ಒಟ್ಟು 713 ಕಡೆಗಳಲ್ಲಿ , 95 ದಾಸರು , 570 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಾಯೆ ಕೇಳೆನ್ನ ಬಿನ್ನಪವ ಬಲು ಮಾಯ ಕಾರನು ಕೃಷ್ಣ ಮಾಡಿದೊಳಿಗವ ಪ ಮಕ್ಕಳೂಳಿಗವ ತಾಯ್ಗಳಿಗೆ ಹೇಳ ತಕ್ಕುದು ನೀತಿ ಕೇಳವ್ವ ನಿಮ್ಮಡಿಗೆ ಠಕ್ಕನ ದೆಸೆಯಿಂದ ದಣುಕೊಂಬುದೆಮಗೆ 1 ಬೆಳಗು ದೋರದ ಮುನ್ನ ಬರುವ ಕೃಷ್ಣ ನೆಲುವಿನ ಪಾಲ್ಬೆಣ್ಣೆಗಳ ಕದ್ದು ಮೆಲುವ ನಿಲುಕದಿದ್ದರೆ ಕಲ್ಲಲಿಡುವ ಒಳ ಹೊರಗೆಲ್ಲ ಕ್ಷೀರ ಸಮುದ್ರವ ಕರೆವ 2 ಉಂಡುದ ಕಳಲುವರಲ್ಲ ನೆಲನುಂಡು ಕೆಟುದು ಪಾಲು ಬೆಣ್ಣೆಗಳೆಲ್ಲ ಮೊಸರ ಬಾಂಢವೆಂದರೆ ಬರಲೊಲ್ಲ ಇವನ ಕಂಡೆನೆಂದರೆ ಸುಳುಹನೆ ಕಾಣಲಿಲ್ಲ 3 ಹೆಣ್ಣ ಮಕ್ಕಳನಿರಗೊಡನು ಬಲು ಬಣ್ಣಿಸಿ ಕರೆದು ಮುದ್ದಿಸಿ ಆಡುತಿಹನು ಚಿಣ್ಣರಂದದಿ ಕಾಣುತಿಹನು ತೊಂಡೆ ವೆಣ್ದಟಿಯ ನಗಲಿಸಿ ನೋಡಿ ನಸುನಗುತಿಹನು 4 ಆಸೆ ನಮಗೆ ಊರೊಳಿಲ್ಲ ಪರ ದೇಶಕ್ಕಾದರೂ ಹೋಗಿ ಜೀವಿಪೆವೆಲ್ಲ ಬೇಸರಾಯಿತು ನಿಮಗೆಲ್ಲ ನಮ್ಮ ಪೋಕ್ಷಿಸುತಿಹ ಲಕ್ಷ್ಮೀರಮಣನೆ ಬಲ್ಲ 5
--------------
ಕವಿ ಪರಮದೇವದಾಸರು
ತುರುಕರಿಲ್ಲದ ಊರೊಳು ಇರಬಾರದು ಪ ತುರುಕರು ಜಗದೊಳು ಪರಮ ಶ್ರೇಷ್ಠರು ಕಾಣೋ ಅ.ಪ. ತುರುಕರು ಕರೆದರೆ ಉಣಬಹುದು ಉಡಬಹುದುತುರುಕರಿಂದಲಿ ಜಗಕೆ ಪರಮ ಸೌಖ್ಯಾ ||ತುರುಕರ ಸೇವೆ ಮಾಡಿದ ಮಾನವೋತ್ತಮನುಎರಡೊಂದು ಋಣದಿಂದ ಮುಕ್ತನಾಹಾ 1 ತುರುಕರಾ ನಿಂದಕನು ಪರಮ ದುಃಖಿಯು ಸಿದ್ಧತುರುಕರ ಅರ್ಚಿಸಿದವಗೆ ಪರಮ ಪದವೀ ||ತುರುಕರಿಗೆ ಗ್ರಾಸವಿತ್ತವನ ಫಲಕೆಲ್ಲು ಸರಿಗಾಣೆಸರಿಗಾಣೆ ಧರೆಯೋಳು ಅವನೆ ಧನ್ಯಾ 2 ಪತಿ ಬೈಗು ಬೆಳಗೂ ||ತುರುಕರಾ ಪಾಲ ಶ್ರೀ ಗೋಪಾಲಕೃಷ್ಣನ್ನಸ್ಮರಣೆ ಮಾಡುತಲಿರೆ ಮೋಹನ್ನ ವಿಠಲ ಒಲಿವಾ 3
--------------
ಮೋಹನದಾಸರು
ತೆರಳೆ ನೀ ಮಧುರೆಗೆ ಗೋಕುಲದಲಿ ನಾವುಇರಲಾರೆ ಇರಲಾರೆವೋ ಗೋಪಾಲ ಪ ತರಳತನದಿ ನೀ ಆಡಿದ ಆಟಗಳ ಸ್ಮರಿಸಿಸ್ಮರಿಸಿ ನಾವು ಮರುಗುವುದೆಲೋ ದೇವಅ.ಪ. ವ್ರಜದ ಒಳಗೆ ನೀನು ಇದ್ದದ್ದು ಕೇಳಿಭರದಿ ಪೂತನಿಯ ಕಳುಹಿ ಕೊಟ್ಟರೆತೊಡೆಯ ಒಳಗೆ ಇಟ್ಟು ಸ್ತನಕೊಡುತಿರಲವಳಹುಲಿಯಂತೆ ಹೀರಿ ಹಿಪ್ಪೆಯಮಾಡಿದೆಯೊ ದೇವ ತೃಣದ ಅಸುರನ ಕೊರಳಮಿಸುಗುತ್ತ ಅವನ ಕೆಡಹಿದಿಭರದಿ ಬಂಡಿಯ ಒದ್ದು ಶಕಟನ ಪುಡಿಯಮಾಡಿದ ಪರಮ ಪುರುಷನೆ 1 ಕೊಲ್ಲಕಂಸನು ಭಾಳ ಯೋಚಿಸಿ ಮನದಿಕೊಲ್ಲಬೇಕೆಂದೆನುತ ಸೂಚಿಸೆಬಿಲ್ಲನೆ ಮುರಿದು ಆ ನಲ್ಲೆಯ ಕರಪಿಡಿದುಒಳ್ಳೆ ಪುರಕೆ ಹೋಗಿ ಎಲ್ಲ ಕಾರ್ಯವ ನಡೆಸಿಮೆಲ್ಲನೆ ಏಕಾಂತ ಗೃಹದಲ್ಲಿಸೊಲ್ಲ ಕೇಳುತ ಅವನನು ಕೋಪಿಸೆಅಲ್ಲಿಯನುಜನ ತರಿದು ಅವನಕೊಲ್ಲ ಕಳುಹಿದ ಕಠಿನ ಹೃದಯನೆ2 ಎಲ್ಲ ಹಿಂದಿನ ಸುದ್ದಿ ಬಲ್ಲೆವೊ ನಾವುಇಲ್ಲಿ ಮರೆತೀಯೆಂದು ತಿಳಿದೆವೋಬಲ್ಲ ಅಕ್ರೂರನು ಬಂದು ಇಲ್ಲಿಗೆ ನಮ್ಮಇಲ್ಲದ ಮಾತ ಕೇಳಿ ಮೆಲ್ಲನೆ ಕರೆದೊಯ್ದಅಲ್ಲಿ ರಥವನೆ ಕಾಣುತ ಎದೆಝಲ್ಲೆನಿಸಿ ನಡುಗಿದೆವೊಪುಲ್ಲನಾಭನೆ ಜ್ಞಾನ ಭಕುತಿ ನ-ಮ್ಮೆಲ್ಲರಿಗೆ ನೀನಿತ್ತು ಪೋಗೆಲೊ 3 ಹೆಂಡತಿಯ ಕೂಡಿ ಕದನ ಮಾಡಿಮುಂದೆ ಮೂವರು ತೆರಳಿದಿರಿಬಂದು ಋಷಿಯಾಶ್ರಮದಿ ನಿಂತು ಗ್ರಾಸವ ಬೇಡೆಮಂದಗಮನೆ ನೋಡಿ ಚೆಂದಾಯಿ -ತೆಂದೆ ತಂದು ಕಲಶೋದಕವ ಚೆಲ್ಲಲುಕಂದರುಗಳು ನೀವಾದಿರೊ ತಂದ ಹಲಸಿನ ದೊನ್ನೆ ಪಾಲನುಚೆಂದದಿಂದಲಿ ಕುಡಿದ ದೇವನೆ4 ಮಂದಗಮನೇರಿಂದ ನಿಮಗೆ ಮತ್ತೆಒಂದುಪಕಾರವ ಕಾಣೆವೊಚೆಂದಾಗಿ ಮಾನದಿ ಮಂದಿರದಲಿ ಇರದೆಗಂಡರ ಬಿಟ್ಟು ನಿಮ್ಹಿಂದೆ ತಿರುಗಿದೆವೊಇಂದಿರೆಯು ಕಾರಣಗಳಲ್ಲವೊನಿಂಗೆ ನೀನೆ ಸ್ವರಮಣನಂಮಂಗಳಾಂಗನೆ ಮಾರಜನಕನೆರಂಗವಿಠಲನೆ ರಾಜೀವಾಕ್ಷನೆ5
--------------
ಶ್ರೀಪಾದರಾಜರು
ತೆರೆ ಬಾಗಿಲವ ಸುಗುಣೆ ಸುಂದರಿ ಮುಗಿವೆ ಕರವನುನಗಧರನ ಚರಣಕಮಲಯುಗಳ ನೋಳ್ಪೆನು ಪ ಪೇಳಿದವರು ಯಾರು ನಿನಗೆ ಕೀಲಿ ಹಾಕಲುಶೀಲಲಾಮನೊಬ್ಬನಾಜ್ಞೆ ಕೇಳಿ ನಡೆವಳು 1 ಹರಿಯು ಎಷ್ಟು ಸಾರೆ ನಿನಗೆ ತೆರೆಯ ಕೀಲಿಯೆಕರೆದು ಪೇಳಿದಾನೆ ಮಾತು ಸಿರಿಯೇ ಮರೆತೆಯಾ 2 ಬಾರೋ ಎಂದು ನೀನೆ ಎಷ್ಟು ಸಾರಿ ಕರೆದೆಯಾನಾರಿಮಣಿಯೆ ಬಂದರ್ಹೀಗೆ ತೋರ್ಪೆ ರೀತಿಯಾ 3 ಇಂದು ಹರಿಯ ದ್ವಾರದಲ್ಲಿ ಬಂದು ನಿಂತಿಹೆಮಂದಗಮನೆ ಕೀಲಿನೀನು ಬಂಧ ಮಾಳ್ಪರೆ 4 ಇಷ್ಟು ನೋಡಿ ಇಂದಿರೇಶನ ಭೆಟ್ಟಿ ಭರದಲಿಕೃಷ್ಣೆ ಬಂದು ತೆರೆಯೆ ಕೀಲಿ ದೃಷ್ಟಿಯಾಗಲು 5
--------------
ಇಂದಿರೇಶರು
ತೊಲಗು ನೀ ತೊಲಗಿನ್ನು ಅಭಿಮಾನವೆಅಲೆಬಡಿಸದಿರೆನ್ನನೂ ಹಲವು ಜನರಕಾಲಕೆಳಗೆ ನಿಲ್ಲಿಸಿಯನ್ನ ಹೊಲೆಗೆಲಸವ ಮಾಡಲೆಳಸಿ ನೆಗ್ಗಿದೆಯಲ್ಲ ಪಸತಿಸುತ ಪೋಷಣೆಯು ಮುಖ್ಯವು ಮಾತಾಪಿತೃಗಳಾರಾಧನೆಯು ಬಳಗ ಬಂಧು ತತಿಗಳ ಮನ್ನಣೆಯು ಕುಲ ಜಾತಿ ದೇವತೆಯ ಪೂಜಿಪ ಹಬ್ಬವು ಬಿಡಕೂಡದುವ್ರತ ಉಪವಾಸವಾರತಿಯಕ್ಷತೆಯು ಮುಂಜಿಯುಸುತೆಗೆ ಮದುವೆಯೆಂದು ಮತಿಗೆಡಿಸಿದೆಯಲ್ಲ 1 ಅರೆಘಳಿಗೆಯು ನಿಲ್ಲಲು ವೇಳೆಯ ಕೊಡದೆರಗಿಸಿ 'ಷಯದೊಳು ನಾನಾ ಬಗೆಹರುಬಿಗೆ ಹರುಸಲು ಮನವನೀಕೊರಗಿಸಿ ಕುಣಿಸುತಲು ಒಂದೇ ಕ್ಷಣಹರಿನಾಮ ಸ್ಮರಣೆಗೆ ತೆರಹುದೋರಿಸದಾಯುಹರಿದು ಪೋಗುವ ಹಾಗೆ ಕರಗಿಸಿದುದೆ ಸಾಕು 2ಶ್ರವಣಕೆ ಮನ'ತ್ತೆಯಾ ನಾಮ ಸ್ಮøತಿ ಸ'ಯ ಸೇ'ಸಬಿಟ್ಟೆಯ ಸಜ್ಜನರೊಳೊಂದುವ ದಾರಿಯ [ತೋರಿ]ದೆಯ ಎಂದಾದರು ಶಿವಸೇವೆಗಳ ತಂದೆಯ 'ೀಗಾಗುವ ಹವಣನರಿಯದೆ ಸಂಗವ ಮಾಡಿ ನಿನ್ನೊಳಗ'ವೇಕವನು ಪಡೆದವನಾದೆನಯ್ಯಯ್ಯೊ 3ಕಂಡವರೊಡವೆಯನು ತಂದು ಕರೆದು'ಂಡು ಬಳಗವನ್ನು ಮನ್ನಿಸಿಯವರ್ಕೊಂಡಾಡೆ ಹರುಷವನು ತೋರಿಸಿ ಬಹಭಂಡಾಟನಡತೆಯನು ಕರೆಸಿಯನ್ನಗುಂಡಿಗೆ ನೂಕಿಸೆ ಕಂಡೆ ನಿನ್ನಾಟವಮೊಂಡಮುಂಡೇದೆನ್ನೀ ಕೂಗಕೇಳಿ ಬೇಗ 4ಶ್ರೌತ ಸ್ಮಾರ್ತದ ಬಟ್ಟೆಯ ಹೊಂದುವರೆ ನೀನೋತು ಮಾರ್ಗವ ತೊಟ್ಟೆಯ ಅನ್ಯಾಯದ ರೀತಿಯ ನೀ ಬಿಟ್ಟೆಯ ನರಕಬಪ್ಪ ಭೀತಿಯ ನೀತೊಟ್ಟೆಯ ಯೇನೆನ್ನದೆಲೆಕಾತರಿಸುತ ಕಾಮಕಾತು ಕ್ರೋಧವ ಮಾಡಿಮಾತಿಗಾದರು ಒಮ್ಮೆ ಸೋತವನಾದೆಯ 5ಕಲಹವ ಜನರೊಳಗೆ ಗಂಟಿಕ್ಕಿತುತೊಲಗಿಸಿ ಬಯಲೊಳಗೆ ನಿಲ್ಲಿಸಿಯೆನ್ನಹಲವು ಬಗೆಯ ಮಾತಿಗೆ ಗುರಿಯ ಮಾಡಿಬಳಲಿ ಬಾಡುವ ರೀತಿಗೆ ಕಂಗೆಡಿಸಿದೆಕಾಲದೊಳು ಧನದೊಳು ಬಲದೊಳು ಛಲದೊಳುನೆಲೆಗೊಂಡು ನೀಯೆನ್ನ ಥಳಿಸಿದುದೇ ಸಾಕು 6ಅರಿಯದಾದೆನು ನಿನ್ನನು ಅದರಿನಿಂದಹುರಿದೆ ನೀನೆನ್ನುವನು ಚಿಕ್ಕನಾಗಪುರದೊಳಗಜ್ಞರನು ರಕ್ಷಿಸಲಾಗಿಗುರುವಾಸುದೇವಾರ್ಯನು ನೆಲಸಿಹನುಮರೆಯೊಕ್ಕೆರಗಿ ನಿನ್ನ ಪರಿಯ ಪೇಳಲು ಜ್ಞಾನದುರಿಯೊಳು ದ'ಪನೆಚ್ಚರ ನಿಲಬೇಡಿನ್ನು 7
--------------
ವೆಂಕಟದಾಸರು
ತ್ವರದಿ ಭಜಿಪೆ ನಮ್ಮ ಗುರುಪಾದಾಂಬುಜ ಕೆರಗುತಲನುದಿನ ಭಕುತಿಯಲಿ ಪ ನೆರೆನಂಬಿದವರ ಬಿಡದೆ ಪೊರೆವರೆಂಬ ಉರುತರ ಕೀರ್ತಿಯ ಸ್ಮರಿಸುತಲಿ ಅ.ಪ ಭವ ಬಂಧನದಿ ಬಳಲುವ ಮಂದಿಗಳನು ಉದ್ಧರಿಸುವರ ಮಂದಮತಿಗಳಾದರು ನಿಂದಿಸದಲೆ ಮುಂದಕೆ ಕರೆದಾದರಿಸುವರ ಬಂಧು ಬಳಗ ಸರ್ವಬಾಂಧವರಿವರೆಂದು ಒಂದೆ ಮನದಿ ಸ್ಮರಿಸುವ ಜನರ ಕುಂದುಗಳೆಣಿಸದೆ ಕಂದನ ತೆರದೊಳು ಮುಂದಕೆ ಕರೆದಾದರಿಸುವರ 1 ಗುಪ್ತದಿಂದ ಶ್ರೀಹರಿನಾಮಾಮೃತ ತೃಪ್ತಿಲಿ ಪಾನವ ಮಾಡಿಹರ ನೃತ್ಯಗಾಯನ ಕಲಾನರ್ತನದಿಂ ಪುರು- ಷೋತ್ತಮನನು ಮೆಚ್ಚಿಸುತಿಹರ ಸರ್ಪಶಯನ ಸರ್ವೋತ್ತಮನನು ಸರ್ವತ್ರದಲಿ ಧ್ಯಾನಿಸುತಿಹರ ಮತ್ತರಾದ ಮನುಜರ ಮನವರಿತು ಉ- ನ್ಮತ್ತತೆಯನು ಪರಿಹರಿಸುವರ2 ಕಮಲನಾಭ ವಿಠ್ಠಲನು ಪೂಜಿಸಿ ವಿಮಲಸುಕೀರ್ತಿಯ ಪಡೆದವರ ಶ್ರಮಜೀವಿಗಳಿಗೆ ದಣಿಸದೆ ಮುಂ- ದಣಘನ ಸನ್ಮಾರ್ಗವ ಬೋಧಿಪರ ನವನವ ಲೀಲೆಗಳಿಂದೊಪ್ಪುವ ಹರಿ ಗುಣಗಳನ್ನು ಕೊಂಡಾಡುವರ ನಮಿಸಿಬೇಡುವೆ ಉರುಗಾದ್ರಿವಾಸ ವಿ-ಠ್ಠಲದಾಸರು ಎಂದೆನಿಸುವರ 3
--------------
ನಿಡಗುರುಕಿ ಜೀವೂಬಾಯಿ
ದಯದಿ ವರಗಳ ನೀಡು ಮಮಸ್ವಾಮಿ ಸರ್ವಂತರ್ಯಾಮಿ ನಯದಿ ಬೇಡುವೆ ಭಕುತಜನ ಪ್ರೇಮಿ ಮಮ ಸರ್ವಸ್ವಾಮಿ ಪ ಸವಿನಯದಿ ಪ್ರಾರ್ಥಿಸುತ ಬೇಡುವೆ ಸುಮನರಸರ ಪ್ರಿಯ ಚಿತ್ಸುಖಪ್ರದ ಅಮಿತ ವಿಕ್ರಮ ಅಪ್ರಮೇಯನೆ ರಮೆಯರಮಣನೆ ರಕ್ಷಿಸೆನ್ನನು ಅ.ಪ ತೀರ್ಥ ಕ್ಷೇತ್ರಗಳನು ಚರಿಸುತಲೆ ಶ್ರೀ ಹರಿಯಗುಣ ಸ- ತ್ಪಾತ್ರರಿಂದನವರತ ತಿಳಿಯುತಲೆ ಶ್ರೋತ್ರಿಯನ ಸಂಗದೊಳು ನಲಿಯುತ್ತಾ ಮನನಲಿದು ನಿನ್ನಯ ಕೀರ್ತನೆಗಳನುದಿÀನದಿ ಕೀರ್ತಿಸುತ ಪಾರ್ಥಸಾರಥೆ ನಿನ್ನ ಪೊಗಳುತ ರಾತ್ರಿ ಹಗಲೆಡಬಿಡದೆ ಸ್ತುತಿಪರ ಗಾತ್ರಮರೆಯುತಲವರ ಸೇವಿಪ ಸಾರ್ಥಕದ ಸೇವೆಯನೆ ನೀಡೈ 1 ಗೋಕುಲಾಪತಿ ಹರಿಯೆ ಗೋವಿಂದ ನೀ ಕಡಿಯೋ ಬಂಧ ನೂಕಿ ಉದ್ಧರಿಸೆನ್ನ ಭವದಿಂದ ಕಾಕುಮತಿಗಳ ಬಿಡಿಸು ದಯದಿಂದ ನೀ ಪೊರೆಯದಿರಲು ಯಾತಕೀ ನರದೇಹ ಮುಕುಂದ ಮಾತುಮಾತಿಗೆ ನಿನ್ನ ಸ್ಮರಿಸದ ಮಾತುಗಳ ಫಲವೇನು ಕೇಶವ ಮದನ ಜನಕ ಮಾಧವ ಮುರಮರ್ದನ ಹರೇ 2 ಕರುಣಿಗಳೊಳು ದೇವನಿನಗೆಣೆಯೆ ದಯ ಮಾಡು ಹರಿಯೆ ಕರಿಯ ಪೊರೆದವನಲ್ಲೆ ನರಹರಿಯೆ ಕರೆಕರೆಯ ಸಂಸಾರ ಇದು ಖರೆಯ ಇದರೊಳಗೆ ಬಳಲಿದೆ ಕರೆದು ರಕ್ಷಿಪುದೆಂದು ಮೊರೆ ಇಡುವೆ ಕಮಲ ಮುಖಿ ಶ್ರೀ ಭೂಮಿ ಸಹಿತದಿ ಕಮಲನಾಭ ವಿಠ್ಠಲನೆ ಭಕುತರÀ ಮಮತೆಯಲಿ ಕೈ ಪಿಡಿದು ಪೊರೆಯುವ ಮನ್ಮಥನ ಪಿತ ಮನ್ನಿಸುತ ಪೊರೆ 3
--------------
ನಿಡಗುರುಕಿ ಜೀವೂಬಾಯಿ
ದಯಮಾಡಿ ಬಾರೆನ್ನ ಗುರುವೇ ಮಂತ್ರಾಲಯ ಪ್ರಭುವೇ ಪ ಧರೆಯೊಳು ಸುಜನರಾ ಪೊರೆಯಲೋಸುಗ ನೀನು ವರ ಮಂತ್ರಾಲಯದೊಳು ಬಂದು ನಿಂದಿಹೆ ಗುರುವೇ 1 ಬಹು ವಿಧದಲಿ ನಿನ್ನ ಮಹಿಮೆಗಳ ಕೇಳೀ ದೇಶ ದೇಶದಿ ಜನರು ಬಂದು ಕಾದಿಹರೋ2 ಕರೆದಾರೆ ಬರುವಂಥ ಕರುಣಸಾಗರ ನೀನು ಪರಿ ಪರಿಸ್ತುತಿಸುವೆ ಕಾರುಣ್ಯ ಮೂರ್ತಿಯೆ 3 ಬೇಡಿದಳಾ ವರಗಳ ಕೊಡುವ ನೀನೆನುತಲಿ ಧೃಡ ಭಕುತಿಯೊಳು ನಿನ್ನಡಿಗಳ ಸೇವಿ ಸುವರೋ 4 ಹಗಲು ಇರುಳು ನಿನ್ನ ಬಿಡದೆ ಸ್ತುತಿಸುವಂತೆ ಮತಿಯ ಪಾಲಿಪುದು - ಶ್ರೀ ಗುರುರಾಘವೇಂದ್ರಾ 5
--------------
ರಾಧಾಬಾಯಿ
ದಾರಿಯ ತೋರೋ ಗೋಪಾಲ ಪ. ವಾರಿಜನಾಭ ವೈಕುಂಠÀಲೋಲಅ.ಪ. ಸಿಕ್ಕಿದೆ ಭವಕಾಡಿನೊಳಗೆಲೆಕ್ಕವಿಲ್ಲದ ಜಂತುಗಳಿಗೆದಿಕ್ಕೊಬ್ಬರಿಲ್ಲವೊ ಎನಗೆಕಕ್ಕಸವ ಕಳೆದು ನಿನ್ನಯ ಪಾದಗಳಿಗೆ1 ಗಜರಕ್ಷಕನು ನೀನೆಂದುಅಜರುದ್ರಾದಿಗಳಂದುನಿಜವಾಗಿ ಪೇಳಿದರೆಂದುಸುಜನÀರೊಡೆಯನೆ ಕೇಳಿದೆ ನಾನಿಂದು 2 ವರದ ಶ್ರೀಹಯವದನ ಬಾರೈಕರೆದೆನ್ನ ದಾರಿಯ ತೋರೈಪರಮ ಭಕ್ತರೊಳಿನ್ನಾರೈಪರಮಪುರುಷ ನೀನಲ್ಲದೆ ಗತಿಯಾರೈ 3
--------------
ವಾದಿರಾಜ
ದಾಸರ ದೂಷಿಪರೊ ಕುಜನರು ಹರಿ- ದಾಸರ ನಿಂದಿಪರೊ ಪ ಏಸೇಸು ಜನುಮದ ದೋಷರಾಶಿಗಳೆಲ್ಲ ನಾಶವಗೈÀವ ಶ್ರೀಕೇಶವನಣುಗರ ಅ.ಪ ಮಂದಮತಿಗಳೆಲ್ಲರೂ ಸಜ್ಜನರ ನಿಂದನೆಯೊಳಗಿಹರೊ ಮುಂದಿನ ಬವಣೆಗಳೊಂದೆಣಿಸದಲೆ ಮು- ಕುಂದನ ಭಕುತರ ಸಂದಣಿ ಸೇವಿಪ 1 ಇಂದಿರೇಶನ ಗುಣವ ಪಾಡುತಲಿ ಆ- ನಂದದೊಳೋಲ್ಯಾಡುವ ನಂದಕಂದನ ಲೀಲೆಯಿಂದ ಹಗಲಿರುಳು ಮು- ಕುಂದನ ಕುಣಿಸುವರೊ ದಣಿಯುವರೊ 2 ಆರು ಮಂದಿಗಳ ಗೆದ್ದು ಹೃದಯದಲ್ಲಿ ಶ್ರೀ- ಮಾಧವನನು ಕಾಂಬರ ಶ್ರೀಧರನಂಘ್ರಿಗಳಾದರದಿಂ ಭಜಿಸಲು ಸಾಧು ಗುರುಗಳು ಇವರು ಸುಂದರರು 3 ಸುರಮುನಿವರ ಪ್ರಿಯನ ಭಕ್ತರಿಗೆಲ್ಲ ವರಗಳ ಕೊಡುತಿಹನ ಪರಮಪಾವನ ಮೂರುತಿಯನೆ ಕೊಂಡಾಡುತ ದುರಿತಗಳಳಿಯುವರ ಪಾವನರ 4 ಕರೆದು ಭಕ್ತರ ಸಲಹುವ ಕರುಣದೊಳು ಮೂ- ಪರಮ ಗುರುಗಳ ಮುಖ್ಯ ಕಾರಣವು ಪಡೆದವರು ಶ್ರೀ-ಕಮಲನಾಭ ವಿಠ್ಠಲನೆನ್ನುವರು5
--------------
ನಿಡಗುರುಕಿ ಜೀವೂಬಾಯಿ
ದಾಸರ ಸಖ ಮಾಡಂದೆ ಎನ್ನ ಧ್ಯಾಸದಿರಗಲದೆ ಶ್ರೀಹರಿ ತಂದೆ ಪ ಕನಕರಾಯನು ನಿಜದಾಸ ನಿನ್ನ ಘನತರ ಪ್ರಸನ್ನತೆ ಪಡೆದನುಮೇಷ ಅನುದಿನ ನಿಮ್ಮಯ ಘನಮಹಿಮೆಯನು ತೋರಿ ಮುನಿವ್ಯಾಸರಾಯರ ಮನವ ತಣಿಸಿದಂಥ 1 ಘನ ಸತ್ಯ ಕಬೀರದಾಸ ತನ್ನ ತನುಮನಧನವನ್ನು ನಿನಗರ್ಪಿಸೀತ ವನಿತೆಯನೊತ್ತಿಟ್ಟು ತನುಜಾತನನು ಕೊಂದು ಉಣಿಸಿ ಸಂತರಿಂ ಸುತನ ಪ್ರಾಣವ ಪಡೆದಂಥ 2 ವಾಸನಳಿದು ಪುರಂದಾಸ ತನ್ನ ನಾಶಬುದ್ಧಿಗೆ ನಾಚಿ ನೀಗಿ ಮನದಾಸೆ ಸೋಸಿಲಿಂ ತವಪಾದಧ್ಯಾಸ ಬಲಿಸಿ ಜಗದೀಶ ಹೇಸದೆ ನಿಮ್ಮನು ಗಿಂಡಿಲ್ಹೊಡೆದಂಥ 3 ವರನಾಮದೇವ ನಿಜದಾಸ ತನ್ನ ಪರಮಸಂತರಿಗೆಲ್ಲ ಪಾಲಿಸಿ ಭಾಷ ಸಮ ಗೌಪ್ಯದಿಂ ಪಂಪಾಪುರಿಗೈದಿರಲು ನಿನ್ನ ತಿರುಗಿ ಕರೆದೊಯ್ದು ಇರವ ಪೂರೈಸಿದಂಥ 4 ಬಲ್ಲಿದ ತುಕಾರಾಮದಾಸ ಬಲು ಕ್ಷುಲ್ಲಕರುಪಟಳ ಸಹಿಸಿ ಮನದಕ್ಲೇಶ ಎಲ್ಲವ ನೀಗಿ ಹರಿ ಪುಲ್ಲನಾಭನ ಪಾದ ದಲ್ಲೆ ಮನ ನಿಲ್ಲಿಸಿ ಉಲ್ಲಾಸದಿರುವಂಥ 5 ಬಗೆಯ ತಿಳಿದು ಜಗನ್ನಾಥ ನಿಮ್ಮ ಸುಗುಣದರಿದು ವ್ಯಾಧಿ ಕಳೆದುಕೊಂಡು ಪ್ರಮಥ ನಿಗಮಗೋಚರ ನಿನ್ನ ಬಗೆಬಗೆ ಪೊಗಳುತ ಜಗದಮಾಯವ ಗೆಲಿದು ಸೊಗಸಿನಿಂ ನಲಿವಂಥ 6 ಉದಧಿಜಿಗಿದ ಹನುಮಂತ ಮಹ ಪದುಮಾಕ್ಷಿಯಳ ಕಂಡು ನಮಿಸಿದ ಬಲವಂತ ಸದಮಲಾಂಗಿಗೆ ತನ್ನ ಹೃದಯಸೀಳಿದ್ಹಟದಿಂ ಪಾದ ತೋರಿಸಿದಂಥ 7
--------------
ರಾಮದಾಸರು
ದಾಸರಾಯಾ ಎನ್ನ | ಬೆಂಬಿಡದಲೆ ಕಾಯೋ ಬಹು ಪರಿಯಿಂದ ದಾಸರಾಯಾ ಪ ಈರೇಳು ವರುಷವಾರಂಭಿಸಿ ಪ್ರತಿದಿನ | ದಾಸರಾಯ ಜಾವು ಮೂರುಗಳಲ್ಲಿ ಮುಕುಂದನ ಚರಣವ | ದಾಸರಾಯಾ | ಚಾರು ಮನಾಬ್ಜದಿ ಬಹಿರದಿ ಬಗೆ ಬಗೆ | ದಾಸರಾಯಾ | ಭೂರಿ ಭಕುತಿ ಭರಿತನಾಗಿ | ದಾಸರಯ್ಯಾ1 ಪುಂಗವ ಸುಮತೀಂದ್ರ ರಾಯ ಕರೆದ ನಿನ್ನ | ದಾಸರಾಯಾ | ಸಂಗೀತ ರಸನ ಪಾನಮಾಡಿ ಹರುಷದಿ | ದಾಸರಾಯಾ | ಹರಿ | ಡಿಂಗರೊಳುತ್ತುಂಗನೆನಿಸಿಕೊಂಡೆ ದಾಸರಾಯ 2 ಕುಶಲಗಾನವ ಕೇಳಿ ಗುರುಸತ್ಯ ಪೂರ್ಣರು | ದಾಸರಾಯಾ | ಪರಾ ವಸುನಾಮ ಗಂಧರ್ವನವತಾರ ನೀನೆಂದು | ದಾಸರಾಯಾ | ಪೆಸರಿಟ್ಟರಂದು ವಿದ್ವಜ್ಜನ ಮೆಚ್ಚಲು ದಾಸರಾಯಾ | ಎನ ಗೊಶವಹುದೇ ನಿಮ್ಮ ಮಹಿಮೆ ಕೊಂಡಾಡಲು |ದಾಸರಾಯಾ | 3 ಚರಿಸಿದೆ ಪುಣ್ಯಕ್ಷೇತ್ರಗಳ ಭಕುತಿಯಿಂದ | ದಾಸರಾಯಾ | ಪ್ರತಿ | ವರುಷ ಬಿಡದೆ ಶೇಷಗಿರಿಯವಾಸನ | ದಾಸರಾಯಾ | ಪರಿಯಂತ | ದಾಸರಾಯಾ | ಪರಿ ಚರಿಯವ ಕೈಕೊಂಡು ಪಡೆದೆ ಮಂಗಳಗತಿ ದಾಸರಾಯ 4 ಮುನಿಯು ಉಪೇಂದ್ರರಾಯರು ನಿಮ್ಮ ಚರಿತೆಯ | ದಾಸರಾಯಾಕೇಳಿ ಸಾನುರಾಗದಿ ಸರ್ವ ಮಂತ್ರೋಪದೇಶವ | ದಾಸರಾಯಾ | ಆನುಪೂರ್ವಕಮಾಡಿ ಅತಿ ಸಂತೋಷದಿ | ದಾಸರಾಯಾ | ಕೊಟ್ಟರು ಶ್ರೀ ನರಸಿಂಹ ಪ್ರತಿಮೆ ಸಾಲಿಗ್ರಾಮ | ದಾಸರಾಯಾ | 5 ಕಿಂಕರನೆನಿಸಿ ಪರಂದರದಾಸರೆ | ದಾಸರಾಯಾ | ಅವರಿಂ ದಂಕಿತ ವಹಿಸಿ ನಿಶ್ಯಂಕೆಯಿಂದ ನೀನು ದಾಸರಾಯಾ | ಪೊಂಕವ ಪೊಗಳುತ ಪೊಡವಿಯೊಳು ಚರಿಸಿದೆ | ದಾಸರಾಯಾ|ಭವ ಪಂಕವ ದಾಟ ಪರೇಶನನೈದಿದೆ | ದಾಸರಾಯಾ 6 ಪರಿಯಂತ ಕರ ಒಡ್ಡಲೊಲ್ಲೆನೆಂಬುವ ಛಲ | ದಾಸರಾಯಾ | ನಿನಗೆ ಸಲ್ಲಿತು ನಿಜ ಭಾಗವತರ ಪ್ರಿಯ | ದಾಸರಾಯಾ | ನಿಮ್ಮಾ ಅನುಭವೋಪಾಸನೆ ಏನು ತಿಳಿಯದು ದಾಸರಾಯಾ 7 ಕಮಲ ಧ್ಯಾನ ದಾಸರಾಯಾ | ಸ್ನಾನ ವರ ಮಂತ್ರ ಜಪ ತಪ ವಿಹಿತಾಚರಣೆಗಳು | ದಾಸರಾಯಾ ಪೆರತೊಂದು ಸಾಧನ ಮನ ವಾಕ್ಕಾಯಗಳಲಿ | ದಾಸರಾಯಾ | ನಾನೊಂದರಿಯೆ ದಯಾಬ್ಧಿ ಉದ್ಧರಿಸೆನ್ನ ಭವದಿಂದ ದಾಸರಾಯಾ 8 ನಾರಾಯಣಾತ್ಮಜ ಅನಂತಾರ್ಯರುದರದಿ ದಾಸರಾಯಾ |ಪುಟ್ಟಿ | ನೂರೊಂದು ಕುಲಗಳುದ್ಧಾರ ಮಾಡಿದೆ | ದಾಸರಾಯಾ | ಕಾರುಣ್ಯನಿಧಿ ಜಗನ್ನಾಥವಿಠಲ | ದಾಸರಾಯಾ | ನಿಮ್ಮ ಚಾರು ಚರಿತ್ರೆಯ ತುತಿಸಿ ಪಾವನನಾದೆ | ದಾಸರಾಯಾ 9
--------------
ಜಗನ್ನಾಥದಾಸರು
ದಾಸರೆ ಪುರಂದರದಾಸರು ಲೇಸಾಗಿ ಎನಗೆ ಸುಮಾರ್ಗವನು ತೋರಿದರು ಪ ಅತಿ ಮುಗ್ಧನಾಗಿ ದುರುಳರಾ ದುರಾಚಾರದಲ್ಲಿ ಮತಿಗೆಟ್ಟು ಮಹಿಯೊಳಗೆ ತಿರುಗುತಿರಲೂ ಅತಿ ದಯಾಪರರಾಗಿ ತನ್ನವನಿವನೆಂದು ಹಿತದಲ್ಲಿ ಪೊರೆದು ಕುಮತಿಯ ಬಿಡಿಸಿದರು1 ಶಬ್ದಾದಿ ಮೊದಲಾದ ವಿಷಯಂಗಳಾ ಕರ್ಮ ದಬ್ಧ್ದಿಯೊಳಗೆ ಬಿದ್ದು ಪೊರುಳುತಿದ್ದಾ ಲುಬ್ಧಕನ ಕರೆದು ದೃಢವಾಗಿ ಸುಜ್ಞಾನದ ಅಬ್ಧಿಯೊಳಗಿಟ್ಟು ಕರುಣದಲಿ ನೋಡಿದರು 2 ಹಿಂದೆ ಏಸೇಸು ಜನ್ಮ ಜನಿಸಿ ಅನ್ಯ ಕಾಲ ನೊಂದ ನರನಾ ತಂದು ವೈರಾಗ್ಯದೊಳು ಪೊಗಸಿ ಸೌಖ್ಯವ ಪರಶಿ ತಂದೆ ಮಕ್ಕಳನು ಸಾಕಿದಂತೆ ಸಾಕಿದರು3 ಉಪದೇಶವಿತ್ತರು ಸುಪ್ರೀತಾರ್ಥದಲಿ ಬಂದು ಜಪ ನಿಜಾಸನ ಧ್ಯಾನ ಜ್ಞಾನದಿಂದ ಸಪುತೆರಡು ಲೋಕದ ಒಡೆಯನ್ನ ಪಾದವ ಸಫಲವಾಗುವಂತೆ ಸಾಧನವ ಪೇಳಿದರು 4 ದಾರಿದ್ರ ದೋಷವ ಸೇರಿದ ಮಾನವನಿಗೆ ಆರು ಕೊಡದಲೆ ಧೇನು ದೊರಕಿದಂತೆ ಕಾರುಣ್ಯದಲಿ ಗುರು ಪುರಂದರದಾಸರು ಮೂರುತಿ ವಿಜಯವಿಠ್ಠಲನ್ನ ತೋರಿಸಿದರು 5
--------------
ವಿಜಯದಾಸ
ದಾಸರೆಂದು ಕರೆದ ಮಾತ್ರದಿ | ಈಗ ಎಮ್ಮ ದೋಷರಾಶಿ ನಾಶವಾಯಿತು ಪ. ಶ್ರೀಶ ತಾನು ಗುರುಗಳಿಂದ ಈ ಶರೀರಕೀ ಜನ್ಮದಲಿ ದಾಸತನದ ಪೆಸರನಿಟ್ಟು ವಾಸುದೇವ ಕಾಯ್ದ ಎನ್ನ ಅ.ಪ. ಏಸು ಜನ್ಮ ಯತ್ನ ಗೈಯ್ಯಲು | ಭೃತ್ಯಭಾವ ಪಾಶ ದುರ್ಲಭವು ಸುಜನಕೆ ಶ್ರೀಶನನುಗ್ರಹದ ಬಲದಿ ಈಸು ನಾಮ ದೊರೆಯಬೇಕು ಆಶಪಾಶ ತೊಲಗಿ ಭವ ಕ್ಲೇಶ ಕೊನೆಗಾಣಿಸುವುದು 1 ಪಂಡಿತನೆಂದೆನಿಸಿ ಮೆರೆಯಲು | ಜಗದೊಳಗೆ ಕಂಡಮಾತ್ರ ಗರ್ವ ಕಾರಣ ಮಂಡೆಬಾಗಿ ಹರಿಗೆ ನಿನ್ನ ತೊಂಡನೆಂದು ನಮಿಸೆ ನಲಿದು ಪುಂಡರಿಕಾಕ್ಷ ತಾನು ತಂಡ ತಂಡ ಪಾಪ ಕಳೆವ 2 ಹರಿಯದಾಸರೆಂದು ಎನಿಸಲು | ಧರೆಯೊಳಗೆ ಸುರರು ಬಯಸಿ ಬರುತಲಿಪ್ಪರು ಸರ್ವದೇವತೆಗಳು ಬಂದು ಹರಿಯದಾಸರೆನಿಸಿ ಮೆರೆದು ಪರಿಪರಿಯ ತತ್ವ ತಿಳುಹಿ ಹರಿಯ ಪುರಕೆ ತೆರಳಲಿಲ್ಲೆ 3 ದಾಸತನಕೆ ಅಧಿಕವಿಲ್ಲವು | ಸಾಧನವು ದಾಸತನವು ಗರ್ವವಳಿವಳಿವುದು ದಾಸ ದಾಸ ದಾಸ ನಿನಗೆ ವಾಸುದೇವ ಸಲಹೊ ಎನಲು ದೋಷನಾಶಗೈಸಿ ಹರಿಯು ದಾಸ ಜನರ ಕಾಯ್ದ ದಯದಿ 4 ಅಷ್ಟು ಭಾಗ್ಯಕಧಿಕ ಲಾಭವು | ದಾಸತನವು ಶ್ರೇಷ್ಠ ಗುರುಗಳಿಂದ ದೊರಕಿತು ಇಷ್ಟವೆನಗೆ ದಾಸಪೆಸರು ಶಿಷ್ಟರೆಲ್ಲ ಕರೆಯಲೀಗ ತುಷ್ಟಿಪಡುವೆ ಶ್ರೀ ಗೋಪಾಲ-ಕೃಷ್ಣವಿಠಲ ಸಲಹೊ ಎಂದು 5
--------------
ಅಂಬಾಬಾಯಿ
ದೀಪ ಬೆಳಗುವಾಗಾ ಉಣ್ಣುವರುಣ್ಣಿರೋ ಬೇಗ ಬೇಗಾ ದೀಪ ಲೋಪವಾದಮೇಲೆ ಬರಿದಪ್ಪುದು ಭೋಜನಶಾಲೆ ಪ ಚಿತ್ತಶುದ್ಧಿಎಂಬ ಎಳೆಬಾಳೆಎಲೆ ಎಡೆಮಾಡಿ ನಿತ್ಯನಿರ್ಮಲವೆಂಬ ರಾಜಾನ್ಹವ ನೀಡಿ ಸತ್ಯಸಾಧುಸಂಗವೆಂಬ ಘೃತಸಾರಾನ್ಹವ ನೀಡಿ ಪ್ರತ್ಯುಗಾತಮ ಆತ್ಮನ ನಿರಂತರ ತೃಪ್ತಿಬಡಿಸಿ ನೋಡಿ ದೀಪ 1 ಗುರುಕೃಪೆಯೆಂದೆಂಬ ಪರಡಿಯ ಪಾಯಸದಾಹಾರಾ ನಿರುತಾನ್ಹ ಉದಾನಮಾಡಲು ಷಡುರಸದುಪಚಾರಾ ಹರಿಹರ ಭೇದಗಳಡಗಿದನು ಭವಾಮೃತ ಸಾರಾ ಪೊಸದುಪ್ಪದಭಾರಾ ದೀಪ 2 ಕೆಂದ ಆಕಳÀ ಕರೆದು ಕಾಸಿದ ಕ್ಷೀರವ ಕೈಕೊಂಡು ತಂದೆ ತಾಯ್ಗಳ ಭಕುತಿ ಮಾಡಿದ ಮಸುರೋಗರ ಉಂಡು ವಂದಿಸಿ ಶ್ರೀ ಗುರು ವಿಮಲಾನಂದನ ಸೈಂದವನೊಳಗೊಂಡು ತೇಗುತ ಮೆರದುಂಡು 3
--------------
ಭಟಕಳ ಅಪ್ಪಯ್ಯ