ಒಟ್ಟು 494 ಕಡೆಗಳಲ್ಲಿ , 77 ದಾಸರು , 426 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಯಮಾಂ ಪರಮೇಶಚಿತಕಾಲಿ ಸಂತತಮಂಬಿಕೇಶಭೂರಿಲೀಲ ಶಂಕರವಿಯತ್ಕೇಶಕರುಣಾಲಯಹೃತಪಶುಪಾಶಧೃತಶೂಲ ವಿಶಾಲ ಕಪಾಲ ಕರಾಲಕಂ-ಕಾಲಿಕಾಕೂಲ (?) ವಿಲೋಲಾಸ್ಥಿಮಾಲಾ ಪ ವಾರಣಾಸುರ ಚರ್ಮಚೇಲಸುರವಾರಸೇವಿತ ಗಾನಲೋಲಭಕ್ತಾಧಾರ ಸಕಲ ಜಗನ್ಮೂಲನಿರ್ವಿಕಾರ ಮೃಕಂಡು ಕಸಾಲಹಾರ ಹೀರ ಮಂದಾರ ಪಟೀರ ನೀಹಾರಗೋಕ್ಷೀರ ಕರ್ಪೂರ ಸುಧಾರಸಗೌರ1 ವ್ಯೋಮತರಂಗಿಣೀಜೂಟಜಿತಕಾಮಪಾಲಿತ ಸರ್ವಖೇಟವಿತತಾಮಲಾಂಬರ ಪುಷ್ಪವಾಟರಘುರಾಮಪೂಜಿತ ಪಾದಪೀಠಪೂರ್ಣಕಾಮಾತಿಧಾಮಾಭಿರಾಮ ನಿಸ್ಸೀಮಸುತ್ರಾಮ ಮುಖ್ಯಾಮರಸ್ತೋಮಲಲಾಮ 2 ಗೋಪತಿರಾಜಿತುರಂಗಘೋರಪಾಪಾಂಧಕಾರಪತಂಗದಿವ್ಯತಾಪಸಹೃದಯಾಬ್ಜಭೃಂಗವಿಶ್ವವ್ಯಾಪಕನಿಗಮಾಂತರಂಗಯಾಮಿನಿಪಕಲಾಪಾದ್ರಿಚಾಪರಮಾಪತಿರೂಪನಿರ್ಲೇಪ ಕೆಳದಿ ರಾಮೇಶ ಚಿದ್ರೂಪ 3
--------------
ಕೆಳದಿ ವೆಂಕಣ್ಣ ಕವಿ
ಪಾಲಿಸೆಮ್ಮನು ವೆಂಕಟೇಶಾ ನಂಬಿದೆ ನಿನ್ನ ಪಾದಾ ಸಲಹೋ ಗಿರೀಶಾ ಪಾಲಿಸು ಪನ್ನಗಾ ಚಲವಾಸಾ ಪಾಲಿಸುವ ನ್ನ ಸರ್ವೇಶಾ ಪ ಅನುದಿನ ಕೊಂಡಾಡುವೆನಾ ಪತಿತ ಪಾವನ ನೀನೇಗತಿಯೆಂದು ನಂಬಿದೆ ಸನ್ಮತಿಯ ಪಾಲಿಸು ದೇವಾ ಅಹಿಗಿರಿ ನಿಲಯಾ 1 ಕರಣಶುದ್ಧನ ಮಾಡಿ ಕರೆದುಕೋ ಯನ್ನನು ಕರುಣಾಕರ ವೆಂಕರಾಯಾ ಜೀಯಾ2 ಅಗಣಿತ ಸರಿಯಾರು ನಿನಗೇ ಮೂಲೋಕದ ದೊರೆಯೇ 3 ಕರೆಕರೆ ಸಂಸಾರದೀ ಕೊರಗುತ್ತ ಮರುಗುತ್ತಲಿಹೆ ಭರದೀ ಕಣ್ದೆರೆದು ನೋಡೆಮ್ಮನು ಕನಕಾದ್ರಿಗೊಡೆಯಾ4 ಅರ್ಥಿಯಿಂದಲಿ ನಿನ್ನ ಬಲು ಪರಿಯಿಂದಲಿ ನುತಿಪೆನಾ ಸತ್ಯ ಮೂರುತಿ ನೀನೆ ಹತ್ತಿರ ಕರೆದು ಸಲಹೋ 5 ಹಿಂದೆ ಪ್ರಹ್ಲಾದನ ನುಡಿಯಾ ಕೇಳಿ ನೀ ಕಂಬದಿಂದೊಡೆದು ಬಂದೆ ಅಂಧಕಾರದಿ ಮುಳುಗಿ ಮುಂದೆ ಕಾಣದಲಿರುವೆ ಒಡೆಯ ಇಂದಿರೆ ರೆಮಣಾ 6 ವರವ ಕೊಡುವೇ ಇಷ್ಟಾರ್ಥಗಳ ಕೊಡುವೆ ವೆಂಕಟವಿಠಲಾ 7
--------------
ರಾಧಾಬಾಯಿ
ಪಾಲಿಸೈಯ್ಯ ಇವಳಾ ಶ್ರೀ ಭೂತರಾಜರ ಹೃನ್ಮಂದಿರ ನಿಲಯ ಧವಳ ಗಂಗಾವಾಸಿ ಹಯಮುಖನ ತನಯ ವಾಗೀಶಗುರು ಅರ್ಚಕಾ ಪ ನಿತ್ಯ ನಿನ್ನಲ್ಲಿಶ್ರೀಹರಿಯು ಅನುಗಾಲ ಕೋಲಾಹಲದೆ ಮಾಳ್ಪ ಆನಂದ ಕ್ರೀಡೆಗಳ ಕಾರುಣ್ಯರೂಪದಲಿ 1 ಸತಿ ಭಾರತಿಯು ಪರುಶುಕ್ಲಳೊ ಸತತ ಧ್ವನ್ತದುರಾಗಮಾ ನೀನೆಂದು ಸಾರುತಿದೆ ಶೃತಿಯು ಶೃತಿವೇದ್ಯ ನೀನೈಯ್ಯ ಶೃತಿಯಿಂದ ನೀ ಗಮ್ಯ ಶೃತ್ಯರ್ಥರೂಪ ನೀನೆನಗೆ ಸತತಾ 2 ನಾ ಪಾಮರಕೆ ಪಾಮರನು ಎಂದೆಂದು ಮಮಸ್ವಾಮಿ ನಾನು ತುತಿಸಲಾಪೆನೆ ನಿನ್ನ ನಿರ್ದೋಷಗುಣರಾಶಿಯಾ ಗಾನಮಾಡಿ ವೈರಾಗ್ಯ ಶಕ್ತಿ ಭಕ್ತ ಯುಕ್ತಿ ರಾಘವ ಎಮಗಿಲ್ಲವೆನುತಾ ಬಾಗಿ ಬಗ್ಗಿ ಹಾರುವುದು ಪೀಠಕೆ ಸತತ ಶಿವಶೇಷ ಗುರುತಾದಿ ಸುರಕೋಲಿನಿಕರಾ 3 ಒಂದು ಅರಿಯದಾಕಂದ ಇಂದಿರೆಯು ನಂಬಿಹಳು ಗತಿದಾತನೆಂದು ಸತತ ಅಂತರಂಗದಿ ನಲಿವ ಮಮತೆ ನಾನಿನ್ನ ನಿಜ ದೂತನೆಂದು ಹೌದಾದರವಳ ಮನ ಸೆಳೆದು ನಿನ್ನಲ್ಲಿ ಶ್ರೀಕೃಷ್ಣನಲಿ ಬಿಡು ಅವಳ ವಾಜಿವದನಾರ್ಚಿಶ್ರೀವಾದಿರಾಜ 4 ಜಾಗರ ಭಾರತೀಶ 5
--------------
ಗುರುತಂದೆವರದಗೋಪಾಲವಿಠಲರು
ಪಾಲಿಸೋ ಫಂಡರಿಪುರಾಯಾ ಪಾವನ ಕಾಯಾ ಪ ಶ್ಲೋಕÀ : ತರುಣ ತುಲಸಿಮಾಲಾ ತಪ್ತಗಾಂಗೇಯ ಚೇಲಾ ಶರಧಿ ತನಯಲೋಲಾ ಶಕ್ವರೀಕಾರಿ ಫಾಲ ಶಿರಿ ಅಜಭವ ಮೂಲಾ ಶುದ್ಧ ಕಾರುಣ್ಯ ಲೀಲಾ ವೈಜಯಂತಿ ಮಾಲಾ ಕುಂಡಲ ಕೇಯೂರ ಕೌಸ್ತ್ತುಭ ಲೋಕದಿ ವ್ಯಾಪ್ತಾ ದೋಷ ಸಿರ್ಲಿಪ್ತ ದೇವರ ದೇವಾ ಧರುಮಾದ್ಯರ ಭಾವಾ 1 ಅಮಿತ ಸುಗುಣಧಾಮಾ ಆತ್ಮಭೂಪೂರ್ಣ ರಾಮಾ ಅಮರಕುಲಲಲಾಮ ಅಬ್ಜಧಾಮಾಭಿರಾಮಾ ಯಮಿಕುಲೋದಧಿ ಸೋಮ ಯಜ್ಞ ಭೃದ್ಯಜ್ಞ ನಾಮಾ ಕರ್ಮ ಸಂರಕ್ಷಿತ ಸರ್ವ ಲೋಕಾ ವಿತತ ಮಹಿಮ ವಿಶ್ವನಾಟಕ ವತ್ಪ್ರ ಘೋಟಕಾ ಶೋ ನಳಿನ ಜಾಂಡೋದರಾ ಸರ್ವರಾಧಾರಾ ಸಂತತ ನಿರ್ವಿಕಾರಾ ಮತಿ ಮಂದನಾಗಿ ನಿನ್ನನು ಬಿಟ್ಟೆ ಮ ಬಟ್ಟೆ 2 ಶ್ಲೋಕ : ಜನನ ಮರಣ ದೂರ ಜಂಗಮಾಚಾg ವಿಹಾರಾ ದನುಜವನ ಕುಠಾರಾ ದೀನಮಂದಾರ ಧೀರಾ ಪ್ರಣತ ಭಯ ವಿಹಾರಾ ಪ್ರಾಕೃತಾತೀತ ಸಾರಾ ದಿನಪನಿಭ ಶರೀರಾ ದುಃಖವಾರಿಹ ಸಮೀರಾ 3 ವನಧಿ ಜಿತಾಸುರಯೂಥ ನಿರ್ಮಲ ಶ್ರುತಿಗಾಥಾ ಎನ್ನ ಸಂತತ ಸಂಪ್ರಸನ್ನಾ ಜೀಯ ಕರಣಾದಿ ಪಿಡಿಕಯ್ಯಾ ಗೋಪಕುಮಾರಾ 3 ಕಮಠ ಕೋಲಾ ಶತ್ರುಕಾಶ್ಯಪಿಬಾಲಾ ನೃಪಕುಲ ಈರವಾಳಾ ನೀಲಕಂಠಾಸ್ತ್ರಕಾಲಾ ದ್ರುಪದತನಯ ಪಾಲಾ ದುರವರ್ಜಿತದುಕುಲಾ ನಿರ್ಮಲ ಓಂಕಾರಾ ಪರಮ ಪ್ರೀಯ ಜಾಮಿ ಕಳೆದ್ಯೊ ತಾಪವಾ 4 ಶ್ಲೋಕ : ನಗಧರ ನಳಿನಾಕ್ಷ ನಾಕನಾಥಾದ್ಯ ಪಕ್ಷ ನೃಗ ನಗಪತಿ ಶಾಪಾ ನಿರ್ವಹಕಾರ ಶ್ರೀಪಾ ಭೃಗು ಮುನಿಗೇಯಾ ಭೂತನಾಥ ಸಹಾಯ ಅಗಣಿತ ಅಹಿತರನಳುಹಿದಾ ತೋರಿದೆ ಸತ್ಪುತ್ರರಾ ವಒತ್ತಿ ಕುಂತಿನಂದನಾ ಖಂಡ್ರಿಸಿದ್ಯೊ ಕೃಪಾಳು 5 ಶ್ಲೋಕ :ಶುಭತಮ ಸುಖತೀರ್ಥಾರಾಧ್ಯ ಸದ್ದಾನಪಾತ್ರಾ ಇಭವರರಿಪು ಹತಾನ ವಿಶ್ವಜನ್ಮಾವಿಕರ್ತಾ ಯುಗ್ಮ ಪ್ರಸಾದಾ ತರುಜನ್ಮ ವಿದೂರಾ ನಿರ್ಗುಣ ನಿರಂಜನಾ ಗೋಪರೊಡಗೂಡಿ ಮೆದ್ದೆ ತೋರಿದೆ ದಯಸಿಂಧೂ 6 ಶ್ಲೋಕ :ಅತಿವಮಲಸುಗಾತ್ರ ಅಖಿಳಲೋಕೈಕ ಪಾತ್ರಾ ಷತತಿಜದಳನೇತ್ರಾ ವೃತ್ತಹಾದ್ಯ ಮರಮಿತ್ರಾ ಶ್ರುತಿಕಮಂಜ ಸೂತ್ರಾ ಸ್ತುತ್ಯ ಪಾವನ ಪವಿತ್ರಾ ಕಳತ್ರ ನಿನ್ನಯ ದಿವ್ಯ ಖ್ಯಾತಿ ಈ ನಿತ್ಯ ಸುಖಿಸೋರು ಆನಂದಾಬ್ಧಿ ಸದ್ಗತರೋ ಮಾನವ ಜನಕ್ಲೇಶ ಭಂಜನಾ ಭಾಷಾ ಎನ್ನಯ ಅಭಿಲಾಷಾ 7 ಶ್ಲೋಕ :ವನರುಹಭವತಾತಾ ವೀತ ತನ್ಮಾತ್ರಭುತ ದ್ಯುನದಿ ಜಲವಿಧೂತ ದಿವ್ಯ ಪಾದಾಂಬುಜಾತಾ ಅನಿಲತನಯ ಪ್ರೀತಾ ಅತ್ರಿಸದ್ವಂಶಜಾತಾ ಅನಿಮಿಷಜಯಸೂತಾ ಆನತೇಷ್ಟಪ್ರದಾತಾ ಮಂಗಳಶ್ರೇಣಿ ಲೋಕೈಕಸತ್ರಾಣಿ ಶರಣು ಹೊಕ್ಕರ ಕಾಯುವ ಛಲದಂಕಾ ಕಾಳಿಂಗನ ಬಿಂಕಾ ಬಿಡಿಸಿದ್ಯೊ ನಿಷ್ಕಳಂಕಾ ಮುರ ದಂತವಕ್ತ್ರಾದ್ಯರ ಹಿಂಸಾ ಬಿಡಿಸಿದೆಯೋ ಓಜಿಷ್ಠಾ 8 ಶ್ಲೋಕ :ಹನುಮನತ ಪಾದಾಬ್ಜಹಂಸ ಸಂವಕ್ತ್ರುಕುಬ್ಜಾ ತನುವಿಕೃತ ವಿನಾಶಂ ಕಾಳಿ ಜಿಹ್ವಾಶುದೇಶಂ ದನುಜವಿಕರಾಳ ಮತ್ತೆ ಪೌಂಡ್ರೇ ಶೃಗಾಲಂ ಮೋದ ಸುಪದ ಮೂರುತಿಯನ್ನು ತೋರು ಮಾತಾ ಲಾಲಿಸು ಜಗನ್ನಾಥ ನಿನ್ನವರಿಗೀಯೋ ಶ್ರೀಶಾ 9
--------------
ಜಗನ್ನಾಥದಾಸರು
ಪಾವನೀ ಆವಹಿ ಮಾಂ ಪ ಪಾವನಿ ಪಾತಕಾರಣ್ಯ ಮಹಾ ಪಾವಕÀ ನೀನಾದ್ಯೊ ಘನ್ನ ಆಹಾ ಆವಕಾಲದಲ್ಲಿ ಭಾವಜಜನಕನ ಸೇವೆಯೊಳಿರುವಂಥ ಭಾವ ಪಾಲಿಸೊ ದೇವ ಅ.ಪ ಪ್ರಾಣಾದಿ ಪಂಚರೂಪಕನೆ ಸುರ ಗಣ ಕರಾರ್ಚಿತ ಪಾದಯುಗನೆ ಗುಣ ಗಣನಿಧಿ ಬಾರತೀಧವನೇ ಜಗ ತ್ರಾಣ ಕಾರಣನೆ ಮಾರುತನೇ ಆಹಾ ಚಾರು ಚ ರಣ ವಂದಿಪೆ ಜಗತ್ಕಾರಣಕರ್ತನೇ 1 ಖದ್ಯೋತ ಶತ ನಿಭ ಚರಣಾ ಅನಾದ್ಯ ಹರಣ ಸದ್ಯ ವಿದ್ಯೋತ ವೇದಾಂತಾಭರಣಾ ಅನ ವಧ್ಯ ಸ್ವಭಕ್ತಾಂತಃ ಕರಣಾ ಆಹಾ ವಿದ್ಯಾರಮಣ ನೀನೆ ಸದ್ಯೋಜಾತಗೆ ಸು ವಿದ್ಯಾ ಪೇಳಿದ್ಯೋ ಪ್ರದ್ಯುಮ್ನನ ತೋರಿಸೋ 2 ಶ್ರೀನಾಥನಿಗೆ ಪ್ರತೀಕಾ ಬಾಲ ಭಾನುಕೋಟಿ ಪ್ರಕಾಶಾ ಏನು ಕರುಣಾಳೊ ಭಕ್ತಾಭಿsಲಾಷಾ ಅನು ಸಾರದಿ ಪೂರ್ತಿಪ ಈಶಾ ಆಹಾ ಹನುಮದಾದಿರೂಪ ಘನವಾಗಿ ಧರಿಸಿ ನೀ ವನಧಿ ಲಂಘಿಸಿ ಹರಿ ವನಿತೆಯ ತಂದಿತೆÀ್ತ 3 ಸೂತ್ರನಾಮಕ ಶುಭಗಾತ್ರಾ ಚಿತ್ರ ಚಂiÀರ್i ಪಿತಾಮಹಪುತ್ರಾ ಗೋತ್ರ ಧರಮುಖ ದ್ಯು ಸ್ವಕÀಲತ್ರಾ ಮಿತ್ರ ತಾಡನ ಹರ್ತ ಅರ್ಥಗಾತ್ರಾ ಆಹಾ ಸುತ್ರಾಮ ಮುಖ ತ್ರಿನೇತ್ರಾಂತ ಸುರಕೃತ ಸ್ತೋತ್ರ ಪದಾಂಬುಜ ಮದಂತ್ರದಿ ನಿಲಿಸಯ್ಯಾ 4 ಘೋಟ ಖೇಟ ಕಂಠೀರವ ವದನಾ ಭವ ಕಾಟ ತಪ್ಪಿಸಿ ಪೊರಿ ಎನ್ನಾ ಕಿಟ ಮ ರ್ಕಟ ರೂಪನೆ ನಿನ್ನಾ ಭಕ್ತ ಕೋಟಿಯೊಳಗೆ ಸೇರಿಸೆನ್ನಾ ಆಹಾ ದಿಟ್ಟ ಮಹಿಮ ಗುರು ಜಗನ್ನಾಥ ವಿಠಲನ್ನ ಮುಟ್ಟ ಭಜಿಪ ದಿವ್ಯ ದÀೃಷ್ಟಿಯ ಪಾಲಿಸೋ 5
--------------
ಗುರುಜಗನ್ನಾಥದಾಸರು
ಪಿಡಿ ಎನ್ನ ಕೈಯ್ಯ ರಂಗಯ್ಯ ಪ ಪಿಡಿ ಎನ್ನ ಕೈಯ ಪಾಲ್ಗಡಲ ಶಯನ ಮೋಹ ಮಡುವಿನೋಳ್ ಬಿದ್ದು ಬಾಯ್ಬಿಡುವೆ ಬೇಗದಿ ಅ ನೀರಜನಾಭಾ ನಂಬಿದೆ ನಿನ್ನ ನೀರಪ್ರದಾಭಾ ಕಾರುÀಣ್ಯ ನಿಧಿ ಲಕ್ಷ್ಮೀನಾರಸಿಂಹನ ಪರಿ ವಾರಸಹಿತ ಈ ಶರೀರದೊಳಡಗಿರ್ದು ಘೋರತರ ಸಂಸಾರ ಪಂಕದಿ ಚಾರು ವರಿವನ ದೂರ ನೋಡುವ ರೇ ರಮಾಪತೆ ಗಾರುಮಾಡದೆ ಚಾರುವಿಮಲ ಕರಾರವಿಂದದಿ 1 ಅನಿಮಿತ್ತ ಬಂಧೋ ನೀನೇ ಗತಿ ಗುಣ ಗಣಸಿಂಧೋ ವಿಧಿ ಭವಸಂಕ್ರಂ ದನ ಮುಖ್ಯ ವೇದ ಸನ್ಮುನಿ ಗಣಾರ್ಚಿತ ಪಾದಾ ಅನುಜ ತನುಜಾಪ್ತಾನುಗ ಜನನೀ ಸದನ ಸಂ ಹನÀನ ಮೊದಲಾದಿನಿತು ಸಾಕುವ ಘನತೆ ನಿನ್ನದು ಜನುಮ ಜನುಮದಿ 2 ಶ್ರೀ ಜಗನ್ನಾಥವಿಠ್ಠಲ ದ್ವಿಜರಾಜ ವರೂಥ ಓಜಕಾಮಿಕ ಕಲ್ಪ ಭೂಜ ಭಾಸ್ಕರ ಕೋಟಿ ತೇಜ ಮನ್ಮನದಿ ವಿರಾಜಿಸು ಪ್ರತಿದಿನ ಈ ಜಗತ್ರಯ ಭಂಜನನೆ ಬಹು ಸೋಜಿಗವಲಾ ನೈಜ ನಿಜನಿ ವ್ರ್ಯಾಜದಿಂದಲಿ ನೀ ಜಯಪ್ರದ ನೈಜ ಜನರಿಗೆ ಹೇ ಜಗತ್ಪತೇ 3
--------------
ಜಗನ್ನಾಥದಾಸರು
ಪುಂಡರೀಕ ವರದ ಹರಿ | ವಿಠಲ ಪೊರೆ ಇವಳಾ ಪ ತೊಂಡ ವತ್ಸಲ ದೇವ | ಕಾರುಣ್ಯ ಸಿಂಧೋಅ.ಪ. ಮೂರ್ತಿ ಸಂದರ್ಶನವಪೊತ್ತುದಕೆ ನಾನೀಗ | ಇತ್ತೆ ಉಪದೇಶಾ 1 ತಾಪ | ಎತ್ತಿವಳ ಸಲಹೋ 2 ಪರತಮಾತ್ಮಕ ಜ್ಞಾನ | ಎರಡು ಮೂರ್ಭೇದಗಳಅರಿವಾಗುತಿವಳೀಗೆ | ಸಾಧನವ ಗೈಸೋಹಿರಿಯರಾಶೀರ್ವಾದ | ನೆರವಾಗಿ ಇವಳ ಭವಶರಧಿಯನೆ ಬತ್ತಿಸೈ | ಸುರಸಾರ್ವಭೌಮಾ 3 ಬೇಕಾದ ವರಗಳನು | ನೀ ಕರುಣಿಸಿವಳೀಗೆಸಾಕುವಾಭಾರ ನಿನ್ನದು | ಶ್ರೀ ಕರಾರ್ಚಿತನೇಶೋಕ ಸುಖ ವೆರಡಕ್ಕು | ನೀಕಾರಣೆಂಬಂಥವಾಕನನುಭವ ವಿರಲಿ | ಶ್ರೀ ಕಾಂತ ಹರಿಯೇ 4 ಪೂವಿಲ್ಲ ಪಿತ ನಿನ್ನ | ಭಾವದಲಿ ಮೈ ಮರೆದುಸಾವಧಾನದಿ ಹರಿ ಪೊಗಳಿ | ಹಿಗ್ಗುವಂತೆಸಗೋಪಾವನಾತ್ಮಕ ಗುರೂ | ಗೋವಿಂದ ವಿಠ್ಠಲನೆನೀವೊಲಿದು ಪ್ರಾರ್ಥನೆಯ | ಓದಿ ಸಲಿಸುವುದೋ 5
--------------
ಗುರುಗೋವಿಂದವಿಠಲರು
ಪುಣ್ಯೋದವೇ ಈ ಪುಣ್ಯಭೂಮಿಯೊಳು ಪನ್ನಂಗಶಯನ ಸನ್ನುತಿಪ ದಾಸರಿಗೆ ಪ ಕಡುಸಿರಿವಂತರಾದೊಡೆ ಬಡವರ ಬಾಯ್ಬಡಿಯದೆ ಕೊಡುವಿಡುವ ಕೆಡದತಿ ಪುಣ್ಯ ಬಡತನವಿರ್ದಡೆ ಎಡೆಬಿಡದೆ ಒಡಲೊಳು ಜಡಜಾಕ್ಷನಡಿಧ್ಯಾನ ಹಿಡಿದ ಮಹಪುಣ್ಯ 1 ಮಡದಿಯರೊಂದಿಗೆ ಬಿಡದೆ ಸಂಸಾರಗೈಯೆ ದೃಢಯುತರು ಮನೆಯೊಳಗಡಿಯಿಡುವ ಪುಣ್ಯ ಸಡಗರದಿ ಮಕ್ಕಳನ್ಹಡೆದು ಮೋಹದಿ ಜಗ ದೊಡೆಯನ್ಹೆಸರಿಟ್ಟು ನುಡಿಯುವ ಪುಣ್ಯ 2 ತಿರುಕರಾಗಿರ್ದಡೆ ತಿರಿದು ತಂದನ್ನವನು ಹರಿಯಪ್ರಸಾದವೆಂದು ತಿರಿದುಣುವ ಪುಣ್ಯ ಪರಮಪುರುಷನ ಚರಣ ನಿರುತ ಸ್ಮರಿಪ ಪುಣ್ಯ 3 ಹಿಂದೆ ಮುಂದೆ ತಮಗೆ ನಿಂದೆಯಾಡಲು ಆ ನಂದದಿ ಹಿಗ್ಗದ ಕುಂದದ ಪುಣ್ಯ ಮಂದಿಮಕ್ಕಳು ಬಿಡದ್ಹೊಂದಿಸಲದು ಹರಿ ಗೆಂದು ಅರ್ಪಿಸಿ ಮನಸೊಂದೆಮಾಡಿದ ಪುಣ್ಯ 4 ನೀರಿನೊಳಿರಲೇನರಣ್ಯದೊಳರಿಲೇನು ಘೋರತಾಪದಿರಲೇನಪಾರಜ್ಞಾನಿಗಳು ಪಾರಮೋಕ್ಷಕ್ಕಧಿಪ ಧೀರ ಶ್ರೀರಾಮಪಾದ ವಾರಿಜದೊಳು ಮನ ಸೇರಿಸಿದ ಪುಣ್ಯರಿಗೆ5
--------------
ರಾಮದಾಸರು
ಪೂತ ಚರಿತೆ ಭೂಮಿಜಾತೆ ಸೀತಾದೇವಿಯೇ ಪ ಪಾತಕಗಳ ಕಳೆದು ಯಮ್ಮನು ಪಾಲಿಸು ತಾಯೆ ಅ.ಪ ದೇವ ವೈರಿಯ ಕೈಯಲಿ ಸೇರಿ ಭೂವರ ಜನಕರಾಯಗೊಲಿದೌ ಭೂವಿವರದೊಳಿಡಲು ಮಾಯದಿ 1 ವಸುಧೆ ಸುರನಿಂದೋಲೆ ಕಳುಹಿಸಿ ಬಿಸಜಾಕ್ಷ ಕೃಷ್ಣನೊಲಿಸಿ ಕೈಪಿಡಿದೆ 2 ಶರಧಿರಾಜನ ಮಗಳೆ ಚಂದ್ರಸೋ ಗುರುರಾಮ ವಿಠಲನರ್ಧಾಂಗಿಕರುಣಿಸಮ್ಮ ಕೃಪಾ ಪಾಂಗಿ 3
--------------
ಗುರುರಾಮವಿಠಲ
ಪೋಪು ಹೋಗೋಣ ಬಾರೋ ರಂಗಪೋಪು ಹೋಗೋಣ ಬಾರೋ ಪ ಜಾಹ್ನವಿಯ ತೀರವಂತೆ ಜನಕರಾಯನ ಕುವರಿಯಂತೆಜಾನಕಿಯ ವಿವಾಹವಂತೆ ಜಾಣ ನೀ ಬರಬೇಕಂತೆ1 ವಾಲೆ ಬರೆದಳಂತೆ2 ಪಾಂಡವರು ಕೌರವರಿಗೆ ಲೆತ್ತವಾಡಿ ಸೋತರಂತೆರಾಜ್ಯವನು ಬಿಡಬೇಕಂತೆ ರಂಗವಿಠಲ ಬರಬೇಕಂತೆ 3
--------------
ಶ್ರೀಪಾದರಾಜರು
ಪ್ರಾಣಾಂತರ್ಗತಪ್ರಾಣ ಅಣು ರೇಣುಚರಾಚರಪೂರ್ಣ ಪ. ಕಾಣೆನು ನಿನ್ನ ಸಮಾನ ಮಾನದ ಪು- ರಾಣಪುರುಷ ಸುತ್ರಾಣ ವರೇಣ್ಯಅ.ಪ. ಪಂಕಜನಾಭ ಶ್ರೀವೆಂಕಟರಮಣನೆ ಕಿಂಕರಜನಮನಃಪ್ರೇಮದನೆ ಶಂಕರಾದಿ ಸುರಸಂಕುಲ ಸೇವಿತ ಶಂಖ ಸುದರ್ಶನ ಗದಾಬ್ಜಹಸ್ತನೆ 1 ಪಾಪಿಯು ನಾ ನೀ ಪಾಪಹ ಪಾವನ ರೂಪ ಪರಾತ್ಪರ ಗೋಪಾಲ ಕಾಪಾಡೆಮ್ಮ ಸಮೀಪಗನಾಗಿ ಜ- ಯಾಪತಿ ಗೋಪತಿ ಶ್ರೀಪತಿ ನೀ ಗತಿ 2 ಚಟುಳ ನೇತ್ರಾವತಿತಟ ನಿಕಟ ಪ್ರಕಟ ವಟಪುರವರ ವೆಂಕಟಧಾಮ ವಟುವಾಮನ ಲಕ್ಷ್ಮೀನಾರಾಯಣ ಪಟುವೀರ್ಯ ತಮಃಪಟಲನಿವಾರಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಬಂದಿದ್ದನೆ ರಂಗ ಬಂದಿದ್ದನೆ ಕೃಷ್ಣ ಬಂದಿದ್ದನೆ ಪ. ಬಂದಿದ್ದನೆ ನಮ್ಮ ಮಂದಿರದೊಳು ಬೆಳ ದಿಂಗಳ ತೆರದೊಳು ಬಂದಿದ್ದನೆ ಅ.ಪ. ಗೆಜ್ಜೆ ಕಾಲ್ಕಡಗ ಸಜ್ಜಿನಿಂದಿಟ್ಟು ಕರ ಕ್ಷಿತಿ ತಳ ವಂದಿತ ಸತಿ ಪದುಮಾವತಿ ಲಕುಮಿ ಸಹಿತ ಕೃಷ್ಣ 1 ರವಿಯ ಕಾಂತಿ ಕೋಟಿ ಪ್ರಭೆ ಕಿರೀಟವು ವರದ ಮಾಧವನು2 ಚತುರ ಹಸ್ತದಿ ಶಂಖ ಚಕ್ರಗದಾ ಪದ್ಮ ಸತಿ ತುಳಸಿಯ ಮಾಲಧರನೆ ಜತೆ ತನ್ನ ಭಕ್ತರ ಹಿತದ ಪೂಜೆಯಗೊಂಡು ವಿತತ ವೈಭವದಿಂದ 3 ವರಪ್ರದ ವೆಂಕಟ ವರಗಳ ನೀಡುತ ತನ್ನ ಚರಣ ತೋರುತ ಭಕ್ತರಿಗೆ ಕೇಸರಿ ತೀರ್ಥವ ಕರುಣದಿ ತೋರುತ ಕರಿವರದ ಕೃಷ್ಣ 4 ಪಂಚಾಮೃತದಭಿಷೇಕವ ಕಂಡೆನೆ ಎನ್ನ ಸಂಚಿತಾರ್ಥದ ಪುಣ್ಯದ ಫಲದಿ ಮಿಂಚಿದ ಪಾಪವ ಕಳೆದರತಿಹರುಷದಿ ಹಂಚಿ ವರದ ಹಸ್ತ ಕಂಚಿ ವರದ ತೋರೆ ಬಂದಿದ್ದನೆ 5 ಕಂಕಣ ಕೈಯೊಳು ಧರಿಸಿಹನೆ ದಿವ್ಯ ಹೇಮ ಶೋಭಿತನೆ ಕಿಂಕರ ವರದ ಮಾಂಗಲ್ಯ ಕಟ್ಟಿದ ಸತಿ ಶಂಕರಾದಿ ಸ್ತುತ ವೆಂಕಟರಮಣನು 6 ಸುರವರÀ ವಂದ್ಯಗೆ ಆರತಿ ಎತ್ತಲು ಕೇಸರಿ ತೀರ್ಥವ ನೀಡಿದನೆ ವರ ಪ್ರಸಾದದ ಮಹಿಮೆಯ ತೋರುತ ಶರಧಿ ಗಂಭೀರನು 7 ಉರುಟಣಿಯ ಮಾಡಿದ ವರಸತಿ ಜತೆಯಲಿ ವರ ಶೇಷಾಚಲನು ತಾನೆ ಹರುಷವ ಬೀರುತ ವರ ಶೇಷನ ಮೇಲೆ ಮೆರೆವ ಶಯನಗೊಂಡು ಹರುಷದಿ 8 ಗಂಧ ಪುಷ್ಪ ತಾಂಬೂಲವಗೊಂಡನೆ ತಂಡ ತಂಡ ಭಕ್ತರ ವಡೆಯ ಉದ್ದಂಡ ಭಕ್ತರಿಗೆ ಉದ್ದಂಡ ವೆಂಕಟ 9 ನಾಟಕಧಾರಿ ತಾ ವಧೂಟಿ ಭೂಪ ಲಕ್ಷ್ಮಿ ಸಹ ನೋಟಕರಿಗೆ ಆನಂದ ತೋರಿದನೆ ಧಾಟಿಧಾಟಿ ರಾಗದಿ ಭಕ್ತರು ಸ್ತುತಿಸೆ ಸಾಟಿಯಿಲ್ಲದ ವೈಭವವ ತೋರುತ ಕೃಷ್ಣ 10 ಕರವ ಮುಗಿದು ಸ್ತೋತ್ರವ ಮಾಡಿದೆನೆ ಎನ್ನ ಕರೆದಾದರಿಸು ಹರಿಗೆ ನಿರುತ ಎಮ್ಮನು ಹಯನೇರಿದನೆ ಭಯಕೃದ್ಭಯ ಹಾರಿ 11
--------------
ಸರಸ್ವತಿ ಬಾಯಿ
ಬಂದು ನಿಲ್ಲೋ ಶ್ರೀಹರೇ-ಬಂದುನಿಲ್ಲೊ ಪ ಇಂದು ಹಿಂದು ನೀನೆಂದಿಗು ತಂದೆ ಗೋ- ವಿಂದ ಅನಿಮಿತ್ತಬಂಧು ಕಣ್ಣಮುಂದೆ ಅ.ಪ ಸ್ವಾಂಶದಿಂದ ಅಭಿವ್ಯಕ್ತಿಯಾದೆ ಪಂ- ಚಾಂಶತೋರಿ ಸರಸ ಜನನ ಮಾಡಿದೆ ಸ್ವಾಂಶನಾಗಿ ಅವತರಿಸಿ ಮೆರೆವ ಸ- ರ್ವಾಂಶದಿಂದಿಹ ತ್ರಿಂಶ ರೂಪನೇ 1 ಸ್ವಗತಭೇದವಿವರ್ಜಿತನೆನಿಸಿ ತ್ರಿಗುಣಮಯದಿ ಬ್ರಹ್ಮಾಂಡ ನಿರ್ಮಿಸಿ ಅಗಣಿತಮಹಿಮಾಧಾರನಾಗಿ ನಿಂದು ಮಿಗೆ ಶೋಭಿಸುವ ವಿರಾಟಮೂರುತಿಯೆ2 ಕಾರಣನೆನಿಸಿದ ಕರ್ಮನಿವೃತ್ತಿಗೆ ಸಾರವಾದ ಜ್ಞಾನಯೋಗ ಮಾರ್ಗವ ನಾರದಾದಿ ಮಹಾಮುನಿಗಳಿಗರುಹಿದ ನರನಾರಾಯಣ ಬದರಿ ಆಶ್ರಯನೇ 3 ಹಂಸಕಪಿಲ ದತ್ತಾತ್ರೇಯ ರೂಪನೆ ಹಂಸರಹಸ್ಯಗಳೆಲ್ಲವ ಪೇಳಿ ಸಂಶಯ ಬಿಡಿಸಿದೆ-ಜೀವಪರಮಾತ್ಮರ ಅಂಶಗಳರುಹಿದ ಹಂಸಮೂರುತಿಯೆ4 ಅಜಪಿತ ನೀ ಗಜರಾಜನ ಸಲಹಿದೆ ಭಜಿಸಿದ ವಾಲಖಿಲ್ಯರ ಕಾಯ್ದೆ ಅಜಹತ್ಯವು ವೃತ್ರವಧೆಯಿಂದ ಕಾಯ್ವ ಬಿ- ಡೌಜನ ಸಲಹಿದ ಗಜರಾಜ ವರದಾ5 ಪುರುಹೂತನ ಅಹಂಕಾರ ಖಂಡಿಸಿ ಕಿರುಬೆರಳಲಿ ಗೋವರ್ಧನಗಿರಿ ಎತ್ತಿ ಪರಿಪಾಲಿಸಿ ಗೋಬೃಂದವನೆಲ್ಲವ ಸುರರಿಂದ ಪೊಗಳಿಸಿಕೊಂಡೆ ಗೋವಿಂದ6 ಬುಧರರಿಯುಲು ಆ ವೇದ ವಿಭಾಗಿಸೆ ಉದಯಿಸಿ ಮುದದಿಂದ ಬದರಿಯ ಸದನದಿ ಬೋಧಿಸುತ್ತಲಿಹ ಬಾದರಾಯಣನೇ7 ಅಖಿಳಾಂಡಕೋಟಿಬ್ರಹ್ಮಾಂಡನಾಯಕ ವಿಕುಂಠಳೆಂಬೊ ಉದರದಿ ಜನಿಸಿ ಲಕುಮಿರೂಪಿಯಾದ ಸುಂದರಿಯ ಕೂಡ ಭೂ- ವೈಕುಂಠ ನಿರ್ಮಿಸಿದ ವೈಕುಂಠಮೂರುತಿಯೆ 8 ಸತ್ಯವ್ರತನೆಂಬೊ ಮನುವಿನುದ್ಧರಿಸಿ ಉತ್ತಮ ಔಷಧಿಗಳೆಲ್ಲವ ಸಲಹಿದೆ ದೈತ್ಯನಾದ ಉನ್ಮತ್ತನ ಕೊಂದು ಶ್ರುತಿಯ ತಂದಿತ್ತ ಮತ್ಸ್ಯಮೂರುತಿಯೆ 9 ಸುರಭಿನೆವನದಿ ಶರಧಿಮಥಿಸೆ ತಾ ಭರದಿ ಬೆನ್ನೊಳು ಧರಿಸಿಹೆ ಮಂದರ ಗಿರಿಧರನೆನಿಸಿದೆ ಕಮಠರೂಪನೆ 10 ಪ್ರಳಯ ಜಲಧಿಯೊಳು ಇಳೆಯನು ಕದ್ದಾ ಖಳಹಿರಣ್ಯನಾ ಶಿರವ ಚೆಂಡಾಡಿ ಜಲಧಿಯ ಶೋಧಿಸಿ ಇಳೆಯನು ತಂದು ಜಲಜಸಂಭವಗಿತ್ತ ಕ್ರೋಢರೂಪನೆ 11 ದುರುಳತನದಿ ತನ್ನ ತರಳನ ಬಾಧಿಪ ಹಿರಣ್ಯಕಶಿಪುವಿನ ಉದರವ ಬಗೆದು ಶರಣನಿಗಭಯವ ಕರುಣಿಸಿ ತೋರಿದ ಸರ್ವವ್ಯಾಪ್ತನೆಂದರುಹಿದ ನರಹರಿಯೇ12 ಬಲಿಯಿಂದಪಹೃತವಾದ ಸಾಮ್ರಾಜ್ಯವ ಸುಲಭದಿಂದಲಿ ಪುರಂದರಗಿತ್ತು ಸಲಹಿದೆ ಒಲಿದು ಬಲಿಯ ಭಕ್ತಿಗೆ ನೀ ಬಾ- ಗಿಲ ಕಾಯ್ದ ವಟು ವಾಮನನೆ 13 ದುರುಳತನದಿ ಆ ಹೈಹಯರೆಂಬ ನರಪರದುರ್ಮದ ಮರ್ದಿಸಲೋಸುಗ ನೃಪರ ಶಿರವನೆಲ್ಲ ತರಿದು ನಿಗ್ರಹಿಸಿದ ಭಾರ್ಗವ ಮೂರ್ತೇ 14 ಶರಧಿ ಬಂಧಿಸಿ ಸೇತುಕಟ್ಟಿ ಕಪಿ- ವೀರರೊಡನೆ ಆ ರಾವಣನಡಗಿಸಿ ಭೂ ಭಾರವನಿಳುಹಿಸಿ ಭೂಮಿಜೆಯನು ತಂದ ಅ- ಸುರ ಮರ್ದನ ದಾಶರಥಿ ರಾಘವ 15 ವಸುಮತಿಭಾರವನಿಳುಹಲೋಸುಗ ವಸುದೇವಸುತ ಶ್ರೀಕೃಷ್ಣನೆನುತಲಿ ಶಿಶುಪಾಲಾದಿಗಳಾಂತಕನೆನಿಸಿದ ಶಶಿಮುಖಿರುಕ್ಮಿಣಿ ಸಹಿತ ಶ್ರೀಕೃಷ್ಣ 16 ವೇದ ಕರ್ಮಗಳಿಗನರ್ಹರೆಲ್ಲರು ಸಾದರದಿಂದಲಿ ಅಧಮರೆಸಗುತಿರೆ ವೇದವಿರುದ್ದವಾದಗಳಿಂದಲೇ ಮೋಹವ ತೋರಿದೆ ಬುದ್ಧಸ್ವರೂಪನೆ17 ದುರುಳತನದಿ ಇಳೆಯಾಣ್ಮರುಗಳು ಕ್ರೂರತನದಿ ಪರಪೀಡಕರಾಗಿರೆ ಪರಿಹರಿಸಲು ಭೂಭಾರಕ್ಕಾಗಿ ಅವ- ತರಿಸಿ ಮೆರೆಯುವ ಕಲ್ಕಿರೂಪನೆ 18 ಏಕರೂಪ ಅನೇಕರೂಪನೆ ಏಕಮೇವ ನೀ ಪ್ರಕಟ ಮಾಡುವೆ ಪಿನಾಕಿ ಪ್ರಮುಖರು ಏಕದೇಶದಿ ಸಾಕಲ್ಯವ ತಿಳಿಯರೊ 19 ದೋಷದೂರ ಶೇಷಾಚಲವಾಸ ಪೋಷಿಸೊ ನಿನ್ನಯ ದಾಸಜನರ ಸರ್ವ ದೋಷಕಳೆದು ಮನೋಕಾಶದಲಿ ನಿಲ್ಲೊ ಶೇಷಗಿರೀಶ ಶ್ರೀ ವೆಂಕಟೇಶನೆ 20
--------------
ಉರಗಾದ್ರಿವಾಸವಿಠಲದಾಸರು
ಬರುತಲಿಹರು ನೋಡಿ ಗುರುವರೇಣ್ಯ ಸುಖತೀರ್ಥ ಯತಿವರರು ಪ ಹರಿದು ಬರುವ ಸುರನದಿಯ ಪ್ರವಾಹದ ತೆರದಲಿ ಪರಿಪರಿ ಪರಿವಾರ ಸಹಿತ ಅ.ಪ ಕರದಲಿ ಪಿಡಿದಿಹ ದಂಡ ಕಮಂಡಲ ಕೊರಳೊಳು ತುಳಸಿಯ ಚಿಗುರಿನ ಮಾಲೆಯು ಅರಿವಾರಿಜ ಲಾಂಛನಗಳಿಂದೊಪ್ಪುವ ವರ ದ್ವಾದಶ ನಾಮಗಳನು ಧರಿಸುತ 1 ಯತಿಗಳು ಗೃಹಿಗಳು ಬ್ರಹ್ಮಚಾರಿಗಳು ಶತಶತ ಸಂಖ್ಯೆಗಳಲಿ ಸೇರಿಹರು ಅತಿ ಸಂಭ್ರಮದಲಿ ನೋಡಲು ಪುರುಷ ರತುನವು ಮಾರ್ಗದ ಖತಿಪರಿಹರಿಸುತ 2 ಅವನಿಸುರರು ಮುಂಬದಿಯಲಿ ತಮ್ಮಯ ಕವಿತೆಗಳಲಿ ಗೋವಿಂದನ ಗುಣಗಳ ನವ ನವ ಸ್ವರದಲಿ ಪಾಡುತ ಕುಣಿಯಲು ಶ್ರವಣ ನಯನಕಾನಂದವ ಬೀರುತ 3 ತ್ವರೆಯಲಿ ಸರಿದು ತಾ ಬರುತಿರೆ ಯುವ ಕೇ- ಸರಿಯ ಧಿಕ್ಕರಿಸುವ ಸಂಭ್ರಮ ಗಮನ ಚರಣಯುಗಳ ಕಾಂತಿಯ ಪಸರಿಸುತಲಿ ಧರಣಿಯ ಪಾವನ ಮಾಡುವ ಬಗೆಯಲಿ 4 ಏನಿರಬಹುದೆಂದು ನೋಡುವರಿಗೆ ಕಾಣಿಸುವುದು ತೇಜದ ಪುಂಜ ಭೂನಿಲಯವ ಬೆಳಗಲು ಅತಿ ನೂತನ ಭಾನು ಉದಯಿಸಿದ ತೆರದಲಿ ಪೊಳೆಯುತ 5 ಪದುಮರಾಗ ಕಾಂತಿಯ ಮೀರಿದ ನಖ ಕೂರ್ಮ ಪ್ರಪದಗಳು ವಿಧಿಭವಮುಖ ಸುರಸೇವಿತ ಜಂಘವು ಮದಗಜ ಕರವನು ಪೋಲುವ ತೊಡೆಗಳು 6 ಪುಷ್ಪ ನಿತಂಬಗಳಲಿ ಪೊಳೆಯುತಲಿಹ ರೇಷ್ಮೆಯ ವಸ್ತ್ರವ ಧರಿಸಿಹರು ಕುಕ್ಷಿಲಲಾಟ ಶಿರೋಧರಗಳಲತಿ ಶ್ರೇಷ್ಠದ ತ್ರಿವಳಿಗಳಿಂದ ರಾಜಿಸುತ7 ಕೆಚ್ಚಿನ ವಕ್ಷಸ್ಥಳವತಿ ಸುಂದರ ಉಚ್ಚ ಪೀವರದ ಸ್ಕಂಧಯುಗಳವು ಸ್ವಚ್ಛದ ಕೆಂಬಣ್ಣದ ಕರತಲದಲಿ ಬಿಚ್ಚಿ ಹಾರುತಿಹ ಧ್ವಜಲಾಂಛನದಿ 8 ಚಂದಿರ ಬಿಂಬವಿದೋ ಪ್ರೇಕ್ಷಕರಾ ನಂದತರಂಗವ ಉಕ್ಕಿಸುತಿಹುದು ಒಂದು ಕಳಂಕವು ಕಾಣದಿರುವ ಅತಿ ಸುಂದರ ಪುರುಷವರೇಣ್ಯರು ಸೊಗಸಿಲಿ 9 ಸುಂದರ ಮಂದಸ್ಮಿತದಿಂ ಶೋಭಿಪ ಕುಸುಮ ತೆರದಲಿ ದಂತಗಳು ಮಂದಿಗಳಿಗೆ ಬಲು ಹರುಷವಿತ್ತು ಅರ ವಿಂದ ನಯನ ಆನಂದತೀರ್ಥ ಮುನಿ 10 ಕಿವಿಯಲಿ ಪೊಳೆಯುವ ತುಳಸಿಯದಳಗಳು ಅವಿರಳ ತೇಜದಿ ಹೊಳೆಯುವ ಕಪೋಲ ಭುವನತ್ರಯಗಳಭೀಷ್ಟವ ನೀಡುವ ಸುವಿಮಲ ಸುಂದರ ಭ್ರಕುಟಿ ವಿಲಾಸದಿ 11 ಅಕಲಂಕ ಶರೀರರು ಬರುತಿಹುದನು ಸಕಲ ಕಲಾಕುಶಲರು ನೋಡಿ ಶಕುತಿಗೆ ಮೀರಿದ ಮಾದರಿಯೆಂದರು ಪ್ರಕೃತಿ ಮಧುರ ಸರ್ವಾಂಗ ಸುಂದರರು 12 ಕಾಂತಿ ಸುಧೆಯ ಪಾನವ ಮಾಡಿರಿ ಸುಖ ಶಾಂತಿ ನಿಲಯರಾಶ್ರಯದಲಿ ಬಾಳಿರಿ ಚಿಂತೆ ಸಂತಾಪಗಳೆಲ್ಲವ ತೊಳೆಯಿರಿ ಸಂತತ ಹರಿದಾಸ್ಯದಲಿ ಪ್ರಸನ್ನರು 13
--------------
ವಿದ್ಯಾಪ್ರಸನ್ನತೀರ್ಥರು
ಬಲ್ಲವಗಿಲ್ಲಿದೆ ವೈಕುಂಠ ಪ ಶÀರೀರ ಹರಿಯ ಪಟ್ಟಣ ಹೃದಯಸರೋಜವಾತನ ಅರಮನೆ ಸೂರ್ಯಾದಿ ದೇವರು ಚಕ್ಷುರಾದಿಗಳಲ್ಲಿದ್ವಾರಪಾಲಕರಾಗಿ ಇಪ್ಪರೆಂದು 1 ನಡೆ ಸರ್ವದಾ ಶ್ರೀಹರಿಯ ಯÁತ್ರೆ ನುಡಿ ಸರ್ವ ಶಬ್ಧಾರ್ಥ ಹರಿಯನಾಮಬಿಡದೆ ಶ್ರೀಹರಿಗೆರಗುವ ಚೇತನಜಡಗಳೆಲ್ಲ ಶ್ರೀಹರಿಯ ಪ್ರತಿಮೆಯೆಂದು 2 ಅನಿರುದ್ಧ ರೂಪಗಳಿಂದಶ್ರೀರಮಣನೆ ಭೋಜ್ಯಗಳಲ್ಲಿಪ್ಪಸಾರ ಅಂಶವನು ಪ್ರದ್ಯುಮ್ನ ಸಂಕರುಷಣಮೂರುತಿಯಿಂದ ಭುಂಜಿಪನೆಂದು 3 ಹರಿ ಚರಾಚರ ಸರ್ವ ಜಗದ್ಭರಿತಮುರಹರನಿದ್ದುದೆ ವೈಕುಂಠನರಹರಿಯಲಿ ನವವಿಧ ಭಕುತಿಗೆಸರಿಸಮವೆಂದಿಗಿಲ್ಲವೆಂದು 4 ಜಾಗರಾದಿಗಳಲ್ಲಿ ವಿಶ್ವಾದಿ ಮೂರುತಿಯೋಗಿ ಶ್ರೀಕೃಷ್ಣನೆ ವಿಷಯಂಗಳಭೋಗಿಪನೆಂಬ ಯೋಗಿಗೆ ವಿಹಿತಭೋಗಂಗಳೆಲ್ಲ ಯಾಗಂಗಳೆಂದು 5
--------------
ವ್ಯಾಸರಾಯರು