ಒಟ್ಟು 2845 ಕಡೆಗಳಲ್ಲಿ , 111 ದಾಸರು , 1881 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಸೆಪಡಬೇಡ ಮನುಜ ತಿಳಿಯದೆ ದುರಾಸೆ ಪಡಬೇಡ ಪ ಮೋಸ ಮಾರ್ಗಪಿಡಿದು ಮೂಢರನ್ನು ನೋಡಿ ನೋಡಿ ಅ.ಪ ಚಿಂತಿಸಿ ಭ್ರಾಂತನಾಗಿ ಸಂತೋಷವಿಲ್ಲದೆ ಸದಾ ಶಾಂತಚಿತ್ತರ ಕೂಡದೆ ಸಂತೆ ಕೂಟವನ್ನು ನಂಬಿ 1 ಮುಂದಿನ ಗತಿ ಗೋತ್ರವು ಸಂದೇಹವಾಗುವದೆಲೊ 2 ಶರಣರನಾಶ್ರಯಸದೆ ಕರೆ ಕರೆ ಸಂಸಾರದಿ3
--------------
ಗುರುರಾಮವಿಠಲ
ಇಕ್ಕೊ ಇಲ್ಲೆ ನೋಡಿ ಸಿಕ್ಕುತ್ತದೆ ನಿಜಗೂಡಿ ಧ್ರುವ ತಿಳಿಯಲು ತನ್ನ ಅಳುವುದು ಭಿನ್ನ ಒಳಹೊರಗದೆ ಪ್ರಸನ್ನ ಬೆಳಗು ಅಭಿನ್ನ ಹೊಳೆವದು ಸುಳಹು ಸದ್ಗುರು ಪಾವನ್ನ 1 ತನ್ನೊಳು ತಿಳಿದವನೆ ತಾನುಳಿದ ಉನ್ಮನಿವಸ್ತಿಯೊಳಳಿದಾ ಮುನ್ನಿನ ಕರ್ಮವ ನಿಲ್ಲದೆದೊಳದಾ ಚನ್ನಾಗವೆ ಭವಗಳೆದಾ 2 ಇದು ನಿಜ ಖೂನ ಸಾಧಿಸು ಙÁ್ಞನ ಬುಧ ಜನರ ಸುಪ್ರಾಣ ಭೇದಿಸು ಮಹಿಪತಿ ನಿನ್ನೊಳು ಪೂರ್ಣ ಇದೇ ಸದ್ಗುರು ಕರುಣ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಕ್ಕೊ ಇಲ್ಲೆ ಹರಿ ಇದ್ದಾನೆ | ಸಿಕ್ಕುವಾ ಸದ್ಗುರು ಕರುಣದಲಿ ಧ್ರುವ ಆದಿ ಅನಾದಿಯ ಹಾದಿ ವಿಡಿದು | ಸಾಧಿಸಿ ನೋಡಿರಯ್ಯ ಸಜ್ಜನರು | ವೇದಾಂತದ ಸುಸಾರವಿದು | ಭೇದಿಸಿದವರಿಗೆ ಭಿನ್ನವಿಲ್ಲ 1 ತನ್ನೊಳಗಾಗಿರಲಿಕ್ಕೆ ಭಿನ್ನವ್ಯಾಕೆ | ಚೆನ್ನಾಗಿ ನೋಡುವದು ಉನ್ಮನದಲಿ | ಇನ್ನೊಬ್ಬರಿಗೆ ತಾ ತಿಳಿಯದು | ಧನ್ಯವಾದರು ಅನುಭವಿಗಳು2 ಸೆರಗು ಸಿಲ್ಕಲಿಲ್ಲ ನಾಲ್ಕರಲಿ | ಅರಹು ಆಗಲಿಲ್ಲ ಆರರಲಿ | ಪೂರಿಸಲಿಲ್ಲ ಭಾವ ಮೂರಾಗಲಿ | ತೋರಿದ ಸದ್ಗುರು ಎನ್ನೊಳಗೆ 3 ಮೋಸಹೋಯಿತು ಜಗ ವೇಷದಲಿ | ವಾಸತಿಳಿಯದೆ ವಾಸುದೇವನ | ಕಾಸಿನ ಆಶೆಗೆ ದಾಸರಾಗಿ | ಘಾಸಿ ಆಯಿತು ಭವಪಾಶದಲಿ 4 ಸಣ್ಣದೊಡ್ಡದರೊಳು ಸಾಕ್ಷವಾಗಿ | ಬಣ್ಣ ಬಣ್ಣದಲಿ ತಾ ಭಾಸುತಿಹ್ಯ | ಕಣ್ಣಾರೆ ಕಂಡು ಗುರು ಕೃಪೆಯಿಂದ | ಧನ್ಯವಾದ ಮೂಢ ಮಹಿಪತಿಯು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಕ್ಕೊ ಇಲ್ಲೆ ಹಾನೆ ಅಖಂಡವಾಗಿ ಸದ್ಗುರು ನಮ್ಮ ಅಕ್ಕಿಸಿಕೋಬೇಕು ಗುಕ್ಕಿ ತನ್ನೊಳು ತಾ ಗುಹ್ಯವರ್ಮ ಧ್ರುವ ಹೇಳಬಾರದು ಇನ್ನೊಬ್ಬರಗೀ ಮಾತು ಬಹಳ ಗೂಢ ತಿಳಿದ ಮಹಿಪನೀವಾ ಲಕ್ಷಕೋಟಿಗೆ ಒಬ್ಬ ಪ್ರೌಢ ಒಳಗುಟ್ಟಿನ ಕೀಲು ತಿಳಿಯಲಿಕ್ಕೆ ಮಾಡಿ ಮನದೃಢ ಸುಳಹು ಕಂಡಮ್ಯಾಲೆ ಪ್ರಾಣಹೋದರೆ ಒಬ್ಬನು ಬಿಡಾ 1 ದೂರಿಲ್ಲ ದೂರಿಲ್ಲ ತಿಳಿಕೊಳ್ಳಿ ಪೂರ್ಣ ಅರಿತು ಬ್ಯಾಗ ತಿರುಗಿನೋಡಲು ತನ್ನೊಳು ದೋರುತಿದೆ ಬ್ರಹ್ಮಯೋಗ ಸಾರವೇ ಸುಖಗರವುತದೆ ನೋಡಿರೋ ರಾಜಯೋಗ ಪರದೆ ಇಲ್ಲದೆ ಗುರುತದೋರುವಾ ನೋಡಿ ಕಣ್ಣಾರೆ ಈಗ 2 ಗುರುಕೃಪೆಯಿಂದ ಗುರುತಕ ದೂರಿಲ್ಲ ಕೊಳ್ಳಿ ಖೂನ ಒಳಹೊರಗೆ ತುಂಬಿತುಳುಕುತದೆ ತಾನೆ ನಿಧಾನ ತರಳ ಮಹಿಪತಿ ಸ್ವಾಮಿ ನೋಡಲಿಕ್ಕೆದ ಒಂದೆ ಸಾಧನ ಸ್ವರೂಪರಿಯಲಿಕ್ಕೆ ಆಗುತ್ತದೆ ಬಲುಬ್ಯಾಗಲುನ್ಮನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಕ್ಕೊ ಇಲ್ಲೆಹಾನೆ ಅಖಂಡ ಗುರುತಾನೆ ಬೇಕಯೆಂದವರಿಗೆ ಪೂರ್ಣ ಸಿಕ್ಕುತಾನೆ ಧ್ರುವ ಅರವ್ಹಿನ ಮುಂಧಾನೆ ಮರವ್ಹಿನ ಹಿಂಧಾನೆ ಕುರಹು ತಿಳಿದರೆ ತಾನೆ ಸ್ಥಿರವಾಗ್ಯಾನೆ 1 ಗುರುತ ಕಂಡವಘಾನೆ ಗುರುಸ್ವರೂಪಧ್ಯಾನೆ ಗುರುಕೃಪ್ಯಾದವಘಾನೆ ಗುರುತಾನೆ 2 ಅಣುರೇಣುದೊಳಘಾನೆ ಜನವನ ತುಂಬ್ಯಾನೆ ಅನುಭವಕ ತಾನೆ ಖೂನಾಘ್ಯಾನೆ 3 ಮನದ ಕೊನಿಲಿಹಾನೆ ಘನವೆ ಘನವಾಘ್ಯಾನೆ ದೀನ ಮಹಿಪತಿ ಸ್ವಾಮಿ ತಾನೆ ತಾನೆ4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಕ್ಕೊ ನಮ್ಮಸ್ವಾಮಿ ಸಕಲಾಂತರ್ಯಾಮಿ ಪ್ರಕಟ ಸಹಸ್ರನಾಮಿ ಭಕ್ತಜನ ಪ್ರೇಮಿ ಧ್ರುವ ಒಳಗೆ ನೋಡಿ ನಿಮ್ಮ ಹೊಳೆವ ಪರಬ್ರಹ್ಮ ತಿಳಿಯಲಿಕ್ಕೆ ನೋಡಿವರ್ಮ ಅಳಿಯಬೇಕು ಹಮ್ಮ 1 ಸ್ವಸ್ತ ಮನಮಾಡಿ ವಸ್ತು ಇದೇ ನೋಡಿ ಅಸ್ತವ್ಯಸ್ತ ಬ್ಯಾಡಿ ಸಾಭ್ಯಸ್ತ ನಿಜಗೂಡಿ 2 ಬಿಟ್ಟು ನಿಜಖೂನ ಕೆಟ್ಟು ಹೋಗುದೇನ ಗುಟ್ಟು ಮಹಿಪತಿಗಿದೆ ಮುಟ್ಟಿ ಗುರುಙÁ್ಞನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಟ್ಹಾಂಗಿರಬೇಕು ಮಾಂ ಇಟ್ಹಾಂಗಿರಬೇಕು ಸೃಷ್ಟೀಶ ನಮ್ಮ ಧ್ರುವ ಸಕಳವೆಲ್ಲ ಹರಿ ಸೂತ್ರವು ಇರಲಿಕ್ಕೆ | ವಿಕಳಿತಗೊಂಬುವದ್ಯಾಕೆ ಮಾಂ | ಅಖಿಳ ಭುವನಕೆಲ್ಲ ಸಾಕಿ ಸ - | ಹಕಾರ ನೊಬ್ಬ ಶ್ರೀಪತಿಯ ಮಾಂ | 1 ಯಂತ್ರಜೀವ ತಂತ್ರ ಶಿವ ಇರಲಿಕ್ಕೆ ಸ್ವ | ತಂತ್ರವೆ ನಾನೆಂಬುದ್ಯಾತಕೆ ಮಾಂ | ಚಿತ್ರ ವಿಚಿತ್ರವು ದೋರುವ ಸೂತ್ರವು | ಕರ್ತು ಸದ್ಗುರು ಸುತಂತ್ರವು ಮಾಂ 2 ಅಂತ್ರ ಬಾಹ್ಯ ವ್ಯಾಪಕನಾಗಿರಲಿಕ್ಕೆ | ತಂತ್ರ ಮಂತ್ರಗಳ್ಯಾತಕೆ ಮಾಂ | ಜಂತ್ರ ಮಾಡಿ ಜನ್ಮ ಮರಣದ ತಿರಿಹುವಾ | ಗಂತ್ರವು ಎಂದಿಗೆ ತಿಳಿಯದು ಮಾಂ 3 ಇಟ್ಹಾಂಗ ಇರಬೇಕು ಕೊಟ್ಹಾಂಗ ಕೊಂಡಿನ್ನು | ತುಟ್ಟಿಲೆ ಮಿಸುಕದೆ ಗುಟ್ಟಿಲೆ ಮಾಂ | ಹೊಟ್ಟಿಗಾಗಿ ಅಷ್ಟು ಸಾಯಾಸ | ಬಟ್ಟರೆ ಸಾರುಸದೇ ಅಟ್ಟಿಸುವದು ಮಾಂ 4 ಇಟ್ಹಾಂಗ ಇರೋ ಮಹಿಪತಿ ಸೃಷ್ಟಿಯೊಳಿನ್ನು | ಘಟ್ಟಿಗೊಂಡ ಗುರುಪಾದವು ಮಾಂ | ಮುಟ್ಟಿ ಮುದ್ರಿಸಿ ಕೃಪಾದೃಷ್ಟಿಲೆ ಹೊರೆವನು | ಕೊಟ್ಟು ನಿನಗೆ ಸ್ವಾನುಭವವು ಮಾಂ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂಥಾ ಗುರುಗಳ ಕಾಣೆನೋ ಈ ಜಗದೊಳು ನಾ ಪ ಇಂಥಾ ಗುರುಗಳನೆಂದು ಕಾಣೆನಾ ನಂತ ಚೇತನರಂತರ ಬಹಿರದಿ ನಿಂತು ಕರ್ಮವವರಂತೆ ಮಾಳ್ಪಾ - ನಂತ ಮಹಿಮಾನಂತನಾಂಶಜರಿಂಥಾಅ.ಪ ತುಂಗಾತೀರದಿ ನಿವಾಸಾ ಮಂತ್ರಾಲಯಕೀಶ ತುಂಗ ವಿಕÀ್ರಮ ಜಗದೀಶಾ ಶ್ರೀಹರಿ ದಾಸಾ ಮಂಗಲ್ಮಾತಕ ವೃಂದಾವನ ದೇಶಾ ಸಾರಿದ ವ್ರತೀಶಾ ಮಂಗಲ ಮಹಿಮ ರಂಗನ ಕರುಣಾಪಾಂಗ ಪಡೆದ ಕೃ - ಪಾಂಗ ಯತಿಕುಲೋತ್ತುಂಗ ಮಾಯಿ ಮಾ - ತಂಗ ಸಂಘಕೆ ಸಿಂಗ ದುಷ್ಟ ಭು - ವಿಹಂಗ ಸ್ವಮತೋ - ಭೃಂಗ ಮನ್ಮನೋ - ರಂಗ ಬಿಂಬನ ಇಂಗಿತಙ್ಞರ ಸಂಗ ನೀಡಿ ಕಂಗಳಿಗೆ ತಾವು ಕಂಗೊಳಿಪರಿಂಥಾ 1 ಮೇದಿನಿ ತಳದಲಿ ಜನಿಸೀ ಸುಖತಿರ್ಥರ ಭಜಿಸೀ ಭೇಧಮತವನೆ ಸಾಧಿಸೀ ವಾದದಿ ಜೈಸಿ ಮಾಧವನೆ ಸರ್ವೋತ್ತಮನೆನಿಸಿ ಸ್ವಮತವ ಸ್ಥಾಪಿಸಿ ಭೋಧಿಸಿ ತತ್ತ್ವವ ಭೇಧಿಸಿ ಪರಮತ ಛೇಧಿಸಿ ಕುಮತಿಯ ಶೋಧಿಸಿ ತತ್ತ್ವದ ಹಾದಿಯ ಹಿಡಿಸಿ - ಮೋದಕೊಡುವ ಪಂಚ ಭೇದವ ತಿಳಿಸೀ ಸಾದರ ತನ್ನಯ ಪಾದಸೇವೆಯ ಮೋದವ ನೀಡುವ ಮೇದಿನೀ ದಿವಿಜಾರಾಧಿತ ಪದಯುಗ ಶೋಧಿಸಿ ಜನಮನೋ ಖೇದಗೊಳಿಪ ಭ - ವೋಧಧಿ ದಾಟಿಸಿ ಶ್ರೀದÀನ ತೆರದಲಿ ಮೇದಿನಿಯಾಳುವರಿಂಥಾ 2 ಧಿಟ್ಟ ಗುರು ಜಗನ್ನಾಥ ವಿಠಲದೂತಾ ಸೃಷ್ಟಯೊಳಗತಿ ವಿಖ್ಯಾತಾನೆನಿಸಿದ ಯತಿನಾಥಾ ಕುಷ್ಟಾದಿ ರೋಗದ ಘಾತಾ ಮಾಡುವೊದಾತಾ ಇಷ್ಟಾರ್ಥವಾ ತಾ ಸೃಷ್ಠಿಗೆ ಬೀರುವ ಶಿಷ್ಟಜನರನುತ್ನøಷ್ಟದಿ ಪಾಲಿಪ ಎಷ್ಟು ಪೇಳುವುದೋ ಉತ್ಕøಷ್ಟನ ಗುಣಗಳ ಭ್ರಷ್ಟರರಿಯರೆಲೆ ಶಿಷ್ಟರು ಬಲ್ಲರು ಇಷ್ಟೇ ಅಲ್ಲವೀತನ ವಿಶಿಷ್ಟ ಮಹಿಮೆಗ - ಳೆಷ್ಟು ಪೇಳಲವಶಿಷ್ಟವೆನಿಪವೋ ದೃಷ್ಟಿಹೀನರಿಗೆ ದೃಷ್ಟಿ ನೀಡುವ ದೃಷ್ಟಿ ಮಾತ್ರದಿ ತುಷ್ಟಿಬಡಿಸುವೊರಿಂಥಾ 3
--------------
ಗುರುಜಗನ್ನಾಥದಾಸರು
ಇದಕು ಸಮ್ಮತನಾಗೆಲೋ ನೀ ನದಕುನು ಸಮ್ಮತನಾಗೆಲೊ ಪ ಇದು ಅದು ಎಂಬುದರ್ವಿಧವ ತಿಳಿದು ನೀ ನೆದಕುನು ಸಮ್ಮತನಾಗೆಲೊ ಅ.ಪ ಕಡುಸಿರಿಯೆಂಬುದು ಮರವೆಕುಣಿ ಬಡತನವೆಂಬುದು ಅರಿವಿನಮನೆ ಒಡೆತನವೆಂಬುದು ಪಾಪದ ಗೋಣು ದುಡಿತವೆಂಬುವುದು ಜ್ಞಾನದ ಖನಿ ದೃಢದಿಂದರಿದು ಹುಡುಕಾಡಿದರೋ ಳ್ಹಿಡಕೋ ನಿನಗೆ ಹಿತವಾವುದು ನೋಡಿ1 ಕೆಟ್ಟ ಸಂಸಾರ ಹೇಯಮೂತ್ರ ಕುಣಿ ನಿಷ್ಠೆ ಭಕ್ತಿ ಆನಂದಾಮೃತ ಖಣಿ ದುಷ್ಟಜನರ ಸಂಗ ನರಕಕುಣಿ ಶಿಷ್ಟ ಸಜ್ಜನಸಂಗ ಮುಕ್ತಿಮನೆ ನಿಷ್ಠೆಯಿಂದರಿತು ಇಷ್ಟರೊಳಗೆ ನೀ ಇಷ್ಟಕೆ ಬಂದದ್ದು ಹಿಡಕೋ ನೋಡಿ 2 ನರರ ಸೇವೆ ಮಹ ದುರಿತಬೇರು ಶರಣರ ಸೇವೆ ಸ್ಥಿರಸುಖದ ತವರು ಬರಿದೆ ಕೆಡದೆ ಹರಿಚರಣ ಕೋರು ಮರುಳು ಗುಣಗಳೆಲ್ಲ ತರಿದು ತೂರು ಧೀರ ಶ್ರೀರಾಮನ ಚಾರುಚರಣ ಸೇರಿ ಪರಮಪದವಿಯೊಳು ಲೋಲ್ಯಾಡು 3
--------------
ರಾಮದಾಸರು
ಇದರೊಳಾರೈಯ್ಯ ನೀನು ಆತ್ಮಾ ವದಗಿ ನಾನೆಂದ ಹಂಕರಿಸಿ ಓಯಂದೆಂಬೆ ಪ ನೋಡುವವನೊಬ್ಬ ತಾ ಕೇಳಲರಿಯನು ನುಡಿಯ ನೋಡಲರಿಯನು ಕೇಳುವವ ರೂಪವಾ ಆಡುವವ ನುಡಿಯೊಬ್ಬ ಪರಿಮಳಂಗಳ ತಿಳಿಯಾ ಅಡಲರುವಿಲ್ಲ ಘ್ರಾಣೇಂದ್ರಿಯವನೆ 1 ಕೊಡುವವಗೆ ನುಡಿಯಿಲ್ಲ ನಡೆವವಗೆ ಕರವಿಲ್ಲಾ ಬಿಡದೆ ಚೇಷ್ಟಿಸುವವಗ ರೂಪವಿಲ್ಲಾ ಒಡನಾರು ಮೂರು ಇಪ್ಪತ್ತೈದು ಕೂಟದಲಿ ಗಡಣದಿಂದಿಹ ಮನೆಗೆ ಕ್ಷೇತ್ರಜ್ಞನೊಬ್ಬನಿಹ 2 ತನ್ನ ನಿಜ ತಾನರಿಯ ಧನ್ಯ ತಾನೆಂತೆಂಬೊ ನಿನ್ನ ಬಲ್ಲವಿಕಿಗಿದು ನೋಡುಚಿತವೆ ಇನ್ಯಾರೆ ತಂದೆ ಮಹಿಪತಿ ಬೋಧವನು ಸವಿದು ಕಣ್ಣದರೆದಚ್ಯುತನ ನೆನೆದು ತಿಳಿಯೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದಿನ ದಿನ ಸುದಿನ ನಾಳೆಗೆಂದರೆಂದು ಕಠಿಣ ಮಂದಮತಿಯು ನೀನಾಗದೆ ಈಗ ಮುಕುಂದನ ನಾಮ ಕೀರ್ತನೆಯ ಮಾಡುವುದಕೆ ಪ ಯೋಗಿಗಳೊಡನಾಡು ವಿಷಯದ ಭೋಗವ ನೀಡಾಡು ನಿನ್ನ ನೀ ತಿಳಿವುದಕೆ 1 ಅಸ್ಥಿರ ದೇಹವಿದುನಾನಾವಸ್ಥೆ ಬಾಧಿಸುತಿಹುದು ಬಿಡನೊಡನಾಡುವುದಕೆ 2 ಸಾಧು ಸಂಗತಿಯಿಂದ ಪಾಪವಿಚ್ಛೆದನವದರಿಂದ ಲಕ್ಷ್ಮೀರಮಣನ ಪೂಜಿಸಲಿಕೆ 3
--------------
ಕವಿ ಪರಮದೇವದಾಸರು
ಇಂದಿರೆ ಪ ನೀರಜ ನಿಲಯೆ ಅ.ಪ ಬಾರೆನ್ನಯ ಭವನಕೆ ಭಾಗ್ಯದ ನಿಧಿ ಪೂರಗೊಳಿಸೆ ಮನ ಕೋರಿಕೆಗಳನು1 ಕೊಳಲೂದುವ ಗೋವಳನಿಲ್ಲಿರುವನು ತಿಳಿನಗುಮೊಗದಲಿ ಬೆಳಗೆಲೆ ಭವನವ 2 ಚಿನ್ನದ ಹೊಗೆಯಾಡಿಸೆ ಈ ಮಂದಿರ ನಿನ್ನದೇ ಭಕುತ ಪ್ರಸನ್ನನ ಪ್ರಿಯಳೆ3
--------------
ವಿದ್ಯಾಪ್ರಸನ್ನತೀರ್ಥರು
ಇಂದಿರೇಶನ ಪದದ್ವಂದ್ವಕಮಲ ಭಜಿಪ ಶ್ರೀ ಗುರುವರ ಭೂಪ ಪ. ಬಂದೆನು ನಿಮ್ಮ ಪದ ಸಂದರುಶನಕೀಗ ನೀಗಿರಿ ಭವರೋಗ ಅ.ಪ. ಬಂದವರಯೋಗ್ಯತೆ ಅರಿತಂಕಿತವೀವ | ಕರುಣಾಳುವೆ ದೇವ ನೊಂದೆನೀಗ ಈ ಅಜ್ಞಭವದಿ ಬಿದ್ದು | ಎಂದಿಗೆ ನಾ ಗೆದ್ದು ಇಂದಿರೇಶನ ಹೃತ್ಕಮಲದಲಿ ಕಾಂಬೆ | ಗುರುವೆ ತೋರೆಂಬೆ ಬಂದ ಬಂದ ಕಷ್ಟ ಹಿಂದು ಮಾಡಿ ಪೊರೆದು | ಕೃಪೆಗೈಯ್ಯಲಿ ಬೇಕಿಂದು 1 ಮುಖ ಕಮಲದಿ ಹೊರಡುವ ವಾಕ್ಸರಣಿಗಳು | ಗಂಗಾ ಪ್ರವಾಹಂಗಳು ಅಕಳಂಕದ ತತ್ವಾರ್ಥದಿ ನಾ ಮುಳುಗಿ | ದುರಿತದ ಭವನೀಗಿ ಸುಖ ಸಾರೂಪ್ಯದ ಮುಕುತಿ ಮಾರ್ಗ ಕಂಡೆ | ಭವ ತುಂಡೆ ಭಕುತಿ ಭಾಗ್ಯವ ನಿತ್ಯದಿ ಕರುಣಿಪುದು | ಸುಜ್ಞಾನವ ನೀಡುವುದು 2 ಇಳೆಯೊಳಿಲ್ಲ ಈ ಚರ್ಯೆ ತೋರುವವರು | ಉದ್ಧರಿಪರಿನ್ಯಾರು ಪರಿ ಕರುಣಿಪುದು | ನ್ಯಾಯವೆ ನೂಕುವುದು ಪೊಳಲೊಡೆಯನ ಪರಿಪರಿ ಮಹಿಮಾದಿಗಳ | ರೂಪ ಜಾಲಗಳ ತಿಳಿದಾನಂದಪಡುವ ಗುರುವರೇಣ್ಯ | ಪೊರೆಯ ಬೇಕೀಗೆನ್ನ 3 ಕರಿಗಿರಿ ನರಹರಿ ಪದಕಮಲಗಳನ್ನು | ಹೃದ್ವನಜದೊಳಿನ್ನು ಪರಿಪರಿ ಪೂಜಿಸಿ ಪರಮಾದರದಲ್ಲಿ | ಸಂಕರ್ಷಣನಲ್ಲಿ ಇರಿಸಿಹ ಮನವನು ನರರಿಗೆ ತೋರದಲೆ | ಚರಿಸುವ ಈ ಲೀಲೆ ಅರಿತು ಪೇಳೆ ಈ ಪಾಮರಳಿಗೆ ಅಳವೇ | ಆನಂದದಲಿರುವೆ 4 ತಂದೆ ಮುದ್ದು ಮೋಹನವಿಠಲ ದೇವ | ಹೃದ್ವನಜದಲಿ ಕಾವ ಸುಂದರ ಗೋಪಾಲಕೃಷ್ಣವಿಠ್ಠಲ ನಿಮ್ಮೊಳು | ರಮಿಸುವ ನಿತ್ಯದೊಳು ಮಂದಬುದ್ಧಿಗೆ ಇಂತು ಮತಿಯನಿತ್ತು | ಸಲಹಲಿ ಬೇಕಿಂತು ತಂದೆ ಧರೆಯೊಳು ಮತ್ತೊಬ್ಬರ ಕಾಣೆ | ಕಾಪಾಡಬೇಕೆನ್ನಾಣೆ 5
--------------
ಅಂಬಾಬಾಯಿ
ಇದು ಏನೋ ನಿನ್ನ ಗುಡೀ ಗುಡೀ |ಒಳಗಿನ ಕಸವನು ಹೊಡೀ ಹೊಡೀ ಪ ಹಗಲಿರುಳೊ ನೀ ಬದುಕ ಮಾಡಿ |ಏನು ಗಳಿಸಿದ್ಯೋ ಹುಡೀ ಹುಡೀ ||ಜಗದೊಳು ದೇವನ ತಿಳಿಯಲೊಲ್ಲಿ |ತಿಳಿದೀತೊ ಅಲ್ಲಿಗೆ ನಡೀ ನಡೀ 1 ಹಸಿದು ಬಂದು ನೀ ವಸ್ತಿಯಾಗಿಳಿದರೆ |ಮತ್ತೇನಾರ ಕೊಡೂ ಕೊಡೂ ||ಅಸ್ತಮಯಾದಿತು ಉದಯದಲೆದ್ದು |ತಪ್ಪದೆ ಇಲ್ಲೆಂಬೊ ನುಡೀ ನುಡೀ 2 ನಾಕು ಕಾಯದೊಳು ಎರಡಿಟ್ಟನು ನೀ |ಎರಡನೆ ದೇವರಿಗೊಡೀ ಒಡೀ ||ಲೋಕಪಾಲಕ ಭವತಾರಕನಂಘ್ರಿಯ |ಈ ಕಾಯದಿ ದಯಾ ಪಡೀ ಪಡೀ 3
--------------
ಭಾವತರಕರು
ಇಂದು ಧರಿಯೊಳು ಬ್ರಹ್ಮಾನಂದವನು ತುಂಬಿ ತುಳುಕತಿಹ್ಯಾನಂದಮಯ ಕಾಯದೊಳು ಕೌತುಕವು ನಾದಬಿಂದು ಕಳಿಯಲಿ ಸ್ತುತಿಸಲೆನ್ನಳವಲ್ಲ ಕ್ಷಿತಿಯೊಳು ಘನಮಹಿಮೆ ಅತಿಹರುಷವನು ದೋರುತಿಹ್ಯ ಸದ್ಗತಿ ಸುಖವು ಗುರುದಾಸರು 1 ಓಂಕಾರ ಮೊದಲಾದ ಶ್ರುತಿವೇದ ಘೋಷಗಳು ಧಿಮಿಧಿಮಿಸುವ ಮಹಾಶಬ್ದಗಳು ವಾದ್ಯಗಳು ಕೇಳುವದು ನೀದೃಶ್ಯೆಲಿ ಗರ್ಜಿಸುವ ಭೃಂಗಿಶಂಖನಾದ ಧ್ವನಿಯಗಳು ಭೋರಿಡುವ ಭೇರಿ ಮೃದಂಗ ವೇಣಿಯಗಳು ಚಿಣಿ ಚಿಣಿ ತಂತ್ರ ಮೊದಲಾದ ಸಂಕಾರಗಳು ಕೇಳಿ ಪಾವನವಾದೆನು 2 ಬೆರೆದು ನೋಡಲು ಅಂತರಾತ್ಮದೊಳು ಪ್ರಭೆಯಗಳು ಥಳಥಳಿಸುವಾ ಮಹಾತೇಜಗಳು ಪುಂಜಗಳು ಹೇಳಲಿನ್ನೇನದ ಹೊಳವಗಳು ಸುಳವಗಳು ನೋಡುವದು ಅನಿಮಿಷದಲಿ ರವಿ ಶಶಿ ತಾರೆಗಳು ಸೂಸುತಿಹ್ಯ ಕಿರಣಗಳು ಭಾಸಿಸುವ ನಾನಾವರ್ಣಗಳು ಛಾಯಗಳು ಬೆರಗಾದೆÀನಿಂದ 3 ವರ್ತಿಸುತ್ತಲಿಹ ಪ್ರವೃತ್ತಿ ನಿವೃತ್ತಿಗಳು ಅಂತರಾತ್ಮದ ವಾಯುಸ್ತುತಿಯಗಳು ಗತಿಯಗಳು ತಿಳಿವದೀ ಪ್ರಣಮ್ಯಲಿ ಸೂಸುತಿಹ ಶ್ವಾಸವುಚ್ಛ್ವಾಸನಿಯ ಭಾಸಿಗಳು ಶೋಭಿಸುವ ಜೀವನದ ಮಂತ್ರ ಸರ ಮಾಲೆಗಳು ಪಾವನವಾದೆನು 4 ಕರದ್ವಯಂ ಮುಗಿದು ವರಗುರುಚರಣಕಮಲಕಿ ನ್ನೆರಗಿ ಪರಮಾನಂದ ಹರುಷದಿ ಶಿರಸದಿ ಶ್ರೀಗುರುಮೂರ್ತಿಯ ನೆನೆವೆನು ಸದ್ಭಾವದಿಂದ ಸದ್ಗುರು ಪಾದಮಂಪಿಡಿದು ಸದ್ಬ್ರಹ್ಮರಸದೊಳು ಮುಳುಗಿ ಸದ್ಭಕ್ತಿಯಲಿ ಸದ್ಗತಿ ಸಾಧನವು ಸಾಧಿಸಿಹ್ಯ ಮಹಿಪತಿಯು ] ಶ್ರೀ ಗುರುಕೃಪೆಯಲಿನ್ನು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು