ಒಟ್ಟು 356 ಕಡೆಗಳಲ್ಲಿ , 66 ದಾಸರು , 313 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾಕೆ ಕಷ್ಟ ಪಡುವೆ ನೀನು ಮಾಯಾ ಸಲಹು ನಮ್ಮಪ ಹಿರಿಯ ಮಗನು ಸರ್ವ ಜನರೊಳಿರುತ ಕಾಮಿಸುವನು ಜಗವ 1 ಮೊಮ್ಮಗನು ನಿನ್ನದಾಸಿಯಾ-ಜಗವ ಮೋಹಿಸುತ್ತಲಿರುವಳು 2 ನೀರೊಳಿರುತ ಮೋರೆ ಮುಚ್ಚಿಕೊರೆ ಮಸೆದು ಕಂಬದಿಂದ ಹಾರಿಯೆಳೆದು ಧಾರಿಣಿಯ ಧೀರ ನೃಪರನೆಲ್ಲಕೊಂದು 3 ಊರುಬಿಟ್ಟು ಸಾರಿ ವನವ ಜಾರನಾಗಿ ಭಂಗಪಡಿಸಿ ನಾರಿಯರನು ದಾರತೇಜಯೇರಿಮೆರೆದು ಬಾರಿ ಬಾರಿ 4 ಪರಮಪದವನಗಲಿ ಚಂಡ ಕಿರಣರಥವ ನುಳಿದು ಕ್ಷೀರ ಶರಧಿಯನ್ನು ಬಿಟ್ಟು ವ್ಯಾಘ್ರಗಿರಿಯೊಳಿರುವ ವರದ ವಿಠಲ 5
--------------
ಸರಗೂರು ವೆಂಕಟವರದಾರ್ಯರು
ಯಾಕೆ ಕಷ್ಟ ಪಡುವೆ ಲೋಕನಾಯಕ ಮಾಯಾ ಜೋಕೆಯಿಂದ ಸಲಹು ನಮ್ಮ ಪ ಸಿರಿಯೆ ಪಟ್ಟದರಸಿ ನಿನಗೆ ಕಿರಿಯ ಮಡದಿ ಧರಣಿಯಾಗೆ ಹಿರಿಯ ಮಗನು ಸರ್ವಜನರೊಳಿರುತ ಕಾಮಿಸುವನು ಜಗವ 1 ಮಗನು ಜಗವ ನಿರ್ಮಿಸುವನು ಮಗುಳೆಲಯವಗೈವ ಮೊ- ಮ್ಮಗನು ನಿನ್ನ ದಾಸಿ ಈ ಜಗವ ಮೋಹಿಸುತ್ತಲಿರವಳು 2 ನೀರೊಳಿರುತ ಮೋರೆ ಮುಚ್ಚಿ ಕೋರೆ ಮಸೆದು ಕಂಬದಿಂದ ಹಾರಿಯೆಳೆದು ಧಾರಿಣಿಯ ಧೀರ ನೃಪರನ್ನೆಲ್ಲ ಕೊಂದು 3 ಊರುಬಿಟ್ಟು ಹಾರಿ ವನವ ಜಾರನಾಗಿ ಭಂಗಪಡಿಸಿ ನಾರಿಯರನು ದಾರ ತೇಜಿಯೇರಿ ಮೆರೆದು ಬಾರಿ ಬಾರಿ4 ಪರಮಪದವನಗಲಿ ಚಂಡ ಕರಣರಥವ ನುಳಿದು ಕ್ಷೀರ ಶರಧಿಯನ್ನು ಬಿಟ್ಟು ವ್ಯಾಘ್ರಗಿರಿಯೊಳಿರುವ ವರದವಿಠಲ5
--------------
ವೆಂಕಟವರದಾರ್ಯರು
ಯಾತಕಯ್ಯ ತೀರ್ಥಕ್ಷೇತ್ರಗಳುಶ್ರೀ ತುಲಸಿಯ ಸೇವಿಪ ಸುಜನರಿಗೆ ಪ. ಅಮೃತವ ಕೊಡುವ ಹರುಷದೊಳಿರ್ದಕಮಲೆಯರಸನಕ್ಷಿಗಳಿಂದಪ್ರಮೋದಾಶ್ರು ಸುರಿಯೆ ಕ್ಷೀರಾಬ್ಧ್ದಿಯೊಳುಆ ಮಹಾತುಲಸಿ ಅಂದುದಿಸಿದಳು 1 ಪರಿಮಳಿಸುವ ಮಾಲೆಯ ನೆವದಿ ಹರಿಯುದರದಲ್ಲಿಸಿರಿಯೊಲಿಹಳುತÀರುಣಿ ತುಲಸಿ ತಪ್ಪದೆಯವನಚರಣವ ರಮೆ ಭಜಿಸೆ ಭಜಿಪಳು2 ಪೂಜಿಸುವರ ಶಿರದಿ ನಿರ್ಮಾಲ್ಯಗಳವ್ಯಾಜದಿಂದ ಲಕ್ಷ್ಮಿಯ ಕೂಡೆ ಬಹಳುಈ ಜಗದೊಳು ತಾವಿಬ್ಬರಿದ್ದಲ್ಲಿಆ ಜನಾರ್ದನನಾಕ್ಷಣ ತಹಳು 3 ಒಂದು ಪ್ರದಕ್ಷಿಣವನು ಮಾಡಿದವರಹೊಂದಿಪ್ಪುದು ಭೂಪ್ರದಕ್ಷಿಣ ಪುಣ್ಯಎಂದೆಂದಿವಳ ಸೇವಿಸುವ ನರರಿಗೆಇಂದಿರೆಯರಸ ಕೈವಲ್ಯವೀವ 4 ತುಲಸಿಯ ನೆಟ್ಟವನು ಮತ್ತೆ ತನಗೆ ಇಳೆಯೊಳು ಪುಟ್ಟುವ ವಾರ್ತೆಯ ಕಳೆವಜಲವೆÀರೆದು ಬೆಳೆಸಿದ ಮನುಜರಕುಲದವರ ಬೆಳೆಸು ವೈಕುಂಠದಲ್ಲಿ 5 ತುಲಸಿಯೆ ನಿನ್ನ ಪೋಲುವರಾರುಮೂಲದಲ್ಲಿ ಸರ್ವತೀರ್ಥಂಗಳಿಹವುದಳದಲ್ಲಿ ದೇವರ್ಕಳ ಸನ್ನಿಧಾನಚೆಲುವಾಗ್ರದಿ ಸಕಲ ವೇದಗಳು 6 ತುಲಸಿ ಮಂಜರಿಯೆ ಬೇಕಚ್ಚುತಂಗೆದಳಮಾತ್ರ ದೊರಕಲು ಸಾಕವಗೆಸಲುವುದು ಕಾಷ್ಠಮೂಲ ಮೃತ್ತಿಕೆಯುಫಲವೀವನಿವಳ ಪೆಸರ್ಗೊಳಲು 7 ಕೊರಳಲ್ಲಿ ಸರ ಜಪಸರಗಳನ್ನುವರ ತುಲಸಿಯ ಮಣಿಯಿಂದ ಮಾಡಿಗುರುಮಂತ್ರವ ಜಪಿಸುವ ನರರುಹರಿಶರಣರ ನೆಲೆಗೆ ಸಾರುವರು8 ಎಲ್ಲಿ ತುಲಸಿಯ ಬನದಲ್ಲಿ ಲಕ್ಷುಮೀ-ವಲ್ಲಭನು ಸರ್ವಸನ್ನಿಹಿತನಾಗಿನೆಲಸಿಹನಿವಳೆಸಳೊಂದಿಲ್ಲದಿರೆಸಲ್ಲದವಂಗನ್ಯಕುಸುಮದ ಪೂಜೆ 9 ಎಲ್ಲ ಪಾಪಂಗಳೊಮ್ಮೊಮ್ಮೆ ಕೈಮುಗಿಯೆಎಲ್ಲಿ ಪೋಪುದು ದೇಶದೇಶಂಗಳಿಗೆನೆಲ್ಲಿ ಮಲ್ಲಿಗೆ ಮೊದಲಾದ ಸೈನ್ಯಅಲ್ಲೀಗಲು ನಮ್ಮ ಬನದಲೊಪ್ಪಿಹಳು 10 ಹರಿಪಾದಕೆ ಶ್ರೀತುಲಸಿಯೇರಿಸಿದನರರನು ಪರಮ ಪದಕೇರಿಸುವುದುನಿರುತದಿ ತುಲಸಿಯ ಕಂಡರವಗೆನರಕಗಳ ದರುಶನ ಮತ್ತಿಲ್ಲ 11 ಪಡಿ ಆಯಿತು ಗಡನ್ನಿವಳ ವೃಂದಾವನದಲ್ಲಿ ನೆಟ್ಟುಮನೆಮನೆ ಮನ್ನಿಸದವನ್ಯಾವ12 ಕನಸಿನಲಿ ಕಂಡಂತೆ ಇನ್ನೊಂದುಕೊನೆವೆರಸಿದ ಪುಷ್ಪದಿ ಜಪಿಸಿಅನುದಿನ ಹಯವದನನ್ನ ತೀರ್ಥವನು ಕೊಂಡು ನಾ ಧನ್ಯನಾದೆನು 13
--------------
ವಾದಿರಾಜ
ಯಾವ ಪರಿಯಲಿ ಒಲಿಸಿ ಪಡೆವೆ ಹರಿಯೊಲವನು ಭೂವಿವರವನು ಪೊತ್ತ ಮಹಶೇಷಗರಿದು ಪ ಸುರನದಿ ಜಲದೊಳಭಿಷೇಕವ ಮಾಡುವರೆ ಚರಣದಲಿ ಜನಿಸಿಹಳು ದೇವಗಂಗೆ ಮೆರೆವ ದಿವ್ಯಾಸನವನೀಯೆ ವಿಶ್ವಾಧಾರ ಧರಿಸಿ ಕೊಡಲಿಕೆ ವಸ್ತ್ರ ಪೀತಾಂಬರ 1 ಹೇಮರಚಿತಾಭರಣದಿಂದ ಮೆಚ್ಚಿಸಲವಗೆ ಕಾಮಿನಿಯೆ ಶ್ರೀಮಹಾಲಕ್ಷ್ಮಿದೇವಿ ಪ್ರೇಮದಿಂ ಶಾಲ್ಯಾನ್ನದಿಂದ ತೃಪ್ತಿ ನಿತ್ಯ ತೃಪ್ತ 2 ಕ್ಷೀರದಿಂ ಮೆಚ್ಚಿಸಲಿಕವಗೆ ಪಾಲ್ಗಡಲೆಮನೆ ಮಾರುತಾತ್ಮಜ ಕೋಣೆ ಲಕ್ಷ್ಮೀಶ ನಂಘ್ರಿಗೆ ನಮಸ್ಕಾರದಿಂ ಮೆಚ್ಚಿಸಲಿಕವ ಜಗದ್ವಂದ್ಯಾ 3
--------------
ಕವಿ ಪರಮದೇವದಾಸರು
ಯೋಗನಿದ್ರೆಯ ಮಾಡುತಿಹನು ಕ್ಷೀರಸಾಗರಮಧ್ಯದಿ ಭೋಗಿಶಯನನು ಪಏಳು ಸುತ್ತಿನ ಪುರವಿದನೂ ಎಂಟುಪಾಲಾಗಿ ರಮಣಿ ತಾ ಕಾದಿರಲದನುಬಾಲಕನೊಬ್ಬ ಪಾಲಿಪನೂ ಮಂತ್ರಿನಾಲುವರೊಪ್ಪಿರೆ ಶ್ರೀಹರಿ ತಾನು 1ಕಾಲಜ್ಞಾನಿಗಳೈವರಿಹರೂ ಅವರೂಳಿಗಕೈವರು ಕಾದುಕೊಂಡಿಹರುವೇಳೆ ವೇಳೆಯ ಬಲ್ಲ ಭಟರು ತಮ್ಮಊಳಿಗವನು ಬಂದು ಪೇಳುತ್ತಲಿಹರು 2ಸಕಲ ಲೋಕಂಗಳ ಸೃಜಿಸಿ ಅಲ್ಲಿ ಸಕಲ ಲೋಕೇಶನು ತಾನೆ ವಿಶ್ರಮಿಸಿಸಕಲವ ತನ್ನೊಳಗಿರಿಸಿುೀಗಮುಕುತಿದಾಯಕ ವೆಂಕಟೇಶ ಶ್ರೀ ವೆರಸಿ 3ಕಂ||ಹರಿ ಪವಡಿಸೆ ಹರೆದೋಲಗಸುರರೆಲ್ಲರ್ ಸ್ಥಾನಕೈದಲಾನಂದಾಂಬುಧಿತೆರೆುಳಿದು ತಿರುಪತೀಶನಚರಣವೆ ತಾನಾಗಿ ನಿಂದುದೆನ್ನೆದೆಮನೆಯೊಳ್ ಓಂ ವೇದವೇದ್ಯಾಯ ನಮಃ
--------------
ತಿಮ್ಮಪ್ಪದಾಸರು
ರಂಗ ಕೊಳಲನೂದುತ ಬಂದಯಶೋದೆಯ ಕಂದ ಪ ಕೊಳಲ ಧ್ವನಿಗೆ ವಿರಹವು ನಾರಿಯರಿಗೆಕಳಕಳÀವಾಗಲು ಕಳಕಳಿಸುತ ಅ.ಪ. ಶೃಂಗಾರ ಕೊಳಲ ಗಾಯನ ಮಾಡೆಸ್ತ್ರೀಯರು ನೋಡೆ ರಂಗನ ಪಾದದಲಿ ಮನ ಹೂಡೆಭೃಂಗಾಮೃತ ತೈಲದಿಅಂಗನೆಯರು ಝಳಕವ ಮಾಡೆದೇವರ್ಕಳು ನೋಡೆತುಂಗವಿಹಂಗ ಭುಜಂಗ ನವಿಲು ಸಾ -ರಂಗ ಗಿಣಿಯು ಮಾತಂಗ ಮರಿಯು ಕು-ರಂಗ ಮಧ್ಯೆ ಚರಣಂಗಳೆಡೆಗೆ ವೇ-ದಂಗಳೆರಗೆ ಕಾಮಂಗಳಲುಗೆ ನೇ-ತ್ರಂಗಳಿಗತಿ ಚಿತ್ರಂಗಳಾಗೆ ಆರಂಗನೂದ್ವ ಸಾರಂಗ ಕೇಳಿ ಋಷಿಪುಂಗಸಹಿತ ತಾವುಗಳು ಬರೆ ನರ-ಸಿಂಗನೂದಿದ ಜಗಂಗಳ ಮೋಹಿಸಿ1 ಬಂಗಾರ ಬಟ್ಟಲೊಳಗೆ ಅಂದುಕ್ಷೀರವ ತಂದು ರಂಗಗರ್ಪಿಸುವೆವು ನಾವೆಂದುಹರುಷದೊಳಂದು ಅಂಗನೆಯರು ಮೈಮರೆತು ನಿಂದುಒಲಿಯಬೇಕೆಂದು ಮಂಗಳ ಮಹಿಮನು ನೀನೆಂದುಅತಿಭಕುತಿಯೊಳಂದುತುಂಗ ವಿಕ್ರಮನ ಪದಂಗಳಿಗೆರಗಲುರಂಗ ನೆಗಹಿ ಕರಂಗಳ್ಹಿಡಿಯ ಮೋ-ಹಂಗಳಿಂದ ವಿರಹಗಳ್ಹೆಚ್ಚಿ ರವಿಕೆಂಗಳುಡೆಯ ಕುಚಂಗಳು ಬಿಟ್ಟಾ-ಲಿಂಗಿಸುತಿರೆ ಶ್ರೀ ಮಂಗಳಾಂಗಗೆ ಪು-ಷ್ಪಂಗಳಿಂದ ವರುಷಂಗಳು ಮೇಲ್ ಸುರ-ರಂಗಳು ಸುರಿಯೆ ಉತ್ತುಂಗ ಮಹಿಮ ಹರುಷಂಗಳ ಬೀರುತ ಅಂಗನೆಯರಿಗೆ 2 ಮಂದಿರ ಮಾನಿನಿಯರು ಬಿಟ್ಟುಮನದಲಿ ಕಂಗೆಟ್ಟುಮಂದರೋದ್ಧರನಲ್ಲೆ ಮನವಿಟ್ಟುಕರೆಕರೆಯ ಬಿಟ್ಟುಚಂದದಿ ಕರ್ಪೂರ ವೀಳ್ಯವನಿಟ್ಟುಸಡಗರವ ತೊಟ್ಟುಒಂದಾಗಿ ಚೆದರುತ ತೋಷವ ತೊಟ್ಟುತ್ವರೆ ಬರುವರು ಅಷ್ಟುಅಂದದಿಂದಲಾನಂದವೇರಿ ಮು -ಕುಂದನಂಘ್ರಿ ಮುದದಿಂದ ಸ್ಮರಿಸಿ ಬರು-ವಂದ ನೋಡಿ ಗೋವಿಂದ ಕೊಳಲ ಬಹುಅಂದದೊಳಿಡೆ ಈ ಇಂದುವದನೆಯರುಚಂದ್ರನುದಯವಾದಂತೆ ಆಯ್ತು ಮನಗಂಧ ಕಸ್ತೂರಿ ತಂದು ಆಗ ಹರಿಕಂದರದೊಳಗಿಡೆ ರಂಗವಿಠಲ ದಯದಿಂದ ನೋಡ್ದ ಪುರಂಧ್ರಿಯರನ್ನು3
--------------
ಶ್ರೀಪಾದರಾಜರು
ರಾಘವೇಂದ್ರ ಸ್ವಾಮಿಗಳು ಅಂತರಂಗದಿ ಹರುಷವಾಂತೆವೈ ಗುರುವೆ ಪ ಸಂತಸದಿ ಸೇವೆಗಳ ಸ್ವೀಕರಿಸು ಪ್ರಭುವೆ ಅ.ಪ ಮಂಗಳಾಂಗಿಯರೆಲ್ಲ ಮಿಂದು ಮಡಿಗಳನ್ನುಟ್ಟು | ಮಂಗಳಾತ್ಮಕ ನಿನಗೆ ಮಜ್ಜನವ ಗೈಸೆ || ಅಂಗಳದಿ ದಧಿಕ್ಷೀರ ಘೃತಕುಂಭಗಳಧರಿಸಿ | ಸಿಂಗರದಿ ನಿಂದಿಹರೊ ಗುರುರಾಘವೇಂದ್ರ 1 ಧಾರುಣೀಸುರರೆಲ್ಲ ಧೀರಯತಿವರ ನಿನಗೆ | ಚಾರುವಿಭವದಿ ಕವಚ ಧಾರಣೆಯ ಗೈಸೆ || ಸೇರಿ ನುತಿಸುತೆ ನಿನ್ನ ಸಾರಗುಣ ಸಂಪನ್ನ | ಸಾರಿಹರೊ ನಿನ್ನಡಿಗೆ ಗುರುರಾಘವೇಂದ್ರ 2 ನಿಂದು ಭೂಸುರರೆಲ್ಲಾ ಜಯಜಯ ಜಯವೆನಲು| ಮಂದಹಾಸದಲವರ ಸೇವೆಯನು ಕೊಂಡೆ || ಇಂದು ಬೃಂದಾವನದಿ ನಿಂದು ದರ್ಶನವಿತ್ತೆ | ಕುಂದದಿಷ್ಟವ ಸಲಿಸೊ ಗುರುರಾಘವೇಂದ್ರ 3 ಉಡುರಾಶಿಗಳ ಮಧ್ಯೆ ಉಡುಪ ಮೆರೆಯುವ ತೆರದಿ | ಉಡುಗಣಿಕ್ಷೇತ್ರದೊಳು ನಿಂದು ಮೆರೆದೆ || ಕಡುಮಮತೆಯಲಿ ನಿನ್ನ ಸಡಗರದಿ ಸೇವಿಪರ | ಎಡರುಗಳ ಪರಿಹರಿಸೊ ಗುರುರಾಘವೇಂದ್ರ4 ನರಹರಿಯ ಮೆಚ್ಚಿಸಿದೆ ಪ್ರಹ್ಲಾದನೆನಿಸುತಲೆ | ಸಿರಿಕೃಷ್ಣನೊಲಿಸಿದಿಯೊ ವ್ಯಾಸಮುನಿ || ಸಿರಿರಾಮಚಂದ್ರಪ್ರಿಯ ಗುರುರಾಘವೇಂದ್ರನೆ | ಕರುಣದಲಿ ತೋರೀಗ ಶ್ರೀಶಕೇಶವನ5
--------------
ಶ್ರೀಶ ಕೇಶವದಾಸರು
ರಾಜ ಶಿರೋಮಣಿ ದಯಮಾಡೈ ಪ ಕಾಲವಿಭೀತಿಯಿಂ ಬಾಲನು ಗೋಳಿಡೆ ಶೂಲದೆ ಕಾಲನ ಸಂಹರಿಸಿದೆ 1 ಕ್ಷೀರಾಭ್ದಿ ಮಧ್ಯದೊಳ್ ಹಲವು ಪುಟ್ಟಲು ಲೀಲೆಯೊಳೆಲ್ಲವ ನೀಂಟಿದೆ 2 ಕೈಲಾಸವಾಸ ಶೈಲಾಪ್ತ ಬಂಧುವೆ ಬಾಲರಾಜಾಂಚಿತ ಭೂಷಣ 3 ನಿರ್ಮಲರೂಪ ನಿಷ್ಕಲ ಸ್ವರೂಪ ಬ್ರಹ್ಮಮಸ್ತಕ ಕಾಲರೂಪ 4 ಫಾಲಾಕ್ಷದೇವ ಮಾಲಾ ಮನೋಹರ ನೀಲಲೋಹಿತ ಧೇನುಭೂಪತೆ 5
--------------
ಬೇಟೆರಾಯ ದೀಕ್ಷಿತರು
ರಾಜೀವದಳನೇತ್ರ ರಾಮಚಂದ್ರನೆ ಶುಭ- ನಾಮಧೇಯನೆ ನಿನಗಾನಮಿಸುವೆನು ಪ ರಾಮರಾಕ್ಷಸಕುಲ ಭಯಂಕರ ರಾಮದಶರಥ ಪುತ್ರನೆ ವರ ಸಾಮಗಾನ ವಿಲೋಲ ಶ್ರೀವರ ರಾಮ ಭರತ ಶತ್ರುಘ್ನ ಪಾಲಕ ಅ.ಪ ಸುರರೆಲ್ಲ ನೆರೆದು ಋಷಿವರರೆಲ್ಲ ಒಂದಾಗಿ ವರ ಕ್ಷೀರಾಂಬುಧಿಯ ಸಾರುತ ವೇಗದಿ ಪರಮಾತ್ಮ ನಿನ ಕಂಡು ಪರಿಪರಿ ಸ್ಮರಿಸುತ ನೆರೆದರು ದೇವ ಗಂಧರ್ವ ನಾರದರೆಲ್ಲ ಗರುಡ ಗಮನನೆ ಉರಗಶಯನನೆ ಪರಮ ಪುರುಷನೆ ಪುಣ್ಯಚರಿತನೆ ತ್ವರದಿ ಎಮ್ಮಯ ಮೊರೆಯ ಕೇಳೆಂದು ಭರದಿ ಪ್ರಾರ್ಥನೆ ಮಾಡುತಿಹರು 1 ಖೂಳ ದೈತ್ಯರು ನಮ್ಮ ಬಾಳಗೊಡರೊ ದೇವ ಭಾಳ ವ್ಯಾಕುಲರಾಗಿ ದು:ಖಿಪೆವು ಕೇಳಿ ತಡಮಾಡದೆ ಪಾಲಿಸಿ ಸಲಹಯ್ಯ ಶ್ರೀಲೋಲ ಶ್ರೀವರ ಶ್ರೀವತ್ಸಲಾಂಛನ ಶ್ರೀಶ ಶ್ರೀ ಭೂದೇವಿ ರಮಣನೆ ಮಾತುಳಾಂತಕ ಮದನಜನಕನೆ ವಾಸುದೇವನೆ ಭಜಿಪ ಭಕ್ತರ ಸೋಸಿನಲಿ ರಕ್ಷಿಸುತ ಪೊರೆಯುವೆ 2 ಭಕ್ತವತ್ಸಲ ಸ್ವಾಮಿ ಭಕ್ತರ ಸುರಧೇನು ಯುಕ್ತ ಮಾತುಗಳಾಡಿ ಸಂತಯಿಸಿ ಸತ್ಯ ಸಂಕಲ್ಪನು ಮತ್ತವರನು ಕಳುಹಿ ಸತ್ಯಸಂಧನ ದಶರಥನುದರದಿ ಪುಟ್ಟಿ ಮತ್ತೆ ವಿಶ್ವಾಮಿತ್ರ ಬರಲು ಅರ್ಥಿಯಲಿ ಯಾಗವನೆ ನಡೆಸಲು ಸುತ್ತಿ ಬರುವ ಸುರರನೆ ಸದೆದು ಮತ್ತೆ ಯಾಗ ನಿರ್ವಿಘ್ನ ಮಾಡಿದ 3 ಸೀತಾಸ್ವಯಂವರಕ್ಕಾಗಿ ಬರುತಿರಲಾಗವರು ಗೌತಮ ಸತಿಯ ಶಾಪಹರಿಸಿ ಪಾತಕಿ ತಾಟಕಿಯನು ಕೊಂದು ಹರುಷದಿ ನಿ- ರ್ಭೀತನಾಗಿ ಮಿಥಿಲಾಪುರಕೆ ಸೇರಲು ಬಂದು ಆತ ಲಕ್ಷ್ಮಣನೊಡನೆ ಶಿವಧನು ನೀತಿಯಿಂದೆತ್ತುತಲಿ ಸೀತೆಯು ಪ್ರೀತಿಯಲಿ ವನಮಾಲೆ ಹಾಕಲು ಆಕೆಯ ಕೈಪಿಡಿದ ರಾಮನೆ 4 ರಾಮಲಕ್ಷ್ಮಣ ಭರತ ಶತ್ರುಘ್ನರಿಗೆ ಲಗ್ನ ನೇಮದಿಂದಲಿ ಮಾಡಿ ಕಳುಹಲಾಗ ಸಾಮಜವರ ಅಯೋಧ್ಯಾಪುರದಿ ಭಕ್ತ- ಸ್ತೋಮವನೆರಹಿ ರಾಜ್ಯಾಭಿಷೇಕವ ನಡಸೆ ಆ ಮಹಾಮುನಿ ಸ್ತೋಮ ಸುರಗಣ ರಾಮನಿಗೆ ಪಟ್ಟವೆನುತ ಹರುಷಿಸೆ ಆ ಮಹಾಕೈಕೆ ವರವ ಬೇಡುತ ರಾಮನಿಗೆ ವನವಾಸವೆನಲು 5 ವನವನ ಚರಿಸುತ ಘನರಕ್ಕಸರ ಕೊಂದು ವನಜಾಕ್ಷಿ ಮಾಯಾಮೃಗವೆ ಬೇಡಲು ವನಮೃಗ ಬೆನ್ನಟ್ಟಿ ತರುವೆನೆನುತ ಪೋಗಿ ಬಣಗು ರಾವಣ ಸೀತಾಹರಣವ ಮಾಡಲು ಕುರುಹು ಕಾಣದೆ ಸೀತೆಯ ವನವನದಿ ಚರಿಸುವ ಸಮಯದಲಿ ಕಪಿ ವರರ ಸೈನ್ಯವ ಕಳುಹಿ ಮುದ್ರಿಕೆ ಇತ್ತು ಜನಕ ಜಾತೆಯ ನೋಡಿ ಬರಲು 6 ಕಡಲ ಕಟ್ಟುತ ಸೈನ್ಯ ನಡಿಸಿ ಯುದ್ಧವ ಮಾಡೆ ಬಿಡದೆ ರಾವಣ ಸಹಿತೆಲ್ಲರನು ಕೊಂದು ಕಡು ಭಕ್ತನಿಗೆ ಲಂಕಾಪುರದಲಿ ಪಟ್ಟವ ಕಟ್ಟಿ ಮಡದಿ ಸಹಿತ ಪುಷ್ಪಕವನೇರಿ ಬರುತಿರೆ ಸಡಗರದಿ ಹನುಮಂತ ಭರತಗೆ ಒಡೆಯ ಬರುತಿಹನೆಂದು ಪೇಳಲು ಕಡುಹರುಷದಿ ಅಯೋಧ್ಯೆಯನಾಳಿದ ಕಡಲೊಡೆಯ ಕಮಲನಾಭ ವಿಠ್ಠಲನೆ 7 ಬಂದ ಶ್ರೀರಾಮಚಂದ್ರ ಭಾಗವತರ ಕೂಡಿಇಂದಿರೆ ಜಾನಕಿ ಸೌಮಿತ್ರಿ ಸಹಿತದಿ
--------------
ನಿಡಗುರುಕಿ ಜೀವೂಬಾಯಿ
ರಾಧೆ ಗೋಪಾಲ ಕೃಷ್ಣ ರಾಧೆಗೋಪಾಲ ರಾಧೆ ಗೋಪಾಲ ಕೃಷ್ಣ ರಾಧೆಗೋಪಾಲ ಪ ನಂದನಕಂದ ಮುಕುಂದಮುರಾರೆ ಇಂದಿವರಾಕ್ಷ ಗೋವರ್ದನಧಾರೆ ವೃಂದಾವನ ಸಂಚಾರ ವಿಹಾರೇ ಸಿಂಧುಶಯನ ಕ್ಷೀರಾಬ್ಧಿವಿಹಾರ 1 ಚಕ್ರಧರ ವೇಣುವಿನೋದ ಶಂಕರಾದಿ ವಂದಿತ ದಿವ್ಯಪಾದ ಬಿಂಕದಿಂದ ಕೊಳಲೂದುವನಾದ ಪಂಕಜಾದಿಗಳು ನಲಿವ ಸುಸ್ವಾದ 2 ಮಂದರಧರÀ ಗೋವರ್ಧನ ಧಾರಿ ಮಂದೆ ಗೋವತ್ಸವ ಕಾಯ್ವ ಶೌರಿ ಇಂದಿರೆಯರಸ ಶ್ರೀಹರಿಯೆ ಮುರಾರಿ ನಂದಯಶೋದೆಯ ಮೋಹದ ಶೌರಿ3 ವೃಂದಾವನದೊಳು ನಿಂದ ಗೋವಿಂದ ಮಂದಹಾಸ ಮುಖನಗೆ ಮೊಗದಿಂದ ಸುಂದರ ಗೋಪಿಯರೊಡಗೂಡಿ ಬಂದ ಮಂದರಧರ ಆನಂದ ಮುಕುಂದ 4 ಕಾಮನಪಿತ ಶ್ರೀ ಕಂಜಜನಾಭ ಕಾಮಿತ ಫಲಗಳ ಕರುಣಿಪ ಶ್ರೀಧ ಕಮಲನಾಭ ವಿಠಲ ನಿಮ್ಮ ಪಾದ ಕರುಣದಿ ನೆನೆವರ ಸಲಹುವಮೋದ 5
--------------
ನಿಡಗುರುಕಿ ಜೀವೂಬಾಯಿ
ರಾಮಚಂದ್ರನೆ ನಿನ್ನ ನಾಮಮೃತವು ಎನ್ನ ನಾಲಿಗೆಯೊಳು ನಿಲಿಸು ಪ ದಾನವಾಂತಕ ನಿನ್ನ ಧ್ಯಾನ ಬಿಡದೆ ಇತ್ತು ದೀನ ರಕ್ಷಕ ಹರಿ ಜಾನಕಿ ರಮಣನೆ ಅ.ಪ ಕ್ಷೀರವಾರಿಧಿ ಶಯನ ಶ್ರೀ ಹರಿಯನು ಸ್ಮರಿಸುತ ಧ್ಯಾನವ ಮಾಡಿ ಭಕುತಿಲಿ ನಾರದ ಹರ ಬ್ರಹ್ಮಾದಿ ಋಷಿ ಗಂಧರ್ವರು ಸುರರೆಲ್ಲರು ಕೂಡಿ ಮಾರಮಣನ ಕೊಂಡಾಡುತ ಸ್ತೋತ್ರವ ಮಾಡಿ ಪಾರುಮಾಡು ಜಗದೀಶನೆ ಎನುತಲಿ ತವಕದಿ ಶ್ರೀ ಭೂರಮಣನು ದೀನರ ನುಡಿಗಳ ಕೇಳುತ ಆಲೋಚಿಸುತಲಿ ಬೇಗದಿ ಭೂನಾಥನ ಮನೆಯೊಳಗವತರಿಸುವೆ ಎನ್ನುತವರಿಗೆಲ್ಲಾಭಯವ ನೀಡಿದ 1 ದಶರಥನುದರದಿ ಜನಿಸಲು ನಾಲ್ವರು ಅಂದು ಯಾಗಕೆ ಕೌಶಿಕನಲ್ಲಿ ವಿದ್ಯೆಗಳನ್ನು ಕಲಿಯುತ ಬಂದು ಶಶಿಮುಖ ಜಾನಕಿ ಕರಪಿಡಿದನು ತಾನಂದು ಅಯೋದ್ಯದಿ ಎಸೆವ ಸಿಂಹಾಸನವೇರುವ ಸಮಯದಿ ಬಂದು ರಸಕಸಿ ಮಾಡಲು ಕೈಕೇಯಿಯು ತಾ ಶಶಿಮುಖ ಸೀತೆಯ ಒಡಗೂಡುತಲಿ ಬಿಸಿಲು ಗಾಳಿಮಳೆಯೊಳು ವನಚರಿಸುತ ಸತಿಯು ಬೇಡೆ ಮಾಯಮೃಗವ ಬೆನ್ನಟ್ಟಿದ 2 ಶಶಿಮುಖ ಸೀತೆಯ ದಶಶಿರನೊಯ್ಯಲು ಕೇಳಿ ದಶರಥಸುತ ಅರಸುತ ಬಲು ಶೋಕವ ತಾಳಿ ಚಿಂತಿಸಿ ಎಸೆವ ಗಿರಿ ಗುಹೆಗಳ ಹುಡುಕಲು ಮಾರುತಿ ನೋಡಿ ಮುದ್ರಿಕೆ ವಸುಧೆ ತನಯಳಿಗರ್ಪಿಸೆ ಆಕೆಯು ಮುದ ತಾಳಿ ಚೂಡಾಮಣಿ ಕೊಡಲು ಶ್ರೀ ರಘುವೀರನು ಸೇತುವೆ ಕಟ್ಟುತ ಕ್ರೂರ ಖಳರನು ಸಂಹರಿಸಿದ ಕಮಲ-ನಾಭ ವಿಠ್ಠಲ ಅಯೋದ್ಯದಿ ಮೆರೆಯುವ 3
--------------
ನಿಡಗುರುಕಿ ಜೀವೂಬಾಯಿ
ಲಕುಮಿವಲ್ಲಭ ಹರಿಯ ಮಂದಿರದಿಂದ ಬಕುಳೆ ಬಂದ ಪರಿಯ ನಗುತ ಸದ್ಯುಕುತಿಯಿಂದಲಿ ಪೇಳ್ದಳು ಪ. ಯಾರು ಬಲ್ಲರಿವನ ಸಂಸ್ಥಿತಿಯನ್ನು ನೀರೆ ನೀ ಪೇಳ್ವದನ ದಾರಿಯ ಪೇಳೆ ಜಾಣೆ 1 ಕ್ಷೀರಾಂಬುಧಿವಾಸನ ಸಕಲಗುಣ ವಾರುಧಿ ವರದೇಶನ ಸಾರಿ ಸಾರಿಗೆ ಸರ್ವ ಸುರಮುನೀಶ್ವರರೆಲ್ಲ ಸೇರಿ ಬಾಳುವರೀತನ 2 ಮಾತಿಗೆ ದೊರೆಯನಂತೆ ಮನೋಗತಿ ನೀತಿಯು ನಡೆಯದಂತೆ ಜಾತಿ ಗೋತ್ರ ಬಂಧು ಜನರಿಲ್ಲದವನಿಗಿನ್ಯಾತಕೆ ಪರಿಣಯವು 3 ಭೂತೇಂದ್ರಿಯ ಮನವು ಬಲಿಷ್ಠ ಮಹಾತತ್ವ ಹಂಕೃತಿಯು ಶ್ರೀ ತರುಣಿಯ ಗುಣ ತ್ರಯಮುಖ ತತ್ವ ಸಂಘಾತವೀತನಿರಲು 4 ಮನೆಯ ಕಟ್ಟಿದನೆಂಬೊರು ನಿಜವಾಗಿ ಪೇಳು 5 ಸಕಲ ಜಗನ್ನಿವಾಸ ಸಾಂಗೋಪಾಂಗ ಮುನಿಗಳ ಸರಿವನಂತೆ ತನುಮನದಲಿ ತನ್ನ ನೆನೆವರ ಕೃತ್ಯಗಳನು ತಾನೆ ಮಾಳ್ಪನಂತೆ 6 ಮನೆವಾರ್ತೆಗಳ ಬಿಟ್ಟು ಸಂಚರಿಸುವ ಮುನಿಗಳ ಸರಿವನಂತೆ ತನುಮನದಲಿ ತನ್ನ ನೆನೆವರ ಕೃತ್ಯಗಳನು ತಾನೆ ಮಾಳ್ಪನಂತೆ 7 ದಾಸರ ಪಾಲಿಪುದು ಎಂದೆಂದಿಗು ಶ್ರೀಶನ ಮಹಬಿರುದು ದೋಷದೂರನಾದರಿಂದ ಮೌನಿ ಮನೋವಾಸನಾಗಿಹ ನೆರದು 8 ಕುಲಹೀನನಾಗಿ ಕಲ್ಪಾಂತದೊಳಿರುವಗೆ ಲಲನೆಯ ನಿಪ್ಪುದೆಂತೆ 9 ಸುಧೆಯನು ತಾನೆ ತಂದ ಮುದವ ತೋರಿದ ಮುಕುಂದ 10 ಹೊಡದಾಡಿ ಬರುವನಂತೆ ಕೊಡುವದೆಂತೆ 11 ಮಗುವಿನ ಮಾತ ಕೇಳಿ ತಕ್ಷಣ ನರಮೃಗನಾಗಿ ಕೋಪತಾಳಿ ಬಗೆದು ಬಲಿಷ್ಠ ದೈತ್ಯನು ಸುಲಭದಿ ಬೇಗ ತೆಗೆದನು ಕರುಳನಂತೆ 12 ಸಿರಿಯನಾಳುವನಾದರೆ ದೈತ್ಯರ ಮುಂದೆ ತರಿವುದು ಸರಿಯೆ ನೀರೆ ಮರುಳು ಮಾತುಗಳಾಡಲ್ಯಾತಕೆ ಸುಮ್ಮನೆ ಥರವಲ್ಲ ಹಿಂದೆ ಸಾರೆ 13 ಕೃತ್ರಿಮ ದ್ವಿಜನಿವನು ಭೂಭಾರಕ ಕ್ಷತ್ರ ಸಮೂಹವನು ಶಸ್ತ್ರ ಪಿಡಿದು ಬುಡ ಕತ್ತ್ರಿಸಿ ಮಡುಗಳ ನೆತ್ರದಿ ರಚಿಸಿದನು 14 ದಾನವರನು ಗೆಲಲು ಚಪಲ ಬುದ್ಧಿ ವಾನರರನು ಒಲಿಸಿ ಪೇಳ್ವ ಹೀನವಾರ್ತೆಗಳೇನಿದು 15 ಧರೆಯ ಭಾರವನಿಳುಹಿ ಸಕಲ ಸುರವರ ಮುನಿಗಳ ಸಲಹಿ ತೆರವ ತೋರಿದ ಕೃಷ್ಣನು 16 ಜೈನರ ಸಭೆಯೊಳಗೆ ಮೈಯೊಳು ವಸ್ತ್ರಹೀನನಾಗಿರುವ ಬಗೆ ನಾನರಿಯೆನೆ ಬಹು ಮಾನ ಬಿಟ್ಟವನಿಗೆ ಏನೆಂದು ಮಗಳೀವನೆ 17 ಕೊಲುವನು ಖಡ್ಗದಲಿ ನಿಖಿಳ ಕುಲವನುದ್ಧರಿಸುವನು 18 ಏನೆಂದರು ಮನದಿ ನಿರ್ಣಯ ತೋರದೇನು ಮಾಡಲಿ ಕೆಳದಿ ಮಾನಿನಿ ಶಿರೋಮಣಿಯೆ 19 ದೋಷ ಲೇಶಹೀನನು ಸಕಲಗುಣ ಭೂಷಿತ ಶ್ರೀವರನು ಶೇಷ ಗಿರೀಶನೆನಲು ತನ್ನ ಮಗಳೀವ ಭಾಷೆಕೊಟ್ಟಳು ಧರಣಿ 20
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷ್ಮೀ ಸ್ತುತಿಗಳು ಆರೋಗಿಸು ತಾಯೇ ಮೋದದಿ ಕ್ಷೀರಾಂಬುಧಿ ತನಯೆ ಪ. ಸಾರಸನಯನೆ ಮದವಾರಣಗಮನೆ ಸಾರಿ ಚೀಡುವೆ ಸರಾಗದೊಳೀಕ್ಷಿಸು ಅ.ಪ. ಉಪ್ಪು ಉಪ್ಪಿನಕಾಯಿಕೋಸುಂಬರಿ ಹಪ್ಪಳ ಸಂಡಿಗೆಯ ತಪ್ಪದೆ ತಂದೊಪ್ಪಿಸುತಿಹೆ ಎನ್ನಪ್ಪನೊಡನೊಪ್ಪದಿ ವ ುಂಡಿಸಿ 1 ಚಕ್ಕುಲಿ ಕರಜಿಕಾಯಿ ಅತಿರಸ ಸಕ್ಕರೆ ಹೋಳಿಗೆಯಂ ನಲಿಯುತ 2 ದಧಿ ನವನೀತ ಘೃತ ಮಧುಸಾರವೆನಿಪ ಪರಮಾನ್ನ ಕ್ಷೀರಶರಧಿಸುತೆ ನೀ ನೀರಸ ಸಹಿತಾಪಾರ ಕೃಪಾಪಾಯದೊಳೀಕ್ಷಿಸಿ3 ಸವಿನೋಡುತೆ ನಲಿದು4 ನಿಗಮಾಗಮ ವಿನುತೇ ನಮಿಸುವೆ ನಗಧರ ಸುಪ್ರೀತೆ ಗುಣಗಳ ಬಗೆಗೊಳಿಸುತ್ತಲಿ 5
--------------
ನಂಜನಗೂಡು ತಿರುಮಲಾಂಬಾ
ಲಕ್ಷ್ಮೀರಮಣನೆ ರಕ್ಷಿಸೆನ್ನನು ಅಧೋಕ್ಷಜ ಹರಿ ಪ ಮಂದ ಬಿಡಿಸಿ ಸಲಹೋ ದೇವ ಇಂದು ಮುಂದು ಎನಗೆ ನೀ ಗತಿ ಎಂದು ನಂಬಿದೆ ಮಂದರಧರ ಗೋವಿಂದ ಮುಕುಂದ1 ಗರುಡಗಮನ ವಾಸುದೇವ ನಿರುತ ನಿನ್ನ ಭಜಿಪ ಭಕ್ತರ ಸ್ಮರಣೆ ಪಾಲಿಸೊ ಪರಮಪುರುಷ ಹರಿ ಶರಧಿಶಯನ2 ದೇಶದೇಶ ತಿರುಗಿ ಬಹಳ ಬೇಸರದಲೆ ಬಳಲಿದವರ ಕ್ಲೇಶಗಳನೆ ಕಳೆದು ಪರಮೋಲ್ಲಾಸ ನೀಡಿದ ಸಾಸಿರನಾಮದ ಒಡೆಯನೆ ವೆಂಕಟ 3 ಕ್ಷೀರವಾರಿಧಿ ಶಯನದೇವ ಮಾರಪಿತ ಮಹಾನುಭಾವ ಶರಧಿ ಪಾರುಗಾಣಿಸೋ ಪರಿಸರ ನೊಡೆಯನÉ ಉರಗಶಯನ 4 ಶಂಖು ಚಕ್ರಧಾರಿ ಶ್ರೀಹರಿ ಪಂಕಜಾಕ್ಷರೊಳು ವಿಹಾರಿ ಶೌರಿ ಶಂಕರಾನುತ ಪಂಕಜಲೋಚನ ವೆಂಕಟರಮಣ 5 ಕಪಟ ಸೂತ್ರಧಾರಿ ಚಪಲ ಬುದ್ಧಿಯ ಬಿಡಿಸೊ ಶೌರೀ ಅಪರಿಮಿತ ಮಹಿಮೆಗಳ ತೋರಿ ನಟಿಸಿ ಮೆರೆವ ಸಟೆಯಲ್ಲವೊ ನಾರದ ಮುನಿ ಸೇವಿತ 6 ಕಮಲಾಪತೆ ಪ್ರಿಯ ಜೀಯ ಕಮಲಸಂಭವ ಜನಕದೇವ ಕಮಲನಾಭ ವಿಠ್ಠಲ ಕಾಯೋ ಶ್ರಮವ ಹರಿಸೊಸುಮನಸರೊಡೆಯನೆ ಸುರಮುನಿ ಸೇವಿತ 7
--------------
ನಿಡಗುರುಕಿ ಜೀವೂಬಾಯಿ
ಲಾಲಿ ರಂಗನ ರಾಣಿ ಪರಮಕಲ್ಯಾಣಿ ಲಾಲಿ ಕೀರವಾಣಿ ಪಂಕಜಪಾಣಿ ಲಾಲಿ ಪ. ಕ್ಷೀರಸಾಗರದಲಿ ಜನಿಸಿ ತಾ ಬಂದು ವಾರಿಜಾಕ್ಷನ ವಕ್ಷಸ್ಥಳದಿ ತಾ ನಿಂದು ಘೋರ ಪಾತಕಿಗಳನು ಪೊರೆವೆನೆಂತೆಂದು ಶ್ರೀರಂಗಕ್ಷೇತ್ರದಲಿ ಬಂದು ತಾ ನಿಂದು 1 ಶುದ್ಧ ಪಾಡ್ಯ ತುಲಾ ಕಾರ್ತೀಕದಲಿ ಮುದ್ದು ಶ್ರೀರಂಗನ ರಾಣಿ ಹರುಷದಲಿ ದಂತದ ಉಯ್ಯಾಲೆಮಂಟಪದಲ್ಲಿ ಕಂತುಪಿತನರಸಿಯಾಡಿದಳೆ ಉಯ್ಯಾಲೆ 2 ಕಸ್ತೂರಿಯನಿಟ್ಟು ಮುತ್ತಿನ ಮೂಗುಬಟ್ಟು ಹಾರಪದಕಗಳು ಪೀತಾಂಬ್ರವನೆ ಉಟ್ಟು ಕುಂದಣದ ಒಡ್ಯಾಣವನ್ನು ಅಳವಟ್ಟು ಇಂದಿರಾದೇವಿ ಆಡಿದಳೆ ಉಯ್ಯಾಲೆ 3 ರತ್ನದಾ ಕಿರೀಟವನ್ನು ತಾ ಧರಿಸಿ ಕಮಲ ಸರಗಳಳವಡಿಸಿ ಮುತ್ತು ಸುತ್ತಿದ ರತ್ನದಸುಲಿಯನು ಧರಿಸಿ ಅ ಚ್ಚುತನರಾಣಿ ಆಡಿದಳೆ ಉಯ್ಯಾಲೆ 4 ದೋಸೆ ವಡೆ ನೈವೇದ್ಯ ಮೀಸಲನು ಸವಿದು ದಾಸರೆತ್ತಿದ ಪಿಷ್ಟದಾರತಿಯಲಿ ನಲಿದು ಲೇಸಾದ ಕರ್ಪೂರ ವೀಳ್ಯವನು ಸವಿದು ವಾಸುದೇವನರಾಣಿ ಆಡಿದಳೆ ಉಯ್ಯಾಲೆ 5 ವರರಂಗವಂಶದವರು ವರದಿಂದ ಪಾಡೆ ಕರುಣಾಕಟಾಕ್ಷದಿಂ ದೇವಿ ತಾ ನೋಡೆ ಪ್ರಜೆಗಳೆಲ್ಲರು ಬಂದು ವರಗಳನು ಬೇಡೆ ವಜ್ರದಭಯಹಸ್ತಗಳಿಂದ ವರಗಳನು ನೀಡೆ 6 ಕರ್ತ ಶ್ರೀ ಶ್ರೀನಿವಾಸ ರಂಗನಾರಾಣಿ ಸಪ್ತದಿನದುಯ್ಯಾಲೆಯನು ತಾ ರಚಿಸಿ ಭಕ್ತರಿಗೆ ತೀರ್ಥ ಪ್ರಸಾದಗಳನಿತ್ತು ಅರ್ಥಿಯಿಂ ತೆರಳಿದಳು ತನ್ನರಮನೆಗೆ 7
--------------
ಯದುಗಿರಿಯಮ್ಮ