ಒಟ್ಟು 3436 ಕಡೆಗಳಲ್ಲಿ , 121 ದಾಸರು , 2477 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೂರ್ಯ ಮಂಡಲ ಮಧ್ಯವರ್ತಿ | ಕಾರ್ಯ- ಕಾರಣ ಪ್ರಕೃತಿಗಳಿಗೆ ಚಕ್ರವರ್ತಿ-ವಿಜ್ಞಾನ ಸ್ಫೂರ್ತಿ-ವಿರಾಟಮೂರ್ತಿ ಪ ಪಾದ ತುರ್ಯನಾಮಕ ಲೋಕ- ಮರ್ಯಾದಾ ಸ್ಥಾಪಕ ಮಾದೇವಿರಮಣ-ಶತಕೋಟಿ ಕಿರಣ-ತೋರೋ ತವ ಚರಣ 1 ಅಮಿತ ನಿರಕ್ಷರ ಕುಕ್ಷಿಗಳ್ ನಿತ್ಯ ಮಾಡುವ ತ- ಪ್ಪಕ್ಷಮಿಸಬೇಕಪ್ಪ-ನಾವು ನಿನಗೆ ಕಪ್ಪ 2 ಕಮಲ ಸಂಭವ ಹೃದ್ಯ ನ್ಯಾಯಧರ್ಮಯುಕ್ತ ನಿಗಮಾಂತವೇದ್ಯ ಚೋದ್ಯ 3 ಹಾರ ಕಿರೀಟ ಕೇಯೂರ ಮಕರಕುಂಡಲ ಧಾರಿ ಸ್ವರ್ಣಮಯಾಂಗ ಧೃತ ಶಂಖ ಚಕ್ರ-ಶಿಕ್ಷಿತ ಶುಕ್ರ-ಪರಿಹರಿಸು ವಕ್ರ4 ವೃಷ್ಟಿಯ ಕೊಟ್ಟು ಸಂತುಷ್ಟಿ ಪೊಂದಿಸು ಜಗ ಜಟ್ಟಿ ಶ್ರೀ ಗುರುರಾಮವಿಠ್ಠಲ ಸ್ವಾಮಿ ಶಿಷ್ಟ ಜನಪ್ರೇಮಿ-ಸರ್ವಾಂತರ್ಯಾಮಿ5
--------------
ಗುರುರಾಮವಿಠಲ
ಸೃಷ್ಟಿಗೊಡೆಯನೇ ನಿನ್ನ ದೃಷ್ಟಿಯಿಂದಲಿ ಎನ್ನ ಕಡೆ ನೋಡವಲ್ಲಿ ಪ ಘಟ್ಯಾಗಿ ನೀ ಗತಿಯೆಂದು ನಾ ನಂಬಿದರೆ ಸೊಟ್ಟಗಿಹ ಮೊಗವಟ್ಟವೇರುತಲಿದೆ ಇಷ್ಟಿಲ್ಲವೆಂದು ನೀ ಬಿಟ್ಟ ರಾಜವನಲ್ಲಾ ಕಟ್ಟುವೆನೋ ಇಟ್ಟು ಮನ ತವ ಪದದಿ ಬಿಡದೆ 1 ಅಷ್ಟ ಸೌಭಾಗ್ಯ ಮದವೆಷ್ಟೋ ಅದರಿಂದ ದಯ ದೃಷ್ಟಿ ಇಲ್ಲದೇ ನಯನ ಮುಚ್ಚಿ ತೆರೆಯುವುದೋ ಭ್ರಷ್ಟನೆಂದು ದೂರ ದೃಷ್ಟೀಲಿ ನೋಡಿದರೆ ಬಿಟ್ಟು ಕೊಡೊ ಭಕುತವತ್ಸಲನೆಂಬೋ ಬಿರುದು 2 ಇಟ್ಟು ನೋಡುವುದು ನಿನಗೆಷ್ಟು ಸುಖವೋ ಅಟ್ಟಿ ಬಹ ದುರಿತಗಳ ಮೆಟ್ಟಿನೀ ತುಳಿಯದಿರೆ ಬಿಟ್ಟು ಕೊಡೊ ಕರುಣಾಸಾಗರನೆಂಬೊ ಬಿರುದು 3 ಕೆಟ್ಟ ಜನ್ಮವ ಕೊಡು ಕನಿಷ್ಟದಿಂದಲಿತು ಹೊಟ್ಟೆಗನ್ನವು ದೊರೆಯದಂತೆ ಮಾಡೋ ಪುಟ್ಟಿ ಭಕುತಿ ಮಾತ್ರ ಥಟ್ಟನೆ ಕೊಟ್ಟು ಮನ- ದಿಷ್ಟ ಪೂರೈಸಿ ತವ ದಾಸನ ಮಾಡೋ 4 ಶ್ರೇಷ್ಠ ಸಾತ್ವೀಕನಾಗಿದ್ದರೆ ಹರಿ ನಿನಗೆ ಇಷ್ಟು ಬಾಯ್ದೆರದು ನಾ ಬೇಡಲ್ಯಾಕೊ ಕೆಟ್ಟ ಪಾಪಿಷ್ಟನಾದುದಕೆ ಶ್ರೀ ಹನುಮೇಶ ವಿಠಲನೇ ತವ ಚರಣ ತೋರಿಸಲಿ ಬೇಕೊ 5
--------------
ಹನುಮೇಶವಿಠಲ
ಸೃಷ್ಟಿಯೊಳಗೆಲ್ಲ ದುಷ್ಟರ ಪ್ರಭೆಯಾಗಿ ನಿಷ್ಠರುದೋರದಂತಾದರು ಮಾ ಧ್ರುವ ಭ್ರಷ್ಟರು ಬೂಟಿಕಿ ಶಿಷ್ಠರೆ ಕೈಕೊಂಡು ನಿಷ್ಠರಿಗಾಟ್ಲಿ ತಂದರು ಮಾ ತುಟ್ಟಿಲೆ ಮಿಸುಕದೆ ಗುಟ್ಟಿಲಿದ್ದವರ ಬಟ್ಟೆಗ್ಯಳದಿನ್ನು ತಾಹರು ಮಾ ಹೊಟ್ಟೆಯೊಳು ಹೊಕ್ಕು ಕಟ್ಟಲೆ ಕುಳಿತಿನ್ನು ನೆಟ್ಟ ನೇರಿಷ್ಟ ನೇಮಿಸುರು ಮಾ ಇಟ್ಟ ತೊಟ್ಟವರನು ಕೆಟ್ಟದೃಷ್ಟಿಲೆ ನೋಡಿ ದಿಟ್ಟತನದಿ ಪ್ರಾಣಕೊಂಬರು ಮಾ 1 ಕೊಟ್ಟು ಹಣಹೊನ್ನು ಇಟ್ಟದ್ದು ಬೇಡಲು ಕುಟ್ಟಿ ಅವನಬಾಯಿ ಹಾರರು ಮಾ ತುಟ್ಟಿಲೆ ವಂದಾಡಿ ಹೊಟ್ಟಲೆ ವಂದಿಟ್ಟು ನೆಟ್ಟನೆ ಘಾಸಿಮಾಡರು ಮಾ ಗಂಟುಳ್ಳವರ ಕಂಡು ಕಟ್ಟಿದಂಡಗಳನ್ನು ನಷ್ಟತನದಿ ಹೊಟ್ಟೆ ಹೊರುವರು ಮಾ ಬಟ್ಟಿಲೆ ತೋರಲು ಬಿಟ್ಟಿಯ ಹಿಡಿದಿನ್ನು ಹೆಟ್ಟಿ ಅವನ ಮುಂದೆ ನಡೆಸುರು ಮಾ 2 ಶುದ್ದಿಯು ಇಲ್ಲದೆ ರಾಜ್ಯಾಧಿಪತಿಗಳು ಇದ್ದು ಇಲ್ಲದಂತಾದರು ಮಾ ಮಂದಮತಿಗಳು ಅಂದಣವೇರಿನ್ನು ಬುದ್ಧಿವಂತರೀಗ್ಹೀನತಂದರು ಮಾ ಮುದ್ರಾಧಾರಿಗಳೆಲ್ಲ ಕ್ಷುದ್ರದೃಷ್ಟಿಯು ಮಾಡಿ ಕ್ಷುದ್ರತನದಿ ಕೆಡುತಿಹರು ಮಾ ಸಿದ್ಧಸಾಧಕರೆಲ್ಲ ಗುದ್ದನೇ ಹೊಕ್ಕರು ಇದ್ದರೆ ಬುದ್ಧಿಹೀನರು ಮಾ 3 ಉಳಿಯಮುಟ್ಟಿದ ದೈವ ಉಳಿಯದೇ ಹೋದವು ಉಳಿಗಾಲ ವಿಲ್ಲದಂತಾಯಿತು ಮಾ ತಿಳಿವಳಿಕುಳ್ಳವರೆಲ್ಲ ತಲೆಮುಸಕ್ಹಾಕಿನ್ನು ಕಳ್ಳರೆ ಸಾಜರು ಆದರು ಮಾ ಒಳ್ಳೆಯವರ ನುಡಿ ಎಳ್ಳಷ್ಟು ಮಾಡುತ ಸುಳ್ಳರು ನಿಜನುಡಿವೆಂಬುರು ಮಾ ಉಳ್ಳವರು ಖಳಬುದ್ಧಿ ಕೈಕೊಂಡು ಇಳೆಯೊಳು ಧರ್ಮವ ಜರೆದರು ಮಾ 4 ಸಾಧುಸಜ್ಜನರೆಲ್ಲ ಭೇದವ ಅಡಗಿಸಿ ಮೇಧಿನಿಯಲು ಗುಪ್ತರಾದರು ಮಾ ಇದ್ದರ ಘನಸುಖ ಸಿದ್ಧರ ನೆರೆಯಲಿ ಬುದ್ಧಿಹೀನರು ತಾವು ಅರಿಯರು ಮಾ ಸದ್ಗುರು ಕೃಪೆಯಿಂದ ಸದ್ಬ್ರಹ್ಮದ ನೆಲೆಯ ಸತ್ ಶಿಷ್ಯಮಹಿಪತಿ ತಿಳಿದನು ಮಾ ಎಂದಿಗೆ ಬೇಡಿನ್ನು ದುರ್ಜನರ ಸಂಗವು ತ್ರಾಹಿ ತ್ರಾಹಿ ತ್ರಾಹಿ ಎಂದನು ಮಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸೆರೆಯೊಳಗೆ ಹರಿಸೆರೆಯೆ ಮುಖ್ಯಾ ಭಾವದೊಳಗೆ ಗುರುಭಾವನÉಯೆ ಮುಖ್ಯಾ ಪ ----ದೊಳಗೆ ಪ್ರಥಮ -----ರಾರÉೀ ಮುಖ್ಯಾ ಸೇವನೆಯೊಳಗೆ ಪುಣ್ಯ ಸೇವನೆ ಮುಖ್ಯಾ ದೇವರೊಳಗೆ ವಿಷ್ಣು ದೇವಾರೆ ಮುಖ್ಯಾವು ಯಾವ ಶಾಸ್ತ್ರಗಳಿಗೂ ವೇದವೇ ಮುಖ್ಯಾ 1 ವನದೊಳು ಫಲವುಳ್ಳಾ -----ಮುಖ್ಯಾ ದೀನದಾನವರೊಳಗೆ -----ದೀನನೆಂಬುವದೇ ಮುಖ್ಯ ಜನರೊಳು ಸಾಧು ಸಜ್ಜನರಾದವರೇ ಮುಖ್ಯಾ ಮನೆಗೆ ಹಿರಿಯನಾದ ಯಜಮಾನನೇ ಮುಖ್ಯಾ 2 ಮಾಸಗಳೊಳು ಚೈತ್ರಮಾಸವೆ ಮುಖ್ಯವು ವಾಸನೆಯೊಳು ಲಕ್ಷ್ಮೀವಾಸನೆ ಮುಖ್ಯ ಭೂಸುರರೊಳಗೆಲ್ಲ ಪೂರ್ಣ ಪಂಡಿತರೆ ಮುಖ್ಯ ವಾಸು ದೇವರಿಗೆ ----ದಾಸನೆ ಮುಖ್ಯ 3 ಸ್ಥಾನದೊಳಗೆ ಗಂಗಾಸ್ಥಾನವೇ ಮುಖ್ಯವು ಧೇನುಗಳೊಳು ಕಾಮಧೇನುವೇ ಮುಖ್ಯ ಜ್ಞಾನದಲ್ಲಿ ಹರಿಸರ್ವೋತ್ತಮ ಜ್ಞಾನವೆ ಮುಖ್ಯ ಗಾನದೊಳಗೆ ಸಾಮಗಾನವೇ ಮುಖ್ಯ 4 ವೃಕ್ಷಗಳೊಳು ತುಲಸೀ ವೃಕ್ಷವೇ ಮುಖ್ಯವು ಭಿಕ್ಷಗಳೊಳು ಯತಿ ಭಿಕ್ಷವೇ ಮುಖ್ಯವು ಪಕ್ಷಿಗಳೊಳು ಗರುಡ ¥ಕ್ಷಿಯೇ ಮುಖ್ಯ ಲಕ್ಷಾಧಿಕಾರರಿಗೆ ಲಕ್ಷ್ಮೀಯೆ ಮುಖ್ಯ 5 ಪರ್ವತಗಳೊಳು ಮೇರು ಪರ್ವತವೆ ಮುಖ್ಯ ಉರೆಗೆ ಮಳೆ ಬೆಳೆ ಉರುವೆ (ಬರುವೆ?) ಮುಖ್ಯ ಮರ್ಯಾದೆ ನ್ಯಾಯಗಳಿಗೆ ಹಿರಿಯರಾದವರೇ ಮುಖ್ಯ ಸರ್ವಾಧಿಕಾರರಿಗೆ ಸರ್ವಸಮತವೆ ಮುಖ್ಯ 6 ಕ್ಷೇತ್ರಗಳೊಳು ಕುರುಕ್ಷೇತ್ರವೆ ಮುಖ್ಯ ಯಾತ್ರಿಗಳೊಳು ಗಂಗಾಯಾತ್ರಿಯೆ ಮುಖ್ಯ ಸೂತ್ರಗಳೊಳು---------ಮುಖ್ಯವು ಸ್ತೋತ್ರಗಳೊಳು ಹರಿಸ್ತೋತ್ರವೇ ಮುಖ್ಯ 7 ಗ್ರಾಮಗಳೊಳು ಸಾಲಿಗ್ರಾಮವೇ ಮುಖ್ಯ ಭೂಮಿಗಳೊಳು ಪುಣ್ಯ ಭೂಮಿಯೇ ಮುಖ್ಯ ಆರು-------ಳಿಗೆಲ್ಲ ಆರೋಗ್ಯವೆ ಮುಖ್ಯ ಕಾಮುಕ ಸ್ತ್ರೀಯರಿಗೆಲ್ಲ ಕಾಮಪುರುಷನೇ ಮುಖ್ಯ 8 ಸನ್ಮಾರ್ಗಗಳೊಳಗೆ ಸನ್ಯಾಸಿ ಮಾರ್ಗವೆ ಮುಖ್ಯ ಅನಿಮೇಷಾ ಜಾಗರದೊಳಗೆ ಅನಿಮೇಷರೆ ಮುಖ್ಯ ಧನ್ಯ `ಹೆನ್ನೆ ವಿಠ್ಠಲನ ' ದಯವು ಇದ್ದರೆ ಮುಖ್ಯ 9
--------------
ಹೆನ್ನೆರಂಗದಾಸರು
ಸೇರಿ ಬದುಕುವೆ ನಮ್ಮ ಸ್ವಾಮಿಯಂಘ್ರಿಯನುಭೂರಿ ದೋಷಗಳನ್ನು ಬಯಲ ಮಾಳ್ಪುದನು ಪನಿರ್ಗುಣದ ರೂಪವದು ನಿಲುಕದೆಂದಿಗೂ ಮನಕೆದುರ್ಗುಣದ ಪುಂಜಕ್ಕೆ ದೊರಕುವುದೆ ಹುಡುಕೆಅರ್ಗಳದ ವೃತ್ತಿಗಳಲಾಳಿ ಮುಳುಗಿರಲಿದಕೆಮುಗ್ಗಿ ಮೋಹಿಪ ನಾನು ಮಥಿಸಲಿನ್ನೇಕೆ 1ಸಗುಣಮೂರ್ತಿಯ ನೋಡೆ ಸ್ಥಿರದಿ ಬುದ್ಧಿಯು ನಿಲದುಅಗಣಿತದ ವಾಸನೆಯೊಳತಿಬದ್ಧವಡೆದುಬಿಗಿ ಭದ್ರವಾಗಿರಲು ಬಹು ಕರ್ಮವೆಳೆದೆಳೆದುಬಗೆಯದನು ನೆರೆ ನೋಡಿ ಬಿಟ್ಟದನು ಜರೆದು 2ಧ್ಯಾನಿಪರು ಧ್ಯಾನಿಸಲಿ ಧೈರ್ಯದಲಿ ಬ್ರಹ್ಮವನುಜ್ಞಾನಿಗಳು ತಿಳಿಯಲಾ ಗೂಢ ತತ್ವವನುಮಾನರಹಿತರು ಹರಿಗೆ ಮಾಡಲಾ ಕರ್ಮವನುನಾನೊಂದನೊಡಬಡೆನು ನೋಡಿ ಕಠಿಣವನು 3ವೇದಶಾಸ್ತ್ರಗಳೋದಿ ವಾದಿಸಲಿ ವಾದಿಗಳುಸಾಧಿಸಲಿ ಸ್ವರ್ಗವನು ಸಕಲ ಶ್ರೌತಿಗಳುಬೋಧಿಸಲಿ ಪರರಿಂಗೆ ಬಹುತತ್ವಭೇದಿಗಳುಮಾಧವನಿಗೆರಗುವದೆ ಮತವೆನಗೆ ಕೇಳು 4ಪಾದಪದ್ಮವನಂಬಿ ಪಡೆದರಮಿತರು ಗತಿಯ ಓದಿದವರೈದಿದರು ವಾಸನೆಯ ಬಗೆಯಕಾದು ರಕ್ಷಿಪುದಂಘ್ರಿ ಕೊಡುವುದಮಿತದ ಸಿರಿಯವಾದಿಸದೆ ನಂಬಿದೆನು ವಿಧಿಜನಕನಡಿಯ 5ಇದು ತಾನೆ ಲೋಕಗಳನೆಲ್ಲವಾಳುವ ದೊರೆಯುಇದು ತಾನೆ ಯೋಗಿಗಳಿಗಿದಿರಾದ ಬಗೆಯುಇದು ವಿಷಯದೊಳಗಿರುವರೆಬ್ಬಿಸುತ್ತಿಹ ಸುಧೆಯುಇದನೆ ನಾನಂಬಿದೆನು ಯಾಕೆ ಕರೆಕರೆಯು 6ತರುಬಿ ನಿಂದಿದೆ ಲೋಕ ತತ್ಪಾದಪದ್ಮವನುಹೊರೆಯುತಿಹುದಾ ಜನವ ಹೊಣೆಯಾಗಿ ತಾನು ತಿರುಪತೀಶ್ವರ ನನಗೆ ತೋರ್ದನೀ ಮತಿಯನ್ನುವರದೇಶ ನನಗೊಲಿದವೊಡೆಯ ವೆಂಕಟನು 7ಓಂ ತೀರ್ಥಪಾದಾಯ ನಮಃ
--------------
ತಿಮ್ಮಪ್ಪದಾಸರು
ಸೇವಾಂ ದೇಹಿ ಚಂದ್ರಶೇಖರ ಸೇವಾಂ ದೇಹಿ ಸೇವಾಂ ದೇಹಿ ಸದಾವನತಾಖಿಲ ಜೀವ ದುರಿತಹರ ಪ ಪಾವನಚರಿತ ಸುರಾವಳಿ ಮುನಿಗುಣ ಭಾವಿತಚರಣ ಸುಪಾವಕ ನಯನಾ ಅ.ಪ ತುಂಬುರು ಗಾನವಿಡಂಬನ ಸುರಸರಿ ದಂಬುಕ ಭಕ್ತ ಹೃದಂಬುಜ ಭಾನೋ 1 ಪುರಹರ ಮುರಹರಧರ ಕರುಣಾಕರ ನರ ವರದಾಯಕ ನಿರುಪಮ ಹಿಮವದ್ ಗಿರಿವರಚಾಪ ಕು ಧರಜ್ಯಾಕರುಷಣ ಪರಮಕೃಪಾಳೋ 2 ಶಿವ ಶಿವ ಶಂಕರ ಭುವಿಭೂಧರವರ ಶಿವಗಂಗಾಧಿಪ ಭವ ಗಂಗಾಧರ ಅವ ಮಾಂ ಲಕ್ಷ್ಮೀಧವ ವೆಂಕಟ ಸಖದಿವಿಭವ ವಂದ್ಯಾ 3
--------------
ತಿಮ್ಮಪ್ಪದಾಸರು
ಸೇವಿಸುವ ಬನ್ನಿರೋ ಭಾವಿಕರೆಲ್ಲ ಸವಿಸುಖವಾದ ಸದ್ಗುರುವಿನ ಸೊಲ್ಲ ಧ್ರುವ ತುಂಬಿ ಬಡಿಸ್ಯದ ಕೊಂಬವರಿಗೆ ಸಂಭ್ರಮವಾಗ್ಯದ 1 ಅರ್ತವರಿಗ್ಯದ ಅರ್ಥಿ ತಾನಾಗ್ಯದ ಕರ್ತು ಸದ್ಗುರು ಕೃಪೆ ಪಡೆದವಗದ 2 ಸವಿಸವಿದುಂಬುವ ಭಾವಿಸಿಕೊಂಬುವಆವಾಗ ಮಹಿಪತಿಸ್ವಾಮಿ ನೆನೆವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸೇವಿಸುವೆ ನಿನ್ನನು ಶ್ರೀಪಾದರಾಯ ಪ ಭಾವವಿರತಿ ಕೊಡು ಭಾಗವತಗೇಯಾ ಅ.ಪ ದಾಸಕೂಟವೆಂಬುದ ಧರೆಯೊಳು ನಿಲಿಸಿದೆ 1 ಸುವರ್ಣವರ್ಣತೀರ್ಥಸುತ ಸುಜನಾಪ್ತ ಶ್ರೀವರ ನಾಮಾಮೃತದಾತ ಸುಮಿತ್ರ 2 ಪತಿ ಗುರುರಾಮವಿಠಲಗೆ ಪ್ರಿಯದಾಸ 3
--------------
ಗುರುರಾಮವಿಠಲ
ಸೈಯವ್ವ ಇದು ಸೈಯೆ, ಗೋಪಿ, ಸೈಯವ್ವ ಇದು ಸೈಯೆ ಪ ಸೈಯೆ ಗೋಪಿ, ನಿನ್ನ ಮಗರಾಮನಿಗೆ ಒಳ್ಳೆ ಬುದ್ಧಿ ಕಲಿಸಿದ್ದೀಯೆ ಅ ಸಂಜೆಯ ವೇಳೆಗೆ ಬಂದು - ಸಟೆಯಲ್ಲ - ಮನೆಯ ಒಳಗಡೆ ನಿಂದುಕುಂಜರಗಮನೆ ಬಾರೆಂದು ಎನ್ನ ಮುಂಗುರುಳ ತಿದ್ದಿದಗಂಜಿ ಶಲ್ಯವ ಎನಗೆ ಮುಸುಕಿಟ್ಟು ಮುದ್ದಾಡಿ ಕಡೆಗೆಕಂಜಲೋಚನೆ ಕುಚದ ಗಂಟು ಬಿಚ್ಚೆಂದ ನೋಡು 1 ಬಿಟ್ಟ ಮಂಡೆಯಲಿ ಗಂಡ ಮೈಮರೆತು ಮಲಗಿಹುದ ಕಂಡುಜುಟ್ಟನ್ನು ಬಿಚ್ಚಿ ಮಂಚದ ನುಲಿಗೆ ಬಿಗಿದು ಕಟ್ಟಿದಕೊಟ್ಟಿಗೆ ಸುಡುತಿದೆ ಏಳೆಂದು ಬೊಬ್ಬೆಯಿಟ್ಟುದ ಕೇಳಿಥಟ್ಟನೇಳಲು ಗಂಡ, ಜುಟ್ಟು ಕಿತ್ತು ಹೋಯಿತಮ್ಮ2 ಅಡವಿ ಜಟ್ಟಿಂಗನ ಮಾಡಲಿಕೆ ಒಳ್ಳೆ ಸಡಗರ ಸಂಭ್ರಮದಿಂದಹೆಡಗೆ ತುಂಬ ಹೋಳಿಗೆ ಮಾಡಿ ಕೊಡ ನೀರು ತರಲು ಹೋದೆನೆಕಡೆಗೊಂದು ಹೋಳಿಗೆ ಬಿಡದೆ ಕೊಡದುಪ್ಪ ಹಾಲ್ಮೊಸರು ಪಾಯಸಕಡು ಫಟಿಂಗ ತುಡುಗು ತಿಂದು ಮೀಸಲಳಿದು ಎಡೆಗೆಡಿಸಿ ಹೋದನೆ 3 ಊರೊಳಿಂತಾಯ್ತೆಂದು ಸಾರಿದೆವೆ ನಾರೇರುಅಡವಿಯಲಿ ಕೂಡಿದೆವೆ ಹಲವಾರು ಹೆಂಗಸರುನೂರಾರು ಗೆಳತೇರು ಉಳಿದ ಹಾಲನು ಮಾರಿದಾರಿ ಹಿಡಿದು ಬರುವಾಗೊಂದು ಕೊಳವ ಕಂಡೆವೆ ನೊಡು 4 ಓರಗೆ ಹೆಂಗಳು ನಾವು ನೀರಾಟವಾಡಲಿಕೆಸೀರೆ ಕುಬಸವ ದಡದೊಳಿಟ್ಟು ಕೊಳಕೆ ಧುಮುಕಿದೆವೆಚೋರ ನಿನ್ನ ಮಗ ಸೀರೆಕುಬಸವನೆಲ್ಲ ತಕ್ಕೊಂಡು ಹೋಗಿತೋರದುಂಚ ಕಡಹದ ಮರನೇರಿ ನೋಡುತ ಕುಂತನೆ 5 ನೆಟ್ಟನೆ ನೀರಾಟವಾಡಿ ನಾಲ್ಕೂ ದಿಕ್ಕಿನಲಿ ನಾವು ಅಡರಿದೆವೆಇಟ್ಟಲ್ಲಿ ಸೀರೆಕುಬಸಗಳಿಲ್ಲ ಕೆಟ್ಟೆವಯ್ಯಯ್ಯೋಕಿಟ್ಟನ ಕೈಚಳಕವೆಂದು ನಾವಷ್ಟದಿಕ್ಕುಗಳ ನೋಡಿದೆವೆತುಟ್ಟತುದಿ ಕೊಂಬೆಯಲಿ ಕುಂತಿರುವ ಪುಟ್ಟನ್ನ ಕಂಡೆವೆ 6 ಮುಂದೆ ಹಸ್ತದಿ ಮುಚ್ಚಿಗೊಂಡು ಕೃಷ್ಣನಿಗೆ ಗೋಗರೆದು ಕೇಳಲುವಂದನೆ ಮಾಡಿದರೆ ನಿಮಗೆ ಸೀರೆ ಕುಬಸವ ಕೊಡುವೆನೆಂದಒಂದು ಕರದಿ ಮುಗಿವೆವೆಂದರೆ ಎರಡು ಕರದಿ ಮುಗಿಯಿರೆಂದಬಂಧನಕ್ಕೊಳಗಾದೆವೆಂದು ವಿಧಿಯಿಲ್ಲದೆ ಮುಗಿದೆವೆ 7 ಪುಷ್ಪಗಂಧಿಯರೆ ಒಪ್ಪಿತವಾಗಲಿಲ್ಲ ನನ್ನ ಮನಕೆಚಪ್ಪಾಳೆ ಇಕ್ಕುತ ಮರದ ಸುತ್ತ ತಿರುಗಿರೆಂದತಪ್ಪದು ಎಷ್ಟೊತ್ತಾದರು ಬಿಡನೆಂದು ಜಯಜಯವೆನುತಚಪ್ಪಾಳೆ ಇಕ್ಕುತ ಮರದ ಸುತ್ತಲೂ ತಿರುಗಿದೆವೆ8 ಪಗಡೆಕಾಯಿ ಕುಚದ ದಗಡಿಯರೆ ಪುಗಡಿ ಹಾಕಿರಿ ಎನ್ನೆದುರುತೆಗೆದು ಕೊಡುವೆ ನಿಮ್ಮ ವಸ್ತ್ರಗಳ ಬಗೆಬಗೆಯಿಂದಜಗದೊಳು ನಗೆಗೇಡಾದೆವು ಇನ್ನು ನುಡಿದು ಫಲವಿಲ್ಲೆಂದುಪುಗಡಿ ಹಾಕಿದೆವೆ ನಾವು ಛೀ ಛೀ ಎನ್ನುತಲಿ 9 ಕಡೆಯಾಟ ಕಮಲನೇತ್ರೆಯರೆ ಎಡೆಯಾಗಿ ಹೋಗಿ ನಿಲ್ಲಿರಿಓಡಿಬಂದರೊಂಟಿಯಾಗಿ ಹಿಡಿದು ನೋಡಿ ಕೊಡುವೆ ಎಂದಕೋಡಗ ಕೊರವಂಗೆ ಸಿಕ್ಕಿ ಆಡಿದಂತೆ ನಾವಾಡಿದೆವೆಓಡಿ ಬಂದೊಬ್ಬೊಬ್ಬರಿಗೂ ಹಿಡಿದು ಸವರಿ ವಸ್ತ್ರವನಿತ್ತನೆ 10 ತಂಡತಂಡದ ನಮಗೆ ಬಣ್ಣಬಣ್ಣದ ಬಳೆಯನಿಟ್ಟುಮಂಡೆ ಬಾಚಿ ಕುರುಳ ತಿದ್ದಿ ಕುಂಕುಮವಿಟ್ಟನೆಪುಂಡ ನಿನ್ನಣುಗ ನೆಲೆಯಾದಿಕೇಶವರಾಯಬಂಡು ಮಾಡಿ ಬಳಲಿಸಿ ಕೊನೆಗೆ ರಮಿಸಿ ಕಳಿಸಿಕೊಟ್ಟನೆ 11
--------------
ಕನಕದಾಸ
ಸೊಂಡಿಲಾನಗರದ ಭೂಪನ ಕೊಂಡಾಡಲ್ವಶವಲ್ಲ ತಾಯಿಕಂಡು ಬಂದೆನೆ ಪಾಂಡವರ ಭಾಗ್ಯವ ಪ. ಥೋರ ಮುತ್ತಿನ ಝಲ್ಲೆ ಬಿಗಿದ ತೇರುವಾಜಿ ಶೃಂಗರಿಸಿದ ದಾರಿ ಮ್ಯಾಲ ನಿಂತಾವ ನಮ್ಮ ವೀರ ರಂಗನ ಕರೆಯ ಬರಲು 1 ಅಚ್ಚ ಮುತ್ತಿನ ಝಲ್ಲೆ ಬಿಗಿದಹೆಚ್ಚಿನ ರಥಗಳುವಾಜಿಜತ್ತಾಗಿ ನಿಂತಾವಮ್ಮಅಚ್ಯುತನ ಕರೆಯ ಬರಲು2 ಬರಿಯ ಮಾಣಿಕ ರತ್ನ ಬಿಗಿದ ದೊರೆಗಳೇರೊ ರಥ ವಾಜಿಸರಿಯಾಗಿ ನಿಂತಾವಮ್ಮ ನಮ್ಮಹರಿಯ ಕರೆಯ ಬರಲು 3 ನಾನಾ ಮುತ್ತು ರತ್ನ ಬಿಗಿದ ಆನೆ ಅಂಬಾರಿಗಳು ಕೋಟಿಮಾನವಂತರು ಏರಬೇಕುಶ್ರೀನಿವಾಸನ ಕರೆಯ ಬರಲು 4 ಮುತ್ತು ಮಾಣಿಕ ರತ್ನ ಬಿಗಿದಹೆಚ್ಚಿನ ರಥಗಳು ವಾಜಿಮಿತ್ರೆಯರಿಂದ ಬರತಾರಮ್ಮನಮ್ಮ ಅಚ್ಯುತನ ಕರೆಯ ಬರಲು 5 ಏಳು ಕೋಟಿ ಕಾಲಾಳುಗಳುಭಾಳ ಮುತ್ತಿನ ರತ್ನವಿಟ್ಟುತಾಳ ಮೇಳದಿ ನಿಂತಾರಮ್ಮವ್ಯಾಳಾ ಶಯನನ ಕರೆಯ ಬರಲು6 ಸಾವಿರ ಬಂಡಿಯ ಮ್ಯಾಲೆ ಹೇರಿ ಬುಕ್ಕಿಟ್ಟು ಗುಲಾಲು ಸೂರ್ಯಾಡಿ ರಂಗನ ಕರೆಯಲು ವೀರರೈವರು ಬರುತಾರಮ್ಮ 7 ಕೊಲ್ಹಾರಿ ಬಂಡಿಯ ಮ್ಯಾಲೆ ಮಲ್ಲಿಗೆ ಸಂಪಿಗೆ ಹೇರಿಚೆಲ್ಲಾಡಿ ರಂಗನ ಕರೆಯ ಬಲ್ಲಿದ ಐವರು ಬರುತಾರಮ್ಮ 8 ಮದ್ದು ಬಾಣ ಬಿರುಸು ಕೋಟಿ ಶೀಘ್ರವಾಗಿ ನಿಂತಾವಮ್ಮಮುದ್ದು ರಂಗನ ಕರೆಯ ಬರಲು ಮಧ್ವ ಮತದ ಬಿರುದು ಹಿಡಿಸಿ 9 ಬಿಡವೋ ಬಾಣ ಬಿರುಸು ಕೋಟಿ ಕಡು ಭಾಗÀವತರು ಕೋಟಿಷಟಶಾಸ್ತ್ರ ಬಲ್ಲವರು ಕೋಟಿಒಡೆಯ ರಂಗನ ಕರೆಯ ಬರಲು 10 ತಂದೆ ರಾಮೇಶನ ಗುಣವ ಬಂಧುಗಳು ಹೊಗಳೋರು ಕೋಟಿಅಂದು ಆರಣ ಬ್ರಾಹ್ಮಣ ಕ್ರಮ ಜಟಿ ಬಂದು ಕರೆವೊ ದ್ವಿಜರು ಕೋಟಿ 11
--------------
ಗಲಗಲಿಅವ್ವನವರು
ಸೋತುಹೋದೆ ನಾನು ಶ್ರೀಹರಿ ಸೋತುಹೋದೆ ನಾನು ಪ ಪತಿತ ಪಾವನ ಮೂರ್ತಿಯ ಪ್ರೀತಿಯ ಸತತ ಪಡೆಯಲು ಕೆಲಸವ ಮಾಡಿ ಅ.ಪ. ನಿತ್ಯದಿ ಭಜಿಸುತ ಹರಿನಾಮವನು ಸತ್ಯಧರ್ಮದಿ ನಡೆಯುತಲೀ ಭ್ಯತ್ಯರಂದದಿ ಸೇವೆಯ ಮಾಡುತ ನಿತ್ಯನೆನಾ ಧನ್ಯಾತ್ಮನಾಗದೆ 1 ಪರಮಾತ್ಮನ ಕೀರ್ತನೆಯನು ಮಾಡುತ ಹರುಷದಿ ದಾಸನಾಗುತಲೀ ಹರಿಯ ಸಾಸಿರ ನಾಮವ ಸ್ಮರಿಸುತ ಶರಣಾಗತ ಪರಿಪಾಲನ ನೋಡಿದೆ 2 ಹೊನ್ನು ಹÉಣ್ಣು ಮಣ್ಣಿಗೋಸುಗ ಜನ್ಮವ ಮೋಹದಿ ನವಿಸದಲೇ ಚಿನ್ಮಯ ರೂಪನ ಪೂಜೆಯ ಮಾಡುತ ಚನ್ನಕೇಶವ ಪಾದವ ಸೇರದೆ 3
--------------
ಕರ್ಕಿ ಕೇಶವದಾಸ
ಸೋಹಮೆಂದು ಸುಖಿಸು ವಿಗತ ಮೋಹದಿಂದ ಸಂತತಂದೇಹ ದೇಹದೊಳಗೆ ತೋರ್ಪನೀ ಹಿತಾತ್ಮನೀತ ಪರಮ ಪಘನದ ರತುನಮಂಟಪವನು ಶುನಕವೇರಿ ತನ್ನ ನೆಳಲಕನಲಿ ನೋಡಿ ಗಳಹಿ ತಾನಿದೆಂಬುದರಿಯದೆಮನದೊಳನ್ನವೆಂದು ಭ್ರಮಿಸಿ ಮತ್ತೆ ಕಡಿಯಲದರೊಳೊಡದು*ನೆನೆವ ತನ್ನ ರಕುತವನ್ನು ಸವಿವ ರೀತಿಯಲಿವಿನುತ ಜೀವ ತನ್ನ ಛಾಯೆಯನು ಸಮಸ್ತರೊಳಗೆ ನೋಡಿನೆನೆದಿದನ್ಯವೆನುತ ಭ್ರಾಂತನಾಗಿ ಮಾಯೆುಂದನುಭವಿಸುವೆನಿದನಿದೊಲ್ಲೆನೆನುತ ಭೇದ ಬುದ್ಧಿುಂದಮನುಮಥಾಗ್ನಿುಂದ ಬೆಂದು ಮನದಲಿದ್ದ ಕಾರಣಂ 1ನರರು ಗಜವ ಪಿಡಿಯೆ ಕಪ್ಪ ಕೊರವುತದರ ನಡುವೆ ತಿಟ್ಟನಿರಿಸಿ ಕಣ್ಣಿಯಲ್ಲಿ ಕಟ್ಟಿಯದರ ಸುತ್ತಲೂನೆರಹಿ ಕಾಷ್ಠ ಮೃತ್ತುಗಳನು ನಿಜದಪ್ಪಿರಮಾಡೆ ಭ್ರಮಿಸಿಕರಿಣಿಗಾಗಿ ಬಂದು ಗಜವು ಮರೆದು ಬಿದ್ದ ರೀತಿುಂದುರೆ ವಿರಿಂಚಿ ಕೂಪ ಸಾಮ್ಯವಾದ ನರಶರೀರಮಂಮರೆಸಲದರ ಮೇಲೆ ಚರ್ಮವೆನಿಪ ಮಾಯೆುಂದ ನರರುಮರೆತು ತಾವಿದೆನ್ನುತದರಲಿದ್ದ ಕಾರಣಂ 2ಮರೆದು ತನ್ನ ತಾಣವನ್ನು ಮೆರೆದುಲಂಘಿಸುತಲಿ ಭೇಕವಿರಲು ಹೊಂಚಿ ಪಿಡಿದು ಪಾವು ಪಿರಿದು ದೇಹಮಂನೆರೆದು ನುಂಗಲಾರದಿರುತಲಿರಲು ಭೇಕ ತನ್ನ ಹಸಿವಿಗಿರದೆ ಬಾಯ ತೆಗೆದು ನೊಣನನರಸಿ ಪಿಡಿವ ರೀತಿುಂನರರು ತಮ್ಮ ಕಾಲಸರ್ಪ ಉರುಬಲದನು ಮರೆತು ಭೋಗಪರತೆುಂದ ಕಾಮರೋಷ ವಿರಸರಾಗುತಿರಲು ನೀನರಿದನಿತ್ಯವೆಲ್ಲವೆಂದು ಮೆರೆದು ಗೋಪಾಲಾರ್ಯ ಪದವನೆರೆದು* ಭಕತಿುಂದ ನೋಡಿ ಪಾಡಿ ಹರುಷದಿಂದ ನೀ 3
--------------
ಗೋಪಾಲಾರ್ಯರು
ಸ್ತುತಿಸಿ ಪ್ರಾರ್ಥಿಪೆ ನಿನ್ನನು ಸರಸ್ವತಿ ಸ್ತುತಿಸಿ ನಮಿಪೆ ನಿನ್ನನು ಪ. ಸ್ತುತಿಸಿ ನಮಿಸಿ ನಿನ್ನ ಜತನ ಮಾಡುತ್ತ ವದನದಿ ಸ್ತುತಿಸುವ ಭಾಗವತರನು ತೋರಮ್ಮಾ ಅ.ಪ. ಅಕ್ಷರಕ್ಷರ ರೂಪದಿ ಶ್ರೀಹರಿಯಾ ಅಕ್ಷಯ ನಾಮವನು ಸ್ತುತಿಯ ಮಾಳ್ಪ ಸುಕ್ಷೇಮ ಪಡೆದಿಹ ಮಾತೆ ಸರಸ್ವತಿ ಪ್ರತಿ ಅಕ್ಷರವನು ಅರಿವಾ ಭಾಗ್ಯವ ತೋರೆ 1 ರಾಗರಾಗದಿ ಭಜಿಪೆ ಶ್ರೀ ಹರಿಯಾ ಅನು ರಾಗಕೆ ಪಾತ್ರಳಾಗಿ ವಲಿಸಿಹೆ ಭಾಗವತಾಗ್ರಣಿ ಶ್ರೀಹರಿ ನಾಮವ ಶೀಘ್ರದಿ ಸ್ತುತಿಸುವ ಭಾಗವತರ ತೋರೆಂದು 2 ಅಗಣಿತ ಮಹಿಮೆಯನೂ ಬಲ್ಲವಳು ನೀ ಸುಗುಣಿ ಸರಸ್ವತಿಯೆ ಶ್ರೀ ಶ್ರೀನಿವಾಸನ ಅಗಣಿತ ಗುಣಗಳ ಪೊಗಳುವ ಮತಿಯಿತ್ತು ಅಘಹರ ಹರಿಭಕ್ತರಾ ಲಗುಬಗೆಯಲಿ ತೋರೆ 3
--------------
ಸರಸ್ವತಿ ಬಾಯಿ
ಸ್ನಾನಾ ಮಾಡೈಯ ಸರ್ವಾಧಾರಾ ಪ ಜಾನಕೀವಲ್ಲಭ ನೀನೆ ನಿರ್ಮಲ ಮೂರ್ತಿಅ.ಪ ಸ್ಮರಿಸಿದ ಮಾತ್ರದಿ ಪರಿಶುದ್ಧ ಮಾಳ್ಪೆನೆಂ ದುರುತರ ಶೃತಿಗಳು ಪೊಗಳುತಿಹವು ನಿನ್ನ 1 ಕ್ಷೀರದದಾಜ್ಯ ಮಧುಶರ್ಕರ ಫಲಗಳಿಂ ನಾರಿಕೇಳೋದಕದಿಂದ ಪಂಚಾಮೃತ 2 ಗಂಗೆ ಗೋದಾವರಿ ಯಮುನೆ ಸರಸ್ವತಿ ಸಿಂಧು ಕಾವೇರಿ ಜಲಗಳಿಂ3 ಪುನಗು ಕೇಸರಿ ಕರ್ಪೂರ ಕಸ್ತೂರಿ ಪರಮದ್ರವ್ಯವು ನವರತ್ನ ಮುತ್ತುಗಳಿಂದ 4 ಭಾಗವತಪ್ರಿಯ ಗುರುರಾಮವಿಠಲನೆ 5
--------------
ಗುರುರಾಮವಿಠಲ
ಸ್ಮರಿಸಿ ತೀರ್ಥಕ್ಷೇತ್ರ ಸಜ್ಜನರು ನಿತ್ಯದಲಿ ಅರಣೋದಯದಲೆದ್ದು ಭಕ್ತಿಪೂರ್ವಕವಾಗಿ ಕಠಿಣಶ್ರಮದಿ ಮಾಳ್ಪ ಪಾಪರಾಶಿಗಳ ಪರಿಹರಿಸುತ್ತ ಸಂತ್ಯೆಸುವಾ ಪ ಭಾಗೀರಥಿ ಸರಸ್ವತಿ ಯಮುನಾ ವಾರಾಣಾ ಶ್ರೀ ಗೋದ ಫಲ್ಗುಣಿ ಶೋಣಭದ್ರಾ ನರ್ಮ ದಾ ಗಂಡಕಿ ಭಿಮರಥಿ ತುಂಗಭದ್ರೆ ಪ್ರಯಾಗ ತ್ರಿವೇಣಿ ಹೇಮಾ ವೇಗವತಿ ಗಾಯತ್ರೀ ಕಾಶಿಮಣಿಕರ್ಣಿ ಕಾ ಗೌತಮಿ ವಿಯದ್ಗಂಗಾ ಕುಮುದ್ವತೀ ಸಿಂಧು ಪಾಪಾಘನಾಶಿನೀ 1 ಸರಯು ಜಯಮಂಗಳ ಜಮದಗ್ನಿ ವರತಾಮ್ರ ಪರಣಿ ಯೋಗಾನಂದ ಕೃತಮಾಲಕುಹು ಮಹೇ ಧುನಾಶಿ ಗರುಡ ಮದಿರಾ ಮರುದ್ವತಿ ಸ್ವರ್ಣಮುಖರಿ ವರ ಝರತಾಪಿನಿ ಕಾಳಿ ಸೌ ಪರಣಿ ದಕ್ಷಿಣೋತ್ತರಪಿನಾಕಿ ಕಪಿಲ ಶೀತಳ ಕಾನಂದ ಕುರಮುಖಿ ಪ್ರಣವಸಿದ್ಧ 2 ಕಾವೇರಿ ಸಿಧು ಮಾಲತಿ ಗಾರ್ಗಿಣಿ ಹರಿ ಕುಂದ ಕುಂದಿನಿ ಶೈವ ದೇವವತಿ ಪಾತಾಳ ಗಂಗಾ ಪುನಹ ನೀರಾ ಕುಮಾರಧಾರಾ ಸಾವಿತ್ರಿ ದಾನ್ಯಮಾಲಾ ಪುಷ್ಪವತಿ ಲೋಕ ಸಿಂಧು ಧರ್ಮಕು ಭವ ನಾಶಿನಿ ವರದಾ ಮಲಾಪಹಾರಿ 3 ಸ್ವಾಮಿ ಪುಷ್ಕರಣಿ ಮಾನಸ ಚಂದ್ರ ಪುಷ್ಕರಣಿ ಭೂಮಂಡಲದೊಳುತ್ತಮೋತ್ತಮ ತ್ರಿಪುಷ್ಕರಣಿ ನಿತ್ಯ ಪದ್ಮಸರ ಚಂದ್ರಭಾಗತೀರ್ಥ ವಾಮನ ಮಯೂರ ಪಂಪಾಸರೋವರ ಪುಣ್ಯ ಧಾಮ ವ್ಯಾಸ ಸಮುದ್ರ ಧವಳಗಂಗಾ ಸುಸಾ ರೋಮಹರ್ಷತೀರ್ಥ 4 ದ್ವಾರಕಾನಗರ ಸಾಲಗ್ರಾಮ ಟರರ ಬದರಿ ಕೇ ದಾರ ನರನಾರಾಯಣ ಶ್ರೀ ಮಜ್ಜಗನ್ನಾಥ ಶ್ರೀ ಮುಷ್ಣ ಮಂದರ ಮೈನಾಕ ಕೈಲಾಸ ಕಂಚಿ ಶ್ರೀರಂಗನಾಥ ನೈಮಿಷ ದ್ವೈತವನ ಚಂಪ ಕಾರುಣ್ಯ ಕಾಶಿ ಪಂಪಾವಂತಿಕಾ ಪುರಿ ಹರಿದ್ವಾರ ಛಾಯಾಪಿಪ್ಪಲ 5 ಕೇದಾರ ಸಾಗರ ಮಂದಾಕಿನಿ ಕುಸುಮವತಿ ಆದಿಸುಬ್ರಹ್ಮಣ್ಯ ಕೋಟೇಶ್ವರ ನಂದಿ ವೇದಪಾದ ಯಯಾತಿ ಗಿರಿ ಕಾಲಹಸ್ತಿ ಕೌ ಮೋದಕೀ ಪಾಡುರಂಗ ಕ್ಷೇತ್ರ ಶ್ರೀ ವಿಷ್ಣು ಪಾಟಲೀ ಮಂತ್ರಾಲಯ6 ಮಂದರ ಮಲಯ ಕೈವಲ್ಯನಾಥ ಕಾಶೀರ ಜಾಂಬವತಿ ವೃಂ ಶ್ರೀ ವಿರೂಪಾಕ್ಷ ಕುಂದರ ನಂದಪುರಿ ಮಾಯಾ ಶ್ರೀವತ್ಸ ಗಂಧಮಾದನ ಚಿತ್ರಕೂಟ ದ್ವಾ ನರಾಚಲಾಸೌಭದ್ರಿ ಆದಿನಾಥ 7 ಈ ಮಹಿಮಂಡಲದೊಳಿಪ್ಪ ತೀರ್ಥಕ್ಷೇತ್ರ ನಾಮಗಳ ಕಾಲತ್ರಯದಲ್ಲಿ ಸರಿಸುತಿಹ ಧೀಮಂತರಿಗೆ ಸಂಚಿತಾಪ ಪರಿಹರದಾನಂತರದಲಿ ಸೋಮಾರ್ಕರುಳನಕ ಸಕಲ ಭೋಗಗಳ ಸು ತ್ರಾಮಲೊಕದ ಲುಣಿಸಿ ಕರುಣಾಳು ಪ್ರಾತ್ಯಕೆ ಸ್ವ ಅಹುದೆಂದು ಸೂತ ಶೌನಕಣೆ ಪೇಳ್ದ8 ಈ ಭರತ ಖಂಡದೊಳಗುಳ್ಳ ತೀರ್ಥಕ್ಷೇತ್ರ ವೈಭವಾಬ್ಜ ಭವಾಂಡ ಪಾರನದೊಳಗೆ ಹರಿ ಪರಮಕಾರುಣ ದಿಂದ ಸ್ತ್ರೀಬಾಲ ಗೋವಿಪ್ರಮಾತ ಪಿತೃಗಳ ಧನ ಲೋಭದಿಂದಲಿಕೊಂದ ಪಾತಕವ ಪರಿಹರಿಸಿ ಬೇಡಿದಿಷ್ಟಾರ್ಥಗಳನು 9
--------------
ಜಗನ್ನಾಥದಾಸರು