ಒಟ್ಟು 3738 ಕಡೆಗಳಲ್ಲಿ , 123 ದಾಸರು , 2544 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾಧನಕ್ಕೆ ಬಗೆಗಾಣೆನೆನ್ನಬಹುದೆ ಸಾದರದಿ ಗುರುಕರುಣ ತಾ ಪಡೆದ ಬಳಿಕ ಪ ಕಂಡಕಂಡದ್ದೆಲ್ಲ ಕಮಲನಾಭನ ಮೂರ್ತಿ ಉಂಡು ಉಟ್ಟದ್ದೆಲ್ಲ ವಿಷ್ಣು ಪೂಜೆ ತಂಡತಂಡದ ವಾರ್ತೆ ವಾರಿಜಾಕ್ಷನ ಕೀರ್ತಿ ಹಿಂಡು ಮಾತುಗಳೆಲ್ಲ ಹರಿಯ ನಾಮ 1 ವಾಗತ್ಯಪಡುವದೆ ವಿಧಿನಿಷೇಧಾರಚರಣೆ ರೋಗಾನುಭವವೆಲ್ಲ ಉಗ್ರತಪವು ಆಗದವರಾಡಿಕೊಂಬುವುದೆ ಆರ್ಶೀವಾದ ಬೀಗುರುಪಚಾರವೇ ಭೂತದಯವು 2 ಮೈಮರೆತು ಮಲಗುವುದೆ ಧರಣಿ ನಮಸ್ಕಾರ ಕೈಮೀರಿ ಹೋದದ್ದೆ ಕೃಷ್ಣಾರ್ಪಣ ಮೈ ಮನೋವೃತ್ತಿಗಳೆ ವಿಷಯದಲಿ ವೈರಾಗ್ಯ ಹೋಯ್ಯಾಲಿತನವೆಲ್ಲ ಹರಿಯ ವಿಹಾರ 3 ಹಿಡಿದ ಹಟ ಪೂರೈಸಲದು ಹರಿಯ ಸಂಕಲ್ಪ ನಡೆದಾಡುವೋದೆಲ್ಲ ತೀರ್ಥಯಾತ್ರೆ ಬಡತನವು ಬರಲದೇ ಭಗವದ್ಭಜನೆಯೋಗ ಸಡಗರದಲ್ಲಿಪ್ಪುದೆ ಶ್ರೀಶನಾಜ್ಞಾ 4 ಬುದ್ಧಿಸಾಲದೆ ಸುಮ್ಮನಿರುವುದೇ ಸಮ್ಮತವು ಯದೃಚ್ಛಾಲಾಭವೇ ಸುಖವುಯೆನಲು ಮಧ್ವಾಂತರ್ಗತ ಶ್ರೀ ವಿಜಯವಿಠ್ಠಲರೇಯ ಹೃದ್ಗತಾರ್ಥವ ತಿಳಿದು ಒಪ್ಪಿಸಿಕೊಳನೆ 5
--------------
ವಿಜಯದಾಸ
ಸಾಧಿಸಿ ಗುರುಗುಟ್ಟು ಭೇದಿಸಿ ಮನವಿಟ್ಟು ವೇದಕೆ ನಿಲುಕದ ಹಾದಿಯದೋರುವ ಸದ್ಗುರು ದಯಗೊಟ್ಟು ಧ್ರುವ ಮಾತಿಲೆ ಆಡುವ ಙÁ್ಞನ ಯಾತಕ ಬಾಹುದೇನ ಆತ್ಮಕದೋರುವ ನಿಜಖೂನ ಪ್ರತ್ಯೇಕವಾದ ಸ್ಥಾನ 1 ಮಾತೆ ಆಗೇದ ಮುಂದೆ ರೀತ್ಯಡಗೇದ ಹಿಂದೆ ನೀತಿಯ ತೋರುವ ಗುರುತಂದೆ ಜ್ಯೋತಿಸ್ವರೂಪೊಂದೆ 2 ತಾಯಿತವಾಗೆದ ಗುಟ್ಟು ಧ್ಯಾಯಿಸಿ ರೀತಿ ಇಟ್ಟು ಆಯಿತು ನಿಜಗುಣ ಬಿಟ್ಟು ಹೋಯಿತು ಜನ ಕೆಟ್ಟು 3 ಗುಟ್ಟು ಕೇಳಿ ಪೂರ್ಣ ಮುಟ್ಟಿ ಮಾಡಿ ಮನ ಇಟ್ಟುಕೋ ಮಹಿಪತಿಗುರುಬೋಧ ನಿಜಧನ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾಧಿಸಿದೇ ಖೂನ ಸದಾಸದ್ಗುರು ಕೃಪೆ ಜ್ಞಾನ ಛೇದಿಸಲನುಮಾನ ಶೋಧಿಸ್ಯನುದಿನ ಭೇದಿಸಿ ನೋಡಿ ಸದೋದಿತಾತ್ಮಙÁ್ಞನ 1 ಹೇಳಿ ಕುಡುವದಲ್ಲ ಕೇಳಿ ಕೊಂಬುವುದಲ್ಲ ಹೇಳುವ ಮಾತಿನೊಳಿಲ್ಲ ಕೇಳುವ ಕಿವಿಯೊಳಿಲ್ಲ ತಿಳಿವಿನೊಳಿಹ ನಿಜಗುಟ್ಟು ತಿಳಿದವಬಲ್ಲ 2 ಸೋಹ್ಯ ಸೂತ್ರದ ಖೂನ ದೇಹಾತೀತನು ಬಲ್ಲನೆ ಪೂರ್ಣ ಗುಹ್ಯ ಗೊಪ್ಪದ ಧನ ಮಹಾನುಭವದ ಸ್ಥಾನ ಮಹಿಪತಿ ಮನೋನ್ಮನಲೀಯ ನಿಧಾನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾಧಿಸಿದೇ ನೋಡಿ ಪೂರ್ಣ ಆದಿ ತತ್ವದ ಸುಸ್ಥಾನ ಭೇದಿಸುವದನುದಿನ ಸದಾನಂದ ಗುರುಜ್ಞಾನ ಧ್ರುವ ಮಾತಿನಂತಲ್ಲವಿದು ಸ್ವಾತ್ಮಸುಖದ ಸಾಧನ ಶ್ರುತಿಗಗೋಚರ ನೋಡಿ ಪ್ರತ್ಯೇಕದನುಸಂಧಾನ ಅತಿಗುಹ್ಯಗೂಢವಿದು ಹಿತೋಪಾಯದ ಖೂನ ರತಿಗೊಟ್ಟುನೋಡಿ ಪ್ರತ್ಯಕ್ಷ ಇಹ್ಯ ನಿಧಾನ 1 ನಡಿನೋಟ ನೀಟಮಾಡಿ ಪಡಕೊಳ್ಳದೆ ಸ್ವಹಿತ ನುಡಿಆಟದೋರಬ್ಯಾಡಿ ಕೂಡಿ ಸುಜ್ಞಾನÀಸನ್ಮತ ಬಡಬ್ಯಾಡಿ ನಾನಾಶ್ರಮವಿಡಿಯದೆ ಸುಗಮ ತಾ ಇಡಿದು ತುಂಬೇದ ಸಾಂದ್ರ ನೋಡಿ ಅನಂದೋಭರಿತ 2 ಸಾಧನಕಿದೇ ಮುಖ್ಯ ಸಾಧಿಸಿದೆ ಗುರುದಯ ಇದಕಿಲ್ಲ್ಲಿನ್ನೊಂದಧಿಕ ಬುಧಜನರ ಉಪಾಯ ಅದರಿಂದೊಲುವ ತಾನು ಸದ್ಗುರು ಭಾನುಕೋಟ್ಯುದಯ ಸದ್ಗೈಸಿ ಮಹಿಪತಿಯ ಸದೋದಿತ ಉದಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾಂಬ ಶಿವ ಶರಣರಿಗೊಂದು ಶರಣಾರ್ಥಿ ಪ ನರಲೋಕದೊಳಗೆ ಸಂಚಾರವ ಮಾಡುವ ಪರಮಾತ್ಮ ಪರಿಪೂರ್ಣ ಎಲ್ಲ ಜೀವದೊಳೆಂದು ಅರಿತಂಥವನಿಗೊಂದು ಶರಣಾರ್ಥಿ ಮರೆಹೊಕ್ಕ ದೀನರನು ರಕ್ಷಿಪ ಪುಣ್ಯ ಪುರು ಪುರುಷ ಪ್ರಯತ್ನದಿಂದುದ್ಯೋಗವನು ಮಾಳ್ಪ ಸರಿವಂಥವರಿಗೊಂದು ಶರಣಾರ್ಥಿ 1 ಧಾರಣಿಯೊಳು ಪೆಸರೊಡೆದು ರಂಜಿಸುವಂಥ ಕಾರುಣಿಕರಿಗೊಂದು ಶರಣಾರ್ಥಿ ದವರಿಗೊಂದು ಶರಣಾರ್ಥಿ ನಿತ್ಯ ಕರ್ಮವ ರಚಿಸುವ ಚಾರು ಶೀಲರಿಗೊಂದು ಶರಣಾರ್ಥಿ ಸ್ಸಾರ ಮಾಡಿದಗೊಂದು ಶರಣಾರ್ಥಿ 2 ಕೆರೆಭಾವಿ ದೇವಾಲಯಗಳ ಕಟ್ಟಿಸಿ ದೇವರುತ್ಸವವನು ಬರಿಸುವಗೆ ದ್ಧರಿಸಿ ಭುಂಜಿಪಗೊಂದು ಶರಣಾರ್ಥಿ ಪರದಾರ ಪರದ್ರವ್ಯ ಪರದ್ರೋಹವಿಲ್ಲದ ಮಹಾ ಪುರುಷರಿಗೊಂದು ಶರಣಾರ್ಥಿ ಹರಿಹರರೊಳಗೆ ಭೇದವ ಮಾಡಿ ನಡೆಯದ ದುರಿತ ದೂರರಿಗೊಂದು ಶರಣಾರ್ಥಿ 3 ಸತ್ತು ಹುಟ್ಟುವ ಭವಶರಧಿಯ ಗೆಲುವಂಥ ಉತ್ತಮರಿಗೊಂದು ಶರಣಾರ್ಥಿ ನಿತ್ಯ ಸಾಲಿಗ್ರಾಮಂಗಳನು ಪೂಜಿಸಿ ಹರಿ ತೀರ್ಥಗೊಂಬನಿಗೊಂದು ಶರಣಾರ್ಥಿ ಕೃತ್ತಿ ವಾಸನ ಆಗಮೋಕ್ತದಿ ಪೂಜಿಪ ಭಕ್ತಿವಂತರಿಗೊಂದು ಶರಣಾರ್ಥಿ ತತ್ವ ವಿಚಾರ ವೇದಾಂತದ ಅರ್ಥವ ಯಾ ವತ್ತರಿದವಗೊಂದು ಶರಣಾರ್ಥಿ 4 ಅರವಟ್ಟಿಗೆಯನು ಚೈತ್ರದೊಳಿಕ್ಕಿ ಜನರಿಗೆ ನೀರೆರಸಿದವರಿಗೊಂದು ಶರಣಾರ್ಥಿ ಸಿರಿ ತುಳಸಿಯನ್ನು ನೇಮದಲಿ ಪೂಜಿಸುವಂಥ ಹರಿ ಶರಣರಿಗೊಂದು ಶರಣಾರ್ಥಿ ತರಣಿಯೆ ತ್ರಿಗುಣಾತ್ಮಕನೆಂದು ಹೃದಯದೊಳರಿ ದೆರಗುವಗೊಂದು ಶರಣಾರ್ಥಿ ಮರುಸುತನ ಕೋಣೆ ವಾಸ ಲಕ್ಷ್ಮೀಶನ ಚರಣ ಪಂಕಜಕೊಂದು ಶರಣಾರ್ಥಿ 5
--------------
ಕವಿ ಪರಮದೇವದಾಸರು
ಸಾರ ತಿಳಿಯದೆ ಭೇದಾಭೇದ ವಿದ್ಯಾತಕೆ ಸೂಸುವದ್ಯಾತಕೆ ಹರಿಭಕುತಿಗೆ ಧ್ರುವ ಬಲಮುಣುಗುವದಿದ್ಯಾಕೆ ಬಲುವ ಭಾವದ ಕೀಲ ತಿಳಿಯದೆ ಮಾಲಿಜಪಕೈಯಲ್ಯಾತಕೆ ತಲೆ ಮುಸಕ್ಯಾತಕೆ ಹಲವು ಜನ್ಮ ಹೊಲಿಯು ತೊಳಿಯದೆ ಶೀಲಸ್ವಯಂಪಾಕ್ಯಾತಕೆ 1 ಹರಿಯ ಚರಣಾಂಬುಜನವರಿಯದೆ ಬರಿಯ ಮಾತಿನ್ಯಾತಕೆ ಗುರುವಿನಂಘ್ರಿಯ ಗುರುತವಿಲ್ಲದೆ ಶರಣಸಾವಿರವ್ಯಾತಕೆ ತುರಿಯಾವಸ್ಥೆಯೊಳರಿತು ಕೂಡದೆ ತೋರಿಕೆಯ ಡಂಭವ್ಯಾತಕೆ ತರಣೋಪಾಯದ ಸ್ಮರಣಿ ಇಲ್ಲದೆ ತರ್ಕಭೇದಗಳ್ಯಾತಕೆ 2 ಅಂತರಾತ್ಮದ ತಂತುವಿಡಿಯದೆ ಗ್ರಂಥಪಠಣಗಳ್ಯಾತಕೆ ಕಂತುಪಿತನಾರ್ಚನೆಯನರಿಯದೆ ತಂತ್ರ ಮಂತ್ರಗಳ್ಯಾತಕೆ ಪಂಥವರಿಯದೆ ಪರಮಯೋಗದಾನಂತ ವ್ರತವಿದುವ್ಯಾತಕೆ 3 ಸೋಹ್ಯವರಿಯದೆ ಶ್ರೀಹರಿಯ ನಿಜಬಾಹ್ಯರಂಜನೆವ್ಯಾತಕೆ ಗುಹ್ಯಮಹಾಮಹಿಮೆಯು ತಿಳಿಯದೆ ದೇಹ ಅಭಿಮಾನ್ಯಾತಕೆ ಸಾಹ್ಯವಿಲ್ಲದೆ ಶ್ರೀಹರಿಯ ದೇಹದಂಡದ್ಯಾತಕೆ ಮಹಾವಾಕ್ಯದಿತ್ಯರ್ಥವರಿಯದೆ ಸಾಯಸಬರುವದ್ಯಾತಕೆ 4 ಭಾಗ್ಯಭಕುತಿ ವೈರಾಗ್ಯವಿದು ನಿಜಯೋಗಾನಂದದ ಭೂಷಣ ಶ್ಲಾಘ್ಯವಿದು ತಾ ಇಹಪರದೊಳು ಸುಗಮ ಸುಪಥಸಾಧನ ಸಾರ ಯೋಗಿ ಮಾನಸಜೀವನ ಬಗೆಬಗೆಯಲನುಭವಿಸಿ ಮಹಿಪತಿಯೋಗ್ಯನಾಗೋ ಸನಾತನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾರಸಭವ ಮೋಹಿತೆ ದೇವಿ ಜಗನ್ಮಾತೆ ಪ ಚಾರುಕೀರ್ತಿ ಪರಿಶೋಭಿತೆ ಲಾವಣ್ಯಾಂಬರಭೂಷಿತೆ ಅ.ಪ ಸುರನುತೆ ಶಾರದೆ ಬುಧಗಣಸೇವಿತೆ ಮಯೂರರಂಜಿತೆ ವರ ಮಾಂಗಿರಿವರ ಭಾವಿತೆ ಪಾಹಿಮಾಂ ಲೋಕವಂದಿತೆ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸಾರಸಾಕ್ಷಿ ಬಾ ಬಾ ಬೇಗ ಸಾರಿ ನೀಂ ಪ. ಭೇರಿತಮ್ಮಟಾದಿ ಭಾರಿವಾದ್ಯಂಗಳು ಭೋರ್ಗರೆಯುತ್ತಿರಲು ನಾರಿ ನಿನ್ನ ಕಾಣಲು ಅ.ಪ. ಭಾವಜಾದಿ ಜನನೀ ಭಾರ್ಗವೀ ಕಲ್ಯಾಣಿ ದೇವದೇವನ ರಾಣೀ ಶ್ರೀಮತೀ ಪದ್ಮಿನೀ 1 ಕ್ಷೀರವಾರಿಧಿಜಾತೆ ಮಾರವೈರಿವಿನುತೆ ವಾರಿಜಾಸನ ಮಾತೆ ಸಾರಿ ಬಾ ಸುಪ್ರಿತೇ 2 ಶೇಷಶೈಲನಿಲಯೆ ವಾಸವಾದಿಗೇಯೆ ವಾಸುದೇವಜಾಯೇ ವಸುಮತೀ ತನಯೇ3
--------------
ನಂಜನಗೂಡು ತಿರುಮಲಾಂಬಾ
ಸಾರಸಾಕ್ಷಿ ಬಾ ಬಾ ಬೇಗ ಸಾರಿ ನೀಂಪ. ಸಾರಸಾಕ್ಷಿ ಬೇಗ ಚಾರುಪೀಠಕೀಗ ಅ.ಪ. ಭೇರಿ ತಮ್ಮಟಾದಿ ಭಾರಿವಾದ್ಯಂಗಳೂ ಭೊರ್ಗರೆಯುತಿರಲು ನೀರೆ ನೀ ಭರದೊಳು 1 ಭಾರ್ಗವಿ ಕಲ್ಯಾಣಿ ದೇವದೇವನರಾಣಿ ಶ್ರೀಮತೀ ಪದ್ಮಿನಿ2 ಕ್ಷೀರವಾರಿಧಿಜಾತೆ ಮಾರವೈರಿವಿನುತೆ ವಾರಿಜಾಸನ ಮಾತೆ ಸಾರಿ ಬಾ ಪ್ರಖ್ಯಾತೆ 3 ಶೇಷಶೈಲನಿಲಯೆ ವಾಸವಾದಿಗೇಯೆ ವಾಸುದೇವಜಾಯೆ ವಸುಮತೀ ತನಯೆ 4
--------------
ನಂಜನಗೂಡು ತಿರುಮಲಾಂಬಾ
ಸಾರಿದ ಡಂಗುರ ಯಮನು ಪ ಅಘ ನಾರೇರ ಎಳತಂದು ನರಕದಲ್ಲಿಡಿರೆಂದು ಅ.ಪ. ಹೊತ್ತಾರೆ ಎದ್ದು ಪತಿಗೆ ಎರಗದವಳ ಮೃತ್ತಿಕೆ ಶೌಚ ಮಾಡದೆ ಇಪ್ಪಳಾ ಬೆತ್ತಲೆ ಕುಳಿತು ಮೈದೊಳೆವಳ ನಾದಿನಿ ಅತ್ತೆ ಮಾವನ ಬೈವವಳೆಳೆದು ತನ್ನೀರೆಂದು 1 ತಿಲಕಾಯುಧವ ಬಿಟ್ಟು ಕುಂಕುಮವಿಡುವಳ ಬೆಳಗಾದ ಕಾಲಕ್ಕೂ ಮಲಗಿಪ್ಪಳ ಮಲಿನ ವಸ್ತ್ರದಲಿ ಪತಿಯ ಬಳಿಗೆ ಪೋಗುವಳ ಕಲಹಕಾರಿಯ ಹಿಡಿದೆಳೆದು ತನ್ನಿರಿಯೆಂದು 2 ಉತ್ತಮ ಗುರುಹಿರಿಯರನು ನಿಂದಿಸುವಳ ಪೆತ್ತ ಮಕ್ಕಳ ಮಾರಿ ಬದುಕುವಳ ಪ್ರತ್ಯೇಕ ಶಯ್ಯದಿ ಮಲಗಿ ಇಪ್ಪಳ ಪಿಡಿ ದೆತ್ತ ಎಳೆದು ತಂದು ನರಕದಲ್ಲಿಡಿರೆಂದು 3 ಜಲ ಜಕ್ಕಿ ಸಾಳಿ ಕಂಬಳಿ ಬೋಳಿ ಬಕ್ಕಿ ಗೊಂ ಡಳಿ ಮೊದಲಾದವು ದೈವವೆಂದು ತಿಳಿದು ಪಿಶಾಚಿ ಎಂಜಲ ಉಂಡು ಹಿಗ್ಗುವ ಲಲನೇರಾ ಸೆಳೆದು ತನ್ನಿರೋ ಎಂದು 4 ನಾಗೇಂದ್ರ ಶಯನನ ದಿನದುಪವಾಸದ ಜಾಗರ ಮಾಡದೆ ಮಲಗಿಪ್ಪಳಾ ಭಾಗವತ ಸಚ್ಛಾಸ್ತ್ರ ಕೇಳದೆ ಉನ್ಮತ್ತ ಳಾಗಿರುವಳ ಎಳೆದು ತನ್ನಿರೆಂದು 5 ಗಂಡ ನಿರ್ಧನಿಕನೆಂದಪಮಾನ ಮಾಳ್ಪಳ ಉಂಡ ಶೇಷಾನ್ನುವನುಣಿಸುವಳಾ ಕೊಂಡೆ ಮಾತುಗಳಾಡಿ ಕಳವಳಗೊಳಿಪಳ ಮಂಡೆಗೊದಲು ಹಿಡಿದು ಎಳೆದು ತನ್ನಿರಿ ಎಂದು6 ಉಡಲಿಲ್ಲ ಉಣಲಿಲ್ಲ ಇಡಲಿಲ್ಲ ತೊಡಲಿಲ್ಲ ಸುಡಲಿಗಂಡನ ಒಗೆತನವೆನ್ನುತಾ ಹಡೆದವರನು ನುಡಿನುಡಿಗೆ ಬಯ್ಯುತಿಪ್ಪಂಥ ಕಡು ಪಾಪಿಗಳ ಹೆಡ ಮುಡಿಗಟ್ಟಿ ತನ್ನಿರಿ ಎಂದು7 ಸಾಲೆಡೆಯಲಿ ಭೇದ ಮಾಡಿ ಬಡಿಸುವಳ ನೀಲಾಂಬರವನುಟ್ಟು ಮಡಿಯೆಂಬಳ ಬಾಲಕರ ಬಡಿದಳಿಸುತಿಪ್ಪಳ ಹಿಂ ಗಾಲ ತೊಳೆಯದವಳ ಎಳೆದು ತನ್ನಿರೋ ಎಂದು8 ಪತಿಗೆ ಬೇಕಾದವರ ಅಪಮಾನ ಮಾಳ್ಪಳ ಮೃತವತ್ಸ ಗೋವಿನ ಪಾಲುಂಬಳಾ ಹುತವಾದ ಅಗ್ನಿ ತೊಳೆದು ನಂದಿಸುವಳ ಮತಿಗೇಡಿಯ ಬಿಡದೆಳೆದು ತನ್ನಿರೋ ಎಂದು 9 ಒಲಿವ ಔಷಧ ಮಾಡಿ ಪತಿಯ ಬಳಲಿಸುವಳ ಮಲಮಕ್ಕಳೊಳು ಮತ್ಸರಿಸುತಿಪ್ಪಳಾ ಕಳವಿಲಿ ಕಾಂತನ ಧನವ ವಂಚಿಸುವಳ ಗಳಕೆ ಪಾಶವ ಕಟ್ಟ ಎಳೆದು ತನ್ನಿರೋ ಎಂದು 10 ಮಿಥ್ಯಾವಾದಿಯ ಕೂಡ ಸ್ನೇಹ ಮಾಳ್ಪಳಾ ವೃತ್ತಿಲಿ ಬದುಕುವಳೆಳೆದು ತನ್ನಿರೋ ಎಂದು 11 ಲಶನು ವೃಂತಕಾದಿಗಳನು ಭಕ್ಷಿಸುವಳಾ ಸೊಸೆಯರೊಡನೆ ಮತ್ಸರಿಸುತಿಪ್ಪಳಾ ಹಸಿದು ಬಂದವರಿಗೆ ಅಶನವಿಲ್ಲೆಂಬಳಾ ಉಸಿರು ಬಿಡದಂತೆ ಎಳೆದು ತನ್ನಿರೊ ಎಂದು 12 ತುಲಸಿ ವೃಂದಾವನಕಭಿನಮಿಸದವಳ ಜಲವ ಸೋಸದೆ ಪಾನವ ಮಾಳ್ಪಳಾ ಫಲ ಧಾನ್ಯಾದಿಗಳ ನೋಡದೆ ಪಾಕ ಮಾಳ್ಪಳ ಮಳೆ ಗಾಳಿ ನಿಂದಿಪಳ ಎಳೆದು ತನ್ನಿರೋ ಎಂದ 13 ಮೀಸಲು ಮಡಿ ಎನ್ನದೆ ಭಕ್ಷಿಸುವಳ ಕೇಶಿಯೊಡನೆ ಗೆಳೆತನ ಮಾಳ್ಪಳ ದಾಸೆರಿಂದಲಿ ಪಾಕ ಪಾತ್ರೆ ಮುಟ್ಟಿಸುವಳ ನಾಸಿಕ ಬಂಧಿಸಿ ಎಳೆ ತನ್ನಿರೋ 14 ಬಾಲಕರನು ತೊಟ್ಟ್ಟಿಲೊಳಿಟ್ಟು ತೂಗುತ ಪಾಲೆರೆವುತ ಬೀಸುತ ಕಟ್ಟುತಾ ಆಲಯದೊಳು ಕೆಲಸಗಳ ಮಾಡುತ ಲಕ್ಷ್ಮೀ ಲೋಲನ ಗುಣವ ಪಾಡುವರ ಮುಟ್ಟದಿರೆಂದು15 ಅರಿಷಣ ಕುಂಕುಮ ಪುಷ್ಟಾಂಜನ ವಸ್ತ್ರಾ ಸರಸವಾಡುತ ಸುಖ ಹರಿಗೆ ಅರ್ಪಿತವೆಂಬ ಹರಿದ್ದೇರಿದೆಡೆಗೆ ಕೈಮುಗಿದು ಬನ್ನಿರಿ ಎಂದು16 ಅಗಣಿತ ಮಹಿಮ ಶ್ರೀ ಜಗನ್ನಾಥ ವಿಠಲನ್ನ ಬಗೆಬಗೆಯಿಂದ ಪಾಡುತಲೀ ಹೊಗಳುವ ದಾಸರ ಬಗೆಯ ನೇಮಿಸಿ ಕಾಯ್ವ ಸುಗುಣೇರಿದ್ದೆಡೆಗೆ ಕೈಮುಗಿದು ಬನ್ನಿರೆಂದು 17
--------------
ಜಗನ್ನಾಥದಾಸರು
ಸಾವಧನಾಗಿ ಮನುಜಾ | ಕೇಳು | ನಿಜ ಸ್ಥಿತಿಯಾ ಪ ಕೇಳು ನಿಜ ಸ್ಥಿತಿಯಾ | ಪಡೆದೇನೆಂದರೆ ಗತಿಯಾ | ಬೀಳದೆ ನೀ ಕವಳದಾರಿಗೆ | ನಂಬು ಗುರು ಮೂರ್ತಿಯಾ 1 ಗಗನ ಮುರಿದು ಬೀಳಲಿ | ಸಾಗರ ಮೇರೆದಪ್ಪಲಿ | ಬಾಗದೇ ನೀ ಅನ್ಯದೈವಕ | ಭಾವ ದೃಢ ವಿರಲಿ 2 ದಾಸರ ಕಂಡರೆ ರಂಗಯ್ಯಾ | ಜಂಗಮ ಕಂಡರೆ ಲಿಂಗಯ್ಯಾ | ವೇಷಿಯಂತೆ ತಿರುಗಬ್ಯಾಡಾ | ಹಿಡಿಯೋ ಒಂದೇ ನಿಷ್ಠೆಯಾ 3 ಕಂಡ ಮಾರ್ಗ ನೋಡದೆ | ಕಂಡ ಮಾತನಾಡದೆ | ಗಂಡನೊಬ್ಬನ ಮಾಡದೆ ನಾರಿ | ಪತಿವೃತೆ ಮೆರಿವದೇ 4 ಎಲ್ಲಿ ಒಂದೇ ನಿಷ್ಠೆಯು | ಅಲ್ಲಿ ಶ್ರೀ ಹರಿ ಕೃಪೆಯು | ನಿಲ್ಲದೆ ಮಹಿಪತಿ ನಂದನಸ್ವಾಮಿ | ಇದಿರಿಡುವನು ಸಂಗತಿಯಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಾಸಿರ ನಾಮವ ಹಾಡೆ | ತಂಗಿ ಪ ದಾಸರು ಬಂದರೆ ಕೈ ಜೋಡಿಸಿ ವಂದಿಸೆ ತೋಷದಿ ವರಗಳ ಸೀಡುವರಮ್ಮ ಅ.ಪ ಪರಿಮಳ ಭರದಲಿ ಮೆರೆಯುವ ಹೂಗಳ ಅರಸಿ ತಂದಿರುವಳು ನೀನಲ್ಲವೇ ಪರಮ ಮಂಗಳಕರ ಸರಸಿಜಪಾದಕೆ ಹರುಷದೊಳರ್ಪಿಸೆ ಮರೆಯದಿರಮ್ಮ 1 ಮಂದರಧರ ಗೋವಿಂದನು ಮನದಲಿ ನಿಂದಿರುವನು ತಾನೆಂದೆಣಿಸಮ್ಮ ಬಂಧಿಸಿ ಪಂಚೇಂದ್ರಿಯಗಳನೆಲ್ಲ ವಂದಿಸಿ ಕೈಪಿಡಿ ಎಂದು ಬೇಡಮ್ಮ 2 ಅಂಗನೆಯರ ಭಾವಭಂಗಿಗೆ ನಲಿಯುವ ಮಾಂಗಿರಿಯರಸನು ನಿಜವಮ್ಮ ಇಂಗಿತವರಿತು ಗೋಪಾಂಗನೆಯರಿಗಾ- ಲಿಂಗನವಿತ್ತವನಿವನಮ್ಮ 3 ಇವನಮ್ಮ ಮನದೈವ ಗೋಪಾಲನು ಇವನಮ್ಮ ಪರದೈವ ನೀಲಾಂಗನು ಭವದೂರ ಸುಕುಮಾರ ಸಿರಿಲೋಲನು ನವನೀತ ದಧಿಚೋರ ಸುವಿಲಾಸನು 4 ಪರಮಾರ್ಥ ಚರಿತಾರ್ಥ ವರದಾತನು ಪರತತ್ವ ಚಿರತತ್ವ ಗುರುವೀತನು ದುರಿತಾರಿ ಉಪಕಾರಿ ಪರಮಾತ್ಮನು ಸಿರಿರಂಗ ಮಾಂಗಿರಿಯ ದೊರೆಯೀತನು 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸಾಸಿರ ಮಾತುಗಳ್ಯಾಕೊ ಎಲೆಮನ ಕೇವಲ ಹರಿನಾಮವೊಂದೆ ಸಾಕೊ ಪ ಸ್ನಾನವುಯಾಕೊ ಮೌನವುಯಾಕೊ ದಾನವಾರಿಯಧ್ಯಾನವೊಂದೆ ಸಾಕೊ 1 ಮಂತ್ರವುಯಾಕೊ ತಂತ್ರವುಯಾಕೊ ಮಂತ್ರಮೂರ್ತಿ ಚಿಂತೆಯೊಂದೆ ಸಾಕೊ 2 ಹೋಮವುಯಾಕೊ ನೇಮವುಯಾಕೊ ಸ್ವಾಮಿ ಶ್ರೀರಾಮನ ಭಕ್ತಿಯೊಂದೆ ಸಾಕೊ 3
--------------
ರಾಮದಾಸರು
ಸಿಕ್ಕಿದೆಲ್ಲೊ ಕೃಷ್ಣ ನೀನು ಸಿಕ್ಕಿದೆಲ್ಲೊ ನಮ್ಮ ಕೈಯ ಹೊಕ್ಕು ಮುನಿಯ ಹಕ್ಕಿಯೊಳಾದ್ಯೊ ತೆಕ್ಕಿಯ ಪುಕ್ಕಸಾಟಿಯ 1 ಬಿಟ್ಟರ ಗೊಲ್ಲತೇರಲ್ಲೊ ಕಟ್ಟಿದ ಸೊಲ್ಲೊ ಮುಟ್ಟಿ ಬಿಡುವವರಲ್ಲೊ ಘಟ್ಯಾಗಿ ನಿಲ್ಲೊ 2 ನಾವು ಬಲ್ಲೆವು ನಿನ್ನಾಟ ಎವಿ ಹಾಕುನೋಟಿ ಹವಣಿಸಿ ಹಿಡಿದೆವೊ ನೀಟ ಭಾವಿಸಿ ಈ ಮಾಟ 3 |ಬಲ್ಲತನವದೋರಿದೊ ಇಲ್ಲಿ ಮರುಳಾದ್ಯೊ ನಿಲ್ಲೊ ನಮ್ಮೊಳು ನೀನಾದ್ಯೊ ಎಲ್ಲಿಗೆ ಹೋದ್ಯೊ 4 ವಶವಾಗಲಿಕ್ಕ ನಮಗ ವಸುಧಿಯೊಳಗ ಯಶೋದೆ ಹಡೆದಳು ತಾ ಈಗ ಲೇಸಾಗಿ ನಿನಗ 5 ನಾವು ಹಿಡಿದೇವೆಂಬುವ ಮಾತ ಪೂರ್ವಾರ್ಜಿತ ನವನೀತ ಸವಿದೋರಿ ಹಿತ 6 ಭಾನುಕೋಟಿ ಸು ಉದಯ ಮುನಿಜನರಾಶ್ರಯ ನೀನಾಗಿ ಸಿಕ್ಕಿದ್ಯೊ ಕೈಯ ದೀನ ಮಹಿಪತಿಯ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಿಂದೂರಗಮನೆ ಸಾರೆ ಮಲಗಿರುವನ್ಯಾರೆ ಪ ಸಂದರೀ ಮಂದಿರದೊಳಿವನ್ಯಾರೆ ಸೌಂದರ್ಯದ ಮ್ಯಾರೆ ಛಂದದಲಿ ನೀ ಸಾರೆ ಇಂದು ನಭದಲಿ ಚರಿಸುತಲಿ ಮನ ನೊಂದು ಬೇಸರದಿಂದ ಇಲ್ಲಿಗೆ ಬಂದು ಮಲಗಿಹನೇನೆ ಸುಖದಿ 1 ಶೀಲೆ ನೋಡಿವನ ಮುಖಕಮಲ ಸಂಗರದೊಳತಿ ಚಟುಲ ಸುವಿಶಾಲ ಭುಜಯುಗಲ ಶ್ರೀ ಲಕುಮಿವರ ಪಾಲ ನಯನ ಮರಾಳ ಧ್ವಜರೊಳ ಗಾವನೊ ಇವ ಪೇಳುವದು ಕೀಲಾಲಜಾಂಬಕಿ2 ನಾರಿ ಮಾತನಾಡಿಸೇ ಇವನ ಮನ ಮೋಹದವರನ ಕಮನೀಯ ಗುಣಯುತನ ವಾರಿಜಾಸನ ಮುಖ್ಯ ಸುರಪರಿವಾರ ಸೇವಿಯ ಕೊಳುವ ಕಾರ್ಪರನಾರಸಿಂಹನೆ ಪವಡಿಸಿಹನೆ 3
--------------
ಕಾರ್ಪರ ನರಹರಿದಾಸರು