ಪರಮೇಷ್ಠಿ ಜನಕನ ಪಟ್ಟದರಸಿಯೆ2 ಸಾಮಜಗಮನೆ ಸದ್ಗುಣರನ್ನೆ | ಕ್ಷೀರ - ಪ್ರಾಣನಾಯಕಿ 3
--------------
ಗುರುರಾಮವಿಠಲ
ಮಹಾಲಕ್ಷ್ಮೀದೇವಿ ಅಂಗನೆ ರುಕ್ಮಿಣಿ ಮಂಗಳ ಪೀಠಕೆ ಸಂಗ ಸಖಿಯರು ಕರೆವರಲೆ ಮಂಗಳ ಸುವೇಣಿ ಜಾಣೆ ಬಾರಮ್ಮ ಹಸಗೆ ಕರೆದರು ಪ ಕಮಲ ಮುಖಿಯರು ಕರೆಯುವರೆ ಕಮಲ ಬಾರಮ್ಮ ಹಸೆಗೆ ಕರೆದರು 1 ಬಾರೆಂದು ಕರೆಯುವರು ಹಸೆಗೆ ಕರೆದರು 2 ನೋಡುತ್ತಲಿರುವನು ದಯಮಾಡು ಹಸೆಗೆ ಕರೆದರು 3
--------------
ಬಾಗೇಪಲ್ಲಿ ಶೇಷದಾಸರು
ಮಹಿಮೆ ನೋಡಿರೈ ರಾಯರ ಮಹಿಮೆ ಪಾಡಿರೈ ಪ ಜಲಜನಾಭನೊಲುಮೆ ಪಡೆದು ಇಳೆಯೊಳು ಪ್ರಖ್ಯಾತರಾದ ಅ.ಪ ರಾಘವೇಂದ್ರ ಯತಿಗಳೆಂದು ಬಾಗಿ ನಮಿಸುವವರ ಮನದ ರಾಗ ದ್ವೇಷಾದಿಗಳ ಕಳೆದು ನೀಗಿಸುವರೊ ಭವದ ಬಂಧ 1 ತಾಳ ತಂಬೂರಿಪಿಡಿದು ಭೋಗಶಯನನನ್ನು ಭಜಿಸಿ ಕೂಗಿ ಪಾಡುತಿರಲು ನಲಿದು ಬೇಗ ಪಾಲಿಸುತಲಿ ನಲಿವ2 ದೇಶದೇಶದವರು ಬಹಳ ಕ್ಲೇಶಪಡುತ ಬರಲು ಅವರ ಕ್ಲೇಶಗಳನು ಕಳೆದು ಪರಮ ಉ- ಲ್ಲಾಸ ನೀಡಿ ಪೊರೆಯುವಂಥ 3 ಸೀತಾಪತಿಯ ಪೂಜಿಸುತಲಿ ಖ್ಯಾತರಾದ ಯತಿಗಳನ್ನು ಪ್ರೀತಿಯಿಂದ ಸೇವಿಸುವರ ಪಾತಕಗಳ ಕಳೆದು ಪೊರೆವ 4 ಗಳದಿ ಹೊಳೆವ ತುಳಸಿ ಮಾಲೆ ಹೊಳೆವ ನಗೆಯ ಮುಖದ ಭಾವ ಕಮಲನಾಭ ವಿಠ್ಠಲನೊಲಿಸಿ ಹಲವು ವಿಧದಿ ಪೂಜಿಸುವರು5
--------------
ನಿಡಗುರುಕಿ ಜೀವೂಬಾಯಿ
ಮಾಕಾಂತೆಯರಸನ ತೋರೆನಗಮ್ಮ ಸಾಕುವ ಸರಸನ ತೋರೆ ಪ. ಕಣ್ಣೆರಡು ಸಾಸಿರುಳ್ಳವನಂಗದಿ ಕಣ್ಣಮುಚ್ಚಿ ಮಲಗಿಪ್ಪನ ಹೊನ್ನು ಮಣ್ಣಿನ ರಾಶಿಯಿಂದ ಕೂಡಿಪ್ಪನ ಮಣ್ಣ ಕೂಡಿದ ದಿವ್ಯಕಾಯನ 1 ಮಣ್ಣಿನ ದೇವರ ಮುಖದಿಂದ ಮಣ್ಣಿಗೆ ಸೆಣಸುವರ ಭುಜದಿಂದ ಮಣ್ಣ ಪಾ(ನಾ?)ಡುವರ ತೊಡೆಯಲ್ಲಿ ಮೂಡಿ ಮತ್ತೆ ಮಣ್ಣ ಚರಣದಿ ಪುಟ್ಟಿಸಿದನ 2 ಕಣ್ಣ ಮುಚ್ಚದನ ಕಣ್ಣ ತೋರದನ ಹೆಣ್ಣಾಳಿನುರುಬಿನಲಿ ಮುಕ್ಕಣ್ಣನ ಮಣ್ಣನಳೆದು ಮಣ್ಣಿನರಸನೊರೆಸಿದ ಮಣ್ಣಿನ ಮಗಳನಾಳಿದನ 3 ಮಣ್ಣ ಪೊತ್ತನಧರಿಸಿದ ಚಿಣ್ಣನ ಮಣ್ಣ ಮೆದ್ದ ಸಣ್ಣ ಬಾಯೊಳು ಮಣ್ಣನೆ ತೋರಿದ ನಂದನರಾಣಿಗೆ ತಲ್ಲಣ ಹಬ್ಬವ ಕೊಟ್ಟ ಧೀರ4 ಕನ್ನಗಳ್ಳರ ಕೊಂದು ಕಣ್ಣಿಲ್ಲದವರಿಗೆ ಕಣ್ಣ ತರಿಸಿಕೊಟ್ಟ ಚದುರನ ಕಣ್ಣಿಲ್ಲದವನಿಗೆ ಕಣ್ಣ ಕೊಟ್ಟನಂತ ಕಣ್ಣುಳ್ಳ ರೂಪವ ತೋರ್ದನ 5 ಹೆಣ್ಣ ಮೋಹಿಸುವನ ಸುಟ್ಟುರಿ- ಗಣ್ಣನ ಮರುಳು ಮಾಡಿದನ ಹೆಣ್ಣನುಂಗುಟದಿ ಪಡೆದು ತಮ್ಮಣ್ಣನ ಮಣ್ಣಿನೊಡೆಯ ಮಾಡಿಸಿದನ 6 ಮಣ್ಣಿಗಾಗಿ ಬಂದ ಮಣ್ಣನಾಳಿದ ದುರ್ಜನ ದಾನವರ ಕೊಂದನ ಹೆಣ್ಣು ಮಣ್ಣೊಲ್ಲದ ವಾದಿರಾಜನಿಗೆ ಪ್ರಸನ್ನನಾದ ಹಯವದನನ 7
--------------
ವಾದಿರಾಜ
ಮಾಡಿದಿ ಸಂಧ್ಯೆಯನು ವೆಂಕಟಕೃಷ್ಣಾಮಾಡಿದಿ ಸಂಧ್ಯೆಯನು ಕೂಡುತಾಸನದೊಳುಜೋಡು ಬಾಲಕರಿಬ್ಬರಾಡುತ ಮನೆಯೊಳು ಪ ತಂಬಿಗಿ ಥಾಲಿಯ ತುಂಬಿಸಿಟ್ಟಿದ ಗೋಪಿಡಿಂಬುರಿಬ್ಬರು ಆಪಸ್ತಂಭ ಶಾಕದಲಿ 1 ಕೇಶವ ತುದಿ ಮೊದಲೀಸು ಸಂಧ್ಯೆಯ ಮಾಡಿಕೂಸುಗಳು ಭಯತರಾಸು ಭುಂಜಿಸಿರಿ 2 ಶೇಷ ಮಂಚದಿ ರಮಾ ಹಾಸಿಯೊಳ್ಹಾಸಿರೆತೋಷದಿ ಮಲಗಿಂದಿರೇಶ ಸುಳಿಸಿರಿ 3
--------------
ಇಂದಿರೇಶರು
ಮಾಡಿರೊ ಪಾಡಿರೊ | ಲೋಕದೊಳಗೆ ಇದೆ ಬೀರುತಾ ಸಾರುತಾ ಶ್ರೀಕಾಂತನ ವೊಲಿಸಿ ಪ ದಶಮಿ ಏಕಾದಶಿ ದ್ವಾದಶಿ ದಿನತ್ರಯ | ವಸುಧಿಯೊಳಗೆ ಮಹಾವ್ರತವೆಂದು ತಿಳಿದು ತ್ರಿ | ದಶರೆಲ್ಲ ಕೈ ಕೊಂಡು ಮಾಡಿದರಂದು ರಂ | ಜಿಸುವ ಸತ್ಕರ್ಮದಲ್ಲಿ | ಬಿಸಜನಾಭನು ಲಕುಮಿಗೆ ಪೇಳಿದ ವ್ರತ | ಹಸನಾಗಿ ಬೊಮ್ಮಗೆ ಅರಹು ಮಾಡಲು ದೇವ | ಋಷಿಗೆ ಅಜನು ಪೇಳಲಾ ಮುನಿ ಬೀರಿದಾ ದಶ ದಿಕ್ಕಿನೊಳಗೊಂದು 1 ಉದಯಕಾಲದೆಲೆದ್ದು ಸಂಸಾರಯಾತ್ರೆ ಎಂದು | ಬದಿಯಲ್ಲಿದ್ದವರೆಲ್ಲ ಹರಿದಾಸ ದಾಸಿಯರು ಹೃದಯದೊಳೀಪರಿ ಯೋಚಿಸಿ ಅಜ್ಞಾನ ಒಂದು ಕಡೆಗೆ ನೂಕಿ | ಸದಮಲನಾಗಿ ಸ್ನಾನಾದಿಯ ಮಾಡಿ ಮ ವಿಧಿ ಮುಗಿಸಿ ಶ್ರವಣ ಸಾರಾ ಹೃದಯರಿಂದಲಿ ಕೇಳಿ2 ಗೋವಿಂದನ ಚರಣಕೆ ಎತ್ತಿ ನಿರ್ಮಲ ಚಿತ್ತ | ದಿಂದಲಿ ನಲಿವುತ ಹಿಗ್ಗಿ ಹಾರೈಸಿ ಆನಂದ ವಾರಿಧಿಯಲ್ಲಿ | ಕುಂದದೆ ಸೂಸುತ ಗೆಳೆಯರ ಒಡಗೂಡಿ | ತಂದು ಪುಷ್ಪಗಳಿಂದ ಮಂಟಪವ ವಿರಚಿಸಿ | ಇಂದು ಸ್ಥಾಪಿಸಿ ತುತಿಸಿ 3 ಜ್ಞಾನಿಗಳೊಡನೆ ಕುಳ್ಳಿದ್ದು ಸುಜ್ಞಾನಿಗಳು ಶುದ್ಧ ಗಾ| ಆನನ ಕೂಗುತ ಹಾಡುತ ಪಾಡುತ | ಧ್ಯಾನವ ಗೈವುತಲಿ | ಕಾಣಬಾರದಂತೆ ಪ್ರಜೆದೊಳಗೆ ತೋರಿ | ಮಗುವಿನಂತೆ ಶ್ರೀನಿವಾಸನ ನೆನಸಿ 4 ಕೂಡಿ ಸೋಗು ವೈಯಾರದಿ | ಕಾಲಲಿ ಗೆಜ್ಜೆಯ ಕಟ್ಟಿ | ವಲಯಾಕಾರ | ಮೇಲು ಚಪ್ಪಳೆಯಿಂದ | ಬಾಲವೃದ್ಧರು ನಿಂದು ಕುಣಿಕುಣಿದಾಡಿ ಹಿ | ಯಾಲಲಿ ಹರಿಯ ಸಂಕೀರ್ತನೆ ಕೀರ್ತಿಸಿ | ಸೋಲದೆ ಘನಸ್ವರ ಸ್ವರದಿಂದಲಿ ಕೂಗಿ ವಿ | ಶಾಲ ಭಕುತಿ ಒಲಿಸಿ 5 ಕಿರಿಬೆವರೊದಕ ಮೊಗದಿಂದಿಳಿಯಲು | ಉರದಲಿ ಇದ್ದ ದೇವಗೆ ಅಭಿಷೇಚನೆ | ಪರವಶವಾಗಿ ಮೈಮರೆದು ತಮ್ಮೊಳು ತಾವು | ಕರದು ತರ್ಕೈಸುತಲಿ | ಕಿರಿನಗೆಯಿಂದ ತೋಳುಗಳು ಅಲ್ಲಾಡಿಸಿ | ಎರಡು ಭುಜವ ಚಪ್ಪರಿಸಿ ಏಕಾದಶಿ | ದುರಿತ ರಾಸಿಗೆ ಪಾವಕನೆಂದು ಕೂಗಿ ಬೊಬ್ಬಿರಿದು ಬಿರಿದು ಸಾರಿ6 ಮಧ್ಯ ಮಧ್ಯದಲಿ ಮಂಗಳಾರುತಿ ಎತ್ತಿ | ಮಧ್ವರಾಯರೆ ಮೂರು ಲೋಕಕೆ ಗುರುಗಳು | ಸಿದ್ಧಾಂತ ಮುನಿ ಸಮ್ಮತಾ | ಮಲ ಮೂತ್ರವನು ಕ್ರಿಮಿವ ಮನವು | ಮೆದ್ದಾ ಸದ್ದೋಷಿ ಚಂಡಾಲ ವೀರ್ಯಕ್ಕೆ ಬಿದ್ದವ ನಿಜವೆನ್ನಿ 7 ಸಾಗರ ಮೊದಲಾದ ತೀರ್ಥಯಾತ್ರೆಯ ಫಲ | ಭೂಗೋಳದೊಳಗುಳ್ಳ ದಾನ ಧರ್ಮದ ಫಲ | ಆಗಮ ವೇದಾರ್ಥ ಓದಿ ಒಲಿಸಿದ ಫಲ | ಯೋಗ ಮಾರ್ಗದ ಫಲವೊ | ಜಾಗರ ಮಾಡಿದ ಮನುಜನ ಚರಣಕ್ಕೆ ಬಾಗಿದವಗೆ ಇಂಥ ಫಲಪ್ರಾಪ್ತಿ ನಿರ್ದೋಷನಾಗುವ ವೈರಾಗ್ಯದಿ 8 ನಿತ್ಯಾ ನೈಮಿತ್ಯಕ ಮಾಡು ಮಾಡದಲಿರು | ಪೋಗಾಡದೆ ಸದಾಚಾರ ಸ್ಮøತಿಯಂತೆ ಅತ್ಯಂತ ಪಂಡಿತ ಪಾವನ್ನ | ಉತ್ತಮರೊಡಗೂಡಿ ಮೃಷ್ಟಾನ್ನ ಭುಂಜಿಸಿ | ಮೃತ್ಯು ಜೈಸಿ ಸದ್ಗತಿಗೆ ಸತ್ಪಥಮಾಡು | ಸತ್ಯ ಮೂರುತಿ ನಮ್ಮ ವಿಜಯವಿಠ್ಠಲರೇಯ | ನಿತ್ಯ ಬಿಡದೆ ಕಾವಾ 9
--------------
ವಿಜಯದಾಸ
ಮಾಡು ಸಂತರ ಬಳಿಕೀ ಏ ಮಾನವಾ ಪ ದೊರಕಿಸು ವಿಶ್ರಾಂತಿಯ ಪಡೆವಂತೆ| ಹರಿನಾಮದ ಘಳಕೀ 1 ಕೇಳಲು ಸ್ವಾನುಭವದ ನುಡಿಗಳನ್ನು| ಬೀಳದು ಯಮ ಮಲಕೀ 2 ತಂದೆ ಮಹಿಪತಿ ಪ್ರಭು ದಯದಿಂದಲಿ| ಮುಂದ ನೀ ಭವಕಳು ಕೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾಡೋ ಪರಮೇಶ್ವರ ಗುರುಧ್ಯಾನಾ ಬಿಡದಿರುವದು ಭಜನಾ ||ನೋಡೋ ನಿನ್ನೊಳು ನಿಜ ಖೂನಾ | ಪೂರ್ಣೈಕ್ಯದ ಜ್ಞಾನಾ ಪ ಅಪರೂಪದ ನಿಜ ತನುವಿದು ನೋಡೋ ಸೆಡಗರದೀ ಪಾಡೋ ||ಅಪಹಾಸ್ಯವ ಮಾಡದೆ ನೀ ಕೂಡೋ ಘನ ಚಿನ್ಮಯ ಗೂಡೋ 1 ಆಜ್ಞಾ ಚಕ್ರದ ಬಳಿಯಲ್ಲೀ | ಎರಡೂ ಕಮಲದಲ್ಲೀ |ಪ್ರಾಜ್ಞಾ ಝಗ ಝಗಿಸುವ ಬೆಳಕಲ್ಲೀ | ತಿಳಿ ನಿನ್ನೊಳಗಿಲ್ಲೀ 2 ಮೇಲಿನ ಸ್ಥಾನದ ಸಹಸ್ರಾರ | ಗುರುತತ್ತ್ವದ ಸಾರಾ ||ಪೇಳಲಳವಲ್ಲವು ಸುಖ ಪೂರಾ | ಶಂಕರ ಪದವಿವರಾ | ಭೀಮಾ ಶಂಕರ ಪದವಿವರಾ 3
--------------
ಭೀಮಾಶಂಕರ
ಮಾತರಿಶ್ವ ಮಹಾರಾಯಾ ನಿನ್ನ ದೂತನಾದೆನೊ ಪೊರಿ ಜೀಯಾ ಪ ಪುರುಹೂತ ಪ್ರಮುಖ ಸುರ ವ್ರಾತವಿನುತ ಶಿರಿನಾಥನ ನಿನ್ನೊಳು ಪ್ರೀತಿಲಿ ತೋರಿಸಿ ನೀತ ಜ್ಞಾನವಿತ್ತು ಮಾತು ಲಾಲಿಸೊ ಎನ್ನ ಮಾತೆಯ ತೆರದಿ ಅ.ಪ ಪ್ರಾಣಾದಿ ಪಂಚರೂಪಕನೆ ಜಗ ತ್ರಾಣ ಭಾವಿ ವಿರಿಂಚನೆ ಮಾಣದೆ ತವ ರೂಪ ಕಾಣಿಸೊ ಮನದಲ್ಲಿ ಪಾಣಿಯುಗವ ಮುಗಿವೆ ಕ್ಷೀಣಪಾಪನ ಮಾಡೊ ರೇಣು ಭಜನೆಯ ಗೈದು ಸರ್ವದ ವೀಣೆ ಪಿಡಿದತಿ ಗಾನ ಮಾಡುತ ಜಾಣನೆನಿಸಿ ಕ್ಷೋಣಿ ಪಾಲಿಪೆ 1 ಮೂಲರಾಮನ ಪಾದಕಮಲಾ ಯುಗಕೆ ನೀಲಷಟ್ಟದ ವರಬಾಲಾ ವಾಲಿಯಾನುಜ ಕಪಿ ಜಾಲಪಾಲಕನನ್ನು ಆಲಿಸಿ ಭೂಮಿಜ ಲೋಲರಾಮನ ಮೈತ್ರ್ಯ ಪಾಲಿಸೀ ಶರಧಿಯನು ನೀನೆ ಲೀಲೆಯಿಂದಲಿ ದಾಟಿ ಸೀತೆಗೆ ಬಾಲರೂಪದಿ ರಾಮವಾರ್ತೆಂiÀi ಪೇಳಿ ವನವನು ಹಾಳುಮಾಡಿದಿ 2 ಪಾತಕÀ ರಾವಣ ಮಗನಾ ರಣದಿ ಘಾತಿಸಿ ಯಮಗಿತ್ತವನಾ ತಾತಗುರು ಜಗನ್ನಾಥವಿಠಲ ನಿಜ ಪೋತನಾಗಿ ಜಗದಿ ಖÁ್ಯತಿಯ ಪಡೆದಿ ರೀತಿ ಏನಿದು ನಿನ್ನ ಪದಯುಗ ದೂತನಾಲ್ಪರಿವ ಮಾತನು ಯಾತಕೇ ಕಿವಿ ಕೇಳದೋ ಕಪಿ ನಾಥ ಪಾಲಿಸೊ ಎನ್ನ ತಾತಾ 3
--------------
ಗುರುಜಗನ್ನಾಥದಾಸರು
ಮಾತಾನ್ನಪೂರ್ಣೆ ಮಾಮಮಾಪರ್ಣೆ ಪ ಪಾತಕವನು ಕಳೆದು ಪಾದಸೇವೆಯ ನೀಯೆ ಅ.ಪ ಮಾನಸವನು ನಿರ್ಮಲ ಮಾಡಿ ಕೈಪಿಡಿಯೇ 1 ಧನ್ಯನ ಮಾಡೇ ಕರುಣದಿ ನೋಡೇ ಅನ್ಯರಿಗೀಪರಿ ಬನ್ನಪಡಲಾರೆನು 2 ರಾಯ ಶಂಕರನು ಭವಜಲಧಿಯೊ ಳಾಯಾಸಪಡುತಲಿ ನೋಯುತಲಿರುವೆನು 3 ಭೂಸುರವಿನುತೆ ದೇವಾಸುರ ಪೂಜಿತೆ 4 ಪ್ರೇಮದಿ ಭಿಕ್ಷ ನಿನ್ನಿಂದ ಪಡೆದು ತಾಮರಸಾಕ್ಷ ಬಲಿಯ ಗೆದ್ದವಾಮನ ಶ್ರೀ ಗುರುರಾಮ ವಿಠಲ ಸ್ವಾಮಿ 5
--------------
ಗುರುರಾಮವಿಠಲ
ಮಾತಿನೋಳ್ಮಾತಿಲ್ಲದ ಪಾತಕಜನಜತೆ ಜನ್ಮಕೆ ಮಾಡಬೇಡಿರಪ್ಪ ಪ ನೀತಿಗಡಕ ಮಹಕೋಟಿ ಕುಹಕರ ಸಂಗ ಕೊಂಡ ಕಾಣಿರಪ್ಪ ಅ.ಪ ಬಣಗು ಬಿನುಗರ ತಳ್ಳಿ ಫಣಿಪನ ಸಹವಾಸ ಕೇಳಿರಪ್ಪ ಅಣಕವಾಡುತ ಅನ್ಯಜನಸುದ್ದ್ಯೋಳ್ದಿನಗಳೆವ ಶುನಕ ಜನಮಿಗಳನೊದೆಯಿರಪ್ಪ1 ಚಲನಚಿತ್ತದ ಬಲುಹೊಲೆಮತಿಗಳ ಸಲಿಗೇಳೇಳು ಜನ್ಮಕೆ ಬೇಡಿರಪ್ಪ ವಿಲಸಿತ ನಡೆನುಡಿ ತಿಳಿಯದದುರುಳರ ಗೆಳೆತನ ಕಡೆತನಕ ಬಿಡಿರಪ್ಪ 2 ಧರ್ಮಗೆಟ್ಟು ದುಷ್ಕರ್ಮದುರುಳವ ದುರ್ಮದ ಬಿಟ್ಟು ದೂರಾಗಿರಪ್ಪ ನಿರ್ಮಲಸುಖ ನಿಜ ಮರ್ಮನವರಿಯದ ಧರ್ಮಿಗಳೆದೆಯನು ತುಳಿಯಿರಪ್ಪ 3 ಸತ್ಯಸನ್ಮಾರ್ಗವ ಮರ್ತ ಅಸತ್ಯರ ನೆತ್ತಿಮೇಲೆ ಹೆಜ್ಜಿಡಿರಪ್ಪ ನಿತ್ಯಮುಕ್ತಿ ಸುಖ ಗುರ್ತರಿಯದೆ ಯಮ ಮೃತ್ಯುವಶವ ಗೋಷ್ಠಿ ಬಿಡಿರೆಪ್ಪ 4 ಮರವೆ ಮಾಯಿಗಳ ಚರಣದಿ ಮುಟ್ಟಿದಿರಪ್ಪ ಪರಮ ಶ್ರೀರಾಮಪಾದ ಮರೆದ ದುರಾತ್ಮರ ದರುಶನ ಕನಸಿನೋಳ್ಬೇಡಿರಪ್ಪ 5
--------------
ರಾಮದಾಸರು
ಮಾತೆಂದೆನಬ್ಯಾಡಿ ಧ್ರುವ ಎಲ್ಲಿ ನೋಡಿದರೆ ತಾ ಅಲ್ಲಿಗಲ್ಲಿಗಿಹ್ಯ ಎಲ್ಲ ಕಡೆಯಲ್ಲೇಕೋಮಯವೊ ಸುಲ್ಲಭವಾಗಿಹ್ಯಬಲ್ಲ ಜ್ಞಾನಿಗೆ ಭಾಸುತಿಹ್ಯ ಫುಲ್ಲಲೋಚನ ಪ್ರಾಣದೊಲ್ಲಭನು 1 ಎತ್ತ ನೋಡಿದರತ್ತ ಸುತ್ತಸುತ್ತಲಿಹ್ಯ ನಿತ್ಯವಾಗಿಹ್ಯ ಹೃತ್ಕಮಲದಲಿ ತುತ್ತಾಯಿತ ತಾ ಮಾಡಿ ನಿತ್ಯಸಲಹುವ ಹತ್ತಿಲೆ ಹೊಳೆಯುತ ಚಿತ್ತದಲಿ 2 ಹಿಂದೆನೋಡಿದಿರಿಹ ಮುಂದೇನೋಡಿದಿರಿಹ್ಯ ಸಂಧಿಸಿಹನು ಅಂತರಾತ್ಮದಲಿ ತಂದೆ ತಾಯಿಯು ಬಳಗಾಗಿಹ್ಯ ತಾನೆ ಎಂದಿಗೆ ಅಗಲದೆ ಅನುದಿನದಲಿ 3 ಜನವನದೊಳಗಿಹ್ಯ ಜನಾರ್ಧನ ತಾನು ತನುಮನದೊಳು ಥಳಥಳಸುತಲಿ ಅನುಮಾನವಿಲ್ಲದೆ ಅನಿಮಿಷದಲಿ ನೋಡಿ ಆಣುರೇಣುದಲಿ ಪರಿಪೂರ್ಣನು 4 ಸಾರಿಚಲ್ಲೆದ ಪರಬ್ರಹ್ಮಸ್ವರೂಪವಿದು ಸೂರ್ಯಾಡಬಹುದು ಸುಜ್ಞಾನಿಗಳು ತೋರದು ಎಂದಿಗೆ ಗುರುಕೃಪೆಯಿಲ್ಲದೆ ತರಳಮಹಿಪತಿ ವಸ್ತುಮಯವಿದು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾಧವ ಗೋ'ಂದ ಬಾರೊದಾಶರಥೆ ದಯಾಸಮುದ್ರ ಬೇಗ ಬಾರೊ 1'ಷ್ಣು ಮಧುಸೂದನ ತ್ರಿ'ಕ್ರಮ ವಾಮನ ಬಾರೋಶಿಷ್ಟಜನರ ತಾುತಂದೆ ಸ್ವಾ'ು ಬಾರೋ 2ಶ್ರೀಧರ ಹೃೀಕೇಶ ಪದ್ಮನಾಭ ಶೌರಿ ಬಾರೊ 3ದಾಮೋಧರ ಸಂಕರ್ಷಣ ವಾಸುದೇವ ಬಾರೊಕಾಮಕಮಲಜ ಕುಶಲವ ಗಂಗಾಜನಕ ಬಾರೊ 4ಪ್ರದ್ಯುಮ್ನ ಅನಿರುದ್ಧ ಪುರುಷೊತ್ತಮ ಬಾರೊಮುದ್ದುಪಾದ ಸೇವೆಕೊಟ್ಟು ಪಾಲಿಸ ಬಾರೊ 5ಅಧೋಕ್ಷಜ ಶ್ರೀನಾರಸಿಂಹ ಅಚ್ಯುತ ಬಾರೊಅಧಮನು ಆರ್ತನು ವಂದಿಪರ ಪತಿತೋದ್ಧಾರ ಬಾರೊ 6ಜನಾರ್ದನ ಉಪೇಂದ್ರ ಹರಿ ಶ್ರೀಕೃಷ್ಣ ಬಾರೊಅನಾಥಪಾಲಕಾಪದ್ಬಾಂಧವ ಅಘಹರ ಬಾರೊ 7ಗುರುವರ ತುಲಸೀರಾಮಸ್ವರೂಪ ಭೂಪ ಬಾರೊಧರರಂಗಸ್ವಾ'ುದಾಸ ಜೀವೋದ್ಧಾರ ಬಾರೋ 8
--------------
ಮಳಿಗೆ ರಂಗಸ್ವಾಮಿದಾಸರು
ಮಾಧವ ಮುಕುಂದ ಹರಿ ದನುಜಾರಿದಯಾವಾರಿಧಿ ಅನುದಿನದಿ ನಿಮ್ಮ ಚರಣವ ನಂಬಿದವರಿಗಿಂಥ ಬಿನುಗುದುರಿತಗಳು ಬಾಧಿಸುವುದ್ಯಾತಕೊ ಸ್ವಾಮಿ ಪ. ತರುಣಿಕುಲರಾಮನೊಳು ತೊಡಕು ಬೇಡವು ಸೀತೆ(ಯ) ಹರಿಗೆ ಒಪ್ಪಿಸು ಎನಲು ಊರ ಹೊರಗೋಡಿಸಿರಲು ಭರದಿಂದ ಬಂದು ಮರೆಹೊಗಲು ವಿಭೀಷಣನು ಚರಣಕಮಲಕೆ ಎರಗಲು ಕರವ ಪಿಡಿದೆತ್ತಿ ಅಭಯವನಿತ್ತು ಲಂಕೆಯ ಸ್ಥಿರಪಟ್ಟಕಟ್ಟಿದ ಕರುಣಾಳುಗಳ ದೇವ 1 ಒದೆದೆಳೆದು ಪತಿಗಳೈವರ ಮುಂದೆ ದ್ರೌಪದಿಯ ನಡುಸಭೆಯೊಳು ನಿಲ್ಲಿಸಲು ಉಡುವ ಸೀರೆಯ ಸೆಳೆವೆನೆಂದು ದುಶ್ಯಾಸ(ನ) ಕೈ ದುಡುಕುತಿರಲಾಕ್ಷಣದಲಿ ಕೆಡುವದಭಿಮಾನ ಶ್ರೀ ಹರಿ ನೀನೆ ಕಾಯೊ ಎನ್ನೆಂ- ದೊದರುತಿರಲು ನುಡಿಯಲಾಲಿಸಿ ನಾನಾಪರಿಯ ವಸ್ತ್ರವನಿತ್ತು ಉಡಿಸಿ ಅಭಿಮಾನ ರಕ್ಷಿಸಿದಂಥ ಶ್ರೀಕಾಂತ 2 ಉತ್ತಾನಪಾದರಾಜ (ನ)ಣುಗ ತಮ್ಮಯ್ಯನ ಮತ್ತ ತೊಡೆಯೇರಿಇರಲು ನಿತ್ಯದಲಿ ಸುರುಚಿ ಸುನೀತಿ ಕುಮಾರಕನ ಎತ್ತಿ ಕಡೆಯಕ್ಕೆ ನೂಕಲು ನಿತ್ತ ವಿಚಾರವಿಲ್ಲದಂತೆ ಸತ್ಯಮೂರುತಿ ಹೆಳವನಕಟ್ಟೆರಂಗಯ್ಯ ಭಕ್ತವತ್ಸಲನೆಂಬೊ ಬಿರುದು ನಿನ್ನದು ಸ್ವಾಮಿ 3
--------------
ಹೆಳವನಕಟ್ಟೆ ಗಿರಿಯಮ್ಮ
ಮಾಧವ ಕಮಲ ಪಾ ದವ ತೋರಿಪಾಲಿಸೋ ಬಾಲಗೋಪಾಲ ಪ ದಿವಿಜೇಶ ವನಜಸಂಭವ ನಿತ್ಯನೇಮ ರಾ ಧೆವಲ್ಲಭ ಸಂಗೀತ ಲೋಲಾ ಅ.ಪ ನೆಂಬುದು ನಿಜವೆಂಬುದ ತೋರೋ ಅಂಬುದ ಶ್ಯಾಮರೋಲಂಬನಂದದೆ ಪಾ ದಾಂಬುಜಯುಗಳವ ನಂಬಿದೆನಯ್ಯ 1 ತಂದೆ ಕರೆಯಲೈತಂದೆ ಕರಿಯು ಕೂಗೆ ಒಂದು ನಿಮಿಷಾರ್ಧದಿ ಬಂದೆ ಕೃಪಾಳು ಇಂದಿರೆಯರಸ ಗೋವಿಂದ ಮಾಂಗಿರಿರಂಗ ಮಂದರಧರ ಬಾರೆಂದು ಬೇಡುವೆನಯ್ಯ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್