ಒಟ್ಟು 400 ಕಡೆಗಳಲ್ಲಿ , 75 ದಾಸರು , 328 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಿಸಜ ಕಾನಮಿಪೇ ಪ ವಾತಸುತನೆನ್ನಿಸುತ | ಸೀತೆ ರಮಣನ ಕಂಡುಸೀತೆ ವಾರ್ತೆಯ ನರುಹಿ | ಖ್ಯಾತ ನೀನಾದೇ |ಮಾತರಿಶ್ವನೆ ಹರಿಯ | ಪ್ರೀತಿ ನಿನ್ನೊಳಗೆಂತೋಪೋತ ಭಾವ ದೊಳಾಂತೆ | ಪ್ರೀತಿ ಅಪ್ಪಿಗೆಯಾ 1 ಉರ ರಕ್ತವನು | ಕುಡಿದಂತೆ ತೋರಿ ಜಗನಡುಗುವಂತೆಸಗಿವೆಯೊ | ಕಡುಗಲಿಯ ಭೀಮಾ 2 ಸನ್ಯಾಸದಾಶ್ರಮವ ಅ | ನ್ಯಾಯದಲಿ ಗೊಂಡುಶೂನ್ಯ ಮತ ತತ್ವ ಪ್ರ | ಚ್ಛನ್ನದಲಿ ಪೇಳ್ದಾಅನ್ಯಾಯ ಕಳೆವುದಕೆ | ಜನ್ಯನಾಗುತ ಮಧ್ವಚೆನ್ನ ಪೆಸರಲಿ ಪೇಳ್ದ | ಘನ್ನ ತತ್ವಗಳಾ 3 ಆರು ಕೋಣ್ಯು ಪರಿಯಾ | ಕಾರದಲಿ ವಲಯಾಮೂರು ಕೋಟಿಯ ಸಂಖ್ಯೆ | ವಾನರಾಕೃತಿ ಬದ್ಧವೂ |ಚಾರು ಯಂತ್ರದಿ ಸೌಮ್ಯ | ದಾಕಾರದಲಿ ಜಪದಹಾರ ಪಿಡಿಯುತ ವ್ಯಾಸ | ತೀರಥಿರಿಗ್ವೊಲವೇ 4 ವಕ್ರ ಮನವನು ತ್ಯಜಿಸಿ | ಚಕ್ರತೀರ್ಥದಿ ಮಿಂದುವಕ್ರ ಬಕರಿಪು ನಿನ್ನ | ಚೊಕ್ಕ ರೂಪವ ಸೇವಿಸೀಅಕ್ರೂರ ವರದ ಗುರು | ಗೋವಿಂದ ವಿಠ್ಠಲನಅಕ್ಕರದಿ ಭಜಿಸುವಗೆ | ಚಕ್ರಿಪುರ ವೀವೇ5
--------------
ಗುರುಗೋವಿಂದವಿಠಲರು
ಬೂದಿಯ ಹಚ್ಚಿರೊ ಶುದ್ಧ ವೈಷ್ಣವರಿದ- ರಾದಿಯ ತಿಳಿಯಲು ಕೇಳಿ ಬಲ್ಲವರು ಪ ಮೂಲಾಗ್ನಿಯಿಂದಲೆ ಸುಟ್ಟಿಹ ಬೂದಿ ಮೂಲ ಮಂತ್ರಂಗಳ ಜಪಿಸುವ ಬೂದಿ ಮೂಲಾಧಾರವ ತೋರುವ ಬೂದಿ ಕಾಲ ಕರ್ಮಂಗಳ ಕಡಿವಂಥ ಬೂದಿ 1 ಏಳು ಸುತ್ತಿನ ಒಳಗೆ ಇರುವಂಥ ಬೂದಿ ಏಳು ವೈರಗಳನ್ನು ಕಳೆವಂಥ ಬೂದಿ ಏಳು ಅಗಳ ದಾಟಿ ಹಾರುವ ಬೂದಿ ಬ- ಹಳ ಜ್ಞಾನಿಗಳೆಲ್ಲ ಧರಿಸುವ ಬೂದಿ 2 ಒಂಭತ್ತು ಕಡೆಯಿಂದ ಒಲಿದಿಟ್ಟ ಬೂದಿ ಕುಂಭಕದೊಳಗದ ಇರಿಸುವ ಬೂದಿ ಸಂಭ್ರಮದಿ ಅರಸನ ಗೆಲುವಂಥ ಬೂದಿ ಅಂಬರಕಾಗಿಯೆ ಲಂಬಿಪ ಬೂದಿ 3 ಪಂಚಾಗ್ನಿಯಿಂದಲೆ ಬೆಂದಿಹ ಬೂದಿ ಪಂಚತತ್ವಂಗಳನು ಗೆಲುವಂಥ ಬೂದಿ ಪಂಚ ಮೃತ್ಯುಗಳನ್ನು ಕಳೆವಂಥ ಬೂದಿ ವಂಚಿಸಿಕೊಳ್ಳದೆ ಧರಿಸುವ ಬೂದಿ 4 ಆರು ವೈರಿಗಳನ್ನು ತೂರುವ ಬೂದಿ ಆರು ಭಾವಗಳನ್ನು ಬೇರಿಟ್ಟ ಬೂದಿ ಆರು ಭ್ರಮೆಗಳನ್ನು ಕಡಿದಿಟ್ಟ ಬೂದಿ ಆರಿಗೂ ತೋರದೆ ಹಾರುವ ಬೂದಿ 5 ಅಷ್ಟಮದಂಗಳ ಕಟ್ಟುವ ಬೂದಿ ದುಷ್ಟಾತ್ಮರನ್ನು ಅಟ್ಟುವ ಬೂದಿ ಕುಟ್ಟೆ ಹಿಡಿವ ಬೀಜಕಿಟ್ಟಿಹ ಬೂದಿ ಭ್ರಷ್ಟಕರ್ಮಗಳನ್ನು ಸುಟ್ಟಂಥ ಬೂದಿ 6 ಸಕಲ ಋಷಿಗಳೆಲ್ಲ ಧರಿಸುವ ಬೂದಿ ತ್ರಿಕರ್ಣ ಶುದ್ಧದಿ ತುಂಬಿದ ಬೂದಿ ಮಕರಕುಂಡಲಧರ ಮರುಳಹ ಬೂದಿ ಸಖನಹ ವರಾಹತಿಮ್ಮಪ್ಪ ಬೂದಿ 7
--------------
ವರಹತಿಮ್ಮಪ್ಪ
ಬೆಳಗಿರಿ ಶ್ರೀಹರಿಗೆ ಆರುತಿಯಾ ನಾರಿಯರು ಪ ಇಂದುಬಿಂಬ ಮುಖಿಯರು | ಮದನಾರಿ ಸಖಗೆ ವೇದವೇದ್ಯ ಯದುಕುಲನಾಥಗೆ1 ಜಗದಾದಿ ಪತಿಗೆ ನಗಪಾಣಿಗೆ ಜಗದಾದಿ ಗಜವರ ಪಾಲಿಗೆ 2 ಶಾಮಸುಂದರ ವಿಠಲಗೆ ಬೇಗ ಕೋಮಲಾಂಗರಘುರಾಮ ಚಂದ್ರಗೆ 3
--------------
ಶಾಮಸುಂದರ ವಿಠಲ
ಬೆಳಗಿರೆ ಆರುತಿ ಲಲನೆಯರೆಲ್ಲರು ಬಲಿ ನೃಪತಿಯ ಬಾಗಿಲ ಕಾಯ್ದವಗೇ ಪ ಶಿಲೆಯನು ಪದದಲಿ ಲಲನೆಯ ಮಾಡಿದ ಇಳಿಜಾರಮಣನ ಚಲುವ ಮೂರುತಿಗೆ1 ಪದುಮಾವತಿಯಳ ಮದುವೆ ಯಾದವಗೆ ಸುದತಿಯೆಲ್ಲರು ಮುದದಲಿ ಪಾಡುತ 2 ಕರಿವರ ಕರೆಯಲು ಭರದಿ ಬಂದೊದಗಿದ “ಸಿರಿ ಕಾರ್ಪರ ನರಹರಿ“ ರೂಪನಿಗೆ 3
--------------
ಕಾರ್ಪರ ನರಹರಿದಾಸರು
ಬೆಳಗಿರೆ ಆರುತಿಯ ಶ್ರೀ ತುಳಸಿಗೆ ಪ ಬೆಳಗಿರೆ ಆರುತಿ ತುಳಸಿದೇವಿಗೆ ನಿತ್ಯ ಲಲನೆಯರೆಲ್ಲ ಮಂಗಳವೆಂದು ಪಾಡುತ ಅ.ಪ ಸುಧೆಯ ಕಲಶದೊಳು ಮಧುವೈರಿನಯನದ ಮುದ ಜಲಬೀಳಲು ಉದುಭವಿಸಿದಳೆಂದು 1 ದರುಶನ ಮಾತ್ರದಿ ದುರಿತಗಳೋಡಿಸಿ ಸ್ಥಿರವಾದ ಸೌಭಾಗ್ಯ ಕರುಣಿಸುವಳೆಂದು 2 ಇಳೆಯೊಳು ಕಾರ್ಪರ ನಿಲಯ ಶ್ರೀನರಹರಿ ಒಲುಮೆಯ ಪಡೆದ ಶ್ರೀ ತುಳಸಿದೇವಿಗೆ ಬೇಗ3
--------------
ಕಾರ್ಪರ ನರಹರಿದಾಸರು
ಬೆಳಗಿರೆ ಗೋಪಾಲ ಬಾಲಗೆ | ಬೆಳಗಿರೆ ಗೋಪಾಲಕೃಷ್ಣಗೆ ಆರುತಿ | ಬೆಳಗಿರೆ ಗೋಪಿಯ ಕಂದಗೆ ಪ ಗೋಪಿ ಮನೋಹರಗೆ ಗೋಪಾಲಕನಿಗೆ ಆಕಳಕಾಯ್ವನಿಗೆ 1 ನಂದಕುವರಗೆ ಶಿಂಧುಶಯನಗೆ ಇಂದೀವರಾನನಗೆ 2 ಶಾಮಸುಂದರಗೆ | ದಾಮೋದರಗೆ | ಪ್ರೇಮದಿಂದಲಿ ಕಮಲಾಕ್ಷಗೆ ಬೇಗ 3
--------------
ಶಾಮಸುಂದರ ವಿಠಲ
ಬೆಳಗಿರೆ ಹರುಷದಿ ಆರುತಿಬೇಗ | ಸತಿ ಮುದದಿ ಶಿರಿ ನಿಲಯನಿಗೀಗ ಪ ನಿರಂಜನ | ನಿರಾಮಯ | ನೀರೇರುಹದಳ ಲೋಚನ ನರಪ್ರಿಯ | ಸುಮಹಿತ ಸುಚರಿತ ಮರುತ ವಿನುತಗೆ 1 ದೀನಾಪ್ತಗೆ | ಶ್ರೀನಾಥಗೆ | ಆನಂದಾತಿಶಯದಲಿ ಸಭೆಯೊಳು ಮಾನಿನಿಯಳ ಅಭಿಮಾನ ಕಾಯ್ದವಗೆ 2 ಹೇಮಾಂಬರ | ಶ್ರೀಮಾವರ | ಪ್ರೇಮಾದರದಿ | ಸು ಶುಭಮೂರುತಿಗೀಗ ಆರುತಿ ಬೇಗ 3
--------------
ಶಾಮಸುಂದರ ವಿಠಲ
ಬೆಳಗೋಣು ಹರಿಗೆ ಆರುತಿಯ | ಸಂಗೀತಹಾಡಿ ಪಾಡಿ ನಲುವಿಂದ ಬೇಗ ಬಾರೆ ನಳಿನಾಕ್ಷಿ ಬಾ ಪ ಬಾಲೆ ಶೀಲೆ ದ್ರೌಪದಿ ಭಕುತಿಲಿ ಧ್ಯಾನಿಸಿ ಧೇನಿಸಿ ಕೇಳಿ ಅಕ್ಷಯಶಾಲಿ ಗರೆದ ದೇವ ದೇವಗೆ || ಶೈಲವನೆತ್ತಿದಾತಗೆ | ಗೋಪಗೆ | ಬಹುರೂಪನಿಗೆ | ಶೃಂಗಾರ ಸುಗುಣಾಂಬುಧಿಗೆ ಜಯಶುಭ ಮಂಗಳೆಂದು 1 ದೀನೋದ್ಧಾರಿ ಧೇನುಕ ಮಾತುವೈರಿಗೆ | ಶೌರಿಗೆ | ವೇಣುನೂದುತ ಗೋವ್ಗಳ ಸಲುಹಿದಾತಗೆ ನಾಥಗೆ | ಮಂದರ ಕರುಣಾತರಗೆ 2 ಭಾಸುರ ಶಾಮಸುಂದರವಿಠಲ ಸ್ವಾಮಿಗೆ | ಪ್ರೇಮಿಗೆ | ವಾಸವಾತ್ಮಜಗೆ ಒಲಿದು ಧುರದೊಳು ಕಾಯ್ದಗೆ ಶ್ರೀದಗೆ || ವಾಸುಕಿತಲ್ವಶಾಯಿಗೆ | ಗೋಪಗೆ | ಬಹುರೂಪನಿಗೆ | ದಾಸರ ಒಡನಾಡುವಗೆ | ಜಯಶುಭ ಮಂಗಳೆಂದು 3
--------------
ಶಾಮಸುಂದರ ವಿಠಲ
ಬೇಕಿಲ್ಲ ಎನಗನ್ಯ ಏನೇನು ಸ್ವಾಮಿ ಸಾಕು ನಿನ್ನಯ ನಾಮವೊಂದೆ ನುತ ಪ್ರೇಮಿ ಪ ದುರುಳ ಸಂಹರ ನಾಮ ದುರಿತ ಪರಿಹರ ನಾಮ ಶರಧಿಮಥನ ನಾಮ ಸುರರ ಸಲಹಿದ ನಾಮ ಹರನ ಪ್ರೇಮದ ನಾಮ ಪರಮೇಷ್ಟಿಯನು ಪಡೆದ ಸ್ಥಿರನಾಮದ್ಹೊರತು 1 ಸೃಷ್ಟಿಯಾಳುವ ನಾಮ ಶಿಷ್ಟಪಾಲನ ನಾಮ ಕಷ್ಟ ಕಳೆಯುವ ನಾಮ ಇಷ್ಟಪೂರ್ಣ ನಾಮ ಮುಟ್ಟುಮುಡಿ ಹರನಾಮ ಅಷ್ಟಸಿರಿಪತಿನಾಮ (ಹುಟ್ಟುಸಾವಿ)ಲ್ಲದ ಶಿಷ್ಟನಾಮದ್ಹೊರತು 2 ವೇದ ಹೊಗಳಿದ ನಾಮ ಸಾಧುವಂದಿತನಾಮ ಬೋಧರೂಪದ ನಾಮ ಆದಿಮಹನಾಮ ಭೇದವಿಲ್ಲವ ನಾಮ ವೇದಗೋಚರ ನಾಮ ಆದಿ ಅಂತಿಲ್ಲದನಾದಿ ನಾಮದ್ಹೊರತು 3 ತರಳನ್ಪೊರೆದ ನಾಮ ಕರಿಯ ಸಲಹಿದ ನಾಮ ತರುಣಿನುದ್ಧಾರ ನಾಮ ಧರೆಪೊತ್ತ ನಾಮ ಕರುಣೆ ತುಂಬಿದ ನಾಮ ಶರಣಾಗತಪ್ರಿಯ ನಾಮ ನರನ ಬೆಂಬಲನಾದ ಹರಿನಾಮದ್ಹೊರತು 4 ಮೂರು ಕಳೆಯುವ ನಾಮ ಆರುಗೆಲಿಸುವ ನಾಮ ಆರುನಾಲ್ಕು ಸುಲಭದಿ ಹಾರಿಸುವ ನಾಮ ಸಾರ ಮುಕ್ತಿಯ ನಾಮ ಧೀರ ಶ್ರೀರಾಮ ನಿಮ್ಮಪಾರನಾಮದ್ಹೊರತು 5
--------------
ರಾಮದಾಸರು
ಬೇಡಿ ಕಡದೀತು ಎನ್ನ ಬೇಡಿ ಕಡದೀತು ಪ ಮೂಢ ಜನರ ಸಂಗ ತ್ಯಜಿಸಿ ಗೂಢವಾದ ಸಾಧುವೆನಿಸಿ ಅ.ಪ. ಘೋರ ಸಂಸಾರ ಬೇಡಿ ಆರು ಅಹಿತರೆನ್ನ ಕಾಡಿ ಗಾರು ಮಾಡಿ ಜಡಿಯ ಕೂಡಿ ಪಾರ ಮಾಡಿದೆನ್ನ ನೋಡಿ1 ಮೋಹಪಾಶದೊಂದು ಕಟ್ಟು ದೇಹವೆಲ್ಲ ತೊಡರಿ ಬಿಟ್ಟು ಗೇಹ ತೊಲಗದಂದ ಬಿಟ್ಟ ನೇಹ ತವಿಸೆ ಕರುಣವಿಟ್ಟು 2 ಭವ ಮೋಹ ಸುಡಲಿ ಉರಿವ ಕ್ಲೇಶಗಳು ಸಿಡೀಲಿ ಕೊರೆವ ಸಂಸ್ಕøತಿ ಜಾಲಕ ತೇಲಿ ನರಸಿಂಹವಿಠಲಾ ಕೊಡಲಿ 3
--------------
ನರಸಿಂಹವಿಠಲರು
ಬೇಡುವೆನು ಶ್ರೀಕೃಷ್ಣ | ಕಾಡುತಿಹ ಭವರೋಗಓಡಿಸುವುದು ತಡೆಯದೇ ಪ ನಾಡಾಡಿ ದೈವಗಳ | ಬೇಡ್ವನಲ್ಲವೊ ಕೃಷ್ಣನೋಡೆನ್ನ ದಯದಿಂದ | ಸಾರ್ವಭೌಮಾ ಅ.ಪ. ಪರ ಕಂಬು ಚಕ್ರಾಂಕಿತನೆನಂಬಿಹೆನೊ ನಿನ್ನ ಪದವ ||ಕುಂಭಿಣಿಯ ಪರಿಪಾಲ | ಅಂಭ್ರಣಿಯ ಸುವಿಲೋಲಇಂಬಿಟ್ಟು ವದಗಿಸುತ | ಸಂಭ್ರಮದಿ ಕಾಯೋ | ಕರುಣೀ 1 ಪ್ರೇರ್ಯ ಪ್ರೇರಕ ನೀನೆ | ಬಾಧ್ಯ ಬಾಧಕ ನೀನೆಸೇವ್ಯ ಸೇವಕನೆ ಹರಿಯೇ ||ವಾಪ್ಯ ವ್ಯಾಪಕ ಸ್ವಾಮಿ | ಪೋಷ್ಯ ಪೋಷಕ ರೂಪಿಕಾರ್ಯ ಕಾರಣ ರೂಪನೇ ||ಭಾವ್ಯನೇ ನಿನ್ನಿಂದ | ಧಾರ್ಯ ಈ ಜಗವೆಲ್ಲವೀರ್ಯ ಔದಾರ್ಯ ಶೌರ್ಯ ||ಪೂಜ್ಯ ಪೂಜಕನೆನಿಪ | ಬಹಿರಂತರಾತ್ಮಕನೆಪ್ರಾಪ್ಯ ಪ್ರಾಪಕ ನಿನ್ನ | ಪ್ರಾಪ್ತಿಯನೆ ತಿಳಿಸೋ | ಸ್ವಾಮಿ 2 ತಾರತಮ್ಯ ಜ್ಞಾನ ಸದ್ | ವೈರಾಗ್ಯ ಹರಿ ಭಕುತಿಬಾರಿ ಬಾರಿಗೆ ಬೇಡುವೇ ||ಸೂರಿ ಸಂಗವ ನೀಯೊ | ದೂರಗೈ ದುಸ್ಸಂಗಮಾರಪಿತ ದಯಾಪಾಂಗನೆ ||ಕಾರುಣಿಕ ನೀನೆಂದು | ಸಾರಿರುವ ತವಪಾದದೂರ ಮಾಡಲಿ ಬೇಡವೊ ||ಆರು ಕಾಯುವರಿಲ್ಲ | ವಾರೀಜ ಜಾಂಡದೊಳುಧೀರ ಗುರು ಗೋವಿಂದ | ವಿಠಲ ಬಹು ಆಪ್ತಾ | ಗೋಪ್ತಾ 3
--------------
ಗುರುಗೋವಿಂದವಿಠಲರು
ಬೇಡೆಲೊ ಜೀವಾ ಜನಿಸಲೆ ಬೇಡೋ ಪ ಬೇಡ ನಿಜಸುಖ ದೊರೆಯದು ನೋಡೋ ಅ.ಪ ಹೆಣ್ಣೋ ಗಂಡೋ ಆಗಿ ಮೆರೆಯುವೆಮಣ್ಣು ಹೊನ್ನಿಗೆ ನೀ ಹಾತೊರೆಯುವೆಉಣ್ಣುತ ಪ್ರಾರಬ್ಧವ ಬಾಯ್ದೆರೆಯುವೆಹಣ್ಣಾಗುವೆ ನೀ ಪರೀಕ್ಷೆ ಮಾಡೊ 1 ಆರು ಹಗೆಗಳು ಗಡ ಮುತ್ತುವವೊಮೂರು ತಾಪಗಳು ಕಡು ಹೊತ್ತುವವೊನೂರೊಂದೊಗಟಗಳಿರದೊತ್ತುವವೊಪಾರಾಗಲು ಬಿಡವೆಂದಿಗು ಕೇಡೋ 2 ಹುಟ್ಟು ಸಾವುಗಳ ಸುಳಿಯಲಿ ಸುತ್ತುವೆಒಟ್ಟು ಮರಳಿ ಸಂಚಿತವನು ಬಿತ್ತುವೆ ಗಟ್ಟಿಸಿ ಗದುಗಿನ ವೀರನಾರಾಯಣನೆಹುಟ್ಟಿಸಬೇಡೆಂದಿಚ್ಛಿಸಿ ಬೇಡೋ 3
--------------
ವೀರನಾರಾಯಣ
ಬ್ಯಾಡ ಬ್ಯಾಡಿರೆಂದ ಅವರೊಳು ಪಂಥಬ್ಯಾಡ ಬ್ಯಾಡಿರೆಂದು ಬ್ಯಾಡ ಬ್ಯಾಡ ಪಂಥ ನೋಡಿಕೊ ರುಕ್ಮಿಣಿಮಾಡೋರು ಮುಖಭಂಗಬೇಡಿಕೊಂಡೆನು ಭಾವೆ ಪ. ಹರದೆಯರಾಡಿದ ಮಾತು ಹರಿಯು ಕೇಳುತಬೇಗ ಕರೆಯ ಹೋಗೆಂದ ಮಡದಿಯರ ಕರಿಯ ಹೋಗೆಂದ ಮಡದಿಯರ ದ್ರೌಪತಿಯೆಸರಿಯಲ್ಲ ಪಂಥ ಬಿಡಿರೆಂದ1 ಹಾದಿ ಬೀದಿಯ ಮಾತು ಸಾಧಿಸುವರೆ ನೀವುವೇದಾಂತ ಮಳೆಯ ಗರೆದಾರುವೇದಾಂತ ಮಳೆಯ ಗರೆದಾರು ನಿಮ್ಮ ಮುಖಆದೀತು ಸಣ್ಣ ಸಭೆಯೊಳು 2 ಅತ್ತಲಿತ್ತಲೆ ಮಾತು ಜತ್ತು ಮಾಡೋರೆನೀವುಶ್ರುತ್ಯರ್ಥವೆಲ್ಲ ಸುರಿಸೋರುಶ್ರುತ್ಯರ್ಥವೆಲ್ಲ ಸುರಿಸೋರು ನಿಮ್ಮಮುಖ ಬತ್ತೀತು ಒಂದು ಕ್ಷಣದಾಗೆ 3 ಮಂದರಧರ ತನ್ನ ತಂಗಿಯರ ಕರೆಯೆಂದು ಮಂದಹಾಸದಲಿ ನುಡಿದನುಮಂದಹಾಸದಲಿ ನುಡಿದನು ಭಾವೆರುಕ್ಮಿಣಿ ಬಂದರು ಭಾಳೆ ವಿನಯದಿ4 ಆರು ಮಂದಿ ಹರಿಯ ನಾರಿಯರುಹದಿನಾರು ಸಾವಿರ ಮಂದಿ ಸಹಿತಾಗಿಹದಿನಾರು ಸಾವಿರ ಮಂದಿ ಸಹಿತಾಗಿ ಬಂದರು ನಾರಿ ದ್ರೌಪದಿಯ ಕರೆಯಲು5 ನೂರುಮಂದಿ ಹರಿಯನಾರಿಯರುತಂತಮ್ಮ ಹಾರಭಾರಗಳ ಅಲವೂತಹಾರಭಾರಗಳು ಅಲವೂತ ಬಂದರು ನೀರೆ ಸುಭದ್ರೆಯು ಕರೆಯಲು 6 ಪನ್ನಂಗ ವೇಣಿಯರು ಮನ್ನಿಸಿ ಹರಿಯಾಜ್ಞೆಚನ್ನ ರಾಮೇಶನ ಮಡದಿಯರು ಚನ್ನ ರಾಮೇಶನ ಮಡದಿಯರು ಬಂದರುಕನಿ ದ್ರೌಪತಿಯ ಕರೆಯಲು 7
--------------
ಗಲಗಲಿಅವ್ವನವರು
ಭಕ್ತ ಪ್ರಹ್ಲಾದಗೆ ಆರುತಿ ಮಾಡುವೆನಾ ಪ ಆರುತಿ ಮಾಡುವೆ ನಾರಿಯ ಗರ್ಭದಿ ನಾರದ ಮುನಿಯಿಂದ ನಾರವ ಪಡೆದಗೆ ಅ.ಪ ಶಾಲೆಯೊಳಗೆ ದೈತ್ಯ ಬಾಲಕರಿಗೆ ಸಿರಿ ಲÉೂೀಲನೆ ಪರನೆಂದು ಪೇಳಿದ ಬಾಲಕಗೆ 1 ನಂದತೀರ್ಥರ ಮತಸಿಂಧುವಿಗೆ ಪೂರ್ಣ ಚಂದ್ರನೆಂದೆನಿಸಿದ ಚಂದ್ರಿಕಾರ್ಯರಿಗೆ 2 ವಂದಾರು ಜನರಿಗೆ ಮಂದಾರನೆನಿಸಿದ ನಂದದಾಯಕ ಸುಧೀಂದ್ರಕುಮಾರಗೆ 3 ವೃಂದಾವನದೊಳಗೆ ನಿಂದು ಶೇವಕಜನ ವೃಂದಾಪಾಲಕ ರಾಘವೇಂದ್ರಯತೀಂದ್ರಗೆ 4 ಧರೆಯೊಳು ಶರಣರ ಪೊರೆವ ಕಾರ್ಪರ ನರಹರಿ ಯ ನೊಲಿಸಿದಂಥ ಪರಿಮಳಾಚಾರ್ಯರಿಗೆ5
--------------
ಕಾರ್ಪರ ನರಹರಿದಾಸರು
ಭಕ್ತಿಯನು ಪಾಲಿಸುತ ಭಕ್ತರನು ಪಾಲಿಸುವ ಮುಕ್ತಿದಾಯಕ ಹರಿಯ ಸೇವೆಯನು ಮಾಳ್ಪೇ ಪ ಪಂಚೇಂದ್ರಿಯವ ಗೆದ್ದು ಪಂಚಾಮೃತಗಳಿಂದ ಕಂಚಿಪುರ ವಾಸಿಯ ಕಾಯವನು ತೊಳೆದೂ 1 ಆರು ಅಂಗಳ ಜೈಸಿ ಆರು ಶಾಸ್ತ್ರಗಳಿಂದ ಧಾರೆ ಪುರವಾಸಿಗೇ ಗಂಧ ಲೇಪಿಸುತಾ 2 ಚಾರು ವೇದಗಳಿಂದ ನಿತ್ಯ ಪುಷ್ಪವೇರಿಸುತ 3 ಎಂಟ ಕೀಳರ ಗೆದ್ದು ತುಂಟರೈವರ ಕೊಂದು ಬಂಟನಾಗುತ ಹರಿಯ ಮಹಿಮೆಯನು ಭಜಿಸಿ 4 ಶಾಪ ತಾಪವ ಕಳೆದು ತ್ರಿಪುರಾರಿ ವದ್ಯನಿಗೆ ಧೂಪದೀಪಗಳಿಂದ ಆರತಿಯ ಬೆಳಗೀ 5 ಅನುಮಾನವನು ತ್ಯಜಿಸಿ ಶ್ರೀ ಚೆನ್ನಕೇಶವನಿಗೆ ತನುಮನ ಧನದಿಂದ ಆತ್ಮವರ್ಪಿಸುವೇ 6
--------------
ಕರ್ಕಿ ಕೇಶವದಾಸ